Tag: ದಿಲೀಪ್ ಕುಮಾರ್

  • ನೀವು ಮುಸ್ಲಿಂ ವ್ಯಕ್ತಿಯೇ? ನೆಟ್ಟಿಗನ ಪ್ರಶ್ನೆಗೆ ಬಾಬಿಲ್ ಉತ್ತರ

    ನೀವು ಮುಸ್ಲಿಂ ವ್ಯಕ್ತಿಯೇ? ನೆಟ್ಟಿಗನ ಪ್ರಶ್ನೆಗೆ ಬಾಬಿಲ್ ಉತ್ತರ

    ಮುಂಬೈ: ಬಾಲಿವುಡ್ ನಟ ಇರ್ಫಾನ್ ಖಾನ್ ಪುತ್ರ ಬಾಬಿಲ್ ಅವರಿಗೆ ನೆಟ್ಟಿಗರೊಬ್ಬರು ನೀವು ಮುಸ್ಲಿಂ ಧರ್ಮ ಪಾಲನೆ ಮಾಡ್ತೀರಾ ಎಂದು ಪ್ರಶ್ನೆ ಕೇಳಿದ್ದಾರೆ. ನೆಟ್ಟಿಗನ ಪ್ರಶ್ನೆಯ ಸ್ಕ್ರೀನ್ ಶಾಟ್ ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ಬಾಬಿಲ್ ತಮ್ಮದೇ ಸ್ಟೈಲಿನಲ್ಲಿ ಉತ್ತರ ನೀಡಿದ್ದಾರೆ.

    ಇರ್ಫಾನ್ ಖಾನ್ ಪುತ್ರ ಬಾಬಿಲ್ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ತಮ್ಮ ಖಾಸಗಿ ಫೋಟೋ, ಭಾವನೆಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಆಗಾಗ್ಗೆ ನೆಟ್ಟಿಗರು ಕೇಳುವ ಪ್ರಶ್ನೆಗಳಿಗೆ ಉತ್ತರ ಸಹ ನೀಡಿರುತ್ತಾರೆ. ಇದೀಗ ಧರ್ಮದ ಕುರಿತು ಕೇಳಲಾದ ಪ್ರಶ್ನೆಗೆ ಬಾಬಿಲ್ ನೀಡಿರುವ ಉತ್ತರದ ಸಾಲುಗಳಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಿನ್ನ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

    ನಾನು ಬೈಬಲ್, ಭಗವದ್ಗೀತೆ ಮತ್ತು ಖುರಾನ್ ಪಠಣ ಮಾಡಿದ್ದೇನೆ. ಸದ್ಯ ಗುರುಗೃಂಥ ಓದುತ್ತಿದ್ದೇನೆ. ನಾನು ಎಲ್ಲರಿಗಾಗಿ ಇದ್ದೇನೆ. ನಾವು ಪರಸ್ಪರ ಒಬ್ಬರು, ಮತ್ತೊಬ್ಬರ ಏಳಿಗೆಗೆ ಸಹಾಯ ಮಾಡುತ್ತೇವೆ. ಇದುವೇ ಪ್ರತಿ ಧರ್ಮದ ಆಧಾರ ಎಂದು ನೆಟ್ಟಿಗನ ಪ್ರಶ್ನೆಗೆ ಬಾಬಿಲ್ ಉತ್ತರಿಸಿದ್ದಾರೆ. ಇನ್ನೂ ತಮಗೆ ಪ್ರಶ್ನೆ ಕೇಳಿದ ನೆಟ್ಟಿಗನ ಹೆಸರನ್ನು ಬಾಬಿಲ್ ಬ್ಲರ್ ಮಾಡಿದ್ದಾರೆ.

    ಬಾಲಿವುಡ್ ಲೆಜೆಂಡ್, ಟ್ರ್ಯಾಜಿಡಿ ಕಿಂಗ್ ದಿಲೀಪ್ ಕುಮಾರ್ ನಿಧನವಾದಾಗ ಬಾಬಿಲ್ ಎಮೋಷನಲ್ ಸಾಲುಗಳನ್ನು ಸೋಶಿಯಲ್ ಬರೆದುಕೊಂಡಿದ್ದರು. ಸದ್ಯ ಅವರ ಅಂತಿಮ ದರ್ಶನ ಪಡೆಯಲು ಸಾಧ್ಯವಾಗದಕ್ಕೆ ದುಃಖವಾಗ್ತಿದೆ. ನಾನು ತಂದೆ ಇರ್ಫಾನ್ ಖಾನ್ ಮತ್ತು ದಿಲೀಪ್ ಕುಮಾರ್ ಅವರಿಂದ ಪ್ರೇರಪಿತಗೊಂಡಿದ್ದೇನೆ ಎಂದು ಹೇಳಿದ್ದರು.

     

    View this post on Instagram

     

    A post shared by Babil (@babil.i.k)

  • ಬಾಲಿವುಡ್ ದಿಗ್ಗಜ ದಿಲೀಪ್ ಕುಮಾರ್ ಇನ್ನಿಲ್ಲ

    ಬಾಲಿವುಡ್ ದಿಗ್ಗಜ ದಿಲೀಪ್ ಕುಮಾರ್ ಇನ್ನಿಲ್ಲ

    ಮುಂಬೈ: ಹಿಂದಿ ಸಿನಿಮಾದ ದಿಗ್ಗಜ, ಟ್ರ್ಯಾಜಿಡಿ ಕಿಂಗ್ ದಿಲೀಪ್ ಕುಮಾರ್ (98) ಇಂದು ಬೆಳಗ್ಗೆ 7.30ಕ್ಕೆ ನಿಧನರಾಗಿದ್ದಾರೆ. ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

    ಕಳೆದ ಎರಡು ತಿಂಗಳಿನಿಂದ ದಿಲೀಪ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಆಗುತ್ತಿತ್ತು. ಒಂದೇ ತಿಂಗಳಿನಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 5ರಂದು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ದಿಲೀಪ್ ಕುಮಾರ್ ಅವರ ಟ್ವಿಟರ್ ಮೂಲಕವೇ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಪತಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ದಿಲೀಪ್ ಕುಮಾರ್ ಪತ್ನಿ ಸೈರಾ ಭಾನು ಖಾನ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು.

    https://twitter.com/TheDilipKumar/status/1412600233062699008

    ಡಿಸೆಂಬರ್ 11, 1922ರಲ್ಲಿ ಪೇಶಾವರದಲ್ಲಿ ಜನಿಸಿದ್ದರು. ದಿಲೀಪ್ ಕುಮಾರ್ ಅವರ ಮೂಲ ಹೆಸರು ಮೊಹಮ್ಮದ್ ಯೂಸೂಪ್ ಖಾನ್. ರಾಜ್ ಕಪೂರ್ ಅವರ ಸಮಕಾಲೀನರವರಾಗಿದ್ದರು. ಬಣ್ಣದ ಲೋಕಕ್ಕೆ ದಿಲೀಪ್ ಕುಮಾರ್ ಹೆಸರಿನಿಂದ ಎಂಟ್ರಿ ಪಡೆದುಕೊಂಡಿದ್ದರು. 22ನೇ ವಯಸ್ಸಿನಲ್ಲಿ ಬಣ್ಣ ಹೆಚ್ಚಿದ ದಿಲೀಪ್ ಕುಮಾರ್ ಅವರ ಮೊದಲ ಚಿತ್ರ ‘ಜ್ವಾರಾ ಭಾಟ’ 1944ರಲ್ಲಿ ತೆರಕಂಡಿತ್ತು.

    ಐದು ದಶಕದಲ್ಲಿ ಸುಮಾರು 60ಕ್ಕೂ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾಗಳ ಸಂಖ್ಯೆ ಹೆಚ್ಚಾಗೋದು ಮುಖ್ಯ ಅಲ್ಲ. ಚಿತ್ರದ ಕಥೆ ಚೆನ್ನಾಗಿರಬೇಕೆಂದು ಹಲವು ಆಫರ್ ಗಳನ್ನು ದಿಲೀಪ್ ಕುಮಾರ್ ರಿಜೆಕ್ಟ್ ಮಾಡುತ್ತಿದ್ದರು.

  • ನಿರ್ಮಾಪಕ ದಿಲೀಪ್ ಕುಮಾರ್ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ

    ನಿರ್ಮಾಪಕ ದಿಲೀಪ್ ಕುಮಾರ್ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ

    ಬೆಂಗಳೂರು: ಮೈ ಸ್ಕೈ ಲ್ಯಾಂಡ್ ಫಿಲಂ ಸ್ಟುಡಿಯೋ ಮಾಲೀಕ ಮತ್ತು ಕನ್ನಡ ಚಿತ್ರರಂಗದ ನಿರ್ಮಾಪಕ ದಿಲೀಪ್ ಕುಮಾರ್ ಅವರು ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ.

    ಆಮ್ ಆದ್ಮಿ ಪಾರ್ಟಿಯ ಜನಪರ ತತ್ವ ಸಿದ್ಧಾಂತಗಳನ್ನು ಮೆಚ್ಚಿ ತಮ್ಮ ಬೆಂಬಲಿಗರು ಮತ್ತು ಹಲವು ಕಲಾವಿದರ ಜೊತೆ ಆದಿ ಶಂಕರ ಅದ್ವೈತ ಪೀಠದ ಶ್ರೀಗಳ ಉಪಸ್ಥಿತಿಯಲ್ಲಿ ಪಕ್ಷವನ್ನು ಸೇರಿದ್ದಾರೆ. ಇದನ್ನೂ ಓದಿ :ಲಸಿಕೆ ಪಡೆಯದವರಿಗೆ ಇಲ್ಲ ಹೇರ್ ಕಟ್ಟಿಂಗ್, ಶೇವಿಂಗ್ – ಸಲೂನ್ ಮಾಲೀಕರ ನಿರ್ಧಾರ

    ಇಂಡಿಯನ್ ಫಿಲಂ ಮೇಕರ್ಸ್ ಅಸೋಸಿಯೇಶನ್ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ದಿಲೀಪ್ ಕುಮಾರ್ ಚಿತ್ರರಂಗದಲ್ಲಿ ಕೆಲಸ ಮಾಡುವ ಕಲಾವಿದರು ಮತ್ತು ಕೆಲಸಗಾರರಿಗೆ ಕೊರೋನಾ ಎರಡನೇ ಅಲೆಯ ಸಮಯದಲ್ಲಿ ಸಾಕಷ್ಟು ನೆರವಾಗಿದ್ದಾರೆ.

  • ಬಾಲಿವುಡ್ ನಟ ದಿಲೀಪ್ ಕುಮಾರ್​​​ಗೆ ಉಸಿರಾಟದ ಸಮಸ್ಯೆ- ಆಸ್ಪತ್ರೆಗೆ ದಾಖಲು

    ಬಾಲಿವುಡ್ ನಟ ದಿಲೀಪ್ ಕುಮಾರ್​​​ಗೆ ಉಸಿರಾಟದ ಸಮಸ್ಯೆ- ಆಸ್ಪತ್ರೆಗೆ ದಾಖಲು

    ಮುಂಬೈ: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಉಸಿರಾಟದ ಸಮಸ್ಯೆಯಿಂದ ಭಾನುವಾರ ಬೆಳಗ್ಗೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಕುರಿತು ದಿಲೀಪ್ ಕುಮಾರ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಅವರ ಮ್ಯಾನೇಜರ್ ಮಾಹಿತಿ ನೀಡಿದ್ದು, ನಟನ ಆರೋಗ್ಯದ ಸ್ಥಿತಿಗತಿ ಕುರಿತು ತಿಳಿಸಿದ್ದಾರೆ. ದಿಲೀಪ್ ಅವರು ನಿಯಮಿತ ವೈದ್ಯಕೀಯ ಪರೀಕ್ಷೆಗೆಂದು ಖಾರ್‍ನ ನಾನ್ ಕೋವಿಡ್ ಪಿಡಿ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರಿಗೆ ಉಸಿರಾಟದ ಸಮಸ್ಯೆ ಇರುವುದು ಪತ್ತೆಯಾಗಿದೆ. ಡಾ.ನಿತಿನ್ ಗೋಖಲೆ ಅವರನ್ನೊಳಗೊಂಡ ವೈದ್ಯಕೀಯ ತಂಡ ನಟನ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದು, ದಿಲೀಪ್ ಅವರಿಗಾಗಿ ಪ್ರಾರ್ಥಿಸಿ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಹಿರಿಯ ವೈದ್ಯರಾದ ಹೃದ್ರೋಗ ತಜ್ಞ ಡಾ.ನಿತಿನ್ ಗೋಖಲೆ ಹಾಗೂ ಶ್ವಾಸಕೋಶ ತಜ್ಞ ಡಾ.ಜಲೀಲ್ ಪಾರ್ಕರ್ ಅವರು ನಿತಿನ್ ಕುಮಾರ್ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ. ನಿಯಮಿತ ಆರೋಗ್ಯ ತಪಾಸಣೆಗೆಂದು 98 ವರ್ಷದ ಹಿರಿಯ ನಟ ಕಳೆದ ತಿಂಗಳು ಸಹ ಆಸ್ಪತ್ರೆಗೆ ದಾಖಲಾಗಿದ್ದರು. 2 ದಿನಗಳ ಬಳಿಕ ಡಿಸ್ಚಾರ್ಜ್ ಆಗಿದ್ದರು.

  • ಅಮೆಜಾನ್ ಪ್ರೈಂನಲ್ಲಿ ‘ಮನರೂಪ’: ಸಿನಿಮಾ ನೋಡಿದ ಪ್ರೇಕ್ಷಕರಿಂದ ಸಿಕ್ತು ಸಖತ್ ರೆಸ್ಪಾನ್ಸ್

    ಅಮೆಜಾನ್ ಪ್ರೈಂನಲ್ಲಿ ‘ಮನರೂಪ’: ಸಿನಿಮಾ ನೋಡಿದ ಪ್ರೇಕ್ಷಕರಿಂದ ಸಿಕ್ತು ಸಖತ್ ರೆಸ್ಪಾನ್ಸ್

    ತ್ತೀಚಿನ ದಿನಗಳಲ್ಲಿ ಕೆಲವೊಂದು ಸಿನಿಮಾಗಳು ಥಿಯೇಟರ್ ಗೆ ಬರೋದೆ ಗೊತ್ತಾಗಲ್ಲ. ಯಾಕಂದ್ರೆ ವಾರಕ್ಕೆ ಏನಿಲ್ಲ ಅಂದ್ರು 8 ರಿಂದ 9 ಸಿನಿಮಾಗಳು ತೆರೆಗೆ ಬರುತ್ತವೆ. ಅದರಲ್ಲಿ ಪ್ರೇಕ್ಷಕ ಆಯ್ದುಕೊಳ್ಳೋದು ಕೆಲವೊಂದು. ಹೀಗಾಗಿ ಇನ್ನುಳಿದ ಸಿನಿಮಾಗಳು ಬಂದು ಹೋಗುವುದು ಗೊತ್ತೇ ಆಗಲ್ಲ. ಅದೇ ಸಾಲಿಗೆ ‘ಮನರೂಪ’ ಕೂಡ ಸೇರಿತ್ತು. ರಿಲೀಸ್ ಆದಾಗ ಹೇಳಿಕೊಳ್ಳುವಷ್ಟು ರೆಸ್ಪಾನ್ಸ್ ಪಡೆಯದೆ ಹೋದ್ರು, ಈಗ ಜನರಿಂದ ಸಖತ್ ರೆಸ್ಪಾನ್ಸ್ ಪಡೆಯುತ್ತಿದೆ.

    ಜೀವನವನ್ನೇ ಆಟವಾಗಿಸಿಕೊಳ್ಳುವ ದುರಂತ ಕಥೆ ‘ಮನರೂಪ’ದಲ್ಲಿ ಅನಾವರಣಗೊಂಡಿದೆ. ಈ ಸಿನಿಮಾದ ಕಥೆ ಎಲ್ಲರ ಜೀವನಕ್ಕೂ ಬಹಳ ಮುಖ್ಯವಾಗಿ ಬೇಕಾಗುತ್ತದೆ. ಮಕ್ಕಳಲ್ಲಿರುವ ಕೆಲವು ಕ್ರೇಜ್ ಗಳು ಅವರ ಜೀವನವನ್ನೇ ಹಳ್ಳ ಹಿಡಿಸುತ್ತವೆ. ಹೀಗಾಗಿ ಅದಕ್ಕೆ ಸಂಬಂಧಿಸಿದ ಮಹತ್ತರವಾದ ಸಂದೇಶವೊಂದು ‘ಮನರೂಪ’ದಲ್ಲಿ ಅನಾವರಣಗೊಂಡಿದೆ. ತಂದೆ ತಾಯಂದಿರು, ಪೋಷಕರು ಮಕ್ಕಳ ಜೊತೆ ಕುಳಿತು ಈ ಸಿನಿಮಾ ನೋಡುವಂತಿದೆ. ಇಡೀ ಸಿನಿಮಾವನ್ನ ಕಾಡಿನಲ್ಲೇ ಚಿತ್ರೀಕರಿಸಲಾಗಿದೆ. ಸೈಕಾಲಜಿಕಲ್, ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಅಮೆಜಾನ್ ಪ್ರೈಂ ನಲ್ಲಿ ನೋಡಿದ ಪ್ರತಿಯೊಬ್ಬ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ.

    ಸಿನಿಮಾ ಥಿಯೇಟರ್ ನಲ್ಲಿ ಉಳಿದದ್ದು ಕಡಿಮೆ. ಆದ್ರೆ ಅಮೆಜಾನ್ ಪ್ರೈಮ್ ನಲ್ಲಿ ನೋಡಿದವರು, ಇದೊಂದು ವಿಭಿನ್ನ ಕಥೆ ಹೊಂದಿರುವ ಸಿನಿಮಾ ಎಂದೇ ಹೇಳುತ್ತಿದ್ದಾರೆ. ಜೊತೆಗೆ ಈ ಸಿನಿಮಾ ಮಾಡಿದ್ದು ಹೊಸ ತಂಡ. ಆದ್ರೆ ಸಿನಿಮಾ ನೋಡಿದವರಿಗೆ ಹಾಗೇ ಅನ್ನಿಸೋಕೆ ಸಾಧ್ಯವೇ ಆಗುವಂತ ದೃಶ್ಯಗಳು ಕಾಣಲಿಲ್ಲ. ಅಷ್ಟು ಅಚ್ಚುಕಟ್ಟಾಗಿ ಕಥೆಯ ಜಾಡನ್ನು ಹೆಣೆದಿದ್ದಾರೆ.

    ಒಬ್ಬ ನಿರ್ದೇಶಕನ ಸಿನಿಮಾ ಗೆಲ್ಲೋದು ಎಲ್ಲಿ ಹೇಳಿ. ಆ ಸಿನಿಮಾ ಬಗ್ಗೆ ಪ್ರೇಕ್ಷಕ ಒಳ್ಳೆ ಮಾತುಗಳನ್ನಾಡಿದಾಗ. ಈ ಸಿನಿಮಾಗೆ ಸಿಕ್ಕ ಉತ್ತಮ ಪ್ರತಿಕ್ರಿಯೆಗಳನ್ನು ನೋಡಿ ನಿರ್ದೇಶಕ ಕಂ ನಿರ್ಮಾಪಕ ಕಿರಣ್ ಹೆಗಡೆ ಸಂತಸ ವ್ಯಕ್ತಪಡಿಸಿದ್ದಾರೆ. ನಾನೇ ಬಂಡವಾಳ ಹಾಕಿ ನಿರ್ದೇಶಿಸಿದ ಸಿನಿಮಾವನ್ನು ಥಿಯೇಟರ್ ನಲ್ಲಿ ಜನಕ್ಕೆ ತಲುಪಿಸಲು ಸಾಧ್ಯವಾಗಲಿಲ್ಲ. ಆದ್ರೆ ಕಥೆಯನ್ನು ಜನರು ಇಷ್ಟ ಪಟ್ಟಿದ್ದಾರೆ ಅನ್ನೋದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಬಂದ ರೆಸ್ಪಾನ್ಸ್ ಸಾಕ್ಷಿ. ಮನರೂಪದ ಎರಡನೇ ಭಾಗದಲ್ಲಿ ಬರುವ ದೃಶ್ಯಗಳು ಅನೇಕ ವರ್ಗದ ಯುವಕರು, ಕುಟುಂಬಗಳ ಮನಸ್ಸನ್ನು ತಟ್ಟಿದೆ. ಜನರ ಪ್ರೀತಿಗೆ ನಾನು ಆಭಾರಿ ಎಂದಿದ್ದಾರೆ.

    ‘ಮನರೂಪ’ ಸಿನಿಮಾಗೆ ಪ್ರಶಸ್ತಿಯ ಗರಿಯೂ ಸಿಕ್ಕಿದೆ. ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ‘ಉತ್ತಮ ಪ್ರಯೋಗಾತ್ಮಕ’ ಸಿನಿಮಾ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಈಗಾಗಲೇ ಮುಂಬೈನಲ್ಲಿ ನಡೆದ ಕೆಫೆ ಇರಾನಿ ಚಲನಚಿತ್ರೋತ್ಸವದಲ್ಲಿ ಬಣ್ಣಿಸಲಾಗಿದೆ. ಹಾಗೇ ಅಮೆರಿಕಾದ ಮಿಯಾಮಿ ಇಂಟರ್ ನ್ಯಾಷನಲ್ ಚಲನಚಿತ್ರೋತ್ಸವ ಹಾಗೂ ಟರ್ಕಿಯ ಇಸ್ತಾನ್ ಬುಲ್ ಫಿಲ್ಮ್ ಅವಾರ್ಡ್ಸ್ ಚಿತ್ರೋತ್ಸವಕ್ಕೂ ‘ಮನರೂಪ’ ಆಯ್ಕೆಯಾಗಿದೆ ಎಂಬುದೇ ಸಂತಸದ ವಿಚಾರ.

    ಇನ್ನು ಸಿನಿಮಾದಲ್ಲಿ ಹೊಸಬರ ದಂಡೆ ಇದೆ. ದಿಲೀಪ್ ಕುಮಾರ್, ಅನೂಷಾ ರಾವ್, ನಿಷಾ ಯಶ್ ರಾಮ್, ಆರ್ಯನ್, ಶಿವಪ್ರಸಾದ್ ಸೇರಿದಂತೆ ಹೊಸಬರೇ ಸೇರಿ ಅದ್ಬುತ ಸಿನಿಮಾ ಮಾಡಿದ್ದಾರೆ. ಅಮೆಜಾನ್ ಪ್ರೈಂ ನಲ್ಲಿ ಸಖತ್ ಸದ್ದು ಮಾಡುತ್ತಿದ್ದು, ನೀವೂ ಒಮ್ಮೆ ಬಿಡುವು ಮಾಡಿಕೊಂಡು ನೋಡಿ. ಉತ್ತಮ ಸಂದೇಶದ ಜೊತೆಗೆ ಒಂದೊಳ್ಳೆ ಸಿನಿಮಾ ನೋಡಿದ ಭಾವ ಮನದಲ್ಲಿ ಮೂಡದೆ ಇರದು.

  • ಮಿಲೆನಿಯಲ್ಸ್ ಜನರೇಷನ್ನಿನ ರೋಚಕ `ಮನರೂಪ’!

    ಮಿಲೆನಿಯಲ್ಸ್ ಜನರೇಷನ್ನಿನ ರೋಚಕ `ಮನರೂಪ’!

    ಬೆಂಗಳೂರು: ಕಿರಣ್ ಹೆಗ್ಡೆ ನಿರ್ದೇಶನದಲ್ಲಿ ಮೂಡಿ ಬಂದಿರೋ ಬಹು ನಿರೀಕ್ಷಿತ ಚಿತ್ರ ಮನರೂಪ. ಟೈಟಲ್ ಪೋಸ್ಟರ್ ಮೂಲಕವೇ ಪ್ರೇಕ್ಷಕರನ್ನೆಲ್ಲ ಅಚ್ಚರಿಗೀಡು ಮಾಡಿದ್ದ ಈ ಸಿನಿಮಾ ಇದೇ 22ರಂದು ತೆರೆಗಾಣಲಿದೆ. ಒಂದು ಸಿನಿಮಾ ಯಾವ ಯಾವ ರೀತಿಯಲ್ಲಿ ಸೆಳೆಯುವಂಥಾ ಕಂಟೆಂಟು ಹೊಂದಿರಬೇಕೋ ಅದೆಲ್ಲವನ್ನೂ ಬೆರೆಸಿಯೇ ನಿರ್ದೇಶಕರು ಈ ಕಥೆಯನ್ನು ಸಿದ್ಧಗೊಳಿಸಿದ್ದಾರೆ. ಇದುವರೆಗೆ ಪ್ರೇಕ್ಷಕರು ಅಂದುಕೊಂಡಿರುವಂತೆ, ಮೊನ್ನೆ ಬಿಡುಗಡೆಯಾದ ಟ್ರೇಲರ್‍ನಲ್ಲಿ ಕಾಣಿಸಿದಂತೆ ಈ ಸಿನಿಮಾ ಸಸ್ಪೆನ್ಸ್ ಥ್ರಿಲ್ಲರ್ ಧಾಟಿಯ ಕಥಾನಕವನ್ನೊಳಗೊಂಡಿದೆ ಅಂತಲೇ ಹೇಳಲಾಗುತ್ತದೆ. ನೋಡುಗರನ್ನು ಕ್ಷಣ ಕ್ಷಣವೂ ಕ್ಯೂರಿಯಾಸಿಟಿಯ ಕಮರಿಗೆ ತಳ್ಳುವಂತಹ ರೋಚಕ ಕಥೆಯನ್ನೊಳಗೊಂಡಿರೋ ಈ ಕಥೆಗೆ ಶೀರ್ಷಿಕೆಗೆ ತಕ್ಕುದಾದ ಛಾಯೆಯೂ ಇದೆ. ಒಂದು ಜನರೇಷನ್ನಿನ ಒಟ್ಟಾರೆ ಮನೋ ಪಲ್ಲಟಗಳನ್ನೂ ಕೂಡ ಈ ಕಥೆಯೊಂದಿಗೆ ಬೆರೆಸಲಾಗಿದೆ. ಅದುವೇ ಈ ಸಿನಿಮಾದ ಪ್ರಧಾನ ಅಂಶವೆಂದರೂ ತಪ್ಪಲ್ಲ.

    ಮನರೂಪ ಸಿನಿಮಾ 1980 ರಿಂದ 2000ದ ನಡುವಿನ ವರ್ಷಗಳ ನಡುವಿನ ಅವಧಿಯಲ್ಲಿ ಹುಟ್ಟಿರುವವರ ಕಥೆ. ಹೊಸ ತಲೆಮಾರು ಅಥವಾ ಮಿಲೆನಿಯಲ್ಸ್ ಎಂದು ಕರೆಸಿಕೊಳ್ಳುವ ಈ ಅವಧಿಯಲ್ಲಿ ಜನಿಸಿದ ಸಮೂಹದಲ್ಲಿ ಕಾಣುವ ಎರಡು ಬಗೆಯ ಭಿನ್ನತೆಯನ್ನು ಮನರೂಪ ಸಿನಿಮಾದಲ್ಲಿ ನಿರೂಪಿಸಲಾಗಿದೆ. ಖಂಡಿತವಾಗಿಯೂ, ಮನರೂಪ ಹೊಸ ತಲೆಮಾರಿನ ಸಿನಿಮಾ. ಪರಸ್ಪರ ಪ್ರೀತಿ ವಿಶ್ವಾಸದಿಂದ ಕುಟುಂಬದಲ್ಲಿ ಇರಲಾಗದ, ಹೊಂದಿಕೊಂಡು ಜೀವಿಸಲಾಗದ, ಒಂಟಿಯಾಗಿಯೇ ಉಳಿಯಲು ಇಚ್ಛಿಸುವ, ಆದರೆ ತಮ್ಮನ್ನೇ ಗಮನಿಸಬೇಕು ಎನ್ನುವ ಮನೋಭಾವದ ಯುವ ಮನಸ್ಸಿನ ಕಥೆ ಇಲ್ಲಿದೆ.

    ಉತ್ತರಕನ್ನಡದ ಶಿರಸಿ, ಸಿದ್ಧಾಪುರ ಭಾಗಗಳಲ್ಲಿ ಮನರೂಪ ಚಿತ್ರೀಕರಣ ಮಾಡಲಾಗಿದೆ. ಮುಖ್ಯ ಭೂಮಿಕೆಯಲ್ಲಿ ದಿಲೀಪ್ ಕುಮಾರ್, ಅನುಷಾ ರಾವ್, ನಿಶಾ ಬಿ.ಆರ್, ಆರ್ಯನ್, ಶಿವಪ್ರಸಾದ್ ಅಭಿನಯಿಸಿದ್ದಾರೆ. ಅಮೋಘ್ ಸಿದ್ಧಾರ್ಥ್, ಗಜಾ ನೀನಾಸಂ, ಪ್ರಜ್ವಲ್ ಗೌಡ ವಿಭಿನ್ನ ಶೈಲಿಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರಂಗಭೂಮಿ ಕಲಾವಿದ ರಮಾನಂದ ಐನಕೈ, ಸತೀಶ್ ಗೋಳಿಕೊಪ್ಪ, ಪವನ್ ಕಲ್ಮನೆ, ಯಶೋದಾ ಹೊಸಕಟ್ಟ, ಭಾಗೀರತಿ ಕನ್ನಡತಿ ಮುಂತಾದವರು ಅಭಿನಯಿಸಿದ್ದಾರೆ. ನಿರ್ದೇಶಕ ಕಿರಣ್ ಹೆಗ್ಡೆ ಹಲವಾರು ವರ್ಷಗಳ ಕಾಲ ಕಾಡಿಸಿಕೊಂಡು, ಅದಕ್ಕಾಗಿ ತಯಾರಾಗಿ, ವರ್ಷಗಟ್ಟಲೆ ಶ್ರಮವಹಿಸಿ ರೂಪಿಸಿರೋ ಚಿತ್ರ ಮನೋರೂಪ. ಅದು ನಿಮ್ಮೆಲ್ಲರೆದುರು ಬಿಚ್ಚಿಕೊಳ್ಳಲು ದಿನಗಣನೆ ಶುರುವಾಗಿದೆ.

  • ಕಾಡಿನ ಒಡಲಲ್ಲಿ ಬಿಚ್ಚಿಕೊಳ್ಳುವ ‘ಮನರೂಪ’ ಬೆಚ್ಚಿ ಬೀಳಿಸುತ್ತೆ!

    ಕಾಡಿನ ಒಡಲಲ್ಲಿ ಬಿಚ್ಚಿಕೊಳ್ಳುವ ‘ಮನರೂಪ’ ಬೆಚ್ಚಿ ಬೀಳಿಸುತ್ತೆ!

    ಬೆಂಗಳೂರು: ಕಾಡು ಮತ್ತು ಅದರೊಳಗಿನ ನಿಗೂಢಗಳ ಕಥೆ ಈ ವರೆಗೂ ಅನೇಕ ಸಿನಿಮಾ ರೂಪದಲ್ಲಿ ಪ್ರೇಕ್ಷಕರನ್ನು ಎದುರುಗೊಂಡಿವೆ. ಕಾಡೊಳಗೆ ಸಂಚರಿಸುವ ಕಥೆಯನ್ನೊಳಗೊಂಡಿರೋ ಸಿನಿಮಾಗಳ ಬಗ್ಗೆ ಕನ್ನಡದ ಪ್ರೇಕ್ಷಕರಲ್ಲಿ ಎಂದೂ ಬತ್ತದ ಬೆರಗುಗಳಿವೆ. ಈ ಕಾರಣದಿಂದಲೇ ಆಗಾಗ ಅಂಥಾ ಸಿನಿಮಾಗಳು ಅಣಿಗೊಂಡರೆ ಎಲ್ಲರೂ ಅದರತ್ತ ಆಕರ್ಷಿತರಾಗುತ್ತಾರೆ. ಇಂಥಾ ಕಾಡಿನ ರಹಸ್ಯಗಳ ಜೊತೆಗೆ ಮನುಷ್ಯನ ಮಾನಸಿಕ ತಲ್ಲಣಗಳೂ ಸೇರಿದ ಕಥೆಯೊಂದಿಗೆ ತೆರೆಗಾಣಲು ರೆಡಿಯಾಗಿರೋ ಚಿತ್ರ ಮನರೂಪ. ಕಿರಣ್ ಹೆಗ್ಡೆ ನಿರ್ದೇಶನದ ಈ ಸಿನಿಮಾ ಇದೇ ತಿಂಗಳ 22ರಂದು ರಾಜ್ಯಾದ್ಯಂತ ತೆರೆಗಾಣುತ್ತಿದೆ.

    ಪತ್ರಿಕೋದ್ಯಮ ಮತ್ತು ಸಾಹಿತ್ಯದತ್ತ ಅಪಾರ ಆಸಕ್ತಿ ಹೊಂದಿರುವ, ಆ ಮೂಲಕವೇ ಸೂಕ್ಷ್ಮವಾದ ಮನಸ್ಥಿತಿಯನ್ನು ತಮ್ಮದಾಗಿಸಿಕೊಂಡಿರುವವರು ನಿರ್ದೇಶಕ ಕಿರಣ್ ಹೆಗ್ಡೆ. ಸಾಹಿತ್ಯಾಸಕ್ತಿ ಮತ್ತು ತಾವು ಹುಟ್ಟಿ ಬೆಳೆದ ಶಿರಸಿ ಭಾಗದ ವಾತಾವರಣದಿಂದಲೇ ಅವರಿಗೆ ಸೂಕ್ಷ್ಮವಂತಿಕೆಯ ಮನಸ್ಥಿತಿ ಸಿದ್ಧಿಸಿದೆ. ಬಹುಶಃ ಸಾಹಿತ್ಯದ ಸಂಗವಿರದೆ ಮನರೂಪದಂಥಾ ಕಥೆಗಳು ರೂಪುಗೊಳ್ಳಲು ಸಾಧ್ಯವೇ ಇಲ್ಲವೇನೋ… ಈ ಸಿನಿಮಾ ಹೊಸತನ ದ ಕಥೆಯನ್ನೊಳಗೊಂಡಿದೆ ಅನ್ನೋ ಸುಳಿವು ಈ ಹಿಂದೆ ಪೋಸ್ಟರ್ ಗಳ ಮೂಲಕವೇ ಸಿಕ್ಕಿ ಹೋಗಿತ್ತು. ಇದೀಗ ಮನರೂಪ ಬಿಡುಗಡೆಯ ಹೊಸ್ತಿಲಲ್ಲಿರುವ ಘಳಿಗೆಯಲ್ಲಿ ನಿರ್ದೇಶಕರು ಮತ್ತೂ ಇಂಟರೆಸ್ಟಿಂಗ್ ಆದ ಒಂದಷ್ಟು ವಿವರಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅದುವೇ ಈ ಸಿನಿಮಾದತ್ತ ಪ್ರೇಕ್ಷಕರಲ್ಲಿರೋ ಕುತೂಹಲವನ್ನು ಮತ್ತಷ್ಟು ತೀವ್ರಗೊಳಿಸುವಂತಿವೆ.

    ಇಲ್ಲಿನ ಇಡೀ ಕಥೆ ಕಾಡಿನ ಬ್ಯಾಕ್‍ಡ್ರಾಪ್‍ನಲ್ಲಿ ಕಳೆಗಟ್ಟಿಕೊಳ್ಳುವಂತೆ ಕಿರಣ್ ಹೆಗ್ಡೆ ನೋಡಿಕೊಂಡಿದ್ದಾರೆ. ಕಾಡೊಳಗಿನ ನಿಶ್ಯಬ್ಧ ಮೋಹಕವೂ ಹೌದು, ಭಯಾನಕವೂ ಹೌದು. ಅಂಥಾ ವಾತಾವರಣಕ್ಕೆ ಎಂಭತ್ತರ ದಶಕದಿಂದ ಎರಡು ಸಾವಿರನೇ ಇಸವಿಯ ವರೆಗಿನ ಜನರೇಷನ್ನಿನ ಮನೋಲೋಕವನ್ನು ಸಮ್ಮಿಳಿತಗೊಳಿಸಿ ಕಿರಣ್ ಹೆಗ್ಡೆ ಈ ಕಥೆಯನ್ನು ರೂಪಿಸಿದ್ದಾರಂತೆ. ಇತ್ತೀಚೆಗೆ ಬಿಡುಗಡೆಯಾಗಿದ್ದ ಟ್ರೇಲರ್‍ನಲ್ಲಿ ಇಡೀ ಸಿನಿಮಾ ಅದೆಷ್ಟು ಕುತೂಹಲಕರವಾಗಿ ಮೂಡಿ ಬಂದಿದೆ ಎಂಬುದು ಸ್ಪಷ್ಟವಾಗಿಯೇ ಗೊತ್ತಾಗಿದೆ. ಸದರಿ ಟ್ರೇಲರ್ ನಲ್ಲಿನ ತೀವ್ರತೆಯೇ ಸಿನಿಮಾದುದ್ದಕ್ಕೂ ಪ್ರೇಕ್ಷಕರನ್ನು ಥ್ರಿಲ್ ಆಗಿಸಲಿದೆಯಂತೆ.

    ಹತ್ತು ವರ್ಷಗಳ ನಂತರ ಮುಖಾಮುಖಿಯಾಗಿ ಖುಷಿಗೊಳ್ಳುವ ಸ್ನೇಹಿತರ ದಂಡೊಂದು ಕರಡಿ ಗುಹೆಯೆಂಬ ಪ್ರದೇಶಕ್ಕೆ ಚಾರಣ ಹೊರಡುತ್ತೆ. ಆ ಹಾದಿಯಲ್ಲಿ ಎದುರಾಗುವ ವಿಕ್ಷಿಪ್ತ ಮತ್ತು ಭಯಾನಕ ಸನ್ನಿವೇಶಿಗಳಿಗೆ ಅವರೆಲ್ಲ ಹೇಗೆ ಸ್ಪಂದಿಸುತ್ತಾರೆ, ಅವರ ಮಾನಸಿಕ ಸ್ಥಿತಿಗತಿಗಳು ಹೇಗೆಲ್ಲ ರೂಪಾಂತರಗೊಳ್ಳುತ್ತವೆ ಎಂಬುದರ ಸುತ್ತ ಕಥೆ ಚಲಿಸುತ್ತೆ. ಹಾಗಂತ ಇದನ್ನು ಬೇರೆ ಜಾಡಿನ ಸಿನಿಮಾ ಅಂದುಕೊಳ್ಳಬೇಕಿಲ್ಲ. ಅದೆಷ್ಟೋ ವರ್ಷಗಳಿಂದ ಸಿನಿಮಾ ವ್ಯಾಮೋಹ ಹೊಂದಿರುವ ಕಿರಣ್ ಹೆಗ್ಡೆ ಕಮರ್ಶಿಯಲ್ ಹಾದಿಯಲ್ಲಿಯೇ ಈ ದೃಷ್ಯಗಳನ್ನು ಕಟ್ಟಿ ಕೊಟ್ಟಿದ್ದಾರಂತೆ. ಅಂತೂ ಕಾಡುತ್ತಲಾ ಬೆಚ್ಚಿ ಬೀಳಿಸಲಿರೋ ಮನರೂಪ ಇದೇ 22ರಂದು ಪ್ರೇಕ್ಷಕರ ಮುಂದೆ ತೆರೆದುಕೊಳ್ಳಲಿದೆ.