Tag: ದಿಲೀಪ್ ರಾಜ್

  • ‘ಮಹಾನ್ ಕಲಾವಿದ’ನಾದ ಹಿಟ್ಲರ್ ಕಲ್ಯಾಣದ ನಟ ದಿಲೀಪ್ ರಾಜ್

    ‘ಮಹಾನ್ ಕಲಾವಿದ’ನಾದ ಹಿಟ್ಲರ್ ಕಲ್ಯಾಣದ ನಟ ದಿಲೀಪ್ ರಾಜ್

    ನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ದಿಲೀಪ್ ರಾಜ್ (Dilip Raj) ಈಗ ಕಿರುತೆರೆಯಲ್ಲೂ ಜನಪ್ರಿಯ. “ಹಿಟ್ಲರ್ ಕಲ್ಯಾಣ”ದ A J ಪಾತ್ರದ ಮೂಲಕ ಮೆಚ್ಚುಗೆ ಪಡೆಯುತ್ತಿದ್ದಾರೆ. ಪ್ರಸ್ತುತ ಇವರು  “ಮಹಾನ್ ಕಲಾವಿದ” (Mahan kalavida) ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಹಿರಿಯ ಪತ್ರಕರ್ತರಾದ ದಿ.ಸುರೇಶ್ಚಂದ್ರ ಪುತ್ರ ಅಭಯ್ ಚಂದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌ ಇದು ಇವರ ಎರಡನೇ ನಿರ್ದೇಶನದ ಚಿತ್ರ. ಸಂಗೀತ ನಿರ್ದೇಶನ ಕೂಡ ಅಭಯ್ ಚಂದ್ರ ಅವರದೆ. ಈ ಚಿತ್ರದ ಕೆಲವು ವಿಷಯಗಳನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು.

    ನಾನು ಪತ್ರಕರ್ತ ಸುರೇಶ್ಚಂದ್ರ ಅವರ ಪುತ್ರ. ಇದು ನನ್ನ ಎರಡನೇ ಚಿತ್ರ.  ಈ ಕಥೆಯನ್ನು ಸಿದ್ದಪಡಿಸಿಕೊಂಡು “ಕಲಾವಿದ” ಅಂತ ಶೀರ್ಷಿಕೆಯಿಟ್ಟಿದೆ. ಈ ವಿಷಯವನ್ನು ರವಿಚಂದ್ರನ್ ಸರ್ ಗೆ ತಿಳಿಸಿದೆ. ಧಾರಾಳವಾಗಿ ಈ ಶೀರ್ಷಿಕೆ ಇಡು. ಆದರೆ ಬರೀ “ಕಲಾವಿದ” ಅಂತ ಬೇಡ. ಏನಾದರೂ ಸೇರಿಸು ಅಂದರು. ನಾನು “ಮಹಾನ್ ಕಲಾವಿದ” ಅಂತ ಇಟ್ಟೆ. ಕಲಾವಿದನೊಬ್ಬನ ಬದುಕು ಬವಣೆಗಳನ್ನು ತೋರಿಸುವ ಕಥಾಹಂದರ ಹೊಂದಿರುವ ಚಿತ್ರವಿದು. ನಾನು ಈ ಪಾತ್ರ ಬರೆಯಬೇಕಾದರೆ ದಿಲೀಪ್ ರಾಜ್ ಈ ಪಾತ್ರಕ್ಕೆ ಸೂಕ್ತ ಎಂದು ಕೊಂಡಿದ್ದೆ.‌ ಅವರೆ ಈ ಚಿತ್ರದ ನಾಯಕರಾದರು. ಜಾಹ್ನವಿ ರಾಯಲ   ಹಾಗೂ ಪಲ್ಲವಿ ರಾಜು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಆನ್ ಲೈನ್ ನಲ್ಲಿ ಸಿಕ್ಕ ಗೆಳೆಯ ಭರತ್ ಬಿ ಗೌಡ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕಿರಣ್ ಗಜ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಮುಗಿದಿದೆ‌. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ದೇಶಕ ಅಭಯ್ ಚಂದ್ರ (Abhay Chandra) ತಿಳಿಸಿದರು.

    ಬಹಳ ದಿನಗಳ ನಂತರ ಮತ್ತೆ ಚಿತ್ರವೊಂದರಲ್ಲಿ ನಟಿಸುತ್ತಿದ್ದೇನೆ. ಅಭಯ್ ಚಂದ್ರ ಉತ್ತಮ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಮುಗಿದಿದೆ. ಕಲಾವಿದ ಮಾಡುವ ನಟನೆ‌ ಮೊದಲು ನಿರ್ದೇಶಕರಿಗೆ ಮೆಚ್ಚುಗೆಯಾಗಬೇಕು. ನನ್ನ ನಟನೆ ಬಗ್ಗೆ ಮೊದಲು ಅಭಯ್ ಹೇಳಬೇಕು. ನಾನು ಸಹ ಈ ಚಿತ್ರವನ್ನು ನೋಡಲು ಕಾತುರದಿಂದ ಕಾಯುತ್ತಿರುವುದಾಗಿ ದಿಲೀಪ್ ರಾಜ್ ಹೇಳಿದರು. ಇದನ್ನೂ ಓದಿ:ಮಸ್ತಾಗಿದೆ `ಕಬ್ಜ’ ಟೀಸರ್: ಹೇಗಿದೆ ಗೊತ್ತಾ ಉಪೇಂದ್ರ- ಸುದೀಪ್ ಜುಗಲ್‌ಬಂದಿ

     ಈ ಚಿತ್ರದಲ್ಲಿ ದಿಲೀಪ್ ರಾಜ್ ಅವರ ಪತ್ನಿ ಪಾತ್ರ ಮಾಡುತ್ತಿರುವುದಾಗಿ ಜಾಹ್ನವಿ ರಾಯಲ (Jahnavi) ತಿಳಿಸಿದರು. ಲಾಕ್ ಡೌನ್ ನಂತರ ನನ್ನ ಮೊದಲ ಪತ್ರಿಕಾಗೋಷ್ಠಿ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ಪಲ್ಲವಿ ರಾಜು (Pallavi). ನಾನು ಮೂಲತಃ ಹಾಸನದವನು. ಈಗ ಮಂಡ್ಯ ನಿವಾಸಿ. ಅಪ್ಪ-ಅಮ್ಮನ ಸಹಕಾರದಿಂದ ನಿರ್ಮಾಪಕನಾಗಿದ್ದೇನೆ.‌ನನ್ನ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ಮಪಕ ಭರತ್ ಬಿ ಗೌಡ.

    Live Tv
    [brid partner=56869869 player=32851 video=960834 autoplay=true]

  • ಆರ್ಕೆಸ್ಟ್ರಾಗಾಗಿ ಎಂಟು ಹಾಡುಗಳನ್ನು ಬರೆದ ಡಾಲಿ ಧನಂಜಯ್

    ಆರ್ಕೆಸ್ಟ್ರಾಗಾಗಿ ಎಂಟು ಹಾಡುಗಳನ್ನು ಬರೆದ ಡಾಲಿ ಧನಂಜಯ್

    ಟ ಧನಂಜಯ್ ಗೀತ ರಚನೆಕಾರರಾಗಿಯೂ ಫೇಮಸ್ ಆಗಿದ್ದಾರೆ. ಈವರೆಗೂ ಚಿತ್ರಗಳಿಗಾಗಿ ಒಂದೊಂದು ಹಾಡುಗಳನ್ನು ಬರೆಯುತ್ತಿದ್ದವರು. ಇದೀಗ ಆರ್ಕೆಸ್ಟ್ರಾ ಸಿನಿಮಾಗಾಗಿ ಅವರು ಎಂಟು ಹಾಡುಗಳನ್ನು ಬರೆದಿದ್ದಾರೆ. ಈ ಸಿನಿಮಾದಲ್ಲಿ ಬರುವ ಅಷ್ಟೂ ಹಾಡುಗಳಿಗೂ ಡಾಲಿ ಸಾಹಿತ್ಯ ಬರೆದಿದ್ದಾರೆ. ಒಂದಕ್ಕಿಂತ ಒಂದು ಹಾಡುಗಳು ವಿಶೇಷವಾಗಿವೆ. ಈ ಹಾಡುಗಳಿಗೆ ರಘು ದೀಕ್ಷಿತ್ ಅವರ ಸಂಗೀತ ಸಂಯೋಜನೆಯಿದೆ. ಇದೇ ಮೊದಲ ಬಾರಿಗೆ ಒಂದು ಚಿತ್ರದ ಅಷ್ಟೂ ಹಾಡುಗಳನ್ನು ಡಾಲಿ ರಚಿಸಿದ್ದಾರೆ.

    ಕಳೆದ ಕೆಲವು ವರ್ಷಗಳ ಹಿಂದೆ ಮೈಸೂರಿನ ಹುಡುಗರೆಲ್ಲಾ ಸೇರಿ ನಿರ್ಮಾಣ ಮಾಡಿದ್ದ “ಬಾರಿಸು ಕನ್ನಡ ಡಿಂಡಿಮವ” ಹಾಡು ತುಂಬಾ ಜನಪ್ರಿಯವಾಯಿತು. ಈಗ ಅದೇ ತಂಡ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ನಾನು ಮೊದಲು ಮೈಸೂರಿನ ನೇತ್ರಣ್ಣ ಹಾಗೂ ಕೃಪಾಕರ್, ಸೇನಾನಿ ಅವರನ್ನು ನೆನೆದು ಮಾತು ಆರಂಭಿಸುತ್ತೇನೆ. ಮೈಸೂರಿನಲ್ಲಿ ನಮ್ಮದೊಂದು ತಂಡ. ಗೆಳೆಯರಿಗೆಲ್ಲಾ ರಂಗಭೂಮಿಯಲ್ಲಿ ಆಸಕ್ತಿ. ‌ಧನಂಜಯ ನನಗೆ ಕಾಲೇಜಿನಲ್ಲಿ ಸೀನಿಯರ್. ಆಗಿನಿಂದಲೂ ಗೆಳೆಯ ಮತ್ತು ಸಹಕಾರ ನೀಡಿದವ. “ಮೈಸೂರು” ಆರ್ಕೇಸ್ಟ್ರಾ ತುಂಬಾ ಜನಪ್ರಿಯ. ಈ ಕುರಿತು ಕಥೆ ಮಾಡಿ‌ ಸಿನಿಮಾ ಮಾಡಬೇಕೆಂದು ಕನಸು. ಕೆಲವು ಗೆಳೆಯರ ಸಹಾಯದಿಂದ ಚಿತ್ರ ಆರಂಭಿಸಿದ್ದೆವು.‌ ಬೆಂಗಳೂರಿನ ಗಾಂಧಿನಗರ  ಸಿನಿಮಾದವರಿಗೆ ಹೆಸರುವಾಸಿ. ಹಾಗೆ,  ಮೈಸೂರಿನ ಗಾಂಧಿನಗರ “ಆರ್ಕೆಸ್ಟ್ರಾ” ದವರಿಗೆ ಹೆಸರುವಾಸಿ. ಅಲ್ಲಿ ಸಂಪರ್ಕ ಮಾಡಿ ಎಲ್ಲೆಲ್ಲಿ “ಆರ್ಕೇಸ್ಟ್ರಾ” ನಡೆಯುತ್ತದೆ?  ಎಂಬ ಮಾಹಿತಿ ಪಡೆದು, ಅಲ್ಲೇ ಹೋಗಿ ನೈಜವಾಗಿ ಚಿತ್ರೀಕರಣ ಮಾಡುತ್ತಿದ್ದೆವು. ಒಂದು ನೈಜತೆಗಾಗಿ, ಮತ್ತೊಂದು ಸೆಟ್ ಹಾಕುವಷ್ಟು ಹಣವಿರಲಿಲ್ಲ. “ಆರ್ಕೇಸ್ಟ್ರಾ” ಹಾಡುಗಾರನಾಗಬೇಕೆಂಬ ಆಸೆಹೊತ್ತ ಹುಡುಗನೊಬ್ಬನ ಸುತ್ತ ಹೆಣೆದಿರುವ ಕಥೆಯಿದು. ಪೂರ್ಣ ಈ ಚಿತ್ರದ ನಾಯಕ. ರಾಜಲಕ್ಷ್ಮೀ ನಾಯಕಿ. ದಿಲೀಪ್ ರಾಜ್, ನಾಗಭೂಷಣ್, ಮಹೇಶ್ ಮುಂತಾದ ರಂಗಭೂಮಿ ಕಲಾವಿದರು ಇದರಲ್ಲಿ ನಟಿಸಿದ್ದಾರೆ. ಜೋಸಫ್ ಛಾಯಾಗ್ರಹಣ ಮಾಡಿದ್ದಾರೆ. ಡಾಲಿ ಎಲ್ಲಾ ಹಾಡುಗಳನ್ನು ಬರೆದಿದ್ದಾರೆ. ರಘು ದೀಕ್ಷಿತ್ ಸಂಗೀತ ನೀಡಿದ್ದಾರೆ. Krg ಸ್ಟುಡಿಯೋಸ್ ಹಾಗೂ ಡಾಲಿ ಪಿಕ್ಚರ್ಸ್ ನಮ್ಮ ಚಿತ್ರವನ್ನು ಅರ್ಪಿಸುತ್ತಿದ್ದಾರೆ ಎಂದು ನಿರ್ದೇಶಕ ಸುನೀಲ್ ಮಾಹಿತಿ ನೀಡಿದರು.

    ಮೈಸೂರಿನ ಕಲಾಮಂದಿರ ಹಾಗೂ ರಂಗಾಯಣದ ಸುತ್ತ ನಾವು ಕಥೆಯ ಬಗ್ಗೆ ಮಾತನಾಡುತ್ತಾ ತಿರುಗುತ್ತಿದಾಗ, ಅದನ್ನು ಗಮನಿಸಿದ ಕೃಪಾಕರ್, ಸೇನಾನಿ ಅವರು ತಮ್ಮದೇ ಕ್ಯಾಮೆರಾ ಹಾಗೂ ಎಡಿಟಿಂಗ್ ಸೆಟಪ್ ಹಾಗೂ ಜೋಸೆಫ್ ಎಂಬ ಛಾಯಾಗ್ರಾಹಕನನ್ನು ನೀಡಿ ನಮಗೆ ಸಹಾಯ ಮಾಡಿದರು. ಚಿತ್ರೀಕರಣ ತಡವಾದರೆ ಧನಂಜಯ ಬೇಗ ಶುರುಮಾಡುವಂತೆ ಹುರಿದುಂಬಿಸುತ್ತಿದ್ದರು. ಸಂಗೀತ ನಿರ್ದೇಶಕ ರಘದೀಕ್ಷಿತ್ ನಮ್ಮ ಸಹಾಯಕ್ಕೆ ನಿಂತರು. ಈಗ ಕೆ.ಆರ್.ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಬಿಡುಗಡೆಗೆ ಬೇಕಾದ ಅನುಕೂಲ ಮಾಡಿಕೊಡುತ್ತಿದ್ದಾರೆ. ಎಲ್ಲರಿಗೂ ಧನ್ಯವಾದ. ಇದನ್ನೂ ಓದಿ:ಐದು ಭಾಷೆ, ಐದು ಸ್ಟಾರ್ ನಟರಿಂದ ಕಿಚ್ಚನ ವಿಕ್ರಾಂತ್ ರೋಣ ಟ್ರೈಲರ್ ರಿಲೀಸ್

    ನಾನು ಮೂಲತಃ ರಂಗಭೂಮಿಯವನು. “ಆರ್ಕೇಸ್ಟ್ರಾ” ಸಿನಿಮಾ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದೇನೆ. ಯುವಕರ ತಂಡದ ಶ್ರಮದಿಂದ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನನ್ನ ಪಾತ್ರಕೂಡ ಚೆನ್ನಾಗಿದೆ ಎಂದರು ನಟ ದಿಲೀಪ್ ರಾಜ್. ನಾನು ಮೈಸೂರಿನವನು. ನಟ ನಾಗಭೂಷಣ್ ಮೂಲಕ ಈ ತಂಡದ ಪರಿಚಯವಾಯಿತು. ನಿರ್ದೇಶಕ ಸುನೀಲ್ ಪೆನ್ ಡ್ರೈವ್ ಮೂಲಕ ಈ ಚಿತ್ರದ ಕಥೆ ಕಳಿಸಿದ್ದರು. ನೋಡಿ ಕೆಲಸ ಶುರು ಮಾಡಿದೆ. ಮೈಸೂರಿನ ನೇತ್ರಣ್ಣ ಅವರ ಜಾಗವೇ ನಮ್ಮ ಆಫೀಸ್. ಡಾಲಿ ಬರೆದ ಎರಡು ಸಾಲುಗಳು ನನಗೆ ಇಷ್ಟವಾಯಿತು.  ವಿಶೇಷವೆಂದರೆ ಈ ಚಿತ್ರದ ಎಂಟು ಹಾಡುಗಳನ್ನು  ಡಾಲಿ ಅವರೆ ಬರೆದಿದ್ದಾರೆ. ಹಣ ಪಡೆಯದೆ ಸಂಗೀತ ನಿರ್ದೇಶನದ ಜವಾಬ್ದಾರಿ ಹೊತ್ತು ಕೊಂಡಿದ್ದೇನೆ. ಹಾಗಾಗಿ ನನ್ನನ್ನು ನಿರ್ಮಾಪಕ ಅಂತ ನಿರ್ಧರಿಸಿದ್ದಾರೆ ಎಂದರು ರಘು ದೀಕ್ಷಿತ್. ನಾವೆಲ್ಲಾ ಮೈಸೂರಿನ ಕಾಲೇಜ್ ನಲ್ಲಿ ನಾಟಕ ಮಾಡಬೇಕಾದರೆ, ಬೀಳುತ್ತಿದ್ದ ವಿಸಿಲ್ ಗೆ ನಮ್ಮ ತಲೆ ತಿರುಗುತ್ತಿತ್ತು. ಆಮೇಲೆ ಸಿನಿಮಾ ನಟನೆಗೆ ಬಂದ ಮೇಲೆ ವಾಸ್ತವ ಅರ್ಥವಾಯಿತು. ಆನಂತರ ಮತ್ತೆ ಜನ ಕೈ ಹಿಡಿದರು. ನನ್ನ ಮೊದಲ ದಿನಗಳಿಂದಲೂ ನನ್ನ ಸ್ನೇಹಿತರು ನನ್ನ ಜೊತೆ ಇದ್ದಾರೆ. ನಾನು ಅವರ ಜೊತೆ ಇರುತ್ತೇನೆ . ನಮ್ಮೊಂದಿಗೆ ಕೆ.ಆರ್.ಜಿ ಸ್ಟುಡಿಯೋಸ್ ಅವರು ಇದ್ದಾರೆ ಎಂದರು ಡಾಲಿ ಧನಂಜಯ.

    Live Tv

  • ಸೋಲು-ಗೆಲುವನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಿದ್ದೇನೆ, ಯಾವುದೇ ರಿಗ್ರೆಟ್ ಇಲ್ಲ- ನಟ ದಿಲೀಪ್ ರಾಜ್

    ಸೋಲು-ಗೆಲುವನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಿದ್ದೇನೆ, ಯಾವುದೇ ರಿಗ್ರೆಟ್ ಇಲ್ಲ- ನಟ ದಿಲೀಪ್ ರಾಜ್

    ಸ್ಯಾಂಡಲ್‍ವುಡ್ ನಟ ದಿಲೀಪ್ ರಾಜ್ ತಮ್ಮ ಜರ್ನಿಯ ಬಗ್ಗೆ ಒಂದಿಷ್ಟು ವಿಚಾರಗಳನ್ನ ಮನಸ್ಸುಬಿಚ್ಚಿ ಮಾತನಾಡಿದ್ದಾರೆ. ಬನ್ನಿ ಏನ್ ಹೇಳಿದ್ದಾರೆ ನೋಡೋಣ.

    • ಹೇಗಿದ್ದೀರಾ ಹೇಗೆ ನಡೆಯುತ್ತಿದೆ ಜೀವನ?
    ಸೂಪರ್ ಆಗಿದ್ದೀನಿ. ಜೀವನ ಅದರ ಪಾಡಿಗೆ ಅದು ನಡೆಯುತ್ತಿದೆ ಒಟ್ಟಿನಲ್ಲಿ ಆರಾಮಾಗಿದ್ದೀನಿ. ಲಾಕ್‍ಡೌನ್‍ನಿಂದ ಫ್ಯಾಮಿಲಿ ಜೊತೆ ಸಮಯ ಕಳೆಯಲು ಮಕ್ಕಳ ಜೊತೆ ಇರಲು ಸಮಯ ಸಿಕ್ತು. ವರ್ಷ ಪೂರ್ತಿ ಶೂಟಿಂಗ್‍ನಲ್ಲಿ ಬ್ಯುಸಿ ಇರ್ತಿದ್ದೆ. ಮಕ್ಕಳಿಗೆ ಸಮಯ ಕೊಡೋಕೆ ಆಗಿರಲಿಲ್ಲ. ಈಗ ಆ ಕೊರತೆ ನೀಗಿದೆ.

    • ಲಾಕ್‍ಡೌನ್ ನಿಮ್ಮ ಜೀವನಕ್ಕೆ ಎಷ್ಟು ಪ್ಲಸ್, ಎಷ್ಟು ಮೈನಸ್ ಆಯ್ತು?
    ಲಾಕ್‍ಡೌನ್ ಸಮಯ ಹೊಸತನ್ನು ಕಲಿಯೋದಕ್ಕೆ ಅಪ್‍ಡೇಟ್ ಆಗೋದಕ್ಕೆ ತುಂಬಾ ಸಹಕಾರಿಯಾಯ್ತು. ಕೆಲಸದ ಒತ್ತಡದಲ್ಲಿ ಈಗಿನ ಜನರಿಗೆ ಏನು ಬೇಕು ಯಾವ ರೀತಿ ಸ್ಕ್ರಿಪ್ಟ್ ಇಂಪ್ರುವೈಸ್ ಮಾಡ್ಕೋಬೇಕು ಅದರ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಯಿತು. ಹೊಸ ಹೊಸ ಟೆಕ್ನಿಕ್ ಬಗ್ಗೆ ತಿಳಿದುಕೊಂಡೆ. ಮೈನಸ್ ಅಂದ್ರೆ ಸಂಪಾದನೆ ಇರಲಿಲ್ಲ ಶೂಟಿಂಗ್ ಇರದೇ ಕೈಕಾಲು ಆಡುತ್ತಿರಲಿಲ್ಲ. ಕೆಲಸವಿಲ್ಲದೇ ಕೂರೋದು ಬಹಳ ಕಷ್ಟ.

    • ನಟನಾಗಿ ನೀವು ಅಳವಡಿಸಿಕೊಂಡಿರೋ ಪಾಲಿಸಿ?
    ವೇವ್ ಹೇಗೆ ಕರೆದುಕೊಂಡು ಹೋಗುತ್ತೋ ಹಾಗೆ ಹೋಗಬೇಕು. ಇದು ನಾನು ಜೀವನದಲ್ಲಿ ಕಲಿತಿರೋ ಮುಖ್ಯವಾದ ಪಾಠ. ಹೀರೋ ಆಗಬೇಕು ಎಂದು ಹೀರೋ ಪಾತ್ರನೇ ಮಾಡಿಕೊಂಡು ಕೂತ್ರೆ ಆಗೋದಿಲ್ಲ ನನ್ನ ಪ್ರಕಾರ ಕಲಾವಿದರು ಒಂದಕ್ಕೆ ಸ್ಟಿಕ್ಕಾನ್ ಆಗಬಾರದು ಇದು ನನ್ನ ಪಾಲಿಸಿ.

    • ಪಾರು ಸೀರಿಯಲ್ ಸಕ್ಸಸ್ ಬಗ್ಗೆ ಹೇಳಿ?
    ಪಾರು ಸೀರಿಯಲ್ ನನ್ನ ಪ್ರೊಡಕ್ಷನ್ ಹೌಸ್ ಧೃತಿ ಕ್ರಿಯೇಷನ್‍ಗೆ ಒಳ್ಳೆ ಹೆಸರು ತಂದು ಕೊಟ್ಟಿದೆ. ಹೊಸತನ ಹಾಗೂ ಹೊಸ ಪ್ಲೇವರ್ ಪಾರು ಧಾರಾವಾಹಿಯಲ್ಲಿತ್ತು. ಜನ ತುಂಬ ಪ್ರೀತಿಯಿಂದ ಮೆಚ್ಚಿಕೊಂಡ್ರು ಗೆಲ್ಲಿಸಿದ್ರು. ಇಂಡಸ್ಟ್ರಿಯಲ್ಲಿ ಒಂದೊಳ್ಳೆ ಬೆಂಚ್ ಮಾರ್ಕ್ ಸೃಷ್ಟಿ ಮಾಡಿದೆ. ನನ್ನ ನಿರ್ದೇಶನದಲ್ಲಿ ನನ್ನ ಪ್ರೊಡಕ್ಷನ್ ಹೌಸ್‍ನಿಂದ ಈ ಧಾರವಾಹಿ ಕೊಟ್ಟಿದಕ್ಕೆ ನನಗೆ ಬಹಳ ಖುಷಿ ಇದೆ.

    • ನಿಮ್ಮ ಪ್ರೋಡಕ್ಷನ್ ಹೌಸ್‍ನಲ್ಲಿ ಹಲವಾರು ಜನ ಕೆಲಸ ಮಾಡುತ್ತಾರೆ ಲಾಕ್‍ಡೌನ್ ಸಂಕಷ್ಟವನ್ನು ಹೇಗೆ ಎದುರಿಸಿದ್ರಿ?
    ಲಾಕ್‍ಡೌನ್ ಸಮಯದಲ್ಲಿ ಎಲ್ಲರಿಗೂ ಸಮಸ್ಯೆ ಆಗಿದೆ. ಎಷ್ಟೇ ಸಮಸ್ಯೆ ಎದುರಾದ್ರು ನಮ್ಮ ತಂಡವನ್ನು ಕಾಪಾಡೋದು ನಮ್ಮ ಕರ್ತವ್ಯ. ಅವರೆಲ್ಲ ನಮಗೋಸ್ಕರ ಕೆಲಸ ಮಾಡಿದ್ದಾರೆ. ನನ್ನ ಜೊತೆ ಯಾವಾಗಲೂ ನಿಂತಿದ್ದಾರೆ. ಕಷ್ಟದ ಸಮಯದಲ್ಲಿ ಅವರ ಜೊತೆ ನಾನು ನಿಲ್ಲಬೇಕು. ಪೂರ್ಣ ಪ್ರಮಾಣದಲ್ಲಿ ಅಲ್ಲದಿದ್ರೂ ಕೈಲಾದ ಸಹಾಯ ಮಾಡಿ ಬ್ಯಾಲೆನ್ಸ್ ಮಾಡಿದ್ದೇನೆ.

    • ನಿಮ್ಮ ಡ್ರೀಮ್ ಪ್ರಾಜೆಕ್ಟ್ ಯಾವುದು?
    ನನಗೆ ಡ್ರೀಮ್ ಪ್ರಾಜೆಕ್ಟ್ ಅಂತ ಯಾವುದೂ ಇಲ್ಲ. ಆದ್ರೆ ನಾನೊಬ್ಬ ದೊಡ್ಡ ನಟನಾಗಿ ಹೊರಹೊಮ್ಮಬೇಕು ಎಂಬ ಡ್ರೀಮ್ ಇದೆ. ಒಳ್ಳೊಳ್ಳೆ ಪ್ರಾಜೆಕ್ಟ್ ಗಳಲ್ಲಿ ಕೆಲಸ ಮಾಡೋ ಆಸೆ ಇದೆ. ನನಗೆ ತುಂಬಾ ಖುಷಿ ಕೊಡೋದು ನಟನೆ, ಊಟ ಇಲ್ಲದೇ ಬೇಕಾದ್ರು ಇರ್ತೀನಿ ಸಿನಿಮಾ ಇಲ್ಲದೆ ಇರೋಕೆ ಸಾಧ್ಯವೇ ಇಲ್ಲ. ನಾನು ಹುಟ್ಟಿದ್ದೇ ಕಲಾವಿದನಾಗಲು. ಕೊನೆವರೆಗೂ ಕಲಾವಿದನಾಗಿಯೇ ಉಳಿಯಲು ಇಷ್ಟಪಡ್ತೀನಿ.

    • ನಿಮ್ಮ ಜೀವನದ ಸಪೋರ್ಟಿವ್ ಸಿಸ್ಟಮ್ ಯಾರು?
    ಪ್ರತಿಯೊಬ್ಬರ ಸಕ್ಸಸ್ ಹಿಂದೆ ಒಂದು ಬಲವಾದ ಶಕ್ತಿ ಇರುತ್ತೆ. ಅದೇ ರೀತಿ ನನ್ನ ಬೆನ್ನೆಲುಬಾಗಿ ನನ್ನ ಹಿಂದಿರುವ ಶಕ್ತಿ ನನ್ನ ಪತ್ನಿ. ಆಕೆಯ ಪ್ರೋತ್ಸಾಹದಿಂದ ನಾನು ಎಲ್ಲವನ್ನು ಸುಲಭವಾಗಿ ನಡೆಸಿಕೊಂಡು ಹೋಗುತ್ತಿದ್ದೇನೆ. ನನ್ನ ಪ್ರೊಡಕ್ಷನ್ ಹೌಸ್, ಮ್ಯಾನೇಜ್‍ಮೆಂಟ್ ಎಲ್ಲವನ್ನು ಆಕೆ ನೋಡಿಕೊಳ್ಳುತ್ತಾಳೆ. ಇದರಿಂದ ನನಗೆ ಬ್ಯಾಲೆನ್ಸ್ ಆಗಿ ಕೆಲಸ ಮಾಡಲು ಸಾಧ್ಯವಾಗಿದೆ. ನನ್ನ ಪತ್ನಿಯೇ ನನ್ನ ದೊಡ್ಡ ಶಕ್ತಿ.

    • ಇಲ್ಲಿವರೆಗಿನ ಪಯಣದಲ್ಲಿ ಕಲಿತಿದ್ದೇನು, ಪಡೆದುಕೊಂಡಿದ್ದೇನು?
    ನನ್ನ ಕೆರಿಯರ್ ನಲ್ಲಿ ಕಂಡ ಏರಿಳಿತಗಳ ಬಗ್ಗೆ ನನಗೆ ಯಾವುದೇ ಬೇಜಾರಿಲ್ಲ. ಸೋಲು, ಗೆಲುವು ಎಲ್ಲವನ್ನೂ ಮುಕ್ತ ಮನಸ್ಸಿನಿಂದ ಸ್ವೀಕರಿಸಿದ್ದೇನೆ. ನನ್ನೊಳಗಿರುವ ಕಲೆ ಎಂಬ ಸೂಪರ್ ಪವರ್ ಹೊರ ಹಾಕೋದಕ್ಕೆ ಸರಿಯಾದ ಅವಕಾಶ ಸಿಕ್ಕಿಲ್ಲ ಅನ್ನೋ ಬೇಜಾರಿದೆ ಅಷ್ಟೇ. ಅದನ್ನು ಪಡೆದೇ ತೀರುತ್ತೇನೆ ಎಂಬ ಅಪಾರವಾದ ಬಯಕೆ ಮತ್ತು ಹಸಿವು ಈಗಲೂ ಕುಂದಿಲ್ಲ. ನನ್ನ ಜರ್ನಿ ಮೇಲೆ ತೃಪ್ತಿ ಇದೆ ಯಾವುದೇ ರಿಗ್ರಿಟ್ ಇಲ್ಲ. ಹಂಡ್ರೆಡ್ ಪರ್ಸೆಂಟ್ ಹ್ಯಾಪಿ ನಾನು. ಸ್ವಲ್ಪ ಸಿನಿಮಾ ಮಾಡಿದ್ದೀನೋ ಜಾಸ್ತಿ ಮಾಡಿದೆನೋ ಅದು ಸೆಕೆಂಡರಿ ಎಲ್ಲಾ ರೀತಿಯ ಅನುಭವಗಳು ಆಗಬೇಕು ಅದು ನನ್ನ ಜೀವನದಲ್ಲಿ ಆಗಿದೆ.

    • ಫಿಟ್ನೆಸ್ ಬಗ್ಗೆ ಏನ್ ಹೇಳ್ತೀರಾ? ನಿಮ್ಮ ಫಿಟ್ನೆಸ್ ಬಗ್ಗೆ ಹೇಳಿ?
    ನಾನು ಫಿಟ್ನೆಸ್ ಬಗ್ಗೆ ತುಂಬಾ ಕಾಳಜಿ ವಹಿಸುತ್ತೇನೆ. ಪ್ರತಿನಿತ್ಯ ವರ್ಕೌಟ್ ಮಾಡೋದ್ರ ಜೊತೆಗೆ ಕ್ರಿಕೆಟ್, ಬ್ಯಾಡ್ಮಿಂಟನ್ ಆಡುತ್ತೇನೆ. ಆಕ್ಟಿಂಗ್ ಫೀಲ್ಡ್‍ಗೆ ಬರುವವರಿಗೆ ಫಿಟ್ನೆಸ್ ತುಂಬಾ ಬೇಸಿಕ್ ರೆಸ್ಪಾನ್ಸಿಬಿಲಿಟಿ. ಗ್ಲಾಮರ್ ಲೋಕದಲ್ಲಿ ಔಟ್ ಲುಕ್, ಫಿಸಿಕ್ ಎಲ್ಲವೂ ಕೌಂಟ್ ಆಗುತ್ತೆ. ಈಗಂತೂ ತುಂಬಾ ಕಾಂಪಿಟೇಷನ್ ಇದೆ. ಆಕ್ಟಿಂಗನ್ನು ಪ್ರೊಫೇಷನ್ ಆಗಿ ತೆಗೆದುಕೊಂಡವರಿಗೆ ಫಿಟ್ನೆಸ್ ಈಸ್ ಮಸ್ಟ್ ಅಂಡ್ ಶುಡ್ ಆಗಿರಬೇಕು.

  • ಇದು ಗುಟ್ಟು ಬಿಟ್ಟುಕೊಡದ ಗಟ್ಟಿ ಕಥೆಯ ಚಿತ್ರಕಥಾ!

    ಇದು ಗುಟ್ಟು ಬಿಟ್ಟುಕೊಡದ ಗಟ್ಟಿ ಕಥೆಯ ಚಿತ್ರಕಥಾ!

    ಹೊಸಬರ ತಂಡದ ಮೇಲೆ ಕನ್ನಡ ಪ್ರೇಕ್ಷಕರಲ್ಲಿರೋ ನಂಬಿಕೆ ಮತ್ತೊಮ್ಮೆ ನಿಜವಾಗಿದೆ. ಇದೀಗ ಬಿಡುಗಡೆಯಾಗಿರೋ ಚಿತ್ರಕಥಾ ಹೊಸಾ ತಂಡವೊಂದು ರೂಪಿಸಿರೋ ಚಿತ್ರ. ಆದರೆ ಆರಂಭ ಕಾಲದಿಂದಲೂ ಈ ಸಿನಿಮಾ ಪೋಸ್ಟರ್ ಮುಂತಾದ ಕ್ರಿಯೇಟಿವ್ ಅಂಶಗಳೊಂದಿಗೆ ಪ್ರೇಕ್ಷಕರನ್ನು ಆಕರ್ಶಿಸುತ್ತಲೇ ಸಾಗಿ ಬಂದಿತ್ತು. ಅದೇ ಬಿಸಿಯಲ್ಲಿ ಬಿಡುಗಡೆಯಾಗಿರೋ ಚಿತ್ರಕಥಾ ಕಡೇಯವರೆಗೂ ಗುಟ್ಟು ಬಿಟ್ಟುಕೊಡದ ಗಟ್ಟಿ ಕಥೆಯ ಮೂಲಕ ಪ್ರೇಕ್ಷಕರನ್ನು ಸಂತುಷ್ಟಗೊಳಿಸುವಲ್ಲಿ ಯಶಸ್ವಿಯಾಗಿದೆ.

    ಇದು ಸೈಕಾಲಾಜಿಕಲ್ ಥ್ರಿಲ್ಲರ್ ಜಾನರಿನ ಚಿತ್ರವೆಂದು ಬಿಂಬಿಸಲ್ಪಡುತ್ತಲೇ ಅದರಲ್ಲಿಯೂ ವಿಶೇಷವಾದುದೇನನ್ನೋ ಬಚ್ಚಿಟ್ಟುಕೊಂಡಿರುವಂಥಾ ಸೂಚನೆ ರವಾನಿಸುತ್ತಾ ಬಂದಿದ್ದ ಚಿತ್ರ. ಚಿತ್ರತಂಡ ಜಾಹೀರು ಮಾಡಿದ್ದ ಒಂದೊಂದು ಸಣ್ಣ ಸಣ್ಣ ಸುಳಿವುಗಳೂ ಸಹ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡಿದ್ದವು. ಒಂದು ಸಶಕ್ತ ತಾರಾಗಣದೊಂದಿಗೆ, ಪ್ರತಿಯೊಂದು ಹೆಜ್ಜೆಯಲ್ಲಿಯೂ ಹೊಸತನದ ಸುಳಿವಿನೊಂದಿಗೆ ಸಾಗಿ ಬಂದಿದ್ದ ಚಿತ್ರಕಥಾದ ನವೀನ ಶೈಲಿಯ ಕಥೆ, ನಿರೂಪಣಾ ಶೈಲಿಗೆ ಪ್ರೇಕ್ಷಕರು ತಲೆದೂಗಿದ್ದಾರೆ. ಇಡೀ ಚಿತ್ರ ಮೂಡಿ ಬಂದಿರೋ ರೀತಿಯೇ ಅದಕ್ಕೆ ತಕ್ಕುದಾಗಿದೆ.

    ಇದು ಓರ್ವ ಕಲಾವಿದ ಮತ್ತು ಸಿನಿಮಾ ನಿರ್ದೇಶಕನಾಗಬೇಕೆಂಬ ಕನಸು ಕಟ್ಟಿಕೊಂಡಿರೋ ಹುಡುಗನೊಬ್ಬನ ಸುತ್ತಾ ಸುತ್ತುವ ಕಥಾಹಂದರ ಹೊಂದಿರುವ ಚಿತ್ರ. ಇಲ್ಲಿ ಸುಜಿತ್ ರಾಥೋಡ್ ರಾಣಾ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆ. ರಾಣಾ ಚಿತ್ರರಂಗದ ಬಗ್ಗೆ ಬಣ್ಣದ ಕನಸುಗಳನ್ನು ತುಂಬಿಕೊಂಡು ನಿರ್ದೇಶಕನಾಗೋ ಆಸೆಯಿಂದ ಜೀವಿಸೋ ಹುಡುಗ. ಆದರೆ ಈ ಹಾದಿಯಲ್ಲಿ ಎಲ್ಲ ಪ್ರಯತ್ನಗಳಾಚೆಗೂ ನಿರಾಸೆಗಳೇ ಆತನ ಕೈ ಹಿಡಿಯುತ್ತವೆ. ತಾನು ನಿರ್ದೇಶಕನಾಗಲು ಕಾಲ ಕೂಡಿ ಬಂದಿಲ್ಲವಲ್ಲಾ ಎಂಬ ಚಿಂತೆಯಲ್ಲಿರುವಾಗಲೇ ಪ್ರೀತಿಯ ಹುಡುಗಿಯೂ ಕೈಬಿಟ್ಟು ನಡೆದು ಹೋಗುತ್ತಾಳೆ. ಆ ಕ್ಷಣಗಳಲ್ಲಿ ರಾಣಾನನ್ನು ಇಡಿಯಾಗಿ ತಬ್ಬಿ ನಿಲ್ಲೋದು ಗಾಢವಾದ ಹತಾಶೆ ಮಾತ್ರ.

    ಇಂಥಾ ಸ್ಟೇಜಿನಲ್ಲಿರೋ ಹುಡುಗರಿಗೆ ಬಾರಿನ ಸ್ಟೆಪ್ಪುಗಳೇ ಮೊದಲನೆಯದಾಗಿ ಸ್ವಾಗತಿಸುತ್ತವೆ. ರಾಣಾ ಕೂಡಾ ಹತಾಶೆಯ ಮಡುವಿಗೆ ಬಿದ್ದು ಬಾರು ಸೇರಿಕೊಳ್ಳುತ್ತಾನೆ. ಇಂಥಾ ಘಳಿಗೆಯಲ್ಲಿಯೇ ಕಲಾವಿದನೊಬ್ಬ ಬಿಡಿಸಿದ ಚಿತ್ರ ಅಘೋರಿಯ ರೂಪದಲ್ಲಿ ಆತನನ್ನು ಕಾಡಲು ಶುರುವಿಡುತ್ತದೆ. ಇದು ಭ್ರಮೆಯಾ ವಾಸ್ತವವಾ ಎಂಬ ಸತ್ಯವನ್ನು ನಶೆಯಲ್ಲಿ ತಡಕಾಡುತ್ತಿರುವಾಗಲೇ ಸಾಕ್ಷಾತ್ತು ಅಘೋರಿಯೇ ರಾಣಾನೆದುರು ಪ್ರತ್ಯಕ್ಷವಾಗುತ್ತಾನೆ. ಕೊಲ್ಲಲೂ ಮುಂದಾಗುತ್ತಾನೆ. ನಂತರ ರಾಣಾ ಹೋದಲ್ಲಿ ಬಂದಲ್ಲಿ ಕೊಲ್ಲಲು ಹವಣಿಸೋ ಅಘೋರಿಯದ್ದೇ ಕಾಟ. ರಾಣಾನನ್ನು ಕಾಡುತ್ತಿರೋ ಅಘೋರಿಯ ಮೂಲ ಹುಡುಕುತ್ತಾ ಸೈಕಿಯಾಟ್ರಿಸ್ಟ್ ಪಾತ್ರದಲ್ಲಿ ಸುಧಾರಾಣಿ ಎಂಟ್ರಿ ಕೊಡುತ್ತಾರೆ. ಆ ನಂತರದ್ದು ನಿಜಕ್ಕೂ ರೋಚಕ ಜರ್ನಿ.

    ಹಾಗಾದರೆ ಈ ಅಘೋರಿಯ ಚಿತ್ರ ಬಿಡಿಸಿದ ಕಲಾವಿದನ್ಯಾರು, ಆ ಕಲಾವಿದನಿಗೂ ರಾಣಾಗೂ ಇರುವ ನಂಟ್ಯಾವುದು, ಯಾಕೆ ಆ ಅಘೋರಿ ನಾಯಕನ ಬೆಂಬಿದ್ದು ಕೊಲ್ಲಲು ಹವಣಿಸುತ್ತಾನೆಂಬ ಪ್ರಶ್ನೆಗಳಿಗೆ ಕ್ಲೈಮ್ಯಾಕ್ಸ್ ವರೆಗೂ ಕುತೂಹಲ ಬಿಗಿಯಾಗಿಟ್ಟುಕೊಳ್ಳುವ ಉತ್ತರವೊಂದು ಚಿತ್ರಕಥಾದಲ್ಲಿದೆ. ಮತ್ತದು ಮಜವಾದ ಅನುಭವಗಳನ್ನೇ ನೋಡುಗರೆಲ್ಲರಿಗೂ ಕಡೆಯವರೆಗೂ ಕಟ್ಟಿ ಕೊಡುತ್ತದೆ. ಆ ಅನುಭವ ಕೂಡಾ ಸಾಮಾನ್ಯ ಸೈಕಾಲಾಜಿಕಲ್ ಥ್ರಿಲ್ಲರ್ ಕಥನಗಳಿಗಿಂತ ಭಿನ್ನವಾಗಿದೆ ಎಂಬುದೇ ಚಿತ್ರಕಥಾ ಆಪ್ತವಾಗೋದರ ಹಿಂದಿರುವ ಅಸಲೀ ಗುಟ್ಟು.

    ಇದು ಯಶಸ್ವಿ ಬಾಲಾದಿತ್ಯ ನಿರ್ದೇಶನದ ಮೊದಲ ಚಿತ್ರ. ಆದರೆ ಅವರು ಇಡೀ ಚಿತ್ರವನ್ನು ಪಳಗಿದ ನಿರ್ದೇಶಕನಂತೆ ನಿಭಾಯಿಸಿದ ರೀತಿ ಇಷ್ಟವಾಗುವಂತಿದೆ. ಇಲ್ಲಿ ಒಂದು ಹಂತದಲ್ಲಿ ಪಾತ್ರಗಳೇ ವಿಹ್ವಲಗೊಳ್ಳುತ್ತವೆ. ಗೊಂದಲಕ್ಕೆ ಬೀಳುತ್ತವೆ. ಚೂರೇ ಚೂರು ಆಚೀಚೆಯಾದರೂ ಅದು ಪ್ರೇಕ್ಷಕರಿಗೂ ದಾಟಿಕೊಳ್ಳುವ ಅಪಾಯವೂ ಇದ್ದೇ ಇತ್ತು. ಆದರೆ ಅದನ್ನೂ ಕೂಡಾ ಕುತೂಹಲವಾಗಿ ಮಾರ್ಪಾಟು ಮಾಡಿರೋದು ಯಶಸ್ವಿ ಬಾಲಾದಿತ್ಯರ ಟ್ಯಾಲೆಂಟಿಗೆ ಸಾಕ್ಷಿಯಂತಿದೆ. ಸುಧಾರಾಣಿ, ಬಿ. ಜಯಶ್ರೀ, ದಿಲೀಪ್ ರಾಜ್, ತಬಲಾ ನಾಣಿ, ಅನುಷಾ ರಾವ್ ಸೇರಿದಂತೆ ಎಲ್ಲ ಕಲಾವಿದರೂ ತಂತಮ್ಮ ಪಾತ್ರಗಳನ್ನು ಪರಿಣಾಮಕಾರಿಯಾಗಿಸಿದ್ದಾರೆ. ಸುಜಿತ್ ರಾಥೋಡ್ ಕೂಡಾ ಇದು ಮೊದಲ ಚಿತ್ರವೆಂಬುದನ್ನೇ ಮರೆಮಾಚುವಂಥಾ ಮಾಗಿದ ನಟನೆ ಕೊಟ್ಟಿದ್ದಾರೆ.

    ಅಂತೂ ಚಿತ್ರಕಥಾ ಪ್ರತೀ ಪ್ರೇಕ್ಷಕರಲ್ಲಿಯೂ ವಿಭಿನ್ನ ಅನುಭೂತಿಯೊಂದನ್ನು ಮೂಡಿಸಿಸುತ್ತಲೆ. ಖುದ್ದು ನೋಡುಗರೇ ಭ್ರಮ ಮತ್ತು ವಾಸ್ತವದ ನಡುವಿನ ತೊಳಲಾಟದಲ್ಲಿ ಅರೆಕ್ಷಣ ಕಂಗಾಲಾಗುವಂತೆ ಮಾಡುವಷ್ಟು ಸಶಕ್ತವಾಗಿ ಇಲ್ಲಿನ ದೃಶ್ಯಗಳು ಮೂಡಿ ಬಂದಿವೆ. ಈ ಸಿನಿಮಾವನ್ನು ನೋಡುವ ಮೂಲಕ ಅಂಥಾ ವಿಶಿಷ್ಟ ಅನುಭವವನ್ನು ನಿಮ್ಮದಾಗಿಸಿಕೊಳ್ಳಿ.

    ರೇಟಿಂಗ್: 3.5/5

  • ಚಿತ್ರಕಥಾ: ಕಥೆಯ ವೇಗಕ್ಕೆ ಕೊರವಂಜಿಯ ಕನೆಕ್ಷನ್ನು!

    ಚಿತ್ರಕಥಾ: ಕಥೆಯ ವೇಗಕ್ಕೆ ಕೊರವಂಜಿಯ ಕನೆಕ್ಷನ್ನು!

    ಬೆಂಗಳೂರು: ಯಶಸ್ವಿ ಬಾಲಾದಿತ್ಯ ನಿರ್ದೇಶನದ ಚಿತ್ರಕಥಾ ಚಿತ್ರ ಈ ವಾರ ತೆರೆ ಕಾಣುತ್ತಿದೆ. ಈ ಕಡೇಯ ಕ್ಷಣಗಳಲ್ಲಿ ಈ ಸಿನಿಮಾ ಕುರಿತಾದ ಒಂದೊಂದೇ ಕುತೂಹಲಕರ ಅಂಶಗಳನ್ನು ಚಿತ್ರತಂಡ ಜಾಹೀರು ಮಾಡುತ್ತಿದೆ. ಅದರಲ್ಲಿ ತಾರಾಗಣದ ಗುಟ್ಟುಗಳೂ ಸೇರಿಕೊಂಡಿವೆ. ಸುಧಾರಾಣಿ, ತಬಲಾ ನಾಣಿ, ದಿಲೀಪ್ ರಾಜ್, ಅನುಷಾ ರಾವ್ ಸೇರಿದಂತೆ ಅನೇಕರ ತಾರಾಗಣ ಈ ಚಿತ್ರದಲ್ಲಿದೆ. ಹಿರಿಯ ರಂಗಭೂಮಿ ನಟಿ ನಿರ್ವಹಿಸಿರೋ ಕೊರವಂಜಿ ಪಾತ್ರವಂತೂ ಬಹಳಷ್ಟು ವಿಶೇಷತೆಗಳನ್ನು ಬಚ್ಚಿಟ್ಟುಕೊಂಡಿದೆಯಂತೆ.

    ಸುಜಿತ್ ರಾಥೋಡ್ ಮುಖ್ಯ ಪಾತ್ರದಲ್ಲಿ ನಟಿಸಿರೋ ಈ ಚಿತ್ರವನ್ನು ಪ್ರಜ್ವಲ್ ಎಂ ರಾಜಾ ನಿರ್ಮಾಣ ಮಾಡಿದ್ದಾರೆ. ಇದು ಸೈಕಾಲಾಜಿಕಲ್ ಥ್ರಿಲ್ಲರ್ ಚಿತ್ರ. ಆದರೆ ಇದುವರೆಗೂ ಬಂದಿರೋ ಈ ಜಾನರಿನ ಚಿತ್ರಗಳ ಸಾಲಿನಲ್ಲಿಯೇ ಇದನ್ನೂ ದಾಖಲಿಸುವಂತೆಲ್ಲ. ಯಾಕೆಂದರೆ ಇದು ಕಮರ್ಶಿಯಲ್ ಅಂಶಗಳೊಂದಿಗೆ ಪ್ರಯೋಗಾತ್ಮಕ ಪಟ್ಟುಗಳನ್ನು ಹೊಂದಿರೋ ಚಿತ್ರ.

    ಕಲಾವಿದನೊಬ್ಬ ಬಿಡಿದಿಸಿ ಅಪರಿಚಿತನ ಚಿತ್ರವೇ ಅಘೋರಿಯ ರೂಪದಲ್ಲಿ ಕಾಡೋ ಈ ಸಿನಿಮಾ ಕಥೆ ನಾನಾ ದಿಕ್ಕುಗಳಲ್ಲಿ ಚಲಿಸುತ್ತೆ. ಅಂಥಾ ಸಿಕ್ಕುಗಳನ್ನು ಬಿಡಿಸು ಪಾತ್ರಗಳಿಗೆ ಮತ್ತಷ್ಟು ಓಘ ನೀಓಡೋ ಪಾತ್ರವನ್ನು ಸುಧಾರಾಣಿ ನಿರ್ವಹಿಸಿದರೆ, ಇಡೀ ಚಿತ್ರಪಕ್ಕೆ ಬೇರೆ ದಿಕ್ಕು ತೋರಿಸುವ ಕೊರವಂಜಿಯ ಪಾತ್ರದಲ್ಲಿ ಬಿ ಜಯಶ್ರೀಯವರು ನಟಿಸಿದ್ದಾರೆ. ಇದು ಹೆಚ್ಚು ಅವಧಿಯಲ್ಲೇನೂ ತೆರೆ ಮೇಲಿರೋದಿಲ್ಲ. ಆದರೆ ಅದು ಅಷ್ಟು ಸಲೀಸಾಗಿ ಪ್ರೇಕ್ಷಕರ ಮನದಿಂದ ಮರೆಯಾಗುವುದೂ ಇಲ್ಲ. ನಿಜಕ್ಕೂ ಈ ಪಾತ್ರದಲ್ಲಿ ಅಂಥಾ ವಿಶೇಷಗಳೇನಿವೆ ಎಂಬುದು ಹ್ನ್ನೆರಡನೇ ತಾರೀಕು ಅಂದರೆ ಈ ವಾರ ಗೊತ್ತಾಗಲಿದೆ.

  • ಚಿತ್ರಕಥಾ: ತಾಂತ್ರಿಕ ಶ್ರೀಮಂತಿಕೆಯ ಮಾಂತ್ರಿಕ ಸೆಳೆತ!

    ಚಿತ್ರಕಥಾ: ತಾಂತ್ರಿಕ ಶ್ರೀಮಂತಿಕೆಯ ಮಾಂತ್ರಿಕ ಸೆಳೆತ!

    ಬೆಂಗಳೂರು: ಯಶಸ್ವಿ ಬಾಲಾದಿತ್ಯ ನಿರ್ದೇಶನದ ಚಿತ್ರಕಥಾ ಚಿತ್ರ ಈ ವಾರವೇ ತೆರೆ ಕಾಣುತ್ತಿದೆ. ಈ ಚಿತ್ರ ವಿಭಿನ್ನವಾದ ಪೋಸ್ಟರ್ ಮೂಲಕವೇ ಆರಂಭಿಕವಾಗಿ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಚಿತ್ರೀಕರಣದ ಹಂತದಲ್ಲಿಯೇ ಚಿತ್ರಕಥಾ ವೆರೈಟಿ ಪೋಸ್ಟರ್‍ಗಳ ಮೂಲಕ ಸದ್ದು ಮಾಡಿತ್ತು. ಇಡೀ ಚಿತ್ರದ ನವೀನ ಕಥೆಯ ಸುಳಿವು ಇಂಥಾ ಪೋಸ್ಟರ್‍ಗಳ ಮೂಲಕವೇ ಸಿಕ್ಕಿ ಬಿಟ್ಟಿತ್ತು. ಆ ನಂತರದಲ್ಲಿ ಶ್ರೀಮುರುಳಿ ಬಿಡುಗಡೆ ಮಾಡಿದ್ದ ಟ್ರೈಲರ್ ಮೂಲಕವೇ ಈ ಸಿನಿಮಾ ಪಡೆದುಕೊಂಡ ಪ್ರಚಾರ ಅಚ್ಚರಿದಾಯಕವಾದದ್ದು.

    ಪ್ರಜ್ವಲ್ ಎಂ ರಾಜ ನಿರ್ಮಾಣ ಮಾಡಿರೋ ಈ ಚಿತ್ರದ ತುಂಬಾ ಯುವ ಆವೇಗವೇ ತುಂಬಿಕೊಂಡಿದೆ. ಆದರೆ ಹೊಸಬರೇ ಇದ್ದರೂ ಚಿತ್ರ ಮಾತ್ರ ಮಾಗಿದ ಕಥೆಯನ್ನೊಳಗೊಂಡಿದೆ ಎಂಬ ವಿಚಾರ ಈಗಾಗಲೇ ಪ್ರೇಕ್ಷಕರ ಪಾಲಿಗೆ ಪಕ್ಕಾ ಆಗಿದೆ. ಈ ಮೂಲಕವೇ ಯುವ ಪ್ರತಿಭೆ ಸುಜಿತ್ ರಾಥೋಡ್ ನಾಯಕನಾಗಿಯೂ ಎಂಟ್ರಿ ಕೊಡುತ್ತಿದ್ದಾರೆ. ಇದೇ ರೀತಿ ಸದರಿ ಚಿತ್ರ ತಾಂತ್ರಿಕವಾಗಿಯೂ ಮಾಂತ್ರಿಕ ಮೋಡಿ ಮಾಡಲು ರೆಡಿಯಾಗಿದೆ.

    ಈ ಚಿತ್ರದ ನಿರ್ದೇಶಕ ಯಶಸ್ವಿ ಬಾಲಾದಿತ್ಯ ಈ ಹಿಂದೆ ಹಲವಾರು ವರ್ಷಗಳ ಕಾಲ ತಾಂತ್ರಿಕ ವಿಭಾಗದಲ್ಲಿಯೂ ಅನುಭವ ಹೊಂದಿರುವವರು. ಹಾಗೆ ಸಾಗಿ ಬಂದು ನಿರ್ದೇಶಕರಾಗಿರೋ ಅವರು ತಮ್ಮ ಚೊಚ್ಚಲ ಚಿತ್ರವನ್ನು ತಾಂತ್ರಿಕವಾಗಿಯೂ ಬೆರಗಾಗುವಂಥಾ ಶೈಲಿಯಲ್ಲು ರೂಪಿಸಿದ ಭರವಸೆಯಿಂದಿದ್ದಾರೆ. ಸ್ಕ್ರೀನ್ ಪ್ಲೇ ಸೇರಿದಂತೆ ಎಲ್ಲದರಲ್ಲಿಯೂ ಪ್ರಯೋಗಾತ್ಮಕ ಅಂಶಗಳನ್ನು ಹೊಂದಿರೋ ಈ ಚಿತ್ರ ಕಮರ್ಶಿಯಲ್ ಚಹರೆಯೊಂದಿಗೆ ಮ್ಯಾಜಿಕ್ ಮಾಡುವ ತಯಾರಿಯಲ್ಲಿದೆ.

    ಇದೆಲ್ಲ ವಿಶೇಷತೆಗಳ ಜೊತೆಯಲ್ಲಿಯೇ ಭರ್ಜರಿಯಾದ ತಾರಾಗಣದ ಸಾಥ್ ಕೂಡಾ ಈ ಚಿತ್ರಕ್ಕಿದೆ. ತಬಲಾ ನಾಣಿ, ಸುಧಾ ರಾಣಿ, ಬಿ ಜಯಶ್ರೀ, ದಿಲೀಪ್ ರಾಜ್ ಮತ್ತು ಅಗ್ನಿಸಾಕ್ಷಿ ರಾಧಿಕಾ ಸೇರಿದಂತೆ ಅನೇಕ ಕಲಾವಿದರು ಈ ತಾರಾಗಣದಲ್ಲಿದ್ದಾರೆ. ಹೀಗೆ ಎಲ್ಲ ಥರದಲ್ಲಿಯೂ ಕುತೂಹಲಕ್ಕೆ ಕಾರಣವಾಗಿರೋ ಚಿತ್ರಕಥಾ ಇದೇ ವಾರ ಅಂದರೆ ಹನ್ನೆರಡನೇ ತಾರೀಕಿನಂದು ಬಿಡುಗಡೆಯಾಗಲಿದೆ.