Tag: ದಿವಾಳಿ

  • ಚೀನಾ ಸಾಲದ ಸುಳಿಗೆ ಬಿದ್ದ ಮಾಲ್ಡೀವ್ಸ್‌ಗೆ ಐಎಂಎಫ್‌ ಎಚ್ಚರಿಕೆ

    ಚೀನಾ ಸಾಲದ ಸುಳಿಗೆ ಬಿದ್ದ ಮಾಲ್ಡೀವ್ಸ್‌ಗೆ ಐಎಂಎಫ್‌ ಎಚ್ಚರಿಕೆ

    – ವಿದೇಶಗಳಿಂದ ಆರ್ಥಿಕ ಸಹಾಯ ಪಡೆಯುವುದನ್ನು ನಿಲ್ಲಿಸಿ
    – ಪ್ರವಾಸೋದ್ಯಮಕ್ಕೆ ಪೂರಕವಾಗಿರುವ ಯೋಜನೆಗಳನ್ನು ಕೂಡಲೇ ರೂಪಿಸಿ

    ಮಾಲೆ: ಭಾರತದೊಂದಿಗೆ (India) ಕಿತ್ತಾಟ ನಡೆಸಿ ಚೀನಾಗೆ (China) ಹತ್ತಿರವಾಗಿರುವ ಮಾಲ್ಡೀವ್ಸ್‌ (Maldives) ಈಗ ಸಾಲದ ಸುಳಿಯಲ್ಲಿ (Debt Distress) ಸಿಲುಕಿದೆ. ಈಗ ಚೀನಾದಿಂದ ಮತ್ತಷ್ಟು ಸಾಲ ಪಡೆಯಲು ಮುಂದಾಗಿರುವ ಮಾಲ್ಡೀವ್ಸ್‌ಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಮತ್ತೊಮ್ಮೆ ಎಚ್ಚರಿಕೆ ನೀಡಿದೆ.

    ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಮಾಲ್ಡೀವ್ಸ್‌ ಕೂಡಲೇ ತನ್ನ ಆದಾಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರ ವೆಚ್ಚವನ್ನು ಕಡಿತ ಮಾಡಬೇಕು ಮತ್ತು ಹೊರ ದೇಶಗಳಿಂದ ಆರ್ಥಿಕ ಸಹಾಯ ಪಡೆಯುವುದನ್ನು ಕಡಿಮೆ ಮಾಡಬೇಕು ಎಂದು ಸೂಚಿಸಿದೆ.

    ಸಾಲದ ಸುಳಿಯಲ್ಲಿ ಸಿಲುಕಿರುವ ಮಾಲ್ಡೀವ್ಸ್‌ ಆರ್ಥಿಕತೆ ಕುಸಿಯುವ ಲಕ್ಷಣಗಳು ಕಾಣಿಸುತ್ತಿವೆ. ಸಾಲದ ಜೊತೆಗೆ ಆದಾಯ ವೃದ್ಧಿಸುವ ಯಾವುದೇ ಯೋಜನೆಗಳನ್ನು ಸರ್ಕಾರ ಕೈಗೊಂಡಿಲ್ಲ. ಹೀಗಾಗಿ ರಾಷ್ಟ್ರದ ಪ್ರಮುಖ ಆದಾಯದ ಮೂಲವಾಗಿರುವ ಪ್ರವಾಸೋದ್ಯಮಕ್ಕೆ (Tourism) ಪೂರಕವಾಗಿರುವ ಯೋಜನೆಗಳನ್ನು ಕೂಡಲೇ ರೂಪಿಸಬೇಕು ಎಂದು ಐಎಂಎಫ್‌ ಹೇಳಿದೆ. ಇದನ್ನೂ ಓದಿ: ಇಂದು ರಾಜ್ಯದ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ 

     

    ಕಳೆದ ವರ್ಷ ಅಂತ್ಯಕ್ಕೆ ಮಾಲ್ಡೀವ್ಸ್‌ ವಿದೇಶಗಳಿಂದ 4.038 ಬಿಲಿಯನ್‌ ಡಾಲರ್‌ (ಅಂದಾಜು 33.71 ಸಾವಿರ ಕೋಟಿ ರೂ.) ಸಾಲ ಪಡೆದಿದೆ. ಇದು ಮಾಲ್ಡೀವ್ಸ್‌ ಜಿಡಿಪಿಗಿಂತ 118%ರಷ್ಟು ಹೆಚ್ಚಿದೆ. ಈ ಪೈಕಿ 25% ರಷ್ಟು ಸಾಲವನ್ನು ಚೀನಾದ ಎಕ್ಸ್‌ಪೋರ್ಟ್‌-ಇಂಪೋರ್ಟ್‌ ಬ್ಯಾಂಕ್‌ನಿಂದಲೇ ಪಡೆದಿದೆ.

    ಭಾರತ ವಿರೋಧಿಯಾಗಿರುವ ಮೊಹಮ್ಮದ್ ಮುಯಿಜು ಅಧ್ಯಕ್ಷರಾದ ಬಳಿಕ ಚೀನಾಗೆ ಭೇಟಿ ನೀಡಿ ಸಹಾಯ ಪಡೆದ್ದರು. ಚುನಾವಣಾ ಪ್ರಚಾರದಲ್ಲಿ ಮಾಲ್ಡೀವ್ಸ್‌ನಲ್ಲಿರುವ ಭಾರತದ ಸೈನಿಕರನ್ನು ಹೊರ ಹಾಕುವುದಾಗಿ ಘೋಷಿಸಿದ್ದರು. ಅದರಂತೆ ಭಾರತದ ಸೈನಿಕರು ಈಗ ಮಾಲ್ಡೀವ್ಸ್‌ ತೊರೆದಿದ್ದು ಚೀನಾ ಈಗ ರಕ್ಷಣಾ ಸಹಾಯ ಒದಗಿಸುವುದಾಗಿ ಹೇಳಿದೆ.‌ ಇದನ್ನೂ ಓದಿ: ಚೀನಾದ ತಾಳಕ್ಕೆ ಕುಣಿಯುತ್ತಿದ್ದರೂ ಮಾನವೀಯ ನೆರವು – ಭಾರತದ ಸಹಾಯಕ್ಕೆ ಧನ್ಯವಾದ ಹೇಳಿದ ಮಾಲ್ಡೀವ್ಸ್‌

    ಚೀನಾದಿಂದ ಭಾರೀ ಹೂಡಿಕೆ
    ಮಾಲ್ಡೀವ್ಸ್‌ನ ಐದಕ್ಕೂ ಹೆಚ್ಚು ದ್ವೀಪಗಳನ್ನು ಚೀನಾದ ಕಂಪನಿಗಳು 50 ವರ್ಷಗಳಿಗೆ ಗುತ್ತಿಗೆ ಪಡೆದಿವೆ. ಮಾಲೆ ಸಮುದ್ರ ಸೇತುವೆ ಅಭಿವೃದ್ಧಿ ಯೋಜನೆಯ ವೆಚ್ಚದ 50% ರಷ್ಟು ಹಣವನ್ನು ಚೀನಾವೇ ಭರಿಸಿದೆ. ಅಷ್ಟೇ ಅಲ್ಲದೇ 50% ರಷ್ಟು ವೆಚ್ಚವನ್ನು ಸಾಲದ ರೂಪದಲ್ಲಿ ನೀಡಿದೆ. ಚೀನಾ -ಮಾಲ್ಡೀವ್ಸ್‌ ಸ್ನೇಹ ಸೇತುವೆ, ವಿಮಾನ ನಿಲ್ದಾಣ ನವೀಕರಣ, ಮನೆಗಳ ನಿರ್ಮಾಣ ಸೇರಿದಂತೆ ಹಲವು ಮೂಲಸೌಕರ್ಯ ಯೋಜನೆಗಳಿಗೆ ಚೀನಾ ಸರ್ಕಾರ ಬಿಲಿಯನ್‌ಗಟ್ಟಲೇ ಡಾಲರ್‌ ಹಣವನ್ನು ಹೂಡಿಕೆ ಮಾಡಿದೆ. ಮಾಲ್ಡೀವ್ಸ್‌ ಮತ್ತು ಚೀನಾದ ಸಂಬಂಧ ಈಗ ಆರಂಭವಾಗಿದ್ದಲ್ಲ. 1975 ರಿಂದಲೇ ಚೀನಾ ಮಾಲ್ಡೀವ್ಸ್‌ನಲ್ಲಿ ಹೂಡಿಕೆ ಮಾಡಲು ಆರಂಭಿಸಿತ್ತು.

     
    ಏನಿದು ಚೀನಾದ ಕುತಂತ್ರ?
    ವ್ಯಾಪಾರ ಮಾರುಕಟ್ಟೆಯನ್ನು ವಿಸ್ತರಿಸುವ ನೆಪದಲ್ಲಿ ಆರಂಭಿಸಿರುವ ಒನ್‌ ಬೆಲ್ಟ್‌ ಒನ್‌ ರೋಡ್‌ ಯೋಜನೆ ಮೂಲಕ ಚೀನಾ ಇಡೀ ವಿಶ್ವವನ್ನೇ ಆಳಲು ಹೊರಟಿದೆ. ಈ ಯೋಜನೆಗೆ ಈಗ 10 ವರ್ಷ ಪೂರ್ಣಗೊಂಡಿದೆ. ಸರಳವಾಗಿ ಹೇಳುವುದಾರೆ ರಸ್ತೆ, ರೈಲು, ಹಡಗಿನ ಮೂಲಕ ವಸ್ತುಗಳನ್ನು ಸಾಗಿಸಲು ಆರಂಭವಾದ ಯೋಜನೆ ಇದು. ರಷ್ಯಾ, ಸೌದಿ ಅರೇಬಿಯಾ, ಕತಾರ್‌, ಇರಾನ್‌, ಅರ್ಜೈಂಟಿನಾ, ದಕ್ಷಿಣ ಆಫ್ರಿಕಾ, ದಕ್ಷಿಣ ಕೊರಿಯಾ ಸೇರಿದಂತೆ ಬರೋಬ್ಬರಿ 150 ದೇಶಗಳು ಈ ಯೋಜನೆಗೆ ಸಹಿ ಹಾಕಿದೆ.

    ಯೋಜನೆಯನ್ನು ಸರಳವಾಗಿ ವಿವರಿಸುವುದಾರೆ ಹಿಂದುಳಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಚೀನಾ ಭಾರೀ ದೊಡ್ಡ ಮೊತ್ತದ ಯೋಜನೆಯನ್ನು ಕೈಗೊಳ್ಳುತ್ತದೆ. ಈ ಯೋಜನೆಗೆ ಅರ್ಧದಷ್ಟು ಹಣವನ್ನು ಚೀನಾ ಹೂಡಿಕೆ ಮಾಡಿದರೆ ಉಳಿದ ಅರ್ಧ ಹಣವನ್ನು ಆ ದೇಶಗಳು ಹೂಡಿಕೆ ಮಾಡಬೇಕು. ಆ ದೇಶಗಳಿಗೆ ಹಣ ಹೂಡಿಕೆ ಮಾಡಲು ಶಕ್ತಿ ಇಲ್ಲದ ಕಾರಣ ಚೀನಾದ ಬ್ಯಾಂಕ್‌ಗಳೇ ದೇಶಗಳಿಗೆ ಸಾಲ ನೀಡುತ್ತದೆ. ಸಾಲ ಪಾವತಿ ಆಗದೇ ಇದ್ದಾಗ ಯೋಜನೆಯನ್ನೇ ಚೀನಾ ಸಂಪೂರ್ಣ ಸ್ವಾಧೀನಪಡಿಸಿಕೊಳ್ಳುತ್ತದೆ. ಚೀನಾ -ಪಾಕಿಸ್ತಾನ ಎಕಾನಮಿಕ್‌ ಕಾರಿಡಾರ್‌ ಹೆಸರಿನಲ್ಲಿ ಪಾಕ್ ಸಾಲ ಪಡೆದುಕೊಂಡಿತ್ತು ಸದ್ಯ ಅಂದಾಜು 30 ಬಿಲಿಯನ್‌ ಡಾಲರ್‌ ಹಣವನ್ನು ಪಾಕಿಸ್ತಾನ ಚೀನಾಗೆ ಪಾವತಿ ಮಾಡಬೇಕಿದೆ. ಚೀನಾ ಹಣವನ್ನು ಪಾವತಿ ಮಾಡಲು ಕನಿಷ್ಟ 40 ವರ್ಷ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

    ಶ್ರೀಲಂಕಾದ ಹಂಬನ್‌ತೋಟ ಬಂದರನ್ನು ಚೀನಾ ಸಹಕಾರದಿಂದ ಅಭಿವೃದ್ಧಿ ಪಡಿಸಲಾಗಿದೆ. ಅಭಿವೃದ್ಧಿ ಪಡಿಸಿದರೂ ನಿರೀಕ್ಷಿತ ಪ್ರಮಾಣದ ಲಾಭವಾಗಿಲ್ಲ. ಸಾಲ ಮರುಪಾವತಿ ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ 2017ರಲ್ಲಿ 99 ವರ್ಷಗಳ ಕಾಲ ಚೀನಾದ ಚೀನಾ ಮರ್ಚಂಟ್‌ ಪೋರ್ಟ್‌ ಹೋಲ್ಡಿಂಗ್‌ಗೆ ಲೀಸ್‌ಗೆ ನೀಡಲಾಗಿದೆ.

    ಪಾಕಿಸ್ತಾನ, ಶ್ರೀಲಂಕಾ ಮಾತ್ರವಲ್ಲ ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡ, ಮಲೇಷ್ಯಾ ಸೇರಿದಂತೆ ಹಲವು ದೇಶಗಳು ಸಾಲದ ಸುಳಿಯಲ್ಲಿ ಸಿಲುಕಿವೆ. ಈ ಕಾರಣಕ್ಕೆ ಚೀನಾದ ಒನ್‌ ರೋಡ್‌, ಒನ್‌ ಬೆಲ್ಟ್‌ ಈಗ ಡೆಟ್‌ ಟ್ರ್ಯಾಪ್‌ ಡಿಪ್ಲೊಮಸಿ ಎಂದೇ ಎಂದೇ ಕುಖ್ಯಾತಿ ಪಡೆದಿದೆ.

     

  • ಕಾಂಗ್ರೆಸ್‌ನ ಗ್ಯಾರಂಟಿಗಳು ದೇಶವನ್ನು ದಿವಾಳಿಗೆ ತಳ್ಳಬಹುದು: ಮೋದಿ ಎಚ್ಚರಿಕೆ

    ಕಾಂಗ್ರೆಸ್‌ನ ಗ್ಯಾರಂಟಿಗಳು ದೇಶವನ್ನು ದಿವಾಳಿಗೆ ತಳ್ಳಬಹುದು: ಮೋದಿ ಎಚ್ಚರಿಕೆ

    ಜೈಪುರ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election) ಸಂದರ್ಭ ಕಾಂಗ್ರೆಸ್ (Congress) ಹೊಸ ಗ್ಯಾರಂಟಿ ಸೂತ್ರವನ್ನು (Guarantee Formula) ಹೆಣೆದಿದೆ. ಕಾಂಗ್ರೆಸ್‌ನವರ ಈ ಗ್ಯಾರಂಟಿಗಳು ದೇಶವನ್ನು ದಿವಾಳಿಯಾಗಿಸಬಹುದು (Bankrupt) ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

    ಬುಧವಾರ ರಾಜಸ್ಥಾನದ (Rajasthan) ಅಜ್ಮೀರದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್ ರಾಜ್ಯ ಚುನಾವಣೆಗಳಿಗಾಗಿ ಗ್ಯಾರಂಟಿ ಸೂತ್ರಗಳನ್ನು ಸೃಷ್ಟಿಸಿದೆ. ಆದರೆ ಅವರು ತಾವು ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತಾರಾ? ಕಲ್ಯಾಣಕ್ಕಾಗಿ ಅವರಿಗೆ ಇಷ್ಟೊಂದು ಹಣ ಎಲ್ಲಿಂದ ಬರುತ್ತದೆ ಎಂದು ಜನರು ಆಶ್ಚರ್ಯಪಡುತ್ತಿದ್ದಾರೆ. ಆದರೆ ಅವರಿಗೆ ಎಂದಿಗೂ ಹಣದ ಸಮಸ್ಯೆಯೇ ಆಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    50 ವರ್ಷಗಳ ಹಿಂದೆ ಕಾಂಗ್ರೆಸ್ ದೇಶದಲ್ಲಿ ಬಡತನ ತೊಡೆದುಹಾಕುತ್ತದೆ ಎಂದು ಭರವಸೆ ನೀಡಿತ್ತು. ಆದರೆ ಇದು ಅವರು ಬಡವರಿಗೆ ಬಗೆದಿರುವ ದೊಡ್ಡ ದ್ರೋಹವಾಗಿದೆ. ಬಡವರ ದಾರಿ ತಪ್ಪಿಸುವುದು ಮತ್ತು ಅವರನ್ನು ವಂಚಿತರನ್ನಾಗಿ ಮಾಡುವುದು ಕಾಂಗ್ರೆಸ್‌ನ ನೀತಿಯಾಗಿದೆ. ಇದರಿಂದ ರಾಜಸ್ಥಾನದ ಜನರು ಕೂಡಾ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ರಾಜಸ್ಥಾನಕ್ಕೆ ಏನು ಸಿಕ್ಕಿದೆ? ಶಾಸಕರು, ಸಿಎಂ ಹಾಗೂ ಮಂತ್ರಿಗಳು ತಮ್ಮ ತಮ್ಮಲ್ಲೇ ಕಿತ್ತಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಮುಸ್ಲಿಂ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ, ಐವರು ಹಿಂದೂ ಮಹಿಳೆಯರಿಗೆ ಗೆಲುವು

    2014 ಕ್ಕೂ ಮೊದಲು ಭ್ರಷ್ಟಾಚಾರದ ವಿರುದ್ಧ ಜನರು ಬೀದಿಗಿಳಿದಿದ್ದರು. ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿಗಳು ನಡೆದಿದ್ದರೂ ಕಾಂಗ್ರೆಸ್ ರಿಮೋಟ್ ಕಂಟ್ರೋಲ್ ಮೂಲಕ ಸರ್ಕಾರವನ್ನು ನಡೆಸುತ್ತಿತ್ತು. ಕಾಂಗ್ರೆಸ್ ದೇಶದ ರಕ್ತವನ್ನು ಹೀರುವ ಮತ್ತು ಅಭಿವೃದ್ಧಿಗೆ ಅಡ್ಡಿಪಡಿಸುವ ಭ್ರಷ್ಟ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ ಎಂದು ವಾಗ್ದಾಳಿ ನಡೆಸಿದರು.

    ಈಗ ದೇಶದಲ್ಲಿ ಬಿಜೆಪಿ ಸರ್ಕಾರದಿಂದಾಗಿ ಜಗತ್ತು ಭಾರತದ ಬಗ್ಗೆ ಮಾತನಾಡುತ್ತಿದೆ. ಕಳೆದ 9 ವರ್ಷಗಳಲ್ಲಿ ತಮ್ಮ ಸರ್ಕಾರ ಜನರ ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಕ್ಕಾಗಿ ಸಮರ್ಪಿತವಾಗಿದೆ. ತೀವ್ರ ಬಡತನವನ್ನು ಕೊನೆಗೊಳಿಸಲು ಭಾರತ ಹತ್ತಿರದಲ್ಲಿದೆ ಎಂದು ನುಡಿದರು. ಇದನ್ನೂ ಓದಿ: ಜೂನ್‌ 1ಕ್ಕೆ ನಡೆಯಬೇಕಿದ್ದ ಕ್ಯಾಬಿನೆಟ್‌ ಸಭೆ ಶುಕ್ರವಾರಕ್ಕೆ ಹೋಗಿದ್ದು ಯಾಕೆ?

  • ಪತನದ ಭೀತಿಯಲ್ಲಿ ಮತ್ತೊಂದು ಬ್ಯಾಂಕ್ – ಕ್ರೆಡಿಟ್ ಸ್ಯೂಸಿ ಸಹಾಯಕ್ಕೆ ನಿಂತ ಸ್ವಿಸ್ ಬ್ಯಾಂಕ್

    ಪತನದ ಭೀತಿಯಲ್ಲಿ ಮತ್ತೊಂದು ಬ್ಯಾಂಕ್ – ಕ್ರೆಡಿಟ್ ಸ್ಯೂಸಿ ಸಹಾಯಕ್ಕೆ ನಿಂತ ಸ್ವಿಸ್ ಬ್ಯಾಂಕ್

    ವಾಷಿಂಗ್ಟನ್: ಅಮೆರಿಕದಲ್ಲಿ (America) ಕಳೆದ ಕೆಲವು ದಿನಗಳಿಂದ ಒಂದಾದ ಮೇಲೊಂದರಂತೆ ಬ್ಯಾಂಕುಗಳು (Bank) ದಿವಾಳಿಯಾಗುತ್ತಿವೆ. ಕಳೆದ 10 ದಿನಗಳಲ್ಲಿ ಅಮೆರಿಕದ 3 ಬ್ಯಾಂಕುಗಳು ದಿವಾಳಿಯಾಗಿರುವ ಬೆನ್ನಲ್ಲೇ ಜಗತ್ತಿನ 8ನೇ ಅತಿ ದೊಡ್ಡ ಬ್ಯಾಂಕ್ ‘ಕ್ರೆಡಿಟ್ ಸ್ಯೂಸಿ’ (Credit Suisse) ನೆಲಕಚ್ಚುವ ಭೀತಿಯಲ್ಲಿದೆ.

    ಸ್ವಿಡ್ಜರ್‌ಲ್ಯಾಂಡ್ (Switzerland) ಮೂಲದ ಕ್ರೆಡಿಟ್ ಸ್ಯೂಸಿ ಬ್ಯಾಂಕ್‌ನ ಷೇರುಗಳು ಬುಧವಾರ ಶೇ.30 ರಷ್ಟು ಕುಸಿದಿದೆ. ಈ ಹಿನ್ನೆಲೆ ಕ್ರೆಡಿಟ್ ಸ್ಯೂಸಿ ಮುಚ್ಚಿಹೋಗುವ ಭೀತಿಯಲ್ಲಿದೆ. ಈ ನಡುವೆ ಸ್ವಿಸ್ ನ್ಯಾಷನಲ್ ಬ್ಯಾಂಕ್ (Swiss bank) ಕ್ರೆಡಿಟ್ ಸ್ಯೂಸಿಯನ್ನು ಬಲಪಡಿಸಲು 54 ಶತಕೋಟಿ ಡಾಲರ್ ನೀಡಲು ಮುಂದಾಗಿದೆ.

    ಕ್ರೆಡಿಟ್ ಸ್ಯೂಸಿ ಬ್ಯಾಂಕ್ ಕುಸಿಯುವ ಸಾಧ್ಯತೆಯಿದೆ ಎಂದು ಖ್ಯಾತ ಹೂಡಿಕೆ ತಜ್ಞ ರಾಬರ್ಟ್ ಕಿಯೋಸಾಕಿ ಭವಿಷ್ಯ ನುಡಿದಿದ್ದಾರೆ. ಕಳೆದ 10 ದಿನಗಳಲ್ಲಿ ಅಮೆರಿಕದ ಸಿಲ್ವರ್ ಗೇಟ್ ಕ್ಯಾಪಿಟಲ್, ಸಿಲಿಕಾನ್ ವ್ಯಾಲಿ ಹಾಗೂ ಸಿಗ್ನೆಚರ್ ಬ್ಯಾಂಕ್‌ಗಳನ್ನು ಮುಚ್ಚಲಾಗಿದೆ. ಒಂದು ವೇಳೆ ತಜ್ಞರ ಭವಿಷ್ಯದಂತೆ ಕ್ರೆಡಿಟ್ ಸ್ಯೂಸಿ ಬ್ಯಾಂಕ್ ಕೂಡಾ ದಿವಾಳಿಯಾದರೆ ಅಮೆರಿಕದ ಆರ್ಥಿಕತೆ ಬುಡಮೇಲಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ನ್ಯೂಜಿಲೆಂಡ್‌ನ ಕೆರ್ಮಾಡೆಕ್ ದ್ವೀಪಗಳಲ್ಲಿ 7.1 ತೀವ್ರತೆಯ ಭೂಕಂಪ – ಸುನಾಮಿ ಎಚ್ಚರಿಕೆ

    ಕ್ರೆಡಿಟ್ ಸ್ಯೂಸಿ ಬ್ಯಾಂಕ್ 2021ರ ಬಳಿಕ ಸಾಕಷ್ಟು ಹಣಕಾಸು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದಿಂದಾಗಿ ಮಾರುಕಟ್ಟೆ ಮೌಲ್ಯವನ್ನು ಶೇ.80 ರಷ್ಟು ಕಳೆದುಕೊಂಡಿದೆ. ಇದೀಗ ಬಾಂಡ್ ಮಾರುಕಟ್ಟೆಯಲ್ಲಿ ಈ ಬ್ಯಾಂಕ್ ಸಾಕಷ್ಟು ಹಣವನ್ನು ಹೊಂದಿದೆ. ಆದರೆ ಬಾಂಡ್ ಮಾರುಕಟ್ಟೆಯೇ ಕುಸಿತದ ಭೀತಿಯಲ್ಲಿದೆ. ಷೇರುಪೇಟೆಗಿಂತಲೂ ಬಾಂಡ್ ಪೇಟೆಯಲ್ಲಿ ಹೆಚ್ಚು ಹಣವಿದೆ. ಒಂದುವೇಳೆ ಬಾಂಡ್ ಪೇಟೆ ಕುಸಿದರೆ ಕ್ರೆಡಿಟ್ ಸ್ಯೂಸಿ ಕೂಡಾ ಕುಸಿದುಹೋಗುವ ಸಾಧ್ಯತೆಯಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತ ನಿಯಂತ್ರಣಕ್ಕೆ ಹೈಟೆಕ್ ಟಚ್: ಸ್ಪೀಡ್ ಲಿಮಿಟ್ ಮೀರಿದ್ರೆ ಮನೆಗೆ ಬರುತ್ತೆ ನೋಟಿಸ್

  • ಸಿಲಿಕಾನ್ ವ್ಯಾಲಿ ಬಳಿಕ ಅಮೆರಿಕದ ಮತ್ತೊಂದು ಬ್ಯಾಂಕ್ ದಿವಾಳಿ

    ಸಿಲಿಕಾನ್ ವ್ಯಾಲಿ ಬಳಿಕ ಅಮೆರಿಕದ ಮತ್ತೊಂದು ಬ್ಯಾಂಕ್ ದಿವಾಳಿ

    ವಾಷಿಂಗ್ಟನ್: ಸ್ಟಾರ್ಟ್ಅಪ್‌ಗಳಿಗೆ ಸಾಲ ನೀಡಲು ಹೆಸರುವಾಸಿಯಾಗಿದ್ದ ಅಮೆರಿಕದ (America) ಸಿಲಿಕಾನ್ ವ್ಯಾಲಿ ಬ್ಯಾಂಕ್ (SVB) ದಿವಾಳಿಯಾಗಿರುವ ಬೆನ್ನಲ್ಲೇ ಅಮೆರಿಕದ ಅಧಿಕಾರಿಗಳು ಮತ್ತೊಂದು ಟೆಕ್ ಸ್ನೇಹಿ ಬ್ಯಾಂಕ್ ಅನ್ನು ಮುಚ್ಚಿರುವುದಾಗಿ ಘೋಷಿಸಿದ್ದಾರೆ.

    ಸಿಲಿಕಾನ್ ವ್ಯಾಲಿ ಬ್ಯಾಂಕ್ (Silicon Valley Bank) ದಿವಾಳಿಯಾದ ಬೆನ್ನಲ್ಲೇ ಸಿಗ್ನೇಚರ್ ಬ್ಯಾಂಕ್ (Signature Bank) ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಬ್ಯಾಂಕ್ ಕ್ರಿಪ್ಟೋಕರೆನ್ಸಿಗಳ ಸ್ಟಾಕ್ ಅನ್ನು ಹೊಂದಿತ್ತು. ಇದೀಗ ಅಪಾಯದ ದೃಷ್ಟಿಯಿಂದ ಬ್ಯಾಂಕ್ ಅನ್ನು ಸ್ವಲ್ಪ ಸಮಯದವರೆಗೆ ಮುಚ್ಚಲಾಗಿದೆ.

    ಸಿಗ್ನೇಚರ್ ಬ್ಯಾಂಕ್ ನ್ಯೂಯಾರ್ಕ್ನಲ್ಲಿರುವ ಪ್ರಾದೇಶಿಕ ಬ್ಯಾಂಕ್ ಆಗಿದೆ. ಕಳೆದ ವರ್ಷ ಕೊನೆಯಲ್ಲಿ ಈ ಬ್ಯಾಂಕ್ ಅನ್ನು ಫೆಡರಲ್ ಡೆಪಾಸಿಟ್ ಇನ್ಶುರೆನ್ಸ್ ಕಾರ್ಪೊರೇಷನ್ (FDIC) ತೆಗೆದುಕೊಂಡಿದೆ ಎಂದು ನ್ಯೂಯಾರ್ಕ್ ರಾಜ್ಯ ಹಣಕಾಸು ಸೇವೆಗಳ ಇಲಾಖೆ ತಿಳಿಸಿದೆ. ಸದ್ಯ ಸಿಗ್ನೇಚರ್ ಬ್ಯಾಂಕ್ ಹಾಗೂ ಸಿಲಿಕಾನ್ ವ್ಯಾಲಿ ಬ್ಯಾಂಕ್‌ನ ಯಾವುದೇ ನಷ್ಟದ ಹೊರೆಯನ್ನು ತೆರಿಗೆದಾರರು ಭರಿಸುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಲಂಕಾ ವಿರುದ್ಧ ಕಿವೀಸ್‌ಗೆ ರೋಚಕ ಜಯ – 2ನೇ ಬಾರಿ WTC ಫೈನಲ್‌ಗೆ ಭಾರತ

    ಟೆಕ್ ಸ್ಟಾರ್ಟ್ಅಪ್‌ಗಳಿಗೆ ಮೂಲ ಕಂಪನಿಯಾಗಿದ್ದ ಸಿಲಿಕಾನ್ ವ್ಯಾಲಿ ಬ್ಯಾಂಕ್‌ನ ಠೇವಣಿದಾರರು ಹಾಗೂ ಹೂಡಿಕೆದಾರರು ಬರೋಬ್ಬರಿ 42 ಬಿಲಿಯನ್ ಡಾಲರ್‌ನಷ್ಟು (ಸುಮಾರು 282 ಲಕ್ಷ ಕೋಟಿ ರೂ.) ಬೃಹತ್ ಮೊತ್ತದ ಹಣವನ್ನು ಹಿಂಪಡೆದ ಪರಿಣಾಮವಾಗಿ ಬ್ಯಾಂಕ್‌ನ ನಗದು ವ್ಯವಹಾರದಲ್ಲಿ ಕೊರತೆ ಕಂಡುಬಂದಿದೆ. ಈ ಕಾರಣದಿಂದಾಗಿ ಕಳೆದ ವಾರ ಸಿಲಿಕಾನ್ ವ್ಯಾಲಿ ಬ್ಯಾಂಕ್ ವ್ಯವಹಾರಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

    ಕಳೆದ ಶುಕ್ರವಾರ ಕ್ಯಾಲಿಫೋರ್ನಿಯಾದ ಬ್ಯಾಂಕಿಂಗ್ ಅಧಿಕಾರಿಗಳು ಸಿಲಿಕಾನ್ ವ್ಯಾಲಿ ಬ್ಯಾಂಕ್ ಅನ್ನು ಮುಚ್ಚಿದ್ದಾರೆ. 2008ರಲ್ಲಿ ಉಂಟಾದ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಬಳಿಕ ಇದು ಅತ್ಯಂತ ದೊಡ್ಡ ಬ್ಯಾಂಕಿಂಗ್‌ನ ವೈಫಲ್ಯ ಎನಿಸಿಕೊಂಡಿದೆ. ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ಕೇಂದ್ರ ಸರ್ಕಾರದ ವಿರೋಧ

  • ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟು – ನಮ್ಮ ದೇಶ ದಿವಾಳಿಯಾಗಿದೆ ಎಂದ ರಕ್ಷಣಾ ಸಚಿವ

    ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟು – ನಮ್ಮ ದೇಶ ದಿವಾಳಿಯಾಗಿದೆ ಎಂದ ರಕ್ಷಣಾ ಸಚಿವ

    ಇಸ್ಲಾಮಾಬಾದ್: ನಗದು ಕೊರತೆಯಿಂದ ಬಳಲುತ್ತಿರುವ ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟನ್ನು (Pakistan economic crisis) ಎದುರಿಸಲು ಹೆಣಗಾಡುತ್ತಿರುವ ನಡುವೆಯೇ ಇದೀಗ ಅಲ್ಲಿನ ರಕ್ಷಣಾ ಸಚಿವರು (Defense Minister) ಪಾಕಿಸ್ತಾನ ದಿವಾಳಿ (Bankrupt) ರಾಷ್ಟ್ರವಾಗಿದೆ ಎಂದು ಬೇಸರದಿಂದ ಹೇಳಿಕೊಂಡಿದ್ದಾರೆ.

    ಶನಿವಾರ ಸಿಯಾಲ್‌ಕೋಟ್‌ನಲ್ಲಿ ಸಮಾರಂಭವೊಂದನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ (Khawaja Asif), ನಾವೀಗ ದಿವಾಳಿಯಾಗಿರುವ ದೇಶದಲ್ಲಿ ವಾಸಿಸುತ್ತಿದ್ದೇವೆ. ಈ ಸ್ಥಿತಿಗೆ ಪ್ರತಿಯೊಬ್ಬರೂ ಕಾರಣರು. ಪಾಕಿಸ್ತಾನದ ಸಮಸ್ಯೆಗೆ ಪಾಕಿಸ್ತಾನವೇ ಪರಿಹಾರ ಕಂಡುಕೊಳ್ಳಬೇಕು ಎಂದಿದ್ದಾರೆ.

    ಪಾಕಿಸ್ತಾನ ಈಗಾಗಲೇ ದಿವಾಳಿಯಾಗಿದೆ. ನಾವು ದಿವಾಳಿಯಾಗಿರುವ ದೇಶದಲ್ಲಿ ವಾಸಿಸುತ್ತಿದ್ದೇವೆ. ಪಾಕಿಸ್ತಾನದ ಸಮಸ್ಯೆಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಳಿ ಪರಿಹಾರವಿಲ್ಲ. ನಮ್ಮ ಸಮಸ್ಯೆಗಳಿಗೆ ನಮ್ಮ ದೇಶದೊಳಗೆಯೇ ಪರಿಹಾರವಿದೆ. ಪಾಕಿಸ್ತಾನದಲ್ಲಿ ಕಾನೂನು ಹಾಗೂ ಸಂವಿಧಾನವನ್ನು ಅನುಸರಿಸದಿರುವುದರಿಂದ ಆರ್ಥಿಕ ಅವ್ಯವಸ್ಥೆ ಉಂಟಾಗಿದೆ. ಈ ಪರಿಸ್ಥಿತಿಗೆ ಅಧಿಕಾರಶಾಹಿ ಹಾಗೂ ರಾಜಕಾರಣಿಗಳು ಸೇರಿದಂತೆ ಎಲ್ಲರೂ ಕಾರಣರಾಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಜಪಾನ್ ಮೇಲೆ ಪರೀಕ್ಷಾರ್ಥ ಖಂಡಾಂತರ ಕ್ಷಿಪಣಿ ಹಾರಿಸಿದ ಉ. ಕೊರಿಯಾ – ಅಮೆರಿಕ, ದ. ಕೊರಿಯಾಗೆ ಎಚ್ಚರಿಕೆ

    ತೀವ್ರ ಆರ್ಥಿಕ ಕುಸಿತ ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಕಳೆದ ವಾರ ಹಣದುಬ್ಬರ ಶೇ.38.4 ಕ್ಕೆ ಏರಿಕೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿರುವುದು ಮುಂದುವರಿಯುತ್ತಿರುವುದರಿಂದ ಒಂದೇ ವಾರದಲ್ಲಿ ಶೇ.38.4 ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಕಾರಿನಲ್ಲಿ ಹೋಗುತ್ತಿದ್ದಾಗ ತನ್ನ ಅಜ್ಜಿಗೆ ಗುಂಡು ಹಾರಿಸಿದ 6ರ ಬಾಲಕಿ – ವೃದ್ಧೆ ಸಾವು

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಫ್ರೀಂ ಸ್ಕೀಂಗಳನ್ನು ನಿಲ್ಲಿಸಿ, ಇಲ್ಲದಿದ್ದರೆ ರಾಜ್ಯಗಳು ಶ್ರೀಲಂಕಾ ಆಗಬಹುದು: ಮೋದಿಗೆ ಅಧಿಕಾರಿಗಳ ಸಲಹೆ

    ಫ್ರೀಂ ಸ್ಕೀಂಗಳನ್ನು ನಿಲ್ಲಿಸಿ, ಇಲ್ಲದಿದ್ದರೆ ರಾಜ್ಯಗಳು ಶ್ರೀಲಂಕಾ ಆಗಬಹುದು: ಮೋದಿಗೆ ಅಧಿಕಾರಿಗಳ ಸಲಹೆ

    ನವದೆಹಲಿ: ಜನರನ್ನು ಸೆಳೆಯಲು ರಾಜ್ಯಗಳು ಉಚಿತ ಯೋಜನೆಗಳನ್ನು ಜಾರಿ ಮಾಡುತ್ತಿದ್ದರೆ ಆ ರಾಜ್ಯಗಳು ಶ್ರೀಲಂಕಾ, ಗ್ರೀಸ್‌ ದೇಶದಂತೆ ಆರ್ಥಿಕ ಅಧ:ಪತನ ಕಾಣಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

    ಕಳೆದ ಶನಿವಾರ ಪ್ರಧಾನಿ ಮೋದಿ ತಮ್ಮ ಅಧಿಕೃತ ಕಚೇರಿಯಲ್ಲಿ ಎಲ್ಲ ಇಲಾಖೆಯ ಕಾರ್ಯದರ್ಶಿಗಳ ಜೊತೆ ಸುಮಾರು 4 ಗಂಟೆಗಳ ಕಾಲ ದೀರ್ಘ ಸಭೆಯನ್ನು ನಡೆಸಿದ್ದಾರೆ. ಈ ವೇಳೆ ಇಲಾಖೆಗೆ ಸಂಬಂಧಿಸಿದಂತೆ ಸರ್ಕಾರದ ನೀತಿಗಳಲ್ಲಿನ ಲೋಪದೋಷಗಳನ್ನು ತಿಳಿಸುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಒಂದು ಮೊಟ್ಟೆಗೆ 30 ರೂಪಾಯಿ- ಶ್ರೀಲಂಕಾದಲ್ಲಿ ದಿನಸಿ ಬೆಲೆ ಏರಿಕೆ

    sri lanka diesel

    ಈ ಸಂದರ್ಭದಲ್ಲಿ ಅಧಿಕಾರಿಗಳು, ಇತ್ತೀಗೆ ಚುನಾವಣೆ ನಡೆದ ರಾಜ್ಯಗಳು ಸೇರಿದಂತೆ ಜನರ ಮೆಚ್ಚುಗೆಗೆ ಪಾತ್ರವಾಗಲು ರಾಜ್ಯ ಸರ್ಕಾರಗಳು ಉಚಿತ ಯೋಜನೆಗಳನ್ನು ಪ್ರಕಟಿಸುತ್ತಿವೆ. ಈ ಯೋಜನೆಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಣಕಾಸಿನ ಮೇಲೆ ದೀರ್ಘಾವಧಿಯಲ್ಲಿ ಪ್ರಮುಖ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆ ಮುಂದೆಯೇ ಹಿಂಸಾತ್ಮಕ ಪ್ರತಿಭಟನೆ – ವಾಹನಗಳು ಸುಟ್ಟು ಭಸ್ಮ

    ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ಭರವಸೆ ನೀಡುವ ಜನಪರ ಯೋಜನೆಗಳ ಪ್ರವೃತ್ತಿ ಮುಂದುವರಿದರೆ ಕೆಲವು ರಾಜ್ಯಗಳು ಹಣದ ಕೊರತೆಯಿರುವ ಶ್ರೀಲಂಕಾ ಅಥವಾ ಗ್ರೀಸ್‌ನಂತೆಯೇ ದಿವಾಳಿಯಾಗಬಹುದು ಎಂದು ಎಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಇತ್ತೀಚಿನ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ವಿವಿಧ ಯೋಜನೆಗಳನ್ನು ಘೋಷಿಸಿವೆ. ರಾಜ್ಯಗಳು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ನೀಡಿದ ಅನುದಾನಕ್ಕಿಂತಲೂ ಹೆಚ್ಚಿನ ಅನುದಾನವನ್ನು ಉಚಿತ ಯೋಜನೆಗಳಿಗೆ ಮೀಸಲಿಡುತ್ತಿವೆ. ಹಲವಾರು ರಾಜ್ಯಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು ಅವು ಒಕ್ಕೂಟದ ಸದಸ್ಯರಾಗಿರದಿದ್ದರೆ ದಿವಾಳಿಯಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

  • ವಿಶ್ವದ ಎತ್ತರದ ಕಟ್ಟಡ ಬುರ್ಜ್‌ ಖಲೀಫಾ ನಿರ್ಮಿಸಿದ್ದ ಕಂಪನಿ ದಿವಾಳಿ

    ವಿಶ್ವದ ಎತ್ತರದ ಕಟ್ಟಡ ಬುರ್ಜ್‌ ಖಲೀಫಾ ನಿರ್ಮಿಸಿದ್ದ ಕಂಪನಿ ದಿವಾಳಿ

    ದುಬೈ: ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್‌ ಖಲೀಫಾ ನಿರ್ಮಿಸಿದ್ದ ರಿಯಲ್‌ ಎಸ್ಟೇಟ್‌ ಅರಬ್‌ಟೆಕ್‌ ಹೋಲ್ಡಿಂಗ್ಸ್ ಕಂಪನಿ ದಿವಾಳಿಯಾಗಿದೆ.

    ಕೋವಿಡ್‌ 19 ಬಿಕ್ಕಟ್ಟಿನಿಂದ ಕಂಪನಿ ದಿವಾಳಿಯಾಗಿದ್ದು ಲಿಕ್ವಿಡೇಷನ್‌ಗೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ. ಕಂಪನಿಯ ಈ ನಿರ್ಧಾರಕ್ಕೆ ಪಾಲುದಾರರ ಒಪ್ಪಿಗೆಯೂ ದೊರೆತಿದೆ.

    ಕೊರೊನಾ ಕಾರಣದಿಂದ ಕೆಲಸ ನಡೆಯದ ಕಾರಣ ಸೌದಿ ಅರೇಬಿಯಾದ ಬಹುತೇಕ ರಿಯಲ್ ಎಸ್ಟೇಟ್ ಕಂಪನಿಗಳು ಈ ಸ್ಥಿತಿಯನ್ನು ಎದುರಿಸುತ್ತಿವೆ. ಕಂಪನಿಯ ನಿರ್ಧಾರದಿಂದ 40 ಸಾವಿರ ನೌಕರರ ಭವಿಷ್ಯ ಡೋಲಾಯಮಾನವಾಗಿದೆ.

    2020ರ ಮೊದಲ ಅರ್ಧ ವರ್ಷದಲ್ಲಿ 216 ದಶಲಕ್ಷ ಡಾಲರ್‌ ನಷ್ಟ ಅನುಭವಿಸಿದೆ ಎಂದು ಅರಬ್‌ಟೆಕ್‌ ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಬುರ್ಜ್‌ ಖಲೀಫಾ ಅಲ್ಲದೇ ಲೌವ್ರೆ ಮ್ಯೂಸಿಯಂ, ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಸ್ತರಣೆ ಮತ್ತು ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಯೋಜನೆಯನ್ನು ಅರಬ್ ಟೆಕ್ ಕಂಪನಿ ಪಡೆದುಕೊಂಡಿತ್ತು.

    ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿರುವ ಸರ್ಕಾರ ಮತ್ತು ಸಂಸ್ಥೆಗಳು ಕಟ್ಟಡ ನಿರ್ಮಾಣದ ಕೆಲಸವನ್ನು ಕೋವಿಡ್‌ 19ನಿಂದ ಸ್ಥಗಿತಗೊಳಿಸಿದೆ ಮತ್ತು ಅನಿರ್ದಿಷ್ಟಾವಧಿಗೆ ಮುಂದೂಡಿದೆ. ಈ ನಿರ್ಧಾರದ ಹಲವು ರಿಯಲ್‌ ಎಸ್ಟೇಟ್‌ ಕಂಪನಿಗಳಿಗೆ ಭಾರೀ ಹೊಡೆತ ನೀಡಿದೆ.