Tag: ದಿವ್ಯಾಂಗ

  • ಕಚೇರಿ ಬಳಿ ಕುಳಿತಿದ್ದ ಅಂಧ ವ್ಯಕ್ತಿಯ ಸಮಸ್ಯೆ ಆಲಿಸಿದ ನ್ಯಾಯಾಧೀಶರು

    ಕಚೇರಿ ಬಳಿ ಕುಳಿತಿದ್ದ ಅಂಧ ವ್ಯಕ್ತಿಯ ಸಮಸ್ಯೆ ಆಲಿಸಿದ ನ್ಯಾಯಾಧೀಶರು

    – ಸಮಸ್ಯೆ ಇತ್ಯರ್ಥ ಸ್ಥಳೀಯರಿಂದ ನ್ಯಾಯಧೀಶರಿಗೆ ಮೆಚ್ಚುಗೆ

    ಕೋಲಾರ: ಸಾಮಾನ್ಯವಾಗಿ ನ್ಯಾಯಾಧೀಶರು ಯಾವಾಗಲೂ ಅಂತರ ಕಾಯ್ದುಕೊಂಡಿರುತ್ತಾರೆ. ಸಾರ್ವಜನಿಕರು ಸಹ ಅವರನ್ನು ಭಯದಿಂದಲೇ ಕಾಣುತ್ತಿರುತ್ತಾರೆ. ನ್ಯಾಯಾಲಯದ ಒಳಗಡೆ ಮಾತ್ರ ಕಾಣಿಸುತ್ತಾರೆ. ಆದರೆ ಇದೀಗ ನ್ಯಾಯಾಧೀಶರೊಬ್ಬರು ತಮ್ಮ ಕಚೇರಿ ಬಳಿ ಇದ್ದ ಅಂಧ ವ್ಯಕ್ತಿಯನ್ನು ಮಾತನಾಡಿಸಿ, ಸಮಸ್ಯೆ ಪರಿಹರಿಸಿದ್ದಾರೆ. ಇದಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯ ಮುಳಬಾಗಿಲಿನ ಮುಳಬಾಗಿಲು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹಾಜಿ ಹುಸೇನ್ ಸಾಬ್ ಯಾದವಾಡ ಅವರು ಸಂತ್ರಸ್ತರನ್ನು ನ್ಯಾಯಾಲಯದ ಹೊರಗಡೆಯೇ ವಿಚಾರಣೆ ನಡೆಸಿ ಅವರಿಗೆ ಸಾಂತ್ವನ ಹೇಳುವ ಮೂಲಕ ಗಮನ ಸೆಳೆದಿದ್ದಾರೆ. ಇದಕ್ಕೆ ಸ್ಥಳೀಯರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಮುಳಬಾಗಿಲು ಪಟ್ಟಣದ ನಿವಾಸಿಯಾದ ಅಂಧ ವ್ಯಕ್ತಿ ದೇವರಾಜಾಚಾರ್ ತಮ್ಮ ಮನೆಯ ಗೋಡೆಗೆ ಸಂಭದಿಸಿದ ದೂರು ನೀಡಲು ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ನ್ಯಾಯಾಲಯದ ಗೇಟ್ ಬಳಿಯೇ ಇರುವ ಕಟ್ಟೆ ಯೊಂದರಲ್ಲಿ ಕುಳಿತಿದ್ದ ಅಂಧ ವ್ಯಕ್ತಿ ದೇವರಾಜಾಚಾರ್ ರನ್ನು ಗಮನಿಸಿದ ನ್ಯಾಯಧೀಶರು, ಅವರ ಪಕ್ಕದಲ್ಲಿಯೇ ಕುಳಿತು ವಿಚಾರಣೆ ನಡೆಸಿದ್ದಾರೆ. ನಂತರ ಎರಡೂ ಕಡೆಯವರನ್ನು ಇಂದು ಬರಲು ಹೇಳಿದ್ದು ಸಮಸ್ಯೆ ಬಗೆಹರಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.

    ಸದ್ಯ ನ್ಯಾಯಾಧೀಶರ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಅಂಧ ವ್ಯಕ್ತಿ ತಮ್ಮ ಸಮಸ್ಯೆಯನ್ನ ಆವರಣದ ಹೊರಗಡೆಯೇ ಆಲಿಸಿದ ನ್ಯಾಯಾದೀಶರ ಕುರಿತು ಪ್ರಶಂಸೆಯ ಮಾತುಗಳನ್ನಾಡಿದರು. ನ್ಯಾಯಧೀಶರ ನಿಲುವಿಗೆ ಸ್ಥಳೀಯರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಸಹಾಯ ಕೇಳಿ ಬಂದ ಅಂಧನನ್ನೇ ಹೊರದಬ್ಬಿದ ಸಚಿವರು- ಶಕ್ತಿ ಕೇಂದ್ರದಲ್ಲಿ ನಡೀತು ಅಮಾನವೀಯ ಘಟನೆ

    ಸಹಾಯ ಕೇಳಿ ಬಂದ ಅಂಧನನ್ನೇ ಹೊರದಬ್ಬಿದ ಸಚಿವರು- ಶಕ್ತಿ ಕೇಂದ್ರದಲ್ಲಿ ನಡೀತು ಅಮಾನವೀಯ ಘಟನೆ

    ಬೆಂಗಳೂರು: ಸಹಾಯ ಕೇಳಿ ಬಂದ ದಿವ್ಯಾಂಗನ ಮೇಲೆ ತೋಟಗಾರಿಕಾ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರು ದೌರ್ಜನ್ಯವೆಸಗಿದ ಅಮಾನವೀಯ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಈ ಘಟನೆ ವಿಧಾನಸೌಧ ಮೂರನೇ ಮಹಡಿ ಲಿಫ್ಟ್ ಬಳಿ ಶನಿವಾರ ರಾತ್ರಿ ನಡೆದಿದೆ. ಬೀದರ್ ಮೂಲದ ದಿವ್ಯಾಂಗ ಮಂಜುನಾಥ ಎಂಬವರೇ ದೌರ್ಜನ್ಯಕ್ಕೊಳಗಾದ ವ್ಯಕ್ತಿ.

    ಸಚಿವ ಸಂಪುಟ ಸಭೆಯ ಬಳಿಕ ಮಂಜುನಾಥ ಅವರು ಸಹಾಯಹಸ್ತ ಕೋರಿ ಸಚಿವರ ಬೆನ್ನತ್ತಿದರು. ಆದ್ರೆ ದಿವ್ಯಾಂಗನ ಅಳಲಿಗೆ ಕಿವಿಗೊಡದ ಸಚಿವರು ಕೈ ತೆಗಿಯೋ ಎಂದು ಗದರಿಸಿದ್ರು. ಅಲ್ಲದೇ ಸಚಿವರ ಅಂಗರಕ್ಷಕರು ಕೂಡ ಕಣ್ಣಿದ್ದವರೇ ಮನೆ ಸೇರೋದು ಕಷ್ಟ. ಇನ್ನು ನೀನೇನೋ ಮನೆ ಸೇರ್ತಿಯಾ ರಾತ್ರಿಯಾಗಿದೆ. ಹಗಲಿನಲ್ಲಿ ಬರಬೇಕು ತಾನೇ ಎಂದು ಗದರಿಸಿ ಲಿಫ್ಟ್ ಒಳಗಿಂದ ಹೊರದೂಡಿದ್ದಾರೆ.

    ಕಣ್ಣಿಲ್ಲದಿದ್ದರೂ ಸಚಿವರನ್ನು ಬೆನ್ನತ್ತಿ ಹೋದ್ರೂ ಕ್ಯಾರೆ ಎನ್ನದ ಕಾರಣ ಮಂಜುನಾಥ್ ಪರದಾಟ ನಡೆಸಿದ್ರು. ಕೊನೆಗೆ ಸಚಿವ ಎಂ.ಬಿ.ಪಾಟೀಲ್ ದಿವ್ಯಾಂಗನಿಗೆ ಸ್ಪಂದಿಸಿ, ಅವರ ಮನವಿ ಸ್ವೀಕರಿಸಿದ್ರು.

    https://www.youtube.com/watch?v=fTDVjsijZ_A

  • ದಿವ್ಯಾಂಗರಾದ್ರೂ ಕುಗ್ಗದ ಉತ್ಸಾಹ- 70 ವರ್ಷವಾದ್ರೂ ಸ್ವಾವಲಂಬಿ ಬದುಕು ನಡೆಸ್ತಿರೋ ನಾಗರಾಜು

    ದಿವ್ಯಾಂಗರಾದ್ರೂ ಕುಗ್ಗದ ಉತ್ಸಾಹ- 70 ವರ್ಷವಾದ್ರೂ ಸ್ವಾವಲಂಬಿ ಬದುಕು ನಡೆಸ್ತಿರೋ ನಾಗರಾಜು

    ಬೆಂಗಳೂರು: ಹುಟ್ಟು ಅಂಗವಿಕಲರಾದ್ರು ಛಲ ಅನ್ನೋದಿದ್ರೆ ಏನು ಬೇಕಾದರೂ ಸಾಧಿಸಬಹದು ಎಂಬುದನ್ನು ಇವತ್ತಿನ ನಮ್ಮ ಪಬ್ಲಿಕ್ ಹೀರೋ ತೋರಿಸಿಕೊಟ್ಟಿದ್ದಾರೆ. 70 ವರ್ಷ ದಾಟಿದರೂ ಇವರ ಉತ್ಸಾಹದ ಚಿಲುಮೆ ಕಡಿಮೆಯಾಗಲಿಲ್ಲ. ಸ್ವಾವಲಂಬಿ ಬದಕನ್ನು ನಡೆಸುವ ಮೂಲಕ ಹಲವರಿಗೆ ಇವರು ಮಾದರಿಯಾಗಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹೊಸ ನಿಜಗಲ್ ಗ್ರಾಮದ ನಿವಾಸಿ ನಾಗರಾಜು ಬಡತನದಲ್ಲಿ ಬೆಳೆದ್ರೂ ಎಸ್‍ಎಸ್‍ಎಲ್‍ಸಿ ಪಾಸಾಗಿದ್ದು, 1965ರಲ್ಲಿ ಅಂಗವಿಕಲ ಕೋಟಾದಡಿ ಸರ್ಕಾರಿ ಕೆಲಸಕ್ಕೆ ಸೇರಿದ್ರು. ಆದರೆ ಕೆಲ ದಿನಗಳಲ್ಲಿ ರಾಜೀನಾಮೆ ನೀಡಿ ಸಿವಿಲ್ ಕಂಟ್ರಾಕ್ಟರ್ ಆಗಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಸರ್ಕಾರಿ ಕಟ್ಟಡ ಕಾಮಗಾರಿಗಳನ್ನ ನಡೆಸಿದ್ರು.

    ರಾಜಕಾರಣಿಗಳು ಹಾಗೂ ಅಧಿಕಾರಿಗಳ ಕಿರಿಕಿರಿ ತಾಳದೆ ಕಂಟ್ರಾಕ್ಟರ್ ಕೆಲಸಕ್ಕೂ ಗುಡ್ ಬೈ ಹೇಳಿದ್ದಾರೆ. ಆಮೇಲೆ ಖಾಸಗಿ ಕಂಟ್ರಾಕ್ಟರ್ ಆಗಿ ಸಣ್ಣಪುಟ್ಟ ಕೆಲಸ ಮಾಡಿದ್ದಾರೆ. ಜೊತೆಗೆ ತಮ್ಮ ಜಮೀನಿನಲ್ಲಿ ರೈತನಾಗಿ ದುಡಿಯುತ್ತಿದ್ದಾರೆ. ಕೃಷಿ ಜೊತೆಗೆ ಹೈನುಗಾರಿಕೆ, ಇಟ್ಟಿಗೆ ತಯಾರಿಕಾ ಘಟಕಗಳನ್ನೂ ಹೊಂದಿದ್ದಾರೆ. ಬರುವ ಆದಾಯದಲ್ಲಿ ದೇವಸ್ಥಾನ, ಗ್ರಾಮಗಳ ಅಭಿವೃದ್ಧಿಗೆ ದೇಣಿಗೆ, ಗ್ರಾಮಕ್ಕೆ ಉಚಿತ ನೀರಿನ ಸರಬರಾಜು ಮಾಡ್ತಿದ್ದಾರೆ. ಒಟ್ಟಾರೆ ದಿವ್ಯಾಂಗರಾಗಿದ್ದರೂ ಈ ಇಳಿವಯಸ್ಸಿನಲ್ಲಿನಲ್ಲಿ ನಾಗರಾಜು ಅವರು ಯುವಕರನ್ನೂ ಮೀರಿಸುವಂತೆ ಚಟುವಟಿಕೆಯಿಂದ ಇದ್ದಾರೆ.

    https://www.youtube.com/watch?v=w-F4rWgWgzA