Tag: ದಿವ್ಯಾ ಸುರೇಶ್

  • ದಿವ್ಯಾ ಸುರೇಶ್ ಹಿಟ್ & ರನ್ ಕೇಸ್; ಸಾಲ ಮಾಡಿ ಚಿಕಿತ್ಸೆ ಪಡೆದುಕೊಂಡ ಗಾಯಾಳು ಅನಿತಾ

    ದಿವ್ಯಾ ಸುರೇಶ್ ಹಿಟ್ & ರನ್ ಕೇಸ್; ಸಾಲ ಮಾಡಿ ಚಿಕಿತ್ಸೆ ಪಡೆದುಕೊಂಡ ಗಾಯಾಳು ಅನಿತಾ

    – ಚಿಕಿತ್ಸೆಗೆ ಲಕ್ಷ ಲಕ್ಷ ಖರ್ಚಾಗಿದೆ -‌ ʻಪಬ್ಲಿಕ್‌ ಟಿವಿʼ ಎದುರು ಕಣ್ಣೀರಿಟ್ಟ ಸಂತ್ರಸ್ತೆ

    ಬಿಗ್‌ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಹಿಟ್ ಅಂಡ್ ರನ್ ಪ್ರಕರಣದ ಗಾಯಾಳು ಅನಿತಾ ʻಪಬ್ಲಿಕ್ ಟಿವಿʼ ಜೊತೆ ಅಳಲು ತೋಡಿಕೊಂಡಿದ್ದಾರೆ.

    ಸಾಲ ಮಾಡಿ ಚಿಕಿತ್ಸೆ ಪಡೆದುಕೊಂಡ ಗಾಯಾಳು ಅನಿತಾ ಮಾತಾಡುತ್ತಾ ಕಣ್ಣೀರಿಟ್ಟಿದ್ದಾರೆ. ತಾವು ಟೈಲರಿಂಗ್ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ತಮ್ಮ ಗಂಡ ಆಟೋ ಓಡಿಸುತ್ತಿದ್ದಾರೆ. ಗುಂಡ್ಲುಪೇಟೆಯಿಂದ ಇಲ್ಲಿ ಬಂದು ಬದುಕು ಕಟ್ಟಿಕೊಂಡ ಈ ಕುಟುಂಬಕ್ಕೆ ಈ ಘಟನೆ ಆಘಾತವನ್ನೇ ಉಂಟು ಮಾಡಿದೆ.

    ಅಸಲಿಗೆ ಘಟನೆ ಆಗಿದ್ದು, ಅಕ್ಟೋಬರ್ 4ರ ರಾತ್ರಿ ಗಾಯಾಳು ಅನಿತಾ ಸಹೋದರಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಹೀಗಾಗಿ ಗಾಡಿ ಸ್ವಲ್ಪ ಜೋರಾಗಿ ಓಡಿಸಿದ್ದಾರೆ. ಅದೇ ವೇಳೆಗೆ ಬ್ಯಾಟರಾಯನಪುರ ಎಂಎಂ ರಸ್ತೆಯ ಟರ್ನಿಂಗ್‌ನಲ್ಲಿ ಸ್ಪೀಡಾಗಿ ಕಾರ್ ಚಲಾಯಿಸಿಕೊಂಡು ಬಂದ ದಿವ್ಯಾ ಸುರೇಶ್, ಕಿರಣ್, ಅನಿತಾ ಹಾಗೂ ಸಹೋದರಿ ಅನುಷಾ ಇದ್ದ ಬೈಕ್‌ಗೆ ಗುದ್ದಿ ಕಾರ್ ನಿಲ್ಲಿಸೇ ಹೊರಟಿದ್ದಾರೆ. ಕಿರಣ್ ಬೈಕ್ ಚಲಾಯಿಸುತ್ತಿದ್ದರು, ಅನುಷಾ ಹಾಗೂ ಅನಿತಾ ಹಿಂಬದಿಯಲ್ಲಿ ಕುಳಿತಿದ್ದರು. ಅನಿತಾ ಅವರ ಕಾಲಿಗೆ ಕಾರ್ ಗುದ್ದಿದ ಪರಿಣಾಮ ಮಂಡಿ ಚಿಪ್ಪು ಒಡೆದಿದೆ. ವೈದ್ಯರು ಕನಿಷ್ಠ ಒಂದು ವರ್ಷವಾದರೂ ರೆಸ್ಟ್ ಮಾಡಲು ಸಲಹೆ ನೀಡಿದ್ದಾರೆ.

    ಊರಿಂದ ಬೆಂಗಳೂರಿಗೆ ಬಂದು ನಿತ್ಯ ದುಡಿದು ಜೀವನ ನಡೆಸುವ ಈ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದರು ಅನಿತಾ. ಈ ಘಟನೆ ನಡೆದ ಬಳಿಕ ದಿವ್ಯಾ ಸುರೇಶ್ ಕನಿಷ್ಠ ಮಾನವೀಯ ದೃಷ್ಟಿಯಿಂದಲೂ ಭೇಟಿ ಮಾಡಿ ಮಾತಾಡಿಸಿಲ್ಲ. ಆಸ್ಪತ್ರೆಯ ಖರ್ಚು ಲಕ್ಷ ಲಕ್ಷ ಆಗಿದೆ. ಆಸ್ಪತ್ರೆಗಾಗಿ ಸಾಲ ಮಾಡಿದ್ದೇವೆ ಅಂತಾ ಅನಿತಾ ʻಪಬ್ಲಿಕ್ ಟಿವಿʼ ಜೊತೆ ಮಾತಾಡುತ್ತಾ ಕಣ್ಣೀರಿಟ್ಟಿದ್ದಾರೆ. ಸದ್ಯ ಪ್ರಕರಣ ಪೊಲೀಸ್ ಠಾಣೆಯಲ್ಲಿದ್ದು, ಪೊಲೀಸರಿಗೆ ಎಲ್ಲಾ ಮಾಹಿತಿ ಕೊಟ್ಟಿದ್ದೇವೆ. ವಿಚಾರಣೆ ನಡೆಸಿ ತಿಳಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

  • ತಪ್ಪು ಮಾಡಿದವ್ರಿಗೆ ಶಿಕ್ಷೆ ಆಗೇ ಆಗುತ್ತೆ: ಹಿಟ್‌ & ರನ್‌ ಆರೋಪಕ್ಕೆ ನಟಿ ದಿವ್ಯಾ ಸುರೇಶ್‌ ರಿಯಾಕ್ಷನ್

    ತಪ್ಪು ಮಾಡಿದವ್ರಿಗೆ ಶಿಕ್ಷೆ ಆಗೇ ಆಗುತ್ತೆ: ಹಿಟ್‌ & ರನ್‌ ಆರೋಪಕ್ಕೆ ನಟಿ ದಿವ್ಯಾ ಸುರೇಶ್‌ ರಿಯಾಕ್ಷನ್

    ಮ್ಮ ಕಾರು ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆಂಬ ಆರೋಪ ಕುರಿತು ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್‌ (Divya Suresh) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹಿಟ್‌ & ರನ್‌ ಆರೋಪಕ್ಕೆ ವೀಡಿಯೋ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

    ಅಪಘಾತಕ್ಕೆ ಪ್ರತಿಕ್ರಿಯೆಯಾಗಿ ವೀಡಿಯೋವೊಂದನ್ನು ದಿವ್ಯಾ ಸುರೇಶ್ ಹಂಚಿಕೊಂಡಿದ್ದಾರೆ.‌ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ನಾವು ಎಲ್ಲರು ಸಮಾನರೆ ಎಂದು ಹೇಳಿದ್ದಾರೆ.

    ತಪ್ಪು ಯಾರೇ ಮಾಡಿರಲಿ, ಹೇಗೆ ಮಾಡಿರಲಿ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು. ಆಗೇ ಆಗುತ್ತೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್‌ರಿಂದ ಹಿಟ್ & ರನ್ – ಮಹಿಳೆಗೆ ಗಂಭೀರ ಗಾಯ

    ಅ.4ರ ರಾತ್ರಿ 1:30ಕ್ಕೆ ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಅ.7 ರಂದು ಗಾಯಗೊಂಡ ಮಹಿಳೆಯ ಸಂಬಂಧಿ ಕಿರಣ್ ನಟಿ ವಿರುದ್ಧ ದೂರು ದಾಖಲಿಸಿದ್ದರು.

    ದೂರಿನಲ್ಲಿ ಏನಿದೆ?
    ನಮ್ಮ ಸಂಬಂಧಿ ಅನುಷಾಗೆ ಹುಷಾರಿರಲಿಲ್ಲ. ಹೀಗಾಗಿ ಅವತ್ತು ರಾತ್ರಿ ಗಿರಿನಗರದ ಆಸ್ಪತ್ರೆಗೆ ಹೋಗ್ತಾ ಇದ್ದೆವು. ಬೈಕ್‌ನಲ್ಲಿ ಮಧ್ಯೆ ಅನುಷಾ ಕುತಿದ್ರು. ನಾನು ಬೈಕ್ ಓಡಿಸುತ್ತಾ ಇದ್ದೆ. ಅನಿತಾ ಬೈಕ್ ಹಿಂದೆ ಕುಳಿತಿದ್ದರು. ಈ ವೇಳೆ ನಾಯಿ ಬೊಗಳಿದ್ದಕ್ಕೆ ಸ್ವಲ್ಪ ಬಲಕ್ಕೆ ಬೈಕ್‌ ತೆಗೆದುಕೊಂಡೆ. ಆಗ ಏಕಾಏಕಿ ಕ್ರಾಸ್‌ನಲ್ಲಿ ಬಂದು ದಿವ್ಯಾ ಸುರೇಶ್ ಕಾರು ಅನಿತಾ ಅವರ ಕಾಲಿಗೆ ಗುದ್ದಿತ್ತು. ದಿವ್ಯಾ ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಬಿದ್ದಿದ್ದೆವು. ಇದನ್ನೂ ಓದಿ: Kurnool Bus Fire | ಸೂರ್ಯೋದಯಕ್ಕೂ ಮುನ್ನ ಸಾವಿನ ಮನೆ ಕದ ತಟ್ಟಿದ ಸುಂದರ ಕುಟುಂಬ

    ಕಾರು ಡಿಕ್ಕಿ ಹೊಡೆದಾಗ ಮಹಿಳೆಗೆ ಕಾಲಿನ ಮಂಡಿ ಚಿಪ್ಪಿಗೆ ಪೆಟ್ಟಾಗಿತ್ತು. ನಮ್ಮನ್ನು ನೋಡದೆ, ಕಾರು ನಿಲ್ಲಿಸದೆ ದಿವ್ಯಾ ಸುರೇಶ್ ಪರಾರಿಯಾಗಿದ್ದರು. ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಕಾಲಿನ ಮಂಡಿ ಚಿಪ್ಪು ಮುರಿದಿರೋದಾಗಿ ಚಿಕಿತ್ಸೆ ನೀಡಿದ್ದಾರೆ.

    ಸಿಸಿಟಿವಿ ಮೂಲಕ ಕಾರಿನ ನಂಬರ್ ಟ್ರೇಸ್ ಮಾಡಿದ್ದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ದಿವ್ಯಾ ಸುರೇಶ್‌ರನ್ನು ಕರೆಸಿ, ಕಾರನ್ನು ಸೀಜ್ ಮಾಡಿದ್ದರು. ಆದರೆ, ರಾತ್ರೋರಾತ್ರಿ ನಟಿ ಕಾರನ್ನು ಬಿಡಿಸಿಕೊಂಡು ಹೋಗಿದ್ದಾರೆ ಎಂದು ತಿಳಿಸಿದ್ದಾರೆ.

    ಅನಿತಾಗೆ ಆಪರೇಷನ್‌ಗೆ ಎರಡು ಲಕ್ಷ ರೂ. ಹಣ ಖರ್ಚಾಗಿದೆ. ನಾನು ಕ್ಯಾಬ್‌ ಓಡಿಸಿ ಜೀವನ ಮಾಡುತ್ತಿದ್ದೇನೆ. ಇದುವರೆಗೂ ಸಂತ್ರಸ್ಥ ಮಹಿಳೆಯನ್ನು ನಟಿ ದಿವ್ಯಾ ಸುರೇಶ್ ಸಂಪರ್ಕಿಸಿಲ್ಲ. ದಯವಿಟ್ಟು ನಮಗೆ ಪರಿಹಾರ ಕೊಡಿಸಿ ಎಂದು ಕಿರಣ್‌ ಮನವಿ ಮಾಡಿದ್ದಾರೆ.

  • ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

    ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

    ‘ಬಿಚ್ಚುಗತ್ತಿ’ ಸಿನಿಮಾ ಮೂಲಕ ಭರವಸೆ ಹುಟ್ಟಿಸಿರುವ ಮ್ಯಾಸೀವ್ ಸ್ಟಾರ್ ರಾಜವರ್ಧನ್ (Rajavardan) ಇದೀಗ ಹಿರಣ್ಯ (Hiranya Film) ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಹಾಜರಲು ಸಜ್ಜಾಗಿದ್ದಾರೆ. ಇದೀಗ ಈ ಚಿತ್ರದ ಮೆಲೋಡಿ ನಂಬರ್ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಮೂಡಿ ಬಂದಿರುವ ‘ಪದೇ ಪದೇ’ (Padhe Padhe) ಎಂಬ ಗೀತೆಗೆ ಸಂಚಿತ್ ಹೆಗ್ಡೆ ಧ್ವನಿಯಾಗಿದ್ದಾರೆ.

    ಈ ಚಿತ್ರವನ್ನು ಪ್ರವೀಣ್ ಅವ್ಯೂಕ್ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಚಿತ್ರ. ಇದಕ್ಕೂ ಮುನ್ನ ಕಿರುಚಿತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ವೇದಾಸ್ ಇನ್ಫಿನಿಟಿ ಪಿಚ್ಚರ್ ಬ್ಯಾನರ್‌ನಲ್ಲಿ ವಿಘ್ನೇಶ್ವರ್ ಮತ್ತು ವಿಜಯ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:ಮನೆಯ ಮೇಲೆ ಗುಂಡಿನ ದಾಳಿ- ಸಲ್ಮಾನ್ ಹೇಳಿಕೆ ದಾಖಲಿಸಿಕೊಂಡ ಮುಂಬೈ ಪೊಲೀಸರು

    ‘ಬಿಗ್ ಬಾಸ್’ (Bigg Boss) ಖ್ಯಾತಿಯ ದಿವ್ಯಾ ಸುರೇಶ್ (Divya Suresh) ಸ್ಪೆಷಲ್ ರೋಲ್‌ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್, ಅರವಿಂದ್ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಯುವನಟಿ ರಿಹಾನಾ ಅವರು ರಾಜವರ್ಧನ್‌ಗೆ ಜೋಡಿಯಾಗಿ ನಟಿಸಿದ್ದಾರೆ.

    ‘ಹಿರಣ್ಯ’ ಸಿನಿಮಾಗೆ ಯೋಗೇಶ್ವರನ್ ಆರ್. ಛಾಯಾಗ್ರಹಣವಿದೆ. ಈ ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ‘ಹಿರಣ್ಯ’ ಟೀಮ್ ನಿರತರಾಗಿದ್ದಾರೆ.

  • ‘ಬಿಗ್‌ ಬಾಸ್‌’ ಖ್ಯಾತಿಯ ದಿವ್ಯಾ ಸುರೇಶ್ ಜೊತೆ ಇರುವ ಹುಡುಗ ಯಾರು?

    ‘ಬಿಗ್‌ ಬಾಸ್‌’ ಖ್ಯಾತಿಯ ದಿವ್ಯಾ ಸುರೇಶ್ ಜೊತೆ ಇರುವ ಹುಡುಗ ಯಾರು?

    ಕಿರುತೆರೆಯ ತ್ರಿಪುರ ಸುಂದರಿ, ಬಿಗ್ ಬಾಸ್ (Bigg Boss Kannada 10) ಬೆಡಗಿ ದಿವ್ಯಾ ಸುರೇಶ್ (Divya Suresh) ಸದ್ಯ ಪರಭಾಷೆಯ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ತಮ್ಮ ಖಾಸಗಿ ವಿಚಾರವಾಗಿ ನಟಿ ಸುದ್ದಿಯಲ್ಲಿದ್ದಾರೆ. ಸ್ಪೆಷಲ್ ವ್ಯಕ್ತಿಯ ಜೊತೆ ದಿವ್ಯಾ ಕ್ಲೋಸ್ ಆಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ದಿವ್ಯಾ ಜೊತೆಯಿರುವ ಆ ಹುಡುಗ ಯಾರು? ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.

    ಕಳೆದ ವರ್ಷ ಸ್ಪೆಷಲ್ ವ್ಯಕ್ತಿಯ ಹುಟ್ಟುಹಬ್ಬದ ದಿನ ‘ಹ್ಯಾಪಿ ಬರ್ತ್‌ಡೇ ಲವ್’ ಎಂದು ದಿವ್ಯಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದೀಗ ಮತ್ತೆ ಅದೇ ವ್ಯಕ್ತಿಯ ಜೊತೆ ನಟಿ ಫೋಟೋ ಶೇರ್ ಮಾಡಿ, ನನಗೆ ಸಿಕ್ಕ ಅತ್ಯುತ್ತಮ ವಿಷಯ ಇದು ಎಂದು ಬರೆದುಕೊಂಡಿದ್ದಾರೆ. ಈ ಯುವಕ ದಿವ್ಯಾ ಅವರ ಬಾಯ್‌ಫ್ರೆಂಡ್ ಇರಬಹುದಾ? ಎಂಬ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಂದ ಚರ್ಚೆ ಶುರುವಾಗಿದೆ. ಇದನ್ನೂ ಓದಿ:ಪತ್ನಿ ಜೊತೆ ವರ್ಕೌಟ್ ಮಾಡುತ್ತಿರುವ ನಟ ಸೂರ್ಯ ವಿಡಿಯೋ ವೈರಲ್

     

    View this post on Instagram

     

    A post shared by Divya Suresh (@divyasuresh.official)

    ಟಿವಿ ರಿಯಾಲಿಟಿ ಶೋ ಬಿಗ್ ಬಾಸ್‌ನಿಂದ ಗಮನ ಸೆಳೆದ ಸ್ಪರ್ಧಿ ದಿವ್ಯಾ ಸುರೇಶ್‌ಗೆ ಈ ಹಿಂದೆ ರಾಕೇಶ್ ಅಡಿಗ ಜೊತೆ ಎಂಗೇಜ್ ಆಗಿದ್ದರು. ಕಾರಣಾಂತರಗಳಿಂದ ಇಬ್ಬರು ಬ್ರೇಕಪ್ ಮಾಡಿಕೊಂಡಿದ್ದರು. ಇಬ್ಬರು ತಮ್ಮ ತಮ್ಮ ಲೈಫ್‌ನಲ್ಲಿ ಮೂವ್ ಆನ್ ಆಗಿದ್ದಾರೆ. ಸದ್ಯ ದಿವ್ಯಾ ಕಾಣಿಸಿಕೊಳ್ತಿರುವ ಹುಡುಗನ ಬಗ್ಗೆ ಯಾವುದೇ ರೀತಿಯ ಮಾಹಿತಿಯನ್ನ ನಟಿ ಹಂಚಿಕೊಂಡಿಲ್ಲ. ಸದ್ಯದಲ್ಲೇ ನಟಿಯ ಕಡೆಯಿಂದ ಗುಡ್ ನ್ಯೂಸ್ ಸಿಗುತ್ತಾ? ಕಾದುನೋಡಬೇಕಿದೆ.

    ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ದಿವ್ಯಾ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದರು. ಈ ಸೀಸನ್‌ನಲ್ಲಿ ಮಂಜು ಪಾವಗಡ ವಿನ್ನರ್ ಆಗಿ ಹೊರಹೊಮ್ಮಿದ್ದರು. ಸದ್ಯ ಡಿಂಗ್ರಿ ನಾಗಾರಾಜ್‌ ಪುತ್ರ ರಾಜ್‌ವರ್ಧನ್‌ ನಟನೆಯ ‘ಹಿರಣ್ಯ’ ಸಿನಿಮಾದಲ್ಲಿ ದಿವ್ಯಾ ನಟಿಸಿದ್ದರು.

  • ಹಿರಣ್ಯ ಚಿತ್ರಕ್ಕೆ ನಾಯಕಿಯಾದ ಖಾಸಗಿ ಕಂಪೆನಿ ಉದ್ಯೋಗಿ ರಿಹಾನಾ

    ಹಿರಣ್ಯ ಚಿತ್ರಕ್ಕೆ ನಾಯಕಿಯಾದ ಖಾಸಗಿ ಕಂಪೆನಿ ಉದ್ಯೋಗಿ ರಿಹಾನಾ

    ಹಿರಿಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ (Rajavardhan) ನಟನೆಯ ಬಹುನಿರೀಕ್ಷಿತ ಸಿನಿಮಾ ‘ಹಿರಣ್ಯ’ (Hiranya) ಬಿಡುಗಡೆಗೆ ಸಜ್ಜಾಗುತ್ತಿದೆ. ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ನಾಯಕಿಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ರಾಜವರ್ಧನ್ ಗೆ ಜೋಡಿಯಾಗಿ ಯುವನಟಿ ರಿಹಾನಾ (Rihanna) ಬಣ್ಣ ಹಚ್ಚಿರುವ ಬಗ್ಗೆ ಮಾಹಿತಿಯಷ್ಟೇ ಬಿಟ್ಟುಕೊಟ್ಟಿದ್ದ ಸಿನಿಮಾ ತಂಡ ಇದೀಗ ನಾಯಕಿಯ ಪಾತ್ರ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ.

    ರಿಹಾನಾ ಹುಟ್ಟುಹಬ್ಬದ ಉಡುಗೊರೆಯಾಗಿ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಅನಾವರಣ ಮಾಡಿದೆ. ಏನನ್ನೋ ಕಳೆದುಕೊಂಡಂತೆ ಭಾವುಕಳಾಗಿ ನಿಂತಿರುವ ಅಭಿನಯ ಪಾತ್ರ ಸಿನಿಮಾಗೆ ತಿರುವು ನೀಡಲಿದೆಯಂತೆ. ಅಂದಹಾಗೇ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ರಿಹಾನಾ  ಅವರನ್ನು ಆಡಿಷನ್ ಮೂಲಕವೇ ಸೆಲೆಕ್ಟ್ ಮಾಡಲಾಗಿದೆ. ಹಿರಣ್ಯದಲ್ಲಿ ಇವರದ್ದು ಪವರ್ ಫುಲ್ ಪಾತ್ರ. ಸಿನಿಮಾ ಪೂರ್ತಿ ಅಭಿನಯ ಎಮೋಷನ್ ಕ್ಯಾರಿ ಮಾಡುತ್ತಾರೆ ಎನ್ನುತ್ತಾರೆ ನಿರ್ದೇಶಕ ಪ್ರವೀಣ್ ಅವ್ಯಕ್ತ.

    ಈಗಾಗಲೇ ಹಲವು ಶಾರ್ಟ್‌ ಮೂವಿಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರವೀಣ್‌ ಅವ್ಯಕ್ತ (Praveen Avyakta) ಈ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ. ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ (Divya Suresh) ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

     

    ವೇದಾಸ್‌ ಇನ್ಫಿನಿಟಿ ಪಿಕ್ಚರ್ ಬ್ಯಾನರ್‌ನಲ್ಲಿ ವಿಘ್ನೇಶ್ವರ ಯು. ಹಾಗೂ ವಿಜಯ್‌ ಕುಮಾರ್‌ ಬಿ. ವಿ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿರುವ ಹಿರಣ್ಯ ಸಿನಿಮಾಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.  ಚಿತ್ರೀಕರಣ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ನಿರತವಾಗಿರುವ ಹಿರಣ್ಯ ಸಿನಿಮಾವನ್ನು ಆದಷ್ಟು ಬೇಗೆ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

  • ರಾಕೇಶ್ ಅಡಿಗ ಬಿಗ್‌ ಬಾಸ್ ವಿನ್ ಆಗಬೇಕು ಆದ್ರೆ ನನಗೆ ರೂಪೇಶ್ ಶೆಟ್ಟಿ ಇಷ್ಟ: ದಿವ್ಯಾ ಸುರೇಶ್

    ರಾಕೇಶ್ ಅಡಿಗ ಬಿಗ್‌ ಬಾಸ್ ವಿನ್ ಆಗಬೇಕು ಆದ್ರೆ ನನಗೆ ರೂಪೇಶ್ ಶೆಟ್ಟಿ ಇಷ್ಟ: ದಿವ್ಯಾ ಸುರೇಶ್

    ಬಿಗ್ ಬಾಸ್ ಮನೆಯ ಆಟ ಇದೀಗ ಅಂತಿಮ ಘಟ್ಟದಲ್ಲಿದೆ. ದೊಡ್ಮನೆಯಿಂದ ದಿವ್ಯಾ ಉರುಡುಗ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಇದೀಗ ಬಿಗ್ ಬಾಸ್ ಈ ಸೀಸನ್ ವಿನ್ನರ್ ಆಗಿ ರಾಕೇಶ್ ಅಡಿಗ ಗೆಲ್ಲಬೇಕು ಎಂದು ದಿವ್ಯಾ ಸುರೇಶ್ ಮಾತನಾಡಿದ್ದಾರೆ.‌

    ನಟಿ ದಿವ್ಯಾ ಸುರೇಶ್ ಇದೀಗ `ತ್ರಿಪುರ ಸುಂದರಿ’ ಸೀರಿಯಲ್ ಮೂಲಕ ಮೋಡಿ ಮಾಡಲು ರೆಡಿಯಾಗಿದ್ದಾರೆ. ಈ ಹಿಂದೆ ಬಿಗ್ ಬಾಸ್ ಸೀಸನ್ 8ರಲ್ಲಿ ದಿವ್ಯಾ ರಂಜಿಸಿದ್ದರು. ಫಿನಾಲೆಯ ಬೆನ್ನಲ್ಲೇ ಬಿಗ್ ಬಾಸ್ ಸೀಸನ್ 9ರಲ್ಲಿ ರಾಕೇಶ್ ಅಡಿಗ ಗೆಲ್ಲಬೇಕು, ಆದರೆ ನನಗೆ ರೂಪೇಶ್ ಶೆಟ್ಟಿ ಇಷ್ಟ ಎಂದು ಮಾತನಾಡಿದ್ದಾರೆ.

    ನನ್ನ ಗೆಳತಿ ದಿವ್ಯಾ ಉರುಡುಗ ಕೂಡ ಇದ್ದಾರೆ. ಆದರೆ ಗೊತ್ತಿಲ್ಲ ಯಾರು ಗೆಲ್ಲುತ್ತಾರೆ ಅಂತಾ ಹೇಳೋಕೆ ಆಗಲ್ಲ. ಎಲ್ಲರೂ ಚೆನ್ನಾಗಿ ಆಡುತ್ತಿದ್ದಾರೆ ಎಂದು ದಿವ್ಯಾ ಸುರೇಶ್ ಹೇಳಿದ್ದಾರೆ. ಇನ್ನೂ ನಟಿ ದಿವ್ಯಾ ಸುರೇಶ್‌ ಮತ್ತು ರಾಕೇಶ್‌ ಅಡಿಗ ಈ ಹಿಂದೆ ಪ್ರೀತಿಸುತ್ತಿದ್ದರು. ಕೆಲವು ವೈಯಕ್ತಿಕ ಕಾರಣಗಳಿಂದ ಬ್ರೇಕ್‌ ಅಪ್‌ ಆಗಿದೆ.

    ಡಿಸೆಂಬರ್ 30 ಮತ್ತು 31ರಂದು ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ದಿವ್ಯಾ ಎಲಿಮಿನೇಷನ್ ನಂತರ ಈಗ ರೂಪೇಶ್ ಶೆಟ್ಟಿ, ರೂಪೇಶ್ ರಾಜಣ್ಣ, ದೀಪಿಕಾ ದಾಸ್ ಮತ್ತು ರಾಕೇಶ್ ಅಡಿಗ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಯಾರಿಗೆ ಸಿಗಲಿದೆ ಬಿಗ್ ಬಾಸ್ ವಿನ್ನರ್ ಪಟ್ಟ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಹಿರಣ್ಯ ಸಿನಿಮಾದ ಸ್ಪೆಷಲ್ ಪಾತ್ರದಲ್ಲಿ ಬಿಗ್ ಬಾಸ್ ದಿವ್ಯಾ

    ಹಿರಣ್ಯ ಸಿನಿಮಾದ ಸ್ಪೆಷಲ್ ಪಾತ್ರದಲ್ಲಿ ಬಿಗ್ ಬಾಸ್ ದಿವ್ಯಾ

    ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್, ಹಿರಣ್ಯ ಸಿನಿಮಾದ ವಿಶೇಷ ಪಾತ್ರಕ್ಕೆ ಸಹಿ ಮಾಡಿದ್ದಾರೆ. ರಾಜವರ್ಧನ್ ನಟನೆಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದಿವ್ಯಾ ನಿರ್ವಹಿಸುತ್ತಿರುವ ಪಾತ್ರವನ್ನು ಮಾರ್ಚ್ 9 ರಿಂದ ಚಿತ್ರೀಕರಿಸಲಾಗುವುದು ಎಂದಿದ್ದಾರೆ ನಿರ್ದೇಶಕ ಪ್ರವೀಣ್ ಅವ್ಯುಕ್ತ. ಇದನ್ನೂ ಓದಿ : ಸದ್ದಿಲ್ಲದೇ ಶೂಟಿಂಗ್ ಮುಗಿಸಿದ ರಾಘವೇಂದ್ರ ಸ್ಟೋರ್ಸ್ : ಹೋಟೆಲ್ ಮಾಲಿಕನಾದ ಜಗ್ಗೇಶ್

    ಸಿನಿಮಾ ನಾಯಕ ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರು ಆತ್ಮೀಯ ಸ್ನೇಹಿತರು. ಒಟ್ಟಿಗೆ ನಟಿಸುವ ಕನಸನ್ನು ಇಬ್ಬರೂ ಹೊಂದಿದ್ದರು. ಹಿರಣ್ಯ ಸಿನಿಮಾದ ಮೂಲಕ ಕನಸು ನನಸಾಗಿದೆ. ಇದನ್ನೂ ಓದಿ : ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪುನೀತ್

    ರೌಡಿ ಬೇಬಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದವರು ದಿವ್ಯಾ ಸುರೇಶ್ ಈಗ ಮತ್ತೊಂದು ಸಿನಿಮಾದಲ್ಲೂ ಅವರಿಗೆ ನಟಿಸುವ ಅವಕಾಶ ಸಿಕ್ಕಿದೆ. ಇದನ್ನೂ ಓದಿ : ತಮಿಳಿನತ್ತ ಲವ್ ಗುರು ನಿರ್ದೇಶಕ ಪ್ರಶಾಂತ್ ರಾಜ್

    ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್ ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ಮೂಡಿ ಬರಲಿದೆ.

  • ರಸ್ತೆ ಅಪಘಾತ – ದಿವ್ಯಾ ಸುರೇಶ್‌ಗೆ ಗಾಯ

    ರಸ್ತೆ ಅಪಘಾತ – ದಿವ್ಯಾ ಸುರೇಶ್‌ಗೆ ಗಾಯ

    ಬೆಂಗಳೂರು: ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

    ಸೋಮವಾರ ದ್ವಿಚಕ್ರ ವಾಹನದಲ್ಲಿ ಲಸಿಕೆ ಪಡೆದು ಮನೆಗೆ ಮರಳುತ್ತಿದ್ದಾಗ ನಾಯಿ ಅಡ್ಡ ಬಂದಿದೆ. ಈ ವೇಳೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ನೆಲಕ್ಕೆ ಬಿದ್ದಿದ್ದಾರೆ. ಇದನ್ನೂ ಓದಿ: ತುಂಡುಡುಗೆ ತೊಟ್ಟ ಕ್ಲಾಸಿ ಲುಕ್‍ನಲ್ಲಿ ದಿವ್ಯಾ ಸುರೇಶ್

    ಬಿದ್ದ ರಭಸಕ್ಕೆ ಕೆನ್ನೆ ಮತ್ತು ದವಡೆ ಭಾಗಕ್ಕೆ ಪೆಟ್ಟು ಬಿದ್ದಿದೆ. ಸದ್ಯ ಮನೆಯಲ್ಲಿ ದಿವ್ಯಾ ಸುರೇಶ್‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೇಟಸ್​ ಮೂಲಕ ದಿವ್ಯಾ ಈ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಇನ್‍ಸ್ಟಾ ಖಾತೆಯಿಂದ ಪತಿಯ ಹೆಸರು ಕೈಬಿಟ್ಟ ನಟ ಚಿರಂಜೀವಿ ಪುತ್ರಿ ಶ್ರೀಜಾ

    ಡಿಸೆಂಬರ್‌ 28 ರಂದು ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಅವರು ಓಡಾಡುತ್ತಿದ್ದರು. ಈ ವೇಳೆ ಪೊಲೀಸರು ದಿವ್ಯಾ ಮತ್ತು ಸ್ನೇಹಿತರನ್ನು ಮನೆಗೆ ಕಳುಹಿಸಿಲು ಮುಂದಾದಾಗ ವಾಹಿನಿಗಳ ಕ್ಯಾಮೆರಾ ನೋಡಿ ಹೈಡ್ರಾಮಾ ಮಾಡಿದ್ದರು.

  • ರೆಟ್ರೋ ಮಾಡರ್ನ್ ಲುಕ್‍ನಲ್ಲಿ ಮಿಂಚುತ್ತಿರುವ ದಿವ್ಯಾ ಸುರೇಶ್

    ರೆಟ್ರೋ ಮಾಡರ್ನ್ ಲುಕ್‍ನಲ್ಲಿ ಮಿಂಚುತ್ತಿರುವ ದಿವ್ಯಾ ಸುರೇಶ್

    ಬೆಂಗಳೂರು: ಬಿಗ್ ಬಾಸ್ ಸೀಸನ್ 8ರ ಖ್ಯಾತಿಯ ದಿವ್ಯಾ ಸುರೇಶ್ ಇತ್ತೀಚೆಗೆ ರೆಟ್ರೋ ಮಾಡರ್ನ್ ರೀತಿ ಫೋಟೋಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ದಿವ್ಯಾ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ.

     

    View this post on Instagram

     

    A post shared by Divya Suresh (@divyasuresh.official)

    ಬಿಗ್ ಬಾಸ್ ನಂತರ ಎಲ್ಲರ ಲಕ್ ಬದಲಾಗುತ್ತೆ ಅದೇ ರೀತಿ ದಿವ್ಯಾ ಅವರ ಲಕ್ ಸಹ ಬದಲಾಗಿದ್ದು, ಫೋಟೋಶೂಟ್ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ದಿವ್ಯಾ ರೆಟ್ರೋ ಕಮ್ ಮಾಡ್ರನ್ ಲುಕ್ ನಲ್ಲಿ ಫೋಟೋಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಫೋಟೋಗಳನ್ನು ನೋಡಿದ ಅಭಿಮಾನಿಗಳು ಸಖತ್ ಖುಷ್ ಆಗಿದ್ದಾರೆ. ಕೆಲವೊಂದು ಫೋಟೋಗಳಿಗೆ ದಿವ್ಯಾ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ‘ಚಿಣ್ಣರ ಧಾಮ’ – ಬೆ.ವಿಮಾನ ನಿಲ್ದಾಣ ಫೌಂಡೇಷನ್

    ಈ ಫೋಟೋಗಳನ್ನು ಇನ್‍ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ ದಿವ್ಯಾ, ಕೆಲವು ದೂರದ ನಡುವೆ(ಎ ಫ್ಯೂ ಅಂಡ್ ಫರ್) ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಫೋಟೋಗಳನ್ನು ನೋಡಿದ ವೀಕ್ಷಕರು ಹಾರ್ಟ್ ಎಮೋಜಿಗಳನ್ನು ಕಳುಹಿಸುತ್ತಿದ್ದಾರೆ.

     

    View this post on Instagram

     

    A post shared by Divya Suresh (@divyasuresh.official)

    ಬಿಗ್ ಬಾಸ್ ಮನೆಯಲ್ಲಿ ಇರುವಾಗ ಎದುರಾಳಿಗಳಿಗೆ ಸಖತ್ ಫೈಟ್ ಕೊಟ್ಟಿದ್ದ ದಿವ್ಯಾ, ಟಫೆಸ್ಟ್ ಫೈಟರ್ ಆಗಿದ್ದರು. ದಿವ್ಯಾ ಮನೆಯಿಂದ ಬೇಗ ಹೋಗುತ್ತಾರೆ ಎಂದುಕೊಂಡವರಿಗೆ ಅಚ್ಚರಿ ಎಂಬಂತೆ ಕೊನೆಯವರೆಗೂ ಇದ್ದು, ಎಲ್ಲರಿಗೂ ಟಫೆಸ್ಟ್ ಸ್ಪರ್ಧಿಯಾಗಿದ್ದರು. ಒಮ್ಮೆ ಬಿಗ್‍ಬಾಸ್ ಮನೆಯಲ್ಲಿ ಮಂಜನ ಜೊತೆ ಮಾತನಾಡುವಾಗ ದಿವ್ಯಾ, ನನ್ನನ್ನು ಜನರು ಗುರುತಿಸಬೇಕು. ಮಾತನಾಡಿಸಬೇಕು ಎಂದು ಹೇಳಿಕೊಂಡಿದ್ದರು. ಈಗ ಅವರ ಕನಸು ನನಸಾಗುತ್ತಿದೆ.

  • ತುಂಡುಡುಗೆ ತೊಟ್ಟ ಕ್ಲಾಸಿ ಲುಕ್‍ನಲ್ಲಿ ದಿವ್ಯಾ ಸುರೇಶ್

    ತುಂಡುಡುಗೆ ತೊಟ್ಟ ಕ್ಲಾಸಿ ಲುಕ್‍ನಲ್ಲಿ ದಿವ್ಯಾ ಸುರೇಶ್

    ಬೆಂಗಳೂರು: ಕಿರುತೆರೆ ನಟಿ ದಿವ್ಯಾ ಸುರೇಶ್ ಬಿಗ್‍ಬಾಸ್ ಕಾರ್ಯಕ್ರಮ ಮುಗಿದ ಮೇಲೆ ಸಖತ್ ಬ್ಯುಸಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.

    ಬಿಗ್‍ಬಾಸ್ ಕನ್ನಡ ಸೀಸನ್ 8ರಲ್ಲಿ 6ನೇ ಸ್ಥಾನ ಪಡೆದುಕೊಂಡು ಮನೆಯಿಂದ ಹೊರ ಬಂದ ದಿವ್ಯಾ ಸುರೇಶ್ ಅವರು ಟಾಸ್ಕ್‌ಗಳಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕವೇ ಹೆಚ್ಚು ಜನಪ್ರಿಯವಾಗಿದ್ದರು. ಇದೀಗ ಬಿಡುವಿಲ್ಲದಂತೆ ಫೋಟೋಶೂಟ್‍ಗಳಲ್ಲಿ ಬ್ಯುಸಿಯಾಗಿದ್ದಾರೆ. ಅದರಲ್ಲೂ ಅವರ ಲೆಟೆಸ್ಟ್ ಫೋಟೋಶೂಟ್‍ನಲ್ಲಿ ಸಖತ್ ಕ್ಲಾಸಿ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಕೆಂಪು ಬಣ್ಣದ ಕಾರಿನಲ್ಲಿ ತುಂಡುಡುಗೆ ತೊಟ್ಟ ದಿವ್ಯಾ ಸುರೇಶ್ ಬಾಸ್ ಲೇಡಿಯಾಗಿದ್ದಾರೆ. ಇದನ್ನೂ ಓದಿ: ಟ್ರೆಡಿಷನಲ್ ಲುಕ್‍ನಲ್ಲಿ ಕಿರಿಕ್ ಹುಡ್ಗಿ – ನೆಚ್ಚಿನ ನಟಿ ಹೊಸ ಅವತಾರ ನೋಡಿ ಫ್ಯಾನ್ಸ್ ಫಿದಾ

     

    View this post on Instagram

     

    A post shared by Divya Suresh (@divyasuresh.official)

    ಬಾಸ್ ಬೇಬಿಯಾಗುವುದನ್ನು ಆಯ್ಕೆ ಮಾಡಿಕೊಳ್ಳುವ ಬದಲು ತಾನು ಬಾಸ್ ಲೇಡಿಯಾಗಲು ಇಷ್ಟ ಪಡುತ್ತೇನೆ ಎಂದು ದಿವ್ಯಾ ಸುರೇಶ್ ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇವರ ಅಭಿಮಾನಿಗಳು ಮೆಚ್ಚಿ ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ರಂಗಕರ್ಮಿ ಜಿ.ಕೆ.ಗೋವಿಂದ ರಾವ್ ಇನ್ನಿಲ್ಲ

    ದಿವ್ಯಾ ಸುರೇಶ್ ಬಿಗ್‍ಬಾಸ್ ಮೂಲಕವಾಗಿ ಜನಮನ್ನಣೆ ಪಡೆದುಕೊಂಡರು. ನಂತರ ಇವರಿಗೆ ಸಿನಿಮಾ ಸೇರಿದಂತೆ ಫೋಟೋಶೂಟ್‍ಗಳಲ್ಲಿ ಭಾಗವಹಿಸುವ ಅವಕಾಶಗಳು ಇವರನ್ನು ಅರಸಿ ಬಂದಿದ್ದಾವೆ. ಇದೀಗ  ಬಾಸ್ ಬೇಬೆ ಸ್ಟೈಲ್‍ನಲ್ಲಿ ಹಾಟ್ ಪೋಸ್ ಕೊಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ಬಿಗ್‍ಬಾಸ್ ಕನ್ನಡ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ನಟಿ ದಿವ್ಯಾ ಸುರೇಶ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯವಾಗಿದ್ದಾರೆ. ಹೊಸ ಫೋಟೋಶೂಟ್‍ಗಳಲ್ಲಿ ಮಿಂಚುತ್ತಿರುವ ದಿವ್ಯಾ ಸುರೇಶ್‍ಗೆ ಅವರಿ ಕಿರುತೆರೆಯಲ್ಲಿ ನಟಿಸುವ ಅಕಾಶವು ಬಂದಿದೆ ಸಿಕ್ಕಿದೆ.