Tag: ದಿವ್ಯ ಸ್ಪಂದನ

  • ಲಾಂಗ್ ಶರ್ಟ್ ನಲ್ಲಿ ಕಾಣಿಸಿಕೊಂಡ ಸ್ಯಾಂಡಲ್ ವುಡ್ ಕ್ವೀನ್: ಫ್ಯಾನ್ಸ್ ಕಾಮೆಂಟ್ ಬೆಂಕಿ

    ಲಾಂಗ್ ಶರ್ಟ್ ನಲ್ಲಿ ಕಾಣಿಸಿಕೊಂಡ ಸ್ಯಾಂಡಲ್ ವುಡ್ ಕ್ವೀನ್: ಫ್ಯಾನ್ಸ್ ಕಾಮೆಂಟ್ ಬೆಂಕಿ

    ತ್ತಿಚೀನ ವರ್ಷಗಳಲ್ಲಿ ಮೋಹಕ ತಾರೆ ರಮ್ಯಾ (Ramya)  ಹೆಚ್ಚಾಗಿ ಸೀರೆಯಲ್ಲೇ ಕಾಣಿಸಿಕೊಳ್ಳುವುದು ರೂಢಿಯಾಗಿತ್ತು. ಅದರಲ್ಲೂ ರಾಜಕಾರಣಕ್ಕೆ ಪ್ರವೇಶ ಪಡೆದ ನಂತರ ರಮ್ಯಾ ಕಾಟನ್ ಸೀರೆಯಲ್ಲಿ ಮಿಂಚುತ್ತಿದ್ದರು. ಸಿನಿಮಾ ಕಾರ್ಯಕ್ರಮವಿರಲಿ, ರಾಜಕೀಯದ ಪಡಸಾಲೆಯಲ್ಲೇ ಕಾಣಿಸಿಕೊಳ್ಳಲಿ ಗರಿಗರಿ ಸೀರೆಯಲ್ಲಿ ಅವರು ಕಂಗೊಳಿಸುತ್ತಿದ್ದರು. ಆದರೆ, ಅಚ್ಚರಿ ಎನ್ನುವಂತೆ ರಮ್ಯಾ ಲಾಂಗ್ ಶರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ.

    ಬಿಡುವಿನ ಸಮಯದಲ್ಲಿ ವಿದೇಶಗಳನ್ನು ಸುತ್ತುವ ಅವರು, ಇದೀಗ ಯುರೋಪ್ (Europe) ದೇಶದ ಪ್ರವಾಸದಲ್ಲಿದ್ದಾರೆ. ಈ ಪ್ರವಾಸದ ವೇಳೆ ಲಾಂಗ್ ಶರ್ಟ್ (Long Shirt) ಧರಿಸಿದ್ದು, ಆ ಫೋಟೋವನ್ನು ಅವರು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಆ ಫೋಟೋ ಸಖತ್ ವೈರಲ್ ಕೂಡ ಆಗಿದ್ದು, ರಮ್ಯಾ ಹೀಗೂ ಉಂಟಾ? ಎಂದು ಪ್ರಶ್ನೆ ಮಾಡಿದ್ದಾರೆ. ಯುರೋಪ ಸೌಂದರ್ಯವನ್ನೂ ಮೀರಿಸುವಂತೆ ರಮ್ಯಾ ಆ ಫೋಟೋದಲ್ಲಿ ಕಂಡಿದ್ದಾರೆ. ಈ ಫೋಟೋಗೆ ರಮ್ಯಾ ಅಭಿಮಾನಿಗಳು ಪಾಸಿಟಿವ್ ಮತ್ತು ನೆಗೆಟಿವ್ ಕಾಮೆಂಟ್ ಕೂಡ ಮಾಡಿದ್ದಾರೆ. ಇದನ್ನೂ ಓದಿ:ಪ್ಯಾರಿಸ್‌ನ ರೊಮ್ಯಾಂಟಿಕ್‌ ಫೋಟೋ ಹಂಚಿಕೊಂಡ ಅದಿತಿ ಪ್ರಭುದೇವ

    ನಿರ್ಮಾಪಕಿಯಾಗಿ ಸ್ಯಾಂಡಲ್ ವುಡ್ ಗೆ ಮತ್ತೆ ಪ್ರವೇಶ ಮಾಡಿರುವ ರಮ್ಯಾ, ಒಂದು ಸಿನಿಮಾವನ್ನು ಆಗಲೇ ನಿರ್ಮಾಣ ಮಾಡಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೆಸರಿನ ಸಿನಿಮಾ ಸಂಪೂರ್ಣ ಶೂಟಿಂಗ್ ಮುಗಿಸಿದೆ. ರಾಜ್ ಬಿ ಶೆಟ್ಟಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದ್ದು, ಮೊದ ಮೊದಲು ಈ ಚಿತ್ರಕ್ಕೆ ರಮ್ಯಾ ಅವರೇ ನಾಯಕಿ ಎಂದು ಹೇಳಲಾಗಿತ್ತು. ನಂತರ ಅದು ಬದಲಾಯಿತು. ಈ ಚಿತ್ರದಲ್ಲಿ ರಮ್ಯಾ ಇಲ್ಲ ಎನ್ನುವುದು ಅಭಿಮಾನಿಗಳಿಗೆ ನಿರಾಸೆ ತರಿಸಿತ್ತು.

     

     

    View this post on Instagram

     

    A post shared by Ramya|Divya Spandana (@divyaspandana)

    ಈ ನಡುವೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ ರಮ್ಯಾ. ಡಾಲಿ ಧನಂಜಯ್ ನಾಯಕನಾಗಿ ನಟಿಸುತ್ತಿರುವ ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಮುಹೂರ್ತವಾಗಿದ್ದು ಇನ್ನೂ ಶೂಟಿಂಗ್ ಶುರುವಾಗಿಲ್ಲ. ಹಾಗಾಗಿ ಈ ಸಿನಿಮಾದಲ್ಲಿ ಅವರು ಇರುತ್ತಾರಾ? ಅಥವಾ ಈ ಅವಕಾಶವನ್ನೂ ಕೈ ಬಿಡ್ತಾರಾ ಗೊತ್ತಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಭಿಮಾನಿಗಳಿಗೆ ನಾಳೆ  ಸಿಹಿ ಸುದ್ದಿ ಕೊಡ್ತಾರಂತೆ ‘ಸ್ಯಾಂಡಲ್ ವುಡ್ ಕ್ವೀನ್’ ರಮ್ಯಾ

    ಅಭಿಮಾನಿಗಳಿಗೆ ನಾಳೆ ಸಿಹಿ ಸುದ್ದಿ ಕೊಡ್ತಾರಂತೆ ‘ಸ್ಯಾಂಡಲ್ ವುಡ್ ಕ್ವೀನ್’ ರಮ್ಯಾ

    ದೇಶಕ್ಕೆಲ್ಲ ಒಂದು ಕಡೆ ಗಣೇಶ್ ಹಬ್ಬವಾದರೆ, ಮತ್ತೊಂದು ಕಡೆ ರಮ್ಯಾ ಅಭಿಮಾನಿಗಳಿಗೆ ಡಬಲ್ ಧಮಾಕಾ. ಯಾಕೆಂದರೆ, ಗಣೇಶ್ ಹಬ್ಬದ ದಿನದಂದು ಸ್ಯಾಂಡಲ್ ವುಡ್ ಕ್ವೀನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡಲಿದ್ದಾರಂತೆ. ಈ ಕುರಿತು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿರುವ ಅವರು, ‘ನಾಳೆ ಹನ್ನೊಂದು ಗಂಟೆಗೆ ಸಿಹಿ ಸುದ್ದಿ ಕೊಡುವೆ. ಈ ಸುದ್ದಿಯನ್ನು ಕೊಡಲು ನಾನು ಎಕ್ಸೈಟ್ ಆಗಿದ್ದೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

    RAMYA

    ರಮ್ಯಾ ಸಿನಿಮಾ ರಂಗಕ್ಕೆ ಕಮ್ ಬ್ಯಾಕ್ ಆಗಲು ತುದಿಗಾಲಲ್ಲಿ ನಿಂತಿದ್ದಾರೆ. ಕಳೆದೊಂದು ವರ್ಷದಿಂದ ಅವರು ಸಿನಿಮಾ ರಂಗಕ್ಕೆ ವಾಪಸ್ಸಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಈಗದು ನಿಜವಾಗುವ ಕಾಲ ಬಂದಿದೆ. ಬಹುಶಃ ಅದೇ ಸುದ್ದಿಯನ್ನೇ ನಾಳೆ ಅಭಿಮಾನಿಗಳಿಗೆ ಕೊಡಲಿದ್ದಾರೆ ಎನ್ನುವುದು ಹಲವರ ಊಹೆ. ಅದು ನಿಜವೂ ಆಗಿರಬಹುದು. ಯಾಕೆಂದರೆ,  ಅನೇಕ ದಿನಗಳಿಂದ ಅವರು ಸಿನಿಮಾ ಸಂಬಂಧಿ ನಾನಾ ರೀತಿಯ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಸೋನುಗೆ ಚೈತ್ರಾ ಚಪ್ಪಲಿ ಗಿಫ್ಟ್ ಕೊಟ್ಟಿದ್ಯಾಕೆ..?

    ಮೂಲಗಳ ಪ್ರಕಾರ ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಲಿರುವ ಸಿನಿಮಾವನ್ನು ರಮ್ಯಾ ಅವರು ನಿರ್ಮಾಣ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ, ಇದೇ ಸಿನಿಮಾದಲ್ಲಿ ಅವರು ಪಾತ್ರವನ್ನೂ ಮಾಡಲಿದ್ದಾರಂತೆ. ಬಹುಶಃ ನಾಳೆ ಅದೇ ಸಿಹಿ ಸುದ್ದಿಯನ್ನು ಅವರು ಅಭಿಮಾನಿಗಳಿಗೆ ಕೊಡಬಹುದು ಎನ್ನಲಾಗುತ್ತಿದೆ. ಅದೇನು ಅಂತ ತಿಳಿದುಕೊಳ್ಳಲು ನಾಳೆವರೆಗೂ ಕಾಯಬೇಕು.

    Live Tv
    [brid partner=56869869 player=32851 video=960834 autoplay=true]