Tag: ದಿಶಾ ರವಿ

  • ಮನುಕುಲದ ಬಗ್ಗೆ ಯೋಚಿಸೋದು ಅಪರಾಧ ಆಗಿದ್ದು ಯಾವಾಗ?: ದಿಶಾ ರವಿ

    ಮನುಕುಲದ ಬಗ್ಗೆ ಯೋಚಿಸೋದು ಅಪರಾಧ ಆಗಿದ್ದು ಯಾವಾಗ?: ದಿಶಾ ರವಿ

    ಬೆಂಗಳೂರು: ಟೂಲ್‍ಕಿಟ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದ ಬಳಿಕ ಮೊದಲ ಬಾರಿಗೆ ಪರಿಸರ ಹೋರಾಟಗಾರ್ತಿ ದಿಶಾ ರವಿ ಪ್ರತಿಕ್ರಿಯೆ ನೀಡಿದ್ದಾರೆ. ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‍ಕಿಟ್ ಪ್ರಕರಣದಲ್ಲಿ ದಿಶಾ ಅವರನ್ನ ಬಂಧಿಸಲಾಗಿತ್ತು, ನಂತರ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಟ್ವಿಟ್ಟರ್ ನಲ್ಲಿ ನಾಲ್ಕು ಪುಟಗಳ ಪ್ರತಿಕ್ರಿಯೆ ನೀಡಿರುವ ದಿಶಾ ರವಿ, ಜನರ ಬಗ್ಗೆ ಯೋಚನೆ ಮಾಡೋದು ಯಾವಾಗ ಅಪರಾಧ ಆಯ್ತು ಎಂದು ಪ್ರಶ್ನೆ ಮಾಡಿದ್ದಾರೆ.

    ತಮ್ಮ ಬಂಧನ ಮತ್ತು ನ್ಯಾಯಾಂಗ ಬಂಧನದಲ್ಲಿದ್ದ ದಿನಗಳ ಬಗ್ಗೆ ಬರೆದುಕೊಂಡಿರುವ ದಿಶಾ ರವಿ, ಅಲ್ಲಿ ನನ್ನನ್ನೇ ನಾನು ಪ್ರಶ್ನೆ ಮಾಡಿಕೊಳ್ಳುತ್ತಿದ್ದೆ, ಇದೆಲ್ಲ ಹೇಗಾಯ್ತು? ಆದ್ರೆ ನನ್ನ ಬಳಿ ಉತ್ತರವಿರಲಿಲ್ಲ. ಬಂದಿರೋ ಸಮಸ್ಯೆಯನ್ನ ಎದುರಿಸೋದು ಮಾತ್ರ ನನ್ನ ಮುಂದಿನ ಗುರಿಯಾಗಿತ್ತು. ಕೋರ್ಟ್ ನಲ್ಲಿ ನಿಂತಾಗ ನನಗೆ ಕಾನೂನಿನ ಸಹಾಯ ಸಿಗುತ್ತಾ ಅನ್ನೋದು ತಿಳಿದಿರಲಿಲ್ಲ. ಒಂದು ನ್ಯಾಯಾಧೀಶರು ನನ್ನನ್ನ ಕೇಳಿದ್ರೆ ಮನದ ಮಾತುಗಳನ್ನ ಹೇಳಲು ಸಿದ್ಧಳಾಗಿದ್ದೆ. ಆದ್ರೆ ಅಷ್ಟರಲ್ಲಿಯೇ ನನ್ನನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.

    ಜೈಲಿನಲ್ಲಿದ್ದಾಗ ಪ್ರತಿ ಗಂಟೆ, ನಿನಮಿಷ, ಸೆಕೆಂಡ್ ಜೀವನದಲ್ಲಿ ಹೊಸದಾಗಿ ಕಾಣಿಸುತ್ತಿತ್ತು. ಒಬ್ಬಳೇ ಕುಳಿತಾಗ, ಭೂಮಿ ಮೇಲೆ ಜನರ ಬಗ್ಗೆ ಯೋಚಿಸೋದು ಯಾವಾಗ ತಪ್ಪಾಯ್ತು? ಭೂಮಿ ಮೇಲೆ ಜೀವಿಸೋ ಹಕ್ಕು ನನಗೆ ಎಷ್ಟಿದೆಯೋ ಅವರಿಗೂ ಅಷ್ಟೇ ಇದೆ ಅಲ್ವಾ ವಿಚಾರಗಳು ನನ್ನನ್ನ ಕಾಡುತ್ತಿದ್ದವು. ಕೆಲ ಮಾಧ್ಯಮಗಳ ನನ್ನ ಕೆಲಸವನ್ನ ತಪ್ಪು ಎಂದು ಹೇಳಿದವು. ಆದರೆ ನ್ಯಾಯಾಲಯ ಆ ರೀತಿ ಹೇಳಿಲ್ಲ. ನನಗೆ ಕಡಿಮೆ ಶುಲ್ಕದಲ್ಲಿ ಹಿರಿಯ ವಕೀಲರು ನನ್ನ ಪರವಾಗಿ ವಾದ ಮಂಡಿಸಿದರು ಎಂದು ಬರೆದುಕೊಂಡಿದ್ದಾರೆ.

    21 ವರ್ಷದ ದಿಶಾ ರವಿ ಓರ್ವ ಪರಿಸರ ಹೋರಾಟಗಾರ್ತಿಯಾಗಿದ್ದು, ಭಾರತದಲ್ಲಿ ಫ್ರೈಡೆ ಫಾರ್ ಫ್ಯೂಚರ್ ಹೆಸರಿನ ಸರ್ಕಾರೇತರ ಸಂಸ್ಥೆಯನ್ನು ಸ್ಥಾಪಿಸಿದ್ದರು. ದಿಶಾ ರವಿ ತಂದೆ ಮೈಸೂರಿನಲ್ಲಿ ಅಥ್ಲೆಟಿಕ್ಸ್ ಕೋಚ್ ಆಗಿದ್ದು ತಾಯಿ ಗೃಹಿಣಿಯಾಗಿದ್ದಾರೆ. ಈ ಟ್ವೀಟ್ ಮಾಡಿ ಬೆಂಬಲ ನೀಡಲು ಟೂಲ್ ಕಿಟ್ ಮುಖಾಂತರ ಹಣ ಪಡೆದ ಆರೋಪ ದಿಶಾ ರವಿ ಮೇಲಿದೆ.

    ದೇಶದಲ್ಲಿ ನಡೆಯುತ್ತಿರುವ ಕೃಷಿ ಆಂದೋಲನವನ್ನು ಬೆಂಬಲಿಸಿ ಗ್ರೇಟಾ ಥನ್‍ಬರ್ಗ್ ಇತೀಚೆಗೆ ಟ್ವೀಟ್ ಮಾಡಿದ್ದರು. ಇದರ ಜೊತೆ ಇನ್ನೊಂದು ಟ್ವೀಟ್ ಮಾಡಿ ಒಂದು ಡಾಕ್ಯುಮೆಂಟ್ ರಿಲೀಸ್ ಮಾಡಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿರುದ್ಧ ಹೇಗೆ ಚಳವಳಿ ನಡೆಸಬೇಕು ಎಂಬ ಕಾರ್ಯಯೋಜನೆ ಟೂಲ್ ಕಿಟ್ ನಲ್ಲಿತ್ತು. ಆ ಟ್ವೀಟ್ ಭಾರತದಲ್ಲಿನ ಕೃಷಿ ಚಳವಳಿಯಲ್ಲಿ ವಿದೇಶಿ ಶಕ್ತಿಗಳ ಕೈವಾಡವನ್ನು ಬಯಲಿಗೆಳೆದಿದೆ ಎಂದು ಬಿಜೆಪಿ ಆಪಾದಿಸಿತ್ತು. ಈ ಆರೋಪಗಳ ಬೆನ್ನಲ್ಲೇ ಗ್ರೇಟಾ ಥನ್‍ಬರ್ಗ್ ಟೂಲ್ ಕಿಟ್ ತನ್ನ ಟ್ವೀಟ್ ಡಿಲೀಟ್ ಮಾಡಿದ್ದರು. ನಂತರ ಹೊಸ ಟ್ವೀಟ್ ಮಾಡಿ ಹೊಸ ಟೂಲ್ ಕಿಟ್ ಬಿಡುಗಡೆ ಮಾಡಿದ್ದರು.

  • ಟೂಲ್‍ಕಿಟ್ ಕೇಸ್- ಬೆಂಗಳೂರಿನ ದಿಶಾ ರವಿಗೆ ಜಾಮೀನು

    ಟೂಲ್‍ಕಿಟ್ ಕೇಸ್- ಬೆಂಗಳೂರಿನ ದಿಶಾ ರವಿಗೆ ಜಾಮೀನು

    ನವದೆಹಲಿ: ಟೂಲ್‍ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸರ ಹೋರಾಟಗಾರ್ತಿ ಬೆಂಗಳೂರಿನ ದಿಶಾ ರವಿಗೆ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಜಾಮೀನು ನೀಡಿದೆ.

    ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಜಾಮೀನು ನೀಡಿದೆ. ಹೆಚ್ಚುವರಿ ಸೆಶನ್ ಕೋರ್ಟ್ ಜಡ್ಜ್ ಧರ್ಮೇಂದ್ರ ರಾಣಾ ಅವರು ಜಾಮೀನು ನೀಡಿದ್ದು, ಇಬ್ಬರು ಶ್ಯೂರಿಟಿ ನೀಡಬೇಕು ಮತ್ತು 1 ಲಕ್ಷ ರೂ. ಬಾಂಡ್ ಪಾವತಿಸಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ.

    ಸ್ವಿಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‍ಬರ್ಗ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಿಶಾ ರವಿಯನ್ನ ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ ನ್ಯಾಯಾಲಯ ಬಂಧಿತ ಆರೋಪಿಯನ್ನು ಐದು ದಿನ ಪೊಲೀಸರ ವಶಕ್ಕೆ ನೀಡಿತ್ತು. ಇದೀಗ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದರಿಂದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನೀಡಿದೆ.

    21 ವರ್ಷದ ದಿಶಾ ರವಿ ಓರ್ವ ಪರಿಸರ ಹೋರಾಟಗಾರ್ತಿಯಾಗಿದ್ದು, ಭಾರತದಲ್ಲಿ ಫ್ರೈಡೆ ಫಾರ್ ಫ್ಯೂಚರ್ ಹೆಸರಿನ ಸರ್ಕಾರೇತರ ಸಂಸ್ಥೆಯನ್ನು ಸ್ಥಾಪಿಸಿದ್ದರು. ದಿಶಾ ರವಿ ತಂದೆ ಮೈಸೂರಿನಲ್ಲಿ ಅಥ್ಲೆಟಿಕ್ಸ್ ಕೋಚ್ ಆಗಿದ್ದು ತಾಯಿ ಗೃಹಿಣಿಯಾಗಿದ್ದಾರೆ. ಈ ಟ್ವೀಟ್ ಮಾಡಿ ಬೆಂಬಲ ನೀಡಲು ಟೂಲ್ ಕಿಟ್ ಮುಖಾಂತರ ಹಣ ಪಡೆದ ಆರೋಪ ದಿಶಾ ರವಿ ಮೇಲಿದೆ.

    ದೇಶದಲ್ಲಿ ನಡೆಯುತ್ತಿರುವ ಕೃಷಿ ಆಂದೋಲನವನ್ನು ಬೆಂಬಲಿಸಿ ಗ್ರೇಟಾ ಥನ್‍ಬರ್ಗ್ ಇತೀಚೆಗೆ ಟ್ವೀಟ್ ಮಾಡಿದ್ದರು. ಇದರ ಜೊತೆ ಇನ್ನೊಂದು ಟ್ವೀಟ್ ಮಾಡಿ ಒಂದು ಡಾಕ್ಯುಮೆಂಟ್ ರಿಲೀಸ್ ಮಾಡಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿರುದ್ಧ ಹೇಗೆ ಚಳವಳಿ ನಡೆಸಬೇಕು ಎಂಬ ಕಾರ್ಯಯೋಜನೆ ಟೂಲ್ ಕಿಟ್ ನಲ್ಲಿತ್ತು. ಆ ಟ್ವೀಟ್ ಭಾರತದಲ್ಲಿನ ಕೃಷಿ ಚಳವಳಿಯಲ್ಲಿ ವಿದೇಶಿ ಶಕ್ತಿಗಳ ಕೈವಾಡವನ್ನು ಬಯಲಿಗೆಳೆದಿದೆ ಎಂದು ಬಿಜೆಪಿ ಆಪಾದಿಸಿತ್ತು. ಈ ಆರೋಪಗಳ ಬೆನ್ನಲ್ಲೇ ಗ್ರೇಟಾ ಥನ್‍ಬರ್ಗ್ ಟೂಲ್ ಕಿಟ್ ತನ್ನ ಟ್ವೀಟ್ ಡಿಲೀಟ್ ಮಾಡಿದ್ದರು. ನಂತರ ಹೊಸ ಟ್ವೀಟ್ ಮಾಡಿ ಹೊಸ ಟೂಲ್ ಕಿಟ್ ಬಿಡುಗಡೆ ಮಾಡಿದ್ದರು.

  • ಇದು ಮೋದಿ ಸರ್ಕಾರದ ಅಂತ್ಯದ ಆರಂಭವಷ್ಟೇ – ದಿನೇಶ್‌ ಗುಂಡೂರಾವ್‌ ಕಿಡಿ

    ಇದು ಮೋದಿ ಸರ್ಕಾರದ ಅಂತ್ಯದ ಆರಂಭವಷ್ಟೇ – ದಿನೇಶ್‌ ಗುಂಡೂರಾವ್‌ ಕಿಡಿ

    ಬೆಂಗಳೂರು: ಸದ್ಯ ಕೇಂದ್ರ ಸರ್ಕಾರವೂ ಇದೇ ಹೇಡಿ ಮಾರ್ಗ ಅನುಸರಿಸಿ ಪ್ರತಿಭಟನೆಯ ದನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದು ಈ ಸರ್ಕಾರದ ಅಂತ್ಯದ ಆರಂಭವಷ್ಟೇ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಒಂದು ಪ್ರತಿಭಟನೆ ಹಾಗೂ ಟೀಕೆಯನ್ನು ಸೈದ್ಧಾಂತಿಕವಾಗಿ ಹಾಗೂ ನೈತಿಕವಾಗಿ ಎದುರಿಸಲಾಗದ ಸರ್ಕಾರವೊಂದು ಅನುಸರಿಸುವ ಹೇಡಿಯ ಮಾರ್ಗವೇ ದೇಶದ್ರೋಹದ ಕೇಸ್ ಎಂದು ಸರಣಿ ಟ್ವೀಟ್‌ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಗುಂಡೂರಾವ್‌ ವಾಗ್ದಾಳಿ ನಡೆಸಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?
    ದೇಶದ್ರೋಹದ ವ್ಯಾಖ್ಯಾನ ನೀಡುವ ಐಪಿಸಿ 24 ಮೋದಿ-ಶಾ ಜೋಡಿಗಳ ಮಾರಕಾಸ್ತ್ರವಾಗಿದೆ. ತಮ್ಮ ವಿರುದ್ಧ ರಚನಾತ್ಮಕವಾಗಿ ಪ್ರತಿಭಟಿಸಿದವರನ್ನೂ ಈ ಜೋಡಿ ಸೆಕ್ಷನ್124 ಅಸ್ತ್ರ ಪ್ರಯೋಗಿಸಿ ದಮನ ಮಾಡುವ ಕಾರ್ಯ ಮಾಡುತ್ತಿದೆ. ವಿಶ್ವದ ದೊಡ್ಡ ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವುದೇ ದೇಶದ್ರೋಹವೆಂಬುದು ಪ್ರಜಾಪ್ರಭುತ್ವದ ಅಣಕ

    ಸರ್ಕಾರದ ವಿರುದ್ಧ ಪ್ರತಿಭಟಿಸಿದವರ ಮೇಲೆಲ್ಲಾ ದೇಶದ್ರೋಹಿ ಕೇಸ್ ಹಾಕುವುದಾದರೆ, ಕೇಂದ್ರ ಸರ್ಕಾರ ತಮ್ಮದೇ ಪಕ್ಷದ ಸುಬ್ರಹ್ಮಣ್ಯ ಸ್ವಾಮಿ ವಿರುದ್ಧವೂ ದೇಶದ್ರೋಹದ ಕೇಸ್ ದಾಖಲಿಸಲಿದೆಯೇ? ಯಾಕೆಂದರೆ ಇತ್ತೀಚೆಗೆ ಕೇಂದ್ರದ ಜನ ವಿರೋಧಿ ನೀತಿಯನ್ನು ಸುಬ್ರಮಣ್ಯ ಸ್ವಾಮಿಯವರು ಪದೇ ಪದೇ ಟೀಕಿಸಿ ಪ್ರತಿಭಟಿಸಿದ್ದಾರೆ. ಅವರಿಗೆ ಯಾವ ಪಟ್ಟ?

    ಟೂಲ್‌ಕಿಟ್ ಬಗ್ಗೆ ಇಂದು ಆಕಾಶ ಸೂರು ಒಂದು ಮಾಡುತ್ತಿರುವ ಬಿಜೆಪಿ ನಾಯಕರು ‘ಲೋಕಪಾಲ’ ಮಸೂದೆ ಪ್ರತಿಭಟನೆಯಲ್ಲಿ ಬಳಸಿಕೊಂಡಿದ್ದೇನು? ಅಂದು ಟೂಲ್‌ಕಿಟ್ ಬಳಸಿ ಚಳವಳಿಯ ರೂಪುರೇಷೆ ಮಾಡಿದ್ದು ದೇಶದ್ರೋಹವಾಗಿರಲಿಲ್ಲವೆ. ಬಿಜೆಪಿಯವರ ಪ್ರಕಾರ, ತಾವು ತಿಂದರೆ‌ ಮಾತ್ರ ಅದು ಮೃಷ್ಟಾನ, ಬೇರೆಯವರು ತಿಂದರೆ ಅದು ತಂಗಳನ್ನವೇ.?

    ಒಂದು ಪ್ರತಿಭಟನೆ ಹಾಗೂ ಟೀಕೆಯನ್ನು ಸೈದಾಂತಿಕವಾಗಿ ಹಾಗೂ ನೈತಿಕವಾಗಿ ಎದುರಿಸಲಾಗದ ಸರ್ಕಾರವೊಂದು ಅನುಸರಿಸುವ ಹೇಡಿಯ ಮಾರ್ಗವೇ ದೇಶದ್ರೋಹದ ಕೇಸ್. ಸದ್ಯ ಕೇಂದ್ರ ಸರ್ಕಾರವೂ ಇದೇ ಹೇಡಿ ಮಾರ್ಗ ಅನುಸರಿಸಿ ಪ್ರತಿಭಟನೆಯ ದನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದು ಈ ಸರ್ಕಾರದ ಅಂತ್ಯದ ಆರಂಭವಷ್ಟೇ.

  • ಬಡವರ ಬಗ್ಗೆ ಕಾಳಜಿ ಇರೋಳು ದೇಶದ ವಿರುದ್ದ ನಡೆದುಕೊಳ್ಳಲು ಸಾಧ್ಯನಾ?: ಹೆಚ್.ಡಿ ಕುಮಾರಸ್ವಾಮಿ

    ಬಡವರ ಬಗ್ಗೆ ಕಾಳಜಿ ಇರೋಳು ದೇಶದ ವಿರುದ್ದ ನಡೆದುಕೊಳ್ಳಲು ಸಾಧ್ಯನಾ?: ಹೆಚ್.ಡಿ ಕುಮಾರಸ್ವಾಮಿ

    ಬೆಂಗಳೂರು: ಬಡವರ ಬಗ್ಗೆ ಅಷ್ಟು ಕಾಳಜಿ ಇರುವವಳು ದೇಶದ ವಿರುದ್ದ ನಡೆದುಕೊಳ್ಳಲು ಸಾಧ್ಯನಾ? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ದಿಶಾ ಪರವಾಗಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಈ ವಿಚಾರವಾಗಿ ಮಾತನಾಡಿದ ಅವರು, ದಿಶಾ ಬಂಧನ ವಿಚಾರ, ಇದೊಂದು ದ್ವೇಷಕ್ಕೆ ಎಡೆ ಮಾಡಿಕೊಡುವ ಕೆಲಸವಾಗಿದೆ. ಕೇಂದ್ರಕ್ಕೆ ಅಧಿಕಾರವಿರುವುದರಿಂದ ಟೂಲ್ ಕಿಟ್ ನಂತಹ ಸಂಸ್ಕೃತಿಯನ್ನು ಬ್ಯಾನ್ ಮಾಡಿ ಎಂದು ಕಿಡಿಕಾರಿದರು.

    ಜೊತೆಗೆ, ನನಗೆ ಆ ಹೆಣ್ಣು ಮಗಳ ಹಿನ್ನೆಲೆ ಗೊತ್ತಿಲ್ಲ. ಆದರೆ ಬಡವರ ಬಗ್ಗೆ ಅಷ್ಟು ಕಾಳಜಿ ಇರುವವಳು ದೇಶದ ವಿರುದ್ಧವಾಗಿ ನಡೆದುಕೊಳ್ಳಲು ಸಾಧ್ಯನಾ? ಆಕೆಯನ್ನು 15 ದಿನ ಕಸ್ಟಡಿಗೆ ಕೇಳುತ್ತಾರೆ. ದಿಶಾ ಬಂಧನ ಪ್ರತಿ ನಾಗರೀಕರಿಗೆ ಕೊಡುವ ಸ್ವಾತಂತ್ರ್ಯ ಮೊಟಕುಗೊಳಿಸಿದ್ದಂತೆ ಅನ್ನಿಸುತ್ತಿದೆ. ಈ ವಿಚಾರವಾಗಿ ಜನ ಜಾಗೃತಿಯಾಗಬೇಕು ಎಂದು ತಿಳಿಸಿದರು.

    ಅಲ್ಲದೆ ಸಿದ್ದರಾಮಯ್ಯ ಅಹಿಂದ ಜಪ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ಇದ್ದಾಗಲೂ ಅಹಿಂದ ಮಾಡಿದ್ದರು. ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿದ್ದರು. ಆಗ ಆ ಸಮಾಜದವರಿಗೆ ಧ್ವನಿ ಕೊಡಲು ಏಕೆ ಸಾಧ್ಯವಾಗಲಿಲ್ಲ. ಈಗ ಏಕೆ ಅಹಿಂದ ಹೆಸರು ಹೇಳುತ್ತಿದ್ದಾರೆ? ಎಂದು ಪ್ರಶ್ನಿಸಿದರು.

    ಮತ್ತೆ ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯನವರು ಹೀಗೆ ಹೇಳಿಕೊಂಡು ಹೋಗುತ್ತಿದ್ದಾರೆ. ಬಿಜೆಪಿಯವರು ದೇವರ ಹೆಸರು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅಹಿಂದ ಜಪ ಮಾಡುತ್ತಿದ್ದಾರೆ. ರಾಮನ ಹೆಸರಲ್ಲಿ ನಕಲಿಯೋ ಅಸಲಿಯೋ ರಸೀದಿ ಹರಿಯುತ್ತಿದ್ದಾರೆ ಇದು ಸರಿ ಆಗಬೇಕು ಎಂದು ಹೇಳಿದರು.

  • ದಿಶಾ ರವಿಯನ್ನು ಬಿಡುಗಡೆ ಮಾಡದಿದ್ದರೆ ಬೀದಿಗಿಳಿದು ಹೋರಾಟ – ರೈತ ಮುಖಂಡ ನಾಗೇಂದ್ರ

    ದಿಶಾ ರವಿಯನ್ನು ಬಿಡುಗಡೆ ಮಾಡದಿದ್ದರೆ ಬೀದಿಗಿಳಿದು ಹೋರಾಟ – ರೈತ ಮುಖಂಡ ನಾಗೇಂದ್ರ

    ಬೆಂಗಳೂರು: ಟೂಲ್‌ಕಿಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ದಿಶಾ ರವಿಯನ್ನು ಬಿಡುಗಡೆ ಮಾಡದಿದ್ದರೆ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

    ರೈತರ ಪ್ರತಿಭಟನೆಗೆ ಬೆಂಬಲಿಸಿದ ದಿಶಾ ರವಿಯನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ. ಹೀಗಾಗಿ ತಕ್ಷಣವೇ ಆಕೆಯನ್ನು ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

    ಸರ್ಕಾರದ ವಿರುದ್ಧ ಮಾತನಾಡಿದವರಿಗೆ ರಾಷ್ಟ್ರದ್ರೋಹಿ ಬಿರುದು ಕಟ್ಟಲಾಗುತ್ತಿದೆ. ಕಾನೂನು ಬಾಹಿರವಾಗಿ ದೆಹಲಿ ಪೊಲೀಸರು ಕರ್ನಾಟಕದ ಯುವತಿಯನ್ನು ಬಂಧಿಸಿದ್ದಾರೆ. ಮುಂಬೈನಲ್ಲಿ ಹಲವಾರು ವಕೀಲರನ್ನು ಬಂಧಿಸಲಾಗಿದೆ. ಸರ್ವಾಧಿಕಾರಿಯಂತೆ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.

  • ದಿಶಾ ರವಿ ಮುಗ್ದೆ, ರೈತರ ಪರವಾಗಿ ಹೋರಾಟ ಮಾಡುವುದು ತಪ್ಪೇ- ರಮ್ಯಾ

    ದಿಶಾ ರವಿ ಮುಗ್ದೆ, ರೈತರ ಪರವಾಗಿ ಹೋರಾಟ ಮಾಡುವುದು ತಪ್ಪೇ- ರಮ್ಯಾ

    ಬೆಂಗಳೂರು: ಕರ್ನಾಟಕ ಸರ್ಕಾರವು ದಿಶಾ ರವಿ ಪರವಾಗಿ ನಿಲ್ಲಬೇಕು. ಆಕೆ ಮುಗ್ದೆ ಎಂದು ನಟಿ ರಮ್ಯಾ ಹೇಳಿದ್ದಾರೆ.

    ಈ ಸಂಬಂಧ ಇನ್‌ಸ್ಟಾದಲ್ಲಿ ಸ್ಟೇಟಸ್‌ ಅಪ್‌ಡೇಟ್‌ ಮಾಡಿರುವ ರಮ್ಯಾ, ರೈತರನ್ನು ಬೆಂಬಲಿಸುವುದು ಕ್ರಿಮಿನಲ್ ಅಪರಾಧವಲ್ಲ. ಸರ್ಕಾರದ ನಡೆಯಿಂದ ದೇಶಕ್ಕೆ ಕೆಟ್ಟ ಹೆಸರು ಬರುವಂತಾಗಿದೆ ಎಂದು ಹೇಳಿದ್ದಾರೆ.

    ನಾವೆಲ್ಲರು ಜೈಲಿನಲ್ಲಿದ್ದೇವೆ. ಪ್ರಜಾಪ್ರಭುತ್ವ, ಸ್ವತಂತ್ರ, ನಮ್ಮ ಹಕ್ಕು ಯಾವುದು ಇಲ್ಲ ಎಂಬಂತೆ ಭಾಸವಾಗುತ್ತಿದೆ. ರೈತರ ಪರವಾಗಿ ಹೋರಾಟ ಮಾಡುವುದು ತಪ್ಪೇ ಎಂದು ಪ್ರಶ್ನಿಸಿದ್ದಾರೆ.

    ನೀವು ಯಾರಿಗೆ ಮತ ಹಾಕಿದ್ದೀರಿ ಎನ್ನುವುದು ಮುಖ್ಯವಲ್ಲ. ರೈತರ ಪರವಾಗಿ ಮಾತನಾಡಿದ್ದಕ್ಕೆ ದೇಶದ್ರೋಹದ ಆರೋಪ ಮಾಡುವುದು ಎಷ್ಟು ಸರಿ? ಯಾವುದೇ ಪ್ರತಿಭಟನೆ ಅಥವಾ ಆಂದೋಲನ ದೊಡ್ಡ ಮಟ್ಟದಲ್ಲಿ ಮಾಡುವ ಸಂದರ್ಭದಲ್ಲಿ ಟೂಲ್‌ ಕಿಟ್ ತಯಾರು‌ ಮಾಡಲಾಗುತ್ತದೆ. ಇದರಲ್ಲಿ ಯಾವುದೇ ಅಂತರಾಷ್ಟ್ರೀಯ ಷಡ್ಯಂತ್ರವಿಲ್ಲ. ದಿಶಾಳ ಮೇಲೆ ಸುಳ್ಳು ಆರೋಪ ಮಾಡಿ ಹೋರಾಟದ ಹಾದಿಯನ್ನು ತಪ್ಪಿಸಲಾಗುತ್ತಿದೆ ಎಂದು ರಮ್ಯಾ ದೂರಿದ್ದಾರೆ.

    ಇನ್‌ಸ್ಟಾ ಪೋಸ್ಟ್‌ನಲ್ಲಿ ದಿಶಾಳನ್ನು ಬಿಡುಗಡೆ ಮಾಡುವಂತೆ ಪ್ರತಿಭಟನೆ ನಡೆಸಿದ ಫೋಟೋವನ್ನು ಹಾಕಿಕೊಂಡಿದ್ದಾರೆ.

     

  • 21 ವರ್ಷದ ಯುವತಿಗೆ ಸರ್ಕಾರ ಹೆದರಿತಾ?- ಪ್ರಿಯಾಂಕಾ ಗಾಂಧಿ ಪ್ರಶ್ನೆ

    21 ವರ್ಷದ ಯುವತಿಗೆ ಸರ್ಕಾರ ಹೆದರಿತಾ?- ಪ್ರಿಯಾಂಕಾ ಗಾಂಧಿ ಪ್ರಶ್ನೆ

    – ಅಜ್ಮಲ್ ಕಸಬ್ 21 ವರ್ಷದವನಿದ್ದ ಅಂದ್ರು ಬಿಜೆಪಿ ನಾಯಕರು
    – ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಯ್ತು At 21

    ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸರ್ಕಾರ 21 ವರ್ಷದ ಯುವತಿಗೆ ಹೆದರಿದೆಯಾ ಎಂದು ಪ್ರಶ್ನೆ ಮಾಡಿದ್ದರು. ಪ್ರಿಯಾಂಕಾ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, ಉಗ್ರ ಅಜ್ಮಲ್ ಕಸಬ್ ಸಹ 21 ವರ್ಷದವನಿದ್ದನು ಎಂದು ಹೇಳಿದೆ. ಟ್ವಿಟ್ಟರ್ ನಲ್ಲಿಯೂ ಸದ್ಯ ಆ್ಯಟ್ 21 ಟ್ರೆಂಡ್ ಆಗಿದೆ.

    ದೆಹಲಿ ಪೊಲೀಸರು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‍ಬರ್ಗ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಪರಿಸರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಬೆಂಗಳೂರಿನ ದಿಶಾ ರವಿಯನ್ನ ಬಂಧಿಸಿ ಐದು ದಿನದ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ದಿಶಾ ರವಿ ಬಂಧನವನ್ನ ಖಂಡಿಸಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

    ಮೀನಾ ಹ್ಯಾರಿಸ್, ಚಿದಂಬರಂ ಪ್ರಶ್ನೆ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಕೇಂದ್ರ ಸಚಿವ ಶಶಿ ತರೂರ್ ಸೇರಿದಂತೆ ಹಲವು ನಾಯಕರು ದಿಶಾ ರವಿ ಬಂಧನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೋದರ ಸೊಸೆ ಮೀನಾ ಹ್ಯಾರಿಸ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಭಾರತ ಸರ್ಕಾರ ಕಾರ್ಯಕರ್ತರನ್ನ ಯಾಕೆ ಟಾರ್ಗೆಟ್ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ರೈತರನ್ನು ಸಮರ್ಥಿಸಿದ ಟೂಲ್ ಕಿಟ್, ಭಾರತದ ಗಡಿಯಲ್ಲಿ ಚೀನಾ ಒಳನುಸುಳವಿಕೆಗಿಂತಾ ಅಪಾಯಕಾರಿ ಆಯ್ತಾ ಎಂದು ಮಾಜಿ ಕೇಂದ್ರ ಸಚಿವ ಚಿದಂಬರಂ ಪ್ರಶ್ನೆ ಮಾಡಿದ್ದಾರೆ.

    ಕೇಂದ್ರದ ವಿರುದ್ಧ ವಾಗ್ದಾಳಿ: ಭಾರತ ದೇಶವನ್ನ ಸುಮ್ಮನೆ ಕೂರಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ರೆ, 21 ವರ್ಷದ ದಿಶಾ ರವಿಯ ಬಂಧನ ಪ್ರಜಾಪ್ರಭುತ್ವದ ಮೇಲೆ ದಾಳಿ. ನಮ್ಮ ರೈತರನ್ನ ಸಮರ್ಥಿಸಿಕೊಳ್ಳುವುದು ಅಪರಾಧವಾಗಲ್ಲ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಪಿ.ಸಿ.ಮೋಹನ್ ತಿರುಗೇಟು: ದಿಶಾ ರವಿ ಬಂಧನಕ್ಕೆ ವಿರೋಧ ವಿರೋಧ ವ್ಯಕ್ತಪಡಿಸಿರುವ ಎಡಪಕ್ಷಗಳಿಗೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ತಿರುಗೇಟು ನೀಡಿದ್ದಾರೆ. ಬುರ್ಹಾನ್ ವಾನಿ, ಅಜ್ಮಲ್ ಕಸಬ್ 21 ವರ್ಷದವರಿದ್ದರು. ವಯಸ್ಸು ಜಸ್ಟ್ ನಂಬರ್. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗಿದೆ. ಅಪರಾಧ ಯಾವಾಗಲೂ ಅಪರಾಧವೇ ಎಂದು ಟ್ವೀಟ್ ಮಾಡಿದ್ದಾರೆ.

    ಯಾರು ಈ ದಿಶಾ ರವಿ?: 21 ವರ್ಷದ ದಿಶಾ ರವಿ ಓರ್ವ ಪರಿಸರ ಹೋರಾಟಗಾರ್ತಿ. ಫ್ರೈಡೆ ಫಾರ್ ಫ್ಯೂಚರ್ ಎಂಬ ಕಂಪನಿಯ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ. ನಗರ ಪ್ರಸಿದ್ಧ ಕಾಲೇಜಿನಲ್ಲಿ ಎಂಬಿಎ ಪದವಿ ಓದಿರುವ ದಿಶಾ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ತಂದೆ ಮೈಸೂರಿನಲ್ಲಿ ಅಥ್ಲೆಟಿಕ್ಸ್ ಕೋಚ್ ಆಗಿದ್ದು ತಾಯಿ ಗೃಹಿಣಿಯಾಗಿದ್ದಾರೆ. ಟೂಲ್ ಟ್ವೀಟ್ ಮಾಡಿ ಬೆಂಬಲ ನೀಡಲು ಹಣ ಪಡೆದ ಆರೋಪ ದಿಶಾ ರವಿ ಮೇಲಿದೆ.

    ದೇಶದಲ್ಲಿ ನಡೆಯುತ್ತಿರುವ ಕೃಷಿ ಆಂದೋಲನವನ್ನು ಬೆಂಬಲಿಸಿ ಗ್ರೇಟಾ ಥನ್‍ಬರ್ಗ್ ಇತ್ತೀಚೆಗೆ ಟ್ವೀಟ್ ಮಾಡಿದ್ದರು. ಇದರ ಜೊತೆ ಇನ್ನೊಂದು ಟ್ವೀಟ್ ಮಾಡಿ ಒಂದು ಡಾಕ್ಯುಮೆಂಟ್ ರಿಲೀಸ್ ಮಾಡಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿರುದ್ಧ ಹೇಗೆ ಚಳವಳಿ ನಡೆಸಬೇಕು ಎಂಬ ಕಾರ್ಯಯೋಜನೆ ಟೂಲ್ ಕಿಟ್ ನಲ್ಲಿತ್ತು. ಆ ಟ್ವೀಟ್ ಭಾರತದಲ್ಲಿನ ಕೃಷಿ ಚಳವಳಿಯಲ್ಲಿ ವಿದೇಶಿ ಶಕ್ತಿಗಳ ಕೈವಾಡವನ್ನು ಬಯಲಿಗೆಳೆದಿದೆ ಎಂದು ಬಿಜೆಪಿ ಆಪಾದಿಸಿತ್ತು. ಈ ಆರೋಪಗಳ ಬೆನ್ನಲ್ಲೇ ಗ್ರೇಟಾ ಥನ್‍ಬರ್ಗ್ ಟೂಲ್ ಕಿಟ್ ತನ್ನ ಟ್ವೀಟ್ ಡಿಲೀಟ್ ಮಾಡಿದ್ದರು. ನಂತರ ಹೊಸ ಟ್ವೀಟ್ ಮಾಡಿ ಹೊಸ ಟೂಲ್ ಕಿಟ್ ಬಿಡುಗಡೆ ಮಾಡಿದ್ದರು.

  • ದಿಶಾ ರವಿ ವಿಚಾರವಾಗಿ ನಾನು ಹೆಚ್ಚಿಗೆ ಹೇಳಲಾರೆ: ಬೊಮ್ಮಾಯಿ

    ದಿಶಾ ರವಿ ವಿಚಾರವಾಗಿ ನಾನು ಹೆಚ್ಚಿಗೆ ಹೇಳಲಾರೆ: ಬೊಮ್ಮಾಯಿ

    ಬೆಂಗಳೂರು: ದಿಶಾ ರವಿ ವಿಚಾರವಾಗಿ ನಾನು ಹೆಚ್ಚಿಗೆ ಏನು ಹೇಳಲಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೆಹಲಿ ರೈತ ಪ್ರತಿಭಟನೆಯ ಟೂಲ್‍ಕಿಟ್ ಪ್ರಕರಣದಲ್ಲಿ ಬೆಂಗಳೂರಿನ ದಿಶಾ ರವಿ ಬಂಧನ ವಿಚಾರವಾಗಿ ಸ್ಥಳೀಯ ಪೊಲೀಸರಿಗೆ ಮಾಹಿತಿ ಇಲ್ಲ. ಬೇರೆ ಬೇರೆ ರೀತಿಯ ಪ್ರಕರಣಗಳಿರುತ್ತದೆ. ಪ್ರೋಟೋಕಾಲ್ ಕೆಲವೊಂದರಲ್ಲಿ ಅನುಸರಿಸಲ್ಲ. ನಾವು ಕೂಡ ರಾಜ್ಯದ ಹೊರಗೆ ಹೋಗಿ ಹಲವರನ್ನು ಬಂಧಿಸುತ್ತೇವೆ. ಇದೀಗ ದೆಹಲಿ ಪೊಲೀಸರ ಬಳಿ ದಿಶಾ ವಿರುದ್ಧ ಕೆಲವು ಸಾಕ್ಷ್ಯಗಳಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ. ಸದ್ಯ ಪ್ರಕರಣ ದೆಹಲಿ ಕೋರ್ಟ್‍ನಲ್ಲಿದೆ. ಹೀಗಾಗಿ ನಾನು ಈ ವಿಚಾರದಲ್ಲಿ ಹೆಚ್ಚಿಗೆ ಹೇಳಲಾರೆ ಎಂದು ಹೇಳಿದರು.

    21ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಪಂಚಮಸಾಲಿ ಸಮಾವೇಶ ವಿಚಾರವಾಗಿ, ಪೊಲೀಸರು ಸಮಾವೇಶದಲ್ಲಿ ಅಗತ್ಯ ಭದ್ರತೆ ಕೈಗೊಳ್ಳುತ್ತಾರೆ. ಪ್ರತಿಭಟನೆ ವೇಳೆ ಜನ, ವಾಹನ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆ ಆಗದಂತೆ ಬಂದೋಬಸ್ತ್ ಮಾಡಲಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಹಲವಾರು ಹೋರಾಟಗಳು ನಡೆದಿವೆ. ಇಂತಹ ಹೋರಾಟಗಳಲ್ಲಿ ಯಾವುದೇ ತೊಂದರೆಯಾಗದಂತೆ ನಮ್ಮ ಪೊಲೀಸರು ನಿಭಾಯಿಸಿದ್ದಾರೆ. ಈ ಮುನ್ನ ಹಾಲುಮತ ಸಮಾಜದವರು ಹೋರಾಟ ನಡೆಸಿದ್ದರು. ಇದೀಗ ಫೆಬ್ರವರಿ 21 ರಂದು ಪಂಚಮಸಾಲಿ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿರುವ ಹಿನ್ನೆಲೆ ಪೊಲೀಸರು ದಕ್ಷತೆಯಿಂದ ಸುರಕ್ಷತೆಯೊಂದಿಗೆ ಕ್ರಮ ವಹಿಸುತ್ತಾರೆ ಎಂದರು.

    ರಾಜ್ಯದಲ್ಲಿ ಬಹಳಷ್ಟು ಹೋರಾಟಗಳು ನಡೆಯುತ್ತಿದ್ದು, ಈ ಕುರಿತಂತೆ ಮುಖ್ಯಮಂತ್ರಿಗಳು ಮೈಸೂರು, ದಾವಣಗೆರೆಗಳಲ್ಲಿ ಈಗಾಗಲೇ ಮಾತನಾಡಿದ್ದಾರೆ. ಮುಖ್ಯಮಂತ್ರಿಗಳು ಅಂತಿಮವಾಗಿ ಹೇಳಿಕೆ ನೀಡಿದ ಬಳಿಕ ಎಲ್ಲವೂ ಸರಿಯಾಗಲಿದೆ ಎಂದು ಹೇಳಿದರು.

  • ಐದು ದಿನ ಪೊಲೀಸರ ವಶಕ್ಕೆ ದಿಶಾ ರವಿ

    ಐದು ದಿನ ಪೊಲೀಸರ ವಶಕ್ಕೆ ದಿಶಾ ರವಿ

    ಬೆಂಗಳೂರು: ಸ್ವಿಡನ್ ಚಳವಳಿಗಾರ್ತಿ ಗ್ರೇಟಾ ಥನಾಬರ್ಗ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಿಶಾ ರವಿಯನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇದೀಗ ನ್ಯಾಯಾಲಯ ಬಂಧಿತ ಆರೋಪಿಯನ್ನ ಐದು ದಿನ ಪೊಲೀಸರ ವಶಕ್ಕೆ ನೀಡಿದೆ.

    21 ವರ್ಷದ ದಿಶಾ ರವಿ ಓರ್ವ ಪರಿಸರ ಹೋರಾಟಗಾರ್ತಿ. ಫ್ರೈಡೆ ಫಾರ್ ಫ್ಯೂಚರ್ ಎಂಬ ಕಂಪನಿಯ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ. ನಗರ ಪ್ರಸಿದ್ಧ ಕಾಲೇಜಿನಲ್ಲಿ ಎಂಬಿಎ ಪದವಿ ಓದಿರುವ ದಿಶಾ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ತಂದೆ ಮೈಸೂರಿನಲ್ಲಿ ಅಥ್ಲೆಟಿಕ್ಸ್ ಕೋಚ್ ಆಗಿದ್ದು ತಾಯಿ ಗೃಹಿಣಿಯಾಗಿದ್ದಾರೆ. ಈ ಟ್ವೀಟ್ ಮಾಡಿ ಬೆಂಬಲ ನೀಡಲು ಟೂಲ್ ಕಿಟ್ ಮುಖಾಂತರ ಹಣ ಪಡೆದ ಆರೋಪ ದಿಶಾ ರವಿ ಮೇಲಿದೆ.

    ದೇಶದಲ್ಲಿ ನಡೆಯುತ್ತಿರುವ ಕೃಷಿ ಆಂದೋಲನವನ್ನು ಬೆಂಬಲಿಸಿ ಗ್ರೇಟಾ ಥನಾಬರ್ಗ್ ಇತೀಚೆಗೆ ಟ್ವೀಟ್ ಮಾಡಿದ್ದರು. ಇದರ ಜೊತೆ ಇನ್ನೊಂದು ಟ್ವೀಟ್ ಮಾಡಿ ಒಂದು ಡಾಕ್ಯುಮೆಂಟ್ ರಿಲೀಸ್ ಮಾಡಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿರುದ್ಧ ಹೇಗೆ ಚಳವಳಿ ನಡೆಸಬೇಕು ಎಂಬ ಕಾರ್ಯಯೋಜನೆ ಟೂಲ್ ಕಿಟ್ ನಲ್ಲಿತ್ತು. ಆ ಟ್ವೀಟ್ ಭಾರತದಲ್ಲಿನ ಕೃಷಿ ಚಳವಳಿಯಲ್ಲಿ ವಿದೇಶಿ ಶಕ್ತಿಗಳ ಕೈವಾಡವನ್ನು ಬಯಲಿಗೆಳೆದಿದೆ ಎಂದು ಬಿಜೆಪಿ ಆಪಾದಿಸಿತ್ತು. ಈ ಆರೋಪಗಳ ಬೆನ್ನಲ್ಲೇ ಗ್ರೇಟಾ ಥನಾಬರ್ಗ್ ಟೂಲ್ ಕಿಟ್ ತನ್ನ ಟ್ವೀಟ್ ಡಿಲೀಟ್ ಮಾಡಿದ್ದರು. ನಂತರ ಹೊಸ ಟ್ವೀಟ್ ಮಾಡಿ ಹೊಸ ಟೂಲ್ ಕಿಟ್ ಬಿಡುಗಡೆ ಮಾಡಿದ್ದರು.