Tag: ದಿ ವಿಲನ್

  • ಅಭಿಮಾಗಳಿಗೆ ಶಿವಣ್ಣ ವಾರ್ನಿಂಗ್ – ಯೂಟ್ಯೂಬ್ ನಂ.1 ಟ್ರೆಂಡಿಂಗ್  ನಲ್ಲಿ ದಿ-ವಿಲನ್ ಟೀಸರ್

    ಅಭಿಮಾಗಳಿಗೆ ಶಿವಣ್ಣ ವಾರ್ನಿಂಗ್ – ಯೂಟ್ಯೂಬ್ ನಂ.1 ಟ್ರೆಂಡಿಂಗ್ ನಲ್ಲಿ ದಿ-ವಿಲನ್ ಟೀಸರ್

    ಬೆಂಗಳೂರು: ‘ದಿ ವಿಲನ್’ ಸಿನಿಮಾ ಚಿತ್ರತಂಡ ಸೋಮವಾರ ಸಂಜೆ 7 ಗಂಟೆಗೆ ಟೀಸರ್ ಬಿಡುಗಡೆ ಮಾಡಿದ್ದು, ಇದೀಗ ಯೂ ಟ್ಯೂಬ್ ನಲ್ಲಿ ನಂಬರ್ 1 ಟ್ರೆಂಡಿಂಗ್ ವಿಡಿಯೋವಾಗಿದೆ. ಟೀಸರ್ ಬಿಡುಗಡೆ ಸುದ್ದಿಗೋಷ್ಟಿಯಲ್ಲಿ `ಸಿನಿಮಾವನ್ನು ಸಿನಿಮಾದಂತೆ ನೋಡಿ’ ಎಂದು ಹೇಳುವ ಮೂಲಕ ಶಿವಣ್ಣ ಅವರು ಅಭಿಮಾನಿಗಳಿಗೆ ಖಡಕ್ ವಾರ್ನಿಂಗ್ ಮಾಡಿದ್ದಾರೆ.

    ದಿ ವಿಲನ್ ಸಿನಿಮಾದ ಬಿಡುಗಡೆಗೆ ದಿನಗಣನೇ ಶುರುವಾಗಿದ್ದು, ರಿಲೀಸ್ ಮುನ್ನ ಚಿತ್ರತಂಡ ಸಿನಿಮಾದ ನಾಲ್ಕು ಟೀಸರ್‌ಗಳನ್ನು ನಿದೇರ್ಶಕ ಪ್ರೇಮ್ ಅವರು ಬಿಡುಗಡೆ ಮಾಡಿದ್ದಾರೆ. ಇದೀಗ ಈ ವಿಡಿಯೋ ಯೂಟ್ಯೂಬ್ ನಲ್ಲಿ ಸಖತ್ ಮಿಂಚುತ್ತಿದೆ.

    ಹ್ಯಾಟ್ರಿಕ್ ಹೀರೋ ಶಿವಣ್ಣ ಮತ್ತು ಕಿಚ್ಚ ಸುದೀಪ್ ಅಭಿನಯದ ದಿ-ವಿಲನ್ ಸಿನಿಮಾದ ಟೀಸರ್ ಅನ್ನು ಬಿಡುಗಡೆ ಮಾಡುತ್ತಿದ್ದಂತೆ 8 ಲಕ್ಷದ 50 ಸಾವಿರಕ್ಕೂ ಅಧಿಕ ಹಿಟ್ಸ್ ಪಡೆದುಕೊಂಡಿದೆ. ಈ ವಿಡಿಯೋದಲ್ಲಿ ಶಿವಣ್ಣ ಅವರ ಡೈಲಾಗ್‍ಗಳಿಗೆ ಈಗಾಗಲೇ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಷ್ಟೇ ಅಲ್ಲದೇ ದಿ ವಿಲನ್ ಸಿನಿಮಾದಲ್ಲಿ ಶಿವಣ್ಣ ಅವರ ಅಭಿನಯಕ್ಕೆ ಅಭಿಮಾನಿಗಳು ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಸುದೀಪ್ ಅವರು ದಿ ವಿಲನ್ ಅಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    ಚಿತ್ರತಂಡ ಸಿನಿಮಾದ ಟೀಸರ್ ಅನ್ನು ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲವನ್ನು ಮೂಡಿಸಿದೆ. ಅಕ್ಟೋಬರ್ 18 ರಂದು ದಿ ವಿಲನ್ ಸಿನಿಮಾ ತೆರೆ ಮೇಲೆ ಮಿಂಚಲು ಸಜ್ಜಾಗಿದೆ.

    ಶಿವಣ್ಣ ವಾರ್ನಿಂಗ್:
    ಸೋಮವಾರ ನಡೆದ ದಿ ವಿಲನ್ ಸಿನಿಮಾ ಸುದ್ದಿಗೋಷ್ಟಿಯಲ್ಲಿ ಅಭಿಮಾನಿಗಳಿಗೆ ಶಿವಣ್ಣ ಅವರು ವಾರ್ನಿಂಗ್ ಮಾಡಿದ್ದು, ಈ ತಿಂಗಳು 18 ಕ್ಕೆ ‘ದಿ ವಿಲನ್’ ಸಿನಿಮಾ ಬಿಡುಗಡೆಯಾಗುತ್ತಿರುವ ಹಿನ್ನೆಲೆ ಸಿನಿಮಾವನ್ನ ಸಿನಿಮಾ ಥರ ನೋಡಿ. ನಾವು ಇಂಡಸ್ಟ್ರಿಯಲ್ಲಿ ಎಲ್ಲರೂ ಒಂದೇ. ನಾನು ಸುದೀಪ್ ಇಬ್ಬರೂ ಒಟ್ಟಿಗೆ ಅಭಿನಯಿಸಿದ್ದೇವೆ. ನಾವು ಹೆಚ್ಚು ಅವರು ಕಮ್ಮಿ ಅಂತ ಜಗಳ ತೆಗೆಯಬೇಡಿ. ಅಭಿಮಾನಿಗಳಿಗೆ ಹೇಳುತ್ತಿದ್ದೇನೆ, ಯಾವುದೇ ಕಾರಣಕ್ಕೂ ಗಲಾಟೆಗೆ ಅವಕಾಶ ಕೊಡಬೇಡಿ. ನಾವು ಆ ಗಲಾಟೆ ಈ ಗಲಾಟೆ ಅಂತ ಸುದ್ದಿಗಳನ್ನು ಕೇಳಿ ಕೇಳಿ ರೋಸಿ ಹೋಗಿದ್ದೇವೆ. ಥಿಯೇಟರ್‌ಗೆ ಹೋಗಿ ನಿಮ್ಮ ಜೊತೆ ನಾನೇ ಬರುತ್ತೇನೆ ಸಿನಿಮಾವನ್ನ ಸಿನಿಮಾ ರೀತಿ ನೋಡಿ ಎಂದು ಖಡಕ್ ಸೂಚನೆ ನೀಡಿದರು.

    ಕರಿಯ, ಎಕ್ಸ್ ಕ್ಯೂಸ್ ಮಿ, ಜೋಗಿ ಸಿಸಿಮಾಗಳಂತಹ ಸೂಪರ್ ಡೂಪರ್ ಹಿಟ್ ಕೊಟ್ಟಂತ ನಿರ್ದೇಶಕ ಪ್ರೇಮ್, ಶಿವಣ್ಣ ಹಾಗೂ ಕಿಚ್ಚ ಸುದೀಪ್‍ರನ್ನು ಹಾಕಿಕೊಂಡು ದಿ ವಿಲನ್ ಸಿನಿಮಾವನ್ನು ಮಾಡಿದ್ದು, ಜನರಲ್ಲಿ ಕುತೂಹಲದ ಮಳೆಯನ್ನೇ ಸುರಿಸುತ್ತಿತ್ತು. ದಿ ವಿಲನ್ ಸಿನಿಮಾಕ್ಕೆ ಜೋಗಿ ಪ್ರೇಮ್ ಆಕ್ಷನ್ ಕಟ್ ಹೇಳಿದ್ದು, ಸಿ.ಆರ್ ಮನೋಹರ್ ನಿರ್ಮಾಣ ಮಾಡಿದ್ದಾರೆ. ಸುದೀಪ್, ಶಿವಣ್ಣ, ಆಮಿ ಜಾಕ್ಸನ್ ಜೊತೆಯಲ್ಲಿ ಮಿಥುನ್ ಚಕ್ರವರ್ತಿ, ಶ್ರೀಕಾಂತ್ ಸೇರಿದಂತೆ ಹಲವರು ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=_OPq9iESM-4

  • ಗಣೇಶನ ಹಬ್ಬದಂದು ‘ದಿ ವಿಲನ್’ ಚಿತ್ರತಂಡದಿಂದ ಗುಡ್ ನ್ಯೂಸ್!

    ಗಣೇಶನ ಹಬ್ಬದಂದು ‘ದಿ ವಿಲನ್’ ಚಿತ್ರತಂಡದಿಂದ ಗುಡ್ ನ್ಯೂಸ್!

    ಬೆಂಗಳೂರು: ಗಣೇಶ ಹಬ್ಬದಂದು ‘ದಿ ವಿಲನ್’ ಚಿತ್ರತಂಡ ಸಿನಿಮಾದ ರಿಲೀಸ್ ಡೇಟ್ ಅನ್ನು ರಿವೀಲ್ ಮಾಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ.

    ಸ್ಯಾಂಡಲ್‍ವುಡ್ ನಿದೇಶಕರಾದ ಜೋಗಿ ಪ್ರೇಮ್ ಮನೆಯಲ್ಲಿ ಪರಿಸರ ಸ್ನೇಹಿ ಗಣೇಶನಿಗೆ ಪೂಜೆ ಪುನಸ್ಕಾರ ಬಲು ಜೋರಾಗಿ ನಡೆಯುತ್ತಿದ್ದು, ದಂಪತಿ ಪೂಜೆ ಪುನಸ್ಕಾರದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ವಿನಾಯಕನ ಸಮ್ಮುಖದಲ್ಲಿ `ದಿ ವಿಲನ್’ ಸಿನಿಮಾ ರಿಲೀಸ್ ಡೇಟ್ ಚಿತ್ರತಂಡ ಅನೌನ್ಸ್ ಮಾಡಿದೆ.

    ಅಕ್ಟೋಬರ್ 18 ರಂದು ರಾಜ್ಯಾದ್ಯಂತ ದಿ ವಿಲನ್ ಬಿಡುಗಡೆಯಾಗುತ್ತಿದ್ದು, ಸುಮಾರು 500 ಚಿತ್ರಮಂದಿರಗಳಲ್ಲಿ ದಿ ವಿಲನ್ ತನ್ನ ಆರ್ಭಟ ಶುರುಮಾಡಲಿದೆ. ಅಷ್ಟೇ ಅಲ್ಲದೇ ಕನ್ನಡ, ತೆಲುಗು, ತಮಿಳು, ಭಾಷೆಯಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ ಎಂದು ಹೇಳಿದ್ದಾರೆ.

    ದಿನೇ ದಿನೇ ಒಂದಿಲ್ಲೊಂದು ಸ್ಪೆಷಲ್ ಸಮಾಚಾರ `ದಿ-ವಿಲನ್’ ತಂಡದಿಂದ ಹೊರಬರುತ್ತಿದೆ. ಇದೀಗ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿತ್ತಿದ್ದ ದಿ ವಿಲನ್ ಆಗಸ್ಟ್ 24 ರಂದು ಬಿಡುಗಡೆ ಮಾಡಬೇಕು ಅಂತ ಪ್ಲ್ಯಾನ್ ಮಾಡಿದ್ದರು. ಆದರೆ ಸೆನ್ಸಾರ್ ಕಾರಣದಿಂದಾಗಿ ಬರುವ ವಾರವೇ ಚಿತ್ರ ಬಿಡುಗಡೆ ದಿನವನ್ನು ಘೋಷಿಸುವುದಾಗಿ ಹೇಳಿದ್ದರು. ಹೀಗಾಗಿ ಗಣೇಶ ಹಬ್ಬದಂದೇ ಚಿತ್ರತಂಡ ಸಿನಿಮಾ ರಿಲೀಸ್ ಡೇಟ್ ಅನ್ನು ತಿಳಿಸಿದೆ.

    ಕರಿಯ, ಎಕ್ಸ್‍ಕ್ಯೂಸ್ ಮಿ, ಜೋಗಿ ಸಿಸಿಮಾಗಳಂತಹ ಸೂಪರ್ ಡೂಪರ್ ಹಿಟ್ ಕೊಟ್ಟಂತ ನಿರ್ದೇಶಕ ಪ್ರೇಮ್, ಶಿವಣ್ಣ ಹಾಗೂ ಕಿಚ್ಚ ಸುದೀಪ್‍ರನ್ನು ಹಾಕಿಕೊಂಡು ದಿ ವಿಲನ್ ಸಿನಿಮಾವನ್ನು ಮಾಡಿದ್ದು, ಜನರಲ್ಲಿ ಕೂತುಹಲದ ಮಳೆಯನ್ನೇ ಸುರಿಸುತ್ತಿದೆ.

    ದಿ ವಿಲನ್ ಸಿನಿಮಾಕ್ಕೆ ಜೋಗಿ ಪ್ರೇಮ್ ಆಕ್ಷನ್ ಕಟ್ ಹೇಳಿದ್ದು, ಸಿ.ಆರ್ ಮನೋಹರ್ ನಿರ್ಮಾಣ ಮಾಡಿದ್ದಾರೆ. ಸುದೀಪ್, ಶಿವಣ್ಣ, ಆಮಿ ಜಾಕ್ಸನ್ ಜೊತೆಯಲ್ಲಿ ಮಿಥುನ್ ಚಕ್ರವರ್ತಿ, ಶ್ರೀಕಾಂತ್ ಸೇರಿದಂತೆ ಹಲವರು ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • `ದಿ ವಿಲನ್’ ಸಿನಿಮಾಗೆ ಸೆನ್ಸಾರ್ ಸಂಕಷ್ಟ!

    `ದಿ ವಿಲನ್’ ಸಿನಿಮಾಗೆ ಸೆನ್ಸಾರ್ ಸಂಕಷ್ಟ!

    ಬೆಂಗಳೂರು: ಸ್ಯಾಂಡಲ್‍ವುಡ್ ನ ಬಹುನಿರೀಕ್ಷಿತ ಮಲ್ಟಿಸ್ಟಾರ್ ಅಭಿನಯದ `ದಿ ವಿಲನ್’ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ ಸಂಕಷ್ಟ ಎದುರಾಗಿದೆ.

    `ದಿ ವಿಲನ್’ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಅಭಿನವ ಚಕ್ರವರ್ತಿ ಸುದೀಪ್ ಒಟ್ಟಿಗೆ ಅಭಿನಯಿಸಿದ್ದಾರೆ. ಸದ್ಯಕ್ಕೆ ಈ ಸಿನಿಮಾ ಸೆನ್ಸಾರ್ ಅಂಗಳದಲ್ಲಿದೆ. ಸೆನ್ಸಾರ್ ಮಂಡಳಿ `ದಿ ವಿಲನ್’ ಸಿನಿಮಾ ವೀಕ್ಷಿಸಿದ ಬಳಿಕ `ಎ’ ಸರ್ಟಿಫಿಕೇಟ್ ಕೊಡಲು ಮುಂದಾಗಿದೆ. ಆದರೆ `ಎ’ ಸರ್ಟಿಫಿಕೇಟ್ ಬಗ್ಗೆ ನಿರ್ದೇಶಕ ಪ್ರೇಮ್ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

    ಮಲ್ಟಿಪ್ಲೆಕ್ಸ್ ನಲ್ಲಿ `ಎ’ ಸರ್ಟಿಫಿಕೇಟ್ ನೀಡುವುದರಿಂದ ಹೆಚ್ಚಿನ ಎಫೆಕ್ಟ್ ಆಗುತ್ತದೆ ಎಂದು ಚಿತ್ರತಂಡದ ಜೊತೆ ಚರ್ಚೆ ನಡೆಸಿದ್ದಾರೆ. ಬಳಿಕ ಸೆನ್ಸಾರ್ ಮಂಡಳಿ `ಯು’ ಸರ್ಟಿಫಿಕೇಟ್ ನೀಡಲು ಮುಂದಾಗಿದ್ದು, `ಯು’ ಸರ್ಟಿಫಿಕೇಟ್ ಬೇಕಾದರೆ ಸಿನಿಮಾದಲ್ಲಿಯ 10 ನಿಮಿಷದ ದೃಶ್ಯವನ್ನು ಕತ್ತರಿಸುವುದಕ್ಕೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

    ಇತ್ತೀಚೆಗಷ್ಟೇ `ದಿ ವಿಲನ್’ ಚಿತ್ರತಂಡ ಅದ್ಧೂರಿಯಾಗಿ ಕಾರ್ಯವನ್ನು ಆಯೋಜನೆ ಮಾಡಿ ಅಲ್ಲಿ ಆಡಿಯೋ ಲಾಂಚ್ ಮಾಡಿತ್ತು. ಈ ಹಿಂದೆಯೂ ಕೂಡ `ದಿ ವಿಲನ್’ ಸಿನಿಮಾದ ಟೀಸರ್ ಬಿಡುಗಡೆಗೊಂಡಾಗ ವಿವಾದವೂ ಹುಟ್ಟಿಕೊಂಡಿತ್ತು. ಅನೇಕ ಕಾರಣಗಳನ್ನ ಮುಂದಿಟ್ಟು ಶಿವಣ್ಣ ಅವರಿಗೆ ಈ ಚಿತ್ರದಲ್ಲಿ ಅವಮಾನ ಮಾಡಲಾಗಿದೆ ಎಂದು ಶಿವರಾಜ್‍ಕುಮಾರ್ ಅಭಿಮಾನಿಗಳು `ದಿ ವಿಲನ್’ ಸಿನಿಮಾ ಬಹಿಷ್ಕಾರ ಹಾಕುತ್ತೇವೆ ಎಂದು ಹಠ ಹಿಡಿದು, ಅನೇಕ ಷರತ್ತುಗಳನ್ನ ಮುಂದಿಟ್ಟಿದ್ದರು.

    ಈ ಬಗ್ಗೆ ನಿರ್ದೇಶಕ ಪ್ರೇಮ್ ಪ್ರತಿಕ್ರಿಯಿಸಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ್ದರು. “ಕಳೆದ ಕೆಲ ದಿನಗಳಿಂದ ಕೆಲ ಮಾಧ್ಯಮಗಳಲ್ಲಿ ಶಿವಣ್ಣ ಅವರ ವಿಚಾರವಾಗಿ ಪ್ರೇಮ್ ಅವರಿಗೆ ಅಸಮಾಧಾನವಿದೆ ಎಂದು ವರದಿಯಾಗಿತ್ತು. ಆದರೆ ಈ ಕುರಿತು ನಿರ್ಧಾರ ಮಾಡಬೇಕಾಗಿದ್ದು ಶಿವಣ್ಣ ಅವರು, ಒಂದೊಮ್ಮೆ ಶಿವಣ್ಣ ಅವರು ಪ್ರಶ್ನೆ ಮಾಡಿದರೆ ಅದಕ್ಕೆ ಉತ್ತರಿಸುತ್ತೇನೆ. ಸಿನಿಮಾ ಬಿಡುಗಡೆಗೂ ಮೊದಲೇ ಅಸಮಾಧಾನ ವ್ಯಕ್ತಪಡಿಸಿದರೆ ನಾನು ಏನು ಮಾಡಲು ಸಾಧ್ಯ. ಆದ್ದರಿಂದ ಸಿನಿಮಾ ಬಂದರೆ ನಿಮಗೆ ಈ ಕುರಿತು ಸಂಪೂರ್ಣ ಮಾಹಿತಿ ಲಭಿಸಲಿದೆ. ತಾಳ್ಮೆವಹಿಸಿ, ಅತೀ ಶೀಘ್ರದಲ್ಲಿ ನಿಮ್ಮ ಮುಂದೇ ಸಿನಿಮಾ ತರುತ್ತೇನೆ ಎಂದು ಹೇಳಿದ್ದರು.

    ಸ್ಯಾಂಡಲ್‍ವುಡ್‍ನ ಬಹು ನಿರೀಕ್ಷಿತ `ದಿ ವಿಲನ್’ ಸಿನಿಮಾವು ಪ್ರೇಮ್ ನಿರ್ದೇಶನದಲ್ಲಿ ಮೂಡಿಬರುತ್ತಿದ್ದು, ಇದೊಂದು ಮಲ್ಟಿ ಸ್ಟಾರ್ ಗಳ ಚಿತ್ರವಾಗಿದೆ. ಇದರಲ್ಲಿ ವಿಶೇಷತೆ ಎಂದರೆ ಕಿಚ್ಚ ಮತ್ತು ಶಿವಣ್ಣ ಒಟ್ಟಾಗಿ ಆಭಿನಯಿಸುತ್ತಿರುವುದು. ಈ ಸಿನಿಮಾದಲ್ಲಿ ಬಹುಭಾಷಾ ನಟಿ ಆಮಿ ಜಾಕ್ಸನ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತದಲ್ಲಿ ಈ ಚಿತ್ರ ಮೂಡಿಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಲೆಳೆಯುವವರು ಇದ್ರೆನೇ ಬೆಳೆಯಲು ಸಾಧ್ಯ- ದಿ ವಿಲನ್ ಬಗ್ಗೆ ಪ್ರೇಮ್ ಮಾತು

    ಕಾಲೆಳೆಯುವವರು ಇದ್ರೆನೇ ಬೆಳೆಯಲು ಸಾಧ್ಯ- ದಿ ವಿಲನ್ ಬಗ್ಗೆ ಪ್ರೇಮ್ ಮಾತು

    ಬೆಂಗಳೂರು: ಸ್ಯಾಂಡಲ್ ವುಡ್ ನ ದಿಗ್ಗಜರುಗಳಾದ ಶಿವಣ್ಣ ಹಾಗೂ ಸುದೀಪ್ ಅವರನ್ನಿಟ್ಟುಕೊಂಡು ಸಿನಿಮಾ ಮಾಡಲು ಮುಂದಾದಾಗ ಅನೇಕ ಮಂದಿ ನನ್ನ ವಿರುದ್ಧ ಮಾತನಾಡಿದ್ರು. ಅದನ್ನೇ ಚಾಲೆಂಜ್ ಆಗಿ ತೆಗೆದುಕೊಂಡು ಇಂದು ನಾನು ದಿ ವಿಲನ್ ಸಿನಿಮಾ ಮಾಡಿದ್ದೇನೆ. ಒಟ್ಟಿನಲ್ಲಿ ಕಾಲೆಳೆಯುವವರು ಇದ್ರೇನೆ ನಾವು ಬೆಳೆಸಲು ಸಾಧ್ಯ ಅಂತ ನಿರ್ದೇಶಕ ಪ್ರೇಮ್ ಹೇಳಿದ್ರು.

    ತನ್ನ ಸಿನಿಮಾ ಪ್ರಚಾರದ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇದು ಬರೀ ಪ್ರಚಾರ ಅಲ್ಲ. ಅದರಿಂದ ಸಮಾಜಕ್ಕೆ ಉಪಯೋಗವಾಗಲಿ ಎಂಬುದೇ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ದಿ ವಿಲನ್ ತಂಡಕ್ಕೆ ಧನ್ಯವಾದಗಳನ್ನು ಹೇಳಲು ಇಷ್ಟಪಡುತ್ತೇನೆ. ಪ್ರಚಾರದಿಂದ ಬಂದದ್ರಲ್ಲಿ ಒಂದು ಪರ್ಸೆಂಟ್ ಹಣವನ್ನು ನಾವು ನಿರ್ದೇಶಕರ ಸಂಘಕ್ಕೆ ಕೊಡುತ್ತಿದ್ದೇವೆ ಅಂತ ಅವರು ಹೇಳಿದ್ರು.

    ಸುದೀಪ್ ಹಾಗೂ ಶಿವರಾಜ್ ಕುಮಾರ್ ಅವರನ್ನಿಟ್ಟುಕೊಂಡು ಸಿನಿಮಾ ಮಾಡಲು ಮುಂದಾದಾಗ ಹಲವು ಜನ ಮಾತನಾಡಿದ್ದರು. ಈದು ಸಿನಿಮಾ ಆಗತ್ತಾ? ಇವರು ಸಿನಿಮಾ ಮಾಡ್ತಾರಾ? ಇದು ಸ್ಕ್ರೀನ್ ಗೆ ಬರುತ್ತಾ ಅಂತೆಲ್ಲಾ ಪ್ರಶ್ನೆಗಳು ಹರಿದಾಡುತ್ತಿದ್ದವು. ಆದ್ರೆ ಇವೆಲ್ಲ ಪ್ರಶ್ನೆಗಳನ್ನು ನಾನು ಚಾಲೆಂಜ್ ಆಗಿ ತೆಗೆದುಕೊಂಡೆ. ನಾನು ಮೊದಲಿನಿಂದಲೂ ಮಾಡು ಇಲ್ಲವೇ ಮಡಿ ಅನ್ನೋ ಗುಣದವನು. ಹೀಗಾಗಿ ಬೇರೆ ಭಾಷೆಯವರು ಮಾಡಿದಾಗ ನಾವು ಯಾಕೆ ಮಾಡಬಾರದೆಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ಈ ಕಾರಣದಿಂದಾಗಿ ಇಬ್ಬರೂ ನಟರ ಬಳಿ ಈ ಕುರಿತು ಮಾತನಾಡಿದ್ದೇನೆ. ಇಬ್ಬರೂ ನಟರೂ ಕೂಡ ನನಗೆ ಸಹಕರಿಸಿದ್ರು. ಹೀಗೆ ಎಲ್ಲರೂ ಸೇರಿ ಒಂದು ಒಳ್ಳೆಯ ಸಿನಿಮಾ ಮಾಡಿದೆವು. ಅಂದು ಯಾರು ಆಗಲ್ಲ ಅಂದ್ರೋ, ಇಂದು ಅವರೇ ಪಬ್ಲಿಸಿಟಿ ಕೊಡಲು ಆರಂಭಿಸಿದ್ದಾರೆ ಅಂತ ನಕ್ಕರು. ಇದನ್ನೂ ಓದಿ: ಮತ್ತೊಂದು ವಿವಾದದಲ್ಲಿ `ದಿ ವಿಲನ್’ – ಸಿನಿಮಾ ನೋಡಿ ಆಮೇಲೆ ಮಾತ್ನಾಡಿ ಅಂದ್ರು ನಿರ್ದೇಶಕ ಪ್ರೇಮ್

    ಸುದೀಪ್ ಹಾಗೂ ಶಿವಣ್ಣ ಇಬ್ಬರೂ ಸಿನಿಮಾ ಸೆಟ್ ಗೆ ಬಂದಾಗ ಮಕ್ಕಳಂತೆ ನಡೆದುಕೊಳ್ಳುತ್ತಾರೆ. ಹೊರಗಡೆ ಜನ ಏನೂ ಬೇಕಾದ್ರೂ ಹೇಳಲಿ. ಆ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ. ಆದ್ರೆ ನನ್ನ ಪ್ರಕಾರ ಕನ್ನಡ ಚಿತ್ರರಂಗದಲ್ಲಿ ಇಬ್ಬರೂ ಒಳ್ಳೆಯ ಹಾಗೂ ಅದ್ಭುತ ನಟರು. ಒಟ್ಟಿನಲ್ಲಿ ಇಬ್ಬರೂ ಒಳ್ಳೆಯ ರೀತಿಯಲ್ಲಿ ಅಭಿನಯಿಸಿ ದಿ ವಿಲನ್ ಚಿತ್ರಕ್ಕೆ ಸಹಕರಿಸಿದ್ದಾರೆ ಅಂದ್ರು.

    ನಾನು ಮೊದಲಿನಿಂದಲೂ ಸಿನಿಮಾದಲ್ಲಿ ಹೊಸತನವನ್ನು ಹುಡುಕುತ್ತಿರುತ್ತೇನೆ. ಅದನ್ನೇ ಕೆಲವರು ಗಿಮಿಕ್, ಸ್ವಮೇಕ್ ಅಂತೆಲ್ಲಾ ಹೇಳುತ್ತಿರುತ್ತಾರೆ. ಅವರು ಅಂದುಕೊಳ್ಳಲಿ. ಆದ್ರೆ ಜನರಿಗೆ ಈ ವಿಷಯ ಇದೆ ಅನ್ನೋದನ್ನು ಮನದಟ್ಟು ಮಾಡುವುದು ನನ್ನ ಉದ್ದೇಶವಾಗಿರುತ್ತದೆ. ಹೀಗಾಗಿ ಆ ಮಟ್ಟಕ್ಕೆ ನಾನು ಪ್ರಯತ್ನಿಸುತ್ತೇನೆ. ಒಂದು ಸಲ ಸಿನಿಮಾ ನೋಡಬೇಕೆನ್ನುವ ಮನಸ್ಸು ಪ್ರತಿಯೊಬ್ಬನಿಗೂ ಬರಬೇಕು. ಅದಕ್ಕೆ ನಾನು ಶ್ರಮಿಸುತ್ತೇನೆ ಅಂತ ಹೇಳಿದ್ರು. ಇದನ್ನೂ ಓದಿ: ‘ದಿ ವಿಲನ್’ ಟೈಟಲ್ ಟ್ರ್ಯಾಕ್ ಲಿರಿಕಲ್ ವಿಡಿಯೋ ರಿಲೀಸ್

    ದಿ ವಿಲನ್ ಸಿನಿಮಾದ ಆಡಿಯೋ ಬಿಡುಗಡೆಯಾಗುತ್ತಿದೆ. ನಿನ್ನೆಯಷ್ಟೇ ಸಿನಿಮಾ ಸೆನ್ಸಾರ್ ಗೆ ಹೋಗಿದೆ. ಹೀಗಾಗಿ ಅಲ್ಲಿ ಏನಾದ್ರೂ ಕರೆಕ್ಷನ್ ಗಳಿದ್ದಲ್ಲಿ ಅದನ್ನು ಸರಿಪಡಿಸಲು 10-12 ದಿನಗಳು ಬೇಕೆ ಬೇಕಾಗುತ್ತದೆ. ಚಿತ್ರದಲ್ಲಿ ಗ್ರಾಫಿಕ್ಸ್ ತುಂಬಾ ಇದೆ. ಆಗಸ್ಟ್ 24ರಂದು ಬಿಡುಗಡೆ ಮಾಡಬೇಕು ಅಂತ ಪ್ಲ್ಯಾನ್ ಮಾಡಿದ್ದೇವೆ. ಒಟ್ಟಿನಲ್ಲಿ ಬರುವ ವಾರ ಸೆನ್ಸಾರ್ ಆಗುತ್ತದೆ. ಹೀಗಾಗಿ ಬರುವ ವಾರವೇ ಚಿತ್ರ ಬಿಡುಗಡೆ ದಿನವನ್ನು ಘೋಷಿಸುವುದಾಗಿ ಹೇಳಿದ್ರು. ಒಟ್ಟಿನಲ್ಲಿ ಚಿತ್ರದಲ್ಲಿ ನಮಗೆ ಪ್ರತಿಯೊಬ್ಬರು ಸಹಾಯ ಮಾಡುವ ಮೂಲಕ ನಮಗೆ ಬೆನ್ನೆಲುಬಾಗಿ ನಿಂತಿದ್ದಾರೆ ಅವರೆಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ವಿವಾದಕ್ಕೆ ಗುರಿಯಾಗ್ತಿದೆ `ದಿ ವಿಲನ್’ ಹಾಡು?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ದಿ- ವಿಲನ್ ಚಿತ್ರದ ಮತ್ತೊಂದು ಹಾಡು ರಿಲೀಸ್- ಅಭಿಮಾನಿಗಳಿಗೆ ಕಿಕ್ ನೀಡ್ತಿದೆ ಈ ಸಾಂಗ್!

    ದಿ- ವಿಲನ್ ಚಿತ್ರದ ಮತ್ತೊಂದು ಹಾಡು ರಿಲೀಸ್- ಅಭಿಮಾನಿಗಳಿಗೆ ಕಿಕ್ ನೀಡ್ತಿದೆ ಈ ಸಾಂಗ್!

    ಬೆಂಗಳೂರು: ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ‘ದಿ-ವಿಲನ್’ ಸಿನಿಮಾದ ಎರಡನೇ ಸಾಂಗ್ ರಿಲೀಸ್ ಆಗಿದೆ.

    `ನಾನ್ ಸೈಲೆಂಟಾಗಿದ್ರೆ ರಾಮ, ವೈಲೆಂಟ್ ಆದ್ರೆ ರಾವಣ’ ಅನ್ನೋ ಲಿರಿಕ್ಸ್ ನಿಂದ ಶುರುವಾಗುವ ಈ ಸಾಂಗ್, ಶಿವರಾಜ್‍ಕುಮಾರ್ ಅಭಿಮಾನಿಗಳಿಗೆ ಕಿಕ್ ಕೊಡ್ತಿದೆ. ಜೋಗಿ ಪ್ರೇಮ್ ಸಾಹಿತ್ಯವಿರುವ ಈ ಹಾಡಿಗೆ ಅರ್ಜುನ್ ಜನ್ಯ ಕ್ಯಾಚಿ ಟ್ಯೂನ್ ಹಾಕಿಕೊಟ್ಟಿದ್ದಾರೆ.

    ಬಿಡುಗಡೆಯಾದ ಈ ಹಾಡಿನಲ್ಲಿ ಡಾ. ರಾಜ್‍ಕುಮಾರ್ ಅವರ ‘ಟಿಕ್ ಟಿಕ್’ ಹಾಡಿನ ಕೆಲವು ಸಾಲುಗಳನ್ನು ಬಳಸಿಕೊಂಡಿದ್ದಾರೆ. ಕೈಲಾಶ್ ಕೇರ್, ಜೋಗಿ ಪ್ರೇಮ್ ಹಾಗೂ ವಿಜಯ್ ಪ್ರಕಾಶ್ ಮೂವರು ಈ ಹಾಡಿಗೆ ಧ್ವನಿಯಾಗಿದ್ದಾರೆ.

    ಇತ್ತೀಚೆಗೆ ದಿ-ವಿಲನ್ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿತ್ತು. `ಮಚ್ಚು ಗಿಚ್ಚು ಹಿಡಿದವನಲ್ಲ, ಆದ್ರೂ ಹವಾ ಇಟ್ಟವನಲ್ಲ, ಕೋಟೆ ಕಟ್ಟಿ ಮೆರೆದವನಲ್ಲ ಆದ್ರೂ ರಾಜ್ಯ ಆಳುತ್ತವನಲ್ಲ’ ಎಂದು ಸಾಗುವ ಈ ಹಾಡು ಜೋಗಿ ಪ್ರೇಮ್ ಲೇಖನದಲ್ಲಿ ಮೂಡಿ ಬಂದಿತ್ತು. ಶಂಕರ್ ಮಹಾದೇವನ್ ಕಂಠ ಸಿರಿಯಲ್ಲಿ ಮೂಡಿ ಬಂದಿರುವ ವಿಲನ್ ಟೈಟಲ್ ಟ್ರ್ಯಾಕ್ ಕೇಳುಗರಿಗೆ ಸಖತ್ ಕಿಕ್ ನೀಡಿತ್ತು.

    ಮೊದಲನೇ ಹಾಡು ರಿಲೀಸ್ ಆದ ಒಂದು ಗಂಟೆಯಲ್ಲಿ 1 ಲಕ್ಷಕ್ಕೂ ಅಧಿಕ ವ್ಯೂ ಪಡೆದುಕೊಂಡಿತ್ತು. ಈ ಹಾಡಿನಲ್ಲಿ ಶಿವಣ್ಣ ಹಾಗೂ ಸುದೀಪ್ ಇಬ್ಬರು ಇರ್ತಾರಾ ಇಲ್ಲವೋ ಅನ್ನೋದನ್ನ ಪ್ರೇಮ್ ಸಸ್ಪೆನ್ಸ್ ಆಗಿಟ್ಟಿದ್ದರು. ಆದರೆ ರಿಲೀಸ್ ಆಗಿರುವ ಲಿರಿಕಲ್ ವಿಡಿಯೋದಲ್ಲಿ ಶಿವಣ್ಣ ಹಾಗೂ ಸುದೀಪ್ ಇಬ್ಬರು ಇರುವ ಮೇಕಿಂಗ್‍ನ ಬಳಸಿಕೊಂಡಿದ್ದಾರೆ.

    https://www.youtube.com/watch?v=UCTB_MEXw2c

  • ‘ದಿ ವಿಲನ್’ ಟೈಟಲ್ ಟ್ರ್ಯಾಕ್ ಲಿರಿಕಲ್ ವಿಡಿಯೋ ರಿಲೀಸ್

    ‘ದಿ ವಿಲನ್’ ಟೈಟಲ್ ಟ್ರ್ಯಾಕ್ ಲಿರಿಕಲ್ ವಿಡಿಯೋ ರಿಲೀಸ್

    -ಪ್ರೇಮ್ ಪಂಚಿಂಗ್ ಲಿರಿಕ್ಸ್, ಶಂಕರ್ ಮಹಾದೇವನ್ ಸೂಪರ್ ವಾಯ್ಸ್

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷೆಯ ಸಿನಿಮಾ `ದಿ ವಿಲನ್’. ಸೆಟ್ಟೇರಿದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸಖತ್ ಸೌಂಡ್ ಮಾಡುತ್ತಿರುವ ಈ ಚಿತ್ರ ಟೀಸರ್‍ನಿಂದ ಸೃಷ್ಟಿಸಿರುವ ಹವಾ ಅಷ್ಟಿಷ್ಟಲ್ಲ. ಸದ್ಯ ಈ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ.

    ‘ಮಚ್ಚು ಗಿಚ್ಚು ಹಿಡಿದವನಲ್ಲ, ಆದ್ರೂ ಹವಾ ಇಟ್ಟವನಲ್ಲ, ಕೋಟೆ ಕಟ್ಟಿ ಮೆರೆದವನಲ್ಲ ಆದ್ರೂ ರಾಜ್ಯ ಆಳುತ್ತವನಲ್ಲ’ ಎಂದು ಸಾಗುವ ಈ ಹಾಡು ಜೋಗಿ ಪ್ರೇಮ್ ಲೇಖನದಲ್ಲಿ ಮೂಡಿ ಬಂದಿದೆ. ಶಂಕರ್ ಮಹಾದೇವನ್ ಕಂಠಸಿರಿಯಲ್ಲಿ ಮೂಡಿಬಂದಿರುವ ವಿಲನ್ ಟೈಟಲ್ ಟ್ರ್ಯಾಕ್ ಕೇಳುಗರಿಗೆ ಸಖತ್ ಕಿಕ್ ಕೊಡುತ್ತಿದೆ.

    ರಿಲೀಸ್ ಆದ ಒಂದು ಗಂಟೆಯಲ್ಲಿ 1 ಲಕ್ಷಕ್ಕೂ ಅಧಿಕ ವ್ಯೂ ಪಡೆದುಕೊಂಡಿದೆ. ಈ ಹಾಡಿನಲ್ಲಿ ಶಿವಣ್ಣ ಹಾಗೂ ಸುದೀಪ್ ಇಬ್ಬರು ಇರ್ತಾರಾ ಇಲ್ಲವೋ ಅನ್ನೋದನ್ನ ಪ್ರೇಮ್ ಸಸ್ಪೆನ್ಸ್ ಆಗಿಟ್ಟಿದ್ದಾರೆ. ಆದರೆ ರಿಲೀಸ್ ಆಗಿರುವ ಲಿರಿಕಲ್ ವಿಡಿಯೋದಲ್ಲಿ ಶಿವಣ್ಣ ಹಾಗೂ ಸುದೀಪ್ ಇಬ್ಬರು ಇರುವ ಮೇಕಿಂಗ್‍ನ ಬಳಸಿಕೊಂಡಿದ್ದಾರೆ.

  • ಮತ್ತೊಂದು ವಿವಾದದಲ್ಲಿ `ದಿ ವಿಲನ್’ – ಸಿನಿಮಾ ನೋಡಿ ಆಮೇಲೆ ಮಾತ್ನಾಡಿ ಅಂದ್ರು ನಿರ್ದೇಶಕ ಪ್ರೇಮ್

    ಮತ್ತೊಂದು ವಿವಾದದಲ್ಲಿ `ದಿ ವಿಲನ್’ – ಸಿನಿಮಾ ನೋಡಿ ಆಮೇಲೆ ಮಾತ್ನಾಡಿ ಅಂದ್ರು ನಿರ್ದೇಶಕ ಪ್ರೇಮ್

    ಬೆಂಗಳೂರು: “ಸಿನಿಮಾ ನೋಡಿ ಆಮೇಲೆ ಮಾತನಾಡಿ, ಇಲ್ಲವೇ ಶಿವಣ್ಣಾವ್ರೇ ನನಗೆ ಇದು ತಪ್ಪು ಅನ್ನೋದನ್ನು ಹೇಳಲಿ, ಆಗ ನೀವೆಲ್ಲಾ ಹೇಳಿದಂತೆ ಕೇಳ್ತೀನಿ “ಎಂದು ನಿರ್ದೇಶಕ ಪ್ರೇಮ್ ಹೇಳಿದ್ದಾರೆ.

    ವಾರದ ಹಿಂದೆ ರಿಲೀಸ್ ಆಗಿದ್ದ `ದಿ ವಿಲನ್’ ಸಿನಿಮಾದ ಟೀಸರ್ ಜೊತೆ ವಿವಾದವೂ ಹುಟ್ಟಿಕೊಂಡಿತ್ತು. ಅನೇಕ ಕಾರಣಗಳನ್ನ ಮುಂದಿಟ್ಟು ಶಿವಣ್ಣ ಅವರಿಗೆ ಈ ಚಿತ್ರದಲ್ಲಿ ಅವಮಾನ ಮಾಡಲಾಗಿದೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿಮಾನಿಗಳು `ದಿ ವಿಲನ್’ ಸಿನಿಮಾ ಬಹಿಷ್ಕಾರ ಹಾಕುತ್ತೇವೆ ಎಂದು ಹಠ ಹಿಡಿದು, ಅನೇಕ ಷರತ್ತುಗಳನ್ನ ಮುಂದಿಟ್ಟಿದ್ದರು.

    ಸದ್ಯ ವಿಷ್ಯವಾಗಿ ಇದೀಗ `ದಿ ವಿಲನ್’ ಚಿತ್ರ ನಿರ್ದೇಶಕ ಪ್ರೇಮ್ ಪ್ರತಿಕ್ರಿಯಿಸಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಕೆಲ ಮಾಧ್ಯಮಗಳಲ್ಲಿ ಶಿವಣ್ಣ ಅವರ ವಿಚಾರವಾಗಿ ಪ್ರೇಮ್ ಅವರಿಗೆ ಅಸಮಾಧಾನವಿದೆ ಎಂದು ವರದಿಯಾಗಿತ್ತು. ಆದರೆ ಈ ಕುರಿತು ನಿರ್ಧಾರ ಮಾಡಬೇಕಾಗಿದ್ದು ಶಿವಣ್ಣ ಅವರು, ಒಂದೊಮ್ಮೆ ಶಿವಣ್ಣ ಅವರು ಪ್ರಶ್ನೆ ಮಾಡಿದರೆ ಅದಕ್ಕೆ ಉತ್ತರಿಸುತ್ತೇನೆ. ಸಿನಿಮಾ ಬಿಡುಗಡೆಗೂ ಮೊದಲೇ ಅಸಮಾಧಾನ ವ್ಯಕ್ತಪಡಿಸಿದರೆ ನಾನು ಏನು ಮಾಡಲು ಸಾಧ್ಯ. ಅದ್ದರಿಂದ ಸಿನಿಮಾ ಬಂದರೆ ನಿಮಗೆ ಈ ಕುರಿತು ಸಂಪೂರ್ಣ ಮಾಹಿತಿ ಲಭಿಸಲಿದೆ. ಅದ್ದರಿಂದ ತಾಳ್ಮೆವಹಿಸಿ, ಆತೀ ಶೀಘ್ರದಲ್ಲಿ ನಿಮ್ಮ ಮುಂದೇ ಸಿನಿಮಾ ತರುತ್ತೇನೆ ಎಂದು ಹೇಳಿದ್ದಾರೆ.

    ಈ ಹಿಂದೆಯೂ ದಿ ವಿಲನ್ ಸಿನಿಮಾ ವಿವಾದಕ್ಕೆ ಕಾರಣವಾಗಿತ್ತು. `ನಿನ್ನೆ ಮೊನ್ನೆ ಬಂದೋರೆಲ್ಲ ನಾನೇ ನಂಬರ್ ಒನ್ ಅಂತಾರೋ’ ಎಂದು ಸಾಹಿತ್ಯವಿರುವ ಹಾಡಿಗೆ ಶಿವಣ್ಣ ಸಖತ್ ಡಾನ್ಸ್ ಮಾಡಿದ್ದರು. 

  • ಕನ್ನಡದಲ್ಲಿ ವಿಲನ್ ದಾಖಲೆ – ಸುದೀಪ್, ಶಿವಣ್ಣನಿಗೆ ವಿಶೇಷ ಧನ್ಯವಾದ ತಿಳಿಸಿದ್ರು ಪ್ರೇಮ್!

    ಕನ್ನಡದಲ್ಲಿ ವಿಲನ್ ದಾಖಲೆ – ಸುದೀಪ್, ಶಿವಣ್ಣನಿಗೆ ವಿಶೇಷ ಧನ್ಯವಾದ ತಿಳಿಸಿದ್ರು ಪ್ರೇಮ್!

    ಬೆಂಗಳೂರು: ಬಹುನಿರೀಕ್ಷಿತ `ದಿ ವಿಲನ್’ ಚಿತ್ರದ 2 ಟೀಸರ್ ರಿಲೀಸ್ ಆಗಿದ್ದು ಸ್ಯಾಂಡಲ್‍ವುಡ್‍ನಲ್ಲಿ ದಾಖಲೆ ಬರೆದಿದೆ.

    ದಿ ವಿಲನ್ ಟೀಸರ್ ಬಿಡುಗಡೆಯಾದ ಒಂದು ದಿನ ನಂತರ ಪ್ರೇಮ್ ಯ್ಯೂಟ್ಯೂಬ್ ಸ್ಕ್ರೀನ್ ಶಾಟ್ ತೆಗೆದು ಅದನ್ನು ಸಾಮಜಿಕ ಜಾಲತಾಣದಲ್ಲಿ ಹಾಕಿ ಕಿಚ್ಚ ಸುದೀಪ್ ಹಾಗೂ ಶಿವರಾಜ್‍ಕುಮಾರ್ ಅವರಿಗೆ ವಿಶೇಷವಾಗಿ ಧನ್ಯವಾದ ತಿಳಿಸಿದ್ದಾರೆ.

    ದಿ ವಿಲನ್ ತನ್ನ ಮೊದಲೇ ದಿನವೇ ಸ್ಯಾಂಡಲ್‍ವುಡ್‍ನಲ್ಲಿ ದಾಖಲೆಯನ್ನು ಸೃಷ್ಟಿ ಮಾಡಿದೆ. ಯ್ಯೂಟ್ಯೂಬ್ ಇತಿಹಾಸದಲ್ಲೇ ಅತ್ಯಂತ ವೇಗವಾಗಿ 10 ಲಕ್ಷ ವ್ಯೂ ತಲುಪಿದೆ. ಎರಡು ಟೀಸರ್ 10 ಲಕ್ಷ ಹಾಗೂ 15 ಲಕ್ಷ ತಲುಪಿದೆ. ಡಾರ್ಲಿಂಗ್ ಸುದೀಪ್ ಹಾಗೂ ಶಿವಣ್ಣಗೆ ಧನ್ಯವಾದಗಳು ಹಾಗೂ ಎಲ್ಲ ವೀಕ್ಷಕರಿಗೂ ಧನ್ಯವಾದಗಳು. ನೀವು ನನ್ನ ಈ ದಿನವನ್ನು ವಿಶೇಷ ಮಾಡಿದ್ದೀರಿ. ಆಡಿಯೋ ಅತೀ ಶೀಘ್ರದಲ್ಲೇ ಬರಲಿದೆ ಎಂದು ಪ್ರೇಮ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

    ಅನೆಬಂತೊಂದಾನೆ ಅನ್ನುವ ಧ್ವನಿಯಲ್ಲಿ ಕಿಚ್ಚ ಡೈಲಾಗ್ ಅಬ್ಬರಿಸಿ ಬೊಬ್ಬಿರೆದ್ರೆ, ಶಿವರಾಜ್‍ಕುಮಾರ್ ನಾನ್ ಸೈಲೆಂಟಾಗಿದ್ರೆ ರಾಮಾ, ವೈಲೆಂಟಾದ್ರೆ ರಾವಣ ಎಂಬುದಾಗಿ ಡೈಲಾಗ್ ಹೊಡೆದಿದ್ದಾರೆ. ನಿರ್ದೇಶಕ ಪ್ರೇಮ್ ಇಬ್ಬರ ಪಾತ್ರದಲ್ಲೂ ಸಖತ್ ಕ್ಯೂರಿಯಾಸಿಟಿ ಸೃಷ್ಟಿಸಿದ್ದಾರೆ.

    ದಿ ವಿಲನ್ ಟೀಸರ್ ಅರ್ಧಗಂಟೆಯಲ್ಲೇ ಲಕ್ಷ ವೀವರ್ಸ್ ದಾಟಿತ್ತು. ಗಂಟೆ ಗಂಟೆಗೂ ವೀವ್ಸ್ ದ್ವಿಗುಣಗೊಳ್ಳುತ್ತಲೇ ಇತ್ತು. ಅಂದಹಾಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ನಗರದ ಜಿ ಟಿ ಮಾಲ್‍ನಲ್ಲಿ `ದಿ ವಿಲನ್’ ಚಿತ್ರದ ಎರಡೂ ಟೀಸರ್ ಅಧಿಕೃತವಾಗಿ ರಿಲೀಸ್ ಮಾಡಿದ್ದರು.

    `ದಿ ವಿಲನ್’ ಚಿತ್ರಕ್ಕೆ ಟೈಮೆಕ್ಸ್ ವಾಚ್ ಕಂಪೆನಿ ಪ್ರಾಯೋಜಕತ್ವ ನೀಡಿದೆ. ದಕ್ಷಿಣ ಭಾರತದಲ್ಲೇ ಕನ್ನಡ ಚಿತ್ರಕ್ಕೆ ಮೊದಲ ಬಾರಿಗ ಪ್ರಾಯೋಜಕತ್ವ ನೀಡಿದೆ. ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಶಿವರಾಜ್ ಕುಮಾರ್, ನಿರ್ದೇಶಕ ಪ್ರೇಮ್ ಅವರಿಗೆ ಟೈಮೆಕ್ಸ್ ಕಂಪೆನಿ ಮಾಲೀಕರು ವಾಚ್ ಕಟ್ಟಿದರು. ಅಲ್ಲದೇ `ದಿ ವಿಲನ್’ ಡೈರಿ ಡೇ ಐಸ್ ಕ್ರೀಂ ಬಿಡುಗಡೆ ಮಾಡಿದರು.

  • ವಿಲನ್ ಟೀಸರ್ ಸೂಪರ್ ಹಿಟ್- ಅರ್ಧಗಂಟೆಯಲ್ಲಿ ಲಕ್ಷ ವ್ಯೂ

    ವಿಲನ್ ಟೀಸರ್ ಸೂಪರ್ ಹಿಟ್- ಅರ್ಧಗಂಟೆಯಲ್ಲಿ ಲಕ್ಷ ವ್ಯೂ

    ಬೆಂಗಳೂರು: ಬಹುನಿರೀಕ್ಷಿತ `ದಿ ವಿಲನ್’ ಚಿತ್ರದ 2 ಟೀಸರ್ ರಿಲೀಸ್ ಆಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ‘ದಿ ವಿಲನ್’ ಟೀಸರ್ ಬಿಡುಗಡೆ ಮಾಡಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವಣ್ಣ ಪಾತ್ರ ಪರಿಚಯದ ಒಂದು ಟೀಸರ್ ಹಾಗೂ ಸುದೀಪ್ ಪಾತ್ರ ಪರಿಚಯದ ಇನ್ನೊಂದು ಟೀಸರ್ ರಿಲೀಸ್ ಆಗಿದೆ.

    ಅನೆಬಂತೊಂದಾನೆ ಅನ್ನುವ ಧ್ವನಿಯಲ್ಲಿ ಕಿಚ್ಚ ಡೈಲಾಗ್ ಅಬ್ಬರಿಸಿ ಬೊಬ್ಬಿರೆದ್ರೆ, ಶಿವರಾಜ್‍ಕುಮಾರ್ ನಾನ್ ಸೈಲೆಂಟಾಗಿದ್ರೆ ರಾಮಾ, ವೈಲೆಂಟಾದ್ರೆ ರಾವಣ ಎಂಬುದಾಗಿ ಡೈಲಾಗ್ ಹೊಡೆದಿದ್ದಾರೆ. ಇಬ್ಬರ ಪಾತ್ರದಲ್ಲೂ ಸಖತ್ ಕ್ಯೂರಿಯಾಸಿಟಿ ಸೃಷ್ಟಿಸಿದ್ದಾರೆ ನಿರ್ದೇಶಕ ಪ್ರೇಮ್.

    ವಿಲನ್ ಟೀಸರ್ ಅರ್ಧಗಂಟೆಯಲ್ಲೇ ಲಕ್ಷ ವೀವರ್ಸ್ ದಾಟಿದೆ. ಗಂಟೆ ಗಂಟೆಗೂ ವೀವ್ಸ್ ದ್ವಿಗುಣಗೊಳ್ಳುತ್ತಲೇ ಇದೆ. ಅಂದಹಾಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ನಗರದ ಜಿ ಟಿ ಮಾಲ್‍ನಲ್ಲಿ `ದಿ ವಿಲನ್’ ಚಿತ್ರದ ಎರಡೂ ಟೀಸರ್ ಅಧಿಕೃತವಾಗಿ ರಿಲೀಸ್ ಮಾಡಿದ್ದಾರೆ.

    ಶೂಟಿಂಗ್ ನಿಮಿತ್ತ ಸರ್ಬಿಯ ದೇಶಕ್ಕೆ ತೆರಳಿರುವ ನಟ ಸುದೀಪ್ ಟ್ವಿಟ್ಟರ್ ಲೈವ್ ಮುಖೇನ ತಂಡಕ್ಕೆ ಶುಭ ಕೋರಿದರು. ಇನ್ನು `ದಿ ವಿಲನ್’ ಚಿತ್ರಕ್ಕೆ ಟೈಮೆಕ್ಸ್ ವಾಚ್ ಕಂಪೆನಿ ಪ್ರಾಯೋಜಕತ್ವ ನೀಡಿದೆ. ದಕ್ಷಿಣ ಭಾರತದಲ್ಲೇ ಕನ್ನಡ ಚಿತ್ರಕ್ಕೆ ಮೊದಲ ಬಾರಿಗ ಪ್ರಾಯೋಜಕತ್ವ ನೀಡಿದೆ. ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಶಿವರಾಜ್ ಕುಮಾರ್, ನಿರ್ದೇಶಕ ಪ್ರೇಮ್ ಅವರಿಗೆ ಟೈಮೆಕ್ಸ್ ಕಂಪೆನಿ ಮಾಲೀಕರು ವಾಚ್ ಕಟ್ಟಿದರು. ಅಲ್ಲದೇ `ದಿ ವಿಲನ್’ ಡೈರಿ ಡೇ ಐಸ್ ಕ್ರೀಂ ಬಿಡುಗಡೆ ಮಾಡಿದರು.

    ಧನ ಸಹಾಯ: ಒಂದು ಟಿಕೆಟ್‍ಗೆ 500 ರೂ. ಪಡೆದು ಟೀಸರ್ ತೋರಿಸಿರುವ ಪ್ರೇಮ್, ಟಿಕೆಟ್‍ನಿಂದ ಬಂದಂತಹ ಹಣವನ್ನು ಆರ್ಥಿಕ ಸಂಕಷ್ಟದಲ್ಲಿ ಬಳಲುತ್ತಿರುವ ಕನ್ನಡದ ನಿರ್ದೇಶಕರಿಗೆ ವಿತರಿಸಿದ್ದಾರೆ. ಚಿತ್ರಕ್ಕೆ ಜೋಗಿ ಪ್ರೇಮ್ ನಿರ್ದೇಶನವಿದ್ದು, ಕಿಚ್ಚ ಸುದೀಪ್, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ಏಮಿಜಾಕ್ಸನ್, ಮಿಥುನ್ ಚಕ್ರವರ್ತಿ ಸೇರಿದಂತೆ ಅತೀ ದೊಡ್ಡತಾರಾಗಣ ಈ ಸಿನಿಮಾದಲ್ಲಿದೆ. ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣವನ್ನು ಸಿಎಂ ಕುಮಾರಸ್ವಾಮಿ ಅವರಿಂದ ನಿರ್ದೇಶಕರಾದ ಬೂದಾಳ್ ಕೃಷ್ಣಮೂರ್ತಿ, ಹಿರೇಮಠ್, ಆನಂದ್ ಪಿ ರಾಜು, ಎ.ಟಿ.ರಘು ಅವರಿಗೆ ಸಹಾಯಧನ ವಿತರಣೆ ಮಾಡಿದರು.

     

  • ಕಿಸ್ ಜೋಡಿಯ ಜೊತೆ ಹೆಜ್ಜೆ ಹಾಕಿದರು ಹ್ಯಾಟ್ರಿಕ್ ಹೀರೋ!

    ಕಿಸ್ ಜೋಡಿಯ ಜೊತೆ ಹೆಜ್ಜೆ ಹಾಕಿದರು ಹ್ಯಾಟ್ರಿಕ್ ಹೀರೋ!

    ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಿ ವಿಲನ್ ಚಿತ್ರದ ತಮ್ಮ ಬಾಗದ ಕೆಲ ಭಾಗಗಳ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಮಿನರ್ವ ಮಿಲ್ಸ್ ಆಸುಪಾಸಲ್ಲಿಯೇ ಈ ಚಿತ್ರೀಕರಣ ನಡೆದಿದೆ. ಇದೇ ಸಂದರ್ಭದಲ್ಲಿ ಅಲ್ಲೇ ಬಾಜಿನಲ್ಲಿ ಹಾಡೊಂದರ ಚಿತ್ರೀಕರಣ ನಡೆಸುತ್ತಿದ್ದ ಎಪಿ ಅರ್ಜುನ್ ನಿದೇಶನದ ಕಿಸ್ ಸೆಟ್ಟಿಗೆ ಭೇಟಿ ನೀಡಿರೋ ಶಿವಣ್ಣ ನಾಯಕ ನಾಯಕಿಯ ಜೊತೆ ಹೆಜ್ಜೆ ಹಾಕಿ ಉತ್ಸಾಹ ತುಂಬಿದ್ದಾರೆ!

    ಎ.ಪಿ. ಅರ್ಜುನ್ ನಾಯಕ ನಾಯಕಿಯ ಹಾಡೊಂದನ್ನು ಮಿನರ್ವ ಮಿಲ್ಸ್ ಪರಿಸರದಲ್ಲಿ ಚಿತ್ರೀಕರಿಸಿಕೊಳ್ಳುತ್ತಿದ್ದರು. ಅದೇ ಹೊತ್ತಿಗೆ ವಿಲನ್ ನಿರ್ದೇಶಕ ಪ್ರೇಮ್ ಅದರ ಇನ್ನೊಂದು ಮಗ್ಗುಲಲ್ಲಿ ಶಿವಣ್ಣನ ದೃಶ್ಯಾವಳಿಗಳನ್ನು ಸೆರೆ ಹಿಡಿಯುತ್ತಿದ್ದರು. ಈ ನಡುವೆ ವಿರಾಮದ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಅವರಿಗೆ ಪಕ್ಕದಲ್ಲಿಯೇ ಕಿಸ್ ಚಿತ್ರದ ಚಿತ್ರೀಕರಣ ನಡೆಯುತ್ತಿರೋ ಸಂಗತಿ ತಿಳಿದಿದೆ.

    ತಕ್ಷಣವೇ ಶಿವಣ್ಣ ರೆಸ್ಟ್ ಮೂಡನ್ನು ಕ್ಯಾನ್ಸಲ್ ಮಾಡಿಕೊಂಡು ಸೀದಾ ಕಿಸ್ ಸೆಟ್ಟಿಗೆ ತೆರಳಿದ್ದಾರೆ. ಅದು ನಿಜಕ್ಕೂ ಎಪಿ ಅರ್ಜುನ್ ಮತ್ತವರ ತಂಡಕ್ಕೆ ನಂಬಲಸಾಧ್ಯವಾದ ಸರ್‍ಪ್ರೈಸ್. ಹಾಗೆ ಬಂದ ಶಿವಣ್ಣ ಕಿಸ್ ಚಿತ್ರದ ಹೀರೋ ಮತ್ತು ತಂಡದೊಂದಿಗೆ ಹೆಜ್ಜೆ ಹಾಕಿದ್ದಾರೆ. ಎಲ್ಲರನ್ನೂ ಆತ್ಮೀಯವಾಗಿ ಮಾತಾಡಿಸಿದ್ದಾರೆ.

    ಇದರಿಂದ ನಿರ್ದೇಶಕ ಎ ಪಿ ಅರ್ಜುನ್ ಖುಷಿಯಾಗಿದ್ದಾರೆ. ಅರ್ಜುನ್ ಕೂಡಾ ಶಿವರಾಜ್ ಕುಮಾರ್ ಅವರ ಅಭಿಮಾನಿಯಂತೆ. ಯಾವ ಸೂಚನೆಯೂ ಇಲ್ಲದೆ ಏಕಾಏಕಿ ತಮ್ಮ ಚಿತ್ರೀಕರಣದ ಸೆಟ್ ನಲ್ಲಿ ಶಿವಣ್ಣನನ್ನು ನೋಡಿ ಅವರು ಥ್ರಿಲ್ ಆಗಿದ್ದಾರೆ. ಯುವ ತಂಡಕ್ಕೆ ತಾವಾಗಿಯೇ ಬಂದು ಸಾಥ್ ನೀಡಿ ಹುರುಪು ನೀಡಿದ ಶಿವರಾಜ್ ಕುಮಾರ್ ಅವರ ಸರಳ ನಡವಳಿಕೆ ನಿಜಕ್ಕೂ ಮಾದರಿ.