Tag: ದೀಕ್ಷಿತ್ ಶೆಟ್ಟಿ

  • ಗಣರಾಜ್ಯೋತ್ಸವ ದಿನದಂದು ನಟ ದೀಕ್ಷಿತ್ ಶೆಟ್ಟಿ ಸಂಕಲ್ಪ

    ಗಣರಾಜ್ಯೋತ್ಸವ ದಿನದಂದು ನಟ ದೀಕ್ಷಿತ್ ಶೆಟ್ಟಿ ಸಂಕಲ್ಪ

    ದೀಕ್ಷಿತ್ ಶೆಟ್ಟಿ (Dixit Shetty) ಹಾಗೂ ಚೈತ್ರ ಆಚಾರ್‍ (Chaitra Achar) ಮುಖ್ಯಭೂಮಿಯಲ್ಲಿ ನಟಿಸಿರುವ ‘ಬ್ಲಿಂಕ್’ (Blink) ಚಿತ್ರತಂಡ, ಚಿತ್ರೀಕರಣದ ದಿನದಿಂದಲೂ ತಮ್ಮ ವಿನೂತನ ಪ್ರಚಾರ ತಂತ್ರಗಳಿಂದ ಚಂದನವನದಲ್ಲಿ ಗಮನ ಸೆಳೆದಿದೆ. ತಮ್ಮ ಚಿತ್ರವನ್ನು ಜನರಿಗೆ ಮುಟ್ಟಿಸುವಲ್ಲಿ ಗೆಲ್ಲಲೇಬೇಕು ಎಂದು ಶಪಥ ಮಾಡಿರುವ ಈ ತಂಡ ಯಾವುದೇ ಮುಚ್ಚು ಮರೆ ಇಲ್ಲದೆ , ನೂತನ ಚಿತ್ರಗಳನ್ನು ಕಟ್ಟುವಲ್ಲಿ , ಜನರಿಗೆ ತಲುಪಿಸುವಲ್ಲಿ ಇರುವ ಸಮಸ್ಯೆಗಳನ್ನು ತಿಳಿಸಲು ವಿನೂತನ ಪ್ರಯೋಗ ಮಾಡಿದ್ದು ‘ಜನರಿಂದಲೇ ಸಿನಿಮಾ, ಜನರೇ ಸಿನಿಮಾ’ ಎಂಬಾ ವಿಶಿಷ್ಟ ಸಾಲುಗಳು ಜನರ ಮನಸ್ಸನ್ನು ಗೆಲ್ಲುತ್ತಿವೆ. ಚಿತ್ರಮಂದಿರದಿಂದ ದೂರ ಉಳಿದಿರುವ ಜನರಿಗೆ, ಮತ್ತೆ ಚಿತ್ರಮಂದಿರದ ಆ ಮಾಂತ್ರಿಕ ಜಗತ್ತಿನ ವಿಶೇಷತೆಯನ್ನು ಮನಮುಟ್ಟುವಂತೆ ನಿರೂಪಿಸಿದ್ದಾರೆ.

    ಈಗಾಗಲೇ ತಮ್ಮ ಹೊಸತನದಿಂದ ಜನರ ಗಮನಸೆಳೆದಿರುವ ಬ್ಲಿಂಕ್ ತಂಡವು ಮಾರ್ಚ್ ನಲ್ಲಿ ಚಿತ್ರಮಂದಿರದೊಳಗೆ ಪ್ರವೇಶಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ಜನನಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರವು ಸೈಫೈ ಪ್ರಕಾರದ ಚಿತ್ರವಾಗಿದ್ದು ಪ್ರೇಕ್ಷಕರನ್ನು ಸೆಳಿದಿಟ್ಟುಕೊಳ್ಳುವುದು ಖಂಡಿತವೆಂದು ನಿರ್ಮಾಪಕ ರವಿಚಂದ್ರ ಎ ಜೆ ಹೇಳುತ್ತಾರೆ .

    ತಮ್ಮ ಚೊಚ್ಚಲ ನಿರ್ದೇಶನದಲ್ಲೇ ಚಿತ್ರದ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ನಿರ್ದೇಶಕ ಶ್ರೀನಿಧಿ ಬೆಂಗಳೂರುರವರು, ಇದೊಂದು ಕಾಲ್ಪನಿಕ ಕಥೆಯಾಗಿದ್ದು ..ಕನ್ನಡ ಚಿತ್ರರಂಗದಲ್ಲಿ ಈ ಪ್ರಕಾರದ ಚಿತ್ರಗಳು ತೀರಾ ಕಡಿಮೆ ತೆರೆಕಂಡಿದ್ದು  ಈ ಚಿತ್ರವು ನೋಡುಗರಲ್ಲಿ ಹೊಸತನ ಮೂಡಿಸುತ್ತದೆ ಎಂದು ನಿರ್ದೇಶಕ ಶ್ರೀನಿಧಿ ಬೆಂಗಳೂರು ಹೇಳುತ್ತಾರೆ ದಿಯಾ, ದಸರಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿಯವರು ನಾಯಕ ನಟನ ಜವಬ್ದಾರಿಯನ್ನು ಹೊತ್ತಿದ್ದಾರೆ.. ಹಾಗೂ ಹೊಸ ದಿನಚರಿ ಖ್ಯಾತಿಯ ಮಂದಾರ ಬಟ್ಟಲಹಳ್ಳಿ ನಾಯಕಿನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

     

    ಇತ್ತೀಚಿಗೆ ತೆರೆಕಂಡ ಟೋಬಿ ಮತ್ತು ಸಪ್ತಸಾಗರದಾಚೆ ಎಲ್ಲೋ 2 ಚಿತ್ರದ ಸುರಭಿ ಪಾತ್ರಧಾರಿ ಚೈತ್ರ ಜೆ ಆಚಾರ್ ಬ್ಲಿಂಕ್ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ ಹಾಗೂ ವಜ್ರಧೀರ್ ಜೈನ್, ಗೋಪಾಲಕೃಷ್ಣ ದೇಶಪಾಂಡೆ, ಕಿರಣ್ ನಾಯ್ಕ್, ಮುರುಳಿ ಶೃಂಗೇರಿ, ಸುರೇಶ್ ಅನಗಹಳ್ಳಿ ಸೇರಿದಂತೆ ಇನ್ನು ದೊಡ್ಡ ತಾರಬಳಗವಿದೆ. ಈ ಚಿತ್ರಕ್ಕೆ ಪ್ರಸನ್ನ ಕುಮಾರ್ ಎಂ ಎಸ್ ರವರ ಸಂಗೀತ ನಿರ್ದೇಶನವಿದ್ದು , ಅವಿನಾಶ ಶಾಸ್ರ್ತಿ ಅವರ ಕ್ಯಾಮೆರಾ ಕೈ ಚಳಕವಿದೆ.

  • ಮಾಲಿವುಡ್‌ಗೆ ಕಾಲಿಟ್ಟ ‘ದಿಯಾ’ ಹೀರೋ ದೀಕ್ಷಿತ್ ಶೆಟ್ಟಿ

    ಮಾಲಿವುಡ್‌ಗೆ ಕಾಲಿಟ್ಟ ‘ದಿಯಾ’ ಹೀರೋ ದೀಕ್ಷಿತ್ ಶೆಟ್ಟಿ

    ‘ದಿಯಾ’ (Dia) ಸಿನಿಮಾದಲ್ಲಿ ಲವರ್ ಬಾಯ್ ಆಗಿ ಮಿಂಚಿದ್ದ ದೀಕ್ಷಿತ್ ಶೆಟ್ಟಿ (Dheekshith Shetty) ‘ದಸರಾ’ (Dasara) ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸಿನಿ ಪ್ರಪಂಚಕ್ಕೆ ಪರಿಚಿತರಾಗಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಗೆಳೆಯನಿಗೆ ದಸರಾದಲ್ಲಿ ಬಣ್ಣ ಹಚ್ಚಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿರುವ ಈ ಚಾಕ್ಲೇಟ್ ಹೀರೋ, ಈಗ ಮಲಯಾಳಂ ಇಂಡಸ್ಟ್ರಿಗೆ ಪದಾರ್ಪಣೆ ಮಾಡಿದ್ದಾರೆ.

    ಪ್ಯಾರಾ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ‘ಒಪ್ಪೀಸ್’ (Oppis) ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಕೇರಳದಲ್ಲಿ ಸರಳವಾಗಿ ನಡೆದಿದೆ. 10 ವರ್ಷಗಳ ಕಾಲ ವಿದೇಶದಲ್ಲಿದ್ದ ವ್ಯಕ್ತಿ ತಾನು ಹುಟ್ಟಿ ಬೆಳೆದ ಕೇರಳಗೆ ವಾಪಸ್ ಆದಾಗ ಏನಾಗುತ್ತದೆ ಅನ್ನೋದೆ ಕಥೆಯ ತಿರುಳು. ಫೆಬ್ರವರಿಯಿಂದ ಒಪ್ಪೀಸ್ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ಸೌಜನ್ ಜೋಸೆಫ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಪ್ರದ್ಯುಮನ್ಹಾ ಕೊಳ್ಳೇಕಾಲ ಬಂಡವಾಳ ಹೂಡಿದ್ದಾರೆ. ಎಂ ಜಯಚಂದ್ರನ್ ಮ್ಯೂಸಿಕ್ ಚಿತ್ರಕ್ಕಿದೆ.

    ರಂಗಭೂಮಿಯಿಂದ ಕಿರುತೆರೆ ಹಾಗೂ ಹಿರಿತೆರೆಗೆ ಬಂದು ‘ದಿಯಾ’ ಚಿತ್ರದ ಮೂಲಕ ಪ್ರೇಕ್ಷಕರ ಮನ ಸೆಳೆದಿದ್ದ ಸ್ಪುರದ್ರೂಪಿ ನಟ ದೀಕ್ಷಿತ್ ಶೆಟ್ಟಿ. ಸದ್ಯ ಅವರೀಗ ‘ಬ್ಲಿಂಕ್’ ಎಂಬ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಸಿನಿಮಾ ರವಿಚಂದ್ರ ಎ.ಜೆ ಎಂಬುವರು ಈ ಚಿತ್ರಕ್ಕೆ ಹಣ ಹೂಡಿದ್ದಾರೆ. ಶ್ರೀನಿಧಿ ‘ಬೆಂಗಳೂರು ಕಥೆ’ ಬರೆದು ನಿರ್ದೇಶನ ಮಾಡಿದ್ದಾರೆ. ಮಾರ್ಚ್ 8ಕ್ಕೆ ‘ಬ್ಲಿಂಕ್’ ರಿಲೀಸ್ ಆಗ್ತಿದೆ.

    ಇದರ ಹೊರತಾಗಿ ದೀಕ್ಷಿತ್, ಅಲ್ಲು ಅರವಿಂದ್ ಪ್ರೆಸೆಂಟ್ ಮಾಡುತ್ತಿರುವ ‘ಗರ್ಲ್ ಫ್ರೆಂಡ್’ ಸಿನಿಮಾದಲ್ಲಿಯೂ ರಶ್ಮಿಕಾ ಮಂದಣ್ಣ (Rashmika Mandanna) ಜೊತೆ ಅಭಿನಯಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಸರಳವಾಗಿ ಅವರು ಜನ್ಮದಿನ ಆಚರಿಸಿಕೊಂಡಿದ್ದಾರೆ.ದೀಕ್ಷಿತ್ ಬರ್ತ್ ಡೇ ಸ್ಪೆಷಲ್ ಆಗಿ ‘ಗರ್ಲ್ ಫ್ರೆಂಡ್’ (Girl Friend) ಸಿನಿಮಾದ ಸಣ್ಣ ಗ್ಲಿಂಪ್ಸ್ ರಿಲೀಸ್ ಮಾಡಿ ಚಿತ್ರತಂಡ ಶುಭಾಶಯ ಕೋರಿದೆ. ಇದನ್ನೂ ಓದಿ:ಮಕ್ಕಳ ಕಲ್ಯಾಣಕ್ಕೆ 1 ಲಕ್ಷ ದೇಣಿಗೆ ನೀಡಿದ ರಣ್‌ಬೀರ್ ಕಪೂರ್

    ‘ರಂಗಿತರಂಗ’, ‘ಅವನೇ ಶ್ರೀಮನ್ನಾರಾಯಣ’ ಹಾಗೂ ‘ಸ್ಪೂಕಿ ಕಾಲೇಜು’ ಗಳಂತಹ ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ ಹೆಚ್.ಕೆ.ಪ್ರಕಾಶ್ ನಿರ್ಮಾಣದ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾದಲ್ಲಿಯೂ ದಿಯಾ ಹೀರೋ ಬಣ್ಣ ಹಚ್ಚಿದ್ದಾರೆ. ಇನ್ನೂ, ದೀಕ್ಷಿತ್ ನಟನೆಯ ‘ಕೆಟಿಎಂ’ ಫೆಬ್ರವರಿಯಲ್ಲಿ ಬಿಡುಗಡೆಯಾಗುತ್ತಿದೆ. ಇದರ ಜೊತೆಗೆ ತಮಿಳು ಸಿನಿಮಾವೊಂದು ತೆರೆಗೆ ಬರಲು ಅಣಿಯಾಗಿದೆ.

  • ರಶ್ಮಿಕಾ ಮಂದಣ್ಣ ಈಗ ದೀಕ್ಷಿತ್ ಶೆಟ್ಟಿ ‘ಗರ್ಲ್‌ಫ್ರೆಂಡ್‌’

    ರಶ್ಮಿಕಾ ಮಂದಣ್ಣ ಈಗ ದೀಕ್ಷಿತ್ ಶೆಟ್ಟಿ ‘ಗರ್ಲ್‌ಫ್ರೆಂಡ್‌’

    ಬಾಲಿವುಡ್ ಮತ್ತು ಟಾಲಿವುಡ್ ಎಲ್ಲೆಲ್ಲೂ ರಶ್ಮಿಕಾ ಮಂದಣ್ಣ (Rashmika Mandanna) ಹೆಸರು ರಾರಾಜಿಸುತ್ತಿದೆ. ‘ಅನಿಮಲ್’ (Animal Film) ಚಿತ್ರದ ಸಕ್ಸಸ್ ನಂತರ ಹೊಸ ಸಿನಿಮಾದಲ್ಲಿ ನಟಿಸೋಕೆ ರೆಡಿಯಾಗಿದ್ದಾರೆ. ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿಗೆ ‘ಗರ್ಲ್‌ಫ್ರೆಂಡ್‌’ ಆಗಿ ರಶ್ಮಿಕಾ ಬಣ್ಣ ಹಚ್ತಿದ್ದಾರೆ.

    ‘ಅನಿಮಲ್’ (Animal) ಸಿನಿಮಾ 500 ಕೋಟಿ ರೂ. ಕ್ಲಬ್ ಮಾಡುತ್ತ ಮುನ್ನುಗ್ಗುತ್ತಿದೆ. ಬಾಲಿವುಡ್‌ನಲ್ಲಿ ಅದೃಷ್ಟ ಖುಲಾಯಿಸುತ್ತಿದ್ದಂತೆ ಗರ್ಲ್‌ಫ್ರೆಂಡ್‌ ಆಗೋಕೆ ಸಜ್ಜಾಗಿದ್ದಾರೆ. ಗೀತಾ ಆರ್ಟ್ಸ್ ಬ್ಯಾನರ್‌ನ ರೂವಾರಿ ಅಲ್ಲು ಅರವಿಂದ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ ದಿ ಗರ್ಲ್‌ಫ್ರೆಂಡ್‌’ (The Girlfriend) ಎಂಬ ಮಹಿಳಾ ಪ್ರಧಾನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ:Bigg Boss Telugu 7: ಶೋನಲ್ಲಿ ಕನ್ನಡ ಮಾತನಾಡಿದ ಪಟಾಕಿ ಪೋರ

    ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ವಿಜೇತ ಬರಹಗಾರ ರಾಹುಲ್ ರವಿಂದ್ರನ್ ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾಗೆ ಹೀರೋ ಆಗಿ ದೀಕ್ಷಿತ್ ಶೆಟ್ಟಿ ನಟಿಸುತ್ತಿದ್ದಾರೆ. ಮೊದಲ ದಿನದ ಶೂಟಿಂಗ್‌ನಲ್ಲಿ ರಶ್ಮಿಕಾ ಜೊತೆ ದೀಕ್ಷಿತ್ ಶೆಟ್ಟಿ ಕೂಡ ಭಾಗಿಯಾಗಿದ್ದು, ಚಿತ್ರೀಕರಣ ಭರದಿಂದ ಸಾಗುತ್ತಿದೆ. ರಶ್ಮಿಕಾ- ದೀಕ್ಷಿತ್ (Dheekshith Shetty) ಇಬ್ಬರ ಪಾತ್ರಕ್ಕೂ ಬಹಳಷ್ಟು ಪ್ರಾಮುಖ್ಯತೆ ಇದ್ದು, ಈ ಹೊಸ ಜೋಡಿ ಅದೆಷ್ಟರ ಮಟ್ಟಿಗೆ ಕಮಾಲ್ ಮಾಡಲಿದೆ ಎಂಬುದರ ಬಗ್ಗೆ ಈಗಾಗಲೇ ಕೌತುಕ ನಿರ್ಮಾಣ ಮಾಡಿದೆ.

    ರಶ್ಮಿಕಾ ಪಾತ್ರದ ಸುತ್ತ ಸುತ್ತುವ ಈ ಕಥೆಗಾಗಿ ನಟಿ ಮಾರ್ಷಲ್ ಆರ್ಟ್ಸ್ ಕಲಿಯುತ್ತಿದ್ದಾರೆ. ಚಿತ್ರದಲ್ಲಿ ಅವರಿಗೆ ಫೈಟಿಂಗ್ ಸೀನ್ಸ್ ಕೂಡ ಇದೆ. ಮೊದಲ 20 ದಿನದ ಶೂಟಿಂಗ್‌ನಲ್ಲಿ ಸಾಕಷ್ಟು ಆ್ಯಕ್ಷನ್ ದೃಶ್ಯಗಳ ಶೂಟ್ ಮಾಡಲಾಗುತ್ತಿದೆ. ರಶ್ಮಿಕಾ ಮಂದಣ್ಣ ಅವರನ್ನ ಸಾಹಸ ದೃಶ್ಯಗಳಲ್ಲಿಯೂ ಕಣ್ತುಂಬಿಕೊಳ್ಳಬಹುದು. ಸದ್ಯದಲ್ಲೇ ಈ ಸಿನಿಮಾದ ಬಗ್ಗೆ ಹೆಚ್ಚಿನ ಅಪ್‌ಡೇಟ್‌ ಸಿಗಲಿದೆ.

  • ದೀಕ್ಷಿತ್ ಶೆಟ್ಟಿಗೆ ‘ಗರ್ಲ್ ಫ್ರೆಂಡ್’ ಆಗ್ತಾರಾ ರಶ್ಮಿಕಾ ಮಂದಣ್ಣ?

    ದೀಕ್ಷಿತ್ ಶೆಟ್ಟಿಗೆ ‘ಗರ್ಲ್ ಫ್ರೆಂಡ್’ ಆಗ್ತಾರಾ ರಶ್ಮಿಕಾ ಮಂದಣ್ಣ?

    ನಿನ್ನೆಯಷ್ಟೇ ರಶ್ಮಿಕಾ ಮಂದಣ್ಣ(Rashmika Mandanna)  ನಟನೆಯ ‘ಗರ್ಲ್ ಫ್ರೆಂಡ್’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ಗೆ ಅತ್ಯುತ್ತಮ ರೆಸ್ಪಾನ್ಸ್ ಕೂಡ ಸಿಕ್ಕಿದೆ. ಟೀಸರ್ ನಲ್ಲಿ ಗಂಡು ಧ್ವನಿಯೊಂದು ನಿರೂಪಣೆ ಮಾಡಿದ್ದು, ಅದು ಥೇಟ್ ಕನ್ನಡದ ಪ್ರತಿಭಾವಂತ ನಟ ದೀಕ್ಷಿತ್ ಶೆಟ್ಟಿ (Dheekshith Shetty) ಅವರ ಧ್ವನಿಯಂತಿದೆ. ಪಕ್ಕಾ ಅದು ದೀಕ್ಷಿತ್ ಶೆಟ್ಟಿ ಅವರದ್ದೇ ಧ್ವನಿ ಆಗಿರುವುದರಿಂದ ಈ ಸಿನಿಮಾದಲ್ಲಿ ದೀಕ್ಷಿತ್ ಇರಲಿದ್ದಾರಾ ಎನ್ನುವ ಕುತೂಹಲ ಮೂಡಿದೆ.

    ಈಗಾಗಲೇ ತೆಲುಗು ಸಿನಿಮಾ ರಂಗದಲ್ಲಿ ದೀಕ್ಷಿತ್ ಗುರುತಿಸಿಕೊಂಡಿದ್ದಾರೆ. ಹಾಗಾಗಿ ಗರ್ಲ್ ಫ್ರೆಂಡ್ ಸಿನಿಮಾದಲ್ಲೂ ಅವರು ನಟಿಸಿರುವ ಸಾಧ್ಯತೆ ಇದೆ. ಈ ಮಾಹಿತಿಯನ್ನು ಸಿನಿಮಾ ತಂಡದವರು ಈವರೆಗೂ ಹಂಚಿಕೊಂಡಿಲ್ಲ. ಮುಂದೆ ಹಂಚಿಕೊಳ್ಳಬಹುದು. ಬಟ್, ಟೀಸರ್ ನಲ್ಲಿ ಕೇಳಿಸುವ ವಾಯ್ಸ್ ಸಖತ್ ಆಗಿ ಮೋಡಿ ಮಾಡುತ್ತಿದೆ.

    ‘ದಿ ಗರ್ಲ್‌ಫ್ರೆಂಡ್’ (The Girlfriend) ಮಹಿಳಾ ಪ್ರದಾನ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾದ ಸಣ್ಣ ಪ್ರೋಮೋ ಒಂದು ಈಗಾಗಲೇ ಬಿಡುಗಡೆ ಆಗಿದೆ. ಪ್ರೋಮೋ ಸಹ ಕುತೂಹಲ ಮೂಡಿಸುತ್ತಿದೆ. ನೀರಿನಲ್ಲಿ ಮುಳುಗಿರುವ ರಶ್ಮಿಕಾ ಮಂದಣ್ಣ ನಗುತ್ತಿರುತ್ತಾರೆ, ಆದರೆ ಹಠಾತ್ತನೆ ಬೇಸರದ ಮುಖಚಹರೆ ಪ್ರದರ್ಶಿಸುತ್ತಾರೆ, ಆತ್ಮಹತ್ಯೆಗೆ ಯತ್ನಿಸುತ್ತಿರುವಂತೆ ಕಣ್ಣು ಮುಚ್ಚಿಬಿಡುತ್ತಾರೆ. ರಶ್ಮಿಕಾ ನೀರಿಗೆ ಇಳಿದಿದ್ದು ಏಕೆ? ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು? ರಶ್ಮಿಕಾರನ್ನು ಕಾಪಾಡುವವರು ಯಾರು? ಇನ್ನೂ ಹಲವು ಪ್ರಶ್ನೆಗಳನ್ನು ಈ ಪ್ರೋಮೋ ಮೂಡಿಸುತ್ತಿದೆ.

    ಸಿನಿಮಾದ ಪ್ರೋಮೋ ನೋಡಿದರೆ ಇದು ಮಹಿಳಾ ಪ್ರಧಾನ ಸಿನಿಮಾ ಎಂಬುದು ಖಾತ್ರಿ ಆಗುತ್ತಿದೆ. ತಮ್ಮ ಬಾಯ್‌ಫ್ರೆಂಡ್ ಜೊತೆಗಿನ ಪ್ರೇಮ ಸಂಬಂಧದಿಂದ ಗರ್ಲ್‌ಫ್ರೆಂಡ್ ರಶ್ಮಿಕಾ ಮಂದಣ್ಣ ಎದುರಿಸುವ ಭಾವನೆಗಳ ಏರಿಳಿತ, ಸಮಸ್ಯೆಗಳ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎನ್ನಲಾಗುತ್ತಿದೆ. ರಶ್ಮಿಕಾ ಎಕ್ಸ್‌ಪ್ರೆಶನ್ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

    ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ರಾಹುಲ್ ರವೀಂದ್ರನ್ (Rahul Ravindran) ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾವನ್ನು ಅಲ್ಲು ಅರವಿಂದ್ ಪ್ರೆಸೆಂಟ್ ಮಾಡುತ್ತಿದ್ದು, ವಿದ್ಯಾ ಕೊಪ್ಪಿನೇಡಿ- ಧೀರಜ್ ಮೊಗಿಲಿನೇನಿ ಅವರುಗಳು ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಹೃದಯಂ’ ಚಿತ್ರದ ಖ್ಯಾತಿಯ ಮಲಯಾಳಂ ಸಂಗೀತ ನಿರ್ದೇಶನ ಹೆಷಾಮ್ ಅಬ್ದುಲ್ ವಹಾಬ್ ಅವರು ಸಂಗೀತ ನೀಡುತ್ತಿದ್ದಾರೆ.

     

    ಇದೇ ಡಿ.1ಕ್ಕೆ ಅನಿಮಲ್ (Animal) ಚಿತ್ರದ ಮೂಲಕ ರಶ್ಮಿಕಾ ಮಂದಣ್ಣ ರಣ್‌ಬೀರ್‌ಗೆ ಜೋಡಿಯಾಗಿ ಬರುತ್ತಿದ್ದಾರೆ. ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ’ಬ್ಲಿಂಕ್’ ಸಿನಿಮಾದ ಮೆಲೋಡಿ ಹಾಡು ರಿಲೀಸ್: ಸಖಿಯೆ ಎಂದ ದೀಕ್ಷಿತ್ ಶೆಟ್ಟಿ

    ’ಬ್ಲಿಂಕ್’ ಸಿನಿಮಾದ ಮೆಲೋಡಿ ಹಾಡು ರಿಲೀಸ್: ಸಖಿಯೆ ಎಂದ ದೀಕ್ಷಿತ್ ಶೆಟ್ಟಿ

    ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಬ್ಲಿಂಕ್ (Blink) ಸಿನಿಮಾದ ಎರಡನೇ ಹಾಡು ರಿಲೀಸ್ ಆಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಆಗಂತುಕ ಸಾಂಗ್ (Song) ಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಬ್ಲಿಂಕ್ ಅಂಗಳದಿಂದ ಸಖಿಯೆ ಎಂಬ ಮೆಲೋಡಿ ಹಾಡು ಅನಾವರಣಗೊಂಡಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಗೀತೆಗೆ ಸಿದ್ದಾರ್ಥ್ ಬೆಳ್ಮಣ್ಣು ಧ್ವನಿಯಾಗಿದ್ದು, ಪ್ರಸನ್ನ ಕುಮಾರ್ ಎಂ.ಎಸ್ ಸಾಹಿತ್ಯ ಒದಗಿಸಿದ್ದಾರೆ. ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಹಾಡು ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

    ನಿರ್ದೇಶಕ ಶ್ರೀನಿಧಿ ಬೆಂಗಳೂರು (Srinidhi Bangalore) ಮಾತನಾಡಿ, ರಂಗಭೂಮಿ ಜೊತೆ ಜೊತೆಯಲಿ ಸಿನಿಮಾ ಮಾಡಬೇಕೆಂಬ ಕನಸು ಇತ್ತು. ಕೋವಿಡ್ ಸಮಯದಲ್ಲಿ ಒಂದಿಷ್ಟು ಸಿನಿಮಾ ನೋಡ್ತಾ ನಾವು ಯಾಕೆ ಈ ರೀತಿ ಸಿನಿಮಾಗಳನ್ನು ಕನ್ನಡದಲ್ಲಿ ಮಾಡಬಾರದೆಂಬ ಯೋಚನೆ ಬಂತು. ಸ್ನೇಹಿತರು ಮತ್ತು ರಂಗಭೂಮಿ ಗೆಳೆಯರಿಂದ ಈ ಸಿನಿಮಾ ತಯಾರಾಗಿದೆ. ಸಿನಿಮಾ ಮಾಡಬೇಕೆಂಬ ಆಲೋಚನೆ ನಮ್ಮದು. ಸಿನಿಮಾ ಆಗಿದ್ದೆಲ್ಲಾ ಪ್ರಕೃತಿ ನಮಗೆ ಮಾಡಿದ ಬೆಂಬಲ ಮಾಡಿದೆ ಎಂದರು.

    ನಾಯಕ ದೀಕ್ಷಿತ್ (Dixit Shetty) ಮಾತನಾಡಿ, ಬ್ಲಿಂಕ್ ಸಿನಿಮಾ ಯಾವುದೇ ಪರ್ಟಿಕ್ಯೂಲರ್ ಜಾನರ್ ಗೆ ಬೀಳಲ್ಲ. ಸೈನ್ಸ್ ಫಿಕ್ಷನ್ ಸಣ್ಣ ಎಳೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಮನುಷ್ಯತ್ವ, ಮನುಷ್ಯ ಪ್ರೀತಿ ಅನ್ನೋವುದನ್ನು ಸಿನಿಮಾ ತೋರಿಸಿಕೊಡುತ್ತದೆ. ಸೈನ್ಸ್ ಫಿಕ್ಷನ್ ಎಂದರೆ ಒಂದು ಲ್ಯಾಬ್ ಅಥವಾ ಬೇರೆ ಪ್ರಪಂಚದಲ್ಲಿ ನಡೆಯುವ ಕಥೆಯಾಗಿರುತ್ತದೆ. ಬಟ್ ಇದು ಹಾಗಲ್ಲ. ನಮ್ಮಂತಹ ಮಧ್ಯಮ ವರ್ಗದ ನಡುವೆ ಸೈನ್ಸ್ ಫಿಕ್ಷನ್ ಆದರೆ ಏನೆಲ್ಲ ಕಳವಳ ಆಗಬಹುದು.. ಏನೆಲ್ಲಾ ಸನ್ನಿವೇಶ ಎದುರಿಸಬಹುದು ಅನ್ನೋದು ಈ ಸಿನಿಮಾದ ಮುಖ್ಯಕಥೆ ಎಂದರು.

    ನಾಯಕಿ ಮಂದಾರ ಮಾತನಾಡಿ, ನಾನು ಸ್ವಪ್ನ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ನಮ್ಮ ನಿರ್ದೇಶಕರು ನನಗೆ ಐದಾರು ವರ್ಷಗಳಿಂದ ಪರಿಚಯ. ಅವರೇ ನಾಟಕಗಳನ್ನು ಬರೆದು ನಟಿಸಿ ನಿರ್ದೇಶಿಸುತ್ತಿದ್ದರು. ಅಂದಿನಿಂದ ಅವರು ನನಗೆ ಸ್ನೇಹಿತರು. ಬ್ಲಿಂಕ್ ಸಿನಿಮಾದ ಸ್ಕ್ರೀಪ್ಟ್ ಕೇಳಿದಾಗ ಖುಷಿಯಾಯಿತು. ನಾನು ಮಧ್ಯಮ ವರ್ಗದ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಸಿನಿಮಾದ ಎಲ್ಲಾ ಹಾಡುಗಳು ಅದ್ಭುತವಾಗಿ ಮೂಡಿಬಂದಿದೆ. ಕನ್ನಡದಲ್ಲಿ ಲೂಸಿಯಾ, ಬೆಲ್ ಬಾಟಂ, ರಂಗಿತರಂಗ ಸಿನಿಮಾಗಳು ಹೇಗೆ ಕ್ರಾಂತಿ ಮಾಡಿದವೋ. ಹಾಗೆಯೇ ಈ ಚಿತ್ರವೂ ಮೈಲಿಗಲ್ಲಾಗಲಿದೆ ಎಂಬ ಭರವಸೆ ಇದೆ ಎಂದರು.

    ಜನನಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಮೂಡಿ ಬರ್ತಿರುವ ಬ್ಲಿಂಕ್ ಕನ್ನಡದಲ್ಲಿ ಒಂದು ಹೊಸ ಶೈಲಿಯ ಸಿನಿಮಾ , ವಿನೂತನ ಚಿತ್ರಕಥೆಯ ಈ ಚಿತ್ರ ಕನ್ನಡದ ಮಟ್ಟಿಗೆ ಹೊಸ ಪ್ರಯೋಗ. ಬ್ಲಿಂಕ್ ಸಿನಿಮಾಗೆ ರವಿಚಂದ್ರ ಎ ಜೆ ಬಂಡವಾಳ ಹೂಡಿದ್ದು, ಶ್ರೀನಿಧಿ ಬೆಂಗಳೂರು ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಚೊಚ್ಚಲ ಹೆಜ್ಜೆ. ಮಿಡಲ್ ಕ್ಲಾಸ್ ಹುಡುಗನ ಜೀವನದಲ್ಲಿ ನಡೆಯುವ unexpected ಘಟನೆಗಳು ಹೇಗೆ ಆವನ ಸುತ್ತ- ಮುತ್ತಲಿನ ವಾತಾವರಣ ಬದಲಿಸುತ್ತದೆ ಎಂಬುದು ಈ ಕಥೆಯ ಸಾರಾಂಶ. Sci-Fi ಶೈಲಿಯಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರಕ್ಕೆ ನಾಯಕ ನಟರಾಗಿ ದಿಯಾ ಹಾಗೂ ದಸರಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ನಾಯಕಿಯಾರಾಗಿ ಮಂದಾರ ಬಟ್ಟಲಹಳ್ಳಿ ಹಾಗೂ ಚೈತ್ರ ಜೆ ಆಚಾರ್ ನಟಿಸುತ್ತಿದ್ದು, ವಜ್ರಧೀರ್ ಜೈನ್ , ಗೋಪಾಲ ಕೃಷ್ಣದೇಶಪಾಂಡೆ , ಕಿರಣ್ ನಾಯ್ಕ್ ಮತ್ತು ಹಲವಾರು ಕಲಾವಿದರ ತಾರಗಣವಿದ್ದು,  ಅವಿನಾಶ ಶಾಸ್ರ್ತಿ ರವರ ಛಾಯಾಗ್ರಹಣ, ಮತ್ತು  ಸಂಜೀವ್ ಜಾಗಿರ್ದಾರ್ ರವರ ಸಂಕಲನವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೀಕ್ಷಿತ್ ಶೆಟ್ಟಿ ನಟನೆಯ ‘ಬ್ಲಿಂಕ್’ ಸಿನಿಮಾದ ಆಗಂತುಕ ಸಾಂಗ್ ಔಟ್

    ದೀಕ್ಷಿತ್ ಶೆಟ್ಟಿ ನಟನೆಯ ‘ಬ್ಲಿಂಕ್’ ಸಿನಿಮಾದ ಆಗಂತುಕ ಸಾಂಗ್ ಔಟ್

    ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ- ಟೋಬಿ ಬ್ಯೂಟಿ ಚೈತ್ರ ಜೆ ಆಚಾರ್ (Chaitra J Achar) ನಟನೆಯ ‘ಬ್ಲಿಂಕ್’ (Blink)  ಸಿನಿಮಾ ಆಗಂತುಕ ಸಾಂಗ್ ರಿಲೀಸ್ ಆಗಿದೆ. ಚಿತ್ರದ ಫಸ್ಟ್ ಸಾಂಗ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

    ಜನನಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಶ್ರೀಯುತ ರವಿಚಂದ್ರ ಎ ಜೆ ರವರ ನಿರ್ಮಿಸುತ್ತಿರುವ, ಶ್ರೀನಿಧಿ ಬೆಂಗಳೂರು ರವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚೊಚ್ಚಲ ಸಿನಿಮಾ ಚಿತ್ರ ಬ್ಲಿಂಕ್ ಈಗಾಗಲೇ ಎಲ್ಲಾ ಕೆಲಸಗಳನ್ನು ಮುಗಿಸಿ ಬೆಳ್ಳಿಪರದೆಗೆ ಅಬ್ಬರಿಸಲು ಸಜ್ಜಾಗಿದೆ. ಇದನ್ನೂ ಓದಿ:ಚಿಕಿತ್ಸೆಗಾಗಿ ಮತ್ತೆ ಅಮೆರಿಕಾಗೆ ಹಾರಿದ್ರಾ ನಟಿ- ಏನಾಯ್ತು ಸಮಂತಾಗೆ?

    ನಮ್ಮ ಮಣ್ಣಿನ ಪ್ರಖ್ಯಾತ ರ‍್ಯಾಪರ್ ಆದ ಅನೂಪ್ ಇವರು ರಾಪ್ ಭಾಗವನ್ನು ಅತ್ಯುತ್ತಮವಾದ ಸಾಹಿತ್ಯದ ಜೊತೆಗೆ ಅವರ ದನಿಯ ಮೂಲಕ ಮೆರಗು ನೀಡಿದ್ದಾರೆ. ‘ಬ್ಲಿಂಕ್’ ಚಿತ್ರದ ಸಂಗೀತ ನಿರ್ದೇಶಕರಾದ ಪ್ರಸನ್ನ ಕುಮಾರ್ ಎಂ.ಎಸ್ ರವರು ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ. ಕೌಮುದಿಯವರು ಈ ಹಾಡಿಗೆ ದನಿಯಾಗುವ ಮೂಲಕ ಕನ್ನಡ ನಾಡಿನ ಜನತೆಗೆ ಪರಿಚಯವಾಗಿದ್ದಾರೆ.

    ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ದೀಕ್ಷಿತ್ ಶೆಟ್ಟಿ(Dheekshith Shetty), ಚೈತ್ರ ಜೆ ಆಚಾರ್, ಮಂದಾರ ಬಟ್ಟಲಹಳ್ಳಿ, ವಜ್ರಧೀರ್ ಜೈನ್, ಗೋಪಾಲ ಕೃಷ್ಣದೇಶಪಾಂಡೆ, ಕಿರಣ್ ನಾಯ್ಕ್ ಮತ್ತು ಹಲವಾರು ಕಲಾವಿದರ ತಾರಗಣವಿದ್ದು, ಅವಿನಾಶ ಶಾಸ್ತ್ರಿ ಅವರ ಛಾಯಾಗ್ರಹಣ, ಮತ್ತು ಸಂಜೀವ್ ಜಾಗಿರ್ದಾರ್ ರವರ ಸಂಕಲನವಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಾಲ್ ಬಾಗ್ ನಲ್ಲಿ ರಿಲೀಸ್ ಆಯಿತು ಬ್ಲಿಂಕ್ ಚಿತ್ರದ ‘ಆಗಂತುಕ’ ಸಾಂಗ್

    ಲಾಲ್ ಬಾಗ್ ನಲ್ಲಿ ರಿಲೀಸ್ ಆಯಿತು ಬ್ಲಿಂಕ್ ಚಿತ್ರದ ‘ಆಗಂತುಕ’ ಸಾಂಗ್

    ನನಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ರವಿಚಂದ್ರ ಎ ಜೆ ನಿರ್ಮಿಸುತ್ತಿರುವ , ಶ್ರೀನಿಧಿ ಬೆಂಗಳೂರು (Srinidhi Bangalore) ನಿರ್ದೇಶನದ ಚೊಚ್ಚಲ ಸಿನಿಮಾ ‘ಬ್ಲಿಂಕ್’ (Blink). ಈಗಾಗಲೇ ಎಲ್ಲಾ ಕೆಲಸಗಳನ್ನು ಮುಗಿಸಿ ಬೆಳ್ಳಿಪರದೆಗೆ ಬರಲು ಸಿನಿಮಾ ಸಜ್ಜಾಗಿದೆ.

    ಈ ನಿಟ್ಟಿನಲ್ಲಿ ಚಿತ್ರದ ಮೊದಲನೇ ಹಾಡನ್ನು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಇದೀಗ ರಿಲೀಸ್ ಮಾಡಿದೆ. ಇದು  ರಾಪ್ ಶೈಲಿಯ ಹಾಡಾಗಿದ್ದು (Song) ಭಾರತದ ಪಾರಂಪರಿಕ ಸಂಗೀತವನ್ನು ಒಳಗೊಂಡಿದೆ. ಇದನ್ನೂ ಓದಿ:ಅಪ್ಪನ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರೂಪೇಶ್ ಶೆಟ್ಟಿ

    ನಮ್ಮ ಮಣ್ಣಿನ ಪ್ರಖ್ಯಾತ ರಾಪರ್ ಆದ ಅನೂಪ್ ( ಕಾಟಕೊಡು) ರಾಪ್ ಭಾಗವನ್ನು ಅತ್ಯುತ್ತಮವಾದ ಸಾಹಿತ್ಯದ ಜೊತೆಗೆ ಅವರ ದನಿಯ ಮೂಲಕ ಮೆರಗು ನೀಡಿದ್ದಾರೆ. ಬ್ಲಿಂಕ್ ಚಿತ್ರದ ಸಂಗೀತ ನಿರ್ದೇಶಕರಾದ ಪ್ರಸನ್ನ ಕುಮಾರ್ ಎಂ ಎಸ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ. ಕೌಮುದಿಯವರು ಈ ಹಾಡಿಗೆ ದನಿಯಾಗುವ ಮೂಲಕ ಕನ್ನಡ ನಾಡಿನ ಜನತೆಗೆ ಪರಿಚಯವಾಗಲಿದ್ದಾರೆ.

     

    ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ದೀಕ್ಷಿತ್ ಶೆಟ್ಟಿ(Dixit Shetty) , ಚೈತ್ರ ಜೆ ಆಚಾರ್ (Chaitra Achar), ಮಂದಾರ ಬಟ್ಟಲಹಳ್ಳಿ , ವಜ್ರಧೀರ್ ಜೈನ್ , ಗೋಪಾಲ ಕೃಷ್ಣದೇಶಪಾಂಡೆ , ಕಿರಣ್ ನಾಯ್ಕ್ ಮತ್ತು ಹಲವಾರು ಕಲಾವಿದರ  ತಾರಾಗಣದಲ್ಲಿದ್ದು,  ಅವಿನಾಶ ಶಾಸ್ರ್ತಿ ಛಾಯಾಗ್ರಹಣ, ಮತ್ತು  ಸಂಜೀವ್ ಜಾಗಿರ್ದಾರ್ ಸಂಕಲನವಿದೆ., ಆಗಂತುಕ ಶೀರ್ಷಿಕೆಯೊಂದಿಗೆ ಹೊರ ಬರುತ್ತಿರುವ ಈ ಹಾಡು  ಆಗಸ್ಟ್ 15 ರಂದು ಲಾಲ್ ಭಾಗ್ ನಲ್ಲಿ ಪುಷ್ಪ ಪ್ರದರ್ಶನದಲ್ಲಿ ಬಿಡುಗಡೆಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾನಿ ಸಿನಿಮಾದಲ್ಲಿ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ನಟನೆ

    ನಾನಿ ಸಿನಿಮಾದಲ್ಲಿ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ನಟನೆ

    ‘ದಿಯಾ’ (Diya) ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ದೀಕ್ಷಿತ್ ಶೆಟ್ಟಿ (Dixit Shetty) ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಬೆಳ್ಳಿ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ‘ದಿಯಾ’ ಸಿನಿಮಾದಲ್ಲಿ ಸಿಂಪಲ್ ಹುಡುಗನ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದ ದೀಕ್ಷಿತ್ ನ್ಯಾಚುರಲ್ ಸ್ಟಾರ್ ನಾನಿ (Nani) ಅಭಿನಯದ ‘ದಸರಾ’ (Dasara) ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಇದೇ ಮಾರ್ಚ್ 30ರಂದು ‘ದಸರಾ’ ವರ್ಲ್ಡ್ ವೈಡ್ ಬಿಡುಗಡೆಯಾಗುತ್ತಿದ್ದು, ಸೂರಿ ಪಾತ್ರದ ಮೂಲಕ ದೀಕ್ಷಿತ್ ಶೆಟ್ಟಿ ತೆರೆ ಮೇಲೆ ಬರ್ತಿದ್ದಾರೆ.

    ಶ್ರೀಕಾಂತ್ ಒಡೆಲಾ ನಿರ್ದೇಶನದಲ್ಲಿ ನ್ಯಾಚುರಲ್ ಸ್ಟಾರ್ ನಾನಿ, ಕೀರ್ತಿ ಸುರೇಶ್ ಅಭಿನಯದ ‘ದಸರಾ’ ಸಖತ್ ಬಝ್ ಕ್ರಿಯೇಟ್ ಮಾಡಿದೆ. ಟೀಸರ್ ಮೂಲಕ ವರ್ಲ್ಡ್ ವೈಡ್ ಸಖತ್ ಸೌಂಡ್ ಮಾಡಿರುವ ಈ ಚಿತ್ರ ನಾನಿ ಬಹು ನಿರೀಕ್ಷಿತ  ಪ್ಯಾನ್ ಇಂಡಿಯಾ ಪ್ರಾಜೆಕ್ಟ್. ಈ ಚಿತ್ರದಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ ನ್ಯಾಚುರಲ್ ಸ್ಟಾರ್ ಜೊತೆ ಸ್ಕ್ರೀನ್ ಶೇರ್ ಮಾಡಿರೋದು ವಿಶೇಷ. ಇದನ್ನೂ ಓದಿ: Biffes 2023- ಇಂದು ಸಂಜೆ 4.30ಕ್ಕೆ ಬೆಂಗಳೂರು ಚಿತ್ರೋತ್ಸವಕ್ಕೆ ಚಾಲನೆ

    ನಾನಿ ಸರ್ ಪ್ರೊಡಕ್ಷನ್ ಹೌಸ್ ನಡಿ ನಿರ್ಮಾಣವಾದ ‘ಮೀಟ್ ಕ್ಯೂಟ್’ ವೆಬ್ ಸೀರೀಸ್ ನಲ್ಲಿ ನಟಿಸಿದ್ದೆ. ವೆಬ್ ಸೀರೀಸ್ ಸಹ ನಿರ್ದೇಶಕರಾದ ವಿನಯ್ ನನ್ನ ಅಭಿನಯ ನೋಡಿ ದಸರಾ ಸಿನಿಮಾಗೆ ರೆಫರ್ ಮಾಡಿದ್ರು. ನಾನಿ ಸರ್ ಕೂಡ ವೆಬ್ ಸೀರೀಸ್ ನಲ್ಲಿ ನನ್ನ ಅಭಿನಯ ನೋಡಿ ಮೆಚ್ಚಿಕೊಂಡಿದ್ರು ಇದ್ರಿಂದ ದಸರಾ ಸಿನಿಮಾದಲ್ಲಿ ನಟಿಸೋ ಅವಕಾಶ ಸಿಕ್ತು ಎನ್ನುತ್ತಾರೆ ದೀಕ್ಷಿತ್ ಶೆಟ್ಟಿ.

    ಚಿತ್ರದಲ್ಲಿ ಸೂರಿ ಎಂಬ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಇಡೀ ಸಿನಿಮಾದಲ್ಲಿ ಈ ಪಾತ್ರ ಕ್ಯಾರಿಯಾಗುತ್ತೆ. ಹತ್ತು ತಿಂಗಳು ‘ದಸರಾ’ ಸಿನಿಮಾ ತಂಡದೊಂದಿಗೆ ಕೆಲಸ ಮಾಡಿದ್ದೇನೆ. ಈ ಚಿತ್ರ ಅದ್ಭುತ ಅನುಭವ ನೀಡಿದೆ. ನಿರ್ದೇಶಕರ ಜೊತೆಗೆ ನಾನಿ ಸರ್ ಕೂಡ ನನ್ನ ಪಾತ್ರ ನಿರ್ವಹಿಸಲು ಒಂದಿಷ್ಟು ಸಲಹೆ ನೀಡುತ್ತಿದ್ರು ಎಂದು ತಮ್ಮ ಪಾತ್ರ ಹಾಗೂ ‘ದಸರಾ’ ತಂಡದ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ ದೀಕ್ಷಿತ್ ಶೆಟ್ಟಿ.

    ‘ದಿಯಾ’ ನಂತರ ದೀಕ್ಷಿತ್ ಶೆಟ್ಟಿ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದೇ ರೀತಿಯ ಕಥೆ, ಪಾತ್ರಕ್ಕೆ ಸೀಮಿತವಾಗದೇ  ಅಳೆದು ತೂಗಿ ಸಿನಿಮಾವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ‘ಕೆಟಿಎಂ’ ಹಾಗೂ ‘ಬ್ಲಿಂಕ್’ ಸಿನಿಮಾಗಳು ಕನ್ನಡದಲ್ಲಿ ಬಿಡುಗಡೆಗೆ ರೆಡಿಯಾಗಿವೆ.  ಅದಕ್ಕೂ ಮೊದಲು ‘ದಸರಾ’ ಮೂಲಕ ಸೂರಿ ಪಾತ್ರದಲ್ಲಿ ತೆರೆ ಮೇಲೆ ರಂಜಿಸಲು ರೆಡಿಯಾಗಿದ್ದಾರೆ ದೀಕ್ಷಿತ್ ಶೆಟ್ಟಿ.

  • 50 ಜನ ಸೆಲೆಬ್ರೆಟಿಗಳಿಂದ ‘ಕೆಟಿಎಂ’ ಸಿನಿಮಾದ ಟೀಸರ್ ರಿಲೀಸ್

    50 ಜನ ಸೆಲೆಬ್ರೆಟಿಗಳಿಂದ ‘ಕೆಟಿಎಂ’ ಸಿನಿಮಾದ ಟೀಸರ್ ರಿಲೀಸ್

    ದಿಯಾ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ (Dixit Shetty) ನಟನೆಯ ‘ಕೆಟಿಎಂ’ ಸಿನಿಮಾ ಟೀಸರ್ (Teaser) ಬಿಡುಗಡೆಯಾಗಿದೆ. ವಿಶೇಷವಾಗಿ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಎಲ್ಲರ ಗಮನ ಸೆಳೆದಿದೆ. ಸ್ಯಾಂಡಲ್ ವುಡ್ ಅಂಗಳದ 50 ಜನ ಸೆಲೆಬ್ರೆಟಿಗಳು ‘ಕೆಟಿಎಂ’ ಟೀಸರ್ ಬಿಡುಗಡೆ ಮಾಡಿರೋದು ವಿಶೇಷ. ಏಕಕಾಲದಲ್ಲಿ ಐವತ್ತು ಜನ ಸೆಲೆಬ್ರೆಟಿಗಳು ಸೋಶಿಯಲ್ ಮೀಡಿಯಾದಲ್ಲಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

    ‘ಅಥರ್ವ’ ಸಿನಿಮಾ ಖ್ಯಾತಿಯ ಅರುಣ್ (Arun) ನಿರ್ದೇಶನದಲ್ಲಿ ಮೂಡಿ ಬಂದಿರುವ ಎರಡನೇ ಸಿನಿಮಾ ‘ಕೆಟಿಎಂ’. ಚಿತ್ರೀಕರಣ ಕೆಲಸ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿದ್ದು, ಇಂಟ್ರಸ್ಟಿಂಗ್ ಟೀಸರ್ ತುಣುಕನ್ನು ಬಿಡುಗಡೆ ಮಾಡಿದೆ. ವಿಕ್ರಮ್ ರವಿಚಂದ್ರನ್, ಶೃತಿ ಹರಿಹರನ್ (Shruti Hariharan), ವಿಜಯ ರಾಘವೇಂದ್ರ, ದೀಪಿಕಾ ದಾಸ್, ಅನುಪಮಾ ಗೌಡ, ನವೀನ್ ಶಂಕರ್, ಮೇಘಾ ಶೆಟ್ಟಿ, ಸಿದ್ದು ಮೂಲಿಮನಿ, ಖುಷಿ ರವಿ, ಇಶಾನ್, ಶೈನ್ ಶೆಟ್ಟಿ ಸೇರಿದಂತೆ 50 ಸೆಲೆಬ್ರೆಟಿಗಳು ಡಿಜಿಟಲಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಸಾನ್ಯ ಎಲಿಮಿನೇಟ್‌ ಆದಮೇಲೆ ಅವಳ ಬೆಲೆ ರೂಪೇಶ್‌ ಶೆಟ್ಟಿಗೆ ಗೊತ್ತಾಯ್ತು: ದೀಪಿಕಾ ದಾಸ್

    ನವಿರಾದ ಪ್ರೇಮ್ ಕಹಾನಿ ಹೊತ್ತ ‘ಕೆಟಿಎಂ’ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಾಯಕ ನಟನಾಗಿ ನಟಿಸಿದ್ದು, ನಾಲ್ಕು ಶೇಡ್ ನಲ್ಲಿ ತೆರೆ ಮೇಲೆ ಕಾಣಸಿಗಲಿದ್ದಾರೆ. ಕಾಜಲ್ ಕುಂದರ್ ಹಾಗೂ ಸಂಜನಾ ಡೋಸ್ ಚಿತ್ರದಲ್ಲಿ ನಾಯಕಿಯರಾಗಿ ತೆರೆ ಹಂಚಿಕೊಂಡಿದ್ದಾರೆ. ಉಷಾ ಭಂಡಾರಿ, ಪ್ರಕಾಶ್ ತುಮಿನಾಡು, ರಘು ರಮಣಕೊಪ್ಪ, ಶಾನಿಲ್ ಗುರು, ಬಾಬು ಹಿರಿಯಣಯ್ಯ, ದೇವ್ ದೇವಯ್ಯ,ಅಭಿಷೇಕ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತೋಷ್ ಸೇರಿದಂತೆ ಹಲವು  ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ಮಹಾಸಿಂಹ ಮೂವೀಸ್ ಬ್ಯಾನರ್ ನಡಿ ವಿನಯ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನವೀನ್ ಕ್ಯಾಮೆರಾ ವರ್ಕ್, ಚೇತನ್ ಸಂಗೀತ ನಿರ್ದೇಶನ ಕೆಟಿಎಂ ಚಿತ್ರಕ್ಕಿದೆ. ಉಡುಪಿ, ಮಂಗಳೂರು, ಕಾರ್ಕಳ, ಬೆಂಗಳೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೊನೆಯ ಹಂತದಲ್ಲಿರುವ ಚಿತ್ರತಂಡ ಮಾರ್ಚ್ ನಲ್ಲಿ ಸಿನಿಮಾ ತೆರೆಗೆ ತರಲು ಪ್ಲ್ಯಾನ್ ಮಾಡಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸೆಲ್ಫೀಗಾಗಿ ಹಿಂಬಾಲಿಸಿ ನಾಗಿಣಿ ಧಾರಾವಾಹಿಯ ನಟ ದೀಕ್ಷಿತ್ ಶೆಟ್ಟಿ ಮೇಲೆ ಹಲ್ಲೆ

    ಸೆಲ್ಫೀಗಾಗಿ ಹಿಂಬಾಲಿಸಿ ನಾಗಿಣಿ ಧಾರಾವಾಹಿಯ ನಟ ದೀಕ್ಷಿತ್ ಶೆಟ್ಟಿ ಮೇಲೆ ಹಲ್ಲೆ

    ಬೆಂಗಳೂರು: ಖಾಸಗಿ ಚಾನೆಲ್ ನ `ನಾಗಿಣಿ’ ಧಾರಾವಾಹಿಯ ಪ್ರಮುಖ ಪಾತ್ರಧಾರಿ ನಟ ದೀಕ್ಷಿತ್ ಶೆಟ್ಟಿ ಅವರ ಮೇಲೆ ಗುರುವಾರ ವಿಜಯನಗರದ ಮಾರುತಿ ಮಂದಿರದ ಬಳಿ ತಡರಾತ್ರಿ ಹಲ್ಲೆಗೆ ಯತ್ನ ನಡೆಸಿದ್ದಾರೆ.

    ಪಲ್ಸರ್ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಸೆಲ್ಫೀಗಾಗಿ ದಿಕ್ಷೀತ್ ಕಾರನ್ನು ಹಿಂಬಾಲಿಸಿದ್ದಾರೆ. ದೀಕ್ಷಿತ್ ಸೆಲ್ಫೀ ನೀಡಲು ನಿರಾಕರಿಸಿದ್ದಕ್ಕೆ ಕುಡಿದ ಅಮಲಿನಲ್ಲಿ ನಟನನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಕಾರಿನ ಗ್ಲಾಸ್ ಪುಡಿ ಪುಡಿ ಮಾಡಿದ್ದಾರೆ.

    ಈ ಸಂಬಂಧ ದೀಕ್ಷಿತ್ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ದುಷ್ಕರ್ಮಿಗಳ ಪತ್ತೆಗಾಗಿ ವಿಶೇಷ ಜಾಲ ಬೀಸಿದ್ದಾರೆ.

    ಇತ್ತೀಚೆಗೆ ದೀಕ್ಷಿತ್ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ವಿನ್ನರ್ ಆಗಿದ್ದರು.

    https://youtu.be/MQUuTAhBuHs