Tag: ದೀಪಕ್

  • Photo Album: ನಟಿ ದೀಪಿಕಾ ದಾಸ್ ಆರತಕ್ಷತೆ

    Photo Album: ನಟಿ ದೀಪಿಕಾ ದಾಸ್ ಆರತಕ್ಷತೆ

    ದುವೆ ಸುದ್ದಿಯನ್ನು ಹಂಚಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದರು ‘ಬಿಗ್ ಬಾಸ್’ ಬೆಡಗಿ ದೀಪಿಕಾ ದಾಸ್. ಇದೀಗ ಬೆಂಗಳೂರಿನ ರೆಸಾರ್ಟ್‌ವೊಂದರಲ್ಲಿ ಆರತಕ್ಷತೆ ಮತ್ತು ಬೀಗರೂಟ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ದೀಪಿಕಾ ದಾಸ್ (Deepika Das) ದಂಪತಿ ಶುಭಹಾರೈಸಲು ಸ್ಯಾಂಡಲ್‌ವುಡ್ ನಟ-ನಟಿಯರು ಭಾಗಿಯಾಗಿದ್ದಾರೆ.

    ಮಾರ್ಚ್ 10ರಂದು ಮಧ್ಯಾಹ್ನ 12.30ಕ್ಕೆ ಆರತಕ್ಷತೆ ಕಾರ್ಯಕ್ರಮ ಜರುಗಿದ್ದು, ಬಿಗ್ ಬಾಸ್ ಖ್ಯಾತಿ ದಿವ್ಯಾ ಉರುಡುಗ (Divya Uruduga), ಪ್ರಶಾಂತ್ ಸಂಬರಗಿ, ನೀತು ವನಜಾಕ್ಷಿ, ಅನುಪಮಾ ಗೌಡ, ಚಂದನಾ ಅನಂತಕೃಷ್ಣ, ಪ್ರಿಯಾಂಕಾ, ಪನ್ನಗ ಭರಣ, ಕಿಶನ್, ಸಿಂಗರ್ ವಾಸುಕಿ ವೈಭವ್ (Vasuki Vaibhav) ಸೇರಿದಂತೆ ಅನೇಕರು ಮದುವೆ ಆರತಕ್ಷತೆಯಲ್ಲಿ ಭಾಗಿಯಾಗಿ ವಿಶ್ ಮಾಡಿದ್ದಾರೆ.‌

    ಅದಷ್ಟೇ ಅಲ್ಲ, ಸ್ನೇಹಿತೆ ದೀಪಿಕಾ ದಾಸ್ ‘ಇನ್ನೂನು ಬೇಕಾಗಿದೆ ಒಲವು’ ಎಂಬ ಸಾಂಗ್ ಹಾಡಿ ನವ ಜೋಡಿಗೆ ವಿಶೇಷವಾಗಿ ಶುಭಕೋರಿದ್ದಾರೆ ವಾಸುಕಿ ವೈಭವ್. ವಾಸುಕಿ-ದೀಪಿಕಾ ಸ್ನೇಹ ಇದೀಗ ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ.

    ಮಾರ್ಚ್ 1ರಂದು ದೀಪಿಕಾ ಮದುವೆಯ ಸುಂದರ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಫ್ಯಾನ್ಸ್ಗೆ ಅಚ್ಚರಿ ಮೂಡಿಸಿದ್ದರು. ಜೊತೆಗೆ ಹುಡುಗನ ಬಗ್ಗೆ ಯಾವುದೇ ಮಾಹಿತಿಯನ್ನೂ ಅವರು ಹಂಚಿಕೊಂಡಿರಲಿಲ್ಲ. ಮೊನ್ನೆಯಷ್ಟೇ ತನ್ನ ಕರಿಮಣಿ ಮಾಲೀಕನನ್ನು ನಟಿ ಪರಿಚಯಿಸಿದ್ದರು. ಪತಿಯ ಹೆಸರು ದೀಪಕ್ (Deepak) ಎಂದು ರಿವೀಲ್ ಮಾಡಿ ತಮ್ಮ ಮದುವೆಯ ಬಗ್ಗೆ ನಟಿ ಸಂತಸ ವ್ಯಕ್ತಪಡಿಸಿದ್ದರು.

    ಪದ್ಧತಿಯ ಬದ್ಧವಾಗಿ, ಡೆಸ್ಟಿನೇಷನ್ ವೆಡ್ಡಿಂಗ್ ಪ್ಲ್ಯಾನ್ ನನ್ನ ಕನಸಾಗಿತ್ತು. ಇದೀಗ ಅದು ಈಡೇರಿದೆ ಎಂದು ನಟಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದರು. ದಿಢೀರ್ ಅಂತ ಆಗಿದ ಮದುವೆ ಅಲ್ಲ. ಈ ಮದುವೆಗೆ ಹಲವು ದಿನಗಳಿಂದ ಪ್ಲ್ಯಾನ್ ಮಾಡಲಾಗಿತ್ತು. ಸರ್ಪ್ರೈಸ್ ಕೂಡ ಸ್ವೀಟ್ ಆಗಿದೆ. ನನಗೆ ನನ್ನ ಬಾಳ ಸಂಗಾತಿ ಸಿಕ್ಕಿದ್ದು, ಪಕ್ಕಾ ದೇಸಿ. ದಯವಿಟ್ಟು ನಮ್ಮ ಗೌಪ್ಯತೆಯನ್ನು ಗೌರವಿಸಿ ಎಂದು ದೀಪಿಕಾ ದಾಸ್ ಮನವಿ ಮಾಡಿದ್ದರು.

     

    ‘ನಾಗಿಣಿ’ (Nagini) ಸೀರಿಯಲ್ ಬಿಗ್ ಬಾಸ್ ಸೀಸನ್ 7ರ (Bigg Boss Kannada 7) ಮೂಲಕ ಮೋಡಿ ಮಾಡಿರುವ ನಟಿ ದೀಪಿಕಾ ದಾಸ್ ಅವರು ಗೋವಾದಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಆಗಿದ್ದಾರೆ. ಗೋವಾದ ಕಡಲ ತೀರದಲ್ಲಿ ಬೆಂಗಳೂರಿನ ಉದ್ಯಮಿ ದೀಪಕ್‌ರನ್ನು ನಟಿ ಮದುವೆ ಆಗಿದ್ದಾರೆ. ಮಾರ್ಚ್ 1ರಂದು ನಡೆದ ದೀಪಿಕಾ ಮದುವೆಯಲ್ಲಿ ಎರಡು ಕುಟುಂಬದ ಸದಸ್ಯರು, ಆಪ್ತರಷ್ಟೇ ಭಾಗಿಯಾಗಿದ್ದರು.

  • ದೀಪಕ್‌ರನ್ನು ಮೊದಲು ಭೇಟಿಯಾಗಿದ್ದು ಎಲ್ಲಿ? ಲವ್ ಸ್ಟೋರಿ ಬಿಚ್ಚಿಟ್ಟ ದೀಪಿಕಾ ದಾಸ್

    ದೀಪಕ್‌ರನ್ನು ಮೊದಲು ಭೇಟಿಯಾಗಿದ್ದು ಎಲ್ಲಿ? ಲವ್ ಸ್ಟೋರಿ ಬಿಚ್ಚಿಟ್ಟ ದೀಪಿಕಾ ದಾಸ್

    ‘ಬಿಗ್ ಬಾಸ್’ (Bigg Boss Kannada 7) ಬೆಡಗಿ ದೀಪಿಕಾ ದಾಸ್ (Deepika Das) ಸೀಕ್ರೆಟ್ ಆಗಿ ಮದುವೆಯಾಗುವ ಮೂಲಕ ಪಡ್ಡೆಹುಡುಗರಿಗೆ ಶಾಕ್ ಕೊಟ್ಟಿದ್ದರು. ಇದೀಗ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಆರತಕ್ಷತೆ ಮತ್ತು ಬೀಗರೂಟ ಕಾರ್ಯಕ್ರಮ ಜರುಗಿದೆ. ಈ ವೇಳೆ, ಪತಿ ದೀಪಕ್‌ರನ್ನು ಮೊದಲು ಭೇಟಿಯಾಗಿದ್ದು ಎಲ್ಲಿ? ಲವ್ ಸ್ಟೋರಿ ಹೇಗೆ ಶುರುವಾಯ್ತು ಎಂದು ನಟಿ ಸುದ್ದಿಗೋಷ್ಠಿಯಲ್ಲಿ ರಿವೀಲ್ ಮಾಡಿದ್ದಾರೆ.

    ದೀಪಿಕಾ ದಾಸ್‌ಗೆ ಗೋವಾದಲ್ಲೇ ಮದುವೆಯಾಗುವ ಕನಸು ಇತ್ತಂತೆ. ಹೀಗಾಗಿ ಕೇವಲ ಕುಟುಂಬಸ್ಥರ ಸಮ್ಮುಖದಲ್ಲಿ ನಟಿ ದೀಪಿಕಾ ದಾಸ್ ಉದ್ಯಮಿ ದೀಪಕ್ ಎಂಬುವವರ ಜೊತೆ ಮಾರ್ಚ್ 1ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದನ್ನೂ ಓದಿ:ಅದ್ಧೂರಿಯಾಗಿ ನಡೆಯಿತು ದೀಪಿಕಾ ದಾಸ್ ಆರತಕ್ಷತೆ- ಶುಭಹಾರೈಸಿದ ಸೆಲೆಬ್ರಿಟಿಗಳು

    ದೀಪಕ್ ಅವರ ಮೇಲೆ ನಿಮಗೆ ಲವ್ ಆಗಿದ್ದು ಹೇಗೆ ಎಂಬ ಪ್ರಶ್ನೆಗೆ ನಟಿ ದೀಪಿಕಾ ದಾಸ್ ಮನಬಿಚ್ಚಿ ಮಾತನಾಡಿದ್ದಾರೆ. ದೀಪಕ್ ಮತ್ತು ನಾನು ನಾಲ್ಕು ವರ್ಷದ ಸ್ನೇಹಿತರು. 4 ವರ್ಷಗಳ ಕಾರ್ಯಕ್ರಮವೊಂದರಲ್ಲಿ ಭೇಟಿಯಾದೆವು. ಕಳೆದ ಒಂದು ವರ್ಷದಿಂದ ರಿಲೇಷನ್‌ಶಿಪ್‌ನಲ್ಲಿ ಇದ್ವಿ. ಕುಟುಂಬಸ್ಥರು ಕೂಡ ನಮ್ಮ ಪ್ರೀತಿಗೆ ಓಕೆ ಎಂದರು.

    ದೀಪಕ್ (Deepika Das) ಅವರಿಗೆ ಚಿತ್ರರಂಗಕ್ಕೂ ನಂಟಿಲ್ಲ. ಅವರು ಉದ್ಯಮಿ. ಮುಂದಿನ ದಿನಗಳಲ್ಲಿ ಪ್ರೊಡಕ್ಷನ್ ಹೌಸ್ ಮಾಡುವ ಮೂಲಕ ಚಿತ್ರರಂಗಕ್ಕೆ ಕರೆತರುವ ಯೋಜನೆ ಇದೆ. ಅವರು ಜಾಸ್ತಿ ಮಾತಾಡೋದಿಲ್ಲ. ನಾನೇ ಕಮ್ಮಿ ಮಾತಾಡುತ್ತೇನೆ ಅಂದುಕೊಂಡಿದ್ದೆ, ಆದರೆ ನನಗಿಂತ ಕಮ್ಮಿ ಮಾತಾಡುವ ಹುಡುಗ ನನಗೆ ಸಿಕ್ಕಿದ್ದಾರೆ. ನಾನು ಮದುವೆಯಾಗುವ ಹುಡುಗ ಹೀಗೆ ಇರಬೇಕು, ಹಾಗೇ ಇರಬೇಕು ಅಂತಾ ಅಂದುಕೊಂಡಿರಲಿಲ್ಲ. ಆದರೆ ನಾನು ಪ್ರೀತಿ ಅಂತಾ ಹುಡುಕಿಕೊಂಡು ಹೋಗಿಲ್ಲ. ನನ್ನ ಮದುವೆಯಾಗುವ ಹುಡುಗ ಮನಸ್ಸು ಚೆನ್ನಾಗಿರಬೇಕು, ನನ್ನ ಚೆನ್ನಾಗಿ ನೋಡಿಕೊಳ್ಳುವವನಾಗಿರಬೇಕು, ನನಗೆ ಟೈಮ್ ಕೊಡುವವನಾಗಿರಬೇಕು ಜೊತೆಗೆ ದೇಶ ಸುತ್ತುವವನಾಗಿರಬೇಕು ಅಂತಾ ಈ ಹಿಂದೆ ಹೇಳಿದ್ದೆ. ಅದೇ ರೀತಿ ನಾನು ಅಂದುಕೊಂಡ ಹಾಗೇ ನನಗೆ ನನ್ನ ಸಂಗಾತಿ ಸಿಕ್ಕಿದ್ದಾರೆ ಅಂತಾ ಹೇಳಿಕೊಂಡಿದ್ದಾರೆ.

    ಬಳಿಕ ದೀಪಿಕಾ ದಾಸ್ ಪತಿ ದೀಪಕ್ ಮಾತನಾಡಿ, ನಾನು ದುಬೈ ಮೂಲದವನು ಅಲ್ಲ. ಇದೆ ಬೆಂಗಳೂರಿನ ಆರ್‌ಆರ್ ನಗರದವನು. ರಿಯಲ್ ಎಸ್ಟೇಟ್ ಜೊತೆ ದುಬೈನಲ್ಲಿ ಒಂದು ಐಟಿ ಕಂಪನಿ ಇದೆ. ದೀಪಿಕಾ ನನಗೆ ನಾಲ್ಕು ವರ್ಷಗಳಿಂದ ಗೊತ್ತು. ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದೆವು. ಇಷ್ಟು ದಿನ ಹೇಗೆಲ್ಲಾ ದೀಪಿಕಾಗೆ ಬೆಂಬಲಿಸಿದ್ರೋ ಮುಂದಿನ ದಿನಗಳಲ್ಲಿ ಕೂಡ ಅವಳಿಗೆ ಸಪೋರ್ಟ್ ಮಾಡಿ ಎಂದು ದೀಪಕ್ ಮನವಿ ಮಾಡಿದ್ದಾರೆ.

    ಮಾರ್ಚ್ 10ರಂದು ಮಧ್ಯಾಹ್ನ 12.30ಕ್ಕೆ ಆರತಕ್ಷತೆ ಕಾರ್ಯಕ್ರಮ ಜರುಗಿದ್ದು, ಬಿಗ್ ಬಾಸ್ ಖ್ಯಾತಿ ದಿವ್ಯಾ ಉರುಡುಗ, ಪ್ರಶಾಂತ್ ಸಂಬರಗಿ, ನೀತು ವನಜಾಕ್ಷಿ, ಅನುಪಮಾ ಗೌಡ, ಚಂದನಾ ಅನಂತಕೃಷ್ಣ, ಪ್ರಿಯಾಂಕಾ, ಪನ್ನಗ ಭರಣ, ಕಿಶನ್, ಸಿಂಗರ್ ವಾಸುಕಿ ವೈಭವ್ ಸೇರಿದಂತೆ ಅನೇಕರು ಮದುವೆ ಆರತಕ್ಷತೆಯಲ್ಲಿ ಭಾಗಿಯಾಗಿ ವಿಶ್ ಮಾಡಿದ್ದಾರೆ.

    ಅದಷ್ಟೇ ಅಲ್ಲ, ಸ್ನೇಹಿತೆ ದೀಪಿಕಾ ದಾಸ್ ‘ಇನ್ನೂನು ಬೇಕಾಗಿದೆ ಒಲವು’ ಎಂಬ ಸಾಂಗ್ ಹಾಡಿ ನವ ಜೋಡಿಗೆ ವಿಶೇಷವಾಗಿ ಶುಭಕೋರಿದ್ದಾರೆ ವಾಸುಕಿ ವೈಭವ್. ವಾಸುಕಿ-ದೀಪಿಕಾ ಸ್ನೇಹ ಇದೀಗ ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ.

    ಮಾರ್ಚ್ 1ರಂದು ದೀಪಿಕಾ ಮದುವೆಯ ಸುಂದರ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಅಚ್ಚರಿ ಮೂಡಿಸಿದ್ದರು. ಜೊತೆಗೆ ಹುಡುಗನ ಬಗ್ಗೆ ಯಾವುದೇ ಮಾಹಿತಿಯನ್ನೂ ಅವರು ಹಂಚಿಕೊಂಡಿರಲಿಲ್ಲ. ಮೊನ್ನೆಯಷ್ಟೇ ತನ್ನ ಕರಿಮಣಿ ಮಾಲೀಕನನ್ನು ನಟಿ ಪರಿಚಯಿಸಿದ್ದರು. ಪತಿಯ ಹೆಸರು ದೀಪಕ್ ಎಂದು ರಿವೀಲ್ ಮಾಡಿ ತಮ್ಮ ಮದುವೆಯ ಬಗ್ಗೆ ನಟಿ ಸಂತಸ ವ್ಯಕ್ತಪಡಿಸಿದ್ದರು.

    ಪದ್ಧತಿಯ ಬದ್ಧವಾಗಿ, ಡೆಸ್ಟಿನೇಷನ್ ವೆಡ್ಡಿಂಗ್ ಪ್ಲ್ಯಾನ್ ನನ್ನ ಕನಸಾಗಿತ್ತು. ಇದೀಗ ಅದು ಈಡೇರಿದೆ ಎಂದು ನಟಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದರು. ದಿಢೀರ್ ಅಂತ ಆಗಿದ ಮದುವೆ ಅಲ್ಲ. ಈ ಮದುವೆಗೆ ಹಲವು ದಿನಗಳಿಂದ ಪ್ಲ್ಯಾನ್ ಮಾಡಲಾಗಿತ್ತು. ಸರ್ಪ್ರೈಸ್ ಕೂಡ ಸ್ವೀಟ್ ಆಗಿದೆ. ನನಗೆ ನನ್ನ ಬಾಳ ಸಂಗಾತಿ ಸಿಕ್ಕಿದ್ದು, ಪಕ್ಕಾ ದೇಸಿ. ದಯವಿಟ್ಟು ನಮ್ಮ ಗೌಪ್ಯತೆಯನ್ನು ಗೌರವಿಸಿ ಎಂದು ದೀಪಿಕಾ ದಾಸ್ ಮನವಿ ಮಾಡಿದ್ದರು.

    ನಾಗಿಣಿ ಸೀರಿಯಲ್ ಬಿಗ್ ಬಾಸ್ ಸೀಸನ್ 7ರ ಮೂಲಕ ಮೋಡಿ ಮಾಡಿರುವ ನಟಿ ದೀಪಿಕಾ ದಾಸ್ ಅವರು ಗೋವಾದಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಆಗಿದ್ದಾರೆ. ಗೋವಾದ ಕಡಲ ತೀರದಲ್ಲಿ ಬೆಂಗಳೂರಿನ ಉದ್ಯಮಿ ದೀಪಕ್‌ರನ್ನು ನಟಿ ಮದುವೆ ಆಗಿದ್ದಾರೆ. ಮಾರ್ಚ್ 1ರಂದು ನಡೆದ ದೀಪಿಕಾ ಮದುವೆಯಲ್ಲಿ ಎರಡು ಕುಟುಂಬದ ಸದಸ್ಯರು, ಆಪ್ತರಷ್ಟೇ ಭಾಗಿಯಾಗಿದ್ದಾರೆ.

  • ಅದ್ಧೂರಿಯಾಗಿ ನಡೆಯಿತು ದೀಪಿಕಾ ದಾಸ್ ಆರತಕ್ಷತೆ- ಶುಭಹಾರೈಸಿದ ಸೆಲೆಬ್ರಿಟಿಗಳು

    ಅದ್ಧೂರಿಯಾಗಿ ನಡೆಯಿತು ದೀಪಿಕಾ ದಾಸ್ ಆರತಕ್ಷತೆ- ಶುಭಹಾರೈಸಿದ ಸೆಲೆಬ್ರಿಟಿಗಳು

    ದುವೆ ಸುದ್ದಿಯನ್ನು ಹಂಚಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದರು ‘ಬಿಗ್ ಬಾಸ್’ ಬೆಡಗಿ ದೀಪಿಕಾ ದಾಸ್. ಇದೀಗ ಬೆಂಗಳೂರಿನ ರೆಸಾರ್ಟ್‌ವೊಂದರಲ್ಲಿ ಆರತಕ್ಷತೆ ಮತ್ತು ಬೀಗರೂಟ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ದೀಪಿಕಾ ದಾಸ್ (Deepika Das) ದಂಪತಿ ಶುಭಹಾರೈಸಲು ಸ್ಯಾಂಡಲ್‌ವುಡ್ ನಟ-ನಟಿಯರು ಭಾಗಿಯಾಗಿದ್ದಾರೆ.

    ಮಾರ್ಚ್ 10ರಂದು ಮಧ್ಯಾಹ್ನ 12.30ಕ್ಕೆ ಆರತಕ್ಷತೆ ಕಾರ್ಯಕ್ರಮ ಜರುಗಿದ್ದು, ಬಿಗ್ ಬಾಸ್ ಖ್ಯಾತಿ ದಿವ್ಯಾ ಉರುಡುಗ (Divya Uruduga), ಪ್ರಶಾಂತ್ ಸಂಬರಗಿ, ನೀತು ವನಜಾಕ್ಷಿ, ಅನುಪಮಾ ಗೌಡ, ಚಂದನಾ ಅನಂತಕೃಷ್ಣ, ಪ್ರಿಯಾಂಕಾ, ಪನ್ನಗ ಭರಣ, ಕಿಶನ್, ಸಿಂಗರ್ ವಾಸುಕಿ ವೈಭವ್ (Vasuki Vaibhav) ಸೇರಿದಂತೆ ಅನೇಕರು ಮದುವೆ ಆರತಕ್ಷತೆಯಲ್ಲಿ ಭಾಗಿಯಾಗಿ ವಿಶ್ ಮಾಡಿದ್ದಾರೆ.‌ ಇದನ್ನೂ ಓದಿ:ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ನಯನತಾರಾ

    ಅದಷ್ಟೇ ಅಲ್ಲ, ಸ್ನೇಹಿತೆ ದೀಪಿಕಾ ದಾಸ್ ‘ಇನ್ನೂನು ಬೇಕಾಗಿದೆ ಒಲವು’ ಎಂಬ ಸಾಂಗ್ ಹಾಡಿ ನವ ಜೋಡಿಗೆ ವಿಶೇಷವಾಗಿ ಶುಭಕೋರಿದ್ದಾರೆ ವಾಸುಕಿ ವೈಭವ್. ವಾಸುಕಿ-ದೀಪಿಕಾ ಸ್ನೇಹ ಇದೀಗ ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ.

    ಮಾರ್ಚ್ 1ರಂದು ದೀಪಿಕಾ ಮದುವೆಯ ಸುಂದರ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಫ್ಯಾನ್ಸ್ಗೆ ಅಚ್ಚರಿ ಮೂಡಿಸಿದ್ದರು. ಜೊತೆಗೆ ಹುಡುಗನ ಬಗ್ಗೆ ಯಾವುದೇ ಮಾಹಿತಿಯನ್ನೂ ಅವರು ಹಂಚಿಕೊಂಡಿರಲಿಲ್ಲ. ಮೊನ್ನೆಯಷ್ಟೇ ತನ್ನ ಕರಿಮಣಿ ಮಾಲೀಕನನ್ನು ನಟಿ ಪರಿಚಯಿಸಿದ್ದರು. ಪತಿಯ ಹೆಸರು ದೀಪಕ್ (Deepak) ಎಂದು ರಿವೀಲ್ ಮಾಡಿ ತಮ್ಮ ಮದುವೆಯ ಬಗ್ಗೆ ನಟಿ ಸಂತಸ ವ್ಯಕ್ತಪಡಿಸಿದ್ದರು.

    ಪದ್ಧತಿಯ ಬದ್ಧವಾಗಿ, ಡೆಸ್ಟಿನೇಷನ್ ವೆಡ್ಡಿಂಗ್ ಪ್ಲ್ಯಾನ್ ನನ್ನ ಕನಸಾಗಿತ್ತು. ಇದೀಗ ಅದು ಈಡೇರಿದೆ ಎಂದು ನಟಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದರು. ದಿಢೀರ್ ಅಂತ ಆಗಿದ ಮದುವೆ ಅಲ್ಲ. ಈ ಮದುವೆಗೆ ಹಲವು ದಿನಗಳಿಂದ ಪ್ಲ್ಯಾನ್ ಮಾಡಲಾಗಿತ್ತು. ಸರ್ಪ್ರೈಸ್ ಕೂಡ ಸ್ವೀಟ್ ಆಗಿದೆ. ನನಗೆ ನನ್ನ ಬಾಳ ಸಂಗಾತಿ ಸಿಕ್ಕಿದ್ದು, ಪಕ್ಕಾ ದೇಸಿ. ದಯವಿಟ್ಟು ನಮ್ಮ ಗೌಪ್ಯತೆಯನ್ನು ಗೌರವಿಸಿ ಎಂದು ದೀಪಿಕಾ ದಾಸ್ ಮನವಿ ಮಾಡಿದ್ದರು.

    ‘ನಾಗಿಣಿ’ (Nagini) ಸೀರಿಯಲ್ ಬಿಗ್ ಬಾಸ್ ಸೀಸನ್ 7ರ (Bigg Boss Kannada 7) ಮೂಲಕ ಮೋಡಿ ಮಾಡಿರುವ ನಟಿ ದೀಪಿಕಾ ದಾಸ್ ಅವರು ಗೋವಾದಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಆಗಿದ್ದಾರೆ. ಗೋವಾದ ಕಡಲ ತೀರದಲ್ಲಿ ಬೆಂಗಳೂರಿನ ಉದ್ಯಮಿ ದೀಪಕ್‌ರನ್ನು ನಟಿ ಮದುವೆ ಆಗಿದ್ದಾರೆ. ಮಾರ್ಚ್ 1ರಂದು ನಡೆದ ದೀಪಿಕಾ ಮದುವೆಯಲ್ಲಿ ಎರಡು ಕುಟುಂಬದ ಸದಸ್ಯರು, ಆಪ್ತರಷ್ಟೇ ಭಾಗಿಯಾಗಿದ್ದರು.

  • ನಾಳೆ ನಟಿ ದೀಪಿಕಾ ದಾಸ್ ಆರತಕ್ಷತೆ, ಬೀಗರೂಟ: ಆಪ್ತರಿಗೆ ಆಹ್ವಾನ

    ನಾಳೆ ನಟಿ ದೀಪಿಕಾ ದಾಸ್ ಆರತಕ್ಷತೆ, ಬೀಗರೂಟ: ಆಪ್ತರಿಗೆ ಆಹ್ವಾನ

    ಮಾರ್ಚ್ 1 ರಂದು ಮದುವೆ ಸುದ್ದಿಯನ್ನು ಹಂಚಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದರು ನಾಗಿಣಿ ಖ್ಯಾತಿಯ ನಟಿ ದೀಪಿಕಾ ದಾಸ್ (Deepika Das). ಮದುವೆ ಸ್ಥಳ, ಭಾಗಿಯಾದವರು ಯಾರೆಲ್ಲ, ಕನ್ನಡದ ಯಾವ ನಟ ನಟಿಯರು ಇವರ ಮದುವೆಯಲ್ಲಿ ಭಾಗಿಯಾಗಿದ್ದರು ಇತ್ಯಾದಿ ವಿಷಯ ಗೌಪ್ಯವಾಗಿಯೇ ಉಳಿದಿತ್ತು. ಗುಪ್ತವಾಗಿಯೇ ಮದುವೆ ಆಗಿದ್ದ ದೀಪಿಕಾ ದಾಸ್, ಆರತಕ್ಷತೆ ಮಾಡಿಕೊಳ್ಳುವುದಿಲ್ಲವಾ ಎನ್ನುವ ಪ್ರಶ್ನೆಯನ್ನೇ ಅಭಿಮಾನಿಗಳು  ಕೇಳಿದ್ದರು. ಇದೀಗ ಆಪ್ತರಿಗಾಗಿ ಆರತಕ್ಷತೆಯನ್ನು ಏರ್ಪಡಿಸಲಾಗಿದೆ.

    ನಾಳೆ (ಮಾ.10) ರಂದು ಬೆಂಗಳೂರು ರೆಸಾರ್ಟ್ ವೊಂದರಲ್ಲಿ ಆರತಕ್ಷತೆ (Reception) ಮತ್ತು ಬೀಗರೂಟವನ್ನು ದೀಪಿಕಾ ಆಯೋಜನೆ ಮಾಡಿದ್ದಾರೆ. ತಮ್ಮ ಆಪ್ತರಿಗೆ ಹಾಗೂ ಸಿನಿಮಾ ಮತ್ತು ಕಿರುತೆರೆಯ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಿದ್ದಾರೆ. ನಾಳೆ ಮಧ್ಯಾಹ್ನ 12.30ಕ್ಕೆ ಆರತಕ್ಷತೆ ಕಾರ್ಯಕ್ರಮ ನೆರವೇರಲಿದೆ.

    ದೀಪಿಕಾ ಮದುವೆಯ (Wedding) ಸುಂದರ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಅಚ್ಚರಿ ಮೂಡಿಸಿದ್ದರು. ಜೊತೆಗೆ ಹುಡುಗನ ಬಗ್ಗೆ ಯಾವುದೇ ಮಾಹಿತಿಯನ್ನೂ ಅವರು ಹಂಚಿಕೊಂಡಿರಲಿಲ್ಲ. ಮೊನ್ನೆಯಷ್ಟೇ ತನ್ನ ಕರಿಮಣಿ ಮಾಲೀಕನನ್ನು ನಟಿ ಪರಿಚಯಿಸಿದ್ದರು. ಪತಿಯ ಹೆಸರು ದೀಪಕ್ (Deepak) ಎಂದು ರಿವೀಲ್ ಮಾಡಿ ತಮ್ಮ ಮದುವೆಯ ಬಗ್ಗೆ ನಟಿ ಸಂತಸ ವ್ಯಕ್ತಪಡಿಸಿದ್ದರು.

    ಪದ್ಧತಿಯ ಬದ್ಧವಾಗಿ, ಡೆಸ್ಟಿನೇಷನ್ ವೆಡ್ಡಿಂಗ್ ಪ್ಲ್ಯಾನ್ ನನ್ನ ಕನಸಾಗಿತ್ತು. ಇದೀಗ ಅದು ಈಡೇರಿದೆ ಎಂದು ನಟಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದರು. ದಿಢೀರ್ ಅಂತ ಆಗಿದ ಮದುವೆ ಅಲ್ಲ. ಈ ಮದುವೆಗೆ ಹಲವು ದಿನಗಳಿಂದ ಪ್ಲ್ಯಾನ್ ಮಾಡಲಾಗಿತ್ತು. ಸರ್ಪ್ರೈಸ್‌ ಕೂಡ ಸ್ವೀಟ್ ಆಗಿದೆ. ನನಗೆ ನನ್ನ ಬಾಳ ಸಂಗಾತಿ ಸಿಕ್ಕಿದ್ದು, ಪಕ್ಕಾ ದೇಸಿ. ದಯವಿಟ್ಟು ನಮ್ಮ ಗೌಪ್ಯತೆಯನ್ನು ಗೌರವಿಸಿ’ ಎಂದು ದೀಪಿಕಾ ದಾಸ್ ಮನವಿ ಮಾಡಿದ್ದರು.

     

    ʻನಾಗಿಣಿ’ ಸೀರಿಯಲ್ ಬಿಗ್ ಬಾಸ್ ಸೀಸನ್ 7ರ ಮೂಲಕ ಮೋಡಿ ಮಾಡಿರುವ ನಟಿ ದೀಪಿಕಾ ದಾಸ್ ಅವರು ಗೋವಾದಲ್ಲಿ (Goa) ಡೆಸ್ಟಿನೇಷನ್ ವೆಡ್ಡಿಂಗ್ ಆಗಿದ್ದಾರೆ. ಗೋವಾದ ಕಡಲ ತೀರದಲ್ಲಿ ಕರ್ನಾಟಕ ಮೂಲದ ದುಬೈ ಉದ್ಯಮಿ ದೀಪಕ್‌ರನ್ನು ನಟಿ ಮದುವೆ ಆಗಿದ್ದಾರೆ. ಮಾರ್ಚ್ 1ರಂದು ನಡೆದ ದೀಪಿಕಾ ಮದುವೆಯಲ್ಲಿ ಎರಡು ಕುಟುಂಬದ ಸದಸ್ಯರು, ಆಪ್ತರಷ್ಟೇ ಭಾಗಿದ್ದರು.

  • ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಶಿಷ್ಯ’ ದೀಪಕ್

    ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಶಿಷ್ಯ’ ದೀಪಕ್

    ‘ಶಿಷ್ಯ’ (Shishya Film) ಚಿತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ದೀಪಕ್, ಫ್ಯಾಷನ್ ಡಿಸೈನರ್ ಬೃಂದಾ (Brunda Gowda) ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ನವಜೋಡಿಗೆ ಆಪ್ತರು, ಗಣ್ಯರು, ಅಭಿಮಾನಿಗಳು ಶುಭಕೋರಿದ್ದಾರೆ.

    ಇತ್ತೀಚೆಗೆ ಬೃಂದಾ ಜೊತೆ ದೀಪಕ್ (Actor Deepak) ಸರಳವಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೀಗ ಬೆಂಗಳೂರಿನಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ದೀಪಕ್-ಬೃಂದಾ ಮದುವೆಯಾಗಿದ್ದಾರೆ. ಇದು ಗುರುಹಿರಿಯರು ಸಮ್ಮತಿಸಿದ ಅರೇಂಜ್ ಮ್ಯಾರೇಜ್ ಆಗಿದೆ.

    ದೀಪಕ್-ಬೃಂದಾ ಮದುವೆ ಆರತಕ್ಷತೆಗೆ ಹೆಚ್.ಡಿ ಕುಮಾರಸ್ವಾಮಿ, ಪ್ರಜ್ವಲ್ ದೇವರಾಜ್ ಸೇರಿದಂತೆ ಅನೇಕರು ಭಾಗವಹಿಸಿ ನವಜೋಡಿಗೆ ಶುಭಕೋರಿದ್ದರು. ಇದನ್ನೂ ಓದಿ:‘ಯುವರಾಜ’ ನಿಖಿಲ್ ಹುಡುಕಿಕೊಂಡು ಸೆಟ್‌ಗೆ ಬಂದ ‘ಭೀಮ’

    ಮಾಗಡಿ, ಬೆಳ್ಳಿ, 18ನೇ ಕ್ರಾಸ್, ಏಕ್ ಲವ್ ಯಾ, ವಿಲನ್, ಶಿಷ್ಯ ಸೇರಿದಂತೆ ಹಲವು ಸಿನಿಮಾಗಳಲ್ಲಿ ದೀಪಕ್ ನಟಿಸಿದ್ದಾರೆ. ನಟನಾಗಿ ಮತ್ತು ಖಳನಾಟನಾಗಿ ಸೈ ಎನಿಸಿಕೊಂಡಿದ್ದಾರೆ.

  • ಫ್ಯಾನ್ಸ್‌ಗೆ ದೀಪಕ್ ಗುಡ್ ನ್ಯೂಸ್- ಸದ್ದಿಲ್ಲದೇ ‘ಶಿಷ್ಯ’ ಹೀರೋ ಎಂಗೇಜ್

    ಫ್ಯಾನ್ಸ್‌ಗೆ ದೀಪಕ್ ಗುಡ್ ನ್ಯೂಸ್- ಸದ್ದಿಲ್ಲದೇ ‘ಶಿಷ್ಯ’ ಹೀರೋ ಎಂಗೇಜ್

    ‘ಶಿಷ್ಯ’ (Shishya) ಖ್ಯಾತಿಯ ದೀಪಕ್ (Actor Deepak) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸದ್ದಿಲ್ಲದೇ ನಟ ದೀಪಕ್ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಕುರಿತ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದನ್ನೂ ಓದಿ:ವರ್ಷಾ ಕಾವೇರಿಗೆ ಮೋಸ? ವರುಣ್‌ ಸ್ಪಷ್ಟನೆ

    ಸ್ಯಾಂಡಲ್‌ವುಡ್ (Sandalwood) ಪ್ರತಿಭಾನ್ವಿತ ನಟ ದೀಪಕ್ ಇದೀಗ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ದೀಪಕ್ ಅವರ ಎಂಗೇಜ್‌ಮೆಂಟ್ ಇತ್ತೀಚೆಗಷ್ಟೇ ನೆರವೇರಿತು. ಶಿಷ್ಯ ದೀಪಕ್ ಅವರ ಮದುವೆ ಫಿಕ್ಸ್ ಆಗಿದ್ದು, ಹುಡುಗಿ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ದೀಪಕ್ ಅವರ ಎಂಗೇಜ್‌ಮೆಂಟ್ ಸಂಭ್ರಮದ ಫೋಟೋಗಳು ಸದ್ದು ಮಾಡುತ್ತಿದೆ.

    ‘ಶಿಷ್ಯ’ ಸಿನಿಮಾದ ಮೂಲಕ ಜನಪ್ರಿಯತೆ ಪಡೆದ ದೀಪಕ್ ಕನ್ನಡ ಚಿತ್ರರಂಗದಲ್ಲಿ ಶಿಷ್ಯ ದೀಪಕ್ ಎಂದೇ ಫೇಮಸ್ ಆಗಿದ್ದಾರೆ. ಮಾಗಡಿ, ಬೆಳ್ಳಿ, 18th ಕ್ರಾಸ್, ಏಕ್ ಲವ್ ಯಾ, ವೀರಂ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

    ಟಾಲಿವುಡ್- ಮಾಲಿವುಡ್‌ಗೂ (Mollywood) ಕಾಲಿಟ್ಟಿದ್ದಾರೆ. ತೆಲುಗಿನಲ್ಲಿ ಎರಡು, ಮಲಯಾಳಂನಲ್ಲಿ ಒಂದು ಸಿನಿಮಾದಲ್ಲಿ ನಟ ದೀಪಕ್ ಅಭಿನಯಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ‘ಶುಗರ್ ಫ್ಯಾಕ್ಟರಿ’ ಪೋಸ್ಟರ್

    ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ‘ಶುಗರ್ ಫ್ಯಾಕ್ಟರಿ’ ಪೋಸ್ಟರ್

    ಸ್ಯಾಂಡಲ್ ವುಡ್ ಹೆಸರಾಂತ ನಟ ಡಾರ್ಲಿಂಗ್ ಕೃಷ್ಣ (Darling Krishna)  ಇಂದು ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಅವರ ಹುಟ್ಟು ಹಬ್ಬಕ್ಕಾಗಿ ‘ಶುಗರ್ ಫ್ಯಾಕ್ಟರಿ’ (Sugar Factory) ಚಿತ್ರತಂಡ ವಿಶೇಷ ಪೋಸ್ಟರ್ ಒಂದನ್ನು ರಿಲೀಸ್ ಮಾಡಿದೆ. ಈ ಮೂಲಕ ತನ್ನ ಚಿತ್ರದ ನಾಯಕನಿಗೆ ಚಿತ್ರತಂಡ ಶುಭಾಶಯ ತಿಳಿಸಿದೆ.

    ದೀಪಕ್ ಅರಸ್ (Deepak) ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ನಟಿ ಅಮೂಲ್ಯ ಸಹೋದರರಾಗಿರುವ ದೀಪಕ್ ಅರಸ್ ಈ ಹಿಂದೆ ಅಮೂಲ್ಯ, ರಾಕೇಶ್ ಅಡಿಗ ಜೋಡಿಯ ಮನಸಾಲಜಿ ಚಿತ್ರ ನಿರ್ದೇಶಿಸಿದ್ದರು, ಇದೀಗ ಎರಡನೇ ಸಿನಿಮಾವಾಗಿ ಶುಗರ್ ಫ್ಯಾಕ್ಟರಿ ಚಿತ್ರ ನಿರ್ದೇಶನ ಮಾಡುತ್ತಿದ್ದು, ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನ ದೀಪಕ್ ಅರಸ್ ಅವರೇ ಬರೆದಿದ್ದಾರೆ. ಇದನ್ನೂ ಓದಿ:ಶರ್ವಾನಂದ್ ರಿಸೆಪ್ಷನ್ ಸಂಭ್ರಮದಲ್ಲಿ ಸಿನಿ ತಾರೆಯರ ದಂಡು

    ಫನ್ ರೋಮ್ಯಾಂಟಿಕ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದು, ಅದ್ವಿತಿ ಶೆಟ್ಟಿ, ಸೊನಾಲ್ ಮೊಂಥೆರೋ, ಶಿಲ್ಪಾ ಶೆಟ್ಟಿ ಶುಗರ್ ಫ್ಯಾಕ್ಟರಿ ನಟಿಮಣಿಯರಾಗಿ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್, ಅರಸು ಅಂತಾರೆ, ಚಂದನ್ ಶೆಟ್ಟಿ ಸಾಹಿತ್ಯ ಬರೆಯುತ್ತಿದ್ದಾರೆ. ಕಬೀರ್ ರಫಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣದಲ್ಲಿ ಶುಗರ್ ಫ್ಯಾಕ್ಟರಿ ಚಿತ್ರ ಸೆರೆಯಾಗಿದೆ.

    ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಗಿರೀಶ್ ಶುಗರ್ ಫ್ಯಾಕ್ಟರಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮೈಸೂರು, ಗೋವಾ ಹಾಗೂ ವಿದೇಶಗಳಲ್ಲೂ ಸಿನಿಮಾ ಸೆರೆ ಹಿಡಿಯಲಾಗಿದೆ. ರಂಗಾಯಣ ರಘು, ಗೋವಿಂದೇ ಗೌಡ, ಸೂರಜ್ ಕುಮಾರ್, ಮಹಂತೇಶ್, ಪವನ್ ಎಸ್ ನಾರಾಯಣ್, ರಾಯಲ್ ರವಿ, ಅವೀಕ್ಷ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಬಳಗದಲ್ಲಿದ್ದಾರೆ.

    ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರ  ಆರಂಭದ ದಿನದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್  ಮಂತ್ರಿಮಾಲ್ ನಲ್ಲಿ ಬಿಡುಗಡೆಯಾಯಿತು. ಅಲ್ಲಿ ನೆರದಿದ್ದ ಅಪಾರ ಜನಸ್ತೋಮ ಶೀರ್ಷಿಕೆ ಹಾಡು ಬಿಡುಗಡೆಗೆ ಸಾಕ್ಷಿಯಾದರು. ಅಲ್ಲಿದ್ದ ಆರು ಜನ ಸಿನಿಪ್ರೇಕ್ಷಕರೆ, ಈ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು.

     

    ಚಿತ್ರದಲ್ಲಿ ನಾಯಕ ಹಾಗೂ ನಾಯಕಿ ಪಾರ್ಟಿಯಲ್ಲಿ ಹಾಡಿ, ಕುಣಿಯುವ ಈ ಹಾಡು,‌ ಪಾರ್ಟಿ ಪ್ರಿಯರಿಗೆ ಸರ್ವಕಾಲಕ್ಕೂ ಮೆಚ್ಚುಗೆಯ ಗೀತೆಯಾಗಲಿದೆ. ತಮ್ಮ ವಿಶಿಷ್ಟ ಕಂಠದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ, ಈ ಹಾಡನ್ನು ಬರೆದು ಹಾಡಿದ್ದಾರೆ. ರುಚಿರ ವೈದ್ಯ English rap ಗೆ ಧ್ವನಿಯಾಗಿದ್ದಾರೆ.  ಕಬೀರ್ ರಫಿ ಸಂಗೀತ ನೀಡಿದ್ದಾರೆ.

  • ಸಂಸದ ನಳಿನ್ ಕುಮಾರ್ ಕಟೀಲ್ ಅಯೋಗ್ಯ ಸಂಸದ- ಹಮೀದ್ ಖಂದಕ್

    ಸಂಸದ ನಳಿನ್ ಕುಮಾರ್ ಕಟೀಲ್ ಅಯೋಗ್ಯ ಸಂಸದ- ಹಮೀದ್ ಖಂದಕ್

    ಮಂಗಳೂರು: ದಕ್ಷಿಣ ಕನ್ನಡ ಸಂಸದ ಓರ್ವ ಅಯೋಗ್ಯ ಸಂಸದ, ರಾಜ್ಯದ ಕರಾವಳಿಯ ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ನಡೆದ ಕೋಮುದ್ವೇಷದ ಹತ್ಯೆಗಳಲ್ಲೂ ಸಂಸದ ನಳಿನ್ ಕುಮಾರ್ ಕಟೀಲ್ ರಾಜಕೀಯ ಮಾಡುತ್ತಿದ್ದಾರೆ. ಜಿಲ್ಲೆಯ ಸಂಸದನಾಗಿದ್ದು ತನ್ನ ಕ್ಷೇತ್ರದ ಅಮಾಯಕ ಬಶೀರ್ ಹತ್ಯೆಯಾಗಿದ್ದರೂ ಕನಿಷ್ಟ ಅವರ ಮನೆಗೆ ಭೇಟಿ ನೀಡಲಾಗದ ಅಯೋಗ್ಯ ಸಂಸದನಾಗಿದ್ದಾನೆ. ಇಂತಹ ಅಯೋಗ್ಯ ಸಂಸದನಿಗೆ ನಾಚಿಕೆಯಾಗಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಹಮೀದ್ ಖಂದಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇತ್ತೀಚೆಗೆ ದುಷ್ಕರ್ಮಿಗಳ ಕೋಮು ದ್ವೇಷದಿಂದ ಹತ್ಯೆಗೀಡಾದ ದೀಪಕ್ ರಾವ್ ಹಾಗೂ ಬಶೀರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಸಂಘಟನೆಗಳ ವತಿಯಿಂದ ಮಂಗಳೂರಿನ ನೆಹರು ಮೈದಾನದಲ್ಲಿ ಸಂತಾಪ ಸಭೆ ನಡೆಯಿತು. ಈ ಸಭೆಯಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಹಮೀದ್ ಖಂದಕ್, ದೀಪಕ್ ರಾವ್ ಅವರನ್ನು ಹತ್ಯೆಗೈದ ಸಮಯದಲ್ಲಿ ಬಂದ್, ಗಲಾಟೆ, ಉದ್ರೇಕಕಾರಿ ಭಾಷಣಗಳ ಸುರಿಮಳೆಯಾಗಿತ್ತು. ಜೊತೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಮುಸ್ಲಿಮರನ್ನು ಉದ್ರೇಕಿಸುವಂತೆ ದೂರದ ದೆಹಲಿಯಲ್ಲಿ ಕೂತು ಇಲ್ಲಿನ ಪರಿಸ್ಥಿತಿಯನ್ನು ನೋಡದೆ ಮಾಧ್ಯಮಗಳಲ್ಲಿ ಉದ್ರೇಕಕಾರಿ ಹೇಳಿಕೆಗಳನ್ನು ನೀಡಿದ್ದರು. ಈ ಮೂಲಕ ಗಲಭೆ ಎಬ್ಬಿಸುವ ಪ್ರಯತ್ನ ಮಾಡಿದ್ದರು. ಆದರೆ ಬಶೀರ್ ರನ್ನು ಹತ್ಯೆಗೈದಾಗ ಇದ್ಯಾವುದೂ ಇರದೆ ಶಾಂತಿ ಕಾಪಾಡಿಕೊಂಡಿದ್ದರು. ನಮಗೆ ಬೇಕಾಗಿರೋದು ಶಾಂತಿ ಎಂದು ಬಶೀರ್ ಮನೆಯವರು ಹೇಳಿದ್ದನ್ನು ಹಮೀದ್ ಖಂದಕ್ ನೆನಪಿಸಿಕೊಂಡರು. ಈ ಇಬ್ಬರನ್ನು ಕೊಂದವರು ಯಾರು ಹಾಗೂ ಈ ಕೊಲೆಗಳ ಹಿಂದೆ ಇರುವ ಕಾಣದ ಕೈಗಳನ್ನು ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದರು.

    ಮಾತ್ರವಲ್ಲ ಮುಸ್ಲಿಂ ಸಂಘಟನೆಗಳು ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಬಾರದ ಮುಸ್ಲಿಂ ನಾಯಕರನ್ನು ಸಾಮಾಜಿಕವಾಗಿ ಬಹಿಷ್ಕರಿಸಿ. ಚಾನೆಲ್‍ಗಳು ಚರ್ಚೆಗೆಂದು ಕರೆದಾಗ ಓಡೋಡಿ ಬರುವ ಪ್ರಚಾರಪ್ರಿಯ ಮುಸ್ಲಿಂ ನಾಯಕರನ್ನು ಬಹಿಷ್ಕರಿಸಿ. ಅವರು ಎಷ್ಟೇ ದೊಡ್ಡ ನಾಯಕಾರದೂ ಸರಿ ಎಂದು ಕಾರ್ಯಕ್ರಮಕ್ಕೆ ಬಾರದ ಮುಸ್ಲಿಂ ನಾಯಕರ ವಿರುದ್ಧವೂ ಅವರು ಕಿಡಿಕಾರಿದರು.

    ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಸಿರ್ ಹಸನ್ ಮಾತನಾಡಿ, ಹಿಂದೂ ಮುಸ್ಲಿಮರ ಮಧ್ಯೆ ಗೋಡೆಗಳನ್ನಲ್ಲ ಬದಲಾಗಿ ಅಣೆಕಟ್ಟುಗಳನ್ನು ಕಟ್ಟಿ ರಕ್ತದ ಓಕುಳಿಯನ್ನು ಸಂಘಪರಿವಾರ ಹರಿಸಿ ಸಂಗ್ರಹಿಸಿಡುತ್ತಿದೆ. ಈ ದೇಶದ ಮುಸಲ್ಮಾನರು ದೌರ್ಜನ್ಯಕ್ಕೊಳಗಾದರೂ, ಶೋಷಣೆಗೊಳಗಾದರೂ ಕೂಡ, ಎಲ್ಲಾ ರೀತಿಯ ಸಂವಿಧಾನ ಬದ್ಧವಾದ ಹಕ್ಕುಗಳಿಂದ ವಂಚಿತರಾದರೂ ಕೂಡ ಯಾವತ್ತೂ ಈ ದೇಶದ ವಿರುದ್ಧ ಸಂವಿಧಾನ ವಿರೋಧಿ ಕೆಲಸವನ್ನು ಮಾಡಿಲ್ಲ. ಕರ್ನಾಟಕದಲ್ಲಿ 23 ಹಿಂದುಗಳ ಕೊಲೆಯಾಗಿದೆ ಎಂಬ ಪಟ್ಟಿಯನ್ನು ಶೋಭಾ ಕರಂದ್ಲಾಜೆಯವರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಆದರೆ ಇದೇ ಸಮಯದಲ್ಲಿ ಸಂಘಪರಿವಾರದಿಂದ ಕೊಲೆಯಾದ 13 ಹಿಂದುಗಳ ಪಟ್ಟಿಯನ್ನು ಏಕೆ ಕೊಟ್ಟಿಲ್ಲ? ಅದರಲ್ಲೂ ವಿಶೇಷವೇನೆಂದರೆ ಕೊಲೆಯಾದ 13 ಮಂದಿಯ ಪಟ್ಟಿಯಲ್ಲಿ ಜೀವಂತವಿರುವವರ ಹೆಸರೂ ಇದೆ, ಅಪಘಾತದಲ್ಲಿ ಸಾವನ್ನಪ್ಪಿದ್ದವವರ ಹೆಸರೂ ಇದೆ ಹಾಗೂ ಕೌಟುಂಬಿಕ ಕಲಹ ಮತ್ತು ಆಸ್ತಿಗಾಗಿ ಕೊಲೆಯಾದವರ ಹೆಸರೂ ಕೂಡಾ ಈ ಪಟ್ಟಿಯಲ್ಲಿದೆ ಎಂದರು.

    ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ತನ್ನ ಪ್ರಥಮ ದಿನಂದಿಂದ ಇವತ್ತಿನವರೆಗೆ ಹಿಂದೂಗಳ ವಿರುದ್ಧ ಅಥವಾ ಸಂವಿಧಾನದ ವಿರುದ್ಧ ಮಾತನಾಡಿದ ಬಗ್ಗೆ ಪುರಾವೆ ಸಮೇತ ತೋರಿಸಲು ಸಂಘ ಪರಿವಾರಕ್ಕೆ ಸಾಧ್ಯವಿದೆಯೇ? ಪಾಪ್ಯುಲರ್ ಫ್ರಂಟ್ ನ ಹೋರಾಟ ಈ ದೇಶದ ದೌರ್ಜನ್ಯಕ್ಕೊಳಗಾದವರ ಪರವಾಗಿ ಹಾಗೂ ಈ ದೇಶದ ಸಂವಿಧಾನ ವಿರೋಧಿಗಳಾದ ಹಾಗೂ ದೇಶದ ಆಂತರಿಕ ಶತ್ರುಗಳಾದ ಭಯೋತ್ಪಾದಕ ಆರ್‍ಎಸ್‍ಎಸ್ ವಿರುದ್ಧವಾಗಿದೆ. ನಮ್ಮ ಕೊನೆಯ ಉಸಿರಿರುವ ತನಕ ಸಂಘ ಪರಿವಾರದ ವಿರುದ್ಧ ಹೋರಾಡಲು ಕಟಿಬದ್ಧರಾಗಿದ್ದೇವೆ ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಅತಿಥಿಯೊಬ್ಬರು, ಈ ಸಂತಾಪ ಸಭೆಯು ಕೊನೆಯ ಸಂತಾಪ ಸಭೆಯಾಗಲಿ ಎಂದು ಆಶಿಸಿದರು. ನೆಹರೂ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ವಿವಿಧ ಸಂಘ ಸಂಸ್ಥೆ ಹಾಗೂ ಸಂಘಟನೆಗಳ ಹಲವಾರು ನಾಯಕರು ಉಪಸ್ಥಿತರಿದ್ದು, ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದರು.

  • ನಾನು ನಂಬಿದ ದೇವರು ಆರೋಪಿಗಳಿಗೆ ಶಿಕ್ಷೆ ನೀಡ್ತಾನೆ: ದೀಪಕ್ ತಾಯಿ ಕಣ್ಣೀರು

    ನಾನು ನಂಬಿದ ದೇವರು ಆರೋಪಿಗಳಿಗೆ ಶಿಕ್ಷೆ ನೀಡ್ತಾನೆ: ದೀಪಕ್ ತಾಯಿ ಕಣ್ಣೀರು

    ಮಂಗಳೂರು: ನನ್ನ ಮಗನನ್ನು ಕೊಂದವರಿಗೆ ಕಠಿಣ ಶಿಕ್ಷೆಯಾಗಲಿ. ನಾನು ನಂಬಿದ ದೇವರು ಅವರನ್ನು ಬಿಡಲ್ಲ. ಕೊಂದವರಿಗೆ ತಕ್ಕುದಾದ ಶಿಕ್ಷೆಯನ್ನು ದೇವರು ಕೊಡುತ್ತಾನೆ ಎಂದು ಮೃತ ದೀಪಕ್ ತಾಯಿ ಪ್ರೇಮರಾವ್ ಕಣ್ಣೀರು ಹಾಕಿದ್ದಾರೆ.

    ಮಗನ ಸಾವಿನ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನನ್ನ ಮಗ ಪಾಪದ ಹುಡುಗ. ಯಾವ ಗಲಾಟೆಗೂ ಹೋಗುವವನಲ್ಲ, ಬೆಳಗ್ಗೆ ಚಹಾ ಕುಡಿದು ಹೋದವ ಮತ್ತೆ ವಾಪಾಸ್ ಬರಲಿಲ್ಲ. ದೀಪಕ್ ಕೊಲೆಯಾದ ಬಗ್ಗೆ ಯಾರೂ ನನಗೆ ಹೇಳಲಿಲ್ಲ. ಪ್ರಸ್ತುತ ನಮ್ಮ ಕುಟುಂಬದ ಆಧಾರವೇ ಇಲ್ಲವಾಗಿದೆ ಎಂದು ಕಣ್ಣೀರಿಟ್ಟರು.

    ಮಗನಿಗೆ ಮದುವೆ ಮಾಡುವ ಕನಸು ಹೊತ್ತಿದ್ದೆವು. ಆದರೆ ಮದುವೆ ಒಂದು ವರ್ಷ ಬೇಡ ಎಂದು ದೀಪಕ್ ಹೇಳಿದ್ದ. ವಿದೇಶದಲ್ಲಿ ಉದ್ಯೋಗ ಮಾಡುತ್ತೇನೆ ಎಂದು ಹಠ ಮಾಡುತ್ತಿದ್ದ. ನಾನೇ ವಿದೇಶದಲ್ಲಿ ಕೆಲಸ ಬೇಡ ಎಂದು ಹೇಳಿದ್ದೆ. ಸಾಲ ಮಾಡಿ ಮನೆ ಕಟ್ಟಿಸಿದ್ದ. ಮನೆಯ ಸಾಲ ಇನ್ನೂ ತೀರಿಸಿಲ್ಲ ಎಂದು ದು:ಖ ವ್ಯಕ್ತಪಡಿಸಿದರು. ಇದನ್ನೂ ಓದಿ: ದೀಪಕ್ ಹತ್ಯೆ ಕೇಸ್: ಪೊಲೀಸರ 27 ಕಿ.ಮೀ ಥ್ರಿಲ್ಲಿಂಗ್ ಚೇಸಿಂಗ್ ಸ್ಟೋರಿ ಓದಿ 

    ಸರ್ಕಾರ ದೀಪಕ್ ಸಾವಿಗೆ ಪರಿಹಾರವಾಗಿ ಘೋಷಣೆ ಮಾಡಿದ್ದ 10 ಲಕ್ಷ ರೂ.ಪರಿಹಾರವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸುವ ಸಲುವಾಗಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದೀಪಕ್ ಮನೆಗೆ ಆಗಮಿಸಿ ತಾಯಿಗೆ ಚೆಕ್ ಹಸ್ತಾಂತರಿಸಲು ಮುಂದಾದರು. ಆದರೆ ದೀಪಕ್ ತಾಯಿ ಸರ್ಕಾರದ ಚೆಕ್ ಬೇಡ ಎಂದು ಕಣ್ಣೀರಿಟ್ಟರು. ಈ ವೇಳೆ ಡಿಸಿ ಸಸಿಕಾಂತ್ ಅವರು, ನಾನು ನಿಮ್ಮ ಮಗನ ಹಾಗೇ, ಸರಕಾರ ಕೊಟ್ಟ ಪರಿಹಾರ ಬೇಡ ಎನ್ನಬೇಡಿ ಎಂದು ದೀಪಕ್ ಅವರ ತಾಯಿಯನ್ನು ಮನವೊಲಿಸಿದರು. ಇದನ್ನೂ ಓದಿ: 7 ವರ್ಷಗಳ ಕಾಲ ನನ್ನ ಜೊತೆಯಿದ್ದ ದೀಪಕ್ ಸಾವು ಊಹಿಸಲು ಸಾಧ್ಯವಿಲ್ಲ: ಮಾಲೀಕ ಮಜೀದ್

    ಈ ನಡುವೆ ದೀಪಕ್ ಮೂಗ ತಮ್ಮ ಸತೀಶ್ ತನ್ನ ನೋವನ್ನು ಯಾರಿಗೂ ಹೇಳಲು ಆಗದೇ ರೋದನ ಅನುಭವಿಸುತ್ತಿದ್ದು ಕಂಡು ಬಂತು. ದೀಪಕ್ ಸಾವಿನಿಂದ ಸುರತ್ಕಲ್ ಕಾಟಿಪಳ್ಳದಲ್ಲಿರುವ ಮನೆಯಲ್ಲಿ ಮಡುಗಟ್ಟಿದ ವಾತಾವರಣ ನಿರ್ಮಾಣವಾಗಿದೆ.

    ಇದನ್ನೂ ಓದಿ: Exclusive: ಪೊಲೀಸ್ ಇಲಾಖೆಯಲ್ಲಿನ ‘ಹಸ್ತ’ಕ್ಷೇಪವೇ ಕರಾವಳಿಯಲ್ಲಿ ಶಾಂತಿ ಕದಡಲು ಕಾರಣ!

    ಇದನ್ನೂ ಓದಿ: ಕೊಲೆ ಸಂಖ್ಯೆ 21. ಇನ್ನು ಎಷ್ಟು ಕೊಲೆಯಾಗಬೇಕು: ಸಿಎಂಗೆ ಪ್ರತಾಪ್ ಸಿಂಹ ಪ್ರಶ್ನೆ

    ಇದನ್ನೂ ಓದಿ: ಆಗ ಸುಮ್ಮನಿದ್ದವರು ಈಗೇನು ಮಾತನಾಡೋದು: ಬಿಜೆಪಿ ನಾಯಕರ ವಿರುದ್ಧ ಮುತಾಲಿಕ್ ಕಿಡಿ

    https://www.youtube.com/watch?v=h2ySxt7VrtE

  • ರಸ್ತೆಯಲ್ಲಿ ಕಾರು ಅಡ್ಡಲಾಗಿ ನಿಲ್ಲಿಸಿದ್ದಕ್ಕೆ ಮೂವರ ಮೇಲೆ ಡ್ರ್ಯಾಗರ್‍ನಿಂದ ಹಲ್ಲೆ

    ರಸ್ತೆಯಲ್ಲಿ ಕಾರು ಅಡ್ಡಲಾಗಿ ನಿಲ್ಲಿಸಿದ್ದಕ್ಕೆ ಮೂವರ ಮೇಲೆ ಡ್ರ್ಯಾಗರ್‍ನಿಂದ ಹಲ್ಲೆ

    ಬೆಂಗಳೂರು: ರಸ್ತೆಯಲ್ಲಿ ಕಾರು ಅಡ್ಡವಾಗಿ ನಿಲ್ಲಿಸಿದ್ದರು ಅನ್ನೋ ಕಾರಣಕ್ಕೆ ಮನೆಗೆ ನುಗ್ಗಿ ಮೂವರಿಗೆ ಡ್ರ್ಯಾಗರ್‍ನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.

    ಶಿಲ್ಪಾ, ಅರ್ಜುನ್, ದೀಪಕ್ ಗಾಯಗೊಂಡ ವ್ಯಕ್ತಿಗಳು. ಭಾನುವಾರ ರಾತ್ರಿ ಅರ್ಜುನ್ ಎಂಬವರು ಬಾಡಿಗೆ ಕಾರೊಂದರಲ್ಲಿ ಮನೆಯ ಬಳಿ ಬಂದು ಇಳಿದು ಕಾರ್ ಡ್ರೈವರ್‍ಗೆ ಬಾಡಿಗೆ ಹಣ ನೀಡುತ್ತಿದ್ದರು. ಈ ವೇಳೆ ಎದುರುಗಡೆಯಿಂದ ಬೈಕ್‍ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕಾರು ತೆಗೆಯುವಂತೆ ಅವಾಜ್ ಹಾಕಿದ್ದರು ಎಂದು ಹೇಳಲಾಗಿದೆ.

    ಈ ವೇಳೆ ಅರ್ಜುನ್ ಹಣ ನೀಡಿ ಹೋಗುತ್ತೀನಿ. ನಾನು ಇದೇ ಏರಿಯಾದವನೇ ಎಂದು ಹೇಳಿ ಮನೆಯ ಒಳಗೆ ಹೋಗಿದ್ದಾರೆ. ಇದಾದ ಸ್ವಲ್ಪ ಹೊತ್ತಲ್ಲೇ ಏಕಾಏಕಿ ಅರ್ಜುನ್ ಮನೆಗೆ ನುಗ್ಗಿದ ಇಬ್ಬರು, ಡ್ರ್ಯಾಗರ್‍ನಿಂದ ಮೂವರಿಗೆ ಇರಿದು ಹಲ್ಲೆ ನಡೆಸಿದ್ದಾರೆ. ಗಲಾಟೆ ಶಬ್ಧ ಕೇಳಿದ ಅಕ್ಕಪಕ್ಕದ ಮನೆಯವರು ಇಬ್ಬರನ್ನು ಸೆರೆಹಿಡಿದು ರಾಜಾಜಿನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿರೋ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.