Tag: ದೀಪಾ ಚೋಳನ್

  • ಧಾರವಾಡ ನೂತನ ಡಿಸಿಯಾಗಿ ನಿತೇಶ್ ಪಾಟೀಲ್ ಅಧಿಕಾರ ಸ್ವೀಕಾರ

    ಧಾರವಾಡ ನೂತನ ಡಿಸಿಯಾಗಿ ನಿತೇಶ್ ಪಾಟೀಲ್ ಅಧಿಕಾರ ಸ್ವೀಕಾರ

    – ಜಿಲ್ಲಾಧಿಕಾರಿ ವರ್ಗಾವಣೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

    ಧಾರವಾಡ: ಕೊರೊನಾ ಸಂದರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳ ವರ್ಗಾವಣೆಯಾಗಿದೆ. ದೀಪಾ ಚೋಳನ್ ಅವರು ಕಳೆದ ಎರಡು ವರ್ಷಗಳಿಂದ ಧಾರವಾಡ ಜಿಲ್ಲಾಧಿಕಾರಿಗಳಾಗಿದ್ದರು. ರಾಜ್ಯ ಸರ್ಕಾರ ದೀಪಾ ಚೋಳನ್ ಅವರನ್ನು ಸರ್ವ ಶಿಕ್ಷಣ ಅಭಿಯಾದ ಯೋಜನಾ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದೆ.

    ಧಾರವಾಡ ನೂತನ ಜಿಲ್ಲಾಧಿಕಾರಿಗಳಾಗಿ ನಿತೇಶ್ ಪಾಟೀಲ್ ಅವರು ಇವತ್ತು ಅಧಿಕಾರ ವಹಿಸಿಕೊಂಡರು. ಇತ್ತ ಕೊರೊನಾ ದಿನೇ ದಿನೇ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಸೋಂಕು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನು ನಾವು ತಡೆಯುವ ಕೆಲಸ ಮಾಡಲಿದ್ದೇವೆ ಎಂದು ನೂತನ ಜಿಲ್ಲಾಧಿಕಾರಿ ಹೇಳಿದರು.

    ಧಾರವಾಡ ಜಿಲ್ಲೆಯ ಅಧಿಕಾರಿಗಳ ತಂಡ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಇಲ್ಲಿಯ ಜನರು ಕೂಡಾ ಅಧಿಕಾರಿಗಳ ಕಾರ್ಯಕ್ಕೆ ಸಹಕಾರಿಯಾಗಿದ್ದು, ಅಧಿಕಾರಿಗಳ ಜೊತೆ ಸಭೆ ಮಾಡಿ ಮಾಹಿತಿ ಪಡೆದು ಕೊರೊನಾ ತಡೆಯುವ ಕೆಲಸ ಮಾಡಿದ್ದೇವೆ ಎಂದು ಹೇಳಿದರು. ಮತ್ತೊಂದು ಕಡೆ ದೀಪಾ ಚೋಳನ್ ಅವರನ್ನ ವರ್ಗಾವಣೆ ಮಾಡಿದ್ದಕ್ಕೆ ಧಾರವಾಡ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಕೂಡಾ ನಡೆಸಿದ ಘಟನೆ ನಡೆಯಿತು.ಧಾರವಾಡ, ಪಬ್ಲಿಕ್ ಟಿವಿ, ಕೊರೊನಾ, ದೀಪಾ ಚೋಳನ್, ನಿತೇಶ ಪಾಟೀಲ

  • ಕೊರೊನಾದಿಂದ ಗುಣಮುಖವಾಗಿ 63 ವರ್ಷದ ವೃದ್ಧ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಕೊರೊನಾದಿಂದ ಗುಣಮುಖವಾಗಿ 63 ವರ್ಷದ ವೃದ್ಧ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಧಾರವಾಡ: ಕೋವಿಡ್-19ರಿಂದ ಗುಣಮುಖರಾಗಿರುವ 63 ವರ್ಷದ ವೃದ್ಧ ರೋಗಿ-363 ಅವರನ್ನು ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

    ಸ್ಮಶಾನ ಕಾಯುತಿದ್ದ ರೋಗಿ-363 ಅವರಿಗೆ ದೆಹಲಿಗೆ ಹೋಗಿ ಬಂದಿದ್ದ ವ್ಯಾಪಾರಿಯಿಂದ ಕೊರೊನಾ ತಗುಲಿತ್ತು. ಹುಬ್ಬಳ್ಳಿ ಕರಾಡಿ ಓಣಿಯ ನಿವಾಸಿಯಾಗಿರುವ ರೋಗಿ-363 ಅವರು ಸೋಂಕಿನಿಂದ ಈಗ ಸಂಪೂರ್ಣ ಗುಣಮುಖರಾಗಿದ್ದಾರೆ. 24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೊರೊನಾ ನೆಗೆಟಿವ್ ವರದಿ ಬಂದಿದೆ. ಎಕ್ಸ್-ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದರಿಂದ ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

    ಜಿಲ್ಲೆಯಲ್ಲಿ ಇದುವರೆಗೆ 7 ಮಂದಿ ಕೋವಿಡ್-19ರಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯ 5 ಮಂದಿ ಹಾಗೂ ಬಾಗಲಕೋಟೆ ಜಿಲ್ಲೆ ಬದಾಮಿಯ ಒಬ್ಬರು ಸೋಂಕಿತರು ಕಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • ಬೆಚ್ಚಿ ಬೀಳಿಸುವಂತಿದೆ ಹುಬ್ಬಳ್ಳಿ ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ

    ಬೆಚ್ಚಿ ಬೀಳಿಸುವಂತಿದೆ ಹುಬ್ಬಳ್ಳಿ ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ

    ಹುಬ್ಬಳ್ಳಿ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್-19 ಸೋಂಕು ದೃಢಪಟ್ಟ ರೋಗಿ-589 ಟ್ರಾವೆಲ್ ಹಿಸ್ಟರಿ ಬೆಚ್ಚಿ ಬೀಳಿಸುವಂತಿದೆ.

    ರೋಗಿ-589 ಹುಬ್ಬಳ್ಳಿ ಶಹರದ ಕೇಶ್ವಾಪೂರ ನಿವಾಸಿಯಾಗಿದ್ದು, ಇವರು ಮಾರ್ಚ 27ರಂದು ತಮ್ಮ ಮಗನ ಜೊತೆಯಲ್ಲಿ ಹುಬ್ಬಳ್ಳಿಯ ತುಳಜಾಭವಾನಿ ದೇವಸ್ಥಾನದಲ್ಲಿ ಹಾಗೂ ನಂತರದ ದಿನಗಳಲ್ಲಿ ತೊರವಿ ಹಕ್ಕಲ, ಆನಂದನಗರ, ಅರವಿಂದನಗರ, ಹಳೇ ಹುಬ್ಬಳ್ಳಿ, ಟಿಪ್ಪುನಗರ, ನೇಕಾರನಗರ ಮತ್ತು ಕೇಶ್ವಾಪೂರದಲ್ಲಿ ಸಾರ್ವಜನಿಕರಿಗೆ ಆಹಾರ ಧಾನ್ಯ ವಿತರಣೆ ಮಾಡಿದ್ದಾರೆ.

    ಲಾಕ್‍ಡೌನ್ ಘೋಷಣೆಯಾದ ನಂತರ ಹುಬ್ಬಳ್ಳಿಯ ಕಮರಿಪೇಟೆಯಲ್ಲಿರುವ ಮಟನ್ ಶಾಪ್‍ಗಳಿಗೆ ಸೋಂಕಿತ ವ್ಯಕ್ತಿ ಭೇಟಿ ನೀಡಿದ್ದಾರೆ. ಬಳಿಕ ಏಪ್ರಿಲ್ ತಿಂಗಳಲ್ಲಿ ಹುಬ್ಬಳ್ಳಿಯ ಶಾಂತಿನಗರ, ಬೆಂಗೇರಿ, ಮಹಾವೀರಗಲ್ಲಿ, ಬೆಳಗಾಂವಗಲ್ಲಿ, ಮರಾಠಾಗಲ್ಲಿ, ಶಕ್ತಿನಗರ, ವಿಕಾಸನಗರ, ಗೋಕುಲ ರಸ್ತೆ, ಜನತಾಬಜಾರ, ಸುರಭಿನಗರ, ಹೊಸೂರ, ಸ್ಟೇಷನ್ ರಸ್ತೆ ತಬೀಬ್ ಲ್ಯಾಂಡ, ಕಲ್ಯಾಣಗರ, ವೆಂಕಟೇಶ ಕಾಲೋನಿ, ದೇಶಪಾಂಡೆನಗರ, ದಾಜಿಬಾನಪೇಟ್, ಸಿಬಿಟಿ, ರೇಲ್ವೆ ವರ್ಕ್‍ಶಾಪ್, ಗಣೇಶಪೇಟ್, ಗೂಡ್ಸ್ ಶೆಡ್ ರೋಟ್, ತಾಡಪತ್ರಿಗಲ್ಲಿ, ಚೇತನಾಕಾಲೋನಿ, ಬೂಸಪೇಟ್ ಹಾಗೂ ಹುಬ್ಬಳ್ಳಿಯ ಇನ್ನಿತರ ಸ್ಥಳಗಳಲ್ಲಿ ಸೋಂಕಿತ ವ್ಯಕ್ತಿ ಸಂಚರಿಸಿದ್ದಾರೆ.

    ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಇವರನ್ನು ಸಂಪರ್ಕಿಸಿದ ಸಾರ್ವಜನಿಕರಿಗೆ ಕೊರೊನಾ ಸೋಂಕು ತಗಲುವ ಸಾಧ್ಯತೆ ಇದ್ದು, ಈ ಪ್ರದೇಶದಲ್ಲಿ ಇರುವ ಮಂದಿ ಕೂಡಲೇ ಜಿಲ್ಲಾಡಳಿತದ ಸಹಾಯವಾಣಿ 1077ಗೆ ಕರೆ ಮಾಡಿ ಮಾಹಿತಿ ನೀಡಬೇಕು ಹಾಗೂ ಸಮೀಪದ ಸರ್ಕಾರ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆಗೆ ಒಳಪಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕೊರೊನಾ ಗುಣಲಕ್ಷಣ ಇಲ್ಲದಿದ್ರೂ 14 ದಿನ ಹೊರ ಬರಲೇಬೇಡಿ: ಡಿಸಿ ಮನವಿ

    ಕೊರೊನಾ ಗುಣಲಕ್ಷಣ ಇಲ್ಲದಿದ್ರೂ 14 ದಿನ ಹೊರ ಬರಲೇಬೇಡಿ: ಡಿಸಿ ಮನವಿ

    ಧಾರವಾಡ: ಕೊರೊನಾ ಎಫೆಕ್ಟ್ ಆಗಿರುವ ದೇಶಗಳಿಂದ ಧಾರವಾಡ ಜಿಲ್ಲೆಗೆ ಜನರು ಬರುತ್ತಿದ್ದಾರೆ. ಹೀಗಾಗಿ ಕೊರೊನಾ ಗುಣಲಕ್ಷಣ ಇಲ್ಲದಿದ್ದರೂ ಕೂಡ, 14 ದಿನಗಳ ಕಾಲ ಮನೆ ಬಿಟ್ಟು ಬರಲೇಬೇಡಿ ಅಂತ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಮನವಿ ಮಾಡಿಕೊಂಡಿದ್ದಾರೆ.

    ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಭೀತಿ ಹಿನ್ನೆಲೆ ಧಾರವಾಡ ಜಿಲ್ಲೆಯಲ್ಲಿ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಿಂದ ಇಬ್ಬರಲ್ಲಿ ಶಂಕಿತ ಸೊಂಕಿರುವ ಹಿನ್ನೆಲೆ ತಪಾಸಣೆಗೆ ಕಳುಹಿಸಿದ್ದ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಧಾರವಾಡ ಜಿಲ್ಲೆಯ ಜನರು ಭಯ ಪಡುವ ಅಗತ್ಯವಿಲ್ಲ ಎಂದರು.

    ರೈಲ್ವೆ ನಿಲ್ದಾಣ ಹಾಗೂ ಮುಖ್ಯವಾಗಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಒಂದು ಮಾಹಿತಿ ಕೇಂದ್ರ ತೆರೆದಿದ್ದೇವೆ. ಕೊರೊನಾ ಎಫೆಕ್ಟ್ ಇರುವ ದೇಶದಿಂದ ಬರುವವರು ಈ ಕೇಂದ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತಮ್ಮ ಮಾಹಿತಿ ನೀಡಬೇಕು. ಕೊರೊನಾ ಗುಣಲಕ್ಷಣ ಇಲ್ಲದೆ ಹೋದರೂ  14 ದಿನಗಳ ಕಾಲ ಮನೆ ಬಿಟ್ಟು ಹೊರಗೆ ಬರಬಾರದು ಎಂದು ಡಿಸಿ ತಿಳಿಸಿದರು.

    ಧಾರವಾಡ ಜಿಲ್ಲಾಸ್ಪತ್ರೆ ಮತ್ತು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ವಾರ್ಡ್ ಮಾಡಿದ್ದೇವೆ. ಜೊತೆಗೆ ಕೆಲ ಖಾಸಗಿ ಆಸ್ಪತ್ರೆಗಳು ಸಹ ಮುಂದೆ ಬಂದಿದೆ. ಜಾಸ್ತಿ ಜನ ಶಂಕಿತರು ಇದ್ದರೆ ಅವರಿಗಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆಯ ತರಬೇತಿ ಕೇಂದ್ರಗಳ ಜೊತೆಗೆ ಒಂದಷ್ಟು ಹೋಟೆಲ್‌ಗಳನ್ನು ಪಡೆಯಲಿದ್ದೇವೆ ಎಂದು ಮಾಹಿತಿ ನೀಡಿದರು.