Tag: ದೀಪೋತ್ಸವ

  • ಶ್ರೀರಾಮನಗರಿಯಲ್ಲಿ ಝಗಮಗಿಸಿದ ದೀಪೋತ್ಸವ – 26 ಲಕ್ಷ ದೀಪಗಳಿಂದ ಕಂಗೊಳಿಸಿದ ಅಯೋಧ್ಯೆ

    ಶ್ರೀರಾಮನಗರಿಯಲ್ಲಿ ಝಗಮಗಿಸಿದ ದೀಪೋತ್ಸವ – 26 ಲಕ್ಷ ದೀಪಗಳಿಂದ ಕಂಗೊಳಿಸಿದ ಅಯೋಧ್ಯೆ

    – ಇಷ್ಟೊಂದು ಖರ್ಚು ಬೇಕಾ ಅಂತ ಅಖಿಲೇಶ್ ಕೊಂಕುನುಡಿ

    ಲಕ್ನೋ: ದೇಶಾದ್ಯಂತ ದೀಪಗಳ ಹಬ್ಬ ದೀಪಾವಳಿ (Diwali) ಸಂಭ್ರಮ ಮನೆ ಮಾಡಲಿದೆ. ಅದರ ಮುನ್ನಾದಿನವೇ ಶ್ರೀರಾಮನಗರಿ ಅಯೋಧ್ಯೆಯಲ್ಲಿ (Ayodhya) ಹಬ್ಬದ ಸಂಭ್ರಮ ಇಮ್ಮಡಿಗೊಂಡಿದೆ.

    ಅಯೋಧ್ಯೆ ನಗರಿ ದೀಪಗಳಿಂದ ಝಗಮಗಿಸುತ್ತಿದೆ. 26 ಲಕ್ಷ ದೀಪಗಳು ಶ್ರೀರಾಮನೂರನ್ನು ಬೆಳಗುತ್ತಿವೆ. ಪ್ರತಿ ವರ್ಷದಂತೆ ಈ ವರ್ಷವೂ ಸರಯೂ ನದಿಯ ತಟದಲ್ಲಿ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ. ಅಯೋಧ್ಯೆಯ ಪವಿತ್ರ ಸರಯು ನದಿಯ ತೀರದಲ್ಲಿ 26,11,101 ದೀಪಗಳನ್ನು ಬೆಳಗಿಸುವ ಮೂಲಕ ವಿಶ್ವ ದಾಖಲೆ ನಿರ್ಮಾಣವಾಗಿದೆ. ಇದನ್ನೂ ಓದಿ: ದೀಪಾವಳಿ ಹಿನ್ನೆಲೆ ಜಾತಿಗಣತಿ ಸಮೀಕ್ಷೆಗೆ ಅ.23ರವರೆಗೆ ತಾತ್ಕಾಲಿಕ ಬ್ರೇಕ್

    ರಾಮ ಕಿ ಪೌಡಿ ಸೇರಿದಂತೆ 56 ಘಾಟ್‌ಗಳಲ್ಲಿ ದೀಪಗಳು ಪ್ರಜ್ವಲಿಸಿವೆ. 2017ರಲ್ಲಿ ಈ ಉತ್ಸವ ಆರಂಭವಾದಾಗ ಕೇವಲ 1.71 ಲಕ್ಷ ದೀಪಗಳನ್ನು ಬೆಳಗಿಸಲಾಗಿತ್ತು. ಕಳೆದ ವರ್ಷ 25.12 ಲಕ್ಷ ದೀಪಗಳನ್ನ ಹಚ್ಚಲಾಗಿತ್ತು.

    ಅಯೋಧ್ಯೆಯಲ್ಲಿ ದೀಪೋತ್ಸವ ಕುರಿತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿವಾದದ ಕಿಡಿ ಹೊತ್ತಿಸಿದ್ದಾರೆ. ದೀಪಗಳು ಮತ್ತು ಮೇಣದ ಬತ್ತಿಗಳಿಗಾಗಿ ಯೋಗಿ ಸರ್ಕಾರದ ವೆಚ್ಚವನ್ನು ಪ್ರಶ್ನಿಸಿದ್ದಾರೆ. ಆಯೋಧ್ಯೆ ದೀಪೋತ್ಸವಕ್ಕಾಗಿ ಪ್ರತಿ ವರ್ಷ ಖರ್ಚು ಮಾಡುತ್ತಿದ್ದಾರೆ. ದೀಪೋತ್ಸವಕ್ಕೆ ಹಣತೆ ಖರ್ಚು ಯಾಕೆ? ನೀವು ಕ್ರೈಸ್ತರ ಕ್ರಿಸ್ಮಸ್ ಆಚರಣೆ ನೋಡಿ, ಅವರು ಕ್ರಿಸ್ಮಸ್ ವೇಳೆ ಒಂದು ತಿಂಗಳು ಎಲ್ಲಾ ನಗರಗಳನ್ನು ಲೈಟ್ ಮೂಲಕ ಸಿಂಗರಿಸುತ್ತಾರೆ. ನೀವು ಹಣತೆ ಖರೀದಿಸುತ್ತಾ ಖರ್ಚು ಮಾಡುತ್ತಿದ್ದೀರಿ ಎಂದು ಅಖಿಲೇಶ್ ಯಾದವ್ ವಿವಾದಿತ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಆರ್‌ಎಸ್‌ಎಸ್‌ Vs ಸರ್ಕಾರ – ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು?

    ಅಖಿಲೇಶ್ ಹೇಳಿಕೆಯನ್ನು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ತೀವ್ರವಾಗಿ ಟೀಕಿಸಿವೆ. ವ್ಯಾಟಿಕನ್ ಸಿಟಿಗೆ ಹೋಗಿ ಕ್ರಿಸ್‌ಮಸ್ ಆಚರಿಸಿ ಎಂದು ವಿಎಚ್‌ಪಿ ಹೇಳಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲ, ವರ್ಷಗಳ ಕಾಲ ಅಯೋಧ್ಯೆಯನ್ನು ಕತ್ತಲಲ್ಲಿ ಇರಿಸಿದ ಮತ್ತು ರಾಮ ಭಕ್ತರ ಮೇಲೆ ದಾಳಿ ಮಾಡಿದ್ದಕ್ಕೆ ಹೆಮ್ಮೆ ಪಟ್ಟ ಪಕ್ಷವು ಈಗ ದೀಪೋತ್ಸವಕ್ಕಾಗಿ ನಗರದ ಅಲಂಕಾರವನ್ನು ವಿರೋಧಿಸುತ್ತಿದೆ ಎಂದಿದ್ದಾರೆ.

  • ಮತಾಂತರ ತಡೆಯಲು ವಿಜಯನಗರ ಜಿಲ್ಲೆಯಲ್ಲಿ ವಿಶೇಷ ದೀಪೋತ್ಸವ

    ಮತಾಂತರ ತಡೆಯಲು ವಿಜಯನಗರ ಜಿಲ್ಲೆಯಲ್ಲಿ ವಿಶೇಷ ದೀಪೋತ್ಸವ

    ಬಳ್ಳಾರಿ: ಮತಾಂತರ (Conversion) ತಡೆಯಲು ವಿಜಯನಗರ (Vijayanagar) ಜಿಲ್ಲೆಯ ತಾಂಡಾಗಳಲ್ಲಿ ವಿಶೇಷ ದೀಪೋತ್ಸವ (Deepotsav) ಈಗ ನಡೆಯುತ್ತಿದೆ.

    ವಿಜಯನಗರ ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹರಪನಹಳ್ಳಿ, ಹೂವಿನ ಹಡಗಲಿ, ಹಗರಿಬೊಮ್ಮನ ಹಳ್ಳಿ ತಾಲೂಕಿನ ತಾಂಡಾಗಳಲ್ಲಿ ಸಂತ ಸೇವಾಲಾಲ್ ಮಹಾರಾಜರ ದೀಪೋತ್ಸವ ನಡೆಸಿ ಜಾಗೃತಿ ಮೂಡಿಸಲಾಗುತ್ತಿದೆ. ತಾಂಡಾದ ಜನರು ಶ್ರೀ ಸೇವಾಲಾಲ್ ಹಾಗೂ ಮಾರಿಯಮ್ಮ ದೇಗುಲದಲ್ಲಿ ದೀಪ ಹಚ್ಚಿ ಸಂಭ್ರಮಿಸಿದರು. ಇದನ್ನೂ ಓದಿ: ಕೊಡಚಾದ್ರಿ ಬಳಿ ಜೀಪ್, ಟಿಟಿ ನಡುವೆ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

    ಇತ್ತೀಚೆಗೆ ತಾಂಡಾಗಳಲ್ಲಿ ಮತಾಂತರ ಹೆಚ್ಚಾಗುತ್ತಿದೆ. ಇದನ್ನ ಅರಿತ ತಾಂಡಾದ ಪ್ರಮುಖರು ಜಾಗೃತಿ ಮೂಡಿಸಲು ವಿಶೇಷ ದೀಪೋತ್ಸವ ಮಾಡುತ್ತಿದ್ದಾರೆ.

  • ಮನೆ-ಮನಗಳಲ್ಲಿ ದೀಪೋತ್ಸವ – ʻರಾಮ ಜ್ಯೋತಿʼ ಬೆಳಗಿಸಿದ ಪ್ರಧಾನಿ ಮೋದಿ

    ಮನೆ-ಮನಗಳಲ್ಲಿ ದೀಪೋತ್ಸವ – ʻರಾಮ ಜ್ಯೋತಿʼ ಬೆಳಗಿಸಿದ ಪ್ರಧಾನಿ ಮೋದಿ

    – ಅಯೋಧ್ಯೆ ಬೆಳಗಿದ 10 ಲಕ್ಷ ಹಣತೆಗಳು
    – ಕರ್ನಾಟಕದಲ್ಲಿಯೂ ರಾಮಜ್ಯೋತಿ ಬೆಳಗಿಸಿದ ಭಕ್ತರು

    ಅಯೋಧ್ಯೆ: ಅಯೋಧ್ಯೆಯಲ್ಲಿ (Ayodhya) ಶ್ರೀರಾಮನ ಪಟ್ಟಾಭಿಷೇಕ ನೆರವೇರಿದೆ. ಆರಾಧ್ಯ ದೈವ ರಾಮಜನ್ಮಭೂಮಿಯಲ್ಲಿ ಪ್ರತಿಷ್ಠಾಪನೆಗೊಂಡ ಬಾಲರಾಮನನ್ನ ಕಣ್ತುಂಬಿಕೊಂಡು ಕೋಟ್ಯಂತರ ಭಕ್ತರು ಧನ್ಯರಾಗಿದ್ದಾರೆ. ‘ಹೇ ರಾಮ’ ನಮ್ಮ ಜನ್ಮ ಸಾರ್ಥಕವಾಯಿತು ಎಂದು ಭಕ್ತಿಯ ಪರಾಕಾಷ್ಠೆ ಮೆರೆದಿದ್ದಾರೆ.

    ರಾಮಮಂದಿರ ಉದ್ಘಾಟನೆ ವಿಜಯದ ಇಡೀ ದೇಶಾದ್ಯಂತ ನೆಲೆಸಿರುವ ರಾಮಭಕ್ತರು, ಪ್ರತಿ ಮನೆ-ಮನೆಗಳಲ್ಲಿ ರಾಮಜ್ಯೋತಿ ಬೆಳಗಿಸಿದ್ದಾರೆ. ಪ್ರಮುಖ ರಾಜಕೀಯ ನಾಯಕರು, ಧಾರ್ಮಿಕ ಮುಖಂಡರು ಹಾಗೂ ಖ್ಯಾತ ನಟ-ನಟಿಯರು ರಾಮ ಜ್ಯೋತಿ (Ram Jyoti) ಬೆಳಗಿಸುವ ಮೂಲಕ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸಹ ದೀಪ ಬೆಳಗಿಸುವ ಮೂಲಕ ದೇಶದ ಜನರೊಂದಿಗೆ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಇನ್ಮುಂದೆ ಕರ್ಫ್ಯೂ ಇರೋದಿಲ್ಲ, ಗುಂಡಿನ ಸದ್ದು ಕೇಳೋದಿಲ್ಲ: ಯೋಗಿ ಆದಿತ್ಯನಾಥ್

    ಅಯೋಧ್ಯೆ ಬೆಳಗಿದ 10 ಲಕ್ಷ ಹಣತೆಗಳು:
    ಅಯೋಧ್ಯೆಯ ಸರಯೂ ನದಿ ತೀರದ ರಾಮ್​ ಕಿ ಪಾಡಿಯಲ್ಲಿ ಸರಿಸುಮಾರು 10 ಲಕ್ಷ ದೀಪ ಬೆಳಗುತ್ತಿದ್ದು, ಇದರ ನಡುವೆ ಲೇಸರ್​​ ಲೈಟ್​ ಶೋಗಳೂ ಉತ್ಸವಕ್ಕೆ ಮತ್ತಷ್ಟು ಕಳೆ ತಂದಿದೆ. ಇದರೊಂದಿಗೆ ಕರ್ನಾಟಕದಲ್ಲಿಯೂ ಶ್ರೀರಾಮನ ಭಕ್ತರು ತಮ್ಮ ಮನೆಗಳಲ್ಲಿ, ಬೀದಿಗಳಲ್ಲಿ ಹಾಗೂ ದೇವಸ್ಥಾನಗಳಲ್ಲಿ ದೀಪೋತ್ಸವ ನೆರವೇರಿಸಿದ್ದಾರೆ.

    ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜ.22ರಂದು ಪ್ರತಿ ಮನೆ ಮನೆಗಳಲ್ಲೂ ರಾಮ ಜ್ಯೋತಿ ಬೆಳಗಿಸುವಂತೆ ಕರೆ ನೀಡಿದ್ದರು. ಹೊಸ ಯುಗದ ಆಗಮನದ ಸಂಕೇತವಾಗಿ ಸಂಜೆ ನಿಮ್ಮ ಮನೆಗಳಲ್ಲಿ ರಾಮ ಜ್ಯೋತಿ ಬೆಳಗಿಸಿ ಶ್ರೀರಾಮನಲ್ಲಿ ಪ್ರಾರ್ಥಿಸಿ ಎಂದು ಕರೆ ನೀಡಿದ್ದರು. ಇದನ್ನೂ ಓದಿ: ಕೊನೆಗೂ ನಮ್ಮ ರಾಮ ಬಂದಿದ್ದಾನೆ, ಇಂದಿನಿಂದ ಹೊಸ ಯುಗ ಉದಯವಾಗಿದೆ: ನರೇಂದ್ರ ಮೋದಿ

    ಅಯೋಧ್ಯೆ ತುಂಬ ರಾಮ ನಾಮ ಸ್ಮರಣೆ: ದೇಶದೆಲ್ಲೆಡೆ ರಾಮಾಲಯ (ರಾಮಮಂದಿರ) ಆರಂಭೋತ್ಸವದ ಸಂಭ್ರಮ ಮುಗಿಲುಮುಟ್ಟಿದೆ. ಅಯೋಧ್ಯೆಯ ತುಂಬಾ ರಾಮ ನಾಮ ಸ್ಮರಣೆ ಮಾರ್ದನಿಸಿದೆ. ಎಲ್ಲಿ ನೋಡಿದರೂ ರಾಮಧ್ವಜ, ರಾಮಜ್ಯೋತಿ, ಕೇಸರಿ ಶಾಲು ಧರಿಸಿದ ಭಕ್ತಗಣವೇ ಕಾಣುತ್ತಿದೆ.  ರಾಮಭಜನೆ, ಭಗವದ್ಗೀತೆ ಪಠಣ, ಪೂಜೆ ಪುನಸ್ಕಾರಗಳು ದೇಶದ ಮೂಲೆಮೂಲೆಯಲ್ಲಿ ನಡೆದಿದ್ದು, ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಅಮೆರಿಕ, ಪ್ಯಾರಿಸ್‌, ಮೆಕ್ಸಿಕೋ ಹಾಗೂ ರಷ್ಯಾ ದೇಶಗಳಲ್ಲಿಯೂ ಭಾರತೀಯ ಮೂಲದ ರಾಮಭಕ್ತರು ಈ ಸಂಭ್ರಮವನ್ನ ಹಂಚಿಕೊಂಡಿದ್ದಾರೆ.

  • ಮಂತ್ರಾಲಯದಲ್ಲಿ ತೆಪ್ಪೋತ್ಸವ – ತುಂಗಭದ್ರಾ ನದಿಯಲ್ಲಿ ಬೆಳಕಿನ ಸಂಭ್ರಮ

    ಮಂತ್ರಾಲಯದಲ್ಲಿ ತೆಪ್ಪೋತ್ಸವ – ತುಂಗಭದ್ರಾ ನದಿಯಲ್ಲಿ ಬೆಳಕಿನ ಸಂಭ್ರಮ

    ರಾಯಚೂರು: ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿ ಮಂತ್ರಾಲಯದಲ್ಲಿ (Mantralaya) ಕಾರ್ತಿಕ ಮಾಸ ಹಿನ್ನೆಲೆ ತುಂಗಾರತಿ ಸಂಭ್ರಮ ಕಳೆಗಟ್ಟಿದ್ದು, ತುಂಗಭದ್ರಾ ನದಿಯಲ್ಲಿ ಕಾರ್ತಿಕ ದೀಪೋತ್ಸವ ನೆರವೇರಿಸಲಾಯಿತು.

    ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ (Raghavendra Mutt) ದೀಪಗಳ ಉತ್ಸವವೇ ನಡೆಯಿತು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು (Subudhendra Teertha Swamiji) ತುಂಗಾಪೂಜೆ ಮಾಡಿದರು. ಶ್ರೀಗಳಿಂದ ಗುರುರಾಜರಿಗೆ ಹಾಗೂ ಶ್ರೀನಿವಾಸರಾಯರಿಗೆ ತೆಪ್ಪೋತ್ಸವ ನಡೆಯಿತು. ತುಂಗಭದ್ರಾ ನದಿಯಲ್ಲಿ ದೀಪಗಳನ್ನು ತೇಲಿಬಿಟ್ಟು ಭಕ್ತರು ಸಂಭ್ರಮಿಸಿದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಕಾರ್ತಿಕ ಮಾಸಾಚರಣೆ – ವಿಶೇಷ ವನಭೋಜನ

    ತುಂಗಾರತಿ ಹಿನ್ನೆಲೆ ಮಠದ ಆವರಣದಲ್ಲಿ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನವೆಂಬರ್ 8 ಮಂಗಳವಾರ ಕಾರ್ತಿಕ ಪೌರ್ಣಿಮಾ ದಿನ ನಡೆಯಬೇಕಿದ್ದ ತುಂಗಾ ಆರತಿ ಕಾರ್ಯಕ್ರಮವನ್ನು ಚಂದ್ರಗ್ರಹಣ ಇರುವುದರಿಂದ ಭಾನುವಾರ ಮಂತ್ರಾಲಯದಲ್ಲಿ ಆಚರಿಸಲಾಯಿತು. ಇದನ್ನೂ ಓದಿ: ವೀರಶೈವ, ಲಿಂಗಾಯತ ಎರಡೂ ಒಂದೇ: ಬಿದರಿ ಸ್ಪಷ್ಟನೆ

    Live Tv
    [brid partner=56869869 player=32851 video=960834 autoplay=true]

  • ಅಯೋಧ್ಯೆಯಲ್ಲಿ ದೀಪೋತ್ಸವಕ್ಕೆ ಮೋದಿ ಚಾಲನೆ – ರಾಮ ಜನ್ಮಭೂಮಿಯಲ್ಲಿ ಬೆಳಗಿದವು 18 ಲಕ್ಷ ದೀಪ

    ಅಯೋಧ್ಯೆಯಲ್ಲಿ ದೀಪೋತ್ಸವಕ್ಕೆ ಮೋದಿ ಚಾಲನೆ – ರಾಮ ಜನ್ಮಭೂಮಿಯಲ್ಲಿ ಬೆಳಗಿದವು 18 ಲಕ್ಷ ದೀಪ

    ಲಕ್ನೋ: ರಾಮನೂರು ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬ ಒಂದು ದಿನ ಮುಂಚಿತವಾಗಿಯೇ ದೀಪೋತ್ಸವ (Ayodhya Deepotsav 2022) ನಡೆದಿದೆ. ದೀಪೋತ್ಸವಕ್ಕೆ ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ಅವರು ಚಾಲನೆ ನೀಡಿದ್ದು, 18 ಲಕ್ಷ ದೀಪಗಳನ್ನು ಬೆಳಗುವ ಮೂಲಕ ದಾಖಲೆ ಸೃಷ್ಟಿಸಲಾಯಿತು.

    ಅಯೋಧ್ಯೆಯ (Ayodhya) ಸರಯೂ ತಟದಲ್ಲಿ ಅದ್ಧೂರಿ ದೀಪೋತ್ಸವಕ್ಕೆ ಮೋದಿ ಚಾಲನೆ ನೀಡಿದರು. 18 ಲಕ್ಷ ಮಣ್ಣಿನ ದೀಪಗಳನ್ನು ಬೆಳಗಲಾಯಿತು. ದೀಪದ ಹೊಂಬೆಳಕಿನಲ್ಲಿ ಸರಯೂ ನದಿ ತೀರದ 40 ಘಾಟ್‌ಗಳು ಮಿಂದೆದ್ದಿದ್ದು, ಗಿನ್ನಿಸ್ ದಾಖಲೆಯನ್ನೂ ಬರೆದಿದೆ. ಪವಿತ್ರ ಸರಯೂ ನದಿಗೆ ಮಹಾ ಆರತಿ ಬೆಳಗಲಾಗಿದೆ. ಮ್ಯೂಸಿಕಲ್ ಲೇಸರ್ ಶೋ ಮೂಲಕ ರಾಮಾಯಣ ಪ್ರಸ್ತುತಿಪಡಿಸಲಾಯ್ತು. ಈ ಸಂಭ್ರಮಕ್ಕೆ ರಷ್ಯಾ, ಮಾಲ್ಡೀವ್ಸ್, ಶ್ರೀಲಂಕಾ ಪ್ರತಿನಿಧಿಗಳ ಜೊತೆ ಪ್ರಧಾನಿ ಮೋದಿ ಸಾಕ್ಷಿಯಾದರು. ಇದನ್ನೂ ಓದಿ: ಕ್ಲೈಮ್ಯಾಕ್ಸ್ ಸೂಪರ್; `ಕಾಂತಾರ’ ಸಿನಿಮಾಗೆ ಇಂಡೋ-ಪಾಕ್ ಕದನ ಹೋಲಿಸಿ ಟ್ವಿಟ್ಟರ್‌ನಲ್ಲಿ ಟ್ರೆಂಡ್

    ಸಂಜೆ ಐದು ಗಂಟೆಗೆ ರಾಮಲೀಲ್ಲಾ (Ramaleela) ದರ್ಶನ ಮಾಡಿದ ಮೋದಿ, ನಂತರ ನಿರ್ಮಾಣ ಹಂತದ ರಾಮಮಂದಿರವನ್ನು ಪರಿಶೀಲಿಸಿದ್ರು. ರಾಮಕಥಾ ಉದ್ಯಾನಕ್ಕೂ ಭೇಟಿ ನೀಡಿದ್ರು. 4 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಇದೇ ವೇಳೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಇದನ್ನೂ ಓದಿ: ಗುಲಾಮಿ ಮನಸ್ಥಿತಿಯಿಂದ ಆಚೆ ಬರಲು ರಾಮನ ಪ್ರೇರಣೆ ಪಡೆಯಬೇಕು: ಮೋದಿ

    ಇದೇ ವೇಳೆ, ಕೊರಿಯಾ ದೇಶದ ಜೊತೆಗಿನ ಬಾಂಧವ್ಯದ ದ್ಯೋತಕವಾಗಿ ಪ್ರಧಾನಿ ಕೋರಿಯಾ ಪಾರ್ಕ್ (Coria Park) ಉದ್ಘಾಟಿಸಿದ್ರು. ಶತಮಾನಗಳ ಹಿಂದೆ ಅಯೋಧ್ಯೆ ಯುವರಾಣಿ, ಕೊರಿಯಾ ಯುವರಾಜನನ್ನು ವರಿಸಿದ್ದರು. ಅಂದಹಾಗೇ, ದೇಗುಲಗಳನ್ನು ಸಿಂಗರಿಸಲು 2,500 ಟನ್ ಹೂಗಳನ್ನು ಬಳಸಲಾಗಿದೆ. 22 ಸಾವಿರ ಸ್ವಯಂ ಸೇವಕರು ದಾಖಲೆಯ ದೀಪೋತ್ಸವದಲ್ಲಿ ಪಾಲ್ಗೊಂಡಿದ್ದರು. 

    2021 ರಲ್ಲಿ ಅಯೋಧ್ಯೆ ಆಡಳಿತವು ದೀಪೋತ್ಸವದಲ್ಲಿ 9,41,551 ದೀಪ ಬೆಳಗಿಸುವ ಮೂಲಕ ವಿಶ್ವದಾಖಲೆ ಮಾಡಿತ್ತು. ಆದರೆ ಉಜ್ಜಯಿನಿ ದೇವಸ್ಥಾನದಲ್ಲಿ ಮಹಾಶಿವರಾತ್ರಿಯಂದು 11,71,078 ದೀಪಗಳನ್ನು ಬೆಳಗಿಸಿ ಈ ದಾಖಲೆ ಮುರಿಯಲಾಗಿತ್ತು. ಇದೀಗ 18 ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸುವ ಮೂಲಕ ಅಯೋಧ್ಯೆ ಮತ್ತೊಂದು ಗಿನ್ನಿಸ್ ದಾಖಲೆ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಕಬ್ರಿಸ್ತಾನ್‌ಗಲ್ಲ.. ಜನರ ಹಣವನ್ನು ದೇಗುಲಗಳ ನಿರ್ಮಾಣಕ್ಕೆ ಬಿಜೆಪಿ ಬಳಸುತ್ತಿದೆ: ಯೋಗಿ ಆದಿತ್ಯನಾಥ್‌

    ಕಬ್ರಿಸ್ತಾನ್‌ಗಲ್ಲ.. ಜನರ ಹಣವನ್ನು ದೇಗುಲಗಳ ನಿರ್ಮಾಣಕ್ಕೆ ಬಿಜೆಪಿ ಬಳಸುತ್ತಿದೆ: ಯೋಗಿ ಆದಿತ್ಯನಾಥ್‌

    ಲಕ್ನೋ: ರಾಜ್ಯದಲ್ಲಿ ಹಿಂದಿನ ಸರ್ಕಾರಗಳು ಸಾರ್ವಜನಿಕ ಹಣವನ್ನು ಕಬ್ರಿಸ್ತಾನ್‌ಗೆ ವಿನಿಯೋಗಿಸುತ್ತಿದ್ದವು. ಆದರೆ ನಮ್ಮ ಬಿಜೆಪಿ ಸರ್ಕಾರ ಹಣವನ್ನು ದೇವಾಲಯಗಳ ನಿರ್ಮಾಣಕ್ಕೆ ಬಳಸುತ್ತಿದೆ ಎಂದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

    ದೀಪೋತ್ಸವ ಆಚರಣೆ ಹಿನ್ನೆಲೆಯಲ್ಲಿ ರಾಮ ಕಥಾ ಉದ್ಯಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ. ಜೊತೆಗೆ ಉತ್ತರ ಪ್ರದೇಶದಲ್ಲಿರುವ 500 ದೇವಾಲಯಗಳು ಹಾಗೂ ಇತರ ಧಾರ್ಮಿಕ ಸ್ಥಳಗಳ ನವೀಕರಣಕ್ಕಾಗಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನೋ ಪಟಾಕಿ ಎಂದವ್ರು 3 ದಿನ ಕಾರ್ ಬಳಸಬೇಡಿ, ನಡೆದುಕೊಂಡು ಹೋಗಿ: ಕಂಗನಾ ರಣಾವತ್

    ಕಬ್ರಿಸ್ತಾನ್‌ ಮೇಲೆ ಪ್ರೀತಿ ಇರುವವರು ಸಾರ್ವಜನಿಕ ಹಣವನ್ನು ಅಲ್ಲಿ ಖರ್ಚು ಮಾಡುತ್ತಾರೆ. ಆದರೆ ಧರ್ಮ ಮತ್ತು ಸಂಸ್ಕೃತಿ ಮೇಲೆ ಪ್ರೀತಿ ಇರುವವರು ಜನರ ಹಣವನ್ನು ಅವರಿಗಾಗಿಯೇ ಖರ್ಚು ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    30 ವರ್ಷಗಳ ಹಿಂದೆ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರೆ ಅಪರಾಧ ಎಂದು ಪರಿಗಣಿಸಲಾಗುತ್ತಿತ್ತು. ಆಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಈಗಿನ ವಿರೋಧ ಪಕ್ಷಗಳು ತಮಗೆ ಬೇಕಾದವರಿಗೆ ಗನ್‌ ತರಬೇತಿ ನೀಡಿದ್ದರು ಎಂದು ಆರೋಪಿಸಿದ್ದಾರೆ.

    2023ರ ಹೊತ್ತಿಗೆ ರಾಮಮಂದಿರ ನಿರ್ಮಾಣ ಕಾರ್ಯ ಮುಗಿಯಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಬ್ಲೂಟೂತ್ ಬಳಸಿ ಕಾನ್‍ಸ್ಟೇಬಲ್ ಪರೀಕ್ಷೆ ಬರೆಯಲು ಯತ್ನ – ಸಿಐಡಿಗೆ ತನಿಖೆ ವಹಿಸಿದ ರಾಜ್ಯ ಗೃಹ ಇಲಾಖೆ

    ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆ ಕುರಿತು ಮಾತನಾಡಿ, ರಾಜ್ಯದಲ್ಲಿ ಈ ಯೋಜನೆಯನ್ನು ಮುಂದುವರಿಸಲಾಗುವುದು. ಈ ಯೋಜನೆಯಿಂದ ರಾಜ್ಯದ ಬಡ ಜನರು ಮುಂದಿನ ವರ್ಷದ ಹೋಳಿ ಹಬ್ಬದವರೆಗೂ ಉಚಿತವಾಗಿ ಪಡಿತರ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

    ಕೋವಿಡ್‌ ಸಾಂಕ್ರಾಮಿಕ ಸಂದರ್ಭದಲ್ಲಿ ಬಡ ಜನರಿಗೆ ಸಹಕಾರಿಯಾಗುವಲ್ಲಿ ಈ ಯೋಜನೆ ಪ್ರಮುಖ ಪಾತ್ರ ವಹಿಸಿದೆ. ನವೆಂಬರ್‌ಗೆ ಉಚಿತ ಪಡಿತರ ವಿತರಣೆ ಕೊನೆಗೊಳ್ಳಬೇಕಿತ್ತು. ಆದರೆ ಸಾಂಕ್ರಾಮಿಕ ಇನ್ನೂ ಕೊನೆಯಾಗಿಲ್ಲ. ಹೀಗಾಗಿ ನಮ್ಮ ಸರ್ಕಾರ ಮುಂದಿನ ವರ್ಷದ ಮಾರ್ಚ್‌ವರೆಗೂ ಉಚಿತವಾಗಿ ಪಡಿತರ ವಿತರಿಸಲಿದೆ ಎಂದು ಹೇಳಿದ್ದಾರೆ.

    ಈ ಯೋಜನೆ ವಿಸ್ತರಣೆಯಿಂದ ರಾಜ್ಯದ 15 ಕೋಟಿ ಬಡಜನರಿಗೆ ಅನುಕೂಲವಾಗಲಿದೆ. ಪಡಿತರದೊಂದಿಗೆ ಉಪ್ಪು, ಸಕ್ಕರೆ, ಬೇಳೆ ಮತ್ತು ಅಡುಗೆ ಎಣ್ಣೆಯನ್ನೂ ಜನರಿಗೆ ನೀಡಲಾಗುತ್ತಿದೆ ಎಂದಿದ್ದಾರೆ.

    ಇದೇ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು, 661 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

  • ಬೆಳಗಲಿದೆ ಅಯೋಧ್ಯೆ- ದೀಪಾವಳಿಗೆ 5.51 ಲಕ್ಷ ದೀಪ ಹಚ್ಚಲು ಸಿದ್ಧತೆ

    ಬೆಳಗಲಿದೆ ಅಯೋಧ್ಯೆ- ದೀಪಾವಳಿಗೆ 5.51 ಲಕ್ಷ ದೀಪ ಹಚ್ಚಲು ಸಿದ್ಧತೆ

    – ದೀಪೋತ್ಸವಕ್ಕೆ ಹೊರಗಿನವರಿಗೆ ಅವಕಾಶವಿಲ್ಲ

    ಲಕ್ನೋ: ದೀಪಾವಳಿಯ ಅಂಗವಾಗಿ ಅಯೋಧ್ಯೆಯಲ್ಲಿ ದೀಪೋತ್ಸವಕ್ಕೆ ಭರದಿಂದ ಸಿದ್ಧತೆ ನಡೆಯಲಿದ್ದು, ಸರಯು ನದಿ ದಡದ 28 ಘಾಟ್‍ಗಳಲ್ಲಿ 5.51 ಲಕ್ಷ ಹಣತೆಗಳನ್ನು ಹಚ್ಚಲಾಗುತ್ತಿದೆ.

    ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ದೀಪಾವಳಿಯ ಸಂಭ್ರಮ ಮನೆ ಮಾಡಿದ್ದು, ಸರಯು ನದಿ ದಡದ 28 ಘಾಟ್‍ಗಳಲ್ಲಿ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬರೋಬ್ಬರಿ 5.51 ಲಕ್ಷ ಹಣತೆಗಳನ್ನು ಹಚ್ಚಲಾಗುತ್ತಿದೆ. ಅಲ್ಲದೆ ಖುದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೀಪೋತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ರಾಮಜನ್ಮಭೂಮಿಯಲ್ಲಿನ ರಾಮಲಲ್ಲಾಗೆ ನಮಸ್ಕರಿಸಿ, ರಾಮ್ ಕಿ ಪೈಡಿಯಲ್ಲಿ ದೀಪಗಳನ್ನು ಬೆಳಗಿಸಲಿದ್ದಾರೆ.

    ನವೆಂಬರ್ 13ರಂದು ಸರಯುವಿನ 28 ಘಾಟ್‍ಗಳಲ್ಲಿ ಬರೋಬ್ಬರಿ 5.51 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಆಡಳಿತ ಮಂಡಳಿ ಮತ್ತೊಂದು ಗಿನ್ನಿಸ್ ದಾಖಲೆ ನಿರ್ಮಿಸಲು ಮುಂದಾಗಿದೆ. ಈ ಕುರಿತು ಶುಕ್ರವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಅಯೋಧ್ಯೆಯಲ್ಲಿ ಸಂಭ್ರವನ್ನು ಹೆಚ್ಚಿಸುವಂತೆ ಕರೆ ನೀಡಿದ್ದಾರೆ.

    ಹೊರಗಿನಿಂದ ಬರುವವರಿಗೆ ಈ ದೀಪೋತ್ಸವಕ್ಕೆ ಅನುಮತಿ ಇಲ್ಲ. ಜನರು ತಮ್ಮ ಮನೆಗಳಿಂದ ದೀಪಗಳನ್ನು ತಂದು ರಾಮ್ ಕಿ ಪೈಡಿಯಲ್ಲಿ ಬೆಳಗಿಸಲು ತಿಳಿಸಲಾಗಿದೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ನಾಲ್ಕನೇ ದೀಪೋತ್ಸವ ಇದಾಗಿದೆ. ಕಳೆದ ಬಾರಿಯ ದೀಪಾವಳಿ ಸಂದರ್ಭದಲ್ಲಿ 4.10 ಲಕ್ಷ ದೀಪವನ್ನು ಬೆಳಗಿಸುವ ಮೂಲಕ ಅಯೋಧ್ಯೆ ಆಡಳಿತ ಮಂಡಳಿ ವಿಶ್ವ ದಾಖಲಿ ನಿರ್ಮಿಸಿತ್ತು. ದೀಪೋತ್ಸವ ಮಾತ್ರವಲ್ಲ ಕಾರ್ತಿಕ ಕುಂಭ ಮೇಳ, ಪಂಚ ಕೋಶಿ ಹಾಗೂ 14 ಕೋಶಿ ಪರಿಕ್ರಮಗಳಂತಹ ಇತರ ಆಕರ್ಷಣೆಯ ಆಚರಣೆಗಳ ಸಂದರ್ಭದಲ್ಲಿ ಹೊರಗಿನವರಿಗೆ ಅವಕಾಶ ಇರುವುದಿಲ್ಲ ಎಂದು ಅಲ್ಲಿನ ಅಧಿಕಾರಿ ತಿಳಿಸಿದ್ದಾರೆ.

    ನವೆಂಬರ್ 11ರಿಂದಲೇ ಅಯೋಧ್ಯೆಯ ಗಡಿ ಸೀಲ್ ಆಗಲಿದೆ. ಈ ವಿಶೇಷ ಆಚರಣೆಗಳಲ್ಲಿ ಸ್ಥಳೀಯರು ಮಾತ್ರ ಭಾಗವಹಿಸಲಿದ್ದಾರೆ. ಈ ವರ್ಷದ ದೀಪೋತ್ಸವ, ಕಾರ್ತಿ ಪೂರ್ಣಿಮೆ ಹಾಗೂ ಇತರೆ ಹಬ್ಬಗಳ ಸಂದರ್ಭದಲ್ಲಿ ಹೊರಗಿನವರಿಗೆ ಅವಕಾಶವಿರುವುದಿಲ್ಲ. ಈ ಕಾರ್ಯಕ್ರಮಗಳನ್ನು ಸ್ಥಳೀಯರಿಗೆ ಮಾತ್ರ ಸೀಮಿತಗೊಳಿಸಲಾಗಿದೆ ಎಂದು ಅಯೋಧ್ಯೆಯ ವಿಭಾಗೀಯ ಆಯುಕ್ತ ಎಂ.ಪಿ.ಅಗರ್ವಾಲ್ ಮಾಹಿತಿ ನೀಡಿದ್ದಾರೆ.

    ಅಯೋಧ್ಯೆಯಲ್ಲಿ ನಡೆಯುವ ಐದು ದಿನಗಳ ದೀಪೋತ್ಸವ ನವೆಂಬರ್ 12ಕ್ಕೆ ಆರಂಭವಾಗುತ್ತದೆ. ನವೆಂಬರ್ 13ರಂದು ಪ್ರಮುಖ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಲಾಗುತ್ತದೆ. ನವೆಂಬರ್ 30ರ ವರೆಗೆ ಅಂದರೆ ಕಾರ್ತಿಕ ಪೂರ್ಣಿಮೆ ಮಗಿಯುವ ವರೆಗೆ ಇತರ ಕಾರ್ಯಕ್ರಮಗಳು ನಡೆಯಲಿವೆ.

  • ಅಯೋಧ್ಯೆಯಲ್ಲಿ 5.51 ಲಕ್ಷ ದೀಪ ಬೆಳಗಿಸಿ ಗಿನ್ನಿಸ್ ರೆಕಾರ್ಡ್

    ಅಯೋಧ್ಯೆಯಲ್ಲಿ 5.51 ಲಕ್ಷ ದೀಪ ಬೆಳಗಿಸಿ ಗಿನ್ನಿಸ್ ರೆಕಾರ್ಡ್

    ಅಯೋಧ್ಯೆ: ಬೆಳಕಿನ ಹಬ್ಬ ದೀಪಾವಳಿಯನ್ನು ಎಲ್ಲೆಡೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಶುಭಸಂಭ್ರಮದ ಹಿನ್ನೆಲೆಯಲ್ಲಿ ಶನಿವಾರ ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಬರೋಬ್ಬರಿ 5.51 ಲಕ್ಷ ದೀಪಗಳನ್ನು ಬೆಳಗಿಸಿ ದೀಪಾವಳಿ ಹಬ್ಬದ ದೀಪೋತ್ಸವವನ್ನು ಆಚರಿಸಲಾಗಿದ್ದು, ಇದು ಗಿನ್ನಿಸ್ ಬುಕ್ ದಾಖಲೆಗೆ ಸಾಕ್ಷಿಯಾಗಿದೆ.

    5.51 ಲಕ್ಷ ದೀಪಗಳಲ್ಲಿ, ಸುಮಾರು 4 ಲಕ್ಷಗಳನ್ನು ರಾಮ್ ಪೈಡಿಯಲ್ಲಿ ಬೆಳಗಿಸಲಾಗಿತ್ತು. ಉಳಿದ ದೀಪಗಳನ್ನು ನಗರದ ಇತರೆ ದೇವಾಲಯಗಳಲ್ಲಿ ಬೆಳಗಿಸಲಾಯಿತು. ಅದರಲ್ಲೂ ಅಯೋಧ್ಯೆಯಲ್ಲಿ ರಾರಾಜಿಸಿದ ದೀಪಗಳೆಲ್ಲವೂ ಮಣ್ಣಿನ ದೀಪಗಳಾಗಿರುವುದು ವಿಶೇಷವಾಗಿತ್ತು.

    ಅಯೋಧ್ಯೆಯ ವಿಶೇಷ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ್ ಭಾಗಿಯಾಗಿದ್ದರು. ಈ ವೇಳೆ ಶ್ರೀರಾಮ ಆಳ್ವಿಕೆ ನಡೆಸಿದ ತ್ರೇತಾಯುಗದ ಮರುನಿರ್ಮಾಣ ಮಾಡಲಾಗಿತ್ತು. ಶ್ರೀರಾಮ ಹಾಗೂ ಸೀತಾಮಾತೆಯರು ಪುಷ್ಪಕ ವಿಮಾನದ ಮೂಲಕ ಸರಯೂ ನದಿಯ ದಂಡೆ ಮೇಲಿಳಿದ ದೃಶ್ಯಗಳನ್ನು ಪುನರ್ ಸೃಷ್ಟಿಸಲಾಗಿತ್ತು. ಈ ಕಲಾಕೃತಿಗಳು ಭಕ್ತಾದಿಗಳ ಕಣ್ಮನ ಸೆಳೆಯಿತು. ಹಾಗೆಯೇ ದೇಶದ ವಿವಿಧ ರಾಜ್ಯಗಳಿಂದ ಬಂದಿದ್ದ ಕಲಾತಂಡಗಳು ಅಯೋಧ್ಯೆ ದೀಪೋತ್ಸವದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದವು.

    ಶ್ರೀರಾಮನ ಜನ್ಮ ಸ್ಥಳ ಅಯೋಧ್ಯೆ ಬಗ್ಗೆ ಸಿಎಂ ಯೋಗಿ ಮಾತನಾಡಿ, ಹಿಂದಿನ ಸಿಎಂಗಳು ಅಯೋಧ್ಯೆಗೆ ಭೇಟಿ ನೀಡದೆ ಕಾರಣಗಳನ್ನು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು. ಆದರೆ ನಾನು ಕಳೆದ ಎರಡೂವರೆ ವರ್ಷಗಳಲ್ಲಿ ಸಾಕಷ್ಟು ಬಾರಿ ಅಯೋಧ್ಯೆಗೆ ಭೇಟಿ ಕೊಟ್ಟಿದ್ದೇನೆ. ಇಲ್ಲಿ ಬಡವ, ಶ್ರೀಮಂತ ಎನ್ನುವ ಭೇದಭಾವವಿಲ್ಲ. ಧರ್ಮ ಭೇದವೂ ಎಲ್ಲ. ಇಲ್ಲಿ ಎಲ್ಲರೂ ಸಮಾನರೆಂದು ಜನರು ಖುಷಿಯಾಗಿ ಬಾಳುತ್ತಿದ್ದಾರೆ ಎಂದು ಖುಷಿಯನ್ನು ಹಂಚಿಕೊಂಡರು.

    ಹಾಗೆಯೇ ಈ ಬಾರಿ ಅಯೋಧ್ಯೆಯಲ್ಲಿ ನಡೆಯುತ್ತಿರುವುದು ಮೂರನೇ ದೀಪೋತ್ಸವ. ಕಳೆದ ಬಾರಿ 3,51,000 ದೀಪಗಳನ್ನು ಬೆಳಗಿಸಿ ದಾಖಲೆ ನಿರ್ಮಿಸಲಾಗಿತ್ತು. ಆದರೆ ಈ ಬಾರಿ 4 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಿಸಿ ಹೊಸ ದಾಖಲೆ ಬರೆಯಲಾಗಿದೆ. ಇದನ್ನು ಗಿನ್ನೆಸ್ ವರ್ಲ್ಡ್ ರೆಕಾರ್ಡ್‌ಗೂ ಪರಿಗಣಿಸಲಾಗಿದೆ ಎಂದು ತಿಳಿಸಿದರು.

  • ಬಿಂಡಿಗ ದೇವಿರಮ್ಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತರು

    ಬಿಂಡಿಗ ದೇವಿರಮ್ಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತರು

    ಚಿಕ್ಕಮಗಳೂರು: ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಜಿಲ್ಲೆಯ ಮಲ್ಲೇನಹಳ್ಳಿ ಗ್ರಾಮದ ಬಿಂಡಿಗ ದೇವಿರಮ್ಮ ದೇಗುಲಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬರುತ್ತಿದ್ದಾರೆ.

    ಚಂದ್ರದ್ರೋಣ ಪರ್ವತ ಶ್ರೇಣಿಗೆ ಹೊಂದಿಕೊಂಡಿರುವ ಬಿಂಡಿಗ ದೇವಿರಮ್ಮ ಬೆಟ್ಟವು 3 ಸಾವಿರ ಅಡಿ ಎತ್ತರವಿದ್ದು, ಜಿಲ್ಲೆ, ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಇದರಿಂದಾಗಿ ಚಿಕ್ಕಮಗಳೂರು ನಗರ ಸೇರಿದಂತೆ ಮಲ್ಲೇನಹಳ್ಳಿಯಲ್ಲಿ ಪೊಲೀಸ್ ಬಿಗಿ ಬಂದೋ ಬಸ್ತ್ ಒದಗಿಸಲಾಗಿದೆ.

    ವಿಶೇಷತೆ ಏನು?:
    ಮಲ್ಲೇನಹಳ್ಳಿ ಸಮೀಪದ ಬಿಂಡಿಗ ದೇವಿರಮ್ಮ ದೀಪೋತ್ಸವ ದೀಪಾವಳಿಯಂದು ನಡೆಯುತ್ತದೆ. ಅಂದು ದೀಪ ಹಚ್ಚುವುದು, ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ವರ್ಷಪೂರ್ತಿ ತಣ್ಣಗೆ ಇರುವ ಈ ಬೆಟ್ಟವನ್ನು ಏರಲು ಮಧ್ಯರಾತ್ರಿಯಿಂದಲೇ ಭಕ್ತರು ಸಕಲ ಸಿದ್ಧತೆ ಮಾಡಿಕೊಂಡಿರುತ್ತಾರೆ. ಬೆಟ್ಟದಲ್ಲಿ ಕಡಿದಾದ ಅಂಕು ಡೊಂಕಿನ ಹಾದಿಯಿದ್ದು, ಸಾಲು-ಸಾಲಾಗಿ ಜನರು ಬೆಟ್ಟ ಹತ್ತುತ್ತಾರೆ.

    ಮಳೆ, ಚಳಿ, ಗಾಳಿಯನ್ನು ಲೆಕ್ಕಿಸದೇ ಬೆಟ್ಟವೇರಿ, ದೇವಿಯ ದರ್ಶನ ಪಡೆದು ಧನ್ಯರಾಗುತ್ತಾರೆ. ಬೆಟ್ಟದ ಕೆಳಭಾಗದಲ್ಲಿ ದೇವಿರಮ್ಮ ದೇವಾಲಯವಿದ್ದು, ಪ್ರತಿ ದೀಪಾವಳಿ ದಿನದಂದು ಉತ್ಸವ ಮೂರ್ತಿಯನ್ನು ಬೆಟ್ಟಕ್ಕೆ ತಂದು ಇಡಲಾಗುತ್ತದೆ. ಇಲ್ಲಿಗೆ ಆಗಮಿಸುವ ಭಕ್ತರು ದೇವಿ ಪೂಜೆಯಲ್ಲಿ ಭಾಗವಹಿಸಿ, ವಿಶ್ರಾಂತಿ ಪಡೆದು ಮತ್ತೆ ಕೆಳಗೆ ಇಳಿಯುತ್ತಾರೆ. ಬೆಟ್ಟ ಏರುವುದು ಎಷ್ಟು ಕಷ್ಟವೋ ಅಷ್ಟೇ ಪ್ರಮಾಣದಲ್ಲಿ ಇಳಿಯುವುದೂ ಸಾಹಸವೇ ಆಗಿದೆ.

    ರಾಜ್ಯ ಸೇರಿದಂತೆ, ನೆರೆಯ ರಾಜ್ಯಗಳಿಂದ ಅನೇಕ ಭಕ್ತರು ಇಲ್ಲಿಗೆ ಬರುತ್ತಾರೆ. ದಣಿವು, ಆಯಾಸವನ್ನು ಲೆಕ್ಕಿಸದೇ ಬೆಟ್ಟ ಹತ್ತಿ ದೇವಿಯ ದರ್ಶನ ಪಡೆಯುತ್ತಾರೆ. ಬೆಟ್ಟದ ಮೇಲೆ ಅಥವಾ ಅಡಿಯಲ್ಲಿ ನಿಂತು ನೋಡಿದರೆ, ಬೆಟ್ಟ ಏರುವ ದೃಶ್ಯವು ಇರುವೆಗಳು ಸಾಲಾಗಿ ಹರಿದು ಹೋಗುತ್ತಿರುವಂತೆ ಕಾಣುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಇಲ್ಲಿಗೆ ಭಕ್ತರು ಬರುವುದರಿಂದ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗುತ್ತದೆ.

    ಬಿಂಡಿಗ ದೇವಿರಮ್ಮ ದೇಗುಲದಲ್ಲಿ ಇಂದು ಬೆಳಗ್ಗೆ ವಿಶೇಷ ಪೂಜೆ ನಡೆಯುತ್ತದೆ. ಮತ್ತೆ ರಾತ್ರಿ ದೀಪವನ್ನು ಹಚ್ಚಲಾಗುತ್ತದೆ. ದೇಗುಲದಲ್ಲಿ ದೀಪ ಹಚ್ಚಿದ ಬಳಿಕ, ಸುತ್ತಮುತ್ತಲಿನ ಗ್ರಾಮಗಳ ಮನೆಗಳಲ್ಲಿ ದೀಪ ಬೆಳಗಿಸುವ ಸಂಪ್ರದಾಯ ಹಿಂದಿನಿಂದಲೂ ನಡೆದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv