Tag: ದುರ್ಗಾ ದೇವಿ

  • ಪ್ರತಿಷ್ಠಾಪನೆಯಾಗಿದ್ದ ದುರ್ಗಾ ದೇವಿಯ ವಿಗ್ರಹ ವಿರೂಪ – ಇಬ್ಬರು ಮಹಿಳೆಯರು ಅರೆಸ್ಟ್

    ಪ್ರತಿಷ್ಠಾಪನೆಯಾಗಿದ್ದ ದುರ್ಗಾ ದೇವಿಯ ವಿಗ್ರಹ ವಿರೂಪ – ಇಬ್ಬರು ಮಹಿಳೆಯರು ಅರೆಸ್ಟ್

    ಹೈದರಾಬಾದ್: ದುರ್ಗಾ ದೇವಿಯ ವಿಗ್ರಹವನ್ನು (Goddess Durga Idol) ವಿರೂಪಗೊಳಿಸಿದ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಘಟನೆ ಹೈದರಾಬಾದ್‍ನಲ್ಲಿ (Hyderabad) ನಡೆದಿದೆ.

    ಇಬ್ಬರು ಮಹಿಳೆಯರು (Women) ನಗರದ ಖೈರತಾಬಾದ್ ಪ್ರದೇಶದ ದುರ್ಗಾ ಮಂಟಪಕ್ಕೆ ನುಗ್ಗಿದ್ದಾರೆ. ಆ ಮಹಿಳೆಯರಲ್ಲಿ ಒಬ್ಬಾಕೆ ಸ್ಪ್ಯಾನರ್‌ನಿಂದ ವಿಗ್ರಹದ ಮೇಲೆ ದಾಳಿ ಮಾಡಿದ್ದಾಳೆ. ಅಷ್ಟೇ ಅಲ್ಲದೇ ಆಕೆಯನ್ನು ತಡೆಯಲು ಮುಂದಾದ ಸ್ಥಳೀಯರ ಮೇಲೂ ಇಬ್ಬರು ಮಹಿಳೆಯರು ಸೇರಿ ಹಲ್ಲೆ ನಡೆಸಿದ್ದಾರೆ.

    ಘಟನೆ ವೇಳೆ ದುರ್ಗಾ ದೇವಿಯ ಪಕ್ಕದಲ್ಲಿರುವ ಸಿಂಹವನ್ನು ವಿರೂಪಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಆರೋಪಿಗಳಿಬ್ಬರನ್ನೂ ಸೈದನಾಬಾದ್ ಪೊಲೀಸರು ಬಂಧಿಸಲಾಗಿದೆ (Arrest). ಇದನ್ನೂ ಓದಿ: ಪ್ರಮೋದಾ ದೇವಿ ಮುಂದೆ ಮಂಡಿಯೂರಿ ನಮಸ್ಕರಿಸಿದ ಸುಧಾಮೂರ್ತಿ – ಫೋಟೋ ವೈರಲ್

    ಘಟನೆಗೆ ಸಂಬಂಧಿಸಿ ಕೇಂದ್ರ ವಲಯದ ಡಿಸಿಪಿ ರಾಜೇಶ್ ಚಂದ್ರ ಮಾತನಾಡಿ, ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಇಬ್ಬರು ಮಹಿಳೆಯರು ನವರಾತ್ರಿ ಪ್ರಯುಕ್ತ ಪ್ರತಿಷ್ಠಾಪಿಸಲಾಗಿದ್ದ ದುರ್ಗಾ ದೇವಿಯ ಮಂಟಪಕ್ಕೆ ನುಗ್ಗಿ ವಿಗ್ರಹವನ್ನು ವಿರೂಪಗೊಳಿಸಿದ್ದಾರೆ. ಈ ಕುರಿತು ಸ್ಥಳೀಯರಿಂದ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಆ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.

    ವಿಚಾರಣೆಯ ನಂತರ ಇಬ್ಬರು ಮಹಿಳೆಯರು ಮಾನಸಿಕ ಅಸ್ವಸ್ಥರಾಗಿದ್ದು, ಅವರಿಬ್ಬರಿಗೆ ನಮ್ಮ ಪ್ರಶ್ನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನಾವು ವೈದ್ಯರ ಸಹಾಯ ತೆಗೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರಗಿತು ಭಾರೀ ಸಂಪತ್ತು – ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದ ಅದಾನಿ

    Live Tv
    [brid partner=56869869 player=32851 video=960834 autoplay=true]

  • ದುರ್ಗಾ ದೇವಿ ರೀತಿ ಮಮತಾ ಬ್ಯಾನರ್ಜಿ ವಿಗ್ರಹ ಸ್ಥಾಪನೆ

    ದುರ್ಗಾ ದೇವಿ ರೀತಿ ಮಮತಾ ಬ್ಯಾನರ್ಜಿ ವಿಗ್ರಹ ಸ್ಥಾಪನೆ

    ಕೊಲ್ಕತ್ತಾ: ದುರ್ಗಾ ದೇವಿ ರೀತಿ ಮಮತಾ ಬ್ಯಾನರ್ಜಿ ಅವರ ಫೋಟೋವನ್ನು ಕೊಲ್ಕತ್ತಾದಲ್ಲಿ ಸ್ಥಾಪನೆ ಮಾಡಲಾಗಿದೆ.

    ನಿನ್ನೆಯಿಂದ ನವರಾತ್ರಿ ಪೂಜೆ ಪ್ರಾರಂಭವಾಗಿದೆ. ಈ ನಡುವೆ ಕೋಲ್ಕಾತ್ತಾದಲ್ಲಿ ದುರ್ಗಾ ಪೂಜೆಗೆ ತೃಣಮೂಲ ಕಾಂಗ್ರೆಸ್ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ ಅವರ ಫೋಟೋವನ್ನು ದೇವತೆಯ ವಿಗ್ರಹದಂತೆ ಸ್ಥಾಪಿಸಿದ್ದು, ಅವರನ್ನು ದುರ್ಗಾ ದೇವಿಯಂತೆ ಚಿತ್ರಿಸಲಾಗಿದೆ. ವಿಗ್ರಹದ ಪ್ರತಿಯೊಂದು ಬಿಂಬವು ಅವರ ಸರ್ಕಾರದ ಪ್ರತಿ ಅಂಶವನ್ನು ಪ್ರತಿನಿಧಿಸುತ್ತದೆ ಎಂದು ಬಾಗುಯತಿ ನಜರುಲ್ ಪಾರ್ಕ್ ಉನ್ನಯನ ಸಮಿತಿಯ ಅಧ್ಯಕ್ಷ ಇಂದ್ರನಾಥ್ ಬಾಗಿ ಹೇಳಿದರು. ಇದನ್ನೂ ಓದಿ: ಥ್ರೋಬ್ಯಾಕ್ ವೀಡಿಯೋ ಎಂದು ವೈರಲ್ ವೀಡಿಯೋ ಶೇರ್ ಮಾಡಿದ ಡಿಡಬ್ಲ್ಯೂಆರ್

    ಈ ವಿಗ್ರಹವನ್ನು ನೋಡಿದರೆ, ಮಮತಾ ಬ್ಯಾನರ್ಜಿ ಅವರಂತೆ ನೀಲಿ ಹಂಚು ಮತ್ತು ಬಿಳಿ ಸೀರೆಯನ್ನು ಉಟ್ಟು ನಮಸ್ಕರಿಸಿ ನಿಂತಿದ್ದಾರೆ. ಇನ್ನೂ ಅವರ ಹಿಂದೆ ಇರುವ ಎಂಟು ಕೈಗಳು, ಅವರ ಸರ್ಕಾರದಲ್ಲಿ ಕೈಗೊಂಡಿದ್ದ ಯೋಜನೆಗಳು ಮತ್ತು ಸಾಧನೆಯನ್ನು ಪ್ರತಿನಿಧಿಸುತ್ತದೆ. ಇವರು ಬರೆದಿರುವ ಸಾಧನೆಯ ಲಿಪಿಯು ಉಪಭಾಷೆ ಬಂಗಾಳಿಯಲ್ಲಿದೆ.

    ಈ ಚಿತ್ರದ ಹಿಂದೆ ವಿಶ್ವ ಭೂಪಟವಿದ್ದು, ಇದು ಬ್ಯಾನರ್ಜಿ ಅವರ ಸಾಧನೆಯನ್ನು ಪ್ರತಿಬಿಂಬಿಸುತ್ತೆ. ಬ್ಯಾನರ್ಜಿ ಅವರು ಕಳೆದ ಸಮಯ, ಸ್ಥಳ ಮತ್ತು ಇತರ ಎಲ್ಲ ಅಂಶಗಳನ್ನು ಚಿತ್ರಿಸಲಾಗಿದೆ. ಈ ಹಿನ್ನೆಲೆ ವಾಸ್ತವದ ಬಗ್ಗೆ ಹೆಚ್ಚು ಮಾತನಾಡುತ್ತದೆ. ಇದನ್ನೂ ಓದಿ: ಹಣೆಗೆ ಗುಂಡು ಹಾರಿಸಿಕೊಂಡು 71 ವರ್ಷದ ವೃದ್ಧ ಸಾವು

    ಇತ್ತೀಚೆಗೆ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಭವಾನಿಪುರ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಪ್ರಿಯಾಂಕಾ ಅವರನ್ನು ಸೋಲಿಸಿ ಗೆದ್ದಿದ್ದಾರೆ. ಇವರ ಚುನಾವಣಾ ಪ್ರಣಾಳಿಕೆಯಲ್ಲಿ, 25-60 ವರ್ಷ ವಯಸ್ಸಿನ ಕುಟುಂಬಗಳ ಮುಖ್ಯಸ್ಥರಿಗೆ ‘ಲಕ್ಷ್ಮಿ ಭಂಡಾರ್ ಯೋಜನೆ’ಯ ಮೂಲಕ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

  • ದುರ್ಗೆಗೆ ಮಾಸ್ಕ್ ತೊಡಿಸಿದ ಅರ್ಚಕ – ಪ್ರಸಾದವಾಗಿ ಮಾಸ್ಕ್ ವಿತರಣೆ

    ದುರ್ಗೆಗೆ ಮಾಸ್ಕ್ ತೊಡಿಸಿದ ಅರ್ಚಕ – ಪ್ರಸಾದವಾಗಿ ಮಾಸ್ಕ್ ವಿತರಣೆ

    ಲಕ್ನೋ: ಭಾರತಾದ್ಯಂತ ಕೊರೊನಾ ಎರಡನೇ ಅಲೆ ಅಪ್ಪಳಿಸಿದೆ. ವೈರಸ್‍ನನ್ನು ತಡೆಗಟ್ಟಲು ಜನರಿಗೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹಲವಾರು ಸಲಹೆಗಳನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಈ ಮಧ್ಯೆ ಕೊರೊನಾ ಸಮಯದಲ್ಲಿ ಮಾಸ್ಕ್ ಧರಿಸುವುದು ಎಷ್ಟು ಮುಖ್ಯ ಎಂಬುವುದರ ಬಗ್ಗೆ ಜನರಿಗೆ ತಿಳಿ ಹೇಳಲು ಉತ್ತರ ಪ್ರದೇಶದ ಅರ್ಚಕರೊಬ್ಬರು ದೇವಾಲಯದಲ್ಲಿರುವ ದುರ್ಗ ದೇವಿ ದೇವರ ವಿಗ್ರಹಕ್ಕೆ ಮಾಸ್ಕ್ ಹಾಕಿದ್ದಾರೆ. ಸದ್ಯ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಹೌದು, ಚೈತ್ರ ನವರಾತ್ರಿಯ ಎರಡನೇ ದಿನವಾದ ಬುಧವಾರದಂದು, ಭಕ್ತಾದಿಗಳು ದೇವಾಲಯಕ್ಕೆ ಬಂದಾಗ ದುರ್ಗ ದೇವಿ ಮಾಸ್ಕ್ ಧರಿಸಿರುವುದನ್ನು ಕಂಡು ಅಚ್ಚರಿಗೊಂಡಿದ್ದಾರೆ. ಅಷ್ಟೇ ಅಲ್ಲದೇ ಅರ್ಚಕರು ಭಕ್ತರಿಗೆ ಪ್ರಸಾದವಾಗಿ ಮಾಸ್ಕ್‌ನನ್ನು ವಿತರಿಸಿದ್ದು ವಿಶೇಷವಾಗಿತ್ತು.

    ಈ ಕುರಿತಂತೆ ಪ್ರತಿಕ್ರಿಯಿಸಿದ ದೇವಾಲಯದ ಅರ್ಚಕ ಮನೋಜ್ ಶರ್ಮ, ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿರುವುದರಿಂದ, ಅವರಿಗೆ ಒಂದು ಬಲವಾದ ಸಂದೇಶವನ್ನು ಸಾರುವ ಸಲುವಾಗಿ ದೇವಿಯ ವಿಗ್ರಹಕ್ಕೆ ಮಾಸ್ಕ್ ತೊಡಿಸಬೇಕೆಂದು ನಿರ್ಧರಿಸಿದೆ. ಭಕ್ತರಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲು ನಾವು ಮಾಸ್ಕ್‌ಗಳನ್ನು ಪ್ರಸಾದಂತೆ ವಿತರಿಸುತ್ತಿದ್ದೇವೆ ಎಂದರು.

    ದೇವಾಲಯಕ್ಕೆ ಬರುವ ಭಕ್ತರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಿದ್ದೇವೆ. ದೇವಾಲಯದ ಆವರಣದಲ್ಲಿ ಕೋವಿಡ್ ಕುರಿತಂತೆ ಹಲವರು ಸಲಹಾ ಪಟ್ಟಿಯನ್ನು ಅಳವಡಿಸಿದ್ದೇವೆ. ಬೆಳಗ್ಗೆ ಹಾಗೂ ಸಂಜೆ ಮಾತ್ರ ದೇವಿಗೆ ಆರತಿ ಮಾಡಲಾಗುತ್ತದೆ. ಒಂದು ಬಾರಿಗೆ ದೇವಾಲಯದ ಒಳಗೆ 5 ಮಂದಿಗೆ ಮಾತ್ರ ಪ್ರವೇಶಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

  • ಅವಧಿ ಮೀರಿದ ಮಾತ್ರೆಗಳಿಂದ ತಯಾರಾದ ದುರ್ಗಾ ದೇವಿ

    ಅವಧಿ ಮೀರಿದ ಮಾತ್ರೆಗಳಿಂದ ತಯಾರಾದ ದುರ್ಗಾ ದೇವಿ

    – ಕಲಾವಿದನ ಕಲೆಗೆ ನೆಟ್ಟಿಗರು ಫಿದಾ

    ಡಿಸ್ಪುರ್: ಇಡೀ ಜಗತ್ತು ಕೊರೊನಾ ವೈರಸ್ ನಿಂದ ನಲುಗಿ ಹೋಗಿದೆ. ಈ ವೈರಸ್ ನಿಂದ ಹೋರಾಡಲು ಪ್ರತಿಯೊಬ್ಬರಿಗೂ ಶಕ್ತಿ ನೀಡಲು ಅಸ್ಸಾಂ ಮೂಲದ ವ್ಯಕ್ತಿಯೊಬ್ಬರು ಅವಧಿ ಮೀರಿದ ಮಾತ್ರೆಗಳು ಹಾಗೂ ಇಂಜೆಕ್ಷನ್ ಬಾಟ್ಲಿಗಳಿಂದ ದುರ್ಗಾ ದೇವಿಯ ವಿಗ್ರಹವನ್ನು ತಯಾರಿಸಿದ್ದಾರೆ.

    ವ್ಯಕಿಯನ್ನು ಸಂಜೀಬ್ ಬಸಾಕ್ ಎಂದು ಗುರುತಿಸಲಾಗಿದ್ದು, ಇವರು ಧುಬ್ರಿ ಜಿಲ್ಲಾಡಳಿದ ಉದ್ಯೋಗಿಯಾಗಿದ್ದಾರೆ. ಇವರು ಕಳೆದ ಕೆಲವು ವರ್ಷಗಳಿಂದ ವಿವಿಧ ರೀತಿಗಳಲ್ಲಿ ವಿಗ್ರಹಗಳನ್ನು ವಿನ್ಯಾಸಗೊಳಿಸುವುದು ಹಾಗೂ ಪರಿಸರ ಸ್ನೇಹಿ ವಿಚಾರಗಳನ್ನು ಮಂಡಿಸಿದ್ದಾರೆ. ಆದರೆ ಈ ವರ್ಷ ಕೋವಿಡ್ 19 ಬಿಕ್ಕಟ್ಟಿನ ಮಧ್ಯೆ ಹೊಸದೇನಾದರೂ ಮಾಡಬೇಕು ಎಂದು ಬಯಸಿದ್ದರು. ಸರ್ಕಾರಿ ನೌಕರ ತಯಾರಿಸಿದ ದೇವಿ ವಿಗ್ರಹ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ ವ್ಯಕ್ತಿಯ ಕಲೆಗೆ ನೆಟ್ಟಿಗರು ಭೇಷ್ ಎಂದಿದ್ದಾರೆ.

    ಲಾಕ್‍ಡೌನ್ ಸಮಯದಲ್ಲಿ ಜನಸಾಮಾನ್ಯರು ಔಷಧಿಗಳನ್ನು ಕೊಂಡುಕೊಳ್ಳಲು ಮೆಡಿಕಲ್ ಗಳ ಮುಂದೆ ಜನ ಸಾಲುಗಟ್ಟಿ ನಿಂತಿರುವುದನ್ನು ಗಮನಿಸಿದ್ದೆ. ಈ ಹಿನ್ನೆಲೆಯಲ್ಲಿ ಔಷಧಿಗಳಿಂದ ದುರ್ಗಾ ದೇವಿಯ ವಿಗ್ರಹವನ್ನು ತಯಾರಿಸುವ ಆಲೋಚನೆ ಮಾಡಿದೆ ಎಂದು ಬಸಾಕ್ ತಿಳಿಸಿದ್ದಾರೆ.

    ಕಳೆದ ವರ್ಷ ಇವರು ವಿದ್ಯುತ್ ವಯರ್ ಗಳಿಂದ ತಯಾರಿಸಿದ್ದರು. ಬಸಾಕ್ ಅವರು ಈ ವಿಗ್ರಹ ತಯಾರಿಸಲು ಸುಮಾರು 5 ತಿಂಗಳು ತೆಗೆದುಕೊಂಡಿದ್ದಾರೆ. ಸುಮಾರು 40 ಸಾವಿರ ಮಾತ್ರೆಗಳು ಹಾಗೂ ವಿವಿಧ ಬಣ್ಣಗಳ ಇಂಜೆಕ್ಷನ್ ಬಾಟ್ಲಿಗಳ ಮೂಲಕ ಅವರ ಕಲ್ಪನೆಗೆ ಆಕಾರ ನೀಡಿದ್ದಾರೆ.

    ಆರಂಭದಲ್ಲಿ ಕೆಲಸದ ಒತ್ತಡ ಹಾಗೂ ಕಟ್ಟುನಿಟ್ಟಾದ ಕೊರೊನಾ ನಿಯಮಗಳಿಂದ ವಿಗ್ರಹ ತಯಾರಿಸಲು ಸಾಧ್ಯವಾಗಿರಲಿಲ್ಲ. ಕೊನೆಗೆ ಅವಧಿ ಮೀರಿದ ಮಾತ್ರೆಗಳಿಂದ ದೇವಿ ವಿಗ್ರಹ ತಯಾರಿಸಲು ಪ್ಲಾನ್ ಮಾಡಿದೆ ಎಂದರು. ಮಾತ್ರೆಗಳನ್ನು ಅಂಟಿಸಲು ಪೇಪರ್ ಹಾಗೂ ಥರ್ಮೋಕಾಲ್ ಗಳನ್ನು ಬಳಸಿರುವುದಾಗಿಯೂ ಬಸಾಕ್ ವಿವರಿಸಿದ್ದಾರೆ.

  • ದೇಶದ ದುಬಾರಿ ಮೂರ್ತಿ – 50 ಕೆ.ಜಿ ಚಿನ್ನದಲ್ಲಿ ದುರ್ಗೆಗೆ ಅಲಂಕಾರ

    ದೇಶದ ದುಬಾರಿ ಮೂರ್ತಿ – 50 ಕೆ.ಜಿ ಚಿನ್ನದಲ್ಲಿ ದುರ್ಗೆಗೆ ಅಲಂಕಾರ

    ಕೊಲ್ಕತ್ತಾ: ದೇಶದೆಲ್ಲೆಡೆ ನವರಾತ್ರಿ ಆಚರಣೆ ಜೋರಾಗಿದ್ದು, ನವ ದುರ್ಗೆಯರಿಗೆ ಪೂಜೆ ಸಲ್ಲಿಸಿ ಭಕ್ತರು ನವರಾತ್ರಿಯನ್ನು ಆಚರಿಸುತ್ತಿದ್ದಾರೆ. ಆದರೆ ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಅದ್ಧೂರಿ ದುರ್ಗೆ ಆರಾಧನೆ ಎಲ್ಲರ ಗಮನ ಸೆಳೆದಿದೆ. ಬರೋಬ್ಬರಿ 50 ಕೆ.ಜಿ ಚಿನ್ನಾದಲ್ಲಿ ದುರ್ಗೆಯನ್ನು ಅಲಂಕರಿಸಲಾಗಿದೆ.

    ನವರಾತ್ರಿ ಹಿನ್ನೆಲೆ ಅನೇಕ ಕಡೆ ದುರ್ಗಾ ದೇವಿಗಾಗಿ ಪೆಂಡಾಲ್ ನಿರ್ಮಿಸಿ ಭಕ್ತರು ಪೂಜೆ ಸಲ್ಲಿಸುತ್ತಾರೆ. ದುರ್ಗಾ ಪೆಂಡಾಲ್‍ನಲ್ಲಿ ಅನೇಕ ಕಾರ್ಯಕ್ರಮಗಳು ಕೂಡ ನಡೆಯುತ್ತವೆ. ಅದರಲ್ಲೂ ಪಶ್ಚಿಮ ಬಂಗಾಳದಲ್ಲಿ ದುರ್ಗೆ ಆರಾಧನೆ ತುಸು ಜೋರಾಗಿಯೇ ಮಾಡಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದುರ್ಗಾ ಪೂಜೆಯನ್ನು ಅದ್ಧೂರಿಯಾಗಿ ಮಾಡಲಾಗ್ತಿದೆ. ಕೊಲ್ಕತ್ತಾದ ಸಂತೋಷ್ ಮಿತ್ರ ದುರ್ಗಾ ಉತ್ಸವ ಸಮಿತಿ ಸದಸ್ಯರು ದುರ್ಗಾ ಪೆಂಡಾಲ್ ಹಾಕಿದ್ದಾರೆ. ಈ ಪೆಂಡಲ್‍ನಲ್ಲಿ ಪ್ರತಿಷ್ಠಾಪಿರುವ ದುರ್ಗೆಗೆ ಬರೋಬ್ಬರಿ 50 ಕೆ.ಜಿ ಚಿನ್ನವನ್ನು ಹಾಕಿದ್ದಾರೆ. ದುರ್ಗಾ ದೇವಿಯ ಮೂರ್ತಿ ಹಾಗೂ ಪೆಂಡಾಲ್‍ಗೆ ಹಾಕಿರುವ ಬಂಗಾರವೆಲ್ಲಾ ಸೇರಿ ಒಟ್ಟು 20 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ.

    ಈ ಬಾರಿಯ ನವರಾತ್ರಿಯಲ್ಲಿ ಕೋಲ್ಕತ್ತಾದ ದುರ್ಗಾ ದೇವಿಯ ಪ್ರತಿಮೆ ದೇಶದ ಅತ್ಯಂತ ದುಬಾರಿ ಮೂರ್ತಿ ಎಂದು ಸಮಿತಿ ಹೇಳಿಕೊಂಡಿದೆ. ಸಂತೋಷ್ ಮಿತ್ರ ಚೌಕದಲ್ಲಿ ನಿರ್ಮಿಸಲಾದ ಪೆಂಡಾಲ್‍ನಲ್ಲಿರುವ ದುರ್ಗಾ ದೇವಿ ಪ್ರತಿಮೆ 13 ಅಡಿ ಎತ್ತರವಿದೆ. ದುರ್ಗಾ ಪ್ರತಿಮೆಗೆ ಚಿನ್ನವನ್ನು ಲೇಪಿಸಲಾಗಿದ್ದು, ದೇವಿಯ ಮೈಮೇಲೆ ಕೂಡ ಚಿನ್ನಾಭರಣವನ್ನು ಹಾಕಲಾಗಿದೆ. ಅಲ್ಲದೆ ದೇವಿಯ ವಾಹನವಾದ ಸಿಂಹದ ಪ್ರತಿಮೆಗೂ ಕೂಡ ಚಿನ್ನವನ್ನು ಲೇಪಿಸಲಾಗಿದೆ.

    ಪೆಂಡಾಲ್ ಸುತ್ತಮುತ್ತ ಬಿಗಿ ಭದ್ರತೆ ಒದಗಿಸಲಾಗಿದ್ದು, ಈ ಚಿನ್ನದ ದುರ್ಗೆ ಈಗ ದೇಶದೆಲ್ಲೆಡೆ ಭಾರೀ ಸುದ್ದಿಯಾಗಿದ್ದಾಳೆ. ದುರ್ಗಾ ದೇವಿಯ ದುಬಾರಿ ಆಧಾರನೆ ಎಲ್ಲರ ಗಮನ ಸೆಳೆದಿದೆ.

  • ದುರ್ಗಾ ಮಾತೆ ವೇಶ್ಯೆಯಂತೆ: ಎಫ್‍ಬಿಯಲ್ಲಿ ಪ್ರಾಧ್ಯಾಪಕನ ಪೋಸ್ಟ್ ವಿವಾದ

    ದುರ್ಗಾ ಮಾತೆ ವೇಶ್ಯೆಯಂತೆ: ಎಫ್‍ಬಿಯಲ್ಲಿ ಪ್ರಾಧ್ಯಾಪಕನ ಪೋಸ್ಟ್ ವಿವಾದ

    ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ (ಡಿಯು) ಸಹಾಯಕ ಪ್ರಾಧ್ಯಾಪಕರೊಬ್ಬರು ಹಿಂದೂ ದುರ್ಗಾ ದೇವತೆಯನ್ನು ಅಶ್ಲೀಲ ಪದಗಳಿಂದ ಬರೆದು ಪ್ರಕಟಿಸಿದ ಫೇಸ್‍ಬುಕ್‍ನ ಪೋಸ್ಟ್ ಇದೀಗ ವಿವಾದವನ್ನು ಸೃಷ್ಟಿಸಿದೆ.

    ದೆಹಲಿಯ ದಾಯಲ್ ಸಿಂಗ್ ಕಾಲೇಜಿನ ಪ್ರಾಧ್ಯಾಪಕ ಕೇದರ್ ಕುಮಾರ್ ಮಂಡಲ್ “ಭಾರತೀಯ ಪುರಾಣದಲ್ಲಿ ದುರ್ಗಾ ಅತ್ಯಂತ ವೇಶ್ಯೆ” ಎಂದು ಬರೆದಿದ್ದು, ಸೆಪ್ಟಂಬರ್ 22 ರಂದು ಸಂಜೆ ಸುಮಾರು 6.43 ಕ್ಕೆ ಪೋಸ್ಟ್ ಪ್ರಕಟವಾಗಿತ್ತು.

    ಈ ಪೋಸ್ಟ್ ಕುರಿತು ಆಕ್ಷೇಪವನ್ನು ವ್ಯಕ್ತಪಡಿಸಿರುವ ಬಿಜೆಪಿ ಅಂಗಸಂಸ್ಥೆಯಾದ ನ್ಯಾಷನಲ್ ಡೆಮೋಗ್ರಸಿ ಟೀಚರ್ಸ್ ಫ್ರಂಟ್ (ಎನ್‍ಡಿಟಿಎಫ್) ಪ್ರಾಧ್ಯಾಪಕ ಮಂಡಲ್ ವಿರುದ್ಧ ದೆಹಲಿಯ ಲೋಧಿ ಕಾಲೋನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ನ್ಯಾಷನಲ್ ಸ್ಟುಡೆಂಟ್ಸ್ ಯುನಿಯನ್ ಆಫ್ ಇಂಡಿಯಾ (ಎನ್‍ಎಸ್‍ಯುಐ) ನಂತಹ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು  ದೆಹಲಿ ವಿಶ್ವವಿದ್ಯಾಲಯ ಆಡಳಿತ ಮಂಡಳಿ ತಕ್ಷಣ ಕುಮಾರ್ ಮಂಡಲ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.