Tag: ದುಷ್ಕರ್ಮಿಗಳು

  • ನೂಪುರ್ ಶರ್ಮಾ ಪ್ರತಿಕೃತಿ ಗಲ್ಲಿಗೇರಿಸಿದ ಪ್ರಕರಣ – ಮೂವರು ದುಷ್ಕರ್ಮಿಗಳು ವಶಕ್ಕೆ

    ನೂಪುರ್ ಶರ್ಮಾ ಪ್ರತಿಕೃತಿ ಗಲ್ಲಿಗೇರಿಸಿದ ಪ್ರಕರಣ – ಮೂವರು ದುಷ್ಕರ್ಮಿಗಳು ವಶಕ್ಕೆ

    ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ಗಲ್ಲಿಗೇರಿಸಿದ್ದ ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಮೂವರು ದುಷ್ಕರ್ಮಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ದೇಶಪಾಂಡೆ ಗಲ್ಲಿಯ ಮೊಹ್ಮದ್ ಶೋಯೆಬ್ ಅಬ್ದುಲ್ ಗಫರ್ ಹಕೀಮ್, ಅಮನ್ ಮೊಕಾಶಿ ಹಾಗೂ ಅರ್ಬಾಜ್ ಮೊಕಾಶಿ ವಶಕ್ಕೆ ಪಡೆಯಲಾದ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನೂಪುರ್ ಶರ್ಮಾ ಪ್ರತಿಕೃತಿ ಮಾಡಿ ನೇಣು ಹಾಕಿದ ಕಿಡಿಗೇಡಿಗಳು

    ದೇಶಪಾಂಡೆ ಗಲ್ಲಿಯ ಕಾಂಪ್ಲೆಕ್ಸ್‌ಗೆ ನುಗ್ಗಿ ಹಗ್ಗ ಕಟ್ಟಿ ನೂಪುರ್ ಶರ್ಮಾ ಪ್ರತಿಕೃತಿ ನೇತು ಹಾಕಲಾಗಿತ್ತು. ಕಾಂಪ್ಲೆಕ್ಸ್ ಒಳಗೆ ನುಗ್ಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೂನ್ 9ರ ರಾತ್ರಿ 10.54ಕ್ಕೆ ಕಾಂಪ್ಲೆಕ್ಸ್‌ಗೆ ನುಗ್ಗಿ ಮಧ್ಯರಾತ್ರಿ ವೇಳೆ ಹಗ್ಗ ಕಟ್ಟಿ ಪ್ರತಿಕೃತಿ ನೇತು ಹಾಕಿದ್ದರು. ಕ್ಯಾಮೆರಾದ ದೃಶ್ಯಾವಳಿಗಳು ಹಾಗೂ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಗೆ ಆಯ್ಕೆ ಹಿನ್ನೆಲೆ ಮಂತ್ರಾಲಯ ರಾಯರ ಮಠಕ್ಕೆ ನಟ ಜಗ್ಗೇಶ್ ಭೇಟಿ

  • ಸುಳ್ಯದ ಯುವಕನ ಮೇಲೆ ಗುಂಡಿನ ದಾಳಿ

    ಸುಳ್ಯದ ಯುವಕನ ಮೇಲೆ ಗುಂಡಿನ ದಾಳಿ

    ಮಂಗಳೂರು: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮೊಗರ್ಪಣೆಯಲ್ಲಿ ನಡೆದಿದೆ.

    ಸುಳ್ಯ ಜಯನಗರದ ನಿವಾಸಿ ಮೊಹಮ್ಮದ್ ಸಾಯಿ (39) ಗುಂಡಿನ ದಾಳಿಗೊಳಗಾದ ವ್ಯಕ್ತಿ. ಮೊಹಮ್ಮದ್ ಕಾರು ಹತ್ತುತ್ತಿದ್ದ ವೇಳೆ ಗುಂಡಿನ ದಾಳಿ ನಡೆಸಲಾಗಿದೆ. ಕೆಎ 12 ನೋಂದಣಿಯ ಸ್ಕಾರ್ಪಿಯೋ ಕಾರಿನಿಂದ ಗುಂಡು ಹಾರಾಟ ನಡೆದಿದೆ. ಅದೃಷ್ಟವಶಾತ್ ಗುಂಡು ಗುರಿ ತಪ್ಪಿ ಕಾರಿನ ಬಾಗಿಲಿಗೆ ತಾಗಿದೆ. ಈ ವೇಳೆ ಗುಂಡು ತಾಗಿ ಮೊಹಮ್ಮದ್ ಹೊಟ್ಟೆ ಭಾಗಕ್ಕೆ ಸಣ್ಣ ಗಾಯವಾಗಿದೆ.

    ತಂಗಿಯ ಮನೆಗೆ ತೆರಳಿ ವಾಪಸ್ ತನ್ನ ಕಾರು ಹತ್ತುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದ್ದಾರೆ.

  • ಬಿಜೆಪಿ ಮಾಜಿ ಶಾಸಕನ ಸಹೋದರರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಬಿಜೆಪಿ ಮಾಜಿ ಶಾಸಕನ ಸಹೋದರರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಪಾಟ್ನಾ: ಗ್ಯಾಂಗ್ ವಾರ್‌ನಲ್ಲಿ ಬಿಜೆಪಿಯ ಮಾಜಿ ಶಾಸಕ ಚಿತ್ತರಂಜನ್ ಶರ್ಮಾ ಅವರ ಇಬ್ಬರು ಸಹೋದರರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ನಗರದ ವಿಜಯ್ ನಗರದ ಜನನಿಬಿಡ ಮಾರುಕಟ್ಟೆಯಲ್ಲಿ ನಡೆದಿದೆ.

    ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳು ನಡುರಸ್ತೆಯಲ್ಲೇ ಇಬ್ಬರನ್ನು ಹೇಗೆ ಕೊಂದಿದ್ದಾರೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ಗೌತಮ್ ಮತ್ತು ಶಂಭು ಗುಂಡಿನ ದಾಳಿಗೊಳಗಾದ ಚಿತ್ತರಂಜನ್ ಶರ್ಮಾ ಅವರ ಇಬ್ಬರು ಸಹೋದರರು. ಆರೋಪಿಗಳು ಮತ್ತು ಸಂತ್ರಸ್ತರು ಮೋಟಾರ್ ಸೈಕಲ್ ಚೇಸ್‍ನಲ್ಲಿ ತೊಡಗಿದ್ದರು. ನಂತರ ಅವರು ಗೌತಮ್ ಮೇಲೆ ಗುಂಡು ಹಾರಿಸಿದ್ದಾರೆ. ಒಮ್ಮೆ ಬೈಕ್‍ನಿಂದ ಬಿದ್ದ ಆರೋಪಿಗಳು ಹತ್ತಿರದಿಂದಲೇ ಗೌತಮ್ ತಲೆಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

    ದುಷ್ಕರ್ಮಿಗಳು ಶಂಬು ಅವರ ಮೇಲೂ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದು, ಜನ ಗುಂಪು ಸೇರುತ್ತಿರುವುದನ್ನು ಕಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಇತ್ತ ಮಾರುಕಟ್ಟೆಯಲ್ಲಿದ್ದ ಸಾರ್ವಜನಿಕರಲ್ಲಿ ಭಯ, ಗಾಬರಿ ಆವರಿಸಿತು. ಗಾಯಗೊಂಡ ಇಬ್ಬರ ಪೈಕಿ ಗೌತಮ್ ಸ್ಥಳದಲ್ಲೇ ಮೃತಪಟ್ಟರೆ, ಶಂಬು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ರಾಮಮಂದಿರ ಸುತ್ತಮುತ್ತಲಿನ ಮದ್ಯ ಮಾರಾಟಗಾರರ ಪರವಾನಗಿ ರದ್ದು: ಯುಪಿ ಸರ್ಕಾರ 

    ಘಟನಾ ಸ್ಥಳದಿಂದ ನಾವು ಅರ್ಧ ಡಜನ್ ಖಾಲಿ ಕಾಟ್ರ್ರಿಡ್ಜ್‍ಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಪಾಟ್ನಾದ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‍ಎಸ್‍ಪಿ) ಮಾನವಜಿತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.

    ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಅನ್ಯಕೋಮಿನ ಯುವತಿಯನ್ನ ಪ್ರೀತಿಸಿದ್ದಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

    ಅನ್ಯಕೋಮಿನ ಯುವತಿಯನ್ನ ಪ್ರೀತಿಸಿದ್ದಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

    ಕಲಬುರಗಿ: ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನನ್ನ ನಡುರಸ್ತೆಯಲ್ಲಿ ಬರ್ಬರವಾಗಿ ಕೊಚ್ಚಿ ಕೋಲೆಗೈದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.

    ವಾಡಿ ಪಟ್ಟಣದ ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೊಲೆಗೀಡಾದ ಯುವಕ. ವಿಜಯ ಅನ್ಯಕೋಮಿನ ಯುವತಿಯನ್ನು ಪ್ರೀತಿ ಮಾಡುತ್ತಿದ್ದನು. ಇದೇ ಕಾರಣಕ್ಕೆ ಯುವತಿಯ ಕುಟುಂಬಸ್ಥರು ವಿಜಯನನ್ನು ಕೊಲೆಗೈದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

    ದೈನಂದಿನಂತೆ ವಾಡಿ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ವಿಜಯನನ್ನು ರೈಲ್ವೆ ತಡೆಗೋಡೆ ಹತ್ತಿರ ತಡೆದು ಜಗಳ ತೆಗೆದ ದುಷ್ಕರ್ಮಿಗಳು, ಮಾರಕಾಸ್ತ್ರ, ಕಲ್ಲು, ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಇಂದು ರಾಜ್ಯಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ

    POLICE JEEP

    ಕೊಲೆ ಪ್ರಕರಣದಿಂದ ವಾಡಿ ಪಟ್ಟಣದಲ್ಲಿ ಆತಂಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ಮಾಡಿದ ಪೊಲೀಸರು ಹಂತಕರ ಶೋಧಕಾರ್ಯ ಆರಂಭಿಸಿದ್ದಾರೆ. ಈ ಕುರಿತು ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿ ಮುಖಂಡ ಆತ್ಮಹತ್ಯೆ ಪ್ರಕರಣ – ಅನಂತರಾಜು ಜೊತೆಗಿನ ಖಾಸಗಿ ವೀಡಿಯೋ ಇದೆ ಎಂಬ ಗೆಳತಿ ಚಾಟಿಂಗ್ ವೈರಲ್

  • ಅಪ್ರಾಪ್ತೆಯನ್ನು ಹತ್ಯೆಗೈದು, ವೃದ್ಧೆಯ ತಲೆಯನ್ನು ಕತ್ತರಿಸಿ ನೇತು ಹಾಕಿದ ದುಷ್ಕರ್ಮಿಗಳು

    ಅಪ್ರಾಪ್ತೆಯನ್ನು ಹತ್ಯೆಗೈದು, ವೃದ್ಧೆಯ ತಲೆಯನ್ನು ಕತ್ತರಿಸಿ ನೇತು ಹಾಕಿದ ದುಷ್ಕರ್ಮಿಗಳು

    ಭೋಪಾಲ್: ವೃದ್ಧ ದಂಪತಿ ಮತ್ತು ಅವರ ಓರ್ವ ಅಪ್ರಾಪ್ತ ಮೊಮ್ಮಗಳನ್ನು ದುಷ್ಕರ್ಮಿಗಳು ಕೊಲೆ ಮಾಡಿ ವೃದ್ಧೆಯ ತಲೆಯನ್ನು ಕತ್ತರಿಸಿ ಮರಕ್ಕೆ ನೇತು ಹಾಕಿರುವ ಘಟನೆಯೊಂದು ಮಧ್ಯಪ್ರದೇಶದ ಮಾಂಡ್ಲಾ ಜಿಲ್ಲೆಯಲ್ಲಿ ನಡೆದಿದೆ.

    ಮಂಗಳವಾರ ಬೆಳಗ್ಗೆ ಕೆಲವು ಸ್ಥಳೀಯರು, ವೃದ್ಧ ದಂಪತಿ ಮತ್ತು ಅವರ ಮೊಮ್ಮಗಳು ಶವವಾಗಿ ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿಮೀ ದೂರದಲ್ಲಿರುವ ಮೊಹಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಪಟದೇಯ್ ಗ್ರಾಮದಲ್ಲಿ ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳು ದಂಪತಿ ಮತ್ತು ಅವರ ಮೊಮ್ಮಗಳು ಮನೆಯ ಟೆರೇಸ್‍ನಲ್ಲಿ ಮಲಗಿದ್ದಾಗ ಅವರ ಕತ್ತು ಸೀಳಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಸಿಂಗ್ ಕವಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾರ್ತಿ ಚಿದಂಬರಂಗೆ ಬೆಳ್ಳಂಬೆಳಗ್ಗೆ ಶಾಕ್ – ಮನೆ ಸೇರಿ 7 ಕಡೆ ಸಿಬಿಐ ದಾಳಿ

    ಹಂತಕರು ವೃದ್ಧೆಯ ತಲೆಯನ್ನು ಕತ್ತರಿಸಿ ಅವರ ಮನೆಯಿಂದ ಒಂದು ಕಿಮೀ ದೂರದಲ್ಲಿರುವ ಜಮೀನಿನಲ್ಲಿ ಮರಕ್ಕೆ ನೇತು ಹಾಕಿದ್ದಾರೆ ಎಂದು ಮೊಹಗಾಂವ್ ಪೊಲೀಸ್ ಠಾಣೆಯ ಉಸ್ತುವಾರಿ ಎಸ್‍ಎಲ್ ಮಾರ್ಕಮ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು ಮಂಗಳವಾರ ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೃತರ ಇತರ ಕುಟುಂಬ ಸದಸ್ಯರು, ಘಟನೆ ಕುರಿತು ಹಂತಕರ ಬಗ್ಗೆ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ಫ್ಯಾಟ್ ಸರ್ಜರಿಗೆ 1 ಲಕ್ಷ 60 ಸಾವಿರ ಕೊಟ್ಟಿದ್ದರಂತೆ ಚೇತನಾ ರಾಜ್ : ಕುಟುಂಬ ಆರೋಪ

  • ಸಬ್‍ಇನ್ಸ್‌ಪೆಕ್ಟರ್ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿ

    ಸಬ್‍ಇನ್ಸ್‌ಪೆಕ್ಟರ್ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿ

    ಚಂಡೀಗಢ: ಸಬ್‍ಇನ್ಸ್‌ಪೆಕ್ಟರ್ ಗಸ್ತು ತಿರುಗುತ್ತಿದ್ದ ವೇಳೆ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ಹರಿಯಾಣದ ಯುಮುನಾನಗರದಲ್ಲಿ ನಡೆದಿದೆ.

    ಯಮುನಾನಗರದ ರಾಡೌರ್ ಪ್ರದೇಶದಲ್ಲಿ ಸಬ್‍ಇನ್ಸ್‌ಪೆಕ್ಟರ್ ಸತೀಶ್ ಕಾಂಬೋಜ್ ತಮ್ಮ ತಂಡದೊಂದಿಗೆ ಗಸ್ತು ತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬಸ್ ನಿಲ್ದಾಣದ ಬಳಿ ಸತೀಶ್ ಅವರು ಗಸ್ತು ತಿರುಗುತ್ತಿದ್ದರು. ಈ ವೇಳೆ ಬ್ಯಾಂಕ್‍ನ ಹೊರಗೆ ಬೈಕ್‍ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ನಿಂತಿರುವುದು ಅವರ ಗಮನಕ್ಕೆ ಬಂದಿದೆ. ಆದರೆ ಪೊಲೀಸರ ತಂಡವನ್ನು ಕಂಡ ಇಬ್ಬರು ಯುವಕರು ರದೌರಿ ರಸ್ತೆಯತ್ತ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಮಗಳ ಲಿವಿಂಗ್ ಟುಗೆದರ್ ಸಂಬಂಧಕ್ಕೆ ತಾಯಿ ವಿರೋಧ – ಪ್ರಿಯಕರನಿಂದ ತಾಯಿ ಹತ್ಯೆ

    police (1)

    ಅನುಮಾನಗೊಂಡ ಪೊಲೀಸ್ ತಂಡವು ದುಷ್ಕರ್ಮಿಗಳನ್ನು ಬೆನ್ನಟ್ಟಿದ್ದು, ರಾಡೌರಿ ರಸ್ತೆಯಲ್ಲಿರುವ ಎಫ್‍ಸಿಐ ಗೋಡೌನ್‍ಗಳ ಬಳಿ ಬೈಕ್ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಮುಸುಕುಧಾರಿ ಯುವಕರು ಬೈಕ್ ನಿಲ್ಲಿಸುವ ಬದಲು ಎಸ್‍ಐ ಸತೀಶ್ ಕಾಂಬೋಜ್ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ.

    ಬೈಕ್ ಸವಾರರು ಸ್ಥಳದಿಂದ ಪರಾರಿಯಾಗಿದ್ದು, ಸತೀಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಿಎಂ ಪೋಸ್ಟ್‌ಗಾಗಿ 2,500 ಕೋಟಿ ರೂ. ಬೇಡಿಕೆ ವಿಚಾರ- ತನಿಖೆಗೆ ಡಿಕೆಶಿ ಒತ್ತಾಯ

    ಮತ್ತೊಂದೆಡೆ ದಾಳಿಕೋರರನ್ನು ಬಂಧಿಸುವುದಾಗಿ ಭರವಸೆ ನೀಡಿದ ಸುರೀಂದರ್ ಪಾಲ್ ಸಿಂಗ್, ಎಸ್ಪಿ ಸ್ವತಃ ಘಟನಾ ಸ್ಥಳವನ್ನು ಪರಿಶೀಲಿಸಿ ಜಿಲ್ಲೆಯಾದ್ಯಂತ ರಸ್ತೆಗಳನ್ನು ನಿರ್ಬಂಧಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

  • ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು

    ಪಾಟ್ನಾ: ಇಬ್ಬರು ದುಷ್ಕರ್ಮಿಗಳು ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ಇರಿದ ಘಟನೆ ಗುರುಗ್ರಾಮದ ಡಿಎಲ್‍ಎಫ್ 3ನೇ ಹಂತದ ಪ್ರದೇಶವೊಂದರಲ್ಲಿ ಸೋಮವಾರ ನಡೆದಿದೆ.

    ಗುರುಗ್ರಾಮದ ಡಿಎಲ್‍ಎಫ್ 3ನೇ ಹಂತದ ಪ್ರದೇಶದ ನಾಥುಪುರದಲ್ಲಿ 23 ವರ್ಷದ ಮಹಿಳೆಯೊಬ್ಬಳ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಶೋಧ ಕಾರ್ಯ ನಡೆದಿದೆ. ಆರೋಪಿಯನ್ನು ಬಿಹಾರ ನಿವಾಸಿ ಅನಿಲ್ ಠಾಕೂರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರೇಪ್ ಕೇಸ್ ದಾಖಲಿಸಲು ಠಾಣೆಗೆ ಹೋದ ಬಾಲಕಿ ಮೇಲೆ ಪೊಲೀಸ್‌ನಿಂದಲೂ ಅತ್ಯಾಚಾರ!

    ಗಂಭೀರ ಗಾಯಗೊಂಡ ಮಹಿಳೆಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಾಗಿರುವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

    ಸಂತ್ರಸ್ತೆಯ ಪತಿ, ಆಟೋರಿಕ್ಷಾ ಚಾಲಕನಾಗಿದ್ದು, ಪೊಲೀಸ್ ದೂರಿನಲ್ಲಿ ತಮ್ಮ ಹೆಂಡತಿಯಿಂದ ಕರೆ ಬಂದಿತ್ತು. ಇಬ್ಬರು ಪುರುಷರು ನನ್ನ ಮೇಲೆ ಅತ್ಯಾಚಾರವೆಸಗಿ ಚಾಕುವಿನಿಂದ ಇರಿದಿದ್ದಾರೆ ಎಂದು ಹೇಳಿದಳು. ನಾನು ಸ್ಥಳದ ಬಗ್ಗೆ ಅವಳನ್ನು ಕೇಳಿದಾಗ, ಅವಳು ಅದನ್ನು ಬಹಿರಂಗಪಡಿಸಲು ಸಾಧ್ಯವಾಗಲಿಲ್ಲ. ಆದರೆ ಹೇಗಾದರೂ ಅವಳು ಮನೆಗೆ ತಲುಪಿದಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗಾಂಧಿನಗರ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಲಕ್ಷ್ಮೀಕಾಂತ್ ನೇಮಕ

    ಮಹಿಳೆಯ ಹೇಳಿಕೆಯನ್ನು ಇನ್ನೂ ದಾಖಲಿಸಿಕೊಳ್ಳಬೇಕಾಗಿದೆ. ಈಗಾಗಲೇ ಪತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

    ಪತಿಯ ದೂರಿನ ಆಧಾರದ ಮೇಲೆ ಇಬ್ಬರ ವಿರುದ್ಧವು ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  • ಭದ್ರತಾ ಲೋಪ – ದೆಹಲಿ ಕ್ಯಾಪಿಟಲ್ಸ್ ತಂಡದ ಬಸ್ ಮೇಲೆ ದಾಳಿ

    ಭದ್ರತಾ ಲೋಪ – ದೆಹಲಿ ಕ್ಯಾಪಿಟಲ್ಸ್ ತಂಡದ ಬಸ್ ಮೇಲೆ ದಾಳಿ

    ಮುಂಬೈ: ದೆಹಲಿ ಕ್ಯಾಪಿಟಲ್ಸ್ ತಂಡದ ಬಸ್ ಮೇಲೆ ದಾಳಿ ಮಾಡಿದ ಆರೋಪದ ಮೇಲೆ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿರುವುದಾಗಿ ಮುಂಬೈ ಪೊಲೀಸರು ಬುಧವಾರ ತಿಳಿಸಿದ್ದಾರೆ.

    ಐಪಿಎಲ್ ಸೀಸನ್ 15 ಮಾರ್ಚ್ 26 ರಿಂದ ಆರಂಭವಾಗಲಿದೆ. ಎಲ್ಲಾ ತಂಡಗಳ ಸಿದ್ಧತೆಗಳು ಭರದಿಂದ ಸಾಗಿವೆ. ಈ ಬಾರಿ ಎಲ್ಲಾ ಪಂದ್ಯಗಳು ಮುಂಬೈ ಮತ್ತು ಪುಣೆಯಲ್ಲಿ ನಡೆಯಲಿವೆ. ಮುಂಬೈನ ಮೂರು ಸ್ಟೇಡಿಯಂಗಳಲ್ಲಿ ಅಂದರೆ ವಾಂಖೆಡೆ, ಬ್ರಾಬನ್ ಮತ್ತು ಡಿವೈ ಪಾಟೀಲ್‍ನಲ್ಲಿ ಪಂದ್ಯಗಳು ನಡೆಯಲಿವೆ. ಇದಕ್ಕಾಗಿ ಎಲ್ಲಾ ತಂಡಗಳ ಆಟಗಾರರು ಮುಂಬೈ ಕಡೆ ಪ್ರಯಾಣಿಸುತ್ತಿದ್ದಾರೆ. ಇದೆಲ್ಲದರ ನಡುವೆ ಆಟಗಾರರ ಭದ್ರತೆಯಲ್ಲಿ ಭಾರೀ ಲೋಪ ಕಂಡುಬಂದಿದೆ.

    ಮಾರ್ಚ್ 16 ರಂದು, ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ಆಟಗಾರರನ್ನು ಕರೆತರಲು 5-ಸ್ಟಾರ್ ಹೋಟೆಲ್‍ನ ಹೊರಗೆ ನಿಲ್ಲಿಸಿದ್ದ ಐಷಾರಾಮಿ ಬಸ್‍ನ ಗಾಜುಗಳನ್ನು ಒಡೆದು ದುಷ್ಕೃತ್ಯ ಮೆರೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ, ಸಿಎಂ ಏನೇ ಮಾತಾಡಲಿ, ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದಾರೆ: ಡಿಕೆಶಿ

    ದೆಹಲಿ ಕ್ಯಾಪಿಟಲ್ ಐಪಿಎಲ್ ತಂಡದ ನಿಂತಿದ್ದ ಬಸ್ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಐಪಿಸಿಯ 143, 147, 149, 427 ಸೆಕ್ಷನ್‍ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: IPL 2022 – ಡೆಲ್ಲಿ ತಂಡ ಸೇರಿಕೊಂಡ ಶೇನ್ ವಾಟ್ಸನ್

    ಮುಂಬೈನ ಕೊಲಾಬಾ ಪ್ರದೇಶದಲ್ಲಿರುವ ತಾಜ್ ಪ್ಯಾಲೇಸ್ ಎಂಬ ಹೋಟೆಲ್‍ನಲ್ಲಿ ದೆಹಲಿ ತಂಡ ತಂಗಿದೆ. ಪ್ರಸಿದ್ಧವಾದ ‘ಗೇಟ್‍ವೇ ಆಫ್ ಇಂಡಿಯಾ’ ಈ ಹೋಟೆಲ್‍ಗೆ ತುಂಬಾ ಹತ್ತಿರದಲ್ಲಿದ್ದು, ಇದು ವಾಂಖೆಡೆ ಸ್ಟೇಡಿಯಂಗೆ ಕೂಡ ಹತ್ತಿರದಲ್ಲಿದೆ.

    ದೆಹಲಿ ಕ್ಯಾಪಿಟಲ್ಸ್ ಕಳೆದ ವಾರವಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022ಗಾಗಿ ತಮ್ಮ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿತ್ತು. ಇದರಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್, ವೇಗದ ಬೌಲರ್ ಅನ್ರಿಚ್ ನಾಟ್ರ್ಜೆ ಮತ್ತು ಹೊಸ ಆಟಗಾರ ಡೇವಿಡ್ ವಾರ್ನರ್ ಹೊಸ ಜೆರ್ಸಿಯೊಂದಿಗೆ ಪೋಸ್ ನೀಡಿದ್ದರು.

  • ರಾಜಧಾನಿಯಲ್ಲಿ ಮತ್ತೆ ಶುರುವಾಯ್ತು ದುಷ್ಕರ್ಮಿಗಳ ಪುಂಡಾಟ!

    ರಾಜಧಾನಿಯಲ್ಲಿ ಮತ್ತೆ ಶುರುವಾಯ್ತು ದುಷ್ಕರ್ಮಿಗಳ ಪುಂಡಾಟ!

    ಬೆಂಗಳೂರು: ದುಷ್ಕರ್ಮಿಗಳು ಫುಡ್ ಡೆಲಿವರಿ ಕೊಡಲು ಹೋಗುತ್ತಿದ್ದ ಯುವಕನಿಗೆ ಲಾಂಗ್ ಮಚ್ಚು ತೋರಿಸಿ ದರೋಡೆ ಮಾಡಿದ ಘಟನೆ ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ 12 ಗಂಟೆಗೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಬೈಕ್‍ನಲ್ಲಿ ಫುಡ್ ಡೆಲಿವರಿ ಕೊಡಲು ಹೋಗುತ್ತಿದ್ದ ರಾಜು ಎಂಬ ಯುವಕನ ಮೇಲೆ ದಾಳಿ ನಡೆದಿದೆ. ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ್ದು, ಮಧ್ಯರಾತ್ರಿ ದರೋಡೆ ಮಾಡಿದ್ದಾರೆ. ಪುಂಡರು ಯುವಕನ ಬಳಿ ಇದ್ದ ಮೊಬೈಲ್, ಹಣ ಸೇರಿ ಬೈಕ್ ಸಮೇತ ಕಿತ್ತುಕೊಂಡು ಪರಾರಿಯಾಗಿದ್ದಾರೆ. ದಮ್ಮಯ್ಯ ಅಂತ ಬೇಡಿದರೂ ಬಿಡದೇ ಲಾಂಗ್ ಬೀಸಿ ಬೆದರಿಕೆ ಹಾಕಿದ್ದಾರೆ.  ಇದನ್ನೂ ಓದಿ: ಆಫ್‍ಲೈನ್ ಕ್ಲಾಸ್‍ಗೆ ಹೋಗು ಅಂದಿದ್ದಕ್ಕೆ ಹುಡುಗಿ ಆತ್ಮಹತ್ಯೆ

    5 ಮಂದಿ ದುಷ್ಕರ್ಮಿಗಳ ಕೃತ್ಯ ಸ್ಥಳೀಯರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

    ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

    ವಿಜಯಪುರ: ದುಷ್ಕರ್ಮಿಗಳು ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಸಿಂದಗಿ-ಜೇವರ್ಗಿ ರಸ್ತೆಯಲ್ಲಿ ನಡೆದಿದೆ.

    ಪಟ್ಟಣದ ಶಿವಶಂಕರ ಬಡಾವಣೆಯ ನಿವಾಸಿಯಾದ ಆಸೀಫ್ ಮೆಹಬೂಬ್ ಜಿನಾವರ್ ಹತ್ಯೆಯಾದ ವ್ಯಕ್ತಿ. ಆಸೀಫ್ ಕೊಲೆಗೆ ಪ್ರೀತಿಯೇ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ನಿನ್ನೆ ತಡರಾತ್ರಿ ಆಟೋ ಚಾಲಕನು ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಹತ್ಯೆ ನಡೆದಿದೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ದಾರುಣ ಸಾವು

    ಘಟನೆಯು ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.