Tag: ದೂರವಾಣಿ

  • ಪುಟಿನ್ ಜೊತೆ ಯಾವುದೇ ಮಾತುಕತೆ ನಡೆಸಲ್ಲ – ಮೋದಿಗೆ ಕರೆ ಮಾಡಿದ ಝೆಲೆನ್ಸ್ಕಿ

    ಪುಟಿನ್ ಜೊತೆ ಯಾವುದೇ ಮಾತುಕತೆ ನಡೆಸಲ್ಲ – ಮೋದಿಗೆ ಕರೆ ಮಾಡಿದ ಝೆಲೆನ್ಸ್ಕಿ

    ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಜೊತೆಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ದೂರವಾಣಿ ಕರೆ ಮಾಡಿ ಹೇಳಿದ್ದಾರೆ.

    ಉಕ್ರೇನ್ (Ukrain) ವಿರುದ್ಧ ರಷ್ಯಾ (Russia) ನಡೆಸುತ್ತಿರುವ ಸಂಘರ್ಷದ ನಡುವೆ ಉಕ್ರೇನಿಯನ್-ಭಾರತೀಯ ಪಾಲುದಾರಿಕೆಯನ್ನು ಬಲಪಡಿಸುವ ಪ್ರಾಮುಖ್ಯತೆ ಬಗ್ಗೆ ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelensky) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಂಗಳವಾರ ದೂರವಾಣಿ ಮೂಲಕ ಮಾತನಾಡಿದರು. ಇದನ್ನೂ ಓದಿ: ಅಮೃತ್ ಪೌಲ್ ಹರಕೆಯ ಕುರಿ – PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ದಿನೇಶ್ ಗುಂಡೂರಾವ್

    ಈ ವೇಳೆ ಉಕ್ರೇನಿಯನ್ ಪ್ರದೇಶಗಳನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುವ ಗುರಿಯನ್ನು ಹೊಂದಿದೆ. ಈ ಆಕ್ರಮಣಕಾರರ ಎಲ್ಲಾ ನಿರ್ಧಾರಗಳು ಶೂನ್ಯ ಮತ್ತು ಅನೂರ್ಜಿತವಾಗಿವೆ ಮತ್ತು ವಾಸ್ತವವನ್ನು ಬದಲಾಯಿಸಲಾಗುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಉಕ್ರೇನ್ ರಷ್ಯಾದ ಅಧ್ಯಕ್ಷರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದರು.

    ನಮ್ಮ ರಾಷ್ಟ್ರವು ಯಾವಾಗಲೂ ಮಾತುಕತೆಯ ಮೂಲಕ ಶಾಂತಿಯುತ ಇತ್ಯರ್ಥಕ್ಕೆ ಬದ್ಧವಾಗಿದೆ. ಆದರೆ ರಷ್ಯಾ ತನ್ನ ಮಾತಿನಂತೆ ನಿಲ್ಲಲಿಲ್ಲ ಮತ್ತು ಉದ್ದೇಶ ಪೂರ್ವಕವಾಗಿ ಈ ಪ್ರಕ್ರಿಯೆಯನ್ನು ದುರ್ಬಲಗೊಳಿಸಿತು. ಜನರಲ್ ಅಸೆಂಬ್ಲಿಯ ಅಧಿವೇಶನದ ವೇಳೆ ನಾನು ಭಾಷಣ ಮಾಡುವಾಗ ಶಾಂತಿಗಾಗಿ ನಮ್ಮ ಸ್ಪಷ್ಟ ಸೂತ್ರವನ್ನು ವಿವರಿಸಿದೆ. ಅದನ್ನು ಸಾಧಿಸಲು ಮತ್ತು ನಮ್ಮ ಪಾಲುದಾರರೊಂದಿಗೆ ಒಟ್ಟಾಗಿ ಕೆಲಸ ಮಾಡಲು ನಾವು ಸಿದ್ಧರಿದ್ದೇವೆ ಎಂದು ಮೋದಿ ಅವರಿಗೆ ತಿಳಿಸಿದರು.

    ರಷ್ಯಾದ ಪರಮಾಣು ಬ್ಲ್ಯಾಕ್‍ಮೇಲ್ ಕೇವಲ ಉಕ್ರೇನ್‍ಗೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಬೆದರಿಕೆಯಾಗಿದೆ ಎಂದರು. ಜೊತೆಗೆ ಮೋದಿಯವರಿಗೆ ಉಕ್ರೇನ್‍ಗೆ ಭೇಟಿ ನೀಡುವಂತೆ ಆಹ್ವಾನಿಸಿದರು.  ಇದನ್ನೂ ಓದಿ: ಕಳ್ಳರ ಕೃತ್ಯಕ್ಕೆ ಬೇಸತ್ತ ಗ್ರಾಮಸ್ಥರು – ಖದೀಮರನ್ನು ಹುಡುಕಿಕೊಟ್ಟವರಿಗೆ ಬಹುಮಾನ ಜೊತೆಗೆ ಸನ್ಮಾನ

    Live Tv
    [brid partner=56869869 player=32851 video=960834 autoplay=true]

  • ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ

    ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.

    ಅಫ್ಘಾನಿಸ್ತಾನದ ಇತ್ತೀಚಿನ ಬೆಳವಣಿಗೆಗಳು ಸೇರಿದಂತೆ ಪ್ರಾದೇಶಿಕ ವಿಷಯಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು. ಈ ನಿಟ್ಟಿನಲ್ಲಿ ಭಯೋತ್ಪಾದನೆ, ಮಾದಕ ದ್ರವ್ಯಗಳು, ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಮಾನವ ಕಳ್ಳಸಾಗಾಣಿಕೆ ಬಗ್ಗೆ ಉಭಯ ನಾಯಕರೂ ಪರಸ್ಪರ ಕಳವಳ ವ್ಯಕ್ತಪಡಿಸಿದರು. ಜೊತೆಗೆ ಮಾನವ ಹಕ್ಕುಗಳು, ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಬೇಕಾದ ಅಗತ್ಯದ ಬಗ್ಗೆ ಸಹ ಚರ್ಚೆ ನಡೆಸಿದರು. ಇದನ್ನೂ ಓದಿ: ಮೈಸೂರು ಅರಮನೆಗೆ ಸೇರಿದ 4 ಆನೆಗಳು ಗುಜರಾತಿಗೆ ಶಿಫ್ಟ್

    ಇಂಡೋ-ಪೆಸಿಫಿಕ್ ವಲಯದಲ್ಲಿ ದ್ವಿಪಕ್ಷೀಯ ಸಹಯೋಗ ಹೆಚ್ಚುತ್ತಿದೆ. ಈ ಪ್ರದೇಶದಲ್ಲಿ ಸ್ಥಿರತೆ ಮತ್ತು ಭದ್ರತೆಯನ್ನು ಉತ್ತೇಜಿಸುವಲ್ಲಿ ಭಾರತ-ಫ್ರಾನ್ಸ್ ಪಾಲುದಾರಿಕೆ ವಹಿಸುವ ಪ್ರಮುಖ ಪಾತ್ರವನ್ನು ಉಭಯ ನಾಯಕರು ಪರಿಶೀಲಿಸಿದರು.

    ಉಭಯ ದೇಶಗಳು ಆಳವಾಗಿ ಆದರಿಸುವ ಭಾರತ-ಫ್ರಾನ್ಸ್ ವ್ಯೂಹಾತ್ಮಕ ಪಾಲುದಾರಿಕೆಯ ಸ್ಫೂರ್ತಿಯೊಂದಿಗೆ ನಿಕಟ ಮತ್ತು ನಿಯಮಿತ ಸಮಾಲೋಚನೆಗಳನ್ನು ಮುಂದುವರಿಸಲು ನಾಯಕರು ಪರಸ್ಪರ ಸಮ್ಮತಿಸಿದರು.

  • ಶಾಂತಿಯಿಂದ ಆಗಲಿಲ್ಲ – ಈಗ ಪಂಜ್‍ಶೀರ್ ವಶಕ್ಕೆ ತಾಲಿಬಾನಿಗಳ ಕುತಂತ್ರ

    ಶಾಂತಿಯಿಂದ ಆಗಲಿಲ್ಲ – ಈಗ ಪಂಜ್‍ಶೀರ್ ವಶಕ್ಕೆ ತಾಲಿಬಾನಿಗಳ ಕುತಂತ್ರ

    ಕಾಬೂಲ್: ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡರೂ ಪಂಜ್‍ಶೀರ್ ಕಣಿವೆಯನ್ನು ತಾಲಿಬಾನ್ ಇನ್ನೂ ವಶಪಡಿಸಿಕೊಂಡಿಲ್ಲ. ಈಗ ಈ ಕಣಿವೆಯನ್ನು ಕುತಂತ್ರದ ಮೂಲಕ ವಶಪಡಿಸಿಕೊಳ್ಳಲು ತಾಲಿಬಾನ್ ಉಗ್ರರು ಮುಂದಾಗಿದ್ದಾರೆ.

    ಹೌದು. ಪಂಜ್‍ಶೀರ್ ಪ್ರಾಂತ್ಯದಲ್ಲಿ ತಾಲಿಬಾನ್ ಈಗ ಇಂಟರ್ನೆಟ್, ದೂರವಾಣಿ ಸಂಪರ್ಕವನ್ನೇ ಕಡಿತಗೊಳಿಸಿದೆ. ಈ ಮೂಲಕ ಅಲ್ಲಿನ ಸಂವಹನ ವ್ಯವಸ್ಥೆಯನ್ನು ಸಂಪೂರ್ಣ ಬಂದ್ ಮಾಡಿದೆ.

    ಪಂಜ್‍ಶೀರ್ ಅಫ್ಘಾನಿಸ್ತಾನ ಪ್ರಾಂತ್ಯವಾಗಿದ್ದರೂ ಹಲವಾರು ತಾಲಿಬಾನ್ ವಿರೋಧಿಗಳು ಪಂಜ್‌ಶೀರ್‌ನಲ್ಲಿ ಜಮಾಯಿಸಿದ್ದಾರೆ. ಅಫ್ಘಾನ್ ಬಂಡುಕೋರ ಕಮಾಂಡರ್ ಅಹ್ಮದ್ ಶಾ ಮಸೂದ್ ಅವರ ಪುತ್ರ ಅಹ್ಮದ್ ಮಸೂದ್, ಮಾಜಿ ಉಪಾಧ್ಯಕ್ಷ ಅಮರುಲ್ಲಾ ಸಲೇಹ್ ಇಲ್ಲಿ ನೆಲೆಸಿದ್ದಾರೆ.

    ಅಹ್ಮದ್ ಮಸೂದ್ ಅವರ ವಕ್ತಾರ ಫಾಹೀಮ್ ದಷ್ಟಿ ಅವರು ಆಗಸ್ಟ್ 28ರ ಸಂಜೆಯಿಂದ ಪಂಜ್‍ಶೀರ್ ಪ್ರಾಂತ್ಯದಲ್ಲಿ ಟೆಲಿಕಾಂ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಮೊಬೈಲ್ ಇಂಟರ್ನೆಟ್ ಅಲ್ಲದೇ ಕರೆ, ಸಂದೇಶ ಸೇವೆಗಳನ್ನು ಸಹ ಕಡಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಾಲಿಬಾನಿಗಳ ಹೊಸ ಆದೇಶ- ಹುಡುಗ, ಹುಡುಗಿ ಜೊತೆಯಾಗಿ ಓದುವಂತಿಲ್ಲ

    ಸಂವಹನ ವ್ಯವಸ್ಥೆಯನ್ನು ಬಂದ್ ಮಾಡಿದರೆ ವಿದೇಶಗಳಿಗೆ ಸುದ್ದಿ ಹೋಗುವುದನ್ನು ತಡೆಯಬಹುದು ಮತ್ತು ಈ ಪ್ರಾಂತ್ಯದ ಮೇಲೆ ದಾಳಿ ಮಾಡುವುದು ಸುಲಭ ಎಂಬ ಲೆಕ್ಕಾಚಾರವನ್ನು ಹಾಕಿದ ತಾಲಿಬಾನ್ ಈಗ ಇಂಟರ್ನೆಟ್ ಸೇವೆಯನ್ನೇ ಬಂದ್ ಮಾಡಿದೆ. ಇದನ್ನೂ ಓದಿ: ತಾಲಿಬಾನಿಗಳ ಮೇಲೆ ಗುಂಡಿನ ಮಳೆ – ನಾರ್ಥರ್ನ್ ಅಲಯನ್ಸ್‌ಗೆ ತಜಕಿಸ್ತಾನ ಬೆಂಬಲ

    ಮಾಜಿ ಉಪಾಧ್ಯಕ್ಷ ಅಮರುಲ್ಲಾ ಸಲೇಹ್ ಅವರು ಟ್ವಿಟ್ಟರ್ ನಲ್ಲಿ ತಾಲಿಬಾನಿ ಉಗ್ರರ ಆಡಳಿತದ ವಿರುದ್ಧ ಕಠಿಣ ಅಭಿಪ್ರಾಯವನ್ನು ವ್ಯಕ್ತಪಡಿಸಿ ಜಗತ್ತಿಗೆ ತಿಳಿಸುತ್ತಿದ್ದರು. ಇದರಿಂದಾಗಿ ತಾಲಿಬಾನ್ ಕುಕೃತ್ಯ ಜಗತ್ತಿಗೆ ತಿಳಿಯುತ್ತಿತ್ತು.

    ಈ ಹಿಂದೆ ಆಗಸ್ಟ್ 23 ರಂದು ಈ ಕಣಿವೆಯನ್ನು ವಶಪಡಿಸಿಕೊಳ್ಳಲು 3 ಸಾವಿರ ತಾಲಿಬಾನ್ ಹೋರಾಟಗಾರರನ್ನು ಪಂಜಶೀರ್ ಗಡಿಗೆ ಕಳುಹಿಸಿತ್ತು. ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಒತ್ತಡದಿಂದಾಗಿ, ತಾಲಿಬಾನ್ ಹೋರಾಟಗಾರರು ಇನ್ನೂ ಪಂಜಶೀರ್ ಮೇಲೆ ದಾಳಿ ಮಾಡಿಲ್ಲ. ಶಾಂತಿ ಮತ್ತು ಮಾತುಕತೆಯ ಮೂಲಕ ಪಂಜಶೀರ್ ವಶ ಪಡೆಯಲು ಬಯಸುತ್ತೇವೆ ಎಂದು ತಾಲಿಬಾನ್ ಹೇಳಿಕೊಂಡಿತ್ತು. ಆದರೆ ಈಗ ಈ ನಡೆಯನ್ನು ಗಮನಿಸಿದಾಗ ಕಣಿವೆಯನ್ನು ಹಿಂಸಾತ್ಮಕವಾಗಿ ವಶಪಡಿಸಿಕೊಳ್ಳಲು ತಾಲಿಬಾನ್ ಮುಂದಾಗಿರುವುದು ದೃಢವಾಗಿದೆ.

  • ಸಿಎಂ ಬಿಎಸ್‍ವೈಗೆ ಪ್ರಧಾನಿ ಮೋದಿ ಕರೆ – ಕೊರೊನಾ ನಿಯಂತ್ರಣದ ಕ್ರಮಗಳ ಬಗ್ಗೆ ಮೆಚ್ಚುಗೆ

    ಸಿಎಂ ಬಿಎಸ್‍ವೈಗೆ ಪ್ರಧಾನಿ ಮೋದಿ ಕರೆ – ಕೊರೊನಾ ನಿಯಂತ್ರಣದ ಕ್ರಮಗಳ ಬಗ್ಗೆ ಮೆಚ್ಚುಗೆ

    ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರವರಿಗೆ ಕರೆ ಮಾಡಿ ಪರಿಸ್ಥಿತಿ ಕುರಿತಂತೆ ಮಾಹಿತಿ ಪಡೆದಿದ್ದಾರೆ.

    ರಾಜ್ಯದ ಕೆಲವು ಭಾಗಗಳಲ್ಲಿ ಕೊರೊನಾ ಕಫ್ರ್ಯೂ ಸೇರಿದಂತೆ ಕೈಗೊಂಡಿರುವ ಕೆಲ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬಿಎಸ್‍ವೈಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮೈಕ್ರೋ ಕಂಟೈನ್ಮೆಂಟ್ ಝೋನ್ ಬಗ್ಗೆ ನಿಗಾ ವಹಿಸಬೇಕು ಹಾಗೂ ಮೈಕ್ರೋ ಕಂಟೈನ್ಮೆಂಟ್ ಝೋನ್‍ನಲ್ಲಿ ಅಗತ್ಯ ಟೆಸ್ಟಿಂಗ್, ಟ್ರೇಸಿಂಗ್ ಹೆಚ್ಚಳ ಮಾಡಬೇಕೆಂದು ಬಿಎಸ್‍ವೈಗೆ, ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎನ್ನಲಾಗಿದೆ.

    ಈ ವಿಚಾರವಾಗಿ ಮುಖ್ಯಮಂತ್ರಿ ಬಿಎಸ್‍ವೈ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿರವರೊಂದಿಗೆ ಇಂದು ಮಾತನಾಡಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ರಾಜ್ಯದ ಕ್ರಮಗಳ ಬಗ್ಗೆ ಪ್ರಧಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ, ಮೈಕ್ರೋಕಂಟೈನ್ಮೆಂಟ್ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

  • ಕೇರಳ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 167ಕ್ಕೆ ಏರಿಕೆ: ಭೇಟಿ ನೀಡಲಿದ್ದಾರೆ ಮೋದಿ

    ಕೇರಳ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 167ಕ್ಕೆ ಏರಿಕೆ: ಭೇಟಿ ನೀಡಲಿದ್ದಾರೆ ಮೋದಿ

    ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ 167ಕ್ಕೆ ಏರಿಕೆಯಾಗಿದ್ದು, ಪ್ರಧಾನಿ ಮೋದಿ ಈ ಬಗ್ಗೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರ ಬಳಿ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

    ಕೇರಳ ಮುಖ್ಯಮಂತ್ರಿ ಜೊತೆ ನೆರೆ ವಿಚಾರದ ಬಗ್ಗೆ ಮಾತನಾಡಿದ್ದೇನೆ. ಅಲ್ಲದೇ ನಾನೇ ಬಂದು ಅಲ್ಲಿನ ಪರಿಸ್ಥಿತಿಗಳನ್ನು ಪರೀಶಿಲಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

    ಕೇರಳ ದುರಂತ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಈಗಾಗಲೇ ಮೃತಪಟ್ಟವರ ಸಂಖ್ಯೆ 167 ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಹೇಳಿದ್ದಾರೆ. ಸುಧಾರಿಸಲು ಭಾರತೀಯ ಕೋಸ್ಟ್ ಗಾರ್ಡ್‍ನ ನಾಲ್ಕು ಹಡಗುಗಳನ್ನು ಕೊಚ್ಚಿನ್ ಗೆ ಕಳುಹಿಸಲಾಗಿದ್ದು, ಈಗಾಗಲೇ ಪ್ರವಾಹ ಪೀಡಿತ ಹಳ್ಳಿಗಳಿಗೆ 24 ತಂಡಗಳು ಕಾರ್ಯಚರಣೆ ಮಾಡುತ್ತಿವೆ. ಐಸಿಜಿ 1,764 ಜನರನ್ನು ರಕ್ಷಿಸಿದ್ದು, 4,688 ಜನರಿಗೆ ಸುರಕ್ಷಿತ ಸ್ಥಳಕ್ಕೆ ತಲುಪಿಸಿದೆ.

    ಶನಿವಾರ ಕಾಸರಗೋಡು ಎರ್ನಾಕುಲಂ ಮತ್ತು ಇಡುಕ್ಕಿ ಒಳಗೊಂಡಂತೆ ಇತರ 13 ಜಿಲ್ಲೆಗಳಿಗೂ ಎಚ್ಚರಿಕೆಯನ್ನು ಸೂಚಿಸಲಾಗಿದೆ. ಶುಕ್ರವಾರ ಬೆಳಗ್ಗೆ 5 ಘಟಕದ ರಾಷ್ಟ್ರೀಯ ವಿಪತ್ತು ಪಡೆ ತಿರುವನಂತಪುರಂ ತಲುಪಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದೆ. ಇಂದು ಕೂಡ 35 ಸದಸ್ಯರ ತಂಡ ತಲುಪುವ ನೀರಿಕ್ಷೆ ಇದೆ. ಇದೀಗ ಐಸಿಜಿ ಪಡೆಯನ್ನು ವಂಡಿಪೆರಿಯರ್ ನಿಂದ ಮಂಜುಮಾಲಾ ಹಳ್ಳಿಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ 16 ಮಂದಿಯನ್ನು ರಕ್ಷಿಸಲಾಗಿದೆ. ಹಾಗೂ ಅವರಿಗೆ ಸೇವಿಸಲು ಆಹಾರ ಪದಾರ್ಥಗಳನ್ನು ನೀಡಿದ್ದಾರೆ.

    ಕೊಚ್ಚಿನ್‍ನ ವಿಮಾನ ನಿಲ್ದಾಣದಲ್ಲಿ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ಸ್ಥಳದಲ್ಲಿ ಕಾರ್ಯಾಚರಣೆ ಸ್ಥಗಿತ ಮಾಡಲಾಗಿದೆ. ಕೇಂದ್ರ ವಿಮಾನಯಾನ ಖಾತೆಯ ಸಚಿವ ಸುರೇಶ್ ಪ್ರಭು ಟ್ವೀಟ್ ಮಾಡಿ, ವಿಮಾನಯಾನ ಕಂಪೆನಿಗಳ ಜೊತೆ ಮಾತನಾಡಿದ್ದೇವೆ. ನೆರೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಕ್ಕೆ ತಲುಪಬೇಕಾಗಿರುವ ಸಾಮಾಗ್ರಿಗಳನ್ನು ಉಚಿತವಾಗಿ ತೆಗೆದುಕೊಂಡು ಹೋಗುತ್ತಿರುವುದಕ್ಕೆ ವಿಮಾನಯಾನ ಕಂಪೆನಿಗಳಿಗೆ ಧನ್ಯವಾದವನ್ನು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಸೂದೆ ಬದಲಾಯಿಸಿ, ಸಮಸ್ಯೆ ಬಗೆಹರಿಸಿ- ಸಿಎಂಗೆ ಹೆಚ್‍ಡಿಕೆ ಮನವಿ

    ಮಸೂದೆ ಬದಲಾಯಿಸಿ, ಸಮಸ್ಯೆ ಬಗೆಹರಿಸಿ- ಸಿಎಂಗೆ ಹೆಚ್‍ಡಿಕೆ ಮನವಿ

    ಬೆಂಗಳೂರು: ಸುಮಾರು 36 ಮಂದಿ ಅಮಾಯಕ ರೋಗಿಗಳನ್ನು ಬಲಿ ಪಡೆದ ಖಾಸಗಿ ವೈದ್ಯರ ಮುಷ್ಕರ ಐದನೇ ದಿನವೂ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದಾರೆ.

    ದೂರವಾಣಿ ಮೂಲಕ ಸಿಎಂ ಹಾಗೂ ಕಾನೂನು ಸಚಿವ ಟಿಬಿ ಜಯಚಂದ್ರ ಜೊತೆ ಮಾತನಾಡಿದ ಹೆಚ್‍ಡಿಕೆ, ವೈದ್ಯರ ಸಮಸ್ಯೆಯನ್ನು ನಾಜೂಕಾಗಿ ಪರಿಹರಿಸುವಂತೆ ಸಲಹೆ ನೀಡಿದ್ರು. ರಾಜ್ಯಾದ್ಯಂತ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಮಸ್ಯೆಯನ್ನು ಆದಷ್ಟು ಬೇಗ ಮಾತುಕತೆ ಮೂಲಕ ಬಗೆಹರಿಸಿ. ವಿಧೇಯಕದಲ್ಲಿ ಒಂದಷ್ಟು ಬದಲಾವಣೆ ಮಾಡಿ. ವೈದ್ಯರು ಸ್ಥಳೀಯ ಪ್ರಾಧಿಕಾರದ ಮುಂದೆ ಹೋಗಿ ಕೈ ಕಟ್ಟಿ ನಿಲ್ಲುವಂತಾಗುವುದು ಸರಿಯಲ್ಲ ಅಂತ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಜನಸಾಮಾನ್ಯರಿಗೆ ಅನುಕೂಲವಾಗುವ ಅಂಶಗಳಿರಲಿ. ಆದ್ರೆ ವೈದ್ಯರಿಗೆ ಮುಜುಗರ ಆಗುವಂತ ಅಂಶಗಳನ್ನು ಕೈ ಬಿಡುವುದು ಉತ್ತಮ. ಆರೋಗ್ಯ ಸಚಿವರೊಂದಿಗೆ ಮಾತನಾಡಿ ಇವತ್ತೇ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿ. ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಎಲ್ಲವೂ ಸರಿಯಾಗತ್ತೆ ಅಂತ ಹೆಚ್‍ಡಿಕೆ ಹೇಳಿದ್ದಾರೆ. ಸದ್ಯ ಕುಮಾರಸ್ವಾಮಿ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಇನ್ನು ಭಾರತೀಯ ವೈದ್ಯಕೀಯ ಸಂಘ ಯಾವುದೇ ಆಸ್ಪತ್ರೆಗಳ ಬಂದ್‍ಗೆ ಕರೆ ನೀಡಿಲ್ಲ. ಬೆಂಗಳೂರಿನ ವೈದ್ಯರಷ್ಟೇ ಕರೆ ನೀಡಿದ್ರು ಅಂತಾ ಐಎಂಎ ರಾಜ್ಯಾಧ್ಯಕ್ಷ ಡಾ. ಹೆಚ್‍ಎಸ್ ರವೀಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಕರೆ ನೀಡಿದ್ದ ಬಂದ್ ವಾಪಸ್ ಪಡೆದಿದ್ದಾರೆ. ನಾನು ಅಮರಣಾಂತ ಉಪವಾಸ ಮಾಡುತ್ತಿದ್ದೇನೆ. ಯಾವುದೇ ಬಂದ್ ಗೆ ಕರೆ ನೀಡಿಲ್ಲ. ಮಧ್ಯಾಹ್ನ 2 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಒಮ್ಮತದ ನಿರ್ಧಾರಕ್ಕೆ ಬರುತ್ತೇವೆ ಎಂಬ ವಿಶ್ವಾಸವಿದೆ. ಮಧ್ಯಾಹ್ನದ ಬಳಿಕ ಮುಂದಿನ ನಿರ್ಧಾರಗಳ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಅಂತಾ ರವೀಂದ್ರ ಹೇಳಿದ್ದಾರೆ.