ಒರು ಅಡಾರ್ ಲವ್ ಸೇರಿದಂತೆ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಮಲಯಾಳಂ (Malayalam)ನಿರ್ದೇಶಕ ಒಮರ್ ಲಲ್ಲು (Omar Lulu) ವಿರುದ್ಧ ಅತ್ಯಾಚಾರ ದೂರು ದಾಖಲಾಗಿದೆ. ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಎರ್ನಾಕುಲಂ ಪೊಲೀಸ್ ಠಾಣೆಯಲ್ಲಿ ದೂರು (Complaint) ದಾಖಲಾಗಿದೆ.
ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ನಿರ್ದೇಶಕರು ತಮಗೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದರು. ಈ ಪ್ರಕರಣ ಈಗ ನಿಡುಂಬಸ್ಸೇರಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಅವಕಾಶ ಕೊಡುವ ನೆಪದಲ್ಲಿ ನನ್ನೊಂದಿಗೆ ನಿರ್ದೇಶಕ ಪ್ರವಾಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರಕರಣವನ್ನು ನಿರ್ದೇಶಕರು ತಳ್ಳಿ ಹಾಕಿದ್ದಾರೆ. ನನ್ನ ಘನತೆಯನ್ನು ಹಾಳು ಮಾಡುವುದಕ್ಕಾಗಿ ಈ ನಟಿ ಸುಳ್ಳು ಆರೋಪ ಮಾಡಿ, ದೂರು ನೀಡಿದ್ದಾರೆ. ಅವರಿಗೆ ಅವಕಾಶ ನೀಡಲಿಲ್ಲ ಎನ್ನುವ ಕಾರಣವೂ ಇದೆ ಎಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಲ್ಲು ಅವರಿಗೆ ಮಧ್ಯಂತರ ಜಾಮೀನು ಕೂಡ ಮಂಜೂರಾಗಿದೆ.
ತೆಲುಗು ಸೇರಿದಂತೆ ನಾನಾ ಭಾಷೆಯ ಸಿನಿಮಾ ಮತ್ತು ವೆಬ್ ಸಿರೀಸ್ ನಲ್ಲಿ ನಟಿಸಿರುವ ದೇವಿಯಾನಿ ಶರ್ಮಾ (Devyani Sharma) ಅವರಿಗೆ ವಿಪರೀತ ತೊಂದರೆ ಕೊಡುತ್ತಿದ್ದಾರಂತೆ. ಅವರಿಂದ ತಪ್ಪಿಸಿಕೊಳ್ಳೋಕೆ ಆಗದೇ ಅವರು ಮೂರು ಬಾರಿ ಮುಂಬೈ ಪೊಲೀಸರಿಗೂ ದೂರು (Complaint) ನೀಡಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಶರ್ಮಾ ಸುದೀರ್ಘವಾದ ಪೋಸ್ಟ್ ಮಾಡಿದ್ದಾರೆ.
ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಫೋನ್ ಅನ್ನು ಯಾರೋ ಹ್ಯಾಕ್ ಮಾಡಿದ್ದು, ತಮ್ಮ ಖಾಸಗಿ ಮಾಹಿತಿಯನ್ನು ಪಡೆದಿದ್ದಾರಂತೆ. ಅದನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎನ್ನುವುದು ನಟಿಯ ಅಳಲು. ಈ ಕುರಿತಂತೆ ದೂರು ದಾಖಲಾಗಿದ್ದರೂ, ಯಾವುದೇ ಪ್ರಯೋಜನವಾಗಿಲ್ಲವಂತೆ.
ಅವತ್ತು ಫೋನ್ ಹ್ಯಾಕ್ ಮಾಡಿದ್ದರು. ಈಗ ವಾಟ್ಸಪ್ ಕೂಡ ಹ್ಯಾಕ್ ಆಗಿದೆಯಂತೆ. ಯಾರಾದರೂ ನನ್ನ ಅಕೌಂಟ್ ನಿಂದ ಸಂದೇಶಗಳನ್ನು ಕಳುಹಿಸಿದರೆ ಅದಕ್ಕೆ ನಾನು ಜವಾಬ್ದಾರಳು ಅಲ್ಲ ಎಂದಿದ್ದಾರೆ. ಈ ದುರುಳರ ಕಾರಣದಿಂದಾಗಿ ತಮಗೆ ನಿದ್ದೆ ಕೂಡ ಬರುತ್ತಿಲ್ಲವೆಂದು ಅವರು ಬರೆದುಕೊಂಡಿದ್ದಾರೆ.
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಮಹಿಳೆಯೊಬ್ಬರು ಮಹಿಳಾ ಆಯೋಗಕ್ಕೆ (Women’s Commission) ದೂರು ನೀಡಿದ್ದಾರೆ.
ಹಾಸನ (Hassan) ಮೂಲದ ನೊಂದ ಮಹಿಳೆಯೊಬ್ಬರು ಮಹಿಳಾ ಆಯೋಗಕ್ಕೆ ಶನಿವಾರ ಸಂಜೆ ದೂರು ನೀಡಿದ್ದಾರೆ. ತಂದೆ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರ ವಿರುದ್ಧವೂ ದೂರು ನೀಡಿದ್ದು, ಇಬ್ಬರೂ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆಯ ದೂರನ್ನು ಸ್ವೀಕರಿಸಿ ರಾಜ್ಯ ಮಹಿಳಾ ಆಯೋಗ ತನಿಖೆಗೆ ಮುಂದಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ (Nagalakshmi Choudhary) ‘ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ – ಸಮಗ್ರ ತನಿಖೆಗೆ ಎಸ್ಐಟಿ ರಚನೆ
ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ನಾಗಲಕ್ಷ್ಮೀ ಚೌಧರಿ, ಶನಿವಾರ ಸಂಜೆ ಸಂತ್ರಸ್ಥೆ ದೂರು ದಾಖಲಿಸಿದರು. ಸಂಸದ ಪ್ರಜ್ವಲ್ ರೇವಣ್ಣ ಅವರ ಕುಟುಂಬದವರಿಂದ ಕಿರುಕುಳ ಹಾಗೂ ಜೀವ ಬೆದರಿಕೆ ಇದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ವಾಟ್ಸಾಪ್ ಮೂಲಕ ದೂರಿನ ಪ್ರತಿಯನ್ನು ಕಳುಹಿಸಿಕೊಟ್ಟಿದ್ದಾರೆ. ಕೇವಲ ಒಬ್ಬ ಸಂತ್ರಸ್ಥೆ ಮಾತ್ರ ನಮಗೆ ದೂರು ಕೊಟ್ಟಿರೋದು. ಉಳಿದಂತೆ ಬೇರೆ ಯಾರೂ ದೂರು ನೀಡಿಲ್ಲ. ಮಹಿಳಾ ಸಂಘಟನೆ, ಕೆಲ ಸಂಘಟನೆಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರಿನ ಮನವಿಯನ್ನು ನೀಡಿದ್ದರು. ಇದರ ಸೂಕ್ಷ್ಮತೆ ಅರಿತುಕೊಂಡು ಸಿಎಂ, ಗೃಹ ಸಚಿವರಿಗೆ, ಪೊಲೀಸ್ ಜನರಲ್ಗೆ ಪತ್ರ ಬರೆದಿದ್ದೆ. ಗುರುವಾರ ಸಂಜೆ ಎಲ್ಲರಿಗೂ ಪತ್ರ ಬರೆದಿದ್ದೆ. ಎಸ್ಐಟಿ (SIT) ರಚನೆ ಆಗಬೇಕು. ನ್ಯಾಯ ಸಿಗಬೇಕೆಂದು ಪ್ರಕರಣದ ಗಂಭೀರತೆಯನ್ನು ಪತ್ರದಲ್ಲಿ ಬರೆದಿದ್ದೆ. ಅಪರಾಧ ಮಾಡಿದವರಿಗೆ ಶಿಕ್ಷೆಯಾಗೋ ಭರವಸೆಯಿದೆ. ಸರ್ಕಾರದ ದೊಡ್ಡ ಕೆಲಸ ಇದು ಎಂದು ತಿಳಿಸಿದರು. ಇದನ್ನೂ ಓದಿ: ಸಂಘ ಪರಿವಾರ ಎಂದಿಗೂ ಮೀಸಲಾತಿ ವಿರೋಧಿಸಿಲ್ಲ: ಆರ್ಎಸ್ಎಸ್ ಮುಖ್ಯಸ್ಥ
ಒಬ್ಬ ಸಂತ್ರಸ್ಥೆ ಮಾತ್ರ ನಮ್ಮ ಸಂಪರ್ಕಕ್ಕೆ ಬಂದಿದ್ದಾರೆ. ಬೇರೆ ಯಾರೂ ನಮ್ಮ ಸಂಪರ್ಕಕ್ಕೆ ಬಂದಿಲ್ಲ. ನಾವೇ ಇತರೆ ಸಂತ್ರಸ್ಥರನ್ನು ಸಂಪರ್ಕ ಮಾಡೋದಿಲ್ಲ. ಸಂತ್ರಸ್ಥೆಯರು ತಾವಾಗಿ ತಾವೇ ಮುಂದೆ ಬಂದರೆ ಅವರ ಧ್ವನಿಯಾಗಿ ನಾವು ಇರುತ್ತೇವೆ. ಆರೋಪಿ ಸ್ಥಾನದಲ್ಲಿದ್ದವರಿಗೆ ನೋಟಿಸ್ ಕೊಡಬಹುದು. ಮಹಿಳಾ ಆಯೋಗಕ್ಕೆ ಕರೆಸಬಹುದು. ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬಹುದು ಎಂದರು. ಇದನ್ನೂ ಓದಿ: ನರೇಂದ್ರ ಮೋದಿ ಪ್ರಧಾನ ಮಂತ್ರಿ ಅಲ್ಲ, ಪ್ರಧಾನ ಸುಳ್ಳುಗಾರ: ಬಿ.ಕೆ.ಹರಿಪ್ರಸಾದ್
ನಟಿ ಹರ್ಷಿಕಾ ಪೂಣಚ್ಚ (Harshika Poonacha) ದಂಪತಿಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಭುವನ್ (Bhuvan) ಜೊತೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಬಂದ ಹರ್ಷಿಕಾ ದಂಪತಿ ಅಂದು ನಡೆದು ಘಟನೆಯ ಕುರಿತಂತೆ ದೂರು ದಾಖಲಿಸಿದ್ದಾರೆ. ಪೊಲೀಸರು ಕರೆ ಮಾಡಿದ ಬೆನ್ನಲ್ಲೇ ನಡೆದ ಘಟನೆಯ ಬಗ್ಗೆ ವಿವರಣೆಯನ್ನೂ ಅವರು ಕೊಟ್ಟಿದ್ದಾರೆ.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಹರ್ಷಿಕಾ, ನಿನ್ನೆ ಸಂಬಂಧಿಕರೆಲ್ಲ ಇದ್ರು ಆಗ ಪೊಲೀಸರು ಕರೆ ಮಾಡಿದ್ರು. ನಿನ್ನೆಯಿಂದ ಎಸಿಪಿ ಟಚ್ ಲ್ಲಿ ಇದ್ರು. ಆ ಟ್ವೀಟನ್ನ ನಾನೆ ಬರೆದಿದ್ದು. ದೂರು ಕೊಟ್ಟಿದ್ದೆ ತಪ್ಪಾ ಹಾಗಾದ್ರೆ. ನಾವು ಯಾವುದೇ ಪಕ್ಷದಲ್ಲಿ ಗುರುತಿಸಿಕೊಂಡಿಲ್ಲ. ನಮ್ಮ ಹಿತೈಷಿಗಳು ಕರೆ ಮಾಡಿ ದೂರು ಕೊಡುವಂತೆ ಹೇಳಿದ್ರು. ಎಸಿಪಿ ಗೀತಾ ಅವರನ್ನು ಇಂದು ಭೇಟಿಯಾಗಬೇಕಿತ್ತು. ಆದ್ರೆ ಅಲ್ಲಿ ಯಾವುದೋ ಪ್ರೊಟೆಸ್ಟ್ ಇದೆ ಅಂತ ಹೇಳಿದ್ರು. ಹೀಗಾಗಿ ಕಮಿಷನರ್ ಕಚೇರಿಗೆ ದೂರು ಕೊಡಲು ಬಂದ್ವಿ. ಈ ತರಹದ ಘಟನೆಗಳು ಬೆಂಗಳೂರಿನಲ್ಲಿ ಹಲವಾರು ನಡೆದಿದೆ. ಕರ್ನಾಟಕದಲ್ಲಿ ನಾವೆಲ್ಲ ಒಂದೆ. ಯಾವುದೇ ಏರಿಯಾಗೆ ಹೋದ್ರು ಭಯವಿಲ್ಲದೇ ಹೋಗಬೇಕು. ಅಂದು ಕರಾಮ ಹೋಟೆಲ್ ಹೋಗಿದ್ವಿ. ಊಟ ಮುಗಿಸಿ ಹೊರಬಂದಿದ್ವಿ. ಕಾರಿನಲ್ಲಿ ಕುಳಿತ 2 ಸೆಕೆಂಡಲ್ಲಿ ಇಬ್ಬರು ಬಂದ್ರು. ಇಬ್ಬರು ದೊಡ್ಡ ಗಾಡಿ ನೋಡ್ಕಂಡು ತೆಗೀರಿ ಅಂದ್ರು. ನಾನು ಪ್ಯೂಚರ್ ಮಾತನಾಡಬೇಡ ತೆಗೀತಿನಿ ಬಿಡಿ ಅಂತ ಹೇಳ್ದೆ. ಕನ್ನಡದವರಿಗೆ ಬುದ್ದಿ ಕಲಿಸಬೇಕು ಅಂತ ಅವರ ಭಾಷೆಯಲ್ಲಿ ಮಾತನಾಡಿದ್ರು. ಏಕಾಏಕಿ 20 ಜನ ಅಟ್ಯಾಕ್ ಮಾಡಿದ್ರು. ಈ ವೇಳೆ ಆರ್ ಆರ್ ನಗರ ಇನ್ಸ್ ಪೆಕ್ಟರ್ ಗೆ ಕರೆಮಾಡಿದ್ವಿ. ಅವರು ಏರು ದನಿಯಲ್ಲಿ ಮಾತನಾಡಿದ್ದಕ್ಕೆ ಅಲ್ಲಿಂದ ಪರಾರಿಯಾದ್ರು ಅಂದಿದ್ದಾರೆ.
ಕಮಿಷನರ್ (Commissioner) ಕಚೇರಿಗೆ ದೂರು ಕೊಟ್ಟ ಬಳಿಕ ಮಾತನಾಡಿದ ನಟ ಭುವನ್, ನಾವು ಕಮಿಷನರ್ ಭೇಟಿಗೆ ಬಂದಿದ್ದೆವು. ಅವರ ಇಲ್ಲದ ಕಾರಣ ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತರನ್ನ ಭೇಟಿಯಾದ್ವಿ. ಎಫ್ ಐ ಆರ್ ಮಾಡಿ ಕ್ರಮ ತೆಗೆದುಕೊಳ್ತಿವಿ ಅಂತ ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬೇರೆ ರೂಪ ತೆಗೆದುಕೊಳ್ಳುತ್ತದೆ ಅಂತ ದೂರು ಕೊಟ್ಟಿಲ್ಲ. ಅಂದು ಆ ಸಂದರ್ಭದಲ್ಲಿ ಹೊಯ್ಸಳ ಇತ್ತು. ಅಲ್ಲಿ ಹೋಗಿ ಅವರ ಬಳಿ ಮಾತನಾಡಿದ್ವಿ. ಆವತ್ತಿನ ಪರಿಸ್ಥಿತಿಯಲ್ಲಿ ಕಂಪ್ಲೆಂಟ್ ಕೊಡುವ ಪರಿಸ್ಥಿತಿಯಲ್ಲಿರಲಿಲ್ಲ. ತುಂಬಾ ಜನ ಪೋನ್ ಮಾಡಿ ದೂರು ಕೊಡದಿದ್ರೆ ತಪ್ಪಾಗುತ್ತೆ ಅಂತ ಹೇಳ್ತಿದ್ದಾರೆ. ಹಾಗಾಗಿ ಕಾನೂನು ಕ್ರಮ ತಗೆದುಕೊಳ್ಳಿ ಎಂದು ಕೇಳುತ್ತಿದ್ದೆವೆ ಎಂದರು.
ಇದೇ ಏಪ್ರಿಲ್ 2 ರಂದು ರಾತ್ರಿ ಊಟ ಮುಗಿಸ್ಕೊಂಡು ಕಾರಿನತ್ತ ಬಂದಿದ್ದ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ನಟ ಭುವನ್ (Bhuvan) ಮೇಲೆ ಅಪರಿಚಿತರು ಹಲ್ಲೆಗೆ ಯತ್ನಿಸಿ, ಚಿನ್ನಾಭರಣವನ್ನು ದೋಚುವ ಪ್ರಯತ್ನ ಮಾಡಿದ್ದರು ಎಂದು ಆರೋಪ ಮಾಡಲಾಗುತ್ತಿದೆ. ಈ ಕುರಿತಂತೆ ಪೊಲೀಸರಿಗೆ ಮಾಹಿತಿ ನೀಡಿದ್ದರೂ, ಹರ್ಷಿಕಾ ದೂರನ್ನು (Complaint) ಯಾಕೆ ನೀಡಲಿಲ್ಲ ಎನ್ನುವ ಪ್ರಶ್ನೆ ಕೂಡ ಎದ್ದಿದೆ. ಈ ಕುರಿತಂತೆ ಹರ್ಷಿಕಾ ಮಾತನಾಡಿದ್ದಾರೆ.
ಕರಾಮಾ ರೆಸ್ಟೋರೆಂಟ್ ಗೆ ರೆಗ್ಯೂಲರ್ ಆಗಿ ಊಟಕ್ಕೆ ಹೋಗ್ತಿದ್ವಿ. ಎಪ್ರಿಲ್ 2 ರ ರಾತ್ರಿ ಊಟ ಮುಗಿಸ್ಕೊಂಡು ವಾಪಾಸ್ಸಾಗುವಾಗ ಘಟನೆ ನಡೆಯಿತು. ದೇಖೆ ಜಾವ್ ಅಂತಾ ಪಾರ್ಕಿಂಗ್ ಸ್ಲಾಟ್ ನಲ್ಲಿ ಕಿರಿಕ್ ಶುರುವಾಯಿತು. ಮೂವರು ಅಪರಿಚಿತ ವ್ಯಕ್ತಿಗಳಿಂದ ಹಲ್ಲೆಗೆ ಯತ್ನ ನಡೆಯಿತು. ಭುವನ್ ಕತ್ತಿಗೆ ಕೈ ಹಾಕಿ ಚೈನ್ ಎಳೆಯುವಂತ ಪ್ರಯತ್ನ ಮಾಡಿದರು ಅಲ್ಲಿದ್ದವರು. ಕಿರಿಕ್ ನೆಪದಲ್ಲಿ ದರೋಡೆಗೆ ಕೂಡ ಯತ್ನ ಮಾಡಲಾಗಿದೆ ಎಂದಿದ್ದಾರೆ.
ಮುಂದುವರೆದು ಮಾತನಾಡಿದ ಹರ್ಷಿಕಾ, ರಾತ್ರಿ ಆದ್ದರಿಂದ ಹೆಣ್ಮಕ್ಕಳು ಗಾಡಿಲಿ ಇದ್ದ ಕಾರಣ ಕಂಪ್ಲೇಂಟ್ ಕೊಡೋಕೆ ಮುಂದಾಗ್ಲಿಲ್ಲ. ನಮ್ ಮೇಲೆನೇ ಈ ತರ ಆದ್ರೆ ಸಾಮಾನ್ಯರ ಪರಿಸ್ಥಿತಿ ಹೇಗೆ ಅನ್ನೋ ಪ್ರಶ್ನೆ ಹುಟ್ಕೊಳ್ಳುತ್ತೆ. ಭುವನ್ ಕೈಗೆ ಗಾಯ ಆಗಿದೆ. ಚಿಕಿತ್ಸೆ ತಗೊಂಡಿದ್ದಾರೆ. ಎಲ್ಲರಿಗೂ ಈ ಬಗ್ಗೆ ಮಾಹಿತಿ ಇರಲಿ. ದರೋಡೆಗೆ ಹೀಗೂ ಪ್ಲಾನ್ ಮಾಡ್ತಾರೆ ಅಂತ ತಿಳಿಸೋಕೆ ಪೋಸ್ಟ್ ಹಾಕಿದೆ. ಉರ್ದುದಲ್ಲಿ ಎಲ್ಲಿಂದ ಬಂದಿದ್ದೀರಾ ಅಂತಾ ಹೇಳ್ತಾರೆ. ನಾವು ಯಾರಿಗೂ ಬೈದಿಲ್ಲ. ಕೆಟ್ಟದಾಗಿ ಮಾತಾಡಿಲ್ಲ. ನಮ್ ಕರ್ನಾಟಕದಲ್ಲಿ ನಾವು ಕನ್ನಡ ಮಾತಾಡೋದೇ ತಪ್ಪಾ? ಎನ್ನುವ ಪ್ರಶ್ನೆ ಅವರದ್ದು.
ಕಾರಿನಲ್ಲಿ ಹೆಣ್ಣು ಮಕ್ಕಳು ಇದ್ದ ಕಾರಣದಿಂದಾಗಿ ಮತ್ತು ಪೊಲೀಸರು ಸರಿಯಾಗಿ ಸ್ಪಂದಿಸಲಿಲ್ಲ ಎನ್ನುವ ಕಾರಣದಿಂದಾಗಿ ದೂರನ್ನು ನೀಡಲಿಲ್ಲ ಎಂದು ಇನ್ಸ್ಟಾದಲ್ಲಿ ಬರೆದುಕೊಂಡು ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ ಹರ್ಷಿಕಾ.
ಬಿಗ್ ಬಾಸ್ ಸೀಸನ್ 17ರ ವಿನ್ನರ್ ಹಾಗೂ ಖ್ಯಾತ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಖಿ (Munawar Farooqui) ಮೇಲೆ ಮೊಟ್ಟೆ ಎಸೆದಿರುವ (Egg throwing) ಘಟನೆ ಮುಂಬೈನಲ್ಲಿ ನಡೆದಿದೆ. ಮೊಟ್ಟೆ ಎಸೆದಿರುವ ರೆಸ್ಟೊರೆಂಟ್ ಮಾಲೀಕನ ಮೇಲೆ ಕೇಸು ದಾಖಲಾಗಿದೆ. ಗಲಾಟೆಯಲ್ಲಿ ಮುನಾವರ್ ನನ್ನು ಸೆಕ್ಯೂರಿಟಿ ಸಿಬ್ಬಂದಿ ಪಾರು ಮಾಡಿದ್ದಾರೆ.
ಮುಂಬೈನ (Mumbai) ಮೊಹಮ್ಮದ್ ಅಲಿ ರಸ್ತೆಯಲ್ಲಿರುವ ಮಿನಾರಾ ಮಸೀದಿ ಪ್ರದೇಶದಲ್ಲಿದ್ದ ರೆಸ್ಟೋರೆಂಟ್ ವೊಂದಕ್ಕೆ ಇಫ್ತಾರಿಗೆ ಆಹ್ವಾನಿಸಿದ್ದರು. ಆದರೆ, ಅವರು ನಂತರ ಬೇರೊಂದು ಹೋಟೆಲ್ ಅನ್ನು ಆಯ್ಕೆ ಮಾಡಿಕೊಂಡರಂತೆ. ಇದರಿಂದ ಕುಪಿತಗೊಂಡ ರೆಸ್ಟೋರೆಂಟ್ ಮಾಲೀಕ ಮುನಾವರ್ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾನೆ.
ತನ್ನ ಮೇಲೆ ಮೊಟ್ಟೆ ಬಿದ್ದ ಮೇಲೆ ಮಾಲೀಕರ ಮೇಲೆ ಮುನಾವರ್ ಕೂಗಾಡಿರುವ ದೃಶ್ಯ ಅಲ್ಲಿದ್ದವರ ಮೊಬೈಲ್ ನಲ್ಲಿ ಸೆರೆಯಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಆರು ಮಂದಿ ವಿರುದ್ಧ ಪೈದೋನಿ ಪೊಲೀಸರು ಪ್ರಕರಣವನ್ನು (Complaint) ದಾಖಲಿಸಿದ್ದಾರೆ. ನಂತರ ಮುನಾವರ್ ಅಲ್ಲಿ ನೆರೆದಿದ್ದವರ ಜೊತೆ ಸೆಲ್ಫಿಗೆ ಪೋಸ್ ಕೂಡ ನೀಡಿದ್ದಾರೆ.
ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ವಿರುದ್ಧ ಚುನಾವಣೆ ಆಯೋಗಕ್ಕೆ ಬಿಜೆಪಿ (BJP) ಕರ್ನಾಟಕ ದೂರು ನೀಡಿದೆ. ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೀತಾ ಶಿವರಾಜ್ ಕುಮಾರ್ ಅವರು ಚುನಾವಣೆ ಸಮಯದಲ್ಲಿ ತಮ್ಮ ಸಿನಿಮಾದ ಜಾಹೀರಾತನ್ನು ನೀಡಿರುವುದರಿಂದ ಅದನ್ನು ಚುನಾವಣೆ ವೆಚ್ಚಕ್ಕೆ ಸೇರಿಸುವಂತೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
ಶಿವರಾಜ್ ಕುಮಾರ್ ನಟನೆಯ ಭೈರತಿ ರಣಗಲ್ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ ಗೀತಾ. ಯುಗಾದಿ ಸಂದರ್ಭದಲ್ಲಿ ಈ ಸಿನಿಮಾದ ಜಾಹೀರಾತು ಅನ್ನು ಎಲ್ಲ ದಿನಪತ್ರಿಕೆಗಳಿಗೆ ನೀಡಲಾಗಿತ್ತು. ಜಾಹೀರಾತಿಗೆ ನೀಡಿದ ಹಣದ ಖರ್ಚನ್ನು ಚುನಾವಣೆ ವೆಚ್ಚದಲ್ಲಿ ಸೇರಿಸುವಂತೆ ಶಿಫಾರಸ್ಸು ಮಾಡಬೇಕು ಎಂದು ದೂರಿನಲ್ಲಿ (Complaint) ಹೇಳಲಾಗಿದೆ.
ಈ ಹಿಂದೆ ಶಿವರಾಜ್ ಕುಮಾರ್ ಚಿತ್ರಗಳನ್ನು ಮತ್ತು ಜಾಹೀರಾತುಗಳನ್ನು ತಡೆ ಹಿಡಿಯುವಂತೆ ಇದೇ ಚುನಾವಣೆ ಆಯೋಗಕ್ಕೆ ದೂರು ನೀಡಲಾಗಿತ್ತು. ಆದರೆ, ತಡೆಹಿಡಿಯಲು ಆಯೋಗ ನಿರಾಕರಿಸಿತ್ತು. ಈಗ ಮತ್ತೊಂದು ದೂರನ್ನು ಬಿಜೆಪಿ ನೀಡಿದೆ.
ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ದರ್ಶನ್ (Darshan) ಅಭಿಮಾನಿಗಳು ಕೂಡ ದೂರು ನೀಡಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಬಂದಿದ್ದ ಅಭಿಮಾನಿಗಳು ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಿಂದ ಅವಮಾನಿಸುವಂತಹ ಕೆಲಸವಾಗಿದೆ. ಕೂಡಲೇ ಕ್ರಮ ತೆಗೆದುಕೊಳ್ಳಿ ಎಂದು ದೂರಿನಲ್ಲಿ (Complainant) ಉಲ್ಲೇಖಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅಭಿಮಾನಿ ನಾಗರಾಜ್, ‘ಅಶ್ವಿನಿ ಅವರಿಗೆ ನ್ಯಾಯ ಸಿಗ್ಬೇಕು ಅಂತ ನಮ್ಮ ಸಂಘದ ವತಿಯಿಂದ ದೂರು ದಾಖಲಿಸಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ದರ್ಶನ್, ಅಪ್ಪು ಹೆಸರಿನಲ್ಲಿ ಅವರು ಮೈಲೇಜ್ ತಗೋತಿದ್ದಾರೆ. ಯಾರು ಅಂತ ಗೊತ್ತಾಗಬೇಕು. ಲೈಕ್, ಕಾಮೆಂಟ್ ಗೆ ರಾಜ್ಯ ಹೊತ್ತಿ ಉರಿಯೋ ಕೆಲಸ ಮಾಡ್ತಿದ್ದಾರೆ. ಕಾನೂನು ರೀತಿ ಹೋರಾಟ ಮಾಡಿ ರೌಡಿಸಂ ಬೇಡ ಎಂದಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ದರ್ಶನ್ ಪತ್ನಿ ವಿಜಯಲಕ್ಷ್ಮಿ, ನಟಿ-ಸಂಸದೆ ಸುಮಲತಾ, ನಿರ್ಮಾಪಕಿ ಅಶ್ವಿನಿ ಪುನೀತ್, ದರ್ಶನ್ ತಾಯಿ ಮೀನಾ ತೂಗುದೀಪ್ ಹೀಗೆ ಈ ಎಲ್ಲರ ಬಗ್ಗೆನೂ ಕೆಟ್ಟದ್ದಾಗಿ ಪೋಸ್ಟ್ ಮಾಡಲಾಗಿದೆ. ಇದು ತಪ್ಪು. ಈ ಹೆಣ್ಣುಮಕ್ಕಳಿಗೆ ನ್ಯಾಯ ಸಿಗಬೇಕು ಅಂತ ಕಂಪ್ಲೇಂಟ್ ಫೈಲ್ ಮಾಡಿದೀವಿ ಎನ್ನುತ್ತಾರೆ.
ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ವಿಚಾರದಲ್ಲಿ ದರ್ಶನ್ ಅವರೂ ನೊಂದುಕೊಂಡಿದ್ದಾರೆ. ಅವರಿಗೂ ಈ ವಿಚಾರ ಗಮನಕ್ಕಿದೆ. ದರ್ಶನ್ ಅವರು ಸಿನಿಮಾ ಬಗ್ಗೆ ಪ್ರಚಾರ ಮಾಡಿ ಅಂತಾರೆ. ಯಾವುದೇ ಚಿತ್ರನಟ ಸ್ಟಾರ್ ವಾರ್ ಮಾಡಿ ಅನ್ನೋದಿಲ್ಲ ಎನ್ನುವುದು ಅಭಿಮಾನಿಗಳ ಮಾತು.
ಗಜಪಡೆ (Gajapade) ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ನಿರ್ಮಾಪಕಿ, ಪುನೀತ್ ರಾಜ್ ಕುಮಾರ್ ಬಗ್ಗೆ ನಿಂದನೆ ಪೋಸ್ಟ್ ಮಾಡಿರುವ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಸಿಎಂ ಸಿದ್ಧರಾಮಯ್ಯ ಸೇರಿದಂತೆ ಹಲವರು ಈ ನಡೆಯನ್ನು ಖಂಡಿಸಿದ್ದಾರೆ. ಜೊತೆಗೆ ಅಪ್ಪು ಫ್ಯಾನ್ಸ್ ಕಾನೂನಾತ್ಮಕ ಹೋರಾಟಕ್ಕೂ ಮುಂದಾಗಿದ್ದಾರೆ. ಸದ್ಯ ಬಿಟಿಎಂ ಲೇ ಔಟ್, ಜೆ ಪಿ ನಗರ ಹಾಗೂ ತಲಘಟ್ಟಪುರದ ಪೊಲೀಸ್ ಠಾಣೆಯಲ್ಲಿ ಗಜಪಡೆ ಖಾತೆಯ ವಿರುದ್ಧ ದೂರು (Complaint) ನೀಡಲಾಗಿದೆ.
ಅಶ್ವಿನಿ (Ashwini Puneeth Rajkumar) ಬಗ್ಗೆ ಅವಹೇಳನಕಾರಿ ಪೋಸ್ಟ್ (Post) ಮಾಡಿದವರ ವಿರುದ್ಧ ಕ್ರಮಕ್ಕೆ ದಿನದಿಂದ ದಿನಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈಗಾಗಲೇ ವಿರೋಧಿ ಪೋಸ್ಟ್ ಗಳು ಹರಿದಾಡುತ್ತಿವೆ. ಜೊತೆಗೆ ಸಿನಿಮಾ ರಂಗದ ಅನೇಕರು ಪೋಸ್ಟ್ ವಿರುದ್ಧ ಧ್ವನಿ ಎತ್ತಿದ್ದಾರೆ. ಈಗ ಅಪ್ಪು ಫ್ಯಾನ್ಸ್ ಗೃಹ ಸಚಿವರನ್ನು ಭೇಟಿ ಮಾಡಿ, ಕ್ರಮಕ್ಕಾಗಿ ಒತ್ತಾಯ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಕೂಡ ಕಠಿಣ ಕ್ರಮದ ಮಾತುಗಳನ್ನು ಆಡಿದ್ದಾರೆ.
ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರ್ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದವರಿಗೆ ನವರಸನಾಯಕ ಜಗ್ಗೇಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆಣ್ಣುಕುಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ ಎಂದು ಜಗ್ಗೇಶ್ (Jaggesh) ಹಿಡಿಶಾಪ ಹಾಕಿದ್ದಾರೆ.
ಪುನೀತನ ಮಡದಿ ಅಣಕಿಸಿದ ನತದೃಷ್ಟರೆ ನಿಮಗೂ ತಾಯಿ ಇರಬೇಕು. ತಾಯಿ ಬೆಲೆ ಗೊತ್ತಿರಬೇಕು. ಒಂದು ವೇಳೆ, ತಾಯಿ ಮತ್ತು ಹೆಣ್ಣಿಗೆ ಗೌರವ ಕೊಡಲ್ಲ ಎಂದರೆ ಖಂಡಿತಾ ಅಂಥವರು ಮನುಕುಲಕ್ಕೆ ಅನರ್ಹ. ಪುನೀತನ ಮಡದಿ ಅನಾಥಳಲ್ಲ ತನ್ನ ಪ್ರೀತಿಸುತ್ತಿದ್ದ ಕೋಟ್ಯಾಂತರ ಅಭಿಮಾನಿಗಳ ಬಳುವಳಿ ಕೊಟ್ಟು ಹೋಗಿದ್ದಾನೆ ಎಂದು ಜಗ್ಗೇಶ್ ಅಪ್ಪು ಅಭಿಮಾನಿಗಳ ಕಡೆ ತೋರಿಸಿದ್ದಾರೆ. ಹೆಣ್ಣು ಕುಲಕ್ಕೆ ನೋವು ಕೊಟ್ಟವ ಉದ್ಧಾರ ಆದ ಇತಿಹಾಸವಿಲ್ಲ ಎಂದು ಜಗ್ಗೇಶ್ ಅಶ್ವಿನಿ ಪರ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಜಗ್ಗೇಶ್ ಪ್ರತಿಕ್ರಿಯೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್ಸಿಬಿ ಅನ್ಬಾಕ್ಸ್ ಇವೆಂಟ್ನಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಆರ್ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ‘ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.
ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ (Ashwini Puneeth Rajkumar) ಬಗ್ಗೆ ಅವಹೇಳನಕಾರಿ ಪೋಸ್ಟ್ (Post) ಮಾಡಿದವರ ವಿರುದ್ಧ ಕ್ರಮಕ್ಕೆ ದಿನದಿಂದ ದಿನಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈಗಾಗಲೇ ವಿರೋಧಿ ಪೋಸ್ಟ್ ಗಳು ಹರಿದಾಡುತ್ತಿವೆ. ಜೊತೆಗೆ ಸಿನಿಮಾ ರಂಗದ ಅನೇಕರು ಪೋಸ್ಟ್ ವಿರುದ್ಧ ಧ್ವನಿ ಎತ್ತಿದ್ದಾರೆ. ಈಗ ಅಪ್ಪು ಫ್ಯಾನ್ಸ್ ಗೃಹ ಸಚಿವರನ್ನು ಭೇಟಿ ಮಾಡಿ, ಕ್ರಮಕ್ಕಾಗಿ ಒತ್ತಾಯ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಕೂಡ ಕಠಿಣ ಕ್ರಮದ ಮಾತುಗಳನ್ನು ಆಡಿದ್ದಾರೆ.
ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರ್ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದವರಿಗೆ ನವರಸನಾಯಕ ಜಗ್ಗೇಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆಣ್ಣುಕುಲ್ಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ ಎಂದು ಜಗ್ಗೇಶ್ (Jaggesh) ಹಿಡಿಶಾಪ ಹಾಕಿದ್ದಾರೆ.
ಪುನೀತನ ಮಡದಿ ಅಣಕಿಸಿದ ನತದೃಷ್ಟರೆ ನಿಮಗೂ ತಾಯಿ ಇರಬೇಕು. ತಾಯಿ ಬೆಲೆ ಗೊತ್ತಿರಬೇಕು. ಒಂದು ವೇಳೆ, ತಾಯಿ ಮತ್ತು ಹೆಣ್ಣಿಗೆ ಗೌರವ ಕೊಡಲ್ಲ ಎಂದರೆ ಖಂಡಿತಾ ಅಂಥವರು ಮನುಕುಲಕ್ಕೆ ಅನರ್ಹ. ಪುನೀತನ ಮಡದಿ ಅನಾಥಳಲ್ಲ ತನ್ನ ಪ್ರೀತಿಸುತ್ತಿದ್ದ ಕೋಟ್ಯಾಂತರ ಅಭಿಮಾನಿಗಳ ಬಳುವಳಿ ಕೊಟ್ಟು ಹೋಗಿದ್ದಾನೆ ಎಂದು ಜಗ್ಗೇಶ್ ಅಪ್ಪು ಅಭಿಮಾನಿಗಳ ಕಡೆ ತೋರಿಸಿದ್ದಾರೆ. ಹೆಣ್ಣು ಕುಲಕ್ಕೆ ನೋವು ಕೊಟ್ಟವ ಉದ್ಧಾರ ಆದ ಇತಿಹಾಸವಿಲ್ಲ ಎಂದು ಜಗ್ಗೇಶ್ ಅಶ್ವಿನಿ ಪರ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಜಗ್ಗೇಶ್ ಪ್ರತಿಕ್ರಿಯೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್ಸಿಬಿ ಅನ್ಬಾಕ್ಸ್ ಇವೆಂಟ್ನಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಆರ್ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ‘ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.
ಅಶ್ವಿನಿ ಪುನೀತ್ ರಾಜ್ಕುಮಾರ್ ಬಗ್ಗೆ ಬರೆದ ಕೀಳು ಮಟ್ಟದ ಪೋಸ್ಟ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.