Tag: ದೆಹಲಿಚಲೋ

  • ರೈತರನ್ನು ಹಿಮ್ಮೆಟ್ಟಿಸಲು ʻಶಬ್ದಾಸ್ತ್ರʼ ಪ್ರಯೋಗ – ಇದು ಹೇಗೆ ಕೆಲಸ ಮಾಡುತ್ತೆ?

    ರೈತರನ್ನು ಹಿಮ್ಮೆಟ್ಟಿಸಲು ʻಶಬ್ದಾಸ್ತ್ರʼ ಪ್ರಯೋಗ – ಇದು ಹೇಗೆ ಕೆಲಸ ಮಾಡುತ್ತೆ?

    – ಇಂದು ರೈತರೊಂದಿಗೆ ಕೇಂದ್ರ ಸರ್ಕಾರ ಸಭೆ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಪ್ರವೇಶಿಸಲು ಪಟ್ಟುಹಿಡಿದು ಪ್ರತಿಭಟಿಸುತ್ತಿರುವ ರೈತರನ್ನು (Farmers) ಹಿಮ್ಮೆಟ್ಟಿಸಲು, ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ. ಬ್ಯಾರಿಕೇಡ್, ಮುಳ್ಳಿನ ತಂತಿ, ಜಲಫಿರಂಗಿ, ಅಶ್ರುವಾಯು, ಕಾಂಕ್ರೀಟ್‌ ಬ್ಯಾರಿಕೇಡ್‌ ಎಲ್ಲಾ ರೀತಿಯ ಅಸ್ತ್ರವನ್ನೂ ಪ್ರಯೋಗಿಸಿದ್ದಾರೆ. ಆದ್ರೆ ಇದ್ಯಾವುದಕ್ಕೂ ಜಗ್ಗದ ಪ್ರತಿಭಟನಾಕಾರರನ್ನ ಹಿಮ್ಮೆಟ್ಟಿಸಲು ʻಶಬ್ದಾಸ್ತ್ರʼ (Sonic Weapons) ಬಳಕೆಗೆ ಪೊಲೀಸರು ಮುಂದಾಗಿದ್ದಾರೆ.

    ಹರಿಯಾಣದ ಶಂಭು ಗಡಿಯಲ್ಲೇ ರೈತರನ್ನು ತಡೆದು ನಿಲ್ಲಿಸಲು, ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಆದ್ರೆ ಭದ್ರತೆಯನ್ನು ಭೇದಿಸಲು ರೈತರು ಮುಂದಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಲಾಂಗ್‌ ರೇಂಜ್‌ ಅಕೌಸ್ಟಿಕ್‌ ಡಿವೈಸ್‌ (LRADS) ಶಬ್ಧಸ್ತ್ರ ಬಳಸಿ ರೈತರನ್ನು ಹಿಮ್ಮೆಟ್ಟಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ದೆಹಲಿ ಚಲೋ ಪ್ರತಿಭಟನೆ ನಿಗ್ರಹಕ್ಕೆ ಯತ್ನ – ಪೊಲೀಸರ ವರ್ತನೆ ಖಂಡಿಸಿ ಶುಕ್ರವಾರ ದೇಶಾದ್ಯಂತ ರಸ್ತೆ ತಡೆ

    ಏನಿದು ಶಬ್ದಾಸ್ತ್ರ?
    ಅಮೆರಿಕದ ಮಿಲಿಟರಿ ಪಡೆಗಳು 2000ನೇ ವರ್ಷದ ಆರಂಭದಲ್ಲೇ ಈ ಸಾಧನಗಳನ್ನು ಅಭಿವೃದ್ಧಿ ಪಡಿಸಿವೆ. ವಿವಿಧ ಸಂದರ್ಭಗಳಲ್ಲಿ ಜನಸಮೂಹವನ್ನು ನಿಯಂತ್ರಿಸುವುದು ಮಾತ್ರವಲ್ಲದೇ, ಮೈಕ್ರೋಫೋನ್ ರೀತಿಯಲ್ಲಿ, ರಕ್ಷಣಾ ಸಂದರ್ಭಗಳಲ್ಲೂ ವಿವಿಧೋದ್ದೇಶಗಳಿಗಾಗಿ ಇವುಗಳನ್ನು ಬಳಕೆ ಮಾಡಲಾಗುತ್ತಿದೆ. ಇವುಗಳ ಬೆಲೆ 30 ಲಕ್ಷ ರೂ.ಗಳಷ್ಟಿದೆ. 2013ರಲ್ಲಿ ಇಂಥ 5 LRADS ಗಳನ್ನು ದೆಹಲಿ ಪೊಲೀಸ್ ಇಲಾಖೆ ಖರೀದಿಸಿದೆ. ಈಗ ಪ್ರತಿಭಟನಾಕಾರರನ್ನ ಚದುರಿಸಲು ಅವುಗಳನ್ನು ಬಳಕೆ ಮಾಡುತ್ತಿದೆ. 130 ಡೆಸಿಬಲ್‌ನಷ್ಟು ಜೋರಾಗಿ ಶಬ್ದವನ್ನು ಇದರಿಂದ ಹೊರಡಿಸಲಾಗುತ್ತದೆ. ಇದು ಅತ್ಯಂತ ಕರ್ಕಶವೆನಿಸುತ್ತದೆ. ಇದನ್ನು ಸಾನಿಕ್‌ ಅಸ್ತ್ರವೆಂದೂ ಕರೆಯುತ್ತಾರೆ.

    ಸಾನಿಕ್‌ ಅಸ್ತ್ರವಷ್ಟೇ ಅಲ್ಲದೇ, ಗುಂಪು ಚದುರಿಸುವುದಕ್ಕಾಗಿ ಪೊಲೀಸರು ಗುಂಡು ಹಾರಿಸುವುದನ್ನೂ ಅಭ್ಯಾಸ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ – ನಾಮಪತ್ರ ಪ್ರಕ್ರಿಯೆ ಪೂರ್ಣಗೊಳಿಸಿದ ಕಾಂಗ್ರೆಸ್ ವರಿಷ್ಠೆ

    ಇಂದು ಕೇಂದ್ರ ಸರ್ಕಾರ ಸಭೆ:
    ಕೇಂದ್ರ ಸರ್ಕಾರವು ಗುರುವಾರ ಚಂಡೀಗಢದಲ್ಲಿ ರೈತರೊಂದಿಗೆ ಸಭೆ ನಡೆಸಲಿದೆ. ಅಲ್ಲಿಯವರೆಗೂ ರೈತರು ಶಾಂತ ರೀತಿಯಲ್ಲಿ ಇರಲಿದ್ದಾರೆ ಎಂದು ರೈತಮುಖಂಡರೊಬ್ಬರು ತಿಳಿಸಿದ್ದಾರೆ.

  • ದೆಹಲಿ ಚಲೋ ಪ್ರತಿಭಟನೆ ನಿಗ್ರಹಕ್ಕೆ ಯತ್ನ – ಪೊಲೀಸರ ವರ್ತನೆ ಖಂಡಿಸಿ ಶುಕ್ರವಾರ ದೇಶಾದ್ಯಂತ ರಸ್ತೆ ತಡೆ

    ದೆಹಲಿ ಚಲೋ ಪ್ರತಿಭಟನೆ ನಿಗ್ರಹಕ್ಕೆ ಯತ್ನ – ಪೊಲೀಸರ ವರ್ತನೆ ಖಂಡಿಸಿ ಶುಕ್ರವಾರ ದೇಶಾದ್ಯಂತ ರಸ್ತೆ ತಡೆ

    ನವದೆಹಲಿ: ಬೆಂಬಲ ಬೆಲೆ ಕಾನೂನು ಜಾರಿ ಸೇರಿ ವಿವಿಧ ಬೇಡಿಕೆಗೆಗಳ ಈಡೇರಿಸುವಂತೆ ರೈತರು ದೆಹಲಿ ಚಲೋ (Delhi chalo) ಪ್ರತಿಭಟನೆ ಆರಂಭಿಸಿದ್ದು ರಾಷ್ಟ್ರ ರಾಜಧಾನಿ ತೆರಳದಂತೆ ತಡೆಯಲು ಹರ್ಯಾಣ ಪೊಲೀಸರು (Hariyana Police)  ರೈತರ (Farmers) ಮೇಲೆ ಅಶ್ರವಾಯು, ಜಲಫಿರಂಗಿ ಪ್ರಯೋಗ ಮಾಡಿದ್ದು, ಲಘು ಲಾಠಿ ಪ್ರಹಾರ ಕೂಡಾ ನಡೆಸಲಾಗಿದೆ. ಪೊಲೀಸರ ವರ್ತನೆ ಖಂಡಿಸಿ ದೇಶಾದ್ಯಾಂತ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನ ಮಾಡಿವೆ.

    ಈ ಬಗ್ಗೆ ಮಾಹಿತಿ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್, ರೈತರ ಮೇಲೆ ನಡೆಸಿರುವ ಪೈಶಾಚಿಕ ದೌರ್ಜನ್ಯವನ್ನು ಖಂಡಿಸಲು ದೇಶದಾದ್ಯಂತ ಪ್ರತಿಭಟಿಸಿ ಗ್ರಾಮೀಣ ಮಟ್ಟದಲ್ಲಿ ರಸ್ತೆ ಬಂದ್ ಮಾಡಲು ತಿರ್ಮಾನಿಸಿದೆ. ಎಲ್ಲಾ ಸಂಘಟನೆಗಳು ಸ್ವಯಂ ಪ್ರೇರಿತವಾಗಿ ರಾಜ್ಯಾದ್ಯಂತ ಶುಕ್ರವಾರ (ಫೆ.16) ರಂದು ಬೆಳಿಗ್ಗೆ 11 ರಿಂದ 1 ಗಂಟೆವರೆಗೂ ರಸ್ತೆ ಬಂದ್ ಚಳುವಳಿ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಮದ್ಯಪ್ರಿಯರಿಗೆ ಗುಡ್ ನ್ಯೂಸ್ – ಬೆಂಗಳೂರಲ್ಲಿ 3 ದಿನ ಅಲ್ಲ, 2 ದಿನ ಮಾತ್ರ ಮದ್ಯ ಮಾರಾಟ ಬಂದ್

    ಇದೇ ವೇಳೆ ಮೋದಿ ಸರ್ಕಾರದ ಬಗ್ಗೆ ಮಾತನಾಡಿ, ರೈತರ ಸಂಘಟನೆಗಳ ದೆಹಲಿ ಚಲೋ ಮೆರವಣಿಗೆಯನ್ನು ತಡೆಯಲು ಪ್ರಭುತ್ವ ಅಧಿಕಾರದ ದುರ್ಬಳಕೆ ಮಾಡುತ್ತಿದೆ. ರೈತರ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ಲಾಠಿ ಪ್ರಹಾರ, ರಬ್ಬರ್ ಬುಲೆಟ್, ಅಶ್ರುವಾಯು ಸಿಡಿತ ಮತ್ತು ಸಾಮೂಹಿಕ ಬಂಧನವನ್ನ ಖಂಡಿಸುತ್ತೇನೆ. ರೈತರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಎಸೆಯಲು ಡ್ರೋನ್‌ಗಳನ್ನು ಬಳಸಿರುವುದು ಅತ್ಯಂತ ಅಘಾತಕಾರಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ

    ರೈತರ ಶಾಂತಿಯುತ ಹೋರಾಟದ ಮೇಲೆ ದಾಳಿ ಮಾಡಲು ಪೊಲೀಸರು ಮತ್ತು ಸಶಸ್ತç ಭದ್ರತಾ ಪಡೆಗಳನ್ನು ಛೂ ಬಿಟ್ಟಿರುವುದು ಸರ್ಕಾರ ರೈತರ ಆಂದೋಲನ ದಮನ ಮಾಡುವ ಕಾರ್ಯವಾಗಿದೆ. ಇಂತಹ ಕೆಟ್ಟ ನೀತಿಗಳಿಂದ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಇದೆ. ಪ್ರತಿಯೊಂದು ವರ್ಗದ ಜನರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಮತ್ತು ಅವರ ಜೀವನೋಪಾಯವನ್ನು ರಕ್ಷಿಸುವ ನಿರ್ದಿಷ್ಟ ಬೇಡಿಕೆಗಳನ್ನು ಪರಿಹರಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ರೈತರ ಜ್ವಲಂತ ಸಮಸ್ಯೆಗಳನ್ನು ಬಗೆ ಹರಿಸಬೇಕಾದ ಸರ್ಕಾರ ಹೋರಾಟ ನಿರತ ರೈತರನ್ನ ದೇಶದ ಶತ್ರುಗಳಂತೆ ಬಿಂಬಿಸುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 5 ವರ್ಷ: 2019ರ ಫೆ.14 ರಂದು ನಡೆದಿದ್ದು ಏನು?