Tag: ದೆಹಲಿ-ಎನ್‌ಸಿಆರ್

  • ಪಾಕಿಸ್ತಾನದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪ – ದೆಹಲಿಯಲ್ಲಿ ಲಘು ಕಂಪನ

    ಪಾಕಿಸ್ತಾನದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪ – ದೆಹಲಿಯಲ್ಲಿ ಲಘು ಕಂಪನ

    ನವದೆಹಲಿ: ಪಾಕಿಸ್ತಾನದಲ್ಲಿ (Pakistan) ಬುಧವಾರ ಮಧ್ಯಾಹ್ನ 5.8 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ ಪರಿಣಾಮ ದೆಹಲಿ-ಎನ್‌ಸಿಆರ್‌ನ (Delhi-NCR) ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವ ಆಗಿದೆ.

    ಮಧ್ಯಾಹ್ನ 12:58ರ ಸುಮಾರಿಗೆ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಡಿಜಿ ಖಾನ್‌(ಶಾದಿ ವಾಲಾ) 33 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಇದನ್ನೂ ಓದಿ: ರಾಹುಲ್‌ ಹೇಳಿಕೆಯಿಂದ ಕಾಂಗ್ರೆಸ್‌ ಮೀಸಲಾತಿ ವಿರೋಧಿ ನೀತಿ ಬಯಲಾಗಿದೆ: ಅಮಿತ್‌ ಶಾ

    ಪಾಕಿಸ್ತಾನದ ಪೇಶಾವರ, ಇಸ್ಲಾಮಾಬಾದ್ ಮತ್ತು ಲಾಹೋರ್‌ನಲ್ಲಿ ಪ್ರಬಲ ಭೂಕಂಪ ಉಂಟಾಗಿದ್ದು, ದೆಹಲಿ, ನೋಯ್ಡಾ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವವಾಗಿದೆ. ಅಲ್ಲದೇ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ಜಮ್ಮು ಮತ್ತು ಕಾಶ್ಮೀರದಲ್ಲೂ ಭೂಮಿ ಕಂಪಿಸಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ದಿನೇಶ್ ಗುಂಡೂರಾವ್

  • ಉತ್ತರಾಖಂಡದಲ್ಲಿ 4.5 ತೀವ್ರತೆಯ ಭೂಕಂಪ – ದೆಹಲಿ-ಎನ್‌ಸಿಆರ್‌ನಲ್ಲಿ ಲಘು ಕಂಪನದ ಅನುಭವ

    ಉತ್ತರಾಖಂಡದಲ್ಲಿ 4.5 ತೀವ್ರತೆಯ ಭೂಕಂಪ – ದೆಹಲಿ-ಎನ್‌ಸಿಆರ್‌ನಲ್ಲಿ ಲಘು ಕಂಪನದ ಅನುಭವ

    ನವದೆಹಲಿ: ಉತ್ತರಾಖಂಡದ (Uttarakhand) ತೆಹ್ರಿಯಲ್ಲಿ ಭಾನುವಾರ ಬೆಳಗ್ಗೆ 8:33 ರ ಸುಮಾರಿಗೆ 4.5 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

    ಉತ್ತರಾಖಂಡದಲ್ಲಿ ಉಂಟಾಗಿರುವ ಭೂಕಂಪದ ಬೆನ್ನಲ್ಲೇ ದೆಹಲಿ-ಎನ್‌ಸಿಆರ್‌ನಲ್ಲೂ (Delhi-NCR) ಲಘು ಭೂಕಂಪದ ಅನುಭವವಾಗಿರುವುದಾಗಿ ವರದಿಯಾಗಿದೆ. ಸದ್ಯ ಎಲ್ಲಿಯೂ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಇದನ್ನೂ ಓದಿ: ಅಕ್ರಮ ಮೀನುಗಾರಿಕೆ – 15 ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ

    ಎನ್‌ಸಿಎಸ್ ಪ್ರಕಾರ, ಭೂಕಂಪದ ಕೇಂದ್ರ ಬಿಂದುವನ್ನು ಉತ್ತರಕಾಶಿಯ ಪೂರ್ವ-ಆಗ್ನೇಯಕ್ಕೆ 17 ಕಿ.ಮೀ. ದೂರದಲ್ಲಿ 5 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಈ ಬಗ್ಗೆ ಎನ್‌ಸಿಎಸ್ ಟ್ವೀಟ್ ಮಾಡಿದೆ. ಇದನ್ನೂ ಓದಿ: ನನ್ನನ್ನು ದೀದಿ ಮಾ ಅಂತ ಕರೆಯಿರಿ – ಕುಟುಂಬ ತ್ಯಜಿಸಿದ ಬಿಜೆಪಿ ನಾಯಕಿ ಉಮಾ ಭಾರತಿ

    ಈ ವರ್ಷ ಆಗಸ್ಟ್, ಮೇ ಮತ್ತು ಫೆಬ್ರವರಿಯಲ್ಲಿ ಉತ್ತರಾಖಂಡದಲ್ಲಿ ಭೂಕಂಪಗಳು ವರದಿಯಾಗಿವೆ. ಉತ್ತರಕಾಶಿ, ಚಮೋಲಿ, ರುದ್ರಪ್ರಯಾಗ ಮತ್ತು ಉತ್ತರಾಖಂಡದ ಹಲವಾರು ಪ್ರದೇಶಗಳಲ್ಲಿ ಕಳೆದ 6 ವರ್ಷಗಳಿಂದ 4 ರಿಂದ 5.1 ರವರೆಗಿನ ತೀವ್ರತೆಯ ಭೂಕಂಪಗಳು ಪದೇ ಪದೇ ನಡೆಯುತ್ತಿವೆ. ಫೆಬ್ರವರಿ 6 ರಂದು ಸಂಭವಿಸಿದ ಭೂಕಂಪ 5.8 ತೀವ್ರತೆಯನ್ನು ಹೊಂದಿತ್ತು.

    Live Tv
    [brid partner=56869869 player=32851 video=960834 autoplay=true]

  • ಉಗ್ರರನ್ನು ಮಟ್ಟ ಹಾಕಲು ಉತ್ತರ ಭಾರತದ ಹಲವೆಡೆ NIA ರೇಡ್

    ಉಗ್ರರನ್ನು ಮಟ್ಟ ಹಾಕಲು ಉತ್ತರ ಭಾರತದ ಹಲವೆಡೆ NIA ರೇಡ್

    ನವದೆಹಲಿ: ಭಾರತ (India) ಮತ್ತು ವಿದೇಶಗಳಲ್ಲಿ ನೆಲೆಸಿರುವ ಭಯೋತ್ಪಾದಕರು (Terrorists), ಗ್ಯಾಂಗ್‌ಸ್ಟರ್‌ಗಳು (Gangsters), ಮಾದಕವಸ್ತು ಕಳ್ಳಸಾಗಣೆದಾರರ (Smugglers) ಸಂಪರ್ಕವನ್ನು ಕೆಡವಲು ರಾಷ್ಟ್ರೀಯ ತನಿಖಾ ದಳ (NIA) ಮಂಗಳವಾರ ಪಂಜಾಬ್, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ದಾಳಿ ನಡೆಸಿದೆ.

    ಇಂದು ಬೆಳಗ್ಗೆ ಎನ್‌ಐಎ ಉತ್ತರ ಭಾರತದ ಹಲವು ಭಾಗಗಳಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಬಂಧನ ವರದಿಯಾಗಿಲ್ಲ. ಇದನ್ನೂ ಓದಿ: ತಾಯಿ ಸನ್‍ಸ್ಕ್ರೀನ್ ಕಳಿಸಿದ್ರು, ನಾನು ಬಳಸಲ್ಲ: ರಾಹುಲ್ ಗಾಂಧಿ

    ಈ ಹಿಂದೆ ಅಕ್ಟೋಬರ್ 14 ರಂದು, ಡ್ರೋನ್ ಡೆಲಿವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿತ್ತು.

    ಕಳೆದ 9 ತಿಂಗಳುಗಳಲ್ಲಿ, ನೆರೆಯ ಪಾಕಿಸ್ತಾನದಿಂದ 191 ಡ್ರೋನ್‌ಗಳು ಭಾರತದ ಭೂಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿರುವುದನ್ನು ಭದ್ರತಾ ಪಡೆಗಳು ಗಮನಿಸಿವೆ. ಸೋಮವಾರ ಮುಂಜಾನೆಯೂ ಭಾರತ – ಪಾಕಿಸ್ತಾನ ಗಡಿಯಲ್ಲಿ ಪಂಜಾಬ್ ಅಮೃತಸರ ಸೆಕ್ಟರ್‌ನಲ್ಲಿ ಭಾರತವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ಸುಮಾರು 12 ಕೆಜಿ ಸರಕನ್ನು ಒಯ್ಯುತ್ತಿದ್ದ ಡ್ರೋನ್ ಅನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಇದನ್ನೂ ಓದಿ: ನನಗೆ AAP ತೊರೆಯುವಂತೆ ಒತ್ತಡ ಹೇರಿದ್ದಾರೆ – ಸಿಸೋಡಿಯಾ ಆರೋಪ, CBI ಪ್ರತಿಕ್ರಿಯೆ

    Live Tv
    [brid partner=56869869 player=32851 video=960834 autoplay=true]