Tag: ದೆಹಲಿ ಗಲಭೆ

  • 2020ರ ದೆಹಲಿ ಗಲಭೆ ಕೇಸ್ – ಉಮರ್ ಖಾಲಿದ್ ಸೇರಿ ಇತರೆ ಆರೋಪಿಗಳ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

    2020ರ ದೆಹಲಿ ಗಲಭೆ ಕೇಸ್ – ಉಮರ್ ಖಾಲಿದ್ ಸೇರಿ ಇತರೆ ಆರೋಪಿಗಳ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

    ನವದೆಹಲಿ: 2020ರ ದೆಹಲಿ ಗಲಭೆ ಪಿತೂರಿ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಇತರರಿಗೆ ಜಾಮೀನು ನೀಡಲು ದೆಹಲಿ ಪೊಲೀಸರು (Delhi Police) ವಿರೋಧಿಸಿದ್ದಾರೆ.

    ಆರೋಪಿಗಳು ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಹಿನ್ನೆಲೆ ದೆಹಲಿ ಪೊಲೀಸರು ಜಾಮೀನು ವಿರೋಧಿಸಿ ಅಫಿಡವಿಟ್ ಸಿದ್ಧಪಡಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಗಲಭೆ ಸ್ವಯಂಪ್ರೇರಿತವಾಗಿ ಆಗಿಲ್ಲ. ದೇಶದಲ್ಲಿ ಶಾಂತಿ ಕದಡಲು ಮತ್ತು ಜಾಗತಿಕವಾಗಿ ಭಾರತದ ವರ್ಚಸ್ಸಿಗೆ ಹಾನಿ ಮಾಡಲು ಎಚ್ಚರಿಕೆಯಿಂದ ಯೋಜಿಸಲಾದ ಪ್ರಯತ್ನ ಇದಾಗಿದೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.ಇದನ್ನೂ ಓದಿ: 2020ರ ದೆಹಲಿ ಗಲಭೆ ಕೇಸ್ ಆರೋಪಿಗಳ ಜಾಮೀನು ಅರ್ಜಿ – ಪ್ರತಿಕ್ರಿಯೆ ಸಲ್ಲಿಸದ ದೆಹಲಿ ಪೊಲೀಸರಿಗೆ ಸುಪ್ರೀಂ ತರಾಟೆ

    ಆರೋಪಿಗಳು ಮಾಡಿರುವ ಪಿತೂರಿಗೆ ಸಂಬಂಧಿಸಿದಂತೆ ಸಾಕ್ಷಿಗಳ ಹೇಳಿಕೆಗಳು, ದಾಖಲೆಗಳು ಮತ್ತು ತಾಂತ್ರಿಕ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧದ ಭಿನ್ನಾಭಿಪ್ರಾಯವನ್ನು ಅಸ್ತ್ರವಾಗಿ ಬಳಸಿಕೊಂಡು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಹೊಡೆತ ತರುವ ಉದ್ದೇಶದಿಂದ ಈ ಗಲಭೆಯನ್ನು ಸೃಷ್ಟಿಸಿದ್ದಾರೆ ಎಂದು ಪೊಲೀಸರು ವಾದಿಸಲಿದ್ದಾರೆ.

    ಅಂತಾರಾಷ್ಟ್ರೀಯ ಗಮನ ಸೆಳೆಯಲು ಮತ್ತು ದೇಶವನ್ನು ನಕಾರಾತ್ಮಕವಾಗಿ ಬಿಂಬಿಸುವ ಉದ್ದೇಶದಿಂದ ಹಾಗೂ ಈ ಗಲಭೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಮೊದಲ ಬಾರಿ ಭೇಟಿ ನೀಡುವ ಸಂದರ್ಭಕ್ಕೆ ಹೊಂದಿಕೆಯಾಗುವಂತೆ ಯೋಜಿಸಿದ್ದಾರೆ. ಹೀಗಾಗಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ ಹೈದರ್ ಮತ್ತು ಗುಲ್ಫಿಶಾ ಫಾತಿಮಾ ಸೇರಿದಂತೆ ಅರ್ಜಿದಾರರಿಗೆ ಜಾಮೀನು ನೀಡಬಾರದು. ಅವರನ್ನು ಜೈಲಿನಲ್ಲಿಡಬೇಕು ಎಂದು ತಯಾರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಇದನ್ನೂ ಓದಿ: ಬೆಂಗಳೂರು ಅಭಿವೃದ್ಧಿಗೆ 2,296 ಕೋಟಿ ಅನುದಾನಕ್ಕೆ ಸಂಪುಟ ಅಸ್ತು!

  • ದೆಹಲಿ ಗಲಭೆ ಕಲ್ಲು ತೂರಾಟ ಕೇಸ್‍ನಲ್ಲಿ ಉಮರ್ ಖಾಲಿದ್ ಖುಲಾಸೆ, ಬಿಡುಗಡೆ ಭಾಗ್ಯವಿಲ್ಲ

    ದೆಹಲಿ ಗಲಭೆ ಕಲ್ಲು ತೂರಾಟ ಕೇಸ್‍ನಲ್ಲಿ ಉಮರ್ ಖಾಲಿದ್ ಖುಲಾಸೆ, ಬಿಡುಗಡೆ ಭಾಗ್ಯವಿಲ್ಲ

    ನವದೆಹಲಿ: 2020ರ ದೆಹಲಿ ಗಲಭೆಗೆ ಸಂಬಂಧಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ (Former  JNU Student) ಉಮರ್ ಖಾಲಿದ್‍ಗೆ (Umar Khalid) ಬಿಗ್ ರಿಲೀಫ್ ಸಿಕ್ಕಿದ್ದು, ದೆಹಲಿ ನ್ಯಾಯಾಲಯ (Delhi Court) ಖುಲಾಸೆಗೊಳಿಸಿದೆ.

    ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಈ ತೀರ್ಪನ್ನು ನೀಡಿದ್ದಾರೆ. ಉಮರ್ ಖಾಲಿದ್ ಹಾಗೂ ಮತ್ತೋರ್ವ ಜೆಎನ್‍ಯು ಮಾಜಿ ವಿದ್ಯಾರ್ಥಿ ಹಾಗೂ ಯುನೈಟೆಡ್ ಅಗೈನ್ಸ್ಟ್‍ಹೇಟ್ ಸಂಸ್ಥಾಪಕ ಖಾಲಿದ್ ಸೈಫಿ ಎರಡು ವರ್ಷದ ಹಿಂದೆ ದೆಹಲಿಯ ಚಾಂದ್‍ಬಾಗ್‍ನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ (Stone-Throwing Case) ಭಾಗಿಯಾಗಿದ್ದಾರೆ ಎಂಬ ಆರೋಪದ ಮೇರೆಗೆ ಬಂಧಿಸಲಾಗಿತ್ತು.

    ಈ ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯ ಇಂದು ತೀರ್ಪು ನೀಡಿದ್ದು, ದೆಹಲಿಯ ಚಾಂದ್‍ಬಾಗ್‍ನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಖಾಲಿದ್ ಮತ್ತು ಸೈಫಿ ವಿರುದ್ಧ ಸಾಕ್ಷ್ಯಾಧಾರಗಳ ಕೊರೆತೆಯಿಂದಾಗಿ ಅವರನ್ನು ಖುಲಾಸೆಗೊಳಿಸಿದೆ. ಆದರೆ ದೆಹಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಉಮರ್ ಖಾಲಿದ್‍ಗೆ ಜಾಮೀನು ಸಿಕ್ಕಿದ್ದರೂ, ಬಿಡುಗಡೆ ಭಾಗ್ಯ ಇನ್ನು ದೊರೆತಿಲ್ಲ.

    ಉಮರ್ ಖಲೀದ್ ಈಗಾಗಲೇ ದೆಹಲಿ ಕಲ್ಲು ತೂರಾಟ ಪ್ರಕರಣವೊಂದೇ ಅಲ್ಲದೇ ಭಯೋತ್ಪಾದನಾ ಚಟುವಟಿಕೆಯಲ್ಲೂ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದನ್ನೂ ಓದಿ: ಬಿಜೆಪಿ, ಆರ್‌ಎಸ್‍ಎಸ್ ವಿರುದ್ಧ ರಾಹುಲ್ ಸೀತಾ ಅಸ್ತ್ರ

    2020ರ ಫೆಬ್ರವರಿ 20 ರಂದು ದೆಹಲಿಯಲ್ಲಿ ನಡೆದ ಕೋಮು ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್ ಬಂಧನವಾಗಿತ್ತು. ಪ್ರಕರಣದಲ್ಲಿ ಒಳಸಂಚು ಮಾಡಿರುವುದಾಗಿ ಆರೋಪಿಸಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಪ್ರಕರಣ ದಾಖಲಿಸಲಾಗಿತ್ತು. ಗಲಭೆ ವೇಳೆ 53 ಜನ ಮೃತಪಟ್ಟಿದ್ದು, 700 ಹೆಚ್ಚು ಜನರಿಗೆ ಗಾಯಗಳಾಗಿತ್ತು.  ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ- ಮದುವೆಯಾಗಿ ಒಂದೂವರೆ ವರ್ಷಕ್ಕೆ ಗೃಹಿಣಿ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]

  • ದೆಹಲಿ ದಂಗೆಕೋರರ ಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು

    ದೆಹಲಿ ದಂಗೆಕೋರರ ಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು

    ನವದೆಹಲಿ: ಗಣರಾಜ್ಯೋತ್ಸವದ ದಿನ ರೈತರ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ನಡೆದ ಹಿಂಸಾಚಾರದ ಕುರಿತು ದೆಹಲಿ ಪೊಲೀಸರು ದಂಗೆಕೋರರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.

    ದೆಹಲಿಯ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಕೆಂಪು ಕೋಟೆ ಮೇಲೆ ದಾಳಿ ನಡೆಸಿ, ಸಂಪೂರ್ಣವಾಗಿ ಧ್ವಂಸ ಮಾಡಲಾಗಿತ್ತು. ಈ ಹಿಂಸಾಚಾರದ ಕುರಿತು ಇದೀಗ ಪೊಲೀಸರು ದಂಗೆಕೋರರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಈ ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಮುಖದ ಚಹರೆಯ ಆಧಾರದ ಮೇಲೆ ಶಂಕಿತರನ್ನು ಗುರುತಿಸಿದ್ದಾರೆ. ಒಟ್ಟು 42 ಜನರನ್ನು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್(ಸಿಐಎಸ್‍ಎಫ್) ಶಂಕಿತರ ಚಿತ್ರಗಳನ್ನು ಬಿಡುಗಡೆ ಮಾಡಿದ್ದು, 20 ಜನರನ್ನು ವಾಟ್ಸಪ್ ವಿಡಿಯೋಗಳ ಮೂಲಕ ಪತ್ತೆ ಹಚ್ಚಲಾಗಿದೆ.

    ಶಂಕಿತರ ಪತ್ತೆಗೆ ಈಗಾಗಲೇ ತಂಡ ರಚಿಸಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ. ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ಕೆಲ ಶಂಕಿತರು ದೆಹಲಿ ಬಿಟ್ಟು ಪರಾರಿಯಾಗಿದ್ದು, ಇನ್ನೂ ಹಲವರು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ದೆಹಲಿ ಪೊಲೀಸರಿಗೆ ಸಿಕ್ಕ ಮಾಹಿತಿ ಪ್ರಕಾರ ಇನ್ನೂ ಹಲವರು ಮರಳಿ ತಮ್ಮ ಮೂಲ ಸ್ಥಳಗಳಿಗೆ ತೆರಳಿದ್ದಾರೆ, ಬಂಧಿತ ಇಬ್ಬರ ಪೈಕಿ ಒಬ್ಬನನ್ನು ಧರ್ಮೇಂದ್ರ ಸಿಂಗ್ ಹರ್ಮಾನ್ ಎಂದು ಗುರುತಿಸಲಾಗಿದೆ. ಹಿಂಸಾಚಾರದ ವಿಡಿಯೋ ಆಧರಿಸಿ ಈ ಇಬ್ಬರನ್ನು ಬಂಧಿಸಲಾಗಿದೆ. ಅಲ್ಲದೆ ಕೆಂಪು ಕೋಟೆ ಮೇಲೆ ಸಿಖ್ ಧ್ವಜ ಹಾರಿಸಿದ್ದರಲ್ಲಿ ಧರ್ಮೇಂದ್ರ ಸಿಂಗ್ ಹರ್ಮಾನ್ ಪಾತ್ರ ಸಹ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಜನವರಿ 26ರ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ವೇಳೆ ಸಾವಿರಾರು ಜನ ದೆಹಲಿಯ ಕೆಂಪು ಕೋಟೆಯನ್ನು ಧ್ವಂಸ ಮಾಡಿದ್ದು, ಪೀಠೋಪಕರಣಗಳನ್ನು ಸಂಪೂರ್ಣ ನಾಶ ಮಾಡಿದ್ದಾರೆ. ಅಲ್ಲದೆ ಕೆಂಪು ಕೋಟೆ ಮೇಲೆ ಸಿಖ್ ಧ್ವಜ ಹಾರಿಸಿ ಉದ್ಧಟತನ ಮೆರೆದಿದ್ದಾರೆ. ಪೊಲೀಸರು ಈ ವರೆಗೆ 124 ಜನರನ್ನು ಬಂಧಿಸಿದ್ದು, 44 ಎಫ್‍ಐಆರ್‍ಗಳನ್ನು ದಾಖಲಿಸಿದ್ದಾರೆ. ಅಲ್ಲದೆ ವಿವಿಧ ಸಾಮಾಜಿಕ ಜಾಲತಾಣಗಳ ಖಾತೆಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

  • ವಾಹನಗಳಿಗೆ ಬೆಂಕಿ ಹಚ್ಚುವ ಮೊದಲು ಮಾಲೀಕನ ವಿವರ ಹುಡುಕಾಟ – ದೆಹಲಿ ಗಲಭೆಕೋರರನ್ನು ಪತ್ತೆ ಹಚ್ಚಿದ್ದು ಹೇಗೆ?

    ವಾಹನಗಳಿಗೆ ಬೆಂಕಿ ಹಚ್ಚುವ ಮೊದಲು ಮಾಲೀಕನ ವಿವರ ಹುಡುಕಾಟ – ದೆಹಲಿ ಗಲಭೆಕೋರರನ್ನು ಪತ್ತೆ ಹಚ್ಚಿದ್ದು ಹೇಗೆ?

    – ಸಿಎಎ ವಿರೋಧಿಸಿ ದೆಹಲಿಯಲ್ಲಿ ದಂಗೆ
    – ತಂತ್ರಜ್ಞಾನ ಬಳಸಿ ಆರೋಪಿಗಳ ಪತ್ತೆ

    ನವದೆಹಲಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಜಾರಿ ವಿರೋಧಿಸಿ ಕಳೆದ ಫೆಬ್ರವರಿಯಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

    17,500 ಪುಟಗಳ ಚಾರ್ಜ್‌ಶೀಟ್‌ನಲ್ಲಿಒಟ್ಟು 15 ಮಂದಿ ವಿರುದ್ಧ ಗಂಭೀರ ಆರೋಪ ಹೊರಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ), ಐಪಿಸಿ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 53 ಮಂದಿ ಸಾನ್ನಪ್ಪಿದ್ದು ಒಟ್ಟು 751 ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಒಟ್ಟು 2,193 ಮಂದಿಯನ್ನು ಬಂಧನ ಅಥವಾ ವಶಕ್ಕೆ ಪಡೆಯಲಾಗಿತ್ತು.

    ಈ ಗಲಭೆಯನ್ನು ಗಂಭೀರವಾಗಿ ಸ್ವೀಕರಿಸಿದ್ದ ದೆಹಲಿ ಪೊಲೀಸರು ವಿವಿಧ ತಂತ್ರಜ್ಞಾನಗಳನ್ನು ಬಳಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ತಂತ್ರಜ್ಞಾನಗಳ ಸಹಾಯವನ್ನು ಬಳಸಿ ಆರೋಪಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಹೀಗಾಗಿ ಇಲ್ಲಿ ಯಾವೆಲ್ಲ ತಂತ್ರಜ್ಞಾನವನ್ನು ಬಳಸಲಾಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

    ಯಾವೆಲ್ಲ ತಂತ್ರಜ್ಞಾನ ಬಳಕೆ?
    1. ಐಪಿಡಿಆರ್‌ ವಿಶ್ಲೇಷಣೆ:
    ಗಲಭೆಯ ವೇಳೆ ಕರೆ ಮತ್ತು ಮೆಸೇಜ್‌ ಮಾಡಿದರೆ ನಾವು ಸಿಕ್ಕಿ ಬೀಳುತ್ತೇವೆ ಎಂಬ ಕಾರಣಕ್ಕೆ ಇಂಟರ್‌ನೆಟ್‌ ಬಳಸಿ ಗಲಭೆಕೋರರು ಸಂವಹನ ಮಾಡಿದ್ದರು. ಆದರೆ ಪೊಲೀಸರು ಇಂಟರ್‌ನೆಟ್‌ ಪ್ರೊಟಕಲ್‌ ಡಿಟೈಲ್ಸ್‌ ರೆಕಾರ್ಡ್‌(ಐಪಿಡಿಆರ್) ಮೂಲಕ ಯಾರೆಲ್ಲ ಈ ವೇಳೆ ಗಲಭೆಯಾದ ಸ್ಥಳದಲ್ಲಿ ಇಂಟರ್‌ನೆಟ್‌ ಮೂಲಕ ಸಂಹನ ಮಾಡಿದ್ದಾರೋ ಅವರನ್ನು ಪತ್ತೆ ಹಚ್ಚಿದ್ದಾರೆ. ಪ್ರತಿಯೊಂದು ಕಂಪ್ಯೂಟರ್‌ಗೆ ಹೇಗೆ ಐಪಿ ಅಡ್ರೆಸ್‌ ಇರುತ್ತದೋ ಅದೇ ರೀತಿ ಫೋನ್‌ಗಳಿಗೂ ಇರುತ್ತದೆ. ಐಪಿಡಿಆರ್‌ ಮೂಲಕ ಮೊಬೈಲ್‌ ಬಳಕೆದಾರರು ಇಂಟರ್‌ನೆಟ್‌ನಲ್ಲಿ ಏನು ಮಾಡಿದ್ದಾರೋ ಅವೆಲ್ಲದರ ಡೇಟಾ ಸಂಗ್ರಹವಾಗುತ್ತದೆ.

    2.ಜಿಯೋಲೋಕೇಶನ್‌ ವಿಶ್ಲೇಷಣೆ:
    ಗೂಗಲ್‌ ಟೈಮ್‌ಲೈನ್‌ ಅಥವಾ ಗೂಗಲ್‌ ಮ್ಯಾಪ್‌ ಮೂಲಕ ಆರೋಪಿಗಳು ಗಲಭೆ ಪ್ರದೇಶದಲ್ಲಿ ಸಕ್ರಿಯವಾಗಿದ್ದನ್ನು ಪತ್ತೆಹಚ್ಚಲಾಗಿದೆ. ಆರೋಪಿ ಒಂದು ಪ್ರದೇಶದಿಂದ ಯಾವೆಲ್ಲ ಪ್ರದೇಶಕ್ಕೆ ತೆರಳಿದ್ದ ಎಲ್ಲ ಮಾಹಿತಿ ಗೂಗಲ್‌ ಟೈಮ್‌ಲೈನ್‌ನಲ್ಲಿ ಸಂಗ್ರಹವಾಗಿತ್ತು.

    3. ಫೇಶಿಯಲ್‌ ರಿಕನ್‌ಸ್ಟ್ರಕ್ಷನ್‌:
    ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕೃತ್ಯ ಎಸಗುವ ದೃಶ್ಯ ಮೊಬೈಲ್‌ ವಿಡಿಯೋದಲ್ಲಿ ಸೆರೆಯಾದರೂ ಆ ವ್ಯಕ್ತಿಗಳೇ ನಿಜವಾದ ಆರೋಪಿಗಳು ಎಂದು ಗುರುತು ಪತ್ತೆಹಚ್ಚುವುದು ಕಷ್ಟ. ಈ ಕಾರಣಕ್ಕೆ ಮುಖಗಳನ್ನು ಸರಿಯಾಗಿ ಗುರುತಿಸುವ ವಿಶೇಷ ಸಾಫ್ಟ್‌ವೇರ್‌ ಬಳಸಿ ಸುಮಾರು 2,655 ವ್ಯಕ್ತಿಗಳ ಗುರುತನ್ನು ಪತ್ತೆ ಹಚ್ಚಲಾಗಿದೆ. ಸಿಸಿ ಟಿವಿ ದೃಶ್ಯದ ಆಧಾರದಲ್ಲೂ ಹಲವರನ್ನು ಬಂಧಿಸಲಾಗಿದೆ.

    4. ಫಂಡ್‌ ವಿಶ್ಲೇಷಣೆ:
    ದೆಹಲಿ ಗಲಭೆ ಪೂರ್ವನಿಯೋಜಿತವಾಗಿದ್ದು, ಅದಕ್ಕಾಗಿ ಮೊದಲೇ ಹಣಕಾಸಿನ ನೆರವು ಸಿಕ್ಕಿತ್ತು. ಈ ವಿಚಾರವನ್ನು ಇಟ್ಟುಕೊಂಡು ಆರೋಪಿಗಳ ಖಾತೆಗೆ ಹಣ ಎಲ್ಲಿಂದ ಎಷ್ಟು ಪ್ರಮಾಣದಲ್ಲಿ ಜಮೆಯಾಗಿದೆ ಎಂಬುದನ್ನು ತನಿಖೆ ಮಾಡಲಾಗಿದೆ.

    5. ಇ ವಾಹನ ಡೇಟಾಬೇಸ್‌:
    ಗಲಭೆಕೋರರು ಬೆಂಕಿ ಹಚ್ಚುವ ಮೊದಲು ವಾಹನದ ಮಾಲೀಕರು ಯಾರು ಎಂಬುದನ್ನು ಇ ವಾಹನ ಪೋರ್ಟಲ್‌ಗೆ ಹೋಗಿ ತಿಳಿಯುವ ಪ್ರಯತ್ನ ಮಾಡಿ ಬಳಿಕ ಇತರರಿಗೆ ಅದನ್ನು ಮೆಸೇಜ್‌ ಮಾಡಿದ್ದರು. ಗಲಭೆಯ ಸಂದರ್ಭದಲ್ಲಿ ಯಾರೆಲ್ಲ ವಾಹನ ಸಂಖ್ಯೆಯನ್ನು ಇಂಟರ್‌ನೆಟ್‌ ಮೂಲಕ ಪರಿಶೀಲನೆ ನಡೆಸಿದ್ದಾರೋ ಆ ಡೇಟಾ ಮಾಹಿತಿಯ ಆಧಾರದಲ್ಲಿ ಆರೋಪಿಗಳನ್ನು ಪತ್ತೆಹಚ್ಚಲಾಗಿದೆ.

    6. ಮೊಬೈಲ್‌ ಫಾರೆನ್ಸಿಕ್ಸ್‌:
    ಗಲಭೆಯ ವೇಳೆ ಭಾರೀ ಸಂಖ್ಯೆಯ ಡೇಟಾ ಮೊಬೈಲ್‌ ಮೂಲಕ ಹರಿದಾಡಿದೆ. ವಶಕ್ಕೆ ಪಡೆದ ಜನರ ಫೋನ್‌ಗಳನ್ನು ವಿಧಿವಿಜ್ಞಾನ ಕೇಂದ್ರಕ್ಕೆ ಕಳುಹಿಸಲಾಗಿತ್ತು. ವಾಯ್ಸ್‌ ರೆಕಾರ್ಡಿಂಗ್‌, ಫೋಟೋ ಇತ್ಯಾದಿ ಮಾಹಿತಿಗಳನ್ನು ರಿಟ್ರೀವ್‌ ಮಾಡುವ ಮೂಲಕ ತನಿಖೆ ಮಾಡಲಾಗಿದೆ.

    7. ಡಂಪ್‌ ಡೇಟಾ ಅನಾಲಿಸಿಸ್‌:
    ಮೊಬೈಲ್‌ ಕರೆ, ಮೆಸೇಜ್‌ ಮಾಡದೇ ಇದ್ದರೂ ಗಲಭೆಕೋರರ ಮೊಬೈಲ್‌ಗಳು ಆನ್‌ ಆಗಿತ್ತು. ಗಲಭೆ ನಡೆದ ಸ್ಥಳಗಳಲ್ಲಿ ಸಕ್ರೀಯವಾಗಿದ್ದ ಫೋನ್‌ ನಂಬರ್‌ಗಳನ್ನು ಟವರ್‌ ಮೂಲಕ ಕಲೆ ಹಾಕಲಾಗಿತ್ತು. ಒಟ್ಟು 10 ಸಾವಿರ ಮೊಬೈಲ್‌ ನಂಬರ್‌ಗಳು ಗಲಭೆಯ ವೇಳೆ ಸಕ್ರೀಯವಾಗಿತ್ತು ಎಂಬ ಅಂಶ ಪೊಲೀಸ್‌ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

  • ದೆಹಲಿ ಗಲಭೆ – ಜಾಮಿಯಾ ಪಿಹೆಚ್‍ಡಿ ವಿದ್ಯಾರ್ಥಿ ಅರೆಸ್ಟ್

    ದೆಹಲಿ ಗಲಭೆ – ಜಾಮಿಯಾ ಪಿಹೆಚ್‍ಡಿ ವಿದ್ಯಾರ್ಥಿ ಅರೆಸ್ಟ್

    ನವದೆಹಲಿ: ಕಳೆದ ಫೆಬ್ರವರಿ ತಿಂಗಳಲ್ಲಿ ನಡೆದ ದೆಹಲಿ ಗಲಭೆಯ ವಿಚಾರವಾಗಿ ಜಾಮಿಯಾ ವಿವಿಯಲ್ಲಿ ಪಿಹೆಚ್‍ಡಿ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ವಿದ್ಯಾರ್ಥಿಯನ್ನು ಮಿರಾನ್ ಹೈದರ್ ಎಂದು ಗುರುತಿಸಲಾಗಿದೆ. ಈತ ಲಾಲು ಯಾದವ್ ಅವರ ರಾಷ್ಟ್ರೀಯ ಜನತಾದಳ (ಆರ್.ಜೆ.ಡಿ) ದೆಹಲಿ ಯುವ ವಿಭಾಗದ ಮುಖ್ಯಸ್ಥನಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈತ ಕಳೆದ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂದು ಹೇಳಲಾಗಿದೆ.

    ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅವರ ಕುಟುಂಬ ಸಮೇತ ಎರಡು ದಿನಗಳ ಭಾರತ ಪ್ರವಾಸದಲ್ಲಿದ್ದಾಗ ಈ ಗಲಭೆ ನಡೆದಿತ್ತು. ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸತತ ನಾಲ್ಕು ದಿನಗಳ ಕಾಲ ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ನಡೆದಿತ್ತು. ಈ ಗಲಭೆಯಲ್ಲಿ 54 ಜನರು ಸಾವನ್ನಪ್ಪಿದ್ದರು ಮತ್ತು ನೂರಾರು ಜನರು ಗಾಯಗೊಂಡಿದ್ದರು.

    ಈ ಹಿಂಸಾಚಾರವು ನೆರೆಹೊರೆಯ ಜನರ ನಡುವೆಯೇ ಜಗಳದ ವಾತಾವರಣವನ್ನು ನಿರ್ಮಾಣ ಮಾಡಿತ್ತು. ಈ ವೇಳೆ ಮನೆಗಳು ಮತ್ತು ಅಂಗಡಿಗಳನ್ನು ಸುಟ್ಟುಹಾಕಲಾಗಿತ್ತು. ಪೌರತ್ವ ವಿರೋಧಿ ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ದೊಡ್ಡ ಮಟ್ಟದ ಘರ್ಷಣೆಯಾಗಿತ್ತು. ಇದರಲ್ಲಿ ಕೆಲವು ಪ್ರತಿಭಟನಾಕಾರರು ಬಂದೂಕು ಹಿಡಿದು ದಾಳಿ ಕೂಡ ಮಾಡಿದ್ದರು. ಜೊತೆಗೆ ಅನೇಕ ಪ್ರತಿಭಟನಾಕಾರರು ಗುಂಡೇಟಿನಿಂದ ಗಾಯಗೊಂಡಿದ್ದರು.

    ಟ್ರಂಪ್ ಅವರು ಭಾರತಕ್ಕೆ ಬಂದ ಸಮಯದಲ್ಲೇ ಉದ್ದೇಶಪೂರ್ವಕವಾಗಿಯೇ ಈ ಗಲಭೆಯನ್ನು ಸಂಘಟಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿದ್ದವು. ಗಲಭೆಗೆ ಸಂಬಂಧಿಸಿದಂತೆ ಅಮಾನತುಗೊಂಡ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ತಾಹೀರ್ ಹುಸೇನ್ ಮತ್ತು ಆತನ ಸಹೋದರ ಸೇರಿದಂತೆ 7 ಜನರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು. ಹಿಂಸಾಚಾರದ ಸಮಯದಲ್ಲಿ ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ತಾಹಿರ್ ಹುಸೇನ್ ಆರೋಪಿಯಾಗಿದ್ದಾನೆ.

  • ದೆಹಲಿ ಹಿಂಸಾಚಾರವನ್ನ ಮುಚ್ಚಿಹಾಕಲು ಕೊರೊನಾ ವೈರಸ್ ಭೀತಿ ಸೃಷ್ಟಿ: ದೀದಿ

    ದೆಹಲಿ ಹಿಂಸಾಚಾರವನ್ನ ಮುಚ್ಚಿಹಾಕಲು ಕೊರೊನಾ ವೈರಸ್ ಭೀತಿ ಸೃಷ್ಟಿ: ದೀದಿ

    ಕೋಲ್ಕತ್ತಾ: ದೇಶದಲ್ಲಿ ಕೊರೊನಾ ವೈರಸ್ ಭಾರೀ ತಲ್ಲಣ ಉಂಟು ಮಾಡಿದೆ. ಆದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೊರೊನಾ ವೈರಸ್ ಭೀತಿಯು ಇತ್ತೀಚಿನ ದೆಹಲಿ ಹಿಂಸಾಚಾರದಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.

    ಕೋಲ್ಕತ್ತಾದಲ್ಲಿ ಬುಧವಾರ ಮಾತನಾಡಿದ ಅವರು, ‘ಜನರು ಕೊರೊನಾ, ಕೊರೊನಾ ಎಂದು ಕಿರುಚುತ್ತಿದ್ದಾರೆ. ಇದಕ್ಕೆಲ್ಲ ಭಯಪಡಬೇಡಿ. ಕೆಲವು ಚಾನೆಲ್‍ಗಳು ದೆಹಲಿ ಹಿಂಸಾಚಾರವನ್ನು ಕರೋನವೈರಸ್ ಭೀತಿಯಿಂದ ಮುಚ್ಚಿಡಲು ಪ್ರಯತ್ನಿಸುತ್ತಿವೆ. ಇದು ಒಂದು ರೋಗವಷ್ಟೇ ಜನರು ಭಯಭೀತರಾಗಬಾರದು. ದೆಹಲಿ ಹಿಂಸಾಚಾರದಲ್ಲಿ ಜನರು ಕೊಲ್ಲಲ್ಪಟ್ಟಿದ್ದು, ಕೊರೊನಾ ವೈರಸ್ ಕಾರಣದಿಂದಲ್ಲ ಬಿಜೆಪಿಯಿಂದ ಕೊಲೆಯಾಗಿದ್ದಾರೆ ಎಂದು ದೂರಿದರು.

    ಬಿಜೆಪಿ ವಿರುದ್ಧ ಗುಡುಗು:
    ದೆಹಲಿ ಹಿಂಸಾಚಾರವು ‘ರಾಜ್ಯ ಪ್ರಾಯೋಜಿತ ಯೋಜಿತ ನರಮೇಧ’ ಎಂದು ಪಶ್ಚಿಮ ಬಂಗಾಳ ಸಿಎಂ ಮಂಗಳವಾರ ಬಿಜೆಪಿಯ ವಿರುದ್ಧ ತೀವ್ರ ದಾಳಿ ನಡೆಸಿದ್ದರು. ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ ‘ಗುಜರಾತ್ ಮಾದರಿಯ ಗಲಭೆ’ಯನ್ನು ಪುನರಾವರ್ತಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು.

    ‘ದೆಹಲಿಯಲ್ಲಿ ಮುಗ್ಧ ಜನರನ್ನು ಹತ್ಯೆಗೈದಿದ್ದು ನನಗೆ ತುಂಬಾ ನೋವು ತಂದಿದೆ. ಇದು ಯೋಜಿತ ನರಮೇಧ ಎಂದು ನಾನು ಭಾವಿಸುತ್ತೇನೆ. ದೆಹಲಿ ಪೊಲೀಸರು ಕೇಂದ್ರದ ಅಡಿಯಲ್ಲಿದ್ದಾರೆ. ದೆಹಲಿ ಪೊಲೀಸರು, ಸಿಆರ್‍ಪಿಎಫ್, ಸಿಐಎಸ್‍ಎಫ್ ಯಾರೂ ಗಲಭೆಯನ್ನು ನಿಯಂತ್ರಿಸಲಿಲ್ಲ’ ಎಂದು ಆರೋಪಿಸಿದ್ದರು.

    ಕೊರೊನಾ ವೈರಸ್:
    ಚೀನಾದ ವೂಹಾನ್‍ನಲ್ಲಿ ಮೊದಲು ಕಾಣಿಸಿಕೊಂಡ ಮಾರಣಾಂತಿಕ ವೈರಸ್ ಇದುವರೆಗೆ 80ಕ್ಕೂ ಹೆಚ್ಚು ದೇಶಗಳಿಗೆ ಹರಡಿದೆ. ಕೊರೊನಾ ವೈರಸ್‍ಗೆ 3,000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಪ್ರಪಂಚದಾದ್ಯಂತ 93,000ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ.

    ಬುಧವಾರ ಬೆಳಗ್ಗೆಯವರೆಗೆ ಭಾರತದಲ್ಲಿ 438 ಮಂದಿ ಕೊರೊನಾ ಶಂಕಿತರೆಂದು ವರದಿಯಾಗಿದೆ. ಅದರಲ್ಲಿ 225 ಜನರ ಮೇಲೆ 28 ದಿನಗಳ ಕಾಲ ತೀವ್ರ ನಿಗಾ ವಹಿಸಲಾಗಿತ್ತು. 189 ಮಂದಿ ಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ. 89 ಮಂದಿಯನ್ನು ಪ್ರತ್ಯೇಕ ಸ್ಥಳದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 118 ಮಂದಿ ಕೊರೊನಾ ಪರೀಕ್ಷೆ ಮಾಡಿಸಿದ್ದು, 103 ಜನರ ವರದಿಯಲ್ಲಿ ನೆಗೆಟೀವ್ ಬಂದಿದ್ದು, 4 ಮಂದಿಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಇಟಲಿಯಿಂದ ಬಂದ 21 ಮಂದಿಯನ್ನು ಪರೀಕ್ಷಿಸಲಾಗಿದ್ದು ಇದರಲ್ಲಿ 15 ಮಂದಿ ರಕ್ತದ ಮಾದರಿಯಲ್ಲಿ ಕೊರೊನಾ ಪಾಸಿಟಿವ್ ಅಂಶ ಕಂಡುಬಂದಿದೆ. ಇಟಲಿಯ ಪ್ರವಾಸಿಗರ ಗುಂಪಿನ ಸದಸ್ಯರನ್ನು ದೆಹಲಿಯ ಐಟಿಬಿಪಿ(ಇಂಡೋ ಟಿಬೆಟ್ ಬಾರ್ಡರ್ ಪೊಲೀಸ್) ಕೇಂದ್ರದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಜೈಪುರಕ್ಕೆ ಆಗಮಿಸಿದ ಇಟಲಿಯ ಪ್ರವಾಸಿಗನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಆತನ ಪತ್ನಿಗೂ ಕೊರೊನಾ ವೈರಸ್‍ನ ಆರಂಭಿಕ ಲಕ್ಷಣಗಳು ಕಾಣಿಸಿಕೊಂಡಿತ್ತು. ಈ ದಂಪತಿ ರಾಜಸ್ಥಾನ ಪ್ರವಾಸ ಮಾಡುವ ಈ ಪ್ರವಾಸಿ ಗುಂಪಿನ ಭಾಗವಾಗಿದ್ದರು.

  • ದೆಹಲಿ ಗಲಭೆ – ಅತ್ತ ಪತ್ನಿಯ ಒಡವೆ ಕದ್ದೊಯ್ದರು, ಇತ್ತ 15 ಲಕ್ಷ ಖರ್ಚು ಮಾಡಿದ್ದ ಮನೆಗೇ ಬೆಂಕಿ ಇಟ್ಟರು

    ದೆಹಲಿ ಗಲಭೆ – ಅತ್ತ ಪತ್ನಿಯ ಒಡವೆ ಕದ್ದೊಯ್ದರು, ಇತ್ತ 15 ಲಕ್ಷ ಖರ್ಚು ಮಾಡಿದ್ದ ಮನೆಗೇ ಬೆಂಕಿ ಇಟ್ಟರು

    ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಬಗೆದಷ್ಟು ಕಣ್ಣೀರ ಕಥೆಗಳು ಹೊರ ಬರುತ್ತಿವೆ. ಹಿಂಸಚಾರದ ವೇಳೆ ನಡೆದ ಅಗ್ನಿ ದುರಂತದಿಂದ ಹಲವು ಕುಟುಂಬಗಳು ಅಕ್ಷರ ಸಹ ಬೀದಿಗೆ ಬಂದಿದೆ. ಮನೆ ರಿನೋವೇಷನ್ ಮಾಡಿಸಿಕೊಂಡು ಮದುವೆಯಾಗಿದ್ದ ಶಿವ ವಿಹಾರ್ ನಗರದ ಅರುಣ್ ಮಿಶ್ರಾ ಕಥೆ ಇದಕ್ಕೆ ಹೊರತಾಗಿಲ್ಲ.

    ಉತ್ತರ ಪ್ರದೇಶ ಮೂಲದ ಅರುಣ್ ಮಿಶ್ರಾ ಕಳೆದ 14 ವರ್ಷಗಳಿಂದ ಈಶಾನ್ಯ ದೆಹಲಿ ಶಿವ್ ವಿಹಾರ್ ನಲ್ಲಿ ವಾಸ ಮಾಡುತ್ತಿದ್ದಾರೆ. ಕಳೆದ ವಾರ ನಡೆದ ಬೆಂಕಿ ಅನಾಹುತದಲ್ಲಿ ಅರುಣ್ ಮಿಶ್ರಾರ ಮನೆ ಸಂಪೂರ್ಣ ಸುಟ್ಟು ಹೋಗಿದೆ. ಅಲ್ಲದೇ ಇತ್ತೀಚೆಗೆ ಅರುಣ್ ಅವರ ಮದುವೆಯಾಗಿತ್ತು, ಆದರೆ ಬೆಂಕಿ ಅನಾಹುತದ ಮೊದಲು ಅರಣ್ ಅವರ ಪತ್ನಿಯ ಒಡೆವೆಗಳನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ.

    ಗಲಭೆ ವೇಳೆ ಪ್ರಾಣ ಭೀತಿಯಲ್ಲಿ ಮನೆಗೆ ಬೀಗ ಹಾಕಿ ಶಿವ ವಿಹಾರ್ ನಿಂದ ಸಂಬಂಧಿಕರ ಮನೆಗೆ ಅರುಣ್ ಕುಟುಂಬ ತೆರಳಿ ನೆರವು ಪಡೆದುಕೊಂಡಿತ್ತು. ಗಲಭೆಯ ಮೊದಲ ದಿನ ಅರುಣ್ ಮನೆಯನ್ನು ಸಂಪೂರ್ಣ ದೋಚಲಾಗಿದೆ. ಮನೆಗೆ ಹಾಕಿದ್ದ ಬೀಗ ಒಡೆದು ಒಳ ನುಗ್ಗಿರುವ ದುಷ್ಕರ್ಮಿಗಳು ಮನೆಯ ಬೀರುವಿನಲ್ಲಿದ್ದ ಒಡವೆಗಳನ್ನು ದೋಚಿದ್ದಾರೆ. ಅರುಣ್ ಮಾರನೇ ದಿನ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನವಾಗಿದ್ದು ಬೆಳಕಿಗೆ ಬಂದಿದ್ದು, ಒಡವೆ ಹೋದರೆ ಹೋಗಲಿ ಮನೆ ಉಳಿತಲ್ಲ ಅಂತ ನಿಟ್ಟುಸಿರು ಬಿಟ್ಟಿದ್ದರು. ಪರಿಸ್ಥಿತಿ ಸುಧಾರಿಸಿದ ಬಳಿಕ ವಾಪಸ್ ಬರುವ ಪ್ಲಾನ್ ಮಾಡಿಕೊಂಡು ಮತ್ತೆ ಸಂಬಂಧಿಕರ ಮನೆಗೆ ಅರುಣ್ ತೆರಳಿದ್ದರು.

    ಎರಡನೇ ದಿನದ ಘರ್ಷಣೆ ವೇಳೆ ದುಷ್ಕರ್ಮಿಗಳು ಅರುಣ್ ಮನೆಗೆ ಬೆಂಕಿ ಹಚ್ಚಿದ್ದು, ಎರಡು ಅಂತಸ್ತಿನ ಮನೆ ಸಂಪೂರ್ಣ ಸುಟ್ಟು ಹೋಗಿದೆ. ಇತ್ತೀಚೆಗೆ ಅರುಣ್ 15 ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿ ತಮ್ಮ ಹಳೆ ಮನೆಯನ್ನು ರಿನೋವೇಷನ್ ಮಾಡಿಸಿಕೊಂಡು ಮದುವೆಯಾಗಿದ್ದರು. ಘಟನೆಯಲ್ಲಿ ಪತ್ನಿಯ ಒಡವೆ ಮತ್ತು ಮನೆ ಎರಡನ್ನೂ ಕಳೆದುಕೊಂಡು ಅರುಣ್ ಕುಟುಂಬ ಈಗ ಬೀದಿಗೆ ಬಂದಿದ್ದು ಕಣ್ಣಿರಿಡುತ್ತಿದ್ದಾರೆ.