Tag: ದೆಹಲಿ ಚಲೋ

  • ಹಳಿ ತಪ್ಪಿದ ರೈತರ ಪ್ರತಿಭಟನೆ; ಕತ್ತಿ ಝಳಪಿಸಿದ ನಿಹಾಂಗ್‌ ಸಿಖ್ಖರು – ಖಲಿಸ್ತಾನಿ ಉಗ್ರನ ಫೋಟೋ ಪತ್ತೆ!

    ಹಳಿ ತಪ್ಪಿದ ರೈತರ ಪ್ರತಿಭಟನೆ; ಕತ್ತಿ ಝಳಪಿಸಿದ ನಿಹಾಂಗ್‌ ಸಿಖ್ಖರು – ಖಲಿಸ್ತಾನಿ ಉಗ್ರನ ಫೋಟೋ ಪತ್ತೆ!

    ಚಂಡೀಗಢ: ಬೆಂಬಲ ಬೆಲೆ ಖಾತ್ರಿ ಪಡಿಸುವ ಕಾನೂನು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಂಜಾಬ್ ಮತ್ತು ಹರಿಯಾಣ ರೈತರು ಕೈಗೊಂಡಿರುವ ‘ದೆಹಲಿ ಚಲೋ’ ಪ್ರತಿಭಟನೆಯು (Delhi Chalo Protest) ಹರ್ಯಾಣದ ಶಂಭು ಗಡಿ ಸೇರಿದಂತೆ ಹಲವೆಡೆ ಹಿಂಸಾಚಾರಕ್ಕೆ ತಿರುಗಿದ್ದು, ಕಿಡಿಗೇಡಿಗಳು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ.

    ಇತ್ತೀಚೆಗೆ ವೈರಲ್ ಆದ ವೀಡಿಯೋವೊಂದರಲ್ಲಿ, ರೈತರ ಪ್ರತಿಭಟನೆಯಲ್ಲಿ (Farmers Protest) ನಿಹಾಂಗ್ ಸಿಖ್ಖರು ಭದ್ರತಾ ಪಡೆಗಳತ್ತ ಕತ್ತಿ ಬೀಸುತ್ತಿರುವ ಭಯಾನಕ ದೃಶ್ಯ ಕಂಡು ಬಂದಿವೆ. ಅಲ್ಲದೇ ತಾನು ರೈತ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಪ್ರಚೋದನಕಾರಿಯಾಗಿ ತೊಡೆ ತಟ್ಟಿ ಸಡ್ಡು ಹೊಡೆದಿದ್ದಾನೆ. ಇದೇ ವೇಳೆ ಕೆಲವರು ಬಿಲ್ಲು ಬಾಣ ಹಿಡಿದು ತಿರುಗಾಡುತ್ತಿರುವುದು ಕಂಡುಬಂದಿದೆ.

    ಅಲ್ಲದೇ ಪ್ರತಿಭಟನಾಕಾರರ ಟ್ರಕ್‌ನಲ್ಲಿ ಖಲಿಸ್ತಾನಿ ಉಗ್ರ (Khalistan Terrorist) ಭಿಂದ್ರನ್ ವಾಲೆ ಭಾವಚಿತ್ರವಿರುವುದೂ ಕಂಡುಬಂದಿದೆ. ಹೀಗಾಗಿ ರೈತರ ಹೋರಾಟವನ್ನು ಕೆಲ ದುಷ್ಕರ್ಮಿಗಳು ದೇಶ ವಿರೋಧಿ ಚಟುವಟಿಕೆಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ರೈತರ ಪ್ರತಿಭಟನೆಗೆ ಮಣಿಯಿತಾ ಸರ್ಕಾರ – ರೈತ ಪ್ರತಿನಿಧಿಗಳನ್ನೊಳಗೊಂಡ ಸಮಿತಿ ರಚನೆ ಪ್ರಸ್ತಾಪಿಸುವ ಸಾಧ್ಯತೆ?

    2021ರಲ್ಲಿಯೂ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ರೈತರು ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಆಗಲೂ ಇದೇ ರೀತಿ ಹಿಂಸಾಚಾರ ನಡೆದಿತ್ತು. ದೆಹಲಿ ಪ್ರವೇಶಿಸಲು ಹೊರಟಿದ್ದ ರೈತರನ್ನು ಪಂಜಾಬ್ ಮತ್ತು ಹರಿಯಾಣ ಗಡಿಗಳಲ್ಲಿ ತಡೆಹಿಡಿಯಲಾಗಿತ್ತು. ಅದೇ ರೀತಿ ಶನಿವಾರ ಅಂಬಾಲಾ ಬಳಿಯ ಶಂಭು ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ಕಡೆವಲು ಯತ್ನಿಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಸಿಬ್ಬಂದಿ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದರು. ಘಟನೆಗಳಲ್ಲಿ ಅನೇಕ ಭದ್ರತಾ ಪಡೆಗಳು ಹಾಗೂ ಪತ್ರಕರ್ತರೂ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಸದ್ಯ ರೈತರ ಪ್ರತಿಭಟನೆ 6ನೇ ದಿನಕ್ಕೆ ಕಾಲಿಟ್ಟಿದೆ. ಇಂದು (ಫೆ.18) ಕೇಂದ್ರ ಸರ್ಕಾರ 4ನೇ ಬಾರಿಗೆ ರೈತರೊಂದಿಗೆ ಮಾತುಕತೆ ನಡೆಸಲಿದೆ ಎಂದು ರೈತ ಸಂಘಟನೆಯ ಮುಖಂಡರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಇಂದಿರಾ ಗಾಂಧಿ 3ನೇ ಮಗ ಶಾಕ್? – ಪುತ್ರನ ಜೊತೆ ಕಮಲ್‌ನಾಥ್ ಬಿಜೆಪಿ ಸೇರ್ಪಡೆ?

  • ಪ್ರತಿಭಟನಾ ನಿರತರ ಮೇಲೆ ಮತ್ತೆ ಅಶ್ರುವಾಯು ದಾಳಿ – ಹೃದಯಾಘಾತದಿಂದ ರೈತ ಸಾವು!

    ಪ್ರತಿಭಟನಾ ನಿರತರ ಮೇಲೆ ಮತ್ತೆ ಅಶ್ರುವಾಯು ದಾಳಿ – ಹೃದಯಾಘಾತದಿಂದ ರೈತ ಸಾವು!

    ನವದೆಹಲಿ: ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರನ್ನು (Farmers) ಚದುರಿಸಲು ಪೊಲೀಸರು ಮತ್ತೆ ಅಶ್ರುವಾಯು ಪ್ರಯೋಗಿಸಿದ್ದಾರೆ. ಅಶ್ರುವಾಯು ಶೆಲ್‌ಗಳಿಂದ ಪಾರಾಗಲು ರೈತರು ಚೆಲ್ಲಾಪಿಲ್ಲಿಯಾಗಿದ್ದಾರೆ. ಇದೇ ವೇಳೆ ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ 63 ವರ್ಷದ ರೈತರೊಬ್ಬರು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ.

    ʻದೆಹಲಿ ಚಲೋʼ (Delhi Chalo) ರೈತರ ಪ್ರತಿಭಟನೆ ಶುಕ್ರವಾರ 4ನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗ್ಗೆ 6ರಿಂದ ಸಂಜೆ 4ರವರೆಗೆ ಭಾರತ್ ಬಂದ್‌ಗೆ ಹಲವು ಸಂಘಟನೆಗಳು ಕರೆ ನೀಡಿದ್ದವು. ಸ್ಥಳದಲ್ಲಿ ಸೆಕ್ಷನ್ 144 ವಿಧಿಸಿರುವುದರಿಂದ ಪೊಲೀಸ್ ಮತ್ತು ರೈತರು ಮುಖಾಮುಖಿಗೊಂಡಿದ್ದು ಗಡಿ ದಾಟಲು ಪ್ರಯತ್ನಿಸಿದ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಲಾಯಿತು‌.

    ನೋಯ್ಡಾ ಮೂಲದ ಭಾರತೀಯ ಕಿಸಾನ್ ಪರಿಷತ್ (Bharatiya Kisan Union) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬೆಂಬಲ ನೀಡುವುದರೊಂದಿಗೆ ರೈತರು ಸ್ತಬ್ಧತೆಯನ್ನು ತೀವ್ರಗೊಳಿಸಲು ಪ್ರತಿಜ್ಞೆ ಮಾಡಿದ್ದಾರೆ. ಇದನ್ನೂ ಓದಿ: 7 ವರ್ಷದಲ್ಲಿ ರಾಜ್ಯಕ್ಕೆ 59,274 ಕೋಟಿ ಜಿಎಸ್‌ಟಿ ನಷ್ಟ: ಬಜೆಟ್‌ನಲ್ಲಿ ಕೇಂದ್ರಕ್ಕೆ ತಿವಿದ ಸಿದ್ದರಾಮಯ್ಯ

    ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರಿಂದ ರಾಷ್ಟ್ರ ರಾಜಧಾನಿಯ ಗಾಜಿಪುರ ಗಡಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತು. ಇದಕ್ಕೂ ಮುನ್ನ ಗುರುವಾರ, ಪ್ರತಿಭಟನಾನಿರತ ರೈತ ಸಂಘಗಳ ಮುಖಂಡರು ಮತ್ತು ಮೂವರು ಕೇಂದ್ರ ಸಚಿವರ ನಡುವೆ 5 ಗಂಟೆಗಳ ಮ್ಯಾರಥಾನ್ ಮಾತುಕತೆಯಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ. ಇದನ್ನೂ ಓದಿ: Karnataka Budget 2024: ಸರ್ಕಾರಕ್ಕೆ 1 ರೂಪಾಯಿ ಬಂದಿದ್ದು ಎಲ್ಲಿಂದ? 1 ರೂ. ಹೋಗಿದ್ದು ಎಲ್ಲಿಗೆ? 

  • ರೈತರನ್ನು ಹಿಮ್ಮೆಟ್ಟಿಸಲು ʻಶಬ್ದಾಸ್ತ್ರʼ ಪ್ರಯೋಗ – ಇದು ಹೇಗೆ ಕೆಲಸ ಮಾಡುತ್ತೆ?

    ರೈತರನ್ನು ಹಿಮ್ಮೆಟ್ಟಿಸಲು ʻಶಬ್ದಾಸ್ತ್ರʼ ಪ್ರಯೋಗ – ಇದು ಹೇಗೆ ಕೆಲಸ ಮಾಡುತ್ತೆ?

    – ಇಂದು ರೈತರೊಂದಿಗೆ ಕೇಂದ್ರ ಸರ್ಕಾರ ಸಭೆ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಪ್ರವೇಶಿಸಲು ಪಟ್ಟುಹಿಡಿದು ಪ್ರತಿಭಟಿಸುತ್ತಿರುವ ರೈತರನ್ನು (Farmers) ಹಿಮ್ಮೆಟ್ಟಿಸಲು, ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ. ಬ್ಯಾರಿಕೇಡ್, ಮುಳ್ಳಿನ ತಂತಿ, ಜಲಫಿರಂಗಿ, ಅಶ್ರುವಾಯು, ಕಾಂಕ್ರೀಟ್‌ ಬ್ಯಾರಿಕೇಡ್‌ ಎಲ್ಲಾ ರೀತಿಯ ಅಸ್ತ್ರವನ್ನೂ ಪ್ರಯೋಗಿಸಿದ್ದಾರೆ. ಆದ್ರೆ ಇದ್ಯಾವುದಕ್ಕೂ ಜಗ್ಗದ ಪ್ರತಿಭಟನಾಕಾರರನ್ನ ಹಿಮ್ಮೆಟ್ಟಿಸಲು ʻಶಬ್ದಾಸ್ತ್ರʼ (Sonic Weapons) ಬಳಕೆಗೆ ಪೊಲೀಸರು ಮುಂದಾಗಿದ್ದಾರೆ.

    ಹರಿಯಾಣದ ಶಂಭು ಗಡಿಯಲ್ಲೇ ರೈತರನ್ನು ತಡೆದು ನಿಲ್ಲಿಸಲು, ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಆದ್ರೆ ಭದ್ರತೆಯನ್ನು ಭೇದಿಸಲು ರೈತರು ಮುಂದಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಲಾಂಗ್‌ ರೇಂಜ್‌ ಅಕೌಸ್ಟಿಕ್‌ ಡಿವೈಸ್‌ (LRADS) ಶಬ್ಧಸ್ತ್ರ ಬಳಸಿ ರೈತರನ್ನು ಹಿಮ್ಮೆಟ್ಟಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ದೆಹಲಿ ಚಲೋ ಪ್ರತಿಭಟನೆ ನಿಗ್ರಹಕ್ಕೆ ಯತ್ನ – ಪೊಲೀಸರ ವರ್ತನೆ ಖಂಡಿಸಿ ಶುಕ್ರವಾರ ದೇಶಾದ್ಯಂತ ರಸ್ತೆ ತಡೆ

    ಏನಿದು ಶಬ್ದಾಸ್ತ್ರ?
    ಅಮೆರಿಕದ ಮಿಲಿಟರಿ ಪಡೆಗಳು 2000ನೇ ವರ್ಷದ ಆರಂಭದಲ್ಲೇ ಈ ಸಾಧನಗಳನ್ನು ಅಭಿವೃದ್ಧಿ ಪಡಿಸಿವೆ. ವಿವಿಧ ಸಂದರ್ಭಗಳಲ್ಲಿ ಜನಸಮೂಹವನ್ನು ನಿಯಂತ್ರಿಸುವುದು ಮಾತ್ರವಲ್ಲದೇ, ಮೈಕ್ರೋಫೋನ್ ರೀತಿಯಲ್ಲಿ, ರಕ್ಷಣಾ ಸಂದರ್ಭಗಳಲ್ಲೂ ವಿವಿಧೋದ್ದೇಶಗಳಿಗಾಗಿ ಇವುಗಳನ್ನು ಬಳಕೆ ಮಾಡಲಾಗುತ್ತಿದೆ. ಇವುಗಳ ಬೆಲೆ 30 ಲಕ್ಷ ರೂ.ಗಳಷ್ಟಿದೆ. 2013ರಲ್ಲಿ ಇಂಥ 5 LRADS ಗಳನ್ನು ದೆಹಲಿ ಪೊಲೀಸ್ ಇಲಾಖೆ ಖರೀದಿಸಿದೆ. ಈಗ ಪ್ರತಿಭಟನಾಕಾರರನ್ನ ಚದುರಿಸಲು ಅವುಗಳನ್ನು ಬಳಕೆ ಮಾಡುತ್ತಿದೆ. 130 ಡೆಸಿಬಲ್‌ನಷ್ಟು ಜೋರಾಗಿ ಶಬ್ದವನ್ನು ಇದರಿಂದ ಹೊರಡಿಸಲಾಗುತ್ತದೆ. ಇದು ಅತ್ಯಂತ ಕರ್ಕಶವೆನಿಸುತ್ತದೆ. ಇದನ್ನು ಸಾನಿಕ್‌ ಅಸ್ತ್ರವೆಂದೂ ಕರೆಯುತ್ತಾರೆ.

    ಸಾನಿಕ್‌ ಅಸ್ತ್ರವಷ್ಟೇ ಅಲ್ಲದೇ, ಗುಂಪು ಚದುರಿಸುವುದಕ್ಕಾಗಿ ಪೊಲೀಸರು ಗುಂಡು ಹಾರಿಸುವುದನ್ನೂ ಅಭ್ಯಾಸ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ – ನಾಮಪತ್ರ ಪ್ರಕ್ರಿಯೆ ಪೂರ್ಣಗೊಳಿಸಿದ ಕಾಂಗ್ರೆಸ್ ವರಿಷ್ಠೆ

    ಇಂದು ಕೇಂದ್ರ ಸರ್ಕಾರ ಸಭೆ:
    ಕೇಂದ್ರ ಸರ್ಕಾರವು ಗುರುವಾರ ಚಂಡೀಗಢದಲ್ಲಿ ರೈತರೊಂದಿಗೆ ಸಭೆ ನಡೆಸಲಿದೆ. ಅಲ್ಲಿಯವರೆಗೂ ರೈತರು ಶಾಂತ ರೀತಿಯಲ್ಲಿ ಇರಲಿದ್ದಾರೆ ಎಂದು ರೈತಮುಖಂಡರೊಬ್ಬರು ತಿಳಿಸಿದ್ದಾರೆ.

  • ರೈತರೊಂದಿಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ: ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ

    ರೈತರೊಂದಿಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ: ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ

    ನವದೆಹಲಿ: ಉತ್ತರ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ (Farmers Protest) ಎರಡನೇ ದಿನಕ್ಕೆ ಕಾಲಿಟ್ಟಿದ್ದು, ರೈತರೊಂದಿಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ (Arjun Munda) ಹೇಳಿದ್ದಾರೆ. ಅಲ್ಲದೇ ಚರ್ಚೆಗೆ ಯೋಗ್ಯವಾದ ವಾತಾವರಣವನ್ನು ರೈತರು ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

    ನವದೆಹಲಿಯಲ್ಲಿ (New Delhi) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾವು ಚರ್ಚೆಗೆ ಸಿದ್ಧರಿದ್ದೇವೆ. ನಾವು ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಮಾತುಕತೆ ನಡೆಸಬೇಕಾಗಿದೆ ಎಂದು ಹೇಳಿದರು. ಚರ್ಚೆಯ ವಾತಾವರಣವನ್ನು ಕಾಪಾಡಿಕೊಳ್ಳಲು ರೈತ ಸಂಘವನ್ನು ನಾನು ವಿನಂತಿಸುತ್ತೇನೆ. ರೈತರ ಸಂಘದೊಂದಿಗೆ ಸಕಾರಾತ್ಮಕ ಚರ್ಚೆ ನಡೆಸುವ ನಮ್ಮ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಹೇಳಿದರು. ಇದನ್ನೂ ಓದಿ: ದೆಹಲಿ ಚಲೋ ಪ್ರತಿಭಟನೆ ನಿಗ್ರಹಕ್ಕೆ ಯತ್ನ – ಪೊಲೀಸರ ವರ್ತನೆ ಖಂಡಿಸಿ ಶುಕ್ರವಾರ ದೇಶಾದ್ಯಂತ ರಸ್ತೆ ತಡೆ

    ರೈತರು ದೆಹಲಿಗೆ ತೆರಳಲು ಉದ್ದೇಶಿಸಿರುವ ದೆಹಲಿ ಚಲೋ ಮೆರವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಸಿಂಘು ಮತ್ತು ಟಿಕ್ರಿ ಗಡಿಯಲ್ಲಿ ಪೊಲೀಸರು ಹಲವಾರು ಪದರಗಳ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದರಿಂದ ಬುಧವಾರ ದೆಹಲಿಯ ಗಡಿ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಹರಿಯಾಣದ ಸಿಂಘು ಮತ್ತು ಟಿಕ್ರಿ ಗಡಿಗಳು ಸಂಚಾರಕ್ಕಾಗಿ ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದರೂ, ಗಾಜಿಪುರ ಗಡಿಯಲ್ಲಿ ವಾಹನ ಸಂಚಾರವನ್ನು ನಿಯಂತ್ರಿತ ರೀತಿಯಲ್ಲಿ ಅನುಮತಿಸಲಾಗಿದೆ. ಇದನ್ನೂ ಓದಿ: ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ – ನಾಮಪತ್ರ ಪ್ರಕ್ರಿಯೆ ಪೂರ್ಣಗೊಳಿಸಿದ ಕಾಂಗ್ರೆಸ್ ವರಿಷ್ಠೆ

    ದೆಹಲಿಗೆ ರೈತರ ಪಾದಯಾತ್ರೆಯನ್ನು ತಡೆಯಲು ಸಿಂಘು ಗಡಿಯ ಸಮೀಪವಿರುವ ಹಳ್ಳಿಯೊಂದರಲ್ಲಿ ರಸ್ತೆಯ ಒಂದು ಭಾಗವನ್ನು ಅಗೆಯಲಾಯಿತು. ತಮ್ಮ ಬೇಡಿಕೆಗಳ ಕುರಿತು ಕೇಂದ್ರ ಸಚಿವರ ತಂಡದೊಂದಿಗೆ ನಡೆಸಿದ ಸಭೆ ವಿಫಲವಾದ ನಂತರ ಕನಿಷ್ಠ ಬೆಂಬಲ ಬೆಲೆಯ ಕಾನೂನಿಗೆ ಒತ್ತಾಯಿಸಿ ರೈತರು ದೆಹಲಿಯತ್ತ ಪಾದಯಾತ್ರೆ ನಡೆಸುತ್ತಿದ್ದಾರೆ. ತಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ರೈತರು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ಮಗನನ್ನು ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲ

  • 6 ತಿಂಗಳ ಆಹಾರ ಸಾಮಾಗ್ರಿ ಹಿಡಿದು ದೆಹಲಿಚಲೋಗೆ ಬಂದ ರೈತರು

    6 ತಿಂಗಳ ಆಹಾರ ಸಾಮಾಗ್ರಿ ಹಿಡಿದು ದೆಹಲಿಚಲೋಗೆ ಬಂದ ರೈತರು

    ನವದೆಹಲಿ: ಹರಿಯಾಣ ಮತ್ತು ಪಂಜಾಬ್‍ನ ಪ್ರತಿಭಟನಾ ನಿರತ ರೈತರು ಮಂಗಳವಾರ ದೆಹಲಿಯತ್ತ ಪ್ರಯಾಣ ಆರಂಭಿಸಲಿದ್ದಾರೆ. ಸುದೀರ್ಘ ಅವಧಿಯ ಪ್ರತಿಭಟನೆಗಾಗಿ ಸುಮಾರು ಆರು ತಿಂಗಳಿಗೆ ಬೇಕಾಗುವಷ್ಟು ದವಸ ಧಾನ್ಯಗಳು ಹಾಗೂ ಇಂಧನವನ್ನು ಸಂಗ್ರಹಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಖಾತ್ರಿ ಸೇರಿದಂತೆ ಹಲವು ಬೇಡಿಕೆಗಳಿಗೆ ಮಣಿಯುವಂತೆ ಕೇಂದ್ರವನ್ನು ಒತ್ತಾಯಿಸುವ ಉದ್ದೇಶದಿಂದ 200 ಕ್ಕೂ ಹೆಚ್ಚು ರೈತ ಸಂಘಗಳು `ದೆಹಲಿ ಚಲೋ’ (Delhi Chalo) ಮೆರವಣಿಗೆಗಾಗಿ ರಾಷ್ಟ್ರ ರಾಜಧಾನಿಗೆ ತೆರಳುತ್ತಿವೆ. ಪಂಜಾಬ್ ಒಂದರಿಂದಲೇ ರೈತರ ಪ್ರತಿಭಟನೆಗೆ (Farmers Protest) 1,500 ಟ್ರಾಕ್ಟರ್‌ಗಳು ಮತ್ತು 500 ವಾಹನಗಳಲ್ಲಿ ರೈತರು ತೆರಳುತ್ತಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಹರಿಯಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸೇರಿಕೊಳ್ಳಲಿದ್ದಾರೆ ಎಂದು ಗುಪ್ತಚರ ಇಲಾಖೆ (Intelligence Report) ಸಹ ಎಚ್ಚರಿಸಿದೆ.

    ಇತ್ತೀಚೆಗೆ ರೈತ ಮುಖಂಡರು ಮತ್ತು ಕೇಂದ್ರ ಸಚಿವರ ನಡುವಿನ ಸಭೆ ಯಾವುದೇ ನಿರ್ಣಯವಿಲ್ಲದೆ ಮುಕ್ತಾಯಗೊಂಡಿತ್ತು. ಇದಾದ ಬಳಿಕ ರೈತರು, ಪ್ರತಿಭಟನೆಯನ್ನು ಮುಂದುವರೆಸಲು ರೈತರು ನಿರ್ಧರಿಸಿದ್ದರು. ರೈತರ ಪ್ರತಿಭಟನೆಗೆ ಕರೆ ನೀಡುವ ಮುನ್ನ, ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ (ಕೆಎಂಎಸ್‍ಸಿ) ಹಿರಿಯ ನಾಯಕತ್ವ ಮತ್ತು ಕೋರ್ ಕಮಿಟಿ ಕೇರಳ, ಉತ್ತರ ಪ್ರದೇಶ, ಬಿಹಾರ, ಛತ್ತೀಸ್‍ಗಢ, ಮಹಾರಾಷ್ಟ್ರ, ಉತ್ತರಾಖಂಡ ಮತ್ತು ತಮಿಳುನಾಡುಗಳಿಗೆ ಭೇಟಿ ನೀಡಿ ಆಯಾ ರಾಜ್ಯಗಳ ರೈತರಿಂದ ಬೆಂಬಲವನ್ನು ಕೋರಿತ್ತು.

    ರೈತರು ಗುಂಪುಗಳಲ್ಲಿ ಬಂದು ದೆಹಲಿಯ ಸುತ್ತಮುತ್ತಲಿನ ಗುರುದ್ವಾರ, ಧರ್ಮಶಾಲಾಗಳು, ಆಶ್ರಮಗಳು, ಅತಿಥಿ ಗೃಹಗಳಲ್ಲಿ ಅಡಗಿಕೊಂಡು ಕ್ಷಿಪ್ರ ಪ್ರತಿಭಟನೆ ನಡೆಸಲು ಯೋಜಿಸಿದ್ದಾರೆ. ಅಲ್ಲದೇ ಪ್ರಧಾನ ಮಂತ್ರಿ ಭವನ, ಗೃಹ ಸಚಿವರ ಭವನ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ವರದಿ ಮಾಡಿದೆ.

    ರೈತರು ದೆಹಲಿ ಪ್ರವೇಶಿಸದಂತೆ ತಡೆಯಲು ಪೊಲೀಸರು ಬ್ಯಾರಿಕೇಡ್‍ಗಳು, ಕಬ್ಬಿಣದ ಮೊಳೆಗಳನ್ನು ರಸ್ತೆಗೆ ಹಾಕಿದ್ದಾರೆ. ಇನ್ನೂ ಈ ವಿಚಾರವಾಗಿ ಬಲಪ್ರಯೋಗ ಅಂತಿಮ ಮಾರ್ಗವಾಗಬೇಕು ಎಂದು ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ಹೇಳಿದೆ.

  • ಮೈದಾನವನ್ನು ಜೈಲಾಗಿಸಲು ಅನುಮತಿ ನೀಡಲ್ಲ – ರೈತರ ಹೋರಾಟಕ್ಕೆ ದೆಹಲಿ ಸರ್ಕಾರದ ಬೆಂಬಲ

    ಮೈದಾನವನ್ನು ಜೈಲಾಗಿಸಲು ಅನುಮತಿ ನೀಡಲ್ಲ – ರೈತರ ಹೋರಾಟಕ್ಕೆ ದೆಹಲಿ ಸರ್ಕಾರದ ಬೆಂಬಲ

    ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಕರೆ ಕೊಟ್ಟಿರುವ ದೆಹಲಿ ಚಲೋ (Delhi Chalo) ಹೋರಾಟಕ್ಕೆ ದೆಹಲಿಯ ಆಮ್ ಆದ್ಮಿ ಸರ್ಕಾರ ಬೆಂಬಲ ನೀಡಿದೆ. ಬವಾನಾ ಸ್ಟೇಡಿಯಂನ್ನು ಜೈಲಾಗಿ ಪರಿವರ್ತಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿರುವ ಕೇಜ್ರಿವಾಲ್ ಸರ್ಕಾರ ಅನ್ನದಾತರನ್ನು ಜೈಲಿಗೆ ಹಾಕುವುದು ತಪ್ಪು ಎಂದು ಹೇಳಿದೆ.

    ರೈತರ ಪ್ರತಿಭಟನೆಯಲ್ಲಿ (Farmers Protest) ಬಂಧಿತರಾದ ಪ್ರತಿಭಟನಾಕಾರರಿಗೆ ಬವಾನಾ ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸಿ, ವ್ಯವಸ್ಥೆ ಮಾಡಿಕೊಡುವಂತೆ ಸೋಮವಾರ ಕೇಂದ್ರ ಸರ್ಕಾರ ದೆಹಲಿ (Delhi) ಸರ್ಕಾರಕ್ಕೆ ಪತ್ರ ಬರೆದಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ದೆಹಲಿ ಸರ್ಕಾರ ರೈತರ ಬೇಡಿಕೆಗಳು ನ್ಯಾಯಸಮ್ಮತವಾಗಿದೆ. ಶಾಂತಿಯುತ ಪ್ರತಿಭಟನೆಯು ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರಿಕನ ಹಕ್ಕು ಎಂದು ಹೇಳಿದೆ.

    ಇಂದು (ಮಂಗಳವಾರ) ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸದಂತೆ ರೈತರ `ದೆಹಲಿ ಚಲೋ’ ಮೆರವಣಿಗೆಯನ್ನು ತಡೆಯಲು ದೆಹಲಿ ಗಡಿಗಳಲ್ಲಿ ಹಲವು ಹಂತದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್‍ಗಳು, ಕಾಂಕ್ರೀಟ್ ಬ್ಲಾಕ್‍ಗಳು, ಕಬ್ಬಿಣದ ಮೊಳೆಗಳು ಮತ್ತು ಕಂಟೈನರ್‍ಗಳನ್ನು ಬಳಸಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರೈತ ಮುಖಂಡರು ಮತ್ತು ಕೇಂದ್ರದ ನಡುವಿನ ಮಾತುಕತೆ ವಿಫಲವಾದ ಬಳಿಕ ರೈತರನ್ನು ಗಡಿಯಲ್ಲಿ ತಡೆಯುವ ಪ್ರಯತ್ನ ಆರಂಭವಾಗಿದೆ.

    ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿಗಳಲ್ಲಿ ಗಲಭೆ ನಿಗ್ರಹ ಪಡೆಗಳಲ್ಲಿ ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿಯನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ರೈತರ ಪ್ರತಿಭಟನಾ ಮೆರವಣಿಗೆ ಸಲುವಾಗಿ ನಿರ್ದಿಷ್ಟ ಸ್ಥಳಗಳಲ್ಲಿ ತಾತ್ಕಾಲಿಕ ಜೈಲುಗಳನ್ನು ಸಹ ಸ್ಥಾಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ದೆಹಲಿ ಚಲೋ ರೈತರ ಮೇಲೆ ಅಶ್ರುವಾಯು ಪ್ರಯೋಗ – ಹಲವರು ವಶಕ್ಕೆ

    ದೆಹಲಿ ಚಲೋ ರೈತರ ಮೇಲೆ ಅಶ್ರುವಾಯು ಪ್ರಯೋಗ – ಹಲವರು ವಶಕ್ಕೆ

    ನವದೆಹಲಿ: ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ (Delhi Chalo) ಹಮ್ಮಿಕೊಂಡಿರುವ ರೈತರ (Farmers) ಮೇಲೆ ಶಂಭು ಗಡಿಯಲ್ಲಿ (Shambhu Border) ಪೊಲೀಸರು ಅಶ್ರುವಾಯು (Tear Gas) ಪ್ರಯೋಗ ಮಾಡಿದ್ದಾರೆ.

    ಹರ್ಯಾಣ-ಪಂಜಾಬ್‌ (Punjab-Haryana) ಗಡಿಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಹರ್ಯಾಣ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ರೈತರ ಗುಂಪಿನ ಮಧ್ಯೆ ಪೊಲೀಸರಿಗೆ ಹೋಗಲು ಸಾಧ್ಯವಿಲ್ಲದ ಕಾರಣ ಡ್ರೋನ್‌ ಮೂಲಕ ಟಿಯರ್‌ ಗ್ಯಾಸ್‌ ಶೆಲ್‌ಗಳನ್ನು ಬೀಳಿಸಿ ರೈತರನ್ನು ಚದುರಿಸಲಾಗುತ್ತಿದೆ.  ಇದನ್ನೂ ಓದಿ: ಪರೀಕ್ಷೆ ವೇಳೆ ಲೋಡ್ ಶೆಡ್ಡಿಂಗ್ – ಸೋಲಾರ್ ಬೀದಿ ದೀಪದ ಕೆಳಗೆ ಓದುತ್ತಿದ್ದಾರೆ ವಿದ್ಯಾರ್ಥಿನಿಯರು

     

    ಉತ್ತರ ಪ್ರದೇಶ,ಹರ್ಯಾಣ ಮತ್ತು ಪಂಜಾಬ್‌ ಭಾಗಗಳಿಂದ ಭಾರಿ ಸಂಖ್ಯೆಯ ರೈತರು ದೆಹಲಿಯತ್ತ ಧಾವಿಸುತ್ತಿದ್ದಾರೆ. ಆದರೆ ಅವರು ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸದಂತೆ ತಡೆಯಲು ಸಿಂಘು, ಟಿಕ್ರಿ, ಗಾಜೀಪುರ ಗಡಿಯಲ್ಲಿ ಹಲವು ಹಂತಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ.

    ರಸ್ತೆಗಳಿಗೆ ಅಡ್ಡಲಾಗಿ ಮೊಳೆಗಳ ಪಟ್ಟಿ, ಸಿಮೆಂಟ್‌ ಇಟ್ಟಿಗೆ, ಮುಳ್ಳು ತಂತಿ ಇಡಲಾಗಿದೆ. ಹೀಗಿದ್ದರೂ ಟ್ರ್ಯಾಕ್ಟರ್‌ ಇದನ್ನು ಬೇಧಿಸಿಯೂ ಟ್ರ್ಯಾಕ್ಟರ್‌ ಮುಂದೆ ಸಾಗಿದರೂ ಅವುಗಳನ್ನು ತಡೆಯಲು ಕಂಟೈನರ್‌ ಲಾರಿಗಳನ್ನು ಸಿದ್ಧವಾಗಿ ಇಡಲಾಗಿದೆ.

     

  • ಇಂದು ರೈತರಿಂದ ʻದೆಹಲಿ ಚಲೋʼ – ಗಡಿಯಲ್ಲಿ 5,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

    ಇಂದು ರೈತರಿಂದ ʻದೆಹಲಿ ಚಲೋʼ – ಗಡಿಯಲ್ಲಿ 5,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

    – ಬ್ಯಾರಿಕೇಡ್‌, ತಂತಿಗಳಿಂದ ಗಡಿಭಾಗಗಳು ಬಂದ್‌, ಸೆಕ್ಷನ್‌ 144 ಜಾರಿ

    ನವದೆಹಲಿ: ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿಯಾಗಬೇಕು, ಸ್ವಾಮಿನಾಥನ್ ವರದಿ ಜಾರಿಯಾಗಬೇಕು, ರೈತರಿಗೆ ಪಿಂಚಣಿ ಸೌಲಭ್ಯ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ರೈತರು (Farmers) ದೆಹಲಿಯಲ್ಲಿ ಮತ್ತೊಮ್ಮೆ ಐತಿಹಾಸಿಕ ಪ್ರತಿಭಟನೆ ನಡೆಸಲು ತಿರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ.13 (ಇಂದು) ʻದೆಹಲಿ ಚಲೋʼಗೆ (Delhi Chalo) ಪಂಜಾಬ್‌ ಮತ್ತು ಹರಿಯಾಣ ರೈತರು ʻದೆಹಲಿ ಚಲೋʼಗೆ ಕರೆ ನೀಡಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

    ಪಂಜಾಬ್, ಹರಿಯಾಣ, ಉತ್ತರಪ್ರದೇಶದಿಂದಲೂ ರೈತರು ದೆಹಲಿಗೆ ಪ್ರವೇಶಿಸಲಿದ್ದಾರೆ. ಕರ್ನಾಟಕದಿಂದಲೂ ರೈತ ಮುಖಂಡ ಕುರುಬೂರು ಶಾಂತಕುಮಾರ್ ಭಾಗಿಯಾಗಲಿದ್ದಾರೆ. ಈ ರೈತ ಹೋರಾಟದಲ್ಲಿ ಸುಮಾರು 200 ಸಂಘಟನೆಗಳಿಂದ 25,000 ರೈತರು ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಇದನ್ನೂ ಓದಿ: 1,078 ತಂಡಗಳು, 16,100 ಆಟಗಾರರು – ಮೋದಿ ತವರಲ್ಲಿ ʻಲೋಕಸಭಾ ಪ್ರೀಮಿಯರ್‌ ಲೀಗ್‌ʼಗೆ ಚಾಲನೆ

    ಅಧಿಕ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳುವುದರಿಂದ ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಪೊಲೀಸರು (Delhi Police) ಸೆಕ್ಷನ್‌ 144 ಜಾರಿಗೊಳಿಸಿದ್ದಾರೆ. ಜೊತೆಗೆ ರಾಜಧಾನಿಯಲ್ಲಿ ಎಲ್ಲಾ ರೀತಿಯ ರ‍್ಯಾಲಿ, ಮೆರವಣಿಗೆ, ರಸ್ತೆ ಮಾರ್ಗಗಳನ್ನ ನಿರ್ಬಂಧಿಸಲಾಗಿದೆ. ಟ್ಯಾಕ್ಟರ್‌ಗಳಲ್ಲಿ ಜನರನ್ನು ತುಂಬಿಕೊಂಡು ಹೋಗುವುದಕ್ಕೂ ನಿಷೇಧ ಹೇರಲಾಗಿದೆ. ಮಾರ್ಚ್‌ 12ರ ವರೆಗೂ ಈ ಕ್ರಮ ಇದೇ ರೀತಿ ಮುಂದುವರಿಯಲಿದೆ. ಸಿಂಘು, ಘಾಜಿಪುರ, ಟಿಕ್ರಿ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಭಾರೀ ಭದ್ರತೆ:
    ಪ್ರತಿಭಟನೆ ತಡೆಯಲು ಭದ್ರತೆಗೆ 11 ಪ್ಯಾರಾ ಮಿಲಿಟರಿ ತುಕಡಿಗಳನ್ನ ನಿಯೋಜನೆ ಮಾಡಲಾಗಿದೆ. 5,000ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ. ಇದರೊಂದಿಗೆ ತಂತಿಗಳಿಂದ ಹಾಗೂ ಬ್ಯಾರಿಕೇಡ್‌ಗಳಿಂದ ಗಡಿ ರಸ್ತೆಗಳನ್ನ ಬಂದ್‌ ಮಾಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಮಾಜಿ ಸಿಎಂ ಅಶೋಕ್ ಚವಾಣ್ ಗುಡ್ ಬೈ- ಲೋಕಸಭೆ ಹೊಸ್ತಿಲಲ್ಲಿ ಮಹಾರಾಷ್ಟ್ರದಲ್ಲಿ ಕೈಗೆ ಹಿನ್ನಡೆ

    ರೈತರೊಂದಿಗೆ ಅಮಾನವೀಯ ವರ್ತನೆ ಆರೋಪ:
    ಇನ್ನೂ ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ಆಗಮಿಸುತ್ತಿದ್ದ ರೈತರು, ರೈತ ಮಹಿಳೆಯರ ಮೇಲೆ ಮಧ್ಯಪ್ರದೇಶದ ಪೊಲೀಸರು ಬಲವಂತವಾಗಿ ಬೆದರಿಸಿ ದಬ್ಬಾಳಿಕೆ ನಡೆಸಿದ್ದಾರೆ. ಮಹಿಳೆಯರನ್ನು ಎಳೆದಾಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ರೈತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನೂ ಕೊಡಿಸದೇ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ. ಇದನ್ನೂ ಓದಿ: ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – ಐದು ಮಂದಿ ಸಜೀವ ದಹನ

    ಅಲ್ಲದೇ ಪ್ರತಿಭಟನೆಗೆ ತೆರಳುತ್ತಿದ್ದ ಬೆಳಗಾವಿ ಜಿಲ್ಲೆಯ ಗುರುಸಿದ್ದಪ್ಪ, ಧಾರವಾಡ ಜಿಲ್ಲೆಯ ಪರಶುರಾಮ್, ಚಾಮರಾಜನಗರ ಜಿಲ್ಲೆಯ ಪಟೇಲ್ ಶಿವಮೂರ್ತಿ, ಮೂಕಳ್ಳಿ ಮಾದೇವಸ್ವಾಮಿ, ಹಾಸನ ಜಿಲ್ಲೆಯ ಧರ್ಮರಾಜ್, ಮೈಸೂರು ಜಿಲ್ಲೆಯ ಬರಡನಪುರ ನಾಗರಾಜ್, ಮಹೇಶ್, ಉಡಿಗಾಲ ರೇವಣ್ಣ, ಕುರುಬೂರು ಸಿದ್ದೇಶ್, ಗುರುಸ್ವಾಮಿ, ಗೌರಿಶಂಕರ್,ಕಮಲಮ್ಮ, ಪ್ರೇಮ, ಮಮತಾ, ಶ್ವೇತಾ, ನಾಗವೇಣಿ, ಪ್ರದೀಪ್ ಕುರುಬೂರು,. ಮಂಜೇಶ್ ಸೇರಿ ನೂರಕ್ಕೂ ಅಧಿಕ ರೈತರನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಶಾಂತಕುಮಾರ್‌ ದೂರಿದ್ದಾರೆ.

  • ʻದೆಹಲಿ ಚಲೋʼ ಪ್ರತಿಭಟಗೆ ತೆರಳುತ್ತಿದ್ದ ರಾಜ್ಯದ 100ಕ್ಕೂ ಹೆಚ್ಚು ರೈತರು ಪೊಲೀಸ್‌ ವಶಕ್ಕೆ

    ʻದೆಹಲಿ ಚಲೋʼ ಪ್ರತಿಭಟಗೆ ತೆರಳುತ್ತಿದ್ದ ರಾಜ್ಯದ 100ಕ್ಕೂ ಹೆಚ್ಚು ರೈತರು ಪೊಲೀಸ್‌ ವಶಕ್ಕೆ

    ನವದೆಹಲಿ: ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿಯಾಗಬೇಕು, ಸ್ವಾಮಿನಾಥನ್ ವರದಿ ಜಾರಿಯಾಗಬೇಕು, ರೈತರಿಗೆ ಪಿಂಚಣಿ ಸೌಲಭ್ಯ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ರೈತರು ದೆಹಲಿಯಲ್ಲಿ ಮತ್ತೊಮ್ಮೆ ಐತಿಹಾಸಿಕ ಪ್ರತಿಭಟನೆ (Delhi Protest) ನಡೆಸಲು ತಿರ್ಮಾನಿಸಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಲು ಕರ್ನಾಟಕದಿಂದ ಆಗಮಿಸುತ್ತಿದ್ದ ರೈತರನ್ನು ಮಧ್ಯಪ್ರದೇಶದ ಭೂಪಾಲ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ‌.

    ರೈತರೊಂದಿಗೆ ಅಮಾನವೀಯ ವರ್ತನೆ:
    ದೆಹಲಿಗೆ ಆಗಮಿಸುವ ವೇಳೆ ಭೂಪಾಲ್ ರೈಲ್ವೆ ನಿಲ್ದಾಣದಲ್ಲಿ ಮಧ್ಯರಾತ್ರಿ ಎರಡು ಗಂಟೆ ಸಮಯದಲ್ಲಿ ರೈಲಿನ ಒಳಗೆ ನುಗ್ಗಿದ ಪೊಲೀಸರು ಬಲವಂತವಾಗಿ ಬೆದರಿಸಿ ದಬ್ಬಾಳಿಕೆ ನಡೆಸಿ, ಮಹಿಳೆಯರನ್ನೂ ಸೇರಿ ರೈತರನ್ನು (Farmers) ರೈಲಿನ ಒಳಗೆ ಎಳೆದಾಡಲಾಗಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನೂ ಕೊಡಿಸದೇ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ‌. ಇದನ್ನೂ ಓದಿ: 200 ಸಂಘಟನೆಗಳು, 20,000 ರೈತರಿಂದ ನಾಳೆ `ದೆಹಲಿ ಚಲೋ’ – ದೆಹಲಿ ಗಡಿ ಬಂದ್!

    ಬೆಳಗಾವಿ (Belagavi) ಜಿಲ್ಲೆಯ ಗುರುಸಿದ್ದಪ್ಪ, ಧಾರವಾಡ ಜಿಲ್ಲೆಯ ಪರಶುರಾಮ್, ಚಾಮರಾಜನಗರ ಜಿಲ್ಲೆಯ ಪಟೇಲ್ ಶಿವಮೂರ್ತಿ, ಮೂಕಳ್ಳಿ ಮಾದೇವಸ್ವಾಮಿ, ಹಾಸನ ಜಿಲ್ಲೆಯ ಧರ್ಮರಾಜ್, ಮೈಸೂರು ಜಿಲ್ಲೆಯ ಬರಡನಪುರ ನಾಗರಾಜ್, ಮಹೇಶ್, ಉಡಿಗಾಲ ರೇವಣ್ಣ, ಕುರುಬೂರು ಸಿದ್ದೇಶ್, ಗುರುಸ್ವಾಮಿ, ಗೌರಿಶಂಕರ್,ಕಮಲಮ್ಮ, ಪ್ರೇಮ, ಮಮತಾ, ಶ್ವೇತಾ, ನಾಗವೇಣಿ, ಪ್ರದೀಪ್ ಕುರುಬೂರು,. ಮಂಜೇಶ್ ಸೇರಿ ನೂರಕ್ಕೂ ಅಧಿಕ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌.

    ಘಟನೆಯ ಬಗ್ಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುರುಬೂರು ಶಾಂತಕುಮಾರ್ (Kurubur Shantakumar), ನಾಳೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆಗೆ ತಿರ್ಮಾನಿಸಿದೆ. ಭರವಸೆಗಳನ್ನು ನೀಡಿ ಒಂದು ವರ್ಷವಾದರೂ ಸರ್ಕಾರ ಬೇಡಿಕೆ ಈಡೇರಿಸಿಲ್ಲ. ರೈತರ ಸಾಲ ಮನ್ನಾ, ರೈತರಿಗೆ ಪಿಂಚಣಿ, ಬೆಂಬಲ ಬೆಲೆ ಕಾನೂನು, ಸ್ವಾಮಿನಾಥನ್ ವರದಿ ಅನಿಷ್ಠಾನಕ್ಕೆ ಮನವಿ ಮಾಡಿದೆ ಕೇಂದ್ರ ಸರ್ಕಾರ ಈವರೆಗೂ ಬೇಡಿಕೆ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನೆಗೆ ಕರೆ ನೀಡಿದೆ. ಇದನ್ನೂ ಓದಿ: ಆಂಧ್ರ ಸಿಎಂ ಜಗನ್‌ ತಮ್ಮ ಚಿಕ್ಕಪ್ಪನನ್ನೇ ಹತ್ಯೆಗೈದಿದ್ದಾರೆ – ಎನ್.ಚಂದ್ರಬಾಬು ನಾಯ್ಡು ಪುತ್ರ ಗಂಭೀರ ಆರೋಪ

    ಫೆ.13ರಂದು ನಡೆಯಲಿರುವ ಪ್ರತಿಭಟನೆಗೂ ಮುನ್ನ ರೈತರನ್ನು ತಡೆಯುವ ಪ್ರಯತ್ನ ನಡೆಯುತ್ತಿದೆ. ದೆಹಲಿಗೆ ಆಗಮಿಸುವ ರೈತರನ್ನು ತಡೆಯಲಾಗುತ್ತಿದೆ. ಕರ್ನಾಟಕದಿಂದ ಆಗಮಿಸುತ್ತಿದ್ದ ನೂರಕ್ಕೂ ಅಧಿಕ ರೈತರನ್ನು ಭೂಪಾಲ್ ನಲ್ಲಿ ವಶಕ್ಕೆ ಪಡೆದು, ರೈತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ನನ್ನ ಪತ್ನಿಯೂ ಸೇರಿ ಹಲವು ಮಹಿಳೆಯರು ಗಾಯಗೊಂಡಿದ್ದಾರೆ ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ದೊಡ್ಡ ಗೆಲುವು – ಕತಾರ್‌ನಲ್ಲಿ ಅರೆಸ್ಟ್‌ ಆಗಿದ್ದ ನೌಕಾ ಅಧಿಕಾರಿಗಳು ಬಿಡುಗಡೆ, ಸ್ವದೇಶಕ್ಕೆ ವಾಪಸ್‌

  • 200 ಸಂಘಟನೆಗಳು, 20,000 ರೈತರಿಂದ ನಾಳೆ `ದೆಹಲಿ ಚಲೋ’ – ದೆಹಲಿ ಗಡಿ ಬಂದ್!

    200 ಸಂಘಟನೆಗಳು, 20,000 ರೈತರಿಂದ ನಾಳೆ `ದೆಹಲಿ ಚಲೋ’ – ದೆಹಲಿ ಗಡಿ ಬಂದ್!

    ನವದೆಹಲಿ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಸುಮಾರು 200 ರೈತ ಸಂಘಟನೆಗಳು ಮಂಗಳವಾರ (ಫೆ.13) ದೆಹಲಿ ಚಲೋಗೆ (Delhi Chalo) ಕರೆ ನೀಡಿವೆ.

    `ದೆಹಲಿ ಚಲೋ’ ನಲ್ಲಿ ಸುಮಾರು 20,000 ರೈತರು (Farmers) ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಹಲವು ಕಡೆ ಗಡಿಗಳನ್ನು ಬ್ಯಾರಿಕೇಡ್‌ಗಳಿಂದ ಬಂದ್ ಮಾಡಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಈ ಪ್ರತಿಭಟನೆಗೆ 200 ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಸುಮಾರು 20,000 ರೈತರು ಪಾಲ್ಗೊಳ್ಳಲಿದ್ದಾರೆ ಎಂದು ಗುಪ್ತಚರ ಇಲಾಖೆ ಅಂದಾಜಿಸಿದೆ. ಇದನ್ನೂ ಓದಿ: ಪಾಕ್ ಚುನಾವಣೆ ಮತ ಎಣಿಕೆ ಅಂತ್ಯ; ಇಮ್ರಾನ್ ಖಾನ್ ಮುನ್ನಡೆ, ನವಾಜ್ ಷರೀಫ್‌ಗೆ ಸೇನೆ ಬೆಂಬಲ

    ಈ ಹಿನ್ನೆಲೆಯಲ್ಲಿ ರೈತರು ಅಂಬಾಲ-ಸಿಂಘು, ಕನೌರಿ-ಜಿಂದ್, ಮತ್ತು ದಬಾವಲಿ ಗಡಿಗಳ ಮೂಲಕ ರಾಜಧಾನಿ ಪ್ರವೇಶಕ್ಕೆ ರೈತರು ಯೋಜಿಸಿದ್ದಾರೆ. ಈಗಾಗಲೇ ಪಂಜಾಬ್ ಹಾಗೂ ಹರಿಯಾಣದ ಟ್ರ್ಯಾಕ್ಟರ್‌ಗಳಲ್ಲಿ ಹೊರಟಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿಯ ಗಡಿ ಭಾಗಗಳನ್ನ ಬ್ಯಾರಿಕೇಡ್‌ಗಳಿಂದ (Barricading) ಬಂದ್ ಮಾಡಲಾಗಿದೆ. ಇದನ್ನೂ ಓದಿ: ಮುಸ್ಲಿಮರು ನಮ್ಮ ಹಿಂದುತ್ವ ಬೆಂಬಲಿಸುತ್ತಾರೆ.. ಬಿಜೆಪಿ ಹಿಂದುತ್ವ ತಿರಸ್ಕರಿಸುತ್ತಾರೆ: ಉದ್ಧವ್‌ ಠಾಕ್ರೆ

    ಗಡಿಗಳಲ್ಲಿ ಕ್ರೇನ್ ಮತ್ತು ಕಂಟೇನರ್‌ಗಳನ್ನು ತಂದಿಡಲಾಗಿದ್ದು, ರೈತರು ದೆಗಲಿ ಪ್ರವೇಶ ಮಾಡಲು ಯತ್ನಿಸಿದ್ರೆ ಹೆದ್ದಾರಿಯನ್ನೇ ಬಂದ್ ಮಾಡಲು ಪೊಲೀಸರು ಯೋಜಿಸಿದ್ದಾರೆ. ಇದರೊಂದಿಗೆ ಯಾವುದೇ ಅನಾಹುತಕಾರಿ ಘಟನೆಗಳನ್ನು ತಡೆಯಲು ಹೆಚ್ಚುವರಿ ಪೊಲೀಸ್ ಭದ್ರತೆಯನ್ನ ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆ. ಆದ್ರೆ ಬ್ಯಾರಿಕೇಡ್‌ಗಳ ಅಸ್ತ್ರವನ್ನು ಭೇದಿಸಲು ರೈತರು ತಮ್ಮ ಟ್ರ್ಯಾಕ್ಟರ್‌ಗಳನ್ನೇ ಹಿಟಾಚಿ ರೂಪಕ್ಕೆ ಪರಿವರ್ತಿಸಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಪತಿ-ಪತ್ನಿಯ ವೈಮನಸ್ಸಿನಿಂದ ನಡೆದೇಹೋಯ್ತು ಘೋರ ದುರಂತ – ಮಹಿಳೆ ಮೇಲೆ ಗ್ಯಾಂಗ್‌ ರೇಪ್‌