Tag: ದೆಹಲಿ ಧಾರ್ಮಿಕ ಸಭೆ

  • ತಮಿಳುನಾಡಿನಲ್ಲಿ ಇಂದು ಒಂದೇ ದಿನ 102 ಕೊರೊನಾ ಪ್ರಕರಣಗಳು ಪತ್ತೆ

    ತಮಿಳುನಾಡಿನಲ್ಲಿ ಇಂದು ಒಂದೇ ದಿನ 102 ಕೊರೊನಾ ಪ್ರಕರಣಗಳು ಪತ್ತೆ

    – ದೆಹಲಿಗೆ ಹೋಗಿದ್ದ 364 ಜನರಿಗೆ ಕೊರೊನಾ ಸೋಂಕು

    ಚೆನ್ನೈ: ತಮಿಳುನಾಡಿನಲ್ಲಿ ಇಂದು ಒಂದೇ ದಿನ 102 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ತಮಿಳುನಾಡಿನ ಹೆಲ್ತ್ ಸೆಕ್ರಟರಿ ಬೀಲಾ ರಾಜೇಶ್ ಅವರು ಮಾಹಿತಿ ನೀಡಿದ್ದಾರೆ.

    ಇಂದು ಕೊರೊನಾ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಬೀಲಾ ರಾಜೇಶ್, ಇಂದು ಒಂದೇ ದಿನ ತಮಿಳುನಾಡಿನಲ್ಲಿ ಹೊಸ 102 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ತಮಿಳುನಾಡಿನಲ್ಲಿ ಕೊರೊನಾ ಸೋಂಕಿತ ಸಂಖ್ಯೆ 411 ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

    ಇಂದು ತಮಿಳುನಾಡಿನಲ್ಲಿ 102 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಅವುಗಳಲ್ಲಿ 100 ಜನರು ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಮ್ಮ ರಾಜ್ಯದಲ್ಲಿ ಒಟ್ಟು ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 411 ಆಗಿದ್ದು, ಅವುಗಳಲ್ಲಿ 364 ಸೋಂಕಿತರು ದೆಹಲಿಯ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಜ್ಯದ ಒಟ್ಟು 1,200 ಜನರನ್ನು ಪತ್ತೆ ಮಾಡಲಾಗಿದೆ. ಇವರೆಲ್ಲರನ್ನೂ ಕ್ಯಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ಬೀಲಾ ರಾಜೇಶ್ ಹೇಳಿದ್ದಾರೆ.

    ಇದಕ್ಕೂ ಮುನ್ನ ಮಾತನಾಡಿದ್ದ ತಮಿಳುನಾಡಿನ ಆರೋಗ್ಯ ಸಚಿವ ಸಿ ವಿಜಯಬಾಸ್ಕರ್, ನಮ್ಮ ರಾಜ್ಯದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಏಳು ಜನರು ಸೇರಿದಂತೆ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 411 ತಲುಪಿದೆ. 1,580 ಕೊರೊನಾ ವೈರಸ್ ಸೋಂಕಿತ ಮತ್ತು ಶಂಕಿತ ಜನರನ್ನು ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದಾರೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದರು.

    ಇನ್ನೂ ಕೇರಳದಲ್ಲಿ ಇಂದು 9 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಕಾಸರಗೋಡಿನಿಂದ 7 ಮತ್ತು ಕಣ್ಣೂರು ಮತ್ತು ತ್ರಿಶೂರ್ನಲ್ಲಿ ತಲಾ 1 ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ದೆಹಲಿಯ ನಿಜಾಮುದ್ದೀನ್‍ನಲ್ಲಿ ನಡೆದ ಜಮಾತ್ ಕಾರ್ಯಕ್ರಮದಲ್ಲಿ 3 ಜನರು ಭಾಗವಹಿಸಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 295ಕ್ಕೇರಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

  • ದೆಹಲಿಗೆ ಧಾರ್ಮಿಕ ಸಭೆಗೆ ಹೋದವರು ಕೊಡಗಿಗೆ ಬಂದಿಲ್ಲ: ಎಸ್‍ಪಿ ಸ್ಪಷ್ಟನೆ

    ದೆಹಲಿಗೆ ಧಾರ್ಮಿಕ ಸಭೆಗೆ ಹೋದವರು ಕೊಡಗಿಗೆ ಬಂದಿಲ್ಲ: ಎಸ್‍ಪಿ ಸ್ಪಷ್ಟನೆ

    ಮಡಿಕೇರಿ: ದೆಹಲಿಯ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಗೆ ಕೊಡಗಿನಿಂದ ಭಾಗವಹಿಸಿದ್ದವರು ಕೊಡಗಿಗೆ ವಾಪಸ್ ಬಂದೇ ಇಲ್ಲ. ಹೀಗಾಗಿ ಜಿಲ್ಲೆಯ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೊಡಗು ಎಸ್‍ಪಿ ಸುಮನ್ ಡಿ ಪನ್ನೇಕರ್ ಸ್ಪಷ್ಟಪಡಿಸಿದ್ದಾರೆ.

    ದೆಹಲಿಯಲ್ಲಿ ನಡೆದ ಸಭೆಯಲ್ಲಿ 11 ಜನರು ಭಾಗವಹಿಸಿದ್ದವರು. ಜೊತೆಗೆ ವಾಪಸ್ ಬರಲು ಟಿಕೆಟ್ ಕೂಡ ಬುಕ್ ಮಾಡಿದ್ದರು. ಆದರೆ ದೇಶದಲ್ಲಿ ಲಾಕ್ ಡೌನ್ ಆಗಿದ್ದರಿಂದ ಯಾರೂ ಕೂಡ ವಾಪಸ್ ಬಂದಿಲ್ಲ. 11 ಜನರಲ್ಲಿ ಮುಖ್ಯವಾಗಿ 7 ಜನರು ಮಾತ್ರ ಸಭೆಯಲ್ಲಿ ಭಾಗವಹಿಸಿದ್ದಾರೆ. ಎಲ್ಲರೂ ದೆಹಲಿಯ ಆಸ್ಪತ್ರೆಗಳಲ್ಲೇ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

    11 ಜನರಲ್ಲಿ ಇಬ್ಬರು ಸಭೆಗೆ ಭಾಗವಹಿಸಲು ಹೋಗಿದ್ದವರಲ್ಲ. ಬದಲಾಗಿ ಸಭೆ ನಡೆದ ಪ್ರದೇಶದಲ್ಲಿ ಇದ್ದವರು. ಇವರು ಮಾರ್ಚ್ 9ರಂದೇ ಕೊಡಗಿಗೆ ವಾಪಸ್ ಆಗಿದ್ದು, ಅಂದಿನಿಂದ ಹೋಂ ಕ್ವಾರಂಟೈನ್ ಮಾಡಿ ಆ ಅವಧಿಯನ್ನು ಮುಗಿಸಿ ಆರೋಗ್ಯವಾಗಿದ್ದಾರೆ. ಇಬ್ಬರು ಸೈನಿಕರು ಧರ್ಮ ಸಭೆಯ ಸಂದರ್ಭದಲ್ಲಿ ಆ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಿ, ಕೊಡಗಿಗೆ ವಾಪಸ್ ಆಗಿದ್ದು, ಅವರಲ್ಲಿ ಒಬ್ಬರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಇನ್ನೊಬ್ಬರು ಹಾಸನದ ಅವರ ಸಂಬಂಧಿಕರ ಮನೆಗೆ ತೆರಳಿದ್ದು, ಅಲ್ಲಿಯೇ ಇದ್ದಾರೆ. ಈ ಕುರಿತು ಅಲ್ಲಿನ ಎಸ್‍ಪಿ ಅವರೊಂದಿಗೆ ಮಾತನಾಡಿ ಮಾಹಿತಿ ನೀಡಲಾಗಿದೆ. ಕೆಲವು ಮಾಧ್ಯಮಗಳಲ್ಲಿ ಕೊಡಗಿನಲ್ಲೇ ಇದ್ದಾರೆ ಎಂದು ಸುಳ್ಳು ಸುದ್ದಿ ಪ್ರಕಟವಾಗಿದೆ. ಇದು ಎಲ್ಲವು ಸುಳ್ಳು ಜನರು ಯಾರು ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಎಸ್‍ಪಿ ಹೇಳಿದರು.