Tag: ದೆಹಲಿ ವಿಧಾನಸಭೆ ಚುನಾವಣೆ

  • ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ: ಬೊಮ್ಮಾಯಿ

    ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ: ಬೊಮ್ಮಾಯಿ

    – ರಾಜ್ಯ ಬಿಜೆಪಿ ಗೊಂದಲ ಸುಖಾಂತ್ಯವಾಗುವ ವಿಶ್ವಾಸವಿದೆ ಎಂದ ಸಂಸದ

    ದಾವಣಗೆರೆ: ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

    ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ವಿಧಾನಸಭೆ ಚುನಾವಣೆ ಸ್ಪಷ್ಟ ಸಂದೇಶ ನೀಡಿದೆ. ಯಾರು ದೇಶದ ಬಗ್ಗೆ ಚಿಂತನೆ ಮಾಡುತ್ತಾರೆ ಅವರು ದೇಶದ ಅಭಿವೃದ್ಧಿ ಮಾಡುತ್ತಾರೆ. ಯಾರು ದೇಶ ಕಟ್ಟುತ್ತಾರೆ ಅವರಿಗೆ ಜನ ಬೆಂಬಲ ಇದೆ ಎನ್ನುವುದು ಬಹಳ ಸ್ಪಷ್ಟವಾಗಿದೆ. ದೇಶದ ಹಿತವನ್ನು ಮರೆತು ವಿದೇಶದಲ್ಲಿ ಮಾತನಾಡುವವರಿಗೆ ಜನರು ಪಾಠ ಕಲಿಸಿದ್ದಾರೆ ಎಂದರು.ಇದನ್ನೂ ಓದಿ: ಇಂಗ್ಲೆಂಡ್ ಗಾಯಕ ಎಡ್ ಶೀರನ್ ಬೀದಿ ಬದಿಯ ಪ್ರದರ್ಶನಕ್ಕೆ ಬ್ರೇಕ್‌ ಹಾಕಿದ ಪೊಲೀಸರು

    ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ತಮ್ಮ ಸೋಲನ್ನು ಒಪ್ಪಿಕೊಳ್ಳದೇ ಕುಂಟು ನೆಪ ಹೇಳುವುದು ನಾಯಕನ ಲಕ್ಷಣ ಅಲ್ಲ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ತಿಳಿಸಿದರು.

    ನಮ್ಮ ಹೈಕಮಾಂಡ್ ಗಟ್ಟಿಯಾಗಿದೆ:
    ರಾಜ್ಯ ಬಿಜೆಪಿಯಲ್ಲಿ (BJP) ಯಾವುದೇ ಗೊಂದಲ ಇಲ್ಲ. ನಮ್ಮದು ಪ್ರಜಾಪ್ರಭುತ್ವ ಇರುವ ಪಕ್ಷ. ನಮ್ಮ ಹೈಕಮಾಂಡ್ ಬಹಳ ಗಟ್ಟಿಯಾಗಿದೆ. ಈಗ ದೆಹಲಿ ಚುನಾವಣೆ ಮುಗಿದಿದೆ. ಸಂಘಟನೆಗೆ ಹೆಚ್ಚು ಸಮಯ ನೀಡುತ್ತಾರೆ. ಆಗ ಕರ್ನಾಟಕದ ಬಗ್ಗೆಯೂ ನಿರ್ಣಯ ಆಗುತ್ತದೆ. ಎಲ್ಲವೂ ಸುಖಾಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಹೆಸರು ಸೂಚಿಸಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಯಾರ ಹೆಸರನ್ನೂ ಸೂಚಿಸಿಲ್ಲ. ನಾನು ಸಂಸದನಾಗಿ ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ನಿಮ್ಮ ಮೂಲಗಳಿಗೆ ನೀವು ಉತ್ತರ ಕೊಡಬೇಕು. ಏನೇ ಇದ್ದರೂ ಪಕ್ಷದ ಹೈಕಮಾಂಡ್ ಒಳ್ಳೆಯ ತೀರ್ಮಾನ ಮಾಡುತ್ತದೆ ಎನ್ನುವ ವಿಶ್ವಾಸ ಇದೆ. ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತಾರೋ ಅವರೇ ಉತ್ತಮ ಎಂದರು.ಇದನ್ನೂ ಓದಿ:

  • Delhi Election Results | ತುಷ್ಟೀಕರಣ ರಾಜಕೀಯವನ್ನು ತಿರಸ್ಕರಿಸಿದೆ: ಹೆಚ್‌ಡಿಕೆ

    Delhi Election Results | ತುಷ್ಟೀಕರಣ ರಾಜಕೀಯವನ್ನು ತಿರಸ್ಕರಿಸಿದೆ: ಹೆಚ್‌ಡಿಕೆ

    – ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಅವರನ್ನು ಅಭಿನಂದಿಸಿದ ಕೇಂದ್ರ ಸಚಿವ

    ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದರು.

    ದೆಹಲಿ ವಿಧಾನಸಭಾ ಫಲಿತಾಂಶದ (Dehli Assembly Election) ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿಸಿದ್ದಾರೆ.ಇದನ್ನೂ ಓದಿ: ಚಿಕ್ಕಬಳ್ಳಾಪುರ | ಲಂಕಾಗೆ ಲಗಾಮು ಹಾಕಿ ಭಾರತ – 6 ರನ್‌ಗಳ ರೋಚಕ ಜಯ

    ಪ್ರಧಾನಿ ಮೋದಿ ಅವರು, ಗೃಹ ಸಚಿವ ಅಮಿತ್ ಶಾ ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ತಿಳಿಸಿದರು.

    ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ಧಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ಪ್ರತಿಪಾದಿಸಿದರು.

    ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಹೇಳಿದರು.ಇದನ್ನೂ ಓದಿ: ಶಿವಣ್ಣ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಡಿಸಿಎಂ

     

  • 500 ರೂ.ಗೆ ಗ್ಯಾಸ್ ಸಿಲಿಂಡರ್, 300 ಯೂನಿಟ್ ವಿದ್ಯುತ್ ಉಚಿತ – ದೆಹಲಿ ಚುನಾವಣೆಗೆ `ಕೈ’ ಗ್ಯಾರಂಟಿ

    500 ರೂ.ಗೆ ಗ್ಯಾಸ್ ಸಿಲಿಂಡರ್, 300 ಯೂನಿಟ್ ವಿದ್ಯುತ್ ಉಚಿತ – ದೆಹಲಿ ಚುನಾವಣೆಗೆ `ಕೈ’ ಗ್ಯಾರಂಟಿ

    ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗಾಗಿ (Delhi Assembly Election) ಕಾಂಗ್ರೆಸ್‌ (Congress) ಪಕ್ಷ ಮತ್ತೆರೆಡು ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ.ಇದನ್ನೂ ಓದಿ: ಯಕ್ಷಗಾನದ ಟೆಂಟ್‌ಗೆ ನುಗ್ಗಿದ ಪೊಲೀಸರು – ಈಗ ಕಾಂಗ್ರೆಸ್ Vs ಬಿಜೆಪಿ ಜಟಾಪಟಿ

    ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಫೆ.5 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೆಹಲಿ ನಿವಾಸಿಗಳಿಗೆ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು, ಈ ಮೂಲಕ 500 ರೂ. ಎಲ್‌ಪಿಜಿ ಸಿಲಿಂಡರ್, ಉಚಿತ ಪಡಿತರ ಕಿಟ್ ಮತ್ತು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಜೊತೆಗೆ ಕಾಂಗ್ರೆಸ್ ತನ್ನ ಐದು ಭರವಸೆಗಳನ್ನು ಪೂರೈಸುತ್ತದೆ ಎಂದು ತಿಳಿಸಿದರು.

    ಇದಕ್ಕೂ ಮುನ್ನ `ಜೀವನ್ ರಕ್ಷಾ’ ಹೆಸರಿನಲ್ಲಿ 25 ಲಕ್ಷ ರೂ. ವಿಮೆ, `ಪ್ಯಾರಿ ದೀದಿ’ ಯೋಜನೆಯಡಿ 2,500 ರೂ. ನೀಡುವ ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದ್ದರು. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ `ಪ್ಯಾರಿ ದೀದಿ’ ಯೋಜನೆಯನ್ನು ಘೋಷಿಸಿದ್ದರು. ಅಲ್ಲದೇ ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು.ಇದನ್ನೂ ಓದಿ: ಸತತ ಸೋಲಿನ ಬಳಿಕ ಬಿಸಿ ಮುಟ್ಟಿಸಿದ ಬಿಸಿಸಿಐ – ಟೀಂ ಇಂಡಿಯಾ ಆಟಗಾರರಿಗೆ ಮತ್ತೊಂದು ಟಫ್‌ ರೂಲ್ಸ್‌

  • ಅಮಿತ್ ಶಾ ಹೇಳಿಕೆಗೆ ತಿರುಗೇಟು – ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್‌ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್

    ಅಮಿತ್ ಶಾ ಹೇಳಿಕೆಗೆ ತಿರುಗೇಟು – ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್‌ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್

    ನವದೆಹಲಿ: ಡಾ. ಬಿ.ಆರ್ ಅಂಬೇಡ್ಕರ್ (BR Ambedkar) ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಗದ್ದಲಗಳು ನಡೆಯುತ್ತಿರುವ ಹೊತ್ತಲ್ಲೇ ದಲಿತ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಹೆಸರಿನ ವಿದ್ಯಾರ್ಥಿ ವೇತನ ಯೋಜನೆಯನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಘೋಷಿಸಿದ್ದಾರೆ.

    ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ನಡೆಸುತ್ತಿರುವ ಕೇಜ್ರಿವಾಲ್ ಹೊಸ ಯೋಜನೆ ಘೋಷಿಸಿದರು. ಸಂವಿಧಾನದ ಪಿತಾಮಹ ಬಾಬಾ ಸಾಹೇಬರ ವಿರುದ್ಧ ಅಮಿತ್ ಶಾ (Amit Shah) ಅವರ “ಅಗೌರವ” ಹೇಳಿಕೆಗೆ ಪ್ರತಿಕ್ರಿಯೆಯಾಗಿ “ಡಾ.ಅಂಬೇಡ್ಕರ್ ಸಮ್ಮಾನ್” ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.ಇದನ್ನೂ ಓದಿ: 9/11 ದಾಳಿಯಂತೆ ರಷ್ಯಾ ಬಹುಮಹಡಿ ಕಟ್ಟಡಗಳ ಮೇಲೆ ಡ್ರೋನ್‌ ದಾಳಿ

    ವಿಧಾನಸಭಾ ಚುನಾವಣೆಯಲ್ಲಿ ಎಎಪಿ (AAP) ಗೆದ್ದರೆ ವಿದೇಶಿ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆದ ದಲಿತ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ಧನಸಹಾಯ ನೀಡಲಿದೆ. ದೆಹಲಿಯ ಯಾವುದೇ ದಲಿತ ವಿದ್ಯಾರ್ಥಿಯು ಹಣದ ಕೊರತೆಯಿಂದಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ತಮ್ಮ ಅಧ್ಯಯನವನ್ನು ತ್ಯಜಿಸಬಾರದು ಎಂದು ಕೇಜ್ರಿವಾಲ್ ತಮ್ಮ ಪ್ರಚಾರದಲ್ಲಿ ತಿಳಿಸಿದರು.

    ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅ್ಯಂಡ್ ಪೊಲಿಟಿಕಲ್ ಸೈನ್ಸ್‌ನಲ್ಲಿ ಓದುವಾಗ ಹಣದ ಕೊರತೆಯಿಂದ ತಮ್ಮ ಶಿಕ್ಷಣವನ್ನು ಮಧ್ಯದಲ್ಲಿ ನಿಲ್ಲಿಸಬೇಕಾಯಿತು. ಅವರು ಮನೆಗೆ ಹಿಂದಿರುಗಿ ಹಣದ ವ್ಯವಸ್ಥೆ ಮಾಡಿಕೊಂಡು ಹಿಂತಿರುಗಿ ಅವರ ಶಿಕ್ಷಣವನ್ನು ಪೂರ್ಣಗೊಳಿಸಿದರು ಎಂದರು.

    ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಅಪಹಾಸ್ಯ ಮಾಡುತ್ತಿದ್ದಾರೆ. ಅವರ ಹೇಳಿಕೆಯಿಂದ ನನಗೂ ಸೇರಿ ಕೋಟ್ಯಂತರ ಅನುಯಾಯಿಗಳಿಗೆ ನೋವಾಗಿದೆ. ಸ್ವತಂತ್ರ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಯಾರಾದರೂ ಸಂಸತ್ತಿನಲ್ಲಿ ಅಪಹಾಸ್ಯ ಮಾಡುತ್ತಾರೆಂದು ಯಾರೂ ಊಹಿಸಿರಲಿಲ್ಲ. ಅಮಿತ್ ಶಾ ಅವರ ಅಗೌರವದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ನಾನು ಈ ಘೋಷಣೆ ಮಾಡುತ್ತಿದ್ದೇನೆ. ಯೋಜನೆಯಲ್ಲಿ ಸರ್ಕಾರಿ ನೌಕರರ ಮಕ್ಕಳನ್ನೂ ಸೇರಿಸಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ಬಾಂಗ್ಲಾದಲ್ಲಿ ಮುಂದುವರಿದ ಹಿಂದೂ ದೇವಾಲಗಳ ಮೇಲಿನ ದಾಳಿ – 2 ದಿನಗಳಲ್ಲಿ 8 ವಿಗ್ರಹ ಧ್ವಂಸ

  • Delhi Assembly Election | 20 ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟಿಸಿದ ಆಪ್

    Delhi Assembly Election | 20 ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟಿಸಿದ ಆಪ್

    – ಮನೀಷ್ ಸಿಸೋಡಿಯಾ ಕ್ಷೇತ್ರ ಬದಲಾವಣೆ

    ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ (Delhi Assembly Election) ಆಮ್ ಆದ್ಮಿ ಪಕ್ಷ (Aam Aadmi Party) 20 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮನೀಷ್ ಸಿಸೋಡಿಯಾ (Manisha Sisodia) ಅವರ ಕ್ಷೇತ್ರದಲ್ಲಿ ಬದಲಾವಣೆಯಾಗಿದೆ.

    70 ವಿಧಾನಸಭಾ ಕ್ಷೇತ್ರಗಳಿಗೆ 2025ರ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದ್ದು, ಇಂದು (ಡಿ.9) ಆಮ್ ಆದ್ಮಿ ಪಕ್ಷ 20 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದಕ್ಕೂ ಮುಂಚೆ ನ.21 ರಂದು 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿತ್ತು.ಇದನ್ನೂ ಓದಿ: 5 ದಿನಗಳ ವ್ರತ ಆಚರಣೆ – ಹನುಮ ಮಾಲೆ ಧರಿಸಿದ ಜನಾರ್ದನ ರೆಡ್ಡಿ

    ಮಾಜಿ ಡಿಸಿಎಂ ಹಾಗೂ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರು ದೆಹಲಿಯ ಪಟ್ಪರ್‌ಗಂಜ್ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಈ ಬಾರಿ ಜಂಗ್‌ಪುರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಇತ್ತೀಚೆಗೆ ಎಎಪಿ ಸೇರ್ಪಡೆಗೊಂಡಿದ್ದ ಅವಧ್ ಓಜಾ ಪಟ್ಪರ್‌ಗಂಜ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

    ಶಹದಾರದಿಂದ ಕ್ಷೇತ್ರದಿಂದ ಜಿಂಟೆಂಡರ್ ಸಿಂಗ್ ಶುಂಟಿ, ಇತ್ತೀಚೆಗೆ ಬಿಜೆಪಿ ತೊರೆದು ಆಪ್ ಸೇರಿದ್ದ ಸುರೀಂದರ್ ಪಾಲ್ ಸಿಂಗ್ ಬಿಟ್ಟು ಅವರು ತಿಮಾರ್‌ಪುರ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಮೊದಲು ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಬಿಟ್ಟು ಎಎಪಿ ಸೇರಿದ್ದ 6 ನಾಯಕರು ಸೇರಿದಂತೆ ಒಟ್ಟು 11 ಅಭ್ಯರ್ಥಿಗಳ ಹೆಸರಿತ್ತು. ಬಿಜೆಪಿಯಿಂದ ಬ್ರಹ್ಮ ಸಿಂಗ್ ತನ್ವಾರ್, ಬಿಬಿ ತ್ಯಾಗಿ, ಅನಿಲ್ ಝಾ ಹಾಗೂ ಕಾಂಗ್ರೆಸ್‌ನಿಂದ ಜುಬೇರ್ ಚೌಧರಿ, ವೀರ್ ಸಿಂಗ್ ದಿಂಗನ್, ಸೋಮೇಶ್ ಶೋಕೀನ್ ಆಮ್ ಆದ್ಮಿ ಪಕ್ಷವನ್ನು ಸೇರಿದ್ದರು. ಇವರನ್ನು ಒಳಗೊಂಡಂತೆ ರಾಮ್ ಸಿಂಗ್ ನೇತಾಜಿ, ಗೌರವ್ ಶರ್ಮಾ, ಮನೋಜ್ ತ್ಯಾಗಿ, ದೀಪಕ್ ಸಿಂಘಾಲ್ ಹಾಗೂ ಸರಿತಾ ಸಿಂಗ್‌ರವರ ಹೆಸರು ಪಟ್ಟಿಯಲ್ಲಿದೆ.

    ಸದ್ಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ 31 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಇನ್ನೂ 39 ಕ್ಷೇತ್ರಗಳಿಗೆ ಘೋಷಣೆ ಮಾಡಬೇಕಿದೆ.ಇದನ್ನೂ ಓದಿ:ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಅವಿರೋಧ ಆಯ್ಕೆ

  • Delhi Assembly Election | 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಎಪಿ

    Delhi Assembly Election | 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಎಪಿ

    ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ (Assembly Election) ಆಮ್ ಆದ್ಮಿ ಪಕ್ಷ (Aam Aadmi Party) 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    70 ವಿಧಾನಸಭಾ ಕ್ಷೇತ್ರಗಳಿಗೆ 2025ರ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದ್ದು, ಇಂದು (ನ.21) 11 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಪಟ್ಟಿ ಬಿಡುಗಡೆ ಮಾಡಿದೆ.ಇದನ್ನೂ ಓದಿ: ಅದಾನಿ ವಿರುದ್ಧದ ಪ್ರಕರಣ: ಷೇರುಪೇಟೆಯಲ್ಲಿ ಅದಾನಿ ಸಮೂಹದ ಷೇರುಗಳ ಮೌಲ್ಯದಲ್ಲಿ ಭಾರೀ ಕುಸಿತ

    ಬಿಜೆಪಿ ಹಾಗೂ ಕಾಂಗ್ರೆಸ್ ಬಿಟ್ಟು ಎಎಪಿ ಸೇರಿದ್ದ 6 ನಾಯಕರು ಸೇರಿದಂತೆ ಒಟ್ಟು 11 ಅಭ್ಯರ್ಥಿಗಳ ಹೆಸರು ಪಟ್ಟಿಯಲ್ಲಿದೆ. ಬಿಜೆಪಿಯಿಂದ ಬ್ರಹ್ಮ ಸಿಂಗ್ ತನ್ವಾರ್, ಬಿಬಿ ತ್ಯಾಗಿ, ಅನಿಲ್ ಝಾ ಹಾಗೂ ಕಾಂಗ್ರೆಸ್‌ನಿಂದ ಜುಬೇರ್ ಚೌಧರಿ, ವೀರ್ ಸಿಂಗ್ ದಿಂಗನ್, ಸೋಮೇಶ್ ಶೋಕೀನ್ ಆಮ್ ಆದ್ಮಿ ಪಕ್ಷವನ್ನು ಸೇರಿದ್ದರು. ಇವರನ್ನು ಒಳಗೊಂಡಂತೆ ರಾಮ್ ಸಿಂಗ್ ನೇತಾಜಿ, ಗೌರವ್ ಶರ್ಮಾ, ಮನೋಜ್ ತ್ಯಾಗಿ, ದೀಪಕ್ ಸಿಂಘಾಲ್ ಹಾಗೂ ಸರಿತಾ ಸಿಂಗ್‌ರವರ ಹೆಸರು ಪಟ್ಟಿಯಲ್ಲಿದೆ.

    2020 ಚುನಾವಣೆಯಲ್ಲಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಮೂರು ಹಾಲಿ ಶಾಸಕರನ್ನು ಎಎಪಿ ಕೈಬಿಡಲು ನಿರ್ಧರಿಸಿದೆ.

    ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಎಎಪಿ ಸಂಚಾಲಕ ಗೋಪಾಲ್ ರೈ (Gopal Rai), ಈ 11 ಅಭ್ಯರ್ಥಿಗಳ ಪಟ್ಟಿಯೊಂದಿಗೆ ಚುನಾವಣಾ ಪ್ರಚಾರವನ್ನು ತ್ರೀವಗೊಳಿಸುತ್ತೇವೆ. 2020ರ ವಿಧಾನಸಭಾ ಚುನಾವಣೆಯಲ್ಲಿ ಸಾರ್ವಜನಿಕರ ಪ್ರತಿಕ್ರಿಯೆ ಆಧಾರದ ಮೇಲೆ ಹಾಲಿ ಶಾಸಕರನ್ನು ಕೈಬಿಟ್ಟಿದ್ದೇವೆ. ಇದೀಗ ನಾವು ಅತ್ಯುತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ ಎಂದು ತಿಳಿಸಿದರು.

    2015ರ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ ಎಎಪಿ 67 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. 2020ರ ಚುನಾವಣೆಯಲ್ಲಿ 62 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.ಇದನ್ನೂ ಓದಿ: 4 ಮಕ್ಕಳು ಹೆತ್ತರೆ 1 ಲಕ್ಷ ರೂ. ಬಹುಮಾನ – ಕೊಡವ ಸಮಾಜದಿಂದ ವಿಶಿಷ್ಟ ಆಫರ್

  • ಕೇಜ್ರಿವಾಲ್‍ಗೆ ಟಕ್ಕರ್ ನೀಡಲು ಕಾಂಗ್ರೆಸ್, ಬಿಜೆಪಿಯಲ್ಲಿಲ್ಲ ಕಲಿಗಳು

    ಕೇಜ್ರಿವಾಲ್‍ಗೆ ಟಕ್ಕರ್ ನೀಡಲು ಕಾಂಗ್ರೆಸ್, ಬಿಜೆಪಿಯಲ್ಲಿಲ್ಲ ಕಲಿಗಳು

    – ಕೇಜ್ರಿವಾಲ್ ವಿರುದ್ಧ ಸ್ಪರ್ಧೆಗೆ ಅಭ್ಯರ್ಥಿಗಳ ಹುಡುಕಾಟ

    ನವದೆಹಲಿ: ದೆಹಲಿಯ ವಿಧಾನಸಭೆಗೆ ಫೆಬ್ರವರಿ 8 ರಂದು ಚುನಾವಣೆ ನಡೆಯಲಿದೆ. ಆಮ್ ಆದ್ಮಿ 70, ಕಾಂಗ್ರೆಸ್ 54, ಬಿಜೆಪಿ 57 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿವೆ. ಆದರೆ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ಸ್ಪರ್ಧಿಸುವ ಅಭ್ಯರ್ಥಿಯನ್ನೇ ಕಾಂಗ್ರೆಸ್, ಬಿಜೆಪಿ ಇನ್ನೂ ಅಂತಿಮಗೊಳಿಸಿಲ್ಲ.

    ನವದೆಹಲಿ ಕ್ಷೇತ್ರದಿಂದ ಸಿಎಂ ಅರವಿಂದ ಕೇಜ್ರಿವಾಲ್ ಸ್ಪರ್ಧಿಸುತ್ತಿದ್ದು, ಅವರಿಗೆ ಪೈಪೋಟಿ ನೀಡುವ ಅಭ್ಯರ್ಥಿ ಹುಡುಕಾಟದಲ್ಲಿ ಕಾಂಗ್ರೆಸ್, ಬಿಜೆಪಿ ಮಗ್ನವಾಗಿವೆ. ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್ ವಿರುದ್ಧ 2013ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಅರವಿಂದ ಕೇಜ್ರಿವಾಲ್ ಐತಿಹಾಸಿಕ ಗೆಲವು ಸಾಧಿಸಿದ್ದರು. 2015 ರಲ್ಲಿ ಬಿಜೆಪಿಯ ನೂಪುರ್ ಶರ್ಮಾ, ಕಾಂಗ್ರೆಸ್ ನ ಮಾಜಿ ಸಿಎಂ ಕಿರಣ್ ವಾಲಿಯಾ ಕೇಜ್ರಿವಾಲ್ ವಿರುದ್ಧ ಸ್ಪರ್ಧಿಸಿ ಸೋಲನ್ನಪಿದ್ದರು.

    ಸಿಎಂಗಿಲ್ಲ ಎದುರಾಳಿ:
    ಈ ಬಾರಿ ಕೇಜ್ರಿವಾಲ್ ವಿರುದ್ಧ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಲೆಕ್ಕಚಾರದಲ್ಲಿರುವ ಬಿಜೆಪಿ, ದೆಹಲಿ ಘಟಕದ ಅಧ್ಯಕ್ಷ, ಮನೋಜ್ ತಿವಾರಿ ಅಥವಾ ಮಾಜಿ ಸಿಎಂ, ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್‍ಗೆ ಟಿಕೆಟ್ ನೀಡಬಹುದು ಎನ್ನಲಾಗಿದೆ. ಇತ್ತ ಕಾಂಗ್ರೆಸ್ ಜಾತಿ ಲೆಕ್ಕಾಚಾರದಲ್ಲಿ ಪ್ರಬಲ ಅಭ್ಯರ್ಥಿ ಹುಡುಕಾಟ ನಡೆಸಿದೆ. ಅಲ್ಲದೆ ಮಾಜಿ ಸಿಎಂ ಶೀಲಾ ದೀಕ್ಷಿತ್ ಪುತ್ರಿ ಲತಿಕಾ ದೀಕ್ಷಿತ್ ಗೆ ಟಿಕೆಟ್ ನೀಡಲು ಯೋಚಿಸಿದೆ.

    ಕಾಂಗ್ರೆಸ್, ಬಿಜೆಪಿಗಿಲ್ಲ ಸಿಎಂ ಅಭ್ಯರ್ಥಿ
    ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಚುನಾವಣೆ ಎದುರಿಸುತ್ತಿದ್ದು, ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಘೋಷಿಸಿಕೊಂಡಿದೆ. ಇತ್ತ ಬಿಜೆಪಿ ಮಾತ್ರ ಪ್ರಧಾನಿ ನರೇಂದ್ರ ಮೋದಿ ಚಹರೆ ಮೇಲೆ ಚುನಾವಣಾ ಕಣಕ್ಕೆ ಇಳಿಯಲಿದ್ದು, ಸಿಎಂ ಅಭ್ಯರ್ಥಿಯನ್ನು ಘೋಷಿಸುವುದಿಲ್ಲ ಎಂದಿದೆ. ಕಾಂಗ್ರೆಸ್ ಕೂಡಾ ನಾಯಕರಿಲ್ಲದೆ ಸೊರಗಿದಂತೆ ಕಾಣುತ್ತಿದೆ. ಕಳೆದ ಬಾರಿ ಖಾತೆಯನ್ನೇ ತೆರೆಯದ ಕಾಂಗ್ರೆಸ್, ಈ ಬಾರಿ ಅಕೌಂಟ್ ಒಪನ್ ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸಿದ್ದು, ಸಿಎಂ ಅಭ್ಯರ್ಥಿ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಅಲ್ಲದೆ ಅಜೇಯ ಮಕೇನ್, ಸುಭಾಷ್ ಚೋಪ್ರಾರಂತಹ ಹಿರಿಯ ನಾಯಕರು ಚುನಾವಣಾ ಕಣಕ್ಕಿಳಿಯದಿರುವುದು ಕಾಂಗ್ರೆಸ್‍ಗೆ ಸಂಕಷ್ಟಕ್ಕೀಡು ಮಾಡಿದೆ.