Tag: ದೆಹಲಿ ಹತ್ಯೆ ಕೇಸ್

  • ಬೆಂಗ್ಳೂರಲ್ಲೂ ದೆಹಲಿ ಮಾದರಿಯ ಮರ್ಡರ್ – ಮಹಿಳೆಯನ್ನ ಕೊಂದು, ದೇಹ ಪೀಸ್ ಪೀಸ್ ಮಾಡಿದ ಹಂತಕರು

    ಬೆಂಗ್ಳೂರಲ್ಲೂ ದೆಹಲಿ ಮಾದರಿಯ ಮರ್ಡರ್ – ಮಹಿಳೆಯನ್ನ ಕೊಂದು, ದೇಹ ಪೀಸ್ ಪೀಸ್ ಮಾಡಿದ ಹಂತಕರು

    ಆನೇಕಲ್: ದೆಹಲಿಯಲ್ಲಿ ಶ್ರದ್ಧಾವಾಕರ್ (Shraddha Walker) ಹಾಗೂ ಮುಂಬೈನಲ್ಲಿ ಸರಸ್ವತಿ ವೈದ್ಯ ಹತ್ಯೆ ಪ್ರಕರಣದ ಮಾದರಿಯಲ್ಲೇ ಈಗ ಬೆಂಗಳೂರಿನಲ್ಲೊಂದು ಕೊಲೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ.

    ಬಿಹಾರದಿಂದ ಬೆಂಗಳೂರಿಗೆ (Bengaluru) ಬಂದಿದ್ದ ಯುವಕರು, ಆಸ್ತಿಗಾಗಿ ಮಹಿಳೆಯನ್ನ ಕೊಲೆ ಮಾಡಿ ದೇಹವನ್ನ ಪೀಸ್ ಪೀಸ್ ಮಾಡಿ ಎಸೆದು ಪರಾರಿಯಾಗಿರುವ ಘಟನೆ ಆನೇಕಲ್ ಉಪವಿಭಾಗದ ಬನ್ನೇರುಘಟ್ಟ ಪೋಲೀಸ್ ಠಾಣಾ (Bannerghatta Police Station) ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳ ಪೈಕಿ ಇಂದಲ್ ಕುಮಾರ್ (21) ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮೃತ ಮಹಿಳೆಯನ್ನು ಗೀತಾ (54) ಎಂದು ಗುರುತಿಸಲಾಗಿದೆ.

    ಜೂನ್ 1ರಂದು ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ತನಿಖೆ ಕೈಗೊಂಡಿದ್ದ ಬನ್ನೇರುಘಟ್ಟ ಪೊಲೀಸರು ಹಂತಕರನ್ನ ಪತ್ತೆಹಚ್ಚಲು ವಿಶೇಷ ತಂಡ ರಚನೆ ಮಾಡಿತ್ತು. ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಓರ್ವನ ಬಂಧನವಾಗಿದೆ. ಇದನ್ನೂ ಓದಿ: ದೇಶದ ಕೋಟ್ಯಂತರ ಜನ ಗಡ್ಡ ಬಿಟ್ಟಿದ್ದಾರೆ, ಅವರೆಲ್ಲ ಲಾಡೆನ್ ಆಗುತ್ತಾರಾ? – ಬಿಜೆಪಿಗೆ ಮನೋಜ್ ಝಾ ಪ್ರಶ್ನೆ

    ಏನಿದು ಕ್ರೈಂ ಸ್ಟೋರಿ?
    ಬಿಹಾರದಿಂದ ಬಂದಿದ್ದ ಯುವಕರು ಕೊಲೆಯಾದ ಮಹಿಳೆ (Women) ಗೀತಾ ಮನೆಯಲ್ಲೇ ಬಾಡಿಗೆಗೆ ಇದ್ದರು. ಕೊನೆಗೆ ಮನೆಯನ್ನು ತಮ್ಮ ಹೆಸರಿಗೇ ಮಾಡಿಕೊಡುವಂತೆ ಆಕೆಯನ್ನ ಒತ್ತಾಯಿಸಿದ್ದರು. ಅದಕ್ಕೆ ಒಪ್ಪದೇ ಇದ್ದದ್ದಕ್ಕೆ ಕೊಲೆ ಮಾಡಿದ್ದಾರೆ. ಈ ವಿಚಾರ ಹೊರಗೆ ತಿಳಿಯದಂತೆ ನೋಡಿಕೊಳ್ಳಲು ದೇಹವನ್ನ ತುಂಡರಿಸಿದ್ದಾರೆ. ಮೃತದೇಹದ ಭಾಗಗಳನ್ನ ತುಂಡು ತುಂಡಾಗಿ ಕತ್ತರಿಸಿ ಅಲ್ಲಲ್ಲಿ ಎಸೆದಿದ್ದಾರೆ. ಪ್ಲಾಸ್ಟಿಕ್ ಕವರ್‌ನಲ್ಲಿ ಕತ್ತರಿಸಿದ ಭಾಗಗಳನ್ನ ತುಂಬಿ ಬೇರೆಡೆಗೆ ಸಾಗಿಸಿದ್ದಾರೆ. ಇದನ್ನೂ ಓದಿ: ಕೆ.ಜಿಗೆ 2.75 ಲಕ್ಷಕ್ಕೆ ಮಾರಾಟವಾಯ್ತು ಜಗತ್ತಿನಲ್ಲೇ ದುಬಾರಿ ಮಾವಿನ ಹಣ್ಣು ‘ಮಿಯಾಝಾಕಿ’

    ಮಹಿಳೆಯನ್ನು ಕೊಲೆ ಮಾಡಿದ ನಂತರವೂ ಏನೂ ಆಗಿಲ್ಲವೆನ್ನುವಂತೆ ಆರೋಪಿಗಳು ಒಂದು ದಿನ ಕೆಲಸಕ್ಕೆ ತೆರಳಿದ್ದರು. ಅವರಲ್ಲಿಬ್ಬರು ಕಿರಾತಕರು ಶವದ ಮುಂದೆಯೇ ಕುಳಿತು ಊಟ ಮಾಡುತ್ತಿದ್ದರು. ಕೃತ್ಯ ನಡೆದ ಮೂರು ದಿನಗಳ ಬಳಿಕ ದುರ್ವಾಸನೆ ಬೀರುತ್ತಿದ್ದಂತೆ ಆತಂಕಗೊಂಡ ಆರೋಪಿಗಳು ಮನೆಯ ಹಿಂಭಾಗ ದೇಹದ ಭಾಗಗಳನ್ನ ಬಿಸಾಡಿ ಎಸ್ಕೇಪ್ ಆಗಿದ್ದಾರೆ. ಅದರಲ್ಲಿ ಮಹಿಳೆಯ ತಲೆ ಮತ್ತು ಒಂದು ಕೈ 1 ಕಿಮೀ ದೂರದಲ್ಲಿ ಪತ್ತೆಯಾದರೆ, ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್ ಅರಣ್ಯ ಪ್ರದೇಶದಲ್ಲಿ ರುಂಡ ಪತ್ತೆಯಾಗಿದೆ.

    ಕೃತ್ಯಕ್ಕೂ ಮುನ್ನ ಅತ್ಯಾಚಾರ ಆಗಿರುವ ಕುರಿತು ಪರಿಶೀಲನೆ ಸಹ ನಡೆಯುತ್ತಿದೆ. ಸದ್ಯದಲ್ಲೇ ಪೊಲೀಸರು ಮರಣೋತ್ತರ ಪರೀಕ್ಷೆ ವರದಿ ಪರಿಶೀಲನೆ ಮಾಡಲಿದ್ದಾರೆ. ಒಟ್ಟಿನಲ್ಲಿ ಈ ಕೊಲೆ ಮೇಲ್ನೋಟಕ್ಕೆ ಆಸ್ತಿ ವಿಚಾರಕ್ಕಾಗಿಯೇ ನಡೆದಿರುವುದು ಕಂಡುಬಂದಿದೆ. ಪ್ರಮುಖ ಆರೋಪಿಗಳಾದ ಪಂಕಜ್ ಕುಮಾರ್, ಸುಮೀತ್, ಉಳಿದ ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿಕೆ ನೀಡಿದ್ದಾರೆ.

  • ಪ್ರಬಲ ನಾಯಕನಿಲ್ಲದಿದ್ರೆ ಅಫ್ತಾಬ್‌ನಂಥ ಹಂತಕರು ಪ್ರತಿ ನಗರದಲ್ಲೂ ಹುಟ್ತಾರೆ – ಅಸ್ಸಾಂ ಸಿಎಂ

    ಪ್ರಬಲ ನಾಯಕನಿಲ್ಲದಿದ್ರೆ ಅಫ್ತಾಬ್‌ನಂಥ ಹಂತಕರು ಪ್ರತಿ ನಗರದಲ್ಲೂ ಹುಟ್ತಾರೆ – ಅಸ್ಸಾಂ ಸಿಎಂ

    ಗಾಂಧಿನಗರ: ದೇಶದಲ್ಲಿ ಪ್ರಬಲ ನಾಯಕ ಇಲ್ಲದಿದ್ದರೇ ಅಫ್ತಾಬ್ ಅಮೀನ್ ಪೂನಾವಾಲನಂತಹ (Aftab Ameen Poonawala) ಹಂತಕರು ಪ್ರತಿ ನಗರದಲ್ಲೂ ಹುಟ್ಟುತ್ತಾರೆ ಎಂದು ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ (Himanta Biswa Sarma) ಎಚ್ಚರಿಸಿದ್ದಾರೆ.

    ಗುಜರಾತ್ ಚುನಾವಣಾ (Gujarat Election) ಪ್ರಚಾರ ಸಭೆಯ ಭಾಗವಾಗಿ ಕಚ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಅವರು, ದೆಹಲಿಯ ಶ್ರದ್ಧಾ ಹತ್ಯೆ (Shraddha Murder Case) ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದರು. ದೇಶದಲ್ಲಿ ಪ್ರಬಲ ನಾಯಕನಿಲ್ಲದಿದ್ದರೆ, ಅಫ್ತಾಬ್‌ನಂತಹ ಹಂತಕರು ಪ್ರತಿ ನಗರದಲ್ಲೂ ಹುಟ್ಟುತ್ತಾರೆ. ಆಗ ನಮ್ಮ ಸಮಾಜ ರಕ್ಷಿಸಲು ಸಾಧ್ಯವಾಗುವುದಿಲ್ಲ ಹೇಳಿದ್ದಾರೆ. ಇದನ್ನೂ ಓದಿ: ವಿಮೆ ಹಣಕ್ಕಾಗಿ ಸುಪಾರಿ ಕೊಟ್ಟು ತಂದೆಯನ್ನೇ ಕೊಲ್ಲಿಸಿದ ಮಗ

    ಕೊಲೆ ಪ್ರಕರಣದ ಭೀಕರತೆಗಳನ್ನು ವಿಚಾರಸಿದಾಗ ಇದನ್ನು ಲವ್ ಜಿಹಾದ್ (Love Jihad) ಪ್ರಕರಣ ಎನ್ನಲಾಗಿದೆ. ಅಲ್ಲದೆ ಹಿಂದೂ ಮಹಿಳೆಯರು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಾರೆ ಎಂದು ಆರೋಪಿಸಿದ್ದಾರೆ.  

    ಮೋದಿ ಪರ ಬ್ಯಾಟಿಂಗ್:
    ಮುಂಬೈನಿಂದ ಶ್ರದ್ಧಾಳನ್ನು ಕರೆದುಕೊಂಡು ಬಂದಿದ್ದ ಅಫ್ತಾಬ್ 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ. ಇದೇ ಸಮಯದಲ್ಲಿ ಮತ್ತೊಬ್ಬ ಮಹಿಳೆಯನ್ನು ಕರೆತಂದು ಲೈಂಗಿಕ ಸಂಪರ್ಕ ಮಾಡಿದ್ದಾನೆ. ಇಂತಹ ಕೃತ್ಯಗಳಿಂದ ದೇಶವನ್ನು ರಕ್ಷಿಸಬೇಕಾದರೆ ನಮ್ಮ ದೇಶಕ್ಕೆ ಶಕ್ತಿಯುತ ನಾಯಕನನ್ನು ಹೊಂದಿರಬೇಕು, ರಾಷ್ಟ್ರವನ್ನು ತಮ್ಮ ತಾಯಿ ಎಂದು ಪರಿಗಣಿಸುವವರಾಗಿರಬೇಕು. ಹಾಗಾಗಿ 2024ರಲ್ಲಿ 3ನೇ ಬಾರಿಗೆ ನರೇಂದ್ರ ಮೋದಿ (Narendra Modi) ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದು ಬಹಳ ಮುಖ್ಯ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್‌ಗೆ ಬಲಿಯಾದ್ರೆ ಇದೇ ಗತಿ – ಹೊಸ ಆಯಾಮದಲ್ಲಿ ತನಿಖೆ ನಡೆಸುವಂತೆ VHP ಮನವಿ

    ಏನಿದು ಘಟನೆ?
    ರಾಷ್ಟ್ರ ರಾಜಧಾನಿಯಲ್ಲಿ ತನ್ನೊಂದಿಗೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಗೆಳತಿಯ ಹತ್ಯೆ ಮಾಡಿ, ದೇಹವನ್ನು 35 ತುಂಡುಗಳನ್ನಾಗಿ ಮಾಡಿ, ಅದನ್ನು ಫ್ರಿಡ್ಜ್ನಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಅನೇಕ ಭಯಾನಕ ಸಂಗತಿಗಳು ಹೊರಬಿದ್ದಿವೆ. ಆರೋಪಿ ಅಫ್ತಾಬ್ ಹಾಗೂ ಶ್ರದ್ಧಾ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ ಮೇ 18ರಂದು ಜಗಳವಾದಾಗ ಶ್ರದ್ಧಾಳ ಎದೆಯ ಮೇಲೆ ಕುಳಿತು ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ.

    ಬಳಿಕ ದೇಹವನ್ನು ಕತ್ತರಿಸೋದು ಹೇಗೆ? ಅದನ್ನು ಡಿಎನ್‌ಎಗಳ ಸಾಕ್ಷ್ಯಾಧಾರವೂ ಸಿಗದಂತೆ ದೇಹವನ್ನ ವಿಲೇವಾರಿ ಮಾಡೋದು ಹೇಗೆ ಎಂಬ ಮಾಹಿತಿಗಳ ಬಗ್ಗೆ ಗೂಗಲ್‌ನಲ್ಲಿ ಹುಡುಕಾಡಿದ್ದಾನೆ. ನಂತರ ದೇಹವನ್ನು 35 ಪೀಸ್‌ಗಳಾಗಿ ತಂಡು ಮಾಡಿದ್ದು, ಅದನ್ನು ಸಂಗ್ರಹಿಸಲು 300 ಲೀಟರ್ ಸಾಮರ್ಥ್ಯದ ಹೊಸ ಫ್ರಿಡ್ಜ್ ಸಹ ಖರೀದಿಸಿದ್ದಾನೆ. ದೇಹದ ಮಾಂಸದ ವಾಸನೆ ಹರಡಬಾರದೆಂದು ದಿನವೂ ಅಗರಬತ್ತಿ ಹಚ್ಚಿಡುತ್ತಿದ್ದ. ಈ ನಡುವೆ ಶ್ರದ್ಧಾಳನ್ನು ಕೊಲೆ ಮಾಡಿ ಕೆಲ ದಿನಗಳ ನಂತರ ಮತ್ತೊಬ್ಬ ಮಹಿಳೆಯನ್ನು ತನ್ನ ಅಪಾರ್ಟ್ಮೆಂಟ್‌ಗೆ ಕರೆದು ಸೆಕ್ಸ್ ಮಾಡ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.

    Live Tv
    [brid partner=56869869 player=32851 video=960834 autoplay=true]