Tag: ದೇವರ ಹಿಪ್ಪರಗಿ

  • ಸಿಗರೇಟ್ ಹೊಗೆ ವಿಚಾರಕ್ಕೆ ಮಾರಾಮಾರಿ – ಸಂಧಾನ ಮಾಡೋದಾಗಿ ಹೇಳಿ ಬಿಜೆಪಿ ಮುಖಂಡನಿಂದ ಥಳಿತ?

    ಸಿಗರೇಟ್ ಹೊಗೆ ವಿಚಾರಕ್ಕೆ ಮಾರಾಮಾರಿ – ಸಂಧಾನ ಮಾಡೋದಾಗಿ ಹೇಳಿ ಬಿಜೆಪಿ ಮುಖಂಡನಿಂದ ಥಳಿತ?

    – ಪೈಪ್, ಕೋಲು ಬಳಸಿ ಹಲ್ಲೆ

    ವಿಜಯಪುರ: ಸಿಗರೇಟ್ ಹೊಗೆ ವಿಚಾರದಲ್ಲಿ ನಾಲ್ವರ ಮಧ್ಯೆ ಗಲಾಟೆ ನಡೆದ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪಗಿ ಪಟ್ಟಣದ ಹೊರ ಭಾಗದ ದಾಬಾದಲ್ಲಿ ನಡೆದಿದೆ. ಫೆಬ್ರುವರಿ 22ರ ರಾತ್ರಿ ಗಲಾಟೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಸತೀಶ್ ಬೂದಿಹಾಳ ಮತ್ತು ಈಶ್ವರ್ ಸವದಿ ಸಿಗರೇಟ್ ಸೇದಿ ದಿಲೀಪ್ ಚವ್ಹಾಣ್, ಮಹಾಂತೇಶ್ ಚವ್ಹಾಣ್ ಮುಂದೆ ಹೊಗೆ ಬಿಟ್ಟಿದ್ದಾರೆ. ಇದೇ ವಿಚಾರಕ್ಕೆ ನಾಲ್ವರ ಮಧ್ಯೆ ದಾಬಾದಲ್ಲಿ ಗಲಾಟೆ ನಡೆದಿದೆ. ಈ ಸಂಬಂಧ ದೇವರ ಹಿಪ್ಪರಗಿ ಠಾಣೆಗೆ ದೂರು ಸಲ್ಲಿಸಲು ದಿಲೀಪ್, ಮಹಾಂತೇಶ್ ಮುಂದಾಗಿದ್ದರು. ಈ ವೇಳೆ ಠಾಣೆಗೆ ಬಂದ ಬಿಜೆಪಿ ಮುಖಂಡ ರಮೇಶ್ ಮಸಬಿನಾಳ ಸಂಧಾನ ಮಾಡಿಸೋದಾಗಿ ಹೊರ ಕರೆತಂದ ಹಲ್ಲೆ ನಡೆಸಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ.

    ಹಲ್ಲೆಗೊಳಗಾದ ದಿಲೀಪ್ ಮತ್ತು ಮಹಾಂತೇಶ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳಿದ್ದಾರೆ. ಅಲ್ಲಿಗೆ ಬಂದ ಆರು ಜನರ ಗುಂಪು ಪೈಪ್, ಕೋಲು, ಕ್ಯಾನ್ ಬಳಸಿ ಇಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಎಲ್ಲ ದೃಶ್ಯಗಳು ಆಸ್ಪತ್ರೆಗೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯ ಇಬ್ಬರು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

    ಫೆಬ್ರವರಿ 22ರಂದು ದೂರು ನೀಡಿದ್ರೂ ಪೊಲೀಸರು ಆರೋಪಿಗಳನ್ನ ಬಂಧಿಸಿಲ್ಲ. ರಮೇಶ್ ಮಸಬಿನಾಳ ಒತ್ತಡದಿಂದಾಗಿ ಪೊಲೀಸರು ಆರೋಪಿಗಳ ಬಂಧನಕ್ಕೆ ಮುಂದಾಗುತ್ತಿಲ್ಲ ಎಂದು ಹಲ್ಲೆಗೊಳಗಾದ ಮಹಾಂತೇಶ್, ದಿಲೀಪ್ ಪೋಷಕರು ಆರೋಪಿಸುತ್ತಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಇಲ್ಲದಿದ್ದg ಪೊಲೀಸ್ ಠಾಣೆ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

  • ಉತ್ತರ ಕರ್ನಾಟಕದತ್ತ ಕುಮಾರಸ್ವಾಮಿ ಚಿತ್ತ?

    ಉತ್ತರ ಕರ್ನಾಟಕದತ್ತ ಕುಮಾರಸ್ವಾಮಿ ಚಿತ್ತ?

    ಬೆಂಗಳೂರು: 2018ರಲ್ಲಿ ಹೇಗಾದರೂ ಮಾಡಿ ಸರ್ಕಾರ ರಚಿಸಲೇಬೇಕೆಂದು ತೀರ್ಮಾನಿಸಿರುವ ರಾಜಕೀಯ ಪಕ್ಷಗಳು ಉತ್ತರ ಕರ್ನಾಟಕದತ್ತ ಕಣ್ಣು ಹಾಕಿವೆ. ಈಗ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅವರ ಸರದಿ. ತಮ್ಮ ಮೂಲಕ್ಷೇತ್ರ ರಾಮನಗರವನ್ನು ತೊರೆದು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿವೆ.

    ಪೂರ್ವ ಸಿದ್ಧತೆಯಾಗಿ ನವೆಂಬರ್ ನಲ್ಲಿ ನಾಲ್ಕು ದಿನಗಳ ಕಾಲ ಹೆಚ್‍ಡಿಕೆ ದೇವರ ಹಿಪ್ಪರಗಿ ಪ್ರವಾಸ ಮಾಡಲಿದ್ದಾರೆ. ಕ್ಷೇತ್ರದಲ್ಲಿ ಪ್ರತಿಯೊಂದು ಹಳ್ಳಿಗೆ ಭೇಟಿ ಕೊಟ್ಟು ಮತದಾರರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ನಿಮ್ಮನ್ನು ನಂಬಿ ಬರ್ತೀನಿ. ನನ್ನನ್ನು ಸೋಲಿಸಿದ್ರೆ ನಿಮಗೆ ಕಷ್ಟ. ನೀವು ನನ್ನನ್ನು ಗೆಲ್ಲಿಸಿದ್ರೆ ಮುಂದೆ ನಾನು ರಾಜ್ಯದ ಸಿಎಂ ಆಗ್ತೀನಿ. ಆಗ ನಿಮ್ಮ ಕ್ಷೇತ್ರಕ್ಕೆ ಇನ್ನಷ್ಟು ಒಳ್ಳೆಯದಾಗುತ್ತೆ ಅನ್ನೋ ಮೂಲಕ ಭಾವನಾತ್ಮಕವಾಗಿ ಮತದಾರರನ್ನು ಹಿಡಿದಿಟ್ಟುಕೊಳ್ಳಲು ಯತ್ನಿಸಲಿದ್ದಾರೆ ಎಂದು ಹೇಳಲಾಗ್ತಿದೆ.

    ಇತ್ತೀಚೆಗಷ್ಟೇ ಕಾಂಗ್ರೆಸ್‍ನಿಂದ ಅಮಾನತುಗೊಂಡು ಜೆಡಿಎಸ್‍ಗೆ ಸೇರ್ಪಡೆಯಾಗಿರುವ ದೇವರಹಿಪ್ಪರಗಿ ಶಾಸಕ ಎಎಸ್ ಪಾಟೀಲ್ ನಡಹಳ್ಳಿ ತಮ್ಮ ಕ್ಷೇತ್ರವನ್ನು ಕುಮಾರಸ್ವಾಮಿಗೆ ಬಿಟ್ಟುಕೊಡಲಿದ್ದಾರೆ ಎನ್ನಲಾಗಿದೆ. ನಡಹಳ್ಳಿ ಮುದ್ದೇಬಿಹಾಳದಿಂದ ಸ್ಪರ್ಧಿಸಲಿದ್ದಾರೆ. ಇವೆಲ್ಲದ್ದಕ್ಕೂ ಮೊದಲು ರಾಮನಗರದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ಕರೆದು ರಾಮನಗರ ತೊರೆದು ದೇವರ ಹಿಪ್ಪರಗಿಯಲ್ಲಿ ಯಾಕೆ ಸ್ಪರ್ಧೆ ಅನ್ನೋ ಅನಿವಾರ್ಯತೆಯ ಬಗ್ಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿ-ನಾಲ್ವರ ದುರ್ಮರಣ-ನಾಲ್ವರು ಗಂಭೀರ

    ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿ-ನಾಲ್ವರ ದುರ್ಮರಣ-ನಾಲ್ವರು ಗಂಭೀರ

    ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಒಂದು ಪಲ್ಟಿ ಹೊಡೆದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ದೇವರಹಿಪ್ಪರಗಿ ಪಟ್ಟಣದ ಬಳಿ ನಡೆದಿದೆ.

    ಓರ್ವ ಮಹಿಳೆ ಸೇರಿದಂತೆ ಮೂವರು ಪುರುಷರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕೆಎ 48 ಎಂ 3625. ನಂಬರಿನ ಕ್ರೂಸರನ್ನು ಚಲಾಯಿಸುತ್ತಿದ್ದ ಚಾಲಕ ಅಬ್ದುಲ್ (35), ಮಹಾನಂದ ಕೆರೂರ (40), ಮಾನಿಂಗಸಾಹುಕಾರ ಕಾಸರ್ (50) ಮೃತ ದುರ್ದೈವಿಗಳು. ಮೃತ ಮಹಿಳೆಯ ಹೆಸರು ತಿಳಿದು ಬಂದಿಲ್ಲ. ಮೃತರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬನಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ.

    ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ದೇವರ ಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.