Tag: ದೇವಸ್ಥಾನ

  • ಕಾರವಾರ: ವರ್ಷಕ್ಕೊಮ್ಮೆ ದರ್ಶನ ನೀಡುವ ಸಾತೇರಿ ದೇವರ ಜಾತ್ರೆ ಆರಂಭ

    ಕಾರವಾರ: ವರ್ಷಕ್ಕೊಮ್ಮೆ ದರ್ಶನ ನೀಡುವ ಸಾತೇರಿ ದೇವರ ಜಾತ್ರೆ ಆರಂಭ

    ಕಾರವಾರ: ವರ್ಷದಲ್ಲಿ 7 ದಿನಗಳು ಮಾತ್ರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡುವ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಪ್ರಸಿದ್ಧ ಶ್ರೀ ಸಾತೇರಿ ದೇವರ ಜಾತ್ರಾ ಮಹೋತ್ಸವ ಆರಂಭವಾಗಿದೆ. ಸೆಪ್ಟೆಂಬರ್ 5 ರಿಂದ 5 ದಿನಗಳ ಕಾಲ ಸಾರ್ವಜನಿಕರ ಸೇವೆ, ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

    ಸೆ.3ರ ಮಧ್ಯರಾತ್ರಿ 12 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಮೊದಲ 2 ದಿನಗಳಲ್ಲಿ ಕುಳಾವಿ ಸಮುದಾಯದ ಮಹಿಳೆಯರು ಹಾಗೂ ಹೆಣ್ಣುಮಕ್ಕಳಿಂದ ಅಡಿಕೆ ಹಾಗೂ ಪುರುಷರಿಂದ ತಳಯ ಸಲ್ಲಿಸಲಾಗುತ್ತಿದೆ. ಸೆ.5 ರಿಂದ 9ರ ವರೆಗೆ ಸಾರ್ವಜನಿಕರಿಗೆ ದೇವಿಯ ದರ್ಶನ ಹಾಗೂ ಹರಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ನಮ್ಮ ಹೊಸ ಪಕ್ಷಕ್ಕೆ ಜಮ್ಮು-ಕಾಶ್ಮೀರದ ಜನರೇ ಹಿಂದೂಸ್ತಾನಿ ಹೆಸರಿಡಲಿ: ಆಜಾದ್‌

    ಸೆ.5 ರಿಂದ ಪ್ರತಿದಿನ ಬೆಳಗ್ಗೆ 10 ಗಂಟೆಗೆ ಮಹಾಪ್ರಸಾದ ವಿತರಣೆ ನಡೆಯಲಿದ್ದು, ಸಂಜೆ 7 ಗಂಟೆಗೆ ವಿವಿಧ ಮಂಡಳಿಗಳಿಂದ ಭಜನೆ ಕಾರ್ಯಕ್ರಮ ನಡೆಯಲಿದೆ. ಸೆ.5 ರಿಂದ 8ರ ವರೆಗೆ ಸದಾಶಿವಗಡದ ಓಂಕಾರ ಭಕ್ತಿ ಸಂಗೀತ ಮಂಡಳಿ, ಹಣಕೋಣದ ರಾಮದಾಸ ರಾಯ್ಕರ ಭಜನಾ ಮಂಡಳಿ, ಕಾಣಕೋಣ ಭಕ್ತಮಂಡಳಿ, ಮಾಜಾಳಿಯ ಸಂಕಟಮೋಚನ ಭಜನಾ ಮಂಡಳಿಗಳು ವಿವಿಧ ಭಜನಾ ಕಾರ್ಯಕ್ರಮ ನಡೆಸಿಕೊಡಲಿವೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಟಾಟಾ ಗ್ರೂಪ್‍ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ದುರ್ಮರಣ

    ಸೆ.9 ರಂದು ಮಧ್ಯಾಹ್ನದವರೆಗೆ ಶ್ರೀ ಸಾತೇರಿ ದೇವಿಯ ದರ್ಶನಕ್ಕೆ ಅವಕಾಶವಿರಲಿದ್ದು, ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಹೊರಬಿದ್ದ ನಂತರ ಅನಿರುದ್ಧ ಟೆಂಪಲ್ ರನ್

    ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಹೊರಬಿದ್ದ ನಂತರ ಅನಿರುದ್ಧ ಟೆಂಪಲ್ ರನ್

    ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಅವರನ್ನು ಹೊರ ಹಾಕಿದ ನಂತರ ಅವರು ನೋವಿನಲ್ಲಿರುವುದನ್ನು ನಾನಾ ರೀತಿಯಲ್ಲಿ ತೋರಿಸಿಕೊಳ್ಳುತ್ತಿದ್ದಾರೆ. ದಿನವೂ ಅಭಿಮಾನಿಗಳಿಗೆ ಸೋಷಿಯಲ್ ಮೀಡಿಯಾ ಮೂಲಕ ಗುಡ್ ಮಾರ್ನಿಂಗ್ ಹೇಳುವಾಗ ಜೊತೆ ಜೊತೆಯಲಿ ಧಾರಾವಾಹಿಯ ಫೋಟೋಗಳನ್ನೇ ಬಳಸುತ್ತಿದ್ದಾರೆ. ಅಷ್ಟರ ಮಟ್ಟಿಗೆ ಆ ಧಾರಾವಾಹಿಯನ್ನು ಅವರು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

    ಇದೀಗ ಅನಿರುದ್ಧ ಅವರು ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಆಯಾ ದೇವಸ್ಥಾನಗಳ ಫೋಟೋಗಳನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದಾರೆ. ಹಣೆಗೆ ಭಂಡಾರ ಹಚ್ಚಿದ್ದು ನೋಡಿದರೆ ಅವರು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಸಾಯಿಬಾಬಾ ಫೋಟೋ ಮುಂದಿರ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ನಾನು ಅಂಬರೀಶ್ ಅಣ್ಣನ ಅಭಿಮಾನಿ, ಅವರ ಮಗನಿಗೆ ಸಿನಿಮಾ ಮಾಡುತ್ತಿರುವುದು ಹೆಮ್ಮೆ : ನಿರ್ದೇಶಕ ಮಹೇಶ್ ಕುಮಾರ್

    ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಹೊರ ಬಂದ ನಂತರ ಸೀರಿಯಲ್ ನಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದು, ಅವೆಲ್ಲವನ್ನೂ ಸಸ್ಪೆನ್ಸ್ ಆಗಿಯೇ ಇಡುತ್ತಿದೆ ತಂಡ. ಅನಿರುದ್ಧ ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರದ ಬದಲು ಹೊಸದೊಂದು ಪಾತ್ರ ತರಲಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಆ ಪಾತ್ರವನ್ನು ಹರೀಶ್ ರಾಜ್ ಮಾಡಲಿದ್ದಾರಂತೆ. ಆದರೆ, ಆರ್ಯವರ್ಧನ್ ಪಾತ್ರವನ್ನು ಸದ್ಯಕ್ಕೆ ಯಾರೂ ಮಾಡುವುದಿಲ್ಲ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪಲ್ಲ: ಮುತಾಲಿಕ್

    ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪಲ್ಲ: ಮುತಾಲಿಕ್

    ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪಲ್ಲ, ಬಿಜೆಪಿಯವರು ಇಂತಹ ವಿಷಯ ಬಿಟ್ಟು ಸಾವರ್ಕರ್ ವಿಷಯದ ಬಗ್ಗೆ ಚರ್ಚೆ ಮಾಡಲಿ ಅಂತ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಂಸಾಹಾರ ಸೇವನೆ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಹಿಂದೂಗಳಲ್ಲಿಯೂ ಸಾಕಷ್ಟು ಜನರು ಮಾಂಸಾಹಾರಿಗಳಿದ್ದಾರೆ. ಹಿಂದೂ ದೇವರಿಗೂ ಮಾಂಸಾಹಾರ ಪ್ರಸಾದ ಮಾಡ್ತಾರೆ ಅದರಲ್ಲೇನೂ ತಪ್ಪಿದೆ ಎಂದು ಪ್ರಶ್ನಿಸಿದರು.

    ಸಿದ್ದರಾಮಯ್ಯ ಮಾಂಸಹಾರ ಸೇವನೇ ಮಾಡಿ ದೇವಸ್ಥಾನ ಪ್ರವೇಶಿಸಿರುವುದು ಚರ್ಚೆಯ ವಿಷಯವೇ ಅಲ್ಲ, ಆದರೆ ಬಿಜೆಪಿಯವರಿಗೆ ಚರ್ಚೆಗೆ ಬೇರೆ ವಿಷಯವೇ ಇಲ್ಲ. ಅದಕ್ಕೆ ಇಂತಹದ್ದೆಲ್ಲವನ್ನು ಮಾತನಾಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪಲ್ಲ. ಬಿಜೆಪಿಯವರು ಇಂತಹ ವಿಷಯ ಬಿಟ್ಟು ಸಾವರ್ಕರ್ ವಿಷಯದ ಬಗ್ಗೆ ಚರ್ಚೆ ಮಾಡಲಿ ಎಂದು ತಿಳಿಸಿದರು.

    bjP

    ಈದ್ಗಾ ಮೈದಾನವೇನೂ ನಿಮ್ಮಪ್ಪನ ಸ್ವತ್ತಲ್ಲ, ಈದ್ಗಾ ಮೈದಾನ ಸಾರ್ವಜನಿಕ ಸ್ವತ್ತು. ಅಲ್ಲಿ ಬೇರೆಯವರಿಗೆ ಪ್ರಾರ್ಥನೆಗೆ ಅವಕಾಶ ನೀಡ್ತಾರೆ. ಆದರೆ ಗಣೆಶೋತ್ಸವ ಆಚರಣೆಗೆ ಯಾಕೆ ಅವಕಾಶ ನೀಡುತ್ತಿಲ್ಲ. ಅನುಮತಿ ಕೊಟ್ಟರೂ ಸರಿ ಕೊಡದಿದ್ದರೂ ಸರಿ ಗಣೆಶೋತ್ಸವ ಆಚರಣೆ ಮಾಡೇ ಮಾಡುತ್ತೇವೆ. ಪಾಲಿಕೆಗೆ ಇದು ಕೊನೆಯ ಗಡವು. ಈ ಗಡುವು ಮೀರಿದ್ರೆ ನಾವು ಗಣೇಶ ಆಚರಣೆ ಮಾಡೇ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಕೊರೊನಾ ವೇಳೆ ಜನರಿಂದ ಸುಲಿಗೆ – 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

    ಸಾವಿರಾರು ಕಾರ್ಯಕರ್ತರ ನೇತೃತ್ವದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ. ತಾಕತ್ ಇದ್ರೆ ಅದೇನ್ ಮಾಡ್ಕೋತಿರೋ ನಾವು ನೋಡ್ತೀವಿ ಎಂದು ಪಾಲಿಕೆ ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರ ಜನಪ್ರಿಯತೆ ನೋಡಿ ಉರಿ ಶುರುವಾಗಿದೆ: ಡಾ. ಎಚ್.ಸಿ. ಮಹದೇವಪ್ಪ

    Live Tv
    [brid partner=56869869 player=32851 video=960834 autoplay=true]

  • ಮಧ್ಯಾಹ್ನ ಮಾಂಸಾಹಾರ ತಿಂದು ಸಂಜೆ ದೇವಸ್ಥಾನಕ್ಕೆ ಹೋಗಬಾರದಾ : ಸಿದ್ದರಾಮಯ್ಯ ಪ್ರಶ್ನೆ

    ಮಧ್ಯಾಹ್ನ ಮಾಂಸಾಹಾರ ತಿಂದು ಸಂಜೆ ದೇವಸ್ಥಾನಕ್ಕೆ ಹೋಗಬಾರದಾ : ಸಿದ್ದರಾಮಯ್ಯ ಪ್ರಶ್ನೆ

    ಚಿಕ್ಕಬಳ್ಳಾಪುರ: ಇಂದು ಮಾಂಸಹಾರ ತಿಂದು ನಾಳೆ ದೇವಾಲಯಕ್ಕೆ ಹೋಗಬಹುದಾ? ಮಧ್ಯಾಹ್ನ ಮಂಸಾಹಾರ ತಿಂದು ಸಂಜೆ ಹೋಗಬಾರದಾ? ನಾನು ಯಾರಿಗೂ ಭಯಪಡಲ್ಲ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

    ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಪ್ರಯುಕ್ತ ಶೋಷಿತ ಸಮುದಾಯಗಳ ಅಭಿವೃದ್ಧಿ ಟ್ರಸ್ಟ್ ವತಿಯಿಂದ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು.

    ಈ ಸಂದರ್ಭದಲ್ಲಿ ಮಾಂಸಾಹಾರ ಸೇವಿಸಿ ಕೊಡಗಿನ ದೇವಸ್ಥಾನಕ್ಕೆ ಭೇಟಿ ನೀಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಊಟ ಮಾಡಿದ್ದು ಸುದರ್ಶನ್ ಗೆಸ್ಟ್ ಹೌಸ್‌ನಲ್ಲಿ. ಸಾಯಂಕಾಲ ಹೋಗುವಾಗ ದೇವಾಲಯಕ್ಕೆ ಹೋಗಿದ್ದೇನೆ. ದೇವರು ಇಂತಹದ್ದೆ ತಿನ್ನು ಅಂತ ಹೇಳಿದ್ದಾರಾ? ಬಿಜೆಪಿಯವರಿಗೆ ಮೊಸರಲ್ಲಿ ಕಲ್ಲು ಹುಡುಕಿ ಬೆಂಕಿ ಹಾಕುವುದೇ ಕೆಲಸ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಮಧ್ಯಾಹ್ನ ನಾಟಿ ಕೋಳಿ ಊಟ ಮಾಡಿ ಸಂಜೆ ದೇವಸ್ಥಾನಕ್ಕೆ ಭೇಟಿ ಕೊಟ್ರಾ ಸಿದ್ದರಾಮಯ್ಯ?

    ಸಂಪತ್ ಪಕ್ಕಾ ಆರ್ ಎಸ್ ಎಸ್ ಕಾರ್ಯಕರ್ತ. ಅವನ ಕೈಯಲ್ಲಿ ಬಲವಂತವಾಗಿ ಕಾಂಗ್ರೆಸ್ ಕಾರ್ಯಕರ್ತ ಅಂತ ಹೇಳಿಸಿದ್ದಾರೆ. ಜಿ ವಿಜಯಾ ಅವನು ಯಾರು? ಗೊತ್ತಿಲ್ಲ ಅಂತಾನೆ. ನೋಡೇ ಇಲ್ಲ ಅಂತಾನೆ. ನಾನು ಪ್ರವಾಹ ಪರಿಸ್ಥಿತಿ ಹಾನಿ ನೋಡಲು ಹೋಗಿದ್ದು. ಇದಕ್ಕೆ ತಡೆ ಒಡ್ಡಿದ್ದು ಬಿಜೆಪಿ, ಆರ್‌ಎಸ್‌ಎಸ್‌ ಮತ್ತು ಹಿಂದೂ ಕಾರ್ಯಕರ್ತರು. ಇದು ಸರ್ಕಾರಿ ಪ್ರಾಯೋಜಿತ ತಡೆ ಎಂದು ವಾಗ್ದಾಳಿ ನಡೆಸಿದರು.

    ಟಿಪ್ಪುವನ್ನು ಈಗ ಬಿಜೆಪಿಯವರು ಬಹಳ ವಿರೋಧ ಮಾಡುತ್ತಿದ್ದಾರೆ. ಹಿಂದೆ ಯಡಿಯೂರಪ್ಪ ಏನ್ ಮಾಡಿದ್ರು ಮಾತಾಡಿದ್ರು ಗೊತ್ತಾ? ಜಗದೀಶ್ ಶೆಟ್ಟರ್ ಏನ್ ಹೇಳಿದ್ದಾರೆ ಗೊತ್ತಾ? ಆಗ ಬಿಜೆಪಿ ಯವರಿಗೆ ಟಿಪ್ಪು ಒಳ್ಳೆಯವನು ಆಗಿದ್ನಾ? ಟಿಪ್ಪು ಪೇಟಾ ಹಾಕ್ಕೊಂಡು ಕತ್ತಿ ಹಿಡ್ಕೊಂಡು ಪೋಸ್ ಕೊಡಲಿಲ್ವಾ? ಆಗ ಶೋಭ ಕರಂದ್ಲಾಜೆ ಜೊತೆಯಲ್ಲಿ ಇದ್ರಲ್ಲ ಎಂದು ಹೇಳಿ ಕಮಲ ನಾಯಕರನ್ನು ಟೀಕಿಸಿದರು.

    Live Tv
    [brid partner=56869869 player=32851 video=960834 autoplay=true]

  • ತಿಂಗಳಿಗೆ 2 ರೂ. ಸಂಬಳ, 4.74 ರೂ. ಪಡಿತರ – ಮುಜರಾಯಿ ಇಲಾಖೆ ದೇವಸ್ಥಾನದ ಅರ್ಚಕರ ಅಳಲು

    ತಿಂಗಳಿಗೆ 2 ರೂ. ಸಂಬಳ, 4.74 ರೂ. ಪಡಿತರ – ಮುಜರಾಯಿ ಇಲಾಖೆ ದೇವಸ್ಥಾನದ ಅರ್ಚಕರ ಅಳಲು

    ಚಾಮರಾಜನಗರ: ಸರ್ವೇಜನ ಸುಖಿನೋಭವಂತು ಎಂದು ಹೇಳಿ ದೇವರನ್ನು ಪೂಜಿಸುವವರು ಅರ್ಚಕರು. ಆದ್ರೆ ಅವರ ಜೀವನವೇ ಸುಖದಲ್ಲಿಲ್ಲ. ಯಾಕಂದ್ರೆ ಮುಜರಾಯಿ ಇಲಾಖೆಗೆ ಸೇರಿರುವ ಸಿ ದರ್ಜೆಯ ದೇವಾಲಯಗಳ ಅರ್ಚಕರ ಸಂಬಳ ಕೇಳಿದ್ರೆ ನೀವೆಲ್ಲಾ ನಿಬ್ಬೆರಗಾಗ್ತೀರಾ.

    ಮುಜರಾಯಿ ಇಲಾಖೆಯ ಸುಪರ್ದಿಗೆ ಒಳಪಡುವ ಸಿ ಗ್ರೇಡ್ ದೇವಾಲಯದ ಅರ್ಚಕರ ತಿಂಗಳ ಸಂಬಳ ಕೇವಲ 2.50 ಪೈಸೆ ಮಾತ್ರ. ಇಂದು ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಚಾಮರಾಜನಗರದ ಹೊರವಲಯದಲ್ಲಿರುವ ಹರಳುಕೋಟೆಯ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಅರ್ಚಕ ಅನಂತ ಪ್ರಸಾದ್ ತಮ್ಮ ಸಂಕಷ್ಟವನ್ನು ತೋಡಿಕೊಂಡರು. ನಮಗೆ ನಮ್ಮ ತಂದೆ ಕಾಲದಿಂದಲೂ ತಿಂಗಳಿಗೆ ಕೇವಲ 2.50 ಪೈಸೆ ಸಂಬಳ, ಪಡಿತರಕ್ಕೆ 4.74 ಪೈಸೆ ಬರುತ್ತದೆ. ಇದರಿಂದ ಜೀವನ ನಿರ್ವಹಣೆ ಮಾಡಲು ಕಷ್ಟ. ಇನ್ನು ಮುಂದಾದರೂ ನಮ್ಮ ಸಿ ಗ್ರೇಡ್ ದೇವಾಲಯದ ಅರ್ಚಕರ ಸಂಬಳ ಜಾಸ್ತಿ ಮಾಡಿಸುವಂತೆ ಮನವಿ ಮಾಡಿಕೊಂಡರು. ಇದನ್ನೂ ಓದಿ: ನಾನು ಕಾಂಗ್ರೆಸ್ ಕಾರ್ಯಕರ್ತ – ಮೊಟ್ಟೆ ಎಸೆದಿದ್ದಕ್ಕೆ ಸಂಪತ್ ಕೊಟ್ಟ ಸ್ಪಷ್ಟನೆ ಏನು..?

    ದೇವಾಲಯದ ಪಡಿತರಕ್ಕೆಂದು ತಿಂಗಳಿಗೆ 4.74 ಪೈಸೆ ನೀಡಲಾಗುತ್ತದೆ. ಈ ಹಣದಲ್ಲಿ ಒಂದು ದಿನದ ಎಣ್ಣೆ ಬತ್ತಿಗೂ ಸಾಲುವುದಿಲ್ಲ. 5 ವರ್ಷದಿಂದ ಅರ್ಚಕರಿಗೆ ಸಂಬಳ ಬಂದಿಲ್ಲ ಎಂದರು. ಇದನ್ನೆಲ್ಲಾ ಕೇಳಿಸಿಕೊಂಡ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಒಂದು ಕ್ಷಣ ತಬ್ಬಿಬ್ಬಾದರು. ಅಲ್ಲದೇ ಇಂತಹ ಮುಂದುವರಿದಿರುವ ಕಾಲದಲ್ಲೂ ಇಷ್ಟು ಕಡಿಮೆ ಸಂಬಳ ಅಂದ್ರೆ ಅವರ ಜೀವನ ಹೇಗೆ. ಪರಿಸ್ಥಿತಿ ಹೀಗಿದ್ರೂ ನಾವೆಲ್ಲಾ ಏನು ಮಾಡುತ್ತಿದ್ದೇವೆ ಎಂದು ಬೇಸರಗೊಂಡ ಉಪಲೋಕಾಯುಕ್ತರು 15 ದಿನಗಳ ಒಳಗೆ ಸಮಸ್ಯೆ ಬಗೆಹರಿಸುವಂತೆ ತಹಶೀಲ್ದಾರ್‌ಗೆ ಸೂಚನೆ ನೀಡಿರುವುದಾಗಿ ತಿಳಿಸಿದರು. ಇದನ್ನೂ ಓದಿ: ಯಡಿಯೂರಪ್ಪ.. ಸೇದಿ ಬಿಸಾಕಿದ ಬೀಡಿ: ಸಿಎಂ ಇಬ್ರಾಹಿಂ

    Live Tv
    [brid partner=56869869 player=32851 video=960834 autoplay=true]

  • ಧರ್ಮ ಒಡೆಯುವುದು ನನ್ನ ಉದ್ದೇಶವಲ್ಲ, ಕೆಲವರು ನನ್ನನ್ನ ದಾರಿ ತಪ್ಪಿಸಿದ್ರು: ಸಿದ್ದರಾಮಯ್ಯ

    ಧರ್ಮ ಒಡೆಯುವುದು ನನ್ನ ಉದ್ದೇಶವಲ್ಲ, ಕೆಲವರು ನನ್ನನ್ನ ದಾರಿ ತಪ್ಪಿಸಿದ್ರು: ಸಿದ್ದರಾಮಯ್ಯ

    – ಕಾಶಿಯ ಹಾರ ಮುಂದಿನ ಚುನಾವಣೆವರೆಗೂ ನಿಮ್ಮ ಕೊರಳಲ್ಲೇ ಇರಲೆಂದ ಶ್ರೀಗಳು

    ಚಿಕ್ಕಮಗಳೂರು: ನಿನ್ನೆ ಕೊಡಗು ಜಿಲ್ಲೆಯಲ್ಲಿ ಮಳೆಹಾನಿ ಪ್ರದೇಶಕ್ಕೆ ಪ್ರವಾಸ ಕೈಗೊಂಡು ಸರಣಿ ಪ್ರತಿಭಟನೆ ಎದುರಿಸಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

    ಇದೇ ಮೊದಲ ಬಾರಿಗೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರನ್ನು ರಂಭಾಪುರಿ ಶ್ರೀಗಳು ಮಂತ್ರ-ಘೋಷಗಳ ಮೂಲಕ ಸ್ವಾಗತಿಸಿದ್ದಾರೆ. ಅಲ್ಲದೇ ಕಾಶಿಯ ಹಾರ ನೀಡಿ ಮುಂದಿನ ಚುನಾವಣೆವರೆಗೂ ನಿಮ್ಮ ಕೊರಳಲ್ಲೇ ಇರಲಿ ಎಂದು ಆಶೀರ್ವಾದ ಮಾಡಿದ್ದಾರೆ. ಬಳಿಕ ಬರ್ತೀನಿ… ಬರ್ತೀನಿ… ಅಂದು ಈಗ ಬಂದಿದ್ದೀರಾ.. ಎಂದೂ ಪ್ರಶ್ನಿಸಿದ್ದಾರೆ.

    ರಂಭಾಪುರಿ ಪೀಠದ ಶ್ರೀ ಪ್ರಸನ್ನ ವೀರ ಸೋಮೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದ ಸಿದ್ದರಾಮಯ್ಯ ಅವರು ವೀರಭದ್ರನಾಥ ಸ್ವಾಮಿ, ರೇಣುಕಾಚಾರ್ಯರ ಗದ್ದುಗೆಯ ದರ್ಶನ ಸಹ ಪಡೆದಿದ್ದಾರೆ. ಅಲ್ಲದೇ ಇಲ್ಲಿಗೆ ಬಂದದ್ದು ನನ್ನ ಪುಣ್ಯ ಎಂಬ ಮಾತುಗಳನ್ನೂ ಆಡಿದ್ದಾರೆ. ಇದನ್ನೂ ಓದಿ: ಚಂಬಲ್ ಕಣಿವೆ ದರೋಡೆಕೋರರು ವಿಧಾನಸೌಧದಲ್ಲಿದ್ದಾರೆ: ಹೆಚ್‍ಡಿಕೆ

    ಇದೇ ವೇಳೆ ಶ್ರೀಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಧರ್ಮ ಒಡೆಯುವುದು ನನ್ನ ಉದ್ದೇಶ ಆಗಿರಲಿಲ್ಲ. ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ. ರಾಜ್ಯ ಜನರ ಅಭಿವೃದ್ದಿಗೆ ಆದ್ಯತೆ ನೀಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ದೋಬಾರಾ ಸಿನಿಮಾ ಆಸ್ಕರ್‌ಗೆ ಕಳುಹಿಸಿ: ಅನುರಾಗ್ ಕಶ್ಯಪ್‌ಗೆ ವ್ಯಂಗ್ಯ ಮಾಡಿದ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ಅದಕ್ಕೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಶೃಂಗೇರಿ ಶಾರದಾಂಬೆಯ ದರ್ಶನವನ್ನೂ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉಜ್ಜಯಿನಿ ಮಹಾಕಾಳೇಶ್ವರ ಮಂದಿರದಲ್ಲಿ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರ ಗಲಾಟೆ

    ಉಜ್ಜಯಿನಿ ಮಹಾಕಾಳೇಶ್ವರ ಮಂದಿರದಲ್ಲಿ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರ ಗಲಾಟೆ

    ಭೋಪಾಲ್: ಉಜ್ಜಯಿನಿಯ ಮಹಾಕಾಳೇಶ್ವರ ಮಂದಿರದಲ್ಲಿ ಸಂಸದ, ಬಿಜೆಪಿ ಯುವ ಮೊರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಬೆಂಬಲಿಗರು, ಮತ್ತು ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.

    ದೇವಸ್ಥಾನದ ಭೇಟಿಗೆ ತೇಜಸ್ವಿ ಸೂರ್ಯ ತೆರಳಿದ ವೇಳೆ ಈ ಗಲಭೆ ನಡೆದಿದೆ. ಉಜ್ಜಯಿನಿಗೆ ತೆರಳಿದ್ದ ತೇಜಸ್ವಿ ಸೂರ್ಯ ನಿನ್ನೆ ಬೆಳಗ್ಗೆ ದೇವರ ದರ್ಶನಕ್ಕೆ ತೆರಳಿದ್ದರು. ಪೂಜೆಗಾಗಿ ಸೂರ್ಯ ಗರ್ಭಗುಡಿಯ ಕಡೆಗೆ ಹೋದರು. ಅವರನ್ನೇ ಅನುಸರಿಸಿದ ಬೆಂಬಲಿಗರು, ಕಾರ್ಯಕರ್ತರು ಗರ್ಭಗುಡಿ ಪ್ರವೇಶಿಸಲು ಪ್ರಯತ್ನಿಸಿದರು. ಈ ವೇಳೆ ಗರ್ಭಗುಡಿ ಪ್ರವೇಶ ಮಾಡದಂತೆ ಮಂದಿರದ ಭದ್ರತಾ ಸಿಬ್ಬಂದಿ ಹೇಳಿದ್ದಾರೆ. ಇದನ್ನೂ ಓದಿ: ಮೋದಿಗೆ ರಾಖಿ ಕಟ್ಟಿದ ಮಕ್ಕಳು

    ಗರ್ಭಗುಡಿ ಪ್ರವೇಶಕ್ಕೆ ನಿರಾಕರಿಸುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಮಂದಿರದ ಸಿಬ್ಬಂದಿ ಜೊತೆಗೆ ಗಲಾಟೆ ನಡೆಸಿದರು. ಬ್ಯಾರಿಕೇಡ್‍ಗಳನ್ನು ತೆಗೆದುಹಾಕಿ ಒಳಗೆ ಪ್ರವೇಶಿಸಿದರು. ಈ ವೇಳೆ ದೇವಸ್ಥಾನದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿದೆ. ಇದನ್ನೂ ಓದಿ: ಕಾಸರಗೋಡು ಮಸೀದಿಗೆ ಹೋಗಿದ್ದ ಹಂತಕರು – SDPI, PFI ಲಿಂಕ್‌, ವಾರಂಟ್ ಜಾರಿ ಮಾಡಿ ಆಸ್ತಿ ಸೀಜ್‌

    Live Tv
    [brid partner=56869869 player=32851 video=960834 autoplay=true]

  • ದೇವಸ್ಥಾನದ ಹಣ ಕದಿಯುವುದಕ್ಕೂ ಮುನ್ನ ದೇವಿ ವಿಗ್ರಹಕ್ಕೆ ನಮಸ್ಕರಿಸಿದ ಅರೆನಗ್ನ ಕಳ್ಳ

    ದೇವಸ್ಥಾನದ ಹಣ ಕದಿಯುವುದಕ್ಕೂ ಮುನ್ನ ದೇವಿ ವಿಗ್ರಹಕ್ಕೆ ನಮಸ್ಕರಿಸಿದ ಅರೆನಗ್ನ ಕಳ್ಳ

    ಭೋಪಾಲ್: ದೇವಸ್ಥಾನದಲ್ಲಿದ್ದ ಹುಂಡಿ ಹಣವನ್ನು ಕದಿಯಲು ಬಂದಿದ್ದ ಕಳ್ಳನೊಬ್ಬ ಅಪರಾಧ ಮಾಡುವುದಕ್ಕೂ ಮುನ್ನ ಗರ್ಭಗುಡಿಯನ್ನು ಪ್ರವೇಶಿಸಿ ದೇವರಿಗೆ ನಮಸ್ಕರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಮಧ್ಯಪ್ರದೇಶದ ಜಬಲ್‍ಪುರದ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಕಳ್ಳನ ಪ್ರತಿಯೊಂದು ಕೈಚಳಕವು ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    CRIME 2

    ಶರ್ಟ್ ಧರಿಸದೇ ಮುಖಕ್ಕೆ ಮುಸುಕನ್ನು ಹಾಕಿಕೊಂಡಿದ್ದ ಕಳ್ಳನೊಬ್ಬ ಕಳ್ಳತನ ಮಾಡುವುದಕ್ಕೂ ಮುನ್ನ ಗರ್ಭಗುಡಿಯನ್ನು ಪ್ರವೇಶಿಸಿ ದೇವತೆಯ ಮುಂದೆ ನಿಂತು ನಮಸ್ಕರಿಸಿದ್ದಾನೆ. ಅಷ್ಟೇ ಅಲ್ಲದೇ ಆ ದೇವಿಯ ಪ್ರತಿಮೆಯನ್ನು ನೋಡಿ ಕೆಲಕಾಲ ಆಶ್ಚರ್ಯಚಕಿತನಾಗಿ ಅಲ್ಲೇ ನಿಂತಿದ್ದಾನೆ. ಇದಾದ ಬಳಿಕ ದೇವಾಲಯದಲ್ಲಿರುವ ನಗದು ಸೇರಿದಂತೆ ಬೆಳ್ಳಿ, ಚಿನ್ನವನ್ನು ಕದ್ದಿದ್ದಾನೆ. ಇದನ್ನೂ ಓದಿ: ಆ. 15ರವರೆಗೆ ಟಿಕೆಟ್ ಬುಕ್ ಆಗಿದ್ದವರಿಗೆ ಮಾತ್ರ ತಿರುಪತಿ ದರ್ಶನ

    ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕಳ್ಳನ ಕಾರ್ಯ ನೋಡಿ ನೆಟ್ಟಿಗರು ಹುಬ್ಬೇರಿಸಿದ್ದಾರೆ. ಈ ಘಟನೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಸೀದಿ, ಮದರಸಾದಲ್ಲಿ ಸಂವಿಧಾನ ಓದುವ ಅಭಿಯಾನ ಆರಂಭ!

    Live Tv
    [brid partner=56869869 player=32851 video=960834 autoplay=true]

  • ದೇವಸ್ಥಾನದಲ್ಲಿ ಕಾಲ್ತುಳಿತ- ಮೂವರು ಸಾವು

    ದೇವಸ್ಥಾನದಲ್ಲಿ ಕಾಲ್ತುಳಿತ- ಮೂವರು ಸಾವು

    ಜೈಪುರ: ರಾಜಸ್ಥಾನದ ಸಿಕಾನಲ್ಲಿರುವ ಖಾತು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮೂವರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.

    ಇಂದು ಮುಂಜಾನೆ ಮಾಸಿಕ ಜಾತ್ರೆ ನಿಮಿತ್ತ ಅನೇಕ ಜನರು ಸೇರಿದ್ದರು. ಈ ಸಂದರ್ಭದಲ್ಲಿ ದೇವಾಲಯದ ಪ್ರವೇಶ ದ್ವಾರದಲ್ಲಿ ನೂಕು ನುಗ್ಗಲು ಉಂಟಾಗಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದು, ಭಕ್ತರ ನಡುವೆ ನೂಕುನುಗ್ಗಲಾಗಿ ಹಲವರಿಗೆ ಗಂಭೀರ ಗಾಯಗಳಾಗಿವೆ.

    ಗಾಯಗೊಂಡವರ ಇಬ್ಬರನ್ನು ಚಿಕಿತ್ಸೆಗಾಗಿ ಜೈಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – FIR ದಾಖಲಿಸಿ ಅಧಿಕೃತವಾಗಿ ತನಿಖೆ ಆರಂಭಿಸಿದ ಎನ್ಐಎ

    POLICE JEEP

    ಖಾತು ಶ್ಯಾಮ್‍ನನ್ನು ಕಲಿಯುಗದ ದೇವರು ಎಂದು ಪರಿಗಣಿಸಲಾಗುತ್ತದೆ. ವಿಷ್ಣುವಿನ 10ನೇ ಅವತಾರ ಎಂಬ ನಂಬಿಕೆಯಿಂದ ಪೂಜೆ ನಡೆಯುತ್ತಿದೆ. ಇದು ಯಾತ್ರಾರ್ಥಿಗಳ ಪ್ರಮುಖ ಸ್ಥಳದಲ್ಲೊಂದಾಗಿದೆ. ಇದನ್ನೂ ಓದಿ: ಹೈಬ್ರಿಡ್ ಉಗ್ರನನ್ನು ಬಂಧಿಸಿದ ಭದ್ರತಾ ಪಡೆ

    Live Tv
    [brid partner=56869869 player=32851 video=960834 autoplay=true]

  • ದೇವಸ್ಥಾನದ ಬಳಿ ಅನುಮಾನಾಸ್ಪದ ಮಾಂಸ ಪತ್ತೆ – ವ್ಯಕ್ತಿ ಅರೆಸ್ಟ್

    ದೇವಸ್ಥಾನದ ಬಳಿ ಅನುಮಾನಾಸ್ಪದ ಮಾಂಸ ಪತ್ತೆ – ವ್ಯಕ್ತಿ ಅರೆಸ್ಟ್

    ಗಾಂಧೀನಗರ: ನಗರದ ಇಸಾನ್‍ಪುರ ಪ್ರದೇಶದಲ್ಲಿರುವ ದೇವಸ್ಥಾನದ ರಸ್ತೆ ಬಳಿ ಪ್ರಾಣಿಗಳ ಮಾಂಸ ಪತ್ತೆಯಾದ ಹಿನ್ನೆಲೆ ಅಹಮದಾಬಾದ್ ಪೊಲೀಸರು 25 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.

    ಪ್ರಾಣಿಗಳ ಮಾಂಸ ಪತ್ತೆಯಾದ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಸ್ಥಳೀಯ ನಿವಾಸಿಗಳು ಪ್ರಾಣಿಗಳನ್ನು ಕೊಂದವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು ಹಾಗೂ ಹಿಂದೂ ಸಂಘಟನೆಗಳು ಕೂಡ ಈ ಪ್ರದೇಶದಲ್ಲಿ ಬಂದ್‍ಗೆ ಕರೆ ನೀಡಿದ್ದವು. ಇದನ್ನೂ ಓದಿ: ನನ್ನ ಪತ್ನಿ ಜೊತೆ ಮಾತನಾಡಬೇಡ ಅಂದಿದ್ದಕ್ಕೆ ಕ್ರಿಕೆಟ್ ಬ್ಯಾಟ್, ವಿಕೇಟ್‍ನಿಂದ ಹೊಡೆದು ಕೊಲೆಗೈದ್ರು

    ಹೀಗಾಗಿ ಈ ಘಟನೆ ಸಂಬಂಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ನಂತರ ಈ ಪ್ರದೇಶದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನನು ಪರಿಶೀಲಿಸಿ, ಅದರ ಆಧಾರದ ಮೇಲೆ ಅಹಮದಾಬಾದ್ ಕ್ರೈಂ ಬ್ರಾಂಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಫೈಜಾನ್ ಶೇಖ್ ಎಂಬಾತನನ್ನು ಬಂಧಿಸಿದ್ದಾರೆ.

    ಇದೀಗ ವಿಧಿ ವಿಜ್ಞಾನ ಪ್ರಯೋಗಾಲಯ ವಿಭಾಗದ (ಎಫ್‍ಎಸ್‍ಎಲ್) ವರದಿಗಾಗಿ ಮಾಂಸದ ಮಾದರಿಯನ್ನು ಕಳುಹಿಸಿದ್ದಾರೆ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಇದನ್ನೂ ಓದಿ: ವಿಶ್ವದ ದೊಡ್ಡಣ್ಣನಿಗೆ ಸೆಡ್ಡು ಹೊಡೆದ ಚೀನಾ: ಅಮೆರಿಕದ ಹೌಸ್ ಆಫ್ ಸ್ಪೀಕರ್‌ಗೆ ನಿರ್ಬಂಧ

    ಈ ಕುರಿತಂತೆ ವಿಚಾರಣೆ ವೇಳೆ ಆರೋಪಿ ರಸ್ತೆಯಲ್ಲಿ ಬಿದ್ದಿದ್ದ ಮಾಂಸವನ್ನು ನಾನು ಬೇರೆಡೆಗೆ ಸಾಗಿಸುತ್ತಿದ್ದೆ. ಆದರೆ ಈ ವೇಳೆ ಜನರು ಹಲ್ಲೆ ನಡೆಸಲು ಮುಂದಾದಾಗ ಹೆದರಿಕೊಂಡು ಕೆಳಗೆ ಬಿದ್ದಿದ್ದ ಮಾಂಸದ ತುಂಡುಗಳನ್ನು ಎತ್ತುವುದನ್ನು ನಿಲ್ಲಿಸಿ ಸ್ಥಳದಿಂದ ಪರಾರಿಯಾದೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ಸದ್ಯ ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]