Tag: ದೇವಸ್ಥಾನ

  • ಪ್ರಚೋದನಕಾರಿ ಪಾಠ ಮಾಡುವ ಮದರಸಾಗಳನ್ನು ಬಂದ್ ಮಾಡಿ: ರೇಣುಕಾಚಾರ್ಯ

    ಪ್ರಚೋದನಕಾರಿ ಪಾಠ ಮಾಡುವ ಮದರಸಾಗಳನ್ನು ಬಂದ್ ಮಾಡಿ: ರೇಣುಕಾಚಾರ್ಯ

    ದಾವಣಗೆರೆ: ಹುಬ್ಬಳ್ಳಿ ದಾಳಿಗೆ ಪ್ರಚೋದನೆ ಮಾಡಿದ ಮೌಲ್ವಿಗಳನ್ನು ಬಂಧಿಸಿ ಗಲ್ಲಿಗೇರಿಸಬೇಕು. ಹುಬ್ಬಳ್ಳಿ ಸೇರಿದಂತೆ ಎಲ್ಲಾ ಕಡೆ ಮೌಲ್ವಿಗಳ ಶೋಧ ಮಾಡಬೇಕು. ಮದರಸಾಗಳಲ್ಲಿ ಪ್ರಚೋದನಕಾರಿ ಪಾಠ ಮಾಡ್ತಾರೆ, ಮದರಸಾಗಳನ್ನು ಬಂದ್ ಮಾಡಿ ಎಂದು ಶಾಸಕ ಎಂಪಿ ರೇಣುಕಾಚಾರ್ಯ ಮೌಲ್ವಿಗಳ ವಿರುದ್ಧ ಕಿಡಿಕಾರಿದ್ದಾರೆ.


    ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ದೇವಸ್ಥಾನದಲ್ಲಿ ತೀರ್ಥ ಪ್ರಸಾದ, ಆರತಿ ಬೆಳಗುತ್ತಾರೆ ಹಾಗೇ ಮಸೀದಿಗಳಲ್ಲಿ ಮದ್ದು ಗುಂಡುಗಳನ್ನು ಸಂಗ್ರಹಿಸಿಡುತ್ತಾರೆ ಎಂದು ಈ ಹಿಂದೆ ಹೇಳಿದ್ದೆ. ಆಗ ನನ್ನ ವಿರುದ್ಧ ಕಾಂಗ್ರೆಸ್ಸಿಗರು ಪ್ರತಿಭಟನೆ ಮಾಡಿದ್ರು, ಈಗ ಅದು ನಿಜವಾಗಿದೆ. ಮದರಸಾಗಳಲ್ಲಿ ಒಳ್ಳೆ ಶಿಕ್ಷಣ ಕೊಡುವುದಿಲ್ಲ. ಮಕ್ಕಳಿಗೆ ಅಲ್ಲಿ ದೇಶದ್ರೋಹದ ಪಾಠವನ್ನು ಹೇಳುತ್ತಾರೆ. ಈ ಮದರಸಾಗಳನ್ನು ಬ್ಯಾನ್ ಮಾಡಿದರೆ ಈ ರೀತಿ ಘಟನೆ ನಡೆಯುವುದಿಲ್ಲ. ನಮ್ಮ ಶಾಲೆಗಳಲ್ಲಿ ದೇಶ ಪ್ರೇಮ ಅಖಂಡತೆಯ ಬಗ್ಗೆ ಬೋಧನೆ ಮಾಡುತ್ತಾರೆ. ಮದರಸಾಗಳಲ್ಲಿ ಪ್ರಚೋದನೆ ಸಾರುವ ಕೆಲಸ ಮಾಡುತ್ತಿದ್ದಾರೆ. ಭಾರತ್ ಮಾತಾಕಿ ಜೈ ಎನ್ನುವವರನ್ನು ಬಿಟ್ಟು ಉಳಿದ ಎಲ್ಲರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯಲ್ಲಿ ಕಾಣಿಸಿಕೊಂಡಿದ್ದ ಮೌಲ್ವಿಯ ಅಸಲಿ ರೂಪ ಬಯಲು

    ಕಾಂಗ್ರೆಸ್ ಶಾಸಕನ ಮನೆ ಮೇಲೆ ಕೂಡ ಬೆಂಕಿ ಹಾಕಿದ್ರು ಆಗ ಅದೇ ಅಲ್ಪಸಂಖ್ಯಾತರ ಪರವಾಗಿ ಇದೇ ಕಾಂಗ್ರೆಸ್ ನಾಯಕರು ನಿಂತರು. ಟಿಪ್ಪು ಜಯಂತಿ ಮಾಡಿ ಈ ದೇಶದ ಕಾನೂನು ಸುವ್ಯವಸ್ಥೆ ಹಾಳು ಮಾಡಿದರು. ಕಾಂಗ್ರೆಸ್‍ನವರು ಭಾರತದ ಪರನೋ, ಅಲ್ಪಸಂಖ್ಯಾತರ ಪರನೋ ಎಂದು ಹೇಳಲಿ. ಎಲ್ಲಾ ಅಲ್ಪಸಂಖ್ಯಾತರು ಕೂಡ ಭಯೋತ್ಪಾದಕರು ಎಂದು ಹೇಳುತ್ತಿಲ್ಲ. ವೋಟ್‍ಗಾಗಿ ಅಲ್ಪಸಂಖ್ಯಾತರನ್ನು ಭಯೋತ್ಪಾದಕರನ್ನಾಗಿ ಮಾಡ್ತಾರೆ. ಸಿದ್ದರಾಮಯ್ಯ ಗಲಭೆ ಮಾಡಿದವರನ್ನು ಅಮಾಯಕರು ಎಂದು ಹೇಳ್ತಾರೆ, ನಿಮ್ಮ ಪ್ರಚೋಧನೆ ಹೇಳಿಕೆಗಳಿಂದ ನಿಮಗೆ ನಾಚಿಕೆ ಆಗೋದಿಲ್ವಾ. ಯಾರು ಈ ರೀತಿಯಾಗಿ ಮಾಡ್ತಾರೋ ಅಂತವರ ಮತದಾನದ ಹಕ್ಕು ಮೊಟಕುಗೊಳಿಸಬೇಕು. ಅಲ್ಲದೆ ಅವರಿಗೆ ಸರ್ಕಾರದಿಂದ ಬರುವ ಸೌಲಭ್ಯಗಳ ಜೊತೆ ಬಿಪಿಎಲ್ ಕಾರ್ಡ್ ಕೂಡ ಮೊಟಕುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನುಗ್ಗಿಕೇರಿ ಕಲ್ಲಂಗಡಿ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್

    ಮಸೀದಿಗಳಲ್ಲಿ ಪ್ರಚೋಧನೆ ಮಾಡುತ್ತಾರೆ. ಹಿಂದೂ ಸ್ವಾಮೀಜಿಗಳು ಮಾನವೀಯ ಮೌಲ್ಯಗಳನ್ನು ಸಾರುತ್ತಾರೆ. ಕಳೆದ ನಾಲ್ಕು ದಿನಗಳ ಹಿಂದೆ ನಡೆದ ಹುಬ್ಬಳ್ಳಿ ಘಟನೆಗೆ ಕಾಂಗ್ರೆಸ್ ನೇರ ಹೊಣೆ. ಕಾಂಗ್ರೆಸ್ ಮುಖಂಡರು ಬೇಷರತ್ ಕ್ಷಮೆಯಾಚಿಸಬೇಕು. ಒಬ್ಬ ವಿದ್ಯಾರ್ಥಿ ಸ್ಟೇಟಸ್ ಹಾಕಿದ್ದನ್ನು ದೊಡ್ಡದು ಮಾಡಿ ಈ ಹಿಂಸಾಚಾರ ಮಾಡಿಸಿದ್ದಾರೆ. ಇದು ಪೂರ್ವ ನಿಯೋಜಿತ ಘಟನೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇಲ್ಲಿ ಮಸೀದಿ, ಮಂದಿರಗಳೆಲ್ಲವೂ ನಮ್ಮ ದೇಹದಂತೆ ಒಟ್ಟಿಗೆ ಇರುತ್ತವೆ: ಮಮತಾ

  • ದೇವಸ್ಥಾನದ ಸ್ಟೈಲ್‍ನಲ್ಲಿ ಮಾಡಿ ‘ನೈ ಪಾಯಸ’

    ದೇವಸ್ಥಾನದ ಸ್ಟೈಲ್‍ನಲ್ಲಿ ಮಾಡಿ ‘ನೈ ಪಾಯಸ’

    ‘ನೈ ಪಾಯಸ’ ಸಾಮಾನ್ಯವಾಗಿ ಶಬರಿಮಲೈ ದೇವಸ್ಥಾನಗಳಲ್ಲಿ, ಕೇರಳದ ಅನೇಕ ದೇವಸ್ಥಾನಗಳಲ್ಲಿ ಸಾಮಾನ್ಯವಾಗಿ ನೀಡಲಾಗುವ ವಿಶೇಷವಾದ ಸಾಂಪ್ರದಾಯಿಕ ಪಾಯಸವಾಗಿದೆ. ಈ ಟೆಸ್ಟ್‌ನಲ್ಲೇ ಪಾಯಸ ಸವಿಯಲು ನಿಮಗೆ ಈ ರೆಸಿಪಿ ಸಹಾಯ ಮಾಡುತ್ತೆ.

    ಬೇಕಾಗುವ ಸಾಮಗ್ರಿಗಳು:
    * ನುಚ್ಚು ಮಾಡಿದ ಬ್ರೌನ್ ರೈಸ್ – 1/2 ಕಪ್
    * ತುಪ್ಪ – 4 ಟೀಸ್ಪೂನ್
    * ನುಚ್ಚು ಮಾಡಿ ಬೆಲ್ಲ – 1 ಕಪ್
    * ನೀರು – 1 ಕಪ್

    * ತುರಿದ ತೆಂಗಿನಕಾಯಿ – 1/4 ಕಪ್
    * ಏಲಕ್ಕಿ ಪುಡಿ – 1/4 ಟೀಸ್ಪೂನ್
    * ಒಣ ಶುಂಠಿ ಪುಡಿ – ಒಂದು ಸಣ್ಣ ಪಿಂಚ್
    * ಮುರಿದ ಗೋಡಂಬಿ – 7 ಇದನ್ನೂ ಓದಿ: ಸೋರೆಕಾಯಿಯಲ್ಲಿ ಮಾಡಿ ಸೂಪರ್ ರೆಸಿಪಿ ‘ಸ್ಟಫ್ಡ್ ಲೌಕಿ’

    ಮಾಡುವ ವಿಧಾನ:
    * ಬೆಲ್ಲವನ್ನು ಬೆಚ್ಚಗಿನ ನೀರಿನಲ್ಲಿ ನೆನೆಸಿ ಅದನ್ನು ಚೆನ್ನಾಗಿ ಪುಡಿಮಾಡಿ. ನಂತರ ಅದನ್ನು ಸ್ವಲ್ಪ ಬಿಸಿ ಮಾಡಿ, ಪಾಕದ ರೀತಿ ಮಾಡಿಕೊಳ್ಳಿ.
    * ಮಧ್ಯಮ ಉರಿಯಲ್ಲಿ ಕನಿಷ್ಠ 5 ಸೀಟಿಗಳವರೆಗೆ ಬ್ರೌನ್ ರೈಸ್ ಮೃದುವಾಗುವವರೆಗೆ ಬೇಯಿಸಬೇಕು. ನಂತರ ಬೆಲ್ಲದ ಪಾಕವನ್ನು ಬ್ರೌನ್ ರೈಸ್‍ಗೆ       ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.

    * ಬೆಲ್ಲದ ಪಾಕವು ಅನ್ನದೊಂದಿಗೆ ಚೆನ್ನಾಗಿ ಮಿಶ್ರಣವಾಗುವವರೆಗೆ ಕಡಿಮೆ ಉರಿಯಲ್ಲಿ ಬೇಯಿಸಿ. ತುರಿದ ತೆಂಗಿನಕಾಯಿಯನ್ನು ಸೇರಿಸಿ.
    * ಕೊನೆಗೆ ಗೋಡಂಬಿ, ಏಲಕ್ಕಿ ಪುಡಿ, ಒಣ ಶುಂಠಿ ಪುಡಿ ಸೇರಿಸಿ ಮಿಶ್ರಣ ಮಾಡಿ ಗ್ಯಾಸ್ ಸ್ವಿಚ್ ಆಫ್ ಮಾಡಿ.
    * ಪಾಯಸ ಬೆಚ್ಚಗಾದ ಮೇಲೆ ಬಡಿಸಿ ಇದನ್ನೂ ಓದಿ:   ಬೇಸಿಗೆಗೆ ತಂಪಾದ ಸೋಲ್ ಕಡಿ ಅಥವಾ ಕೋಕಮ್ ಡ್ರಿಂಕ್ ಮಾಡಿ ಸವಿಯಿರಿ

  • ಪೊಲೀಸ್ ವಾಹನಗಳೇ ಟಾರ್ಗೆಟ್ – ದಿಡ್ಡಿ ಹನುಮಂತ ದೇಗುಲಕ್ಕೂ ಕಲ್ಲೇಟು

    ಪೊಲೀಸ್ ವಾಹನಗಳೇ ಟಾರ್ಗೆಟ್ – ದಿಡ್ಡಿ ಹನುಮಂತ ದೇಗುಲಕ್ಕೂ ಕಲ್ಲೇಟು

    ಹುಬ್ಬಳ್ಳಿ: ಒಂದೇ ಒಂದು ಪೋಸ್ಟ್ ನಿಂದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗಲಾಟೆ ಆರಂಭವಾಗಿದ್ದು, ಇದೀಗ ಹಿಂಸಾತ್ಮಕ ರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

    ಮೆಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿದ ಪೋಸ್ಟ್ ನಿಂದ ಶುರುವಾದ ಗಲಾಟೆಯ ಪರಿಣಾಮ ಹುಬ್ಬಳ್ಳಿ ನಗರ ರಾತ್ರೋರಾತ್ರಿ ಹೊತ್ತಿ ಉರಿದಿದೆ. ಹುಬ್ಬಳ್ಳಿಯಲ್ಲಿ ಪುಂಡರ ಗುಂಪು ದೇವಸ್ಥಾನ, ಆಸ್ಪತ್ರೆ, ಬಸ್, ಪೊಲೀಸರ ವಾಹನಗಳ ಮೇಲೆ ಕಲ್ಲೆಸೆದಿದೆ. ಪೊಲೀಸ್ ವಾಹನಗಳನ್ನೇ ಟಾರ್ಗೆಟ್ ಮಾಡಿ ದಾಂಧಲೆ ನಡೆಸಿದೆ.

    ದುಷ್ಕರ್ಮಿಗಳು ಪೊಲೀಸ್ ವಾಹನಗಳನ್ನೇ ಟಾರ್ಗೆಟ್ ಮಾಡಿ ಹಾನಿಗೆಡವಿದ್ದಾರೆ. ಪೊಲೀಸ್ ಜೀಪ್‍ಗಳಿಗೆ ಕಲ್ಲುತೂರಾಟ ಮಾಡಿದ ಪರಿಣಾಮ ಗ್ಲಾಸ್ ಪುಡಿಪುಡಿಯಾಗಿದೆ. ಅಲ್ಲದೆ ಪೊಲೀಸ್ ವಾಹನಗಳನ್ನು ಪಲ್ಟಿ ಮಾಡಿದ ದುಷ್ಕೃತ್ಯ ಮೆರೆಯಲಾಗಿದೆ. ರಾತ್ರಿ ನಡೆದ ಘಟನೆಯಿಂದ 5 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ – ಹುಬ್ಬಳ್ಳಿಯಲ್ಲಿ ಮುಸ್ಲಿಂ ಪುಂಡರಿಂದ ದಾಂಧಲೆ

    ಗಲಭೆಕೋರರು ದೇವಸ್ಥಾನದ ಮೇಲೂ ಕಲ್ಲು ತೂರಿದ ಪರಿಣಾಮ ದಿಡ್ಡಿ ಹನುಮಂತ ದೇವಸ್ಥಾನದ ಕಿಟಕಿ ಗ್ಲಾಸ್ ಪುಡಿಪುಡಿಯಾಗಿದೆ. ಹನುಮ ಜಯಂತಿ ಹಿನ್ನೆಲೆ ದೇಗುಲ ಅಲಂಕೃತಗೊಂಡಿತ್ತು. ಪುಂಡರು ನಡೆಸಿದ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಥಳೀಯ ನಿವಾಸಿಗಳು, ಪೊಲೀಸರು ಬರೋದು ಹತ್ತು ನಿಮಿಷ ತಡವಾಗಿದ್ದರೆ ಪುಂಡರು ಮನೆ ನುಗ್ಗುತ್ತಿದ್ದರು. ಏಕಾಏಕಿ ಮನೆಗಳ ಮುಂದೆ ಬಂದು ಅಲ್ಲಾಹೋ ಅಕ್ಬರ್ ಅಂತ ಘೋಷಣೆ ಕೂಗಲು ಶುರು ಮಾಡಿದರು. ಕಾರ್ ಗ್ಲಾಸ್ ಹೊಡೆದು ಅಂಗಡಿ ಮುಂಗಟ್ಟಿಗೆ ಕಲ್ಲು ಹೊಡೆದರು ಎಂದು ಪಬ್ಲಿಕ್ ಟಿವಿ ತಿಳಿಸಿದರು.

  • ಭಾರೀ ಮಳೆ- ಕೊಚ್ಚಿ ಹೋಯ್ತು ಆಫ್ರಿಕಾದಲ್ಲಿದ್ದ 70 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ

    ಭಾರೀ ಮಳೆ- ಕೊಚ್ಚಿ ಹೋಯ್ತು ಆಫ್ರಿಕಾದಲ್ಲಿದ್ದ 70 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ

    ಜೋಹಾನ್ಸ್‌ಬರ್ಗ್: ಸತತ ಮಳೆಯಿಂದಾಗಿ ದಕ್ಷಿಣ ಆಫ್ರಿಕಾದ ಡರ್ಬನ್‍ನಲ್ಲಿ 70 ವರ್ಷದಷ್ಟು ಹಳೆಯದಾದ ಅಮ್ಮನವರ ದೇವಾಲಯವು ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದೆ.

    ಸತತವಾಗಿ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ದಕ್ಷಿಣ ಆಫ್ರಿಕಾದ ದರ್ಬನ್‍ನಲ್ಲಿ ಭಾರೀ ಅನಾಹುತ ಉಂಟಾಗಿದ್ದು, ಕನಿಷ್ಟ 45 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲಿನ ಹೆದ್ದಾರಿಗಳು ಮತ್ತು ನಗರ ಬೀದಿಗಳು ಸಂಪೂರ್ಣ ಅಸ್ತವ್ಯಸ್ತವಾಗಿದ್ದು, 4 ದಿನಗಳ ನಿರಂತರ ಮಳೆಯಿಂದಾಗಿ ಕಾರುಗಳು ತೇಲುತ್ತಿರುವ ದೃಶ್ಯಗಳು ಕಂಡು ಬಂದವು.

    ಚಂಡಮಾರುತದ ಅಬ್ಬರ ಇನ್ನೂ ತಗ್ಗಿಲ್ಲ. ಸಮುದ್ರ ತೀರಕ್ಕೆ ಹೊಂದಿಕೊಂಡಿರುವ ಡರ್ಬನ್ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ ಎಂದು ಹವಾಮಾನ ಶಾಸ್ತ್ರಜ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ಗಳಿಗೆ ತೇರು ಎಳೆಯುವ ಮುನ್ನ ಕುರಾನ್ ಪಠಣ ಮಾಡುವ ಸಂಪ್ರದಾಯವಿದೆ: ಸಯ್ಯದ್ ಸಜ್ಜಾದ್ ಭಾಷಾ ಖಾದ್ರಿ

    ಅಮ್ಲಾಟುಜಾನಾ ನದಿಯ ದಡದಲ್ಲಿದ್ದ ದೇವಾಲಯವು ಭಾರೀ ಮಳೆಗೆ ಸಂಪೂರ್ಣ ಕುಸಿದಿದ್ದು, ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದೆ. ನಾಲ್ಕು ವರ್ಷಗಳ ಹಿಂದೆ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ದೇವಾಲಯವು ಸ್ವಲ್ಪ ಹಾನಿ ಆಗಿತ್ತು. ಆದರೆ ಅದನ್ನು ರಿಪೇರಿ ಮಾಡಲಾಗಿತ್ತು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಈಶ್ವರಪ್ಪ

    ಈ ಬಗ್ಗೆ ದೇವಸ್ಥಾನ ಸಮಿತಿಯ ಸಹಾಯಕ ಕಾರ್ಯದರ್ಶಿ ಕುರೇಶಾ ಮೂಡ್ಲೆ ಮಾತನಾಡಿ, ವಿಷ್ಣು ದೇವಸ್ಥಾನದಲ್ಲಿ ವಿಗ್ರಹಗಳು ಈಗಲೂ ಇವೆ. ಅವು ಗ್ರಾನೈಟ್ ಮಾಡಲಾಗಿದೆ. ಇದರಿಂದಾಗಿ ದೇಗುಲದ ಅಡಿಪಾಯದೊಂದಿಗೆ ವಿಗ್ರಹಗಳನ್ನು ಸ್ಥಾಪಿಸಿರುವುದರಿಂದ ಉಳಿದುಕೊಂಡಿವೆ. ಇಲ್ಲಿಗೆ ನಿತ್ಯವು ಭಕ್ತರು ಭೇಟಿ ನೀಡುತ್ತಾರೆ. ಆದರೆ ದೇವಿಯ ದೇವಸ್ಥಾನವೂ ಸಂಪೂರ್ಣ ನಾಶವಾಗಿದೆ ಎಂದು ತಿಳಿಸಿದರು.

  • ದೇವಸ್ಥಾನ ಆವರಣದಲ್ಲಿ ಮುಸ್ಲಿಂ ವ್ಯಾಪಾರಿ ಇದ್ದರೂ, ಯಾವ ವೇಷದಲ್ಲಿರಬೇಕು: ಶಾಸಕ ಬೆಲ್ಲದ್

    ದೇವಸ್ಥಾನ ಆವರಣದಲ್ಲಿ ಮುಸ್ಲಿಂ ವ್ಯಾಪಾರಿ ಇದ್ದರೂ, ಯಾವ ವೇಷದಲ್ಲಿರಬೇಕು: ಶಾಸಕ ಬೆಲ್ಲದ್

    ಧಾರವಾಡ: ದೇವಸ್ಥಾನ ಆವರಣದಲ್ಲಿ ಮುಸ್ಲಿಂ ವ್ಯಾಪಾರಿ ಇದ್ದರೂ ಯಾವ ರೀತಿ ವೇಷದಲ್ಲಿರಬೇಕು, ತಲೆ ಮೇಲೆ ಟೋಪಿ ಹಾಕಿ, ಗಡ್ಡ ಬಿಟ್ಟುಕೊಂಡು, ಮೀಸೆ ಬೋಳಿಸಿಕೊಂಡು, ಪಾಯಿಜಾಮ ಹಾಕಿಕೊಂಡಾಗ ಹಿಂದೂ ಭಕ್ತರ ಮನಸಿನಲ್ಲಿ ಇವರಿಗ್ಯಾಕೆ ವ್ಯಾಪಾರಕ್ಕೆ ಅವಕಾಶ ಕೊಡಬೇಕು ಅನಿಸುತ್ತದೆ ಎಂದು ಶಾಸಕ ಅರವಿಂದ್‌ ಬೆಲ್ಲದ್ ಹೇಳಿದರು.

    ಧಾರವಾಡ ನುಗ್ಗಿಕೇರಿ ಧರ್ಮ ವ್ಯಾಪಾರ ಗಲಾಟೆ ವಿಚಾರವಾಗಿ ಮಾತನಾಡಿದ ಅವರು, ಕಲ್ಲಂಗಡಿ ಒಡೆದ ಘಟನೆ ನಡೆಯಬಾರದಿತ್ತು, ಆದರೆ ಇದು ಯಾಕೆ ಆಗುತ್ತಿದೆ ಎನ್ನುವುದರ ಕುರಿತು ವಿಚಾರ ಮಾಡಬೇಕಿದೆ ಎಂದರು.

    ಘಟನೆ ನಡೆಯಲು ಕಾರಣವಾದ ವಿಷಯಗಳ ಬಗ್ಗೆ ನೋಡಬೇಕಿದೆ. ಹೈಕೋರ್ಟ್ ಹಿಜಬ್ ಕುರಿತು ಶಾಲೆಗಳಲ್ಲಿ ಸಮವಸ್ತ್ರ ಧರಿಸಬೇಕು ಎಂದು ತೀರ್ಪು ನೀಡಿತ್ತು. ಇದನ್ನು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಅಂಗಡಿ ಬಂದ್ ಮಾಡಿದ್ದವು. ಆಗಲೇ ಅವರಿಗೆ ಕಾನೂನಿನ ಬಗ್ಗೆ ಕಾಳಜಿ ಹಾಗೂ ಗೌರವ ಇಲ್ಲ ಎನ್ನುವುದು ಗೊತ್ತಾಗಿದೆ ಎಂದ ಅವರು, ತಲೆ ಒಡೆದಾಗ ಇಲ್ಲದ ಕಾಳಜಿ, ಕಲ್ಲಂಗಡಿ ಒಡೆದಾಗ ಏಕೆ ಎಂದು ಸಿಟಿ ರವಿ ಹೇಳಿದ್ದು ಸರಿಯಾಗಿದೆ ಎಂದು ಸಮರ್ಥಿಸಿಕೊಂಡರು.

    ಮುಸ್ಲಿಂ ಸಮಾಜದ ನಾಯಕರು ಮೊದಲು ವಿಚಾರ ಮಾಡಬೇಕಿದೆ. ಇಲ್ಲದೇ ಹೋದಲ್ಲಿ ಆ್ಯಕ್ಷನ್‍ಗೆ-ರಿಯಾಕ್ಷನ್ ಆಗುತ್ತಾ ಹೋಗುತ್ತದೆ ಎಂದ ಅವರು, ನುಗ್ಗಿಕೇರಿ ಖಾಸಗಿ ದೇವಸ್ಥಾನವಾಗಿದೆ. ಅಲ್ಲಿ ಯಾರ ಅಂಗಡಿ ಇರಬೇಕು ಎನ್ನುವುದು ಆಡಳಿತ ಮಂಡಳಿಗೆ ಬಿಟ್ಟ ವಿಷಯವಾಗಿದೆ. ಅದು ಹಿಂದೂ ದೇವಸ್ಥಾನ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬೆಳಗಾವಿ ಬಿಜೆಪಿಯಲ್ಲಿನ ಭಿನ್ನಮತ ಶಮನಕ್ಕೆ ಮುಂದಾದ ಅರುಣ್ ಸಿಂಗ್, ಬಿಎಸ್‍ವೈ

    ಒಂದು ಕಡೆ ಕಾನೂನು ವಿರೋಧಿಸುತ್ತಾರೆ. ಮತ್ತೊಂದೆಡೆ ನಮ್ಮ ದೇವಸ್ಥಾನಕ್ಕೆ ವ್ಯಾಪಾರಕ್ಕೆ ಬರುತ್ತಾರೆ. ಸಮಾಜದಲ್ಲಿ ಈಗ ಎರಡೂ ಕಡೆ ವಿಚಾರ ಮಾಡಬೇಕಿದೆ ಎಂದ ಅವರು, ಒಂದೇ ಕಡೆಯಿಂದ ಚಪ್ಪಾಳೆ ಆಗೋದಿಲ್ಲ, ಎರಡು ಕೈ ಸೇರಿಸಿಯೇ ಚಪ್ಪಾಳೆ ಆಗಬೇಕು, ಹಾಗಂತ ನಾನು ಗಲಾಟೆ ಸಮರ್ಥನೆ ಮಾಡಿಕೊಳ್ಳುತ್ತಿಲ್ಲ ಎಂದರು.

    ಮುಸ್ಲಿಂ ಸಮಾಜದ ನಾಯಕರು ತಪ್ಪು ಆದಾಗ ತಪ್ಪು ಎಂದು ಹೇಳಬೇಕಿದೆ, ಹುಚ್ಚು ಹುಡುಗರು ಹೋಗಿ ದೇವಸ್ಥಾನದಲ್ಲಿ ಹಾಗೆ ಮಾಡಿದ್ದಾರೆ. ಅದಕ್ಕೆ ಪ್ರಚೋದನೆ ಆಗಿದ್ದೇನು ಅದನ್ನು ನೋಡಬೇಕು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಪಿಎಸ್‍ಐ ನೇಮಕಾತಿ ಅಕ್ರಮ ವಿಚಾರ – 7ನೇ ರ‍್ಯಾಂಕ್ ಪಡೆದಿದ್ದ ಕಲಬುರಗಿ ಅಭ್ಯರ್ಥಿ ಸಿಐಡಿ ವಶಕ್ಕೆ

  • ಕಾವಿ ಹಾಕುವ ಕಳ್ಳ ಸ್ವಾಮೀಜಿಗಳ ಮುಖಕ್ಕೆ ಕ್ಯಾಕರಿಸಿ ಉಗಿಬೇಕು: ಎಸ್.ಆರ್. ಶ್ರೀನಿವಾಸ್

    ಕಾವಿ ಹಾಕುವ ಕಳ್ಳ ಸ್ವಾಮೀಜಿಗಳ ಮುಖಕ್ಕೆ ಕ್ಯಾಕರಿಸಿ ಉಗಿಬೇಕು: ಎಸ್.ಆರ್. ಶ್ರೀನಿವಾಸ್

    ತುಮಕೂರು: ಸಮಾಜದಲ್ಲಿ ಶಾಂತಿ ಕಾಪಾಡುವ ಬದಲು ಅಶಾಂತಿ ಉಂಟು ಮಾಡುತ್ತಿರುವ _ಕಾವಿ ಹಾಕುವ ಕಳ್ಳ ಸ್ವಾಮೀಜಿಗಳ ಮುಖಕ್ಕೆ ಕ್ಯಾಕರಿಸಿ ಉಗಿಬೇಕು ಎಂದು ಹಿಂದೂ ಸ್ವಾಮೀಜಿಗಳ ಸಮೂಹದ ವಿರುದ್ದ ಗುಬ್ಬಿ ಕ್ಷೇತ್ರದ ಜೆ.ಡಿ.ಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ವಾಗ್ದಾಳಿ ನಡೆಸಿದ್ದಾರೆ.

    ತುಮಕೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಾವಿರಾರು ವರ್ಷಗಳಿಂದ ಹಿಂದೂ, ಮುಸ್ಲಿಂ ನಾವೆಲ್ಲಾ ಒಂದಾಗಿ ಬದುಕುತ್ತಿದ್ದೇವೆ. ಆದರೆ ಇಂದು ಸ್ವಾಮೀಜಿಗಳು ಧರ್ಮ ಧರ್ಮದ ನಡುವೆ ವೈಮನಸ್ಸು ಬೆಳೆಸುತ್ತಿದ್ದಾರೆ. ಆ ಧರ್ಮದ ಡ್ರೈವರ್ ಇಟ್ಕೊಂಡು ದೇವಸ್ಥಾನಕ್ಕೆ ಹೋಗಬೇಡ ಎಂದು ಒಬ್ಬ ಸ್ವಾಮೀಜಿ ಹೇಳಿದ್ರೆ, ಇನ್ನೊಬ್ಬ ಯಾವನೋ ಸ್ವಾಮೀಜಿ ಹಿಜಬ್ ಎಂದು ಹೇಳಿ ಸಾಮರಸ್ಯ ಕದಡುತ್ತಾನೆ ಎಂದು ಏಕ ವಚನದಲ್ಲಿ ಟೀಕಿಸಿದ್ದಾರೆ. ಇದನ್ನೂ ಓದಿ: ಮದ್ಯ ಸೇವನೆಗೆ ಹಣಕೊಡಲಿಲ್ಲವೆಂದು ತಂದೆಯನ್ನೆ ಕೊಂದ ಪಾಪಿ

    ಯಾವತ್ತೋ ಮುಸ್ಲಿಮರು ಮಾಡಿದ್ದ ವಿಗ್ರಹಕ್ಕೆ ಪೂಜೆ ಮಾಡಬೇಡಿ ಅಂತಾರೆ ಈ ಸ್ವಾಮಿಗಳು, ಆದರೆ ನಮ್ಮೂರಲ್ಲಿ ಶೇ.90 ದೇವಸ್ಥಾನ ಕಟ್ಟಿರೋರು ಮುಸ್ಲಿಮರೆ ಆಗಿದ್ದಾರೆ. ಯಾವನೋ ತಲೆ ಕೆಟ್ಟ ಸ್ವಾಮಿ ಹೇಳಿದ್ದಾನೆ. ವಿಗ್ರಹ ಕಿತ್ತುಹಾಕೋಕಾಗುತ್ತಾ? ಮೊದಲು ಈ ಕಾವಿ ಹಾಕಿ ಬರುವ ಸ್ವಾಮೀಜಿಗಳಿಗೆ ಕ್ಯಾಕರಿಸಿ ಮುಖಕ್ಕೆ ಉಗಿಬೇಕು ಎಂದು ಗುಡುಗಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಬೆಳ್ಳಂಬೆಳಗ್ಗೆಯೇ ಅಗ್ನಿ ದುರಂತ: 5 ಅಂಗಡಿಗಳು ಭಸ್ಮ

    ಸ್ವಾಮೀಜಿಗಳ ಕೆಲಸ ಸಮಾಜದಲ್ಲಿ ಶಾಂತಿ ಕಾಪಾಡೋದು, ಸಮಾಜಕ್ಕೆ ಒಳ್ಳೆ ಸಂದೇಶ ಕೊಡುವುದು ಅವರ ಜವಾಬ್ದಾರಿ ಆಗಿದೆ. ಆದರೆ ಇವೆಲ್ಲಾ ಬಿಟ್ಟು ಬೀದಿಗೆ ಬಂದಿದ್ದಾರೆ. ಹಿಂದೂಗಳ ಸಂಘಟನೆ ಮಾಡುತ್ತೇವೆ ಅನ್ನುವ ಇವರು ಏನ್ ಸಂಘಟನೆ ಮಾಡುತ್ತಾರೆ. ಮುಸ್ಲಿಮರನೆಲ್ಲಾ ಈ ದೇಶಬಿಟ್ಟು ಓಡಿಸಬೇಕು. ಓಡಿಸಲು ಇವರಿಂದ ಸಾಧ್ಯನಾ ಎಂದು ಪ್ರಶ್ನಿಸಿದ್ದಾರೆ.

     

  • ಹಿಂದೂಯೇತರ ಅಂಗಡಿಯಲ್ಲಿದ್ದ ಕಲ್ಲಂಗಡಿ, ತೆಂಗಿನಕಾಯಿ ಒಡೆದುಹಾಕಿದ ಶ್ರೀರಾಮಸೇನೆ ಕಾರ್ಯಕರ್ತರು

    ಹಿಂದೂಯೇತರ ಅಂಗಡಿಯಲ್ಲಿದ್ದ ಕಲ್ಲಂಗಡಿ, ತೆಂಗಿನಕಾಯಿ ಒಡೆದುಹಾಕಿದ ಶ್ರೀರಾಮಸೇನೆ ಕಾರ್ಯಕರ್ತರು

    ಧಾರವಾಡ: ದೇವಸ್ಥಾನದ ಬಳಿ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕೆಂಬ ಚರ್ಚೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನವೊಂದರ ಬಳಿ ಹಿಂದೂಯೇತರರು ಮಾರಾಟಮಾಡುತ್ತಿದ್ದ ಕಲ್ಲಂಗಡಿ ಹಾಗೂ ತೆಂಗಿನಕಾಯಿಯನ್ನು ಶ್ರೀರಾಮಸೇನೆ ಕಾರ್ಯಕರ್ತರು ಒಡೆದು ಹಾಕಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

    ಧಾರವಾಡ ಹೊರವಲಯದ ನುಗ್ಗಿಕೇರೆ ಆಂಜನೇಯನ ದೇವಸ್ಥಾನಕ್ಕೆ ಶನಿವಾರ ಸಾವಿರಾರು ಭಕ್ತರು ಬಂದು ದರ್ಶನ ಪಡೆಯುತ್ತಾರೆ. ದೇವಸ್ಥಾನದ ಬಳಿ 4 ಹಿಂದೂಯೇತರ ಅಂಗಡಿಗಳಿದ್ದು, ಕಳೆದ 15 ದಿನಗಳ ಹಿಂದೆ ಶ್ರೀರಾಮ ಸೇನೆಯ ಕಾರ್ಯಕರ್ತರು ದೇವಸ್ಥಾನದ ಬಳಿ ಬಂದು ಪ್ರತಿಭಟನೆ ಮಾಡಿದ್ದರು. ಈ ವೇಳೆ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಮನವಿ ಮಾಡಿದ್ದರು. ಶನಿವಾರ ಹಿಂದೂಯೇತರ ಅಂಗಡಿಗಳು ಮುಚ್ಚದೇ ಇದ್ದಿದ್ದರಿಂದ ಶ್ರೀರಾಮ ಸೇನೆ ಕಾರ್ಯಕರ್ತರು ಸ್ಥಳಕ್ಕೆ ಬಂದು ಅಂಗಡಿಗಳಲ್ಲಿದ್ದ ಕಲ್ಲಂಗಡಿ ಹಣ್ಣು ಹಾಗೂ ತೆಂಗಿನಕಾಯಿಗಳನ್ನು ಒಡೆದು ಹಾಕಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗಲ್ಲ: ನಲಪಾಡ್

    ಘಟನೆಯಿಂದ ನಷ್ಟ ಅನುಭವಿಸಿದ ಹಿಂದೂಯೇತರ ವ್ಯಾಪಾರಿ ನಬಿಸಾಬ್, ನೋಡ ನೋಡುತ್ತಿದ್ದಂತೆಯೇ ಎಲ್ಲಾ ಒಡೆಯುತ್ತ ಬಂದರು. ಅವರು 8-10 ಜನ ಇದ್ದರು. ನಾನೊಬ್ಬನೇ ಇದ್ದಿದ್ದರಿಂದ ಏನೂ ಮಾಡಲಾಗಲಿಲ್ಲ. 6 ಕ್ವಿಂಟಾಲ್ ಕಲ್ಲಂಗಡಿ ಹಣ್ಣು ತೆಗೆದುಕೊಂಡು ಬಂದಿದ್ದೆ. ಅದರಲ್ಲಿ 1 ಕ್ವಿಂಟಾಲ್ ಮಾತ್ರ ಮಾರಾಟವಾಗಿತ್ತು ಎಂದು ಮರುಗಿದರು.

    ನಾನು ಕಳೆದ 15 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇನೆ. ಕಳೆದ ವಾರ ಇಲ್ಲಿ ಮುಸ್ಲಿಮರಿಗೆ ಅಂಗಡಿ ಹಾಕಬೇಡಿ ಎಂದಿದ್ದರು. ಮುಂದಿನ ವಾರವೇ ದೇವಸ್ಥಾನದ ಜಾತ್ರೆ ಇತ್ತು. ಜಾತ್ರೆಯ ಬಳಿಕ ಹಿಂದೂಯೇತರ ಅಂಗಡಿಗಳನ್ನು ಇಲ್ಲಿ ಇಡಬೇಕಾ, ಬೆಡವಾ ಎಂದು ನಿರ್ಧಾರ ಆಗಬೇಕಿತ್ತು. ಅಷ್ಟರಲ್ಲಿ ಈ ಗಲಾಟೆ ನಡೆಸಲಾಗಿದೆ. ಮತ್ತೊಂದು ಕಡೆ ದೇವಸ್ಥಾನದ ಆಡಳಿತ ಮಂಡಳಿ ಎಲ್ಲ ಪರ್ಯಾಯಸ್ಥರ ಸಭೆ ಮಾಡಿ, ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.

    ಘಟನೆ ಬಗ್ಗೆ ಪ್ರತಿಕ್ರಿಯಿಸಿದ ದೇವಸ್ಥಾನದ ಪರ್ಯಾಯಸ್ಥರು, ಶನಿವಾರ ಯಾವಾಗಲೂ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಾರೆ. ಹೀಗಾಗಿ ಆ ಕಡೆ ಗಲಾಟೆ ನಡೆದಿರುವ ಬಗ್ಗೆ ಲಕ್ಷ್ಯ ಕೊಡಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಸಭೆ ಮಾಡಿ ಏನಾಗಿದೆ ಎಂದು ಮಾಹಿತಿ ಕೊಡುತ್ತೇನೆ ಎಂದರು. ಇದನ್ನೂ ಓದಿ: ಲವ್ ಜಿಹಾದ್‍ಗೆ ಮುಂದಾದವರ ಮನೆ ಹೊಕ್ಕು ಹೊಡೆಯಬೇಕು: EX MLC ನಾರಾಯಣಸಾ ಭಾಂಡಗೆ

    ಕಳೆದ ತಿಂಗಳು ಈ ವಿಚಾರವಾಗಿ ಮನವಿ ಬಂದಿತ್ತು. ನಾನು ಬಂದು ಇನ್ನೂ ಒಂದು ತಿಂಗಳಾಗಲಿಲ್ಲ. ಮನವಿ ಹಾಗೂ ಗಲಾಟೆ ಬಗ್ಗೆ ಸಭೆ ಕರೆದು ನೋಡುತ್ತೇವೆ. ಅಂಗಡಿಗಳಿಗೆ ಅನುಮತಿ ಕೊಡುವುದು ನಾವೆ. ನಾವು ಅವರಿಂದ ಬಾಡಿಗೆ ತೆಗೆದುಕೊಳ್ಳುವುದಿಲ್ಲ. ಬಡವರು ಎಂದು ಅಂಗಡಿ ನಡೆಸಲು ಕೊಟ್ಟಿದ್ದೇವೆ. ಇಲ್ಲಿರುವ ಶೇ.99 ರಷ್ಟು ವ್ಯಾಪಾರಿಗಳು ಹಿಂದೂಗಳು. ಎಲ್ಲರಿಗೂ ಹೊಟ್ಟೆ ಪಾಡಿದೆ. ನಾವು ಎಲ್ಲರಿಗೂ ಸಹಾಯ ಮಾಡುತ್ತೇವೆ ಎಂದರು.

  • ಧ್ವನಿವರ್ಧಕ ಬಳಕೆಗೆ ಶಬ್ಧ ಮಿತಿ ಹೇರಿಕೆ; 713 ಧಾರ್ಮಿಕ ಕೇಂದ್ರಗಳಿಗೆ ನೋಟಿಸ್

    ಧ್ವನಿವರ್ಧಕ ಬಳಕೆಗೆ ಶಬ್ಧ ಮಿತಿ ಹೇರಿಕೆ; 713 ಧಾರ್ಮಿಕ ಕೇಂದ್ರಗಳಿಗೆ ನೋಟಿಸ್

    ಯಾದಗಿರಿ/ಕೊಪ್ಪಳ: ರಂಜಾನ್ ಮಾಸಾಚರಣೆ ಹಿನ್ನೆಲೆಯಲ್ಲಿ ಆಜಾನ್ ಕೂಗಲಾಗುತ್ತಿದ್ದು, ಇದಕ್ಕಾಗಿ ಬಳಸುವ ಧ್ವನಿವರ್ಧಕಗಳಿಗೆ ಶಬ್ಧ ಮಿತಿಗೊಳಿಸುವಂತೆ ಒತ್ತಾಯಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಯ ಪೊಲೀಸ್ ಇಲಾಖೆಯು ಮಸೀದಿ, ಚರ್ಚ್ ಹಾಗೂ ದೇವಾಲಯಗಳೂ ಸೇರಿದಂತೆ ಸುಮಾರು 713 ಧಾರ್ಮಿಕ ಕೇಂದ್ರಗಳಿಗೆ ಅಧಿಕೃತವಾಗಿ ನೋಟಿಸ್ ಜಾರಿಗೊಳಿಸಿದೆ.

    ಯಾದಗಿರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಕೊಪ್ಪಳ ಜಿಲ್ಲೆಯ ಪೊಲೀಸ್ ಇಲಾಖೆಯು ಜಿಲ್ಲೆಯ ಎಲ್ಲ ದೇವಸ್ಥಾನ, ಮಸೀದಿ, ಚರ್ಚ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಮಾಡುವವರಿಗೆ ನೋಟಿಸ್ ಜಾರಿಗೊಳಿಸಿದೆ. ಇದನ್ನೂ ಓದಿ: ಆಜಾನ್‌ನಿಂದ ವಿದ್ಯಾರ್ಥಿಗಳು, ವೃದ್ಧರು, ರೋಗಿಗಳಿಗೆ ತೊಂದರೆ ಆಗ್ತಿದೆ: ಈಶ್ವರಪ್ಪ

    loud speaker

    ಕೊಪ್ಪಳ ಜಿಲ್ಲೆಯ ಸುಮಾರು 450ಕ್ಕೂ ಹೆಚ್ಚು ಧಾರ್ಮಿಕ ಕೇಂದ್ರ, ಯಾದಗಿರಿ ಜಿಲ್ಲೆಯಲ್ಲಿರುವ 137 ದೇವಸ್ಥಾನ, 115 ಮಸೀದಿ, 11 ಚರ್ಚ್ ಸೇರಿದಂತೆ ಒಟ್ಟು 263 ಕೇಂದ್ರಗಳಿಗೆ 1986ರ ಅಡಿಯಲ್ಲಿ ನಿಗದಿ ಪಡಿಸಿದ ಡಿಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದ ಉಪಯೋಗ ಮಾಡದಂತೆ ಆದೇಶಿಸಿ ನೋಟಿಸ್ ನೀಡಲಾಗಿದೆ. ಜೊತೆಗೆ ಪರಿಸರ ಸಂರಕ್ಷಣೆ ಕಾಯ್ದೆಯಡೀ ನಿಯಮ ಪಾಲಿಸಬೇಕು, ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿದೆ.

     

  • ಮೇಲುಕೋಟೆ ಚೆಲುವನಾರಾಯಣನಿಗೆ ದೀವಟಿಗೆ ಸಲಾಂ ಆರತಿ ವಿವಾದ – ಸಂಧ್ಯಾರತಿ ಎಂದು ಕರೆಯುವಂತೆ ಪಟ್ಟು

    ಮೇಲುಕೋಟೆ ಚೆಲುವನಾರಾಯಣನಿಗೆ ದೀವಟಿಗೆ ಸಲಾಂ ಆರತಿ ವಿವಾದ – ಸಂಧ್ಯಾರತಿ ಎಂದು ಕರೆಯುವಂತೆ ಪಟ್ಟು

    ಮಂಡ್ಯ/ಬೆಂಗಳೂರು: ಮೇಲುಕೋಟೆ ಚೆಲುವನಾರಾಯಣನಿಗೆ ದೀವಟಿಗೆ ಸಲಾಂ ಆರತಿ ಕೂಡ ವಿವಾದದ ವಸ್ತುವಾಗಿ ಮಾರ್ಪಟ್ಟಿದೆ. ಸಲಾಂ ಆರತಿ ಎಂದು ಕರೆಯುವ ಬದಲು ಸಂಧ್ಯಾರತಿ ಎಂದು ಕರೆಯುವಂತೆ ಮಂಡ್ಯ ಜಿಲ್ಲಾ ಧಾರ್ಮಿಕ ಪರಿಷತ್ ಒತ್ತಾಯಿಸಿದೆ.

    ಈ ಬೆನ್ನಲ್ಲೇ, ದೀವಟಿಗೆ ಸಲಾಂ ವಿಚಾರವಾಗಿ ದೇವಾಲಯದ ಆಡಳಿತ ಮಂಡಳಿಯಿಂದ ಜಿಲ್ಲಾಡಳಿತ ವರದಿ ಕೇಳಿದೆ. ಜಿಲ್ಲಾ ಧಾರ್ಮಿಕ ಪರಿಷತ್ ಮನವಿಯನ್ನು ಪರಿಶೀಲಿಸಿ ಸ್ಪಷ್ಟವಾದ ಅಭಿಪ್ರಾಯ ತಿಳಿಸುವಂತೆ ಸೂಚನೆ ನೀಡಿದೆ. ಈ ಸಂಬಂಧ ಸಭೆ ನಡೆಸಿದ ದೇಗುಲದ ಸ್ಥಾನಿಕರು, ಸಂಜೆ ವೇಳೆ ನಡೆಯುತ್ತಿದ್ದ ದೀವಟಿಗೆ ಸಲಾಂ ಆರತಿ ಕೈಬಿಟ್ಟು, ಅದರ ಬದಲುಸಂಧ್ಯಾರತಿ ಎಂದು ಹೆಸರಿಡಬಹುದು ಎಂದು ಲಿಖಿತ ರೂಪದಲ್ಲಿ ವರದಿ ನೀಡಿದ್ದಾರೆ. ನಮ್ಮ ಅಭಿಪ್ರಾಯವನ್ನು ಸರ್ಕಾರ ಪರಿಗಣಿಸುವ ವಿಶ್ವಾಸವಿದೆ ಎಂದು ಮೇಲುಕೋಟೆ ಚಲುವನಾರಾಯಣ ಸ್ವಾಮಿ ದೇಗುಲದ ಸ್ಥಾನಿಕರಾದ ಶ್ರೀನಿವಾಸನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಲಾಲ್‌ ಆಯ್ತು ಈಗ ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪಿಸದಂತೆ ಅಭಿಯಾನ

    ಇತ್ತ ಬೆಂಗಳೂರಿನಲ್ಲಿ ವಿಶ್ವಪ್ರಸಿದ್ಧ ಬೆಂಗಳೂರು ಕರಗ ಉತ್ಸವ ಮೂರ್ತಿಯನ್ನು ದರ್ಗಾಗೆ ಕೊಂಡೊಯ್ಯುವುದನ್ನು ಕೆಲ ಹಿಂದೂ ಸಂಘಟನೆಗಳು ವಿರೋಧ ಮಾಡಿವೆ. ಆದ್ರೇ, ಇದಕ್ಕೆ ಕರಗ ಉತ್ಸವ ಸಮಿತಿ ಡೋಂಟ್ ಕೇರ್ ಎಂದಿದೆ. ನಾವು ನಮ್ಮ ಸಂಪ್ರದಾಯವನ್ನು ಮುಂದುವರೆಸುತ್ತೇವೆ. ಇದುವರೆಗೂ ಯಾರು ಬಂದು ನಮ್ಮನ್ನು ಭೇಟಿ ಮಾಡಿಲ್ಲ. ಈಗಾಗಲೇ ಮೌಲ್ವಿಗಳು ಬಂದು ಆಹ್ವಾನ ನೀಡಿ ಹೋಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಮಸ್ತಾನ್ ಸಾಬ್ ದರ್ಗಾಗೆ ಕರಗ ಉತ್ಸವ ಮೂರ್ತಿ ತೆರಳಲಿದೆ. ಇದು ಸಾಮರಸ್ಯದ ಸಂಕೇತ ಎಂದು ಕರಗ ಉತ್ಸವ ಸಮಿತಿ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ರಂಜಾನ್ ತಿಂಗಳಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಆಂಧ್ರ ಸರ್ಕಾರದಿಂದ ವಿಶೇಷ ಆದ್ಯತೆ

  • ಶಬ್ದ ಮಾಲಿನ್ಯ ನಿಯಮ ಪಾಲಿಸದ ಮಂದಿರ, ಮಸೀದಿ, ಚರ್ಚ್‍ಗಳಿಗೆ ನೋಟಿಸ್

    ಶಬ್ದ ಮಾಲಿನ್ಯ ನಿಯಮ ಪಾಲಿಸದ ಮಂದಿರ, ಮಸೀದಿ, ಚರ್ಚ್‍ಗಳಿಗೆ ನೋಟಿಸ್

    ಬೆಂಗಳೂರು: ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಶಬ್ದ ಮಾಲಿನ್ಯ ನಿಯಮ ಪಾಲಿಸದ ದೇವಸ್ಥಾನ, ಮಸೀದಿ, ಚರ್ಚ್‍ಗಳಿಗೆ ಈಗಾಗಲೇ ಪೊಲೀಸ್ ಇಲಾಖೆ ನೋಟಿಸ್ ನೀಡಿದೆ.

    ರಾಜ್ಯ ರಾಜಧಾನಿಯಲ್ಲಿ ಶಬ್ದ ಮಾಲಿನ್ಯದ ನಿಗಮಗಳನ್ನು ಪಾಲಿಸದೇ ಅನೇಕರು ದೇವಸ್ಥಾನ, ಮಸೀದಿ ಹಾಗೂ ಚರ್ಚ್‍ಗಳು ಧ್ವನಿವರ್ಧಕಗಳನ್ನು ಬಳಸುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಎಲ್ಲಾ ಡಿವಿಷನ್‍ಗಳ ಧಾರ್ಮಿಕ ಸ್ಥಳಗಳಿಗೆ ಪೊಲೀಸ್ ಇಲಾಖೆ ನೋಟಿಸ್ ಜಾರಿಗೊಳಿಸಿವೆ.

    ಬೆಂಗಳೂರಿನ ಒಟ್ಟು 125 ಮಸೀದಿ, 83 ದೇವಸ್ಥಾನ, 22 ಚರ್ಚ್‍ಗಳಿಗೆ ನೋಟಿಸ್ ಜಾರಿಯಾಗಿದೆ. ಫೆಬ್ರವರಿ ತಿಂಗಳಲ್ಲಿ ಒಟ್ಟಾರೆ 301 ಧಾರ್ಮಿಕ ಸ್ಥಳಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಅಷ್ಟೇ ಅಲ್ಲದೇ ಒಂದಷ್ಟು ಮಸೀದಿ ಹಾಗೂ ದೇವಸ್ಥಾನಗಳಿಗೆ ಖಡಕ್ ಸೂಚನೆಯನ್ನು ನೀಡಿದೆ. ಇದನ್ನೂ ಓದಿ: ಇತಿಹಾಸ ಪ್ರಸಿದ್ಧ ಬನವಾಸಿ ಮಧುಕೇಶ್ವರ ರಥೋತ್ಸವಕ್ಕೆ ಹಿಂದೂಯೇತರ ವ್ಯಾಪಾರಿಗಳಿಗೆ ನಿರ್ಬಂಧ

    ವಿಭಾಗವಾರು ಎಷ್ಟು?
    ಪೂರ್ವ ವಿಭಾಗ – 14 ಮಸೀದಿ, 8 ದೇವಸ್ಥಾನ 3 ಚರ್ಚ್.
    ಪಶ್ಚಿಮ ವಿಭಾಗ – 24 ಮಸೀದಿ, 2 ದೇವಸ್ಥಾನ, 1 ಚರ್ಚ್.
    ಉತ್ತರ ವಿಭಾಗ – 32 ಮಸೀದಿ, 7 ದೇವಸ್ಥಾನ, 5 ಚರ್ಚ್.

    ದಕ್ಷಿಣ ವಿಭಾಗ – 17 ಮಸೀದಿ, 34 ದೇವಸ್ಥಾನ, 4 ಚರ್ಚ್.
    ಈಶಾನ್ಯ ವಿಭಾಗ – 21 ಮಸೀದಿ, 12 ದೇವಸ್ಥಾನ, 4 ಚರ್ಚ್.
    ಆಗ್ನೇಯ ವಿಭಾಗ – 17 ಮಸೀದಿ, 20 ದೇವಸ್ಥಾನ, 5 ಚರ್ಚ್.

    ರಾಜ್ಯದಲ್ಲಿ ಹಿಜಬ್ ಬಳಿಕ ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮರಿಗೆ ನಿಷೇಧ, ಹಲಾಲ್ ಕಟ್ ಅಭಿಯಾನ ಮಾಡಿದ್ದ ಹಿಂದೂ ಸಂಘಟನೆಗಳು ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಅಭಿಯಾನ ಆರಂಭಿಸಿವೆ. ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಇರುವುದರಿಂದ ಹಿರಿಯ ನಾಗರಿಕರಿಗೆ, ಮಕ್ಕಳಿಗೆ ಸಮಸ್ಯೆ ಆಗುತ್ತಿದೆ. ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗುತ್ತಿದೆ ಎಂದು ಕೆಲವು ಹಿಂದೂ ಸಂಘಟನೆಗಳು ಆರೋಪಿಸುತ್ತಿವೆ. ಇದನ್ನೂ ಓದಿ: ಜನಾಂಗ, ಧರ್ಮ, ಪಕ್ಷವನ್ನು ಬದಿಗಿರಿಸಿ ದೇಶಕ್ಕಾಗಿ ಒಂದಾಗಿ: ಮುತ್ತಯ್ಯ ಮುರುಳೀಧರನ್