Tag: ದೇವಸ್ಥಾನ

  • ಸಂಸದ ವೀರಪ್ಪ ಮೊಯ್ಲಿಯಿಂದ ನೀತಿ ಸಂಹಿತೆ ಉಲ್ಲಂಘನೆ

    ಸಂಸದ ವೀರಪ್ಪ ಮೊಯ್ಲಿಯಿಂದ ನೀತಿ ಸಂಹಿತೆ ಉಲ್ಲಂಘನೆ

    ಚಿಕ್ಕಬಳ್ಳಾಪುರ: ಸಂಸದ ವೀರಪ್ಪ ಮೊಯ್ಲಿ ಮೂರು ಕಾರಿಗೆ ಅನುಮತಿ ಪಡೆದು ಮೂವತ್ತು ವಾಹನದಲ್ಲಿ ಆಗಮಿಸುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

    ಚುನಾವಣಾ ಅಧಿಕಾರಿಗಳು ಚುನಾವಣಾ ಪ್ರಚಾರಕ್ಕೆ ಮೂರು ವಾಹನಗಳಿಗೆ ಮಾತ್ರ ಅನುಮತಿ ನೀಡಿ ಪತ್ರ ಬರೆದಿತ್ತು. ಆದರೆ ವೀರಪ್ಪಮೊಯ್ಲಿ ವಾಹನದ ಹಿಂದೆ ಮೂವತ್ತಕ್ಕೂ ಹೆಚ್ಚು ವಾಹನಗಳ ಓಡಾಟ ನಡೆಸುತ್ತಿದೆ.

    ಇಂದು ವೀರಪ್ಪ ಮೊಯ್ಲಿ ನಾಮಪತ್ರ ಸಲ್ಲಿಸುವ ಮುನ್ನ ಚಿಕ್ಕಬಳ್ಳಾಪುರ ತಾಲೂಕಿನ ನಂದಿಯಲ್ಲಿರುವ ಭೋಗನಂಧೀಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಎಂಟಿಬಿ ನಾಗರಾಜ್ ಆರತಿ ತಟ್ಟೆಗೆ 1 ಸಾವಿರ ರೂ. ಹಾಕಿದರೆ, ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣ್ಣಯ್ಯ ಅವರು 200 ರೂ. ಹಾಕಿದ್ದಾರೆ.

    ನಾಮಪತ್ರ ಸಲ್ಲಿಕೆಗೂ ಮುನ್ನ ವೀರಪ್ಪ ಮೊಯ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಿದ್ದಾರೆ. ವೀರಪ್ಪ ಮೊಯ್ಲಿಗೆ ಸಚಿವ ಎಂಟಿಬಿ ನಾಗರಾಜ್, ಶಿವಶಂಕರರೆಡ್ಡಿ, ಶಾಸಕ ಸುಧಾಕರ್ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದ್ದಾರೆ.

    ದೇವಸ್ಥಾನ ನಂತರ ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರ ತಾಲೂಕು ನಂದಿ ಗ್ರಾಮದಲ್ಲಿರುವ ದರ್ಗಾಗೆ ಭೇಟಿ ನೀಡಿದ್ದಾರೆ. ಶ್ರೀ ಭೋಗನಂಧೀಶ್ವರ ದೇವಾಲಯದ ಹಿಂಭಾಗದಲ್ಲೇ ದರ್ಗಾ ಇರುವುದರಿಂದ ಮೊಯ್ಲಿ ಅಲ್ಲಿಗೂ ಭೇಟಿ ನೀಡಿದ್ದಾರೆ. ವೀರಪ್ಪಮೊಯ್ಲಿ ಟೆಂಪಲ್ ರನ್ ಗೆ ಶಾಸಕರು ಬೆಂಬಲಿಗರು ಸಾಥ್ ನೀಡಿದ್ದಾರೆ.

  • 1 ಗಂಟೆಯಿಂದ ಸಾಲಿನಲ್ಲಿ ನಿಂತಿದ್ದೇವೆ, ನೀವು ಈಗ ಬಂದು ದರ್ಶನ ಪಡೆದಿದ್ದೀರಿ: ಎಂಬಿಪಿಗೆ ವಿದ್ಯಾರ್ಥಿನಿ ಪ್ರಶ್ನೆ

    1 ಗಂಟೆಯಿಂದ ಸಾಲಿನಲ್ಲಿ ನಿಂತಿದ್ದೇವೆ, ನೀವು ಈಗ ಬಂದು ದರ್ಶನ ಪಡೆದಿದ್ದೀರಿ: ಎಂಬಿಪಿಗೆ ವಿದ್ಯಾರ್ಥಿನಿ ಪ್ರಶ್ನೆ

    ವಿಜಯಪುರ: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಶಿವನ ದರ್ಶನ ಪಡೆಯಲು ಭಕ್ತರು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಗೃಹ ಸಚಿವ ಎಂ.ಬಿ ಪಾಟೀಲ್ ನೇರವಾಗಿ ಶಿವ ದರ್ಶನ ಪಡೆದಿದ್ದಾರೆ. ನೇರವಾಗಿ ಶಿವನ ದರ್ಶನ ಪಡೆದ ಎಂ.ಬಿ ಪಾಟೀಲ್ ರನ್ನು ವಿದ್ಯಾರ್ಥಿನಿಯೊಬ್ಬಳು ಪ್ರಶ್ನಿಸಿದ್ದಾಳೆ.

    ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಎಂ.ಬಿ ಪಾಟೀಲ್ ಬಿಎಲ್ಡಿಇ ಆವರಣದಲ್ಲಿರುವ ಪುರಾಣ ಪ್ರಸಿದ್ಧ 770 ಲಿಂಗದ ಗುಡಿ ಶಿವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ಅವರು ನೇರವಾಗಿ ಶಿವನ ದರ್ಶನ ಪಡೆದು ಹೋದರು. ಈ ವೇಳೆ ವಿದ್ಯಾರ್ಥಿನಿ ಸಚಿವರನ್ನು ಪ್ರಶ್ನಿಸಿದ್ದಾಳೆ.

    ಒಂದು ಗಂಟೆಯಿಂದ ಸಾಲಿನಲ್ಲಿ ನಿಂತಿದ್ದೇವೆ. ನೀವು ಈಗ ಬಂದು ದರ್ಶನ ಪಡೆದಿದ್ದೀರಾ ಎಂದು ವಿದ್ಯಾರ್ಥಿನಿ ಪ್ರಶ್ನಿಸಿದ್ದಾಳೆ. ಅದಕ್ಕೆ ಎಂ.ಬಿ ಪಾಟೀಲ್ ತುರ್ತಾಗಿ ತೆರಳುವುದಿದೆ ಎಂದು ಬಾಲಕಿಗೆ ಸಮಜಾಯಿಸಿ ನೀಡಿದ್ದರು. ಅಲ್ಲದೇ ನನಗೂ ಸಾಮಾನ್ಯನಂತೆ ಜೀವಿಸುವ ಇಚ್ಛೆಯಿದೆ. ಹಾಗಾಗಿ ನಾನಗಿ ಝೀರೋ ಟ್ರಾಫಿಕ್ ಬೇಡ ಎಂದು ಸೂಚಿಸಿದ್ದೇನೆ ಎಂದು ನಯವಾಗಿ ಉತ್ತರಿಸಿದರು.

    ಬಳಿಕ ದೇವಸ್ಥಾನದಿಂದ ತೆರಳುವ ವೇಳೆ ಎಂ.ಬಿ ಪಾಟೀಲ್ ವಿದ್ಯಾರ್ಥಿನಿಗೆ ಕ್ಷಮೆ ಕೇಳಿದಲ್ಲದೇ ನಿನ್ನ ಸಲಹೆಯನ್ನು ನಾನು ಸ್ವೀಕರಿಸುತ್ತೇನೆ ಎಂದು ವಿದ್ಯಾರ್ಥಿನಿಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಈಡುಗಾಯಿ ವಿಚಾರದಲ್ಲಿ ಗಲಾಟೆ- ತಲೆ ಮೇಲೆಯೇ ತೆಂಗಿನಕಾಯಿ ಒಡೆದ ಯುವಕರು

    ಈಡುಗಾಯಿ ವಿಚಾರದಲ್ಲಿ ಗಲಾಟೆ- ತಲೆ ಮೇಲೆಯೇ ತೆಂಗಿನಕಾಯಿ ಒಡೆದ ಯುವಕರು

    ಮೈಸೂರು: ದೇವಸ್ಥಾನದಲ್ಲಿ ಈಡುಗಾಯಿ ವಿಚಾರದಲ್ಲಿ ಗಲಾಟೆ ನಡೆದು ವೇಳೆ ಇಬ್ಬರು ಯುವಕರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ.

    ಮಹದೇವಸ್ವಾಮಿ ಹಾಗೂ ಮಂಜು ಗಾಯಗೊಂಡ ಯುವಕರು. ಗಲಾಟೆಯ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ. ಗ್ರಾಮದಲ್ಲಿ ನಡೆದ ಮಾರಮ್ಮನ ಹಬ್ಬ ಆಚರಣೆ ವೇಳೆ ಇತ್ತೀಚೆಗೆ ನವೀಕರಣಗೊಂಡ ಮಾರಮ್ಮನ ದೇವಸ್ಥಾನದಲ್ಲಿ ಇಡುಗಾಯಿ ಹೊಡೆಯುವ ವಿಚಾರದಲ್ಲಿ ಗಲಾಟೆ ನಡೆದಿದೆ.

    ಹೊಸದಾಗಿ ಹಾಕಲಾಗಿದ್ದ ಟೈಲ್ಸ್ ಮೇಲೆ ತೆಂಗಿನಕಾಯಿ ಹೊಡೆಯಲು ಕೆಲವರು ವಿರೋಧಿಸಿದ್ದಾರೆ. ಟೈಲ್ಸ್ ಮೇಲೆ ಈಡುಗಾಯಿ ಹೊಡೆಯಲು ಬಂದಾಗ ಮಾತಿನ ಚಕಮಕಿ ಶುರುವಾಗಿ ಯುವಕರ ತಲೆ ಮೇಲೆ ಕೆಲವರು ತೆಂಗಿನಕಾಯಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಂಪಿ ನಂತ್ರ ಅಂಜನಾದ್ರಿ ಬೆಟ್ಟಕ್ಕೆ ಯದುವೀರ್ ಒಡೆಯರ್ ಭೇಟಿ

    ಹಂಪಿ ನಂತ್ರ ಅಂಜನಾದ್ರಿ ಬೆಟ್ಟಕ್ಕೆ ಯದುವೀರ್ ಒಡೆಯರ್ ಭೇಟಿ

    ಕೊಪ್ಪಳ: ಮೈಸೂರು ಸಂಸ್ಥಾನದ ರಾಜ ಯದುವೀರ್ ಒಡೆಯರ್ ಅವರು ಇಂದು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

    ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿ ಇರುವ ಪೌರಾಣಿಕ ಹಾಗೂ ಐತಿಹಾಸಿಕ ಅಂಜನಾದ್ರಿಯ ಆಂಜನೇಯ ದೇವಸ್ಥಾನಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರು ಅವರು ಭೇಟಿ ನೀಡಿ ಆಂಜನೇಯ ಸ್ವಾಮಿ ದರ್ಶನ ಪಡೆದಿದ್ದಾರೆ.

    ಸ್ಥಳೀಯ ಮುಖಂಡ ಸಂತೋಷ್ ಕೆಲೋಜಿ ಅವರೊಂದಿಗೆ ಆಗಮಿಸಿದ ಯದವೀರ್ ಅವರು 600ಕ್ಕೂ ಹೆಚ್ಚು ಮೆಟ್ಟಿಲುಗಳನ್ನು ಏರಿ ಆಂಜನೇಯನ ದರ್ಶನ ಪಡೆದುಕೊಂಡರು. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋಧಾ ಬೆನ್ ಹಾಗೂ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಅನೇಕ ನಾಯಕರು ಈ ದೇವಸ್ಥಾನಕ್ಕೆ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

    ಯದುವೀರ್ ಅವರು ಭಾನುವಾರ ಐತಿಹಾಸಿಕ ಹಂಪಿಗೆ ಭೇಟಿ ನೀಡಿ ಪ್ರಸಿದ್ಧ ಸ್ಮಾರಕಗಳನ್ನು ವೀಕ್ಷಣೆ ಮಾಡಿದ್ದರು. ಕಮಲಾಪುರ ಹಾಗೂ ತಳವಾರಘಟ್ಟ ರಸ್ತೆ ಮೂಲಕ ಆಗಮಿಸಿದ ಯದುವೀರ್ ಗೆಜ್ಜಲ ಮಂಟಪ, ಕುದುರೆ ಗೊಂಬೆ ಮಂಟಪ, ವಿಠಲ ಬಜಾರ್, ಪುಷ್ಕರಣಿ, ಪ್ರಸಿದ್ಧ ವಿಜಯವಿಠಲ ದೇವಸ್ಥಾನದಲ್ಲಿ ಕಲ್ಲಿನ ರಥ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಒಡೆಯರ್ ಅವರನ್ನು ನೋಡಿ ಪ್ರವಾಸಿಗರು ಅವರ ಜೊತೆ ಫೋಟೋ, ಸೆಲ್ಫಿ ತಗೆದುಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿರೋಧಿಗಳ ನಾಶಕ್ಕೆ ಭಕ್ತರ ಬೇಡಿಕೆ – ಯಲಗೂರು ದೇಗುಲದ ಹುಂಡಿಯಲ್ಲಿತ್ತು ವಿಚಿತ್ರ ಪತ್ರ

    ವಿರೋಧಿಗಳ ನಾಶಕ್ಕೆ ಭಕ್ತರ ಬೇಡಿಕೆ – ಯಲಗೂರು ದೇಗುಲದ ಹುಂಡಿಯಲ್ಲಿತ್ತು ವಿಚಿತ್ರ ಪತ್ರ

    ವಿಜಯಪುರ: ದೇವರ ಹುಂಡಿಯಲ್ಲಿ ಹಣದ ಬದಲು ವಿರೋಧಿಗಳ ನಾಶಕ್ಕೆ ಭಕ್ತರು ಬೇಡಿಕೆ ಪತ್ರ ಹಾಕಿರುವ ವಿಚಿತ್ರ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರಿನಲ್ಲಿ ನಡೆದಿದೆ.

    ಶ್ರೀಕ್ಷೇತ್ರ ಯಲಗೂರ ದೇವಸ್ಥಾನದ ಕಾಣಿಕೆ ಹುಂಡಿಗಳಲ್ಲಿ ಚಿತ್ರವಿಚಿತ್ರ ಬೇಡಿಕೆಗಳನ್ನು ಬರೆದು ಭಕ್ತರು ಹಾಕಿದ್ದಾರೆ. ಹುಂಡಿ ತೆಗೆದು ಎಣಿಕೆ ಮಾಡುವ ವೇಳೆ ಪತ್ರ ಕಂಡು ಕಂದಾಯ ಅಧಿಕಾರಿಗಳು ಹಾಗೂ ದೇವಸ್ಥಾನ ಕಮಿಟಿ ಬೆಚ್ಚಿಬಿದ್ದಿದೆ. ಕಂದಾಯ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಸೇರಿದಂತೆ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮತ್ತು ಸದಸ್ಯರಿಂದ ಎಣಿಕೆ ಕಾರ್ಯ ನಡೆದಿದೆ.

    ಪತ್ರದಲ್ಲೇನಿದೆ..?
    ನನಗೆ ಗಂಡು ಮಗು ಹುಟ್ಟಲಿ ತಂದೆ. ನಿನ್ನ ಸನ್ನಿಧಿಗೆ ಬಂದು ಜವಳದ ಕಾರ್ಯ ಮಾಡುವೆನು ಎಂದು ಭಕ್ತರೊಬ್ಬರು ಪತ್ರ ಬರೆದ್ರೆ, ನಮಗೆ ಕೆಲವರು ಶತ್ರುಗಳಾಗಿ ಕಾಡುತ್ತಿದ್ದಾರೆ ಅವರಿಗೆ ಕಣಿಯಾಗಿ ಕಾಡಬೇಕಿದೆ. ಅವರು ನಮ್ಮ ತಂಟೆಗೆ ಬರಬಾರದು. ನಮ್ಮ ಕಟ್ಟೆ ಮೇಲೆ ಸಾಮಾನುಗಳನ್ನು ಇಡಬಾರದು. ಹನುಮಂತೇಶ ನೀನು ಅವರಿಗೆ ಕಾಡಬೇಕು ಬೇಡಿಕೆಯಿಟ್ಟು ಪತ್ರದಲ್ಲಿ ನಾಲ್ವರ ಹೆಸರನ್ನು ಉಲ್ಲೇಖಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಿಂದೂ ದೇಗುಲಕ್ಕೆ ನುಗ್ಗಿ ಧ್ವಂಸ- ಗೋಡೆ ಮೇಲೆ Jesus Is The Only Lord ಎಂದು ಬರೆದ್ರು

    ಹಿಂದೂ ದೇಗುಲಕ್ಕೆ ನುಗ್ಗಿ ಧ್ವಂಸ- ಗೋಡೆ ಮೇಲೆ Jesus Is The Only Lord ಎಂದು ಬರೆದ್ರು

    ವಾಷಿಂಗ್ಟನ್ ಡಿಸಿ: ಅಮೆರಿಕಾದ ಹಿಂದೂ ದೇಗುಲಕ್ಕೆ ನುಗ್ಗಿದ ಕೆಲ ದುಷ್ಕರ್ಮಿಗಳು ಪೀಠೋಪಕರಣಗಳನ್ನು ಧ್ವಂಸ ಮಾಡಿ ಬಳಿಕ ಮುಖ್ಯ ದ್ವಾರದ ಗೋಡೆಯ ಮೇಲೆ Jesus Is The Only Lord ಎಂದು ಬರೆದಿದ್ದಾರೆ.

    ಅಮೆರಿಕಾದ ಲೂಯಿಸ್ವಿಲ್ ನಗರದ ಸ್ವಾಮಿ ನಾರಾಯಾಣ ದೇಗುಲದಲ್ಲಿ ಜನವರಿ 30ರಂದು ಈ ಘಟನೆ ನಡೆದಿದೆ. ದೇವಸ್ಥಾನ ಪ್ರವೇಶಿಸಿದ ದುಷ್ಕರ್ಮಿಗಳು ಕಿಟಕಿಯ ಗಾಜುಗಳನ್ನು ಒಡೆದು, ಮುಖ್ಯ ಅರ್ಚಕರು ಕುಳಿತುಕೊಳ್ಳುವ ಖುರ್ಚಿಯ ಹಾಸಿಗೆಯನ್ನು ಹರಿದು ಹಾಕಿದ್ದಾರೆ. ದೇಗುಲದಲ್ಲಿ ಹಾಕಲಾಗಿದ್ದ ದೇವರ ಭಾವಚಿತ್ರಗಳ ಮೇಲೆ ಪೇಂಟ್ ಹಾಕಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಲೂಯಿಸ್ವಿಲ್ ನಗರದ ಮೇಯರ್ ಗ್ರೆಗ್ ಫಿಶ್ಚರ್, ಕೆಲವು ದಿನಗಳಿಂದ ಈ ರೀತಿಯ ಘಟನೆಗಳು ನಡೆಯುತ್ತಿವೆ. ಲೂಯಿಸ್ವಿಲ್ ಇಸ್ಲಾಂ ಧರ್ಮ ಕೇಂದ್ರದ ಮೇಲೆ ದುಷ್ಕರ್ಮಿಗಳು ಇದೇ ರೀತಿ ದಾಳಿ ನಡೆಸಿದ್ದರು. ಹೀಗಾಗಿ ನಗರದಲ್ಲಿರುವ ಸಿಖ್ ಸಮುದಾಯದ ಮಂದಿರಕ್ಕೂ ಭದ್ರತೆ ನೀಡಲಾಗಿದೆ. ಈ ಘಟನೆಯನ್ನು ನಾವು ಖಂಡಿಸುತ್ತೇವೆ. ದುಷ್ಕರ್ಮಿಗಳ ಬಗ್ಗೆ ಮಾಹಿತಿ ಇದ್ದವರು ನಮ್ಮನ್ನು ಸಂಪರ್ಕಿಸಿ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕಾಫಿ ನಾಡು ಪೊಲೀಸರಿಗೆ ವಾಸ್ತು ಭಯ- ಠಾಣೆಯಲ್ಲೇ ಗಣೇಶನ ಗುಡಿ ನಿರ್ಮಾಣ

    ಕಾಫಿ ನಾಡು ಪೊಲೀಸರಿಗೆ ವಾಸ್ತು ಭಯ- ಠಾಣೆಯಲ್ಲೇ ಗಣೇಶನ ಗುಡಿ ನಿರ್ಮಾಣ

    ಚಿಕ್ಕಮಗಳೂರು: ಎಲ್ಲರೂ ಪೊಲೀಸರಿಗೆ ಭಯ ಪಟ್ರೆ ಕಾಫಿನಾಡಿನ ಆರಕ್ಷಕರು ವಾಸ್ತುವಿಗೆ ಹೆದರಿ ಠಾಣೆಯಲ್ಲೇ ಗಣಪತಿ ದೇವಾಲಯ ನಿರ್ಮಿಸಿದ್ದಾರೆ.

    ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಶ್ರಮಿಸುವ ಕಾಫಿನಾಡಿನ ಆರಕ್ಷಕರಿಗೆ ವಾಸ್ತು ದೋಷದಿಂದ ರಕ್ಷಣೆ ಬೇಕಾಗಿದ್ದು, ಠಾಣೆಯ ಆವರಣದಲ್ಲೇ ಗಣೇಶನ ದೇಗುಲ ಕಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯನ್ನ ವಾಸ್ತು ಪ್ರಕಾರ ಕಟ್ಟಿಲ್ಲವೆಂದು ಪೊಲೀಸರು ಠಾಣೆಯ ಎಡಭಾಗದಲ್ಲಿ ವಿಘ್ನ ನಿವಾರಕನ ಗುಡಿ ನಿರ್ಮಿಸಿದ್ದಾರೆ. ಈಗಾಗಲೇ ಗಣಪತಿ ದೇವಾಲಯ ಉದ್ಘಾಟನೆಗೆ ಸಿದ್ಧಗೊಂಡಿದ್ದು ಮಂಗಳವಾರ ಲೋಕಾರ್ಪಣೆಗೊಂಡಿದೆ.

    ದೇವಾಸ್ಥಾನದ ಉದ್ಘಾಟನೆಗೆ ಪೊಲೀಸ್ ಠಾಣೆ ನವವಧುವಿನಂತೆ ಸಿಂಗಾರಗೊಂಡಿತ್ತು. ಪೊಲೀಸರು ದೇವಾಲಯದ ಆರಂಭದ ಕಾರ್ಯಕ್ರಮ ಕುರಿತು ಕರಪತ್ರಗಳನ್ನ ಮಾಡಿಸಿಯೂ ಹಂಚಿ ಸಾರ್ವಜನಿಕರನ್ನು ಆಹ್ವಾನಿಸಿದ್ದರು. ಸರ್ಕಾರಿ ಕಚೇರಿಗಳನ್ನು ವಾಸ್ತು ನೋಡಿಯೇ ಕಟ್ಟಬೇಕಾ? ಇದೊಂದು ಮೂಢನಂಬಿಕೆ ಎಂಬಿತ್ಯಾದಿ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ. ಪೊಲೀಸರ ಈ ಕೆಲಸ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಅಪ್ಪ ಊಟ ಕೊಡು ಎಂದು ಅಳುತ್ತಿದ್ದ ಬಾಲಕಿಯ ರೇಪ್ ಮಾಡಿ ಕೊಲೆಗೈದ್ರು!

    ಅಪ್ಪ ಊಟ ಕೊಡು ಎಂದು ಅಳುತ್ತಿದ್ದ ಬಾಲಕಿಯ ರೇಪ್ ಮಾಡಿ ಕೊಲೆಗೈದ್ರು!

    ಭುವನೇಶ್ವರ್: ದೇಶದಲ್ಲಿ ಅತ್ಯಾಚಾರದಂತಹ ಪ್ರಕರಣಗಳಿಗೆ ಕೊನೆಯಿಲ್ಲ ಎಂಬಂತಾಗಿದೆ. ಇದಕ್ಕೆ ಪೂರಕವೆಂಬಂತೆ ಒಡಿಶಾದಲ್ಲಿ 12 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಅತ್ಯಾವಾರವೆಸಗಿ ಕೊಲೆ ಮಾಡಿದ್ದಾರೆ.

    ಈ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯ ಸದರ್ ಪ್ರದೇಶದಲ್ಲಿ ಭಾನುವಾರ ನಡೆದಿದೆ. ವರದಿಗಳ ಪ್ರಕಾರ, ಬಾಲಕಿಯ ತಂದೆ ಒಂದು ಸಣ್ಣ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಹೀಗಾಗಿ ಬಾಲಕಿ ಅಪ್ಪನ ಅಂಗಡಿ ಬಂದಿದ್ದಳು. ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹಸಿವಾಗುತ್ತಿದೆ ಊಟ ಹಾಕು ಅಂತ ಅಳುತ್ತಿದ್ದಳು.

    ಆದ್ರೆ ಕೆಲ ಹೊತ್ತಿನ ಬಳಿಕ ಬಾಲಕಿ ಪಕ್ಕದಲ್ಲೇ ಇರುವ ದೇವಸ್ಥಾನದ ಸಮೀಪವಿರುವ ಪೊದೆಯಲ್ಲಿ ನಗ್ನವಾಗಿ ಆಕೆಯ ದೇಹದ ಮೇಲೆ ಚೂರಿಯಿಂದ ಇರಿದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿಯ ಶವ ನೋಡಿದಾಗ ಆಕೆಯ ಮೇಲೆ ಅತ್ಯಾಚಾರವೆಸಗಿ ಬಳಿಕ ರೇಪ್ ವಿಚಾರ ಮನೆಯವರಿಗೆ ತಿಳಿಸುತ್ತಾಳೆ ಎಂಬ ಭಯದಿಂದ ಕಾಮುಕರು ಬಾಲಕಿ ದೇಹವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರಬಹುದು ಎಂಬುದಾಗಿ ಶಂಕಿಸಲಾಗಿದೆ.

    ಘಟನೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮರಣೋತ್ತರ ಪರೀಕ್ಷೆಗಾಗಿ ಬಾಲಕಿಯ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರಾವಾನಿಸಿದ್ದಾರೆ. ಹೀಗಾಗಿ ಬಾಲಕಿ ಸಾವಿಗೆ ನಿಖರ ಕಾರಣವೇನೆಂದು ಪರೀಕ್ಷೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

    ಘಟನೆ ಸಂಬಂಧ ಸ್ಥಳೀಯ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೇವಸ್ಥಾನದಲ್ಲಿ ಮದ್ಯ ಹಂಚಿದ ಬಿಜೆಪಿ ನಾಯಕ!

    ದೇವಸ್ಥಾನದಲ್ಲಿ ಮದ್ಯ ಹಂಚಿದ ಬಿಜೆಪಿ ನಾಯಕ!

    ಲಕ್ನೋ: ಉತ್ತರ ಪ್ರದೇಶದ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ನರೇಶ್ ಅಗರ್ವಾಲ್ ಹಾಗೂ ಅವರ ಪುತ್ರ ದೇವಸ್ಥಾನದಲ್ಲಿ ಜನರಿಗೆ ಊಟದ ಜೊತೆ ಮದ್ಯ ಹಂಚಿ ವಿವಾಧದ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ.

    ಭಾನುವಾರದಂದು ಬಿಜೆಪಿ ನಾಯಕ ನರೇಶ್ ಅವರ ಪುತ್ರ ನಿತೀನ್, ಪಾಸಿ ಸಮುದಾಯದವರಿಗೆ ಸಮ್ಮೇಳನವನ್ನು ಹಾರ್ಡೊಯ್‍ನ ಶ್ರವಣ ದೇವಿ ದೇವಸ್ಥಾನದಲ್ಲಿ ಆಯೋಜಿಸಿದ್ದರು. ಈ ವೇಳೆ ಸಮ್ಮೇಳನಕ್ಕೆ ಬಂದ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ಕೂಡ ಮಾಡಲಾಗಿತ್ತು. ಪ್ರತಿಯೊಬ್ಬ ವ್ಯಕ್ತಿಗೂ ಊಟದ ಜೊತೆ 200 ಎಂಎಲ್ ಮದ್ಯದ ಬಾಟಲಿಯನ್ನು ಪ್ಯಾಕ್ ಮಾಡಿ ವಿತರಿಸಲಾಗಿತ್ತು. ಸಮ್ಮೇಳನಕ್ಕೆ ಬಂದಿದ್ದ ಮಕ್ಕಳಿಗೂ ಕೂಡ ಅದೇ ಊಟದ ಪ್ಯಾಕ್‍ಗಳನ್ನು ನೀಡಲಾಗಿತ್ತು. ಈ ವೇಳೆ ಸ್ಥಳಿಯರೊಬ್ಬರು ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

    ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ಹಾಗೂ ಜನರು ನರೇಶ್ ಅಗರ್ವಾಲ್ ಹಾಗೂ ಅವರ ಪುತ್ರನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬರುವ ಲೋಕಸಭೆ ಚುನಾವಣೆಯಲ್ಲಿ ಹಾರ್ಡೊಯ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನರೇಶ್ ಅಗರ್ವಾಲ್ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು, ಜನರ ಬೆಂಬಲ ಪಡೆಯಲು ಬಿಜೆಪಿ ನಾಯಕ ಈ ರೀತಿ ಮದ್ಯವನ್ನು ಹಂಚಿದ್ದಕ್ಕೆ ಭಾರೀ ಆಕ್ರೋಶ ಕೇಳಿ ಬಂದಿದೆ.

    ಈ ವಿಡಿಯೋ ಎಲ್ಲೆಡೆ ಸದ್ದು ಮಾಡುತ್ತಿದ್ದಂತೆ ಕೆಲವು ಬಿಜೆಪಿ ನಾಯಕರು ಕೂಡ ನರೇಶ್ ಅಗರ್ವಾಲ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹಾರ್ಡೊಯ್ ಕ್ರೇತ್ರದಿಂದ ಗೆದ್ದ ಬಿಜೆಪಿ ಎಂಪಿ ಅಂಶುಲ್ ವರ್ಮಾ ಪ್ರತಿಕ್ರಿಯಿಸಿ, ಉನ್ನತ ಸ್ಥಾನದಲ್ಲಿರುವ ನಾಯಕನಾಗಿ ನರೇಶ್ ಅವರು ಈ ರೀತಿ ತಪ್ಪು ಕೆಲಸ ಮಾಡಿದ್ದಾರೆ. ಈ ಕುರಿತು ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚೆ ಮಾಡುತ್ತೇವೆ. ಇತ್ತಿಚಿಗಷ್ಟೆ ನರೇಶ್ ಅವರು ಬಿಜೆಪಿಗೆ ಸೇರಿದ್ದರು. ಈಗ ಈ ರೀತಿ ಕೆಲಸ ಮಾಡಿ ಪಕ್ಷದ ಹೆಸರನ್ನು ಹಾಳು ಮಾಡುತ್ತಿದ್ದಾರೆ. ಓದುವ ಮಕ್ಕಳ ಕೈಗೆ ಪುಸ್ತಕ-ಪೆನ್ನು ನೀಡುವ ಬದಲು ಮದ್ಯವನ್ನು ನೀಡಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ತಂದೆ ಮಗ ಇಬ್ಬರ ವಿರುದ್ಧವು ಪ್ರತಿಭಟನೆ ಮಾಡುತ್ತೇವೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಷ ಪ್ರಸಾದ ಪ್ರಕರಣ- ದೇವಸ್ಥಾನದ ಆವರಣದಲ್ಲಿ ಭಕ್ತೆಯ ಗೋಳಾಟ

    ವಿಷ ಪ್ರಸಾದ ಪ್ರಕರಣ- ದೇವಸ್ಥಾನದ ಆವರಣದಲ್ಲಿ ಭಕ್ತೆಯ ಗೋಳಾಟ

    ಚಾಮರಾಜನಗರ: ಸುಳ್ವಾಡಿ ವಿಷ ದುರಂತದ ಪ್ರಕರಣದ ಹಿನ್ನೆಲೆಯಲ್ಲಿ ದೇವರ ದರ್ಶನ ಸಿಗದೇ ಭಕ್ತರು ದೇವಸ್ಥಾನದ ಆವರಣದಲ್ಲಿ ಕಣ್ಣೀರು ಹಾಕುತ್ತಿದ್ದಾರೆ.

    ಕಳೆದ 20 ದಿನಗಳಿಂದ ಮಾರಮ್ಮ ದೇವಸ್ಥಾನ ಬಂದ್ ಆಗಿದ್ದು, ಯಾವುದೇ ಭಕ್ತರಿಗೆ ದೇವರ ದರ್ಶನಕ್ಕೆ ಅನುಮತಿ ನೀಡುತ್ತಿಲ್ಲ. ಇಷ್ಟು ದಿನ ಸಾವಿರಾರು ಭಕ್ತರು ನಿನ್ನ ಅಂಗಳದಲ್ಲಿ ತುಂಬಿ ತುಳುಕುತ್ತಿದ್ದರು. ನಿನ್ನ ಪ್ರಸಾದಕ್ಕೆ ವಿಷ ಹಾಕಿ ನಿನಗೆ ಕೆಟ್ಟ ಹೆಸರು ತಂದರಲ್ಲವ್ವಾ ತಾಯಿ. ವಿಷ ಹಾಕುವಾಗಲೇ ಆ ವಿಷ ನುಂಗಿ ಅವರಿಗೆ ಕಚ್ಚಬಾರದಿತ್ತಾ ತಾಯಿ ಎಂದು ಮಾರಮ್ಮ ದೇವಸ್ಥಾನದ ಆವರಣದಲ್ಲಿ ಭಕ್ತೆ ಕಣ್ಣೀರಿಡುತ್ತಿದ್ದಾರೆ.

    ಇತ್ತ ಸುಳ್ವಾಡಿಗೆ ಮುಜರಾಯಿ ಸಚಿವ ಪರಮೇಶ್ವರ್ ನಾಯಕ್ ಭೇಟಿ ನೀಡಿ, ಸುಳ್ವಾಡಿ ಮಾರಮ್ಮ ದೇವಸ್ಥಾನವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳಲು ಶೀಘ್ರದಲ್ಲೇ ತೀರ್ಮಾನ ಮಾಡಲಗುವುದು. ಸರ್ಕಾರದ ವಶಕ್ಕೆ ಪಡೆದುಕೊಳ್ಳುವಂತೆ ದೇವಸ್ಥಾನದ ಟ್ರಸ್ಟಿಗಳು ಪತ್ರ ಬರೆದಿದ್ದಾರೆ ಎಂದು ಜಿಲ್ಲಾಧಿಕಾರಿಗಳು ವರದಿ ನೀಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿಗಳ ಸಹಮತವೂ ಇದೆ. ಇದೆಲ್ಲವನ್ನು ಕ್ರೋಢೀಕರಿಸಿ ಸಚಿವ ಸಂಪುಟದಲ್ಲಿಟ್ಟು ತೀರ್ಮಾನ ಕೈಗೊಳ್ಳತ್ತದೆ. ರಾಜ್ಯದ ಇತರ ದೇವಸ್ಥಾನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv