Tag: ದೇವಸ್ಥಾನ

  • ಬೆಂಗಳೂರಿನ ಈ ದೇವಸ್ಥಾನದಲ್ಲಿ ನಿಮಗೆ ಪ್ರಸಾದ ಬೇಕಿದ್ರೆ ನೀವು ಡಬ್ಬಿ ತರಲೇಬೇಕು!

    ಬೆಂಗಳೂರಿನ ಈ ದೇವಸ್ಥಾನದಲ್ಲಿ ನಿಮಗೆ ಪ್ರಸಾದ ಬೇಕಿದ್ರೆ ನೀವು ಡಬ್ಬಿ ತರಲೇಬೇಕು!

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಈ ಗಣೇಶ ದೇವಸ್ಥಾನದಲ್ಲಿ ಪ್ರಸಾದ ಬೇಕು ಅಂದ್ರೆ ನೀವು ಬಟ್ಟಲು ಅಥವಾ ಡಬ್ಬಿ ತರಲೇಬೇಕು.

    ಬೆಂಗಳೂರಿನ ಕಲ್ಯಾಣ ನಗರದಲ್ಲಿರೋ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಈ ನಿಯಮಗಳನ್ನು ಅಳವಡಿಸಿಕೊಳ್ಳಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಪ್ಲಾಸ್ಟಿಕ್ ಮುಕ್ತ ದೇವಸ್ಥಾನ ಮಾಡುವ ಸಲುವಾಗಿ ಒಂದಿಷ್ಟು ನಿಯಮ ಜಾರಿ ಮಾಡಿದೆ.

    ದೇವರಿಗೆ ಮಾಡಿರೋ ಪಂಚಾಮೃತ ಅಭಿಷೇಕದ ಪ್ರಸಾದವನ್ನ ಸ್ಟೀಲ್ ಬಟ್ಟಲು ತಂದ್ರೆ ಮಾತ್ರ ಕೊಡ್ತಾರೆ. ದೇವರ ಅಭಿಷೇಕಕ್ಕಾಗಿ ಭಕ್ತಾದಿಗಳು ಪ್ಯಾಕೆಟ್ ಹಾಲನ್ನು ತರುವ ಹಾಗಿಲ್ಲ ಎನ್ನುವ ಮತ್ತೊಂದು ನಿಮಯವನ್ನು ತಂದಿದ್ದಾರೆ.

    ಶಕ್ತಿಗಣಪತಿ ಸನ್ನಿಧಿಯಲ್ಲಿ ಒಂದು ವರ್ಷದಿಂದ ಈ ನಿಯಮ ಜಾರಿಯಲ್ಲಿದೆ. ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಮಾಡಿದ್ರು ಪ್ಲಾಸ್ಟಿಕ್ ಪ್ಲೇಟ್ ಬಳಸಲ್ಲ. ಮರುಬಳಕೆ ಮಾಡೋ ತಟ್ಟೆಗಳನ್ನೇ ಬಳಸಲಾಗುತ್ತೆ. ಇಷ್ಟೇ ಅಲ್ಲದೇ ದೇವಸ್ಥಾನದಲ್ಲಿ ಉತ್ಪತ್ತಿಯಾಗೋ ಕಸವನ್ನು ಅಲ್ಲೇ ಗೊಬ್ಬರವಾಗಿಸೋ ವ್ಯವಸ್ಥೆಯನ್ನೂ ಮಾಡಲಾಗಿದೆ. ಈ ಪರಿಸರಸ್ನೇಹಿ ದೇಗುಲದ ಬಗ್ಗೆ ಭಕ್ತರು ಮೆಚ್ಚುಗೆ ವ್ಯಕ್ತಪಡಿಸ್ತಾರೆ.

    ದೇವಸ್ಥಾನ ಪರಿಸರ ಸ್ನೇಹಿಯಾಗಿರೋದು ತಿಳಿದ ಬಳಿಕ ಭಕ್ತರು ಪ್ರಸಾದ ಸ್ವೀಕರಿಸೋಕೆ ಮನೆಯಿಂದಲೇ ಡಬ್ಬಿ, ಬಟ್ಟಲುಗಳನ್ನ ತೆಗೆದುಕೊಂಡು ಬರ್ತಾರೆ.

     

  • ಗ್ಯಾಸ್ ಕಟ್ಟರ್ ನಿಂದ ದೇವಸ್ಥಾನದ ಬಾಗಿಲು ಮುರಿದು ವಿಗ್ರಹಗಳ ಕಳವು

    ಗ್ಯಾಸ್ ಕಟ್ಟರ್ ನಿಂದ ದೇವಸ್ಥಾನದ ಬಾಗಿಲು ಮುರಿದು ವಿಗ್ರಹಗಳ ಕಳವು

    ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಓಬಳಪುರ ಗ್ರಾಮದಲ್ಲಿ ದೇವಸ್ಥಾನವೊಂದರ ವಿಗ್ರಹವನ್ನು ಖದೀಮರು ರಾತ್ರೋರಾತ್ರಿ ಕದ್ದೊಯ್ದ ಘಟನೆ ನಡೆದಿದೆ.

    ಗ್ರಾಮದ ಹೊರವಲಯದ ಐತಿಹಾಸಿಕ ಸಿದ್ದರಾಮೇಶ್ವರ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, ಗ್ಯಾಸ್ ಕಟ್ಟರ್ ಬಳಸಿ ದೇವಾಲಯದ ಬಾಗಿಲು ಮುರಿದು ನಂದಿ ವಿಗ್ರಹಗಳು, ಹುಂಡಿಯಲ್ಲಿದ್ದ ಹಣ ಹಾಗೂ ಸಿ.ಸಿ.ಟಿವಿಯನ್ನ ಕಳವು ಮಾಡಿ ಕಳ್ಳರು ಪರಾರಿಯಾಗಿದ್ದಾರೆ.

    ಸ್ಥಳಕ್ಕೆ ಪರಶುರಾಮಪುರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • ರಾತ್ರೋರಾತ್ರಿ ಬೆಂಗ್ಳೂರಲ್ಲಿ ಜೆಸಿಬಿ ಘರ್ಜನೆ – ದೇವಸ್ಥಾನ, ಚರ್ಚ್ ನೆಲಸಮ

    ರಾತ್ರೋರಾತ್ರಿ ಬೆಂಗ್ಳೂರಲ್ಲಿ ಜೆಸಿಬಿ ಘರ್ಜನೆ – ದೇವಸ್ಥಾನ, ಚರ್ಚ್ ನೆಲಸಮ

    ಬೆಂಗಳೂರು: ಭೂಮಿಯನ್ನು ಅಕ್ರಮಿಸಿಕೊಂಡು ಕಟ್ಟಲಾಗಿದ್ದ ದೇವಸ್ಥಾನ ಮತ್ತು ಚರ್ಚ್‍ನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಒಡೆದು ಹಾಕಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

    ಎಲ್ಲರೂ ನಿದ್ರೆಗೆ ಜಾರಿದ್ದ ವೇಳೆ ನಗರದ ಕ್ವೀನ್ ರಸ್ತೆಯಲ್ಲಿರುವ ಮೂವತ್ತು ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಓಂ ಶಕ್ತಿ ದೇವಸ್ಥಾನ ಮತ್ತು ಅದರ ಹಿಂದೆ ಇದ್ದ ಮೇರಿ ಮಾತೆ ಚರ್ಚ್‍ನ್ನು ಜೆಸಿಬಿಯಿಂದ ಕೆಡವಿದ್ದಾರೆ. ಪೊಲೀಸರ ಸರ್ಪಗಾವಲಲ್ಲಿ ಕಾರ್ಯಾಚರಣೆ ನಡೆದಿದೆ.

    1976ರಲ್ಲಿ ಡಾ.ನಾಗರಾಜು ಅನ್ನೋರಿಗೆ 19 ಸಾವಿರ ಚದರ ವಿಸ್ತೀರ್ಣದ ಸುಮಾರು ಮೂವತ್ತು ಕೋಟಿ ಬೆಲೆ ಬಾಳುವ ಜಾಗವನ್ನು ಆಸ್ಪತ್ರೆ ನಿರ್ಮಾಣಕ್ಕಾಗಿ ಗುತ್ತಿಗೆ ನೀಡಲಾಗಿತ್ತು. ಆದರೆ ದೇವಸ್ಥಾನ, ಚರ್ಚ್ ನಿರ್ಮಿಸಿ ಆಸ್ಪತ್ರೆ ಕಟ್ಟೋದಕ್ಕೆ ಅಡ್ಡಿಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪಾಲಿಕೆ ಹೈಗ್ರೌಂಡ್ ಠಾಣೆಯಲ್ಲಿ ದೂರು ನೀಡಿತ್ತು. ತಕ್ಷಣ ಜಾಗ ಖಾಲಿ ಮಾಡುವಂತೆ ಪಾಲಿಕೆ ನೋಟಿಸ್ ನೀಡಿತ್ತು.

    ತೆರವು ಕಾರ್ಯಾಚರಣೆ ಬಗ್ಗೆ ತಿಳಿಯುತ್ತಿದ್ದಂತೆ ಎದ್ದುಬಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಹೈಗ್ರೌಂಡ್ ಠಾಣೆಗೆ ತೆರಳಿ ಒಂದು ಗಂಟೆಗೂ ಹೆಚ್ಚು ಹೊತ್ತು ಪ್ರತಿಭಟನೆ ನಡೆಸಿದ್ರು.

  • ದೇವರಿಗೂ ಬಿಸಿಲಿನ ಶಾಖ- ಹಂಪಿ ವಿರೂಪಾಕ್ಷೇಶ್ವರ ದೇವರ ಶಿರದ ಮೇಲೆ ಶೀತ ಕುಂಭದ ವ್ಯವಸ್ಥೆ

    ದೇವರಿಗೂ ಬಿಸಿಲಿನ ಶಾಖ- ಹಂಪಿ ವಿರೂಪಾಕ್ಷೇಶ್ವರ ದೇವರ ಶಿರದ ಮೇಲೆ ಶೀತ ಕುಂಭದ ವ್ಯವಸ್ಥೆ

    ಬಳ್ಳಾರಿ: ದೇವರಿಗೂ ಬಿಸಿಲಿನ ತಾಪ ತಟ್ಟುತ್ತಾ ಅಂದ್ರೆ ನಂಬ್ತೀರಾ? ನಂಬಲೇಬೇಕು. ಯಾಕಂದ್ರೆ ಬಿಸಿಲಿನ ಧಗೆಯಿಂದ ರಕ್ಷಿಸಲು ಹಂಪಿ ವಿರುಪಾಕ್ಷೇಶ್ವರ ದೇವರಿಗೆ ಇದೀಗ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಬೇಸಿಗೆ ಕಾಲದಲ್ಲಿ ಬೆಳ್ಳಿ ಕವಚ ಹೊರತಗೆದು ಶೀತ ಕುಂಭದ ವ್ಯವಸ್ಥೆ ಮಾಡುವ ಮೂಲಕ ತಂಪಾದ ವಾತಾವರಣ ಕಲ್ಪಿಸಲಾಗಿದೆ.

    ಬೇಸಿಗೆಯ ವೈಶಾಖ ಶುದ್ಧ ಪಂಚಮಿಯಿಂದ-ಜೇಷ್ಠ ಶುದ್ಧ ಪಂಚಮಿವರೆಗೆ ವಿರೂಪಾಕ್ಷೇಶ್ವರ ಶಿರದ ಮೇಲೆ ಶೀತ ಕುಂಭದ ವ್ಯವಸ್ಥೆ ಮಾಡುವ ಮೂಲಕ ದೇವರಿಗೆ 24 ಗಂಟೆಗಳ ಕಾಲ ತಂಪಾದ ನೀರು ನೆತ್ತಿಯ ಮೇಲೆ ಬಿಳುವಂತೆ ವ್ಯವಸ್ಥೆ ಕಲ್ಪಿಸುತ್ತಿರುವುದು ವಿಶೇಷವಾಗಿದೆ.

    ಜಿಲ್ಲೆಯಲ್ಲಿ ಅತಿ ಹೆಚ್ಚು ಬಿಸಿಲಿನ ತಾಪಮಾನವಿರುತ್ತೆ. ಹೀಗಾಗಿ ಅತಿ ಉಷ್ಣಾಂಶದಿಂದ ಹಂಪಿ ವಿರೂಪಾಕ್ಷೇಶ್ವರ ಮೂರನೇ ಕಣ್ಣು ತೆರದು ಭಸ್ಮ ಮಾಡಬಾರದೆಂದು ಶಿವನಿಗೆ ತಂಪಾದ ನೀರಿನ ವ್ಯವಸ್ಥೆ ಮಾಡಲಾಗುತ್ತೆ. ಅಲ್ಲದೇ ದೇವರಿಗೆ ಪ್ರತಿ ನಿತ್ಯ ಹಾಕುವ ಬೆಳ್ಳಿ ಮುಖವಾಡದ ಕವಚವನ್ನು ಸಹ ಬೇಸಿಗೆಯಲ್ಲಿ ವಿರೂಪಾಕೇಶ್ವರನಿಗೆ ಧರಿಸುವುದಿಲ್ಲ. ಹೀಗಾಗಿ ಶಿವನಿಗೆ ಉಷ್ಣವಾಗದಂತೆ ಅನಾದಿ ಕಾಲದಿಂದಲೂ ದೇವರಿಗೆ ಕುಂಭದ ನೀರಿನ ಧಾರೆ ನಿರಂತರವಾಗಿ ಇರುವಂತೆ ಮಾಡಲಾಗುತ್ತದೆ ಎಂದು ಮುಖ್ಯ ಅರ್ಚಕ ಶ್ರೀನಾಥ್ ಶರ್ಮಾ ಹೇಳುತ್ತಾರೆ.

  • ದೇವಿಗೆ ಪೂಜೆ ಶುರುವಾಗ್ತಿದ್ದಂತೆ ಬಂದು ಪ್ರದಕ್ಷಿಣೆ ಹಾಕಿ ಕುಣಿಯುತ್ತೆ ಈ ನವಿಲು!

    ದೇವಿಗೆ ಪೂಜೆ ಶುರುವಾಗ್ತಿದ್ದಂತೆ ಬಂದು ಪ್ರದಕ್ಷಿಣೆ ಹಾಕಿ ಕುಣಿಯುತ್ತೆ ಈ ನವಿಲು!

    ಚಿತ್ರದುರ್ಗ: ನೀವು ಎಂತೆಂಥ ಭಕ್ತರನ್ನೋ ನೋಡಿದ್ದೀರಿ. ಆದ್ರೆ ಇಲ್ಲೊಬ್ಬ ವಿಚಿತ್ರ ಭಕ್ತನಿದ್ದಾನೆ. ತಾನು ಎಲ್ಲೇ ಇರಲಿ, ದೇವಿಗೆ ಪೂಜೆ ಶುರುವಾಗ್ತಿದ್ದಂತೆ ಬಂದು ಪ್ರದಕ್ಷಿಣೆ ಹಾಕಿ ಕುಣಿಯುತ್ತಾನೆ.

    ಹೌದು. ದೇವಸ್ಥಾನದ ಒಳಗೆ ಮಾರಮ್ಮನಿಗೆ ಪೂಜೆ. ಹೊರಗೆ ಗರಿ ಬಿಚ್ಚಿ ಕುಣಿಯುತ್ತಿರುವ ನವಿಲು. ಇದು ಚಿತ್ರದುರ್ಗದ ಚಳ್ಳಕೆರೆಯ ಮದಕರಿ ನಗರದ ಕಣಿವೆ ಮಾರಮ್ಮ ದೇವಸ್ಥಾನದಲ್ಲಿ ಕಂಡುಬಂದ ದೃಶ್ಯ. ನಾಲ್ಕು ವರ್ಷಗಳ ಹಿಂದೆ ಈ ನವಿಲು ಕಾಲು ಮುರಿದುಕೊಂಡು ಜೀವನ್ಮರಣದ ನಡುವೆ ಹೋರಾಡುತ್ತಿತ್ತು. ಆಗ ಈ ದೇವಸ್ಥಾನದ ಅರ್ಚಕಿ ಗೋಪಮ್ಮ ಶೃಶ್ರೂಷೆ ಮಾಡಿದ್ರು. ಅಂದಿನಿಂದ ಇಲ್ಲೇ ಉಳಿದುಕೊಂಡಿರುವ ಈ ನವಿಲು ಬೇವಿನ ಮರವನ್ನ ತನ್ನ ವಾಸಸ್ಥಾನ ಮಾಡಿಕೊಂಡಿದೆ. ನಿತ್ಯವೂ ಪೂಜೆಯ ವೇಳೆ ದೇವಸ್ಥಾನದ ಮುಂದೆ ಪ್ರದಕ್ಷಿಣೆ ಹಾಕಿ ನೃತ್ಯ ಮಾಡುತ್ತೆ.

    ತಾನು ಎಲ್ಲೇ ಇರಲಿ, ಪೂಜೆ ಸಮಯಕ್ಕೆ ಸರಿಯಾಗಿ ಎಲ್ಲಿದ್ರೂ ಬಂದು ದೇವಿಯ ಮುಂದೆ ಕುಣಿಯುತ್ತೆ. ಜನರು ದೇವರಿಗಿಂತ ಹೆಚ್ಚಾಗಿ ನವಿಲಿನ ಮನಮೋಹಕ ಕುಣಿತ ನೋಡಲು ದೇವಸ್ಥಾನಕ್ಕೆ ಬರುತ್ತಿದ್ದಾರೆ. ಒಟ್ಟಿನಲ್ಲಿ ನವಿಲಿನ ಈ ನರ್ತನ ದೇವಸ್ಥಾನದ ಕಳೆಯನ್ನು ಹೆಚ್ಚಿಸಿರೋದಂತೂ ಸುಳ್ಳಲ್ಲ.

    https://www.youtube.com/watch?v=Tzj83gjLhqY&feature=youtu.be

  • ಊರಿಗೆ ಇರೋದು ಒಂದೇ ದೇವಸ್ಥಾನ: ನಿಧಿಗಾಗಿ ದೇವರ ಮೂರ್ತಿಯನ್ನ ಕದ್ದ ಕಳ್ಳರು

    ಊರಿಗೆ ಇರೋದು ಒಂದೇ ದೇವಸ್ಥಾನ: ನಿಧಿಗಾಗಿ ದೇವರ ಮೂರ್ತಿಯನ್ನ ಕದ್ದ ಕಳ್ಳರು

    ಬಳ್ಳಾರಿ: ಜಿಲ್ಲೆಯ ಕೂಡ್ಲಗಿ ತಾಲೂಕಿನ ಕರಡಿಹಳ್ಳಿ ಗ್ರಾಮದಲ್ಲಿ ಇರೋದು ಒಂದೇ ದೇವಸ್ಥಾನ. ನಿಧಿ ಆಸೆಗಾಗಿ ಕಳ್ಳರು ದೇವಸ್ಥಾನದಲ್ಲಿರುವ ಮೂರ್ತಿಯನ್ನೇ ಕದ್ದುಕೊಂಡು ಹೋಗಿದ್ದಾರೆ.

    ಗ್ರಾಮದಲ್ಲಿ ಕೇವಲ ನಾಯಕ್ ಮತ್ತು ಭೋವಿ ಜನಾಂಗದ ಜನರೇ ವಾಸವಿದ್ದಾರೆ. ಈ ಗ್ರಾಮಸ್ಥರು ನಿತ್ಯ ಪೂಜಿಸುತ್ತಿದ್ದ ಪುರಾತನ ಕಾಲದ ವಿಜಯನಗರದ ಅರಸರ ಕಾಲದ ಈಶ್ವರ ದೇವಾಲಯದಲ್ಲಿನ ಬಸವಣ್ಣನ ಮೂರ್ತಿಯನ್ನೇ ಮಾರ್ಚ್ 17 ರಂದು ಕಳ್ಳರು ಕಳ್ಳತನ ಮಾಡಿದ್ದಾರೆ. ಹೀಗಾಗಿ ಗ್ರಾಮಸ್ಥರಿಗೆ ಪೂಜೆ ಮಾಡಲು ದೇವರ ವಿಗ್ರಹವೇ ಇಲ್ಲದಂತಾಗಿದೆ.

    ಗ್ರಾಮಸ್ಥರು ದೇವರ ಮೂರ್ತಿಯನ್ನು ಹುಡುಕಿ ಕೊಡದಿದ್ದಲ್ಲಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಗುಡೆಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

     

  • ದೇವಾಸ್ಥಾನದೊಳಗೆ ವಿಕಲಾಂಗ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಯುವಕ

    ದೇವಾಸ್ಥಾನದೊಳಗೆ ವಿಕಲಾಂಗ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಯುವಕ

    ಭುವನೇಶ್ವರ: ದೇವಾಲಯದಲ್ಲಿ ವಿಕಲಾಂಗ ಅಪ್ರಾಪ್ತೆಯ ಮೇಲೆ ಯುವಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಓಡಿಶಾದ ಬಾರಿಪಾದಾದಲ್ಲಿ ನಡೆದಿದೆ.

    ಇಲ್ಲಿನ ಸ್ವಾಮಿ ಜಗನ್ನಾಥ ದೇವಾಲಯದಲ್ಲಿ ಶುಕ್ರವಾರ ರಾತ್ರಿ 11 ವರ್ಷದ ಬಾಲಕಿ ದೇವರ ದರ್ಶನ ಪಡೆಯಲು ದೇವಸ್ಥಾನಕ್ಕೆ ಹೋಗಿದ್ದಳು. ಈ ವೇಳೆ ದೇವಸ್ಥನ ನಿರ್ಜನವಾಗಿತ್ತು. ಈ ವೇಳೆ ದೇವಸ್ಥಾನದಲ್ಲಿದ್ದ 28 ವರ್ಷದ ಯುವಕ ಬಾಲಕಿಯನ್ನು ಮಂಟಪದ ಬಳಿ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

    ಸಂತ್ರಸ್ತೆಯನ್ನು ಸ್ಥಳದಿಂದ ರಕ್ಷಿಸಲಾಗಿದ್ದು, ಆಕ್ರೋಶಗೊಂಡ ಸ್ಥಳೀಯರು ಯುವಕನನ್ನು ಪತ್ತೆಹಚ್ಚು ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಬಾಲಕಿಯ ಸ್ಥಿತಿ ಗಂಭೀರವಾಗಿದ್ದರಿಂದ ಆಕೆಯನ್ನು ಕಟಕ್‍ನ ಎಸ್‍ಸಿಬಿ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಪೊಲೀಸರು ಹೇಳಿದ್ದಾರೆ.

    ಸ್ಥಳಕ್ಕೆ ಸಬ್-ಕಲೆಕ್ಟರ್ ಎಸ್.ಕೆ.ಪುರೋಹಿತ್ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಬಾಲಕಿಯ ಚಿಕಿತ್ಸಾ ವೆಚ್ಚಕ್ಕೆ 10,000 ರೂ. ಮಂಜೂರು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

     

  • ಮಹಿಳೆಯರೇ, ದೇವಸ್ಥಾನಗಳಲ್ಲಿ ಭಕ್ತಿಯಲ್ಲಿ ಮೈಮರೆಯುವ ಮುನ್ನ ಈ ಸುದ್ದಿ ಓದಿ

    ಮಹಿಳೆಯರೇ, ದೇವಸ್ಥಾನಗಳಲ್ಲಿ ಭಕ್ತಿಯಲ್ಲಿ ಮೈಮರೆಯುವ ಮುನ್ನ ಈ ಸುದ್ದಿ ಓದಿ

    ಹಾಸನ: ದೇವಸ್ಥಾನಗಳಲ್ಲಿ ಭಕ್ತಿ ಭಾವದಲ್ಲಿರುವ ಭಕ್ತರು ಮೈಮರೆಯುವ ಮುನ್ನ ಸ್ವಲ್ಪ ಎಚ್ಚರವಾಗಿರಬೇಕು. ದೇವಸ್ಥಾನದಲ್ಲಿ ಬರುವ ಮಹಿಳೆಯರು ಭಕ್ತಿಯಲ್ಲಿ ಮೈಮರೆತ್ರೆ, ಇತ್ತ ಕಳ್ಳಿಯರು ತಮ್ಮ ಕೈಚಳಕ ತೋರುತ್ತಾರೆ. ಶ್ರೀರಂಗಪಟ್ಟಣದ ಪ್ರಸಿದ್ಧ ನಿಮಿಷಾಂಭ ದೇವಸ್ಥಾನದಲ್ಲಿ ನಡೆದಿರುವ ಕಳ್ಳಿಯರ ಕೈಚಳಕದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

    ಹಾಸನ ಮೂಲದ ಭವ್ಯ ಎಂಬವರು ನಿಮಿಷಾಂಭ ದೇವಸ್ಥಾನದಲ್ಲಿ ದರ್ಶನ ಪಡೆದು ಕುಂಕುಮ ನೀಡುವ ಸರದಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಕಳ್ಳಿಯರು ತಮ್ಮ ಕರಾಮತ್ ತೋರಿಸಿದ್ದಾರೆ. ಸರದಿ ಸಾಲಿನಲ್ಲಿ ಬರುವಂತೆ ನಟಿಸಿರುವ ಕಳ್ಳಿಯರು ಭವ್ಯರನ್ನು ಹಿಂಬಾಲಿಸಿದ್ದಾರೆ. ಅರ್ಚಕರಿಂದ ಕುಂಕುಮ ಪಡೆಯುವ ನೆಪದಲ್ಲಿ ಬ್ಯಾಗ್‍ನಿಂದ ಪರ್ಸ್‍ನ್ನು ಕದ್ದು, ತನ್ನ ಸಹವರ್ತಿ ಕಳ್ಳಿಗೆ ನೀಡುತ್ತಾಳೆ. ಆ ಕಳ್ಳಿ ಕ್ಷಣಾರ್ಧದಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದಾಳೆ.

    ಭವ್ಯ-ಪರ್ಸ್ ಕಳೆದುಕೊಂಡವರು

    ಮನೆಗೆ ಬಂಬ ಬಳಿಕ ಭವ್ಯ ತಮ್ಮ ಬ್ಯಾಗ್‍ನಲ್ಲಿ ಪರ್ಸ್ ಇಲ್ಲದೇ ಇರೋದನ್ನು ಗಮನಿಸಿದ್ದಾರೆ. ಪರ್ಸ್ ನಲ್ಲಿ ಮೂರು ಸಾವಿರ ರೂಪಾಯಿ ಹಣವಿದ್ದಿದ್ದು ಎಂದು ಸುಮ್ಮನಾಗುವಷ್ಟರಲ್ಲಿ ಅವರ ಬ್ಯಾಂಕ್ ಖಾತೆಯಿಂದ 40 ಸಾವಿರ ಹಣ ಡ್ರಾ ಆಗಿದೆ ಅಂತಾ ಮೆಸೇಜ್ ಬಂತು.

    ಇದನ್ನೂ ಓದಿ: ಪೋಷಕರೇ, ಮಕ್ಕಳನ್ನು ಕಾರಿನಲ್ಲಿ ಬಿಟ್ಟು ಹೋಗುವ ಮುನ್ನ ಈ ಸುದ್ದಿ ಓದಿ

    ಸದ್ಯ ಎರಡು ಎಟಿಎಂ ಕಾರ್ಡ್‍ಗಳು ವೋಟರ್ ಐಡಿ ಜೊತೆಗೆ ಮೂರು ಸಾವಿರ ನಗದು ಕಳೆದುಕೊಂಡಿರುವ ಭವ್ಯ ಶ್ರೀರಂಗಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿಸಿಟಿವಿಯಲ್ಲಿ ಕಳ್ಳಿಯರ ಕೈಚಳಕ ಸ್ಪಷ್ಟವಾಗಿ ಕಾಣುತ್ತಿದೆ. ಪೊಲೀಸರು ಕ್ರಮ ಕೈಗೊಂಡ್ರೆ ನಮ್ಮ ಹಣ ನಮಗೆ ಸಿಗುತ್ತೆ. ನಮಗೆ ನ್ಯಾಯ ಕೊಡಿಸಿ ಎಂದು ಭವ್ಯ ತಮ್ಮ ಅಳಲು ತೋಡಿಕೊಂಡಿದ್ದಾರೆ.

    https://youtu.be/EYaWW-Nl2Bw

     

  • ನವಜಾತ ಮಗುವನ್ನು ದೇವಸ್ಥಾನದಲ್ಲಿ ಬಿಟ್ಟು ಹೋದ ತಾಯಿ

    ನವಜಾತ ಮಗುವನ್ನು ದೇವಸ್ಥಾನದಲ್ಲಿ ಬಿಟ್ಟು ಹೋದ ತಾಯಿ

    ಧಾರವಾಡ: ನವಜಾತ ಹೆಣ್ಣು ಮಗುವನ್ನು ತಾಯಿಯೊಬ್ಬಳು ನಗರದ ಕೃಷಿ ವಿವಿ ಬಳಿಯ ಬಸವೇಶ್ವರ ದೇವಸ್ಥಾನದಲ್ಲಿ ಬಿಟ್ಟು ಹೋಗಿದ್ದಾಳೆ.

    ದೇವಸ್ಥಾನದ ಬಳಿ ಮಗು ಇರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮಗುವನ್ನು 108 ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

    ಸದ್ಯ ನವಜಾತು ಮಗು ಜಿಲ್ಲಾಸ್ಪತ್ರೆಯಲ್ಲಿ ಆರೈಕೆಯಲ್ಲಿದೆ. ಮಗು ಆರೋಗ್ಯವಾಗಿದ್ದು, ಅದನ್ನ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರ ಮಾಡಲಾಗುತ್ತಿದೆ. ಇನ್ನು ಈ ಮಗು 7 ರಿಂದ 8 ದಿನಗಳ ಹಿಂದೆಯೇ ಹುಟ್ಟಿದೆ ಎಂದು ಆಸ್ಪತ್ರೆಯ ವೈದ್ಯ ಗಿರಿಧರ್ ಹೇಳಿದ್ದಾರೆ.

     

  • ಜಮೀನಿನಲ್ಲಿದ್ದ ವೀರಾಂಜನೇಯ ಸ್ವಾಮಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು

    ಜಮೀನಿನಲ್ಲಿದ್ದ ವೀರಾಂಜನೇಯ ಸ್ವಾಮಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು

    ಕೋಲಾರ: ಜಮೀನಿನಲ್ಲಿದ್ದ ವೀರಾಂಜನೇಯ ಸ್ವಾಮಿ ದೇಗುಲವನ್ನ ಧ್ವಂಸಗೊಳಿಸಿ ಬೆಂಕಿ ಇಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.

    ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತೆರ್ನಹಳ್ಳಿ ಗ್ರಾಮದಲ್ಲಿ ತಡ ರಾತ್ರಿ ಈ ಘಟನೆ ನಡೆದಿದೆ. ವಕೀಲ ಚಂದ್ರಪ್ಪ ಎಂಬವರಿಗೆ ಸೇರಿದ ಜಮೀನಿನಲ್ಲಿ ಈ ದೇವಾಲಯ ನಿರ್ಮಾಣವಾಗಿತ್ತು.

    ಜಮೀನಿನಲ್ಲಿ ದೇವಾಲಯ ನಿರ್ಮಿಸಿದ್ದಕ್ಕೆ ನಾರಾಯಣಮ್ಮ ಅಕ್ಷೇಪ ವ್ಯಕ್ತಪಡಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಜಮೀನು ವಿವಾದದ ಹಿನ್ನೆಲೆಯಲ್ಲಿ ನಾರಾಯಣಮ್ಮ ದೇಗುಲಕ್ಕೆ ಬೆಂಕಿ ಇಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

    ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.