Tag: ದೇವಾನಂದ ಚವ್ಹಾಣ

  • ತಾಯಿ ಮಗುವಿನ ಮೇಲೆ ಹರಿದ ಕಾರು – ಸ್ಥಳದಲ್ಲೇ ಇಬ್ಬರು ಸಾವು

    ತಾಯಿ ಮಗುವಿನ ಮೇಲೆ ಹರಿದ ಕಾರು – ಸ್ಥಳದಲ್ಲೇ ಇಬ್ಬರು ಸಾವು

    ವಿಜಯಪುರ: ಹೆದ್ದಾರಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ತಾಯಿ ಮಗುವಿನ ಮೇಲೆ ಕಾರು ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

    ಗೀತಾ ಪೂಜಾರಿ(35) ಹಾಗೂ ಆಕೆಯ ಮಗ ಮಂಜು ಪೂಜಾರಿ(4) ಮೃತ ದುರ್ದೈವಿಗಳು. ವಿಜಯಪುರ ತಾಲೂಕಿನ ತಿಡಗುಂದಿ ಬಳಿಯ ಎನ್ ಎಚ್ 50 ಹೆದ್ದಾರಿ ಮೇಲೆ ಗೀತಾ ಪೂಜಾರಿ ಮತ್ತು ಮಂಜು ಪೂಜಾರಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಯಮದೂತನಂತೆ ಬಂದ ಕೆಎ 28 – ಪಿ 0922 ನಂಬರಿನ ಕಾರು ಇವರಿಬ್ಬರ ಮೇಲೆ ಹರಿದಿದ್ದು, ಈ ಪರಿಣಾಮ ತಾಯಿ, ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸೋಲು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು: ಬೊಮ್ಮಾಯಿ

    ಘಟನೆ ಬಳಿಕ ಸ್ಥಳಿಯರು ಕಾರು ಚಾಲಕನನ್ನು ಹಿಡಿದಿದ್ದು, ತಿಡಗುಂದಿ ಹೊರ ಪೊಲೀಸ್ ಠಾಣೆಯ ವಶಕ್ಕೆ ನೀಡಿದ್ದಾರೆ. ಸ್ಥಳಕ್ಕೆ ಬಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಹಿನ್ನೆಲೆ ಸ್ಥಳದಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ರಾತ್ರಿಯೇ ನ್ಯಾಯಕ್ಕಾಗಿ ಧರಣಿಗೆ ಕುಳಿತಿದ್ದಾರೆ.

    ಘಟನಾಸ್ಥಳಕ್ಕೆ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಭೇಟಿ ನೀಡಿದ್ದು, ಪ್ರತಿಭಟನೆಯಲ್ಲಿ ತೊಡಗಿದ್ದವರ ಮನವೊಲಿಕೆಗೆ ಯತ್ನ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳನ್ನ ಕರೆಯಿಸಿ ಮಾತನಾಡು ಭರವಸೆ ನೀಡಿದ್ದು, ಅಧಿಕಾರಿಗಳು ಸ್ಪಂದಿಸದೇ ಇದ್ದರೆ ನಾನು ನಿಮ್ಮೊಂದಿಗೆ ಧರಣಿ ನಡೆಸುವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅವನು ಇನ್ನೂ ನನ್ನ ಮಡಿಲಲ್ಲಿ, ಆಲೋಚನೆಗಳಲ್ಲಿ ಶಾಶ್ವತವಾಗಿದ್ದಾನೆ: ರಾಘವೇಂದ್ರ ರಾಜ್‍ಕುಮಾರ್

  • ನಿರ್ಗತಿಕನಾಗಿದ್ದಾಗ ಕುಮಾರಣ್ಣ ಅವಕಾಶ ಕೊಟ್ಟು ಬೆಳೆಸಿದ್ರು: ದೇವಾನಂದ್ ಚವ್ಹಾಣ್

    ನಿರ್ಗತಿಕನಾಗಿದ್ದಾಗ ಕುಮಾರಣ್ಣ ಅವಕಾಶ ಕೊಟ್ಟು ಬೆಳೆಸಿದ್ರು: ದೇವಾನಂದ್ ಚವ್ಹಾಣ್

    ವಿಜಯಪುರ: ಜೆಡಿಎಸ್ ಬಿಟ್ಟು ಬೇರೆ ಯಾವ ಪಕ್ಷಕ್ಕೂ ಸೇರುವ ಪ್ರಶ್ನೆಯೇ ಇಲ್ಲ ಎಂದು ನಾಗಠಾಣ ಕ್ಷೇತ್ರದ ಶಾಸಕ ದೇವಾನಂದ್ ಚವ್ಹಾಣ್ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ನಾನು ನಿರ್ಗತಿಕನಾಗಿದ್ದಾಗ ಸಿಎಂ ಕುಮಾರಸ್ವಾಮಿ ಅವರು ನನಗೆ ಅವಕಾಶ ಕೊಟ್ಟು ಬೆಳೆಸಿದ್ದಾರೆ. ನನ್ನನ್ನು ಮನೆ ಮಗನಂತೆ ನೋಡಿಕೊಳ್ಳುತ್ತಿದ್ದಾರೆ. ನಾನು ಜೆಡಿಎಸ್‍ನ ಕಟ್ಟಾ ಕಾರ್ಯಕರ್ತ, ಪಕ್ಷ ಬಿಡುವ ವಿಚಾರ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

    ಬೆಂಗಳೂರಿನಿಂದ ವಿಜಯಪುರಕ್ಕೆ ಇಂದು ಬರುತ್ತಿದ್ದಂತೆ ಎಲ್ಲರೂ ನನಗೆ ಬಿಜೆಪಿ ಸೇರುತ್ತೀರಾ ಅಂತ ಕೇಳಿದರು. ಆಗ ನನಗೆ ಆಶ್ಚರ್ಯವಾಯಿತು. ಸಿಎಂ ಕುಮಾರಸ್ವಾಮಿ, ಪಕ್ಷದ ಮುಖಂಡ ಬಸವರಾಜ ಹೊರಟ್ಟಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಜೊತೆಗೆ ಸರ್ಕಾರದ ಬಗ್ಗೆ ಚರ್ಚೆ ಮಾಡಿ ಬಂದಿದ್ದೇನೆ. ಸರ್ಕಾರ ಐದು ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತೆ. ಕುಮಾರಸ್ವಾಮಿ ಅವರೇ ಸಿಎಂ ಆಗಿರುತ್ತಾರೆ. ಸಮ್ಮಿಶ್ರ ಸರ್ಕಾರ ಗಟ್ಟಿಯಾಗಿದೆ ಅಂತ ನಾಯಕರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

    ನಾನು ಯಾವುದೇ ಬಿಜೆಪಿ ನಾಯಕರ ಜೊತೆಗೆ ಮಾತನಾಡಿಲ್ಲ. ನಮ್ಮ ಸಮಾಜದ ಕೆಲ ಮುಖಂಡರು ಬಿಜೆಪಿಗೆ ಸೇರುವ ಬಗ್ಗೆ ಮಾತಾಡಿದ್ದಾರೆ. ಆದರೆ ನಾನು ನಯವಾಗಿ ತಿರಸ್ಕರಿಸಿದ್ದೇನೆ. ವಿಜಯಪುರ ಲೋಕಸಭಾ ಅಭ್ಯರ್ಥಿ, ಪತ್ನಿ ಸುನಿತಾ ಚೌಹನ್ ಅವರ ಸೋಲಿಗೆ ಯಾರೂ ಹೊಣೆಯಲ್ಲ. ಜನಾಭಿಪ್ರಾಯ ಹೇಗಿದೆಯೋ ಹಾಗೆ ಆಗಿದೆ. ಯಾರನ್ನೂ ದೂಷಿಸುವುದು ಸರಿಯಲ್ಲ ಎಂದರು.

  • ತಡರಾತ್ರಿವರೆಗೂ ಕಾದು ಕುಳಿತು ಅಕ್ರಮ ಮರಳು ವಾಹನಗಳನ್ನ ಪೊಲೀಸರಿಗೆ ಒಪ್ಪಿಸಿದ ಶಾಸಕ

    ತಡರಾತ್ರಿವರೆಗೂ ಕಾದು ಕುಳಿತು ಅಕ್ರಮ ಮರಳು ವಾಹನಗಳನ್ನ ಪೊಲೀಸರಿಗೆ ಒಪ್ಪಿಸಿದ ಶಾಸಕ

    ವಿಜಯಪುರ: ಜಿಲ್ಲೆಯಲ್ಲಿ ಅಕ್ರಮ ಮರಳು ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದ್ದು, ಆದರೆ ಇದನ್ನು ನೋಡಿದ ಶಾಸಕ ದೇವಾನಂದ ಚವ್ಹಾಣ ಖದ್ದು ಅಕ್ರಮ ಮರಳು ವಾಹನಗಳನ್ನ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಅಕ್ರಮ ಮರಳು ಮಾಫಿಯಾ ನೋಡಿಯು ನೋಡದಂತೆ ಪೊಲೀಸ್ ಇಲಾಖೆ ಸೇರಿದಂತೆ ಕಂದಾಯ ಇಲಾಖೆ ನಿದ್ರೆಗೆ ಜಾರಿತ್ತು. ಆದ್ದರಿಂದ ಈಗ ಫೀಲ್ಡ್ ಗೆ ಖುದ್ದು ವಿಜಯಪುರದ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಇಳಿದಿದ್ದಾರೆ. ಸೋಮವಾರ ತಡರಾತ್ರಿ ನಾಗಠಾಣ ಮತಕ್ಷೇತ್ರದಲ್ಲಿ ಅಕ್ರಮ ಮರಳು ತುಂಬಿಕೊಂಡು ವಾಹನಗಳು ಹೋಗುತ್ತಿದ್ದವು. ಬಳಿಕ ತಡರಾತ್ರಿವರೆಗೂ ಕಾದು ಕುಳಿತು ವಾಹನಗಳನ್ನ ತಡೆದು ಶಾಸಕ ದೇವಾನಂದ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಇನ್ನು ವಾಹನದ ಚಾಲಕ ಪರಾರಿಯಾಗಿದ್ದು, ಸದ್ಯ ವಿಜಯಪುರ ಗ್ರಾಮೀಣ ಪೊಲೀಸರು ಮರಳು ವಾಹನ ಜಪ್ತಿ ಮಾಡಿ ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ಮಾಫಿಯಾಗೆ ಬ್ರೇಕ್ ಹಾಕಲು ಖುದ್ದು ಶಾಸಕ ದೇವಾನಂದ ರಸ್ತೆಗಿಳಿದಿದ್ದು, ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv