Tag: ದೇವೇಂದ್ರ ಫಡ್ನವಿಸ್

  • ಮಹಾರಾಷ್ಟ್ರ ಚುನಾವಣೆಯಲ್ಲಿ 160 ಸೀಟ್‌ ಗೆಲ್ಲಿಸಿಕೊಡುವುದಾಗಿ ಆಫರ್‌ ಬಂದಿತ್ತು – ಶರದ್ ಪವಾರ್ ಬಾಂಬ್‌

    ಮಹಾರಾಷ್ಟ್ರ ಚುನಾವಣೆಯಲ್ಲಿ 160 ಸೀಟ್‌ ಗೆಲ್ಲಿಸಿಕೊಡುವುದಾಗಿ ಆಫರ್‌ ಬಂದಿತ್ತು – ಶರದ್ ಪವಾರ್ ಬಾಂಬ್‌

    – ಮತಗಳ್ಳತನ ಆರೋಪ – ರಾಹುಲ್‌ ಗಾಂಧಿ ಬೆಂಬಲಕ್ಕೆ ನಿಂತ ಪವಾರ್‌
    – ಚುನಾವಣೆ ನ್ಯಾಯಯುತ ಅಂತ ಪಾವರ್‌ ಅವ್ರೇ ಹೇಳಿದ್ರು: ಕುಟುಕಿದ ಫಡ್ನವಿಸ್‌

    ಮುಂಬೈ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ (Maharashtra Polls 2024) ಸಮಯದಲ್ಲಿ ಇಬ್ಬರು ನನ್ನನ್ನ ಭೇಟಿಯಾಗಿದ್ದರು. 288 ಸ್ಥಾನಗಳ ಪೈಕಿ ವಿಪಕ್ಷಗಳ ಮೈತ್ರಿಕೂಟಕ್ಕೆ 160 ಸ್ಥಾನಗಳನ್ನು ಗೆಲ್ಲಿಸಿಕೊಡುವ ಆಫರ್‌ ನೀಡಿದ್ದರು ಎಂದು ಎನ್‌ಸಿಪಿ ನಾಯಕ ಶರದ್‌ ಪವಾರ್‌ (Sharad Pawar) ಸ್ಫೋಟಕ ಹೇಳಿಕೆ ನೀಢಿದ್ದಾರೆ.

    ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ನಡೆಸಲಾಗಿದೆ ಎಂದು ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಆರೋಪಿಸಿದ್ದರು. ರಾಹುಲ್‌ ಗಾಂಧಿ ಹೇಳಿಕೆ ಬೆಂಬಲಿಸಿರುವ ಶರದ್‌ ಪವಾರ್‌ ಮಹಾರಾಷ್ಟ್ರ ಚುನಾವಣೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಇದನ್ನೂ ಓದಿ: ಮತಗಳ್ಳತನ ಮಾಡುತ್ತಿರುವುದೇ ಕಾಂಗ್ರೆಸ್ – ದಾಖಲೆ ಸಮೇತ ರಾಗಾಗೆ ಜೆಡಿಎಸ್ ತಿರುಗೇಟು

    ಹೌದು. ನಾಗ್ಪುರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ವರ್ಷ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಇಬ್ಬರು ವ್ಯಕ್ತಿಗಳು ನನ್ನನ್ನ ಭೇಟಿಯಾಗಿದ್ದರು. 288 ಸ್ಥಾನಗಳ ಪೈಕಿ ವಿಪಕ್ಷ ಮೈತ್ರಿಕೂಟಕ್ಕೆ 160 ಸ್ಥಾನ ಗೆಲ್ಲಿಸಿಕೊಡುವ ಆಫರ್‌ ಕೊಟ್ಟಿದ್ದರು. ನಾನು ಅವರಿಬ್ಬರನ್ನೂ ರಾಹುಲ್‌ ಗಾಂಧಿ ಅವರಿಗೆ ಪರಿಚಯ ಮಾಡಿಕೊಟ್ಟಿದ್ದೆ. ಆದ್ರೆ ಈ ಆಫರ್‌ ಅನ್ನು ರಾಹುಲ್‌ ತಿರಸ್ಕರಿಸಿದ್ರು. ವಿರೋಧ ಪಕ್ಷಗಳಾದ ನಾವು ಇಂತಹ ಕೃತ್ಯಗಳಲ್ಲಿ ಭಾಗಿಯಾಗಬಾರದು. ನಾವು ನೇರವಾಗಿ ಜನರ ಬಳಿಗೆ ಹೋಗಬೇಕು ಅಂತ ಅವರು ಹೇಳಿದ್ದರು ಅಂತ ಪವಾರ್ ತಿಳಿಸಿದರು.

    160 ಸೀಟಿಗೆ ಆಫರ್‌ ಬಂದಿತ್ತು. ಆದ್ರೆ ನಾನು ಅವರಿಬ್ಬರ ಬಗ್ಗೆ ಪ್ರಾಮುಖ್ಯತೆ ನೀಡಲಿಲ್ಲ, ಹಾಗಾಗಿ ಅವರಿಬ್ಬರ ಹೆಸರು, ವಿಳಾಸವೂ ನನ್ನ ಬಳಿ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ನಮ್ಮ ಸರ್ಕಾರ ಇದ್ದಾಗಲೇ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ? – ಕೆ.ಎನ್‌ ರಾಜಣ್ಣ ಗರಂ

    ಪವಾರ್‌ ಈಗ ಏಕೆ ಹೇಳ್ತಿದ್ದಾರೆ? – ಫಡ್ನವಿಸ್‌
    ಇನ್ನೂ ಪವಾರ್‌ ಅವರ ಹೇಳಿಕೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರತಿಕ್ರಿಯಿಸಿದ್ದಾರೆ. ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡಿದ ನಂತರ ಪವಾರ್‌ ಏಕೆ ಈ ವಿಷಯ ಹೇಳ್ತಿದ್ದಾರೆ. ಈ ಹಿಂದೆ ರಾಹುಲ್‌ ಗಾಂಧಿ ಅವರು ಇವಿಎಂ ತಿರುಚಲಾಗಿದೆ ಎಂದು ಆರೋ ಮಾಡಿದಾಗ ಪವಾರ್‌ ಅದನ್ನು ಒಪ್ಪಿರಲಿಲ್ಲ. ಭಾರತದಲ್ಲಿ ಏನೇ ಚುನಾವಣೆಗಳು ನಡೆದರೂ ಮುಕ್ತ ಮತ್ತು ನ್ಯಾಯಯುತವಾಗಿರುತ್ತವೆ ಅಂತ ಅವರೇ ಹೇಳಿದ್ದರೆಂದು ಕುಟುಕಿದ್ದಾರೆ. ಇದನ್ನೂ ಓದಿ: ಬಿಹಾರ ಚುನಾವಣೆ ಹೊತ್ತಲ್ಲೇ 334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದಲೇ ತೆಗೆದ ಚುನಾವಣಾ ಆಯೋಗ

    2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 132 ಸ್ಥಾನಗಳು, ಶಿವಸೇನೆ (ಶಿಂದೆ ಬಣ) ಹಾಗೂ ಎನ್ಸಿಪಿ (ಅಜಿತ್ ಪವಾರ್ ಬಣ) ಕ್ರಮವಾಗಿ 47 ಮತ್ತು 41 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು. ಆದರೆ ಕೆಲ ತಿಂಗಳ ಹಿಂದಷ್ಟೇ 48 ಲೋಕಸಭಾ ಸ್ಥಾನಗಳ ಪೈಕಿ 30 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ, ಬಿಜೆಪಿ ಮೈತ್ರಿಕೂಟದ ಈ ಗೆಲುವಿಗೆ ಇವಿಎಂ ಅಕ್ರಮ ಹಾಗೂ ದತ್ತಾಂಶ ತಿರುಚುವಿಕೆ ಕಾರಣ ಎಂದು ಆರೋಪಿಸಿತ್ತು.

  • Maharashtra | ʻತ್ರಿಭಾಷಾ ಸೂತ್ರʼ ಆದೇಶ ಹಿಂಪಡೆದ ʻಮಹಾʼ ಸರ್ಕಾರ

    Maharashtra | ʻತ್ರಿಭಾಷಾ ಸೂತ್ರʼ ಆದೇಶ ಹಿಂಪಡೆದ ʻಮಹಾʼ ಸರ್ಕಾರ

    ಮುಂಬೈ: ರಾಜಕೀಯ ಗದ್ದಲ ಹಾಗೂ ಸಾರ್ವಜನಿಕರ ವಿರೋಧದ ನಡುವೆ ಮಹಾರಾಷ್ಟ್ರ ಸರ್ಕಾರ (Maharashtra government) ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಿಂದಿಯನ್ನು ಮೂರನೇ ಭಾಷೆಯನ್ನಾಗಿ (Third language) ಪರಿಚಯಿಸುವ ನಿರ್ಧಾರವನ್ನು (ತ್ರಿಭಾಷಾ ಸೂತ್ರ) ಹಿಂತೆಗೆದುಕೊಂಡಿದೆ.

    ರಾಜ್ಯ ವಿಧಾನಸಭೆಯ ಮಳೆಗಾಲ ಅಧಿವೇಶನಕ್ಕೂ ಮುನ್ನವೇ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ (Devendra Fadnavis) ಈ ನಿರ್ಧಾರ ಪ್ರಕಟಿಸಿದ್ದಾರೆ. ಭಾನುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಗೊಂಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪುರಿ ಕಾಲ್ತುಳಿತದಲ್ಲಿ ಮೂವರ ಸಾವು ಪ್ರಕರಣ – ಸಂತ್ರಸ್ತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ

    ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾರಾಷ್ಟ್ರದ ಶಾಲೆಗಳಲ್ಲಿ ತ್ರಿಭಾಷಾ ಸೂತ್ರ ಅಳವಡಿಕೆಯ ಭಾಗವಾಗಿ 1ರಿಂದ 5ನೇ ತರಗತಿವರೆಗೆ ಹಿಂದಿಯನ್ನು ಭಾಷೆಯಾಗಿ ಪರಿಚಯಿಸಿದ್ದ ಆದೇಶವನ್ನು ಹಿಂಪಡೆದಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: 3 ರಫೇಲ್‌ ಸೇರಿ 5 ಯುದ್ಧ ವಿಮಾನಗಳನ್ನ ಪಾಕ್‌ ಹೊಡೆದಿದೆ – ಐಎಎಫ್‌ ಅಧಿಕಾರಿ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌ ವಾಗ್ದಾಳಿ

    ರಾಜ್ಯದಲ್ಲಿ 1ನೇ ತರಗತಿಯಿಂದ ತ್ರಿಭಾಷಾ ಸೂತ್ರ ಅಳವಡಿಕೆ ಕುರಿತು ಸರ್ಕಾರ ಈ ವರ್ಷದ ಏಪ್ರಿಲ್ ಮತ್ತು ಜೂನ್‌ನಲ್ಲಿ ಹೊರಡಿಸಿದ್ದ ಆದೇಶಗಳನ್ನು ಹಿಂಪಡೆಯಲು ಸಂಪುಟ ನಿರ್ಧರಿಸಿದೆ. ಅಲ್ಲದೇ ತ್ರಿಭಾಷಾ ಸೂತ್ರ ಅಳವಡಿಕೆ ಕುರಿತು ಪರಿಶೀಲಿಸಲು ಶಿಕ್ಷಣ ತಜ್ಞ ನರೇಂದ್ರ ಜಾಧವ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅರ್ಧಶತಕ ಗಳಿಸುವ ಮುನ್ನವೇ ಬಂದ ಜವರಾಯ – ಸಿಕ್ಸರ್ ಹೊಡೆದ ಹತ್ತೇ ಸೆಕೆಂಡ್‌ನಲ್ಲಿ ಹಾರಿತು ಪ್ರಾಣಪಕ್ಷಿ

    ಯಾವ ತರಗತಿಯಿಂದ ತ್ರಿಭಾಷಾ ಸೂತ್ರವನ್ನು ಜಾರಿಗೊಳಿಸಬಹುದು ಎಂಬುದರ ಕುರಿತು ಈ ಸಮಿತಿ ಮೂರು ತಿಂಗಳಲ್ಲಿ ಶಿಫಾರಸು ಮಾಡಲಿದೆ. ಸಮಿತಿಯ ಇತರ ಸದಸ್ಯರನ್ನು ಶೀಘ್ರವೇ ನೇಮಿಸಲಾಗುವುದು. ಉದ್ಧವ್‌ ಠಾಕ್ರೆ ಅವರು ಮುಖ್ಯಮಂತ್ರಿ ಆಗಿದ್ದಾಗ ನೇಮಿಸಲಾಗಿದ್ದ ಡಾ. ರಘುನಾಥ್ ಮಶೇಲ್ಕರ್ ಸಮಿತಿಯು ತ್ರಿಭಾಷಾ ನೀತಿಯ ಭಾಗವಾಗಿ ಮರಾಠಿ, ಇಂಗ್ಲಿಷ್ ಮತ್ತು ಹಿಂದಿಯನ್ನು 1ರಿಂದ 12ನೇ ತರಗತಿ ವರೆಗೆ ಜಾರಿಗೊಳಿಸಬೇಕು ಎಂದು ಶಿಫಾರಸು ಮಾಡಿತ್ತು. ಅದನ್ನು ಠಾಕ್ರೆ ಸ್ವೀಕರಿಸಿದ್ದರು. ಸಂಪುಟದ ಮುಂದೆಯೂ ಇಡಲಾಗಿತ್ತು. ಆಗ ಈ ವರದಿ ತಿರಸ್ಕರಿಸದ ಅವರು, ಈ ನೀತಿಯನ್ನು ಜಾರಿಗೊಳಿಸಲು ಸಮಿತಿಯೊಂದನ್ನೂ ರಚಿಸಿದ್ದರು’ ಎಂದು ಫಡಣವೀಸ್ ವಿವರಿಸಿದರು.

    ಈಗ ಠಾಕ್ರೆ ಅವರು ತ್ರಿಭಾಷಾ ಸೂತ್ರವನ್ನು ವಿರೋಧಿಸುತ್ತಿದ್ದಾರೆ. ಹೀಗೆ ಅವರು ಭಾಷೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

  • ಆರ್‌ಎಸ್‌ಎಸ್ ಕಚೇರಿಯಲ್ಲಿ ಮೋದಿ ನಿವೃತ್ತಿ ಘೋಷಣೆ ಬಗ್ಗೆ ಮಾತನಾಡಿದ್ದಾರೆ: ಸಂಜಯ್ ರಾವತ್

    ಆರ್‌ಎಸ್‌ಎಸ್ ಕಚೇರಿಯಲ್ಲಿ ಮೋದಿ ನಿವೃತ್ತಿ ಘೋಷಣೆ ಬಗ್ಗೆ ಮಾತನಾಡಿದ್ದಾರೆ: ಸಂಜಯ್ ರಾವತ್

    – 2029ರಲ್ಲೂ ಮೋದಿಯೇ ಪ್ರಧಾನಿ, ಸಂಜಯ್ ರಾವತ್‌ಗೆ ಮೊಘಲರ ಮನಸ್ಥಿತಿ ಎಂದ ಫಡ್ನವಿಸ್

    ನವದೆಹಲಿ: ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ನರೇಂದ್ರ ಮೋದಿ (Narendra Modi) ಭಾನುವಾರ ನಾಗ್ಪುರದ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಿದ್ದರು. ಈ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಆರ್‌ಎಸ್‌ಎಸ್ ಕಚೇರಿಗೆ ಪ್ರಧಾನಿ ಭೇಟಿಯನ್ನು ಶಿವಸೇನೆ ನಾಯಕ ಸಂಜಯ್ ರಾವತ್ ಟೀಕಿಸಿದ್ದಾರೆ.

     

    ಪ್ರಧಾನಿ ಮೋದಿಗೆ ಸೆಪ್ಟೆಂಬರ್ 17ಕ್ಕೆ 75 ವರ್ಷ ತುಂಬಲಿದೆ. ಅವರ ಪಕ್ಷದ ನಿಯಮದಂತೆ ನಿವೃತ್ತರಾಗಲು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ, ತಮ್ಮ ನಿವೃತ್ತಿ ಅರ್ಜಿಯನ್ನು ಆರ್‌ಎಸ್‌ಎಸ್ ಕಚೇರಿಯಲ್ಲಿ ಸಲ್ಲಿಸಿರಬಹುದು. ಅಲ್ಲಿ ಗೌಪ್ಯವಾಗಿ ಚರ್ಚೆಯೂ ನಡೆದಿದೆ. ಅಲ್ಲದೇ ಸಂಘ ಪರಿವಾರವೂ ದೇಶದ ನಾಯಕತ್ವದಲ್ಲಿ ಬದಲಾವಣೆ ಬಯಸಿದೆ. ಪ್ರಧಾನಿ ಮೋದಿ ಕಾಲ ಮುಗಿದಿದೆ. ಅವರೂ ಕೂಡ ಬದಲಾವಣೆ ಬಯಸುತ್ತಾರೆ ಎಂದು ಸಂಜಯ್ ರಾವತ್ (Sanjay Raut) ಹೇಳಿದ್ದಾರೆ. ಇದನ್ನೂ ಓದಿ: ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ‌

    ಸಂಜಯ್ ಮಾತಿಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) ಕಿಡಿಕಾರಿದ್ದಾರೆ. ಮೋದಿ ಉತ್ತರಾಧಿಕಾರಿಯನ್ನು ಹುಡುಕುವ ಪ್ರಶ್ನೆಯೇ ಇಲ್ಲ. ಮೋದಿ ನಮ್ಮ ನಾಯಕರು, ಅವರೇ ಮುಂದುವರಿಯುತ್ತಾರೆ. ಒಬ್ಬ ನಾಯಕ ಸಕ್ರಿಯನಾಗಿದ್ದಾಗ, ಅವನ ಉತ್ತರಾಧಿಕಾರದ ಬಗ್ಗೆ ಮಾತನಾಡುವುದು ಸರಿಯಲ್ಲ. ನಮ್ಮ ಸಮಾಜದಲ್ಲಿ ತಂದೆ ಜೀವಂತವಾಗಿರುವಾಗ, ನಾವು ಉತ್ತರಾಧಿಕಾರದ ಬಗ್ಗೆ ಮಾತನಾಡುವುದಿಲ್ಲ. ಇದು ಮೊಘಲ್ ಸಂಸ್ಕೃತಿ, ನಮ್ಮದಲ್ಲ. ಅದರ ಸಮಯ ಇನ್ನೂ ಬಂದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಏ.2ಕ್ಕೆ ವಕ್ಫ್ ತಿದ್ದುಪಡಿ ಬಿಲ್‌ಗೆ ಕೇಂದ್ರ ಸಿದ್ಧತೆ – ಈಗ ಏನಿದೆ? ಏನು ಬದಲಾಗಲಿದೆ?

  • ನಾಗ್ಪುರ ಹಿಂಸಾಚಾರವು ಆಕಸ್ಮಿಕವಲ್ಲ, ಪೂರ್ವ ಯೋಜಿತ ದಾಳಿ – ʻಮಹಾʼ ಸಿಎಂ ದೇವೇಂದ್ರ ಫಡ್ನವೀಸ್

    ನಾಗ್ಪುರ ಹಿಂಸಾಚಾರವು ಆಕಸ್ಮಿಕವಲ್ಲ, ಪೂರ್ವ ಯೋಜಿತ ದಾಳಿ – ʻಮಹಾʼ ಸಿಎಂ ದೇವೇಂದ್ರ ಫಡ್ನವೀಸ್

    ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಹಿಂಸಾಚಾರ (Nagpur violence) ಘಟನೆಯು ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಈ ಘಟನೆಯ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ಅವರಿಂದು ವಿಧಾನಸಭೆಯಲ್ಲಿ ಮಾತನಾಡಿದ್ದು, ಈ ಹಿಂಸಾಚಾರವು ಆಕಸ್ಮಿಕವಾಗಿ ನಡೆದಿಲ್ಲ. ಇದು ಪೂರ್ವ ಯೋಜಿತ ದಾಳಿ ಎಂದು ಆರೋಪಿಸಿದ್ದಾರೆ.

    ನಾಗ್ಪುರದ ಮಹಾಲ್ ಪ್ರದೇಶದಲ್ಲಿರುವ ಔರಂಗಜೇಬ್ ಸಮಾಧಿಯನ್ನು ತೆಗೆದುಹಾಕಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗ ದಳದ ಸದಸ್ಯರು ಚತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ನಂತರ ಈ ಹಿಂಸಾಚಾರ ಭುಗಿಲೆದ್ದಿತು. ಪ್ರತಿಭಟನೆಯ ಸಂದರ್ಭದಲ್ಲಿ ಮುಸ್ಲಿಂ ಧಾರ್ಮಿಕ ಗ್ರಂಥ ಕುರಾನ್‌ ಅನ್ನು ಸುಟ್ಟು ಹಾಕಲಾಗಿದೆ ಎಂಬ ವದಂತಿಗಳು ಹರಡಿದ್ದವು. ಇದು ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಯಿತು. ಈ ಘಟನೆಯಲ್ಲಿ ಪೊಲೀಸರು ಮತ್ತು ಸಾರ್ವಜನಿಕ ಆಸ್ತಿಗೆ ದಾಳಿ ನಡೆದಿದ್ದು, 33 ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

    ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡುತ್ತಾ, ಈ ದಾಳಿಯು ಸಾಮಾಜಿಕ ಸಾಮರಸ್ಯವನ್ನು ಭಂಗಗೊಳಿಸುವ ಉದ್ದೇಶದಿಂದ ನಡೆದಿದೆ. ಪೊಲೀಸರ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಗಿದ್ದು, ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡಲಾಗಿದೆ. ಆರೋಪಿಗಳು ಯಾರೇ ಆಗಿರಲಿ, ಯಾವ ಧರ್ಮಕ್ಕೆ ಸೇರಿದವರಾಗಿರಲಿ, ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಕಾನೂನನ್ನು ಕೈಗೆ ತೆಗೆದುಕೊಳ್ಳಲು ಯಾರಿಗೂ ಅನುಮತಿ ಇಲ್ಲ. ಶಾಂತಿ ಕಾಪಾಡುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: Aurangzeb Tomb Row| ಧರ್ಮಗ್ರಂಥ ಸುಟ್ಟ ವದಂತಿಯಿಂದ ನಾಗ್ಪುರದಲ್ಲಿ ಹಿಂಸಾಚಾರ, ಕರ್ಫ್ಯೂ ಜಾರಿ

    ಈ ಘಟನೆಯ ಹಿನ್ನೆಲೆಯಲ್ಲಿ ನಾಗ್ಪುರ ಹಲವು ಪ್ರದೇಶಗಳಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 163ರ ಅಡಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕೊತ್ವಾಲಿ, ಗಣೇಶಪೇಠ, ತಹಸೀಲ್, ಲಕಡ್‌ಗಂಜ್, ಪಚಪಾವ್ಲಿ, ಶಾಂತಿನಗರ, ಸಕ್ಕರದಾರಾ, ನಂದನವನ್, ಇಮಾಮವಾಡಾ, ಯಶೋಧರನಗರ ಮತ್ತು ಕಪಿಲನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ ಅನ್ವಯಿಸುತ್ತದೆ. ಪೊಲೀಸ್ ಆಯುಕ್ತ ರವೀಂದ್ರ ಕುಮಾರ್ ಸಿಂಗಲ್ ಅವರು ಈ ಆದೇಶ ಹೊರಡಿಸಿದ್ದು, ಮುಂದಿನ ಸೂಚನೆ ಬರುವವರೆಗೆ ಈ ನಿರ್ಬಂಧ ಮುಂದುವರಿಯಲಿದೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಜಡ್ಜ್ ಆಗಿ ಬಾಗ್ಚಿ ಅಧಿಕಾರ ಸ್ವೀಕಾರ – 2031ರಲ್ಲಿ ಸಿಜೆಐ ಅಗಲಿದ್ದಾರೆ ಬಾಗ್ಚಿ

    ಹಿಂಸಾಚಾರದಲ್ಲಿ ಭಾಗಿಯಾದವರನ್ನು ಗುರುತಿಸಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿ ಹರಡುವ ಖಾತೆಗಳ ಮೇಲೆಯೂ ನಿಗಾ ಇಡಲಾಗಿದೆ. ಮಹಾರಾಷ್ಟ್ರ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಪ್ಯಾರೆ ಖಾನ್ ಅವರು, ಈ ಹಿಂಸಾಚಾರದಲ್ಲಿ ಬಾಹ್ಯ ಜನರೇ ಭಾಗಿಯಾಗಿದ್ದಾರೆ. ನಾಗ್ಪುರದ ಸಾಮರಸ್ಯವನ್ನು ಭಂಗಗೊಳಿಸಲು ಇದೊಂದು ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

    ಪ್ರತಿಪಕ್ಷಗಳು ಈ ಘಟನೆಯನ್ನು ರಾಜ್ಯ ಸರ್ಕಾರದ ಕಾನೂನು ಮತ್ತು ಸುವ್ಯವಸ್ಥೆಯ ವೈಫಲ್ಯ ಎಂದು ಟೀಕಿಸಿವೆ. ಕಾಂಗ್ರೆಸ್ ನಾಯಕ ರೇಣುಕಾ ಚೌಧರಿ ಅವರು ರಾಜ್ಯಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಮುಖ್ಯಮಂತ್ರಿಗಳು ತಮ್ಮ ರಾಜಧರ್ಮವನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸಂವಿಧಾನ ವಿರುದ್ಧವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟು, ಮತಬ್ಯಾಂಕ್‌ ಗಟ್ಟಿಮಾಡಿಕೊಳ್ತಿದೆ: ಬೊಮ್ಮಾಯಿ

    ಇದೇ ವೇಳೆ, ಕೇಂದ್ರ ಸಚಿವ ಮತ್ತು ನಾಗ್ಪುರ ಸಂಸದ ನಿತಿನ್ ಗಡ್ಕರಿ ಅವರು ಶಾಂತಿ ಕಾಪಾಡುವಂತೆ ಮತ್ತು ವದಂತಿಗಳನ್ನು ನಂಬದಂತೆ ಜನರಿಗೆ ಮನವಿ ಮಾಡಿದ್ದಾರೆ.

  • ಮಹಾರಾಷ್ಟ್ರ ಸಿಎಂ ಫಡ್ನವಿಸ್ ಕಚೇರಿ ಮೇಲೆ ದಾಳಿ ನಡೆಸುವ ಬೆದರಿಕೆ – ಪಾಕ್‌ ಮೂಲದ ಸಂಖ್ಯೆಯಿಂದ ಕರೆ

    ಮಹಾರಾಷ್ಟ್ರ ಸಿಎಂ ಫಡ್ನವಿಸ್ ಕಚೇರಿ ಮೇಲೆ ದಾಳಿ ನಡೆಸುವ ಬೆದರಿಕೆ – ಪಾಕ್‌ ಮೂಲದ ಸಂಖ್ಯೆಯಿಂದ ಕರೆ

    ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಕಚೇರಿ ಮೇಲೆ ದಾಳಿ ನಡೆಸುವುದಾಗಿ ವಾಟ್ಸಾಪ್‌ನಲ್ಲಿ ಬೆದರಿಕೆ ಸಂದೇಶ ಬಂದಿದೆ.

    ಪಾಕಿಸ್ತಾನದ ಫೋನ್ ಸಂಖ್ಯೆಯಿಂದ ವರ್ಲಿ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಸಂದೇಶ ಕಳುಹಿಸಲಾಗಿದ್ದು, ಇದು ಗಂಭೀರ ಭದ್ರತಾ ಕಳವಳ ಹುಟ್ಟುಹಾಕಿದೆ.

    ಬೆದರಿಕೆ ಬಂದ ನಂತರ ಮುಂಬೈ ಪೊಲೀಸರು ತ್ವರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಸಂದೇಶದ ಮೂಲವನ್ನು ಪತ್ತೆಹಚ್ಚಲು ಮತ್ತು ಅದರ ವಿಶ್ವಾಸಾರ್ಹತೆಯನ್ನು ನಿರ್ಧರಿಸಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.

    ಮುನ್ನೆಚ್ಚರಿಕೆ ಕ್ರಮವಾಗಿ ಸಿಎಂಒ ಮತ್ತು ಇತರ ಪ್ರಮುಖ ಸರ್ಕಾರಿ ಕಟ್ಟಡಗಳ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ತನಿಖೆ ಮುಂದುವರೆದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

  • ಮುಂದಿನ ಕುಂಭಮೇಳ ಎಲ್ಲಿ ನಡೆಯುತ್ತೆ? – ಈಗಲೇ ತಯಾರಿ ಆರಂಭಿಸಿದ ಸರ್ಕಾರ

    ಮುಂದಿನ ಕುಂಭಮೇಳ ಎಲ್ಲಿ ನಡೆಯುತ್ತೆ? – ಈಗಲೇ ತಯಾರಿ ಆರಂಭಿಸಿದ ಸರ್ಕಾರ

    ಮುಂಬೈ: 2027ರಲ್ಲಿ ಪೂರ್ಣ ಕುಂಭಮೇಳವು (Kumbh Mela) ಮಹಾರಾಷ್ಟ್ರದ (Maharashtra) ನಾಸಿಕ್‌ನಲ್ಲಿ (Nasik) ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) ತಿಳಿಸಿದ್ದಾರೆ.

    ಮುಂಬೈನಲ್ಲಿ ನಡೆದ ನಾಸ್ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2027ರಲ್ಲಿ, ನಾವು ನಾಸಿಕ್‌ನಲ್ಲಿ ಕುಂಭಮೇಳವನ್ನು ನಡೆಸುತ್ತೇವೆ. ಪ್ರಯಾಗ್‌ರಾಜ್ ಕುಂಭವನ್ನು 15,000 ಹೆಕ್ಟೇರ್ ಪ್ರದೇಶದಲ್ಲಿ ಆಯೋಜಿಸಲಾಗಿತ್ತು ಮತ್ತು ನಾಸಿಕ್‌ನಲ್ಲಿ 250 ಹೆಕ್ಟೇರ್ ಪ್ರದೇಶದಲ್ಲಿ ನಡೆಸುತ್ತೇವೆ. 2015ರಲ್ಲಿ ಕುಂಭಮೇಳ ಆಯೋಜಿಸಿದ ಅನುಭವ ನನಗಿದೆ. ಆದರೆ ನಾಸಿಕ್‌ನಲ್ಲಿ ನಡೆಯುವ ಕುಂಭಮೇಳವು ತಾಂತ್ರಿಕವಾಗಿ ಮುಂದುವರಿದ ಕುಂಭವಾಗಲಿದೆ ಎಂದರು. ಇದನ್ನೂ ಓದಿ: `ಪುಟ್ಟಕ್ಕ’ ಉಮಾಶ್ರೀ ಹೋರಾಟಕ್ಕೆ ನಟ ರವಿಚಂದ್ರನ್ ಸಾಥ್

    2027ರ ಪೂರ್ಣ ಕುಂಭಮೇಳವು ನಾಸಿಕ್‌ನಿಂದ ಸುಮಾರು 38 ಕಿ.ಮೀ ದೂರದಲ್ಲಿರುವ ಗೋದಾವರಿ ನದಿಯ ದಡದಲ್ಲಿರುವ ತ್ರಯಂಬಕೇಶ್ವರದಲ್ಲಿ ನಡೆಯಲಿದೆ. ನಾಸಿಕ್ ಕುಂಭಮೇಳವು 2027ರ ಜು.17 ರಂದು ಪ್ರಾರಂಭವಾಗಲಿದ್ದು, ಆಗಸ್ಟ್ 17ರಂದು ಕೊನೆಗೊಳ್ಳಲಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ರಾಜಮೌಳಿ ಮೇಲೆ ಗಂಭೀರ ಆರೋಪ : ನಿರ್ಮಾಪಕ ಆತ್ಮಹತ್ಯೆ

    ಮಹಾರಾಷ್ಟ್ರ ಸರ್ಕಾರವು 2027ರಲ್ಲಿ ನಡೆಯಲಿರುವ ಕುಂಭಮೇಳಕ್ಕೆ ಈಗಾಗಲೇ ತಯಾರಿಯನ್ನು ನಡೆಸುತ್ತಿದೆ. ರಸ್ತೆ, ಸಂಚಾರ ನಿರ್ವಹಣೆ ಮತ್ತು ಸಂಪರ್ಕವನ್ನು ಯೋಜನೆಗಳನ್ನು ಚರ್ಚಿಸಲು ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮನೀಷಾ ಪತಂಕರ್ ಮಹೈಸ್ಕರ್ ನಾಸಿಕ್‌ಗೆ ಭೇಟಿ ನೀಡಿದ್ದರು. ಪಾರ್ಕಿಂಗ್ ಪ್ರದೇಶದಿಂದ ಕುಂಭಸ್ಥಳಕ್ಕೆ ಯಾತ್ರಿಕರನ್ನು ಕರೆದೊಯ್ಯಲು ವಿಶೇಷ ಬಸ್‌ಗಳನ್ನು ವ್ಯವಸ್ಥೆಗೆ ಕಲ್ಪಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ.

    ನಾಸಿಕ್ ಮಹಾನಗರ ಪಾಲಿಕೆಯು ಮೂಲಸೌಕರ್ಯ ಸುಧಾರಣೆಗಾಗಿ 7,500 ಕೋಟಿ ರೂ. ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದೆ. ಕುಂಭಮೇಳದ ಪೂರ್ವತಯಾರಿ ಕಾರ್ಯವು ಎಪ್ರಿಲ್‌ನಿಂದ ಪ್ರಾರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಡಿಕೆಶಿಗೆ ಕರಿಬೆಕ್ಕುಗಳ ಕಾಟ, ಕರ್ನಾಟಕದಲ್ಲಿ ಡಿಕೆಶಿ ಕೂಡ ಒಬ್ಬ ಏಕನಾಥ್ ಶಿಂಧೆ : ಆರ್.ಅಶೋಕ್

  • ಶಿಂಧೆ ನೇತೃತ್ವದ ಶಿವಸೇನೆಯ 20 ಶಾಸಕರ Y-ಭದ್ರತೆ ವಾಪಸ್ ಪಡೆದ ಫಡ್ನವಿಸ್

    ಶಿಂಧೆ ನೇತೃತ್ವದ ಶಿವಸೇನೆಯ 20 ಶಾಸಕರ Y-ಭದ್ರತೆ ವಾಪಸ್ ಪಡೆದ ಫಡ್ನವಿಸ್

    – ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದಲ್ಲಿ ಬಿರುಕು?

    ನವದೆಹಲಿ: ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಬಿರುಕು ಹೆಚ್ಚಾಗುತ್ತಿದೆ ಎಂಬ ಊಹಾಪೋಹಗಳ ಮಧ್ಯೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದ ಗೃಹ ಇಲಾಖೆಯು ಡಿಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 20 ಶಾಸಕರಿಗೆ ನೀಡಲಾಗಿದ್ದ ವೈ-ಭದ್ರತಾ ರಕ್ಷಣೆಯನ್ನು ಹಿಂತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

    ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಕೆಲವು ಶಾಸಕರ ಭದ್ರತಾ ರಕ್ಷಣೆಯನ್ನು ಸಹ ಕಡಿಮೆ ಮಾಡಲಾಗಿದ್ದರೂ, ಶಿವಸೇನೆಯವರಿಗಿಂತ ಈ ಸಂಖ್ಯೆ ತುಂಬಾ ಕಡಿಮೆಯಾಗಿದೆ ಎಂದು ವರದಿಯಾಗಿದೆ. ರಾಜ್ಯ ಸಂಪನ್ಮೂಲಗಳ ದುರುಪಯೋಗವನ್ನು ತಡೆಯುವ ಸರ್ಕಾರದ ಉಪಕ್ರಮದ ಭಾಗವಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಮಂತ್ರಿಗಳಲ್ಲದಿದ್ದರೂ ಈ ಶಾಸಕರಿಗೆ ಹೆಚ್ಚುವರಿ ಸವಲತ್ತಾಗಿ ವೈ-ಭದ್ರತಾ ರಕ್ಷಣೆಯನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಚಿನ್ನಾಭರಣ, ಹಣ ದೋಚಿ ಸಿಕ್ಕಿಬೀಳುವ ಭಯದಲ್ಲಿ ಡಿವಿಆರ್ ಹೊತ್ತೊಯ್ದ ಕಳ್ಳರು!

    2022ರಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯಿಂದ ಪಕ್ಷಾಂತರಗೊಂಡ ನಂತರ ಈ ಶಾಸಕರಿಗೆ ವೈ ಶ್ರೇಣಿಯ ಭದ್ರತೆಯನ್ನು ಒದಗಿಸಲಾಯಿತು. ಬಳಿಕ ಕಾಂಗ್ರೆಸ್ ಎನ್‌ಸಿಪಿ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಪತನಕ್ಕೆ ಕಾರಣವಾಯಿತು. ಫಡ್ನವಿಸ್ ಸರ್ಕಾರದ ನಿರ್ಧಾರವು ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಬಿಜೆಪಿ ನಡುವೆ ನಡೆಯುತ್ತಿರುವ ಉದ್ವಿಗ್ನತೆಯನ್ನು ತೀವ್ರಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಇದನ್ನೂ ಓದಿ: ಪಾಕ್‌ ಬೆಡಗಿಗೆ ಕಾರವಾರ ನೌಕಾನೆಲೆಯ ಮಾಹಿತಿ, ಪ್ರತಿ ತಿಂಗಳು 5,000 ಜಮೆ -‌ ಎನ್‌ಐಎಯಿಂದ ಇಬ್ಬರು ಅರೆಸ್ಟ್

    ಸರ್ಕಾರದ ಈ ನಡೆಯನ್ನು ಫಡ್ನವಿಸ್ ತನ್ನ ಅಧಿಕಾರವನ್ನು ಪ್ರತಿಪಾದಿಸಲು ನಡೆಸಿದ ಕಾರ್ಯತಂತ್ರದ ತಂತ್ರವೆಂದು ಗ್ರಹಿಸಲಾಗಿದೆ. ರಾಯಗಡ ಮತ್ತು ನಾಸಿಕ್‌ನ ನಾಯಕರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಬಿಜೆಪಿ ಮತ್ತು ಶಿಂಧೆ ಸೇನಾ ನಡುವಿನ ಬಿಕ್ಕಟ್ಟು ಸೃಷ್ಠಿಯಾಗಿತ್ತು. ಇನ್ನೂ ಈ ಸಮಸ್ಯೆ ಬಗೆಹರಿದಿಲ್ಲ. ಇದು ಇತರ ಪ್ರದೇಶಗಳಿಗೂ ವ್ಯಾಪಿಸಿದೆ. ಇದನ್ನೂ ಓದಿ: ಇಡೀ ದೇಶದ ಪೋಷಕರನ್ನು ನೀವು ಅವಮಾನಿಸಿದ್ದೀರಿ – ಯೂಟ್ಯೂಬರ್ ರಣವೀರ್ ಹೇಳಿಕೆಗೆ ಸುಪ್ರೀಂ ಕೆಂಡಾಮಂಡಲ

  • ಟೆಂಪೊ, ಮಿನಿವ್ಯಾನ್, ಬಸ್ ನಡುವೆ ಭೀಕರ ಅಪಘಾತ – 9 ಮಂದಿ ಕಾರ್ಮಿಕರು ಸಾವು

    ಟೆಂಪೊ, ಮಿನಿವ್ಯಾನ್, ಬಸ್ ನಡುವೆ ಭೀಕರ ಅಪಘಾತ – 9 ಮಂದಿ ಕಾರ್ಮಿಕರು ಸಾವು

    – ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ದೇವೇಂದ್ರ ಫಡ್ನವಿಸ್

    ಮುಂಬೈ: ಟೆಂಪೊವೊಂದು (Tempo) ಮಿನಿವ್ಯಾನ್‌ಗೆ (Minivan) ಡಿಕ್ಕಿ ಹೊಡೆದ ಪರಿಣಾಮ ಮಿನಿವ್ಯಾನ್ ರಸ್ತೆಬದಿ ನಿಲ್ಲಿಸಿದ್ದ ಬಸ್‌ಗೆ ಡಿಕ್ಕಿ ಹೊಡೆದು 9 ಮಂದಿ ಕಾರ್ಮಿಕರು ಮೃತಪಟ್ಟ ಘಟನೆ ಪುಣೆ-ನಾಸಿಕ್ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.

    ಬೆಳಗ್ಗೆ 10 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ.ಮಿನಿವ್ಯಾನ್ ನಾರಾಯಣಗಾಂವ್ (Narayangaon)  ಕಡೆಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಟೆಂಪೊ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮಿನಿವ್ಯಾನ್ ರಸ್ತೆ ಬದಿಯಲ್ಲಿದ್ದ ಖಾಲಿ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಿನಿವ್ಯಾನ್‌ನಲ್ಲಿದ್ದ 9 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪುಣೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ದೇಶಮುಖ್ ತಿಳಿಸಿದ್ದಾರೆ. ಇದನ್ನೂ ಓದಿ: 189 ಕ್ಷೇತ್ರಗಳ ಶಾಸಕರಿಗೆ ತಲಾ 10 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ

    ಇನ್ನು ಘಟನೆಯ ಬಗ್ಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಪುಣೆ-ನಾಸಿಕ್ ಹೆದ್ದಾರಿಯ ನಾರಾಯಣಗಾಂವ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಕಾರ್ಮಿಕರು ಸಾವನ್ನಪ್ಪಿದ್ದು ದುರಾದೃಷ್ಟಕರ. ಅವರಿಗೆ ನನ್ನ ಸಂತಾಪ ಸಲ್ಲಿಸುತ್ತೇನೆ. ಅವರ ಕುಟುಂಬಗಳ ದುಃಖದಲ್ಲಿ ನಾವು ಭಾಗಿಯಾಗುತ್ತೇವೆ. ಅಲ್ಲದೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಆರ್ಥಿಕ ಸಹಾಯ ನೀಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: Chhattisgarh| ನಕ್ಸಲರು ಅಡಗಿಸಿಟ್ಟಿದ್ದ ಐಇಡಿ ಸ್ಫೋಟ – ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

  • ಮತ್ತೆ ಒಂದಾಗುತ್ತಾ ಬಿಜೆಪಿ-ಉದ್ಧವ ಸೇನೆ?; ರಾಜ್ ಠಾಕ್ರೆ ಗೆಳೆಯ, ಉದ್ಧವ್ ಶತ್ರು ಅಲ್ಲ ಎಂದ ಮಹಾರಾಷ್ಟ್ರ ಸಿಎಂ

    ಮತ್ತೆ ಒಂದಾಗುತ್ತಾ ಬಿಜೆಪಿ-ಉದ್ಧವ ಸೇನೆ?; ರಾಜ್ ಠಾಕ್ರೆ ಗೆಳೆಯ, ಉದ್ಧವ್ ಶತ್ರು ಅಲ್ಲ ಎಂದ ಮಹಾರಾಷ್ಟ್ರ ಸಿಎಂ

    ಮುಂಬೈ: ರಾಜ್‌ ಠಾಕ್ರೆ ನನ್ನ ಗೆಳೆಯ, ಉದ್ಧವ್‌ ಠಾಕ್ರೆ ನನ್ನ ಶತ್ರು ಅಲ್ಲ ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್‌ (Devendra Fadnavis) ಹೇಳಿದ್ದಾರೆ. ಅವರ ಹೇಳಿಕೆಯು, ಮತ್ತೆ ಬಿಜೆಪಿ ಮತ್ತು ಉದ್ಧವ್‌ ಸೇನೆ ಒಂದಾಗುತ್ತಾ ಎಂಬ ಪ್ರಶ್ನೆ ಮೂಡಿದೆ.

    ಮುಂಬೈ ಮಹಾನಗರ ಪಾಲಿಕೆ ಚುನಾವಣೆ ಸೇರಿದಂತೆ ಸ್ಥಳೀಯ ಚುನಾವಣೆಗಳಿಗೆ ಮುಂಚಿತವಾಗಿ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶುಕ್ರವಾರ ಮಹತ್ವದ ಹೇಳಿಕೆ ನೀಡಿದ್ದಾರೆ. ಭವಿಷ್ಯದಲ್ಲಿ ರಾಜಕೀಯ ಸಮೀಕರಣಗಳು ಬದಲಾಗಬಹುದು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ – ಸರ್ಕಾರದ ಬೊಕ್ಕಸಕ್ಕೆ 2,026 ಕೋಟಿ ನಷ್ಟ: ಸಿಎಜಿ ವರದಿ

    ಹಿರಿಯ ಪತ್ರಕರ್ತರೊಂದಿಗಿನ ಸಂದರ್ಶನದಲ್ಲಿ ಸ್ಪಷ್ಟವಾಗಿ ಮಾತನಾಡಿದ ಫಡ್ನವಿಸ್, ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್‌ಎಸ್) ರಾಜ್ ಠಾಕ್ರೆ ಈಗಲೂ ನನಗೆ ಸ್ನೇಹಿತ. ಉದ್ಧವ್ ಠಾಕ್ರೆ ಅವರನ್ನು ವಿರೋಧಿ ಎಂದು ನೋಡಬಾರದು. ರಾಜಕೀಯದಲ್ಲಿ ಯಾವುದೂ ಖಚಿತವಿಲ್ಲ. ಮೊದಲು, ಉದ್ಧವ್ ಠಾಕ್ರೆ ಸ್ನೇಹಿತರಾಗಿದ್ದರು. ನಂತರ ರಾಜ್ ಠಾಕ್ರೆ ಸ್ನೇಹಿತರಾದರು. ರಾಜ್ ಠಾಕ್ರೆ ಸ್ನೇಹಿತನಾಗಿದ್ದರೂ, ಉದ್ಧವ್ ಠಾಕ್ರೆ ಶತ್ರುವಲ್ಲ ಎಂದಿದ್ದಾರೆ. ಇದು ಬಿಜೆಪಿ ಮತ್ತು ಶಿವಸೇನೆ (ಯುಬಿಟಿ) ನಡುವಿನ ಸಂಭಾವ್ಯ ಹೊಂದಾಣಿಕೆಯ ಸಂಕೇತವಾಗಿದೆ.

    ನಾಗ್ಪುರದಲ್ಲಿ ನಡೆದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಅವರು ಫಡ್ನವಿಸ್ ಅವರನ್ನು ವೈಯಕ್ತಿಕವಾಗಿ ಅಭಿನಂದಿಸಿದ್ದರಿಂದ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಅಂದಿನಿಂದ, ಆದಿತ್ಯ ಠಾಕ್ರೆ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಫಡ್ನವಿಸ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಆಕಸ್ಮಿಕವಾಗಿ ಗುಂಡು ತಗುಲಿ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾವು

    ಒಂದು ಗಂಟೆಯ ಸಂದರ್ಶನದಲ್ಲಿ, ಫಡ್ನವಿಸ್ ಇತ್ತೀಚಿನ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳು, ಮುಖ್ಯಮಂತ್ರಿಯಾಗಿ ಅವರ ಪಾತ್ರ ಮತ್ತು ಪಕ್ಷದ ಚಲನಶೀಲತೆ ಸೇರಿದಂತೆ ವಿವಿಧ ರಾಜಕೀಯ ವಿಷಯಗಳನ್ನು ಪ್ರಸ್ತಾಪಿಸಿದರು. ಸಹೋದ್ಯೋಗಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರಲ್ಲಿ ಯಾರನ್ನು ಹೆಚ್ಚು ನಂಬುತ್ತಾರೆ ಎಂದು ಕೇಳಿದಾಗ, ಫಡ್ನವೀಸ್ ಸಮತೋಲಿತ ಪ್ರತಿಕ್ರಿಯೆ ನೀಡಿದರು. ‘ನನಗೆ ಅವರಿಬ್ಬರೊಂದಿಗೂ ಬಹಳ ವಿಶೇಷ ಸಂಬಂಧವಿದೆ. ನಾನು ಶಿಂಧೆ ಸಾಹೇಬ್ ಅವರೊಂದಿಗೆ ದೀರ್ಘಕಾಲದ ಸ್ನೇಹವನ್ನು ಹಂಚಿಕೊಳ್ಳುತ್ತೇನೆ. ಆದರೆ ಅಜಿತ್ ದಾದಾ ಅವರ ರಾಜಕೀಯ ಪ್ರಬುದ್ಧತೆಯು ನನ್ನ ತರಂಗಾಂತರದೊಂದಿಗೆ ಹೊಂದಿಕೆಯಾಗುತ್ತದೆ’ ಎಂದಿದ್ದಾರೆ.

    ನಾನು ಪಕ್ಷದ ಶಿಸ್ತಿನ ಕಾರ್ಯಕರ್ತ. ಪಕ್ಷವು ಈಗಲೂ ನನ್ನ ರಾಜೀನಾಮೆ ಪಡೆದು ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸಲು ಸಿದ್ಧನಿದ್ದೇನೆ. ನನ್ನ ಬೆಳವಣಿಗೆಗೆ ನನ್ನ ಸಾಮರ್ಥ್ಯ ಕಾರಣವಲ್ಲ. ಬದಲಾಗಿ ಪಕ್ಷ ಮತ್ತು ಅದರ ಕಾರ್ಯಕರ್ತರ ಬಲ ಕಾರಣ ಎಂದು ತಿಳಿಸಿದ್ದಾರೆ.

  • ಬೆಜೆಪಿ ರೆಬೆಲ್‌ ತಂಡದಿಂದ ಫಡ್ನವಿಸ್‌  ಭೇಟಿ

    ಬೆಜೆಪಿ ರೆಬೆಲ್‌ ತಂಡದಿಂದ ಫಡ್ನವಿಸ್‌ ಭೇಟಿ

    ಬೆಳಗಾವಿ: ಮಹಾರಾಷ್ಟ್ರದ (Maharashtra) ನೂತನ ಸಿಎಂ ದೇವೇಂದ್ರ ಫಡ್ನವಿಸ್‌ (Devendra Fadnavis) ಅವರನ್ನು ಬಿಜೆಪಿ ರೆಬೆಲ್‌ ತಂಡ (BJP Rebel Team) ಭೇಟಿಯಾಗಿ ಶುಭ ಹಾರೈಸಿದೆ.

    ರಮೇಶ್ ಜಾರಕಿಹೊಳಿ‌, ಶ್ರೀಮಂತ್ ಪಾಟೀಲ್, ಎನ್.ಆರ್ ಸಂತೋಷ್ ನಾಗ್ಪುರದಲ್ಲಿ ಫಡ್ನವಿಸ್ ಅವರನ್ನು ಭೇಟಿಯಾಗಿ ಶುಭಹಾರೈಸಿ ಕರ್ನಾಟಕ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.

    ವಕ್ಫ್ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಿದ ವಿಚಾರವನ್ನು ಗಮನಕ್ಕೆ ಜಾರಕಿಹೊಳಿ (Ramesh Jarkiholi ವಕ್ಫ್ ವಿಚಾರಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಬೃಹತ್‌ ಸಮಾವೇಶ ನಡೆಸಲು ತೀರ್ಮಾನಿಸಿದ್ದೇವೆ. ದಿನಾಂಕ ನಿಗದಿಯಾದ ಬಳಿಕ ನಿಮ್ಮನ್ನು ಆಹ್ವಾನಿಸುವುದಾಗಿ ತಿಳಿಸಿದ್ದಾರೆ.

    ಈ ಸಂದರ್ಭದಲ್ಲೇ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರ್ಯ ವೈಖರಿ ಕುರಿತು ಕೂಡ ಫಡ್ನವಿಸ್ ಜೊತೆ ಚರ್ಚೆ ನಡೆಸಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.