Tag: ದೇವೇಂದ್ರ ಫಡ್ನವಿಸ್

  • Badlapur Encounter | ಆರೋಪಿ ಗುಂಡು ಹಾರಿಸಿದ್ರೆ ಪೊಲೀಸರು ಚಪ್ಪಾಳೆ ತಟ್ಟಬೇಕಾ?: ದೇವೇಂದ್ರ ಫಡ್ನವೀಸ್

    Badlapur Encounter | ಆರೋಪಿ ಗುಂಡು ಹಾರಿಸಿದ್ರೆ ಪೊಲೀಸರು ಚಪ್ಪಾಳೆ ತಟ್ಟಬೇಕಾ?: ದೇವೇಂದ್ರ ಫಡ್ನವೀಸ್

    ಮುಂಬೈ: ಬದ್ಲಾಪುರ ಲೈಂಗಿಕ ದೌರ್ಜನ್ಯ ಆರೋಪಿಯನ್ನು ಪೊಲೀಸರು ಗುಂಡಿಕ್ಕಿ ಹತ್ಯೆಗೈದ ವಿಚಾರವಾಗಿ (Badlapur Encounter) ಮಹಾರಾಷ್ಟ್ರ‌ (Maharashtra) ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis), ಆರೋಪಿ ಗುಂಡು ಹಾರಿಸಿದ್ರೆ ಪೊಲೀಸರು ಚಪ್ಪಾಳೆ ತಟ್ಟಬೇಕಾ ಎಂದು ವಿಪಕ್ಷಗಳಿಗೆ ಪ್ರಶ್ನಿಸಿದ್ದಾರೆ.

    ಆರೋಪಿಯ ಮೇಲೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ. ದಾಳಿಯ ವೇಳೆ ಪೊಲೀಸರು ಚಪ್ಪಾಳೆ ತಟ್ಟುವುದಿಲ್ಲ. ಇಂತಹ ಘಟನೆಗಳ ವೈಭವೀಕರಣ ನಡೆಯಬಾರದು. ಪ್ರಕರಣ ಸಂಬಂಧ ನ್ಯಾಯಯುತ ತನಿಖೆ ನಡೆಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: Badlapur Encounter | ಆರೋಪಿ ತಲೆಗೆ ಗುಂಡಿಟ್ಟಿದ್ದು ಏಕೆ? – ಪ್ರಕರಣ ಟೈಮ್‌ಲೈನ್ ಕೊಡುವಂತೆ ʻಹೈʼಸೂಚನೆ! 

    ನಾವು ಎನ್‍ಕೌಂಟರ್ ಬೆಂಬಲಿಸುವುದಿಲ್ಲ. ಕಾನೂನಿನ ನಿಯಮವನ್ನು ಅನುಸರಿಸಬೇಕು ಮತ್ತು ಅದರ ಪ್ರಕಾರ ಅಪರಾಧಿಗೆ ಶಿಕ್ಷೆಯಾಗಬೇಕು. ಅದು ತ್ವರಿತವಾಗಿ ಆಗಬೇಕು ಎಂಬುದು ನನ್ನ ಅಭಿಪ್ರಾಯ. ನಮ್ಮ ಪೊಲೀಸರು ದಾಳಿ ಮಾಡಿದರೆ ಚಪ್ಪಾಳೆ ತಟ್ಟುವುದಿಲ್ಲ. ಅವರು ಆರೋಪಿಗಳ ಮೇಲೆ ಗುಂಡು ಹಾರಿಸುತ್ತಾರೆ ಎಂದು ಹೇಳಿದ್ದಾರೆ.

    ಇನ್ನೂ ಆರೋಪಿ ಹತ್ಯೆ ಬಳಿಕ ಬ್ಯಾನರ್‍ಗಳನ್ನು ಹಾಕಿ ಸಂಭ್ರಮಿಸಿದ ವಿಚಾರಕ್ಕೆ, ಇದು ಸಂಪೂರ್ಣವಾಗಿ ತಪ್ಪು. ಇದು ಸಂಭವಿಸಬಾರದು. ಇಂತಹ ಘಟನೆಗಳ ವೈಭವೀಕರಣ ನಡೆಯಬಾರದು ಎಂದಿದ್ದಾರೆ.

    ಬದ್ಲಾಪುರ ಶಾಲೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅಕ್ಷಯ್ ಶಿಂಧೆ, ತಲೋಜಾ ಜೈಲಿನಿಂದ ಬದ್ಲಾಪುರಕ್ಕೆ ಕರೆದೊಯ್ಯುತ್ತಿದ್ದಾಗ ಪೊಲೀಸರ ಪಿಸ್ತೂಲ್ ಕಸಿದುಕೊಂಡು ಬೆಂಗಾವಲು ತಂಡದ ಮೇಲೆ ಗುಂಡು ಹಾರಿಸಿದ್ದ. ಬಳಿಕ ಪೊಲೀಸರ ಪ್ರತಿ ದಾಳಿಯಲ್ಲಿ ಹತ್ಯೆಗೀಡಾಗಿದ್ದ. ಆರೋಪಿ ಅಕ್ಷಯ್ ಪಾಂಡೆಯ ಎನ್‍ಕೌಂಟರ್ ಮೇಲೆ ವಿಪಕ್ಷ ಕಾಂಗ್ರೆಸ್ ಹಾಗೂ ಶಿವಸೇನೆ ಅನುಮಾನ ವ್ಯಕ್ತಪಡಿಸಿದ್ದವು.

    ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಎನ್‍ಕೌಂಟರ್ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರನ್ನು ಬಾಂಬೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಬದ್ಲಾಪುರ ಶಾಲೆಯಲ್ಲಿ ದೌರ್ಜನ್ಯ – ಕಾಮುಕನನ್ನು ಗುಂಡಿಕ್ಕಿ ಹತ್ಯೆಗೈದ ಪೊಲೀಸರು

  • 17,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಅಟಲ್‌ ಸೇತು ರಸ್ತೆಯಲ್ಲಿ ಬಿರುಕು – ಭಾರೀ ಭ್ರಷ್ಟಾಚಾರ ಆರೋಪ; ಬಿಜೆಪಿ ತಿರುಗೇಟು

    17,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಅಟಲ್‌ ಸೇತು ರಸ್ತೆಯಲ್ಲಿ ಬಿರುಕು – ಭಾರೀ ಭ್ರಷ್ಟಾಚಾರ ಆರೋಪ; ಬಿಜೆಪಿ ತಿರುಗೇಟು

    – 5 ತಿಂಗಳ ಹಿಂದೆ ಪ್ರಧಾನಿ ಮೋದಿಯಿಂದ ಚಾಲನೆಗೊಂಡಿದ್ದ ʻಅಟಲ್‌ ಸೇತುʼ

    ಮುಂಬೈ: ದೇಶದ ಅತೀ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ʻಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ʼನಲ್ಲಿ (MTHL) ಬಿರುಕು ಕಾಣಿಸಿಕೊಂಡಿದ್ದು, ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕಳೆದ ಐದು ತಿಂಗಳ ಹಿಂದೆಯಷ್ಟೇ ಪ್ರಧಾನಿ ಮೋದಿ (Narendra Modi) ಅಟಲ್‌ ಸೇತುಗೆ ಚಾಲನೆ ನೀಡಿದ್ದರು.

    ಮಹಾರಾಷ್ಟ್ರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ನಾನಾ ಪಟೋಲೆ (Nana Patole), ರಸ್ತೆ ಮೇಲೆ ಸಂಚರಿಸಿ, ಬಿರುಕು ಬಿಟ್ಟ ಜಾಗವನ್ನು ತೋರಿಸಿ ರಸ್ತೆ ಸುರಕ್ಷತೆಯ ಬಗ್ಗೆ ಪರಿಶೀಲಿಸಿದ್ದಾರೆ. ಜೊತೆಗೆ ಅದರ ಫೋಟೋಗಳನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮರದ ಪಟ್ಟಿಯನ್ನು ಬಿರುಕಿನೊಳಗೆ ಇಳಿಸಿ, ಬಿರುಕಿನ ಆಳದ ಪ್ರಮಾಣವನ್ನು ತೋರಿಸಿದ್ದಾರೆ. ಬಳಿಕ ಭಾರೀ ಭ್ರಷ್ಟಾಚಾರ ನಡೆದಿದೆ ಎಂಬುದಾಗಿಯೂ ಅವರು ಆರೋಪಿಸಿದ್ದಾರೆ.

    ಅಲ್‌ ಸೇತು ಉದ್ಘಾಟನೆಯಾದ ಕೆಲ ತಿಂಗಳಲ್ಲೇ ಸೇತುವೆಯ ಬಳಿ ಅರ್ಧ ಕಿಮೀ ನಷ್ಟು ರಸ್ತೆ ಬಿರುಕು ಬಿಟ್ಟಿದೆ. ನಾನು ಬರೀ ಆರೋಪ ಮಾಡುವ ಬದಲು ನಿಜವಾಗಿಯೂ ಏನಾಗಿದೆ ಎಂಬುದನ್ನು ಜನರಿಗೆ ತೋರಿಸಲು ಬಂದಿದ್ದೇನೆ. ಸರ್ಕಾರವು ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತದೆ. ಆದರೆ, ಇಲ್ಲಿ ಎಷ್ಟರಮಟ್ಟಿಗೆ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ನೋಡಿ. ಸೇತುವೆ ಮೇಲಿನ ರಸ್ತೆ ಬಿರುಕು ಬಿಟ್ಟಿದೆ ಎಂದು ಪಟೋಲೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ED ಜಾಹೀರಾತು ನೋಡುತ್ತಿದ್ದೇವೆ: ಬಾಂದ್ರಾ-ವರ್ಲಿ ಸೀ ಲಿಂಕ್ ಉದಾಹರಿಸಿ ರಶ್ಮಿಕಾಗೆ ಕೇರಳ ಕಾಂಗ್ರೆಸ್‌ ತಿರುಗೇಟು

    ಅಲ್ಲದೇ ಸರ್ಕಾರವು ಜನರ ದುಡ್ಡನ್ನು ಜೇಬಿಗೆ ಇಳಿಸಿಕೊಂಡು, ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುತ್ತಿದೆ. ಇಂತಹ ಭ್ರಷ್ಟ ಸರ್ಕಾರವನ್ನು ಜನ ಕಿತ್ತೆಸೆಯಬೇಕು. ಸೇತುವೆಗೆ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿಟ್ಟಿದ್ದಾರೆ. ನಮಗೆ ಅವರ ಬಗ್ಗೆ ಗೌರವ ಇದೆ. ಆದರೆ, ಅವರ ಹೆಸರಿನ ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ಮೋದಿ ಅವರು ಈ ಕುರಿತು ಗಮನಿಸಬೇಕು ಎಂದು ಆಗ್ರಹಿಸಿದ್ದಾರೆ.

    ಬಿಜೆಪಿ ತಿರುಗೇಟು:
    ನಾನಾ ಪಟೋಲೆ ಅವರ ಆರೋಪಕ್ಕೆ ಆಡಳಿತಾರೂಢ ಬಿಜೆಪಿ ಯೋಜನೆಯ ನೋಡಲ್ ಏಜೆನ್ಸಿಯಾಗಿರುವ ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಎಂಎಂಆರ್‌ಡಿಎ) ಸ್ಪಷ್ಟನೆ ನೀಡಿದೆ. ಬಿರುಕು ಬಿಟ್ಟಿರುವುದು ಅಟಲ್‌ ಸೇತುವೆಯ ಮೇಲೆ ಅಲ್ಲ, ನವಿ ಉಲ್ವೆಯಿಂದ ಬರುವ ಸರ್ವಿಸ್‌ ರಸ್ತೆಯಲ್ಲಿ ಎಂದು ತಿಳಿಸಿದೆ. ಇದನ್ನೂ ಓದಿ: ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ – 2 ಗಂಟೆ ಪ್ರಯಾಣ 20 ನಿಮಿಷಕ್ಕೆ ಇಳಿಕೆ

    ಇನ್ನೂ ಈ ಬಗ್ಗೆ ಸ್ಪಷನೆ ನೀಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಅಟಲ್‌ ಸೇತುಗೆ ಯಾವುದೇ ಅಪಾಯವಿಲ್ಲ. ಕಾಂಗ್ರೆಸ್‌ ಆರೋಪ ಸುಳ್ಳು. ಪಟೋಳೆ ಅವರು ಹಂಚಿಕೊಂಡಿರುವ ಚಿತ್ರ ಸರ್ವೀಸ್‌ ರಸ್ತೆಯದ್ದು ಎಂದು ತಿಳಿಸಿದ್ದಾರೆ.

    ಇದು ಸರ್ವಿಸ್ ರಸ್ತೆ, ಇದು ಮುಖ್ಯ ಸೇತುವೆಯ ಸಂಪರ್ಕ ಭಾಗವಾಗಿದೆ. ಇವುಗಳಲ್ಲಿ ಸಣ್ಣಪುಟ್ಟ ಬಿರುಕುಗಳಾಗಿದ್ದು, ಅವುಗಳನ್ನು ದುರಸ್ತಿ ಮಾಡಲಾಗುತ್ತಿದೆ. ಇದರಿಂದಾಗಿ ಯಾವುದೇ ಸಂಚಾರ ವ್ಯತ್ಯಯ ಉಂಟಾಗಿಲ್ಲ ಎಂದು ಅಟಲ್‌ ಸೇತು ಯೋಜನೆ ಮುಖ್ಯಸ್ಥ ಕೈಲಾಶ್ ಗಣತ್ರ ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರದ ಸಾಧನೆ ಹಾಡಿಹೊಗಳಿದ ರಶ್ಮಿಕಾ ಮಂದಣ್ಣಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

    5 ತಿಂಗಳ ಹಿಂದೆ ಉದ್ಘಾಟನೆ:
    ಕಳೆದ 5 ತಿಂಗಳ ಹಿಂದೆಯಷ್ಟೇ ಪ್ರಧಾನಿ ಮೋದಿ ಸೇತುವೆಯನ್ನು ಉದ್ಘಾಟಿಸಿದ್ದರು. ನಟಿ ರಶ್ಮಿಕಾ ಮಂದಣ್ಣ ಸಹ ಈ ಸೇತುವೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಈ ಸಮುದ್ರ ಸೇತುವೆಯು ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ (Mumbai To Navi Mumbai) ಸಂಪರ್ಕ ಕಲ್ಪಿಸಲಿದ್ದು, ಎರಡು ಗಂಟೆಗಳ ಪ್ರಯಾಣವನ್ನ 15-20 ನಿಮಿಷಗಳಲ್ಲಿ ತಲುಪಬಹುದಾಗಿದೆ. ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. 17,840 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ MTHL, 6 ಲೇನ್ ಮಾರ್ಗ ಹೊಂದಿದೆ. ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ.

  • ಮಹಾರಾಷ್ಟ್ರ ಸೋಲಿಗೆ ನಾನೇ ಹೊಣೆ – ಡಿಸಿಎಂ ಹುದ್ದೆಗೆ ದೇವೇಂದ್ರ ಫಡ್ನವಿಸ್‌ ರಾಜೀನಾಮೆ

    ಮಹಾರಾಷ್ಟ್ರ ಸೋಲಿಗೆ ನಾನೇ ಹೊಣೆ – ಡಿಸಿಎಂ ಹುದ್ದೆಗೆ ದೇವೇಂದ್ರ ಫಡ್ನವಿಸ್‌ ರಾಜೀನಾಮೆ

    ಮುಂಬೈ: ಮಹಾರಾಷ್ಟ್ರ ರಾಜಕೀಯ (Maharashtra Politics) ವಲಯದಲ್ಲಿ ಭಾರೀ ಬೆಳವಣಿಗೆಯಾಗಿದೆ. ಲೋಕಸಭಾ ಚುನಾವಣೆ (Lok Sabha Elections) ಫಲಿತಾಂಶದ ಬೆನ್ನಲ್ಲೇ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ (Devendra Fadnavis) ರಾಜೀನಾಮೆ ಘೋಷಿಸಿದ್ದಾರೆ.

    ಮಹಾರಾಷ್ಟ್ರದಲ್ಲಿ ಬಿಜೆಪಿ ಶಿಂಧೆ ಬಣಕ್ಕೆ ಸೋಲಾಗಿದ್ದು, ಇದರ ನೈತಿಕ ಹೊಣೆ ಹೊತ್ತ ಫಡ್ನವಿಸ್‌ (Devendra Fadnavis) ರಾಜೀನಾಮೆ ಘೋಷಿಸಿದ್ದಾರೆ.‌ ಸರ್ಕಾರದ ಜವಬ್ದಾರಿಯಿಂದ ಬಿಡುಗಡೆಗೊಳಿಸಲು ಹೈಕಮಾಂಡ್‌ಗೆ (BJP Highcommond) ಮನವಿ ಮಾಡಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಿತೀಶ್‌, ಯಾದವ್‌ ಒಂದೇ ವಿಮಾನದಲ್ಲಿ ಪ್ರಯಾಣ- ಊಹಾಪೋಹ ಅಲ್ಲಗೆಳೆದ ಜೆಡಿಯು

    ಮಹಾರಾಷ್ಟ್ರದಲ್ಲಿ ಬಿಜೆಪಿ ಶಿಂಧೆ ಬಣಕ್ಕೆ ಸೋಲಾಗಿದ್ದು ಮಹಾ ವಿಕಾಸ ಅಘಾಡಿ ಮೈತ್ರಿ ಹೆಚ್ಚು ಸ್ಥಾನ ಗೆದ್ದುಕೊಂಡಿದೆ. ಒಟ್ಟು 48 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 13, ಬಿಜೆಪಿ 9, ಶಿವಸೇನೆ (ಉದ್ಧವ್‌ ಠಾಕ್ರೆ) 9, ಎನ್‌ಸಿಪಿ( ಶರಾದ್‌ ಪವಾರ್‌) 8, ಶಿಂಧೆ(ಶಿವಸೇನೆ) 7 ಸ್ಥಾನವನ್ನು ಗೆದ್ದುಕೊಂಡಿದೆ.

    2019 ರಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡಿತ್ತು. ಈ ಮೈತ್ರಿ 43 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಯುಪಿಎ ಮೈತ್ರಿ ಕೇವಲ 5 ಸ್ಥಾನ ಮಾತ್ರ ಗೆದ್ದುಕೊಂಡಿತ್ತು. ಮುಂದೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಒಂದು ಕ್ಷೇತ್ರದ ಸೋಲು – ಮತ್ತೆ ಎನ್‌ಡಿಎಗೆ ಸೇರ್ತಾರಾ ಉದ್ಧವ್‌?

  • ಧಾರ್ಮಿಕ ಕಾರ್ಯಕ್ರಮದ ವೇಳೆ ಧರೆಗುರುಳಿದ ಮರ 7 ಸಾವು, ಐವರಿಗೆ ಗಾಯ

    ಧಾರ್ಮಿಕ ಕಾರ್ಯಕ್ರಮದ ವೇಳೆ ಧರೆಗುರುಳಿದ ಮರ 7 ಸಾವು, ಐವರಿಗೆ ಗಾಯ

    ಮುಂಬೈ: ದೇವಾಲಯದ ಧಾರ್ಮಿಕ ಕಾರ್ಯಕ್ರಮದ ವೇಳೆ ಶೆಡ್ ಒಂದರ ಮೇಲೆ ಬೃಹತ್ ಮರವೊಂದು ಬಿದ್ದು ಏಳು ಜನರು ಸಾವನ್ನಪ್ಪಿ, ಐವರು ಗಾಯಗೊಂಡ ಘಟನೆ ಭಾನುವಾರ ಅಕೋಲಾದಲ್ಲಿ (Akola) ನಡೆದಿದೆ.

    ದೇವಸ್ಥಾನ ಒಂದರ ಮುಂಭಾಗದಲ್ಲಿ ರಾತ್ರಿ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಭಾರೀ ಮಳೆ ಹಾಗೂ ಗಾಳಿಯಿಂದಾಗಿ ಹಳೆಯ ಬೇವಿನ ಮರ ತಗಡಿನ ಶೆಡ್ ಮೇಲೆ ಬಿದ್ದಿದೆ. ಅದರ ಅಡಿಯಲ್ಲಿ ಹಲವಾರು ಭಕ್ತರು ಆಶ್ರಯ ಪಡೆಯುತ್ತಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಕ್ಕೆ ತುರ್ತು ಸೇವೆಗಳನ್ನು ಒದಗಿಸಿದ್ದಾರೆ. ಮರವನ್ನು ಜೆಸಿಬಿ ಮೂಲಕ ಎತ್ತಿಸಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಅಮುಲ್‍ಗೆ ವಿರೋಧ – ನಂದಿನಿ ಉತ್ಪನ್ನ ಖರೀದಿಸಿ ಹಂಚಿದ ಡಿಕೆಶಿ

    ಶೆಡ್‍ನ ಅವಶೇಷಗಳ ಅಡಿ 35 ರಿಂದ 40 ಜನರು ಸಿಲುಕಿದ್ದರು. ಅದರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಐದು ಜನ ಗಾಯಗೊಂಡಿದ್ದು ಅಕೋಲಾ ಮೆಡಿಕಲ್ ಕಾಲೇಜಿಗೆ (Akola Medical College) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಸಾವಿಗೆ ಸಂತಾಪ ಸೂಚಿಸಿದ್ದು, ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಿದೆ ಎಂದಿದ್ದಾರೆ.

    ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ಸಹಕರಿಸಿದ್ದಾರೆ. ಕೆಲ ಗಾಯಾಳುಗಳನ್ನು ಜಿಲ್ಲಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟ ಗಾಯಾಳುಗಳಿಗೆ ಬಾಳಾಪುರದಲ್ಲಿ (Balapur) ಚಿಕಿತ್ಸೆ ನೀಡಲಾಗುತ್ತಿದೆ. ನಾವು ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಎಂದು ಅವರು ಹೇಳಿದ್ದಾರೆ.

    ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ (Chief Minister’s Relief Fund) ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಘೋಷಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ ವಿರುದ್ಧ ಮಾನಹಾನಿ ಕೇಸ್‌ ದಾಖಲಿಸುತ್ತೇನೆ: ಅಸ್ಸಾಂ ಸಿಎಂ

  • ಗಡಿ ವಿವಾದ – ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ: ದೇವೇಂದ್ರ ಫಡ್ನವಿಸ್

    ಗಡಿ ವಿವಾದ – ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ: ದೇವೇಂದ್ರ ಫಡ್ನವಿಸ್

    ಮುಂಬೈ: ಮರಾಠಿ (Marathi) ಭಾಷಿಕರ ಮೇಲೆ ಅನ್ಯಾಯ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ಮಹಾಮೇಳಾವ್‌ಗೆ (Mahamelav) ಅವಕಾಶ ಕೊಡದಿರುವ ಕರ್ನಾಟಕ ಸರ್ಕಾರದ (Government of Karnataka) ನಡೆ ಸರಿಯಲ್ಲ. ಗಡಿ ವಿವಾದ ವಿಚಾರದಲ್ಲಿ (Border Dispute) ಮಹಾರಾಷ್ಟ್ರ (Maharashtra) ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) ಹೇಳಿದ್ದಾರೆ.

    ಮಹಾರಾಷ್ಟ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿ ಭಾಗದ ಮರಾಠಿಗರ ಜೊತೆಗೆ ಮಹಾರಾಷ್ಟ್ರ ಸರ್ಕಾರವಿದೆ. ಮರಾಠಿ ಭಾಷಿಕರ ಮೇಲೆ ಅನ್ಯಾಯ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ಮಹಾಮೇಳಾವ್‌ಗೆ ಅವಕಾಶ ಕೊಡದಿರುವ ಕರ್ನಾಟಕ ಸರ್ಕಾರದ ನಡೆ ಸರಿಯಲ್ಲ. ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು. ಇದನ್ನೂ ಓದಿ: ಜಾಮಿಯಾದಲ್ಲಿನ ಅಕ್ರಮ ಮದರಸಾ ತೆರವಿಗೆ ಹಿಂದೂ ಜಾಗರಣ ವೇದಿಕೆ ಗಡುವು

    ಮಹಾರಾಷ್ಟ್ರ ಮುಖ್ಯಮಂತ್ರಿ ಈಗಾಗಲೇ ಜತ್ ಸೇರಿದಂತೆ ಗಡಿ ಭಾಗದ ನೀರಾವರಿ ಯೋಜನೆಗೆ 2 ಸಾವಿರ ಕೋಟಿ ರೂ. ಘೋಷಿಸಿದ್ದಾರೆ. ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಗೃಹ ಸಚಿವ ಅಮಿತ್ ಶಾ ಮುಂದೆ ಹೇಳಿದ್ದಾರೆ. ಗಡಿ ವಿವಾದ ವಿಚಾರವಾಗಿ ಮಾಡಿದ್ದ ಟ್ವೀಟ್ ನನ್ನದಲ್ಲ ಎಂದು ಹೇಳಿದ್ದಾರೆ. ಸಿಎಂ ಹೆಸರಿನ ಟ್ವೀಟ್ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಬೊಮ್ಮಾಯಿ ಅವರನ್ನೇ ಕೇಳುತ್ತೇವೆ ಎಂದು ಫಡ್ನವಿಸ್ ಹೇಳಿದರು. ಇದನ್ನೂ ಓದಿ: ಕೊಟ್ಟ ಮಾತು ಉಳಿಸಿದ ಬಿಜೆಪಿ – ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ

    Live Tv
    [brid partner=56869869 player=32851 video=960834 autoplay=true]

  • ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾಗುವ ಸುಳಿವು – ಸಿಎಂ ನಿರ್ಧರಿಸುತ್ತಾರೆ ಎಂದ ದೇವೇಂದ್ರ ಫಡ್ನವಿಸ್

    ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾಗುವ ಸುಳಿವು – ಸಿಎಂ ನಿರ್ಧರಿಸುತ್ತಾರೆ ಎಂದ ದೇವೇಂದ್ರ ಫಡ್ನವಿಸ್

    ಬೆಳಗಾವಿ: ಮಹಾರಾಷ್ಟ್ರ (Maharashtra) ಗಡಿ ಸಮನ್ವಯಕ್ಕೆ ಸಚಿವರ (Ministers) ಬೆಳಗಾವಿ (Belagavi) ಭೇಟಿ ರದ್ದಾಗುವ ಬಗ್ಗೆ ಅನುಮಾನ ಮೂಡಿದೆ. ಈ ಬಗ್ಗೆ ಮಹಾರಾಷ್ಟ್ರ ಡಿಸಿಎಂ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ಬಗ್ಗೆ ಸಿಎಂ ನಿರ್ಧರಿಸುತ್ತಾರೆ ಎಂದು ಮುಂಬೈನಲ್ಲಿ ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) ಹೇಳಿದ್ದಾರೆ.

    ಮುಂಬೈನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿ ವಿವಾದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ಆಗಲಿ, ಮಹಾರಾಷ್ಟ್ರ ಆಗಲಿ ನಿರ್ಣಯ ಕೈಗೊಳ್ಳಲಾಗುವುದಿಲ್ಲ. ಏನೇ ನಿರ್ಣಯ ಕೈಗೊಳ್ಳಬೇಕಿದ್ದರೂ ಸುಪ್ರೀಂ ಕೋರ್ಟ್ ತಗೆದುಕೊಳ್ಳುತ್ತದೆ. ಈ ಸಂದರ್ಭದಲ್ಲಿ ಯಾವುದೇ ಹೊಸ ವಿವಾದ ಸೃಷ್ಟಿಸುವುದು ಯೋಗ್ಯವಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದಿದ್ದಾರೆ.

    ನಾಳೆ ಮಹಾಪರಿನಿರ್ವಾಹಣ ದಿನದ ನಿಮಿತ್ತ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡಲಿದ್ದರು. ಸಚಿವರು ಕೈಗೊಂಡ ನಿರ್ಣಯ ಯಾರೂ ತಡೆಯಲು ಸಾಧ್ಯವಿಲ್ಲ. ಆದರೆ ಮಹಾಪರಿನಿರ್ವಾಹಣ ದಿನ ನಾವು ಈ ರೀತಿ ವಾದ ಸೃಷ್ಟಿಸುವುದು ಸರಿಯೇ? ನಾವು ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಈ ಬಗ್ಗೆ ಸಿಎಂ ಏಕನಾಥ್ ಶಿಂಧೆ ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೋಡೋ ಯಾತ್ರೆ ವೇಳೆ ಮೋದಿ ಪರ ಘೋಷ – ತಲೆಕೆಡಿಸಿಕೊಳ್ಳದೇ ಗಾಳಿಯಲ್ಲಿ ಮುತ್ತು ತೇಲಿಸಿದ ರಾಗಾ

    ಮಹಾಪರಿನಿರ್ವಾಹಣ ದಿನ ಅತ್ಯಂತ ಮಹತ್ವದ ದಿನ. ಅಂದು ಯಾವುದೇ ಅಹಿತಕರ ಘಟನೆ ಆಗಬಾರದು. ಈ ದಿನ ಯಾವುದೇ ಪ್ರತಿಭಟನೆ ಆಗುವುದು ಯೋಗ್ಯವಲ್ಲ. ಭವಿಷ್ಯದಲ್ಲಿ ನಾವು ಬೆಳಗಾವಿಗೆ ಹೋಗೋದನ್ನು ಯಾರಿಂದಲೂ ತಡೆಯಲು ಆಗುವುದಿಲ್ಲ. ಸ್ವತಂತ್ರ್ಯ ಭಾರತದ ಯಾವುದೇ ಪ್ರದೇಶಕ್ಕೆ ಹೋಗಲು ಯಾರೂ ಯಾರನ್ನೂ ತಡೆಯಲಾಗಲ್ಲ. ಮಹಾಪರಿನಿರ್ವಾಹಣ ದಿನ ಇರುವುದರಿಂದ ಬೆಳಗಾವಿ ಭೇಟಿ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅಂತಿಮ ನಿರ್ಧಾರ ಸಿಎಂ ಕೈಗೊಳ್ಳುತ್ತಾರೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಇದನ್ನೂ ಓದಿ: Gujarat Exit Poll Result: ಗುಜರಾತ್‌ನಲ್ಲಿ ಸತತ 7ನೇ ಬಾರಿ ಬಿಜೆಪಿಗೆ ಅಧಿಕಾರ

    Live Tv
    [brid partner=56869869 player=32851 video=960834 autoplay=true]

  • ಹೋಟೆಲ್ ಮಾಲೀಕನಿಗೆ ಬುದ್ಧಿ ಕಲಿಸಲು ಸಿಎಂ ಏಕನಾಥ್ ಶಿಂಧೆಗೆ ಬೆದರಿಕೆಯೊಡ್ಡಿದ್ದವ ಅರೆಸ್ಟ್

    ಹೋಟೆಲ್ ಮಾಲೀಕನಿಗೆ ಬುದ್ಧಿ ಕಲಿಸಲು ಸಿಎಂ ಏಕನಾಥ್ ಶಿಂಧೆಗೆ ಬೆದರಿಕೆಯೊಡ್ಡಿದ್ದವ ಅರೆಸ್ಟ್

    ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣದಡಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ತಿಳಿಸಿದ್ದಾರೆ.

    ನಾಗ್ಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ವಿರುದ್ಧ ಹಾಕಲಾದ ಬೆದರಿಕೆಯನ್ನು ರಾಜ್ಯ ಗೃಹ ಇಲಾಖೆಗೆ ತಿಳಿದು ಬಂದಿತ್ತು. ಹೀಗಾಗಿ ಮುಖ್ಯಮಂತ್ರಿಗಳ ಭದ್ರತೆ ಮತ್ತಿತರ ವಿಚಾರಗಳ ಬಗ್ಗೆ ಸಂಪೂರ್ಣ ಗಮನ ಹರಿಸುತ್ತಿದ್ದೇವೆ. ಭಾನುವಾರ ಮುಖ್ಯಮಂತ್ರಿಗೆ ಬೆದರಿಕೆಯೊಡ್ಡಿದ ವ್ಯಕ್ತಿಯನ್ನು ಬಂಧಿಸಕಾಗಿದೆ. ಮುಖ್ಯಮಂತ್ರಿಗಳಿಗೆ ಭದ್ರತೆ ವಹಿಸುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದ್ದಾರೆ.

    ಬಂಧಿತ ಆರೋಪಿಯ ಬಗ್ಗೆ ದೇವೇಂದ್ರ ಫಡ್ನವಿಸ್ ಅವರು ಯಾವುದೇ ವಿವರಗಳನ್ನು ಹಂಚಿಕೊಳ್ಳದಿದ್ದರೂ, ಪುಣೆ ಜಿಲ್ಲೆಯ ಲೋನಾವಾಲಾ ಹೋಟೆಲ್‍ನಲ್ಲಿ ಏಕನಾಥ್ ಶಿಂಧೆ ಅವರನ್ನು ಕೊಲ್ಲಲು ಸಂಚು ಮಾಡಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ ವ್ಯಕ್ತಿಯ ವಿರುದ್ಧ ನಾನ್-ಕಾಗ್ನೈಸಬಲ್ (ಎನ್‍ಸಿ) ಪ್ರಕರಣವನ್ನು ಪುಣೆ ಪೊಲೀಸರು ದಾಖಲಿಸಿದ್ದಾರೆ. ಇದನ್ನೂ ಓದಿ : ದೇವೇಗೌಡರ ಆರೋಗ್ಯ ವಿಚಾರಿಸುವ ನೆಪದಲ್ಲಿ ರಾಜಕೀಯ ನಾಯಕರು ಸಿಂಪತಿ ಗಿಟ್ಟಿಸಿಕೊಳ್ತಿದ್ದಾರೆ: ಶರವಣ

    ಮದ್ಯಪಾನ ಮಾಡಿದ್ದ ಅವಿನಾಶ್ ವಾಘಮಾರೆ ಎಂಬಾತ ನೀರಿನ ಬಾಟಲಿಗೆ ಹೆಚ್ಚಿನ ಶುಲ್ಕ ವಿಧಿಸಿದ ಹಿನ್ನೆಲೆ ಹೋಟೆಲ್ ಮಾಲೀಕನಿಗೆ ಬುದ್ಧಿ ಕಲಿಸಲು ಈ ರೀತಿ ಕರೆ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಖ್ಯಮಂತ್ರಿಯವರಿಗೆ ಜೀವ ಬೆದರಿಕೆ ಹಾಕಿರುವುದಕ್ಕೆ ಸಂಬಂಧಿಸಿದಂತೆ ಶನಿವಾರ ರಾಜ್ಯ ಗುಪ್ತಚರ ಇಲಾಖೆ (ಎಸ್‍ಐಡಿ) ಮಾಹಿತಿ ಪಡೆದಿದ್ದು, ಇದಾದ ಬಳಿಕ ಏಕನಾಥ್ ಶಿಂಧೆ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದನ್ನೂ ಓದಿ : ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಕೊಟ್ಟಿಗೆಗೆ ಕರೆದೊಯ್ದು 10ರ ಬಾಲಕನಿಂದ ಅತ್ಯಾಚಾರ

    Live Tv
    [brid partner=56869869 player=32851 video=960834 autoplay=true]

  • ಮಹಾರಾಷ್ಟ್ರ ಸಿಎಂ ಶಿಂದೆ ಸಂಪುಟದಲ್ಲಿ ದೇವೇಂದ್ರ ಫಡ್ನವಿಸ್‌ಗೆ ಗೃಹ, ಹಣಕಾಸು ಖಾತೆ

    ಮಹಾರಾಷ್ಟ್ರ ಸಿಎಂ ಶಿಂದೆ ಸಂಪುಟದಲ್ಲಿ ದೇವೇಂದ್ರ ಫಡ್ನವಿಸ್‌ಗೆ ಗೃಹ, ಹಣಕಾಸು ಖಾತೆ

    ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂದೆ ನೇತೃತ್ವದ ಸರ್ಕಾರದ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರಿಗೆ ಗೃಹ ಹಾಗೂ ಹಣಕಾಸು ಖಾತೆಗಳನ್ನು ನೀಡಲಾಗಿದೆ.

    ಬಿಜೆಪಿ ಹಾಗೂ ಶಿವಸೇನಾದ ಶಿಂದೆ ಬಣ ಮೈತ್ರಿ ಸರ್ಕಾರದ ರಚನೆಯಾಗಿದ್ದು, ಮಂಗಳವಾರ 18 ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಯಿತು. ಶಿಂಧೆ ಅವರು ನಗರಾಭಿವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ಇನ್ಮುಂದೆ ಒಬ್ಬ ಶಾಸಕನಿಗೆ ಒಂದೇ ಬಾರಿ ಪಿಂಚಣಿ – 100 ಕೋಟಿ ಉಳಿತಾಯಕ್ಕೆ ಸಿಎಂ ಪ್ಲ್ಯಾನ್‌

    ಫಡ್ನವಿಸ್ ಅವರು ಯೋಜನಾ ಖಾತೆಯನ್ನೂ ನಿಭಾಯಿಸಲಿದ್ದಾರೆ. ಬಿಜೆಪಿ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರು ನೂತನ ಕಂದಾಯ ಸಚಿವರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಬಿಜೆಪಿ ಸಚಿವ ಸುಧೀರ್ ಮುಂಗಂತಿವಾರ್ ಅವರು ಅರಣ್ಯ ಸಚಿವರಾಗಿದ್ದಾರೆ.

    ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಉನ್ನತ ಮತ್ತು ತಾಂತ್ರಿಕ ಶಿಕ್ಷಣದ ನೂತನ ಸಚಿವರಾಗಿದ್ದು, ಸಂಸದೀಯ ವ್ಯವಹಾರಗಳನ್ನೂ ಅವರು ನಿಭಾಯಿಸಲಿದ್ದಾರೆ. ಇದನ್ನೂ ಓದಿ: ಕೇವಲ ತ್ರಿವರ್ಣ ಧ್ವಜ ಹಾರಿಸುವುದರಿಂದ ನಾವು ದೇಶಭಕ್ತರಾಗುವುದಿಲ್ಲ: ಉದ್ಧವ್ ಠಾಕ್ರೆ ಟಾಂಗ್

    ಏಕನಾಥ್ ಶಿಂಧೆ ಬಣದ ದೀಪಕ್ ಕೇಸರ್ಕರ್ ಅವರು ಶಿಕ್ಷಣ ಸಚಿವರಾಗಿದ್ದರೆ, ಅಬ್ದುಲ್ ಸತ್ತಾರ್ ಅವರಿಗೆ ಕೃಷಿ ಖಾತೆ ನೀಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮಹಾ ಹೈಡ್ರಾಮಾ ಅಂತ್ಯ – ವಿಶ್ವಾಸ ಪರೀಕ್ಷೆ ಗೆದ್ದ ಏಕನಾಥ್‌ ಶಿಂಧೆ

    ಮಹಾ ಹೈಡ್ರಾಮಾ ಅಂತ್ಯ – ವಿಶ್ವಾಸ ಪರೀಕ್ಷೆ ಗೆದ್ದ ಏಕನಾಥ್‌ ಶಿಂಧೆ

    ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟ ಕೊನೆಗೂ ಅಂತ್ಯವಾಗಿದೆ. ಸಿಎಂ ಏಕನಾಥ್‌ ಶಿಂಧೆ ಬಹುಮತ ಪರೀಕ್ಷೆಯಲ್ಲಿ ಪಾಸ್‌ ಆಗಿದ್ದಾರೆ.

    ಒಟ್ಟು ಬಿಜೆಪಿ ಮತ್ತು ಶಿವಸೇನೆ ಬಣದ ಒಟ್ಟು 164 ಶಾಸಕರು ಶಿಂಧೆ ಪರ ನಿಂತರೇ, 99 ಶಾಸಕರು ವಿರುದ್ಧವಾಗಿ ನಿಂತಿದ್ದಾರೆ. ಈ ಮೂಲಕ ಬಿಜೆಪಿ ಬೆಂಬಲಿತ ಶಿವಸೇನೆ ಬಂಡಾಯ ಸರ್ಕಾರ ಎರಡೂವರೆ ವರ್ಷದ ಬಳಿಕ ಅಧಿಕಾರ ಹಿಡಿದಿದೆ. ಇದನ್ನೂ ಓದಿ: ಪ್ರವಾಹಕ್ಕೆ ಕೊಚ್ಚಿ ಹೋದ ಚೀನಾ-ಭಾರತ ಗಡಿಯಲ್ಲಿನ ಸೇತುವೆ

    ಎರಡು ದಿನಗಳ ಕಾಲ ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ, ಭಾನುವಾರದಂದು ಸ್ಪೀಕರ್ ಆಯ್ಕೆ ಮಾಡಲಾಗಿತ್ತು. ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಬಂಡಾಯ ಶಾಸಕರ ನೆರವಿನೊಂದಿಗೆ 164 ಮತಗಳನ್ನು ಗಳಿಸುವ ಮೂಲಕ ಸ್ಪೀಕರ್ ಆಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಶಿಂಧೆ ಬಹುಮತ ಸಾಬೀತಿಗೆ ಮತಗಳ ಕೊರತೆಯಾಗಲಿಲ್ಲ. ಇದನ್ನೂ ಓದಿ: ಮೆಟ್ಟಿಲಿನಿಂದ ಎಡವಿ ಬಿದ್ದ ಲಾಲೂ ಪ್ರಸಾದ್ ಯಾದವ್ – ಭುಜದ ಮೂಳೆ ಮುರಿತ

    288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಕ್ಕೆ 145 ಮತಗಳ ಅವಶ್ಯಕತೆ ಇದ್ದು, ಓರ್ವ ಶಾಸಕನ ನಿಧನದಿಂದ ಇದು 144ಕ್ಕೆ ಇಳಿದಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ 55, ಎನ್‍ಸಿಪಿ 53, ಕಾಂಗ್ರೆಸ್ 44, ಬಿಜೆಪಿ 106, ಬಹುಜನ ವಿಕಾಸ್ ಅಘಾಡಿ 3, ಸಮಾಜವಾದಿ 2, ಎಐಎಂಐಎಂ 2, ಪ್ರಹರ್ ಜನಶಕ್ತಿ 1, ಸಿಪಿಐ (ಎಂ) 1, ಪಿಡಬ್ಲ್ಯೂಪಿ 1, ಸ್ವಾಭಿಮಾನಿ ಪಕ್ಷ 1, ರಾಷ್ಟ್ರೀಯ ಸಮಾಜ ಪಕ್ಷ 1, ಜನಸುರಾಜ್ಯ ಶಕ್ತಿ ಪಕ್ಷ 1, ಕ್ರಾಂತಿಕಾರಿ ಶೆಟ್ಕರಿ ಪಕ್ಷ 1 ಸ್ಥಾನಗಳನ್ನು ಹೊಂದಿದೆ.

    107 ಮತಗಳನ್ನು ಹೊಂದಿರುವ ಮಹಾ ವಿಕಾಸ್ ಅಘಾಡಿ ಮೈತ್ರಿ ವಿರೋಧ ಪಕ್ಷವಾಗಲಿದೆ. ಈ ಮೂಲಕ ಮೂರು ವಾರಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಕ್ಕೆ ಅಧಿಕೃತ ತೆರೆ ಬಿದ್ದಿದೆ.

    Live Tv
    [brid partner=56869869 player=32851 video=960834 autoplay=true]

  • ಮಹಾ ಬಿಕ್ಕಟ್ಟಿಗೆ ಇಂದು ಕ್ಲೈಮ್ಯಾಕ್ಸ್‌ –  ಶಿಂಧೆಗೆ ಇಂದು ವಿಶ್ವಾಸ ಪರೀಕ್ಷೆ

    ಮಹಾ ಬಿಕ್ಕಟ್ಟಿಗೆ ಇಂದು ಕ್ಲೈಮ್ಯಾಕ್ಸ್‌ – ಶಿಂಧೆಗೆ ಇಂದು ವಿಶ್ವಾಸ ಪರೀಕ್ಷೆ

    ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟನ್ನು ಸೃಷ್ಟಿಸಿದ್ದ ಬಂಡಾಯ ಶಾಸಕರ ನೇತೃತ್ವದ ನಾಯಕ ಏಕನಾಥ್ ಶಿಂಧೆ ಅವರು ಜೂ. 30ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬಹುಮತ ಸಾಬೀತು ಮಾಡಲಿದ್ದಾರೆ.

    ಎರಡು ದಿನಗಳ ಕಾಲ ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ, ಭಾನುವಾರದಂದು ಸ್ಪೀಕರ್ ಆಯ್ಕೆ ಮಾಡಲಾಗಿತ್ತು. ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಬಂಡಾಯ ಶಾಸಕರ ನೆರವಿನೊಂದಿಗೆ 164 ಮತಗಳನ್ನು ಗಳಿಸುವ ಮೂಲಕ ಸ್ಪೀಕರ್ ಆಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಶಿಂಧೆ ಬಹುಮತ ಸಾಬೀತಿಗೆ ಮತಗಳ ಕೊರತೆಯಾಗದು ಎಂದು ಹೇಳಲಾಗುತ್ತಿದೆ.

    288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಕ್ಕೆ 145 ಮತಗಳ ಅವಶ್ಯಕತೆ ಇದ್ದು, ಓರ್ವ ಶಾಸಕನ ನಿಧನದಿಂದ ಇದು 144ಕ್ಕೆ ಇಳಿದಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ 55, ಎನ್‍ಸಿಪಿ 53, ಕಾಂಗ್ರೆಸ್ 44, ಬಿಜೆಪಿ 106, ಬಹುಜನ ವಿಕಾಸ್ ಅಘಾಡಿ 3, ಸಮಾಜವಾದಿ 2, ಎಐಎಂಐಎಂ 2, ಪ್ರಹರ್ ಜನಶಕ್ತಿ 1, ಸಿಪಿಐ (ಎಂ) 1, ಪಿಡಬ್ಲ್ಯೂಪಿ 1, ಸ್ವಾಭಿಮಾನಿ ಪಕ್ಷ 1, ರಾಷ್ಟ್ರೀಯ ಸಮಾಜ ಪಕ್ಷ 1, ಜನಸುರಾಜ್ಯ ಶಕ್ತಿ ಪಕ್ಷ 1, ಕ್ರಾಂತಿಕಾರಿ ಶೆಟ್ಕರಿ ಪಕ್ಷ 1 ಸ್ಥಾನಗಳನ್ನು ಹೊಂದಿದೆ. ಇದನ್ನೂ ಓದಿ: ಕೊಡಗಿನ ಚೆಂಬು, ಪೆರಾಜೆಯಲ್ಲಿ ಮತ್ತೆ ಕಂಪಿಸಿದ ಭೂಮಿ

    ಭಾನುವಾರ ನಡೆದ ಸ್ಪೀಕರ್ ಚುನಾವಣೆಯ ಲೆಕ್ಕಾಚಾರದ ಪ್ರಕಾರ 164 ಮತಗಳು ಏಕನಾಥ್ ಶಿಂಧೆ ಪರ ಚಲಾವಣೆಯಾಗುವ ಸಾಧ್ಯತೆಗಳಿದ್ದು, ಹೆಚ್ಚುವರಿ ಮತಗಳು ಸೇರಬಹುದು ಎಂದು ಡಿಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. 107 ಮತಗಳನ್ನು ಹೊಂದಿರುವ ಮಹಾ ವಿಕಾಸ್ ಅಘಾಡಿ ಮೈತ್ರಿ ವಿರೋಧ ಪಕ್ಷವಾಗಲಿದೆ. ಈ ಮೂಲಕ ಮೂರು ವಾರಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಕ್ಕೆ ತೆರೆ ಬೀಳಲಿದೆ. ಇದನ್ನೂ ಓದಿ: ಪ್ರವಾಹಕ್ಕೆ ಕೊಚ್ಚಿ ಹೋದ ಚೀನಾ-ಭಾರತ ಗಡಿಯಲ್ಲಿನ ಸೇತುವೆ

    Live Tv
    [brid partner=56869869 player=32851 video=960834 autoplay=true]