Tag: ದೇಶ

  • ಕಾಶ್ಮೀರ ಪ್ರತ್ಯೇಕ ದೇಶ – ಶಾಲಾ ಪ್ರಶ್ನೆ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದಕ್ಕೆ ವಿವಾದ

    ಕಾಶ್ಮೀರ ಪ್ರತ್ಯೇಕ ದೇಶ – ಶಾಲಾ ಪ್ರಶ್ನೆ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದಕ್ಕೆ ವಿವಾದ

    ಪಾಟ್ನಾ: 7ನೇ ತರಗತಿಯ ಪರೀಕ್ಷೆಯಲ್ಲಿ (Exam) ಕಾಶ್ಮೀರವನ್ನು (Kashmir) ಪ್ರತ್ಯೇಕ ದೇಶ ಎಂದು ಉಲ್ಲೇಖಿಸಿ, ಪ್ರಶ್ನೆಯನ್ನು (Question) ಕೇಳಿರುವ ಪತ್ರಿಕೆಯೊಂದು ಬೆಳಕಿಗೆ ಬಂದಿದೆ. ಈ ವಿಚಾರವಾಗಿ ವಿವಾದ ಉಂಟಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ವರದಿಗಳ ಪ್ರಕಾರ ಪ್ರಶ್ನೆಯನ್ನು ಬಿಹಾರ ರಾಜ್ಯದ ಅರಾರಿಯಾ, ಕಿಶನ್‌ಗಂಜ್ ಮತ್ತು ಕತಿಹಾರ್‌ನಲ್ಲಿನ 7ನೇ ತರಗತಿಯ ವಿದ್ಯಾರ್ಥಿಗಳ ಮುಂದೆ ಇಡಲಾಗಿದೆ. ಇದೊಂದು ಗಂಭೀರವಾದ ವಿಚಾರವಾಗಿದ್ದು, ಪ್ರಶ್ನೆ ಪತ್ರಿಕೆ (Question Paper) ತಯಾರಿಯಲ್ಲಿ ಉನ್ನತ ಅಧಿಕಾರಿಗಳು ಶಾಮೀಲಾಗಿದ್ದರೂ ತನಿಖೆ ನಡೆಸಲಾಗುವುದು ಎಂದು ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಸಿಂಗ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಗೆ ಮೋದಿ ವಿಶ್

    ಪ್ರಶ್ನೆ ಪತ್ರಿಕೆಯಲ್ಲೇನಿದೆ?
    ಈ ದೇಶಗಳ ಜನರನ್ನು ಏನೆಂದು ಕರೆಯುತ್ತಾರೆ ಎಂಬ ಪ್ರಶ್ನೆಯನ್ನು ಪತ್ರಿಕೆಯಲ್ಲಿ ನೀಡಲಾಗಿದೆ. ಅದರ ಕೆಳಗೆ ಚೀನಾ, ನೇಪಾಳ, ಇಂಗ್ಲೆಂಡ್, ಕಾಶ್ಮೀರ ಹಾಗೂ ಭಾರತದ ಜನರನ್ನು ಏನೆಂದು ಕರೆಯುತ್ತಾರೆ ಎಂಬ ಬಿಟ್ಟ ಸ್ಥಳದ ರೂಪದಲ್ಲಿ ಪ್ರಶ್ನೆಗಳನ್ನು ನೀಡಲಾಗಿದೆ. ಉದಾಹರಣೆಗೆ ಚೀನಾದ ಜನರನ್ನು ಚೀನೀಯರು (Chinese) ಎಂಬಂತೆ ಉತ್ತರಿಸಬೇಕು. ಆದರೆ ಕಾಶ್ಮೀರವನ್ನು ದೇಶಗಳ ಸಾಲಿನಲ್ಲಿ ನೀಡಿರುವುದಕ್ಕೆ ವಿವಾದ ಭುಗಿಲೆದ್ದಿದೆ. ಇದನ್ನೂ ಓದಿ: ಡಿಕೆಶಿ ಸ್ವಕ್ಷೇತ್ರದಲ್ಲಿ ಏಸುಕ್ರಿಸ್ತನ ಜಪ- ರೇಷನ್ ಕಾರ್ಡ್‍ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ

    ಈ ಬಗ್ಗೆ ಸ್ಪಷ್ಟನೆ ಕೊಟ್ಟ ಮುಖ್ಯ ಶಿಕ್ಷಕ ಎಸ್‌ಕೆ ದಾಸ್, ಕಾಶ್ಮೀರದ ಜನರನ್ನು ಏನೆಂದು ಕರೆಯಬೇಕು? ಎಂಬ ಪ್ರಶ್ನೆಯನ್ನು ಕೇಳಬೇಕಿತ್ತು. ಆದರೆ ತಪ್ಪಾಗಿ ಕಾಶ್ಮೀರ ದೇಶದ ಜನರನ್ನು ಏನೆಂದು ಕರೆಯುತ್ತಾರೆ? ಎಂದು ಕೇಳಲಾಗಿದೆ. ಇದು ಮಾನವ ದೋಷ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತದಲ್ಲಿಯೂ ಆರ್ಥಿಕ ಬಿಕ್ಕಟ್ಟು ತಲೆದೋರಲಿದೆ: ರಾಹುಲ್ ಗಾಂಧಿ

    ಭಾರತದಲ್ಲಿಯೂ ಆರ್ಥಿಕ ಬಿಕ್ಕಟ್ಟು ತಲೆದೋರಲಿದೆ: ರಾಹುಲ್ ಗಾಂಧಿ

    ನವದೆಹಲಿ: ಶ್ರೀಲಂಕಾದಂತೆ ಭಾರತದಲ್ಲಿಯೂ ಆರ್ಥಿಕ ಬಿಕ್ಕಟ್ಟು ತಲೆದೋರಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.

    ಆರ್‌ಜೆಡಿ ಮುಖಂಡ ಶರದ್ ಯಾದವ್ ಅವರ ಭೇಟಿ ವೇಳೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ಥಿಕ ತಜ್ಞರು ಮತ್ತು ಅಧಿಕಾರಿಗಳು ಇತರ ರಾಷ್ಟ್ರಗಳನ್ನು ನೋಡಿ ಯೋಜನೆ ರೂಪಿಸುತ್ತಾರೆ. ನಾವು ಅವರಂತೆ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ಆ ರೀತಿಯಲ್ಲಿ ಮಾಡಬಾರದು. ಮೊದಲು ನಾವು ಯಾರು ಮತ್ತು ಇಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮನನ ಮಾಡಿಕೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ: 2 ಕೋಟಿ ದರೋಡೆ ಕೇಸ್ – ಪತ್ನಿ ಸಾಲ ತೀರಿಸಲು ಕನ್ನ ಹಾಕಿದ ಇಬ್ಬರು ಪತ್ನಿಯರ ಮುದ್ದಿನ ಗಂಡ

    ದೇಶವು ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ ಎಂದು ಶರದ್ ಯಾದವ್ ಇಂದು ಹೇಳಿದ್ದನ್ನು ನಾನು ಒಪ್ಪುತ್ತೇನೆ. ದ್ವೇಷವನ್ನು ಹರಡಲಾಗುತ್ತಿದೆ ಮತ್ತು ರಾಷ್ಟ್ರವನ್ನು ವಿಭಜಿಸಲಾಗುತ್ತಿದೆ. ನಾವು ರಾಷ್ಟ್ರವನ್ನು ಒಟ್ಟುಗೂಡಿಸಬೇಕು ಮತ್ತು ಮತ್ತೊಮ್ಮೆ ನಮ್ಮ ಇತಿಹಾಸದ ಭಾಗವಾಗಿರುವ ಸಹೋದರತ್ವದ ಹಾದಿಯಲ್ಲಿ ನಡೆಯಬೇಕು. ಇದನ್ನೂ ಓದಿ: ಮದ್ಯದ ಬಾಟಲಿಯಿಂದ ಸಿಕ್ಕಿ ಬಿದ್ರು 2 ಕೋಟಿ ಕದ್ದ ಖದೀಮರು

    RAHUL GANDHI
    ಆರ್ಥಿಕತೆಯ ಬೆನ್ನೆಲುಬುನ್ನು ಅವರು ಮುರಿದಿದ್ದಾರೆ. ಮುಂದಿನ ಮೂರು-ನಾಲ್ಕು ವರ್ಷಗಳಲ್ಲಿ ಭಯಾನಕ ಫಲಿತಾಂಶ ಬರಲಿದೆ. ದೇಶದ ಆರ್ಥಿಕ ಪರಿಸ್ಥಿತಿ ಮತ್ತು ಉದ್ಯೋಗದ ಪರಿಸ್ಥಿತಿಯನ್ನು ಊಹಿಸಲು ಸಾಧ್ಯವಿರಲ್ಲ. ನೀವು ಜೀವನದಲ್ಲಿ ನೋಡಿಲ್ಲದಿದ್ದನ್ನು ಮುಂದಿನ ದಿನಗಳಲ್ಲಿ ನೋಡಲಿದ್ದೀರಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಜಯನಗರದ ನೆಲದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ 

    ಕಳೆದ ಎರಡ್ಮೂರು ವರ್ಷಗಳಲ್ಲಿ ಮಾಧ್ಯಮಗಳು, ಸಂಸ್ಥೆಗಳು, ಬಿಜೆಪಿ ಮುಖಂಡರು, RSS ಸತ್ಯವನ್ನು ಮರೆಮಾಚಿವೆ. ನಿಧಾನವಾಗಿ ಸತ್ಯ ಹೊರಬರಲಿದೆ. ಶ್ರೀಲಂಕಾದಂತೆ ಭಾರತದಲ್ಲಿಯೂ ಆಗಲಿದೆ. ಅಲ್ಲಿ ಸತ್ಯಾಂಶ ಹೊರಬಂದಿದೆ. ಭಾರತದಲ್ಲಿಯೂ ಸತ್ಯ ಹೊರಬರಲಿದೆ ಎಂದು ತಿಳಿಸಿದ್ದಾರೆ.

  • ದೇಶರಕ್ಷಣೆ – ಪ್ರಧಾನಿ ಮೋದಿ ಒಳಿತಿಗಾಗಿ ಅಡ್ವೆ ಗ್ರಾಮದಲ್ಲಿ ಋಕ್ ಸಂಹಿತಾ ಯಾಗ

    ದೇಶರಕ್ಷಣೆ – ಪ್ರಧಾನಿ ಮೋದಿ ಒಳಿತಿಗಾಗಿ ಅಡ್ವೆ ಗ್ರಾಮದಲ್ಲಿ ಋಕ್ ಸಂಹಿತಾ ಯಾಗ

    ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಅಡ್ವೆಯಲ್ಲಿ ಋಕ್ ಸಂಹಿತಾ ಮಹಾಯಾಗದ ಪೂರ್ಣಾಹುತಿಯಾಗಿದೆ. ಕಳೆದ ಎರಡು ವರ್ಷಗಳಿಂದ ನಿರಂತರ ಯಾಗ ನಡೆದಿದ್ದು, ಈ ಬಾರಿ ದೇಶದ ಶ್ರೇಯೋಭಿವೃದ್ಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಒಳಿತಿಗಾಗಿ ಯಾಗ ನಡೆಸಲಾಗಿದೆ.

    ಅಡ್ವೆ ಗ್ರಾಮದ ವಿದ್ವಾನ್ ಅಡ್ವೆ ಲಕ್ಷ್ಮೀಶಾಚಾರ್ಯರು ನಡೆಸಿರುವ ಋಕ್ ಸಂಹಿತಾ ಯಾಗ ಇದಾಗಿದ್ದು, ಪೂರ್ಣಾಹುತಿಯಲ್ಲಿ ಮೂರು ಮಠಾಧೀಶರು ಭಾಗಿಯಾದರು. ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪಲಿಮಾರು ವಿದ್ಯಾಧೀಶ, ವಿದ್ಯಾರಾಜೇಶ್ವರ ತೀರ್ಥರು ಪೂರ್ಣಾಹುತಿಯಲ್ಲಿ ಭಾಗಿಯಾದರು. ಆಚಾರ್ಯರು ಈವರೆಗೆ ಒಟ್ಟು 10 ಸಲ ಋಕ್ ಸಂಹಿತಾ ಯಾಗ ಮಾಡಿದ್ದಾರೆ. ಯಾಗದ ಪೂರ್ಣಾಹುತಿ ಸಂದರ್ಭದಲ್ಲಿ ಕೊರೊನಾ ಮಹಾಮಾರಿ ದೂರಾಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.

    ಅಡ್ವೆ ಎಂಬ ಪುಟ್ಟ ಹಳ್ಳಿಯಲ್ಲಿ ತಮ್ಮ ಮನೆಯಲ್ಲೇ ಕಳೆದೆರಡು ವರ್ಷಗಳಿಂದ ಯಾವ ಪ್ರಚಾರವೂ ಇಲ್ಲದೇ ನರೇಂದ್ರ ಮೋದಿಯವರಿಗೆ ಮತ್ತು ದೇಶಕ್ಕೆ ಕ್ಷೇಮ ಸುಭಿಕ್ಷೆ ಸಮೃದ್ಧಿ ಶಾಂತಿಗಾಗಿ ಪ್ರಾರ್ಥಿಸಿ ಪ್ರತಿನಿತ್ಯ ಅತ್ಯಂತ ಶ್ರದ್ಧೆಯಿಂದ ಋಗ್ವೇದ ಸಂಹಿತಾ ಯಾಗ ನಡೆಸುತ್ತಿದ್ದಾರೆ. ಇದನ್ನೂ ಓದಿ: ವಿಶಾಖಪಟ್ಟಣಂ-ದೆಹಲಿ, ಆಂಧ್ರಪ್ರದೇಶ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊಗೆ – ಪ್ರಯಾಣಿಕರಲ್ಲಿ ಆತಂಕ

    ವಿದ್ವಾನ್ ಅಡ್ವೆ ಲಕ್ಷ್ಮೀಶಾಚಾರ್ಯರು ಈ ಯಾಗದ ಕರ್ತೃವಾಗಿದ್ದು ಈಗಾಗಲೇ ಲೋಕದ ಒಳಿತಿಗಾಗಿ ಒಂಭತ್ತು ಬಾರಿ ಋಕ್ ಸಂಹಿತಾಯಾಗವನ್ನು ನಡೆಸಿದ್ದು, ಈ ಬಾರಿ ಹತ್ತನೇ ಸಲದ ಯಾಗವನ್ನು ಪೂರ್ಣಗೊಳಿಸಿದ್ದು ಅಪೂರ್ವ ಸಂಗತಿ. ಪ್ರಸ್ತುತ ದೇಶದಲ್ಲಿರುವ ತೀರಾ ಬೆರಳೆಣಿಕೆಯ ಅಗ್ನಿಹೋತ್ರಿಗಳಲ್ಲಿ ಇವರೂ ಒಬ್ಬರೂ. ಕಳೆದ ಅನೇಕ ವರ್ಷಗಳಿಂದ ತಮ್ಮ ಮನೆಯಲ್ಲಿ ಅಗ್ನಿಯನ್ನು ಪ್ರತಿಷ್ಠಾಪಿಸಿ ಒಂದು ದಿನವೂ ಬಿಡದೇ ಪ್ರತೀನಿತ್ಯ ಮೂರು ಹೊತ್ತು ಅಗ್ನಿಯ ಉಪಾಸನೆಯನ್ನು ಮಾಡುತ್ತಿರುವುದು ಈ ಕಾಲದಲ್ಲಿ ಅತ್ಯಂತ ಅಚ್ಚರಿಯ ಸಂಗತಿಯಾಗಿದೆ ಎಂದು ಪೆರಂಪಳ್ಲಿ ವಾಸುದೇವ ಭಟ್ ಹೇಳಿದ್ದಾರೆ.

    ಸ್ಥಳೀಯ ಶ್ರೀ ಯೋಗದೀಪಿಕಾ ಗುರುಕುಲದಲ್ಲಿ ಪ್ರಾಚಾರ್ಯರಾಗಿ ಕರ್ತವ್ಯ ನಿರ್ವಹಿಸುತ್ತಾ ಅದರ ಜೊತೆಗೆ ಆಸುಪಾಸಿನಲ್ಲೇ ಅಗ್ನಿಯ ಉಪಾಸನೆ, ಕೆಲವು ಕಡೆಗಳಲ್ಲಿ ಪ್ರವಚನ ಇತ್ಯಾದಿಗಳಿಂದ ಸೀಮಿತ ಆದಾಯವನ್ನು ಪಡೆಯುತ್ತಿದ್ದಾರೆ. ಆದಾಯದ ಬಹುಪಾಲನ್ನು ಲೋಕ ಹಿತಕ್ಕಾಗಿ ವಿನಿಯೋಗಿಸುತ್ತಿದ್ದಾರೆ. ಕೊರೊನಾ ವಿಪತ್ತಿನ ಸಂದರ್ಭದಿಂದ ಆರಂಭಿಸಿ ಎರಡು ವರ್ಷಗಳಿಂದ ಯಾಗ ಮಾಡುತ್ತಿರುವುದು ದೇವರಿಗೆ ಮೆಚ್ಚಿಗೆಯಾಗಿದೆ.

    ಪರಮಪೂಜ್ಯ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮತ್ತು ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಹಾಗೂ ಶಾಸಕರುಗಳಾದ ಲಾಲಾಜಿ ಆರ್ ಮೆಂಡನ್ , ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಅನೇಕ ವೈದಿಕ ವಿದ್ವಾಂಸರು ಉಪಸ್ಥಿತರಿದ್ದರು. ಇದನ್ನೂ ಓದಿ: ಪ್ರಿಯತಮೆ ತಾಯಿಗಾಗಿ ಕಿಡ್ನಿ ಕೊಟ್ಟ- ಒಂದೇ ಕಿಡ್ನಿಯವ ಬೇಡವೆಂದು ಬೇರೆಯವ್ರ ಕೈ ಹಿಡಿದ್ಳು!

  • ದೇಶಕ್ಕೆ 600 ವೈದ್ಯಕೀಯ ಕಾಲೇಜು, ಏಮ್ಸ್‌ನಂಥ 50 ಸಂಸ್ಥೆ ಬೇಕು: ನಿತಿನ್ ಗಡ್ಕರಿ

    ದೇಶಕ್ಕೆ 600 ವೈದ್ಯಕೀಯ ಕಾಲೇಜು, ಏಮ್ಸ್‌ನಂಥ 50 ಸಂಸ್ಥೆ ಬೇಕು: ನಿತಿನ್ ಗಡ್ಕರಿ

    ನವದೆಹಲಿ: ದೇಶಕ್ಕೆ ಇನ್ನೂ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ತರಹದ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳು ಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.

    ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಡ್ ನಗರದಲ್ಲಿ ಕೊರೊನಾ ವಾರಿಯರ್ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿ ವಲಯದ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಅಗತ್ಯ ಇದೆ. ಸಹಕಾರಿ ಕ್ಷೇತ್ರ ಸಹ ವೈದ್ಯಕೀಯ ಸೌಲಭ್ಯಗಳನ್ನು ಸ್ಥಾಪಿಸಲು ಮುಂದೆ ಬರಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸೋಮವಾರ ಬಂದ್ ಇದ್ದರೂ SSLC ಪೂರಕ ಪರೀಕ್ಷೆ

    ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಚರ್ಚೆಯ ಸಮಯದಲ್ಲಿ, ನಾನು ಅವರಿಗೆ ವೆಂಟಿಲೇಟರ್‍ಗಳ ಕೊರತೆಯ ಬಗ್ಗೆ ಹೇಳಿದೆ. ದೇಶದಲ್ಲಿ ಎಷ್ಟು ವೆಂಟಿಲೇಟರ್‍ಗಳಿವೆ ಎಂದು ಅವರು ನನ್ನನ್ನು ಕೇಳಿದರು, ಅದಕ್ಕೆ ನಾನು ಸುಮಾರು 2.5 ಲಕ್ಷ ಇರಬೇಕು. ದೇಶದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗ ದೇಶದಲ್ಲಿ ಕೇವಲ 13,000 ವೆಂಟಿಲೇಟರ್‍ಗಳು ಇದ್ದವು ಎಂದು ಅವರು ನನಗೆ ತಿಳಿಸಿದರು ಎಂದು ಗಡ್ಕರಿ ಹೇಳಿದ್ದಾರೆ. ಇದನ್ನೂ ಓದಿ: ಖಾಸಗಿ ಶಾಲೆಗಳ ದುಬಾರಿ ಶುಲ್ಕ- ರಮೇಶ್ ಕುಮಾರ್ ಉಪಸ್ಥಿತಿಯಲ್ಲಿ ಚಿಂತನ ಮಂಥನ

    ಆ ಸಮಯದಲ್ಲಿ ಆಮ್ಲಜನಕ, ಬೆಡ್‍ಗಳು ಮತ್ತು ಇತರ ವೈದ್ಯಕೀಯ ಸೌಲಭ್ಯಗಳ ಕೊರತೆ ಇತ್ತು. ಆದರೆ ವೈದ್ಯರು, ಅರೆವೈದ್ಯರು, ನರ್ಸ್‍ಗಳು ಆ ಸಮಯದಲ್ಲಿ ಸಾಕಷ್ಟು ಸಹಾಯ ಮಾಡಿದರು. ಅವರ ಕೆಲಸವನ್ನು ನಾನು ಪ್ರಶಂಸಿಸುತ್ತೇನೆ ಎಂದು ಗಡ್ಕರಿ ಹೇಳಿದ್ದಾರೆ.

  • ಭಾರತದ ಬಯೋಟೆಕ್ ರಾಜಧಾನಿ ಬೆಂಗಳೂರು: ಪಿಯೂಷ್ ಗೋಯಲ್

    ಭಾರತದ ಬಯೋಟೆಕ್ ರಾಜಧಾನಿ ಬೆಂಗಳೂರು: ಪಿಯೂಷ್ ಗೋಯಲ್

    ಬೆಂಗಳೂರು: ಕರ್ನಾಟಕ ದೇಶದಲ್ಲಿಯೇ ಅತ್ಯಂತ ಕ್ರಿಯಾಶೀಲ ರಾಜ್ಯ ಹಾಗೂ ಹಲವು ಹೊಸತನಗಳ ಮತ್ತು ನವೋದ್ಯಮಗಳ ಉಗಮ  ಸ್ಥಾನವಾಗಿದ್ದು, ಭಾರತದ ಬಯೋಟೆಕ್ನಾಲಜಿಯ ರಾಜಧಾನಿ ಬೆಂಗಳೂರು ಆಗಿದೆ ಎಂದು ಕೇಂದ್ರ ಜವಳಿ, ಗ್ರಾಹಕರ ವ್ಯವಹಾರ, ಆಹಾರ ಹಾಗೂ ನಾಗರೀಕ, ಕೈಗಾರಿಕೆ ಹಾಗೂ ವಾಣಿಜ್ಯ ಸಚಿವರಾದ ಪಿಯೂಷ್ ಗೋಯಲ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

    ಇಂದು ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕರ್ನಾಟಕ ನಾವೀನ್ಯತೆ ಕೇಂದ್ರದಲ್ಲಿನ ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT-B) ಆವರಣದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ ಉದ್ಯಮ ಹಾಗೂ ನವೋದ್ಯಮ ಪ್ರತಿನಿಧಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು. ಇದನ್ನೂ ಓದಿ:  ಇ-ಹರಾಜಿನಲ್ಲಿ ಭಾಗವಹಿಸಲು ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

    ಜಾಗತಿಕ ಮಹಾಮಾರಿ ಕೋವಿಡ್ ನಿಯಂತ್ರಣಕ್ಕಾಗಿ ಭಾರತ್ ಬಯೋಟೆಕ್ನಾಲಜಿಯಂತಹ ಸಂಸ್ಥೆಯ ಕೊಡುಗೆ ಅಪಾರ, ದೇಶದ ಆರ್ಥಿಕ ಅಭಿವೃದ್ಧಿಗಾಗಿ ಬೆಂಗಳೂರು ನವೋದ್ಯಮದ ಮೂಲಕ ತನ್ನದೇ ಕೊಡುಗೆ ನೀಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ:  ಗುಜರಾತ್‍ನಂತೆ ಕರ್ನಾಟಕದಲ್ಲಿ ಮಾದರಿ ಸಂಪುಟ ರಚನೆ ಆಗಲಿ: ವಿಜಯೇಂದ್ರ

    ಸರ್ಕಾರ ದೇಶದ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂತಹ ಸಂವಾದಗಳು ಸಹಾಯವಾಗುತ್ತವೆ. ಇಲ್ಲಿನ ಸಂವಾದ ಸಾರಂಶದ ಅಂಶಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಖಾಸಗಿ ಸಂಸ್ಥೆಗಳ ಮುಖ್ಯಸ್ಥರು ನವದೆಹಲಿಗೆ ಭೇಟಿ ನೀಡಿ ತಮ್ಮ ಅಭಿಪ್ರಾಯಗಳನ್ನು ನೇರವಾಗಿ ಹಂಚಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಐವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್ ನೋಟ್‍ನಲ್ಲಿ ಅಪ್ಪನ ವಿರುದ್ಧವೇ ಮಕ್ಕಳ ಆರೋಪ

    ಕೋವಿಡ್ ಸಮಯದಲ್ಲಾದ ಆರ್ಥಿಕ ತಲ್ಲಣಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಉದ್ಯಮಗಳ ಉಳಿವಿಗಾಗಿ ಹಾಗೂ ಬೆಳವಣಿಗೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನವೋದ್ಯಮಿಗಳ ಪ್ರೋತ್ಸಾಹಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟಿಗೆ ಟ್ವೀಟ್ ಮಾಡಿದ್ದ ರಾಜಸ್ಥಾನ ಸಿಎಂ ಒಎಸ್‍ಡಿ ರಾಜೀನಾಮೆ! 

    ಸಂವಾದದದಲ್ಲಿ ಮಾಹಿತಿ-ತಂತ್ರಜ್ಞಾನದ ರಾಜ್ಯ ಸರ್ಕಾರದ ಕಾರ್ಯದರ್ಶಿಗಳಾದ ರಮಣ ರೆಡ್ಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯದ ಕೊಡುಗೆ ಹಾಗೂ ಸ್ಥಾನಮಾನದ ಕುರಿತು ಮಾತನಾಡಿ ಸಚಿವರಿಗೆ ಸ್ವಾಗತ ಕೋರಿದರು.

    ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳಾದ ಶ್ರೀಮತಿ ಮೀನಾ ನಾಗರಾಜ್, ಇನ್ ಫೋಸಿಸ್ ಸಂಸ್ಥೆಯ ಸ್ಥಾಪಕ ಸದಸ್ಯರಾದ ಕ್ರಿಸ್ ಗೋಪಾಲ್ ಸೇರಿದಂತೆ ಹಲವಾರು ಖಾಸಗಿ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

  • ಲಸಿಕಾಕರಣದಲ್ಲಿ ವಿದೇಶಗಳಿಂತ ಕರ್ನಾಟಕವೇ ಫಾಸ್ಟ್ ಅಂಡ್ ಬೆಸ್ಟ್

    ಲಸಿಕಾಕರಣದಲ್ಲಿ ವಿದೇಶಗಳಿಂತ ಕರ್ನಾಟಕವೇ ಫಾಸ್ಟ್ ಅಂಡ್ ಬೆಸ್ಟ್

    ಬೆಂಗಳೂರು: ವಿದೇಶಗಳಿಗೆ ಹೋಲಿಸಿದರೆ ಕರ್ನಾಟಕವೇ ಅತೀ ವೇಗವಾಗಿ ಸಾರ್ವಜನರಿಗೆ ಲಸಿಕೆ ವಿತರಣೆ ಮಾಡುತ್ತಿದೆ. ಅಲ್ಲದೇ ಸೆಪ್ಟೆಂಬರ್ ತಿಂಗಳಲ್ಲಿ ಮತ್ತಷ್ಟು ವೇಗವಾಗಿ ಲಸಿಕಾಕರಣ ನಡೆಸುತ್ತಿದೆ.

    ಕೆಲವು ವಿದೇಶಗಳಿಗಿಂತ ದೇಶದ ಹಲವು ರಾಜ್ಯಗಳಲ್ಲಿ ಪ್ರತಿದಿನ ಹೆಚ್ಚಾಗಿ ಲಸಿಕೆ ನೀಡಲಾಗುತ್ತಿದೆ. ರಷ್ಯಾದಲ್ಲಿ ಪ್ರತಿನಿತ್ಯ 3.7 ಲಕ್ಷ ಜನರಿಗೆ ಲಸಿಕೆ ವಿತರಣೆಯಾದರೆ, ಕರ್ನಾಟಕದಲ್ಲಿ ಪ್ರತಿನಿತ್ಯ 3.8 ಲಕ್ಷ ಲಸಿಕೆ ನೀಡಲಾಗುತ್ತಿದೆ. ಕರ್ನಾಟಕ ಹೊರತುಪಡಿಸಿ ಉತ್ತರಪ್ರದೇಶ, ಮಧ್ಯಪ್ರದೇಶ, ಹರ್ಯಾಣ, ಗುಜರಾತ್‍ನಲ್ಲೂ ವಿದೇಶಗಳಿಗಿಂತ ದೈನಂದಿನಗಳಲ್ಲಿ ಹೆಚ್ಚು ಡೋಸ್ ವಿತರಿಸಲಾಗುತ್ತಿದೆ.  ಇದನ್ನೂ ಓದಿ: ಲ್ಯಾಬ್ ಉಪಕರಣ ಖರೀದಿಯಲ್ಲಿ 34 ಕೋಟಿ ರೂ. ಕಿಕ್ ಬ್ಯಾಕ್- ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ

    ಹೌದು, ದೇಶದಲ್ಲಿ ದೈನಂದಿನ ಲಸಿಕೆ ವಿತರಣೆಯಲ್ಲಿ ಉತ್ತರ ಪ್ರದೇಶ ನಂಬರ್ 1 ಸ್ಥಾನದಲ್ಲಿದ್ದರೆ, ಕರ್ನಾಟಕಕ್ಕೆ ಮೂರನೇ ಸ್ಥಾನ ದೊರಕಿದೆ. ಇನ್ನೂ ರಾಜ್ಯಗಳ ಲಸಿಕಾಕರಣ ವೇಗದ ಬಗ್ಗೆ ಕೇಂದ್ರ ಸರ್ಕಾರ ಖುದ್ದು ಗ್ರಾಫ್ ಮೂಲಕ ಅಂಕಿ ಅಂಶ ಬಿಡುಗಡೆಗೊಳಿಸಿದೆ. ಈ ಮೂಲಕ ಅಮೇರಿಕಕ್ಕಿಂತಲೂ ವೇಗವಾಗಿದೆ ಉತ್ತರಪ್ರದೇಶದಲ್ಲಿ ಲಸಿಕಾಕರಣ ನಡೆಯುತ್ತಿದೆ ಎಂಬ ವಿಚಾರ ಬಹಿರಂಗಗೊಂಡಿದೆ.  ಇದನ್ನೂ ಓದಿ: ಚುನಾವಣೆ ಸಂದರ್ಭ ಮಾತ್ರವಲ್ಲ, ನಿರಂತರವಾಗಿ ಜನರ ಯೋಗಕ್ಷೇಮ ವಿಚಾರಿಸಬೇಕು: ಆರ್.ಅಶೋಕ್

    Indian states vaccinating at a faster pace than foreign nations

    ಪ್ರತಿನಿತ್ಯ ಅಮೇರಿಕಾದಲ್ಲಿ 8.07 ಲಕ್ಷ ಡೋಸ್ ವಿತರಣೆ ಮಾಡುತ್ತಿದ್ದರೆ, ಉತ್ತರಪ್ರದೇಶ ಒಂದರಲ್ಲಿಯೇ ಪ್ರತಿದಿನ 11.73 ಲಕ್ಷ ಡೋಸ್ ಲಸಿಕೆ ನೀಡಲಾಗುತ್ತಿದೆ. ಯುಪಿ ಬಳಿಕ ಗುಜರಾತ್ ಎರಡನೇ ಸ್ಥಾನ, ಕರ್ನಾಟಕ ಮೂರನೇ ಸ್ಥಾನ, ಮಧ್ಯಪ್ರದೇಶಕ್ಕೆ ನಾಲ್ಕು ಹಾಗೂ ಹರ್ಯಾಣ ಐದನೇ ಸ್ಥಾನ ಲಭಿಸಿದೆ.

    ದೇಶದ ಟಾಪ್ ಐದು ರಾಜ್ಯಗಳ ದೈನಂದಿನ ಲಸಿಕಾ ವೇಗ:
    ಯುಪಿ 11.73 ಲಕ್ಷ.
    ಗುಜರಾತ್ 4.80 ಲಕ್ಷ.
    ಕರ್ನಾಟಕ 3.82 ಲಕ್ಷ.
    ಮಧ್ಯಪ್ರದೇಶ 3.71 ಲಕ್ಷ.
    ಹರ್ಯಾಣ 1.52 ಲಕ್ಷ.

    ವಿದೇಶಗಳಲ್ಲಿ ಹೇಗಿದೆ ದೈನಂದಿನ ಲಸಿಕಾಕರಣ ವೇಗ:
    ಅಮೆರಿಕ 8.07 ಲಕ್ಷ.
    ಮೆಕ್ಸಿಕೊ 4.56 ಲಕ್ಷ.
    ರಷ್ಯಾ 3.68 ಲಕ್ಷ.
    ಫ್ರಾನ್ಸ್ 2.84.
    ಕೆನಡಾ 85 ಸಾವಿರ

  • ತಾಲಿಬಾನ್ ಉಗ್ರರಿಗಾಗಿ ಕಾಯುತ್ತಿದ್ದೇನೆ, ನನ್ನನ್ನು ಕೊಲ್ಲುತ್ತಾರೆ: ಅಫ್ಘಾನಿಸ್ತಾನದ ಮಹಿಳಾ ಮೇಯರ್

    ತಾಲಿಬಾನ್ ಉಗ್ರರಿಗಾಗಿ ಕಾಯುತ್ತಿದ್ದೇನೆ, ನನ್ನನ್ನು ಕೊಲ್ಲುತ್ತಾರೆ: ಅಫ್ಘಾನಿಸ್ತಾನದ ಮಹಿಳಾ ಮೇಯರ್

    ಕಾಬೂಲ್: ತಾಲಿಬಾನ್ ಉಗ್ರರಿಗಾಗಿ ಕಾಯುತ್ತಿದ್ದೇನೆ, ನನ್ನನ್ನು ಕೊಲ್ಲುತ್ತಾರೆ ಎಂದು ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಜರಿಫಾ ಗಫಾರಿ ಆತಂಕವನ್ನು ಕ್ಯಕ್ತಪಡಿಸಿದ್ದಾರೆ.

    ಜರಿಫಾ ಗಫಾರಿ ತನ್ನ 27ನೇ ವಯಸ್ಸಿನಲ್ಲಿ ಮೇಯರ್ ಹುದ್ದೆಗೇರಿ ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಎನ್ನುವ ಖ್ಯಾತಿಗೆ ಪಾತ್ರರಾದವರು. 2018ರಲ್ಲಿ ಮೇಯರ್ ಗಾದಿಗೆ ಏರಿದ್ದ ಜರಿಫಾ ತನ್ನ ದೇಶದ ಭವಿಷ್ಯದ ಬಗ್ಗೆ ಹಲವು ಕನಸುಗಳನ್ನು ಕಟ್ಟಿಕೊಂಡಿದ್ದವರು.

    ಕೆಲ ವಾರಗಳ ಹಿಂದೆ ತಾಲಿಬಾನ್ ದೇಶದ ಜಿಲ್ಲೆಗಳನ್ನು ವಶಪಡಿಸಿಕೊಳ್ಳುವುದರಲ್ಲಿ ತೊಡಗಿದ್ದಾಗಲೂ ಅವರು ಆಶಾಭಾವವನ್ನು ಹೊಂದಿದ್ದರು. ಆಫ್ಘನ್ ಸೇನೆ ತಾಲಿಬಾನ್ ಅನ್ನು ಹಿಮ್ಮೆಟ್ಟಿಸಲಿದೆ ಎಂದೇ ನಂಬಿದ್ದರು. ಕೇವಲ ಎರಡೇ ವಾರಗಳ ಅವಧಿಯಲ್ಲಿ ಅವರ ಆಶಾಗೋಪುರ ಕುಸಿದು ಧರಾಶಾಯಿಯಾಗಿದೆ. ಈ ಸಮಯದಲ್ಲಿ ಅವರು ಮಾಧ್ಯಮಕ್ಕೆ ನೀಡಿರುವ ಸಂದರ್ಶನ ಅಫ್ಘಾನಿಸ್ತಾನದಲ್ಲಿ ಮುಂಬರಲಿರುವ ಭೀಕರ ಕ್ಷಣಗಳಿಗೆ ಕೈಗನ್ನಡಿ ಹಿಡಿದಂತಿದೆ. ಇದನ್ನೂ ಓದಿ: ತಾಲಿಬಾನ್ ಉಗ್ರರ ಸರ್ಕಾರಕ್ಕೆ ಪಾಕಿಸ್ತಾನ, ಚೀನಾ, ಇರಾನ್ ಬೆಂಬಲ

    ತಾಲಿಬಾನಿಗಳು ನಾನಿರುವಲ್ಲಿಗೇ ಬಂದು ನನ್ನನ್ನು ಕೊಲ್ಲುವುದನ್ನೇ ಎದುರು ನೋಡುತ್ತಿದ್ದೇನೆ. ಏಕೆಂದರೆ ತಾಲಿಬಾನಿಗಳ ಕಣ್ಣು ಮೊದಲು ಬೀಳುವುದೇ ನನ್ನಂಥವಳ ಮೇಲೆ. ತಾಲಿಬಾನಿಗಳ ರಾಜ್ಯದಲ್ಲಿ ಶಿಕ್ಷೆಗೆ ಒಳಗಾಗಲು ದೇಶದ್ರೋಹದ ಕೆಲಸವನ್ನೇ ಮಾಡಬೇಕೆಂದಿಲ್ಲ. ಇಲ್ಲಿ ಹೆಣ್ಣಾಗಿ ಹುಟ್ಟಿದರೆ ಸಾಕು. ನನ್ನನ್ನಾಗಲಿ ನನ್ನ ಕುಟುಂಬವನ್ನಾಗಲಿ ರಕ್ಷಣೆ ಮಾಡಲು ಯಾರೂ ಇಲ್ಲ. ನನ್ನ ಸಹಾಯಕ್ಕೆ ಯಾರೂ ಬಾರರು. ಅದು ನನಗೆ ಚೆನ್ನಾಗಿ ಗೊತ್ತಿದೆ. ಹಾಗೆಂದು ನಾನು ಓಡಿಹೋಗಲು ಆಗುವುದಿಲ್ಲ. ಓಡಿ ಹೋದರೂ ಎಲ್ಲಿಗೇ ಎಂದು ಓಡಲಿ. ಎಲ್ಲೆಡೆ ಅವರೇ ತುಂಬಿಕೊಂಡಿರುವಾಗ ಎಲ್ಲಿ ಅವಿತುಕೊಳ್ಳಲಿ ಎಂದು ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉಗ್ರರಿಗೆ ಆಟ, ಮಹಿಳೆಯರಿಗೆ ಪ್ರಾಣ ಸಂಕಟ – ಷರಿಯತ್ ಏನು ಹೇಳುತ್ತದೆ? ತಾಲಿಬಾನ್ ಕಾನೂನು ಏನು?

    ದನಿಯೆತ್ತರಿಸಿ ಮಾತನಾಡುವ, ರಾಜಕೀಯದಲ್ಲಿ ಉನ್ನತ ಹುದ್ದೆಗೇರಿರುವ ಹೆಣ್ನನ್ನು ತಾಲಿಬಾನಿಗಳು ಎಂದಿಗೂ ಉಳಿಸುವುದಿಲ್ಲ. ನನ್ನ ಸೇನೆಯಲ್ಲಿ ಜನರಲ್ ಹುದ್ದೆಯ ಅಧಿಕಾರಿಯಾಗಿದ್ದವರು. ಅವರನ್ನು ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ಇದುವರೆಗೂ ನನ್ನ ಮೇಲೆ ಮೂರು ಬಾರಿ ಕೊಲೆ ಯತ್ನಗಳು ನಡೆದಿವೆ. ಪ್ರಜಾಪ್ರಭುತ್ವ ಸರ್ಕಾರ ಇದ್ದ ಸಮಯದಲ್ಲೇ ತಾಲಿಬಾನಿಗಳು ಅವರ ಕಡೆಯವರಿಮ್ದ ನನ್ನನ್ನು ಕೊಲ್ಲಲು ಶತಪ್ರಯತ್ನ ನಡೆಸಿದ್ದರು. ಈ ಬಾರಿ ಅವರದೇ ಸರ್ಕಾರ ಬರುತ್ತಿದೆ. ರಾಜಧಾನಿಗೆ ತಾಲಿಬಾನ್ ಮುತ್ತಿಗೆ ಹಾಕುತ್ತಿದ್ದಂತೆಯೇ ಸರ್ಕಾರ ಹಾಗೂ ಸೇನೆಯ ಉನ್ನತ ಮಟ್ಟದ ಅಧಿಕಾರಿಗಳು ಮುಳುಗುತ್ತಿದ್ದ ಹಡಗನ್ನು ತ್ಯಜಿಸಿದಂತೆ ಸುರಕ್ಷಿತ ಸ್ಥಳಗಳಿಗೆ ತಪ್ಪಿಸಿಕೊಂಡು ಹೋದರು. ಆದರೆ ನನ್ನಂಥವರಿಗೆ ಬೇರೆಲ್ಲೂ ಹೋಗಿ ಅವಿತುಕೊಳ್ಳುವ ಶಕ್ತಿ ಇಲ್ಲ. ಇದನ್ನೂ ಓದಿ: ಅಮ್ಯೂಸ್‍ಮೆಂಟ್ ಪಾರ್ಕ್‍ನಲ್ಲಿ ಮಕ್ಕಳಂತೆ ಆಟವಾಡಿದ ತಾಲಿಬಾನಿಗಳು

    ಅಫ್ಘಾನಿಸ್ತಾನಕ್ಕೆ ತಾಲಿಬಾನ್ ಬಂಡುಕೋರರು ನುಗ್ಗಿ ದಾಂಧಲೆ ಶುರುವಿಟ್ಟುಕೊಂಡ ಸಂದರ್ಭದಲ್ಲಿ ದೇಶದ ವಿವಿಧ ಪ್ರಾಂತ್ಯಗಳಿಂದ ಜನರು ವಲಸೆ ಬಂದಿದ್ದು ರಾಜಧಾನಿ ಕಾಬೂಲಿಗೆ. ದೇಶದ ಯಾವುದೇ ಮೂಲೆಯಲ್ಲಿ ತಾಲಿಬಾನಿ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಇಡೀ ದೇಶ ಅವರ ತೆಕ್ಕೆಗೆ ಜಾರುವುದಿಲ್ಲ ಎನ್ನುವ ಒಂದೇ ಒಂದು ನಂಬಿಕೆಯಿಂದ ಅವರು ಕಾಬೂಲಿಗೆ ಬಂದಿದ್ದರು. ಅವರು ಕಾಬೂಲಿನ ಬೀದಿಗಳಲ್ಲಿ ಕುಟುಂಬ ಸಹಿತ ಬಿಡಾರ ಹೂಡಿದ್ದರು. ಇದನ್ನೂ ಓದಿ: ಅಫ್ಘಾನ್ ಸೇನೆ ಹೋರಾಟ ಮಾಡದೇ ಇರುವಾಗ ನಮ್ಮವರು ಬಲಿಯಾಗುವುದರಲ್ಲಿ ಅರ್ಥವಿಲ್ಲ : ಬೈಡನ್

    ಅವರೆಲ್ಲರ ಪ್ರಾರ್ಥನೆ ಅಲ್ಲಾಹ್ ಕಿವಿ ಮುಟ್ಟಿಲ್ಲ. ದೇಶ ತಾಲಿಬಾನ್ ತೆಕ್ಕೆಗೆ ಜಾರಿದೆ. ಕಾಬೂಲಿನ ಬೀದಿಗಳಲ್ಲಿ ನೆಲೆನಿಂತಿರುವ ಮಂದಿ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ತಮ್ಮ ಊರುಗಳಿಗೆ ಮರಳುತ್ತಾರೆ. ತಾಲಿಬಾನಿ ರಾಜ್ಯಭಾರಕ್ಕೆ ತಲೆಬಾಗುತ್ತಾರೆ. ಇಲ್ಲವೇ ಅವರ ವಿರೋಧ ಕಟ್ಟಿಕೊಂಡು ಮಸಣ ಸೇರುತ್ತಾರೆ. ಮಹಿಳೆಯರಿಗೆ, ಹೆಣ್ಣುಮಕ್ಕಳಿಗೆ ನಮ್ಮ ಆಡಳಿತದಲ್ಲಿ ಯಾವುದೇ ಅಪಾಯ ಒದಗುವುದಿಲ್ಲ ಎಂದು ತಾಲಿಬಾನ್ ಹೇಳಿದೆ ಎಂಬುದೇನೋ ನಿಜ. ಆದರೆ ಈವರೆಗಿನ ವಿದ್ಯಮಾನಗಳನ್ನು ಗಮನಿಸಿದರೆ ತಾಲಿಬಾನ್ ತನ್ನ ಯಾವ ಮಾತನ್ನು ಪಾಲಿಸಿದೆ ಎನ್ನುವುದರ ಲೆಕ್ಕ ಸಿಗುವುದಿಲ್ಲ. ಇದನ್ನೂ ಓದಿ: ಅಫ್ಘಾನಿಸ್ತಾನದ ಹಿಂದೂ-ಸಿಖ್ಖರು ಭಾರತಕ್ಕೆ ಬರಲು ಸರ್ಕಾರದ ನೆರವು

    ಅಫ್ಘಾನ್ ಸರ್ಕಾರ ಮತ್ತು ಸೇನೆ ಜೊತೆ ಕೆಲಸ ನಿರ್ವಹಿಸಿದವರಿಗೆ ಕ್ಷಮೆ ನೀಡಲಾಗುವುದು ಎಂದು ತಾಲಿಬಾನ್ ತಿಳಿಸಿದೆ. ಆದರೆ ಇನ್ನೊಂದೆಡೆ ಈಗಾಗಲೇ ತಾಲಿಬಾನ್ ತನ್ನ ವಿರೋಧಿಗಳನ್ನು ಮಟ್ಟ ಹಾಕುವ ಸಲುವಾಗಿ ಮಾರಣಹೋಮ ಶುರು ಮಾಡಿದೆ ಎನ್ನುವ ವರದಿಗಳು ಕೇಳಿಬರುತ್ತಿವೆ.

  • ಪದವಿ ಶಿಕ್ಷಣದಲ್ಲಿ ಭಾಷಾ ವಿಷಯದಲ್ಲಿ ಕನ್ನಡಿಗರಿಗೆ ದ್ರೋಹ -ಸಿದ್ದರಾಮಯ್ಯ

    ಪದವಿ ಶಿಕ್ಷಣದಲ್ಲಿ ಭಾಷಾ ವಿಷಯದಲ್ಲಿ ಕನ್ನಡಿಗರಿಗೆ ದ್ರೋಹ -ಸಿದ್ದರಾಮಯ್ಯ

    ಬೆಂಗಳೂರು: ಮೂರು ವರ್ಷಗಳ ಅವಧಿಯ ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳನ್ನು ನಾಲ್ಕು ಸೆಮಿಸ್ಟರ್‍ ಗಳ ಅವಧಿಗಳಲ್ಲಿ ಕಲಿಸುತ್ತಿದ್ದು, ಅದನ್ನು ಒಂದು ವರ್ಷದ ಅವಧಿಯ ಎರಡು ಸೆಮಿಸ್ಟರ್‍ ಗಳಿಗೆ ಮಿತಿಗೊಳಿಸಿರುವುದು ಕನ್ನಡಕ್ಕೆ ಮಾಡಿದ ದ್ರೋಹ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಸಿದ್ದರಾಮಯ್ಯ ಅವರು, ಹೊಸ ಶಿಕ್ಷಣ ನೀತಿಯ ಭಾಗವಾಗಿ ಈಗ ಇರುವ ಮೂರು ವರ್ಷದ ಬದಲಾಗಿ ನಾಲ್ಕು ವರ್ಷದ ಪದವಿ ಕೋರ್ಸನ್ನು ಅಳವಡಿಸಲು ಉದ್ದೇಶಿಸಲಾಗಿದೆ.ಅದಕ್ಕೋಸ್ಕರ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ನೇಮಿಸಲಾಗಿದ್ದ ಕಾರ್ಯಪಡೆಯ ಪಠ್ಯಪುಸ್ತಕ ರಚನೆಯ ಉಪಸಮಿತಿಯು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ವಿಷಯಗಳನ್ನು ಕೇವಲ ಎರಡು ಸೆಮಿಸ್ಟರ್‍ಗಳಿಗೆ ಅಂದರೆ ಒಂದು ವರ್ಷಕ್ಕೆ ಮಾತ್ರ ಮಿತಿಗೊಳಿಸಿ ಶಿಫಾರಸ್ಸುಗಳನ್ನು ಮಾಡಿದೆ. ಈ ಶಿಫಾರಸ್ಸುಗಳು `ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿವೆ’ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರ ವಜಾಕ್ಕೆ ರಾಜ್ಯಪಾಲರು ಶಿಫಾರಸ್ಸು ಮಾಡಬೇಕು – ಸಿದ್ದರಾಮಯ್ಯ

    ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಉದ್ದೇಶಗಳಲ್ಲಿ ದೇಶ ಭಾಷೆಗಳಿಗೆ ಪ್ರಾಮುಖ್ಯ ನೀಡಬೇಕು ಎಂಬ ಅಂಶವೂ ಇದೆ. ಆದರೆ ರಾಜ್ಯದ ಈ ಸಮಿತಿಯು ಕನ್ನಡದ ಪಾಲಿಗೆ ಮಹಾ ದ್ರೋಹವೆಸಗುವಂತಹ ಶಿಫಾರಸ್ಸುಗಳನ್ನು ಮಾಡಿದೆ ಎಂಬ ಆರೋಪಗಳನ್ನು ನಾಡಿನ ಹಿರಿಯರು ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಒಂದು ಸೆಮಿಸ್ಟರ್‍ನಲ್ಲಿ ಗರಿಷ್ಠವೆಂದರೆ 90 ದಿನಗಳ ಅವಧಿಯ ಬೋಧನೆ ಇರುತ್ತದೆ. ಪ್ರತಿ ವಿಷಯಕ್ಕೆ ಸಾಮಾನ್ಯವಾಗಿ ವಾರಕ್ಕೆ 4 ಗಂಟೆಯ ಅವಧಿಯಿರುತ್ತದೆ. ಒಂದು ಸೆಮಿಸ್ಟರ್‍ನಲ್ಲಿ ಒಂದು ವಿಷಯಕ್ಕೆ 48 ಗಂಟೆ ಬೋಧನಾ ಅವಧಿ ಇರುತ್ತದೆ. ಎರಡು ಸೆಮಿಸ್ಟರುಗಳಿಂದ ಗರಿಷ್ಠ 96 ಗಂಟೆಗಳು ಇರುತ್ತವೆ. ಕೇವಲ 96 ಗಂಟೆಗಳ ಅವಧಿಯಲ್ಲಿ ಯಾವ ವಿಷಯವನ್ನು ಕಲಿಸಲು ಸಾಧ್ಯ? ವಿಜ್ಞಾನ, ವಾಣಿಜ್ಯ, ಅರ್ಥಶಾಸ್ತ್ರ, ಕಾನೂನು ಮತ್ತು ತಾಂತ್ರಿಕ ಶಿಕ್ಷಣವನ್ನು ಕಲಿಯುವ ವಿದ್ಯಾರ್ಥಿ ತನ್ನ ಕಲಿಕೆಯುದ್ದಕ್ಕೂ ಬೌದ್ಧಿಕತೆಯನ್ನು ರೂಪಿಸಿಕೊಳ್ಳುವುದರ ಜೊತೆಗೆ ಆರೋಗ್ಯಕರವಾದ ಮನಸ್ಸನ್ನೂ ಕಟ್ಟಿ ಕೊಳ್ಳಬೇಕಾಗುತ್ತದೆ. ಹೀಗಿರುವಾಗ ಸರ್ಕಾರವು ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿದರೆ ಅವರು ಜಗತ್ತಿನ ಶ್ರೇಷ್ಠ ಮಹಾಕಾವ್ಯಗಳಾದ ರಾಮಾಯಣ, ಮಹಾಭಾರತ ಮುಂತಾದವುಗಳನ್ನು ಕಲಿಯುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.

    ಕನ್ನಡದ ಶ್ರೇಷ್ಠ ಅಭಿವ್ಯಕ್ತಿಗಳಾದ ವಚನಗಳನ್ನು, ಪಂಪ, ರನ್ನ, ಕುಮಾರವ್ಯಾಸ ಮತ್ತು ಹರಿದಾಸರ ಕಾವ್ಯಗಳನ್ನು ವಿದ್ಯಾರ್ಥಿಗಳು ಕಲಿಯುವುದು ಹೇಗೆ? ಆಧುನಿಕ ಸಾಹಿತ್ಯದ ಸಂದರ್ಭದಲ್ಲಿ ಮೇರು ಸಾಹಿತಿಗಳಾದ ಕುವೆಂಪು, ಕಾರಂತ ಬೇಂದ್ರೆ, ಮಾಸ್ತಿ, ಮುಂತಾದವರು ರೂಪಿಸಿದ ಜೀವನೋತ್ಸಾಹದ ಬದುಕಿನ ದರ್ಶನಗಳನ್ನು ಮಕ್ಕಳು ಕಲಿಯುವುದು ಹೇಗೆ? ದೇಶದ ಸಂಸ್ಕೃತಿ, ಭಾಷೆ, ಮಹಾಕಾವ್ಯಗಳು, ಪುರಾಣಗಳು, ಕಲೆ, ಜನಪದ ಮುಂತಾದ ಪರಂಪರೆಗಳ ಬಗ್ಗೆ ಮಾತನಾಡುವ ಬಿಜೆಪಿಯು ಪದವಿ ಕಲಿಯುವ ನಮ್ಮ ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿ ಕೇವಲ ಅದಾನಿ, ಅಂಬಾನಿಗಳಂಥ ಲೂಟಿಕೋರರ ಮಾದರಿಗಳನ್ನು ಕಲಿಸಲು ಹೊರಟಿದೆಯೆ ಎಂಬ ಅನುಮಾನ ಮೂಡುತ್ತಿದೆ. ಇದನ್ನೂ ಓದಿ: ಬಹುದಿನಗಳ ದೈಹಿಕ ಶಿಕ್ಷಕರ ಬೇಡಿಕೆಗೆ ಅಸ್ತು-ಸುರೇಶ್ ಕುಮಾರ್

    ನಮ್ಮ ದೇಶಕ್ಕೆ ಜ್ಞಾನ ಇರುವ, ದುಡ್ಡು ಇರುವ ಜನರ ಅಗತ್ಯ ಎಷ್ಟಿದೆಯೋ ಅದಕ್ಕಿಂತ ಹೆಚ್ಚು ಮಾನವೀಯ ಹೃದಯ ಇರುವ ಮನುಷ್ಯರ ಅಗತ್ಯವಿದೆ. ಅಂಥದ್ದಕ್ಕೆ ವಿರುದ್ಧವಾದ ನಿಲುವುಗಳನ್ನು ರೂಪಿಸುವುದಕ್ಕಾಗಿ “ರಾಷ್ಟ್ರೀಯ ಶಿಕ್ಷಣ ನೀತಿ”ಯ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ. ಅದರ ಭಾಗವಾಗಿಯೇ ಉಪಸಮಿತಿಯವರು ಭಾಷೆಗಳ ಕಲಿಕೆಯನ್ನು ಎರಡು ಸೆಮಿಸ್ಟರುಗಳಿಗೆ ಇಳಿಸಿದ್ದಾರೆ. ಸರ್ಕಾರ ಈ ಸಮಿತಿಯ ಶಿಫಾರಸ್ಸುಗಳನ್ನು ಒಪ್ಪಿಕೊಂಡಿದ್ದೆ ಆದರೆ ಅದು ಬಹಳ ದೊಡ್ಡ ಮಟ್ಟದ ಕನ್ನಡ ದ್ರೋಹವಾಗುತ್ತದೆ, ಸರಿಪಡಿಸಲಾಗದ ಜನದ್ರೋಹವಾಗುತ್ತದೆ. ಪದವಿಯಲ್ಲಿ ಮಕ್ಕಳಿಗೆ ಭಾಷೆಯನ್ನು ಕಲಿಸುವಾಗ ವ್ಯಾಕರಣ, ಛಂದಸ್ಸುಗಳನ್ನು ಕಲಿಸುವುದಿಲ್ಲ. ಬದಲಾಗಿ ವಿದ್ಯಾರ್ಥಿಯ ಕೋರ್ಸಿಗೆ ಪೂರಕವಾದ ಪಠ್ಯವನ್ನೂ ಕಲಿಸಲಾಗುತ್ತದೆ. ಉದಾಹರಣೆಗೆ ವಿಜ್ಞಾನವನ್ನು ಕಲಿಯುವ ವಿದ್ಯಾರ್ಥಿಗಳು ಶಿವರಾಮ ಕಾರಂತರ, ಪೂರ್ಣಚಂದ್ರ ತೇಜಸ್ವಿಯವರ ಬರಹಗಳನ್ನು ಕಲಿಯುತ್ತಾರೆ. ಅದೇ ರೀತಿ ಗೆಲಿಲಿಯೋ, ಸ್ಟೀಫನ್ ಹಾಕಿಂಗ್, ಐನ್‍ಸ್ಟೆನ್, ಜಗದೀಶ್ ಚಂದ್ರ ಬೋಸ್, ಅಬ್ದುಲ್ ಕಲಾಂ ಮುಂತಾದವರ ಜೀವನದ ಸಾಧನೆಗಳನ್ನು, ಮಾದರಿಗಳನ್ನು ಮಾತೃಭಾಷೆಯಲ್ಲಿ ಕಲಿಯುತ್ತಾರೆ. ಹಾಗೆಯೇ ವಾಣಿಜ್ಯದ ವಿದ್ಯಾರ್ಥಿಗಳೂ ಸಹ ಯಶಸ್ವಿ ಸಂವಹನವನ್ನು ನಡೆಸುವುದು ಹೇಗೆ ಎಂಬುದನ್ನು ಕಲಿಯುತ್ತಾರೆ. ಹಾಗೂ ಉತ್ತಮ ಉದ್ಯಮಿ ಆಗುವುದರ ಜೊತೆಯಲ್ಲಿ ಉತ್ತಮ ಮನುಷ್ಯನಾಗುವುದು ಹೇಗೆ ಎಂಬುದನ್ನೂ ಕಲಿಯುತ್ತಾರೆ.

    ಆದ್ದರಿಂದ 4 ವರ್ಷದ ಕೋರ್ಸಿಗೆ ಅನುಗುಣವಾಗಿ ಈಗ 3 ವರ್ಷಕ್ಕೆ ಅಥವಾ ಆರು ಸೆಮಿಸ್ಟರ್‍ಗಳಿಗೆ ಭಾಷಾ ವಿಷಯವನ್ನು ಬೋಧಿಸಲು ಕ್ರಮ ತೆಗೆದುಕೊಳ್ಳಬೇಕು. ಹಾಗೆ ಮಾಡುವುದರಿಂದ ನಮ್ಮ ಮಕ್ಕಳು ಉತ್ತಮ ಪರಂಪರೆಗಳಿಗೆ ವಾರಸುದಾರರಾಗಲು ಸಾಧ್ಯವಾಗುತ್ತದೆ. ಹಾಗೂ ರಾಷ್ಟ್ರಕ್ಕೆ ಬೇಕಾದ ಉತ್ತಮ ಮನುಷ್ಯರು ರೂಪುಗೊಳ್ಳಲು ಸಹಾಯವಾಗುತ್ತದೆ. ಅದರ ಬದಲಾಗಿ ರಾಷ್ಟ್ರೀಯ ಶಿಕ್ಷಣ ನೀತಿಯ ಹೆಸರಿನಲ್ಲಿ ಕನ್ನಡದ ಕುತ್ತಿಗೆಯನ್ನು ಹಿಸುಕುವ ಕೆಲಸಕ್ಕೆ ಸರ್ಕಾರ ಮುಂದಾಗುವುದಾದರೆ ಅದರ ವಿರುದ್ಧ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ. ಈ ನಾಡು ಎಂದಿಗೂ ನಾಡು, ನುಡಿಗೆ ದ್ರೋಹ ಎಸಗಿದವರನ್ನು ಕ್ಷಮಿಸಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮಕ್ಕಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ರೂಪಿಸಬೇಕಾಗಿದೆ. ಹಾಗಾಗಿ ಹೊಸ ಪಠ್ಯಕ್ರಮವನ್ನು ರೂಪಿಸುವಾಗ ಸಂಬಂಧಿಸಿದ ತಜ್ಞರುಗಳ ಕುಳಿತು ಚರ್ಚಿಸಿ ಆರೋಗ್ಯಕರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜೊತೆಗೆ ನಾಡು-ನುಡಿಗಳನ್ನು ಕಟ್ಟಲು ಪೂರಕವಾಗುವ ಪಠ್ಯಗಳನ್ನು ರೂಪಿಸಬೇಕು. ಆರು ಸೆಮಿಸ್ಟರ್‍ ಗಳಲ್ಲೂ ಕನ್ನಡ ಭಾಷಾ ವಿಷಯವನ್ನು ಎಲ್ಲಾ ಪದವಿ ಮಕ್ಕಳಿಗೂ ಕಡ್ಡಾಯವಾಗಿ ಕಲಿಸಲೇಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

  • ಅಂಗೈ ಮೇಲೆ ವೀರ ಯೋಧನನ್ನ ಬರಮಾಡ್ಕೊಂಡ ಗ್ರಾಮಸ್ಥರು

    ಅಂಗೈ ಮೇಲೆ ವೀರ ಯೋಧನನ್ನ ಬರಮಾಡ್ಕೊಂಡ ಗ್ರಾಮಸ್ಥರು

    – ಸೈನಿಕನಿಗೆ ಅದ್ಧೂರಿ ಸ್ವಾಗತ

    ಭೋಪಾಲ್: ನಿವೃತ್ತಿಹೊಂದಿ ಊರಿಗೆ ವಾಪಸ್ ಬಂದಿರುವ ವೀರ ಯೋಧರ ಪಾದ ಮಣ್ಣಿಗೆ ತಾಗದಂತೆ ಅಂಗೈ ನೆಲಕ್ಕೂರಿ ಮಧ್ಯಪ್ರದೇಶ ಜಿರಾನ್ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

    ನಿವೃತ್ತ ಯೋಧರಾದ ನಾಯಕ್ ವಿಜಯ್ ಬಿ ಸಿಂಗ್ ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆಸಲ್ಲಿಸಿದ್ದಾರೆ. ನೀವೃತ್ತಿ ಹೊಂದಿ ತನ್ನ ತವರಿಗೆ ಮರಳಿದಾಗ ಊರಿನ ಗ್ರಾಮಸ್ಥರು ಅತ್ಯಂತ ಪ್ರೀತಿಯ ಮತ್ತು ಭವ್ಯವಾದ ಸ್ವಾಗತವನ್ನು ಕೋರಿದ್ದಾರೆ.

    ವಿಜಯ್ ಬಿ ಸಿಂಗ್ ಬರುತ್ತಾರೆ ಎಂಬ ವಿಚಾರವನ್ನು ತಿಳಿದ ಗ್ರಾಮಸ್ಥರು ಸ್ವಾಗತಕ್ಕೆ ಭಾರೀ ಸಿದ್ಧತೆ ಮಾಡಿಕೊಂಡಿದ್ದರು. ಮನೆಗೆ ಯೋಧ ಬರುತ್ತಿದ್ದಂತೆ ಅವರ ಕಾಲುಗಳನ್ನು ನೆಲಕ್ಕೆ ತಾಗದಂತೆ ಗ್ರಾಮಸ್ಥರು ತಮ್ಮ ಅಂಗೈಯನ್ನು ನೆಲಕ್ಕೆ ಊರಿ ಅದರ ಮೇಲೆ ಅವರ ಪಾದಗಳನ್ನು ಇಟ್ಟು ಗೌರವಪೂರ್ವಕವಾಗಿ ಸಂತೋಷದಿಂದ ಸ್ವಾಗತಿಸಿದ್ದಾರೆ.

    ನಿಜಕ್ಕೂ ನನಗೆ ತುಂಬಾ ಸಂತೋಷವಾಗುತ್ತಿದೆ. ನನಗೆ ಹೆಮ್ಮೆಯ ವಿಚಾರವಾಗಿದೆ. ಭಾರತೀಯ ಸೇನೆಯಲ್ಲಿ 17 ವರ್ಷ 26 ದಿನ ಸೇವೆಯನ್ನು ಸಲ್ಲಿಸಿದ್ದೇನೆ. ನಾನು ಬಂದಾಗಲೆಲ್ಲ ನನ್ನ ಹೊತ್ತೊಯ್ದು ದೇವಸ್ಥಾನದಲ್ಲಿ ಆಶೀರ್ವದಿಸುತ್ತಾರೆ. ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಯೋಧರಾದ ನಾಯಕ್ ವಿಜಯ್ ಹೇಳಿದ್ದಾರೆ.

     

  • ದೇಶದ 17 ಜಿಲ್ಲೆಗಳಲ್ಲಿ ಕೊರೊನಾ ಡೇಂಜರ್

    ದೇಶದ 17 ಜಿಲ್ಲೆಗಳಲ್ಲಿ ಕೊರೊನಾ ಡೇಂಜರ್

    –  ಹಾಟ್‍ಸ್ಪಾಟ್ ಪಟ್ಟಿಯಲ್ಲಿ ಕರ್ನಾಟಕದ 4 ಜಿಲ್ಲೆಗಳು

    ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಹಾಟ್‍ಸ್ಪಾಟ್ ಜಿಲ್ಲೆಗಳ ಮೇಲೆ ನೇರ ನಿಗಾಯಿಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಪ್ರದೇಶಗಳಲ್ಲಿ ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ ಮೆಂಟ್ ವಿಚಾರದಲ್ಲಿ ಆಗಿರುವ ತಪ್ಪುಗಳನ್ನು ತಿದ್ದಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

    ಈ ಸಂಬಂಧ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದ 17 ಹಾಟ್‍ಸ್ಪಾಟ್ ಜಿಲ್ಲೆಗಳ ಮುಖ್ಯ ಆರೋಗ್ಯ ಅಧಿಕಾರಿಗಳ ಜೊತೆಗೆ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಗಳು ಸಭೆ ನಡೆಸಿದ್ದಾರೆ. ಭಾರತದ ಒಟ್ಟು ಸೋಂಕಿತರ ಸಂಖ್ಯೆ ಪೈಕಿ 17 ಜಿಲ್ಲೆಗಳಿಂದ ಶೇ.46ರಷ್ಟು ಸೋಂಕಿತರಿದ್ದು, ಈ ಜಿಲ್ಲೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

    17 ಜಿಲ್ಲೆಗಳಲ್ಲಿ ಕೊಪ್ಪಳ, ಮೈಸೂರು, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಗನ್ನು ಒಳಗೊಂಡಿದೆ. ಆಯಾ ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿ ಕೊರೊನಾ ಸೋಂಕು ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಿದ್ದಾರೆ.

    ಸಭೆಯಲ್ಲಿ ಮರಣ ದರವನ್ನು ಶೇ.1ಕ್ಕಿಂತ ಕಡಿಮೆ ಗೊಳಿಸಲು ಸೂಚನೆ ಮತ್ತು ಸೋಂಕು ನಿಯಂತ್ರಣ ಕ್ರಮಗಳು ಕುರಿತು ವಿಸ್ತೃತ ಲಿಖಿತ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಅಗತ್ಯ ಸಂದರ್ಭಗಳಲ್ಲಿ ಏಮ್ಸ್ ವೈದ್ಯರ ತಂಡದ ಸಹಾಯ, ಸಲಹೆ ಪಡೆಯಲು ಸೂಚನೆ ನೀಡಲಾಗಿದೆ.