Tag: ದೇಶಪಾಂಡೆ

  • ನನಗೆ ವಯಸ್ಸಾಗಿದ್ರೂ ಹಾಗೆ ಕಾಣಲ್ಲ: ಸಿದ್ದರಾಮಯ್ಯ ಹಾಸ್ಯ ಚಟಾಕಿ

    ನನಗೆ ವಯಸ್ಸಾಗಿದ್ರೂ ಹಾಗೆ ಕಾಣಲ್ಲ: ಸಿದ್ದರಾಮಯ್ಯ ಹಾಸ್ಯ ಚಟಾಕಿ

    ಬೆಂಗಳೂರು: ವಿಧಾನಸಭೆಯಲ್ಲಿ ಗುರುವಾರದಿಂದ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಹಲವು ಸ್ವಾರಸ್ಯಕರ ಚರ್ಚೆಗೂ ಸಾಕ್ಷಿಯಾಗುತ್ತಿದೆ. ಅಹೋರಾತ್ರಿ ಧರಣಿಗೆ ಇಬ್ಬರಿಗೆ ವಿನಾಯ್ತಿ ನೀಡಿದ್ದಾರಂತೆ. ಸ್ವತಃ ಸಿದ್ದರಾಮಯ್ಯ ಅವರೇ ಆ ಇಬ್ಬರ ಹೆಸರನ್ನ ಮೊಗಸಾಲೆಯಲ್ಲಿ ಹೇಳಿ ಹಾಸ್ಯ ಮಾಡಿದ್ದಾರೆ.

    ಶುಕ್ರವಾರ ಕಲಾಪ ಆರಂಭಕ್ಕೂ ಮುನ್ನ ವಿಧಾನಸಭೆಯ ವಿರೋಧ ಪಕ್ಷದ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಕುಳಿತಿದ್ದರು. ಆ ಸ್ಥಳಕ್ಕೆ ಮಾಜಿ ಸಚಿವ ದೇಶಪಾಂಡೆ ಕೂಡ ಬಂದು ಸಿದ್ದರಾಮಯ್ಯ ಪಕ್ಕ ಕುಳಿತರು. ಆಗ ಸಿದ್ದರಾಮಯ್ಯ ದೇಶಪಾಂಡೆಯವರ ಕಾಲೆಳೆಯಲು ಪ್ರಾರಂಬಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಹೋರಾತ್ರಿ ಧರಣಿ – ಸಿಎಂ, ಬಿಎಸ್‍ವೈ ಸಂಧಾನ ಯತ್ನ ವಿಫಲ

    ಅಹೋರಾತ್ರಿ ಧರಣಿಗೆ ನಮ್ ಶಾಮನೂರು ಶಿವಶಂಕರಪ್ಪ, ಈ ದೇಶಪಾಂಡೆ ಇಬ್ಬರಿಗೂ ವಿನಾಯ್ತಿ ಕೊಟ್ಟಿದ್ದೇವೆ. ಇಬ್ಬರಿಗೂ ವಯಸ್ಸಾಗಿದೆ ಪಾಪ ಎಂದು ಸಿದ್ದರಾಮಯ್ಯ ಛೇಡಿಸಿದ್ದಾರೆ.

    ಇದಕ್ಕೆ ತಕ್ಷಣ ರಿಯಾಕ್ಟ್ ಮಾಡಿದ ದೇಶಪಾಂಡೆ. ನಾನೇನು ಮುದುಕ ಅಲ್ಲ, ನನಗೇನು ವಯಸ್ಸಾಗಿದೆ. ನಿನಗಿಂತ ನಾನು 6 ತಿಂಗಳು ದೊಡ್ಡವನು. ಹಾಗಾದ್ರೆ ನೀನು ಮುದುಕನಾ? ಎಂದು ಸಿದ್ದರಾಮಯ್ಯಗೆ ಕೇಳಿದ್ದಾರೆ. ಇದನ್ನೂ ಓದಿ: ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ 1.5 -2 ಕೋಟಿ ರೂ.ನಷ್ಟಕ್ಕೆ ಹೊಣೆ ಯಾರು? – ಬಿಜೆಪಿ, ಕಾಂಗ್ರೆಸ್‍ನ್ನು ತಿವಿದ ಎಚ್‍ಡಿಕೆ

    ನೋಡಪ್ಪಾ, ನನಗೆ ವಯಸ್ಸಾಗಿದ್ರೂ ನಾನು ಹಾಗೆ ಕಾಣಲ್ಲ. ನೀನು ಮಾಗಿ ಬಿಟ್ಟಿದ್ದೀಯಾ. ಅದಕ್ಕೆ ಹಂಗೆ ಹೇಳ್ದೆ ಎಂದು ಸಿದ್ದರಾಮಯ್ಯ ಕಾಲೆಳೆದಿದ್ದಾರೆ. ಆಗ ಅಕ್ಕ ಪಕ್ಕ ಇದ್ದ ಶಾಸಕರು ನಗೆಡಲಲ್ಲಿ ತೇಲಿದ್ದಾರೆ.

  • ಈಶ್ವರಪ್ಪನವರಿಗೆ ಈಗ ಅರಿವಾಗುತ್ತಿರುವುದು ಆಶ್ಚರ್ಯ: ಆರ್.ವಿ.ದೇಶಪಾಂಡೆ

    ಈಶ್ವರಪ್ಪನವರಿಗೆ ಈಗ ಅರಿವಾಗುತ್ತಿರುವುದು ಆಶ್ಚರ್ಯ: ಆರ್.ವಿ.ದೇಶಪಾಂಡೆ

    ಕಾರವಾರ: ಬಿಜೆಪಿಯಲ್ಲಿ ಎದ್ದಿರುವ ಗೊಂದಲದ ಬಗ್ಗೆ ಈಶ್ವರಪ್ಪನವರಿಗೆ ಈಗ ಅರಿವಾಗುತ್ತಿರುವುದು ಆಶ್ಚರ್ಯ. ಕಾಂಗ್ರೆಸ್ ಶಾಸಕರನ್ನು ಕರೆದುಕೊಳ್ಳುವ ಮೊದಲೇ ಹಿರಿಯ ರಾಜಕೀಯ ನಾಯಕರಾದ ಅವರಿಗೆ ಅರಿವಿರಬೇಕಿತ್ತು ಎಂದು ಮಾಜಿ ಸಚಿವ ಹಾಲಿ ಶಾಸಕ ಆರ್.ವಿ. ದೇಶಪಾಂಡೆ ಟಾಂಗ್ ನೀಡಿದ್ದಾರೆ.

    ಹಿಸ್ಟರಿ ರಿಪೀಟ್ ಆಗಿದೆ. ವೆಸ್ಟ್ ಬೆಂಗಾಳದಲ್ಲಿಯೂ ಇದೇ ಸ್ಥಿತಿ ನಿರ್ಮಾಣವಾಗಿತ್ತು. ಬಿಜೆಪಿ ವಿಚಾರಧಾರೆ ಒಂದಿರುವಾಗ ನಮ್ಮಲ್ಲಿಂದ ಹೋಗಿರುವವರ ವಿಚಾರಧಾರೆ ಇನ್ನೊಂದಿದೆ. ಇದೀಗ ಇಬ್ಬರ ಹೊಂದಾಣಿಕೆ ಸಾಧ್ಯವಿಲ್ಲ ಎಂದಿದ್ದಾರೆ.

    ನಾನು 1,983 ರಿಂದ ಆಡಳಿತ ಹಾಗೂ ವಿರೋಧ ಪಕ್ಷದಲ್ಲಿದ್ದಾಗ ಇದೆಲ್ಲವನ್ನು ನೋಡುತ್ತಿದ್ದೇನೆ. ಪಕ್ಷಾಂತರವಾದಾಗ ಏನೇನು ದುಷ್ಪರಿಣಾಮವಾಗುತ್ತಿದೆ ಎಂಬುದು ಗೊತ್ತಿದೆ. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಏನಾಗಿದೆ ಅಂದರೆ ಇತ್ತ ಜೊತೆಗೆ ಇದ್ದವರು ಅವರ ಹಾದಿ, ಸಂಸ್ಕೃತಿ ಬಿಡುತ್ತಿಲ್ಲ. ಕಾಂಗ್ರೆಸ್ ನಿಂದ ಬಂದವರಿಗೆ ಅಧಿಕಾರ ಸಿಗುತ್ತಿಲ್ಲ. ಅವರವರ ಕೆಲಸಗಳೂ ಆಗುತ್ತಿಲ್ಲ. ಬಿಜೆಪಿಯಿಂದ ನೂರಕ್ಕೂ ಹೆಚ್ಚು ಜನರು ಆಯ್ಕೆಯಾಗಿದ್ದರು ಮಂತ್ರಿಯಾದವರು 10-12 ಜನ ಮಾತ್ರ. ಇದು ಬಹಳ ಜನರಿಗೆ ನೋವಾಗಿದೆ. ನೂರಾರು ಜನ ಬಂದರು ಪ್ರಾಧಾನ್ಯತೆ ಇಲ್ಲದಂತಾಗಿದೆ. ಇದರ ಮುಂದಾಲೋಚನೆಯನ್ನು ಬಿಜೆಪಿ ಹೈಕಮಾಂಡ್ ಶಾಸಕರನ್ನು ಸೇರಿಸಿಕೊಳ್ಳುವ ಮೊದಲೇ ಮಾಡಬೇಕಿತ್ತು. ಪಕ್ಷಾಂತರಕ್ಕೆ ಉತ್ತೇಜನ ಕೊಡಬಾರದಿತ್ತು. ಸರ್ಕಾರ ಮಾಡಿಕೊಂಡು ಹೋಗಿ ಎಂದು ನಮಗೆ ಹೇಳಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿಕೊಂಡಿದ್ದರಿಂದ ಈ ರೀತಿಯ ಗೊಂದಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಆತ್ಮವಿಶ್ವಾಸ ಕಡಿಮೆಯಾಗಿರುವ ಕಾರಣ ಮುಖ್ಯಮಂತ್ರಿ ಇನ್ನು ಎರಡು ವರ್ಷ ತಾವೇ ಸಿಎಂ ಆಗಿರುವುದಾಗಿ ಹೇಳುತ್ತಿದ್ದಾರೆ. ಇದರ ಪರಿಣಾಮ ಜನಸಾಮಾನ್ಯರ ಮೇಲೆ ಬೀರುತ್ತಿದೆ. ಸರ್ಕಾರದಲ್ಲಿ ಯಾರು ಯಾರ ಮಾತನ್ನು ಕೇಳುತ್ತಿಲ್ಲ. ಭ್ರಷ್ಟಾಚಾರ ಹೆಚ್ಚಾಗಿದೆ. ಇಂತಹ ಪರಿಸ್ಥಿತಿ ಬಗ್ಗೆ ಈಶ್ವರಪ್ಪನವರಿಗೆ ಮೊದಲೇ ಗೊತ್ತಿತ್ತು. ಅವರು ವಿರೋಧ ಮಾಡಿಲ್ಲ. ಇದರಲ್ಲಿ ಅವರದ್ದು ತಪ್ಪಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 17 ಜನ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದ ನಂತರ ಸಣ್ಣ ಸಣ್ಣ ಗೊಂದಲಗಳಾಗಿವೆ: ಕೆ.ಎಸ್.ಈಶ್ವರಪ್ಪ

    ಈಶ್ವರಪ್ಪ ಹೇಳಿದ್ದೇನು?: ಭಾರತೀಯ ಜನತಾ ಪಾರ್ಟಿಗೆ ಪೂರ್ಣ ಬಹುಮತ ಸಿಕ್ಕಿದ್ದರೆ ಮುಖ್ಯಮಂತ್ರಿ ಬದಲಾವಣೆಯ ಗೊಂದಲ ಆಗುತ್ತಿರಲಿಲ್ಲ. 17 ಜನ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದ ನಂತರ ಈ ಸಣ್ಣ ಸಣ್ಣ ಗೊಂದಲವಾಗಿದೆ. ಗೊಂದಲ ನಿರ್ಮಾಣ ಮಾಡಿಕೊಂಡವರು ಪಕ್ಷದ ನಾಯಕರಲ್ಲ. ಚುನಾವಣೆ ಫಲಿತಾಂಶದ ಗೊಂದಲ. ಕೇಂದ್ರ ನಾಯಕ ಅರುಣ್ ಸಿಂಗ್ ಬೆಂಗಳೂರಿಗೆ ಬರುತ್ತಾರೆ ಸಮಸ್ಯೆ ಆಲಿಸಿ ಪರಿಹಾರ ನೀಡುತ್ತಾರೆ. ಯಾರಿಗೆ ಏನು ಅಸಮಧಾನವಿದೆಯೋ ಕೇಂದ್ರದ ನಾಯಕರ ಮುಂದೆ ಹೇಳಿಕೊಳ್ಳುತ್ತಾರೆ ಎಂದು ಸಚಿವ ಈಶ್ವರಪ್ಪ ಹೇಳಿದ್ದರು.

    ಇದೇ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ ಪಾಟೀಲ್‍ರವರು, 17 ಜನ ಬಿಜೆಪಿಗೆ ಬಂದ ಕಾರಣದಿಂದ ಸರ್ಕಾರ ಬಂದಿದೆ. ಸರ್ಕಾರ ಬಂದಿರುವ ಕಾರಣ ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾರೆ. ಈಶ್ವರಪ್ಪ ಆ ರೀತಿ ಹೇಳಿಕೆ ಕೊಟ್ಟಿದ್ದರೆ ಇದು ಸರಿಯಲ್ಲ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ:  ನಾವು ಬಿಜೆಪಿಗೆ ಬಂದಿದ್ದಕ್ಕೆ ಈಶ್ವರಪ್ಪ ಮಿನಿಸ್ಟರ್ ಆಗಿದ್ದು: ಬಿ.ಸಿ.ಪಾಟೀಲ್ ತಿರುಗೇಟು

  • ಎಷ್ಟಾದರೂ ಖರ್ಚು ಮಾಡಿ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಿ- ಅಧಿಕಾರಿಗಳಿಗೆ ದೇಶಪಾಂಡೆ ಎಚ್ಚರಿಕೆ

    ಎಷ್ಟಾದರೂ ಖರ್ಚು ಮಾಡಿ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಿ- ಅಧಿಕಾರಿಗಳಿಗೆ ದೇಶಪಾಂಡೆ ಎಚ್ಚರಿಕೆ

    -ತಪ್ಪು ಮಾಹಿತಿ ನೀಡಿದ್ದ ಅಧಿಕಾರಿಗೆ ಖಡಕ್ ವಾರ್ನಿಂಗ್

    ಚಾಮರಾಜನಗರ: ಎಷ್ಟು ಹಣ ಬೇಕದರೂ ಖರ್ಚು ಮಾಡಿ. ಯಾವುದೇ ಕಾರಣಕ್ಕೂ ಜನರು ಗುಳೇ ಹೋಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಆರ್ ವಿ ದೇಶಪಾಂಡೆ ಅವರು ಬರ ಪರಿಶೀಲನಾ ಸಭೆಯಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಜಿಲ್ಲೆಯಲ್ಲಿನ ಕೊಳವೆಬಾವಿಗಳ ಬಗ್ಗೆ ಸರಿಯಾದ ಮಾಹಿತಿ ನೀಡಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ರವಿಕುಮಾರ್ ಗೆ ದೇಶಪಾಂಡೆ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಭೆಯ ಮುಂಭಾಗಕ್ಕೆ ಕರೆಸಿ ಅಧಿಕಾರಿಗೆ ಸಚಿವರು ಕ್ಲಾಸ್ ತೆಗೆದುಕೊಂಡಿದ್ದಾರೆ. 4 ಸಾವಿರ ಕೊಳವೆ ಬಾವಿ ಇವೆ, 6 ಸಾವಿರ ಚಾಲ್ತಿಯಲ್ಲಿ ಇವೆ ಎಂದು ತಪ್ಪು ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದರು. ಹೀಗಾಗಿ ಬರದ ನಡುವೆ ನೀರಿಗಾಗಿ ಜನ ಪರಿತಪಿಸುತ್ತಿರುವಾಗ ತಪ್ಪು ಮಾಹಿತಿ ನೀಡಿದಕ್ಕೆ ಸಚಿವರು ಗರಂ ಆಗಿ ಅಧಿಕಾರಿಗೆ ಎಚ್ಚರಿಗೆ ನೀಡಿದರು.

    ಯಾವುದೇ ಕಾರಣಕ್ಕೂ ಜನರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗಬಾರದು. ಎಷ್ಟು ಹಣ ಬೇಕದರೂ ಖರ್ಚು ಮಾಡಿ. ಯಾವುದೇ ಕಾರಣಕ್ಕೂ ಜನರು ಗುಳೇ ಹೋಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ದೇಶಪಾಂಡೆ ಅವರು ಸೂಚಿಸಿದರು.

    ನಾವು ಕೇಳಿದರೆ ತುಂಬ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಹೇಳುತ್ತೀರಾ ಆದ್ರೆ ಕಂದಾಯ ಸಚಿವರ ಮುಂದೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳುತ್ತೀರಾ ಎಂದು ಹನೂರು ಶಾಸಕ ನರೇಂದ್ರ ಕೂಡ ಅಧಿಕಾರಿಯ ತರಾಟೆ ತೆಗೆದುಕೊಂಡರು.

    ಅಷ್ಟೇ ಅಲ್ಲದೆ ಜುಲೈನಲ್ಲಿ ಮೋಡ ಬಿತ್ತನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ರೈತರು ಸಂಕಷ್ಟದಲ್ಲಿ ಇದ್ದಾರೆ. ಮುಂದಿನ ತಿಂಗಳು ಮೋಡ ಬಿತ್ತನೆ ಮಾಡಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ಹುಬ್ಬಳ್ಳಿ ಮತ್ತು ಬೆಂಗಳೂರಿನಲ್ಲಿ ಎರಡು ಕೇಂದ್ರಗಳನ್ನಾಗಿ ಮಾಡಲಾಗಿದೆ. ಟೆಕ್ನಿಕಲ್ ಟೀಮ್ ಎಲ್ಲಿ ಮೋಡ ಬಿತ್ತನೆ ಮಾಡಬೇಕೆಂದು ತೀರ್ಮಾನ ಮಾಡುತ್ತದೆ. ಚಾಮರಾಜನಗರದಲ್ಲೂ ಮೋಡ ಬಿತ್ತನೆ ಮಾಡಲು ಅವಕಾಶವಿದೆ. ಇದಕ್ಕೆ ಜಿಲ್ಲಾಧಿಕಾರಿ ಪ್ರಸ್ತಾವನೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ ನೇಮಕ: ಬಹುಮತ ಸಾಬೀತಿಗೂ ಮುನ್ನ ಜೆಡಿಎಸ್ ರೆಬೆಲ್ ಶಾಸಕರು ಅನರ್ಹ?

    ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ ನೇಮಕ: ಬಹುಮತ ಸಾಬೀತಿಗೂ ಮುನ್ನ ಜೆಡಿಎಸ್ ರೆಬೆಲ್ ಶಾಸಕರು ಅನರ್ಹ?

    ಬೆಂಗಳೂರು: ಕರ್ನಾಟಕ ಪೊಲಿಟಿಕಲ್ ಲೀಗ್ ಕ್ಷಣಕ್ಕೂ ರೋಚಕ ತಿರುವು ಪಡೆದಕೊಳ್ಳುತ್ತಿದ್ದು, ಹಂಗಾಮಿ ಸ್ಪೀಕರ್ ಆಗಿ ಕೊಡಗಿನ ವಿರಾಜಪೇಟೆಯ ಶಾಸಕ ಬೋಪಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ.

    ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಿಆರ್ ವಾಲಾ, ಬೋಪಯ್ಯ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಈ ಮೂಲಕ ಎರಡನೇ ಬಾರಿ ಸ್ಪೀಕರ್ ಹುದ್ದೆಯನ್ನು ಬೋಪಯ್ಯ ಅಲಂಕರಿಸಿದ್ದಾರೆ.

    ಸಾಧಾರಣವಾಗಿ ವಿಧಾನಸಭೆಯ ಹಿರಿಯ ಸದಸ್ಯರನ್ನು ಸ್ಪೀಕರ್ ಆಗಿ ನೇಮಕ ಮಾಡಲಾಗುತ್ತದೆ. ಹೀಗಾಗಿ ದೇಶಪಾಂಡೆ ಅವರನ್ನು ನೇಮಕ ಮಾಡಲಾಗುತ್ತದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಈಗ ಬೋಪಯ್ಯ ಅವರನ್ನು ನೇಮಕ ಮಾಡುವ ಮೂಲಕ ಬಿಜೆಪಿ ರಣತಂತ್ರ ಹೆಣೆದಿದ್ದು ಕಾಂಗ್ರೆಸ್ ಸೇರಿದ್ದ ಮೂವರು ಜೆಡಿಎಸ್ ಶಾಸಕರು ಬಹುಮತ ಸಾಬೀತಿಗೂ ಮುನ್ನ ಅನರ್ಹರಾಗುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.

    ಈ ವಿಚಾರದ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಮಾಜಿ ಅಡ್ವೊಕೇಟ್ ಜನರಲ್ ಅಶೋಕ್ ಹಾರನಹಳ್ಳಿ, ಹಂಗಾಮಿ ಸ್ಪೀಕರ್ ಅವರಿಗೆ ಶಾಸಕರನ್ನು ಅನರ್ಹ ಮಾಡುವ ಅಧಿಕಾರ ಇಲ್ಲ. ಅಷ್ಟೇ ಅಲ್ಲದೇ ಇವರು ವಿಚಾರಣೆಯೇ ನಡೆಸಿಲ್ಲ. ವಿಚಾರಣೆ ನಡೆಸದೇ ಅನರ್ಹಗೊಳಿಸಲು ಸಾಧ್ಯವಿಲ್ಲ. ಆದದ್ದು ಆಗಲಿ ಮುಂದೆ ಏನಾಗುತ್ತದೋ? ಆದದ್ದು ಆಗಲಿ ಎಂದು ಭಾವಿಸಿ ಧೈರ್ಯ ಮಾಡಿ ಅನರ್ಹ ಮಾಡಿದರೆ ಸದನದಲ್ಲಿ ಸಂಖ್ಯಾಬಲ ಕಡಿಮೆಯಾಗುತ್ತದೆ. ಈಗ ಅನರ್ಹ ಮಾಡಿದರೂ ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಬಹುದು ಎಂದು ತಿಳಿಸಿದರು.

    ಏನಿದು ಪ್ರಕರಣ?
    ಜೆಡಿಎಸ್ ಶಾಸಕರಾಗಿದ್ದ ಜಮೀರ್ ಅಹ್ಮದ್, ಚೆಲುವರಾಯಸ್ವಾಮಿ, ಭೀಮಾ ನಾಯ್ಕ್, ಮಾಗಡಿ ಬಾಲಕೃಷ್ಣ, ಇಕ್ಬಾಲ್ ಅನ್ಸಾರಿ, ಅಖಂಡ ಶ್ರೀನಿವಾಸ್ ಮೂರ್ತಿ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದರು. ಇದನ್ನು ಪ್ರಶ್ನಿಸಿ ಜೆಡಿಎಸ್ ಸ್ಪೀಕರ್ ಗೆ ದೂರು ನೀಡಿತ್ತು. ಸ್ಪೀಕರ್ ಕೋಳಿವಾಡ ಅವರು ಪ್ರಕರಣದ ವಿಚಾರಣೆ ನಡೆಸಿದ್ದರು. ಚುನಾವಣೆ ದಿನಾಂಕ ಪ್ರಕಟವಾದರೂ ತನ್ನ ತೀರ್ಪನ್ನು ಪ್ರಕಟಿಸದ ಕಾರಣ ಜೆಡಿಎಸ್ ಹೈಕೋರ್ಟ್ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮೇ 7ರ ಒಳಗಡೆ ತೀರ್ಪು ನೀಡುವಂತೆ ಆದೇಶಿಸಿತ್ತು.

    ಸ್ಪೀಕರ್ ಚರ್ಚೆ:
    ನಂಬರ್ ಗೇಮ್ ನಲ್ಲಿ ಸ್ಪೀಕರ್ ಬೋಪಯ್ಯ ಅವರು ಜೆಡಿಎಸ್ ರೆಬೆಲ್ ಶಾಸಕರಾಗಿದ್ದ ಅಖಂಡ ಶ್ರೀನಿವಾಸ ಮೂರ್ತಿ, ಭೀಮಾನಾಯ್ಕ ಮತ್ತು ಜಮೀರ್ ಅಹ್ಮದ್ ಅವರನ್ನು ಅನರ್ಹಗೊಳಿಸುವ ಸಾಧ್ಯತೆಯಿದೆ. ಈ ಬಗ್ಗೆ ಕಾನೂನು ತಜ್ಞರ ಸ್ಪೀಕರ್ ಚರ್ಚೆ ನಡೆಸುತ್ತಿದ್ದಾರೆ.

    ಜಮೀರ್ ಅಹ್ಮದ್ ಚಾಮರಾಜಪೇಟೆ, ಪುಲಿಕೇಶಿ ನಗರದಿಂದ ಅಖಂಡ ಶ್ರೀನಿವಾಸಮೂರ್ತಿ, ಭೀಮಾನಾಯ್ಕ್ ಹಗರಿಬೊಮ್ಮನಹಳ್ಳಿ ಕ್ಷೇತ್ರದಿಂದ ಜಯಗಳಿಸಿದ್ದರು.

  • ಬೆಂಗಳೂರನ್ನು ದೇಶದ 2ನೇ ರಾಜಧಾನಿ ಮಾಡಿ- ಮೋದಿ ಸರ್ಕಾರಕ್ಕೆ ಕರ್ನಾಟಕದ ಪತ್ರ

    ಬೆಂಗಳೂರನ್ನು ದೇಶದ 2ನೇ ರಾಜಧಾನಿ ಮಾಡಿ- ಮೋದಿ ಸರ್ಕಾರಕ್ಕೆ ಕರ್ನಾಟಕದ ಪತ್ರ

    ಬೆಂಗಳೂರು: ನಮ್ಮ ಹೆಮ್ಮೆಯ ಬೆಂಗಳೂರನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಘೋಷಿಸುವಂತೆ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

    ಭಾರತದಲ್ಲಿ ಎಲ್ಲಾ ಭಾಷೆಗಳನ್ನೂ ಆಡುವ ಜನರು ಸಿಲಿಕಾನ್ ಸಿಟಿಯಲ್ಲಿ ನೆಲೆಸಿದ್ದಾರೆ. ತಾಂತ್ರಿಕ, ವೈದ್ಯಕೀಯ, ಏರೋಸ್ಪೇಸ್, ಮಾಹಿತಿ-ತಂತ್ರಜ್ಞಾನ, ಸಂಗೀತ, ಸಾಹಿತ್ಯ ಹೀಗೆ ಎಲ್ಲಾ ಕ್ಷೇತ್ರಗಳ ಸಾಧಕರು ಇಲ್ಲಿದ್ದಾರೆ. ದೇಶದ 2ನೇ ರಾಜಧಾನಿಗೆ ಬೆಂಗಳೂರಿಗಿಂತ ಒಳ್ಳೆಯ ನಗರ ಮತ್ತೊಂದಿಲ್ಲ ಅಂತ ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

    ಬೆಂಗಳೂರು 2ನೇ ರಾಜಧಾನಿಯಾದರೆ ದಕ್ಷಿಣದ ರಾಜ್ಯಗಳಿಗೆ ನೆರವಾಗುತ್ತದೆ. ಅಷ್ಟೇ ಅಲ್ಲದೇ ಇಲ್ಲೇ ಚಳಿಗಾಲದ ಸಂಸತ್ ಅಧಿವೇಶನ ನಡೆಸಬಹುದು. ಸುಪ್ರೀಂಕೋರ್ಟ್ ಪೀಠ, ಯುಪಿಎಸ್‍ಸಿ ಕಚೇರಿ, ವಿದೇಶಗಳ ವೀಸಾ ಕಚೇರಿಗಳನ್ನು ತೆರೆಯಬಹುದು ಎಂದು ದೇಶಪಾಂಡೆ ಪತ್ರದಲ್ಲಿ ಹೇಳಿದ್ದಾರೆ.