Tag: ದೇಶ ಸೇವೆ

  • ಮದ್ವೆಯಾದ 2 ವರ್ಷಕ್ಕೆ ಪತಿ ಸೇನೆಯಲ್ಲಿ ಹುತಾತ್ಮರಾದ್ರು ಧೃತಿಗೆಡದೇ ಸೇನೆ ಸೇರಿದ ಪತ್ನಿ

    ಮದ್ವೆಯಾದ 2 ವರ್ಷಕ್ಕೆ ಪತಿ ಸೇನೆಯಲ್ಲಿ ಹುತಾತ್ಮರಾದ್ರು ಧೃತಿಗೆಡದೇ ಸೇನೆ ಸೇರಿದ ಪತ್ನಿ

    ಜಮ್ಮುಕಾಶ್ಮೀರ: ದೇಶಕ್ಕಾಗಿ ಸೇವೆ ಸಲ್ಲಿಸುತ್ತಿದ್ದ ಪತಿ ಕರ್ತವ್ಯದ ವೇಳೆಯೇ ಹುತಾತ್ಮದರಾದರು ಎದೆಗುಂದದ ಪತ್ನಿ ಕಠಿಣ ತರಬೇತಿ ಪಡೆದು ಸೇನೆ ಸೇರಿ ಆದರ್ಶ ಮೆರೆದಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.

    ಪತಿ ಹುತಾತ್ಮರಾದ ಬಳಿಕ ಸೇನೆಗೆ ಆಯ್ಕೆ ಆಗಿರುವ ದಿಟ್ಟ ಮಹಿಳೆಯ ಹೆಸರು ನೀರು ಸಂಬ್ಯಾಲ್. ಅವರ ಪತಿ ರವೀಂದರ್ ಸಿಂಗ್ ಸಂಬ್ಯಾಲ್ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 2013 ಇಬ್ಬರ ಮದುವೆಯಾಗಿತ್ತು. ಆದರೆ ಮದುವೆಯಾದ 2 ವರ್ಷಗಳಲ್ಲಿ ಪತಿ ಕರ್ತವ್ಯದಲ್ಲಿದ್ದ ವೇಳೆಯೇ ಹುತಾತ್ಮರಾಗಿದ್ದರು. ಆ ವೇಳೆಗೆ ಅವರಿಗೆ ಮುದ್ದಾದ 1 ವರ್ಷದ ಮಗುವಿತ್ತು. ಆದರೆ ಅಂತಕ ಕಠಿಣ ಸಮಯದಲ್ಲಿ ದಿಟ್ಟ ನಿರ್ಧಾರ ಮಾಡಿ ಸೇನೆಗೆ ಸೇರಿ ಪತಿಯಂತೆ ದೇಶ ಸೇವೆ ಮಾಡುವ ಕನಸು ಕಂಡಿದ್ದರು. ಪ್ರಸ್ತುತ ನೀರು ಅವರ ತರಬೇತಿ ಅವಧಿ ಪೂರ್ಣಗೊಂಡಿದ್ದು, ಸೇನೆಯಲ್ಲಿ ಲೆಫ್ಟಿನೆಂಟ್ ಹುದ್ದೆ ಪಡೆದಿದ್ದಾರೆ.

    ಈ ವೇಳೆ ತಮ್ಮ ಜೀವನದ ಕುರಿತು ಮಾತನಾಡಿರುವ ಅವರು, ಲೆಫ್ಟಿನೆಂಟ್ ರೈಫಲ್‍ಮೆನ್ ರವೀಂದರ್ ಸಿಂಗ್‍ರನ್ನು ಮದುವೆಯಾದ ಬಳಿಕ 2 ವರ್ಷಕ್ಕೆ ಅವರು ನನ್ನನ್ನು ಬಿಟ್ಟು ಹೋದರು. ಆ ವೇಳೆ ದಿಕ್ಕು ತೋಚದ ಸ್ಥಿತಿಯಲ್ಲಿದೆ. ಆದರೆ ನನ್ನ ಮಗಳು ನನಗೆ ಸ್ಫೂರ್ತಿಯಾದಳು. ನನ್ನ ಮಗಳು ತಂದೆಯ ಬಗ್ಗೆ ಹೆಮ್ಮೆ ಪಡುವಂತೆ ಮಾಡಲು ಅಂದು ನಿರ್ಧರಿಸಿದ್ದೇ. ಸದ್ಯ ನಾನು 49 ವಾರಗಳ ಕಾಲ ಸೇನೆಯ ತರಬೇತಿ ಅವಧಿಯನ್ನು ಪೂರ್ಣಗೊಳಿಸಿದ್ದೇನೆ. ಸೆಪ್ಟೆಂಬರ್ 8 ರಂದು ಕರ್ತವ್ಯಕ್ಕೆ ಹಾಜರಾಗುವ ಆದೇಶ ಪತ್ರ ಸಿಕ್ಕಿದೆ. ಸೇನೆಯಲ್ಲಿ ಇರಲು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಡರಾಗಿರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

    ಲೆ. ನೀರು ಸಂಬ್ಯಾಲ್ ಅವರಿಗೆ ಅವರ ನಿರ್ಧಾರದ ಹಾಗೂ ಸಾಧನೆಯ ಹಿಂದೆ ಕುಟುಂಬಸ್ಥರ ಬೆಂಬಲವೂ ಇದ್ದು, ಅವರ ಕನಸಿಗೆ ಬೆಂಬಲ ನೀಡಿದ್ದಾರೆ. ಈ ಕುರಿತು ಪತ್ರಿಕ್ರಿಯೆ ನೀಡಿರುವ ಲೆ. ನೀರು ಅವರ ತಂದೆ ದರ್ಶನ್ ಸಿಂಗ್, ನನ್ನ ಮಗಳ ನಿರ್ಧಾರಕ್ಕೆ ಬೇಕಾದ ಎಲ್ಲಾ ಬೆಂಬಲವನ್ನ ನೀಡಿದ್ದು, ಆಕೆ ಸೇನೆಗೆ ಸೇರುವ ತೀರ್ಮಾನ ಹಾಗೂ ಸಾಧನೆಯಿಂದ ಸಂತಸದೊಂದಿಗೆ ಹೆಮ್ಮೆ ಅನಿಸುತ್ತಿದೆ. ಮಗಳ ಪತಿಯ ಕುಟುಂಬಸ್ಥರು ಆಕೆಯ ನಿರ್ಧಾರವನ್ನು ಬೆಂಬಲಿಸಿದ್ದಾರೆ. ಅವರು ಈ ಸಾಧನೆ ಹಿಂದಿದ್ದಾರೆ ಎಂದು ತಿಳಿಸಿದ್ದಾರೆ.

    ನನ್ನ ಪುತ್ರಿಯೊಂದಿಗೆ 26 ಮಂದಿ ಮಹಿಳೆಯರು ಶಸ್ತ್ರ ಸೇವಾ ದಳ (ಎಸ್‍ಎಸ್‍ಬಿ) ಪರೀಕ್ಷೆಯಲ್ಲಿ ಆಯ್ಕೆ ಆಗಿದ್ದಾರೆ. ಅವರ ಶ್ರಮ ಹಾಗೂ ದಿಟ್ಟ ಹೋರಾಟ ನಮಗೆ ಸಂತಸ ತಂದಿದೆ. ಒಬ್ಬ ತಂದೆಯಾಗಿ ನನಗೆ ಇದಕ್ಕಿಂತ ಬೇರೆ ಏನು ಬೇಕಿದೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ನೀವು ಬೇಕಾದ್ರೆ ಗುಂಡಿಟ್ಟು ಕೊಲ್ಲಬಹುದು. ಆದ್ರೆ ಸೇನಾ ಮಾಹಿತಿ ನೀಡಲ್ಲ: ಉಗ್ರರ ಗುಂಡೇಟಿಗೆ ಬಲಿಯಾದ ಯೋಧನ ಕೊನೆಯ ಮಾತು

    ನೀವು ಬೇಕಾದ್ರೆ ಗುಂಡಿಟ್ಟು ಕೊಲ್ಲಬಹುದು. ಆದ್ರೆ ಸೇನಾ ಮಾಹಿತಿ ನೀಡಲ್ಲ: ಉಗ್ರರ ಗುಂಡೇಟಿಗೆ ಬಲಿಯಾದ ಯೋಧನ ಕೊನೆಯ ಮಾತು

    ಶ್ರೀನಗರ: “ನೀವು ಬೇಕಿದ್ದರೆ ನನ್ನನ್ನು ಗುಂಡಿಕ್ಕಿ ಕೊಂದು ಬಿಡಿ. ಆದರೆ ನಾನು ಯಾವುದೇ ಕಾರಣಕ್ಕೂ ಸೇನೆಯ ಮಾಹಿತಿಯನ್ನು ಬಹಿರಂಗ ಪಡಿಸುವುದಿಲ್ಲ”. ಇದು ಉಗ್ರರ ಗುಂಡೇಟಿಗೆ ಬಲಿಯಾದ ಲ್ಯಾನ್ಸ್ ನಾಯಕ್ ಮುಕ್ತಾರ್ ಅಹ್ಮದ್ ಮಲ್ಲಿಕ್ ಅವರ ಕೊನೆಯ ಮಾತು.

    ಮುಕ್ತಾರ್ ಅವರ ಮಗ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗೆ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಗ ನಾಲ್ಕು ದಿನದ ಬಳಿಕ ಸೆಪ್ಟೆಂಬರ್ 15 ರಂದು ಮೃತಪಟ್ಟಿದ್ದರು.

    ಮಗ ಮೃತಪಟ್ಟ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಕ್ತಾರ್ ಅಹ್ಮದ್ ಕುಲ್ಗಾಂಗೆ ಬಂದಿದ್ದರು. ಸೋಮವಾರ ಕುಟುಂಬದ ಸದಸ್ಯರು ಅಂತ್ಯಸಂಸ್ಕಾರದ ಸಿದ್ಧತೆ ನಡೆಸುತ್ತಿದ್ದಾಗ ಪತ್ರಕರ್ತರ ವೇಷವನ್ನು ಧರಿಸಿ ಮೂವರು ಉಗ್ರರು ಮನೆಯನ್ನು ಪ್ರವೇಶಿಸಿದ್ದಾರೆ.

    ಮಗನ ಅಂತ್ಯಸಂಸ್ಕಾರ ನಡೆಸುತ್ತಿದ್ದಾಗ ಉಗ್ರರು ತಮ್ಮ ನಿಜ ರೂಪವನ್ನು ತೋರಿಸಿ ಸೇನೆಗೆ ಸಂಬಂಧಿಸಿದ ಪ್ರಶ್ನೆ ಕೇಳಿ ಮಾಹಿತಿ ನೀಡುವಂತೆ ಮಲ್ಲಿಕ್ ಅವರನ್ನು ಬಲವಂತ ಪಡಿಸಿದ್ದಾರೆ. ಆದರೆ ಮಲ್ಲಿಕ್ ಅವರು, ನೀವು ಬೇಕಾದರೆ ನನ್ನನ್ನು ಗುಂಡಿಟ್ಟು ಹತ್ಯೆ ಮಾಡಬಹುದು. ಆದರೆ ನಾನು ಯಾವುದೇ ಕಾರಣಕ್ಕೂ ಸೇನೆಯ ಮಾಹಿತಿಯನ್ನು ನೀಡುವುದಿಲ್ಲ ಎಂದು ಖಂಡತುಂಡವಾಗಿ ಹೇಳಿದ್ದಾರೆ. ನಿರೀಕ್ಷೆ ಮಾಡದ ಉತ್ತರ ಬಂದ ಹಿನ್ನೆಲೆಯಲ್ಲಿ ಮೂವರು ಉಗ್ರರು ಮಲ್ಲಿಕ್ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು.

    ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಮರ್ ಮಜೀದ್, ಓವೈಸಿ ರಾಜಾ, ಜಾವೀದ್ ಭಟ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು ಅವರ ಶೋಧ ಕಾರ್ಯ ಆರಂಭಗೊಂಡಿದೆ.

    ಭಾರತೀಯ ಸೇನೆ ಉಗ್ರರ ಕಾರ್ಯಯೋಜನೆಗಳನ್ನು ವಿಫಲ ಮಾಡುತ್ತಿರುವ ಹಿನ್ನೆಲೆಯಲ್ಲಿ ಉಗ್ರರು ಈಗ ಕಾಶ್ಮೀರದ ಸೈನಿಕರ ಕುಟುಂಬಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಕಾಶ್ಮೀರದ ಸೈನಿಕರನ್ನು ಹತ್ಯೆ ಮಾಡಲು ಮುಂದಾಗುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಐಎಎಸ್ ಕನಸು ಕಾಣುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ ಕುಟುಂಬದಿಂದ ಗುಡ್‍ನ್ಯೂಸ್

    ಐಎಎಸ್ ಕನಸು ಕಾಣುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ ಕುಟುಂಬದಿಂದ ಗುಡ್‍ನ್ಯೂಸ್

    ಬೆಂಗಳೂರು: ಐಎಎಸ್, ಐಪಿಎಎಸ್ ಹುದ್ದೆಯ ಕನಸು ಕಾಣುತ್ತಿರುವ ಕರ್ನಾಟಕದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್. ಡಾ.ರಾಜ್ ಕುಮಾರ್ ಹೆಸರಿನಲ್ಲಿ ಸಿವಿಲ್ ಸರ್ವಿಸ್ ಅಕಾಡೆಮಿ ಸ್ಥಾಪಿಸಲು ರಾಜ್ ಕುಟುಂಬ ಮುಂದಾಗಿದೆ.

    ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಘವೇಂದ್ರ ರಾಜ್‍ಕುಮಾರ್, ದೇಶ ನಮ್ಮ ಕುಟುಂಬಕ್ಕೆ ಎಲ್ಲವನ್ನು ನೀಡಿದೆ. ಅದ್ದರಿಂದ ಈಗ ನಾವು ದೇಶಕ್ಕೆ ಸೇವೆ ಸಲ್ಲಿಸಲು ರಾಜ್ ಹೆಸರಿನಲ್ಲಿ ಸಿವಿಲ್ ಸರ್ವಿಸ್ ಅಕಾಡೆಮಿ ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದು ಅವರು ತಿಳಿಸಿದರು.

    ಕರ್ನಾಟಕದಿಂದ ಸಿವಿಲ್ ಸರ್ವೀಸ್ ಗೆ ಆಯ್ಕೆಯಾಗುವವರ ಸಂಖ್ಯೆ ತುಂಬಾ ವಿರಳವಾಗಿದೆ. ನಮ್ಮ ವಿದ್ಯಾರ್ಥಿಗಳು ದೂರದ ರಾಜ್ಯಕ್ಕೆ ಹೋಗಿ ತರಬೇತಿ ಪಡೆಯುವ ಸ್ಥಿತಿ ಇರುವ ಕಾರಣ ನಮ್ಮ ರಾಜ್ಯದಲ್ಲೇ ತರಬೇತಿ ನೀಡಲು ಈ ಅಕಾಡೆಮಿ ಸ್ಥಾಪನೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

    ನಮ್ಮ ಕೇಂದ್ರದಿಂದ ಅಭ್ಯರ್ಥಿಗಳಿಗೆ ಬೇರೆ ಕೇಂದ್ರಗಳಿಗಿಂತ ಶೇ.50ರಿಂದ ಶೇ.60 ರಷ್ಟು ಕಡಿಮೆ ವೆಚ್ಚದಲ್ಲಿ ತರಬೇತಿ ನೀಡಲಾಗುವುದು. ಮಾರ್ಚ್ 5 ರಂದು ಸಿಎಂ ಸಿದ್ದರಾಮಯ್ಯ ನವರು ಅಧಿಕೃತವಾಗಿ ಅಕಾಡೆಮಿಗೆ ಚಾಲನೆ ನೀಡಲಿದ್ದು, ಏಪ್ರಿಲ್ 24ರಿಂದ ತರಗತಿಗಳು ಆರಂಭವಾಗಲಿದೆ. ನುರಿತ ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವುದು ಎಂದು ರಾಘವೇಂದ್ರ ರಾಜ್ ಕುಮಾರ್ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು.