Tag: ದೇಹದಾನ

  • ದೇಹದಾನ, ಅಂಗಾಂಗದಾನಕ್ಕೆ ಮುಂದಾಗಿ ಮಾದರಿಯಾದ ನಟ ರಾಜವರ್ಧನ್

    ದೇಹದಾನ, ಅಂಗಾಂಗದಾನಕ್ಕೆ ಮುಂದಾಗಿ ಮಾದರಿಯಾದ ನಟ ರಾಜವರ್ಧನ್

    ನುಷ್ಯ ಸತ್ತ ಮೇಲೂ ಸಾರ್ಥಕ ಬಾಳು ಬಾಳಬೇಕು ಅಂದ್ರೆ ದೇಹ ಮಣ್ಣಾಗುವ ಬದಲು ದೇಹದಾನ (Body Donate) ಮಾಡಬೇಕೆಂದು ಹೇಳ್ತಾರೆ. ಇದೀಗ ಯುವ ನಟ ರಾಜವರ್ಧನ್ (Actor Rajavardhan) ಅಂತಹದ್ದೇ ಕಾರ್ಯಕ್ಕೆ ಮುಂದಾಗಿದ್ದಾರೆ. ದೇಹದಾನ ಮಾಡಲು ಒಪ್ಪಿರುವ ನಟ ಇತರರಿಗೆ ಮಾದರಿಯಾಗಿದ್ದಾರೆ.

    ಅಂಗಾಂಗ ಬೇಡಿಕೆಯುಳ್ಳವರ ಉಪಯೋಗಕ್ಕೆ ಬರುವುದನ್ನ ತೀರ್ಮಾನಿಸುವುದು ನಮ್ಮ ಕೈಯಲ್ಲಿರುತ್ತದೆ. ದಿವಂಗತ ನಟ ಲೋಕೇಶ್ ಸೇರಿದಂತೆ ಹಲವರು ದೇಹದಾನ ಮಾಡಿ ಸಾರ್ಥಕರಾಗಿದ್ದಾರೆ. ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಕೂಡ ನೇತ್ರದಾನ ಮಾಡಿ ಮಾದರಿಯಾಗಿದ್ದರು. ಇದೇ ಹಾದಿಯಾಗಿ ನಟ ರಾಜವರ್ಧನ್ ಅವರು ಅಂಗಾಂಗ ದಾನ ಮಾಡೋದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್ – ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್

    ನೇತ್ರದಾನಕ್ಕೆ (Eye Donate) ಅನೇಕರಿಗೆ ಸ್ಫೂರ್ತಿಯಾದವರು ಡಾ.ರಾಜ್‌ಕುಮಾರ್, ದೇಹದಾನವೂ ಇನ್ನೂ ಶ್ರೇಷ್ಠವಾದ ದಾನ. ಉಸಿರು ಚೆಲ್ಲಿದ ಮೇಲೆ ಆರೋಗ್ಯವಂತ ಅಂಗಾಂಗ ಮಣ್ಣಾಗೋ ಬದಲು ಉಪಯುಕ್ತರಿಗೆ ಜೀವ ನೀಡಿದ್ರೆ ಎಷ್ಟೋ ಜನರನ್ನ ಉಳಿಸಬಹುದು. ದಾನಿಗಳು ಸತ್ತ ಮೇಲೂ ನಮ್ಮೊಂದಿಗೆ ಬದುಕುತ್ತಾರೆ. ಇದನ್ನೂ ಓದಿ: `ಕೆಲಸ ಇದೆ ಮತ್ತೆ ಸಿಗ್ತೀನಿ’ ಅಂತ ಇನ್‌ಸ್ಟಾದಿಂದ ದಿಢೀರ್ ದೂರಾದ ರಾಜ್ ಬಿ ಶೆಟ್ಟಿ

    ಇದೀಗ ನಟ ರಾಜವರ್ಧನ್ ಬಿಜಿಎಸ್ ಆಸ್ಪತ್ರೆ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮವೊಂದರರಲ್ಲಿ ಪಾಲ್ಗೊಂಡು ಅದೇ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಹಾಗೂ ದೇಹದಾನ ಮಾಡೋದಾಗಿ ಘೋಷಿಸಿದ್ದಾರೆ. ಅಂದಹಾಗೆ ರಾಜವರ್ಧನ್ ತಂದೆ ಡಿಂಗ್ರಿ ನಾಗರಾಜ್ ಕೂಡ ದೇಹದಾನ ಮಾಡಿದ್ದಾರೆ.

  • ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ದೇಹದಾನ ಮಾಡಿ ಸಾರ್ಥಕತೆ ಮೆರೆದ ಅಭಿಮಾನಿ ಶಿಲ್ಪಾ

    ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ದೇಹದಾನ ಮಾಡಿ ಸಾರ್ಥಕತೆ ಮೆರೆದ ಅಭಿಮಾನಿ ಶಿಲ್ಪಾ

    ಉಡುಪಿ: ಪ್ರಧಾನಿ ನರೇಂದ್ರಮೋದಿ (Narendra Modi) ಅವರಿಗಿಂತಲೂ ಅಭಿಮಾನಿಗಳೇ ಅವರ ಹುಟ್ಟುಹಬ್ಬದ (Birthday) ಸಂಭ್ರಮದಲ್ಲಿದ್ದಾರೆ. ವಿವಿಧ ರೀತಿಯಲ್ಲಿ ಸಮಾಜಮುಖಿ ಕಾರ್ಯಗಳನ್ನು (Social Activities) ಮಾಡುವ ಮೂಲಕ ತಮ್ಮ ಅಭಿಮಾನ ತೋರುತ್ತಿದ್ದಾರೆ. ಹಾಗೆಯೇ ಉಡುಪಿಯ ಅಭಿಮಾನಿ ಶಿಲ್ಪಾ ಸಾಲಿಯಾನ್ (Shilpa Saliyan) ಅವರು ಮೋದಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದೇಹದಾನ ಮಾಡಿದ್ದಾರೆ.

    ಮೋದಿಗಾಗಿ ಪೂಜೆ ಹೋಮ ಹವನ:
    ಪ್ರಧಾನಿ ಮೋದಿ (Prime Minister) ಹುಟ್ಟುಹಬ್ಬ ದೇಶದಲ್ಲಿ ಒಂದು ವಾರ ಆಚರಣೆಯಾಗಲಿದೆ. ಪ್ರಧಾನಿ ಮೋದಿಗೆ ದೇಶಾದ್ಯಂತ ಹುಚ್ಚು ಅಭಿಮಾನಿಗಳಿದ್ದಾರೆ. ಈ ನಡುವೆ ಉಡುಪಿಯ ಅಪ್ಪಟ ಅಭಿಮಾನಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ದಿನ ತನ್ನ ದೇಹವನ್ನು ದಾನ ಮಾಡಿದ್ದಾರೆ. ಮಣಿಪಾಲ ಕೆಎಂಸಿ (Manipala KMC Hospital) ವೈದ್ಯಕೀಯ ವಿಭಾಗಕ್ಕೆ ತನ್ನ ದೇಹದಾನ ಮಾಡುವುದಾಗಿ ಸಹಿ ಹಾಕಿದ್ದಾರೆ. ಇದನ್ನೂ ಓದಿ: ಮಹತ್ತರವಾದ ಕಾರಣಕ್ಕಾಗಿ ಮತ್ತೆ ಕ್ರಿಕೆಟ್ ಆಡಲು ಮೈದಾನಕ್ಕಿಳಿದ ಲೆಜೆಂಡ್ ಕ್ರಿಕೆಟಿಗರು

    ದೇಹದಾನಕ್ಕಿದೆ ಕಟ್ಟುನಿಟ್ಟಿನ ನಿಯಮ:
    ಪ್ರಧಾನಿ ನರೇಂದ್ರ ಮೋದಿಯ ದೊಡ್ಡ ಅಭಿಮಾನಿಯಾಗಿರುವ ಶಿಲ್ಪಾ ಸಾಲಿಯಾನ್ ದೇಹ ದಾನಕ್ಕೆ ನಿರ್ಧಾರ ಮಾಡಿದಾಗ ಸಾಕಷ್ಟು ನಿಯಮಗಳು ಅಡ್ಡಿಯಾದವು. ಗಂಡ, ತಂದೆ – ತಾಯಿ ಮತ್ತು ಕುಟುಂಬಸ್ಥರ ಸಹಿ ಇಲ್ಲದೇ ದೇಹ ದಾನ ಮಾಡಲು ಸಾಧ್ಯವಿಲ್ಲ ಎಂದು ಕೆಎಂಸಿಯ ವೈದ್ಯರು (Doctors) ಹೇಳಿದ್ದರು. ಬಳಿಕ ಇಡೀ ಕುಟುಂಬವನ್ನು ಒಪ್ಪಿಸಿ, ದೇಹ ದಾನದಿಂದ ಮುಂದೆ ವೈದ್ಯಕೀಯ ಲೋಕಕ್ಕೆ ಆಗಬಹುದಾದ ಉಪಯೋಗಗಳನ್ನು ತಿಳಿಸಿ ಒಪ್ಪಿಗೆ ಪಡೆದು ದೇಹದಾನಕ್ಕೆ ಸಹಿ ಮಾಡಿದ್ದಾರೆ. ಇದನ್ನೂ ಓದಿ: ನೇಪಾಳದಲ್ಲಿ ಭೂಕುಸಿತ – 14 ಸಾವು, 10 ಮಂದಿ ನಾಪತ್ತೆ

    ದೇಹದಾನದ ಬಳಿಕ ಪಬ್ಲಿಕ್ ಟಿವಿಯೊಂದಿಗೆ (Public TV) ಮಾತನಾಡಿರುವ ಶಿಲ್ಪಾ ಸಾಲಿಯಾನ್, ನಾನು ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿ. ಪ್ರಧಾನಿ ಮೋದಿ ಜೀವನವನ್ನೇ ದೇಶಕ್ಕೋಸ್ಕರ ಮುಡಿಪಾಗಿಟ್ಟಿದ್ದಾರೆ. ಈ ದೇಹ ಸತ್ತ ಮೇಲೆ ಮಣ್ಣಲ್ಲಿ ಮಣ್ಣಾಗಿ ಹೋಗುತ್ತದೆ. ನಾಲ್ಕು ಜನಕ್ಕೆ ಉಪಯೋಗ ಆಗಲಿ ಎಂದು ದೇಹದಾನ ಮಾಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅಂತಹ ವ್ಯಕ್ತಿ ಹಿಂದೆ ದೇಶದ ಪ್ರಧಾನಿಯಾಗಿಲ್ಲ. ಮುಂದೆ ಆಗಲು ಸಾಧ್ಯವಿಲ್ಲ. 75 ವರ್ಷ ಆದ ನಂತರ ಅವರು ನಿವೃತ್ತಿ ಆಗಬಾರದು. ಅವರ ದೇಹದಲ್ಲಿ ಶಕ್ತಿ ಇರುವ ತನಕ ಅವರು ಪ್ರಧಾನಿಯಾಗಿ ಇರಬೇಕು ಎಂದು ಎಂದು ಆಶಿಸಿದ್ದಾರೆ.

    ಮುಂದುವರಿದು ದೇಶಾದ್ಯಂತ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅಧ್ಯಯನ ಮಾಡಲು ಮೃತ ದೇಹಗಳ ಕೊರತೆ ಇದೆ. ಬೇರೆ ಬೇರೆ ಸಂದರ್ಭಗಳಲ್ಲಿ ನೀವೂ ದೇಹದಾನ ಮಾಡಿದರೆ ಅಧ್ಯಯನಕ್ಕೂ ಅನುಕೂಲವಾಗಲಿದೆ ಎಂದು ಶಿಲ್ಪಾ ಸಾಲಿಯಾನ್ ಸಲಹೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಡಿ ಭಾಗದ ಹಿರಿಯ ಸಂಶೋಧಕ ಡಾ.ಶಿವನಗೌಡ ಪಾಟೀಲ್ ನಿಧನ – ಕೊನೆಯ ಇಚ್ಛೆಯಂತೆ ದೇಹದಾನ

    ಗಡಿ ಭಾಗದ ಹಿರಿಯ ಸಂಶೋಧಕ ಡಾ.ಶಿವನಗೌಡ ಪಾಟೀಲ್ ನಿಧನ – ಕೊನೆಯ ಇಚ್ಛೆಯಂತೆ ದೇಹದಾನ

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದ ಗಡಿ ಭಾಗದ ಹಿರಿಯ ಸಂಶೋಧಕ ಡಾ.ಶಿವನಗೌಡ ಬಾಳಗೌಡ ಪಾಟೀಲ(83) ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

    ವೃತ್ತಿಯಿಂದ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಶಿವನಗೌಡ ಬಾಳಗೌಡ ಅವರು ರಟ್ಟರ ಕಾಲದ ಸಂಸ್ಕೃತಿ ಅಧ್ಯಯನ ಪ್ರಬಂಧಕ್ಕೆ ಪಿ.ಎಚ್.ಡಿ ಪಡೆದಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಪಿ.ಎಚ್.ಡಿ ಪದವಿ ಪಡೆದಿದ್ದು, ಇಡೀ ದಕ್ಷಿಣ ಭಾರತದಲ್ಲಿ ಪ್ರಥಮ ಎನ್ನಲಾಗಿತ್ತು. ಕೂಹುಂಡಿ ನಾಡು, ನಾಣ್ಯಗಳ ಇತಿಹಾಸ, ಶ್ರೀ ಕ್ಷೇತ್ರ ಸೊಗಲ ದರ್ಶನ, ದುಂಡೀಶನ ವಚನಗಳು ಮುಂತಾದ ಐತಿಹಾಸಿಕ ಮತ್ತು ಸಾಹಿತ್ಯಕ ಕೃತಿಗಳನ್ನು ಬರೆದಿದ್ದರು. ಇದನ್ನೂ ಓದಿ:  ಕ್ಯಾಂಪಸ್‍ನಲ್ಲಿ ಗುಂಡಿನ ದಾಳಿ: ಮೂವರು ಬಲಿ, ಇಬ್ಬರಿಗೆ ಗಂಭೀರ ಗಾಯ 

    ಇದಲ್ಲದೆ ಪಠ್ಯರಚನಾ ಸಮಿತಿಯ ಸದಸ್ಯರಾಗಿ ಅನುಪಮ ಸೇವೆ ಸಲ್ಲಿಸಿದ್ದರು. ಸಂಕೇಶ್ವರ ಹತ್ತಿರದ ಅರ್ಜುನವಾಡ ಬಸವೇಶ್ವರರ ಬಗೆಗೆ ಇದ್ದ ಶಿಲಾ ಶಾಸನವೊಂದನ್ನು ಅವರು ಸಂಶೋಧಿಸಿದ್ದರು. ಹುಕ್ಕೇರಿಯಲ್ಲಿ ಜರುಗಿದ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯು ಅವರು ಕಾರ್ಯ ನಿರ್ವಹಿಸಿದ್ದರು.

    ಕೂಡಲ ಸಂಗದಮದ ಬಸವಧರ್ಮ ಪೀಠದ ಸಂಸ್ಥಾಪಕ ಸದಸ್ಯರಾಗಿ, ರಾಷ್ಟ್ರೀಯ ಬಸವ ದಳದ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾಗಿಯೂ ಅವರು ಅನುಪಮ ಸೇವೆ ಸಲ್ಲಿಸಿದ್ದರು. ಸಂಕೇಶ್ವರ ಪಟ್ಟಣದಲ್ಲಿ ಬಸವ ಮಂಟಪ ಸ್ಥಾಪಿಸಿ ಪ್ರತಿವಾರವೂ ವಚನಗಳ ಸಾರವನ್ನು ಜನಸಾಮಾನ್ಯರಿಗೆ ತಿಳಿಸುತ್ತಿದ್ದರು. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಏಕಲವ್ಯ ಪ್ರಶಸ್ತಿ, ಉತ್ತಮ ಶಿಕ್ಷಕ ಪ್ರಶಸ್ತಿಗಳು ಅವರಿಗೆ ಬಂದಿದ್ದವು. ತಮ್ಮ ಸ್ವಂತ ಊರು ಕೊಚರಿಯಲ್ಲಿ ಕನ್ನಡ ಮಾಧ್ಯಮ ಶಾಲೆಯೊಂದನ್ನು ಪ್ರಾರಂಭಿಸಿ ಶಿಕ್ಷಣವನ್ನು ನೀಡುತ್ತಾ ಬಂದಿದ್ದರು. ಇದನ್ನೂ ಓದಿ:  ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತೆ: ರಾಜನಾಥ್ ಸಿಂಗ್ 

    Top 10 Books Every College Student Should Read - eLearning Industry

    ಶಿವನಗೌಡ ಬಾಳಗೌಡರು ತಮ್ಮ ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಸಾಂಸ್ಕೃತಿಕ ಪರಿಷತ್ತು, ರಾಷ್ಟ್ರೀಯ ಬಸವ ದಳ, ಕದಳಿ ವೇದಿಕೆ, ಅಕ್ಕಮಹಾದೇವಿ ಕಲಾ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಗಳ ಪದಾಧಿಕಾರಿಗಳು ಕಂಬನಿ ಮಿಡಿದಿದ್ದಾರೆ. ಅವರ ಕೊನೆಯ ಇಚ್ಛೆಯಂತೆ ಅವರ ದೇಹವನ್ನು ಕೆ.ಎಲ್.ಇ ಆಸ್ಪತ್ರೆಗೆ ದಾನ ಮಾಡಲಾಯಿತು.

    Live Tv
    [brid partner=56869869 player=32851 video=960834 autoplay=true]

  • ಪುನೀತ್‍ರಿಂದ ಪ್ರೇರಣೆ ಪಡೆದು ದೇಹದಾನಕ್ಕೆ ಮುಂದಾದ ಕಾಫಿನಾಡ ದಂಪತಿ

    ಪುನೀತ್‍ರಿಂದ ಪ್ರೇರಣೆ ಪಡೆದು ದೇಹದಾನಕ್ಕೆ ಮುಂದಾದ ಕಾಫಿನಾಡ ದಂಪತಿ

    ಚಿಕ್ಕಮಗಳೂರು: ಸತ್ತ ಮೇಲೆ ಈ ದೇಹವನ್ನು ಮಣ್ಣು ತಿನ್ನುತ್ತೆ ಅದರ ಬದಲು ಪುನೀತ್ ಸರ್ ಅವರಂತೆ ದಾನ ಮಾಡಿದರೆ ಈ ನಮ್ಮ ದೇಹದ ಅಂಗಾಂಗಳಿಂದ ಮತ್ತೊಬ್ಬರ ಬದುಕು ಬೆಳಕಾಗುತ್ತೆ ಎಂದು ತಾಲೂಕಿನ ಅರೆನೂರು ಗ್ರಾಮದ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿ ದಂಪತಿ ತಮ್ಮ ದೇಹವನ್ನೇ ದಾನ ಮಾಡಲು ಮುಂದಾಗಿದ್ದಾರೆ.

    ತಾಲೂಕಿನ ಅರೆನೂರು ಗ್ರಾಮದ ಸುಪ್ರಿತ್ ಹಾಗೂ ಲಕ್ಷ್ಮಿ ದಂಪತಿ ತಮ್ಮ ದೇಹವನ್ನು ಉಡುಪಿಯ KMC ಆಸ್ಪತ್ರೆಗೆ ನೀಡಲು ಮುಂದಾಗಿದ್ದಾರೆ. ನಮ್ಮ ಈ ನಡೆಗೆ ಪುನೀತ್ ರಾಜ್ ಕುಮಾರ್ ಅವರ ಪ್ರೇರೇಪಣೆಯೇ ಕಾರಣ ಎಂದು ಪಬ್ಲಿಕ್ ಟಿವಿ ಜೊತೆ ತಮ್ಮ ನಿರ್ಧಾರದ ಕುರಿತು ಮಾಹಿತಿ ನೀಡಿದ ದಂಪತಿ, ಮನುಷ್ಯನಾಗಿ ಹುಟ್ಟಿ, ಸತ್ತ ಬಳಿಕ ಈ ದೇಹವನ್ನು ಮಣ್ಣಲ್ಲಿ ಕೊಳೆಸುವುದಕ್ಕಿಂತ ನಮ್ಮ ದೇಹದ ಅಂಗಾಂಗಳು ಮತ್ತೊಬ್ಬರಿಗೆ ಉಪಯೋಗಕ್ಕೆ ಬರಬೇಕು ಎಂದು ಈ ನಿರ್ಧಾರಕ್ಕೆ ಬಂದಿದ್ದೇವೆ. ನಾವು ಚಿಕ್ಕಂದಿನಿಂದಲೂ ಪುನೀತ್ ಸರ್ ಸಿನಿಮಾ ನೋಡಿಕೊಂಡು ಬಂದಿದ್ದೇವೆ. ಒಂದೊಂದು ಸಿನಿಮಾಗಳು ಒಂದಕ್ಕಿಂತ ಒಂದು ಚೆನ್ನಾಗಿವೆ. ನಮ್ಮ ಈ ನಡೆಗೆ ಅವರೇ ಪ್ರೇರೇಪಣೆ ಎಂದು ತಮ್ಮ ಮನದ ಮಾತು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ಪ್ರೇರಣೆ – ಅಭಿಮಾನಿಗಳಿಂದ ನೇತ್ರದಾನದ ಜೊತೆಗೆ ದೇಹದಾನಕ್ಕೆ ನೋಂದಣಿ

    ಪುನೀತ್ ಅವರು ಅಷ್ಟು ದೊಡ್ಡ ವ್ಯಕ್ತಿಯಾದರೂ ಅವರ ಸಮಾಜಮುಖಿ ಕಾರ್ಯಗಳು ಬಹುತೇಕರಿಗೆ ಗೊತ್ತಿರಲಿಲ್ಲ. ನಮಗೂ ಗೊತ್ತಿರಲಿಲ್ಲ. ಅವರು ಸತ್ತ ಬಳಿಕವಷ್ಟೆ ಗೊತ್ತಾಗಿದ್ದು. ಅವರೇ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ನಮ್ಮ ದೇಹವನ್ನು ಮಣ್ಣು ತಿನ್ನೋದಕ್ಕಿಂತ ನಾಲ್ಕು ಜನಕ್ಕೆ ಬೆಳಕಾಗಿಸಬಹುದು ಎಂದು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಇದನ್ನೂ ಓದಿ: ಅಪ್ಪು ಪ್ರೇರಣೆ – ಒಂದೇ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮಂದಿ ನೇತ್ರದಾನ

    ದೇಹದಾನಕ್ಕೆ ಮುಂದಾಗಿರುವ ಲಕ್ಷ್ಮಿ ಪ್ರಸ್ತುತ ಗ್ರಾಮ ಪಂಚಾಯತ್ ಅಧ್ಯಕ್ಷೆ ಕೂಡ. ಗಂಡ ಹೆಂಡತಿ ಮಾತನಾಡಿಕೊಂಡು, ಮನೆಯವರ ಒಪ್ಪಿಗೆ ಪಡೆದು ಈ ನಿರ್ಧಾರಕ್ಕೆ ಬಂದಿದ್ದಾರೆ. ಇಂದು ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿಯವರ ಊರಾದ ತಾಲೂಕಿನ ಮಲ್ಲಂದೂರು ಸಮೀಪದ ಭಾಗ್‍ಮನೆ ಬಳಿ ಇರುವ ಆವುತಿ ಗ್ರಾಮದಲ್ಲಿ ಪುನೀತ್ ರಾಜ್‍ಕುಮಾರ್‍ ಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ, ಸುಮಾರು 40ಕ್ಕೂ ಹೆಚ್ಚು ಜನ ನೇತ್ರದಾನಕ್ಕೆ ಮುಂದಾಗಿದ್ದಾರೆ. ಹೆಸರು ನೋಂದಾಯಿಸಿಕೊಂಡವರು ನಮ್ಮ ಬಳಿಕ ನಮ್ಮ ಕಣ್ಣುಗಳು ಮತ್ತೊಂದು ಜೀವ ಜಗತ್ತನ್ನು ನೋಡಲು ಸಹಕಾರಿಯಾಗಲಿದೆ. ಇದಕ್ಕೆ ನಮಗೆ ಪುನೀತ್ ರಾಜ್ ಕುಮಾರ್ ಅವರೇ ಪ್ರೇರಣೆ ಎಂದು ನೇತ್ರದಾನಕ್ಕೆ ಮುಂದಾಗಿದ್ದಾರೆ. ಬದುಕಿದ್ದಷ್ಟು ದಿನ ಭಾವನಾತ್ಮಕ ಜೀವಿಯಾಗಿದ್ದ ಪವರ್ ಸ್ಟಾರ್ ಪುನೀತ್ ಸಾವಿನ ಬಳಿಕ ಸಮಾಜಮುಖಿ ಸೇವೆಯಿಂದ ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ.

  • ಅಪ್ಪು ಪ್ರೇರಣೆ – ಅಭಿಮಾನಿಗಳಿಂದ ನೇತ್ರದಾನದ ಜೊತೆಗೆ ದೇಹದಾನಕ್ಕೆ ನೋಂದಣಿ

    ಅಪ್ಪು ಪ್ರೇರಣೆ – ಅಭಿಮಾನಿಗಳಿಂದ ನೇತ್ರದಾನದ ಜೊತೆಗೆ ದೇಹದಾನಕ್ಕೆ ನೋಂದಣಿ

    ಯಾದಗಿರಿ: ನಟ ಪುನೀತ್ ರಾಜಕುಮಾರ್ ತಮ್ಮ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದರು. ನೇತ್ರದಾನ ಮಾಡಿದ ಅಪ್ಪು ತಮ್ಮ ಅಭಿಮಾನಿಗಳಿಗೆ ಮಾದರಿಯಾಗಿದ್ದು, ಈಗ ಅವರ ಅಭಿಮಾನಿ ದೇವರುಗಳು ಸಹ ಅಪ್ಪು ಮಾರ್ಗವನ್ನು ಅನುಸರಿಸಿದ್ದಾರೆ.

    ಯಾದಗಿರಿ ನಗರದ ಗಂಜ್ ಬಳಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಅಪಾರ ಅಭಿಮಾನಿಗಳು ಕೇವಲ ನೇತ್ರದಾನ ಮಾಡುವುದು ಮಾತ್ರವಲ್ಲದೆ, ದೇಹ ದಾನ ಮಾಡುವುದಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಯಾದಗಿರಿ ನಗರದ ನಿವಾಸಿಗಳಾದ ಹನುಮಯ್ಯ ಹಾಗೂ ಮಲ್ಲಿಕಾರ್ಜುನ ದಂಪತಿ ದೇಹದಾನಕ್ಕೆ ನೊಂದಣಿ ಮಾಡಿಕೊಂಡಿದ್ದಾರೆ. 52 ಮಂದಿ ಅಪ್ಪು ಅಭಿಮಾನಿಗಳು ನೇತ್ರದಾನಕ್ಕೂ ಸಹ ನೋಂದಣಿ ಮಾಡಿಕೊಂಡಿದ್ದಾರೆ.

    ಅಪ್ಪು ಅಭಿಮಾನಿಗಳಿಂದ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ರಾಯಚೂರಿನ ರಿಮ್ಸ್ ಆಸ್ಪತ್ರೆ ಸಹಯೋಗದಲ್ಲಿ ಅವರ ಅಭಿಮಾನಿಗಳು ಈ ಕಾರ್ಯ ಮಾಡಿದ್ದಾರೆ. ಇದನ್ನೂ ಓದಿ: ಅಪ್ಪು ಪ್ರೇರಣೆ – ಒಂದೇ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮಂದಿ ನೇತ್ರದಾನ

  • ಮೆಡಿಕಲ್ ಅಧ್ಯಯನಕ್ಕೆ ದೇಹ ದಾನ – ಒಪ್ಪಿಗೆ ಪತ್ರಕ್ಕೆ ವಯೋವೃದ್ಧೆಯರ ಸಹಿ

    ಮೆಡಿಕಲ್ ಅಧ್ಯಯನಕ್ಕೆ ದೇಹ ದಾನ – ಒಪ್ಪಿಗೆ ಪತ್ರಕ್ಕೆ ವಯೋವೃದ್ಧೆಯರ ಸಹಿ

    ಚಿಕ್ಕೋಡಿ/ಬೆಳಗಾವಿ: ಮೂವರು ವಯೋವೃದ್ಧೆಯರು ಸಾವಿನ ನಂತರ ತಮ್ಮ ದೇಹವನ್ನು ದಾನ ಮಾಡಲು ಬಯಸಿದ್ದು, ತಮ್ಮ ಸ್ವ-ಇಚ್ಛೆಯಿಂದ ಒಪ್ಪಿಗೆ ಪತ್ರ ಬರೆದುಕೊಟ್ಟು ಸಾರ್ಥಕತೆ ಮೆರೆದಿದ್ದಾರೆ.

    ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹರಿನಗರದ ನಿವಾಸಿಗಳಾದ ಮಹಾದೇವಿ (68), ಶಾಂತಾ (74) ಮತ್ತು ಬಸ್ಸವ್ವ (70) ಮೂವರು ತಮ್ಮ ಸಾವಿನ ಬಳಿಕ ವೈದ್ಯಕೀಯ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ದೇಹದಾನ ಮಾಡಿರುವುದಾಗಿ ತಿಳಿಸಿದ್ದಾರೆ. ಇವರು ಬೆಳಗಾವಿಯ ಜವಾಹರಲಾಲ್ ನೆಹರು ಮೆಡಿಕಲ್ ಕಾಲೇಜಿಗೆ ತಮ್ಮ ಸಾವಿನ ನಂತರ ದೇಹದಾನ ಮಾಡುವುದಾಗಿ ತಿಳಿಸಿದ್ದಾರೆ.

    ಮಹಾದೇವಿ ಮತ್ತು ಶಾಂತಾ ಸಹೋದರಿಯರಾಗಿದ್ದು, ಇವರ ಜೊತೆಗೆ ಪಕ್ಕದ ಮನೆಯ ಬಸ್ಸವ್ವ ಕೂಡ ದೇಹದಾನ ಮಾಡಿದ್ದಾರೆ. ಮನುಷ್ಯರಾದವರು ಸಾವಿನ ನಂತರವೂ ಇನ್ನೊಬ್ಬರ ಜೀವನದಲ್ಲಿ ಬೆಳಕು ತರಬೇಕೆಂದರೆ ದೇಹ ಮತ್ತು ಅಂಗಾಂಗ ದಾನ ಬಹುಮುಖ್ಯ. ಕಣ್ಣು, ಕಿಡ್ನಿ, ಲಿವರ್, ಹೃದಯ, ಚರ್ಮ ಏನು ಬೇಕಾದರೂ ದಾನ ಮಾಡಬಹುದು. ಜನರು ತಪ್ಪು ತಿಳಿವಳಿಕೆ ಬಿಟ್ಟು ದೇಹ ಮತ್ತು ಅಂಗಾಂಗ ದಾನಕ್ಕೆ ಮುಂದಾಗಬೇಕೆಂದು ವೈದ್ಯರಾದ ಡಾ.ದಯಾನಂದ ನೂಲಿ ಜನರಲ್ಲಿ ಜಾಗೃತಿ ಮೂಡಿಸಿದರು.

    ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗಲಿ ಎನ್ನುವ ಕಾರಣಕ್ಕೆ ನಾವು ಮೂವರು ಗೆಳತಿಯರು ತಮ್ಮ ದೇಹವನ್ನು ಸಾವಿನ ಬಳಿಕ ದಾನ ಮಾಡಿರುವುದಾಗಿ ಬಸ್ಸವ್ವ ತಿಳಿಸಿದರು.

  • ಗ್ರಾಮದಲ್ಲಿ ಸ್ಮಶಾನ ಇಲ್ಲದ ಹಿನ್ನೆಲೆ ಗ್ರಾಮಸ್ಥರಿಂದ ದೇಹದಾನ

    ಗ್ರಾಮದಲ್ಲಿ ಸ್ಮಶಾನ ಇಲ್ಲದ ಹಿನ್ನೆಲೆ ಗ್ರಾಮಸ್ಥರಿಂದ ದೇಹದಾನ

    ಕಲಬುರಗಿ: ಶವ ಹೂಳಲು ಸ್ಥಳವಿಲ್ಲದ ಕಾರಣ ಮೃತ ವೃದ್ಧೆಯ ದೇಹವನ್ನು ದೇಹದಾನ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಭಂಕೂರ ಗ್ರಾಮದಲ್ಲಿ ನಡೆದಿದೆ.

    75 ವರ್ಷದ ಸುಭದ್ರಮ್ಮ ಗುರುವಾರ ರಾತ್ರಿ ಸಾವನಪ್ಪಿದ್ದಾರೆ. ಆದರೆ ಮೃತರ ಶವ ಸಂಸ್ಕಾರ ಮಾಡಲು ಗ್ರಾಮದಲ್ಲಿ ಜಮೀನಿಲ್ಲ. ಹೀಗಾಗಿ ಕಲಬುರಗಿ ಎಂಆರ್‍ಎಂಸಿ ಮೆಡಿಕಲ್ ಕಾಲೇಜಿಗೆ ಸುಭದ್ರಮ್ಮ ದೇಹವನ್ನು ದಾನ ಮಾಡಿದ್ದಾರೆ.

    ಮೂರು ಸಾವಿರ ಜನಸಂಖ್ಯೆಯಿರುವ ಈ ಗ್ರಾಮದಲ್ಲಿ ಶವ ಹೂಳಲು ಕೇವಲ 20 ಗುಂಟೆ ಜಮೀನಿದೆ. ಹೀಗಾಗಿ ಯಾರಾದಾದರೂ ಶವ ಹೂಳಬೇಕು ಎಂದರೆ ಬೇರೆಯವರ ಶವ ತೆಗೆದೆ ಹೂಳುವ ಪರಿಸ್ಥಿತಿಯಿದೆ. ಇದನ್ನು ಅರಿತ ಆ ಗ್ರಾಮದ 40ಕ್ಕೂ ಹೆಚ್ಚು ಜನ ಈಗಾಗಲೇ ದೇಹದಾನ ಮಾಡಿದ್ದಾರೆ.

    ಇನ್ನು ದುರಂತ ಎಂದರೆ ಸಮಾಜಕಲ್ಯಾಣ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತವರು ಕ್ಷೇತ್ರದ ಜನರಿಗೆ ಈ ಪರಿಸ್ಥಿತಿ ಬಂದಿದೆ. ಈ ಹಿಂದೆ ಪಬ್ಲಿಕ್ ಟಿವಿಯಲ್ಲಿ ಈ ಕುರಿತು ವರದಿ ಪ್ರಸಾರ ಮಾಡಿದ್ದಾಗ ಜಮೀನು ಖರೀದಿಗೆ ಹಣ ಬಿಡುಗಡೆಯಾಗಿದೆ.

    ಆದರೆ ಇಲ್ಲಿನ ಜನಪ್ರತಿನಿಧಿ ಹಾಗು ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಲ್ಲಿಯವರಗೆ ಸ್ಮಶಾನಕ್ಕಾಗಿ ಜಮೀನು ಖರೀದಿ ಮಾಡಿಲ್ಲ. ಪರಿಣಾಮ ಜಮೀನು ಹೊಂದಿದವರು ಅವರ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡುತ್ತಾರೆ. ಜಮೀನು ಇಲ್ಲದವರು ಹೀಗೆ ದೇಹದಾನ ಮಾಡಲು ಮುಂದಾಗಿದ್ದಾರೆ.

  • ದೇಹದಾನ ಮಾಡಲು ಮುಂದಾದ ಪ್ರಿಯಾಂಕ್ ಖರ್ಗೆ ಕ್ಷೇತ್ರದ ಗ್ರಾಮಸ್ಥರು

    ದೇಹದಾನ ಮಾಡಲು ಮುಂದಾದ ಪ್ರಿಯಾಂಕ್ ಖರ್ಗೆ ಕ್ಷೇತ್ರದ ಗ್ರಾಮಸ್ಥರು

    -ಕಚೇರಿ ನವೀಕರಣಕ್ಕೆ ಲಕ್ಷ ಖರ್ಚು ಮಾಡುವ ಸಚಿವರೇ ಇಲ್ಲಿ ನೋಡಿ

    ಕಲಬುರಗಿ: ಮರಣದ ನಂತರವು ಪರರಿಗೆ ನಮ್ಮ ದೇಹ ಉಪಯೋಗವಾಗಲಿ ಅಂತಾ ದೇಹದಾನ ಮಾಡುವದನ್ನು ನೋಡಿದ್ದೇವೆ. ಆದರೆ ಕಲಬುರಗಿ ಜಿಲ್ಲೆಯ ಭಂಕುರ ಗ್ರಾಮದಲ್ಲಿ ಮರಣದ ನಂತರ ಗ್ರಾಮದಲ್ಲಿ ಹೂಳಲು ಸ್ಥಳವಿಲ್ಲದ ಕಾರಣ ದೇಹದಾನ ಮಾಡಿದ್ದಾರೆ. ದುರಂತ ಅಂದರೆ ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರದ ಜನರ ಕಥೆ.

    ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಭಂಕುರ ಗ್ರಾಮದ ನಿವಾಸಿಗಳು ದೇಹದಾನ ಮಾಡಲು ಮುಂದಾಗುತ್ತಿದ್ದಾರೆ. ಈ ಗ್ರಾಮದಲ್ಲಿ ಈಗಾಗಲೇ 20ಕ್ಕೂ ಅಧಿಕ ಜನ ಅವರ ದೇಹವನ್ನು ಕಲಬುರಗಿಯ ಎಮ್‍ಆರ್‍ಎಂಸಿ ಮೆಡಿಕಲ್ ಕಾಲೇಜಿಗೆ ದಾನ ಮಾಡಿದ್ದಾರೆ. ಇಲ್ಲಿನ ಜನ ಈ ರೀತಿ ನಿರ್ಧಾರ ಕೈಗೊಳ್ಳುವುದಕ್ಕೆ ಪ್ರಮುಖ ಕಾರಣವೆಂದ್ರೆ ಈ ಗ್ರಾಮದಲ್ಲಿ ಕೇವಲ 33 ಗುಂಟೆ ಸ್ಮಶಾನವಿದೆ. ಹೀಗಾಗಿ ಯಾರಾದ್ರು ಮೃತಪಟ್ಟರೆ ಅವರ ದೇಹ ಹೂಳಲು ಸ್ಥಳವಿಲ್ಲ. ಆದ್ದರಿಂದ ದೇಹದಾನ ಮಾಡಲು ಇಲ್ಲಿನ ಗ್ರಾಮಸ್ಥರು ಮುಂದಾಗಿದ್ದು, ಈಗಾಗಲೇ ಭಂಕುರ ಗ್ರಾಮದಲ್ಲಿ 20 ಕ್ಕು ಹೆಚ್ಚು ಜನ ದೇಹದಾನ ಮಾಡಿದ್ದಾರೆ.

    ಈ ಸಮಸ್ಯೆ ಬಗೆಹರಿಸುವಂತೆ ಕ್ಷೇತ್ರದ ಶಾಸಕ ಹಾಗು ಸಚಿವ ಪ್ರಿಯಾಂಕ್ ಖರ್ಗೆ ಅವರ ಬಳಿ ಮನವಿ ಮಾಡಿದ್ರು ಪ್ರಯೋಜನವಾಗಿಲ್ಲ. ಈ ಸಮಸ್ಯೆ ಕುರಿತು 2015ರಲ್ಲಿಯೇ ವಿಧಾನ ಪರಿಷತ್‍ನಲ್ಲಿ ಮೋಟಮ್ಮ ಸದನದ ಗಮನ ಸಹ ಸೆಳೆದಿದ್ದಾರೆ. ಇಷ್ಟಾದ್ರು ಸಹ ಇಲ್ಲಿಯವರೆಗೆ 10 ಸಾವಿರ ಜನಸಂಖ್ಯೆಯಿರುವ ಗ್ರಾಮಕ್ಕೆ ಇರುವ 33 ಗುಂಟೆ ಸ್ಮಶಾನ ಭೂಮಿಯಲ್ಲಿಯೇ, ಹೂತಿರುವ ಹೆಣ ತೆಗೆದು ಬೇರೆಯವರನ್ನು ಅದೇ ಸ್ಮಶಾನ ಭೂಮಿಯಲ್ಲಿ ಹೂಳುತ್ತಿದ್ದಾರೆ. ಈ ಸಮಸ್ಯೆ ಅರಿತ ಇನ್ನು ಕೆಲವರು ಬೇರೆಯವರಿಗೆ ತಮ್ಮ ದೇಹ ಪ್ರಯೋಜನವಾಗಲಿ ಅಂತಾ ಸಹ ದೇಹದಾನ ಮಾಡಿದ್ದಾರೆ.

    ತಮ್ಮ ಕಚೇರಿ ನವೀಕರಣಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡುವ ಸಚಿವ ಪ್ರಿಯಾಂಕ್ ಖರ್ಗೆ, ಕ್ಷೇತ್ರದಲ್ಲಿನ ಜನರ ಈ ಗಂಭೀರ ಸಮಸ್ಯೆಗೆ ಇಲ್ಲಿಯವರೆಗೆ ಪರಿಹಾರ ನೀಡದಿರುವುದು ನಿಜಕ್ಕು ದುರಂತವೇ ಸರಿ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ವಿದ್ಯಾರ್ಥಿಗಳ ಅಧ್ಯಯನಕ್ಕೆ ಮಹಿಳೆಯ ದೇಹದಾನ!

    ಬಳ್ಳಾರಿ: ಮನುಷ್ಯ ಇದ್ದಾಗ ರಕ್ತದಾನ ಮಾಡಬೇಕು ಸತ್ತಾಗ ದೇಹದಾನ ಮಾಡಬೇಕು ಅಂತಾರೆ. ದೇಶದ ಅದೆಷ್ಟೋ ವೈದ್ಯಕೀಯ ವಿದ್ಯಾರ್ಥಿಗಳಿಗೆ ದೇಹದ ಅಂಗಾಂಗಗಳಿಗೆ ಅಧ್ಯಯನ ಮಾಡೋಕೆ ಮೃತ ದೇಹಗಳೇ ಸಿಗುವುದಿಲ್ಲ. ಆದ್ರೆ ಬೈಲಹೊಂಗಲದ ರಾಮಣ್ಣನವರ ಪ್ರತಿಷ್ಠಾನ ಈ ಕೊರತೆಯನ್ನು ನಿಗಿಸುವಲ್ಲಿ ಮುಂದಾಗಿದೆ. ರಾಮಣ್ಣನವರ ಪ್ರತಿಷ್ಠಾನದ ಪರಿಶ್ರಮದಿಂದಾಗಿ ರಾಣೆಬೆನ್ನೂರಿನ ಲೀಲಾವತಿಯವರ ಮೃತದೇಹವನ್ನು ಬಳ್ಳಾರಿಯ ಆಯುರ್ವೇದಿಕ್ ಕಾಲೇಜಿಗೆ ದೇಹದಾನ ಮಾಡಿಸುವಲ್ಲಿ ಯಶ್ವಸಿಯಾಗಿದ್ದಾರೆ.

    ಹೃದಯಾಘಾತದಿಂದ ರಾಣೆಬೆನ್ನೂರಿನ 80 ವರ್ಷದ ಲೀಲಾವತಿಯವರು ಇತ್ತೀಚಿಗಷ್ಟೆ ಮೃತಪಟ್ಟಿದ್ದರು. ಅವರ ಪುತ್ರ ಸಹ ವೈದ್ಯರಾದ ಕಾರಣ ದೇಹದಾನದ ಮಹತ್ವದ ಬಗ್ಗೆ ಅರಿವಿದ್ದ ಲೀಲಾವತಿಯವರು ತಮ್ಮ ದೇಹವನ್ನು ದಾನ ಮಾಡಬೇಕೆಂದು ಜೀವಿತ ವೇಳೆಯಲ್ಲಿ ಪ್ರಮಾಣ ಮಾಡಿದ್ದರು. ಹೀಗಾಗಿ ಅವರ ಕುಟುಂಬದ ಸದಸ್ಯರು ಇದೀಗ ಲೀಲಾವತಿಯವರ ಮೃತದೇಹವನ್ನು ಸಂಸ್ಕಾರ ಮಾಡದೇ ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.

    ಹೀಗಾಗಿ ಲೀಲಾವತಿಯವರ ದೇಹದಾನವನ್ನು ಪಡೆದ ಬಳ್ಳಾರಿಯ ತಾರಾನಾಥ ಆರ್ಯುವೇದ ಕಾಲೇಜಿನ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಇದೀಗ ಅಂಗಾಗ ರಚನೆಯ ಅಧ್ಯಯನ ಮಾಡಲು ಲೀಲಾವತಿಯವರ ಮೃತದೇಹವನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ. ಮೃತದೇಹಗಳು ಸಿಗದಿದ್ದರೇ ಅಧ್ಯಯನ ತುಂಬಾ ಕಷ್ಟ ಅಂತಾರೆ ಆಯುರ್ವೇದಿಕ್ ಕಾಲೇಜಿನ ಪ್ರಾಧ್ಯಾಪಕ ಡಾ. ರಾಜಶೇಖರ್ ಗಾಣಿಗೇರ್ ಮತ್ತು ವಿದ್ಯಾರ್ಥಿಗಳು.

    ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಂಗಾಗಗಳ ಅಧ್ಯಯನ ಮಾಡೋಕೆ ಮೃತದೇಹ ಬೇಕೆ ಬೇಕು. ಆದ್ರೆ ಮೆಡಿಕಲ್ ವಿದ್ಯಾರ್ಥಿಗಳಿಗೆ ಅಧ್ಯಯನ ಮಾಡೋಕೆ ಮೃತದೇಹ ಸಿಗೋದೇ ಅಪರೂಪ. ಹೀಗಾಗಿ ರಕ್ತದಾನ ಮಾಡಿದಂತೆ ದೇಹದಾನ ಮಾಡಲು ಜಾಗೃತಿ ಕಾರ್ಯಕ್ರಮಗಳು ನಡೆಸಲಾಗುತ್ತೆ. ಆದ್ರೆ ಬಹುತೇಕರು ಮೃತದೇಹಗಳಿಗೆ ಅಂತ್ಯಸಂಸ್ಕಾರ ಮಾಡುತ್ತಾರೆ. ಹೀಗಾಗಿ ದೇಹದಾನ ಮಾಡೋರು ತುಂಬಾ ಅಪರೂಪ. ಆದ್ರೆ ಬೈಲಹೊಂಗಲದ ಡಾಕ್ಟರ್ ಮಾಲತೇಶ ರಾಮಣ್ಣನವg ತಂದೆಯ ದೇಹವನ್ನು ದಾನ ಮಾಡುವ ಮೂಲಕ ದೇಹದಾನ ಜಾಗೃತಿ ಮೂಡಿಸುತ್ತಿದ್ದಾರೆ.

    ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಂಗಾಂಗ ರಚನೆ ಕಲಿಕೆಗೆ ವರ್ಷಕ್ಕೊಂದು ಮೃತದೇಹ ಬೇಕೇ ಬೇಕು. ಅದೆಷ್ಟೋ ಕಾಲೇಜಿನಲ್ಲಿನ ವಿದ್ಯಾರ್ಥಿಗಳು ದೇಹದ ಅಂಗಾಂಗ ರಚನೆ ಬಗ್ಗೆ ಪ್ರಾಕ್ಟಿಕಲ್ಲಾಗಿ ಅಧ್ಯಯನ ಮಾಡದೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಾಗಿ ದೇಹ ಮಣ್ಣಲ್ಲಿ ಮಣ್ಣಾಗುವ ಬದಲು ಬೇರೊಬ್ಬರಿಗೆ ಸಹಾಯವಾಗಲು ದೇಹದಾನ ಮಾಡುವ ಮೂಲಕ ಸಹಕರಿಸಬೇಕು ಎಲ್ಲರೂ ಮುಂದಾಗಬೇಕಿದೆ.