Tag: ದೈವ ಕೋಲ

  • ಇಡಿ ಶಾಕ್ ಬೆನ್ನಲ್ಲೇ ದೈವ ಕೋಲದಲ್ಲಿ ಶಿಲ್ಪಾ ಶೆಟ್ಟಿ ಭಾಗಿ

    ಇಡಿ ಶಾಕ್ ಬೆನ್ನಲ್ಲೇ ದೈವ ಕೋಲದಲ್ಲಿ ಶಿಲ್ಪಾ ಶೆಟ್ಟಿ ಭಾಗಿ

    ಬಾಲಿವುಡ್ (Bollywood) ಬೆಡಗಿ ಶಿಲ್ಪಾ ಶೆಟ್ಟಿ (Shilpa Shetty) ಇಡಿ ಶಾಕ್ ಬೆನ್ನಲ್ಲೇ ದೈವದ ಮೊರೆ ಹೋಗಿದ್ದಾರೆ. ದೈವ ಕೋಲದಲ್ಲಿ ಭಾಗಿಯಾಗಿ ನಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೈವ ಕೋಲದ (Daiva Kola) ವಿಡಿಯೋವನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ತೆಲುಗಿನ ಹೊಸ ಸಿನಿಮಾ ಒಪ್ಪಿಕೊಂಡ ಪೂಜಾ ಹೆಗ್ಡೆ

    ತುಳುನಾಡಿನ ಹೆಣ್ಣು. ನನ್ನ ಮೂಲ ಊರಿಗೆ ಬಂದಿದ್ದೇನೆ. ನನ್ನ ಮಕ್ಕಳಿಗೆ ನನ್ನ ಸಂಸ್ಕೃತಿಯನ್ನು ಪರಿಚಯಿಸುತ್ತಿದ್ದೇನೆ. ಮಂಗಳೂರಿನಲ್ಲಿ ನಾಗಮಂಡಲ ಹಾಗೂ ಕೊಡಮಣಿತ್ತಾಯ ದೈವ ಕೋಲವನ್ನು ವೀಕ್ಷಣೆ ಮಾಡಿದ್ದೇವೆ. ಇದನ್ನು ಮಕ್ಕಳು ನೋಡಿ ಅಚ್ಚರಿಪಟ್ಟರು. ಭಕ್ತಿಯಿಂದ ಅನುಸರಿಸುವ ಶಕ್ತಿ ಮತ್ತು ನಂಬಿಕೆಯನ್ನು ಯಾವಾಗಲೂ ನನ್ನ ಆಕರ್ಷಿಸುತ್ತದೆ ಎಂದು ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಬೆಟ್ಟಿಂಗ್ ಪ್ರಕರಣ ಕುರಿತಂತೆ ನಟ ಸಾಹಿಲ್ ಖಾನ್ ಬಂಧನ

    ಇತ್ತೀಚೆಗೆ ತಮ್ಮ ತಾಯಿ ಸುನಂದಾ ಮತ್ತು ಮಕ್ಕಳ ಜೊತೆ ದೈವ ಕೋಲ ವೀಕ್ಷಿಸಿದ್ದಾರೆ. ತಮ್ಮ ಹುಟ್ಟೂರಿನಲ್ಲಿ ಕೆಲ ಕಾಲ ಸಮಯ ಕಳೆದಿದ್ದಾರೆ. ದೈವ ಕೋಲದ ವಿಡಿಯೋ ಶೇರ್ ಮಾಡಿ ಈ ಬಗ್ಗೆ ನಟಿ ವಿವರಿಸಿದ್ದಾರೆ.


    2022ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದಿ ಅಡಿ ಜಾರಿ ನಿರ್ದೇಶನಾಲಯ ಪ್ರಕರಣವನ್ನು ದಾಖಲಿಸಿದ್ದು, ಜಾರಿ ನಿರ್ದೇಶನಾಲಯವು 97.97 ಕೋಟಿ ರೂಪಾಯಿ ಮೊತ್ತದ ಸ್ಥಿರ ಹಾಗೂ ಚರಾಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿಯಾದ ಆಸ್ತಿಗಳಲ್ಲಿ ಪುಣೆಯಲ್ಲಿರುವ ಬಂಗ್ಲೆ, ಫ್ಲಾಟ್ ಹಾಗೂ ಇಕ್ವಿಟಿ ಷೇರು ಕೂಡ ಹೊಂದಿವೆ.

    ಈ ಹಿಂದೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವೇರಿಯಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಸಂಸ್ಥೆಯ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಸಂಸ್ಥೆಯ ಮೂಲಕ ಅಮಿತ್ ಭಾರದ್ವಾಜ್, ವಿವೇಕ್, ಅಜಯ್, ಮಹೇಂದರ್ ಹೀಗೆ ಹಲವಾರು ಏಜೆಂಟರ್ ಗಳು ಬಿಟ್ ಕಾಯಿನ್ ರೂಪದಲ್ಲಿ 2017ರಲ್ಲಿ 6,600 ಕೋಟಿ ರೂ. ಹಣ ಸಂಗ್ರಹಿಸಿದ್ದರು. ಇವರ ಜೊತೆ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವ್ಯವಹಾರ ಮಾಡಿದ್ದರು ಎನ್ನುವ ಆರೋಪವಿದೆ.

    ಉಕ್ರೇನ್‌ನಲ್ಲಿ ಬಿಟ್ ಕಾಯಿನ್ ಮೈನಿಂಗ್ ಫಾರ್ಮ್ ಶುರು ಮಾಡುವುದಕ್ಕೆ ಶಿಲ್ಪಾ ಮತ್ತು ರಾಜ್ ಕುಂದ್ರಾ ದಂಪತಿ ಅಮಿತ್ ಭಾರದ್ವಾಜ್ ಬಳಿ 285 ಬಿಟ್ ಕಾಯಿನ್ ಪಡೆದಿದ್ದಾರೆ. ಸದ್ಯ ಈ ಬಿಟ್ ಕಾಯಿನ್ ಮೌಲ್ಯ ಸುಮಾರು 150 ಕೋಟಿ ರೂ. ಎಂದು ಎಂದು ತನಿಖಾ ಸಂಸ್ಥೆ ಹೇಳಿದೆ.

  • ಇಷ್ಟಾರ್ಥಸಿದ್ಧಿಗಾಗಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್

    ಇಷ್ಟಾರ್ಥಸಿದ್ಧಿಗಾಗಿ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್

    ಮಂಗಳೂರು: ಇಷ್ಟಾರ್ಥಸಿದ್ಧಿಗಾಗಿ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ (UT Khader) ಹರಕೆ ಕೋಲ ನೆರವೇರಿಸಿದ್ದಾರೆ.

    ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ (Daiva Kola) ನೆರವೇರಿಸಿದ್ದಾರೆ. ಇದನ್ನೂ ಓದಿ: ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ

    ಸ್ಥಳೀಯ ಮುಖಂಡರೊಂದಿಗೆ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದರ್, ಸಂಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ-ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದಾರೆ.

    ಯು.ಟಿ ಖಾದರ್ ಅವರೊಂದಿಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜಾವ ಮತ್ತಿತ್ತರು ಭಾಗಿಯಾಗಿದ್ದರು. ಇದನ್ನೂ ಓದಿ: ಸಿಲಿಕಾನ್ ಸಿಟಿ ಸೇರಿದಂತೆ 4 ತಿಂಗಳು ರಾಜ್ಯವನ್ನ ಕಾಡಲಿದೆ ರಣಬಿಸಿಲು 

  • ದೈವ ದರ್ಶನ ಪಡೆದ ನಿರೂಪಕಿ ಅನುಶ್ರೀ

    ದೈವ ದರ್ಶನ ಪಡೆದ ನಿರೂಪಕಿ ಅನುಶ್ರೀ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೈವ ದರ್ಶನ ಪಡೆದ ನಿರೂಪಕಿ ಅನುಶ್ರೀ

    ದೈವ ದರ್ಶನ ಪಡೆದ ನಿರೂಪಕಿ ಅನುಶ್ರೀ

    ಸ್ಯಾಂಡಲ್‌ವುಡ್ (Sandalwood) ನಟಿ ಕಮ್ ನಿರೂಪಕಿ ಅನುಶ್ರೀ (Anushree) ಮತ್ತೆ ಸುದ್ದಿಯಲ್ಲಿದ್ದಾರೆ. ರಿಯಾಲಿಟಿ ಶೋ ನಿರೂಪಣೆ ಶೂಟಿಂಗ್ ಕೊಂಚ ಬ್ರೇಕ್ ನೀಡಿ ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ಈ ಕುರಿತ ಫೋಟೋವನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ತಮ್ಮದೇ ಭಿನ್ನ ಶೈಲಿಯ ನಿರೂಪಣೆ ಮೂಲಕ ಗಮನ ಸೆಳೆದಿರುವ ಅನುಶ್ರೀ ಕೊಂಚ ಬಿಡುವು ಮಾಡಿಕೊಂಡು ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ಮೂಲತಃ ಕರಾವಳಿ ಭಾಗದವರೇ ಆಗಿರುವ ಅನುಶ್ರೀ ದೈವದ ಆರಾಧನೆ ಮಾಡುತ್ತಾರೆ. ಇದೀಗ `777 ಚಾರ್ಲಿ’ (777 Charlie) ನಿರ್ದೇಶಕ ಕಿರಣ್ (Director Kiran) ಅವರ ಮನೆಯಲ್ಲಿ ದೈವ ಕೋಲ (Daiva Kola) ಮಾಡಲಾಗಿತ್ತು. ಈ ವೇಳೆ ಅನುಶ್ರೀ ಮತ್ತು ನಟಿ ಸಂಗೀತಾ (Sangeetha) ಕೂಡ ಭಾಗಿಯಾಗಿದ್ದಾರೆ.

    ನಿರ್ದೇಶಕ ಕಿರಣ್ ಅವರ ಕಾಸರಗೋಡು ಮನೆಯಲ್ಲಿ ದೈಲ ಕೋಲ ನಡೆದಿದೆ. ಈ ವೇಳೆ ಅನುಶ್ರೀ ಕೂಡ ಭಾಗಿಯಾಗಿ ಪೂಜೆ ಸಲ್ಲಿಸಿದ್ದಾರೆ. ತಮ್ಮ ವೈಯಕ್ತಿಕ ಜೀವನದ ಬಗ್ಗೆ ದೈವದ ಬಳಿ ಕೇಳಿದ್ದಾರೆ. ಕೊರಗಜ್ಜನಿಗೆ ಕೋಲ ಸೇವೆ ನೀಡಿದ್ದಾರೆ. ಇದನ್ನೂ ಓದಿ: ‘ದಸರಾ’ ಸಿನಿಮಾ ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್

    ದೈವ ಕೋಲದ ಫೋಟೋವನ್ನ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ, ಸುಂದರ ಹಾಗೂ ದೈವಿಕ ಕ್ಷಣಗಳು, ಕಾಸರಗೋಡು ಮಲ್ಲಮೂಲೆ ದೇವಸ್ಥಾನದಲ್ಲಿ ಎಂದು ನಟಿ ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ಸಖತ್ ಸದ್ದು ಮಾಡ್ತಿದೆ. ಈ ಪೋಸ್ಟ್ ನೋಡುತ್ತಲೇ ಕೆಲ ನೆಟ್ಟಿಗರು ಮದುವೆಯ ಸಿಹಿ ಸುದ್ದಿ ಯಾವಾಗ ಎಂದು ಕಾಮೆಂಟ್ ಮಾಡ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • `ಕಾಂತಾರ’ ಸಕ್ಸಸ್: ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ

    `ಕಾಂತಾರ’ ಸಕ್ಸಸ್: ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ

    ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶನ ಮಾಡಿದ್ದ `ಕಾಂತಾರ’ (Kantara Film) ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಹೊಂಬಾಳೆ ನಿರ್ಮಾಣದ (Hombale Films) ಈ ಚಿತ್ರ ಆಸ್ಕರ್ ಅಂಗಳದವರೆಗೂ ತಲುಪಿದೆ. ಅದ್ಬುತ ಯಶಸ್ಸಿನ ಬಳಿಕ ಸಿನಿಮಾ ತಂಡ ಕೂಡ ದೇವಕ್ಕೆ ಕೋಲ (Daiva Kola) ಕೊಟ್ಟು ಹರಕೆ ತೀರಿಸಿದೆ.

    `ಕಾಂತಾರ’ ಚಿತ್ರದ ಯಶಸ್ಸಿನ ನಂತರ ಇತ್ತೀಚೆಗೆ ಮಂಗಳೂರು ಭಾಗದಲ್ಲಿ ಪಂಜುರ್ಲಿ ಕೋಲ (Panjurli Kola) ಕೊಟ್ಟು ಇಡೀ `ಕಾಂತಾರ’ ಚಿತ್ರತಂಡ ಹರಕೆ ತೀರಿಸಿತ್ತು. ರಿಷಬ್ ಶೆಟ್ಟಿ, ಹೊಂಬಾಳೆ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು, ಸಪ್ತಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

    ದೈವ ಕೋಲದ ಹರಕೆ ಕ್ಷಣ ಹೇಗಿತ್ತು ಎಂಬುದನ್ನ ಹೊಂಬಾಳೆ ಫಿಲ್ಮ್ಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವರಾಹ ರೂಪಂ ಸಿನಿಮಾದ ಸಾಂಗ್ ಬಳಸಿ, ಈ ವೀಡಿಯೋವನ್ನ ಅಪ್‌ಲೋಡ್ ಮಾಡಿದ್ದಾರೆ. ಇದನ್ನೂ ಓದಿ: `ಶೈಲೂ’ ನಟಿ ಭಾಮಾ ದಾಂಪತ್ಯ ಬದುಕಿನಲ್ಲಿ ಬಿರುಕು?

    ನೀವು ಪ್ರಕೃತಿಗೆ ಶರಣಾಗಿ ಮತ್ತು ಜೀವನದಲ್ಲಿ ಯಶಸ್ಸು ಮತ್ತು ಸ್ವಾತಂತ್ರ್ಯವನ್ನು ನಿಮಗೆ ನೀಡಿದ ದೇವರನ್ನು ಆರಾಧಿಸಿ. ಕಾಂತಾರ ತಂಡವು ದೈವದ ನಿಜ ರೂಪವನ್ನು ವೀಕ್ಷಿಸಿತು, ದೈವದ ಆಶೀರ್ವಾದವನ್ನು ಪಡೆಯಿತು ಎಂದು ಹೊಂಬಾಳೆ ಫಿಲ್ಮ್ಸ್ ಮತ್ತು ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಹರಕೆ ತೀರಿಸಿದ ಕ್ಷಣಗಳು ಎಂದು ಕೂಡ ಬರೆದಿದ್ದಾರೆ.

     

    View this post on Instagram

     

    A post shared by Hombale Films (@hombalefilms)

    ಕಾಂತಾರ ಸಕ್ಸಸ್‌ಗೆ ದೈವ ಕೋಲದ ವೀಡಿಯೋಗೆ ಅಭಿಮಾನಿಗಳ ಕಾಮೆಂಟ್ ಸುರಿಮಳೆಯೇ ಹರಿದು ಬರುತ್ತಿದೆ. ಹಾಗೆಯೇ ಈ ವೇಳೆ ಆದಷ್ಟು ಬೇಗ `ಕಾಂತಾರ 2’ಗೆ ಚಾಲನೆ ಕೊಡಿ ಎಂದು ಫ್ಯಾನ್ಸ್ ಬೇಡಿಕೆ ಇಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k