Tag: ದೊಡ್ಡಬೆಳವಂಗಲ

  • ಕೋಳಿ ಫಾರಂ ಶೆಡ್‌ನಲ್ಲಿ ನಾಲ್ವರು ಮಲಗಿದ್ದಲ್ಲೇ ಅನುಮಾನಾಸ್ಪದ ಸಾವು

    ಕೋಳಿ ಫಾರಂ ಶೆಡ್‌ನಲ್ಲಿ ನಾಲ್ವರು ಮಲಗಿದ್ದಲ್ಲೇ ಅನುಮಾನಾಸ್ಪದ ಸಾವು

    ಚಿಕ್ಕಬಳ್ಳಾಪುರ: ಕೋಳಿಫಾರಂ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ದೊಡ್ಡಬೆಳವಂಗಲ (Doddabelavangal) ಬಳಿಯ ಹೊಲೆಯರಹಳ್ಳಿ ಬಳಿ ನಡೆದಿದೆ.

    ನೇಪಾಳ ಮೂಲದವರಾದ ಕಾಲೇ ಸರೇರಾ (60), ಲಕ್ಷ್ಮಿ ಸರೇರಾ (50), ಉಷಾ ಸರೇರಾ (40) ಹಾಗೂ ಪೂಲ್ ಸರೇರಾ (16) ಮೃತಪಟ್ಟವರು. ಸ್ಮಶಾನ ರಸ್ತೆಯಲ್ಲಿರುವ ಕೋಳಿ ಫಾರಂನಲ್ಲಿ 8 ದಿನಗಳ ಹಿಂದೆಯಷ್ಟೇ ಕೆಸಲ ಅರಸಿ ಕುಟುಂಬ ಸಮೇತ ಇವರು ಬಂದಿದ್ದರು.

    ರಾತ್ರಿ ಶೆಡ್ ಬಾಗಿಲು ಹಾಕಿಕೊಂಡು ಮಲಗಿದ್ದವರು ಭಾನುವಾರ ಬೆಳಗ್ಗೆ ನೋಡಿದಾಗ ಮಲಗಿದ್ದಂತೆಯೇ ಎಲ್ಲರೂ ಶವವಾಗಿ ಪತ್ತೆಯಾಗಿದ್ದಾರೆ. ಇಂದು ಬೆಳಗ್ಗೆ ಕೋಳಿ ಫಾರಂ ಮಾಲೀಕ ಕರೆ ಮಾಡಿದಾಗ ಕರೆ ಸ್ವೀಕರಿಸದ ಕಾರಣ, ಇದರಿಂದ ಅನುಮಾನಗೊಂಡು ಪಕ್ಕದ ಊರಿನ ಕೋಳಿ ಫಾರಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೃತರ ಸಂಬಂಧಿಕರಿಗೆ ಕರೆ ಮಾಡಿದ್ದಾರೆ. ಅವರು ಶೆಡ್ ಕಿಟಕಿ ಬಳಿ ಹೋಗಿ ನೋಡಿದಾಗ, ಮಲಗಿದ್ದವರು ಮಲಗಿದ್ದಂತೆಯೇ ಸಾವನ್ನಪ್ಪಿರುವುದು ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಒಂದೇ ಕುಟುಂಬದ ನಾಲ್ವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಹರೀಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.‌ ಇದನ್ನೂ ಓದಿ: ನಡು ರಸ್ತೆಯಲ್ಲೇ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

    ಸೊಳ್ಳೆ ಕಾಟಕ್ಕೆ ಹಾಕಿದ್ದ ಹೊಗೆ ನಾಲ್ವರ ಪ್ರಾಣ ತೆಗೀತಾ?
    ಸೊಳ್ಳೆ ಕಾಟ ಎಂದು ಕುಟುಂಬಸ್ಥರು ಇದ್ದಿಲು ಮೂಲಕ‌ ಹೊಗೆ ಹಾಕಿದ್ದರು. ಶೆಡ್ನ ಕಿಟಕಿ ಬಾಗಿಲು ಸಂಪೂರ್ಣ ಮುಚ್ಚಿದ ಹಿನ್ನೆಲೆ ಹೊಗೆ ತುಂಬಿಕೊಂಡಿದೆ. ಕೋಣೆ ತುಂಬಾ ಹೊಗೆ ತುಂಬಿಕೊಂಡು ಆಮ್ಲಜನಕದ‌ ಕೊರತೆಯಿಂದ ನಾಲ್ವರು ಸಾವನ್ನಪ್ಪಿರುವ ಶಂಕೆ ಎದುರಾಗಿದೆ. ಇದನ್ನೂ ಓದಿ:  ಚಾಟಿಂಗ್ ವಿಚಾರದಲ್ಲಿ ಗಲಾಟೆ – ಯುವತಿ ಅನುಮಾನಾಸ್ಪದ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೊಡ್ಡಬೆಳವಂಗಲದ 146 ಮಕ್ಕಳಿಗೆ 73 ಟ್ಯಾಬ್ ವಿತರಣೆ

    ದೊಡ್ಡಬೆಳವಂಗಲದ 146 ಮಕ್ಕಳಿಗೆ 73 ಟ್ಯಾಬ್ ವಿತರಣೆ

    ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಟ್ಯಾಬ್ ವಿತರಿಸಲು ಪಬ್ಲಿಕ್ ಟಿವಿ, ರೋಟರಿ ಕ್ಲಬ್ ಜ್ಞಾನ ದೀವಿಗೆ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ ತಾಲೂಕಿನ ಕನ್ಮಮಂಗಲದ ತಿರುಮಲಮ್ಮ ರಂಗಪ್ಪ ಚಾರಿಟೇಬಲ್ ಟ್ರಸ್ಟ್ ನ ತಂಡ ಕೈಜೋಡಿಸಿದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಸರ್ಕಾರಿ ಪ್ರೌಢ ಶಾಲೆಯ 146 ಮಕ್ಕಳಿಗೆ ಅನುಕೂಲವಾಗುವಂತೆ 73 ಟ್ಯಾಬ್ ವಿತರಣೆ ಮಾಡಲಾಯಿತು.

    ಕನ್ಮಮಂಗಲದ ತಿರುಮಲಮ್ಮ ರಂಗಪ್ಪ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಶಿವರಾಮಯ್ಯ ತಮ್ಮ ತಂದೆ ತಾಯಿಯ ನೆನಪಿಗಾಗಿ ಟ್ಯಾಬ್ ವಿತರಿಸಿದರು. ಟ್ರಸ್ಟ್ ನ ಸದಸ್ಯರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಡಿಪಿಐ ಗಂಗಮಾರೇಗೌಡ, ಬಿಇಓ ಬೈಯಾರೆಡ್ಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಪ್ರೌಢಶಾಲೆಗಳಿಗೆ ಪಬ್ಲಿಕ್ ಟಿವಿಯ ಮಹತ್ವಾಕಾಂಕ್ಷೆಯ ಯೋಜನೆ ಸಂಪೂರ್ಣವಾಗಿ ತಲುಪಿ ಮನೆಮಾತಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಪಬ್ಲಿಕ್ ಟಿವಿ, ದಾನಿಗಳಿಗೆ ಹಾಗೂ ಶಾಲೆಗೆ ಉತ್ತಮ ಅಂಕಗಳಿಸುವ ಮೂಲಕ ಮಾದರಿಯಾಗುವಂತೆ ಹಾಗೂ ಟ್ಯಾಬ್ ಬಗ್ಗೆ ಸಂಕ್ಷಿಪ್ತವಾಗಿ ಮಕ್ಕಳಿಗೆ ವಿವರಿಸಲಾಯಿತು.