Tag: ದೊಡ್ಡ ಬಳ್ಳಾಪುರ

  • ಪೊಲೀಸ್ ಮೇಲೆಯೇ ಚಾಕುವಿನಿಂದ ಹಲ್ಲೆಗೈದ ಆರೋಪಿ

    ಪೊಲೀಸ್ ಮೇಲೆಯೇ ಚಾಕುವಿನಿಂದ ಹಲ್ಲೆಗೈದ ಆರೋಪಿ

    ಚಿಕ್ಕಬಳ್ಳಾಪುರ: ಪೊಲೀಸ್ ಸಿಬ್ಬಂದಿ ಮೇಲೆಯೇ ಆರೋಪಿಯೊಬ್ಬ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಬಳಿ ನಡೆದಿದೆ.

    ದೊಡ್ಡಬಳ್ಳಾಪುರ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿಲು ಹೋದಾಗ ಆರೋಪಿ ಮಲ್ಲೋಹಳ್ಳಿಯ ಶಿವಶಂಕರ್ ಈ ಕೃತ್ಯ ಎಸಗಿದ್ದಾನೆ.

    ದೊಡ್ಡಬಳ್ಳಾಪುರ ಗ್ರಾಮಾಂತರ ಪಿಎಸ್‍ಐ ಗಜೇಂದ್ರ ಹಾಗೂ ರಾಧಾಕೃಷ್ಣ ಅವರು ಆರೋಪಿಯನ್ನು ತಡರಾತ್ರಿ ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿಯನ್ನು ಕಂಡ ಶಿವಶಂಕರ್, ರಾಧಾಕೃಷ್ಣರಿಗೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ.

    ಇದೇ ಸಂದರ್ಭದಲ್ಲಿ ಗಜೇಂದ್ರ ಅವರು ತಮ್ಮ ಆತ್ಮರಕ್ಷಣೆಗಾಗಿ ರಿವಾಲ್ವರ್ ನಿಂದ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಪರಿಣಾಮ ಆರೋಪಿ ಸ್ಥಳದಲ್ಲೇ ಬಿದ್ದಿದ್ದು, ನಂತರ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಬಿರುಗಾಳಿ ಮಳೆಗೆ ಗೋಡೆ ಕುಸಿದು ಅಜ್ಜಿ, ಮೊಮ್ಮಗ ಸಾವು

    ಬಿರುಗಾಳಿ ಮಳೆಗೆ ಗೋಡೆ ಕುಸಿದು ಅಜ್ಜಿ, ಮೊಮ್ಮಗ ಸಾವು

    ಚಿಕ್ಕಬಳ್ಳಾಪುರ: ಮಳೆಯಿಂದ ರಕ್ಷಣೆ ಪಡೆಯಲು ಶೆಡ್ ಅಡಿಯಲ್ಲಿ ಆಶ್ರಯ ಪಡೆದಿದ್ದವರ ಮೇಲೆ ಗೋಡೆ ಕುಸಿದ ಪರಿಣಾಮ ಅಜ್ಜಿ ಮತ್ತು ಮೊಮ್ಮಗ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

    ಹೊಸಹಳ್ಳಿ ನಿವಾಸಿ ಭಾಗ್ಯಮ್ಮ (48) ಬಾಲಕ ವೆಂಕಿ (8) ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ಗ್ರಾಮದ ವಿಜಯಕುಮಾರ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ. ಇಂದು ಸಂಜೆ ವೇಳೆಗೆ ಗಾಳಿಯ ರಭಸದೊಂದಿಗೆ ಮಳೆ ಶುರುವಾದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

    ಏಕಾಏಕಿ ಮಳೆ ಆರಂಭವಾದ ಪರಿಣಾಮ ಮಳೆಯಿಂದ ರಕ್ಷಣೆ ಪಡೆಯಲು ಶೆಡ್ ಕೆಳಗೆ ಆಶ್ರಯ ಪಡೆದಿದ್ದಾರೆ. ಈ ವೇಳೆ ಹಾಲೋ ಬ್ರಿಕ್ಸ್ ನಿಂದ ನಿರ್ಮಿಸಿದ ಗೋಡೆ ಕುಸಿದಿದೆ. ಪರಿಣಾಮ ಗೋಡೆಯ ಅಡಿಯಲ್ಲಿ ಸಿಲುಕಿದ ಭಾಗ್ಯಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಮೊಮ್ಮಗ ವೆಂಕಿ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

    ಮತ್ತೊಂದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮನಿರತ್ನಮ್ಮ (38) ಮತ್ತು ಶ್ರೀನಿವಾಸ್ (25) ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ. ಶೆಡ್ ಗೆ ನಿರ್ಮಿಸಿದ ಗೋಡೆಗೆ ತಳಪಾಯ ಇಲ್ಲದೆ ಇದ್ದದ್ದು ಗೋಡೆ ಕುಸಿಯಲು ಕಾರಣ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೊಡ್ಡಬಳ್ಳಾಪುರ ಶಾಸಕ ಟಿ. ವೆಂಕಟರಮಣಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದ್ದಾರೆ.

  • ಸಿಎಂ ಎಚ್‍ಡಿಕೆ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್

    ಸಿಎಂ ಎಚ್‍ಡಿಕೆ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್

    ಚಿಕ್ಕಬಳ್ಳಾಪುರ: ಇಂದು ಸಿಎಂ ಕುಮಾರಸ್ವಾಮಿ ಸಾಲಮನ್ನಾ ವ್ಯಾಪ್ತಿಗೆ ಒಳಪಟ್ಟಿರೋ ಫಲಾನುಭವಿ ರೈತರಿಗೆ ಋಣಭಾರ ಮುಕ್ತ ಪತ್ರವನ್ನು ವಿತರಿಸಲಿದ್ದಾರೆ.

    ಉತ್ತರ ಕರ್ನಾಟಕದ ಸೇಡಂ ಕ್ಷೇತ್ರದಲ್ಲಿ ಹಾಗೂ ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಪ್ರಾಯೋಗಿಕವಾಗಿ ರೈತರಿಗೆ ಋಣಭಾರ ಮುಕ್ತಪತ್ರ ವಿತರಣೆ ನಡೆಯಲಿದೆ.

    ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧಗೊಂಡಿದೆ. ಸಚಿವ ಕೃಷ್ಣ ಭೈರೇಗೌಡ ಹಾಗೂ ಶಾಸಕ ವೆಂಕಟರಮಣಯ್ಯ ಭೇಟಿ ನೀಡಿ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ್ರು. ಮೊದಲ ಹಂತದಲ್ಲಿ ರಾಜ್ಯಾದ್ಯಾಂತ 64 ಸಾವಿರ ಕೋಟಿ ರೂ. ಸಾಲಮನ್ನಾ ವ್ಯಾಪ್ತಿಗೆ ಓಳಪಟ್ಟಿರೋ ಫಲಾನುಭವಿ ರೈತರಿಗೆ ಋಣಭಾರ ಮುಕ್ತ ಪತ್ರ ಸಿಗಲಿದೆ. ಇನ್ನೂ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ 17300 ಮಂದಿ ರೈತರು ಋಣಭಾರ ಮುಕ್ತ ಪತ್ರ ಪಡೆದುಕೊಳ್ಳಲಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ಮಾಡ್ಕೊಳ್ಳಬೇಡಿ, ನಿಮ್ಮ ಕಷ್ಟಕ್ಕೆ ಸ್ಪಂದಿಸ್ತೇವೆ- ರೈತಾಪಿ ವರ್ಗಕ್ಕೆ ಸಿಎಂ ಮನವಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv