Tag: ದ್ವಿತೀಯ ಪಿಯುಸಿ

  • 2nd PUC Result: ವಿಜ್ಞಾನ ವಿಭಾಗದಲ್ಲಿ ಟಾಪ್ ಅಂಕ ಗಳಿಸಿದ ವಿದ್ಯಾರ್ಥಿಗಳು

    2nd PUC Result: ವಿಜ್ಞಾನ ವಿಭಾಗದಲ್ಲಿ ಟಾಪ್ ಅಂಕ ಗಳಿಸಿದ ವಿದ್ಯಾರ್ಥಿಗಳು

    ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವಿಜ್ಞಾನ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು 596 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ರ‍್ಯಾಂಕ್ ಅನ್ನು ಗಿಟ್ಟಿಸಿಕೊಂಡಿದ್ದಾರೆ. ಈ ಬಾರಿ ರಾಜ್ಯದಲ್ಲಿ ವಿಜ್ಞಾನ ವಿಭಾದಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಸಾಧನೆ ಮಾಡಿರುವ ವಿದ್ಯಾರ್ಥಿಗಳ ಪಟ್ಟಿ ಹೀಗಿದೆ.

    596 ಅಂಕ ಪಡೆದ ವಿದ್ಯಾರ್ಥಿಗಳು:
    ಎಸ್‌ಎಮ್ ಕೌಶಿಕ್ – ಗಂಗೋತ್ರಿ ಪಿಯು ಕಾಲೇಜು ಶ್ರೀನಿವಾಸಪುರ, ಕೋಲಾರ ಜಿಲ್ಲೆ

    ಸುರಭಿ ಎಸ್ – ಆರ್‌ವಿ ಪಿಯು ಕಾಲೇಜು ಎನ್‌ಎಮ್‌ಕೆಆರ್‌ವಿ ಕ್ಯಾಂಪಸ್ 3ನೇ ಬ್ಲಾಕ್ ಜಯನಗರ, ಬೆಂಗಳೂರು

    595 ಅಂಕ ಪಡೆದ ವಿದ್ಯಾರ್ಥಿಗಳು:
    ಕಟ್ಟೋಜು ಜಯಿಶಿಕ – ಆರ್‌ವಿ ಪಿಯು ಕಾಲೇಜು ಎನ್‌ಎಮ್‌ಕೆಆರ್‌ವಿ ಕ್ಯಾಂಪಸ್ 3ನೇ ಬ್ಲಾಕ್ ಜಯನಗರ, ಬೆಂಗಳೂರು

    ಸಾತ್ವಿಕ್ ಪದ್ಮನಾಭ ಭಟ್ – ಮಹಾತ್ಮಗಾಂಧಿ ಮೆಮೋರಿಯಲ್ ಪಿಯು ಕಾಲೇಜು, ಉಡುಪಿ

    ಜೆಸ್ವಿತ ದಿಯಾಸ್ – ಪೂರ್ಣಪ್ರಜ್ಞಾ ಪಿಯು ಕಾಲೇಜು, ಉಡುಪಿ

    594 ಅಂಕ ಪಡೆದ ವಿದ್ಯಾರ್ಥಿಗಳು:
    ಹರ್ಷಿತ ಆರ್ – ನಾರಾಯಣ ಪಿಯು ಕಾಲೇಜು, ಬೆಂಗಳೂರು

    ನೇಹಾ ರಾವ್ – ಶ್ರೀ ವೆಂಕಟರಮಣ ಪಿಯು ಕಾಲೇಜು, ಕುಂದಾಪುರ, ಉಡುಪಿ

    ಅದಿತಿ ಆರ್ – ಎನ್‌ಎಮ್‌ಕೆಆರ್‌ವಿ ಪಿಯು ಕಾಲೇಜು, ಜಯನಗರ, ಬೆಂಗಳೂರು

    ರುಚಿತಾ ಎಂ – ಸರ್ವೋದಯ ಪಿಯು ಕಾಲೇಜು, ತುಮಕೂರು

    ಸಮಯ ಸದಾನಂದ ಮಬೆನ್ – ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜು, ಉಡುಪಿ

    ಯೋಗೇಶ್ ತುಕರಾಮ್ ಬಡಚಿ – ಸತ್ಯಸಾಯಿ ಲೋಕಸೇವಾ ಪಿಯು ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ

    ರಜತ ಎಂ ಹೆಗಡೆ – ಎಂಇಎಸ್ ಚೈತನ್ಯ ಪಿಯು ಕಾಲೇಜು, ಉತ್ತರ ಕನ್ನಡ ಜಿಲ್ಲೆ

    ಸಿರಿ ಆರ್ ಆಚಾರ್ಯ – ಆರ್‌ವಿ ಪಿಯು ಕಾಲೇಜು, ಎನ್‌ಎಮ್‌ಕೆಆರ್‌ವಿ ಕ್ಯಾಂಪಸ್ 3ನೇ ಬ್ಲಾಕ್ ಜಯನಗರ, ಬೆಂಗಳೂರು

    ಪ್ರಚಿತ ಎಂ – ಆಳ್ವಾಸ್ ಪಿಯು ಕಾಲೇಜು, ಮೂಡುಬಿದಿರೆ, ದಕ್ಷಿಣ ಕನ್ನಡ ಜಿಲ್ಲೆ

    
    
  • 2nd PUC Result: ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯಾ ರಾಜ್ಯಕ್ಕೆ ಪ್ರಥಮ ಸ್ಥಾನ

    2nd PUC Result: ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯಾ ರಾಜ್ಯಕ್ಕೆ ಪ್ರಥಮ ಸ್ಥಾನ

    ಬೆಂಗಳೂರು: ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ ಫಲಿತಾಂಶ (Result) ಪ್ರಕಟವಾಗಿದ್ದು, ವಾಣಿಜ್ಯ (Commerce) ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಅನನ್ಯಾ ಕೆ. ಎ 600 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

    ಕಳೆದ ಮಾರ್ಚ್ 9 ರಿಂದ 29ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ. ಇನ್ನುಳಿದಂತೆ ವಾಣಿಜ್ಯ ವಿಭಾಗದಲ್ಲಿ ಮೊದಲ 10 ಸ್ಥಾನ ಪಡೆದ ವಿದ್ಯಾರ್ಥಿಗಳ ವಿವರ ಈ ರೀತಿ ಇದೆ. ಇದನ್ನೂ ಓದಿ: ಪಿಯು ಪರೀಕ್ಷಾ ಫಲಿತಾಂಶ – ದಕ್ಷಿಣ ಕನ್ನಡ ಫಸ್ಟ್‌, ಉಡುಪಿ ಸೆಕೆಂಡ್‌

    600 ಅಂಕ ಪಡೆದ ವಿದ್ಯಾರ್ಥಿ:

    ಅನನ್ಯಾ ಕೆ.ಎ 600 ಅಂಕ, ಆಳ್ವಾಸ್ ಕಾಲೇಜು ಮೂಡುಬಿದಿರೆ, ದಕ್ಷಿಣ ಕನ್ನಡ

    596 ಅಂಕ ಪಡೆದ ವಿದ್ಯಾರ್ಥಿಗಳು:

    ಅನ್ವಿತಾ ಡಿ.ಎನ್‌, 596 ಅಂಕ, ವಿಕಾಸ್ ಕಂಪ್ ಪಿಯು ಕಾಲೇಜು ಶಿವಮೊಗ್ಗ

    ಛಾಯಾ ರವಿ ಕುಮಾರ್‌, 596 ಅಂಕ, ಟ್ರಾನ್ಸೆಂಡ್ ಪಿಯು ಕಾಲೇಜು, ಜಯನಗರ ಬೆಂಗಳೂರು

    ಖುಷಿ ಬಾಗಲಕೋಟ್‌, 596 ಅಂಕ, ಎಕ್ಸ್‌ಲೆಂಟ್‌ ಪಿಯು ಕಾಲೇಜು ಮೂಡುಬಿದಿರೆ

    ಸ್ವಾತಿ ಪೈ 596 ಅಂಕ, ವಿಕಾಸ್‌ ಪಿಯು ಕಾಲೇಜು ಮಂಗಳೂರು

    ಧನ್ಯಶ್ರೀ ರಾವ್‌, 596 ಅಂಕ, ಕ್ರೈಸ್ಟ್ ಪಿಯು ಕಾಲೇಜು, ಬೆಂಗಳೂರು

    ವರ್ಷಾ ಸತ್ಯನಾರಾಯಣ್‌, 596 ಅಂಕ, ಟ್ರಾನ್ಸೆಂಡ್ ಪಿಯು ಕಾಲೇಜು ಜಯನಗರ, ಬೆಂಗಳೂರು

    ಕೆ. ದಿಶಾ ರಾವ್‌, 596 ಅಂಕ, ಆಳ್ವಾಸ್ ಕಾಲೇಜ್‌ ಮೂಡುಬಿದಿರೆ

    ಇಂಚರಾ ಎನ್‌, 596 ಅಂಕ, ಎಎಸ್‌ಸಿ ಪಿಯು ಕಾಲೇಜ್‌, ಬೆಂಗಳೂರು

    ಗಾನ ಐ 596 ಅಂಕ ಕ್ರೈಸ್ಟ್ ಪಿಯು ಕಾಲೇಜ್‌, ಬೆಂಗಳೂರು.

  • ಪಿಯು ಪರೀಕ್ಷಾ ಫಲಿತಾಂಶ – ದಕ್ಷಿಣ ಕನ್ನಡ ಫಸ್ಟ್‌, ಉಡುಪಿ ಸೆಕೆಂಡ್‌

    ಪಿಯು ಪರೀಕ್ಷಾ ಫಲಿತಾಂಶ – ದಕ್ಷಿಣ ಕನ್ನಡ ಫಸ್ಟ್‌, ಉಡುಪಿ ಸೆಕೆಂಡ್‌

    ಬೆಂಗಳೂರು: ಕಳೆದ ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ.

    ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ.

    ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ.

    ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ಪಾಸ್ ಆಗಿದ್ದರೆ ಬಾಲಕರು 69.05% ಪಾಸ್‌ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

    ಯಾವ ದರ್ಜೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಪಾಸ್‌?
    ಡಿಸ್ಟಿಂಕ್ಷನ್‌ – 1,09,509
    ಪ್ರಥಮ ದರ್ಜೆ – 2,47,315
    ದ್ವಿತೀಯ ದರ್ಜೆ – 90,014
    ತೃತೀಯ ದರ್ಜೆ – 77,371

    ಕಲಾ ವಿಭಾಗದಲ್ಲಿ 2,20,305 ವಿದ್ಯಾರ್ಥಿಗಳ ಪೈಕಿ 1,34,876 ವಿದ್ಯಾರ್ಥಿಗಳು ತೇರ್ಗಡೆಯಾಗಿ 61.22% ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 2,40,146 ವಿದ್ಯಾರ್ಥಿಗಳ ಪೈಕಿ 1,82,246 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು 75.89% ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ 2,41,616 ವಿದ್ಯಾರ್ಥಿಗಳ ಪೈಕಿ 2,07,087 ವಿದ್ಯಾರ್ಥಿಗಳು ಪಾಸ್‌ ಆಗಿ 85.71% ಫಲಿತಾಂಶ ದಾಖಲಾಗಿದೆ.

    ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಏಪ್ರಿಲ್ 27 ಕೊನೆ ದಿನವಾಗಿದ್ದು ಮರು ಮೌಲ್ಯ ಮಾಪನ, ಮರು‌ ಎಣಿಕೆಗೆ ಅರ್ಜಿ ಸಲ್ಲಿಕೆಗೆ ಮೇ 8 ಕೊನೆ ದಿನವಾಗಿದೆ.

  • ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ

    ಹುಬ್ಬಳ್ಳಿ: ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ (Second PUC Exam) ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ (North Western Karnataka Road Transport Corporation) ಸಂಸ್ಥೆ ತಿಳಿಸಿದೆ.

    ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಶಾಲೆಗಳಲ್ಲಿ ಪರೀಕ್ಷೆಗಳು ನಡೆಯುವುದರಿಂದ ಶಿಕ್ಷಣ ಇಲಾಖೆಯ (Education Department) ಕೋರಿಕೆಯ ಮೇರೆಗೆ ಈ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: Breaking- ‘ಕಬ್ಜ’ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ಬಿಗ್ ಬಿ ಅಮಿತಾಬ್ ಬಚ್ಚನ್

    ಮಾರ್ಚ್ 9ರಿಂದ 29ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ತೆರಳುವ ವಿದ್ಯಾರ್ಥಿಗಳು ನಿರ್ವಾಹಕರಿಗೆ (Conductor) ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣದ ಸೌಲಭ್ಯ ಪಡೆಯಬಹುದಾಗಿದೆ. ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಮದುವೆಯ ಬಳಿಕ ಮ್ಯಾಂಗೋ ಬಣ್ಣದ ಡ್ರೆಸ್‌ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ

  • ಪಿಯು ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಬಂದರೂ ಪರಿಗಣನೆ

    ಪಿಯು ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಬಂದರೂ ಪರಿಗಣನೆ

    ಬೆಂಗಳೂರು: ದ್ವಿತೀಯ ಪಿಯುಸಿ (Second PUC) ಮರು ಮೌಲ್ಯಮಾಪನ (Revaluation) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ರಾಜ್ಯ ಸರ್ಕಾರ (Karnataka Government) ಮತ್ತು ಶಿಕ್ಷಣ ಇಲಾಖೆ ಮಾಡಿದೆ.

    ಇನ್ನು ಮುಂದೆ ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಬಂದರೂ ಅದನ್ನು ವಿದ್ಯಾರ್ಥಿಗಳ ಅಂಕಕ್ಕೆ ಪರಿಗಣನೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. 2023ರ ಪರೀಕ್ಷೆಯಿಂದಲೇ ಈ ನಿಯಮ ಜಾರಿ ಬರಲಿದೆ. ಇದನ್ನೂ ಓದಿ: ಕ್ರಶ್ ಮದುವೆ ಆಗಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಸುದೀಪ್ ಪುತ್ರಿ

     

    ಇಲ್ಲಿಯವರೆಗೆ ಮರು ಮೌಲ್ಯಮಾಪನದಲ್ಲಿ ಕನಿಷ್ಠ 6 ಅಂಕ ಬಂದರೆ ಮಾತ್ರ ವಿದ್ಯಾರ್ಥಿಗಳ ಅಂಕಕ್ಕೆ ಪರಿಗಣನೆ ಮಾಡಲಾಗುತ್ತಿತ್ತು. ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಇನ್ನು ಮುಂದೆ ಒಂದು ಅಂಕ ಬಂದರೂ ಅದನ್ನು ಸೇರ್ಪಡೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

    ಈ ಸಂಬಂಧ ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮ 1997 ನಿಯಮಕ್ಕೆ ತಿದ್ದುಪಡಿ ತರಲು ಶಿಕ್ಷಣ ಇಲಾಖೆ ಮುಂದಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ- ಯಾವ ದಿನ, ಯಾವ ಪರೀಕ್ಷೆ?

    ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ- ಯಾವ ದಿನ, ಯಾವ ಪರೀಕ್ಷೆ?

    ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ (Exam) ಅಂತಿಮ ವೇಳಾಪಟ್ಟಿ (Time Table) ಪ್ರಕಟವಾಗಿದ್ದು, 2023 ಮಾರ್ಚ್ 9 ರಿಂದ ಮಾರ್ಚ್‌ 29 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಈ ಬಗ್ಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಇದನ್ನೂ ಓದಿ: ತರಗತಿಯಲ್ಲಿ ವಿದ್ಯಾರ್ಥಿಯನ್ನ `ಟೆರರಿಸ್ಟ್’ ಎಂದ ಪ್ರೊಫೆಸರ್ ಅಮಾನತು

    ವೇಳಾಪಟ್ಟಿ ಹೀಗಿದೆ:
    ಮಾರ್ಚ್ 9- ಕನ್ನಡ, ಅರೇಬಿಕ್
    ಮಾರ್ಚ್ 11- ಗಣಿತಶಾಸ್ತ್ರ, ಶಿಕ್ಷಣ
    ಮಾರ್ಚ್ 13- ಅರ್ಥಶಾಸ್ತ್ರ
    ಮಾರ್ಚ್ 14- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
    ಮಾರ್ಚ್ 15- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು,ಸಂಸ್ಕೃತ, ಫ್ರೆಂಚ್
    ಮಾರ್ಚ್ 16- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
    ಮಾರ್ಚ್ 17-ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
    ಮಾರ್ಚ್‌ 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
    ಮಾರ್ಚ್ 20- ಇತಿಹಾಸ ಭೌತಶಾಸ್ತ್ರ
    ಮಾರ್ಚ್ 21- ಹಿಂದಿ
    ಮಾರ್ಚ್‌ 23- ಇಂಗ್ಲಿಷ್
    ಮಾರ್ಚ್ 25- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
    ಮಾರ್ಚ್ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ,ಗೃಹ ವಿಜ್ಞಾನ
    ಮಾರ್ಚ್ 29- ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

    Live Tv
    [brid partner=56869869 player=32851 video=960834 autoplay=true]

  • ಕೋರ್ಟ್‌ ನೋಟಿಸ್‌ಗೆ ಥಂಡಾ – ಕರೆ ಮಾಡಿ ಹೆಚ್ಚುವರಿ ಅಂಕ ನೀಡ್ತೀವಿ ಎಂದ ಪಿಯು ಬೋರ್ಡ್‌

    ಕೋರ್ಟ್‌ ನೋಟಿಸ್‌ಗೆ ಥಂಡಾ – ಕರೆ ಮಾಡಿ ಹೆಚ್ಚುವರಿ ಅಂಕ ನೀಡ್ತೀವಿ ಎಂದ ಪಿಯು ಬೋರ್ಡ್‌

    ಕೊಪ್ಪಳ: ಮೌಲ್ಯಮಾಪನ(Valuation) ಸರಿಯಾಗಿ ಮಾಡದೇ ವಿದ್ಯಾರ್ಥಿಯ ಮನವಿಗೂ ಬೆಲೆ ನೀಡದ ಪಿಯು ಬೋರ್ಡ್‌(PU Board) ಈಗ ಕೋರ್ಟ್‌ ನೋಟಿಸ್‌ಗೆ ಎಚ್ಚೆತ್ತು ಹೆಚ್ಚುವರಿ ಅಂಕ ನೀಡಲು ಮುಂದಾಗಿದೆ.

    ಗಂಗಾವತಿ ತಾಲೂಕಿನ ಶ್ರೀರಾಮನಗರ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ಚಂದ್ರಮ್ಮ ದ್ವಿತೀಯ ಪಿಯುಸಿ( Second PUC) ವಿಜ್ಞಾನ ಪರೀಕ್ಷೆ ಬರೆದಿದ್ದಳು. ಪರೀಕ್ಷೆಯ ಫಲಿತಾಂಶ ಪ್ರಕಟವಾದಾಗ ವಿದ್ಯಾರ್ಥಿನಿಗೆ ಶಾಕ್‌ ಆಗಿತ್ತು. ಜೀವಶಾಸ್ತ್ರ ವಿಷಯದಲ್ಲಿ ಕೇವಲ 29 ಅಂಕ ಹಾಗೂ ಇಂಗ್ಲಿಷ್‌ನಲ್ಲಿ 40 ಅಂಕಗಳನ್ನು ನೀಡಿದ್ದರಿಂದ ಒಟ್ಟು ಶೇ. 65 ರಷ್ಟು ಫಲಿತಾಂಶ ಮಾತ್ರ ಬಂದಿತ್ತು.

    ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ನಿವಾಸಿಯಾದ ಡಿ.ಸತ್ಯನಾರಾಯಣ ಅವರ ಪುತ್ರಿಯಾಗಿರುವ ಚಂದ್ರಮ್ಮ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.86, ಪಿಯು ಪ್ರಥಮ ವರ್ಷದಲ್ಲಿ ಶೇ. 98 ರಷ್ಟು ಅಂಕ ಪಡೆದಿದ್ದಳು. ದ್ವಿತೀಯ ಪಿಯುಸಿಯಲ್ಲಿ ಇಷ್ಟು ಕಡಿಮೆ ಅಂಕ ಬರಲು ಸಾಧ್ಯವೇ ಇಲ್ಲ ಎಂದು ತಿಳಿದು ಕಾಲೇಜಿನ ಉಪನ್ಯಾಸಕರು, ಪಾಲಕರು ಪಿಯು ಬೋರ್ಡ್‌ಗೆ ಶುಲ್ಕವನ್ನು ಭರಿಸಿ, ಉತ್ತರ ಪರೀಕ್ಷೆಯ ಪೋಟೋ ಕಾಪಿಯನ್ನು ತರಿಸಿಕೊಂಡಿದ್ದಾರೆ. ಪೋಟೊ ಕಾಪಿಯಲ್ಲಿ ಉತ್ತರ ಸರಿ ಇದ್ದರೂ ಅಂಕ ಸರಿಯಾಗಿ ನೀಡದೇ ಇರುವ ವಿಚಾರ ಗೊತ್ತಾಗಿದೆ. ಕೂಡಲೇ ವಿದ್ಯಾರ್ಥಿನಿ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದಾಳೆ.

    ಮರು ಮೌಲ್ಯಮಾಪನದಲ್ಲಿ ಜೀವಶಾಸ್ತ್ರ ವಿಷಯಕ್ಕೆ ಮಾತ್ರ 27 ಅಂಕಗಳನ್ನು ಹೆಚ್ಚುವರಿಯಾಗಿ ನೀಡಿದ್ದಾರೆ. ಆದರೆ ಇಂಗ್ಲಿಷ್‌ವಿಷಯಕ್ಕೆ ಯಾವುದೇ ರೀತಿಯ ಅಂಕ ನೀಡಿರಲಿಲ್ಲ. ಪೋಟೋ ಕಾಪಿಯಲ್ಲಿ ಗಮನಿಸಿದಂತೆ ಇಂಗ್ಲಿಷ್‌ ವಿಷಯಕ್ಕೆ ಹೆಚ್ಚುವರಿಯಾಗಿ ಇನ್ನೂ 42 ಅಂಕಗಳನ್ನು ನೀಡಬೇಕಿತ್ತು. ಇದನ್ನೂ ಓದಿ: ಪಿಯು ಬೋರ್ಡ್ ಎಡವಟ್ಟು- ವಿದ್ಯಾರ್ಥಿನಿ ಪಾಸ್ ಆದ್ರೂ ಫೇಲ್

    ಪಿಯು ಬೋರ್ಡ್‌ ಬೇಜವಾಬ್ದಾರಿಗೆ ಬೇಸತ್ತ ವಿದ್ಯಾರ್ಥಿನಿ ಸೆಪ್ಟೆಂಬರ್‌ನಲ್ಲಿ ಗಂಗಾವತಿ ಕೋರ್ಟ್‌(Gangavathi Court) ಮೊರೆ ಹೋಗಿದ್ದಳು. ಅರ್ಜಿ ಮಾನ್ಯವಾಗಿದ್ದು ಕೋರ್ಟ್ ಮೂಲಕ ನೋಟಿಸ್ ಹೋಗುತ್ತಿದ್ದಂತೆ ಪಿಯು ಬೋರ್ಡ್‌ ಸಿಬ್ಬಂದಿ ಈಗ ವಿದ್ಯಾರ್ಥಿನಿಯ ಪಾಲಕರಿಗೆ ಕರೆ ಮಾಡಿ ಹೆಚ್ಚುವರಿ 42 ಅಂಕಗಳನ್ನು ನೀಡುತ್ತೇವೆ. ಅರ್ಜಿಯನ್ನು ವಾಪಸ್‌ ಪಡೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.

    ಮೌಲ್ಯಮಾಪನದ ವೇಳೆ ತಪ್ಪಾದರೆ ಮಾನವ ದೋಷ ಎಂದು ಸಣ್ಣ ಸಮರ್ಥನೆ ನೀಡಬಹುದು. ಆದರೆ ಫೋಟೋ ಕಾಪಿ ತರಿಸಿ ತಪ್ಪಾಗಿದೆ ಹೆಚ್ಚುವರಿ ಅಂಕ ನೀಡಿ ಎಂದು ದಾಖಲೆಯೊಂದಿಗೆ ವಿವರಿಸಿದರೂ ಪಿಯು ಬೋರ್ಡ್‌ ಸಿಬ್ಬಂದಿ ಬೇಜವಾಬ್ದಾರಿ ತೋರಿಸಿದ್ದು ಎಷ್ಟು ಸರಿ? ವಿದ್ಯಾರ್ಥಿನಿಯ ಪೋಷಕರಿಗೆ ಕಾನೂನು ಜ್ಞಾನ ಇದ್ದ ಕಾರಣ ಕೋರ್ಟ್‌ ಮೊರೆ ಹೋಗಿದ್ದಾರೆ. ಕಾನೂನಿನ ಜ್ಞಾನ ಇಲ್ಲದೇ ಇದ್ದರೆ ಪಿಯು ಬೋರ್ಡ್‌ ಹೇಳಿದ್ದನ್ನೇ ಕೇಳಬೇಕಿತ್ತು. ಇಂದು ಕಾಲೇಜಿನಲ್ಲಿ ಸೀಟ್‌ ಪಡೆಯಲು ಅಂಕವೇ ಮಾನದಂಡ ಆಗಿರುವ ಕಾರಣ ಇನ್ನಾದರೂ ಈ ತಪ್ಪಿನಿಂದ ಎಚ್ಚೆತ್ತು ಪಿಯು ಬೋರ್ಡ್‌ ಸಿಬ್ಬಂದಿ ಅಂಕ ಕುರಿತ ಸಮಸ್ಯೆಗೆ ಸರಿಯಾಗಿ ಸ್ಪಂದಿಸುವುದನ್ನು ಕಲಿಯಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ- ಬಾಲಕಿಯರೇ‌ ಮೇಲುಗೈ

    ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ- ಬಾಲಕಿಯರೇ‌ ಮೇಲುಗೈ

    ಬೆಂಗಳೂರು: ಕಳೆದ ಆಗಸ್ಟ್‌ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ(2nd PUC) ಪೂರಕ ಪರೀಕ್ಷೆ(Exam) ಫಲಿತಾಂಶ(Result) ಪ್ರಕಟಗೊಂಡಿದೆ. ಈ ಬಾರಿಯ ಪೂರಕ ಪರೀಕ್ಷೆಯಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

    ಪೂರಕ ಪರೀಕ್ಷೆಯಲ್ಲಿ ಸುಮಾರು 1,75,905 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರ ಪೈಕಿ 65,233 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಒಟ್ಟಾರೆ ಫಲಿತಾಂಶ 37.08% ಬಂದಿದೆ. ಪಾಸ್ ಆದವರ ಪೈಕಿ ಬಾಲಕರು 36,637 (34.91%) ಹಾಗೂ ಬಾಲಕಿಯರು 28,596 (40.30%) ಪಾಸ್ ಆಗಿದ್ದಾರೆ. ಇದನ್ನೂ ಓದಿ: ಷರತ್ತು ವಿಧಿಸಿ ಭಾರತಕ್ಕೆ ಇನ್ನಷ್ಟು ಡಿಸ್ಕೌಂಟ್ ದರದಲ್ಲಿ ತೈಲ ನೀಡಲು ಮುಂದಾದ ರಷ್ಯಾ

    ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿಗೆ ಅರ್ಜಿ ಸಲ್ಲಿಕೆ ಕೊನೆ ದಿನ ಸೆಪ್ಟೆಂಬರ್ 15ಕ್ಕೆ‌ ನಿಗದಿ ಮಾಡಲಾಗಿದೆ. ಮರು ಎಣಿಕೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಕೊನೆ ದಿನ ಸೆಪ್ಟೆಂಬರ್ 21 ರಿಂದ 25 ನೀಡಲಾಗಿದೆ. ಸ್ಕ್ಯಾನಿಂಗ್ ಪ್ರತಿ ಪಡೆದವರು ಮಾತ್ರ ಮರು ಎಣಿಕೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು ಅಂತ ನಿಯಮ ರೂಪಿಸಲಾಗಿದೆ. ಇದನ್ನೂ ಓದಿ: ಸದನದ ಸಮಯ ಹಾಳು ಮಾಡಲಾರೆ: ಹೆಚ್‌ಡಿಕೆ

    Live Tv
    [brid partner=56869869 player=32851 video=960834 autoplay=true]

  • ಸಿಇಟಿ ಫಲಿತಾಂಶ ಪ್ರಕಟ- ಬಹುತೇಕ ಬೆಂಗಳೂರಿನ ವಿದ್ಯಾರ್ಥಿಗಳೇ ಟಾಪರ್ಸ್‌

    ಸಿಇಟಿ ಫಲಿತಾಂಶ ಪ್ರಕಟ- ಬಹುತೇಕ ಬೆಂಗಳೂರಿನ ವಿದ್ಯಾರ್ಥಿಗಳೇ ಟಾಪರ್ಸ್‌

    ಬೆಂಗಳೂರು: 2021-22ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಗೆ ನಡೆದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

    2021-22ನೇ ಸಾಲಿನ ವೃತ್ತಿಪರ ಕೋರ್ಸ್ ಗಳ ಸೀಟು ಹಂಚಿಕೆಗೆ ನಡೆದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಇಂದು ಕೆಇಎ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಿದರು. ಸಿಇಟಿ ಪರೀಕ್ಷೆಗೆ ಸುಮಾರು 2.16 ಲಕ್ಷ ವಿದ್ಯಾರ್ಥಿಗಳು ನೋಂದಣಿ ಆಗಿದ್ದರು. ಈ‌ ಪೈಕಿ 2.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

    ಎಂಜಿನಿಯರ್ ಗೆ – 1,71,656 ರ‍್ಯಾಂಕ್, ಕೃಷಿ ಕೋರ್ಸ್ ಗೆ 1,39,968 ರ‍್ಯಾಂಕ್, ಪಶುಸಂಗೋಪನೆ ಕೋರ್ಸ್ ಗೆ 1,42,820 ರ‍್ಯಾಂಕ್, ಯೋಗ ಮತ್ತು ನ್ಯಾಚುರೋಪತಿಗೆ 1,42,750 ರ‍್ಯಾಂಕ್ ಮತ್ತು ಬಿ ಫಾರ್ಮ್ ಗೆ 1,74,568 ರ‍್ಯಾಂಕ್ ನೀಡಲಾಗಿದೆ. ವಿಶೇಷ ಅಂದ್ರೆ 5 ಕೋರ್ಸ್‌ನ ಟಾಪ್ 9 ರ‍್ಯಾಂಕ್‌ಗಳನ್ನು ಬಹುತೇಕ ಬೆಂಗಳೂರಿನ ವಿದ್ಯಾರ್ಥಿಗಳು ಪಡೆದಿದ್ದಾರೆ.

    ಈ ಬಾರಿ 7 ಅಂಕ ಗ್ರೇಸ್ ನೀಡಲಾಗಿದೆ. ಗಣಿತಕ್ಕೆ 5, ಭೌತಶಾಸ್ತ್ರ, ಮತ್ತು ರಸಾಯನಶಾಸ್ತ್ರಕ್ಕೆ ತಲಾ 1 ಅಂಕ ಗ್ರೇಸ್ ನೀಡಲಾಗಿದೆ. ಆಗಸ್ಟ್ 5 ರಿಂದ ದಾಖಲಾತಿ ಪರಿಶೀಲನೆ ಪ್ರಕ್ರಿಯೆ‌ ಪ್ರಾರಂಭವಾಗಲಿದ್ದು, ಸಂಪೂರ್ಣ ಆನ್ ಲೈನ್ ಮೂಲಕ ಪ್ರಕ್ರಿಯೆ ನಡೆಯಲಿದೆ. ಈ ವರ್ಷ ಸುಮಾರು 1.08 ಲಕ್ಷ ಸೀಟುಗಳು ಎಂಜಿನಿಯರಿಂಗ್ ನಲ್ಲಿ ಲಭ್ಯವಿದ್ದು, 57 ಸಾವಿರಕ್ಕೂ ಹೆಚ್ಚು ಸೀಟು ಸರ್ಕಾರದ ಕೋಟಾಗೆ ಸಿಗಲಿವೆ ಎಂದು ಸಚಿವ ಅಶ್ವಥ್ ನಾರಾಯಣ ತಿಳಿಸಿದರು.

    ಎಂಜಿನಿಯರಿಂಗ್ ವಿಭಾಗದಲ್ಲಿ ಯಲಹಂಕದ ನ್ಯಾಷನಲ್ ಪಬ್ಲಿಕ್ ಸ್ಕೂಲ್‍ನ ಅಪೂರ್ವ ಟಂಡನ್ ಮೊದಲ ರ‍್ಯಾಂಕ್ ಪಡೆದಿದ್ದು, ಎರಡನೇ ಹಾಗೂ ಮೂರನೇ ಸ್ಥಾನವನ್ನು ಮಾರತ್‍ಹಳ್ಳಿಯ ಶ್ರೀ ಚೈತನ್ಯ ಟೆಕ್ನೊ ಸ್ಕೂಲ್‍ನ ವಿದ್ಯಾರ್ಥಿಗಳಾದ ಸಿದ್ದಾರ್ಥ ಸಿಂಗ್ ಹಾಗೂ ಆತ್ಮಕುರಿ ವೆಂಕಟ ಮಾದ್ ಕ್ರಮವಾಗಿ ಪಡೆದಿದ್ದಾರೆ. ಇದನ್ನೂ ಓದಿ: ತೇಜಸ್ವಿ ಸೂರ್ಯಗೆ ಹೂ ಕೊಡಲು ಬಂದ ಕೈ ಕಾರ್ಯಕರ್ತೆ ವಶಕ್ಕೆ

    ಬಿಎಸ್ಟಿ ಅಗ್ರಿಕಲ್ಚರ್ ವಿಭಾಗದಲ್ಲಿ ಎಚ್‍ಎಎಲ್ ಪಬ್ಲಿಕ್ ಸ್ಕೂಲ್‍ನ ಅರ್ಜುನ್ ರವಿಶಂಕರ್‌ಗೆ ಮೊದಲ ಸ್ಥಾನ, ಬೆಂಗಳೂರಿನ ಚೈತನ್ಯ ಇ ಟೆಕ್ನೋ ಕಾಲೇಜಿನ ಸುಮೀಸ್ ಎಸ್ ಪಾಟೀಲ್ ದ್ವಿತೀಯ ಸ್ಥಾನ ಹಾಗೂ ತುಮಕೂರಿನ ವಿದ್ಯಾನಿಕೇತನ ಪಿಯು ಕಾಲೇಜಿನ ಸುದೀಪ್ ವೈ.ಎಂಗೆ ತೃತೀಯ ಸ್ಥಾನ ದೊರಕಿದೆ.

    ಯೋಗ ಮತ್ತು ನ್ಯಾಚುರೋಪತಿಯಲ್ಲಿ ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸಿಯ ಹೃಷಿಕೇಶ್ ಪ್ರಥಮ ಸ್ಥಾನ ಗಳಿಸಿದ್ದು, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಕ್ರಮವಾಗಿ ಉಡುಪಿಯ ಮಾಧವ ಕೃಪ ಇಂಗ್ಲೀಷ್ ಸ್ಕೂಲ್‍ನ ವಿ. ರಾಜೇಶ್ ಹಾಗೂ ಬೆಂಗಳೂರಿನ ಚೈತನ್ಯ ಟೆಕ್ನೋದ ಕೃಷ್ಣ ಎಸ್. ಆರ್ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ನಮ್ಮೂರಿನಲ್ಲಿ ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು ಈಗ ಅವರು ಭೂಮಿ ಮೇಲೆ ಇದ್ದಾರಾ ಗೊತ್ತಿಲ್ಲ: ಪೋಸ್ಟರ್ ವೈರಲ್

    ಬಿ.ವಿ.ಎಸ್‍ಸಿ (ಪಶುಸಂಗೋಪನೆ)ಯಲ್ಲಿ ಬೆಂಗಳೂರಿನ ನ್ಯಾಷಲ್ ಸೆಂಟರ್ ಫಾರ್ ಎಕ್ಸಲೆನ್ಸ್‌ನ ಹೃಷಿಕೇಶ್ ಮೊದಲ ರ‍್ಯಾಂಕ್ ಪಡೆದಿದ್ದು, ಚೈತನ್ಯ ಇ ಟೆಕ್ನೋ ವಿದ್ಯಾರ್ಥಿಗಳಾದ ಮನಿಶ್ ಹಾಗೂ ಶುಭ ಕೌಶಿಕ್ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

    ಬಿ. ಫಾರ್ಮ್‍ನಲ್ಲಿ ನಾರಾಯಣ್ ಇ ಟೆಕ್ನೋ ಕಾಲೇಜಿನ ಶಿಶಿರ್ ಆರ್‍ಕೆ ಮೊದಲ ಸ್ಥಾನವನ್ನು ಪಡೆದಿದ್ದಾರೆ. ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸಿಯ ಹೃಷಿಕೇಶ್ ದ್ವಿತೀಯ ಸ್ಥಾನ ಪಡೆದಿದ್ದು, ಯಲಹಂಕದ ನ್ಯಾಷನಲ್ ಪಬ್ಲಿಕ್ ಸ್ಕೂಲ್‍ನ ಅಪೂರ್ವ ಟಂಡನ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.

    ಆಗಸ್ಟ್‌ 12ರಿಂದ 25ರ ವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ವೇಳಾಪಟ್ಟಿಯನ್ನು https://pue.karnataka.gov.in ಅಂತರ್ಜಾಲದಲ್ಲಿ ವೀಕ್ಷಿಸಬಹುದು. ಇದನ್ನೂ ಓದಿ: ಬಡವರ ಉದ್ಧಾರಕ್ಕಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಸಿದ್ದರಾಮಯ್ಯೋತ್ಸವ: ಹಾಲಪ್ಪ ಕಿಡಿ

    ಪರೀಕ್ಷಾ ವೇಳಾಪಟ್ಟಿ ಹೀಗಿದೆ..
    ಕನ್ನಡ, ಅರೇಬಿಕ್ – ಆ.12
    ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ – ಆ.13
    ಹಿಂದಿ – ಆ.16
    ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ – ಆ.17
    ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ – ಆ.18
    ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ – ಆ.19
    ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ – ಆ.20
    ಇಂಗ್ಲಿಷ್‌ – ಆ.22
    ಅರ್ಥಶಾಸ್ತ್ರ, ಜೀವಶಾಸ್ತ್ರ – ಆ.23
    ಇತಿಹಾಸ, ಸಂಖ್ಯಾಶಾಸ್ತ್ರ – ಆ.24
    ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ – ಆ.25

    Live Tv
    [brid partner=56869869 player=32851 video=960834 autoplay=true]