Tag: ಧನಕುಮಾರ್

  • ಟ್ರೇಲರ್ ಮೂಲಕ ಗರಿಗೆದರಿದ ಗರುಡ : ಶಿವಣ್ಣ ಮೆಚ್ಚುಗೆ!

    ಟ್ರೇಲರ್ ಮೂಲಕ ಗರಿಗೆದರಿದ ಗರುಡ : ಶಿವಣ್ಣ ಮೆಚ್ಚುಗೆ!

    ಬೆಂಗಳೂರು: ಕಳೆದ ಮೂರು ವರ್ಷಗಳಿಂದ ಸತತವಾಗಿ ಸಿದ್ಧಗೊಳ್ಳುತ್ತಿದ್ದ, ಸಿದ್ಧಾರ್ಥ್ ಮಹೇಶ್, ಶ್ರೀನಗರ ಕಿಟ್ಟಿ ಪ್ರಧಾನ ಪಾತ್ರದಲ್ಲಿ ನಟಿಸಿರುವ ‘ಗರುಡ’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದ ಟ್ರೇಲರ್ ನೋಡಿದವರಿಗೆ ಯಾಕೆ ಮೂರು ವರ್ಷ ಕಾಲಾವಧಿಯನ್ನು ಈ ಸಿನಿಮಾ ಪಡೆದುಕೊಂಡಿತು ಅನ್ನೋದರ ಸ್ಪಷ್ಟ ಚಿತ್ರಣ ಸಿಗುತ್ತದೆ. ಗರುಡ ಚಿತ್ರದ ಟ್ರೇಲರ್ ನೋಡಿದವರಿಗೆ ‘ಇದೇನಿದು ಹಾಲಿವುಡ್ ರೇಂಜಿಗೆ ರೂಪಿಸಿದ್ದಾರಲ್ಲಾ?’ ಎನ್ನುವ ಭಾವನೆ ಮೂಡುತ್ತದೆ. ಅಷ್ಟೊಂದು ದೃಶ್ಯ ಶ್ರೀಮಂತಿಕೆ ಹೊಂದಿರುವ ಈ ಚಿತ್ರ ದೊಡ್ಡ ಬಜೆಟ್ಟು, ಹಿರಿದಾದ ಕಲಾವಿದ, ತಂತ್ರಜ್ಞರನ್ನು ಒಳಗೊಂಡು ತಯಾರಾಗಿದೆ. ಆರೆಂಜ್ ಪಿಕ್ಸಲ್ಸ್ ಲಾಂಛನದಲ್ಲಿ, ಕಿಶೋರ್ ಎ ಅರ್ಪಿಸಿ, ಬಿ.ಕೆ. ರಾಜಾರೆಡ್ಡಿ ಮತ್ತು ಪ್ರಸಾದ್ ರೆಡ್ಡಿ ಎಸ್ ಅವರು ನಿರ್ಮಿಸುತ್ತಿರುವ ಚಿತ್ರ ‘ಗರುಡ’. ಈ ಹಿಂದೆ ‘ಸಿಪಾಯಿ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಸಿದ್ಧಾರ್ಥ್ ಮಹೇಶ್ ಅವರ ಎರಡನೇ ಚಿತ್ರ ಇದಾಗಿದೆ.

    ಈ ಚಿತ್ರದ ಟ್ರೇಲರ್ ಅನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆಗೊಳಿಸಿದ್ದಾರೆ. ಜೊತೆಗೆ ಈ ಚಿತ್ರತಂಡ ಶ್ರಮವನ್ನು ಕಂಡು ಬೆರಗಾಗಿದ್ದಾರೆ. ಟ್ರೇಲರನ್ನು ಅಪಾರವಾಗಿ ಮೆಚ್ಚಿರುವ ಶಿವಣ್ಣ ಸಿದ್ಧಾರ್ಥ್ ಮಹೇಶ್ ಸೇರಿದಂತೆ ಗರುಡ ಚಿತ್ರಕ್ಕೆ ಶುಭಾಶಯ ತಿಳಿಸಿದ್ದಾರೆ.

    ಕುಟುಂಬದಲ್ಲಿ ಒಂದು ಘಟನೆ ನಡೆಯುತ್ತದೆ. ಅದು ನಾಯಕನ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ. ಕೌಟುಂಬಿಕವಾಗಿ ಶುರುವಾಗುವ ಚಿತ್ರ ಎಲ್ಲೆಲ್ಲಿ ಸಾಗುತ್ತದೆ ಅನ್ನೋದು ಗರುಡ ಚಿತ್ರದ ಪ್ರಧಾನ ಅಂಶ. ಸಿದ್ಧಾಥ್ ಮಹೇಶ್ ಈ ಚಿತ್ರದಲ್ಲಿ ಆ ಕುಟುಂಬದ ಹುಡುಗನಾಗಿ ನಟಿಸಿದ್ದಾರೆ. ನಟ ಶ್ರೀನಗರ ಕಿಟ್ಟಿ ಈ ವರೆಗೆ ಬೇರೆ ಬೇರೆ ರೀತಿಯ ಪಾತ್ರಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ಆದರೆ, ಗರುಡ ಅವರ ವೃತ್ತಿ ಬದುಕಿಗೆ ಕಮರ್ಷಿಯಲ್ ಕಲರ್ ನೀಡಿ ನನ್ನ ಕೆರಿಯರ್‍ಗೆ ಬೇರೆ ದಾರಿ ನೀಡುತ್ತದೆ ಎನ್ನುವ ನಂಬಿಕೆ ಸ್ವತಃ ಕಿಟ್ಟಿ ಅವರದ್ದು. ಕಿಟ್ಟಿ ಮತ್ತು ರಂಗಾಯಣ ರಘು ಕಾಂಬಿನೇಷನ್ ಸಾಕಷ್ಟು ಸಿನಿಮಾಗಳಲ್ಲಿ ವರ್ಕೌಟ್ ಆಗಿದೆ. ಈ ಚಿತ್ರದಲ್ಲೂ ಅದು ಮುಂದುವರೆಯಲಿದೆ. ಈ ಚಿತ್ರದಲ್ಲಿ ಕಿಟ್ಟಿ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ನಾಯಕನಟಿ ಆಶಿಕಾ ರಂಗನಾಥ್ ಅವರದ್ದು ಈ ಸಿನಿಮಾದಲ್ಲಿ ನನ್ನದು ಕಾಲೇಜ್ ಹುಡುಗಿ ಪಾತ್ರ. ಮನಸಲ್ಲಿ ಉಳಿಯೋ ಕ್ಯಾರೆಕ್ಟರ್ ಅಂತೆ. ಐಂದ್ರಿತಾ ರೇ ದೊಡ್ಡ ಗ್ಯಾಪ್ ನಂತ ನಬಟಿಸಿದ ಸಿನಿಮಾ ಗರುಡ. ಈ ಚಿತ್ರದ ಶೂಟಿಂಗ್ ಗೋವಾದಲ್ಲಿ ನಡೆಯುತ್ತಿದ್ದಾಗ ಐಂದ್ರಿತಾ ತಮ್ಮ ಮದುವೆಯ ವಿಚಾರವನ್ನು ಅನೌನ್ಸ್ ಮಾಡಿದ್ದರು. ಗರುಡ ಚಿತ್ರದಿಂದ ಐಂದ್ರಿತಾ-ದಿಗಂತ್ ಮದುವೆ ಓಡಾಟಗಳಿಗೆ ಸ್ವಲ್ಪ ಅಡೆತಡೆಯಾಗಿತ್ತಂತೆ ಆದರೆ ಗರುಡ ಸಿನಿಮಾಗೆ ಮೊದಲ ಆದ್ಯತೆ ನೀಡಿದ್ದರಂತೆ!

    ನಟ ಆದಿ ಲೋಕೇಶ್ ಅವರಿಗಿದು ಪರ್ಸನಲ್ಲಾಗಿ, ಮನಸ್ಸಿಗೆ ತುಂಬಾ ಹತ್ರಿತವಾದ ಸಿನಿಮಾವಂತೆ. “ರಿಲೀಸ್ ಆದ ಮೇಲೆ ಹೆಣ್ಮಕ್ಕಳು ನನ್ನನ್ನು ನೋಡಿದರೆ ಚಪ್ಪಲಿ ತಗೊಂಡು ಹೊಡೀತಾರೆ” ಎಂದು ಸ್ವತಃ ಅವರೇ ಹೇಳಿಕೊಳ್ಳುವ ಮಟ್ಟಿಗೆ ಈ ಚಿತ್ರದ ಕಾಳಿಂಗನ ಪಾತ್ರ ಕ್ರೂರವಾಗಿದೆಯಂತೆ. ಗಾಯಕ ರಘು ದೀಕ್ಷಿತ್ ಈ ಚಿತ್ರದಲ್ಲಿ ಸಂಗೀತ ನಿರ್ದೇಶನದ ಜೊತೆಗೆ ನಟನೆಯನ್ನೂ ಮಾಡಿರೋದು ವಿಶೇಷ.

    ಕಳೆದ ಹನ್ನೆರಡು ವರ್ಷಗಳಿಂದ ಸ್ವತಂತ್ರ ನೃತ್ಯನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿರುವ ಧನಕುಮಾರ್ ‘ಗರುಡ’ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಗರುಡ ಚಿತ್ರದ ಟ್ರೇಲರ್ ಅನ್ನು ರಘು ದೀಕ್ಷಿತ್ ಅವರ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸದ್ಯದಲ್ಲೇ ಗರುಡ ತೆರೆಗೆ ಬರುವ ಎಲ್ಲ ಯೋಜನೆ ರೂಪಿಸಿಕೊಂಡಿದೆ. ಧನಕುಮಾರ್ ನಿರ್ದೇಶನದ ಗರುಡ ಚಿತ್ರಕ್ಕೆ ರಘುದೀಕ್ಷಿತ್ ಸಂಗೀತ, ಜೈ ಆನಂದ್ ಛಾಯಾಗ್ರಹಣ, ದೀಪು ಎಸ್‍ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನದ ಈ ಚಿತ್ರದಲ್ಲಿಸಿದ್ಧಾರ್ಥ್ ಮಹೇಶ್, ಶ್ರೀನಗರ ಕಿಟ್ಟಿ, ಐಂದ್ರಿತಾ ರೇ, ಆಶಿಕಾ ರಂಗನಾಥ್, ಕಾಮ್ನಾ ಜೇಟ್ಮಲಾನಿ, ರಂಗಾಯಣ ರಘು, ಆದಿಲೋಕೇಶ್, ರಾಜೇಶ್‍ನಟರಂಗ, ರವಿಶಂಕರ್ ಗೌಡ, ರಘುದೀಕ್ಷಿತ್ ಮುಂತಾದವರ ತಾರಾಬಳಗವಿದೆ.

    https://www.youtube.com/watch?v=zbS1-dxwKe0

  • ಗಾಯಕ ರಘು ದೀಕ್ಷಿತ್ ಈಗ ಇಂಡಿಯನ್ ಜೇಮ್ಸ್ ಬಾಂಡ್!

    ಗಾಯಕ ರಘು ದೀಕ್ಷಿತ್ ಈಗ ಇಂಡಿಯನ್ ಜೇಮ್ಸ್ ಬಾಂಡ್!

    ಬೆಂಗಳೂರು: ಶಿಶುನಾಳ ಶರೀಫರ ಗೀತೆಗಳ ಮೂಲಕವೇ ಜನಪ್ರಿಯರಾಗಿ ಸಿನಿಮಾ ಗಾಯಕ, ಸಂಗೀತ ನಿರ್ದೇಶಕನಾಗಿಯೂ ಎತ್ತರದ ಸ್ಥಾನ ಗಿಟ್ಟಿಸಿಕೊಂಡಿರುವವರು ರಘು ದೀಕ್ಷಿತ್. ಬಾಲಿವುಡ್ ವರೆಗೂ ಗಾಯಕರಾಗಿ ಹೆಜ್ಜೆ ಗುರುತು ಮೂಡಿಸಿರುವ ಅವರೀಗ ನಟನಾಗಿಯೂ ಬಣ್ಣ ಹಚ್ಚಿದ್ದಾರೆ. ಯಾರಿಗಾದರೂ ಅಚ್ಚರಿಯಾಗುವಂಥಾದ್ದೊಂದು ಪಾತ್ರಕ್ಕೆ ಜೀವ ತುಂಬಲು ರೆಡಿಯಾಗಿದ್ದಾರೆ.

    ಈ ಹಿಂದೆ ಸಿಪಾಯಿ ಅಂತೊಂದು ಚಿತ್ರದಲ್ಲಿ ನಟಿಸಿದ್ದ ಸಿದ್ಧಾರ್ಥ್ ಮಹೇಶ್ ಗರುಡ ಎಂಬ ಚಿತ್ರದ ಮೂಲಕ ನಾಯಕರಾಗಿದ್ದಾರೆ. ರಗಡ್ ಕಥೆ ಹೊಂದಿರೋ ಈ ಚಿತ್ರದಲ್ಲಿ ಗುಪ್ತಚರ ಅಧಿಕಾರಿಯ ಪಾತ್ರವೊಂದು ಮಹತ್ವದ್ದಾಗಿತ್ತು. ಇದನ್ನು ವಿಶೇಷವಾಗಿಯೇ ಕಟ್ಟಿ ಕೊಡಬೇಕೆಂಬ ಹಂಬಲ ಹೊಂದಿದ್ದ ಚಿತ್ರತಂಡ ಅದಕ್ಕಾಗಿ ಕಲಾವಿದರ ಹುಡುಕಾಟದಲ್ಲಿತ್ತು. ಕಡೆಗೂ ಅದಕ್ಕೆ ರಘು ದೀಕ್ಷಿತ್ ನಿಕ್ಕಿಯಾಗಿದ್ದಾರೆ.

    ಈ ಪಾತ್ರವೇನೂ ಕಡಿಮೆಯದ್ದಲ್ಲ. ಇಂಡಿಯನ್ ಜೇಮ್ಸ್ ಬಾಂಡ್ ಎಂದೇ ಹೆಸರಾಗಿರೋ ಬೇಹುಗಾರಿಕಾ ಅಧಿಕಾರಿ, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರೂ ಆಗಿರುವ ಅಜಿತ್ ಧೋವಲ್ ಅವರನ್ನು ಈ ಪಾತ್ರ ಹೋಲುತ್ತದೆಯಂತೆ. ಧನಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ರಘು ದೀಕ್ಷಿತ್ ನಟಿಸುತ್ತಿರೋದು ಪಕ್ಕಾ. ಯಾಕೆಂದರೆ ಚಿತ್ರ ತಂಡವೇ ಈ ಫೋಟೋಗಳನ್ನು ಜಾಹೀರು ಮಾಡಿದೆ. ಆದರೆ ಈ ಪಾತ್ರದ ವಿಶೇಷತೆಗಳೇನೆಂಬುದು ಚಿತ್ರತಂಡದ ಕಡೆಯಿಂದಲೇ ಗೊತ್ತಾಗಬೇಕಿದೆ.