Tag: ಧನಶ್ರೀ ವರ್ಮಾ

  • ಟೀಕೆಯಿಂದ ಖಿನ್ನತೆಗೆ ಜಾರಿದ್ದೆ, ಆತ್ಮಹತ್ಯೆಗೆ ಯೋಚಿಸಿದ್ದೆ – ಮೌನ ಮುರಿದ ಚಹಲ್‌

    ಟೀಕೆಯಿಂದ ಖಿನ್ನತೆಗೆ ಜಾರಿದ್ದೆ, ಆತ್ಮಹತ್ಯೆಗೆ ಯೋಚಿಸಿದ್ದೆ – ಮೌನ ಮುರಿದ ಚಹಲ್‌

    – ಪತ್ನಿಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿರಲಿಲ್ಲ
    – ಎಸಿ ಆನ್‌ ಆಗಿದ್ದರೂ ನಾನು ಬೆವರುತ್ತಿದ್ದೆ

    ಮುಂಬೈ: ನಮ್ಮ ದಾಂಪತ್ಯದ ಕುರಿತ ಸುದ್ದಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ, ಟೀಕೆ ನೋಡಿ ಖಿನ್ನತೆಗೆ ಜಾರಿದ್ದೆ. ಈ ಸಂದರ್ಭದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆಯೂ ಯೋಚಿಸಿದ್ದೆ ಎಂದು ಟೀಂ ಇಂಡಿಯಾ ಸ್ಪಿನ್ನರ್‌ ಯಜುವೇಂದ್ರ ಚಹಲ್‌ (Yuzvendra Chahal) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಧನಶ್ರೀ ವರ್ಮಾಗೆ (Dhanashree Verma) ವಿಚ್ಛೇದನ (Divorce) ನೀಡಿದ ವಿಚಾರದ ಬಗ್ಗೆ ಇದೇ ಮೊದಲ ಬಾರಿಗೆ ಚಹಲ್‌ ಮೌನ ಮುರಿದಿದ್ದಾರೆ. ರಾಜ್ ಶಮಾನಿ ಯೂಟ್ಯೂಬ್ ಚಾನಲ್‌ನಲ್ಲಿ ವಿಚ್ಛೇದನದ ಬಗ್ಗೆ ಸಾಕಷ್ಟು ವಿಚಾರ ತಿಳಿಸಿದ್ದಾರೆ.

    ಸುಮಾರು 5 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದ ಯಜುವೇಂದ್ರ ಮತ್ತು ಧನಶ್ರೀ ಅವರಿಗೆ ಈ ವರ್ಷದ ಮಾರ್ಚ್ 20 ರಂದು ಬಾಂಬೆ ಹೈಕೋರ್ಟ್ ವಿಚ್ಛೇದನ ನೀಡಿತ್ತು. ಡಿವೋರ್ಸ್‌ ಪಡೆಯುವ ಕೆಲ ತಿಂಗಳ ಮೊದಲು ಆತ್ಮಹತ್ಯೆಯ ಆಲೋಚನೆಗಳು ಬರುತ್ತಿದ್ದವು ಎಂದು ಚಹಲ್‌ ಹೇಳಿದರು.

    ಚಹಲ್‌ ಹೇಳಿದ್ದೇನು?
    ಡಿಸೆಂಬರ್-ಜನವರಿ (2024–25) ತಿಂಗಳುಗಳಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಸಮಯದಲ್ಲಿ ನಾನು ರಾಜ್ಯ ಕ್ರಿಕೆಟ್‌ ತಂಡದಿಂದ ವಿರಾಮ ಕೇಳಿದ್ದೆ. ನಮ್ಮಿಬ್ಬರ ಮಧ್ಯೆ ಹೊಂದಾಣಿಕೆಯಾಗದ ಕಾರಣ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದೆ.  ಇದನ್ನೂ ಓದಿ: 5 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ – ಮುಂಬೈ ಕೋರ್ಟ್‌ನಲ್ಲಿ ಏನಾಯ್ತು?

    ಈ ಸುದ್ದಿ ಪ್ರಕಟವಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ (Social Media) ಬರುತ್ತಿದ್ದ ಚರ್ಚೆ, ಟೀಕೆಗಳನ್ನು ನೋಡಿ ಖಿನ್ನತೆಗೆ ಜಾರಿದ್ದೆ. ಕ್ರಿಕೆಟಿನಿಂದ ವಿರಾಮ ಪಡೆದರೂ ನಾನು ನಡುಗುತ್ತಿದ್ದೆ. ಎಸಿ ಆನ್‌ ಆಗಿದ್ದರೂ ಬೆವರುತ್ತಿದ್ದೆ. ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆ. ಆದರೆ ಸ್ನೇಹಿತ ನನ್ನನ್ನು ತಡೆದ. ಈ ಸಮಯದಲ್ಲಿ ಎರಡೇ ಗಂಟೆ ಮಲಗುತ್ತಿದ್ದೆ.

    ಮದುವೆಯಾದ ಕೆಲ ಸಮಯದ ನಂತರ ನಮ್ಮ ನಡುವೆ ಹೊಂದಾಣಿಕೆ ಸಮಸ್ಯೆ ಕಾಣಿಸತೊಡಗಿತು. ಕ್ರಿಕೆಟ್‌ ಆಡುತ್ತಿದ್ದ ಕಾರಣ ಪತ್ನಿಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿರಲಿಲ್ಲ. ಅವಳು ಕೂಡ ತನ್ನ ಕೆಲಸವನ್ನು ಮಾಡುತ್ತಿದ್ದಳು, ನಮಗೆ ಹೆಚ್ಚು ಭೇಟಿಯಾಗಲು ಸಾಧ್ಯವಾಗಲಿಲ್ಲ. ಇದು 1-2 ವರ್ಷಗಳಿಂದ ಈ ರೀತಿ ನಡೆಯುತ್ತಿತ್ತು. ಇದರಿಂದಾಗಿ ಜಗಳ ಆಗುತ್ತಿತ್ತು. ಇದನ್ನೂ ಓದಿ: ಹೆಣ್ಣನ್ನ ದೂಷಿಸುವುದು ಫ್ಯಾಷನ್‌ ಆಗಿದೆ – ಬ್ಯೂಟಿ ಜೊತೆ ಚಹಲ್‌ ಡೇಟಿಂಗ್‌ ವಂದತಿ ಬೆನ್ನಲ್ಲೇ ಧನಶ್ರೀ ರಿಯಾಕ್ಷನ್‌

    ಈ ಸಂದರ್ಭದಲ್ಲಿ ನನ್ನ ಕೆಲಸದ ಸಮಯವನ್ನು ವಿಭಜಿಸಲು ಮುಂದಾದೆ. ಸಂಬಂಧದ ಬಗ್ಗೆ ಯೋಚಿಸಲು ನನಗೆ ಸಾಧ್ಯವಾಗಲಿಲ್ಲ. ನೀವು 18-20 ವರ್ಷಗಳಿಂದ ಯಾವುದನ್ನಾದರೂ ಕೆಲಸ ಮಾಡುತ್ತಿದ್ದರೆ ಅದನ್ನು ಸಂಬಂಧಕ್ಕಾಗಿ ಬಿಡಲು ಸಾಧ್ಯವಿಲ್ಲ.

    ಮದುವೆಯಾಗಿ ಮೂರು ವರ್ಷದ ನಂತರ ಪರಸ್ಪರ ಚರ್ಚಿಸಿ ವಿಚ್ಛೇದನ ನಿರ್ಧಾರ ಕೈಗೊಳ್ಳಲಾಯಿತು. ಆದರೆ ಈ ವಿಚಾರವನ್ನು ಬಹಿರಂಗ ಮಾಡುವುದು ಬೇಡ ಎಂದು ತೀರ್ಮಾನ ತೆಗೆದುಕೊಂಡಿದ್ದೆವು. ಎರಡು ವರ್ಷ ಮುಂದುವರೆಸಿಕೊಂಡು ಬಂದಿದ್ದೆವು.

    ನನ್ನ ಬಗ್ಗೆ ಯಾರು ಏನು ಬೇಕಾದರೂ ಹೇಳಬಹುದು. ನಾನು ಇಬ್ಬರು ಸಹೋದರಿಯರ ಜೊತೆಗೆ ಬೆಳೆದಿದ್ದೇನೆ. ಹೆಣ್ಣು ಮಕ್ಕಳನ್ನು ಗೌರವಿಸುವುದು ನನಗೆ ತಿಳಿದಿದೆ. ದೇವರ ದಯೆಯಿಂದ ನಾನು ಬದುಕಿದ್ದೇನೆ. ವಿಚ್ಛೇದನ ಪಡೆದ ನಂತರ ಜನರು ನನ್ನನ್ನು ಮೋಸಗಾರ ಎಂದು ಆರೋಪಿಸಿದರು. ನಾನು ನನ್ನ ಜೀವನದಲ್ಲಿ ಎಂದಿಗೂ ಮೋಸ ಮಾಡಿಲ್ಲ. ನಾನು ಆ ರೀತಿಯ ವ್ಯಕ್ತಿಯಲ್ಲ. ಜನರಿಗೆ ಏನೂ ತಿಳಿಯದ ಕಾರಣ ಅವರು ನನ್ನನ್ನು ದೂಷಿಸುತ್ತಿದ್ದರು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ:ಬ್ಯೂಟಿ ಜೊತೆ ಚಹಲ್‌ ಫೈನಲ್‌ ಪಂದ್ಯ ವೀಕ್ಷಣೆ – ಯಾರಿದು ಯುವತಿ?

    ಭಾರತದ ಖ್ಯಾತ ಜೋಡಿಗಳಲ್ಲಿ ಒಬ್ಬರಾಗಿದ್ದ ಚಹಲ್ ಮತ್ತು ಧನಶ್ರೀ 2020ರ ಡಿಸೆಂಬರ್‌ನಲ್ಲಿ ಮದುವೆಯಾಗಿದ್ದರು. ಆ ಬಳಿಕ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಬ್ರೇಕ್ ಅಪ್‍ಗೆ ಮುಂದಾಗಿದ್ದಾರೆ ಎಂದು 2023 ರಲ್ಲಿ ಸುದ್ದಿ ಪ್ರಕಟವಾಗಿತ್ತು. ನಂತರ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ವದಂತಿಗೆ ತೆರೆ ಎಳೆದಿದ್ದರು. ಕೊರೋನಾ ಕಾಲದ ಲಾಕ್‌ಡೌನ್ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು ಧನಶ್ರೀ ಎಂದು ಹೇಳಿದ್ದರು.

    ಇಬ್ಬರೂ ಇನ್‌ಸ್ಟಾದಲ್ಲಿ ಪರಸ್ಪರ ಅನ್‌ಫಾಲೋ ಆಗಿದ್ದರು. ಆಗಲೇ ಇಬ್ಬರ ಮಧ್ಯೆ ಬಿರುಕು ಮೂಡಿದೆ ಎಂದು ವರದಿಯಾಗಿತ್ತು. ಇನ್‌ಸ್ಟಾದಲ್ಲಿ ಚಹಲ್‌ ಅವರು ಧನಶ್ರೀ ಜೊತೆಗಿನ ಫೋಟೋ ಡಿಲೀಟ್‌ ಮಾಡಿದ್ದರೆ ಧನಶ್ರೀ ಚಹಲ್‌ ಅವರೊಂದಿಗೆ ಫೋಟೋ ಡಿಲೀಟ್‌ ಮಾಡಿಲ್ಲ. ಈಗಲೂ ಧನಶ್ರೀ ಇನ್‌ಸ್ಟಾದಲ್ಲಿ ಇಬ್ಬರು ಜೊತೆಯಲ್ಲಿರುವ ಫೋಟೋಗಳನ್ನು ನೋಡಬಹುದಾಗಿದೆ.

  • ರಾಜ್‌ಕುಮಾರ್ ರಾವ್ ಜೊತೆ ಐಟಂ ಹಾಡಿಗೆ ಸೊಂಟ ಬಳುಕಿಸಿದ ಧನಶ್ರೀ

    ರಾಜ್‌ಕುಮಾರ್ ರಾವ್ ಜೊತೆ ಐಟಂ ಹಾಡಿಗೆ ಸೊಂಟ ಬಳುಕಿಸಿದ ಧನಶ್ರೀ

    ಕ್ರಿಕೆಟಿಗ ಯಜುವೇಂದ್ರ ಚಾಹಲ್ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಚಿತ್ರರಂಗದಲ್ಲಿ ಧನಶ್ರೀ ವರ್ಮಾ ಆ್ಯಕ್ಟೀವ್ ಆಗಿದ್ದಾರೆ. ಬಾಲಿವುಡ್ (Bollywood) ಸಿನಿಮಾದಲ್ಲಿ ರಾಜ್‌ಕುಮಾರ್ ರಾವ್ (Rajkummar Rao) ಜೊತೆ ಧನಶ್ರೀ ವರ್ಮಾ ಸೊಂಟ ಬಳುಕಿಸಿದ್ದಾರೆ. ಮಾದಕವಾಗಿ ಕಾಣಿಸಿಕೊಂಡಿರುವ ನಟಿಯ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಇದನ್ನೂ ಓದಿ:ಯೋಧರ ಹೋರಾಟ ಶುರುವಾಗಿದೆ: ‘ಆಪರೇಷನ್ ಸಿಂಧೂರ’ಗೆ ಜೈ ಎಂದ ತಲೈವಾ

    ರಾಜ್‌ಕುಮಾರ್ ರಾವ್ ನಟನೆಯ ‘ಭೂಲ್‌ಚುಕ್ ಮಾಫ್’ ಸಿನಿಮಾದಲ್ಲಿ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ನಟನ ಜೊತೆ ಮೈ ಚಳಿ ಬಿಟ್ಟು ಕುಣಿದು ಕುಪ್ಪಳಿಸಿದ್ದಾರೆ. ಯೂಟ್ಯೂಬ್‌ನಲ್ಲಿ ಸಾಂಗ್ ರಿಲೀಸ್ ಆಗಿ ಭರ್ಜರಿ ವಿವ್ಸ್ ಪಡೆದುಕೊಳ್ತಿದೆ. ಹಾಡಿಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಮೇ 9ರಂದು ಈ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಇದನ್ನೂ ಓದಿ:ಸಾಮ ಬೇಧ ದಂಡ, ಮೋದಿ ಭಾರತದ ಪ್ರಚಂಡ: ಜಗ್ಗೇಶ್

    ಈ ಸಿನಿಮಾದ ಜೊತೆ ಟಾಲಿವುಡ್‌ಗೆ ಎಂಟ್ರಿ ಕೊಡಲು ಸಿದ್ಧವಾಗಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಈ ವಿಚಾರ ಹಲವು ದಿನಗಳಿಂದ ಹರಿದಾಡುತ್ತಿದೆ. ವೈಯಕ್ತಿಕ ವಿಚಾರಗಳಿಂದ ಸುದ್ದಿಯಾಗಿದ್ದ ನಟಿಗೆ ಚಿತ್ರರಂಗದಿಂದ ಉತ್ತಮ ಅವಕಾಶ ಅರಸಿ ಬರುತ್ತಿದೆ.

     

    View this post on Instagram

     

    A post shared by Sony Music India (@sonymusicindia)

    ಈ ವರ್ಷ ಫೆ.20ರಂದು ಯಜುವೇಂದ್ರ ಚಾಹಲ್ (Yyzvendra Chahal) ಜೊತೆಗಿನ ವೈಯಕ್ತಿಕ ಕಾರಣದಿಂದ ಧನಶ್ರೀ ವರ್ಮಾ (Dhanashree Verma) ಬೇರೆಯಾದರು. ಪ್ರೀತಿಸಿ ಮದುವೆಯಾಗಿದ್ದ ಜೋಡಿ ಇತ್ತೀಚೆಗೆ ಡಿವೋರ್ಸ್ ಪಡೆದಿದೆ.

  • ನಾನಿನ್ನೂ ಸಿಂಗಲ್‌, ಮದ್ವೆಯಾಗಲು ನಾನು ಬಯಸುವವರ ಜೊತೆ ಮಾತ್ರ ಡೇಟಿಂಗ್‌ – ಚಹಲ್‌ ಜೊತೆ ಕಾಣಿಸಿಕೊಂಡ ಬ್ಯೂಟಿ ಸ್ಪಷ್ಟನೆ

    ನಾನಿನ್ನೂ ಸಿಂಗಲ್‌, ಮದ್ವೆಯಾಗಲು ನಾನು ಬಯಸುವವರ ಜೊತೆ ಮಾತ್ರ ಡೇಟಿಂಗ್‌ – ಚಹಲ್‌ ಜೊತೆ ಕಾಣಿಸಿಕೊಂಡ ಬ್ಯೂಟಿ ಸ್ಪಷ್ಟನೆ

    ಮುಂಬೈ: ಇತ್ತೀಚೆಗೆ ಟೀಂ ಇಂಡಿಯಾ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಜೊತೆ ಕಾಣಿಸಿಕೊಂಡಿದ್ದ ಬ್ಯೂಟಿ ಆರ್‌ಜೆ ಮಹ್ವಾಷ್ (RJ Mahvash) ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಚಹಲ್‌ ಅವರೊಂದಿಗೆ ಡೇಟಿಂಗ್‌ ಸುದ್ದಿ ಹರಿದಾಡುತ್ತಿದ್ದಂತೆ ವದಂತಿಗಳಿಗೆ ಫುಲ್‌ಸ್ಟಾಪ್‌ ಹಾಕಿದ್ದಾರೆ. ನಾನು ಮದುವೆಯಾಗಲು ಬಯಸುವವರ ಜೊತೆಗೆ ಮಾತ್ರ ಡೇಟಿಂಗ್‌ ಮಾಡ್ತೀನಿ ಅಂತ ಸ್ಪಷ್ಟನೆ ನೀಡಿದ್ದಾರೆ.

     

    View this post on Instagram

     

    A post shared by Mahvash (@rj.mahvash)

    ಕಳೆದ ತಿಂಗಳು ಮುಕ್ತಾಯಗೊಂಡ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದ ವೇಳೆ ಚಹಲ್‌ (Yuzvendra Chahal) ಜೊತೆಗೆ ಮಹ್ವಾಷ್‌ ಕಾಣಿಸಿಕೊಂಡಿದ್ದರು. ಆದ್ರೆ ನೃತ್ಯ ಸಂಯೋಜಕಿ ಧನಶ್ರೀ ವರ್ಮಾ (Dhanashree Verma) ಅವರಿಂದ ವಿಚ್ಛೇದನ ಪಡೆದ ಬಳಿಕ ಚಹಲ್‌ ಮತ್ತು ಮಹ್ವಾಷ್‌ ಅವರ ಡೇಟಿಂಗ್‌ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಹೈಪ್‌ ಕ್ರಿಯೆಟ್‌ ಮಾಡಿತ್ತು. ಅಲ್ಲದೇ ಇವರಿಬ್ಬರೂ ಮದುವೆಯಾಗಲಿದ್ದಾರೆ ಎಂಬ ಹೇಳಿಕೆಗಳೂ ಕೇಳಿಬಂದಿತ್ತು. ಇದೀಗ ಈ ಎಲ್ಲ ವದಂತಿಗಳಿಗೆ ಆರ್‌ಜೆ ಮಹ್ವಾಷ್‌ ಫುಲ್‌ಸ್ಟಾಪ್‌ ಹಾಕಿದ್ದಾರೆ.

    ಪಾಡ್‌ಕಾಸ್ಟ್‌ವೊಂದರಲ್ಲಿ ಮಾತಮಾಡಿದ ಅವರು, ಸದ್ಯಕ್ಕೆ ನಾನಿನ್ನೂ ಸಿಂಗಲ್, ಮದುವೆ ಪರಿಕಲ್ಪನೆಯೇ ನನಗೆ ಅರ್ಥವಾಗುತ್ತಿಲ್ಲ. ಈ ಮೊದಲು ನನಗೆ ನಿಶ್ಚಿತಾರ್ಥ ಆಗಿತ್ತು, ಆ ಸಂಬಂಧವೂ ಮುರಿದುಬಿದ್ದಿತು. ಹಾಗಾಗಿ ನಾನು ಕ್ಯಾಷುವಲ್ ಡೇಟಿಂಗ್ ಹೋಗಲ್ಲ, ಅದರಲ್ಲಿ ನನಗೆ ನಂಬಿಕೆಯೂ ಇಲ್ಲ. ನಾನು ಮದುವೆಯಾಗಲು ಬಯಸಿದವರ ಜೊತೆ ಮಾತ್ರ ಡೇಟಿಂಗ್‌ಗೆ ಹೋಗಲು ಬಯಸುತ್ತೇನೆ. ಆದ್ರೆ ಸದ್ಯಕ್ಕೆ ಈ ಯಾವ ಯೋಚನೆಯೂ ನನಗಿಲ್ಲ ಎಂದಿದ್ದಾರೆ.

    ತನಗೆ 19ನೇ ವಯಸ್ಸಿನಲ್ಲೇ ನಿಶ್ಚಿತಾರ್ಥ ಆಗಿತ್ತು, ಮದ್ವೆಗೆ 2 ವರ್ಷ ಸಮಯವಿತ್ತು. ಆದ್ರೆ ತಾನು 21 ವರ್ಷ ವಯಸ್ಸಿನವಳಿದ್ದಾಗ, ಮದುವೆ ಸಂಬಂಧವನ್ನು ರದ್ದುಗೊಳಿಸಿದೆ. ಏಕೆಂದರೆ ನನಗೆ ಹೊಂದಿಕೆಯಾಗುವಂತಹ ಒಳ್ಳೆಯ ಗಂಡ ಸಿಗಬೇಕು ಅನ್ನೋದೊಂದೇ ನನ್ನ ಬಯಕೆಯಾಗಿತ್ತು. ಮುಂದೆ ಅಂತಹ ತಪ್ಪು ಆಗದಂತೆ ನಾನು ನೋಡಿಕೊಳ್ಳಲು ಬಯಸುತ್ತಿದ್ದೇನೆ ಎಂದು ಮಹ್ವಾಷ್‌ ಹೇಳಿಕೊಂಡಿದ್ದಾರೆ.

  • ಕ್ರಿಕೆಟಿಗ ಚಾಹಲ್‌, ಧನಶ್ರೀ ವರ್ಮಾಗೆ ವಿಚ್ಛೇದನ ಮಂಜೂರು

    ಕ್ರಿಕೆಟಿಗ ಚಾಹಲ್‌, ಧನಶ್ರೀ ವರ್ಮಾಗೆ ವಿಚ್ಛೇದನ ಮಂಜೂರು

    – 4.75 ಕೋಟಿ ಜೀವನಾಂಶ ಕೊಡಲು ಒಪ್ಪಿದ ಕ್ರಿಕೆಟಿಗ

    ಮುಂಬೈ: ಸುದೀರ್ಘ ಕಾನೂನು ಹೋರಾಟದ ಬಳಿಕ ನೃತ್ಯ ಸಂಯೋಜಕಿ ಧನಶ್ರೀ ವರ್ಮಾ (Dhanashree Verma) ಮತ್ತು ಕ್ರಿಕೆಟಿಗ ಯಜುವೇಂದ್ರ ಚಾಹಲ್‌ (Yuzvendra Chahal) ವಿಚ್ಛೇದನ ಪಡೆದುಕೊಂಡಿದ್ದಾರೆ. ಇವರಿಬ್ಬರು ಪರಸ್ಪರ ಒಪ್ಪಿಗೆಯಿಂದ ಸಲ್ಲಿಸಿದ್ದ ವಿಚ್ಛೇದನ ಕೋರಿ ಸಲ್ಲಿಸಿದ್ದ ಜಂಟಿ ಅರ್ಜಿಯನ್ನು ಗುರುವಾರ ಬಾಂದ್ರಾ ಕೌಟುಂಬಿಕ ನ್ಯಾಯಾಲಯ ಪುರಸ್ಕರಿಸಿದೆ.

    ಇಬ್ಬರೂ ಗುರುವಾರ ಬಾಂದ್ರಾ ಕೌಟುಂಬಿಕ ನ್ಯಾಯಾಲಯದ (Bandra family court) ಮುಂದೆ ಹಾಜರಾಗಿದ್ದರು. ಈ ವೇಳೆ ಅರ್ಜಿ ಪುರಸ್ಕರಿಸಿದ ಕೋರ್ಟ್‌ ವಿಚ್ಛೇದನ ಮಂಜೂರು ಮಾಡಿ ತೀರ್ಪು ಪ್ರಕಟಿಸಿದೆ ಎಂದು ಚಾಹಲ್‌ ಪರ ವಕೀಲ ನಿತಿನ್‌ ಗುಪ್ತಾ ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್ 2025: ಮೊದಲ 3 ಪಂದ್ಯಗಳಿಗೆ ರಾಜಸ್ಥಾನ ರಾಯಲ್ಸ್‌ಗೆ ರಿಯಾನ್ ಪರಾಗ್ ಕ್ಯಾಪ್ಟನ್

    ಚಾಹಲ್‌ ಮತ್ತು ಧನಶ್ರೀ 2020ರ ಡಿಸೆಂಬರ್‌ನಲ್ಲಿ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2022ರ ಜೂನ್‌ನಿಂದಲೇ ಅವರು ಬೇರ್ಪಟ್ಟಿದ್ದರು. ಈ ವರ್ಷದ ಫೆ.5ರಂದು ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

    ಇದೇ ಮಾ.22ರಿಂದ ಚಾಹಲ್‌ ಅವರು ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುತ್ತಿರುವ ಕಾರಣದಿಂದಾಗಿ ಗುರುವಾರದ ಒಳಗೆ ಅರ್ಜಿ ವಿಚಾರಣೆ ಮುಗಿಸುವಂತೆ ಬಾಂಬೆ ಹೈಕೋರ್ಟ್‌ ಬುಧವಾರ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತ್ತು. ಅದಂತೆ ಇಂದು ವಿಚ್ಛೇದನ ಅಂತಿಮಗೊಳಿಸಲಾಗಿದೆ. ಇದನ್ನೂ ಓದಿ: IPl 2025 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

    ಧನಶ್ರೀಗೆ ಸಿಗುವ ಜೀವನಾಂಶ ಎಷ್ಟು?
    ವಿಚ್ಛೇದನ ಬಳಿಕ ಧನಶ್ರೀ ಅವರು ಚಾಹಲ್‌ರಿಂದ ಒಟ್ಟು 4.75 ಕೋಟಿ ಜೀವನಾಂಶ ಪಡೆಯಲಿದ್ದಾರೆ. ಈಗಾಗಲೇ ಮೊದಲ ಕಂತಿನಲ್ಲಿ 2.37 ಕೋಟಿ ರೂ.ಗಳನ್ನ ಪಾವತಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಈ ಬಾರಿಯೂ ಆರ್‌ಸಿಬಿ ಬೆಂಗಳೂರು ಪಂದ್ಯಗಳ ಟಿಕೆಟ್‌ ದರ ದುಬಾರಿ

  • ಡಿವೋರ್ಸ್‌ ಬಳಿಕ ಚಹಲ್‌ನಿಂದ 60 ಕೋಟಿ ಜೀವನಾಂಶ – ಧನಶ್ರೀ ಕುಟುಂಬ ಹೇಳಿದ್ದೇನು?

    ಡಿವೋರ್ಸ್‌ ಬಳಿಕ ಚಹಲ್‌ನಿಂದ 60 ಕೋಟಿ ಜೀವನಾಂಶ – ಧನಶ್ರೀ ಕುಟುಂಬ ಹೇಳಿದ್ದೇನು?

    ನವದೆಹಲಿ: ಟೀಂ ಇಂಡಿಯಾದ (Team India) ಸ್ಪಿನ್ನರ್ ಯಜುವೇಂದ್ರ ಚಹಲ್ (Yuzvendra Chahal) ಹಾಗೂ ಮತ್ತು ನಟಿ ಧನಶ್ರೀ (Dhanashree Verma) ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ. ಇದರ ನಡುವೆ ಧನಶ್ರೀ ಕುಟುಂಬ ಯುಜ್ವೇಂದ್ರ ಚಾಹಲ್ ಅವರ ಬಳಿ 60 ಕೋಟಿ ರೂ. ಜೀವನಾಂಶ ಕೇಳಿದ್ದಾರೆ ಎಂಬ ವದಂತಿ ಹಬ್ಬಿದೆ. ಈ ವದಂತಿಯನ್ನು ಧನಶ್ರೀ ಕುಟುಂಬ ತಳ್ಳಿಹಾಕಿದೆ.

    ಜೀವನಾಂಶದ ಬಗ್ಗೆ ಪ್ರಸಾರವಾಗುತ್ತಿರುವ ಆಧಾರ ರಹಿತ ಹೇಳಿಕೆಗಳು, ಸುದ್ದಿಗಳಿಂದ ನಮಗೆ ಬೇಸರವಾಗಿದೆ. ಅಂತಹ ಯಾವುದೇ ಜೀವನಾಂಶದ ಬೇಡಿಕೆಯಿಟ್ಟಿಲ್ಲ ಅಥವಾ ನೀಡಲಾಗಿಲ್ಲ ಎಂದು ಧನಶ್ರೀ ವರ್ಮಾ ಅವರ ಸಂಬಂಧಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ – ಮುಂಬೈ ಕೋರ್ಟ್‌ನಲ್ಲಿ ಏನಾಯ್ತು?

    ಈ ವದಂತಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಇಂತಹ ಪರಿಶೀಲಿಸದ ಮಾಹಿತಿಯನ್ನು ಪ್ರಕಟಿಸುವುದು ತೀರಾ ಬೇಜವಾಬ್ದಾರಿಯಾಗಿದೆ. ಇದು ಅವರ ಕುಟುಂಬಗಳನ್ನು ಸಹ ಅನಗತ್ಯವಾಗಿ ಮುಜುಗರಕ್ಕೀಡು ಮಾಡುತ್ತದೆ. ಮಾಹಿತಿಯನ್ನು ಹರಡುವ ಮೊದಲು ಸಂಯಮ ಮತ್ತು ಸತ್ಯ ಪರಿಶೀಲನೆ ಮಾಡಬೇಕು. ಪ್ರತಿಯೊಬ್ಬರ ಖಾಸಗಿ ಜೀವನದ ಬಗ್ಗೆ ಗೌರವದಿಂದ ವರ್ತಿಸುವಂತೆ ನಾವು ಮಾಧ್ಯಮಗಳಿಗೆ ಮನವಿ ಮಾಡುತ್ತೇವೆ ಎಂದಿದ್ದಾರೆ.

    ಯುಜ್ವೇಂದ್ರ ಚಾಹಲ್ ಮತ್ತು ನರ್ತಕಿ-ನೃತ್ಯ ಸಂಯೋಜಕಿ ಧನಶ್ರೀ ವರ್ಮಾ ಕಾನೂನು ಬದ್ಧವಾಗಿ ವಿಚ್ಛೇದನ ಪಡೆದಿದ್ದಾರೆ. ಫೆ.19ರ ಮಂಗಳವಾರ ವಿಚಾರಣೆಯನ್ನು ಅಂತಿಮಗೊಂಡಿತ್ತು.

    ಚಹಲ್‌ ಆಸ್ತಿ ಎಷ್ಟಿದೆ?
    ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ದೇಶಕ್ಕಾಗಿ 200 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿರುವ ಚಹಲ್‌ ಟೀಂ ಇಂಡಿಯಾದ ಟಾಪ್‌ ಬೌಲರ್‌ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಚಹಲ್‌ 160 ಐಪಿಎಲ್‌ (IPL) ಪಂದ್ಯವಾಡಿ 22.44 ರ ಸರಾಸರಿಯಲ್ಲಿ 205 ವಿಕೆಟ್ ಪಡೆದಿದ್ದಾರೆ.

    2024ರ ಆವೃತ್ತಿಯಲ್ಲಿ ಚಹಲ್‌ ರಾಜಸ್ಥಾನ ರಾಯಲ್ಸ್‌ ಪರ ಆಡಿದ್ದರು. ಈ ವೇಳೆ ಅವರಿಗೆ 6.5 ಕೋಟಿ ರೂ. ನೀಡಿತ್ತು. ಐಪಿಎಲ್ 2025 ರ ಮೆಗಾ ಹರಾಜಿಗೆ ಮೊದಲು ಚಹಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡ ಕೈಬಿಟ್ಟಿತ್ತು. ನಂತರ ನಡೆದ ಹರಾಜು ಪ್ರಕ್ರಿಯೆಯಲ್ಲಿ ಪಂಜಾಬ್‌ ಕಿಂಗ್ಸ್‌ 18 ಕೋಟಿ ರೂ. ನೀಡಿ ಚಹಲ್‌ ಅವರನ್ನು ಖರೀದಿಸಿತ್ತು.

    ಚಾಹಲ್ ಅವರು 2019 ರಲ್ಲಿ ಜೀವನಶೈಲಿ ಬ್ರ್ಯಾಂಡ್ ‘ಚೆಕ್ಮೇಟ್’ ಅನ್ನು ಪ್ರಾರಂಭಿಸಿದ್ದರು. ಅಷ್ಟೇ ಅಲ್ಲದೇ ಅವರು ಫಿಟ್‌ನೆಸ್ ಅಪ್ಲಿಕೇಶನ್ ʼಗ್ರಿಪ್ʼ ಮತ್ತು ʼYUZOʼ ಬಟ್ಟೆ ಲೈನ್‌ನಲ್ಲಿ ಪಾಲನ್ನು ಹೊಂದಿದ್ದಾರೆ. ಚಹಲ್‌ ಪೋರ್ಷೆ ಕೆಯೆನ್ನೆ ಎಸ್, ಮರ್ಸಿಡಿಸ್ ಬೆಂಜ್ ಸಿ-ಕ್ಲಾಸ್, ಲಂಬೋರ್ಘಿನಿ ಸೆಂಟೆನಾರಿಯೊ ಮತ್ತು ರೋಲ್ಸ್ ರಾಯ್ಸ್ ಸೇರಿದಂತೆ ಹಲವಾರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ.

    ಬ್ರ್ಯಾಂಡ್ ಎಂಡಾರ್ಸ್‌ಮೆಂಟ್‌ಗಳಿಂದ ಉತ್ತಮ ಮೊತ್ತವನ್ನು ಪಡೆಯುತ್ತಿರುವ ಚಹಲ್‌ ಅವರ ನಿವ್ವಳ ಮೌಲ್ಯ ಸುಮಾರು 45 ಕೋಟಿ ಇರಬಹುದು ಎಂದು ಅಂದಾಜಿಸಲಾಗಿದೆ.

    ಧನಶ್ರೀ ಅಸ್ತಿ ಎಷ್ಟಿದೆ?
    ನೃತ್ಯ ಸಂಯೋಜನೆ, ಬ್ರಾಂಡ್ ಪ್ರಚಾರ, ಸೋಶಿಯಲ್‌ ಮೀಡಿಯಾಗಳಿಂದ ಧನಶ್ರೀ ಆದಾಯ ಸಂಪಾದಿಸುತ್ತಿದ್ದಾರೆ. ಮಾಧ್ಯಮವೊಂದರ ಪ್ರಕಾರ ಧನಶ್ರೀ ಅವರು ಅಂದಾಜು 25 ಕೋಟಿ ರೂ. ಮೌಲ್ಯದ ಸಂಪತ್ತು ಹೊಂದಿದ್ದಾರೆ.

  • ಅಡ್ಡದಾರಿಯಲ್ಲಿ ನಡೆಯುವ ಬದಲು ಮೌಲ್ಯಗಳಿಗೆ ಬದ್ಧನಾಗಿರುತ್ತೇನೆ – ಡಿವೋರ್ಸ್‌ ವದಂತಿ ಬಗ್ಗೆ ಚಾಹಲ್‌ ಫಸ್ಟ್‌ ರಿಯಾಕ್ಷನ್‌

    ಅಡ್ಡದಾರಿಯಲ್ಲಿ ನಡೆಯುವ ಬದಲು ಮೌಲ್ಯಗಳಿಗೆ ಬದ್ಧನಾಗಿರುತ್ತೇನೆ – ಡಿವೋರ್ಸ್‌ ವದಂತಿ ಬಗ್ಗೆ ಚಾಹಲ್‌ ಫಸ್ಟ್‌ ರಿಯಾಕ್ಷನ್‌

    ‌ಮುಂಬೈ: ಟೀಂ ಇಂಡಿಯಾದ ಲೆಗ್‌ ಸ್ಪಿನ್ನರ್‌ ಯಜುವೇಂದ್ರ ಚಾಹಲ್‌ (Yuzvendra Chahal) ಅವರು ಪತ್ನಿ ಧನಶ್ರೀ ವರ್ಮಾಗೆ (Dhanashree Verma) ಡಿವೋರ್ಸ್‌ ಕೊಡಲಿದ್ದಾರೆ ಎಂಬ ವದಂತಿ ಬಗ್ಗೆ ಧನಶ್ರೀ ವರ್ಮಾ ಅವರು ಪೋಸ್ಟ್‌ ಹಂಚಿಕೊಂಡ ಬೆನ್ನಲ್ಲೇ ಪತಿ ಚಾಹಲ್‌ ಸಹ ಮೌನ ಮುರಿದಿದ್ದಾರೆ.

    ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಚಾಹಲ್‌ ಊಹಾಪೋಹ ಹರಡದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ – ಡಿವೋರ್ಸ್‌ ವದಂತಿ ಬೆನ್ನಲ್ಲೇ ಮೌನ ಮುರಿದ ಧನಶ್ರೀ

    ಚಾಹಲ್‌ ಇನ್‌ಸ್ಟಾದಲ್ಲಿ ಏನಿದೆ?
    ನನ್ನ ಎಲ್ಲಾ ಅಭಿಮಾನಿಗಳ ಅಚಲ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಅಭಿಮಾನಿಗಳ ಬೆಂಬಲ ಇಲ್ಲದೇ ಇದ್ದಿದ್ದರೆ ನಾನು ಇಲ್ಲಿಯವರೆಗೆ ಬರುತ್ತಿರಲಿಲ್ಲ. ಆದ್ರೆ ಪ್ರಯಾಣ ಇಲ್ಲಿಗೇ ಮುಗಿಯುವುದಿಲ್ಲ. ಒಬ್ಬ ಕ್ರೀಡಾಪಟುವಾಗಿ ಇನ್ನೂ ನನ್ನ ದೇಶ, ನನ್ನ ತಂಡ ಹಾಗೂ ನನ್ನ ಎಲ್ಲ ಅಭಿಮಾನಿಗಳಿಗಾಗಿ ಅದ್ಭುತ ಓವರ್‌ಗಳು ಬಾಕಿ ಉಳಿದಿವೆ. ಆದ್ರೆ ಇತ್ತೀಚೆಗೆ ನಡೆಯುತ್ತಿರುವ ಘಟನೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಅದರಲ್ಲೂ ನನ್ನ ವೈಯಕ್ತಿಕ ಜೀವನದ ಬಗ್ಗೆ ಜಾಲತಾಣದಲ್ಲಿ ಕಾಮೆಂಟ್‌ಗಳು ಹರಿದಾಡುತ್ತಿವೆ. ಅದರಲ್ಲಿ ಸತ್ಯವಾಗಿರಬಹುದಾದ ಮತ್ತು ಸತ್ಯವಲ್ಲದ ವಿಷಯಗಳ ವದಂತಿ ಹರಿದಾಡುತ್ತಿರುವುದನ್ನು ನಾನು ಗಮನಿಸಿದ್ದೇನೆ. ಇದನ್ನೂ ಓದಿ:  ಕೊಡಗಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

    ನಾನು ಒಬ್ಬ ಮಗ, ಸಹೋದರ ಹಾಗೂ ಸ್ನೇಹಿತನಾಗಿ ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ಯಾರೂ ಊಹಾಪೋಹಗಳಲ್ಲಿ ತೊಡಗಬೇಡಿ. ಇಂತಹ ಊಹಾಪೋಹಳಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ತುಂಬಾನೆ ನೋವಾಗಿದೆ. ನನ್ನ ಕುಟುಂಬ ಎಲ್ಲರಿಗೂ ಒಳ್ಳೆಯದನ್ನೇ ಬಯಸಲು ಕಲಿಸಿದೆ, ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸುವುದನ್ನೇ ಕಲಿಸಿದೆ. ಹಾಗಾಗಿ ಜೀವನದಲ್ಲಿ ಅಡ್ಡದಾರಿಯಲ್ಲಿ ಸಾಗುವ ಬದಲು ನಾನು ನನ್ನ ಮೌಲ್ಯಗಳಿಗೆ ಬದ್ಧನಾಗಿರುತ್ತೇನೆ. ದೇವರ ಆಶೀರ್ವಾದದೊಂದಿಗೆ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲ ಪಡೆಯಲು ನಾನು ಶಾಶ್ವತವಾಗಿ ಶ್ರಮಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಧನಶ್ರೀ ವರ್ಮಾ ಹೇಳಿದ್ದೇನು?
    ನಾನು, ನನ್ನ ಕುಟುಂಬದ ಸದಸ್ಯರು ಕಳೆದ ಕೆಲ ದಿನಗಳಿಂದ ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಕೆಲವರು ಸತ್ಯ ತಿಳಿಯದೇ ಸುಳ್ಳು ಸುಳ್ಳನ್ನೇ ಬರೆಯುತ್ತಿದ್ದಾರೆ. ನನ್ನ ಖ್ಯಾತಿಗೆ ಕಳಂಕ ತರಲು ಆಧಾರರಹಿತ ಬರವಣಿಗೆ, ಸತ್ಯ-ಪರಿಶೋಧವಿಲ್ಲದ ಬರಹಗಳು ಮತ್ತು ದ್ವೇಷ ಹರಡುವ ಟ್ರೋಲ್‌ಗಳನ್ನು ಮಾಡುತ್ತಿದ್ದಾರೆ. ಹಲವು ವರ್ಷಗಳ ಕಾಲ ಶ್ರಮಿಸಿದ ನಂತರವೇ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ನಾನು ಮೌನವಾಗಿದ್ದ ಮಾತ್ರಕ್ಕೆ, ಅದು ನನ್ನ ದೌರ್ಬಲ್ಯ ಎಂದು ಭಾವಿಸಬೇಡಿ ಎಂದಿದ್ದರು.

    ಮುಂದುವರಿದು… ಇತರರಿಗೆ ಸಹಾನುಭೂತಿ ತೋರಿಸಲು ಧೈರ್ಯ ಬೇಕು. ನೈಜ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಮೌಲ್ಯಗಳೊಂದಿಗೆ ಮುಂದುವರಿಯುವುದರಲ್ಲಿ ನಾನು ನಂಬಿಕೆ ಇಡುತ್ತೇನೆ. ಇಲ್ಲಿ ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ. ನಾನು ನನ್ನ ಸತ್ಯದ ಮೇಲೆ ಕೇಂದ್ರೀಕರಿಸಲು ಮತ್ತು ನನ್ನ ಮೌಲ್ಯಗಳನ್ನು ಹಿಡಿದಿಟ್ಟುಕೊಂಡು ಮುಂದುವರಿಯುವುದನ್ನು ಆಯ್ಕೆ ಮಾಡುತ್ತೇನೆ. ಯಾವುದೇ ಸಾಕ್ಷ್ಯಗಳಿಲ್ಲಿದ್ರೂ ಸತ್ಯವು ಅದರ ಸ್ಥಾನದಲ್ಲಿ ದೃಢವಾಗಿ ನಿಂತಿದೆ. ಓಂ ನಮಃ ಶಿವಾಯ ಎಂದು ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು.

    ಸದ್ಯ ಚಾಹಲ್‌ ಹಾಗೂ ಧನಶ್ರೀ ಇಬ್ಬರೂ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆಯೇ ಹೊರತು, ವೈವಾಹಿಕ ಜೀವನದಲ್ಲಿ ಜೊತೆಗೆ ಮುಂದುವರಿಯುವ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಹಾಗಾಗಿ ಚಹಲ್‌-ಧನಶ್ರೀ ಅವರ ಈ ಪೋಸ್ಟ್‌ ಮತ್ತಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ.

  • ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ – ಡಿವೋರ್ಸ್‌ ವದಂತಿ ಬೆನ್ನಲ್ಲೇ ಮೌನ ಮುರಿದ ಧನಶ್ರೀ

    ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ – ಡಿವೋರ್ಸ್‌ ವದಂತಿ ಬೆನ್ನಲ್ಲೇ ಮೌನ ಮುರಿದ ಧನಶ್ರೀ

    ಮುಂಬೈ: ಟೀಂ ಇಂಡಿಯಾ ಸ್ಟಾರ್ ಲೆಗ್‌ ಸ್ಪಿನ್ನರ್‌ ಯಜುವೇಂದ್ರ ಚಹಲ್‌ (Yuzvendra Chahal) ಅವರು ಪತ್ನಿ ಧನಶ್ರೀ ವರ್ಮಾಗೆ (Dhanashree Verma) ಡಿವೋರ್ಸ್‌ ಕೊಡಲಿದ್ದಾರೆ ಎಂಬ ವದಂತಿ ಬಗ್ಗೆ ಧನಶ್ರೀ ಮೌನ ಮುರಿದಿದ್ದಾರೆ.

    2020ರ ಡಿಸೆಂಬರ್‌ 22ರಂದು ಉತ್ತರ ಪ್ರದೇಶದ ಗುರುಗ್ರಾಮ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಚಹಲ್‌-ಧನಶ್ರೀ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ವದಂತಿ ಜಾಲತಾಣದಲ್ಲಿ ಸದ್ದು ಮಾಡುತ್ತಲೇ ಇತ್ತು. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಧನಶ್ರೀ ವಂದತಿ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಡಿವೋರ್ಸ್‌ ಆದ್ರೆ ಚಹಲ್‌ ಧನಶ್ರೀಗೆ ಎಷ್ಟು ಜೀವನಾಂಶ ಕೊಡಬೇಕು? ಇಬ್ಬರ ಸಂಪತ್ತು ಎಷ್ಟಿದೆ?

    ನಾನು, ನನ್ನ ಕುಟುಂಬದ ಸದಸ್ಯರು ಕಳೆದ ಕೆಲ ದಿನಗಳಿಂದ ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಕೆಲವರು ಸತ್ಯ ತಿಳಿಯದೇ ಸುಳ್ಳು ಸುಳ್ಳನ್ನೇ ಬರೆಯುತ್ತಿದ್ದಾರೆ. ನನ್ನ ಖ್ಯಾತಿಗೆ ಕಳಂಕ ತರಲು ಆಧಾರರಹಿತ ಬರವಣಿಗೆ, ಸತ್ಯ-ಪರಿಶೋಧವಿಲ್ಲದ ಬರಹಗಳು ಮತ್ತು ದ್ವೇಷ ಹರಡುವ ಟ್ರೋಲ್‌ಗಳನ್ನು ಮಾಡುತ್ತಿದ್ದಾರೆ. ಹಲವು ವರ್ಷಗಳ ಕಾಲ ಶ್ರಮಿಸಿದ ನಂತರವೇ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ನಾನು ಮೌನವಾಗಿದ್ದ ಮಾತ್ರಕ್ಕೆ, ಅದು ನನ್ನ ದೌರ್ಬಲ್ಯ ಎಂದು ಭಾವಿಸಬೇಡಿ ಎಂದಿದ್ದಾರೆ. ಇದನ್ನೂ ಓದಿ: ಚಹಲ್‌, ಧನಶ್ರೀ ದಾಂಪತ್ಯದಲ್ಲಿ ಬಿರುಕು – ಮದ್ವೆಯಾಗಿ 4 ವರ್ಷದ ಬಳಿಕ ಡಿವೋರ್ಸ್?

    ಮುಂದುವರಿದು… ಇತರರಿಗೆ ಸಹಾನುಭೂತಿ ತೋರಿಸಲು ಧೈರ್ಯ ಬೇಕು. ನೈಜ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಮೌಲ್ಯಗಳೊಂದಿಗೆ ಮುಂದುವರಿಯುವುದರಲ್ಲಿ ನಾನು ನಂಬಿಕೆ ಇಡುತ್ತೇನೆ. ಇಲ್ಲಿ ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ. ನಾನು ನನ್ನ ಸತ್ಯದ ಮೇಲೆ ಕೇಂದ್ರೀಕರಿಸಲು ಮತ್ತು ನನ್ನ ಮೌಲ್ಯಗಳನ್ನು ಹಿಡಿದಿಟ್ಟುಕೊಂಡು ಮುಂದುವರಿಯುವುದನ್ನು ಆಯ್ಕೆ ಮಾಡುತ್ತೇನೆ. ಯಾವುದೇ ಸಾಕ್ಷ್ಯಗಳಿಲ್ಲಿದ್ರೂ ಸತ್ಯವು ಅದರ ಸ್ಥಾನದಲ್ಲಿ ದೃಢವಾಗಿ ನಿಂತಿದೆ. ಓಂ ನಮಃ ಶಿವಾಯ ಎಂದು ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

    ಧನಶ್ರೀ ಅವರ ಈ ಪೋಸ್ಟ್‌ ಬಳಿಕ ಇನ್ನಷ್ಟು ಚರ್ಚೆಗಳು ಹುಟ್ಟಿಕೊಂಡಿವೆ. ಏಕೆಂದರೆ ಈ ಪೋಸ್ಟ್‌ನಲ್ಲಿ ಚಹಲ್‌ ಜೊತೆಗಿನ ಸಂಬಂಧ ಮುಂದುವರಿಸುವುದಾಗಿ ಅವರು ಸ್ಪಷ್ಟನೆ ನೀಡಿಲ್ಲ. ಚಹಲ್‌ ಹೆಸರನ್ನೂ ಪ್ರಸ್ತಾಪಿಸಿಲ್ಲ ಎಂದು ನೆಟ್ಟಿಗರು ಚರ್ಚಿಸಿದ್ದಾರೆ.

  • ಡಿವೋರ್ಸ್‌ ಆದ್ರೆ ಚಹಲ್‌ ಧನಶ್ರೀಗೆ ಎಷ್ಟು ಜೀವನಾಂಶ ಕೊಡಬೇಕು? ಇಬ್ಬರ ಸಂಪತ್ತು ಎಷ್ಟಿದೆ?

    ಡಿವೋರ್ಸ್‌ ಆದ್ರೆ ಚಹಲ್‌ ಧನಶ್ರೀಗೆ ಎಷ್ಟು ಜೀವನಾಂಶ ಕೊಡಬೇಕು? ಇಬ್ಬರ ಸಂಪತ್ತು ಎಷ್ಟಿದೆ?

    ಮುಂಬೈ: ಭಾರತ ಖ್ಯಾತ ಲೆಗ್‌ ಸ್ಪಿನ್ನರ್‌ ಯಜುವೇಂದ್ರ ಚಹಲ್‌ (Yuzvendra Chahal) ಅವರು ಪತ್ನಿ ಧನಶ್ರೀ ವರ್ಮಾಗೆ (Dhanashree Verma) ಡಿವೋರ್ಸ್‌ ಕೊಡಲಿದ್ದಾರೆ ಎಂಬ ವದಂತಿ ಸುದ್ದಿಗಳು ಪ್ರಕಟವಾಗುತ್ತಿದೆ. ಈ ಸುದ್ದಿ ಒಂದು ವೇಳೆ ನಿಜವಾಗಿ ಕೋರ್ಟ್‌ ಮೂಲಕ ವಿಚ್ಛೇದನ (Divorce) ಪಡೆದರೆ ಚಹಲ್‌ ಧನಶ್ರೀ ಅವರಿಗೆ ಭಾರೀ ಜೀವನಾಂಶ (Alimony) ನೀಡಬೇಕಾಗುತ್ತದೆ.

    ಚಹಲ್‌ ಆಸ್ತಿ ಎಷ್ಟಿದೆ?
    ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ದೇಶಕ್ಕಾಗಿ 200 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿರುವ ಚಹಲ್‌ ಟೀಂ ಇಂಡಿಯಾದ ಟಾಪ್‌ ಬೌಲರ್‌ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಚಹಲ್‌ 160 ಐಪಿಎಲ್‌ (IPL) ಪಂದ್ಯವಾಡಿ 22.44 ರ ಸರಾಸರಿಯಲ್ಲಿ 205 ವಿಕೆಟ್ ಪಡೆದಿದ್ದಾರೆ.

    2024ರ ಆವೃತ್ತಿಯಲ್ಲಿ ಚಹಲ್‌ ರಾಜಸ್ಥಾನ ರಾಯಲ್ಸ್‌ ಪರ ಆಡಿದ್ದರು. ಈ ವೇಳೆ ಅವರಿಗೆ 6.5 ಕೋಟಿ ರೂ. ನೀಡಿತ್ತು. ಐಪಿಎಲ್ 2025 ರ ಮೆಗಾ ಹರಾಜಿಗೆ ಮೊದಲು ಚಹಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡ ಕೈಬಿಟ್ಟಿತ್ತು. ನಂತರ ನಡೆದ ಹರಾಜು ಪ್ರಕ್ರಿಯೆಯಲ್ಲಿ ಪಂಜಾಬ್‌ ಕಿಂಗ್ಸ್‌ 18 ಕೋಟಿ ರೂ. ನೀಡಿ ಚಹಲ್‌ ಅವರನ್ನು ಖರೀದಿಸಿತ್ತು.

    ಚಾಹಲ್ ಅವರು 2019 ರಲ್ಲಿ ಜೀವನಶೈಲಿ ಬ್ರ್ಯಾಂಡ್ ‘ಚೆಕ್ಮೇಟ್’ ಅನ್ನು ಪ್ರಾರಂಭಿಸಿದ್ದರು. ಅಷ್ಟೇ ಅಲ್ಲದೇ ಅವರು ಫಿಟ್‌ನೆಸ್ ಅಪ್ಲಿಕೇಶನ್ ʼಗ್ರಿಪ್ʼ ಮತ್ತು ʼYUZOʼ ಬಟ್ಟೆ ಲೈನ್‌ನಲ್ಲಿ ಪಾಲನ್ನು ಹೊಂದಿದ್ದಾರೆ. ಚಹಲ್‌ ಪೋರ್ಷೆ ಕೆಯೆನ್ನೆ ಎಸ್, ಮರ್ಸಿಡಿಸ್ ಬೆಂಜ್ ಸಿ-ಕ್ಲಾಸ್, ಲಂಬೋರ್ಘಿನಿ ಸೆಂಟೆನಾರಿಯೊ ಮತ್ತು ರೋಲ್ಸ್ ರಾಯ್ಸ್ ಸೇರಿದಂತೆ ಹಲವಾರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ.

    ಬ್ರ್ಯಾಂಡ್ ಎಂಡಾರ್ಸ್‌ಮೆಂಟ್‌ಗಳಿಂದ ಉತ್ತಮ ಮೊತ್ತವನ್ನು ಪಡೆಯುತ್ತಿರುವ ಚಹಲ್‌ ಅವರ ನಿವ್ವಳ ಮೌಲ್ಯ ಸುಮಾರು 45 ಕೋಟಿ ಇರಬಹುದು ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ:ಚಹಲ್‌, ಧನಶ್ರೀ ದಾಂಪತ್ಯದಲ್ಲಿ ಬಿರುಕು – ಮದ್ವೆಯಾಗಿ 4 ವರ್ಷದ ಬಳಿಕ ಡಿವೋರ್ಸ್?

    ಒಂದು ವೇಳೆ ಅಧಿಕೃತವಾಗಿ ಕೋರ್ಟ್‌ ಮೂಲಕ ಧನಶ್ರೀಗೆ ಡಿವೋರ್ಸ್‌ ನೀಡಿದರೆ ಚಹಲ್‌ ಅವರು ತಮ್ಮ ಸಂಪತ್ತಿನ 20% ರಿಂದ 30% ವರೆಗಿನ ಪಾಲನ್ನು ನೀಡಬೇಕಾಗಬಹುದು. ಎಷ್ಟು ಜೀವನಾಂಶ ನೀಡಬೇಕು ಎಂಬುದನ್ನು ಕೋರ್ಟ್‌ ನಿರ್ಧರಿಸಲಿದೆ.

    ಧನಶ್ರೀ ಅಸ್ತಿ ಎಷ್ಟಿದೆ?
    ನೃತ್ಯ ಸಂಯೋಜನೆ, ಬ್ರಾಂಡ್ ಪ್ರಚಾರ, ಸೋಶಿಯಲ್‌ ಮೀಡಿಯಾಗಳಿಂದ ಧನಶ್ರೀ ಆದಾಯ ಸಂಪಾದಿಸುತ್ತಿದ್ದಾರೆ. ಮಾಧ್ಯಮವೊಂದರ ಪ್ರಕಾರ ಧನಶ್ರೀ ಅವರು ಅಂದಾಜು 25 ಕೋಟಿ ರೂ. ಮೌಲ್ಯದ ಸಂಪತ್ತು ಹೊಂದಿದ್ದಾರೆ.

  • ಮ್ಯಾಚಿಗೂ ಮುನ್ನ ರೂಮಿಗೆ ಬಂದು ಸರ್ಪ್ರೈಸ್ ಕೊಟ್ಟ ಚಹಲ್ ಭಾವಿ ಪತ್ನಿ

    ಮ್ಯಾಚಿಗೂ ಮುನ್ನ ರೂಮಿಗೆ ಬಂದು ಸರ್ಪ್ರೈಸ್ ಕೊಟ್ಟ ಚಹಲ್ ಭಾವಿ ಪತ್ನಿ

    ಅಬುಧಾಬಿ: ಯುಜ್ವೇಂದ್ರ ಚಹಲ್ ಅವರ ಭಾವಿ ಪತ್ನಿ ಧನಶ್ರೀ ವರ್ಮಾ ಪಂದ್ಯಕ್ಕೂ ಮುನ್ನ ಚಹಲ್ ಅವರ ರೂಮಿಗೆ ಬಂದು ಆರ್‌ಸಿಬಿ ಸ್ಪಿನ್ನರ್ ಗೆ ಸರ್ಪ್ರೈಸ್ ನೀಡಿರುವ ವಿಡಿಯೋವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಮ್ಮ ಯೂಟ್ಯೂಬ್ ಖಾತೆಯನ್ನು ಹಂಚಿಕೊಂಡಿದೆ.

    ಯುಜ್ವೇಂದ್ರ ಚಹಲ್ ಅವರು ಈ ಬಾರಿಯ ಐಪಿಎಲ್‍ನಲ್ಲಿ ಆಡಿರುವ 10 ಪಂದ್ಯಗಳಲ್ಲಿ 15 ವಿಕೆಟ್ ಪಡೆದು ಮಿಂಚುತ್ತಿದ್ದಾರೆ. ಅಕ್ಟೋಬರ್ 17ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ನಡೆದ ಲೀಗ್ ಪಂದ್ಯದ ಮೊದಲು ಧನಶ್ರೀ ವರ್ಮಾ ಚಹಲ್‍ಗೆ ತಿಳಿಯದಂತೆ ಅವರ ರೂಮ್ ಬಳಿ ಬಂದಿದ್ದು, ಈ ವೇಳೆ ಚಹಲ್ ಶಾಕ್ ಆಗಿರುವ ಹಳೆಯ ವೀಡಿಯೋವನ್ನು ಆರ್‌ಸಿಬಿ ತನ್ನ ಬೋಲ್ಡ್ ಡೈರೀಸ್‍ನಲ್ಲಿ ಹಂಚಿಕೊಂಡಿದೆ.

    ಈ ವೀಡಿಯೋವನ್ನು ಶುಕ್ರವಾರ ಶೇರ್ ಮಾಡಿರುವ ಆರ್‌ಸಿಬಿ ತಂಡ ಯುಜಿಯ ಖುಷಿಗೆ ಇದೇ ದೊಡ್ಡ ಕಾರಣ ಎಂಬ ಕ್ಯಾಪ್ಶನ್ ನೀಡಿದೆ. ಈ ವೀಡಿಯೋದಲ್ಲಿ ಮೊದಲು ಚಹಲ್ ಹ್ಯಾಪಿ ಆಗಿ ಕುಣಿಯುತ್ತಾ ಹೋಗುತ್ತಿರುತ್ತಾರೆ. ನಂತರ ಈ ಖುಷಿಗೆ ಕಾರಣ ಏನು ಗೊತ್ತೆ ಎಂಬ ಪ್ರಶ್ನೆ ಬರುತ್ತೆ. ನಂತರ ಚಹಲ್‍ಗೆ ತಿಳಿಯದಂತೆ ಧನಶ್ರೀ ವರ್ಮಾ ಅವರು ಅವರ ರೂಮಿಗೆ ಬಂದು ಸರ್ಪ್ರೈಸ್ ನೀಡಿರುವ ವೀಡಿಯೋವನ್ನು ಹಾಕಲಾಗಿದೆ.

    ಈ ವೀಡಿಯೋದಲ್ಲಿ ಮಾತನಾಡಿರುವ ಧನಶ್ರೀ, ನಾನು ನಿಮ್ಮೆಲ್ಲರ ಪ್ರೀತಿಯ ಚಹಲ್ ಗೆಳತಿ ಧನಶ್ರೀ ವರ್ಮಾ, ನಾನು ಅಕ್ಟೋಬರ್ 11ರಂದೇ ದುಬೈಗೆ ಬಂದಿದ್ದೆ. ಅದು ಚಹಲ್‍ಗೆ ಗೊತ್ತಿತ್ತು. ಆದರೆ ಇಂದು ನಾನು ಪಂದ್ಯಕ್ಕೂ ಮುನ್ನವೇ ರೂಮಿಗೆ ಬರುತ್ತೇನೆ ಎಂದು ಆತನಿಗೆ ತಿಳಿದಿಲ್ಲ. ನಾನು ಸರ್ಪ್ರೈಸ್ ನೀಡಲು ಹೋಗುತ್ತಿದ್ದೇನೆ. ಬನ್ನಿ ಚಹಲ್ ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂದು ನೋಡೋಣ ಎಂದು ರೂಮಿನ ಕಡೆಗೆ ಹೋಗುತ್ತಾರೆ.

    ರೂಮಿನ ಬಳಿ ಹೋಗಿ ಧನಶ್ರೀ ವರ್ಮಾ ಡೂರ್ ತಟ್ಟಿದಾಗ ಚಹಲ್ ಬಂದು ಓಪನ್ ಮಾಡಿ, ನೀನು ಪಂದ್ಯ ಮುಗಿದ ನಂತರ ಬರಬೇಕು ಎಂದು ಕೇಳುತ್ತಾರೆ. ಅದಕ್ಕೆ ಧನಶ್ರೀ ಇದು ಸರ್ಪ್ರೈಸ್ ಎಂದು ಹೇಳಿ ಅಪ್ಪಿಕೊಳ್ಳುತ್ತಾರೆ. ಜೊತೆಗೆ ಚಹಲ್ ಧನುಶ್ರೀಯನ್ನು ಬಹಳ ಮಿಸ್ ಮಾಡುತ್ತಿದ್ದೆ ಎಂದು ಹೇಳುತ್ತಾರೆ. ಅಕ್ಟೋಬರ್ 11ರಂದು ದುಬೈಗೆ ಬಂದಿದ್ದ ಧನಶ್ರೀ ವರ್ಮಾ ಅಕ್ಟೋಬರ್ 17ರವರೆಗೆ ಕ್ವಾಂರಟೈನ್ ಆಗಿದ್ದರು. ಇದನ್ನು ಓದಿ: ಭಾವಿ ಪತಿ ಪ್ರಶಸ್ತಿ ಪಡೆಯುತ್ತಿದ್ದಂತೆ ಟಿವಿ ಎದುರೇ ಚಹಲ್ ಪ್ರೇಯಸಿ ಡ್ಯಾನ್ಸ್

    ಅಂದಹಾಗೇ ಚಹಲ್ ಹಾಗೂ ಧನುಶ್ರೀ ಅವರ ನಿಶ್ಚಿತಾರ್ಥ ಎರಡು ಕುಟುಂಬಗಳ ಸಮ್ಮುಖದಲ್ಲಿ ಆಗಸ್ಟ್ 8 ರಂದು ನಡೆದಿತ್ತು. ಈ ವಿಚಾರವನ್ನು ಸ್ವತಃ ಚಹಲ್ ತಮ್ಮ ಇನ್‍ಸ್ಟಾದಲ್ಲಿ ಘೋಷಿಸಿದ್ದರು. ಧನಶ್ರೀ ವರ್ಮಾ ಡಿಜಿಟಲ್ ಕಂಟೆಂಟ್ ಕ್ರಿಯೆಟರ್ ಆಗಿದ್ದಾರೆ. ಅಲ್ಲದೇ ಡಾಕ್ಟರ್ ಕೊರಿಯೋಗ್ರಾಫರ್, ಯೂಟ್ಯೂಬರ್ ಮತ್ತು ಧನಶ್ರೀ ವರ್ಮಾ ಕಂಪನಿಯ ಸ್ಥಾಪಕಿಯಾಗಿದ್ದಾರೆ. ಚಹಲ್ ಮದುವೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ.

  • ಭಾವಿ ಪತ್ನಿಯನ್ನ ಪರಿಚಯಿಸಿದ ಚಹಲ್

    ಭಾವಿ ಪತ್ನಿಯನ್ನ ಪರಿಚಯಿಸಿದ ಚಹಲ್

    ನವದೆಹಲಿ: ಟೀಂ ಇಂಡಿಯಾ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ತಾವು ಮದುವೆ ಆಗುತ್ತಿರುವ ಪ್ರೇಯಸಿ ಧನಶ್ರೀ ವರ್ಮಾ ಅವರನ್ನು ಪರಿಚಯಿಸಿದ್ದಾರೆ. ಇಬ್ಬರ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿರುವ ಚಹಲ್, ಎರಡು ಕುಟುಂಬಗಳು ಸಮ್ಮುಖದಲ್ಲಿ ಮದುವೆಯ ಮೊದಲ ಶಾಸ್ತ್ರ ಮುಗಿದಿದೆ ಎಂದುಇ ಬರೆದುಕೊಂಡಿದ್ದಾರೆ.

    ಧನಶ್ರೀ ವರ್ಮಾ ಡಿಜಿಟಲ್ ಕಂಟೆಂಟ್ ಕ್ರಿಯೆಟರ್ ಆಗಿದ್ದಾರೆ. ತಮ್ಮ ಇನ್‍ಸ್ಟಾಗ್ರಾಂನಲ್ಲಿ ಡಾಕ್ಟರ್, ಕೊರಿಯೋರಾಫರ್, ಯು ಟ್ಯೂಬರ್ ಮತ್ತು ಧನಶ್ರೀ ವರ್ಮಾ ಕಂಪನಿಯ ಸ್ಥಾಪಕಿ ಎಂದು ಕೆಲಸದ ಬಗ್ಗೆ ಬರೆದುಕೊಂಡಿದ್ದಾರೆ. ಹೆಣ್ಣು ನೋಡುವ ಶಾಸ್ತ್ರಮುಗಿದಿದೆ.

    https://twitter.com/yuzi_chahal/status/1292049597360033794

    ಚಹಲ್ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿದ್ದಂತೆ ಟೀಂ ಇಂಡಿಯಾ ಆಟಗಾರರು ಮತ್ತು ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಚಹಲ್ ಇದುವರೆಗೂ 52 ಏಕದಿನ ಮತ್ತು 42 ಟಿಟ್ವೆಂಟಿ ಪಂದ್ಯಗಳನ್ನಾಡಿದ್ದಾರೆ.