Tag: ಧನ್ವೀರ್

  • ದರ್ಶನ್ ಬಂದೋಬಸ್ತ್‌ಗೆ 3 ಲಕ್ಷ ರೂ. ಕಟ್ಟಿಸಿಕೊಂಡ್ರಾ ಪೊಲೀಸರು?

    ದರ್ಶನ್ ಬಂದೋಬಸ್ತ್‌ಗೆ 3 ಲಕ್ಷ ರೂ. ಕಟ್ಟಿಸಿಕೊಂಡ್ರಾ ಪೊಲೀಸರು?

    ಬೆಂಗಳೂರು: 3 ಲಕ್ಷ ರೂ. ಕಟ್ಟಿಸಿಕೊಂಡು ನಟ ದರ್ಶನ್‌ಗೆ (Darshan) ವಾಮನ (Vamana) ಚಿತ್ರ ವೀಕ್ಷಣೆಗೆ ಪೊಲೀಸರು ಅನುಮತಿ ಕೊಟ್ಟಿದ್ದಾರೆಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

    ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಜಿಟಿ ಮಾಲ್ ಚಿತ್ರಮಂದಿರಕ್ಕೆ ನಟ ದರ್ಶನ್, ಸ್ನೇಹಿತ ಧನ್ವೀರ್ (Dhanveer) ನಟನೆಯ ವಾಮನ ಸಿನಿಮಾ ನೋಡಲು ಬುಧವಾರ ರಾತ್ರಿ ಬಂದಿದ್ದರು. ಈ ವೇಳೆ ಚಿತ್ರಮಂದಿರದಲ್ಲಿ ಬಂದೋಬಸ್ತ್‌ಗೆ ಪೊಲೀಸರು ಸಂಬಂಧಪಟ್ಟವರಿಂದ 3 ಲಕ್ಷ ರೂ. ಹಣವನ್ನು ಬಂದೋಬಸ್ತ್ ಮ್ಯಾನೇಜ್ಮೆಂಟ್‌ಗೆ ಕಟ್ಟಿಸಿಕೊಂಡಿದ್ದಾರೆಂದು ಪೊಲೀಸ್ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಯಹೂದಿಗಳ ವಿರುದ್ಧ ಪೋಸ್ಟ್ ಹಾಕಿದ್ರೆ ವೀಸಾ, ಗ್ರೀನ್ ಕಾರ್ಡ್ ನೀಡಲ್ಲ – ವಲಸಿಗರಿಗೆ ಅಮೆರಿಕ ಎಚ್ಚರಿಕೆ

    ನಟ ದರ್ಶನ್ ಬರುವ ವಿಚಾರ ತಿಳಿದು ಚಿತ್ರಮಂದಿರದ ಬಳಿ ದರ್ಶನ್ ಅಭಿಮಾನಿಗಳು ಜಮಾವಣೆ ಆಗುತ್ತಿದ್ದಾರೆ. ತೆಲಂಗಾಣದಲ್ಲಿ ಪೊಲೀಸ್ ಭದ್ರತೆ ಇಲ್ಲದೆ ಹೋಗಿದ್ದರಿಂದ ಪುಷ್ಪ 2 ಸಿನಿಮಾ ವೀಕ್ಷಣೆಗೆ ಅಲ್ಲು ಅರ್ಜುನ್ ಬಂದಾಗ ಚಿತ್ರಮಂದಿರದಲ್ಲಿ ಕಾಲ್ತುಳಿತ ಸಂಭವಿಸಿತ್ತು. ಇದನ್ನೂ ಓದಿ: 64 ವಯಸ್ಸಿನ ಉಗ್ರ ರಾಣಾ ಫೋಟೊ ರಿಲೀಸ್‌

    ಅದೇ ರೀತಿ ದರ್ಶನ್ ಅಭಿಮಾನಿಗಳು ಜಮಾವಣೆ ಆಗಿ ನಾಳೆ ಅಹಿತಕರ ಘಟನೆಗೆ ಕಾರಣವಾಗಬಹುದೆಂದು ಚಿತ್ರಮಂದಿರದ ಬಳಿ ಭದ್ರತೆ ಮಾಡಬೇಕೆಂದು ಪೊಲೀಸರು 3 ಲಕ್ಷ ರೂ. ಹಣವನ್ನು ಬಂದೋಬಸ್ತ್ ಮ್ಯಾನೇಜ್ಮೆಂಟ್‌ಗೆ ಕಟ್ಟಿಸಿಕೊಂಡಿದ್ದಾರೆ ಎಂಬ ವಿಚಾರ ತಿಳಿದುಬಂದಿದೆ.

  • ವಿಜಯಲಕ್ಷ್ಮಿ ಅಕ್ಕ ಹೋರಾಟ ನೋಡಿ ಅವರೊಂದಿಗೆ ನಿಲ್ಲಬೇಕು ಅನ್ನಿಸಿತು: ದರ್ಶನ್‌ ಕೇಸ್‌ ಬಗ್ಗೆ ಧನ್ವೀರ್ ಮಾತು

    ವಿಜಯಲಕ್ಷ್ಮಿ ಅಕ್ಕ ಹೋರಾಟ ನೋಡಿ ಅವರೊಂದಿಗೆ ನಿಲ್ಲಬೇಕು ಅನ್ನಿಸಿತು: ದರ್ಶನ್‌ ಕೇಸ್‌ ಬಗ್ಗೆ ಧನ್ವೀರ್ ಮಾತು

    ಸ್ಯಾಂಡಲ್‌ವುಡ್ ನಟ ದರ್ಶನ್ ಜೊತೆ ಧನ್ವೀರ್ ಗೌಡ ಉತ್ತಮ ಬಾಂಧವ್ಯ ಹೊಂದಿದ್ದಾರೆ. ದರ್ಶನ್‌ ಜೊತೆಗಿನ ಒಡನಾಟ ಮತ್ತು ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಧನ್ವೀರ್ ಮುಕ್ತವಾಗಿ ಮಾತನಾಡಿದ್ದಾರೆ. ಈ ವೇಳೆ, ವಿಜಯಲಕ್ಷ್ಮಿ ಅಕ್ಕನ ಹೋರಾಟ ನೋಡಿ ಅವರೊಂದಿಗೆ ನಿಲ್ಲಬೇಕು ಅನ್ನಿಸಿತು ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:ಪವನ್ ಕಲ್ಯಾಣ್, ಶ್ರೀಲೀಲಾ ನಟನೆಯ ಸಿನಿಮಾ ನಿಂತು ಹೋಗಿಲ್ಲ- ಸ್ಪಷ್ಟನೆ ನೀಡಿದ ನಿರ್ಮಾಪಕ

    ಪಬ್ಲಿಕ್ ಟಿವಿ ಸಂದರ್ಶನದಲ್ಲಿ ದರ್ಶನ್ ಜೊತೆಗಿನ ಬಾಂಧವ್ಯದ ಬಗ್ಗೆ ಧನ್ವೀರ್ ಮಾತನಾಡಿ, ನಾನು ದರ್ಶನ್‌ರನ್ನು ಹೃದಯದಿಂದ ಇಷ್ಟಪಟ್ಟಿದ್ದೀನಿ. ಅದಕ್ಕೆ ಯಾವಾಗೂ ಜೊತೆಯಲ್ಲಿದ್ದೆ. ರೇಣುಕಾಸ್ವಾಮಿ ಪ್ರಕರಣ ಏನೇ ಆಗಿರಬಹುದು. ಅದು ನ್ಯಾಯಾಲಯದಲ್ಲಿದೆ. ಅದನ್ನು ಜಡ್ಜ್ ಮಾಡೋಕೆ ನಾವ್ಯಾರು ಅಲ್ಲ. ಕಾನೂನು ಅಂತ ಇದೆ. ಅಲ್ಲಿ ತೀರ್ಮಾನ ಆಗುತ್ತೆ. ಒಂದು ಸಮಯದಲ್ಲಿ ಎಲ್ಲರೂ ಅವರೊಂದಿಗೆ ಇದ್ದರು. ದರ್ಶನ್ ಕಡೆಯಿಂದ ಎಲ್ಲಾ ತರಹದ ಬೆಂಬಲ ತಗೊಂಡರು. ಅವರು ಹಿಂದೆ ಮುಂದೆ ಯೋಚನೆ ಮಾಡದೇ ಎಲ್ಲರೂ ನಮ್ಮವರು ಅಂತ ಅಪ್ಪಿಕೊಂಡರು. ಆದರೆ ಅವರಿಗೆ ಕಷ್ಟ ಬಂದಾಗ ಎಲ್ಲರೂ ದೂರ ಸರಿದರು ಎಂದಿದ್ದಾರೆ. ಇದನ್ನೂ ಓದಿ:ಆಸ್ಟ್ರೇಲಿಯಾದಲ್ಲಿ ಸಮಂತಾ- ಪ್ರವಾಸದ ಫೋಟೋ ಹಂಚಿಕೊಂಡ ನಟಿ

    ಇನ್ನೂ ವಿಜಯಲಕ್ಷ್ಮಿ ಅಕ್ಕ ಅವರು ಒಂಟಿ ಹೆಣ್ಣು ಮಗಳಾಗಿ ಅಷ್ಟು ಹೋರಾಟ ಮಾಡಿದ್ರು. ಅದನ್ನು ನೋಡಿ ದರ್ಶನ್ ಜೊತೆ ನಿಲ್ಲಬೇಕು ಎಂದು ಅನ್ನಿಸಿತು. ನಾನು ಕೂಡ ಅಕ್ಕ- ತಂಗಿಯರ ಜೊತೆ ಬೆಳೆದಿದ್ದೀನಿ. ನನಗೂ ಗೊತ್ತಾಗುತ್ತದೆ. ದೇವರು ಅವರನ್ನು ಚೆನ್ನಾಗಿ ಇಟ್ಟಿದ್ದಾನೆ. ಅವರಿಗೆ ಬೇಕಿರೋದು ಬೆಂಬಲ ಅಷ್ಟೇ. ನಾವಿದ್ದೀವಿ ಅನ್ನೋವಂತಹ ಧೈರ್ಯ ಬೇಕಿತ್ತು. ಇವತ್ತು ಅವರೊಂದಿಗೆ ನಾವು ನಿಂತಿದ್ದೀವಿ. ಬಣ್ಣದ ಲೋಕ ಅಂದ್ರೆ ಎಲ್ಲವೂ ಚೆನ್ನಾಗಿರುತ್ತದೆ ಎಂದು ಅಂದುಕೊಳ್ತಾರೆ. ದರ್ಶನ್ ಒಬ್ಬರು ಹೊರಗೆ ಬಂದ್ರೆ ಅದೆಷ್ಟೋ ಜನ ಅನ್ನ ತಿನ್ನುತ್ತಾರೆ. ಒಂದು ಸಿನಿಮಾ ಶುರು ಆಗೋದ್ರಿಂದ ಅದೆಷ್ಟೋ ಜನರಿಗೆ ಊಟ ಸಿಗುತ್ತದೆ.

    ಇನ್ನೂ ರೇಣುಕಾಸ್ವಾಮಿ ಘಟನೆ ಕೇಳಿದಾಗ ನಾನು ನಂಬಲೇ ಇಲ್ಲ. 2 ದಿನ ಎಲ್ಲರ ಹತ್ತಿರ ವಾದ ಮಾಡಿದ್ದೆ, ಅದ್ಯಾವಾಗ ದರ್ಶನ್‌ರನ್ನು ಕಸ್ಟಡಿಗೆ ಹೇಳಿದ್ರೋ ಇಲ್ಲಿ ಏನೋ ಆಗಿದೆ ಅನ್ನಿಸಿತು ಈ ಘಟನೆ ಆದ್ಮೇಲೆ ಅವರಿಗೂ ಯಾರ ಯಾರ ಮುಖ ಏನು ಅಂತ ಗೊತ್ತಾಗಿದೆ. ಯಾವುದು ಗಟ್ಟಿ ಬೇರು? ಯಾವುದು ಮೃದುವಾಗಿರೋ ಬೇರು? ಅಂತ ಅವರಿಗೆ ಚೆನ್ನಾಗಿ ಅರ್ಥ ಆಗಿದೆ. ಯಾರ ಸಹವಾಸನೂ ಬೇಡ ಅಂತ ಅವರಿಗನ್ನಿಸಿದೆ.

    ಜೈಲಲ್ಲಿ ಅವರನ್ನು ನೋಡೋಕೆ ಬೇಸರ ಆಗ್ತಿತ್ತು. ಹೇಗಿದ್ದ ಮನುಷ್ಯ ಹೇಗಾದ್ರು ಟೈಮ್ ಅಂತ ಬಂದಾಗ ಎಂದು ಅನಿಸ್ತು. ನಾನು ದರ್ಶನ್ ವ್ಯಕ್ತಿತ್ವ ನೋಡಿ ಇಷ್ಟಪಟ್ಟಿದ್ದು, ಅವರ ಸಿನಿಮಾ ನೋಡಿ ಅಲ್ಲ. ದಾನ ಧರ್ಮ ಮಾಡಿದ್ದು ನೋಡಿ ಫ್ಯಾನ್ ಆಗಿದ್ದು ಎಂದಿದ್ದಾರೆ. ನನಗೆ ಅವರು 2019ರಲ್ಲಿ ‘ಬಜಾರ್’ ಸಿನಿಮಾ ಸಮಯದಿಂದ ಪರಿಚಯ ಅಲ್ಲಿಂದ ಅವರೊಂದಿಗೆ ಒಡನಾಟ ಶುರುವಾಯ್ತು ಎಂದು ಹಂಚಿಕೊಂಡರು.

  • ದರ್ಶನ್ ಬರ್ತ್‌ಡೇ ಸಂಭ್ರಮ – ಪತಿ ಜೊತೆಗಿನ ಫೋಟೊ ಹಂಚಿಕೊಂಡು ವಿಜಯಲಕ್ಷ್ಮೀ ವಿಶ್

    ದರ್ಶನ್ ಬರ್ತ್‌ಡೇ ಸಂಭ್ರಮ – ಪತಿ ಜೊತೆಗಿನ ಫೋಟೊ ಹಂಚಿಕೊಂಡು ವಿಜಯಲಕ್ಷ್ಮೀ ವಿಶ್

    – `ದಾಸ’ನಿಗೆ ಬರ್ತ್‌ಡೇ ವಿಶ್ ಮಾಡಿದ ಧನ್ವೀರ್, ಚಿಕ್ಕಣ್ಣ

    ಬೆಂಗಳೂರು: ನಟ ದರ್ಶನ್ (Darshan) 48ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಪತಿ ದರ್ಶನ್ ಜೊತೆಗಿನ ಫೋಟೊ ಹಂಚಿಕೊಂಡು ಪತ್ನಿ ವಿಜಯಲಕ್ಷ್ಮೀ (Vijayalakshmi) ಬರ್ತ್‌ಡೇ (Birthday) ವಿಶ್ ಮಾಡಿದ್ದಾರೆ.

     

    View this post on Instagram

     

    A post shared by Vijayalakshmi darshan (@viji.darshan)

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೈಲು ಸೇರಿದ್ದ ಸಂದರ್ಭದಿಂದಲೂ ಜೊತೆಯಾಗಿದ್ದ ನಟ ಧನ್ವೀರ್ (Dhanveer) ಸಹ ಶುಭಾಶಯ ತಿಳಿಸಿದ್ದಾರೆ. ಧನ್ವೀರ್ ದರ್ಶನ್ ಜೊತೆಗಿನ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿ, ಸಂತೋಪ ಮತ್ತು ಯಶಸ್ಸು ಸದಾ ನಿಮ್ಮ ಜೊತೆಗಿರಲಿ. ನೀವು ನಡೆವ ಪ್ರತಿ ಹೆಜ್ಜೆಯೂ ಯಶಸ್ಸಿನ ಪಥವಾಗಲಿ. ಹುಟ್ಟುಹಬ್ಬದ ಶುಭಾಶಯಗಳು ಅಣ್ಣ (ಬಾಸ್) #ಉಸಿರಿರುವವರೆಗೂ ಇರ್ತಿವಿ ನಿಮ್ಮಿಂದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಕ್ಟರ್ & ಡಾಕ್ಟರ್ – ಮೈಸೂರಲ್ಲಿ ಅದ್ದೂರಿಯಾಗಿ ನಡೆದ ಡಾಲಿ, ಧನ್ಯತಾ ಮದುವೆ

    ನಟ ಚಿಕ್ಕಣ್ಣ ಸಹ ತಮ್ಮ ಇನ್‌ಸ್ಟಾ ಖಾತೆಯಲ್ಲಿ, ಹುಟ್ಟುಹಬ್ಬದ ಶುಭಾಶಯಗಳು ಸರ್ ಎಂದು ಬರೆದುಕೊಂಡು ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Chikku (@chikkanna_official)

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಪ್ರತಿವರ್ಷ ಅಭಿಮಾನಿಗಳೊಂದಿಗೆ ಭರ್ಜರಿಯಾಗಿ ಬರ್ತ್‌ಡೇ ಸೆಲೆಬ್ರೆಟ್ ಮಾಡುತ್ತಿದ್ದ ದರ್ಶನ್, ಈ ಬಾರಿ ಅನಾರೋಗ್ಯದ ಕಾರಣ ಇವೆಲ್ಲದರಿಂದಲೂ ದೂರ ಉಳಿದಿದ್ದಾರೆ. ಇದನ್ನೂ ಓದಿ : ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಮೃತರ ಕುಟುಂಬಗಳಿಗೆ ಕೇಂದ್ರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ

    ಇದೀಗ ಅಭಿಮಾನಿಗಳಿಂದ ದರ್ಶನ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ.

  • ಆರೋಗ್ಯ ತಪಾಸಣೆಗೆ ಬಂದ ದರ್ಶನ್- ನಟನನ್ನು ನೋಡಲು ಮುಗಿಬಿದ್ದ ಫ್ಯಾನ್ಸ್‌

    ಆರೋಗ್ಯ ತಪಾಸಣೆಗೆ ಬಂದ ದರ್ಶನ್- ನಟನನ್ನು ನೋಡಲು ಮುಗಿಬಿದ್ದ ಫ್ಯಾನ್ಸ್‌

    ರೇಣುಕಾಸ್ವಾಮಿ ಕೊಲೆ (Renukaswamu Murder Case) ಆರೋಪಿ ದರ್ಶನ್ (Darshan) ಅವರು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದಾರೆ. ಬೆನ್ನು ನೋವಿನ ಸಂಬಂಧ ವೈದ್ಯರನ್ನು ನಟ ಭೇಟಿಯಾಗಿದ್ದಾರೆ. ಇದನ್ನೂ ಓದಿ:ಭಗವಂತ ನನ್ನಷ್ಟೂ ಆಯಸ್ಸನ್ನ ಶಿವಣ್ಣನಿಗೇ ಕೊಡಲಿ: ಧ್ರುವ ಸರ್ಜಾ

    ಇಂದು (ಡಿ.24) ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ದರ್ಶನ್ ಆರೋಗ್ಯ ತಪಾಸಣೆ ಆಗಮಿಸಿದ್ದಾರೆ. ಬೆನ್ನು ನೋವಿನ ಹಿನ್ನೆಲೆ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ, ದರ್ಶನ್‌ಗೆ ಧನ್ವೀರ್ ಸಾಥ್ ನೀಡಿದ್ದಾರೆ. ಈ ವೇಳೆ, ದರ್ಶನ್‌ ನೋಡಲು ಅಪಾರ ಸಂಖ್ಯೆಯಲ್ಲಿ ಫ್ಯಾನ್ಸ್‌ ಜಮಾಯಿಸಿದ್ದಾರೆ.

    ಅಂದಹಾಗೆ, ನಿನ್ನೆ (ಡಿ.23) ವಿಜಯಲಕ್ಷ್ಮಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ದರ್ಶನ್‌ಗೆ ಬೇಲ್ ಸಿಕ್ಕ ಹಿನ್ನೆಲೆ ಹರಕೆ ತೀರಿಸಿದರು.

  • ‘ಹಯಗ್ರೀವ’ ತಂಡ ಸೇರಿಕೊಂಡ ನಟ ಸುನೀಲ್ ರಾವ್

    ‘ಹಯಗ್ರೀವ’ ತಂಡ ಸೇರಿಕೊಂಡ ನಟ ಸುನೀಲ್ ರಾವ್

    ಸಂಜನಾ ಆನಂದ್ (Sanjana Anand) ಮತ್ತು ಧನ್ವೀರ್ (Dhanveer) ಕಾಂಬಿನೇಷನ್ ನ ಹಯಗ್ರೀವ (Hayagreeva) ಸಿನಿಮಾದಲ್ಲಿ ನಟಿಸಲಿದ್ದಾರೆ ಸುನೀಲ್ ರಾವ್ (Sunil Rao). ಈಗಾಗಲೇ ಚಿತ್ರೀಕರಣದಲ್ಲಿ ಅವರು ಭಾಗಿಯಾಗಿದ್ದಾರಂತೆ. ಅದೊಂದು ಮಹತ್ವದ ಪಾತ್ರವಾಗಿದ್ದು, ಪಾತ್ರದ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಚಿತ್ರತಂಡವೇ ತಿಳಿಸಲಿದೆ.

    ಮೃದ್ಧಿ ಮಂಜುನಾಥ್ ಅವರು ತಮ್ಮ ಕೆ.ವೆ.ಸಿ ಪ್ರೊಡಕ್ಷನ್ಸ್  ಲಾಂಛನದಲ್ಲಿ ನಿರ್ಮಿಸುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದ ಚಿತ್ರವಿದು. ಕೆಲ ದಿನಗಳ ಹಿಂದೆಯಷ್ಟೇ ಈ ಸಿನಿಮಾದ ಮುಹೂರ್ತ (Muhurta) ಸಮಾರಂಭ ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ನೆಡಿದಿತ್ತು.

    ಹಯಗ್ರೀವ ಕೆವಿಸಿ ಪ್ರೊಡಕ್ಷನ್ಸ್‌ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ  ಮೂರನೆಯ ಚಿತ್ರ. ಈ ಕುರಿತಂತೆ ನಿರ್ಮಾಪಕ ಸಮೃದ್ದಿ ಮಂಜುನಾಥ್ ಮಾತಮಾಡಿ, ನಾನು ಯೂಟ್ಯೂಬ್‍ನಲ್ಲಿ ‘ದಿ ಬೆಲ್‍’ ಎಂಬ ಕಿರುಚಿತ್ರ ನೋಡಿದೆ. ಆ ಕಿರುಚಿತ್ರ ಬಹಳ ಖುಷಿ ನೀಡಿತು. ಆ ಕಿರುಚಿತ್ರದ  ನಿರ್ದೇಶಕ ರಘುಕುಮಾರ್ ಅವರನ್ನು ಎಂಟು ತಿಂಗಳ ಹಿಂದೆ ಕರೆಸಿ ಮಾತನಾಡಿದೆ. ಒಂದು ಚಿತ್ರ ಮಾಡಿಕೊಡಿ ಎಂದು ಹೇಳಿದೆ. ಅವರು ತಮ್ಮ ತಂಡದೊಂದಿಗೆ ಒಂದೊಳ್ಳೆಯ ಕಥೆ ಮಾಡಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್‍ ಚಿತ್ರ. ಕನ್ನಡದಲ್ಲಿ ಇಲ್ಲಿಯವರೆಗೂ ಈ ತರಹದ ಚಿತ್ರ ಬಂದಿಲ್ಲ ಎಂದು ಹೇಳಬಹುದು. ಧನ್ವೀರ್ ಹಾಗೂ ಸಂಜನಾ ಆನಂದ್ ನಾಯಕ-ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೊಬ್ಬ ನಾಯಕ ನಟಿಸುತ್ತಿದ್ದು, ಅವರು ಯಾರು ಎಂದು ಚಿತ್ರ ಬಿಡುಗಡೆಯವರೆಗೂ ಗೌಪ್ಯವಾಗಿಡಲಾಗುವುದು. ಒಂದೊಳ್ಳೆಯ ಕಥೆಗೆ ಪೂರಕವಾಗಿ ಶೀರ್ಷಿಕೆ ಸಿಕ್ಕಿದೆ. ಈ ಚಿತ್ರವನ್ನು ಎಲ್ಲರೂ ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದಿದ್ದರು.

    ನಿರ್ಮಾಪಕರು ಫೋನ್‍ ಮಾಡಿ ಸಿನಿಮಾ ಮಾಡಿಕೊಡಿ ಎಂದರು. ನನ್ನ ಹತ್ತಿರ ಒಂದು ಕಥೆ ಇತ್ತು. ಅದನ್ನು ಅವರಿಗೆ ಹೇಳಿದಾಗ, ಇಷ್ಟಪಟ್ಟು ಈ ಚಿತ್ರ ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಮುಖ್ಯವಾಗಿ ಪೌರಾಣಿಕ ಅಂಶಗಳ ಜೊತೆಗೆ ಕ್ರೈಮ್‍ ಇದೆ. ಲವ್, ಸೆಂಟಿಮೆಂಟ್, ಸಸ್ಪೆನ್ಸ್ ಸೇರಿದಂತೆ ಕಮರ್ಷಿಯಲ್ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳು ಹಯಗ್ರೀವ ಚಿತ್ರದಲ್ಲಿದೆ. ಕನ್ನಡದಲ್ಲಿ ಇದುವರೆಗೂ ಯಾರೂ ಈ ತರಹದ ಪ್ರಯತ್ನವನ್ನು ಮಾಡಿಲ್ಲ ಎಂಬುದು ನನ್ನ ಅನಿಸಿಕೆ. ಇಲ್ಲಿ ಹಯಗ್ರೀವ ಎಂಬ ಪೌರಾಣಿಕ ಪಾತ್ರದ ಸುತ್ತ ಚಿತ್ರ ಸುತ್ತುತ್ತದೆ.  ಬೆಂಗಳೂರಿನಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಯಲಿದೆ.  ರಂಗಾಯಣ ರಘು, ತಾರಾ, ಸಾಧು ಕೋಕಿಲ, ರವಿಶಂಕರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ‍್ಳುತ್ತಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸುತ್ತಿದ್ದಾರೆ.‌ ಕಾರ್ತಿಕ್, ಛಾಯಾಗ್ರಹಣ ಹಾಗೂ ಉಮೇಶ್ ಅವರ ಸಂಕಲನವಿರುವ ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಸಂಭಾಷಣೆಯನ್ನು ಶೈಲೇಶ್ ರಾಜ್ ಹಾಗೂ ಚೇತನ್ ಸಿದ್ ಬರೆದಿದ್ದಾರೆ ಎಂದು ನಿರ್ದೇಶಕ ರಘುಕುಮಾರ್ ಓ ಆರ್ ತಿಳಿಸಿದ್ದರು.

     

    ಇದು ನನ್ನ ಐದನೇ ಚಿತ್ರ ಎಂದು ಮಾತು ಆರಂಭಿಸಿದ ನಾಯಕ ಧನ್ವೀರ್, ಒಳ್ಳೆಯ ತಂಡ ಮತ್ತು ಒಳ್ಳೆಯ ಶೀರ್ಷಿಕೆ ಸಿಕ್ಕಿದೆ. ಬಹಳ ದಿನಗಳಿಂದ ಪ್ಲಾನ್‍ ಮಾಡಿ, ಒಂದೊಳ್ಳೆಯ ಕಥೆ ಮಾಡಿ ಈ ಚಿತ್ರ ಮಾಡುತ್ತಿದ್ದೇವೆ. ಅಭಿಮಾನಿಗಳಿಗೆ ಖುಷಿಯಾಗುವಂತಹ ಕಥೆ ಇದೆ. ಈ ಚಿತ್ರದಲ್ಲಿ ನೀಗ್ರೋಗಳ ಜೊತೆಗೆ ಫೈಟ್‍ ಇದೆ. ‘ಬಜಾರ್’ ನಂತರ ಸಿಕ್ಸ್ ಪ್ಯಾಕ್ ‍ಮಾಡಿಕೊಳ್ಳುತ್ತಿದ್ದೇನೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಕಥೆ ಮತ್ತು ಪಾತ್ರ ವಿಭಿನ್ನವಾಗಿದೆ ಎಂದಿದ್ದರು.

  • ಧನ್ವೀರ್ ನಟನೆಯ ‘ಹಯಗ್ರೀವ’ ಸಿನಿಮಾಗೆ ಮೈಸೂರಿನಲ್ಲಿ ಚಾಲನೆ

    ಧನ್ವೀರ್ ನಟನೆಯ ‘ಹಯಗ್ರೀವ’ ಸಿನಿಮಾಗೆ ಮೈಸೂರಿನಲ್ಲಿ ಚಾಲನೆ

    ಮೃದ್ಧಿ ಮಂಜುನಾಥ್ ಅವರು ತಮ್ಮ ಕೆ.ವೆ.ಸಿ ಪ್ರೊಡಕ್ಷನ್ಸ್  ಲಾಂಛನದಲ್ಲಿ ನಿರ್ಮಿಸುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ (Dhanveer) ನಾಯಕರಾಗಿ ನಟಿಸುತ್ತಿರುವ ಹಯಗ್ರೀವ (Hayagriva) ಚಿತ್ರದ ಮುಹೂರ್ತ (Muhurta) ಸಮಾರಂಭ ಇತ್ತೀಚೆಗೆ ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಹಲವಾರು ಗಣ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು. ಮುಹೂರ್ತ ಸಮಾರಂಭದ ನಂತರ ಮೈಸೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ಹಯಗ್ರೀವ, ನಮ್ಮ ಕೆವಿಸಿ ಪ್ರೊಡಕ್ಷನ್ಸ್‌ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ  ಮೂರನೆಯ ಚಿತ್ರ ಎಂದು ಮಾತನಾಡಿದ ನಿರ್ಮಾಪಕ ಸಮೃದ್ದಿ ಮಂಜುನಾಥ್, ನಾನು ಯೂಟ್ಯೂಬ್‍ನಲ್ಲಿ ‘ದಿ ಬೆಲ್‍’ ಎಂಬ ಕಿರುಚಿತ್ರ ನೋಡಿದೆ. ಆ ಕಿರುಚಿತ್ರ ಬಹಳ ಖುಷಿ ನೀಡಿತು. ಆ ಕಿರುಚಿತ್ರದ  ನಿರ್ದೇಶಕ ರಘುಕುಮಾರ್ ಅವರನ್ನು ಎಂಟು ತಿಂಗಳ ಹಿಂದೆ ಕರೆಸಿ ಮಾತನಾಡಿದೆ. ಒಂದು ಚಿತ್ರ ಮಾಡಿಕೊಡಿ ಎಂದು ಹೇಳಿದೆ. ಅವರು ತಮ್ಮ ತಂಡದೊಂದಿಗೆ ಒಂದೊಳ್ಳೆಯ ಕಥೆ ಮಾಡಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್‍ ಚಿತ್ರ. ಕನ್ನಡದಲ್ಲಿ ಇಲ್ಲಿಯವರೆಗೂ ಈ ತರಹದ ಚಿತ್ರ ಬಂದಿಲ್ಲ ಎಂದು ಹೇಳಬಹುದು. ಧನ್ವೀರ್ ಹಾಗೂ ಸಂಜನಾ ಆನಂದ್ ನಾಯಕ-ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೊಬ್ಬ ನಾಯಕ ನಟಿಸುತ್ತಿದ್ದು, ಅವರು ಯಾರು ಎಂದು ಚಿತ್ರ ಬಿಡುಗಡೆಯವರೆಗೂ ಗೌಪ್ಯವಾಗಿಡಲಾಗುವುದು. ಒಂದೊಳ್ಳೆಯ ಕಥೆಗೆ ಪೂರಕವಾಗಿ ಶೀರ್ಷಿಕೆ ಸಿಕ್ಕಿದೆ. ಈ ಚಿತ್ರವನ್ನು ಎಲ್ಲರೂ ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದರು.

    ನಿರ್ಮಾಪಕರು ಫೋನ್‍ ಮಾಡಿ ಸಿನಿಮಾ ಮಾಡಿಕೊಡಿ ಎಂದರು. ನನ್ನ ಹತ್ತಿರ ಒಂದು ಕಥೆ ಇತ್ತು. ಅದನ್ನು ಅವರಿಗೆ ಹೇಳಿದಾಗ, ಇಷ್ಟಪಟ್ಟು ಈ ಚಿತ್ರ ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಮುಖ್ಯವಾಗಿ ಪೌರಾಣಿಕ ಅಂಶಗಳ ಜೊತೆಗೆ ಕ್ರೈಮ್‍ ಇದೆ. ಲವ್, ಸೆಂಟಿಮೆಂಟ್, ಸಸ್ಪೆನ್ಸ್ ಸೇರಿದಂತೆ ಕಮರ್ಷಿಯಲ್ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳು ಹಯಗ್ರೀವ ಚಿತ್ರದಲ್ಲಿದೆ. ಕನ್ನಡದಲ್ಲಿ ಇದುವರೆಗೂ ಯಾರೂ ಈ ತರಹದ ಪ್ರಯತ್ನವನ್ನು ಮಾಡಿಲ್ಲ ಎಂಬುದು ನನ್ನ ಅನಿಸಿಕೆ. ಇಲ್ಲಿ ಹಯಗ್ರೀವ ಎಂಬ ಪೌರಾಣಿಕ ಪಾತ್ರದ ಸುತ್ತ ಚಿತ್ರ ಸುತ್ತುತ್ತದೆ.  ಬೆಂಗಳೂರಿನಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಯಲಿದೆ.  ರಂಗಾಯಣ ರಘು, ತಾರಾ, ಸಾಧು ಕೋಕಿಲ, ರವಿಶಂಕರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ‍್ಳುತ್ತಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸುತ್ತಿದ್ದಾರೆ.‌ ಕಾರ್ತಿಕ್, ಛಾಯಾಗ್ರಹಣ ಹಾಗೂ ಉಮೇಶ್ ಅವರ ಸಂಕಲನವಿರುವ ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಸಂಭಾಷಣೆಯನ್ನು ಶೈಲೇಶ್ ರಾಜ್ ಹಾಗೂ ಚೇತನ್ ಸಿದ್ ಬರೆದಿದ್ದಾರೆ ಎಂದು ನಿರ್ದೇಶಕ ರಘುಕುಮಾರ್ ಓ ಆರ್ ತಿಳಿಸಿದರು.

    ಇದು ನನ್ನ ಐದನೇ ಚಿತ್ರ ಎಂದು ಮಾತು ಆರಂಭಿಸಿದ ನಾಯಕ ಧನ್ವೀರ್, ಒಳ್ಳೆಯ ತಂಡ ಮತ್ತು ಒಳ್ಳೆಯ ಶೀರ್ಷಿಕೆ ಸಿಕ್ಕಿದೆ. ಬಹಳ ದಿನಗಳಿಂದ ಪ್ಲಾನ್‍ ಮಾಡಿ, ಒಂದೊಳ್ಳೆಯ ಕಥೆ ಮಾಡಿ ಈ ಚಿತ್ರ ಮಾಡುತ್ತಿದ್ದೇವೆ. ಅಭಿಮಾನಿಗಳಿಗೆ ಖುಷಿಯಾಗುವಂತಹ ಕಥೆ ಇದೆ. ಈ ಚಿತ್ರದಲ್ಲಿ ನೀಗ್ರೋಗಳ ಜೊತೆಗೆ ಫೈಟ್‍ ಇದೆ. ‘ಬಜಾರ್’ ನಂತರ ಸಿಕ್ಸ್ ಪ್ಯಾಕ್ ‍ಮಾಡಿಕೊಳ್ಳುತ್ತಿದ್ದೇನೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಕಥೆ ಮತ್ತು ಪಾತ್ರ ವಿಭಿನ್ನವಾಗಿದೆ ಎಂದರು.

    ತಮ್ಮ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕಿ ಸಂಜನಾ ಆನಂದ್ ತಿಳಿಸಿದರು. ಛಾಯಾಗ್ರಾಹಕ ಕಾರ್ತಿಕ್, ಸಂಗೀತ ನಿರ್ದೇಶಕ ಜೂಡಾ ಸ್ಯಾಂಡಿ ಹಾಗೂ ಸಾಹಸ ನಿರ್ದೇಶಕ ಅರ್ಜುನ್ ಮಾಸ್ಟರ್ ಸೇರಿದಂತೆ ಅನೇಕ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು. ನಿರ್ದೇಶಕ, ನಿರ್ಮಾಪಕ ಹಾಗೂ ವಿತರಕ ಗುರು ದೇಶಪಾಂಡೆ, ಯೋಗಾನಂದ್ ಮುಂತಾದವರು ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

  • ಧನ್ವೀರ್ ನಟನೆಯ ‘ಕೈವ’ ಚಿತ್ರದ ಟೀಸರ್ ರಿಲೀಸ್

    ಧನ್ವೀರ್ ನಟನೆಯ ‘ಕೈವ’ ಚಿತ್ರದ ಟೀಸರ್ ರಿಲೀಸ್

    ವೀಂದ್ರಕುಮಾರ್ ನಿರ್ಮಾಣದ, ಜಯತೀರ್ಥ (Jayathirtha) ನಿರ್ದೇಶನದ ಹಾಗೂ ಧನ್ವೀರ್ (Dhanveer) ನಾಯಕರಾಗಿ ನಟಿಸಿರುವ ‘ಕೈವ’ (Kaiva) ಚಿತ್ರದ ಆಕ್ಷನ್ ಟೀಸರ್ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಅಭಿಷೇಕ್ ಅಂಬರೀಶ್ ಹಾಗೂ ದಿನಕರ್ ತೂಗುದೀಪ ಈ ಚಿತ್ರದ ಆಕ್ಷನ್ ಟೀಸರ್ (Teaser) ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ದೇಶಕ ಮದಗಜ ಮಹೇಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ಕೈವ ಇದು ಒಬ್ಬ ವ್ಯಕ್ತಿಯ ಹೆಸರು. 1983 ರಲ್ಲಿ ಬೆಂಗಳೂರಿನ ತಿಗಳಪೇಟೆಯಲ್ಲಿ ನಡೆದ ನೈಜಘಟನೆ ಆಧರಿಸಿದ ಚಿತ್ರ. ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆಯೇ ಚಿತ್ರದ ಪ್ರಮುಖ ಕಥಾವಸ್ತು. ನನಗೆ  ಮಾರ್ಚುರಿಯಲ್ಲಿ ಕೆಲಸ ಮಾಡುವವರಿಂದ ಈ ಕಥೆ ಸಿಕ್ಕಿತು. ಆನಂತರ ತಿಗಳರಪೇಟೆಗೆ ಹೋಗಿ ಅಲ್ಲಿ  ಈ ಘಟನೆ ಬಗ್ಗೆ ಕುಲಂಕುಶವಾಗಿ ತಿಳಿದುಕೊಂಡೆ. ಈ ಘಟನೆ ಕಂಡಿದ್ದ ಅನೇಕರು ಈಗಲೂ ಇದ್ದಾರೆ. ಇದೇ ಇಸವಿಯಲ್ಲಿ ನಡೆದ ಗಂಗಾರಾಮ್ ಕಟ್ಡಡದ ದುರಂತಕ್ಕು ಹಾಗೂ  ಈ ಚಿತ್ರದ ಕಥೆಗೂ ಸಂಬಂಧವಿದೆ. ಚಿತ್ರದ ನಾಯಕನಾಗಿ ಧನ್ವೀರ್ ಅಭಿನಯಿಸಿದ್ದಾರೆ. ನಾಯಕಿಯಾಗಿ ಮೇಘ ಶೆಟ್ಟಿ ನಟಿಸಿದ್ದಾರೆ. ದಿನಕರ್ ತೂಗುದೀಪ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಿನಕರ್ ತೂಗುದೀಪ, ರಾಘು ಶಿವಮೊಗ್ಗ ಸೇರಿದಂತೆ ಐದು ಜನ ನಿರ್ದೇಶಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಶ್ವೇತಪ್ರಿಯ ಛಾಯಾಗ್ರಹಣ ಮಾಡಿದ್ದಾರೆ. ಮೈಸೂರಿನಲ್ಲಿ ನಲವತ್ತೆಂಟು ದಿನಗಳ ಚಿತ್ರೀಕರಣ ನಡೆದಿದೆ. ಕೆಲವು ಭಾಗಗಳನ್ನು ಬೆಂಗಳೂರಿನ ತಿಗಳರಪೇಟೆಯಲ್ಲಿ ಚಿತ್ರೀಕರಿಸಲಾಗಿದೆ. ಡಿಸೆಂಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಜಯತೀರ್ಥ ತಿಳಿಸಿದರು.

    ಕೈವ ನನ್ನ ನಟನೆಯ ನಾಲ್ಕನೇ ಚಿತ್ರ ಎಂದು ಮಾತು ಆರಂಭಿಸಿದ ನಾಯಕ ಧನ್ವೀರ್, ಈ ಕಥೆ ಎಲ್ಲ ಕಡೆ ಸುತ್ತಿ ದ್ರೌಪದಿ ತಾಯಿ ಆಶೀರ್ವಾದದಿಂದ ನನ್ನ ಬಳಿ ಬಂತು. ಜಯತೀರ್ಥ ಅವರು ತುಂಬಾ ಅದ್ಛುತವಾಗಿ ನಿರ್ದೇಶನ ಮಾಡಿದ್ದಾರೆ. ಸಿನಿಮಾ ನೋಡಿದವರು ಚಿತ್ರ ಚೆನ್ನಾಗಿದೆ ಎನ್ನುತ್ತಿದ್ದಾರೆ. ನಿಮ್ಮ  ಪ್ರೋತ್ಸಾಹವಿರಲಿ ಎಂದರು.

    ದಿನಕರ್ ತೂಗುದೀಪ್ ರವರು ಮಾತನಾಡುತ್ತಾ, ನನಗೆ ಸಂಭಾಷಣೆಕಾರ ರಘು ನಿಡವಳ್ಳಿ,  ನಿರ್ದೇಶಕ ಜಯತೀರ್ಥ ಅವರು  ಭೇಟಿಯಾಗಬೇಕಂತೆ ಅಂದರು. ಆಗ ಜಯತೀರ್ಥ ಅವರು ಈ ಪಾತ್ರದ ಬಗ್ಗೆ ಹೇಳಿದರು. ನನ್ನ ಪಾತ್ರ ನೋಡಿದವರು ನಮ್ಮ ತಂದೆ ತೂಗುದೀಪ ಶ್ರೀನಿವಾಸ್ ಅವರ ಹಾಗೆ ಕಾಣುತ್ತಿರಾ ಎನ್ನುತ್ತಿದ್ದಾರೆ. ಅದು ನಮ್ಮ ತಂದೆಯವರ ಆಶೀರ್ವಾದ. ನಮ್ಮ ಅಮ್ಮ ಕೂಡ ನನ್ನ ಪಾತ್ರ ನೋಡಿ ಸಂತೋಷಪಟ್ಟರು ಎಂದು ತಿಳಿಸಿದರು.

    ನಾಯಕಿ ಮೇಘ ಶೆಟ್ಟಿ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ನಟ ರಾಘು ಶಿವಮೊಗ್ಗ, ಸಂಭಾಷಣೆಕಾರ ರಘು ನಿಡವಳ್ಳಿ ಹಾಗೂ ಕಾರ್ಯಕಾರಿ ನಿರ್ಮಾಪಕರಾದ ಬಾಲಕೃಷ್ಣ ಹಾಗೂ ಕೃಷ್ಣ ಅವರು ಚಿತ್ರದ ಕುರಿತು ಮಾತನಾಡಿದರು.

  • ಧನ್ವೀರ್ ಹುಟ್ಟುಹಬ್ಬಕ್ಕೆ  ಹೊಸಚಿತ್ರದ ಘೋಷಣೆ: ರಘುಕುಮಾರ್ ನಿರ್ದೇಶಕ

    ಧನ್ವೀರ್ ಹುಟ್ಟುಹಬ್ಬಕ್ಕೆ ಹೊಸಚಿತ್ರದ ಘೋಷಣೆ: ರಘುಕುಮಾರ್ ನಿರ್ದೇಶಕ

    ರುನಾಡ ಶೋಕ್ದಾರ್ ಅಂತ ಹೆಸರುವಾಸಿ ಆಗಿರುವ ಧನ್ವೀರ್ (Dhanveer ) ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಘೋಷಣೆಯಾಗಿದೆ‌‌‌. ಇದು ಧನ್ವೀರ್ ನಾಯಕರಾಗಿ ನಟಿಸುತ್ತಿರುವ ಐದನೇ ಸಿನಿಮಾ.   ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಯುವ ನಿರ್ದೇಶಕ ರಘುಕುಮಾರ್ ಓ ಆರ್ (Raghukumar) ನಿರ್ದೇಶಿಸುತ್ತಿದ್ದಾರೆ. ಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಇದು ರಘುಕುಮಾರ್ ನಿರ್ದೇಶನದ  ಚೊಚ್ಚಲ ಚಿತ್ರ.

    ಈ ಚಿತ್ರ ‘ಸಮೃದ್ಧಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ.  ರಘುಕುಮಾರ್ ಅವರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಇದರಲ್ಲಿ ರಂಗಾಯಣ ರಘು (Rangayana Raghu), ರವಿಶಂಕರ್, ತಬಲನಾಣಿ, ಸಾಧುಕೋಕಿಲ ಇನ್ನಿತರ ಕಲಾವಿದರು ನಟಿಸುತ್ತಿದ್ದಾರೆ. ಶೀಘ್ರದಲ್ಲೇ ಚಿತ್ರೀಕರಣ ಶುರು ಮಾಡುತ್ತೇವೆ ಎಂದು ಸಮೃದ್ಧಿ ಫಿಲಂಸ್ ನಿರ್ಮಾಣ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ:ಕೈಯಲ್ಲಿ ಎದೆಮುಚ್ಚಿಕೊಂಡು ಸೋನು ಪೋಸ್- ಮತ್ಸ್ಯ ಕನ್ಯೆ ಅಂದ್ರು ಫ್ಯಾನ್ಸ್‌‌

    ನಿರ್ದೇಶಕ ರಘುಕುಮಾರ್ ಓ ಆರ್ ಕೆಲವು ವರ್ಷಗಳಿಂದ ಚಿತ್ರರಂಗದಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ಇವರು ‘ಕೋಟಿಗೊಬ್ಬ 3’ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದಾರೆ. ಮತ್ತು ‘ದಿ ಬೆಲ್’ ಎಂಬ ಕಿರುಚಿತ್ರ ನಿರ್ಮಿಸಿ ನಿರ್ದೇಶಿಸಿದ್ದಾರೆ. ದಿ ಬೆಲ್ ಕಿರುಚಿತ್ರ ಪಿ ಆರ್ ಕೆ ಆಡಿಯೋ ಯೂಟ್ಯೂಬ್ ಅಲ್ಲಿ ಬಿಡುಗಡೆ ಆಗಿದ್ದು ಒಳ್ಳೆಯ ಪ್ರಶಂಸೆ ಗಳಿಸಿಕೊಂಡು ಶಾರ್ಟ್ ಫಿಲ್ಮ್ ಫೆಸ್ಟಿವಲ್ಸ್ ಅಲ್ಲಿ ತುಂಬಾನೇ ಮೆಚ್ಚುಗೆ ಪಡೆದು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

     

    ಚಿತ್ರದ ತಾಂತ್ರಿಕವರ್ಗ ಅದ್ಭುತವಾಗಿದ್ದು ಛಾಯಾಗ್ರಾಹಕರಾಗಿ ಕಾರ್ತಿಕ್ ಎಸ್  ಹಿನ್ನೆಲೆ ಸಂಗೀತ ಜುಡಾ ಸ್ಯಾಂಡಿ, ಶಬ್ದ ವಿನ್ಯಾಸ ರಾಜನ್ ಹಾಗೂ ಸಂಕಲನ ಉಮೇಶ್ ಆರ್ ಬಿ ಮಾಡುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಮನ ಸಿನಿಮಾದ ‘ರಾಕ್ಷಸಿ’ ಹಾಡು ರಿಲೀಸ್ ಮಾಡಿದ ಅಭಿಷೇಕ್

    ವಾಮನ ಸಿನಿಮಾದ ‘ರಾಕ್ಷಸಿ’ ಹಾಡು ರಿಲೀಸ್ ಮಾಡಿದ ಅಭಿಷೇಕ್

    ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ (Dhanveer) ನಟನೆಯ ಬಹುನಿರೀಕ್ಷಿತ ‘ವಾಮನ’ (Vamana) ಸಿನಿಮಾದ ಎರಡನೇ ಹಾಡು (Song) ಬಿಡುಗಡೆಯಾಗಿದೆ. ಇತ್ತೀಚೆಗೆಷ್ಟೇ ರಿಲೀಸ್ ಆಗಿದ್ದ ‘ವಾ..ವಾ..ವಾ..ವಾಮನ’ ಮಾಸ್ ನಂಬರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ವಾಮನ ಅಂಗಳದಿಂದ ಮುದ್ದು ರಾಕ್ಷಸಿ ಎಂಬ ರೋಮ್ಯಾಂಟಿಕ್  ಹಾಡು ಬಿಡುಗಡೆಯಾಗಿದೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಹಾಡಿಗೆ ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದು, ವಿಜಯ್ ಪ್ರಕಾಶ್ ಹಾಗೂ ಹರ್ಷಿಕಾ ದೇವನಾಥ್ ಹಾಡಿದ್ದಾರೆ. ಮುದ್ದು ರಾಕ್ಷಸಿ ಹಾಡಿಗೆ ಧನ್ವೀರ್ ಹಾಗೂ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ.

    ಈಕ್ವಿನಾಕ್ಸ್ ಗ್ಲೋಬಲ್‌ ಎಂಟರ್‌ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಚೇತನ್‌ ಗೌಡ ಅದ್ಧೂರಿಯಾಗಿ ನಿರ್ಮಿಸಿರುವ ವಾಮನ ಸಿನಿಮಾವನ್ನು ಯುವ ನಿರ್ದೇಶಕ ಶಂಕರ್‌ ರಾಮನ್‌ ರಚಿಸಿ ನಿರ್ದೇಶಿಸಿದ್ದಾರೆ. ಬೆಂಗಳೂರಿನ ಮಂತ್ರಿ ಮಾಲ್ ನಲ್ಲಿ ಮುದ್ದು ರಾಕ್ಷಸಿ ಮೆಲೋಡಿ ಹಾಡನ್ನು ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ 9Abhishek Ambarish) ರಿಲೀಸ್ ಮಾಡಿ ಗೆಳೆಯನ ಚಿತ್ರಕ್ಕೆ ಸಾಥ್ ಕೊಟ್ಟರು. ಇದನ್ನೂ ಓದಿ:ಕೆರಿಯರ್‌ನಲ್ಲಿ ಪ್ರಚಾರ ಬೇಕು ಅಂದ್ರೆ ಇದನ್ನೆಲ್ಲಾ ಮಾಡಬೇಕು- ತಮನ್ನಾ ಭಾಟಿಯಾ

    ಅಭಿಷೇಕ್ ಅಂಬರೀಷ್, ನಾನು ಈಗಷ್ಟೇ ಮುದ್ದು ರಾಕ್ಷಸಿ ಹಾಡು ನೋಡಿದೆ. ಒಂದು ಸಾಂಗ್ ಹಿಟ್ ಆಗಬೇಕು ಅಂದರೆ ಅದರ ಕ್ರೆಡಿಟ್ ಹೀರೋಗೂ ಅಲ್ಲ ಹೀರೋಯಿನ್ ಗೂ ಅಲ್ಲ. ಮ್ಯೂಸಿಕ್ ಡೈರೆಕ್ಟರ್, ಲಿರಿಕ್ಸಿಸ್ಟ್ ಗೆ ಸೇರಬೇಕು. ಅವರ ಎಫರ್ಟ್ ಜಾಸ್ತಿ ಇರುತ್ತದೆ. ನಮ್ಮ ಗೆಳೆಯ ಧನ್ವೀರ್ ಇಷ್ಟು ಚೆನ್ನಾಗಿ ರೋಮ್ಯಾನ್ಸ್ ಮಾಡ್ತಾನೆ ಅಂತ ಗೊತ್ತಿರಲಿಲ್ಲ. ಬೈ ಟು ಲವ್ ಸಿನಿಮಾದಲ್ಲಿ ಸ್ವಲ್ಪ ನೋಡಿದ್ದೆ. ಈಗ ವಾಮನ ಮುಖಾಂತರ ಕಂಪ್ಲೀಟ್ ಕಮರ್ಷಿಯಲ್ ಪ್ಯಾಕೇಜ್, ಕ್ಯೂಟ್ ಲವರ್ ಬಾಯ್ ರೀತಿ ಕಾಣಿಸುತ್ತಿದ್ದಾನೆ ಎಂದರು.

    ಧ್ವನೀರ್ ಗೌಡ ಮಾತನಾಡಿ, ಒಂದೇ ಒಂದು ಫೋನ್ ಕಾಲ್ ಗೆ ಬಂದು ಮುದ್ದು ರಾಕ್ಷಸಿ ಹಾಡನ್ನು ಅಭಿಷೇಕ್ ಅಂಬರೀಶ್ ಅವರು ಲಾಂಚ್ ಮಾಡಿಕೊಟ್ಟಿದ್ದಾರೆ. ಭೂಷಣ್ ಮಾಸ್ಟರ್ ಕೊರಿಯೋಗ್ರಫಿಗೆ ಹೆಜ್ಜೆ ಹಾಕಿದ್ದೇನೆ ಎಂದರು.  ವಾಮನ ನಿರ್ಮಾಪಕ ಚೇತನ್ ಗೌಡ ಮಾತನಾಡಿ, ಎಲ್ಲರಿಗೂ ಧನ್ಯವಾದ..ಈ ಸಮಾರಂಭವನ್ನು ಇಷ್ಟು ಯಶಸ್ವಿಯಾಗಿ ನಡೆಸಿಕೊಟ್ಟಿದ್ದೀರಾ. ನಾನು ಮೊದಲ ಸಾಂಗ್ ಬಿಡುಗಡೆ ಟೈಮ್ ನಲ್ಲಿ ಸಿನಿಮಾ ಬಗ್ಗೆ ಎಲ್ಲವನ್ನೂ ಹೇಳಿದ್ದೇನೆ. ಈ ಹಾಡನ್ನು ನೋಡಿ ಸಪೋರ್ಟ್ ಮಾಡಿ. ಕನ್ನಡ ಸಿನಿಮಾಗಳನ್ನು ನೋಡಿ ಕನ್ನಡ ಚಿತ್ರರಂಗ ಬೆಳೆಸಿ ಎಂದರು.

    ನಿರ್ದೇಶಕ ಶಂಕರ್ ರಾಮನ್ ಮಾತನಾಡಿ, ಮೊದಲ ಹಾಡಿಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಈ ಸಾಂಗ್ ನಿಮಗೆ ಡೆಡಿಕೇಟ್ ಗೆ ಮಾಡುತ್ತಿದ್ದೇವೆ. ಅಜನೀಶ್ ಲೋಕನಾಥ್ ಸಂಗೀತ, ವಿ ನಾಗೇಂದ್ರ ಪ್ರಸಾದ್ ಮುದ್ದಾದ ಸಾಹಿತ್ಯ, ವಿಜಯ್ ಪ್ರಕಾಶ್ ಹಾಗೂ ಹರ್ಷಿಕಾ ದೇವನಾಥ್ ಧ್ವನಿ ಕೂಡಿಸಿದ್ದು, ಭೂಷಣ್ ಮಾಸ್ಟರ್ ಕೊರಿಯೋಗ್ರಫ್ ಮಾಡಿದ್ದಾರೆ. ಮನೆಗೆ ಹೋಗ್ತಾ ನೀವು ಮುದ್ದು ಮುದ್ದು ರಾಕ್ಷಸಿ ಹಾಡುತ್ತಾ ಹೋಗಿ ಎಂದರು.

    ವಾಮನ ಸಿನಿಮಾದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ (Reeshma Nanaiah) ಅಭಿನಯಿಸಿದ್ದು, ತಾರಾ, ಸಂಪತ್‌, ಆದಿತ್ಯ ಮೆನನ್‌, ಶಿವರಾಜ್ ಕೆಆರ್ ಪೇಟೆ, ಅವಿನಾಶ್‌, ಅಚ್ಯುತ್‌ ಕುಮಾರ್‌, ಕಾಕ್ರೋಚ್‌ ಸುಧಿ, ಭೂಷಣ್‌ ಮುಂತಾದವು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜ್, ವಿಕ್ರಮ್ ಮೋರ್ ಮತ್ತು ಜಾಲಿ ಬಾಸ್ಟಿನ್ ಆಕ್ಷನ್, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಮನ ಟೀಸರ್ ರಿಲೀಸ್, ಆಕ್ಷನ್ ಮೂಡ್ ನಲ್ಲಿ ಶೋಕ್ದಾರ್ ಧನ್ವೀರ್

    ವಾಮನ ಟೀಸರ್ ರಿಲೀಸ್, ಆಕ್ಷನ್ ಮೂಡ್ ನಲ್ಲಿ ಶೋಕ್ದಾರ್ ಧನ್ವೀರ್

    ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ ಸೆಟ್, ಭರ್ಜರಿ ಆಕ್ಷನ್, ಧನ್ವೀರ್ ನಯಾ ಗೆಟಪ್, ಬ್ಯಾಗ್ರೌಂಡ್ ಮ್ಯೂಸಿಕ್, ವಿಷ್ಯೂವಲ್ಸ್ ಎಫೆಕ್ಟ್ ಟೀಸರ್ ನಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಧನ್ವೀರ್ ಗುಣ ಎಂಬ ಪಾತ್ರದಲ್ಲಿ ನಟಿಸಿದ್ದಾರೆ.

    1.50 ನಿಮಿಷ ಇರುವ ವಾಮನ ಸಿನಿಮಾದ ಟೀಸರ್ ತುಣುಕು ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸ್ತಿದ್ದು, ಶಂಕರ್ ರಾಮನ್ ಸಾರಥ್ಯದಲ್ಲಿ ಚಿತ್ರ ಮೂಡಿ ಬರ್ತಿದೆ. ಧನ್ವೀರ್ ಗೆ ಜೋಡಿಯಾಗಿ ಏಕ್ ಲವ್ ಯಾ ಬೆಡಗಿ ರೀಷ್ಮಾ ನಾಣಯ್ಯ ನಟಿಸ್ತಿದ್ದಾರೆ. ಈಗಾಗಲೇ 70 ದಿನ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಸದ್ಯ ಬಾಕಿ ಉಳಿದ ಭಾಗದ ಚಿತ್ರೀಕರಣದಲ್ಲಿ ನಿರತವಾಗಿದೆ. ಇದನ್ನೂ ಓದಿ:ಹೆಣ್ಣು ಮಗುವಿಗೆ ತಂದೆಯಾದ `ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಂದು ಗೌಡ

    ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಖ್ಯಾತಿ ಗಳಿಸಿರುವ ಚೇತನ್ ಕುಮಾರ್ ತಮ್ಮದೇ ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ ಟೈನ್ಮೆಂಟ್ ನಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಲವ್ ಸ್ಟೋರಿ ಜೊತೆಗೆ ಔಟ್ ಅಂಡ್ ಔಟ್ ಆಕ್ಷನ್ ಕಮರ್ಷಿಯಲ್ ಸಿನಿಮಾವಾಗಿರುವ ವಾಮನದಲ್ಲಿ ಖಳನಾಯಕನಾಗಿ ಸಂಪತ್ ನಟಿಸುತ್ತಿದ್ದು, ಉಳಿದಂತೆ ಅಚ್ಯುತ್ ಕುಮಾರ್, ತಾರಾ, ಶಿವರಾಜ್ ಕೆ ಆರ್ ಪೇಟೆ ಮತ್ತು ಕಾಕ್ರೋಚ್ ಸುದಿ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ. ಬಿ.ಅಜನೀಶ್ ಲೋಕನಾಥ್ ಸಂಗೀತ, ಮಹೇನ್ ಸಿಂಹ ಕ್ಯಾಮೆರಾ ಕೈಚಳಕ, ಸುರೇಶ್ ಆರ್ಮುಖ ಸಂಕಲನ, ಅರ್ಜುನ್ ರಾಜ್ ಆಕ್ಷನ್ ಸಿನಿಮಾಕ್ಕಿದೆ.

    Live Tv