Tag: ಧರ್ಮಗುರು

  • ಅತ್ಯಾಚಾರ, 10 ವರ್ಷ ಜೈಲು – ಕೋರ್ಟ್‍ನಿಂದ ನಗುತ್ತಾ ಹೊರಬಂದ ಕಾಮುಕ

    ಅತ್ಯಾಚಾರ, 10 ವರ್ಷ ಜೈಲು – ಕೋರ್ಟ್‍ನಿಂದ ನಗುತ್ತಾ ಹೊರಬಂದ ಕಾಮುಕ

    ಲಕ್ನೋ: ಮಹಿಳೆ ಮೇಲೆ ಅತ್ಯಾಚಾರ ಹಾಗೂ ಬೆದರಿಕೆ ಹಾಕಿದ್ದಕ್ಕಾಗಿ ಮುಸ್ಲಿಂ ಧರ್ಮಗುರುವಿಗೆ 10 ವರ್ಷಗಳ ಜೈಲು (Jail) ಶಿಕ್ಷೆ ಹಾಗೂ 10,000 ರೂ. ದಂಡವನ್ನು ವಿಧಿಸಲಾಗಿದೆ. ಆದರೆ ತೀರ್ಪು ಪ್ರಕಟವಾಗುತ್ತಿದ್ದಂತೆ ಮುಸ್ಲಿಂ ಧರ್ಮಗುರು (Muslim Cleric) ಮುಗಳ್ನಗುತ್ತಾ ನ್ಯಾಯಾಲಯದಿಂದ ಹೊರಬಂದಿದ್ದಾನೆ.

    ನ್ಯಾಯಮೂರ್ತಿ ನೀರಜ್ ಶ್ರೀವಾಸ್ತವ ಈ ಆದೇಶವನ್ನು ಪ್ರಕಟಿಸಿದರು. ಉತ್ತರ ಪ್ರದೇಶದ ವಾರಣಾಸಿಯಲ್ಲಿ (Varanasi) ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಬೆದರಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಟವಾ ಮೂಲದ ಮುಸ್ಲಿಂ ಧರ್ಮಗುರು ಮೌಲಾನಾಗೆ ಶಿಕ್ಷೆ ವಿಧಿಸಲಾಗಿದೆ.

    2016ರಲ್ಲಿ ವಾರಣಾಸಿಯ ಮಹಿಳೆಯೊಬ್ಬರು ವಿವಾಹದ ನೆಪದಲ್ಲಿ ಧರ್ಮಗುರು ತನ್ನ ಮೇಲೆ ಅತ್ಯಾಚಾರವೆಸಗಿದ್ದು, ನಂತರ ಬ್ಲ್ಯಾಕ್ ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದರು. ಮಹಿಳೆಯ ದೂರಿನ ಪ್ರಕಾರ, 2013ರಲ್ಲಿ ಮೌಲಾನಾ ಮಹಿಳೆಯನ್ನು ಭೇಟಿಯಾಗಿದ್ದ. ಆತ ವಾರಣಾಸಿಗೆ ಬಂದಾಗಲೆಲ್ಲಾ ಮದುವೆಯ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಈ ಎಲ್ಲಾ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದ. ಆನಂತರದಲ್ಲಿ ಆತ ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದ್ದಾನೆ. ಇದನ್ನೂ ಓದಿ: ಬಿಎಸ್‍ವೈಗೆ ಸುಪ್ರೀಂಕೋರ್ಟ್‍ನಿಂದ ತಾತ್ಕಾಲಿಕ ರಿಲೀಫ್ – ಬಿ.ವೈ. ವಿಜಯೇಂದ್ರಗೆ ಸಂಕಷ್ಟ

    ಈ ಹಿನ್ನೆಲೆಯಲ್ಲಿ ಮಹಿಳೆಯು ಮೌಲಾನಾ ಜಾರ್ಜಿಸ್ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್ ಮಾಡುತ್ತಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಾರಣಾಸಿಯ ಜೈತ್‍ಪುರ ಪೊಲೀಸ್ ಠಾಣೆಯಲ್ಲಿ 2016ರ ಜನವರಿ 17ರಂದು ಮೌಲನಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ನ್ಯಾಯಾಲಯ ತೀರ್ಪನ್ನು ನೀಡಿದೆ. ಇದನ್ನೂ ಓದಿ: ಕಾಡಿನಲ್ಲಿ ಗ್ಯಾಂಗ್‌ರೇಪ್ – ಬೆತ್ತಲಾಗಿ ಓಡಿಬಂದ ಹುಡುಗಿಗೆ ಹುಚ್ಚಿಯೆಂದು ಕಲ್ಲೆಸೆದ ಜನ

    Live Tv
    [brid partner=56869869 player=32851 video=960834 autoplay=true]

  • ನಾನೂ ಹಿಂದೂ ಇದೀನಿ ಅಂತ ಕೊಲೆ ಮಾಡಬೇಕನ್ನೋದು ಯಾವ ನ್ಯಾಯ – ಸಚಿವ ಶಂಕರ ಪಾಟೀಲ್

    ನಾನೂ ಹಿಂದೂ ಇದೀನಿ ಅಂತ ಕೊಲೆ ಮಾಡಬೇಕನ್ನೋದು ಯಾವ ನ್ಯಾಯ – ಸಚಿವ ಶಂಕರ ಪಾಟೀಲ್

    ಬೆಳಗಾವಿ: ದೇಶದಲ್ಲಿ ಹಿಂದೂ ಮುಸ್ಲಿಂ ಯಾರೇ ಇರಬಹುದು ಅಣ್ಣ-ತಮ್ಮಂದಿರ ಹಾಗೆ ಬದುಕಬೇಕು. ಅದನ್ನು ಬಿಟ್ಟು ನಾನೂ ಹಿಂದೂ ಇದೀನಿ ಅಂತ ಕೊಲೆ ಮಾಡಬೇಕೆಂಬುದು ಯಾವ ನ್ಯಾಯ? ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಪ್ರಶ್ನಿಸಿದ್ದಾರೆ.

    shankar patil munenakoppa

    ಬೆಂಗಳೂರಿನ ಸಾರಾಯಿಪಾಳ್ಯದಲ್ಲಿ ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್‌ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಿಂದೂ ಎಂಬ ಒಂದೇ ಕಾರಣಕ್ಕೆ ಅವನ ಹತ್ಯೆ ಮಾಡಬೇಕು ಎಂಬುದು ಸರಿಯಲ್ಲ. ಯಾವುದೇ ಸಮಾಜ ಇದ್ದರೂ ಆ ಸಮಾಜ ತಿದ್ದುಕೊಳ್ಳಬೇಕು. ನಾನು ಹಿಂದೂ ಇದೀನಿ ಅಂತಾ ಕೊಲೆ ಮಾಡಬೇಕೆಂಬುದು ಯಾವ ನ್ಯಾಯ, ಇದು ಸರಿಯಾದುದಲ್ಲ ಎಂದು ತಿಳಿವಳಿಕೆ ನೀಡಿದ್ದಾರೆ. ಇದನ್ನೂ ಓದಿ: ಸಚಿವ ಸ್ಥಾನಕ್ಕಾಗಿ ಯಾರಿಗೂ ಅರ್ಧ ಕಪ್ ಚಹಾ ಸಹ ಕುಡಿಸಿಲ್ಲ: ಮುನೇನಕೊಪ್ಪ

    shankar patil munenakoppa

    ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಹಿಂದೂ ಇರಬಹುದು, ಮುಸ್ಲಿಂ ಇರಬಹುದು ಈ ದೇಶದಲ್ಲಿ ವಾಸಿಸುವವ ಪ್ರತಿಯೊಬ್ಬರೂ ಅಣ್ಣತಮ್ಮಂದಿರ ರೀತಿ ಬದುಕಬೇಕು. ಧರ್ಮ ಗುರುಗಳಿಂದ ಸಮಾಜ ಪರಿವರ್ತನೆಯ ಕೆಲಸಗಳಾಗಬೇಕು. ಸಾಮರಸ್ಯದಿಂದ ಬದುಕುವಂತೆ ಸಮಾಜ ಕಟ್ಟಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಸಂಪುಟ ವಿಸ್ತರಣೆ ಕಸರತ್ತು: ನಾಳೆ ದೆಹಲಿಗೆ ಸಿಎಂ

    ಈ ರೀತಿ ಒಂದು ಸಮಾಜ ಗುರಿಯಾಗಿಸುವುದನ್ನು ಯಾರೂ ಸಹಿಸೋದಿಲ್ಲ. ಸರ್ಕಾರ ಸಹ ಕಾನೂನಿನ ಕ್ರಮಗಳು ಏನಿದೆ? ನೋಡಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

  • ಅನುಮಾನಾಸ್ಪದವಾಗಿ ರಕ್ತದ ಮಡುವಿನಲ್ಲಿ 22ರ ಧರ್ಮಗುರು ಶವ ಪತ್ತೆ

    ಅನುಮಾನಾಸ್ಪದವಾಗಿ ರಕ್ತದ ಮಡುವಿನಲ್ಲಿ 22ರ ಧರ್ಮಗುರು ಶವ ಪತ್ತೆ

    – ತಲೆಯ ಭಾಗದಲ್ಲಿ ಗಾಯ ಪತ್ತೆ, ತನಿಖೆ ಆರಂಭ

    ಭೋಪಾಲ್: 22 ವರ್ಷದ ಧರ್ಮಗುರುವಿನ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಮಧ್ಯ ಪ್ರದೇಶದ ಉಜೈನ್ ನಗರದ ನಾಗಾದದಲ್ಲಿ ನಡೆದಿದೆ. ಇಂದು ಬೆಳಗ್ಗೆ ಧರ್ಮಗುರುವಿನ ಶವ ಮನೆಯ ಮುಂಭಾಗ ಪತ್ತೆಯಾಗಿದೆ.

    ಬೊಹ್ರಾ ಸಮಾಜದ 22 ವರ್ಷದ ಮುರ್ತುಜಾ ಮೃತ ಧರ್ಮಗುರು. ಮುರ್ತುಜಾ ಮೂಲತಃ ಖಂಡ್ವಾ ನಿವಾಸಿಯಾಗಿದ್ದು, ಕಳೆದ ಒಂದು ವರ್ಷದಿಂದ ನಾಗಾದದಲ್ಲಿ ವಾಸವಾಗಿ ತಮ್ಮ ಸಮಾಜದ ಮಕ್ಕಳಿಗೆ ಧರ್ಮದ ಕುರಿತು ಶಿಕ್ಷಣ ನೀಡುವ ಕೆಲಸ ಮಾಡಿಕೊಂಡಿದ್ದರು.

    ಮಿರ್ಚಿ ಬಜಾರ್ ನಲ್ಲಿಯ ಜಾಬೀರ್ ಎಂಬವರ ಮನೆ ಬಾಡಿಗೆ ಪಡೆದುಕೊಂಡಿದ್ದ ಮುರ್ತುಜಾ ಒಬ್ಬರೇ ವಾಸವಾಗಿದ್ದರು. ಇಂದು ಬೆಳಗ್ಗೆ ಮನೆ ಕೆಲಸದಾಕೆ ಬಂದಾಗ ಮೆಟ್ಟಿಲ ಬಳಿ ಮುರ್ತುಜಾ ಶವ ಕಂಡಿದೆ. ಕೂಡಲೇ ಭಯಗೊಂಡ ಮಹಿಳೆ ಸ್ಥಳೀಯರಿಗೆ ವಿಷಯ ತಿಳಿಸಿದ್ದಾಳೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನ ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಕುಟುಂಬಸ್ಥರಿಗೆ ವಿಷಯ ತಲುಪಿಸಿದ್ದಾರೆ. ಮೆಟ್ಟಿಲಿನಿಂದ ಕೆಳಗೆ ಇಳಿಯುವಾಗ ಆಯಕತಪ್ಪಿ ಬಿದ್ದಿದ್ದರಿಂದ ತಲೆ ಭಾಗದಲ್ಲಿ ಪೆಟ್ಟು ಆಗಿದೆ. ತಲೆ ಭಾಗದಲ್ಲಾದ ಗಾಯದಿಂದ ತೀವ್ರ ರಕ್ತಸ್ರಾವವಾದ ಹಿನ್ನೆಲೆ ಧರ್ಮಗುರು ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

     

  • ಮಳವಳ್ಳಿಯಲ್ಲಿ ಜಮಾತ್ ಧರ್ಮಗುರು ತಂದ ಆತಂಕ

    ಮಳವಳ್ಳಿಯಲ್ಲಿ ಜಮಾತ್ ಧರ್ಮಗುರು ತಂದ ಆತಂಕ

    – ಹಂತ ಹಂತವಾಗಿ ಲಾಕ್‍ಡೌನ್ ಸಡಿಲ

    ಮಂಡ್ಯ: ದೇಶದಲ್ಲಿ ತಲ್ಲಣವನ್ನೇ ಸೃಷ್ಟಿಸಿದ್ದ ದೆಹಲಿಯ ನಿಜಾಮುದ್ದೀನ್ ಮರ್ಕಜ್ ಪ್ರಕರಣ ಈಗ ಮಂಡ್ಯ ಜಿಲ್ಲೆಯ ಮಳವಳ್ಳಿಯ ಜನರಲ್ಲೂ ಆತಂಕ ಉಂಟುಮಾಡಿದೆ.

    ದೆಹಲಿಯ ನಿಜಾಮುದ್ದೀನ್ ಧರ್ಮಸಭೆಗೂ ಮುನ್ನ ಮಳವಳ್ಳಿಗೆ ಧರ್ಮಗುರು ಭೇಟಿ ನೀಡಿದ್ದ. ಈ ಹಿನ್ನೆಲೆಯಲ್ಲಿ ಧರ್ಮಗುರುವಿನ ಜೊತೆ ಸಂಪರ್ಕದಲ್ಲಿದ್ದವರ ಹುಡುಕಾಟವನ್ನು ಮಾಡಲಾಗುತ್ತಿದೆ. ಧರ್ಮಗುರು ಮಳವಳ್ಳಿಯಲ್ಲಿ ಕೆಲವು ದಿನಗಳ ಕಾಲ ವಾಸವಿದ್ದ ಬಗ್ಗೆ ಮಾಹಿತಿ ಇದೆ. ಮಾಹಿತಿ ಆಧರಿಸಿ ವಾಸವಿದ್ದ ಆ ಕುಟುಂಬದ ಸದಸ್ಯರಿಗಾಗಿ ಹುಡುಕಾಟ ನಡೆಯುತ್ತಿದೆ.

    ಧರ್ಮಗುರು ಮೈಸೂರಿನಲ್ಲಿ ನೆಲೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅವರ ಸಂಪರ್ಕದಲ್ಲಿದ್ದವರನ್ನ ಹುಡುಕಾಟ ಮಾಡುತ್ತಿದ್ದೀವಿ. ಸದ್ಯಕ್ಕೆ ಅಧಿಕಾರಿಗಳು ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲಿರುವ ಮುಸ್ಲಿಂ ಬ್ಲಾಕ್‍ನಲ್ಲಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ ವೆಂಕಟೇಶ್ ಮಾಹಿತಿ ನೀಡಿದ್ದಾರೆ.

    ಇತ್ತ ಮಂಡ್ಯದಲ್ಲಿ ಕೊರೊನಾ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಂತ ಹಂತವಾಗಿ ಲಾಕ್‍ಡೌನ್ ಸಡಿಲಗೊಳಿಸುತ್ತಿದೆ. ಇಂದಿನಿಂದ ಸೆಲೂನ್, ಬೇಕರಿ ತೆರೆಯಲು ಡಿಸಿ ಡಾ.ಎಂ.ವಿ.ವೆಂಕಟೇಶ್ ಅನುಮತಿ ನೀಡಿದ್ದಾರೆ. ಆದರೆ ಕೆಲವು ಷರತ್ತು ವಿಧಿಸಿ ಅನುಮತಿ ನೀಡಿದ್ದಾರೆ. ಸೆಲೂನ್, ಬೇಕರಿ ಮಾಲೀಕರ ಮನವಿಗೆ ಸ್ಪಂದಿಸಿ ಅನುಮತಿ ನೀಡಿದ್ದೇನೆ. ಆದರೆ ಮಾಸ್ಕ್, ಹ್ಯಾಂಡ್ ಗ್ಲೌಸ್ ಬಳಸುವಂತೆ ಸೂಚನೆ ನೀಡಿದ್ದೇನೆ. ಯಾಕೆಂದರೆ ಮುಂಜಾಗೃತೆ ವಹಿಸದಿದ್ದರೆ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಡಿಸಿ ತಿಳಿಸಿದ್ದಾರೆ.

    ಇತ್ತ ಮೈಸೂರು ಜಿಲ್ಲೆಯಲ್ಲಿ ಸೋಂಕಿತರು ಸಂಖ್ಯೆ ಹೆಚ್ಚಾಗುತ್ತಿದೆ. ಈ ವೇಳೆಯಲ್ಲಿ ಸೆಲೂನ್, ಬೇಕರಿ ತೆರೆಯಲು ಅನುಮತಿ ಕೊಟ್ಟಿದ್ದಕ್ಕೆ ಕೆಲವು ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೋಳಿ, ಕುರಿ, ಮೇಕೆ, ಮೀನು ಮಾಂಸ ಮಾರಾಟಕ್ಕೂ ಅವಕಾಶ ಮಾಡಿಕೊಡಲಾಗಿದೆ.

  • ದೇವರ ಆದೇಶದಂತೆ ರೇಪ್ ಮಾಡಿದ್ದೇನೆ ಎಂದಿದ್ದ ದೇವಮಾನವನಿಗೆ 15 ವರ್ಷ ಜೈಲು

    ದೇವರ ಆದೇಶದಂತೆ ರೇಪ್ ಮಾಡಿದ್ದೇನೆ ಎಂದಿದ್ದ ದೇವಮಾನವನಿಗೆ 15 ವರ್ಷ ಜೈಲು

    ಸಿಯೋಲ್: ಚರ್ಚ್‍ನಲ್ಲಿ 8 ಜನ ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದ ಧರ್ಮ ಗುರುವಿಗೆ ದಕ್ಷಿಣ ಕೊರಿಯಾ ಕೋರ್ಟ್ 15 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

    ಸಿಯೋಲ್‍ನ ಮಮಿನ್ ಸೆಂಟ್ರಲ್ ಚರ್ಚ್‍ನ ಲೀ ಜೇ ರಾಕ್ (75) ಜೈಲು ಶಿಕ್ಷೆಗೆ ಗುರಿಯಾದ ಧರ್ಮಗುರು. ಇತನು ಕ್ರಿಶ್ಚಿಯನ್ನರು ನಡೆಸುತ್ತಿದ್ದ ಸಂಸ್ಥೆಯ ಮುಖ್ಯಸ್ಥನಾಗಿದ್ದು, 1.30 ಲಕ್ಷ ಅನುಯಾಯಿಗಳನ್ನು ಹೊಂದಿದ್ದ. ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಆರೋಪದಡಿ ಮೇ ತಿಂಗಳಿನಲ್ಲಿ ಬಂಧಿಸಲಾಗಿದ್ದ ಲೀ ಜೇ ರಾಕ್‍ಗೆ ಬುಧವಾರ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

    ಕೆಲಸ ಮಾಡುವಂತೆ ದೇವರಿಂದ ಆದೇಶ ಬಂದಿತ್ತು. ನಾನು ದೇವಮಾನವನಾಗಿದ್ದು ಹೀಗಾಗಿ ಮಾಡಿರುವೆ ಎಂದು ಲೀ ಜೇ ರಾಕ್, ಕೋರ್ಟ್ ಆದೇಶ ಬಳಿಕ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾನೆ.

    ಏನಿದು ಪ್ರಕರಣ?:
    ಲೀ ಜೇ ರಾಕ್ ತನ್ನ ಅಪಾರ್ಟಮೆಂಟ್‍ಗೆ ಬರುವಂತೆ ಹಾಗೂ ಲೈಂಗಿಕ ಕ್ರಿಯೆಗೆ ಒಳಗಾಗುವಂತೆ ಒತ್ತಾಯಿಸುತ್ತಿದ್ದಾನೆ ಎಂದು ಮೂರು ಜನರ ಮಹಿಳೆ ದೂರು ನೀಡಿದ್ದರು. ನಾನು ಅವನ ವಿರುದ್ಧ ನಿಲ್ಲಲು ಸಾಧ್ಯವಾಗುತ್ತಿಲ್ಲ. ಅವನು ರಾಜ, ದೇವರು ಇದ್ದಂತೆ ಎಂದು ಸಂತ್ರಸ್ತ ಮಹಿಳೆಯೊಬ್ಬಳು ಭಯದಿಂದಲೇ ಮಾಧ್ಯಮಗಳ ಮುಂದೆ ತನ್ನ ಅಳಲು ತೋಡಿಕೊಂಡಿದ್ದಳು. ಈ ಮಹಿಳೆ ಹುಟ್ಟಿನಿಂದಲೇ ಚರ್ಚ್‍ನಲ್ಲಿ ವಾಸ್ತವ್ಯ ಪಡೆದಿದ್ದಳು.

    ಒಟ್ಟು 8 ಜನ ಸಂತ್ರಸ್ತ ಮಹಿಳೆಯರು ಲೀ ಜೇ ರಾಕ್ ವಿರುದ್ಧ ಧ್ವನಿ ಎತ್ತಿದ್ದರು. ಆರೋಪ ಬಂದ ಹಿನ್ನೆಲೆಯಲ್ಲಿ ಆತನನ್ನು ಮೇ ತಿಂಗಳಿನಲ್ಲಿ ಬಂಧಿಸಲಾಗಿತ್ತು. ಆರೋಪಿಯು ಸಂತ್ರಸ್ತ ಮಹಿಳೆಯರ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ ಹಾಗೂ ಕಿರುಕುಳ ನೀಡಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಕೋರ್ಟ್ ವಿಚಾರಣೆ ವೇಳೆ ಧರ್ಮಗುರುವಿನ ಮೇಲಿನ ಆರೋಪ ಸಾಬೀತಾಗಿತ್ತು.

    ನಾನು ದೇವಮಾನವ, ಪವಿತ್ರವಾದ ವ್ಯಕ್ತಿ, ಪರಿಶುದ್ಧ ಆತ್ಮ, ದೈವಿಕ ಶಕ್ತಿಯನ್ನು ಹೊಂದಿರುವುದಾಗಿ ಹೇಳಿಕೊಂಡು ಚರ್ಚ್ ಪ್ರಾರ್ಥನೆಗೆ ಬಂದು ಭಕ್ತರಿಗೆ ಮೋಸ ಮಾಡುತ್ತಿದ್ದ ಎಂದು ವರದಿಯಾಗಿದೆ.

    ಮಹಿಳೆಯ ಚರ್ಚ್ ಪ್ರವೇಶವನ್ನು ತಡೆದಿದ್ದಕ್ಕೆ ಲೈಂಗಿಕ ದೌರ್ಜನ್ಯ ಕೇಸ್ ಹಾಕಲಾಗಿದೆ ಎಂದು ಆರೋಪಿ ಪರ ವಕೀಲರು ವಾದ ಮಂಡಿಸಿದ್ದರು. ಆದರೆ ಆರೋಪ ಸಾಬೀತು ಆಗುತ್ತಿದ್ದಂತೆ ಕೋರ್ಟ್ 15 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕಾರ್ಕಳದ ಮದೀನಾ ಮಸೀದಿಯಿಂದ 32 ವಿದ್ಯಾರ್ಥಿಗಳ ಜೊತೆ ಧರ್ಮಗುರು ಎಸ್ಕೇಪ್!

    ಕಾರ್ಕಳದ ಮದೀನಾ ಮಸೀದಿಯಿಂದ 32 ವಿದ್ಯಾರ್ಥಿಗಳ ಜೊತೆ ಧರ್ಮಗುರು ಎಸ್ಕೇಪ್!

    ಉಡುಪಿ: ವಿದ್ಯಾರ್ಥಿಗಳ ಜೊತೆ ಧರ್ಮಗುರು ಪರಾರಿಯಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ಮದೀನಾ ಮಸೀದಿಯಲ್ಲಿ ನಡೆದಿದೆ.

    ಧಾರ್ಮಿಕ ವಿದ್ಯಾಭ್ಯಾಸಕ್ಕೆ ಬಿಹಾರದಿಂದ ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ಮೂವತ್ತೆರಡು ವಿದ್ಯಾರ್ಥಿಗಳು ಬಂದಿದ್ದರು. ಧರ್ಮಗುರು ತೈಯ್ಯಬ್ ಕೂಡಾ ಮೂಲತಃ ಬಿಹಾರ ರಾಜ್ಯದವನು. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮದೀನಾ ಮಸೀದಿಯಲ್ಲಿ ಈ ಘಟನೆ ನಡೆದಿದೆ.

    ಬಿಹಾರ ಮೂಲದ ತೈಯ್ಯಬ್ ಐದು ವರ್ಷದ ಹಿಂದೆ ಮದೀನ ಮಸೀದಿಗೆ ಸಹಾಯಕ ಧರ್ಮಗುರುವಾಗಿ ನೇಮಕವಾಗಿದ್ದ. ಕಳೆದ ಐದು ವರ್ಷದಿಂದ ಹಂತ ಹಂತವಾಗಿ ಸುಮಾರು ಮೂವತ್ತು ಮಂದಿ ಬಿಹಾರ ಮೂಲದ ಮಕ್ಕಳನ್ನು ಧಾರ್ಮಿಕ ಶಿಕ್ಷಣಕ್ಕಾಗಿ ಉಡುಪಿಗೆ ಕರೆ ತಂದಿದ್ದ. ಕೆಲ ದಿನಗಳಿಂದ ಮಸೀದಿಯ ಆಡಳಿತ ಮಂಡಳಿ ಮತ್ತು ತೈಯಬ್ ನಡುವೆ ಆಂತರಿಕ ಕಲಹ ಏರ್ಪಟ್ಟಿತ್ತು. ಕಮಿಟಿಯ ಜೊತೆ ವೈಮನಸ್ಸು ನಡೆದಿತ್ತು. ಕಳೆದ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಟೆಂಪೋ ಟ್ರಾವೆಲ್ಲರ್ ಮೂಲಕ 32 ಮಂದಿ ವಿದ್ಯಾರ್ಥಿಗಳನ್ನು ತೈಯ್ಯಬ್ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ.

    ಟಿಟಿ ವಾಹನ ಕಾರ್ಕಳದಿಂದ ಹೊರಟು ಕುಂದಾಪುರ ಕಡೆಗೆ ತೆರಳಿತ್ತು ಎಂಬ ಮಾಹಿತಿ ಇದೆ. ಮೂವತ್ತೆರಡು ಮಂದಿ ವಿದ್ಯಾರ್ಥಿಗಳಿಗೆ ಧಾರ್ಮಿಕ ಶಿಕ್ಷಣ ಕೊಡುವುದರ ಜೊತೆಗೆ ಪಕ್ಕದಲ್ಲಿರುವ ಸಭಾಂಗಣದ ಮೇಲ್ವಿಚಾರಣೆಯನ್ನು ನೋಡುತ್ತಿದ್ದನು. ಇದರ ಜೊತೆ ಮದೀನಾ ಮಸೀದಿಯಲ್ಲಿ ಐದು ಬಾರಿ ಧ್ವನಿವರ್ಧಕದಲ್ಲಿ ನಮಾಜ್ ಮಾಡುವ ಕೆಲಸಕ್ಕೂ ನೇಮಕಗೊಂಡಿದ್ದ.

    ಮಸೀದಿ ಆಡಳಿತ ಮಂಡಳಿ ಕಾರ್ಕಳ ನಗರ ಠಾಣೆಗೆ ಪ್ರಕರಣವನ್ನು ಗಮನಕ್ಕೆ ತಂದಿದೆ. ತೈಯ್ಯಬ್ ವಿರುದ್ಧ ದೂರು ದಾಖಲಾಗಿದೆ.

  • ಮಸೀದಿಯಲ್ಲಿ ಮೊಬೈಲ್ ಬಳಸ್ಬೇಡಿ ಎಂದಿದ್ದಕ್ಕೆ ಮೌಲನಾರನ್ನು ಎತ್ತಂಗಡಿ ಮಾಡಿಸಿದ ಪರಮೇಶ್ವರ್ ನಾಯ್ಕ್

    ಮಸೀದಿಯಲ್ಲಿ ಮೊಬೈಲ್ ಬಳಸ್ಬೇಡಿ ಎಂದಿದ್ದಕ್ಕೆ ಮೌಲನಾರನ್ನು ಎತ್ತಂಗಡಿ ಮಾಡಿಸಿದ ಪರಮೇಶ್ವರ್ ನಾಯ್ಕ್

    ಬಳ್ಳಾರಿ: ಹೂವಿನಹಡಗಲಿ ಶಾಸಕ ಪರಮೇಶ್ವರ ನಾಯ್ಕ್ ಸಚಿವರಾಗಿದ್ದಾಗ ಫೋನ್ ಹೋಲ್ಡ್ ಮಾಡಿದ್ರು ಅಂತ ಕೂಡ್ಲಗಿ ಡಿವೈಎಸ್‍ಪಿ ಅನುಪಮಾ ಶಣೈ ಅವ್ರನ್ನೇ ಎತ್ತಂಗಡಿ ಮಾಡಿಸಿದ್ರು. ಈಗ ಮಸೀದಿಯಲ್ಲಿ ಮೊಬೈಲ್ ಫೋನ್ ಬಳಸಬೇಡಿ ಅಂತ ಪರಮೇಶ್ವರ್ ನಾಯ್ಕ್ ಆಪ್ತರಿಗೆ ಸೂಚಿಸಿದ್ದಕ್ಕೆ ಮುಸ್ಲಿಂ ಮೌಲಾನಾರಿಗೆ ಮಸೀದಿಯಿಂದಲೇ ಗೇಟ್‍ಪಾಸ್ ಕೊಟ್ಟಿದ್ದಾರೆ.

    ನಾಯ್ಕ್ ಸಹಚರ ವರದಾ ಗೌಸ್ ಎಂಬವರ ಸಹೋದರ ನಿಯಾಜ್‍ಗೆ ಬುದ್ಧಿ ಹೇಳಿದ್ದಕ್ಕೆ ಧರ್ಮಗುರುಗಳು ಪರಮೇಶ್ವರ್ ನಾಯ್ಕ್ ವಕ್ರದೃಷ್ಠಿಗೆ ಗುರಿಯಾಗಿದ್ದಾರೆ. ಮೆಹಮೂದ್ ಆಲಂ 18 ವರ್ಷಗಳಿಂದ ಹಡಗಲಿಯ ಜಾಮಿಯಾ ಮಸೀದಿ ಧರ್ಮಗುರುವಾಗಿ ಸೇವೆ ಸಲ್ಲಿಸ್ತಿದ್ದಾರೆ. ಆದ್ರೆ ಮೌಲನಾರನ್ನು ಎತ್ತಂಗಡಿ ಮಾಡದಿದ್ದರೆ ದೊಂಬಿ, ಕೋಮು ಗಲಭೆ, ರಕ್ತಪಾತ ಸೃಷ್ಟಿಯಾಗುತ್ತೆ ಅಂತಾ ತಹಶೀಲ್ದಾರ್‍ರಿಂದ ವಕ್ಫ್ ಬೋರ್ಡ್‍ಗೆ ವರದಿ ಸಲ್ಲಿಸಿದ್ದಾರೆ. ಅಲ್ಲದೆ ಮೌಲನಾರ ವಿರುದ್ಧ ನಡೆದ ಷಂಡ್ಯತ್ರದ ಆಡಿಯೋ ಸಂಭಾಷಣೆ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಆಡಿಯೋದಲ್ಲೇನಿದೆ?: ನಾಳೆ ಬೆಳಗ್ಗೆ ಒಂದು ಡ್ರಾಪ್ ಮಾಡು, ಒಂದು ಕಾಪಿ ದೈವಕ್ಕೂ, ಒಂದು ಕಾಪಿ ಮಸೀದಿ ಕಮಿಟಿಗೆ ಕಳಿಸು. ಹತ್ತತ್ತು ಮಂದಿದಾ ಸಹಿ ಮಾಡಿಸ್ಕೋ. ಸಹಿ ಯಾಕೆ ಅಂತಾ ಅವರಿಗೆ ಏನೂ ಹೇಳ್ಬೇಡ. ನಾಲ್ಕು ಜನ ಮಿನಿಸ್ಟರ್ ಹತ್ತಿರ ಹೋಗಿ ಮಿನಿಸ್ಟರ್‍ನಿಂದ ಡಿವೈಎಸ್‍ಪಿಗೆ ಫೋನ್ ಮಾಡ್ಸಿ. ಆತ ಮೌಲನಾ ಆದ್ರೆ ಕೋಮು ಗಲಭೆ ಮಾಡಿಸ್ತಾನೆ. ಯೆಂಡಾ ಪಂಡಾ ಕಟ್ಟಿಸ್ತಾನೆ. ಪೊಲೀಸ್ರು ಎಂಎಲ್‍ಎ ಮಂತ್ರಿನಾ ಬೈತಾನೆ. ಊರಮ್ಮನ ಜಾತ್ರೆ ಮಾಡಬೇಡ ಅಂತಾನೆ ಅಂತ ಹೇಳು. ಮಸೀದಿ ಕಮಿಟಿ ರದ್ದು ಮಾಡೋದೆ ನಮ್ಮ ಕೆಲಸ ಗೊತ್ತಾಯ್ತಾ.

    https://www.youtube.com/watch?v=UWEQaBKFeRw&feature=youtu.be

    ಹೀಗೆ ಮಸಲತ್ತು ಮಾಡಿ ಮೌಲಾನರನ್ನ ಮಸೀದಿಯಿಂದ ಓಡಿಸಿದ್ದಕ್ಕೆ ಮುಸ್ಲಿಮರು ಸಿಟ್ಟಿಗೆದ್ದಿದ್ದಾರೆ. ಹೀಗಾಗಿ ಮಸೀದಿಯ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    ವರದಾ ಗೌಸ್

    ನಿಯಾಜ್‍

  • ಸತ್ತು 7 ದಿನಗಳಾದ್ರೂ ಗುರುವಿನ ಆತ್ಮ ಜೀವಂತ, ಅನುಯಾಯಿಗಳಿಂದ ಶವವಿಟ್ಟು ಪೂಜೆ!

    ಸತ್ತು 7 ದಿನಗಳಾದ್ರೂ ಗುರುವಿನ ಆತ್ಮ ಜೀವಂತ, ಅನುಯಾಯಿಗಳಿಂದ ಶವವಿಟ್ಟು ಪೂಜೆ!

    ಕಾರವಾರ: ಧರ್ಮಗುರುಗಳು ಸಾವನ್ನಪ್ಪಿ ಏಳು ದಿನಗಳು ಕಳೆದ್ರೂ, ಅವರ ಆತ್ಮವಿನ್ನೂ ಜಾಗೃತವಾಗಿದೆ ಎಂಬ ಕಾರಣಕ್ಕೆ ಶವ ಸಂಸ್ಕಾರ ಮಾಡದೇ ಕೊಠಡಿಯೊಂದರಲ್ಲಿಟ್ಟು ಪೂಜೆ ಮಾಡಲಾಗ್ತಿತ್ತು.

    ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಗೆಲುಕ್ಪಾ ಪಂಗಡದ ಪ್ರಮುಖ ನಾಯಕ ಗೆಶೆ ಲೋಬ್ಸಂಗ್ ತೆಂಜಿನ್ (90) ಅವರು ಇದೇ ತಿಂಗಳು 21ರಂದು ಸಾವನ್ನಪ್ಪಿದ್ದರು. ಆದರೆ ಅವರ ಆತ್ಮ ದೇಹದಲ್ಲಿ ಜಾಗೃತವಾಗಿದೆ ಎಂಬ ಕಾರಣಕ್ಕೆ ಇಂದು ಅಂತ್ಯಸಂಸ್ಕಾರ ಮಾಡಲಾಗಿದೆ.

    ಇದೇ ತಿಂಗಳ 21 ರಂದು ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ವಯೋ ಸಹಜತೆಯಿಂದ ತೆಂಜಿನ್ ಮೃತಪಟ್ಟಿದ್ದರು. ನಂತರ ದೆಹಲಿಯಿಂದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಬಳಿ ಇರುವ ಟಿಬೇಟಿಯನ್ ನಿರಾಶ್ರಿತರ ಕಾಲೋನಿಗೆ ಮೃತದೇಹವನ್ನು ತರಲಾಗಿದ್ದು, ಧಾರ್ಮಿಕ ವಿಧಿ ಪೂರೈಸಲು ಅನುಯಾಯಿಗಳು ಮುಂದಾಗಿದ್ರು. ಆದ್ರೆ ಅವರ ದೇಹದಲ್ಲಿ ಆತ್ಮ ಜಾಗೃತವಾಗಿದೆ ಎಂದು ಹಿರಿಯ ಧರ್ಮ ಗುರುಗಳು ಹೇಳಿದ್ದರಿಂದ ಅಂತ್ಯಸಂಸ್ಕಾರವನ್ನು ಮುಂದೂಡಲಾಯ್ತು. ಇನ್ನು ಅವರ ದೇಹಕ್ಕೆ ಪೂಜೆ ಸಲ್ಲಿಸುವ ಮೂಲಕ ಆತ್ಮ ದೇಹದಿಂದ ಸಂಪೂರ್ಣ ಹೋದ ನಂತರವೇ ಶವ ಸಂಸ್ಕಾರದ ವಿಧಿಯನ್ನು ಪೂರೈಸಲು ತೀರ್ಮಾನಿಸಿ ಲಾಮಾ ಕ್ಯಾಂಪ್ ನ ನಂ.2 ಲೋಸಲಿಂಗ್ ಬೌದ್ಧ ಮಂದಿರದಲ್ಲಿ ಇಟ್ಟು ಪೂಜೆಗೈಯಲಾಗುತಿದ್ದು, ಇಂದು ದೇಹದಿಂದ ಆತ್ಮ ಹೊರಹೋಗಿರುವುದು ದೃಢಪಟ್ಟಿದ್ದರಿಂದಾಗಿ ಅಂತ್ಯಸಂಸ್ಕಾರದ ವಿಧಿ ಪೂರೈಸಲಾಯ್ತು ಎನ್ನಲಾಗಿದೆ.

    ಸಾಂದರ್ಭಿಕ ಚಿತ್ರ

    ಆತ್ಮವಿರುವುದು ತಿಳಿಯುವುದು ಹೇಗೆ?: ಟಿಬೇಟಿಯನ್‍ರಲ್ಲಿ ಯಾವುದೇ ಧರ್ಮ ಗುರುಗಳು ನಿಧನ ಹೊಂದಿದ್ರೆ ಅವರ ಮೈ ಬೆಚ್ಚಗಿದ್ದರೇ ಆಗ ಆತ್ಮ ಜಾಗೃತವಾಗಿರುತ್ತೆ ಅನ್ನೂ ನಂಬಿಕೆ ಇದೆ. ಹೀಗಾಗಿ ಯಾವುದೇ ಧರ್ಮಗುರುಗಳು ನಿಧನ ಹೊಂದಿದಾಗ ಅದನ್ನು ದೃಢಪಡಿಸಿಕೊಳ್ಳಲಾಗುತ್ತೆ. ಹೀಗೆ ದೃಢಪಡಿಸಿಕೊಳ್ಳುವ ಸಂದರ್ಭದಲ್ಲಿ ಗೆಶೆ ಲೋಬ್ಸಂಗ್ ತೆಂಜಿನ್ ರವರ ದೇಹ ಬಿಸಿಯಾಗಿತ್ತು. ಆದ್ದರಿಂದ ಕಾಲೋನಿಯ ಒಂದು ಕೋಣೆಯಲ್ಲಿ ಅವರ ಶವವನ್ನ ಮಲಗಿದ ಸ್ಥಿತಿಯಲ್ಲಿಟ್ಟು ದಿನಂಪ್ರತಿ ಪೂಜೆ ಸಲ್ಲಿಸಲಾಗುತಿತ್ತು. ಇಂದು ಅವರ ದೇಹದಲ್ಲಿ ತಣ್ಣಗಿನ ಅನುಭವವಾಗಿದ್ದು ದೇಹದಿಂದ ಆತ್ಮ ಹೊರಹೋಗಿರುವುದನ್ನ ಟಿಬೇಟಿಯನ್ ಕಾಲೋನಿಯ ದಲಾಯಿ ಲಾಮಾ ಕಚೇರಿಯ ಸ್ಥಳೀಯ ಪ್ರತಿನಿಧಿ ಕರ್ಮಾರವರು ದೃಢಪಡಿಸಿದ್ದಾರೆ.

    ಸಾಂದರ್ಭಿಕ ಚಿತ್ರ

    ಟಿಬೇಟಿಯನ್‍ನ ಗೆಲುಕ್ಪಾ ಪಂಗಡದ ಗೆಶೆ ಲೋಬ್ಸಂಗ್‍ರವರು ಈ ಹಿಂದೆ ಇಂದಿರಾ ಗಾಂಧಿ ಸರ್ಕಾರದ ಕಾಲದಲ್ಲಿ ಟಿಬೇಟ್‍ನಿಂದ ಆಶ್ರಯ ಬಯಸಿ ಭಾರತಕ್ಕೆ ಬಂದು ಮುಂಡಗೋಡಿನ ನಿರಾಶ್ರಿತರ ಕಾಲೋನಿಯಲ್ಲಿ ವಾಸವಾಗಿದ್ದರು. ಅಪ್ಪಟ ದಲಾಯಿ ಲಾಮಾ ರವರ ಅನುಯಾಯಿಯಾಗಿರುವ ಇವರು ದೇಶ ವಿದೇಶಗಳನ್ನು ಸುತ್ತಿ ಬೌದ್ಧ ಧರ್ಮ ಪ್ರಚಾರದ ಜೊತೆಗೆ ಟಿಬೇಟಿಯನ್ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ರು. ಹೀಗಾಗಿ ಟಿಬೇಟಿಯನ್‍ಗಳ ಅಚ್ಚುಮೆಚ್ಚಿನ ನಾಯಕರಾಗಿ, ಧರ್ಮಗುರುಗಳಾಗಿ ಅನೇಕ ಅನುಯಾಯಿಗಳನ್ನ ಸಂಪಾದಿಸಿದ್ದರು.

    ಸಾಂದರ್ಭಿಕ ಚಿತ್ರ

    ಹಿಂದೆಯೂ ನಡೆದಿತ್ತು: ಇನ್ನು ಈ ರೀತಿಯ ಘಟನೆ ಇದೇ ಮೊದಲಲ್ಲ. ಎರಡು ವರ್ಷಗಳ ಹಿಂದೆ ಲಾಮಾ ಕ್ಯಾಂಪ್ ನಂ.2 ರ ಲೋಸಲಿಂಗ ಬೌದ್ಧ ಮಠದ ಪಂಡಿತರಾದ ತಿಸುರ ರಿನಪೋಜೆ ಲೋಬಸಾಂಗ್ ನ್ಯೀಮಾ ರವರು ಮೃತಪಟ್ಟು 18 ದಿನ ಕಳೆದಿದ್ದರೂ ಸಹ ಅವರ ಮೃತದೇಹವನ್ನು ಇಡಲಾಗಿತ್ತು. ಆದರೆ ದೇಹದಿಂದ ಮಾತ್ರ ಯಾವುದೇ ವಾಸನೆ ಬಂದಿರಲಿಲ್ಲ. ನಂತರ ಹಿಮಾಚಲ ಪ್ರದೇಶದ ವೈದ್ಯರ ತಂಡ ಆಗಮಿಸಿ ಪರೀಕ್ಷೆ ನೆಡೆಸಿ 21 ದಿನದ ನಂತರ ಅಂತ್ಯ ಸಂಸ್ಕಾರ ಮಾಡಲಾಯ್ತು. ಹೀಗೆ ಬಹಳಷ್ಟು ವರ್ಷಗಳಿಂದ ಈ ರೀತಿಯ ಧರ್ಮ ಗುರುಗಳು ಸತ್ತಾಗ ಮೂರು ತಿಂಗಳವರೆಗೂ ಶವವನ್ನ ಇಟ್ಟು ಪೂಜಿಸಿದ ಘಟನೆಗಳಿವೆ ಎಂದು ಟಿಬೇಟೆಯನ್ನರು ಹೇಳುತ್ತಾರೆ.

    ಇನ್ನು ಈಗ ಮೃತಪಟ್ಟ ಧರ್ಮಗುರುಗಳ ಶವ ಕೆಡದೇ ಬಿಸಿಯಾಗಿದ್ದು ಮುಖದ ಮೇಲೆ ಬೆವರು ಕಾಣಿಸಿತಿತ್ತು. ಹೀಗಾಗಿ ಆತ್ಮ ದೇಹದಿಂದ ಹೊರಹೋಗಿಲ್ಲ ಎಂಬುದು ದೃಢಪಟ್ಟಿದ್ದು ಈ ಕಾರಣದಿಂದಾಗಿ ನಾವು ಅವರ ದೇಹವನ್ನು ಇರಿಸಿ ಏಳು ದಿನಗಳಿಂದ ಪೂಜೆಗೈದು ಇಂದು ಅಂತ್ಯಸಂಸ್ಕಾರ ನೆರವೇರಿಸಿದ್ದೇವೆ ಎಂದು ಪಬ್ಲಿಕ್ ಟಿ.ವಿಗೆ ಟಿಬೇಟಿಯನ್ ಕಾಲೋನಿಯ ಬೌದ್ಧ ಸನ್ಯಾಸಿ ತುಪ್ತಿನ್ ಸಿರಿಂಗ್ ತಿಳಿಸಿದ್ದಾರೆ.

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ