Tag: ಧರ್ಮಸ್ಥಳ ಪ್ರಕರಣ

  • ಧರ್ಮಸ್ಥಳ ಬುರುಡೆ ಕೇಸ್‌ | ಮಟ್ಟಣ್ಣನವರ್‌, ತಿಮರೋಡಿ, ಸುಜಾತಾ ಭಟ್‌ ಸೇರಿ ಐವರಿಗೆ ಮತ್ತೆ ನೋಟಿಸ್‌

    ಧರ್ಮಸ್ಥಳ ಬುರುಡೆ ಕೇಸ್‌ | ಮಟ್ಟಣ್ಣನವರ್‌, ತಿಮರೋಡಿ, ಸುಜಾತಾ ಭಟ್‌ ಸೇರಿ ಐವರಿಗೆ ಮತ್ತೆ ನೋಟಿಸ್‌

    – ವಿಚಾರಣೆಗೆ ಹಾಜರಾಗದಿದ್ರೆ ಮುಲಾಜಿಲ್ಲದೇ ಅರೆಸ್ಟ್‌ ಎಚ್ಚರಿಕೆ
    – ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ

    ಮಂಗಳೂರು: ಇಡೀ ದೇಶಾದ್ಯಂತ ಸದ್ದು ಮಾಡಿದ್ದ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ (Dharmasthala Case) ಇನ್ನೇನು ತಾರ್ಕಿಕ ಅಂತ್ಯ ಕಾಣುವ ಹಂತಕ್ಕೆ ಬರುವಂತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸುತ್ತಿನ ವಿಚಾರಣೆಗೆ ಬೆಳ್ತಂಗಡಿಯ ಎಸ್‌ಐಟಿ (SIT) ಕಚೇರಿಗೆ ಹಾಜರಾಗಲು ಐವರಿಗೆ ವಿಶೇಷ ತನಿಖಾ ತಂಡ ನೋಟಿಸ್‌ ನೀಡಿದೆ.

    ಪ್ರಕರಣದ ಸೂತ್ರಧಾರಿಗಳಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ (Girish Mattannavar), ಜಯಂತ್. ಟಿ, ವಿಠಲ ಗೌಡ, ಸುಜಾತ ಭಟ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ತನಿಖಾಧಿಕಾರಿ ಎಸ್.ಪಿ ಜಿತೇಂದ್ರ ದಯಾಮಾ ನೋಟಿಸ್‌ ಜಾರಿಗೊಳಿಸಿದ್ದಾರೆ. ವಿಚಾರಣೆಗೆ ಹಾಜರಾಗದಿದ್ದರೆ, ಬಂಧನ ಮಾಡುವ ಎಚ್ಚರಿಕೆಯೊಂದಿಗೆ ನೋಟಿಸ್‌ ನೀಡಿದ್ದಾರೆ. ಬಿಎನ್‌ಎಸ್‌ಎಸ್ 35(3) ಅಡಿಯಲ್ಲಿ ಪ್ರದತ್ತವಾದ ವಿಶೇಷ ಅಧಿಕಾರ ಬಳಸಿಕೊಂಡು ಪ್ರಕರಣದ ಸೂತ್ರಧಾರಿಗಳಿಗೆ ನೋಟಿಸ್‌ ಜಾರಿಗೊಳಿಸಿದ್ದಾರೆ. ಇದನ್ನೂ ಓದಿ: ನಕಲಿ ʻಲೋಕಾಯುಕ್ತ ಜಸ್ಟೀಸ್ʼ ಹಾವಳಿಗೆ ಬೆಚ್ಚಿಬಿದ್ದ ಅಧಿಕಾರಿಗಳು – ದೂರು ದಾಖಲು

    ಮತ್ತೆ ನೋಟಿಸ್‌ಗೆ ಕಾರಣ ಏನು?
    ನೊಟೀಸ್‌ನಲ್ಲಿ ಹಲವು ಅಂಶ ಉಲ್ಲೇಖಿಸಿರೋ ತನಿಖಾಧಿಕಾರಿ ದಯಾಮ, ತನಿಖೆಯಲ್ಲಿ ಕಂಡುಕೊಂಡಂತೆ ಪ್ರಕರಣದ ಹಲವು ಸಂಗತಿಗಳನ್ನು ಮತ್ತು ಸಂದರ್ಭಗಳನ್ನು ತಮ್ಮಿಂದ ಖಚಿತಪಡಿಸಿಕೊಳ್ಳುವ ಅಗತ್ಯವಿದೆ. ಹೀಗಾಗಿ ನಿಮ್ಮನ್ನ ವಿಚಾರಿಸುವುದು ಅಗತ್ಯವಾಗಿದೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಮುಂದಿನ ತಿಂಗಳಿಂದಲೇ ಭಾರತ್ ಟ್ಯಾಕ್ಸಿ ಶುರು – ಖಾಸಗಿ ಕ್ಯಾಬ್ ಸೇವೆಗಳ ಕಮಿಷನ್ ಹಾವಳಿಗೆ ಬ್ರೇಕ್!

    ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ
    ಇನ್ನೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಪರ ಪ್ರತಿಭಟನೆಗೆ ಪೊಲೀಸ್‌ ಇಲಾಖೆ ಅನುಮತಿ ನಿರಾಕರಿಸಿದೆ. ತಿಮರೋಡಿ ಪ್ರಕರಣ ನ್ಯಾಯಾಲಯದಲ್ಲಿ ಇರೋ ಹಿನ್ನೆಲೆ ಪ್ರತಿಭಟನೆಗೆ ಅನುಮತಿ ನಿರಾಕರಿಸಿದೆ. ಇನ್ನೂ ಅನುಮತಿ ಇಲ್ಲದಿದ್ರೂ ಪ್ರತಿಭಟನೆಗೆ ಮುಂದಾಗಿದ್ದ ಕೆಲ ತಿಮರೋಡಿ ಬೆಂಬಲಿಗರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ರಸ್ತೆಗಳಲ್ಲಿ ಬಟರ್ ಫ್ಲೈ ಲೈಟ್ ಹಾಕಿದ್ದೇವೆಂದು 73 ಲಕ್ಷ ಹಣ ಪಡೆದು ಗುಳುಂ; ಗೋಲ್ಮಾಲ್ ಬಹಿರಂಗ

  • ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಎಲ್ಲಾ ಗೊತ್ತು: ಡಿಕೆಶಿ ಬಾಂಬ್‌

    ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಎಲ್ಲಾ ಗೊತ್ತು: ಡಿಕೆಶಿ ಬಾಂಬ್‌

    – ವಾಸ್ತವಾಂಶ ಜನರಿಗೆ ತಿಳಿಸಬೇಕು, ವರದಿ ಬಂದ ನಂತ್ರ ಮಾತಾಡ್ತೇನೆ; ಡಿಸಿಎಂ

    ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಧರ್ಮಸ್ಥಳ ಪ್ರಕರಣ (Dharmasthala Case) ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ಎಂದಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಈಗ ಬುರುಡೆ ಗ್ಯಾಂಗ್‌ ಷಡ್ಯಂತ್ರದ ಕುರಿತು ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬುರುಡೆಯನ್ನ ದೆಹಲಿಗೆ ಎತ್ತಿಕೊಂಡು ಹೋಗಿದ್ದೂ ಗೊತ್ತು, ಸುಪ್ರೀಂ ಕೋರ್ಟ್‌ಗೆ (Supreme Court) ಹೋಗಿದ್ದೂ ಗೊತ್ತು ಎಂದು ಬಾಂಬ್‌ ಸಿಡಿಸಿದ್ದಾರೆ.

    ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ (DK Shivakumar), ವಾಸ್ತವಾಂಶ ಜನರಿಗೆ ತಿಳಿಸಬೇಕು ಅನ್ನೋದು ನಮ್ಮ ಆಸೆ. ರಾಜಕೀಯ ಯಾರೂ ಏನ್ ಬೇಕಾದರೂ ಮಾತಾಡಬಹುದು. ನಾನು ಮಾತಾಡಿದ್ರೆ ಸರ್ಕಾರದ ಹೇಳಿಕೆ ಆಗುತ್ತೆ. ಅಂತಿಮ ವರದಿ ಬರಲಿ, ಮಾತಾಡ್ತೀನಿ. ಹೋಮ್ ಮಿನಿಸ್ಟರ್, ಸಿಎಂ ಅಧಿಕೃತ ಸ್ಟೇಟ್ಮೆಂಟ್ ಮಾಡ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ| ಇದೊಂದು ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ

    Dharmasthala Chinnayya

    ಮುಂದುವರಿದು… ಬುರುಡೆ ಡೆಲ್ಲಿಗೆ ಎತ್ತಿಕೊಂಡು ಹೋಗಿದ್ದು ಗೊತ್ತೂ, ನಮಗೆ ಆ ಮಾಹಿತಿ ಇದೆ. ಸುಪ್ರೀಂ ಕೋರ್ಟ್‌ಗೆ ಹೋಗಿದ್ದೂ ಗೊತ್ತು. ಪಿಐಎಲ್ ಹಾಕಿದ್ದು ಗೊತ್ತು, ಅಲ್ಲಿ ರಿಜೆಕ್ಟ್ ಆಗಿದ್ದು ಗೊತ್ತು. ಆದ್ರೆ ಪೊಲೀಸ್ ಇಲಾಖೆ ಅವರು ತನಿಖೆ ಮಾಡ್ತಿದ್ದಾರೆ, ವರದಿ ಕೊಡ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ | ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್ – ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ

    ಸರ್ಕಾರವನ್ನೇ ಯಾಮಾರಿಸಿದ್ದ ಬುರುಡೆ ಗ್ಯಾಂಗ್‌
    ಸುಪ್ರೀಂ (Supreme Court) ಆದೇಶ ಮುಚ್ಚಿಚ್ಚು ರಾಜ್ಯ ಸರ್ಕಾರವನ್ನೇ (Karnataka Government) ಈ ಬುರುಡೆ ಗ್ಯಾಂಗ್‌ ಯಾಮಾರಿಸಿತ್ತು. ಅರ್ಜಿ ವಜಾಗೊಂಡಿದ್ದರೂ ಎಸ್‌ಐಟಿ ರಚನೆ ಮಾಡಿಸಿಕೊಂಡು ತನಿಖೆ ಮಾಡಿಸಿತ್ತು ಅನ್ನೋ ರಹಸ್ಯ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ‘ಹಣದ ಆಸೆಗೆ ಬಲಿಯಾಗಿದ್ದೇನೆ, ದಯಾಮಾಡಿ ಬಚಾವ್ ಮಾಡಿ’ – ಸುಂದರ ಗೌಡರ ಕಾಲಿಗೆ ಬಿದ್ದು ಗೋಗರೆದಿದ್ದ ಚಿನ್ನಯ್ಯ

    supreme Court 1

    ಸುಪ್ರೀಂ ಕೋರ್ಟ್ ಆದೇಶ ಮುಚ್ಚಿಟ್ಟು ಮೋಸ
    ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡುವುದಕ್ಕೆ ಮುನ್ನವೇ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್‌ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಆದ್ರೆ ಮೇ 5ರಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ, ನ್ಯಾ.ಸತೀಶ್ ಚಂದ್ರ ನೇತೃತ್ವದ ಪೀಠ ಅರ್ಜಿ ವಜಾ ಮಾಡಿತ್ತು. ಆದ್ರೂ ಇದನ್ನ ಮುಚ್ಚಿಟ್ಟು ಬುರುಡೆ ಗ್ಯಾಂಗ್‌ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಎಸ್ಪಿಗೂ ದೂರು ನೀಡಲಾಗಿತ್ತು.

    Dharmasthala Mass Burial Case 6 hour operation in Point 13

    ಎಸ್‌ಐಟಿ ರಚನೆ ಮಾಡುವಂತೆ ಅರ್ಜಿ ಸಲ್ಲಿಸಿದ್ದ ಗ್ಯಾಂಗ್‌
    ಕಳೆದ ಏಪ್ರಿಲ್‌ 30 ರಂದು ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ ರಚನೆ ಮಾಡುವಂತೆ ಒತ್ತಾಯಿಸಿ ಬುರುಡೆ ಗ್ಯಾಂಗ್‌ ಅರ್ಜಿ ಸಲ್ಲಿಕೆ ಮಾಡಿತ್ತು. ಆದ್ರೆ ಮೇ 5ರಂದೇ ಸುಪ್ರೀಂ ಕೋರ್ಟ್‌ ಬುರುಡೆ ಗ್ಯಾಂಗ್‌ಗೆ ಛೀಮಾರಿ ಹಾಕಿ ಅರ್ಜಿ ವಜಾಗೊಳಿಸಿತ್ತು. ಇದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಕಾಣುತ್ತಿಲ್ಲ, ವೈಯಕ್ತಿಕ ಹಿತಾಸಕ್ತಿ ಕಾಣಿಸುತ್ತಿದೆ. ಇದು ಪೈಸಾ ಇಂಟರೆಸ್ಟ್ ಲಿಟಿಗೇಷನ್, ಪೊಲಿಟಿಕಲ್ ಇಂಟರೆಸ್ಟ್ ಲಿಟಿಗೇಷನ್, ಪ್ರೈವೇಟ್ ಇಂಟರೆಸ್ಟ್ ಲಿಟಿಗೇಷನ್ ಎಂದು ಬುರುಡೆ ಗ್ಯಾಂಗ್‌ಗೆ ತಪರಾಕಿ ಹಾಕಿತ್ತು. ನಾಚಿಕೆ ಮಾನಾ ಮರ್ಯಾದೆ ಎಲ್ಲವನ್ನೂ ಬಿಟ್ಟು ಬಂದು ದೂರು ನೀಡಿದ್ದೀರಿ ಎಂದು ಗ್ಯಾಂಗನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಸಾರಾಸಗಟಾಗಿ ಅರ್ಜಿಯನ್ನ ತಿರಸ್ಕರಿಸಿತ್ತು. ಇದೆಲ್ಲವನ್ನೂ ಮುಚ್ಚಿಟ್ಟಿದ್ದ ಬುರುಡೆ ಗ್ಯಾಂಗ್‌ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಬಳಿಕ ಎಸ್ಪಿಗೂ ದೂರು ನೀಡಿ ಪ್ರಕರಣ ಮುನ್ನೆಲೆಗೆ ತಂದಿದೆ ಅನ್ನೋದು ಈಗ ಬಯಲಾಗಿತ್ತು. ಈ ಬೆನ್ನಲ್ಲೇ ಡಿಕೆಶಿ ಹೇಳಿಕೆ ವಿಪಕ್ಷಗಳ ಬಾಯಿಗೂ ಆಹಾರವಾಗಿದೆ.

  • ಧರ್ಮಸ್ಥಳ ಕೇಸ್‌ | ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್ – ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ

    ಧರ್ಮಸ್ಥಳ ಕೇಸ್‌ | ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್ – ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ

    ಬೆಂಗಳೂರು/ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ (Dharmasthala Mass Burials Case) ಸಂಬಂಧಿಸಿದಂತೆ ಬುರುಡೆ ಗ್ಯಾಂಗ್‌ನ ಮತ್ತೊಂದು ಮುಖವಾಡ ಕಳಚಿಬಿದ್ದಿದೆ. ಸುಪ್ರೀಂ ಕೋರ್ಟ್‌ನಲ್ಲಿ ಛೀಮಾರಿ ಹಾಕಿಸಿಕೊಂಡಿದ್ದ ಗ್ಯಾಂಗ್‌, ತಮಗಾದ ಹಿನ್ನಡೆಯನ್ನು ಮುಚ್ಚಿಟ್ಟು ದಕ್ಷಿಣ ಕನ್ನಡ (Dakshina Kannada) ಎಸ್ಪಿಗೆ ದೂರು ನೀಡಿದ್ದ ಸತ್ಯ ಈಗ ಬಟಾಬಯಲಾಗಿದೆ.

    ಸುಪ್ರೀಂ (Supreme Court) ಆದೇಶವನ್ನ ಮುಚ್ಚಿಚ್ಚು ರಾಜ್ಯ ಸರ್ಕಾರವನ್ನೇ (Karnataka Government) ಈ ಬುರುಡೆ ಗ್ಯಾಂಗ್‌ ಯಾಮಾರಿಸಿತ್ತು. ಅರ್ಜಿ ವಜಾಗೊಂಡಿದ್ದರೂ ಎಸ್‌ಐಟಿ ರಚನೆ ಮಾಡಿಸಿಕೊಂಡು ತನಿಖೆ ಮಾಡಿಸಿತ್ತು ಅನ್ನೋ ರಹಸ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಗಡಿಪಾರು ಆದೇಶ ಬಳಿಕ ತಿಮರೋಡಿ ಅಜ್ಞಾತ – ಇತ್ತ ಚಿನ್ನಯ್ಯನ 15, 16ನೇ ವಿಡಿಯೋ ರಿಲೀಸ್

    ಸುಪ್ರೀಂ ಕೋರ್ಟ್ ಆದೇಶ ಮುಚ್ಚಿಟ್ಟು ಮೋಸ
    ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡುವುದಕ್ಕೆ ಮುನ್ನವೇ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್‌ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಆದ್ರೆ ಮೇ 5ರಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ, ನ್ಯಾ.ಸತೀಶ್ ಚಂದ್ರ ನೇತೃತ್ವದ ಪೀಠ ಅರ್ಜಿ ವಜಾ ಮಾಡಿತ್ತು. ಆದ್ರೂ ಇದನ್ನ ಮುಚ್ಚಿಟ್ಟು ಬುರುಡೆ ಗ್ಯಾಂಗ್‌ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಎಸ್ಪಿಗೂ ದೂರು ನೀಡಲಾಗಿತ್ತು. ಇದನ್ನೂ ಓದಿ: ತಿಮರೋಡಿ ಬಳಿಗೆ ನಮ್ಮನ್ನ ಕರೆದುಕೊಂಡು ಹೋಗಿದ್ದೇ ಸೌಜನ್ಯ ಮಾವ: ಚಿನ್ನಯ್ಯನ 2ನೇ ಪತ್ನಿ ಬಾಂಬ್‌

    ಎಸ್‌ಐಟಿ ರಚನೆ ಮಾಡುವಂತೆ ಅರ್ಜಿ ಸಲ್ಲಿಸಿದ್ದ ಗ್ಯಾಂಗ್‌
    ಕಳೆದ ಏಪ್ರಿಲ್‌ 30 ರಂದು ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ ರಚನೆ ಮಾಡುವಂತೆ ಒತ್ತಾಯಿಸಿ ಬುರುಡೆ ಗ್ಯಾಂಗ್‌ ಅರ್ಜಿ ಸಲ್ಲಿಕೆ ಮಾಡಿತ್ತು. ಆದ್ರೆ ಮೇ 5ರಂದೇ ಸುಪ್ರೀಂ ಕೋರ್ಟ್‌ ಬುರುಡೆ ಗ್ಯಾಂಗ್‌ಗೆ ಛೀಮಾರಿ ಹಾಕಿ ಅರ್ಜಿ ವಜಾಗೊಳಿಸಿತ್ತು. ಇದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಕಾಣುತ್ತಿಲ್ಲ, ವೈಯಕ್ತಿಕ ಹಿತಾಸಕ್ತಿ ಕಾಣಿಸುತ್ತಿದೆ. ಇದು ಪೈಸಾ ಇಂಟರೆಸ್ಟ್ ಲಿಟಿಗೇಷನ್, ಪೊಲಿಟಿಕಲ್ ಇಂಟರೆಸ್ಟ್ ಲಿಟಿಗೇಷನ್, ಪ್ರೈವೇಟ್ ಇಂಟರೆಸ್ಟ್ ಲಿಟಿಗೇಷನ್ ಎಂದು ಬುರುಡೆ ಗ್ಯಾಂಗ್‌ಗೆ ತಪರಾಕಿ ಹಾಕಿತ್ತು. ನಾಚಿಕೆ ಮಾನಾ ಮರ್ಯಾದೆ ಎಲ್ಲವನ್ನೂ ಬಿಟ್ಟು ಬಂದು ದೂರು ನೀಡಿದ್ದೀರಿ ಎಂದು ಗ್ಯಾಂಗನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಸಾರಾಸಗಟಾಗಿ ಅರ್ಜಿಯನ್ನ ತಿರಸ್ಕರಿಸಿತ್ತು.

    ಇದೆಲ್ಲವನ್ನೂ ಮುಚ್ಚಿಟ್ಟಿದ್ದ ಬುರುಡೆ ಗ್ಯಾಂಗ್‌ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಬಳಿಕ ಎಸ್ಪಿಗೂ ದೂರು ನೀಡಿ ಪ್ರಕರಣ ಮುನ್ನೆಲೆಗೆ ತಂದಿದೆ ಅನ್ನೋದು ಈಗ ಬಯಲಾಗಿದೆ. ಇದನ್ನೂ ಓದಿ: ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ – ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್‌ ಪ್ಲ್ಯಾನ್‌?

  • ತಿಮರೋಡಿ ಬಳಿಗೆ ನಮ್ಮನ್ನ ಕರೆದುಕೊಂಡು ಹೋಗಿದ್ದೇ ಸೌಜನ್ಯ ಮಾವ: ಚಿನ್ನಯ್ಯನ 2ನೇ ಪತ್ನಿ ಬಾಂಬ್‌

    ತಿಮರೋಡಿ ಬಳಿಗೆ ನಮ್ಮನ್ನ ಕರೆದುಕೊಂಡು ಹೋಗಿದ್ದೇ ಸೌಜನ್ಯ ಮಾವ: ಚಿನ್ನಯ್ಯನ 2ನೇ ಪತ್ನಿ ಬಾಂಬ್‌

    – ಮುಂದೆ ತಾನಾಸಿ, ಚಿನ್ನಯ್ಯ ಅಕ್ಕನ ವಿಡಿಯೋ ಕೂಡ ವೈರಲ್ ಮಾಡ್ತಾರೆ; ಕಳವಳ

    ಚಾಮರಾಜನಗರ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ (Dharmasthala Case) ಆರಂಭದಿಂದಲೂ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಶುಕ್ರವಾರ (ಸೆ.19) ಮಹೇಶ್‌ಶೆಟ್ಟಿ ತಿಮರೋಡಿ ಆರೋಪಿ ಚಿನ್ನಯ್ಯನ ಜೊತೆ ಮಾತನಾಡಿದ್ದ ಒಂದು ವರ್ಷದ ಹಿಂದಿನ ವಿಡಿಯೋವೊಂದು ರಿಲೀಸ್‌ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿರುವ ಚಿನ್ನಯ್ಯನ 2ನೇ ಪತ್ನಿ ಹೊಸ ಬಾಂಬ್‌ ಸಿಡಿಸಿದ್ದಾರೆ. ವಿಠಲ ಗೌಡನೇ ನಮ್ಮನ್ನ ತಿಮರೋಡಿ (Mahesh Shetty Thimarody) ಮನೆಗೆ ಕರೆದುಕೊಂಡು ಹೋಗಿದ್ದು ಅಂತ ಹೇಳಿದ್ದಾರೆ.

    Dharmasthala Chinnaiah

    ʻಪಬ್ಲಿಕ್‌ ಟಿವಿʼ (Public TV) ಜೊತೆಗೆ ಮಾತನಾಡಿದ 2ನೇ ಪತ್ನಿ ಮಲ್ಲಿಕಾ, ವಿಠಲ ಗೌಡನೇ (Vittal Gowda) ನಮ್ಮನ್ನ ತಿಮರೋಡಿ ಬಳಿ ಕರೆದುಕೊಂಡು ಹೋಗಿದ್ದು. ನಾನು ಹೋದಾಗ ತಿಮರೋಡಿ ಮನೆ ಇದು ಅಂತ ಗೊತ್ತಿರಲಿಲ್ಲ. ಸ್ವಲ್ಪ ಕೆಲಸ ಉಂಟು ಅಂತ ವಿಠಲ ಕರೆದುಕೊಂಡ ಹೋದ. ಬುರುಡೆಯನ್ನು ತಮಿಳುನಾಡು, ಕೇರಳ, ಬೆಂಗಳೂರು, ದೆಹಲಿ ಅಂತ ಹೇಳ್ತಿದ್ದರು ಅಂತ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ವರ್ಷದ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಮಾತುಕತೆ – ಸ್ಫೋಟಕ ವಿಡಿಯೋ ರಿಲೀಸ್‌

    ಸೌಜನ್ಯ ಮಾವ ಬುರುಡೆ ಎತ್ತಿಕೊಂಡು ಗಿರೀಶ್ ಮಟ್ಟಣ್ಣನವರ್ ಮನೆಯಲ್ಲಿ ಮಡಗಿದ್ದರಂತೆ. ತಿಮರೋಡಿ ಆವತ್ತು ಕೆಲಸದವರ ರೀತಿ ಇದ್ದರು. ಛೆಂಬರ್ ಕೆಲಸವಿದೆ ಬನ್ನಿ ಅಂತಾ ಕರೆದುಕೊಂಡು ಹೋಗಿ ತಿಮರೋಡಿ ಮನೆಯಲ್ಲಿ ಬಿಟ್ಟರು. ಅಲ್ಲಿ ಟೀ ಕುಡಿದ್ವಿ. ಮದ್ವೆ ಆಗಿ ಎಷ್ಟು ವರ್ಷ ಆಯ್ತಮ್ಮಾ ಅಂತ ಕೇಳಿದ್ರು, 4 ವರ್ಷ ಆಯ್ತು ಅಂತ ಹೇಳಿದ್ದೆ. ಒಟ್ಟಿನಲ್ಲಿ ಈ ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವುದೇ ಈ ಗ್ಯಾಂಗ್ ಉದ್ದೇಶವಾಗಿತ್ತು. ಇದೀಗ ನಮ್ಮ ವಿಡಿಯೋ ವೈರಲ್ ಮಾಡಿದ್ದಾರೆ. ಮುಂದೆ ತಾನಾಸಿ ಹಾಗೂ ಚಿನ್ನಯ್ಯ (Chinnaiah) ಅಕ್ಕನ ವಿಡಿಯೋ ಕೂಡ ವೈರಲ್ ಮಾಡ್ತಾರೆ. ನನ್ನ ಗಂಡನನ್ನು ಈ ಪ್ರಕರಣದಲ್ಲಿ ಸಿಕ್ಕಿಸುವ ಪ್ಲ್ಯಾನ್‌ ಮಾಡಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ ಮಲ್ಲಿಕಾ.

    ನಾನು ಮಾತನಾಡದಂತೆ ಎಸ್‌ಐಟಿ ಅಧಿಕಾರಿಗಳು ಸೂಚಿಸಿದ್ದಾರೆ. ನನ್ನ ಗಂಡ ಚಿನ್ನಯ್ಯನನ್ನು ನೋಡಲೂ ಹೋಗುವುದಿಲ್ಲ. ಅವರು ಮೊದಲೇ ನೀನೂ ಬರಬಾರದು ಅಂತ ಹೇಳಿದ್ದಾರೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ – ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್‌ ಪ್ಲ್ಯಾನ್‌?

  • ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ – ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್‌ ಪ್ಲ್ಯಾನ್‌?

    ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ – ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್‌ ಪ್ಲ್ಯಾನ್‌?

    – 2023ರಲ್ಲೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ

    ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಆರಂಭದಿಂದಲೂ ಹೊಸ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಶುಕ್ರವಾರ (ಸೆ.19) ಮಹೇಶ್‌ಶೆಟ್ಟಿ ತಿಮರೋಡಿ ಆರೋಪಿ ಚಿನ್ನಯ್ಯನ ಜೊತೆ ಮಾತನಾಡಿದ್ದ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಇದೀಗ ಅದರ ಮುಂದುವರಿದ ಭಾಗ ಬಹಿರಂಗಗೊಂಡಿದೆ.

    2 ವರ್ಷಗಳ ಹಿಂದೆ 2023ರ ಆಗಸ್ಟ್‌ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಚಿನ್ನಯ್ಯ ಭೇಟಿಯಾಗಿದ್ದ ವಿಡಿಯೋ ಇದ್ದಾಗಿದ್ದು, ಶುಕ್ರವಾರ ರಿಲೀಸ್ ಮಾಡಿದ್ದ ವಿಡಿಯೋದ ಮುಂದುವರಿದ ಭಾಗವಿದು. ವಿಡಿಯೋದಲ್ಲಿ ಆರೋಪಿ ಚಿನ್ನಯ್ಯ ಸ್ಟಾಟ್ ನಂ.17ರ ಬಗ್ಗೆ ಮಾತನಾಡಿದ್ದಾನೆ. ಗೊಮ್ಮಟ ಬೆಟ್ಟದಿಂದ ಬರುವ ಫಸ್ಟ್ ಟರ್ನ್‌ನಲ್ಲಿ ಏನಿಲ್ಲ ಅಂದ್ರೂ 70ಕ್ಕೂ ಹೆಚ್ಚು ಹೆಣ ಹೂತು ಹಾಕಿದ್ದೇನೆ. ಅದು ಸ್ಮಶಾನ ಅಲ್ಲ, ಬಸ್ ಸ್ಟ್ಯಾಂಡ್‌ನಿಂದ ತರಕಾರಿ ತೆಗೆದುಕೊಂಡು ಹೋಗುವ ಗಾಡಿಯಲ್ಲಿ ಹೆಣ ತಂದು ಹೂತು ಹಾಕುತ್ತಿದ್ದೆ. ಯಾವ ನೆಲ ಒಣಗಿರುತ್ತೋ ಅದನ್ನು ತೆಗೆದು ಹೂತು ಹಾಕುತ್ತಿದ್ದೆ. ಇನ್ನೂ ನೇತ್ರಾವತಿ ತೀರದಲ್ಲಿ ಹೆಣ ಹೂತುಹಾಕಿದ್ದಕ್ಕೆ ಲೆಕ್ಕವೇ ಇಲ್ಲ.ಇದನ್ನೂ ಓದಿ: ವರ್ಷದ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಮಾತುಕತೆ – ಸ್ಫೋಟಕ ವಿಡಿಯೋ ರಿಲೀಸ್‌

    ಪ್ರಾಥಮಿಕ ಶಾಲೆಯ ಹಿಂಭಾಗದ ಭಟ್ರ ಮನೆಯ ಬಾವಿಯಲ್ಲಿ ಒಂದು ಹೆಣ ಸಿಕ್ಕಿತ್ತು. ಅಲ್ಲಿ ಏನಾಯ್ತು ಅಂತಾ ಗೊತ್ತಿಲ್ಲ. ನೇತ್ರಾವತಿಯಲ್ಲಿ ಒಂದು ಹೆಣ ತೆಗೆದಿದ್ದೆ. ಅದೇ ದಿನ ಪೊಲೀಸರು ನನಗೆ ಭಟ್ರ ಮನೆಗೆ ಕರೆದುಕೊಂಡು ಹೋದರು. ಅಲ್ಲಿ ಕೇಳಿದ್ರೆ ಹುಡುಗಿ ಫೇಲ್ ಆಗಿದ್ದಕ್ಕೆ ಬಾವಿಗೆ ಹಾರಿದ್ದಳು ಎಂದಿದ್ದರು. ನಾನು ಹೆಣ ಮೇಲೆ ಹಾಕಿ ವಾಪಾಸ್ ಬಂದೆ. ಜೊತೆಗೆ ಬಿಳಿ ಸೀರೆಯ ಕೇರಳ ಮೂಲದ ಹೆಂಗಸಿನ ಹೆಣವೊಂದನ್ನು ಹೂತು ಹಾಕಿದ್ದೇನೆ ಎಂದಿದ್ದಾನೆ.

    ವಿಡಿಯೋದ ಮೊದಲ ಭಾಗದಲ್ಲೇನಿದೆ?
    ಗುಂಡಿ ತೆಗೆದು ಹೆಣ ಹೂಳುತ್ತಿದ್ದೆ. ನೇತ್ರಾವತಿ ಸ್ನಾನಘಟ್ಟ ಸರ್ಕಾರಿ ಜಾಗ ಎಂದವರಿಗೆ ರಕ್ತ ಬರೋ ಹಾಗೆ ನನ್ನ ಹತ್ತಿರ ಹೊಡೆಸುತ್ತಿದ್ದರು. ಒಂದು ಹೆಣವನ್ನು ಹೂಳುವಾಗ ಡಾಕ್ಟರ್ ಬರದೇ ಕಾಂಪೌಂಡರ್ ಪೋಸ್ಟ್ ಮಾರ್ಟಮ್ ಮಾಡಿದ್ದ ಎಂದಿದ್ದಾನೆ.

    ಸೌಜನ್ಯ ಅತ್ಯಾಚಾರ ಕೊಲೆ ವಿಚಾರ ನಾವು ಬೇರೆ ಕಡೆ ಮಾತನಾಡುತ್ತೇವೆ ಅಂತಾ ನಮ್ಮನ್ನು ಜಾಗ ಖಾಲಿ ಮಾಡಿಸಿದ್ರು. ಅಲ್ಲದೇ ಧರ್ಮಸ್ಥಳದವರು 3.5 ಲಕ್ಷ ರೂ. ಕೊಡಬೇಕಿತ್ತು. 500ರ ನೋಟಿನ 5 ಕಟ್ಟು ತಂದು ಅದರಲ್ಲಿ ಸ್ವಲ್ಪ ಮಾತ್ರ ಕೊಟ್ಟು ಜಾಗ ಖಾಲಿ ಮಾಡಿಸಿದ್ರು. ತುಂಬಾ ಅನ್ಯಾಯ ಮಾಡಿದ್ರು ಅಂತಾ ತಿಮರೋಡಿ ಬಳಿ ಚಿನ್ನಯ್ಯ ಹೇಳಿಕೊಂಡಿದ್ದ.ಇದನ್ನೂ ಓದಿ: ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು – ಇಂದು ಎರಡನೇ ದಿನದ ಶೋಧ ಕಾರ್ಯ

    2 ವರ್ಷಗಳ ಹಿಂದೆಯೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ
    ಇನ್ನೂ ಮ್ಯಾಜಿಸ್ಟ್ರೇಟ್ ಮುಂದೆ ತಪ್ಪೊಪ್ಪಿಗೆ ನೀಡಲು ಬಂದಿದ್ದ ಚಿನ್ನಯ್ಯನ ಸ್ಫೋಟಕ ಮಾಹಿತಿ ಬಹಿರಂಗ ಆಗಿದೆ. ಚಿನ್ನಯ್ಯ ಧರ್ಮಸ್ಥಳಕ್ಕೆ ತಿಂಗಳ ಹಿಂದಷ್ಟೇ ಬಂದಿಲ್ಲ. ಎರಡು ವರ್ಷದ ಹಿಂದೆಯೇ ಬಂದಿದ್ದ ಎನ್ನಲಾಗಿದೆ. ಇದಕ್ಕೆ ನಿರಂತರವಾಗಿ ಎರಡು ವರ್ಷದಿಂದ ಪ್ಲ್ಯಾನ್‌ ನಡೆಸಲಾಗಿತ್ತು ಅಂತ ಸ್ಪಷ್ಟವಾದ ಮಾಹಿತಿ ಸಿಕ್ಕಿದೆ. ಚಿನ್ನಯ್ಯ ಎರಡು ವರ್ಷದ ಹಿಂದೆ ಬಂದಿದ್ದಾನೆ ಅನ್ನೋದಕ್ಕೆ ಟೆಕ್ನಿಕಲ್ ಎವಿಡೆನ್ಸ್ ಜೊತೆಗೆ ಚಿನ್ನಯ್ಯ ತಪ್ಪೊಪ್ಪಿಗೆಯೂ ಸಹ ಪ್ರಕರಣಕ್ಕೆ ಬಲವಾದ ಸಾಕ್ಷ್ಯ ಸಿಕ್ಕಿದೆ.

    ಅದೇ ಗ್ಯಾಂಗ್ ಜೊತೆಯಲ್ಲಿಯೇ ವಾಸವಿದ್ದ ಅನ್ನೋದು ತನಿಖೆಯಲ್ಲಿ ಬಹಿರಂಗ ಆಗಿದೆ. ಇತ್ತ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸಿಕ್ಕ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ. ಮಹೇಶ್ ಶೆಟ್ಟಿ ಮನೆಯಲ್ಲಿ ಇಲ್ಲದ ಕಾರಣ ಉಜಿರೆಯ ಮನೆ ಗೋಡೆಗೆ ನೋಟಿಸ್ ಅಂಟಿಸಿ, ಸೆಪ್ಟೆಂಬರ್ 21ಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

    ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಲೈಸೆನ್ಸ್ ಹೊಂದಿದ್ದಾರೆಯೇ ಇಲ್ಲವೇ ಎಂಬುದನ್ನು ಬೆಳ್ತಂಗಡಿ ಪೊಲೀಸರು ಪರಿಶೀಲನೆ ಮಾಡ್ತಿದ್ದಾರೆ. ಲೈಸೆನ್ಸ್ ಇಲ್ಲ ಎಂಬುದು ಖಾತ್ರಿಯಾದ್ರೆ ತಿಮರೋಡಿ ಬಂಧಿಸುವ ಸಾಧ್ಯತೆ ಇದೆ. ಈ ಮಧ್ಯೆ ಎಸ್‌ಐಟಿ ಬುಲಾವ್ ಮೇರೆಗೆ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ವಕೀಲ ಕೇಶವ ಗೌಡ ಬೆಳಾಲು ವಿಚಾರಣೆಗೆ ಹಾಜರಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಪರ ಹಾಗೂ ಬುರುಡೆ ಕೇಸ್ ಬಗ್ಗೆ ಈ ಇಬ್ಬರು ಹಲವು ಹೇಳಿಕೆ ಕೊಟ್ಟಿದ್ದರು. ಹೀಗಾಗಿ ಇಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ

     

  • ವರ್ಷದ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಮಾತುಕತೆ – ಸ್ಫೋಟಕ ವಿಡಿಯೋ ರಿಲೀಸ್‌

    ವರ್ಷದ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಮಾತುಕತೆ – ಸ್ಫೋಟಕ ವಿಡಿಯೋ ರಿಲೀಸ್‌

    – ಬುರುಡೆ ಷಡ್ಯಂತ್ರದ ಹಿಂದಿನ ರಹಸ್ಯ ಬಯಲಾಯ್ತಾ..?
    – 2 ವರ್ಷಗಳ ಹಿಂದೆಯೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ (Dharmasthala Case) ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರೋಪಿ ಚಿನ್ನಯ್ಯ ಜೊತೆ ಮಹೇಶ್‌ಶೆಟ್ಟಿ ತಿಮರೋಡಿ (Mahesh Shetty thimarody) ಭೇಟಿಯಾದ ವಿಡಿಯೋ ಬಹಿರಂಗಗೊಂಡಿದೆ.

    ತಿಮರೋಡಿ ಮನೆಯಲ್ಲಿ ವರ್ಷದ ಹಿಂದೆ ಭೇಟಿಯಾಗಿದ್ದ ವಿಡಿಯೋ ಇದಾಗಿದೆ. ತಿಮರೋಡಿ ಭೇಟಿ ವೇಳೆ ಹೆಣಗಳ ಹೂತ ಬಗ್ಗೆ ಚಿನ್ನಯ್ಯ (Chinnaiah) ಹೇಳಿದ್ದಾನೆ. ಗುಂಡಿ ತೆಗೆದು ಹೆಣ ಹೂಳುತ್ತಿದ್ದೆ. ನೇತ್ರಾವತಿ ಸ್ನಾನಘಟ್ಟ ಸರ್ಕಾರಿ ಜಾಗ ಎಂದವರಿಗೆ ರಕ್ತ ಬರೋ ಹಾಗೆ ನನ್ನ ಹತ್ತಿರ ಹೊಡೆಸುತ್ತಿದ್ದರು. ಒಂದು ಹೆಣವನ್ನು ಹೂಳುವಾಗ ಡಾಕ್ಟರ್ ಬರದೇ ಕಂಪೌಂಡರ್‌ ಪೋಸ್ಟ್ ಮಾರ್ಟಮ್ ಮಾಡಿದ್ದ ಎಂದಿದ್ದಾನೆ. ಇದನ್ನೂ ಓದಿ: ದಿಶಾ ಪಟಾನಿ ಮನೆ ಮುಂದೆ ಗುಂಡಿನ ದಾಳಿ – ಆರೋಪಿಗೆ ಗುಂಡೇಟು ನೀಡಿ ಬಂಧಿಸಿದ ಪೊಲೀಸರು

    ಸೌಜನ್ಯ ಅತ್ಯಾಚಾರ ಕೊಲೆ ವಿಚಾರ ನಾವು ಬೇರೆ ಕಡೆ ಮಾತನಾಡುತ್ತೇವೆ ಅಂತಾ ನಮ್ಮನ್ನು ಜಾಗ ಖಾಲಿ ಮಾಡಿಸಿದ್ರು. ಅಲ್ಲದೇ ಧರ್ಮಸ್ಥಳದವರು 3.5 ಲಕ್ಷ ಹಣ ಕೊಡಬೇಕಿತ್ತು. 500ರ ನೋಟಿನ 5 ಕಟ್ಟು ತಂದು ಅದರಲ್ಲಿ ಸ್ವಲ್ಪ ಮಾತ್ರ ಕೊಟ್ಟು ಜಾಗ ಖಾಲಿ ಮಾಡಿಸಿದ್ರು. ತುಂಬಾ ಅನ್ಯಾಯ ಮಾಡಿದ್ರು ಅಂತಾ ತಿಮರೋಡಿ ಬಳಿ ಚಿನ್ನಯ್ಯ ಹೇಳಿಕೊಂಡಿದ್ದ. 2023ರ ಆಗಸ್ಟ್‌ನಲ್ಲಿ ಇಷ್ಟೆಲ್ಲ ಮಾತುಕತೆ ನಡೆದಿತ್ತು ಎಂಬ ಸತ್ಯವನ್ನು ವಿಡಿಯೋ ಬಯಲು ಮಾಡಿದೆ.

    2 ವರ್ಷಗಳ ಹಿಂದೆಯೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ
    ಇನ್ನೂ ಮ್ಯಾಜಿಸ್ಟ್ರೇಟ್ ಮುಂದೆ ತಪ್ಪೊಪ್ಪಿಗೆ ನೀಡಲು ಬಂದಿದ್ದ ಚಿನ್ನಯ್ಯನ ಬಳಿ ಸ್ಫೋಟಕ ಮಾಹಿತಿ ಬಹಿರಂಗ ಆಗಿದೆ. ಚಿನ್ನಯ್ಯ ಧರ್ಮಸ್ಥಳಕ್ಕೆ ತಿಂಗಳ ಹಿಂದಷ್ಟೇ ಬಂದಿಲ್ಲ. ಎರಡು ವರ್ಷದ ಹಿಂದೆಯೇ ಬಂದಿದ್ದ ಎನ್ನಲಾಗಿದೆ. ಇದಕ್ಕೆ ನಿರಂತರವಾಗಿ ಎರಡು ವರ್ಷದಿಂದ ಪ್ಲಾನ್ ನಡೆಸಲಾಗಿತ್ತು ಅಂತ ಸ್ಪಷ್ಟವಾದ ಮಾಹಿತಿ ಸಿಕ್ಕಿದೆ. ಚಿನ್ನಯ್ಯ ಎರಡು ವರ್ಷದ ಹಿಂದೆ ಬಂದಿದ್ದಾನೆ ಅನ್ನೋದಕ್ಕೆ ಟೆಕ್ನಿಕಲ್ ಎವಿಡೆನ್ಸ್ ಜೊತೆಗೆ ಚಿನ್ನಯ್ಯ ತಪ್ಪೊಪ್ಪಿಗೆಯೂ ಸಹ ಪ್ರಕರಣಕ್ಕೆ ಬಲವಾದ ಸಾಕ್ಷ್ಯ ಸಿಕ್ಕಿದೆ.

    ಅದೇ ಗ್ಯಾಂಗ್ ಜೊತೆಯಲ್ಲಿಯೇ ವಾಸವಿದ್ದ ಅನ್ನೋದು ತನಿಖೆಯಲ್ಲಿ ಬಹಿರಂಗ ಆಗಿದೆ. ಇತ್ತ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸಿಕ್ಕ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ. ಮಹೇಶ್ ಶೆಟ್ಟಿ ಮನೆಯಲ್ಲಿ ಇಲ್ಲದ ಕಾರಣ ಉಜಿರೆಯ ಮನೆ ಗೋಡೆಗೆ ನೋಟೀಸ್ ಅಂಟಿಸಿ, ಸೆಪ್ಟೆಂಬರ್ 21ಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ

    ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಲೈಸೆನ್ಸ್ ಹೊಂದಿದ್ದಾರೆಯೇ ಇಲ್ಲವೇ ಎಂಬುದನ್ನು ಬೆಳ್ತಂಗಡಿ ಪೊಲೀಸರು ಪರಿಶೀಲನೆ ಮಾಡ್ತಿದ್ದಾರೆ. ಲೈಸೆನ್ಸ್ ಇಲ್ಲ ಎಂಬುದು ಖಾತ್ರಿಯಾದ್ರೆ ತಿಮರೋಡಿ ಬಂಧಿಸುವ ಸಾಧ್ಯತೆ ಇದೆ. ಈ ಮಧ್ಯೆ ಎಸ್‌ಐಟಿ ಬುಲಾವ್ ಮೇರೆಗೆ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ವಕೀಲ ಕೇಶವ ಗೌಡ ಬೆಳಾಲು ವಿಚಾರಣೆಗೆ ಹಾಜರಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಪರ ಹಾಗೂ ಬುರುಡೆ ಕೇಸ್ ಬಗ್ಗೆ ಈ ಇಬ್ಬರು ಹಲವು ಹೇಳಿಕೆ ಕೊಟ್ಟಿದ್ದರು. ಹೀಗಾಗಿ ಇಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು – ಇಂದು ಎರಡನೇ ದಿನದ ಶೋಧ ಕಾರ್ಯ

  • ಸೌಜನ್ಯ ಮಾವ ವಿಠಲ ಗೌಡ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರಿಂದ ಎಸ್‌ಐಟಿಗೆ ದೂರು

    ಸೌಜನ್ಯ ಮಾವ ವಿಠಲ ಗೌಡ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರಿಂದ ಎಸ್‌ಐಟಿಗೆ ದೂರು

    ಮಂಗಳೂರು: ಸೌಜನ್ಯ ಮಾವ ವಿಠಲ ಗೌಡ (Vittal Gowda) ವಿರುದ್ಧ ಧರ್ಮಸ್ಥಳ ಗ್ರಾಮಸ್ಥರು ಎಸ್‌ಐಟಿಗೆ ದೂರು ನೀಡಿದ್ದಾರೆ.

    ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಧರ್ಮಸ್ಥಳ ಗ್ರಾಮಸ್ಥ ಸಂದೀಪ್ ರೈ ದೂರು ಕೊಟ್ಟಿದ್ದಾರೆ. ತನಿಖಾ ಹಂತದಲ್ಲಿ ವಿಠಲ ಗೌಡನಿಂದ ಎಸ್ಐಟಿ ತನಿಖೆ ದಾರಿ ತಪ್ಪಿಸುತ್ತಿದ್ದಾರೆಂದು ಆರೋಪ ಹೊರಿಸಲಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ

    ವಿಚಾರಣೆ ಮುಗಿಸಿ ಹೊರಬಂದು ವಿಡಿಯೋ ಹರಿಬಿಟ್ಟಿದ್ದಾರೆ. ಎಸ್ಐಟಿ ಯಾವುದೇ ಮಾಹಿತಿ ನೀಡದೇ ಇದ್ದರೂ ವಿಡಿಯೋ ಹರಿಬಿಟ್ಟು ತನಿಖೆ ಹಾದಿ ತಪ್ಪಿಸುತ್ತಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

    ವಿಠಲ ಗೌಡನ ಹಿಂದೆ ಕೆಲ ವ್ಯಕ್ತಿಗಳು ಸೇರಿಕೊಂಡು ಷಡ್ಯಂತ್ರ ನಡೆಸುತ್ತಿದ್ದಾರೆ. ವಿಚಾರಣೆ ಮುಗಿಸಿ ಹೊರಗೆ ಬಂದ ಬಳಿಕ ಯೂಟ್ಯೂಬ್‌ಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ಮೂಲಕ ತನಿಖೆಯ ಹಾದಿ ತಪ್ಪಿಸಲು ವಿಠಲ ಗೌಡ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

    ಸಾಕ್ಷ್ಯ ನಾಶ ಮಾಡಲು ಸಾರ್ವಜನಿಕವಾಗಿ ಹೇಳಿಕೆ ನೀಡಿದ ಬಗ್ಗೆಯೂ ದೂರು ನೀಡಲಾಗಿದೆ. ವಿಠಲ ಗೌಡ ವಿರುದ್ಧ ತನಿಖೆ ನಡೆಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ಸ್ವೀಕರಿಸಿರುವ ಎಸ್‌ಐಟಿ ಅಧಿಕಾರಿಗಳು ಸ್ವೀಕೃತಿ ನೀಡಿದ್ದಾರೆ.

  • ಬಂಗ್ಲೆಗುಡ್ಡೆ ಅರಣ್ಯದಲ್ಲಿ ಎಸ್‌ಐಟಿಯಿಂದ ಅಸ್ಥಿಪಂಜರದ ಶೋಧ ಕಾರ್ಯ

    ಬಂಗ್ಲೆಗುಡ್ಡೆ ಅರಣ್ಯದಲ್ಲಿ ಎಸ್‌ಐಟಿಯಿಂದ ಅಸ್ಥಿಪಂಜರದ ಶೋಧ ಕಾರ್ಯ

    – ಕಾಡಿನಿಂದ ಬುರುಡೆ ತಂದಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ಹೇಳಿದ್ದ ವಿಠಲ್ ಗೌಡ

    ಮಂಗಳೂರು: ಧರ್ಮಸ್ಥಳ (Dharmasthala) ಗ್ರಾಮದ ಬಂಗ್ಲೆಗುಡ್ಡೆ (Banglegudde) ರಹಸ್ಯ ಭೇದಿಸಲು ಎಸ್‌ಐಟಿ ಮುಂದಾಗಿದೆ. ಬಂಗ್ಲೆಗುಡ್ಡೆದ ದಟ್ಟಾರಣ್ಯದಲ್ಲಿ ಇಂದು ಮಹಜರಿಗೆ ಎಸ್‌ಐಟಿ ಹೋಗಿದೆ.

    ಅರಣ್ಯ ಇಲಾಖೆ ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಮಹಜರಿಗೆ ಹಾಜರಿರಲು ಸೂಚನೆ ನೀಡಲಾಗಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದಲ್ಲಿ ಮಹಜರು ಪ್ರಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ

    ಭೂಮಿಯ ಮೇಲ್ಭಾಗದಲ್ಲಿರುವ ಅಸ್ಥಿಪಂಜರಗಳನ್ನ ಮಹಜರು ನಡೆಸಿ ತೆಗೆಯುವ ಸಾಧ್ಯತೆ ಇದೆ. ಬಂಗ್ಲೆಗುಡ್ಡೆಯಲ್ಲಿ ಭೂಮಿ ಅಗೆದು ಸ್ಥಳ ಪರಿಶೋಧನೆ ನಡೆಸೋದಿಲ್ಲ. ವಿಠಲ್ ಗೌಡ ಬುರುಡೆ ತಂದ ಹಾಗೂ ಅಡಗಿಸಿಟ್ಟಿದ್ದ ಸ್ಥಳದ ಸುತ್ತ ಎಸ್‌ಐಡಿ ಮಹಜರು ಮಾಡಲಿದೆ.

    ಬಂಗ್ಲೆಗುಡ್ಡೆ ಕಾಡಿನಿಂದ ಬುರುಡೆ ತಂದಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ವಿಠಲ್ ಗೌಡ ಹೇಳಿಕೆ ನೀಡಿದ್ದ. ಬುರುಡೆ ತಂದ ಹಾಗೂ ಅಡಗಿಸಿಟ್ಟ ಜಾಗದಲ್ಲಿ ಎರಡು ಬಾರಿ ಮಹಜರು ನಡೆಸಲಿದೆ. ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಮಾನವನ ಕಳೇಬರ ಇದೆ ಎಂದು ಹೇಳಿದ್ದ. ಮಹಜರು ವೇಳೆ ಸಾಕಷ್ಟು ಅಸ್ಥಿಪಂಜರ ಕಾಣಸಿಕ್ಕಿದೆ ಎಂದಿದ್ದ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ – ಬಂಗ್ಲೆ ಗುಡ್ಡ ಕಾಡಿನಲ್ಲಿ 3 ಅಸ್ಥಿಪಂಜರ ಪತ್ತೆ

    ನೇತ್ರಾವತಿ ಸ್ನಾನಘಟ್ಟದ ಬಳಿಯಿಂದ ಬಂಗ್ಲೆಗುಡ್ಡೆಗೆ ತಂಡ ತೆರಳಿದೆ. ಸೋಕೊ ತಂಡ, ಅರಣ್ಯ ಇಲಾಖೆ ಅಧಿಕಾರಿ-ಸಿಬ್ಬಂದಿ, ಮೆಟಲ್ ಡಿಟೆಕ್ಟರ್ ತಂಡ ಸಾಥ್ ನೀಡಿದೆ. ನೇತ್ರಾವತಿ ಸ್ನಾನಘಟ್ಟದ ಬಳಿಯ ಅರಣ್ಯ ಪ್ರವೇಶದಿಂದಲೇ ಶೋಧ ಆರಂಭವಾಗಲಿದೆ. 13 ಎಕರೆ ವಿಸ್ತೀರ್ಣದಲ್ಲಿರೋ ಬಂಗ್ಲೆಗುಡ್ಡೆ ಪೂರ್ತಿ ಎಸ್‌ಐಟಿ ಶೋಧ ನಡೆಸಲಿದೆ.

  • ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ – ಬಂಗ್ಲೆ ಗುಡ್ಡ ಕಾಡಿನಲ್ಲಿ 3 ಅಸ್ಥಿಪಂಜರ ಪತ್ತೆ

    ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ – ಬಂಗ್ಲೆ ಗುಡ್ಡ ಕಾಡಿನಲ್ಲಿ 3 ಅಸ್ಥಿಪಂಜರ ಪತ್ತೆ

    ಮಂಗಳೂರು/ಬೆಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣ (Dharmasthala Mass Burial Case) ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಪ್ರಕರಣದ ಸೂತ್ರಧಾರಿಗಳು ಅಂತ ಕರೆಸಿಕೊಂಡವರನ್ನು ಎಸ್‌ಐಟಿ ವಿಚಾರಣೆ ಮಾಡಿ ಕಳುಹಿಸುತ್ತಿದೆ. ಈ ನಡುವೆ ಬಂಗ್ಲೆ ಗುಡ್ಡ ಕಾಡಿನಲ್ಲಿ ಮೂರು ಅಸ್ಥಿಪಂಜರ ಪತ್ತೆಯಾಗಿದ್ದು, ಎಸ್‌ಐಟಿ ತನಿಖೆಯನ್ನ ಮತ್ತಷ್ಟು ತೀವ್ರಗೊಳಿಸಿದೆ.

    ಬಂಗ್ಲೆ ಗುಡ್ಡ ಕಾಡಿನಲ್ಲಿ (Bangle Gudda Forest) ಮಾನವನ ಬುರುಡೆಗಳು ಪತ್ತೆಯಾಗಿವೆ. ಮೂರು ಬುರುಡೆಗಳಲ್ಲಿ 1 ಗಂಡಸಿನ ಬುರುಡೆ ಅನ್ನೋದು ಖಾತ್ರಿಯಾಗಿದೆ. ಆದಾಗ್ಯೂ ಮೂರು ಬುರುಡೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳಿಸಿ ಖಚಿತಪಡಿಸಿಕೊಳ್ಳಲು ಎಸ್‌ಐಟಿ ಸಿದ್ಧತೆ ನಡೆದಿದೆ. ಮೂರು ಬುರುಡೆಗಳು ಭೂಮಿಯ ಮೇಲ್ಪದರದಲ್ಲೇ ಪತ್ತೆಯಾದ ಕಾರಣ, ಎಸ್‌ಐಟಿ ತನಿಖೆಯನ್ನ ಇನ್ನಷ್ಟು ತೀವ್ರಗೊಳಿಸಿದೆ. ಇದನ್ನೂ ಓದಿ: ನಮ್ಮ ಮೇಲೆ ಬಂದಿರುವ ಅಪವಾದಗಳು ಓಡಿ ಹೋಗುತ್ತವೆ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    ಇಂದು ಮತ್ತೆ ಜಯಂತ್ & ಮಟ್ಟಣ್ಣನವರ್ ವಿಚಾರಣೆ
    ಇನ್ನೂ ಪ್ರಕರಣದ ಆರಂಭದಲ್ಲಿ ಚಿನ್ನಯ್ಯ ತಂದ ಬುರುಡೆ ಎಲ್ಲಿಂದ ತಂದ ಎಂಬ ಪ್ರಶ್ನೆಗೆ ಇದೀಗ ಎಸ್‌ಐಟಿ ಉತ್ತರ ಕಂಡುಹಿಡಿದಿದೆ. ಬಂಗ್ಲೆ ಗುಡ್ಡ ಕಾಡಿನಿಂದಲೇ ಚಿನ್ನಯ್ಯ ಬುರುಡೆ ತಂದಿದ್ದು ಅದಕ್ಕೆ ಸಾಕ್ಷಿ ನಾನೇ ಅಂತಾ ವಿಠಲಗೌಡ ಒಪ್ಪಿಕೊಂಡಿದ್ದಾರೆ. ಈ ಹಿನ್ನಲೆ ಎಸ್‌ಐಟಿ ಮತ್ತೆ ವಿಠಲಗೌಡನನ್ನು ಕರೆದೊಯ್ದು ಬಂಗ್ಲೆ ಗುಡ್ಡ ಕಾಡಿನಲ್ಲಿ ಮಹಜರು ನಡೆಸಿತ್ತು. ಪ್ರಕರಣದ ಸೂತ್ರಧಾರಿಗಳು ಅಂತ ಕರೆಸಿಕೊಂಡವರ ವಿಚಾರಣೆಯನ್ನ ಎಸ್‌ಐಟಿ ತೀವ್ರಗೊಳಿಸಿದೆ. ಆದ್ರೆ ಯಾರ ಮೇಲೂ ಎಸ್‌ಐಟಿಗೆ ಪ್ರಬಲ ಸಾಕ್ಷ್ಯ ಲಭ್ಯವಾಗುತ್ತಿಲ್ಲ.

    ಇನ್ನು ಇಂದು ಸಹ ಜಯಂತ್ ಮತ್ತು ಗಿರೀಶ್ ಮಟ್ಟಣ್ಣನವರ್ (Girish Mattannavar) ವಿಚಾರಣೆ ನಡೆಯಲಿದೆ. ನಿನ್ನೆ ವಿಚಾರಣೆ ಮುಗಿಸಿ ಹೊರಟ ವೇಳೆ ಮಾತಾಡಿದ ಜಯಂತ್, ನನಗೆ ಎಸ್‌ಐಟಿ ಹೊಡೆದಿಲ್ಲ. ಅವರು ಕೇಳುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ. ಕಾನೂನು ವಿಚಾರದಲ್ಲಿ ನಾನು ತಪ್ಪು ಮಾಡಿದ್ರೆ ಖಂಡಿತಾ ಶಿಕ್ಷೆ ಅನುಭವಿಸೋಕೆ ತಯಾರಿದ್ದೇನೆ. ತನಿಖೆಯಲ್ಲಿ ಸತ್ಯ ಹೊರಬರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಿನ್ನಯ್ಯ ಹೇಳಿದ್ದು ನೂರಕ್ಕೆ ನೂರು ಸತ್ಯ, ಹೆಣಗಳ ರಾಶಿಯೇ ಸಿಕ್ಕಿದೆ: ವಿಠಲ ಗೌಡ ಸ್ಫೋಟಕ ಹೇಳಿಕೆ

    ವಿಡಿಯೋ ರಿಲೀಸ್ ಮಾಡಿ ಸೌಜನ್ಯ ಮಾವ ಸ್ಫೋಟಕ ಹೇಳಿಕೆ
    ಇನ್ನೂ ಬುರುಡೆ ಕೇಸ್‌ಗೆ ಸೌಜನ್ಯ ಮಾವ ವಿಠಲ್‌ಗೌಡ ಸ್ಫೋಟಕ ತಿರುವು ಕೊಟ್ಟಿದ್ದಾರೆ. ಬಂಗ್ಲೆ ಗುಡ್ಡಕ್ಕೆ ಎರಡು ಸಲ ಸ್ಥಳ ಮಹಜರಿಗೆ ನನ್ನನ್ನು ಕರೆದುಕೊಂಡು ಹೋಗಿದ್ದ ವೇಳೆ ಹೆಣಗಳ ರಾಶಿ ಸಿಕ್ಕಿದೆ. ಮೂರು ಮನುಷ್ಯರ ಕಳೆಬರಹ ಸಿಕ್ಕಿದೆ. ಚಿನ್ನಯ್ಯ ಹೇಳಿದ್ದು ನೂರಕ್ಕೆ ನೂರು ಸತ್ಯ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಯೂಟ್ಯೂಬರ್ ಸುಮಂತ್ ವಿರುದ್ಧ ದೂರು; ಹಣ ಪಡೆದಿದ್ದರೆ ಸಾಬೀತು ಮಾಡಲಿ – ಯೂಟ್ಯೂಬರ್ ಅಭಿಷೇಕ್ ಸವಾಲು

  • ನನ್ನ ಮಗ ದೋಷಮುಕ್ತನಾಗಿ ಬರುತ್ತಾನೆಂಬ ನಂಬಿಕೆ ಇದೆ: ಯೂಟ್ಯೂಬರ್ ಅಭಿಷೇಕ್ ತಾಯಿ ಮಾತು

    ನನ್ನ ಮಗ ದೋಷಮುಕ್ತನಾಗಿ ಬರುತ್ತಾನೆಂಬ ನಂಬಿಕೆ ಇದೆ: ಯೂಟ್ಯೂಬರ್ ಅಭಿಷೇಕ್ ತಾಯಿ ಮಾತು

    – ಸಮೀರ್, ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಯಾರೂ ಕೂಡ ಅಭಿಷೇಕ್‌ಗೆ ಪರಿಚಯ ಇರಲಿಲ್ಲ
    – ನನ್ನ ಮಗ ಸಮಾಜಮುಖಿ ವೀಡಿಯೋ ಅಪ್ಲೋಡ್ ಮಾಡ್ತಿದ್ದ

    ಹಾಸನ: ನನ್ನ ಮಗ ಸಮಾಜಮುಖಿ ವೀಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದ. ಅವನು ದೋಷಮುಕ್ತನಾಗಿ ಬರುತ್ತಾನೆಂಬ ನಂಬಿಕೆ ನಮಗೆ ಇದೆ ಎಂದು ಯೂಟ್ಯೂಬರ್ ಅಭಿಷೇಕ್ (Youtube Abhishek) ತಾಯಿ ಹೇಮಲತಾ ಪ್ರತಿಕ್ರಿಯಿಸಿದ್ದಾರೆ.

    ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ವಿಚಾರಣೆ ಎದುರಿಸುತ್ತಿರುವ ಪುತ್ರನ ಕುರಿತು ಮಾತನಾಡಿದ ತಾಯಿ, ನನ್ನ ಮಗ ಸೌಮ್ಯ ಸ್ವಭಾವದವನು. ಹಾಸನದ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರ್ ಓದಿದ್ದ. ಆನಂತರ ಎಡಿಟಿಂಗ್ ಯೂಟ್ಯೂಬರ್ ಆಗಿ ಕೆಲಸ ಮಾಡುತ್ತಿದ್ದ. ಸಮಾಜಮುಖಿಯಾದಂತಹ ವೀಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿದ್ದ. ಸೌಜನ್ಯ ಹಾಗೂ ಧರ್ಮಸ್ಥಳದಲ್ಲಿ ಶವಗಳ ಹೂತ ಪ್ರಕರಣ ತನಿಖೆ ಆರಂಭವಾದಾಗ ಅಲ್ಲಿಗೆ ಹೋಗಿದ್ದ. ಅವನಿಗೆ ಮೊದಲು ಚಂದನ್‌ಗೌಡ ಪರಿಚಯವಿತ್ತು. ಸುಮಂತ್ ಒಂದೆರಡು ಬಾರಿ ಅವನಿಗೆ ಸಿಕ್ಕಿದ್ದ ಅಷ್ಟೆ. ಸಮೀರ್, ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಯಾರೂ ಅವನಿಗೆ ಪರಿಚಯ ಇರಲಿಲ್ಲ. ಧರ್ಮಸ್ಥಳಕ್ಕೆ ಹೋದಾಗ ಅಲ್ಲಿ ಅವನಿಗೆ ಪರಿಚಯವಾಗಿರಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ, ಯಾರೂ ಹಣದ ಆಮಿಷ ಒಡ್ಡಿಲ್ಲ: ಯೂಟ್ಯೂಬರ್ ಅಭಿಷೇಕ್ ತಂದೆ

    ನನ್ನ ಮಗನಿಂದ ಮಾಹಿತಿ ಪಡೆಯಲು ಎಸ್‌ಐಟಿ ಅವರು ಕರೆದಿದ್ದಾರೆ. ನನ್ನ ಮಗನ ಮೇಲೆ ಹಲ್ಲೆ ಆದಾಗ ಭಯವಾಗಿತ್ತು. ವಾಪಸ್ ಬಂದುಬಿಡು ಅಂತ ಹೇಳೋಣ ಅನ್ನಿಸಿತ್ತು. ಅವನು ಯಾವುದೇ ತಪ್ಪು ಮಾಡದ ಕಾರಣ ಸುಮ್ಮನಿದ್ದೆವು. ನನ್ನ ಮಗ ಯಾರ ಜೊತೆಯೂ ಬೆರೆಯುತ್ತಿರಲಿಲ್ಲ. ಅವನಾಯ್ತು, ಅವರ ಕೆಲಸವಾಯ್ತು ಅಷ್ಟೆ ಎಂದು ಹೇಳಿದ್ದಾರೆ.

    ನಾನು ನನ್ನ ದುಡ್ಡಿನಿಂದ ಮೊಬೈಲ್, ಕ್ಯಾಮೆರಾ ಕೊಡಿಸಿದ್ದೆವು. ಅವನ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಎಸ್‌ಐಟಿ ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ. ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ. ಅವನ ಬೆಂಬಲಕ್ಕೆ ನಾವು ಇರುತ್ತೇವೆ. ಇದರಿಂದ ದೋಷಮುಕ್ತನಾಗಿ ಬರುತ್ತಾನೆ ಅನ್ನೋ ನಂಬಿಕೆ ಇದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯೂಟ್ಯೂಬರ್‌ ಅಭಿಷೇಕ್‌ಗೆ SIT ಫುಲ್‌ ಗ್ರಿಲ್‌ – ಲೈಕ್ಸ್, ವ್ಯೂವ್ಸ್‌ಗಾಗಿ ವಿಡಿಯೋ ಮಾಡಿದೆ ಅಂತ ತಪ್ಪೊಪ್ಪಿಗೆ