Tag: ಧರ್ಮಸ್ಥಳ ಮಂಜುನಾಥ

  • ಆಪರೇಷನ್ ಸಿಂಧೂರ ಯಶಸ್ವಿಯಾಗಲೆಂದು ವೀರೇಂದ್ರ ಹೆಗ್ಗಡೆ ವಿಶೇಷ ಪೂಜೆ

    ಆಪರೇಷನ್ ಸಿಂಧೂರ ಯಶಸ್ವಿಯಾಗಲೆಂದು ವೀರೇಂದ್ರ ಹೆಗ್ಗಡೆ ವಿಶೇಷ ಪೂಜೆ

    – ಸುರಕ್ಷಿತ ಕಾರ್ಯಾಚರಣೆಗೆ ಧರ್ಮಸ್ಥಳ ಮಂಜುನಾಥನಲ್ಲಿ ಪ್ರಾರ್ಥನೆ

    ಮಂಗಳೂರು: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ (Indian Army) ಸರ್ವರೀತಿಯಲ್ಲೂ ಯಶಸ್ಸು ಕಾಣಲಿ ಎಂದು ಡಾ.ವೀರೇಂದ್ರ ಹೆಗ್ಗಡೆ (D Veerendra Heggade) ಧರ್ಮಸ್ಥಳ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ನಮ್ಮ ಹೆಮ್ಮೆಯ ಸೈನಿಕರಿಗೆ ಯಾವುದೇ ಹಾನಿಯಿಲ್ಲದೇ ಸುರಕ್ಷಿತವಾಗಿ ಕಾರ್ಯಾಚರಣೆ ನಡೆಸುವಂತೆ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ವೀರೇಂದ್ರ ಹೆಗ್ಗಡೆ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧ: ಜಮೀರ್ ಅಹ್ಮದ್

    ಗುರುವಾರ ರಾತ್ರಿ ಪಾಕ್ ವಿರುದ್ಧ ಭಾರತ ಮಿಸೈಲ್‌ಗಳ ಮಳೆ ಸುರಿಸಿದೆ. ಈ ವೇಳೆ ಪಾಕ್ ಸಹ ದಾಳಿ ನಡೆಸಿದೆ. ಆದರೆ ಭಾರತೀಯ ಸೇನೆ ಆ ದಾಳಿಯನ್ನು ವಿಫಲಗೊಳಿಸಿದೆ. ಇದರ ಬೆನ್ನಲ್ಲೇ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಪಾಕ್ ತತ್ತರಿಸಿ ಹೋಗಿದೆ. ಇಷ್ಟಾಗಿಯೂ ಕಿತಾಪತಿ ಬಿಡದ ಪಾಕಿಸ್ತಾನ ಮತ್ತೆ ಭಾರತದ ಜಮ್ಮುವಿನ ಮೇಲೆ ದಾಳಿಗೆ ವಿಫಲಯತ್ನ ನಡೆಸಿದೆ. ಜಮ್ಮುವಿನಲ್ಲಿ ಇದುವರೆಗೆ ಪಾಕಿಸ್ತಾನದ 50ಕ್ಕೂ ಹೆಚ್ಚು ಡ್ರೋನ್ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಕೇಸ್ | NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ, ಕರಾವಳಿಗೆ ಪಾಕ್ ಸಂಪರ್ಕವಿದೆ: ಅಶೋಕ್

  • ಮೋದಿ ಕರ್ನಾಟಕಕ್ಕೆ ಇಂದೇ ಭೇಟಿ ಕೊಟ್ಟ ಮಹಾರಹಸ್ಯ ಗೊತ್ತಾ? – Public TV Super Exclusive

    ಮೋದಿ ಕರ್ನಾಟಕಕ್ಕೆ ಇಂದೇ ಭೇಟಿ ಕೊಟ್ಟ ಮಹಾರಹಸ್ಯ ಗೊತ್ತಾ? – Public TV Super Exclusive

    ಪವಿತ್ರ ಕಡ್ತಲ
    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ ಮಂಜುನಾಥ ಕ್ಷೇತ್ರ ದರ್ಶನ ಹಾಗೂ ಬೆಂಗಳೂರಿನಲ್ಲಿ ನಡೆದ ಸೌಂದರ್ಯಲಹರಿ ಕಾರ್ಯಕ್ರಮ ಹಿಂದಿನ ಮಹಾರಹಸ್ಯ ಬಯಲಾಗಿದೆ. ಧರ್ಮಸ್ಥಳಕ್ಕೆ ಮೋದಿ ಇಂದೇ ಭೇಟಿ ಕೊಡಲು ವಿಶೇಷ ಕಾರಣವಿದೆ ಎಂದು ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ. ಖ್ಯಾತ ಜ್ಯೋತಿಷಿಗಳ ಸಲಹೆಯ ಮೇರೆಗೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಬಂದಿರೋದಂತೆ.

    ಇಂದು ಶಿವ ದರ್ಶನ ಪಡೆದ್ರೆ ಅದ್ಭುತವೊಂದು ಸಂಭವಿಸಲಿದೆ. ಕಾರ್ತಿಕ ಮಾಸದ ನವಮಿ ಶ್ರೇಷ್ಠ ದಿನವಾಗಿದ್ದು ಇಂದು ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರೆ ಅತೀತ ಶಕ್ತಿ ಸಿಗಲಿದೆ. ಶಿವಶಕ್ತಿಯ ಪ್ರಾಪ್ತಿಗಾಗಿಯೇ ಮೋದಿ ಕರ್ನಾಟಕಕ್ಕೆ ಬಂದ್ರು ಎನ್ನಲಾಗಿದೆ. ಕಾರ್ತಿಕ ಮಾಸ ಅಂದ್ರೆ ಧರ್ಮಸ್ಥಳದಲ್ಲಿ ಅದು ಪುಣ್ಯ ಮಾಸ. ಇಂದು ಈಶ್ವರ ಪೂಜೆಗೆ ಸರ್ವಶ್ರೇಷ್ಠ. ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ನಡೆಯುತ್ತಿದೆ. ಜೊತೆಗೆ ಇಂದು ನವಮಿಯೂ ಹೌದು.  ನವಮಿ ಪುರಾಣದಲ್ಲೂ ಉಲ್ಲೇಖವಿದೆ. ನವಮಿಯಲ್ಲಿ ಧರ್ಮಸ್ಥಳ ಯಾತ್ರೆ ಗೆಲುವಿಗೆ ಸಹಕಾರಿ. 2014ರಲ್ಲಿ ಮೋದಿ ಅಲೆ ಇತ್ತು, ಆದರೆ ಈಗ ಶ್ರಮ ಬೇಕಾಗಿದೆ. ಅದಕ್ಕಾಗಿ ಮಂಜುನಾಥನ ಕೃಪೆ ಅತ್ಯಗತ್ಯ. ವೀರೇಂದ್ರ ಹೆಗ್ಗಡೆಯವರ ಧರ್ಮಾಧಿಕಾರಿಗಳ ಪೀಠದಿಂದಲೇ ಅವ್ರಿಗೆ ಪುಣ್ಯ ಲಭಿಸುತ್ತದೆ. ಮೋದಿಗೆ ವೈಯಕ್ತಿಕ ಸ್ವಾರ್ಥ ಇಲ್ಲ, ಅವರು ಮನೆ ಮಾಡಿಕೊಂಡಿಲ್ಲ, ಅವರು ಸನ್ಯಾಸಿ. ದೇಶದ ಒಳಿತಿಗಾಗಿ ಬಯಸುವ ಮನಸ್ಸು ಮೋದಿಯದ್ದು. ಮೋದಿ ಮುಂದಿನ ಪ್ರಯಾಣ ಸುಖವಾಗಿರುತ್ತದೆ ಎಂದು ಖ್ಯಾತ ಜ್ಯೋತಿಷಿ ದ್ವಾರಕಾನಾಥ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಬೆಂಗಳೂರಿನಲ್ಲಿ ನಡೆದ ಸೌಂದರ್ಯ ಲಹರಿ ಕಾರ್ಯಕ್ರಮದಲ್ಲಿ ಕೂಡಾ ಶಕ್ತಿದಾಯಿ ಪಾರ್ವತಿ ಆರಾಧನೆ ನಡೆಯುತ್ತಿದೆ. ಶಿವ ಪಾರ್ವತಿ ಸಾಕ್ಷಾತ್ಕಾರದಿಂದ ಮೋದಿಗೆ ಅತೀತ ಶಕ್ತಿ ಬರಲಿದೆ. ಇದು ಶಿವ ಶಕ್ತಿಯ ಮುಖಾಮುಖಿ. ಒಂದೇ ದಿನಕ್ಕೆ ಶಿವ ಪಾರ್ವತಿಯ ದರ್ಶನ ಭಾಗ್ಯ. ರಾಜಕೀಯ ಶಕ್ತಿ ಪಡೆಯಲೆಂದೇ ಮೋದಿ ಕರ್ನಾಟಕಕ್ಕೆ ಬಂದಿದ್ದಾರೆ ಎಂದು ದ್ವಾರಕಾನಾಥ್ ಮಾಹಿತಿ ನೀಡಿದ್ದಾರೆ. ಪಾರ್ವತಿ ಈಶ್ವರನ ದರ್ಶನದಿಂದ ಜಗತ್ತೆ ಗೆಲ್ಲುವ ಶಕ್ತಿ ಪ್ರಾಪ್ತಿಯಾಗುತ್ತದೆ. ಇದಕ್ಕಾಗಿ ನವಮಿ ದಿನವೇ ಪುಣ್ಯ ಕ್ಷೇತ್ರಕ್ಕೆ ನರೇಂದ್ರ ಮೋದಿ ಬಂದು ಪ್ರಾರ್ಥನೆ ಸಲ್ಲಿಸಿದ್ರು ಎನ್ನಲಾಗಿದೆ. ಶಿವ ಪಾರ್ವತಿಯ ಆರಾಧನೆ ಇಂದು ನಡೆದ್ರೆ ಜಗತ್ತನ್ನೇ ನೀಡ್ತಾರೆ. ಭಾರತ ದೇಶವನ್ನು ಮೋದಿಯ ಕೈಯಲ್ಲಿ ಇಡೋದು ಗ್ಯಾರಂಟಿ. ಮೋದಿಗೆ ವಿರೋಧಿ ಶಕ್ತಿಯಿಂದಲೂ ರಕ್ಷಣೆ ಸಿಗಲಿದೆ. ದೇಶಕ್ಕೆ ಬಂದಿರುವ ಸಂಕಷ್ಟಗಳೆಲ್ಲಾ ದೂರವಾಗುತ್ತದೆ ಎನ್ನುವುದು ಜ್ಯೋತಿಷಿಗಳ ಮಾತು.

     

     

     

  • ಧರ್ಮಸ್ಥಳದಲ್ಲಿ ನಮೋ ಮೇನಿಯಾ- ಭಾಷಣದುದ್ದಕ್ಕೂ ಹೆಗ್ಗಡೆ ಅವರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

    ಧರ್ಮಸ್ಥಳದಲ್ಲಿ ನಮೋ ಮೇನಿಯಾ- ಭಾಷಣದುದ್ದಕ್ಕೂ ಹೆಗ್ಗಡೆ ಅವರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

    ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮೋದಿ ಉಜಿರೆಯ ಕಾರ್ಯಕ್ರಮದಲ್ಲಿ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ 12 ಲಕ್ಷ ಮಹಿಳೆಯರಿಗೆ ರುಪೇ ಕಾರ್ಡ್ ವಿತರಣೆ ಮಾಡಲಾಯಿತು.

    ಧರ್ಮಾಧಿಕಾರಿಯಾಗಿ 50 ವರ್ಷ ಪೂರೈಸಿರುವ ವೀರೇಂದ್ರ ಹೆಗ್ಗಡೆ ಅವರಿಗೆ ಶಾಲು ಹೊದಿಸಿ ಮೋದಿ ಸನ್ಮಾನಿಸಿದರು. ಸನ್ಮಾನದ ಬಳಿಕ ಧರ್ಮಸ್ಥಳದ ನನ್ನ ಪ್ರೀತಿಯ ಬಂಧು ಮಹಿಳೆಯರಿಗೆ ನನ್ನ ನಮಸ್ಕಾರಗಳು. ನನ್ನ ಪ್ರೀತಿಯ ಸಹೋದರಿಯರಿಗೆ ನನ್ನ ಧನ್ಯವಾದಗಳು ಎಂದು ಕನ್ನಡದಲ್ಲಿ ಪ್ರಧಾನಿ ಮೋದಿ ಮಾತು ಆರಂಭಿಸಿದರು.

    ಇದು ನನ್ನ ಸೌಭಾಗ್ಯ ಭಗವಾನ್ ಮಂಜುನಾಥ್ ಸ್ವಾಮಿಯ ದರ್ಶನದ ಜೊತೆಗೆ ನಿಮ್ಮೆಲ್ಲರ ದರ್ಶನ ಮಾಡುವ ಭಾಗ್ಯ ದೊರೆತಿದೆ. ಕಳೆದ ವಾರ ನಾನು ಕೇದರನಾಥ್ ತೆರಳಿದ್ದೆ, ಇಂದು ದಕ್ಷಿಣ ಭಾರತದ ಮಂಜುನಾಥ ಸ್ವಾಮಿಯ ದರ್ಶನ ಪಡೆದಿರುವುದು ಅತೀವ ಆನಂದವನ್ನು ತರಿಸಿದೆ. ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಹೆಗ್ಗಡೆ ಅವರನ್ನು ಸನ್ಮಾನಿಸಲು ನಾನು ತುಂಬಾ ಚಿಕ್ಕವನು. ದೇಶದ ಜನರು ನನ್ನನ್ನು ಒಂದು ಸ್ಥಾನದಲ್ಲಿ ಕೂರಿಸಿದ್ದರಿಂದ ಇಂದು ನಾನು ಹೆಗ್ಗಡೆಯವರನ್ನು ಸನ್ಮಾನಿಸಿದ್ದೇನೆ. ಇದು ನನ್ನ ಸೌಭಾಗ್ಯ ಎಂದು ಹೇಳಿದರು.

    ಸಮಾಜದ ರಕ್ಷಣೆ: ಹೆಗ್ಗಡೆ ಅವರನ್ನು ನಾನು ಎಷ್ಟು ಬಾರಿ ನೋಡಿದರೂ ಅವರ ಮುಖದ ಮೇಲಿನ ಮುಗುಳ್ನಗೆ ಎಂದು ಹೋಗಲ್ಲ. ನಾನು ಹೆಗ್ಗಡೆವರಿಂದ ಕಲಿಯುವುದು ತುಂಬಾ ಇದೆ. ಹೆಗ್ಗಡೆ ಅವರು ಶಿಕ್ಷಣ, ಗ್ರಾಮೀಣ ಅಭಿವೃದ್ಧಿ, ಕೌಶಲ್ಯ ತರಬೇತಿ ಎಲ್ಲಾ ವಿಭಾಗಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮಾನವ ಸಂಪನ್ಮೂಲದ ಬಳಕೆಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡ ಅವರ ಪಾತ್ರ ದೇಶದ ಅಭಿವೃದ್ಧಿಯಲ್ಲಿ ಪ್ರಮುಖವಾಗಿದೆ. ದೇಶ ಬದಲಾವಣೆಯತ್ತ ಸಾಗುತ್ತಿದ್ದು, ಇಂದು 12 ಲಕ್ಷ ಮಹಿಳೆಯರು ತಮ್ಮನ್ನು ಮ್ಮ ಹಣಕಾಸಿನ ವ್ಯವಹಾರವನ್ನು ಡಿಜಿಟಲ್ ಕ್ಷೇತ್ರದತ್ತ ಆರಂಭಿಸುತ್ತಿದ್ದಾರೆ. 21 ನೇ ಶತಮಾನ ಕೌಶಲ್ಯ ಅಭಿವೃದ್ಧಿಯತ್ತ ಸಾಗುತ್ತಿದೆ. ನಮ್ಮ ಹಿರಿಯರು ಪೂರ್ವಜರು ನಮಗೆ ಸಮಾಜ ಬಿಟ್ಟು ಹೋಗಿದ್ದು, ನಾವು ನಮ್ಮ ಮುಂದಿನ ಪೀಳಿಗೆಯವರಿಗೆ ಬಿಟ್ಟು ಕೊಡಬೇಕಾಗಿದೆ. ಪರಿಸರ ಮತ್ತು ಸಮಾಜದ ರಕ್ಷಣೆ ನಮ್ಮ ಮೇಲಿದೆ ಎಂದು ತಿಳಿಸಿದರು.

    ಪರ್ ಡ್ರಾಪ್ ಮೋರ್ ಕ್ರಾಪ್: ನಾವು ಎಂದೂ ಭೂಮಿ ತಾಯಿಯ ಬಗ್ಗೆ ಯೋಚನೆ ಮಾಡುವುದಿಲ್ಲ. ನಮಗೆ ನಮ್ಮ ಲಾಭ ಮಾತ್ರ ಮುಖ್ಯವಾಗಿದೆ. ಹಲವು ಕ್ರಿಮಿನಾಶಕಗಳನ್ನು ಬಳಸುತ್ತಿದ್ದೇವೆ. ಕ್ರಿಮಿನಾಶಕಗಳ ಬಳಕೆಯ ಪ್ರಮಾಣ ಕಡಿಮೆಗೊಳಿಸಬೇಕು. 2022ರೊಳಗೆ ಯೂರಿಯಾ ಉಪಯೋಗವನ್ನು ಶೇ.50ರಷ್ಟು ಕಡಿಮೆ ಬಳಕೆ ಮಾಡುತ್ತೇವೆ ಎಂದು ಎಲ್ಲ ಕೃಷಿ ಬಾಂಧವರು ಪ್ರತಿಜ್ಞೆಯನ್ನು ಮಾಡಬೇಕಾಗಿದೆ. ಮೈಕ್ರೋ ಇರಿಗೇಷನ್ `ಪರ್ ಡ್ರಾಪ್ ಮೋರ್ ಕ್ರಾಪ್’ ಎಂಬ ಸಂಕಲ್ಪವನ್ನು ನಮ್ಮ ರೈತ ಬಾಂಧವರು ಮಾಡಬೇಕಾಗಿದೆ ಎಂದ್ರು.

    ಸಚಿವರಾದ ಅನಂತ ಕುಮಾರ್, ಡಿ. ವಿ. ಸದಾನಂದ ಗೌಡ, ಅನಂತ್ ಕುಮಾರ್ ಹೆಗಡೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಕೆ. ವಸಂತ ಬಂಗೇರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷ ರಜನೀಶ್ ಕುಮಾರ್, ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮೊದಲಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

    ಇಂದು 12.50ಕ್ಕೆ ರಸ್ತೆ ಮೂಲಕ ಧರ್ಮಸ್ಥಳ ಹೆಲಿಪ್ಯಾಡ್ ಗೆ ಪ್ರಯಾಣಿಸಿ ಹೆಲಿಕಾಪ್ಟರ್ ನಲ್ಲಿ ಮಂಗಳೂರು ವಿಮಾನ ನಿಲ್ದಾಣವಿರುವ ಬಜ್ಪೆಗೆ ಪ್ರಯಾಣಿಸಿದ್ದಾರೆ. ಮಧ್ಯಾಹ್ನ 1.10ಕ್ಕೆ ಬಜ್ಪೆಯಿಂದ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಧ್ಯಾಹ್ನ 3.30ರವರೆಗೆ ಸೌಂದರ್ಯ ಲಹರಿ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4.45ಕ್ಕೆ ಬೆಂಗಳೂರಿನಿಂದ ಬೀದರ್ ಗೆ ಪ್ರಯಾಣ ಬೆಳೆಸಿ ಸಂಜೆ 5.10ಕ್ಕೆ ಬೀದರ್-ಕಲಬುರಗಿ ರೈಲು ಲೋಕಾರ್ಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮ ಮುಗಿಸಿ ಸಂಜೆ 6.20ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

     

  • ಮೋದಿ ಧರ್ಮಸ್ಥಳ ಮಂಜುನಾಥನಿಗೆ ಹೀಗೆ ಸಲ್ಲಿಸ್ತಾರಂತೆ ಪೂಜೆ!

    ಮೋದಿ ಧರ್ಮಸ್ಥಳ ಮಂಜುನಾಥನಿಗೆ ಹೀಗೆ ಸಲ್ಲಿಸ್ತಾರಂತೆ ಪೂಜೆ!

    – ನಾಳೆ ಮೋದಿ ಕರ್ನಾಟಕ ಕಾರ್ಯಕ್ರಮದ ಸಂಪೂರ್ಣ ವಿವರ

    – ನರೇಂದ್ರ ಮೋದಿ ಪೂಜೆ ಸಲ್ಲಿಕೆ ವೇಳೆ ಯಾರಿಗೂ ಪ್ರವೇಶವಿರಲ್ಲ

    ಬೆಂಗಳೂರು/ಮಂಗಳೂರು: ನಾಳೆ ಬೆಳಗ್ಗೆ ಧರ್ಮಸ್ಥಳಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಸಂಪ್ರದಾಯ ಬದ್ಧವಾಗಿಯೇ ಪೂಜೆಯಲ್ಲೇ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಮೋದಿ ಆಪ್ತವಲಯದಿಂದ ಲಭ್ಯವಾಗಿದೆ.

    ಧರ್ಮಸ್ಥಳದ ಮಂಜುನಾಥ ಸನ್ನಿಧಿಯ ಸಂಪ್ರದಾಯದಂತೆ ಸುಮಾರು ಅರ್ಧ ಗಂಟೆಗಳ ಕಾಲ ಪೂಜಾ ವಿಧಿವಿಧಾನಗಳಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಮೋದಿಗಾಗಿ ಪಂಚೆ, ಶಲ್ಯ ರೆಡಿಯಾಗಿದ್ದು, ಇದನ್ನು ಧರಿಸಿಯೇ ಪೂಜೆ ಮಾಡಲಿದ್ದಾರೆ. ಪೂಜೆ ವೇಳೆ ಮೋದಿ ಬಿಟ್ಟು ಬೇರೆ ಸಚಿವರು, ಅಧಿಕಾರಿಗಳಿಗೆ ಎಂಟ್ರಿ ಇರಲ್ಲ. ಧರ್ಮಸ್ಥಳದ ಧರ್ಮಾಧಿಕಾರಿಗಳು, ನರೇಂದ್ರ ಮೋದಿ ಹಾಗೂ ಪುರೋಹಿತರು ಮಾತ್ರ ಪೂಜೆ ವೇಳೆ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ನಾಳೆ ಏನೇನು ನಡೆಯುತ್ತೆ?: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಮಂತ್ರಣದಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಅಲ್ಲಿ ದೇವರ ದರ್ಶನದ ಬಳಿಕ ಉಜಿರೆಗೆ ರಸ್ತೆ ಮಾರ್ಗದಲ್ಲಿ ಆಗಮಿಸಲಿದ್ದಾರೆ. ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರ ಸಮಾವೇಶದಲ್ಲಿ ಹೆಗ್ಗಡೆಯವರ ನೂತನ ಸಂಕಲ್ಪವಾದ ‘ಭೂಮಿ ತಾಯಿಯನ್ನು ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ’ ಅಭಿಯಾನವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

    ಇದೇ ವೇಳೆ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯನ್ವಯ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದ್ದು ಅವರಿಗೆ ರುಪೇ ಕಾರ್ಡ್ ಗಳನ್ನು ಮೋದಿ ವಿತರಿಸಲಿದ್ದಾರೆ. ಸ್ವ-ಸಹಾಯ ಸಂಘಗಳ ವ್ಯವಹಾರಗಳನ್ನು ಸಂಪೂರ್ಣವಾಗಿ ನಗದು ರಹಿತವಾಗಿ ಮಾಡಿ ತಂತ್ರಾಂಶ ಆಧಾರಿತ ವ್ಯವಹಾರಗಳನ್ನು ಪ್ರೇರೇಪಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ಒಪ್ಪಂದ ಮಾಡಿಕೊಳ್ಳುತ್ತಿದ್ದು ಇದಕ್ಕೆ ನಾಳೆ ಅಂಕಿತ ಬೀಳಲಿದೆ.

    ಈ ಕಾರ್ಯಕ್ರಮದಲ್ಲಿ ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ನಕ್ಸಲ್ ನಿಗ್ರಹ ದಳದವರು ಧರ್ಮಸ್ಥಳ, ಉಜಿರೆ ಮತ್ತು ಕನ್ಯಾಡಿಯಲ್ಲಿ ಶುಕ್ರವಾರ ಕೂಂಬಿಂಗ್ ಕಾರ್ಯಾಚರಣೆ ನಡೆಸಿದರು.

    ವಾಹನ ನಿಲುಗಡೆ: ಬೆಳ್ತಂಗಡಿ ಕಡೆಯಿಂದ ಬರುವವರು ಉಜಿರೆಯಲ್ಲಿ ಎಸ್.ಡಿ.ಎಂ. ಪ್ರಾಥಮಿಕ ಶಾಲೆ ಬಳಿ ಮತ್ತು ಅಜ್ಜರಕಲ್ಲು ಮೈದಾನದಲ್ಲಿ ಹಾಗೂ ಇತರರು ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ವಾಹನಗಳನ್ನು ನಿಲ್ಲಿಸಬಹುದು. ಧರ್ಮಸ್ಥಳದಿಂದ ಉಜಿರೆಗೆ ಭಾನುವಾರ ಬೆಳಿಗ್ಗೆ 9 ಗಂಟೆ ವರೆಗೆ ರಸ್ತೆ ಮೂಲಕ ವಾಹನ ಸಂಚಾರಕ್ಕೆ ಮುಕ್ತ ಅವಕಾಶವಿದೆ. 9 ಗಂಟೆ ಬಳಿಕ ಅಪರಾಹ್ನ ಎರಡು ಗಂಟೆವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಉಜಿರೆ ಹಾಗೂ ಧರ್ಮಸ್ಥಳದಲ್ಲಿ ಭಾನುವಾರ ಬೆಳಿಗ್ಗೆ 7ರಿಂದ ಅಪರಾಹ್ನ 2 ಗಂಟೆ ವರೆಗೆ ಎಲ್ಲಾ ಅಂಗಡಿಗಳನ್ನು ಮುಚ್ಚಲು ಪೊಲೀಸರು ಈಗಾಗಲೇ ಸೂಚನೆ ನೀಡಿದ್ದಾರೆ.

    ಸಾರ್ವಜನಿಕರಿಗೆ ಸೂಚನೆ: ಸಮಾರಂಭದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವಿದ್ದು ಬೆಳಿಗ್ಗೆ 10 ಗಂಟೆಗೆ ಮೊದಲು ಬಂದು ಆಸೀನರಾಗಬಹುದು. ಸಾರ್ವಜನಿಕರು ಉಜಿರೆ ಕಡೆಯಿಂದ ಬೆಳಾಲು ರಸ್ತೆ ಮೂಲಕ ಕ್ರೀಡಾಂಗಣ ಪ್ರವೇಶಿಸಬಹುದು. ವಿ.ಐ.ಪಿ. ಪಾಸ್ ಹೊಂದಿರುವವರು ಎಸ್.ಡಿ.ಎಂ. ಕಾಲೇಜು ಬಳಿ ನಿರ್ಮಿಸಿದ ದ್ವಾರದ ಮೂಲಕ ಪ್ರವೇಶಿಸಬಹುದು. ಭದ್ರತೆಗಾಗಿ ಉಜಿರೆ ಮತ್ತು ಧರ್ಮಸ್ಥಳದಲ್ಲಿ 2,500 ಪೊಲೀಸರನ್ನು ನಿಯೋಜಿಸಲಾಗಿದೆ. ಕ್ರೀಡಾಂಗಣದಲ್ಲಿ ವಿಶೇಷ ಕಂಟ್ರೋಲ್ ರೂಮ್ ತೆರೆಯಲಾಗಿದ್ದು ಎಲ್ಲಾ ಕಡೆಗಳಲ್ಲಿ ಸಿ.ಸಿ. ಕ್ಯಾಮರಾ ಅಳವಡಿಸಲಾಗಿದೆ.

    ಸಚಿವರಾದ ಅನಂತ ಕುಮಾರ್, ಡಿ. ವಿ. ಸದಾನಂದ ಗೌಡ, ಅನಂತ್ ಕುಮಾರ್ ಹೆಗಡೆ, ಬಿ. ರಮಾನಾಥ ರೈ, ಸಂಸದರಾದ ಬಿ. ಎಸ್. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಶಾಸಕ ಕೆ. ವಸಂತ ಬಂಗೇರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷ ರಜನೀಶ್ ಕುಮಾರ್, ಡಿ. ವೀರೇಂದ್ರ ಹೆಗ್ಗಡೆಯವರು, ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮೊದಲಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸುವರು.

    ಪ್ರಧಾನಿ ಭೇಟಿ ವೇಳಾಪಟ್ಟಿ: ಬೆಳಿಗ್ಗೆ 10.30ಕ್ಕೆ ಮಂಗಳೂರಿನಿಂದ ವಿಶೇಷ ಸೇನಾ ಹೆಲಿಕಾಪ್ಟರ್ ನಲ್ಲಿ ಹೊರಟು ಪ್ರಧಾನಿ ಮೋದಿ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. 11.00 ಗಂಟೆಗೆ ಹೆಗ್ಗಡೆಯವರ ನಿವಾಸಕ್ಕೆ ಭೇಟಿ ನೀಡಿ, 11.30ಕ್ಕೆ ದೇವರ ದರ್ಶನ ಪಡೆಯಲಿದ್ದಾರೆ. 11.40ಕ್ಕೆ ರಸ್ತೆ ಮೂಲಕ ಉಜಿರೆಗೆ ಪ್ರಯಾಣ ಬೆಳೆಸಿ, 12.00 ಗಂಟೆಗೆ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. 12.50ಕ್ಕೆ ರಸ್ತೆ ಮೂಲಕ ಧರ್ಮಸ್ಥಳ ಹೆಲಿಪ್ಯಾಡ್ ಗೆ ಪ್ರಯಾಣಿಸಿ ಹೆಲಿಕಾಪ್ಟರ್ ನಲ್ಲಿ ಮಂಗಳೂರು ವಿಮಾನ ನಿಲ್ದಾಣವಿರುವ ಬಜ್ಪೆಗೆ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 1.10ಕ್ಕೆ ಬಜ್ಪೆಯಿಂದ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಧ್ಯಾಹ್ನ 3.30ರವರೆಗೆ ಸೌಂದರ್ಯ ಲಹರಿ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4.45ಕ್ಕೆ ಬೆಂಗಳೂರಿನಿಂದ ಬೀದರ್ ಗೆ ಪ್ರಯಾಣ ಬೆಳೆಸಿ ಸಂಜೆ 5.10ಕ್ಕೆ ಬೀದರ್-ಕಲಬುರಗಿ ರೈಲು ಲೋಕಾರ್ಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮ ಮುಗಿಸಿ ಸಂಜೆ 6.20ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

     

     

  • ಇದೇ ಭಾನುವಾರ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ -ಭದ್ರತೆ ಹಿನ್ನೆಲೆಯಲ್ಲಿ ಭಕ್ತರಿಗಿಲ್ಲ ದರ್ಶನ ಭಾಗ್ಯ

    ಇದೇ ಭಾನುವಾರ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ -ಭದ್ರತೆ ಹಿನ್ನೆಲೆಯಲ್ಲಿ ಭಕ್ತರಿಗಿಲ್ಲ ದರ್ಶನ ಭಾಗ್ಯ

    ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿಯಾದ ಬಳಿಕ ಮೋದಿ ಇದೇ ಮೊದಲ ಬಾರಿಗೆ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಅಕ್ಟೋಬರ್28ರ ಶನಿವಾರದಿಂದ ಅಕ್ಟೋಬರ್ 29ರವರೆಗೆ ಸಾರ್ವಜನಿಕರಿಗೆ ಮಂಜುನಾಥನ ದರ್ಶನವನ್ನು ನಿರ್ಬಂಧಿಸಲಾಗಿದೆ.

    ಭದ್ರತೆಯ ದೃಷ್ಟಿಯಿಂದ ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಭಾನುವಾರ ಮಧ್ಯಾಹ್ನ 2 ಗಂಟೆಯವರೆಗೆ ಭಕ್ತಾದಿಗಳಿಗೆ ಕ್ಷೇತ್ರದ ಸ್ವಾಮಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಆಡಳಿತ ವರ್ಗ ಹೇಳಿದೆ.

    ಇತ್ತ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಅಕ್ಟೋಬರ್ 29ರಂದು ಬೆಳಿಗ್ಗೆ 11.30ಕ್ಕೆ ಮೋದಿ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಉಜಿರೆಗೆ ತೆರಳಲಿರುವ ಮೋದಿ ಎಸ್‍ಡಿಎಂ ಮೈದಾನದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಬೃಹತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ.

    ಈ ಹಿನ್ನೆಲೆಯಲ್ಲಿ ಬುಧವಾರ ವಿಶೇಷ ಭದ್ರತಾ ತಂಡ ಧರ್ಮಸ್ಥಳದಲ್ಲಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಿತು. ಇತ್ತ ಎಡಿಜಿಪಿ ಅಲೋಕ್ ಮೋಹನ್ ಸಮಾರಂಭ ನಡೆಯುವ ಮೈದಾನ, ಧರ್ಮಸ್ಥಳದ ಹೆಲಿಪ್ಯಾಡ್‍ನ್ನು ಪರಿಶೀಲನೆ ನಡೆಸಿದೆ. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದ್ರು. ಮೋದಿ ಪ್ರವಾಸ ಹಿನ್ನೆಲೆಯಲ್ಲಿ ಭದ್ರತೆಗಾಗಿ ಹತ್ತು ಎಸ್‍ಪಿ ಶ್ರೇಣಿಯ ಅಧಿಕಾರಿಗಳು, ಡಿವೈಎಸ್‍ಪಿ, ಇನ್ಸ್‍ಪೆಕ್ಟರ್, ಪಿಎಸ್‍ಐ ಸೇರಿದಂತೆ 150 ಮಂದಿ ಅಧಿಕಾರಿಗಳು, ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ನಕ್ಸಲ್ ಚಟುವಟಿಕೆ ಇರೋ ಧರ್ಮಸ್ಥಳ, ಬೆಳ್ತಂಗಡಿ ಪರಿಸರದ ದಟ್ಟ ಕಾಡಲ್ಲಿ ನಕ್ಸಲ್ ನಿಗ್ರಹ ದಳದ 25 ತಂಡಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸಿದೆ.