Tag: ಧಾರವಾಡ

  • ಚಿಲುಮೆ ಬಳಿಕ ಧಾರವಾಡದಲ್ಲೂ ವೋಟರ್ ಸ್ಕ್ಯಾಮ್- ಮತದಾರರ ಕ್ಷೇತ್ರ ವರ್ಗಾವಣೆ ಆರೋಪ

    ಚಿಲುಮೆ ಬಳಿಕ ಧಾರವಾಡದಲ್ಲೂ ವೋಟರ್ ಸ್ಕ್ಯಾಮ್- ಮತದಾರರ ಕ್ಷೇತ್ರ ವರ್ಗಾವಣೆ ಆರೋಪ

    ಧಾರವಾಡ: ಬೆಂಗಳೂರಿನಲ್ಲಿ ಕಾಂಗ್ರೆಸ್ (Congress) ನಾಯಕರು ಚಿಲುಮೆ ಸಂಸ್ಥೆಯ ಮೇಲೆ ಮತದಾರರ ಪಟ್ಟಿಯಲ್ಲಿ ಗೋಲ್‍ಮಾಲ್ ಮಾಡಿದ ಆರೋಪದ ಬೆನ್ನಲ್ಲೇ, ಧಾರವಾಡ ಜಿಲ್ಲೆಯಲ್ಲಿ ಕೂಡಾ ಇದೇ ರೀತಿ ಗೋಲ್‍ಮಾಲ್ ನಡೆದ ಆರೋಪ ಕೇಳಿ ಬಂದಿದೆ.

    ಜಿಲ್ಲೆಯ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ ಇರುವ ಅಲ್ಪಸಂಖ್ಯಾತ ಮತದಾರರನ್ನು ಬೇರೆ ಕ್ಷೇತ್ರಕ್ಕೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಆರೋಪ ಮಾಡಿದ್ದು, ಪಾಲಿಕೆಯ ಹಲವು ವಾರ್ಡ್ ಗಳಲ್ಲಿ ಈ ರೀತಿಯ ಮತದಾರರ ಪಟ್ಟಿಯಿಂದ ಹೆಸರು ಗಾಯಬ್ ಮಾಡಲಾಗಿದೆ ಎಂದಿದ್ದಾರೆ. ಈ ಕ್ಷೇತ್ರದ ವಾರ್ಡ್ ನಂಬರ್ 14, 16 ಹಾಗೂ 22ರಲ್ಲಿ ಬೇರೆ ಕಡೆ ಮತದಾರರನ್ನ ವರ್ಗಾವಣೆ ಮಾಡಲಾಗಿದೆ. ಅಲ್ಲದೇ ಧಾರವಾಡ ನಗರದ ಪಿಜಿಯಲ್ಲಿ ಇರುವ ಬೇರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಯಲ್ಲಿ ಹಾಕುವ ಕೆಲಸ ನಡೆದಿದೆ ಆರೋಪಿಸ್ತಿದ್ದಾರೆ.

    ಮತ್ತೊಂದು ಕಡೆ ಈ ಮತದಾರರ ಪಟ್ಟಿ ಹಿಡಿದು ಮನೆಗೆ ಬರುವ ಕೆಲವರು, ಯಾರಿಗೆ ಮತ ಹಾಕ್ತಾರೆ ಎಂದು ಕೇಳ್ತಾರಂತೆ. ಅವರು ಕಾಂಗ್ರೆಸ್‍ಗೆ ಮತ ಹಾಕ್ತೇವೆ ಎಂದ್ರೆ ಆ ಮತದಾರನ್ನ ಪಟ್ಟಿಯಿಂದ ಡಿಲೀಟ್ ಮಾಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಆರೋಪಿಸಿದ್ದಾರೆ. ‌ ಇದನ್ನೂ ಓದಿ: ವೋಟರ್ ಲಿಸ್ಟ್ ಹಗರಣ – ಮುಖ್ಯ ಆರೋಪಿ ರವಿಕುಮಾರ್ ಆಪ್ತ ಲೋಕೇಶ್ ಬಂಧನ

    ಪಾಲಿಕೆ ಚುನಾವಣೆಯಲ್ಲಿ ಇದೇ ರೀತಿ ಮಾಡಿ ಬಿಜೆಪಿ ಪಶ್ಚಿಮ ಕ್ಷೇತ್ರದ ನಾಲ್ಕು ವಾರ್ಡ್ ಗೆದ್ದಿದೆ, 80 ಬೂತ್‍ಗಳಲ್ಲಿ ಮತದಾರರನ್ನ ಡಿಲೀಟ್ ಮಾಡುವ ಕೆಲಸ ನಡೆದಿದೆ. ಇದರ ಹಿಂದೆ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್‌ (Aravind Bellad) ಕೈವಾಡ ಇದೆ ಎಂದು ಆರೋಪಿಸಲಾಗ್ತಿದೆ.

    ಒಟ್ಟಿನಲ್ಲಿ ಬೆಂಗಳೂರಿನ ನಂತರ ಅವಳಿ ನಗರವಾದ ಧಾರವಾಡದಲ್ಲೂ ಮತಪಟ್ಟಿ ಗೋಲ್ಮಾಲ್ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪಾಲಿಕೆ ಆಯುಕ್ತರು ಅಥವಾ ಚುನಾವಣಾ ಆಯೋಗವೇ ಸತ್ಯ ಹೇಳಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ವರಕವಿ ದ.ರಾ.ಬೇಂದ್ರೆ ಸೊಸೆ ನಿಧನ

    ವರಕವಿ ದ.ರಾ.ಬೇಂದ್ರೆ ಸೊಸೆ ನಿಧನ

    ಧಾರವಾಡ: ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ (Dattatreya Ramachandra Bendre) ಯವರ ಸೊಸೆ ನಿಧನರಾಗಿದ್ದಾರೆ.

    ವಯೋ ಸಹಜ ಕಾಯಿಲೆಯಿಂದ ನಿಧನರಾದ ಪದ್ಮಾ ಪಾಂಡುರಂಗ ಬೇಂದ್ರೆ (Padma Pandurang Bendre) (90)ಯವರು ಧಾರವಾಡ ಸಾಧನಕೇರಿಯ ದ.ರಾ ಬೇಂದ್ರೆ ಮನೆಯಲ್ಲಿ ಮೃತಪಟ್ಟಿದ್ದಾರೆ.

    ಪದ್ಮಾ ಬೇಂದ್ರೆ ಅವರು ಓರ್ವ ಪುತ್ರ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಮತ್ತು ಅಪಾರ ಬಂಧು ಬಳಗ ಅಗಲಿದ್ದಾರೆ. ಇದನ್ನೂ ಓದಿ: ನಾಡ ದೇವಿಯ ಭಾವಚಿತ್ರ ಗೊಂದಲಕ್ಕೆ ತೆರೆ ಎಳೆದ ಸರ್ಕಾರ

    ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಧಾರವಾಡ ಹೊಸ ಯಲ್ಲಾಪೂರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಸದಸ್ಯರು ತೀರ್ಮಾನಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸೌಲಭ್ಯದ ಕೊರತೆಯಿಂದ ವಿಶ್ವಕರ್ಮರು ಮತಾಂತರವಾಗ್ತಿದ್ದಾರೆ: ಕೆ.ಪಿ ನಂಜುಂಡಿ ವಿಷಾದ

    ಸೌಲಭ್ಯದ ಕೊರತೆಯಿಂದ ವಿಶ್ವಕರ್ಮರು ಮತಾಂತರವಾಗ್ತಿದ್ದಾರೆ: ಕೆ.ಪಿ ನಂಜುಂಡಿ ವಿಷಾದ

    ಧಾರವಾಡ: ವಿಶ್ವಕರ್ಮ ಸಮಾಜ (Vishwakarma Community) ಸರ್ಕಾರಿ ಸೌಲಭ್ಯಗಳಿಂದ ವಂಚಿತವಾಗಿದ್ದು, ಅನಿವಾರ್ಯವಾಗಿ ಇಸ್ಲಾಂ ಹಾಗೂ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ (KP Nanjundi) ವಿಷಾದ ವ್ಯಕ್ತಪಡಿಸಿದ್ದಾರೆ.

    ಧಾರವಾಡದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಶ್ವಕರ್ಮ ಸಮಾಜದವರು ಮುಸ್ಲಿಂ (Muslims), ಕ್ರೈಸ್ತ ಧರ್ಮಕ್ಕೆ ಹೋಗುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬೇರೆ-ಬೇರೆ ಧರ್ಮಕ್ಕೆ ಸೇರಿಕೊಳ್ಳುತ್ತಿದ್ದಾರೆ. ನಾನು ವಿಧಾನ ಪರಿಷತ್ ಸದಸ್ಯನಾಗಿಯೂ ಅವರನ್ನು ತಡೆಯಲು ಆಗುತ್ತಿಲ್ಲ ಎಂದು ವಿಷಾದಿಸಿದ್ದಾರೆ. ಇದನ್ನೂ ಓದಿ: ಮಂಗಳೂರು ಬಾಂಬ್ ಸ್ಫೋಟದ ತನಿಖೆ NIA ಹೆಗಲಿಗೆ : ನಳಿನ್ ಕುಮಾರ್ ಕಟೀಲ್

    ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕಾಗಿ ಹೋರಾಟ ಮಾಡಿದ್ದೆವು. 5 ತಿಂಗಳಿನಿಂದ ಈ ನಿಗಮ ಖಾಲಿ ಇದೆ. ನಿಗಮದ ಅಧ್ಯಕ್ಷ ಸ್ಥಾನ ಭರ್ತಿ ಮಾಡಿಲ್ಲ. ಇದರಿಂದ ಮತಾಂತರಗೊಳ್ಳುವ ನಮ್ಮವರನ್ನು ಕೇಳಿದರೆ, ತಿನ್ನೋಕೆ ಗತಿ ಇಲ್ಲ.. ನಿಮ್ಮ ಸರ್ಕಾರ ತಂದು ಕೊಡುತ್ತಾ ಎಂದು ಪ್ರಶ್ನೆ ಮಾಡ್ತಾರೆ? ಬದುಕಿಗೆ, ಊಟಕ್ಕೆ ಜಾತಿ, ಧರ್ಮ ಇಲ್ಲ. ಅದು ಇಲ್ಲದೇ ಇದ್ದಾಗಲೇ ಅಲ್ವೆ ಬೇರೆ ಕಡೆ ಹೋಗೋದು ಎಂದು ಮರುಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾಗಾಲ್ಯಾಂಡ್ ಜೈಲಿನಿಂದ 9 ಕೈದಿಗಳು ಎಸ್ಕೇಪ್

    ಜನಿವಾರ ಹಾಕಿದವರೆಲ್ಲಾ ಬ್ರಾಹ್ಮಣರಲ್ಲ (Brahmins):
    ನಮ್ಮ-ನಮ್ಮ ಕಸುಬುಗಳನ್ನು ನಂಬಿ ಶೋಚನೀಯವಾಗಿದ್ದೇವೆ. ಸಾಮಾಜಿಕ ನ್ಯಾಯದಿಂದ ವಂಚಿತವಾದ ಸಮಾಜ ವಿಶ್ವಕರ್ಮರದ್ದು. ನಮ್ಮ ಸಮಾಜದಲ್ಲಿ ಕೂಡ ನಾವು ಜನಿವಾರ ಹಾಕುತ್ತೇವೆ. ಆದರೆ ಜನಿವಾರ ಹಾಕಿದವರೆಲ್ಲಾ ಬ್ರಾಹ್ಮಣರಲ್ಲ. ನಮ್ಮ ಸಮಾಜದವರು ನಾವು ಬ್ರಾಹ್ಮಣರು ಎಂದು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ನಾವು ಬ್ರಾಹ್ಮಣರಲ್ಲ ಎಂದು ಜನಜಾಗೃತಿ ಮೂಡಿಸುವ ಸ್ಥಿತಿ ಬಂದಿದೆ. ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದೇನೆ. ಇಂತಹ ಪರಿಸ್ಥಿತಿಯಲ್ಲಿ ಪಕ್ಷ ನನ್ನನ್ನು ಗುರುತಿಸಬೇಕು ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಾಯಿ, ಮಗಳ ವ್ಯತ್ಯಾಸ ಗೊತ್ತಿಲ್ಲದವರು ಹಿಂದೂ ಧರ್ಮದ ಬಗ್ಗೆ ಮಾತಾಡ್ತಾರೆ: ಭೀಮಾಶಂಕರ್

    ತಾಯಿ, ಮಗಳ ವ್ಯತ್ಯಾಸ ಗೊತ್ತಿಲ್ಲದವರು ಹಿಂದೂ ಧರ್ಮದ ಬಗ್ಗೆ ಮಾತಾಡ್ತಾರೆ: ಭೀಮಾಶಂಕರ್

    ಧಾರವಾಡ: ಹಿಂದೂ ಎಂಬ ಪದ ಅಶ್ಲೀಲವಾದದ್ದು ಎಂಬ ಹೇಳಿಕೆ ಕೊಟ್ಟಿದ್ದ ಶಾಸಕ ಸತೀಶ್ ಜಾರಕಿಹೊಳಿಗೆ (Satish Jarkiholi) ಬಿಜೆಪಿ ಯುವ ಮುಖಂಡ ಭೀಮಾಶಂಕರ್‌ ಪಾಟೀಲ್ (Bheema Shankar Patil) ತಿರುಗೇಟು ನೀಡಿದ್ದಾರೆ.

    ಧಾರವಾಡದಲ್ಲಿ (Dharwad) ಮಾತನಾಡಿದ ಅವರು, ಬೆಳಗಾವಿಯ (Belgavi) ರಾಜಕಾರಣಿಯೊಬ್ಬರು ಉಡಾಫೆಯಿಂದ ಮಾತನಾಡುತ್ತಾರೆ. ನಾನು ಅದನ್ನು ಖಂಡಿಸುತ್ತೇನೆ. ತಾಯಿ, ಮಗಳ ವ್ಯತ್ಯಾಸ ಗೊತ್ತಿಲ್ಲದವರಿಂದ ಇಂತ ಮಾತು ಬರಲು ಸಾಧ್ಯ. ಭಾರತದ ಕೋಟ್ಯಂತರ ಜನ ಹಿಂದೂ ಜೀವನ ಪದ್ಧತಿಯೇ ಧರ್ಮ ಎಂದು ಸ್ವೀಕಾರ ಮಾಡಿದ್ದಾರೆ. ಆ ಧರ್ಮಕ್ಕೆ ಅಶ್ಲೀಲ ಎಂಬ ಪದ ಜೋಡಿಸಿದ ವ್ಯಕ್ತಿಯ ನಾಲಿಗೆ ಶುದ್ಧಗೊಳಿಸುವ ಕೆಲಸವನ್ನು ನಾವು ಮಾಡಬೇಕಿದೆ ಎಂದು ಕಿಡಿಕಾರಿದ್ದಾರೆ.

    ರಾಜಕಾರಣದ ತೆವಲಿಗಾಗಿ, ಮತಬ್ಯಾಂಕ್‍ಗಾಗಿ, ಇನ್ಯಾರನ್ನೋ ತೃಪ್ತಿಪಡಿಸಲು ಧರ್ಮದ ದ್ವೇಷ ಬಿತ್ತುವ ರಣ ಹೇಡಿಗಳಿಂದ ಹಿಂದುತ್ವ ಪಾಠ ಕಲಿಯುವ ಅಗತ್ಯವಿಲ್ಲ. ಹಿಂದೂ ಧರ್ಮಕ್ಕೆ ಅದರದ್ದೇ ಆದ ಹಿನ್ನೆಲೆ ಇದೆ. ವೇದ ಪುರಾಣಗಳ ದಾಖಲೆ ಇವೆ. ಯಾರೋ ಎಡಬಿಡಂಗಿಗಳು ಅದನ್ನು ವಿವಾದಾತ್ಮಕವಾಗಿ ಮಾತನಾಡುವುದು ಸಮಾಜಕ್ಕೆ ದೊಡ್ಡ ಕೆಟ್ಟ ಸಂದೇಶ ಕೊಟ್ಟಂತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿನ್ನ ಯಾರು ಮದುವೆ ಆಗ್ತಾರೆ ಎಂದು ಗೇಲಿ ಮಾಡಿದವರಿಗೆ ಗೀತಾ ಭಟ್ ಖಡಕ್ ಉತ್ತರ

    ಇಂತವರೆಲ್ಲ ವೈಚಾರಿಕ ಭಯೋತ್ಪಾದಕರು, ವೈಚಾರಿಕ ಹೆಸರಿನಲ್ಲಿ ಭಯೋತ್ಪಾದಕ ಕೆಲಸ ಮಾಡುವ ತಂಡ ಇದು. ಹೀಗಾಗಿ ಈ ತಂಡದ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಹಿಂದೂ ಧರ್ಮದ ಕೂದಲೆಳೆಯನ್ನು ಕೂಡ ಅವರಿಂದ ಅಲ್ಲಾಡಿಸಲು ಆಗುವುದಿಲ್ಲ. ಅಂತಹ ಸಂದರ್ಭ ಬಂದರೆ ನಾವು ಅದಕ್ಕೆ ಸರಿಯಾದ ಉತ್ತರ ಕೊಡಲು ತಯಾರಿದ್ದೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಂಗಳೂರು ಬಾಂಬ್ ಸ್ಫೋಟದ ತನಿಖೆ NIA ಹೆಗಲಿಗೆ : ನಳಿನ್ ಕುಮಾರ್ ಕಟೀಲ್

    Live Tv
    [brid partner=56869869 player=32851 video=960834 autoplay=true]

  • ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿ ಬಿಡುಗಡೆ – ಅಭ್ಯರ್ಥಿಗಳ ಅಸಮಾಧಾನ

    ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿ ಬಿಡುಗಡೆ – ಅಭ್ಯರ್ಥಿಗಳ ಅಸಮಾಧಾನ

    ಧಾರವಾಡ: ಪದವೀಧರ ಶಿಕ್ಷಕರ ಹುದ್ದೆಗಳ ನೇಮಕಾತಿಯ ಸಂಬಂಧ ಬಿಡುಗಡೆಯಾದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಅಭ್ಯರ್ಥಿಗಳ ಅಸಮಾಧಾನಗೊಂಡಿದ್ದಾರೆ.

    2022ರ ಮೇ ತಿಂಗಳಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಈ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು(Karnataka Graduate Teacher Recruitment 2022 selection list ) ಪ್ರಕಟ ಮಾಡಿದ್ದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಸರ್ಕಾರ 2022 ರ ಮೇ ತಿಂಗಳಿನಲ್ಲಿ ಸಿಇಟಿ ಪರೀಕ್ಷೆ ನಡೆಸಿ, ಆ ಮೂಲಕ ಶಿಕ್ಷಕರ ನೇಮಕಾತಿ ನಡೆಸಿತ್ತು. ಈ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಂದ ದಾಖಲೆಗಳ ಪರಿಶೀಲನೆಯನ್ನೂ ಸರ್ಕಾರ ನಡೆಸಿತ್ತು. ವಿಪರ್ಯಾಸವೆಂದರೆ ಸಿಇಟಿ ಪರೀಕ್ಷೆ ಪಾಸಾಗಿ ದಾಖಲೆಗಳ ಪರಿಶೀಲನೆಗೆ ಹಾಜರಾಗದ ಅಭ್ಯರ್ಥಿಗಳ ಹೆಸರನ್ನೂ ಇದೀಗ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪ್ರಕಟ ಮಾಡಲಾಗಿದ್ದು, ಇದು ಅರ್ಹ ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.  ಇದನ್ನೂ ಓದಿ: 1 ರೂ.ಗೆ ಲೀಸ್ ಪಡೆದಿದ್ದ ಅವಧಿ ಮುಕ್ತಾಯ – ಜಾಗ ಬಿಟ್ಟುಕೊಡುವಂತೆ ಕೇಳಿದ ದೇವಸ್ಥಾನ ಮಂಡಳಿ

    ರಾಯಚೂರು ಜಿಲ್ಲೆಯ ಸತೀಶ್, ಜಲಲರೆಡ್ಡಿ, ಅನೀಲ್, ಕವಿತಾ ಜಿ, ತೋಗಾಂವ, ಪ್ರಿಯಾಂಕ್ ಬಸವರಾಜ್, ಅಜ್ಜಪ್ಪ, ಶರಣಪ್ಪ, ಪೂರ್ಣಚಂದ್ರ ಹಾಗೂ ಅನುರಾಜ್ ಎಂಬುವವರು ದಾಖಲೆಗಳ ಪರಿಶೀಲನೆಗೆ ಹಾಜರಾಗದೇ ಇದ್ದರೂ ಅವರ ಹೆಸರನ್ನು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪ್ರಕಟ ಮಾಡಲಾಗಿದೆ. ಸ್ವತಃ ಈ ಅಭ್ಯರ್ಥಿಗಳೇ ತಾವು ದಾಖಲೆಗಳ ಪರಿಶೀಲನೆಗೆ ಹಾಜರಾಗಿಲ್ಲ ಎಂದೂ ಹೇಳಿಕೊಂಡಿದ್ದಾರೆ. ಇದು ಸರಿಯಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮಾಡಿದ ದೊಡ್ಡ ಅನ್ಯಾಯ. ಈ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಡೆಹಿಡಿದು ಮರುಪಟ್ಟಿ ಬಿಡುಗಡೆ ಮಾಡಬೇಕು ಎಂದು ರಾಯಚೂರಿನ ಅಭ್ಯರ್ಥಿಗಳು ಧಾರವಾಡದಲ್ಲಿ ಒತ್ತಾಯ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 1 ರೂ.ಗೆ ಲೀಸ್ ಪಡೆದಿದ್ದ ಅವಧಿ ಮುಕ್ತಾಯ – ಜಾಗ ಬಿಟ್ಟುಕೊಡುವಂತೆ ಕೇಳಿದ ದೇವಸ್ಥಾನ ಮಂಡಳಿ

    1 ರೂ.ಗೆ ಲೀಸ್ ಪಡೆದಿದ್ದ ಅವಧಿ ಮುಕ್ತಾಯ – ಜಾಗ ಬಿಟ್ಟುಕೊಡುವಂತೆ ಕೇಳಿದ ದೇವಸ್ಥಾನ ಮಂಡಳಿ

    ಧಾರವಾಡ: ಈ ಹಿಂದೆ 1921ರಲ್ಲಿ ಒಂದು ರೂಪಾಯಿಗೆ ದೇವಸ್ಥಾನದ (Temple) ಜಾಗವನ್ನು ಭೂ ಬಾಡಿಗೆ ಮೇಲೆ 99 ವರ್ಷಗಳ ವರೆಗೆ ಲೀಸ್ (Lease) ಮೇಲೆ ಕೊಡಲಾಗಿತ್ತು. ಈಗ ಲೀಸ್ ಮುಕ್ತಾಯ ಆಗಿದ್ದು, ಜಾಗವನ್ನು ಬಿಟ್ಟು ಕೊಡುವಂತೆ ದೇವಸ್ಥಾನದ ಆಡಳಿತ ಮಂಡಳಿ ನೋಟಿಸ್ ನೀಡಿದೆ.

    ನಗರದ ಮಧ್ಯಭಾಗದಲ್ಲಿ ಇರುವ ಉಳವಿ ಚನ್ನಬಸವೇಶ್ವರ ದೇವಸ್ಥಾನದ ಒಟ್ಟು ಜಾಗ 16 ಏಕರೆ ಇದೆ. ಅದರಲ್ಲಿ 3 ಏಕರೆ 35 ಗುಂಟೆ ಜಾಗದಲ್ಲಿ ದೇವಸ್ಥಾನ ಇದ್ದರೆ, ಉಳಿದ ಆಸ್ತಿ ಲೀಸ್ ಕೊಡಲಾಗಿದೆ. ಈ ಆಸ್ತಿಯಲ್ಲಿ ಕೆಲವರು ಮನೆ ಕಟ್ಟಿಕೊಂಡಿದ್ದರೆ, ಕೆಲವರು ವ್ಯಾಪಾರಕ್ಕಾಗಿ ಅಂಗಡಿ ಇಟ್ಟುಕೊಂಡಿದ್ದಾರೆ. ಇವರಿಗೆ 1921ರಲ್ಲಿ ಒಂದು ರೂಪಾಯಿ ಭೂ ಬಾಡಿಗೆ ಮೇಲೆ 99 ವರ್ಷಗಳ ವರೆಗೆ ಲೀಸ್ ಮೇಲೆ ಕೊಡಲಾಗಿತ್ತು. ಈಗ ಲೀಸ್ ಮುಕ್ತಾಯ ಆಗಿದೆ. ಹೀಗಾಗಿ ದೇವಸ್ಥಾನ ಆಸ್ತಿ ಕೊಡಬೇಕು ಎಂದು ನೋಟಿಸ್ ಕೊಡಲಾಗುತ್ತಿದೆ. ಇದನ್ನೂ ಓದಿ: ಕಾಶಿ-ತಮಿಳು ಸಂಗಮ; ಶರ್ಟ್, ಪಂಚೆ ಧರಿಸಿ ಮಿಂಚಿದ ಮೋದಿ

    ಸದ್ಯ ಲೀಸ್ ಪಡೆದವರು ಮನೆ ಹಾಗೂ ಕಟ್ಟಡ ಕಟ್ಟಿದ್ದರೆ. ದೇವಸ್ಥಾನದವರು ಹಿರಿಯರ ಸಮ್ಮುಖದಲ್ಲಿ ಅದರ ಬೆಲೆ ನಿಗದಿ ಮಾಡಿ ಅವರಿಗೆ ಆ ಹಣ ಕೊಡಲಾಗುತ್ತದೆ ಎಂದು ಹೇಳಿದ್ದಾರೆ. ಕೆಲವರು ದೇವಸ್ಥಾನದ ಆಸ್ತಿ ನಮಗೆ ಬಿಟ್ಟು ಕೊಡಬೇಕು ಎಂದು ಹೇಳಿದ್ದಾರೆ. ಆದರೆ ದೇವಸ್ಥಾನ ಆಡಳಿತ ಮಂಡಳಿ ಇದಕ್ಕೆ ಅವಕಾಶ ಕೊಡುತ್ತಿಲ್ಲ. ಈ ಲೀಸ್ ಆಸ್ತಿ ವಾಪಸ್ ಪಡೆಯುವ ದೇವಸ್ಥಾನ, ಅದರಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ KAS ಹಾಗೂ IAS ತರಬೇತಿ ಕೊಡಬೇಕು ಎಂದಿದೆ. ಅದಕ್ಕಾಗಿ ಈ ಆಸ್ತಿ ವಾಪಸ್ ಪಡೆಯಲು ಮುಂದಾಗಿದೆ. ಅಲ್ಲದೇ ಕೆಲವು ಕಡೆ ರೂಂ ಕಟ್ಟಿ ಬಾಡಿಗೆ ಕೊಡುವ ಯೋಚನೆ ಇದೆ. ಇದರಿಂದ ಹೊರ ಜಿಲ್ಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಸಹಾಯ ಆಗಲಿದೆ. ಸದ್ಯ ಇನ್ನು 10 ನೋಟಿಸ್ ಕೊಡಬೇಕಿದೆ. ಅವರಿಗೆ ಕೊಟ್ಟ ಮೇಲೆ ಮುಂದಿನ ಯೋಜನೆ ಆಗಲಿದೆ ಎಂದು ತಿಳಿಸಿದೆ. ದೇವಸ್ಥಾನ ಆಡಳಿತ ಮಂಡಳಿ ಯೋಚಿಸಿದಂತೆ ಎಲ್ಲವೂ ಆದರೆ, ದೇವಸ್ಥಾನ ಆಸ್ತಿ ವಾಪಸ್ ಬರಲಿದೆ. ಇದರಿಂದ ಭೂ ಬಾಡಿಗೆ ಕೂಡಾ ಹೆಚ್ಚಾಗಲಿದ್ದು, ಅದನ್ನೇ ಬಡ ಮಕ್ಕಳ ವಿದ್ಯೆಗಾಗಿ ಈ ದೇವಸ್ಥಾನ ಬಳಸಲಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ವಿಮೆ ಹಣಕ್ಕಾಗಿ ಸುಪಾರಿ ಕೊಟ್ಟು ತಂದೆಯನ್ನೇ ಕೊಲ್ಲಿಸಿದ ಮಗ

    Live Tv
    [brid partner=56869869 player=32851 video=960834 autoplay=true]

  • ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಚರ್ಚೆಯಾಗಿದೆ – ಸ್ಪೀಕರ್ ಕಾಗೇರಿ

    ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಚರ್ಚೆಯಾಗಿದೆ – ಸ್ಪೀಕರ್ ಕಾಗೇರಿ

    ಧಾರವಾಡ: ಬೆಳಗಾವಿಯಲ್ಲೇ 10 ದಿನ ಚಳಿಗಾಲದ ಅಧಿವೇಶನ (Belagavi Winter Session) ನಡೆಸುವ ಬಗ್ಗೆ ಚರ್ಚೆ ಮಾಡಲಾಗಿದ್ದು, ಅಂತಿಮವಾಗಿ ಕ್ಯಾಬಿನೆಟ್ ನಿಗದಿಪಡಿಸಿದ ದಿನಗಳವರೆಗೆ ಅಧಿವೇಶನ ನಡೆಸಲಾಗುವುದು ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ತಿಳಿಸಿದ್ದಾರೆ.

    ಧಾರವಾಡದಲ್ಲಿ (Dharawada) ಮಾತನಾಡಿದ ಅವರು, ಅಧಿವೇಶನದ ದಿನಾಂಕದ ಬಗ್ಗೆ ಚರ್ಚೆಯಾಗಿದೆ. ಕ್ಯಾಬಿನೆಟ್‌ನಲ್ಲಿ ಸಿಎಂ ನಿರ್ಧರಿಸಿ ಹೇಳಬೇಕಿದೆ. ಅದಕ್ಕಾಗಿ ನಾವೂ ಕಾಯುತ್ತಿದ್ದೇವೆ. 10 ದಿನ ಅಧಿವೇಶನ ಮಾಡಬಹುದು ಎಂದು ಚರ್ಚೆ ಮಾಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮೈಸೂರು, ಮಂಗಳೂರು ಸೇರಿ ರಾಜ್ಯದ 6 ಕಡೆ ಹೊಸ ನಗರಗಳ ನಿರ್ಮಾಣ – ಬೊಮ್ಮಾಯಿ

    ಅಧಿವೇಶನಕ್ಕೆ 10 ದಿನ ಸಾಕಾಗುವುದಿಲ್ಲ. ಚರ್ಚೆ ಮಾಡಲು ಸಮಯ ಸಾಕಾಗುವುದಿಲ್ಲ ಎಂಬ ಸಲಹೆಗೆ ಪ್ರತಿಕ್ರಿಯಿಸಿದ ಅವರು, ಪತ್ರಕರ್ತರು ಅಧಿವೇಶನ ಹೆಚ್ಚು ದಿನ ನಡೆಸಲು ಮನವಿ ಮಾಡಿದ್ದಾರೆಂದು ಸರ್ಕಾರಕ್ಕೆ ಹೇಳುತ್ತೇನೆ. ಕೊನೆಗೆ ಸರ್ಕಾರ ಕ್ಯಾಬಿನೆಟ್‌ನಲ್ಲಿ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದರಂತೆ ಮಾಡುತ್ತೇವೆ. ಈ ಬಾರಿಯ ಅಧಿವೇಶನವನ್ನು ಒಳ್ಳೆಯದಾಗಿ ಮಾಡೋಣ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಡೇಟಿಂಗ್ ಮಾಡಿ – ಪ್ರಮೋದ್ ಮುತಾಲಿಕ್

    ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಡೇಟಿಂಗ್ ಮಾಡಿ – ಪ್ರಮೋದ್ ಮುತಾಲಿಕ್

    ಧಾರವಾಡ: ಇತ್ತೀಚೆಗೆ ದೆಹಲಿಯಲ್ಲಿ (NewDelihi) ನಡೆದ ಭೀಕರ ಘಟನೆ ತಾಲಿಬಾನ್ (Taliban) ಕೃತ್ಯಕ್ಕಿಂತಲೂ ಕೆಟ್ಟದಾಗಿದೆ. ಆದ್ದರಿಂದ ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಪಾಠ ಕಲಿಯಬೇಕು. ಪ್ರೀತಿ (Love) ಮಾಡುವಾಗ, ಡೇಟಿಂಗ್ (Dating) ಮಾಡುವಾಗ ವಿಚಾರ ಮಾಡಿ ಮಾಡಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಸಲಹೆ ನೀಡಿದ್ದಾರೆ.

    ಧಾರವಾಡದಲ್ಲಿಂದು (Darwad) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ದೆಹಲಿಯಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ (Live In RelationShip) ಗೆಳತಿಯನ್ನು 35 ಪೀಸ್‌ಗಳಾಗಿ ಮಾಡಿ ಹತ್ಯೆಮಾಡಿರುವ ಘಟನೆ ತಾಲಿಬಾನಿಗಳ (Taliban) ಕೃತ್ಯಕ್ಕಿಂತೂ ಕೆಟ್ಟದಾದದ್ದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ – ನ್ಯಾಯಧಿಕರಣ ರಚನೆಗೆ ಕೇಂದ್ರದ ಒಲವು

    ಲವ್ ಜಿಹಾದ್‌ಗೆ (Love Jihad) ಬಲಿಯಾಗುವ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೆ ನಾನು 15 ವರ್ಷಗಳಿಂದಲೂ ಎಚ್ಚರಿಕೆ ಕೊಡುತ್ತಲೇ ಬಂದಿದ್ದೇನೆ. ಇಷ್ಟೆಲ್ಲಾ ಎಚ್ಚರಿಕೆ ಕೊಟ್ಟರೂ ದೆಹಲಿಯಲ್ಲಿ ನಡೆದ ಇದೊಂದು ಘಟನೆ ದೊಡ್ಡ ದುರಂತವೇ ಸರಿ ಎಂದಿದ್ದಾರೆ. ಇದನ್ನೂ ಓದಿ: ಅಫ್ತಾಬ್‌ಗೆ ಮಂಪರು ಪರೀಕ್ಷೆ – ಪೊಲೀಸರಿಗೆ ಕೋರ್ಟ್‌ ಅನುಮತಿ

    ಹಿಂದೂ ಹುಡುಗಿಯರು ಇದರಿಂದ ಎಚ್ಚರಿಕೆಯ ಪಾಠ ಕಲಿಯಬೇಕು, ಯಾರ ಜೊತೆ ಪ್ರೀತಿ ಮಾಡುತ್ತಿದ್ದೇನೆ, ಯಾರ ಜೊತೆ ಡೇಟಿಂಗ್ ಮಾಡುತ್ತಿದ್ದೇನೆ ಎಂಬ ಅರಿವಿರಬೇಕು. ದೆಹಲಿಯ ಘಟನೆಯ ನಂತರ ಆ ಯುವಕ ಮತ್ತೆ ನಾಲ್ಕು ಜನ ಹಿಂದೂ ಹುಡುಗಿಯರ ಜೊತೆ ಸುತ್ತಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯೇ ಅಂತಿಮ, ಕೋರ್ಟ್ ಸಹ ವಿಳಂಬ ಮಾಡದೆ, ಒಂದೇ ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿಸಿ ಆತನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಮೇಲಿಂದ ಮೇಲೆ ಮತಾಂತರ ಪ್ರಕ್ರಿಯೆ ನಡೆಯುತ್ತಿದೆ. ಈ ಹಿಂದೆ ಎರಡು ಪ್ರಕರಣಗಳು ನಡೆದಿದ್ದವು. ಇದೀಗ ಚಿಕ್ಕಲಗೇರಿ ಎನ್ನುವ ಸಣ್ಣ ಬಡ ಕುಟುಂಬದ ಮೇಲೆ ಮತಾಂತರ ಆಗಿದೆ. ಪತಿ, ಪತ್ನಿಯರಿಗೆ ಜಗಳ ಹಚ್ಚಿ ಪತ್ನಿಯನ್ನು ಮತಾಂತರ ಮಾಡಿದ್ದಾರೆ. ಪತ್ನಿಯ ಮೂಲಕ ಗಂಡನಿಗೆ ಒತ್ತಾಯ ಮಾಡುವ ಪ್ರಕ್ರಿಯೆ ನಡೆದಿದೆ. ಈ ಜಗಳ ವಿಕೋಪಕ್ಕೆ ಹೋಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ಮತ್ತೆ ಸಮರ ಸಾರಿದ ರಷ್ಯಾ – ಒಂದೇ ಬಾರಿಗೆ 100 ಕ್ಷಿಪಣಿ ಉಡಾವಣೆ

    ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಈ ರೀತಿ ನಡೆಯುತ್ತಲೇ ಇದೆ. ಈ ನಿರ್ಲಕ್ಷ್ಯ ಸರ್ಕಾರದ್ದು, ಕೇವಲ ಕಾನೂನು ಮಾಡುವುದಲ್ಲ, ಅದನ್ನು ಜಾರಿ ಮಾಡಬೇಕು. ಕ್ರಿಶ್ಚಿಯನ್ ಮತಾಂತರ ಎನ್ನುವುದು ಬಹಳ ದೊಡ್ಡ ಗಂಡಾಂತರ, ಇದನ್ನು ತಡೆಯದೇ ಇದ್ದರೆ ದೇಶಕ್ಕೆ ದೊಡ್ಡ ಅಪಾಯ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರತಿಪಕ್ಷಗಳಿಗೆ ಕೇಸರಿ ಬಣ್ಣ ಎಂದರೆ ಏಕೆ ತಲೆ ಕೆಡುತ್ತೆ?: ಚಕ್ರವರ್ತಿ ಸೂಲಿಬೆಲೆ

    ಪ್ರತಿಪಕ್ಷಗಳಿಗೆ ಕೇಸರಿ ಬಣ್ಣ ಎಂದರೆ ಏಕೆ ತಲೆ ಕೆಡುತ್ತೆ?: ಚಕ್ರವರ್ತಿ ಸೂಲಿಬೆಲೆ

    ಧಾರವಾಡ: ಪ್ರತಿಪಕ್ಷಗಳಿಗೆ ಕೇಸರಿ ಬಣ್ಣ (Saffron Colour) ಎಂದರೆ ಏಕೆ ತಲೆ ಕೆಡುತ್ತದೆಯೋ ಗೊತ್ತಿಲ್ಲ, ನಮ್ಮ ಧ್ವಜದಲ್ಲಿ ಕೇಸರಿ ಬಣ್ಣ ಇದೆ. ಕೇಸರಿ ಬಣ್ಣ ಸೂಕ್ತವಾಗಿ ಬಳಸಿಕೊಂಡು ಪೇಂಟ್ ಮಾಡಿದ್ರೆ ಅದಕ್ಕೆ ಹಿಂದುತ್ವ ಛಾಯೆ ಕೊಡುವುದು ಕೆಟ್ಟದ್ದು ಎಂದು ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಹೇಳಿದರು.

    ಧಾರವಾಡದಲ್ಲಿ ಈ ಕುರಿತು ಮಾತನಾಡಿದ ಅವರು, ಬಣ್ಣಗಳಲ್ಲಿ ಎಲ್ಲವೂ ಇರುವುದರಿಂದ ಅದನ್ನು ಸೂಕ್ತವಾಗಿ ಬಳಸಿಕೊಂಡರೆ ಯಾವುದೇ ಸಮಸ್ಯೆ ಇಲ್ಲ. ಕೇಸರಿ ಬಣ್ಣದ ಮೇಲೆ ಇರುವಂತೆ ಸ್ವಾಮಿ ವಿವೇಕಾನಂದರ ಮೇಲೆ ಕೂಡ ಇವರ ಆಕ್ರೋಶ ಇದೆ. ಇದು ದುರಂತಕಾರದ ಸಂಗತಿ. ವಿವೇಕಾನಂದರು ಅತ್ಯಂತ ಶ್ರೇಷ್ಠ ವ್ಯಕ್ತಿ. ಜಗತ್ತಿಗೆ ಭಾರತವನ್ನು ಮತ್ತೊಮ್ಮೆ ತೋರಿಸಿಕೊಟ್ಟಂತಹ ವ್ಯಕ್ತಿ ಎಂದರು.

    ಭಾರತ ಎಂದರೆ ಕೆಟ್ಟದ್ದು ಎಂದು ಆಲೋಚನೆ ಇತ್ತು. ಅಂತಹ ಸ್ಥಿತಿಯಲ್ಲಿ ಭಾರತವನ್ನು ಮತ್ತೊಮ್ಮೆ ಜಗತ್ತಿನ ಮುಂದೆ ಪ್ರಸ್ತುತಪಡಿಸಿ ಭಾರತವನ್ನು ಕಟ್ಟುವ ಕೆಲಸವನ್ನು ಅಂದು ವಿವೇಕಾನಂದರು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಫೋಟೋ ಇಡುವುದು ಮುಂದಿನ ಪೀಳಿಗೆಯ ಭಾರತ ನಿರ್ಮಾಣಕ್ಕೆ ಸಹಾಯವಾಗಲಿದೆ. ಕೇವಲ ವಿವೇಕಾನಂದ ಅಷ್ಟೇ ಅಲ್ಲ, ದೊಡ್ಡ ಸಾಧನೆ ಮಾಡಿದಂತಹ ಶಿವಾಜಿ ಮಹಾರಾಜ್, ಕೃಷ್ಣದೇವರಾಯ, ಅರವಿಂದರು ಶಾಲಾ ಮಕ್ಕಳಿಗೆ ಪರಿಚಯ ಆಗಬೇಕು. ಸರ್ಕಾರ ಈ ಬಗ್ಗೆ ಹೆಜ್ಜೆ ಇಡುತ್ತಿರುವುದು ಹೆಮ್ಮೆ ಎಂದು ಅಭಿಪ್ರಾಯ ಪಟ್ಟರು.

    ಬಸ್ ನಿಲ್ದಾಣದ ಮೇಲೆ ಗುಂಬಜ್‌ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮೈಸೂರಿನಲ್ಲಿ ಅಷ್ಟೇ ಅಲ್ಲದೇ, ಬೆಂಗಳೂರಿನಲ್ಲಿ ವಿದ್ಯುತ್ ಇಲಾಖೆಗೆ ಸೇರಿದ ಕಟ್ಟಡದಲ್ಲೂ ಇದೆ. ಶಿವಾನಂದ ಸರ್ಕಲ್‍ನಲ್ಲಿ ಇರುವ ಈ ಕಟ್ಟಡಕ್ಕೆ ನೋಡಿದಾಗ ಗಲ್ಫ್ ರಾಷ್ಟ್ರೀಯ ಸ್ವರೂಪ ತರುವ ಕೆಲಸ ಮಾಡಲಾಗುತ್ತಿದೆ ಎನಿಸುತ್ತಿದೆ ಎಂದ ಅವರು, ಬಸ್ ನಿಲ್ದಾಣವನ್ನು ಬಸ್ ನಿಲ್ದಾಣ ಆಗಿ ಇರಲು ಬಿಡಬೇಕು ಎಂದು ಒತ್ತಾಯಿಸಿದರು.

    ಕಟ್ಟುವ ಅನುಮತಿ ಕೊಡುವಾಗ ಯೋಚನೆ ಮಾಡಬೇಕಿತ್ತು. ಆದರೆ ಈಗ ಯೋಚನೆ ಮಾಡುವುದು ಕೂಡಾ ಸರಿ ಇದೆ, ಗುಂಬಜ್‌ ಕಳಶದ ಸ್ವರೂಪದಲ್ಲಿ ಇದೆ. ಘಟನೆ ಕುರಿತು ಸಂಸದ ಪ್ರತಾಪ ಸಿಂಹ ವಿರೋಧ ಮಾಡಿದ್ದಾರೆ. ಅದರಲ್ಲಿ ಡಬಲ್ ಸ್ಟ್ಯಾಂಡರ್ಡ್ ಪ್ರಶ್ನೆಯೇ ಇಲ್ಲ, ಎಂಪಿಯಾಗಿ ಆ ಗುಂಬಜ್‌ ಬಗ್ಗೆ ವಿರೋಧ ಮಾಡುವ ಹಕ್ಕು ಅವರಿಗೆ ಇದೆ. ಅದನ್ನು ಅವರು ಮಾಡಿದ್ದಾರೆ ಎಂದರು.

    ರೈಲ್ವೆ ನಿಲ್ದಾಣದಲ್ಲಿ ಘೋರಿ ಹಾಕಿಕೊಂಡು ದರ್ಗಾ ಮಾಡುವುದು, ಹಂಪಿಯಲ್ಲಂತೂ ಗಲ್ಲಿ ಗಲ್ಲಿಗೂ ದರ್ಗಾ ಮಾಡುವಂತ ಪರಿಸ್ಥಿತಿ ತಂದಿದ್ದಾರೆ. ಏನೂ ಇಲ್ಲದ ಕಡೆ ದರ್ಗಾ ಕಟ್ಟಬಹುದಾದರೆ, ನಾಳೆ ಬಸ್ ನಿಲ್ದಾಣವನ್ನೇ ದರ್ಗಾ ಎಂದು ಹೇಳಿ ಕುಳಿತುಕೊಳ್ಳಬಹುದು. ಆಗ ಅದನ್ನು ತೆರವು ಮಾಡೋಕೆ ಆಗದೇ ಇರುವ ಸ್ಥಿತಿ ನಿರ್ಮಾಣ ಆಗಬಹುದು ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್ ಟಿಕೆಟ್‍ಗೆ ಜೈಲಿನಿಂದಲೇ ಅರ್ಜಿ ಸಲ್ಲಿಸಿದ ಎಸ್.ಕೆ ಬಸವರಾಜನ್

    ಉಡುಪಿ ಕ್ರೈಸ್ತ ಶಾಲೆಯಲ್ಲಿ ಅಜಾನ್ ನೃತ್ಯ ಮಾಡಿದ ವಿಚಾರಕ್ಕೆ ಮಾತನಾಡಿದ ಅವರು, ಈ ರೀತಿ ಆಗಬಾರದು, ಸಮಾಜದಲ್ಲಿ ಜಾಗೃತಿ ಇರಬೇಕು. ಹಿಂದೂ ಸಮಾಜ ಜಾಗೃತ ಆಗಬೇಕು. ಎಚ್ಚರಿಕೆಯಿಂದ ಇರಬೇಕು, ಅಫ್ತಾಬ್ ಎನ್ನುವಂತ ವ್ಯಕ್ತಿ ಹಿಂದೂ ಹೆಣ್ಣು ಮಗಳನ್ನ 35 ಬಾರಿ ತುಂಡರಿಸಿ ಅದರನ್ನು ಫ್ರಿಡ್ಜನಲ್ಲಿಟ್ಟು ಬಿಸಾಕುವ ವಾತಾವರಣ ನಿರ್ಮಾಣ ಆಗಿದೆ. ನಾವು ಇನ್ನು ಹೆಚ್ಚು ಜಾಗೃತ ಆಗಬೇಕು, ಮುಂದಿನ ಪೀಳಿಗೆಗೆ ಇದಕ್ಕೆ ಬೇಕಾದ ಶಿಕ್ಷಣ ನೀಡಬೇಕಿದೆ ಎಂದು ಆಗ್ರಹಿಸಿದರು. ಇದನ್ನೂ ಓದಿ: ಅಫ್ತಾಬ್‌ಗೆ ಮಂಪರು ಪರೀಕ್ಷೆ ಸಾಧ್ಯತೆ – ಕೋರ್ಟ್ ಆದೇಶಕ್ಕೆ ಕಾಯುತ್ತಿರುವ ಪೊಲೀಸರು

    Live Tv
    [brid partner=56869869 player=32851 video=960834 autoplay=true]

  • ಬೈಕ್ ಹಿಂದೆ ಎಮ್ಮೆ ಓಡುವ ಸ್ಪರ್ಧೆ – ಗೆದ್ದವರಿಗೆ ನಗದು, ಬಕೆಟ್ ಬಹುಮಾನ

    ಬೈಕ್ ಹಿಂದೆ ಎಮ್ಮೆ ಓಡುವ ಸ್ಪರ್ಧೆ – ಗೆದ್ದವರಿಗೆ ನಗದು, ಬಕೆಟ್ ಬಹುಮಾನ

    ಧಾರವಾಡ: ಮನರಂಜನೆಗಾಗಿ ಟಗರಿನ ಕಾಳಗ, ಚಕ್ಕಡಿ ಓಡಿಸುವ ಸ್ಪರ್ಧೆ, ಹೀಗೆ ಅನೇಕ ಸ್ಪರ್ಧೆಗಳನ್ನು ಅಲ್ಲಲ್ಲಿ ಆಯೋಜನೆ ಮಾಡುವುದು ಹಳ್ಳಿಗಳಲ್ಲಿ ಸಹಜ. ಇದೀಗ ಧಾರವಾಡದಲ್ಲಿ (Dharwada) ವಿಭಿನ್ನವಾದ ಸ್ಪರ್ಧೆಯೊಂದನ್ನು ಆಯೋಜನೆ ಮಾಡಲಾಗಿದೆ.

    ಧಾರವಾಡ ಎಮ್ಮೆ (Buffalo) ಬಹಳ ಫೇಮಸ್. ಧಾರವಾಡ ಗೌಳಿಗಲ್ಲಿಯಲ್ಲಿ ಎಮ್ಮೆ ಸಾಕುವವರು ದೀಪಾವಳಿ ಹಬ್ಬದ ನಂತರ ಎಮ್ಮೆ ಓಟದ (Running Race) ಸ್ಪರ್ಧೆ ಆಯೋಜನೆ ಮಾಡ್ತಾರೆ. ಪ್ರತಿ ವರ್ಷದಂತೆ ಈ ವರ್ಷ ಕೂಡಾ ಅವರು ಧಾರವಾಡ ಹೊರವಲಯದ ಹನುಮಂತನಗರದ ಹತ್ತಿರ ಈ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದರು. ಅನೇಕರು ತಮ್ಮ ಎಮ್ಮೆಗಳ ಸಮೇತ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮೂಲಕ ಗಮನಸೆಳೆದರು. ಎಮ್ಮೆಗಳ ಮಾಲೀಕರು ಬೈಕ್ ತೆಗೆದುಕೊಂಡು ಮುಂದೆ ಹೋಗಿ ತಮ್ಮ ಎಮ್ಮೆ ಬೆನ್ನಟ್ಟಿಸಿಕೊಂಡು ಬರುವ ಮೂಲಕ ಸ್ಪರ್ಧೆಯ ಕಾವು ಹೆಚ್ಚಿತು. ಇದನ್ನೂ ಓದಿ: ನಮ್ಮ ಇಸ್ಲಾಂ ಧರ್ಮದಲ್ಲಿ ಪ್ರತಿಮೆಗೆ ಅವಕಾಶ ಇಲ್ಲ – ಟಿಪ್ಪು ಪ್ರತಿಮೆ ಸ್ಥಾಪನೆಗೆ ಇಬ್ರಾಹಿಂ ವಿರೋಧ

    ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ 20 ಸಾವಿರ, ದ್ವಿತೀಯ ಸ್ಥಾನ 15 ಸಾವಿರ ಹಾಗೂ ತೃತೀಯ ಸ್ಥಾನ ಪಡೆದವರಿಗೆ 12,500 ರೂಪಾಯಿ ಬಹುಮಾನ ನೀಡಲಾಯಿತು. ಅಲ್ಲದೇ ಸಮಾಧನಾಕರ ಬಹುಮಾನವಾಗಿ ಸ್ಟೀಲ್ ಪಾತ್ರೆ, ಬಕೆಟ್ ಸೇರಿ ಹಲವು ವಸ್ತುಗಳನ್ನು ನೀಡಲಾಯಿತು. ಇದರಲ್ಲಿ ಧಾರವಾಡದ ಎಮ್ಮೆ ಅಷ್ಟೇ ಅಲ್ಲ, ಗದಗ, ಹಾವೇರಿ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಯ ಎಮ್ಮೆ ಕೂಡಾ ಭಾಗವಹಿಸಿದ್ದವು. ಮುಂದೆ ಬೈಕ್ ಹೋಗುತ್ತಿದ್ದರೆ ಎಮ್ಮೆ ಹಿಂಬದಿಯಿಂದ ಓಡುವ ಮೂಲಕ ಕೇವಲ ಒಂದು ನಿಮಿಷದಲ್ಲಿ ನೂರು ಮೀಟರ್ ಓಡಬೇಕಾಯಿತು. ಅದರಲ್ಲಿ ಯಾವ ಎಮ್ಮೆ ಕಡಿಮೆ ಸಮಯದಲ್ಲಿ ಓಡುತ್ತೆ, ಅದಕ್ಕೆ ಬಹುಮಾನ ಕೊಡಲಾಯಿತು. ಇದನ್ನೂ ಓದಿ: ಹೆರಿಗೆಗೆಂದು ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ವ್ಯಕ್ತಿಯಿಂದ ಮಹಿಳಾ ಸಿಬ್ಬಂದಿಗೆ ಕಿರುಕುಳ

    Live Tv
    [brid partner=56869869 player=32851 video=960834 autoplay=true]