Tag: ಧಾರವಾಡ

  • ಶಾರ್ಟ್ ಸರ್ಕ್ಯೂಟ್ – ಸ್ಟೆಷನರಿ, ಕಿರಾಣಿ ಅಂಗಡಿಗೆ ಬೆಂಕಿ

    ಶಾರ್ಟ್ ಸರ್ಕ್ಯೂಟ್ – ಸ್ಟೆಷನರಿ, ಕಿರಾಣಿ ಅಂಗಡಿಗೆ ಬೆಂಕಿ

    ಧಾರವಾಡ: ಸ್ಟೆಷನರಿ ಹಾಗೂ ಕಿರಾಣಿ ಅಂಗಡಿಗೆ ಶಾರ್ಟ್ ಸರ್ಕ್ಯೂಟ್ ಹಿನ್ನೆಲೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಧಾರವಾಡದಲ್ಲಿ ನಡೆದಿದೆ.

    ಧಾರವಾಡ ನೆಹರೂ ಮಾರುಕಟ್ಟೆಯಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಸ್ಟೆಷನರಿ ಹಾಗೂ ಕಿರಾಣಿ ಅಂಗಡಿಗೆ ಬೆಂಕಿ ಹೊತ್ತಿ ಅಂಗಡಿ ಉರಿದಿದೆ.  ಸ್ಥಳೀಯರು ಬೆಂಕಿ ನೋಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವೀಸಾ ಹಗರಣ – ನಿರೀಕ್ಷಣಾ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಾರ್ತಿ ಚಿದಂಬರಂ

    ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಎಚ್‍ಡಿಕೆಗೆ ಪಿಎಸ್‍ಐ ಅಭ್ಯರ್ಥಿಗಳಿಂದ ಮುತ್ತಿಗೆ ಯತ್ನ- ಅಡ್ಡ ಬಂದವನಿಗೆ ಥಳಿಸಿದ ಗನ್‍ಮ್ಯಾನ್

    ಎಚ್‍ಡಿಕೆಗೆ ಪಿಎಸ್‍ಐ ಅಭ್ಯರ್ಥಿಗಳಿಂದ ಮುತ್ತಿಗೆ ಯತ್ನ- ಅಡ್ಡ ಬಂದವನಿಗೆ ಥಳಿಸಿದ ಗನ್‍ಮ್ಯಾನ್

    ಧಾರವಾಡ: ಇಲ್ಲಿನ ಕರ್ನಾಟಕ ವಿವಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಂದ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಈ ವೇಳೆ ಅಡ್ಡಬಂದ ಪಿಎಸ್‍ಐ ಅಭ್ಯರ್ಥಿಗೆ ಗನ್ ಮ್ಯಾನ್ ಥಳಿಸಿದ ಘಟನೆ ನಡೆದಿದೆ.

    ಹೌದು. ಪಿಎಸ್‍ಐ ಮರು ಪರೀಕ್ಷೆಗೆ ಆಗ್ರಹಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಅಲ್ಲಿಗೆ ಭೇಟಿ ನಿಡಿದ್ದಾರೆ. ಪರೀಕ್ಷೆಗೆ ಕುಳಿತ ಅಭ್ಯರ್ಥಿಗಳಿಗೆ ಅನ್ಯಾಯ ಆಗಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಈ ಮಾತು ವಾಪಸ್ ಪಡೆಯಬೇಕು ಎಂದು ಪಿಎಸ್ ಐ ಅಭ್ಯರ್ಥಿಗಳು ಪಟ್ಟು ಹಿಡಿದರು. ಇದನ್ನೂ ಓದಿ:  ಒಂದು ಚಡ್ಡಿ ಸುಟ್ಟಿದ್ದಕ್ಕೆ ಅರೆಸ್ಟ್ ಮಾಡ್ತೀರಾ? ಎಲ್ಲಾ ಜಿಲ್ಲೆಗಳಲ್ಲೂ ಚಡ್ಡಿಗಳನ್ನು ಸುಡ್ತೀವಿ: ನಲಪಾಡ್ ಸವಾಲು

    ಆರಂಭದಲ್ಲೇ ಎಚ್‍ಡಿಕೆ ಮತ್ತು ಅಭ್ಯರ್ಥಿಗಳ ಮಧ್ಯೆ ವಾಗ್ವಾದ ನಡೆಯಿತು. ಈ ಹಿನ್ನೆಲೆ ವಾಪಸ್ ಹೋಗುವಾಗ ಎಚ್‍ಡಿಕೆ ಕಾರ್‍ಗೆ ಪಿಎಸ್‍ಐ ನೇಮಕಾತಿ ವಂಚಿತ ಅಭ್ಯರ್ಥಿಗಳು ಘೇರಾವ್ ಹಾಕಲು ಯತ್ನಿಸಿದ್ದಾರೆ. ಎಚ್‍ಡಿಕೆ ವಾಹನವನ್ನು ಅಭ್ಯರ್ಥಿಗಳು ಬೆನ್ನತ್ತಿ ಹೋದರು. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟರು. ಕೊನೆಗೆ ವೇಗವಾಗಿ ವಾಹನ ಚಲಾಯಿಸುವ ಮೂಲಕ ಎಚ್‍ಡಿಕೆ ಭಾರೀ ಅಪಾಯದಿಂದ ಪಾರಾದರು. ಇತ್ತ ಕುಮಾರಸ್ವಾಮಿ ವಾಹನವನ್ನು ಬೆನ್ನಟ್ಟಿದ್ದ ಪಿಎಸ್ ಐ ಅಭ್ಯರ್ಥಿ ಮೇಲೆ ಕುಮಾರಸ್ವಾಮಿ ಗನ್‍ಮ್ಯಾನ್ ಹಲ್ಲೆ ನಡೆಸಿದ್ದಾರೆ.

    ಧಾರವಾಡದಲ್ಲಿ ಎಚ್ ಡಿ ಕೆ ಗನ್ ಮ್ಯಾನ್ ಪಿಎಸ್ ಐ ಅಭ್ಯರ್ಥಿ ಮೇಲೆ ಹಲ್ಲೆ ವಿಚಾರ ಸಂಬಂಧ ಹಲ್ಲೆಗೆ ಒಳಗಾದ ರಾಘು ಮಾತನಾಡಿ, ತನಿಖೆ ದಾರಿ ತಪ್ಪಿಸುತ್ತಿದ್ದಾರೆ. ನಾವು ಮನವಿ ಕೊಡಲು ಬಂದಿದ್ದೆವು. ಶಾಂತಿಯುತವಾಗಿ ಕುಮಾರಸ್ವಾಮಿಗೆ ಮನವಿ ಕೊಡಲು ಬಂದಿದ್ದೆವು. ಅವರು ಕಾರು ಸ್ಟಾಪ್ ಮಾಡದೇ ಹೋದರು. ನಾವು ಗೂಂಡಾಗಿರಿ ಮಾಡಲು ಬಂದಿರಲಿಲ್ಲ. ನಾವು ಪೊಲೀಸ್ ಆಗುವವರು, ನಮಗೆ ಅನ್ಯಾಯ ಆಗಿದೆ ಎಂದರು.

    ವಾಹನದ ಹಿಂದೆ ಹೋಗಿದ್ದರಿಂದ ಪೊಲೀಸರು ನಮ್ಮನ್ನು ತಳ್ಳಾಡಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿ 56 ಸಾವಿರ ಜನರಿಗೆ ನ್ಯಾಯ ಕೊಡಬೇಕು. ಪರೀಕ್ಷೆ ದಿನಾಂಕ ಘೋಷಣೆ ಮಾಡಿ. ದಿನೇ ದಿನೇ ನಮಗೆ ಓದಲು ಆಗುತ್ತಿಲ್ಲ. ಮರು ಪರೀಕ್ಷೆ ಕ್ಯಾನ್ಸಲ್ ಎನ್ನುತ್ತಿದ್ದಾರೆ. 545 ಜನರಿಗಷ್ಟೆ ಅನ್ಯಾಯವಾಗಿದೆಯಾ ಎಂದು ರಾಘು ಪ್ರಶ್ನಿಸಿದರು.

  • ಫ್ರಾನ್ಸ್‌ನಲ್ಲಿ ಸಾಧನೆ ಮಾಡಿ ಬಂದ ಧಾರವಾಡದ ಆಟಗಾರ್ತಿ

    ಫ್ರಾನ್ಸ್‌ನಲ್ಲಿ ಸಾಧನೆ ಮಾಡಿ ಬಂದ ಧಾರವಾಡದ ಆಟಗಾರ್ತಿ

    ಧಾರವಾಡ: ಧಾರವಾಡದ ಯುವತಿ ಒಬ್ಬಳು ಇಡೀ ಭಾರತವೇ ಹೆಮ್ಮೆ ಪಡುವಂತೆ ತನ್ನ ಆಟ ಪ್ರದರ್ಶಿಸಿ ಭಾರತಕ್ಕೆ ಪದಕ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾಳೆ.

    ಧಾರವಾಡದ ಮುಗಳಿ ಗ್ರಾಮದ ಪ್ರಿಯಾಂಕ ಒಲೆಕಾರ್, ಫ್ರಾನ್ಸ್‌ನಲ್ಲಿ ನಡೆದ ರಿಲೇ ಓಟದಲ್ಲಿ ಕಂಚಿನ ಪದಕಕ್ಕೆ ಮತ್ತಿಟ್ಟಿದ್ದಾಳೆ. ಓಟದಲ್ಲೇ ಸದಾ ಮುಂದಿದ್ದ ಪ್ರಿಯಾಂಕ ಹಾಸ್ಟೆಲ್‍ನಲ್ಲಿಯೇ ಇದ್ದು, ವಿದ್ಯಾಭ್ಯಾಸದ ಜೊತೆಗೆ ಆಟದಲ್ಲೂ ಸಹ ಮುಂದಾಗಿದ್ದಳು. ಹೀಗಾಗಿ ಭುವನೇಶ್ವರದಲ್ಲಿ ನಡೆದ ಸೆಲೆಕ್ಷನ್‍ನಲ್ಲಿ ಭಾಗಿಯಾಗಿ ಫ್ರಾನ್ಸ್ ಟಿಕೆಟ್‍ನ್ನು ಖಚಿತಪಡಿಸಿಕೊಂಡಿದ್ದಳು. ಇದನ್ನೂ ಓದಿ: ಮೊದಲ ಮಹಾಯುದ್ಧದಲ್ಲಿ ತಯಾರಿಸಿದ್ದ ಸಜೀವ ಬಾಂಬ್ ಪತ್ತೆ – ಮುಂದೇನಾಯ್ತು?

    ಪ್ರಾನ್ಸ್‌ನ ರ್ಮಡಿಯಲ್ಲಿ ನಡೆದ ರಿಲೇ ಸ್ಪರ್ಧೇಯಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದಾಳೆ. ಈಕೆಯ ಸಾಧನೆಗೆ ಬೆನ್ನು ತಟ್ಟಿ ಹಿಂದೆ ನಿಂತಿದ್ದು ಈಕೆಯ ಕೋಚ್ ಶ್ಯಾಮಲಾ ಪಾಟೀಲ್. ಭಾರತದ ಟೀಮ್‍ನ ಕೋಚ್ ಆಗಿದ್ದ ಶ್ಯಾಮಲಾ ಫ್ರಾನ್ಸ್‌ನಲ್ಲಿ ಎಲ್ಲ ರೀತಿಯ ಬೆಂಬಲ ನೀಡುವ ಮೂಲಕ ಪ್ರಿಯಾಂಕ ಸಾಧನೆಗೆ ಕೈ ಜೋಡಿಸಿದರು. ಮೂಲತಃ ಸಾರಿಗೆ ನೌಕರನ ಮಗಳಾಗಿರುವ ಪ್ರಿಯಾಂಕ ಇಷ್ಟೊಂದು ಸಾಧನೆ ಮಾಡಿರುವುದು ಇಡೀ ಧಾರವಾಡಕ್ಕೆ ಹೆಮ್ಮೆ ತಂದಿದೆ.

    64 ದೇಶಗಳ ಎದುರಿಗೆ ಸಮಬಲ ಹೋರಾಟದ ಮೂಲಕ ಎಲ್ಲರನ್ನು ಹಿಂದಿಕ್ಕಿ 3ನೇಯ ಸ್ಥಾನ ಪಡೆದಿದ್ದು ಧಾರವಾಡಕ್ಕೆ ಖುಷಿಯ ಸಂಗತಿ. ಕರ್ನಾಟಕದ ಇಬ್ಬರು ಹಾಗೂ ತಮಿಳುನಾಡಿನ ಇಬ್ಬರು ಯುವತಿಯರು ಪ್ರಿಯಾಂಕಗೆ ಕೈ ಜೋಡಿಸಿದ್ದು, 300 ಮೀಟರ್ ರಿಲೇಯಲ್ಲಿ ಕಂಚಿನ ಪದಕವನ್ನು ಗೆದ್ದು ಬೀಗಿದ್ದಾರೆ. ಅದರಲ್ಲಿ ಫ್ರಾನ್ಸ್ ಮೊದಲ ಸ್ಥಾನ ಪಡೆದರೆ, ಚೀನಾ ಎರಡನೇ ಸ್ಥಾನ ಹಾಗೂ ಭಾರತಕ್ಕೆ 3ನೇಯ ಸ್ಥಾನ ದಕ್ಕಿದೆ. ಇದನ್ನೂ ಓದಿ: ನಿರ್ಮಾಣ ಹಂತದಲ್ಲಿರುವ ಶೋರೂಂನಲ್ಲಿ ನವವಿವಾಹಿತೆ ಶವ ಪತ್ತೆ

    ಒಟ್ಟಾರೆ ಎರಡು ವರ್ಷಗಳಿಂದ ಕೋವಿಡ್ ನೆಪವನ್ನು ಹೇಳುತ್ತಲೇ ಸರ್ಕಾರ ಯಾವುದೇ ಸಹಾಯವನ್ನು ಈ ಯುವ ಅಥ್ಲೆಟಿಕ್ಸ್‌ಗಳಿಗೆ ನೀಡಿಲ್ಲ. ಆದರೂ ಸಹ ಜನರ ಸಹಾಯದಿಂದ ಹಾಗೂ ಸಾಲಸೋಲ ಮಾಡಿಕೊಂಡು ಸಾಧನೆ ಮಾಡಿದ್ದು ನಿಜಕ್ಕೂ ಯುವತಿಯ ಸಾಧನೆಗೆ ನಮ್ಮದೊಂದು ಸಲಾಂ.

  • ರಾಜ್ಯದ ಎರಡನೇ ಅತಿದೊಡ್ಡ ಪಾಲಿಕೆ ಬಿಜೆಪಿ ತೆಕ್ಕೆಗೆ

    ರಾಜ್ಯದ ಎರಡನೇ ಅತಿದೊಡ್ಡ ಪಾಲಿಕೆ ಬಿಜೆಪಿ ತೆಕ್ಕೆಗೆ

    ಧಾರವಾಡ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯಾಗಿರುವ ಹುಬ್ಬಳ್ಳಿ-ಧಾರವಾಡ ಬಿಜೆಪಿ ತೆಕ್ಕೆಗೆ ಜಾರಿದೆ. ಮೂರೂವರೆ ವರ್ಷಗಳ ಬಳಿಕ ಮೇಯರ್ ಉಪಮೇಯರ್ ಸ್ಥಾನ ಭರ್ತಿಯಾಗಿವೆ.

    ಮೇಯರ್ ಆಗಿ ಈರೇಶ ಅಂಚಟಗೇರಿ ಆಯ್ಕೆಯಾದರೆ, ಉಪಮೇಯರ್ ಆಗಿ ಉಮಾ ಮುಕುಂದ ಆಯ್ಕೆ ಆಗಿದ್ದಾರೆ. ಕೈ ಎತ್ತುವ ಮೂಲಕ 50 ಮತಗಳನ್ನು ಪಡೆದ ಮೇಯರ್, ಉಪಮೇಯರ್ ಆಯ್ಕೆ ಮಾಡಲಾಯಿತು. ವೋಟಿಂಗ್‍ನಲ್ಲಿ ಪಾಲಿಕೆಯ ಸದಸ್ಯರು, ಜೋಶಿ, ಶೆಟ್ಟರ್ ಸೇರಿದಂತೆ ಪಾಲಿಕೆಯ ವ್ಯಾಪ್ತಿಯ ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಮಹಾನಗರ ಪಾಲಿಕೆ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಬಣ್ಣ ಎರಚಿ ಸಂಭ್ರಮಿಸಿದರು.

    82 ಸಂಖ್ಯಾಬಲವುಳ್ಳ ಪಾಲಿಕೆಯಲ್ಲಿ ಬಹುಮತಕ್ಕೆ 42 ಬೇಕಿತ್ತು. ಚುನಾವಣೆಯಲ್ಲಿ ಕ್ರಮವಾಗಿ ಬಿಜೆಪಿ 39, ಕಾಂಗ್ರೆಸ್ 33 ಜೆಡಿಎಸ್ 01 ಎಐಎಂಐಎಂ 3 ಪಕ್ಷೇತರರು 6 ಸ್ಥಾನ ಗಳಿಸಿದ್ದರು. ಇದನ್ನೂ ಓದಿ: ಸಂಜೆ 7 ರಿಂದ ಬೆಳಗ್ಗೆ 6 ರವರೆಗೆ ಮಹಿಳೆ ಉದ್ಯೋಗಿಗಳನ್ನು ದುಡಿಸುವಂತಿಲ್ಲ: ಯೋಗಿ ಆದೇಶ

    5 ಶಾಸಕರು, 1 ಎಂಪಿ, 1 ವಿಧಾನ ಪರಿಷತ್ ಸದಸ್ಯರಿಗೆ ಮತದಾನದ ಅವಕಾಶ ಹಿನ್ನೆಲೆಯಲ್ಲಿ ಬಿಜೆಪಿ ಸಂಖ್ಯಾ ಬಲ 45ರ ಜೊತೆಗೆ ಇಬ್ಬರು ಪಕ್ಷೇತರರು ಸೇರ್ಪಡೆಯಾಗಿದ್ದು, ಸಂಖ್ಯಾ ಬಲ 47 ಇತ್ತು. ಮೇಯರ್ ಆಯ್ಕೆಗೆ ಶುಕ್ರವಾರ ಪ್ರಹ್ಲಾದ್‌ ಜೋಷಿ ನೇತೃತ್ವದಲ್ಲಿ ಸಭೆ ಕೂಡ ನಡೆದಿತ್ತು.

  • ವಾರದ ಹಿಂದೆ ಮದುವೆಯಾಗಿದ್ದ ಯುವಕ ರಸ್ತೆ ಅಪಘಾತಕ್ಕೆ ಬಲಿ – ಒಂದೇ ವಾರದಲ್ಲಿ 12 ಸಾವು

    ವಾರದ ಹಿಂದೆ ಮದುವೆಯಾಗಿದ್ದ ಯುವಕ ರಸ್ತೆ ಅಪಘಾತಕ್ಕೆ ಬಲಿ – ಒಂದೇ ವಾರದಲ್ಲಿ 12 ಸಾವು

    ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಮುಂದುವರಿಯುತ್ತಿದೆ. ಕಳೆದ 1 ವಾರದಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 12 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

    ಹುಬ್ಬಳ್ಳಿಯ ತಾರಿಹಾಳ ಬಳಿಯ ಬೈಪಾಸ್‌ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಮೃತಪಟ್ಟಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತಕ್ಕೆ 5ರ ಮಗು ಬಲಿ – ಸಾವಿನ ಸಂಖ್ಯೆ 11ಕ್ಕೆ ಏರಿಕೆ

    ಬುಲೇರೊ ಕಾರ್ ಮತ್ತು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಯುವಕ ಆನಂದ ಮಾದರ (27) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ತಾಲೂಕಿನ ಚಳಮಟ್ಟಿ ಗ್ರಾಮದ ನಿವಾಸಿಯಾಗಿರುವ ಆನಂದ ಕಳೆದ ಮೇ 20 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಕುರಿತು ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ACCIDENT

    ಅಣ್ಣಿಗೇರಿ ತಾಲ್ಲೂಕಿನ ಭದ್ರಾಪೂರ ಬಳಿ ನಡೆದ ಮತ್ತೊಂದು ಪ್ರಕರಣದಲ್ಲಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ತಿಮ್ಮಣ್ಣ ಮರಿಗೌಡರ್ (27), ಮುಹಬಕರ್ ಅಲಿ (22), ಜುಬೇಕರ್ (25) ಮತ್ತು ಸುಹೇಬಾ (23) ಗಾಯಗೊಂಡಿದ್ದಾರೆ. ಸುಹೇಬಾಗೆ ಎದೆ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಣ್ಣಿಗೇರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

  • ಮುಸ್ಲಿಂ ಸಮಾಜ ಹಠ ಮಾಡದೇ ಅನುಭವ ಮಂಟಪ ಬಿಟ್ಟು ಕೊಡಬೇಕು: ಮುತಾಲಿಕ್

    ಮುಸ್ಲಿಂ ಸಮಾಜ ಹಠ ಮಾಡದೇ ಅನುಭವ ಮಂಟಪ ಬಿಟ್ಟು ಕೊಡಬೇಕು: ಮುತಾಲಿಕ್

    ಧಾರವಾಡ: ಬಸವ ಕಲ್ಯಾಣ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಅನುಭವ ಮಂಟಪ. ಆದರೆ ಅದನ್ನು ನಿಜಾಮನ ಕಾಲದಲ್ಲಿ ಅತಿಕ್ರಮಣ ಮಾಡಿ, ಪೀರ್ ಪಾಷಾ ದರ್ಗಾ ಮಾಡಲಾಗಿದೆ. ಇದೀಗ ಮುಸ್ಲಿಂ ಸಮಾಜ ಹಠ ಮಾಡದೇ ಅನುಭವ ಮಂಟಪವನ್ನು ಬಿಟ್ಟು ಕೊಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ಇಂದು ಸರ್ಕಾರ ಬಸವಕಲ್ಯಾಣದಲ್ಲಿ ಬೇರೆ ಕಡೆ ಅನುಭವ ಮಂಟಪ ಮಾಡುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಈಗಿರುವ ಮೂಲ ಸ್ಥಾನ ಅದು, ಭಕ್ತಿಯ ಸ್ಥಳ, 12ನೇ ಶತಮಾನದಲ್ಲಿ ಕ್ರಾಂತಿ ಮಾಡಿದ ಸ್ಥಳ. ಆ ಜಾಗವನ್ನು ಬಿಟ್ಟು ಕೊಡಬೇಕು ಎಂದರು. ಇದನ್ನೂ ಓದಿ: ಕಳೆದ ಎಂಟು ವರ್ಷಗಳಿಂದ ಬಡವರಿಗಾಗಿ ಮೋದಿ ಸರ್ಕಾರ ಕೆಲಸ ಮಾಡ್ತಿದೆ: ಪ್ರಹ್ಲಾದ್ ಜೋಶಿ

    ನಿಜಾಮನ ಕಾಲದಲ್ಲಿ ಅನುಭವ ಮಂಟಪವನ್ನು ಅತಿಕ್ರಮಣ ಮಾಡಲಾಗಿತ್ತು. ಅದಕ್ಕೆ ದಾಖಲೆಗಳಿವೆ. ಹಿಂದೂ ಧರ್ಮದ ನಿರ್ಲಕ್ಷ್ಯದಿಂದ ಅನುಭವ ಮಂಟಪ ಇನ್ನೊಬ್ಬರ ಪಾಲಾಗಿದೆ. ಸರ್ಕಾರ ಅದನ್ನು ವಾಪಸ್ ಪಡೆದುಕೊಳ್ಳಬೇಕು. ಮುಸ್ಲಿಂ ಸಮಾಜ ಅದನ್ನು ಶಾಂತ ರೀತಿಯಿಂದ ಬಿಟ್ಟುಕೊಡಬೇಕು. ಇಲ್ಲ ಎಂದರೆ ಗಲಭೆಗಳು ಪ್ರಾರಂಭವಾಗಬಹುದು ಎಂದು ಹೇಳಿದರು. ಇದನ್ನೂ ಓದಿ: ವಿಧಾನ ಪರಿಷತ್ 7 ಸ್ಥಾನಗಳಿಗೆ ಅವಿರೋಧ ಆಯ್ಕೆ – ಅಧಿಕೃತ ಘೋಷಣೆ

    ವೀರಶೈವ ಲಿಂಗಾಯತ ಪ್ರತಿನಿಧಿಗಳು ಇದರ ಬಗ್ಗೆ ಬಾಯಿ ಬಿಡಬೇಕು. ಜೂನ್ 12 ರಂದು ನಮ್ಮ ನಡೆ ಬಸವಕಲ್ಯಾಣದ ಕಡೆ ಎಂಬ ಕರೆ ನೀಡಲಾಗಿದ್ದು, ಬಹಳಷ್ಟು ಜನ ಸಾಧು, ಸಂತರು ಅಲ್ಲಿಗೆ ಬರುತ್ತಾರೆ. ಅದಕ್ಕೆ ನಾವೂ ಬೆಂಬಲ ಕೊಡಲಿದ್ದೇವೆ ಎಂದರು.

  • ರಸ್ತೆ ಅಪಘಾತಕ್ಕೆ 5ರ ಮಗು ಬಲಿ – ಸಾವಿನ ಸಂಖ್ಯೆ 11ಕ್ಕೆ ಏರಿಕೆ

    ರಸ್ತೆ ಅಪಘಾತಕ್ಕೆ 5ರ ಮಗು ಬಲಿ – ಸಾವಿನ ಸಂಖ್ಯೆ 11ಕ್ಕೆ ಏರಿಕೆ

    ಹುಬ್ಬಳ್ಳಿ: ಮೇ 20ರಂದು ಧಾರವಾಡ ಜಿಲ್ಲೆಯಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

    ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ 5 ವರ್ಷದ ಮಗು ಸೇರಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ACCIDENT

    ಆರಾಧ್ಯ ಹುತಮಲ್ಲಣ್ಣವರ (5) ಹಾಗೂ ಮುತ್ತು ಮರಿಗೌಡ (16) ಎಂಬವರೇ ಮೃತಪಟ್ಟವರು. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರನ್ನು 6 ದಿನಗಳ ಹಿಂದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಶೀಲ ಶಂಕಿಸಿ ತಲೆ ಹಿಡಿದು ನೆಲಕ್ಕೆ ಜಜ್ಜಿದ ಪತಿ – ಸ್ಥಳದಲ್ಲೇ ಪತ್ನಿ ಸಾವು 

    ಇದೇ ಮೇ 20 ರಂದು ಧಾರವಾಡದ ಬಾಡ ಬಳಿ ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದರು. ಐಸಿಯುನಲ್ಲಿದ್ದ ಇಬ್ಬರು ಇಂದು ಮೃತಪಟ್ಟಿದ್ದು ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

  • ಪತ್ನಿ ಜೊತೆ ಲಕ್ಕಿ ಕಾರಿನಲ್ಲಿ ಬಂದು ನಾಮಪತ್ರ ಸಲ್ಲಿಸಿದ ಹೊರಟ್ಟಿ

    ಪತ್ನಿ ಜೊತೆ ಲಕ್ಕಿ ಕಾರಿನಲ್ಲಿ ಬಂದು ನಾಮಪತ್ರ ಸಲ್ಲಿಸಿದ ಹೊರಟ್ಟಿ

    ಧಾರವಾಡ: ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಇಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

    ಪತ್ನಿ ಹೇಮಲತಾ ಜೊತೆ ತಮ್ಮ ಲಕ್ಕಿ ಕಾರ್ ಅಂಬಾಸಿಡರ್‌ ಅಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಒಂದು ಸೆಟ್ ನಾಮಪತ್ರ ಪತ್ನಿ ಜೊತೆ ಹಾಗೂ ಮತ್ತೊಂದು ಸೆಟ್ ನಾಮಪತ್ರ ತಮ್ಮ ಆಪ್ತರ ಜೊತೆಯಲ್ಲಿ ಸಲ್ಲಿಸಿದರು. ಈ ವೇಳೆ ಪತ್ನಿ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ ಬಗ್ಗೆ ಕೇಳಿದ್ದಕ್ಕೆ ಭಾವುಕರಾದ ಅವರ ಕಣ್ಣಿನಲ್ಲಿ ನೀರು ತುಂಬಿ ಬಂತು.

    ಈ ವೇಳೆ ಮಾತನಾಡಿದ ಅವರು, ಎರಡು ಸೆಟ್‍ನಲ್ಲಿ ನಾಮಪತ್ರ ಸಲ್ಲಿಸಿದ್ದೇನೆ. ಎರಡೂ ಸೆಟ್ ನಾಮಪತ್ರ ಸ್ವೀಕಾರ ಆಗಿವೆ. ಇನ್ನು ಮೇ 26ಕ್ಕೆ ಸಿಎಂ, ಪ್ರಹ್ಲಾದ ಜೋಶಿ ಸೇರಿ ಅನೇಕ ನಾಯಕರು ಬರುತ್ತಾರೆ. ಆಗ ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಇದನ್ನೂ ಓದಿ: 75 ಲಕ್ಷ ಲಂಚ ಕೊಟ್ಟಿದ್ದೇನೆ, ಬ್ಲೂಟೂತ್‍ನಲ್ಲಿ ಪರೀಕ್ಷೆ ಬರೆದಿದ್ದೇನೆ – ತನಿಖೆಗೆ ಡಿಜಿಗೆ ಪತ್ರ ಬರೆದ ಅಭ್ಯರ್ಥಿ

    ದೇಶದಲ್ಲಿ ಯಾರೂ ಏಳು ಬಾರಿ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿಲ್ಲ. ಆದರೆ ನಾನು 8ನೇ ಗೆಲುವು ಸಾಧಿಸಿದರೆ ದಾಖಲೆ ಆಗುತ್ತದೆ. ಆ ದಾಖಲೆ ಆಗಬೇಕು ಎಂದೇ ಎಲ್ಲರೂ ನಮ್ಮ ಕಡೆ ಒಲವು ತೋರಿಸಿದ್ದಾರೆ ಎಂದರು.

    ಅಂಬಾಸಿಡರ್‌ ಅಲ್ಲಿ ಬಂದು ನಾಮಪತ್ರ ಸಲ್ಲಿಕೆ ಮಾಡಿದ ಬಗ್ಗೆ ಮಾತನಾಡಿದ ಅವರು, ಅದೆನೋ ಒಂದು ಭಾವನಾತ್ಮಕ ಸಂಬಂಧ, ನನಗೆ ಈ ಕಾರ್ ಮೇಲೆ ಬಹಳ ಪ್ರೀತಿ, ಆ ಪ್ರೀತಿಗಾಗಿ ತೆಗೆದುಕೊಂಡು ಬಂದಿದ್ದೇನೆ. ಈಗಾಗಲೇ ಅದು 8 ಲಕ್ಷ ಕಿ.ಮೀ ಓಡಿದೆ, ಎಲ್ಲರಿಗೂ CNB 5757 ಅಂದರೆ ಪರಿಚಯ ಎಂದ ಅವರು, ಈ ಕಾರಿನಲ್ಲಿ ಹೋದರೆ ಹೊರಟ್ಟಿ ಬಂದ್ರು ಎನ್ನುತ್ತಿದ್ದರು. ಕುಟುಂಬಕ್ಕೆ ಅದನ್ನ ಉಪಯೋಗ ಮಾಡುತ್ತೇವೆ. ಶುಭ ಕಾರ್ಯಕ್ಕೆ ಈ ಕಾರ್ ಒಳ್ಳೆಯದು ಎಂದು ತಲೆಯಲ್ಲಿದ್ದು, ಹೀಗಾಗಿ ಆ ಕಾರು ಬಳಸುತ್ತೇವೆ ಎಂದರು. ಇದನ್ನೂ ಓದಿ: ಆದಷ್ಟು ಬೇಗ ಮಂಗಳಮುಖಿ ಸರ್ಕಾರ ತೆಗೆಯಬೇಕು: ಸಿಎಂ ಇಬ್ರಾಹಿಂ

  • ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ಧಾರವಾಡ: ಬಾಡಾ ಗ್ರಾಮದ ಬಳಿ ಶನಿವಾರ ಮದುವೆ ನಿಶ್ಚಿತಾರ್ಥ ಮುಗಿಸಿಕೊಂಡು ಬರುವಾಗ ನಿಗದಿ ಗ್ರಾಮದ 9 ಜನ ಮದುಮಗನ ಕಡೆಯವರು ಸಾವನ್ನಪ್ಪಿದ್ದರು. ಈ ಹಿನ್ನೆಲೆ 5 ಲಕ್ಷ ರೂ. ಪರಿಹಾರವನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

    ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮೃತ ಕುಟುಂಬಕ್ಕೆ ಪರಿಹಾರ ಕೊಡಿಸುವುದಾಗಿ ಭರವಸೆ ಕೊಟ್ಟಿದ್ದರು. ಈ ಹಿನ್ನೆಲೆ ಬೊಮ್ಮಾಯಿ ಅವರು ಟ್ವೀಟ್ ಮಾಡುವ ಮೂಲಕ ಪರಿಹಾರವನ್ನು ಘೋಷಿಸಿದ್ದಾರೆ.

    ACCIDENT

    ಈ ಬಗ್ಗೆ ಟ್ವಿಟ್ಟರ್‍ನಲ್ಲಿ ಬರೆದುಕೊಂಡಿರುವ ಬೊಮ್ಮಾಯಿ ಅವರು, ಧಾರವಾಡದ ಬಾಡಾ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮನವಿಯ ಮೆರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಸುತ್ತೇನೆ ಎಂದು ಬರೆದುಕೊಂಡಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಶೀಲ ಶಂಕಿಸಿ ತಲೆ ಹಿಡಿದು ನೆಲಕ್ಕೆ ಜಜ್ಜಿದ ಪತಿ – ಸ್ಥಳದಲ್ಲೇ ಪತ್ನಿ ಸಾವು 

    ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮನಸೂರ ಗ್ರಾಮದಿಂದ ಬೆನಕನಟ್ಟಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ಮೃತರನ್ನು ಮಹೇಶ್ವರಯ್ಯ(11), ಅನನ್ಯ(14), ಹರೀಶ್ (12), ಶಿಲ್ಪಾ (34), ನೀಲವ್ವ(60), ಮಧುಶ್ರೀ (20) ಹಾಗೂ ಶಂಭುಲಿಂಗಯ್ಯ(35) ಎಂದು ಗುರುತಿಸಲಾಗಿದೆ.

  • ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಮುಳುಗಡೆ – ಸಿಲಿಕಾನ್ ಸಿಟಿಯಲ್ಲಿ ವಾತಾವರಣ ಕೂಲ್

    ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಮುಳುಗಡೆ – ಸಿಲಿಕಾನ್ ಸಿಟಿಯಲ್ಲಿ ವಾತಾವರಣ ಕೂಲ್

    ಬೆಂಗಳೂರು/ಅಂಕೋಲಾ: ಕಳೆದೊಂದು ವಾರದಿಂದ ಅಬ್ಬರಿಸುತ್ತಿದ್ದ ವರುಣ ಈಗ ಕೊಂಚ ಶಾಂತವಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮಳೆಯಿಂದಾಗಿ ಅಂಕೋಲದ ಗಂಗಾವಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ತಾತ್ಕಾಲಿಕ ಸೇತುವೆ ಹಾಗೂ ಗುಳ್ಳಾಪುರ ಮತ್ತು ಡೊಂಗ್ರಿ ಗ್ರಾಮ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ.

    RAIN 3

    ಭಟ್ಕಳದ ಜಾಲಿಯಲ್ಲಿ ಮಣ್ಣು ಕುಸಿದು ಕಾರು ಹಳ್ಳಕ್ಕೆ ಬಿದ್ದಿದೆ. ದಾವಣಗೆರೆಯ ನ್ಯಾಮತಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮದಲ್ಲಿ ಕಟಾವು ಮಾಡಿ ಬಣವೆ ಹಾಕಿದ್ದ ಭತ್ತ ಮಳೆ ನೀರಿಗೆ ನೆನದು ಮೊಳಕೆ ಬಂದಿವೆ. ಮೊಳಕೆಯೊಡೆದ ಭತ್ತ ಹಿಡಿದು ವೃದ್ಧೆ ಕಾಳಮ್ಮ ಕಣ್ಣೀರಿಟ್ಟಿದ್ದಾರೆ. ಸಾಲ-ಸೋಲ ಮಾಡಿ ಎಕರೆಗೆ ಸಾವಿರಾರು ರೂಪಾಯಿ ಬಂಡವಾಳ ಹೂಡಿದ್ದೇವೆ. ಈಗ ಫಸಲು ಕೈಗೆ ಬರುವುದರೊಳಗೆ ಮಳೆ ಬಂದು ಭತ್ತ ಮೊಳಕೆಯೊಡೆದಿದೆ ಎಂದು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಬ್ರಿಗೇಡ್ ರೋಡ್‍ನಲ್ಲಿ ಕಟ್ಟಡದ ಮೇಲಿಂದ ಬಿದ್ದು ಯುವತಿ ಸಾವು

    ಹಳ್ಳದಲ್ಲಿ ಸಿಲುಕಿದ್ದ ವ್ಯಕ್ತಿ ರಕ್ಷಣೆ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಡದಳ್ಳಿ ಗ್ರಾಮದ ಬಳಿಯ ಬೆಣ್ಣಿ ಹಳ್ಳದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು 3 ಗಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ತಾಲೂಕಿನಾದ್ಯಂತ ಕಳೆದ 3 ದಿನಗಳಿಂದ ಸುರಿದ ಭಾರೀ ಮಳೆಗೆ ಬೆಣ್ಣಿಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿತ್ತು. ಈ ವೇಳೆ ಸ್ಥಳಕ್ಕೆ ಬಂದಿದ್ದ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಯುವಕನ ಆರೋಗ್ಯ ವಿಚಾರಿಸಿದ್ರು. ಇತ್ತ ಬೆಂಗಳೂರಿನಲ್ಲಿ ಇಂದು ತಂಪು ವಾತಾವರಣ ಮುಂದುವರಿದಿದೆ.