Tag: ಧಾರವಾಢ

  • ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿಯಲಿದೆ ಮಳೆಯಬ್ಬರ

    ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿಯಲಿದೆ ಮಳೆಯಬ್ಬರ

    ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನಾಳೆ ಆರೆಂಜ್ ಮತ್ತು ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

    ಕಳೆದೊಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕಲಬುರಗಿಯ ಮಂದಿ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ತುಂಬಿ ಹರಿಯುತ್ತಿರುವ ಭೀಮಾ ನದಿಯಿಂದ ಅನೇಕ ಸೇತುವೆಗಳು ಜಲಾವೃತಗೊಂಡಿವೆ. ಮಳೆ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ಅನೇಕರು ಸಂಕಷ್ಟಕ್ಕೆ ಒಳಗಾದರೆ, ಸಾವಿರಾರು ಹೆಕ್ಟೇರ್ ಬೆಳೆಯೂ ಸಹ ಹಾನಿಯಾಗಿದೆ. ಘತ್ತರಗಿ ಬಳಿ ಸೇತುವೆ ಮುಳುಗಡೆಯಾಗಿರುವುದರಿಂದ ಅಫಜಲಪುರ ಜೇವರ್ಗಿ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.

    ಕಾಫಿನಾಡಿನ ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತದ ಭೀತಿ ಎದುರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅಂತ ಮಳೆಯಿಂದ ಸುಮಾರು ನಾಲ್ಕೈದು ಕಡೆ ಭೂಕುಸಿತ ಉಂಟಾಗಿದೆ. ಕುಸಿದ ಗುಡ್ಡದ ಮಣ್ಣನ ಜೆಸಿಬಿ ಮೂಲಕ ಸರಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

    ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಬಹುತೇಕ ಬೆಳೆಗಳು ನಾಶವಾಗಿವೆ. ಜಿಲ್ಲೆಯಲ್ಲಿ ಹೆಚ್ಚಿನ ರೈತರು ಸೋಯಾಬಿನ್ ಬೆಳೆದಿದ್ರು. ಆದರೆ ಬೆಳೆ ಕಿಳಬೇಕು ಎನ್ನುವಷ್ಟರಲ್ಲಿ ಮಳೆ ಬಂದಿದ್ದರಿಂದ ಬಹುತೇಕ ಸೊಯಾಬಿನ್ ಮೊಳಕೆಯೊಡೆಯುವಂತೆ ಆಗಿದೆ. ಇದಲ್ಲದೇ ಹೆಸರು, ಉದ್ದು, ಮೆಕ್ಕಜೋಳ ಹಾಗೂ ಶೇಂಗಾ ಬೆಳೆ ಕೂಡ ಹಾಳಾಗಿವೆ.

  • ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ, ಮಾರಾಟಕ್ಕೆ ಚಾಲನೆ

    ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ, ಮಾರಾಟಕ್ಕೆ ಚಾಲನೆ

    ಧಾರವಾಡ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ(ಕೆಎಸ್‍ಐಸಿ)ದಿಂದ ನಗರದ ಭಾವಸಾರ ಮಂಗಳ ಕಾರ್ಯಾಲಯದಲ್ಲಿ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ.

    ಡಿಸೆಂಬರ 26 ರವರೆಗೆ ಕರ್ನಾಟಕದ ಪಾರಂಪಾರಿಕ ಉತ್ಪನ್ನವಾದ “ಮೈಸೂರ್ ಸಿಲ್ಕ್” ಸೀರೆಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಚಾಲನೆ ನೀಡಿದರು.

    ಈ ವೇಳೆ ಮಾತನಾಡಿದ ವರ್ತಿಕಾ ಕಟಿಯಾರ್, ದೇಶದಲ್ಲಿ ದೊರೆಯುವ ಇತರೆ ರೇಷ್ಮೆ ವಸ್ತ್ರಗಳಿಗಿಂತ “ಮೈಸೂರ್ ಸಿಲ್ಕ್” ವಿಭಿನ್ನವಾಗಿದೆ, ಇದು ಹಳೇ ಮೈಸೂರು ಪ್ರದೇಶದಲ್ಲಿ ದೊರೆಯುವ ಪ್ರಾಕೃತಿಕ ರೇಷ್ಮೆಗೂಡಿನಿಂದ ದೊರೆಯುವ ಅತ್ಯುತ್ತಮ ರೇಷ್ಮೆಯಿಂದ ಮಾಡಲ್ಪಟ್ಟಿದೆ. ಕೆಎಸ್‍ಐಸಿ ಮೈಸೂರು ಸಿಲ್ಕ್ ಸೀರೆಗಳು ಈಗಿನ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಹೆಚ್ಚಾಗಿ ಮಾರಾಟವಾಗುವ ಮತ್ತು ಬೇಡಿಕೆಯಲ್ಲಿವೆ. ಅದರಲ್ಲೂ ಮಹಿಳೆಯರಿಗೆ ವಿವಾಹಗಳ ಮತ್ತು ಹಬ್ಬ ಹರಿದಿನಗಳ ಸಂದರ್ಭಗಳಲ್ಲಿ ಬಹು ಅಚ್ಚುಮೆಚ್ಚಿನ ಆಯ್ಕೆಯಾಗಿವೆ ಎಂದರು.