Tag: ಧಾರಾವಾಹಿ

  • ಸೂರ್ಯದೇವ ಪಾತ್ರಧಾರಿಯ ಅಸಲಿ ಕಥೆ!

    ಸೂರ್ಯದೇವ ಪಾತ್ರಧಾರಿಯ ಅಸಲಿ ಕಥೆ!

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಶನಿ’ ಧಾರಾವಾಹಿಯನ್ನು ನೋಡುವವರಿಗೆ ಸೂರ್ಯದೇವನ ಪರಿಚಯ ಇದ್ದೇ ಇರುತ್ತೆ. ಈ ಧಾರಾವಾಹಿಯಲ್ಲಿ ಸೂರ್ಯದೇವ ಪಾತ್ರವನ್ನು ರಂಜಿತ್ ಕುಮಾರ್ ಅವರು ಮಾಡಿದ್ದಾರೆ.

    ಶನಿ ಕಿರುತೆರೆ ಜಗತ್ತಿನ ನಂಬರ್ ಒನ್ ಸೀರಿಯಲ್ ಶೋವಾಗಿದ್ದು, ಪ್ರೇಕ್ಷಕರ ಮನವನ್ನು ಗೆದ್ದಿದೆ. ಇವತ್ತು ಪ್ರೇಕ್ಷಕರ ಮುಂದೆ ಸೂರ್ಯದೇವನಾಗಿ ನಿಲ್ಲುವುದಕ್ಕೆ ರಂಜಿತ್‍ಕುಮಾರ್ ಜೀವನದಲ್ಲಿ ತುಂಬಾ ಕಷ್ಟ ಪಟ್ಟಿದ್ದಾರೆ.

    ಹೈಟ್- ಪರ್ಸನಾಲಿಟಿ ಜೊತೆಗೆ ಟ್ಯಾಲೆಂಟ್ ಇದ್ದರೂ ರಂಜಿತ್‍ ಗೆ ಅವಕಾಶಗಳು ಸಿಗುತ್ತಿರಲಿಲ್ಲ. ಟ್ವಿಕ್ಲಿಂಗ್ ಬಜಾರ್ ನಲ್ಲಿ ಸಣ್ಣದೊಂದು ಚಾನ್ಸ್ ಗಾಗಿ ಸಿಕ್ಕಾಪಟ್ಟೆ ಸೈಕಲ್ ಹೊಡೆದಿದ್ದಾರೆ. ರಂಜಿತ್ ತೀರಾ ಕಡುಬಡತನದ ಮಗನೇನು ಅಲ್ಲ. ಇಂಡಿಗೋ ಏರ್ ಲೈನ್ಸ್ ಕಂಪನಿಯಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದರು. ಆದರೆ ರಂಜಿತ್ ಅವರಿಗೆ ಸಿನಿಮಾದಲ್ಲಿ ಅಭಿನಯಿಸುವ ಕನಸಿತ್ತು.

    ರಂಜಿತ್‍ ಕುಮಾರ್ ಮಾತು
    ನಾನು ಬಾಲ್ಯದಿಂದಲೂ ಕರಾಟೆ ಕಲಿತ್ತಿದ್ದೇನೆ. ಆದರೆ ನನಗೆ ಸಿನಿಮಾದಲ್ಲಿ ಮಾಡಬೇಕೆಂದು ಆಸೆ ಇರಲಿಲ್ಲ. ನನಗೆ ಏರ್ ಲೈನ್ಸ್ ನಲ್ಲಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಅದೇ ರೀತಿ ಇಂಡಿಗೋ ಏರ್ ಲೈನ್ಸ್ ಕಂಪನಿಯಲ್ಲಿ ಕೆಲಸ ಸಿಕ್ಕಿತ್ತು. ಎರಡು ವರ್ಷ ಅಲ್ಲಿಯೇ ಇದ್ದೆ. ನಮ್ಮ ಅಕ್ಕ ನಟಿ ಮಾಲಾಶ್ರೀ ಅವರಿಗೆ ಬೌನ್ಸರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಕೂಡ ಒಳ್ಳೆಯ ಪರ್ಸನಾಲಿಟಿ ಇದೆ ಸಿನಿಮಾದಲ್ಲಿ ಅಭಿನಯಿಸು ಎಂದು ಹೇಳಿದರು.

    ಸಿನಿಮಾದಲ್ಲಿ ಚಾನ್ಸ್ ಕ್ಕಾಗಿ ತುಂಬಾ ಕಷ್ಟ ಪಟ್ಟಿದ್ದೇನೆ. ಬೆಳಗ್ಗೆ ಗಾಂಧಿನಗರಕ್ಕೆ ಹೋದರೆ ಸಂಜೆವರೆಗೂ ಕಾಯುತ್ತಿದ್ದೆ. ಯಾರು ಸಿಗುತ್ತಿರಲಿಲ್ಲ, ಎಲ್ಲರು ಹೈಟ್, ಪರ್ಸನಾಲಿಟಿ ಇದೆ ಸಿನಿಮಾದಲ್ಲಿ ಮಾಡಿ ಎಂದು ಹೇಳುತ್ತಿದ್ದರು. ಆದ್ದರಿಂದ ನಾನು ಸಿನಿಮಾದಲ್ಲಿ ಮಾಡಬೇಕು ಎಂದು ಪ್ರಯತ್ನ ಪಟ್ಟಿದ್ದೇನೆ. ಕೊನೆಗೆ ಸತತ ನಾಲ್ಕು ವರ್ಷ ಅಲೆದಾಡಿದ್ದೇನೆ. ಈ ಸಮಯದಲ್ಲಿ ಎಷ್ಟು ಚಪ್ಪಲಿ ಸವೆದಿದಿಯೋ ಗೊತ್ತಿಲ್ಲ ಎಂದ್ರು

    ಸಿನಿಮಾ ಅವಕಾಶಕ್ಕಾಗಿ ಸಿನಿಮಾ ನಟರಿಗೆ ನಾನು ಬೌನ್ಸರ್ಸ್ ಕೆಲಸ ಮಾಡಿದ್ದೇನೆ. ನಾನು ನಟಿ ಮಾಲಾಶ್ರೀ ಅವರಿಂದ ಸಿನಿಮಾಗೆ ಬಂದೆ. ಮೊದಲ ಬಾರಿ ನಾನು ದರ್ಶನ್ ಅಭಿನಯದ ‘ಪೊರ್ಕಿ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದೆ. ಅಲ್ಲಿಂದ ಅಣ್ಣಾಬಾಂಡ್, ಜಾಕಿ ಮತ್ತು ತಮಸ್ಸು ಹೀಗೆ ಸ್ಟಾರ್ ನಟರುಗಳ ಸಿನಿಮಾದಲ್ಲಿ ಅಭಿನಯಸಿದ್ದೇನೆ ಎಂದು ಹೇಳಿದ್ದಾರೆ.

    ಶನಿ ಧಾರಾವಾಹಿ:
    ನಾನು ಡಾ. ರಾಜ್ ಕುಮಾರ್ ಅವರನ್ನು ನೋಡಿ ಕಮರ್ಷಿಯಲ್ ಸಿನಿಮಾಗಳಿಗಿಂತ ಪೌರಾಣಿಕ ಪಾತ್ರಗಳನ್ನ ಮಾಡಿ ಸೈ ಎನಿಸಿಕೊಳ್ಳಬೇಕು ಎಂಬ ಮಹದಾಸೆ ಇಟ್ಟುಕೊಂಡಿದ್ದೆ. ಇದೇ ವೇಳೆ ಶನಿ ಧಾರಾವಾಹಿಯ ಅವಕಾಶ ಬಂತು. ಬಳಿಕ ಸಿನಿಮಾದ ಅವಕಾಶಗಳನ್ನು ಬಿಟ್ಟು ಶನಿ ಧಾರಾವಾಹಿಗೆ ಹೋದೆ. ಡಾ. ರಾಜ್ ಕುಮಾರ್ ಅವರಿಂದ ಪ್ರೇರೇಪಣೆ ಪಡೆದುಕೊಂಡು ಪೌರಾಣಿಕ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    ಸದ್ಯಕ್ಕೆ ರಂಜಿತ್ ಕುಮಾರ್ ಅವರಿಗೆ ಸೂರ್ಯದೇವನ ಪಾತ್ರವನ್ನ ನೋಡಿ ಹಲವು ಅವಕಾಶಗಳು ಬರುತ್ತಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕನ್ನಡ ಪ್ರೇಕ್ಷಕರಿಗೆ ಪುಟ್ಟಗೌರಿ ಕಡೆಯಿಂದ ಗುಡ್ ನ್ಯೂಸ್

    ಕನ್ನಡ ಪ್ರೇಕ್ಷಕರಿಗೆ ಪುಟ್ಟಗೌರಿ ಕಡೆಯಿಂದ ಗುಡ್ ನ್ಯೂಸ್

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಹಲವು ವರ್ಷಗಳಿಂದ ಪ್ರಸಾರವಾಗುತ್ತಿದ್ದ ‘ಪುಟ್ಟಗೌರಿ ಮದುವೆ’ ಧಾರಾವಾಹಿ ಕೊನೆಗೂ ಮುಕ್ತಾಯವಾಗುತ್ತಿದೆ.

    ಎಲ್ಲರ ಪ್ರೀತಿ- ಆಶೀರ್ವಾದದಿಂದ ಪುಟ್ಟಗೌರಿ 1800 ಎಪಿಸೋಡ್ ಮುಗಿಸಿ ಯಶಸ್ವಿ ಪ್ರದರ್ಶನವಾಗ್ತಿದೆ. ಆದರೆ ಪುಟ್ಟಗೌರಿ ತಂಡಕ್ಕೆ ಸೀರಿಯಲ್ ಸ್ಟಾಪ್ ಮಾಡುವ ಯೋಚನೆ ಬಂದಿದೆ. ಹಾಗಾಗಿ ಭರದಿಂದ ಚಿತ್ರೀಕರಣ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಈ ಸುದ್ದಿ ಕೇಳಿ ಕೆಲವರ ಮನಸ್ಸಿಗೆ ಖುಷಿಯಾಗಿದೆ. ಆದರೆ ಮಹಿಳೆಯರಿಗೆ ಇದು ಒಂದು ದುಃಖದ ವಿಷಯ ಎಂದು ಹೇಳಬಹುದು. ಧಾರಾವಾಹಿ ನಿರ್ದೇಶಕರು ಹಾಗೂ ನಿರ್ಮಾಪಕರ ಆದೇಶದಂತೆ ಪುಟ್ಟಗೌರಿಗೆ ಶೀಘ್ರದಲ್ಲೇ ಶುಭಂ ಕಾರ್ಡ್ ಬೀಳಲಿದೆ. ಮತ್ತೊಂದು ಖುಷಿಯ ವಿಚಾರ ಏನೆಂದರೆ ಪುಟ್ಟಗೌರಿ ಬದಲಿಗೆ ಮಂಗಳಗೌರಿ ಸೀರಿಯಲ್ ಶುರು ಮಾಡಲಾಗುತ್ತಿದೆ. ಸದ್ಯಕ್ಕೆ ಮಂಗಳಗೌರಿಯ ಸುದ್ದಿ ಇನ್ನೂ ಅಧಿಕೃತವಾಗಿಲ್ಲ.

    ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಗೌರಿ ಪಾತ್ರಧಾರಿ ರಂಜಿತಾ ಸಾಕಷ್ಟು ಟ್ರೋಲ್ ಆಗಿದ್ದರು. ಬೆಟ್ಟದ ಮೇಲಿಂದ ಬಿದ್ದರೂ ಗೌರಿ ಸಾಯಲ್ಲ. ಬುಸ್‍ಬುಸ್ ನಾಗಪ್ಪ ಗೌರಿ ಮುಂದೆ ಫುಲ್ ಸೈಲೆಂಟ್. ಇನ್ನೂ ಅಬ್ಬರಿಸಿ ಬೊಬ್ಬಿರಿಯುವ ಹುಲಿ ಕೂಡ ಗೌರಮ್ಮನ ಮುಂದೆ ಕಮಕ್-ಕಿಮಕ್ ಅನ್ನಲ್ಲ. ನರಭಕ್ಷಕರು ಕೈಗೆ ಸಿಲುಕಿಕೊಳ್ಳುವ ಗೌರಿ ಕೊನೆಗೆ ರಾಕ್ಷಸರಿಂದ ದೈವಶಕ್ತಿಯಿಂದ ಪಾರಾಗುತ್ತಾಳೆ. ಅಷ್ಟೇ ಅಲ್ಲದೇ ಗೌರಿಯ ಸಾಹಸಕ್ಕೆ ಟಾಲಿವುಡ್ ಲೆಜೆಂಡ್ ಬಾಲಯ್ಯ ಈಕೆಗೆ ಶಹಬ್ಬಾಸ್ ಹೇಳಿರುವ ರೀತಿಯಲ್ಲಿ ಜನರು ಮೀಮ್ಸ್ ಜೊತೆ ಜೋಡಿಸಿ ಗೌರಿಯನ್ನು ಟ್ರೋಲ್ ಮಾಡಿದ್ದರು.

    ಖಾಸಗಿ ಚಾನೆಲ್‍ನಿಂದ ಪುಟ್ಟಗೌರಿ ಮದುವೆ ಹಾಗೂ ಸೋಶಿಯಲ್ ಮೀಡಿಯಾದಿಂದ ಪುಟ್ಟಗೌರಿಗೆ ಸಾಕಷ್ಟು ಹೆಸರು ಬಂತು. ಪುಟ್ಟಗೌರಿ ಎನಿಸಿಕೊಳ್ಳುತ್ತಿದ್ದ ಗೌರಿಗೆ ಜಂಗಲ್‍ಗೌರಿ ಎನ್ನುವ ಹೆಸರು ಕೂಡ ಬಂತು. ಇದೆಲ್ಲದರ ನಡುವೆ ಪುಟ್ಟಗೌರಿ ಮುಗಿದರೆ ಸಾಕು, ರಬ್ಬರ್ ತರಹ ಕಥೇನಾ ಎಳಿತಿದ್ದಾರೆ ಎಂದು ಹೇಳುತ್ತಿದ್ದವರಿಗೆ ಈಗ ಸಂತೋಷದ ಸುದ್ದಿ ಸಿಕ್ಕಿದೆ. ಸದ್ಯ ಕೊನೆಗೂ ಪುಟ್ಟಗೌರಿ ಮದುವೆ ಧಾರಾವಾಹಿಗೆ ಶುಭಂ ಹೇಳುವಂತಹ ಟೈಮ್ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್

    ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್

    ಬೆಂಗಳೂರು: ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಫಿ ತೋಟದ ಮಾಲೀಕ ದೀಪಕ್ ಮಯೂರ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ವಾರಸ್ದಾರ ಧಾರಾವಾಹಿ ಕಾರ್ಯಕಾರಿ ನಿರ್ಮಾಪಕ ಮಹೇಶ್ ಪ್ರತ್ಯಾರೋಪ ಮಾಡಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಹೇಶ್, ಈ ಮೊದಲು ನನಗೆ ಅನ್ಯಾಯವಾಗಿದೆ ಎಂದು ದೀಪಕ್ ಚಿಕ್ಕಮಗಳೂರು ಎಸ್‍ಪಿ ಬಳಿ ಹೋಗಿದ್ದರು. ಅಲ್ಲಿ ನನಗೆ 88 ರಿಂದ 90 ಲಕ್ಷ ರೂ. ಆಗಿದೆ ಅಂತಾ ಆರೋಪಿಸಿದರು. ಆದರೆ ಎಸ್‍ಪಿ ತೋಟದ ಬೆಲೆಯೇ ಅಷ್ಟಿಲ್ಲ. ಹಾಗಾಗಿ ನೀವು ನ್ಯಾಯಾಲಯದ ಮೊರೆ ಹೋದರೆ ಒಳ್ಳೆಯದು ಎಂದು ಸಲಹೆ ನೀಡಿ ಕಳುಹಿಸಿದರು. ಎಸ್‍ಪಿ ಸಲಹೆಯಂತೆ ದೀಪಕ್ ಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ಆರೋಪಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸುವಂತೆ ಆದೇಶಿಸಿತ್ತು. ನಾವು ಅಲ್ಲಿಯೂ ನ್ಯಾಯಾಲಯಕ್ಕೆ ನಮ್ಮ ಬಳಿಯ ದಾಖಲೆಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

    ಏನಿದು ವಿವಾದ?:
    ಕೆಲ ಸಮಯಗಳ ಹಿಂದೆ ಖಾಸಗಿ ವಾಹಿನಿಯಲ್ಲಿ ನಟ ಕಿಚ್ಚ ಸುದೀಪ್ ಅವರ ಕಿಚ್ಚ ಕ್ರಿಯೇಷನ್ ನಿರ್ಮಾಣದ ಅಡಿಯಲ್ಲಿ ವಾರಸ್ದಾರ ಧಾರಾವಾಹಿ ಪ್ರಸಾರವಾಗುತ್ತಿತ್ತು. ಈಗ ಈ ಧಾರಾವಾಹಿ ಪ್ರಸಾರ ನಿಂತಿದ್ದು, ಇದರ ಚಿತ್ರೀಕರಣಕ್ಕಾಗಿ ಚಿಕ್ಕಮಗಳೂರಿನ ದೀಪಕ್ ಮಯೂರ್ ಪಟೇಲ್ ಎಂಬುವವರ ಮನೆ ಮತ್ತು ಕಾಫಿ ತೋಟವನ್ನು ಬಾಡಿಗೆಗೆ ತಂಡ ಪಡೆದಿತ್ತು.

    ಧಾರಾವಾಹಿ ಸಂದರ್ಭದಲ್ಲಿ ಕಾಫಿ ತೋಟಕ್ಕೆ ಸಾಕಷ್ಟು ಹಾನಿಯಾಗಿದೆ. ಹಾನಿಯಾದ ಹಿನ್ನೆಲೆಯಲ್ಲಿ ಒಟ್ಟು 1.50 ಕೋಟಿ ರೂ. ನಷ್ಟವಾಗಿದ್ದು ಈ ಹಣವನ್ನು ನೀಡಬೇಕೆಂದು ನಿರ್ಮಾಣ ತಂಡಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆಯನ್ನು ಸುದೀಪ್ ಕ್ರಿಯೇಶನ್ಸ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ದೀಪಕ್ ಮಯೂರ್ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ದೂರು ನೀಡಿದ್ದಾರೆ.

    ಮಹೇಶ್ ಹೇಳೋದು ಏನು?
    ವಾರಸ್ದಾರ ಧಾರಾವಾಹಿಯ ಚಿತ್ರೀಕರಣ ವೇಳೆ ನಮ್ಮೆಲ್ಲ ಕಲಾವಿದರಿಗೂ ಹೋಟೆಲ್‍ನಲ್ಲಿ ಉಳಿದುಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಆದ್ರೆ ದೀಪಕ್, ನಿಮ್ಮ ತಂಡಕ್ಕೆ ವಸತಿ ವ್ಯವಸ್ಥೆಯನ್ನು ನಾನು ಕಲ್ಪಿಸಿಕೊಡುತ್ತೇನೆ. ಹೋಟೆಲ್‍ಗೆ ನೀಡುವ ಹಣವನ್ನೇ ನನಗೆ ನೀಡಿ ಅಂತಾ ಮನವಿ ಮಾಡಿಕೊಂಡಿದ್ದರು. ನಮ್ಮನ್ನು ನಂಬಿ ಹೋಮ್ ಸ್ಟೇ ಮಾಡಬೇಡಿ. ಇಲ್ಲಿ ನಾವು ಹೆಚ್ಚು ದಿನ ಇರಲ್ಲ ಎಂದು ಹೇಳಿದರೂ ನೀವು ಹೋದ ಮೇಲೆ ನಾನು ಅದನ್ನೇ ಹೋಮ್ ಸ್ಟೇ ಮಾಡಿಕೊಂಡು ಜೀವನ ಸಾಗಿಸುತ್ತೇನೆ ಎಂದು ತಿಳಿಸಿ ನಮ್ಮೆಲ್ಲರಿಗೂ ವಸತಿ ವ್ಯವಸ್ಥೆ ಮಾಡಿಕೊಟ್ಟಿದ್ದರು.

    ನಾವು ಮನೆಯಲ್ಲಿ ಮಾತ್ರ ಶೂಟಿಂಗ್ ಮಾಡಿದ್ದು, ಅದಕ್ಕೆ ಸಂಬಂಧಪಟ್ಟಂತೆ ಬಾಡಿಗೆಯನ್ನು ಕೊಟ್ಟಿದ್ದೇವೆ. 70 ಸಾವಿರ ಬಾಡಿಗೆ ಮಾತ್ರ ಬಾಕಿ ಉಳಿದುಕೊಂಡಿತ್ತು. ಬಾಡಿಗೆ ನೀಡಿಲ್ಲ ಎಂದು ಆರೋಪಿಸಿ ಚಿತ್ರೀಕರಣಕ್ಕಾಗಿ ತಂದಿದ್ದ ಉಪಕರಣಗಳನ್ನು ಅವರ ಬಳಿಯೇ ಇಟ್ಟುಕೊಂಡಿದ್ದಾರೆ. ನಾವು ಬಾಡಿಗೆ ಹಣ 70 ಸಾವಿರ ಕೊಡಲು ಸಿದ್ಧರಿದ್ದು, ನಮ್ಮ 7 ಲಕ್ಷ ಮೌಲ್ಯದ ಉಪಕರಣಗಳನ್ನು ಕೊಡಿ ಎಂದರು ಕೊಡುತ್ತಿಲ್ಲ

    ಸದ್ಯ ದೀಪಕ್ ಧಾರಾವಾಹಿ ತಂಡ ತೋಟದಲ್ಲಿ ಮನೆ ಕಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಸದ್ಯ ದೀಪಕ್ ಅವರಿಗೆ ಹಣ ಬೇಕಾಗಿದ್ದು, ಶೂಟಿಂಗ್ ಮುಗಿಸಿ ಬಂದಾಗಿನಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ತೋಟದಲ್ಲಿ ಯಾವುದೇ ಮನೆಯನ್ನು ಕಟ್ಟಿಲ್ಲ. ನಾವು ಬಾಡಿಗೆಯ 70 ಸಾವಿರ ಕೊಡಲು ಹೋದಾಗ ತೋಟ ಹಾಳು ಮಾಡಿದ್ದಕ್ಕೆ 1 ಕೋಟಿ 50 ಲಕ್ಷ ರೂ. ಡಿಮ್ಯಾಂಡ್ ಮಾಡುತ್ತಿದ್ದಾರೆ. ಈ ವಿಚಾರ ಸುದೀಪ್ ಅವರ ಗಮನಕ್ಕೆ ಬಂದಿತ್ತು. ಆದರೆ ದೀಪಕ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂಬುವುದು ಸುದೀಪ್ ಅವರಿಗೆ ಎಂದು ತಿಳಿದಿತ್ತು. ಈ ವಿಚಾರದಲ್ಲಿ ಸುದೀಪ್ ಅವರ ತಪ್ಪಿಲ್ಲ.

    ದೀಪಕ್ ವಿರುದ್ಧ ದೂರು ನೀಡಲು ನಮ್ಮ ಬಳಿಯೂ ದಾಖಲೆಗಳಿವೆ. ಚಿತ್ರೀಕರಣ ಆರಂಭಿಸಿದ ದಿನದಿಂದ ಕೊನೆಯ ದಿನವರೆಗೂ ಎಲ್ಲ ಹಣದ ವ್ಯವಹಾರಗಳನ್ನು ಬ್ಯಾಂಕ್ ಮುಖಾಂತರವೇ ನಡೆಸಲಾಗಿದೆ. ದೀಪಕ್ ಸಹೋದರ ಮತ್ತು ತಂದೆ ಯಾವುದೇ ಆರೋಪಗಳನ್ನು ಮಾಡುತ್ತಿಲ್ಲ. ನಾವು ಯಾವುದೇ ಮೋಸ ಮಾಡಿಲ್ಲ. ಫಿಲ್ಮ್ ಚೇಂಬರ್‍ಗೆ ದೂರು ನೀಡುವುದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಮಹೇಶ್ ಪ್ರತಿಕ್ರಿಯಿಸಿದ್ದಾರೆ.

  • ಸ್ಯಾಂಡಲ್‍ವುಡ್ ನಿರ್ದೇಶಕನಿಂದ ಹಿರಿಯ ನಟಿಗೆ ದೋಖಾ!

    ಸ್ಯಾಂಡಲ್‍ವುಡ್ ನಿರ್ದೇಶಕನಿಂದ ಹಿರಿಯ ನಟಿಗೆ ದೋಖಾ!

    ಬೆಂಗಳೂರು: ಕಿರುತೆರೆಯ ಹಿರಿಯ ನಟಿ ಮಂಜುಳಮ್ಮ ಅವರಿಗೆ ನಿರ್ದೇಶಕ ನವೀನ್ ರೈ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

    ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಅವಕಾಶಗಳನ್ನು ಕೊಡಿಸುವದಾಗಿ ಹೇಳಿ ನವೀನ್ ರೈ ಲಕ್ಷಾಂತರ ರೂಪಾಯಿಯನ್ನ ಪಡೆದುಕೊಂಡಿದ್ದರು. ಆದರೆ ನವೀನ್ ರೈ ಯಾವುದೇ ಸಿನಿಮಾ ಮತ್ತು ಧಾರವಾಹಿಗಳಲ್ಲಿ ಅವಕಾಶಗಳನ್ನ ಕೊಡಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಂಜುಳಮ್ಮ ತಾವು ನೀಡಿದ ಹಣ ಹಿಂದಿರುಗಿಸುವಂತೆ ಕೇಳಿದ್ದಾರೆ. ಹಣ ಕೇಳಿದ್ದಕ್ಕೆ ಕೆಲ ಹುಡುಗರನ್ನು ಕಳುಹಿಸಿ ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಮಂಜುಳಮ್ಮ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಕಲ್ಲಿನ ವೀಣೆ ಧಾರಾವಾಹಿ ಶೂಟಿಂಗ್ ವೇಳೆ ಮಂಜುಳಮ್ಮ ಅವರಿಗೆ ನವೀನ್ ರೈ ಪರಿಚಯ ಮಾಡಿಕೊಂಡಿದ್ದನು. ಚಂದನವನದಲ್ಲಿ ತನಗೆ ಎಲ್ಲರೂ ಪರಿಚಯ ಸ್ಟಾರ್ ನಟರ ಸಿನಿಮಾದಲ್ಲಿ ಪೋಷಕ ಪಾತ್ರಗಳನ್ನು ಕೊಡಿಸುತ್ತೇನೆ ಎಂದು ನಂಬಿಸಿ ಒಡವೆ ಹಾಗು 15 ಲಕ್ಷ ರೂ. ಹಣ ಪಡೆದುಕೊಂಡಿದ್ದಾನೆ ಎಂದು ಮಂಜುಳಮ್ಮ ಆರೋಪಿಸುತ್ತಿದ್ದಾರೆ.

  • ಟವಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಲು ಹೋಗಿ ಎಡವಟ್ಟು ಮಾಡ್ಕೊಂಡ ನಟಿ!

    ಟವಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಲು ಹೋಗಿ ಎಡವಟ್ಟು ಮಾಡ್ಕೊಂಡ ನಟಿ!

    ಮುಂಬೈ: ಕಿರುತೆರೆಯ ನಟಿಯೊಬ್ಬರು ತನ್ನ ಗೆಳತಿಯರೊಂದಿಗೆ ಟವಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ.

    ಹಿಂದಿಯ ಖಾಸಗಿ ಚಾನೆಲ್ ನ ಧಾರಾವಾಹಿಯ ಪ್ರಮುಖ ನಟಿಯಾಗಿರುವ ಶ್ರದ್ಧಾ ಆರ್ಯಳ ಸೆಕ್ಸಿ ಡ್ಯಾನ್ಸ್ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ. ಧಾರಾವಾಹಿಯಲ್ಲಿ ಪ್ರೀತಾ ಪಾತ್ರದಲ್ಲಿ ಸರಳ ಹುಡುಗಿಯಾಗಿ ಕಾಣಿಸಿಕೊಂಡ ಶ್ರದ್ಧಾ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಏನದು ಎಡವಟ್ಟು?: ತನ್ನಿಬ್ಬರ ಗೆಳತಿಯರೊಂದಿಗೆ ಟವಲ್ ಸುತ್ತಿಕೊಂಡು ರಾಣಿ ಮುಖರ್ಜಿ ಮತ್ತು ಪ್ರೀತಿ ಜಿಂಟಾ ಅಭಿನಯದ `ಹರ್ ದಿಲ್ ಜೋ ಪ್ಯಾರ್ ಕರೇಗಾ’ ಸಿನಿಮಾದ ಪಿಯಾ..ಪಿಯಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವೇಳೆ ಗೆಳತಿಯರ ಮಧ್ಯದಲ್ಲಿ ನಿಂತು ಡ್ಯಾನ್ಸ್ ಮಾಡ್ತಿದ್ದರು. ಈ ವೇಳೆ ಮುಂದೆ ನಿಂತಿದ್ದ ಗೆಳತಿಯ ಕೈ ಶ್ರದ್ಧಾಳ ಕಣ್ಣಿಗೆ ತಾಗಿಸಿಕೊಂಡು ಎಡವಟ್ಟು ಮಾಡಿಕೊಂಡಿದ್ದಾರೆ.

    ಇದೇ ವಿಡಿಯೋವನ್ನು ಶ್ರದ್ಧಾ ತಮ್ಮ ಇನ್ ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದು, ಕೆಲ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ರೆ, ಇನ್ನು ಕೆಲವರು ಫನ್ನಿ ಫನ್ನಿ ಕಮೆಂಟ್ ಮಾಡಿದ್ದಾರೆ. ಪ್ಲ್ಯಾನ್ ಮಾಡದೇ ಡ್ಯಾನ್ಸ್ ಮಾಡಲು ಹೋಗಿ ಈ ರೀತಿಯ ಎಡವಟ್ಟು ಆಗಿದೆ ಅಂತಾ ಶ್ರದ್ಧಾ ಬರೆದುಕೊಂಡಿದ್ದಾರೆ.

    https://www.instagram.com/p/BgiHn3eBAjE/?taken-by=sarya12

  • ಈಗ ಯಾರೇ ನೀ ಮೋಹಿನಿ ಕಾಟ: ಧಾರಾವಾಹಿಯಲ್ಲಿನ ಭೂತ ನೋಡಿ ವಿದ್ಯಾರ್ಥಿನಿಗೆ ಚಳಿ ಜ್ವರ!

    ಈಗ ಯಾರೇ ನೀ ಮೋಹಿನಿ ಕಾಟ: ಧಾರಾವಾಹಿಯಲ್ಲಿನ ಭೂತ ನೋಡಿ ವಿದ್ಯಾರ್ಥಿನಿಗೆ ಚಳಿ ಜ್ವರ!

    ತುಮಕೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ನಂದಿನಿ ಧಾರಾವಾಹಿಯ ಪಾತ್ರ ಅನುಕರಣೆ ಮಾಡಿ ಬಾಲಕಿಯೊರ್ವಳು ಬಲಿಯಾದ ಘಟನೆ ಮಾಸುವ ಮುನ್ನವೇ `ಯಾರೇ ನೀ ಮೋಹಿನಿ’ ಯ ಕಥೆ ಕೇಳಿ ವಿದ್ಯಾರ್ಥಿನಿಯೊಬ್ಬಳು ಅಸ್ವಸ್ಥಳಾಗಿದ್ದಾಳೆ.

    ಹೌದು. ತುಮಕೂರು ನಗರದ ಬೈಲಾಂಜನೇಯಸ್ವಾಮಿ ದೇವಸ್ಥಾನದ ಬಳಿ ಇರುವ ಇಂಡೋಕಿಟ್ಸ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಧಾರಾವಾಹಿಯಲ್ಲಿನ ಭೂತದ ಕಥೆ ಕೇಳಿ ಇಬ್ಬರು ಮಕ್ಕಳು ಹೆದರಿ ಅದರಲ್ಲಿ ಓರ್ವ ಬಾಲಕಿ ಚಳಿ ಜ್ವರದಿಂದ ಅಸ್ವಸ್ಥಳಾಗಿದ್ದಾಳೆ. ಇದನ್ನೂ ಓದಿ: ಶಾಕಿಂಗ್.. ಸೀರಿಯಲ್ ಸೀನ್ ನೋಡಿ ಬೆಂಕಿ ಹಚ್ಚಿಕೊಂಡು ಬಾಲಕಿ ಸಾವು!

    ಯಾರೇ ನೀ ಮೋಹಿನಿ ಧಾರವಾಹಿ ವೀಕ್ಷಿಸಿದ ಬಾಲಕಿ ಪುಷ್ಮಿತಾ ಶಾಲೆಗೆ ಬಂದು ತನ್ನ ಸಹಪಾಠಿ ಪ್ರತಿಕ್ಷಾಗೆ ಹೇಳಿದ್ದಾಳೆ. ಧಾರಾವಾಹಿಯಲ್ಲಿ ಇರುವಂತೆ ಶಾಲೆಯಲ್ಲೂ ಕೂಡ ಭೂತ-ಪಿಶಾಚಿ ಇದೆ ಎಂದು ಪುಷ್ಮಿತಾ ತಾನು ಹೆದರಿದ್ದಲ್ಲದೇ ಪ್ರತಿಕ್ಷಾಗೂ ಹೆದರಿಸಿದ್ದಾಳೆ.

    ಈ ಭಯದಲ್ಲೇ ಮನೆಗೆ ಹೋಗಿದ್ದ ಪ್ರತಿಕ್ಷಾಗೆ ಚಳಿ-ಜ್ವರ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಪೋಷಕರು ಚಿಕಿತ್ಸೆ ನೀಡಿ ವಿಚಾರಿಸಿದಾಗ ಪ್ರತಿಕ್ಷಾ ಧಾರಾವಾಹಿಯಲ್ಲಿನ ಭೂತದ ಕಥೆ ಹೇಳಿದ್ದಾಳೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸೀರಿಯಲ್ ಗೆ ಬಾಲಕಿ ಬಲಿ ಪ್ರಕರಣ- ಟಿವಿ ಒಡೆದು ನೊಂದ ಪೋಷಕರ ಆಕ್ರೋಶ

  • ಕಾಳಿ ಅವತಾರವನ್ನ ಅನುಕರಿಸಲು ಹೋಗಿ ಉಸಿರುಗಟ್ಟಿ ಬಾಲಕ ಸಾವು

    ಕಾಳಿ ಅವತಾರವನ್ನ ಅನುಕರಿಸಲು ಹೋಗಿ ಉಸಿರುಗಟ್ಟಿ ಬಾಲಕ ಸಾವು

    ಲಕ್ನೋ: 14 ವರ್ಷದ ಬಾಲಕನೊಬ್ಬ ಕಾಳಿ ಮಾತೆಯ ಅವತಾರವನ್ನು ಅನುಕರಿಸಲು ಹೋಗಿ ನೇಣು ಬಿಗಿದುಕೊಂಡು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶ ರಾಜಧಾನಿಯಾದ ಲಕ್ನೋದಲ್ಲಿ ನಡೆದಿದೆ.

    ಚಿತ್ರರಂಜನ್ ಮೃತ ದುರ್ದೈವಿ. ಈತ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಮಂಗಳವಾರ ರಾತ್ರಿ ತನ್ನ 9 ವರ್ಷದ ತಂಗಿ ಗುಂಜಾನ್ ಮತ್ತು ನೆರೆಹೊರೆಯವರ ಜೊತೆ ಆಟವಾಡುತ್ತಿದ್ದ. ಈ ಸಂದರ್ಭದಲ್ಲಿ ದೂರದರ್ಶನದಲ್ಲಿ ಪ್ರಸಾರವಾಗುವ `ಮಹಾ ಕಾಳಿ’ ಧಾರಾವಾಹಿಯನ್ನ ನೋಡಿ ನಾನು ಕಾಳಿ ಅವತಾರ ತೋರಿಸುತ್ತೇನೆ ಎಂದು ಹೇಳಿದ್ದಾನೆ.

    ಅದೇ ರೀತಿ ಚಿತ್ರರಂಜನ್ ಒಂದು ದುಪ್ಪಟ್ಟ ತೆಗೆದುಕೊಂಡು ಬಾಗಿಲ ಬಳಿ ಹಾಕಿ ಕುತ್ತಿಗೆ ಸುತ್ತಾ ಬಿಗಿಯಾಗಿ ಸುತ್ತಿಕೊಂಡಿದ್ದಾನೆ. ಆದರೆ ದುರದೃಷ್ಟವಶಾತ್ ಆತ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ತಕ್ಷಣ ಮಕ್ಕಳು ಭಯದಿಂದ ಕೂಗಲು ಆರಂಭಿಸಿದ್ದಾರೆ. ಅಲ್ಲೇ ಸಮೀಪದಲ್ಲಿದ್ದ ಪೋಷಕರು ಓಡಿ ಬಂದು ಮಗನನ್ನು ಕೂಡಲೇ ಕೆಳಗಿಳಿಸಿದ್ದಾರೆ. ಆದರೆ ಅಷ್ಟರಲ್ಲಿ ಬಾಲಕ ಸಾವನ್ನಪ್ಪಿದ್ದ.

    ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ವಿಚಾರಣೆ ಮಾಡಿದ್ದಾರೆ. ಆಗ ಮಕ್ಕಳು ಮಹಾಕಾಳಿ ಧಾರಾವಾಹಿಯಲ್ಲಿ ಬರುವ ಕಾಳಿ ಮಾತೆಯನ್ನು ನೋಡಿ ಕಾಳಿಯ ರೀತಿ ನಾನು ನಾಲಿಗೆಯನ್ನು ಹೊರ ಬರಿಸಿ ತೋರಿಸುತ್ತೇನೆ ಅಂತಾ ಹೇಳಿದ್ದ ಎಂದು ತಿಳಿಸಿದ್ದಾರೆ.

    ಈ ಹಿಂದೆಯೂ ಧಾರಾವಾಹಿಯನ್ನು ನೋಡಿ ಬಾಲಕ ಕೆಲವು ಬಾರಿ ಇದೇ ರೀತಿ ಮಾಡಲು ಹೋಗಿದ್ದ. ಆದರೆ ಈತನ ತಾಯಿ ಆಗ ಬೈದು ಈ ರೀತಿ ಮಾಡಬಾರದು. ದೇವಿಗೆ ಕೋಪ ಬರುತ್ತದೆ ಎಂದು ಹೇಳಿದ್ದರು. ಆದರೆ ತಾಯಿ ಮನೆ ಕೆಲಸ ಮಾಡುವುದರಲ್ಲಿ ಬ್ಯುಸಿಯಾಗಿದ್ದರು. ಈ ಸಂದರ್ಭದಲ್ಲಿ ಎರಡನೇ ಬಾರಿ ಕಾಳಿಯ ಅವತಾರವನ್ನು ಅನುಕರಿಸಲು ಪ್ರಯತ್ನಿಸಿದ್ದಾನೆ. ಆದರೆ ದುರದೃಷ್ಟವಶಾತ್ ಪ್ರಾಣವನ್ನೇ ಕಳೆದುಕೊಂಡಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ.

    ಸದ್ಯಕ್ಕೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಇದನ್ನು ಓದಿ:  ಶಾಕಿಂಗ್.. ಸೀರಿಯಲ್ ಸೀನ್ ನೋಡಿ ಬೆಂಕಿ ಹಚ್ಚಿಕೊಂಡು ಬಾಲಕಿ ಸಾವು!

  • ಸೀರಿಯಲ್ ಗೆ ಬಾಲಕಿ ಬಲಿ ಪ್ರಕರಣ- ಟಿವಿ ಒಡೆದು ನೊಂದ ಪೋಷಕರ ಆಕ್ರೋಶ

    ಸೀರಿಯಲ್ ಗೆ ಬಾಲಕಿ ಬಲಿ ಪ್ರಕರಣ- ಟಿವಿ ಒಡೆದು ನೊಂದ ಪೋಷಕರ ಆಕ್ರೋಶ

    ದಾವಣಗೆರೆ: 7 ವರ್ಷದ ಬಾಲಕಿ ಪ್ರಾರ್ಥನಾ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ನಂದಿನಿ ಸೀರಿಯಲ್ ನೋಡಿ ಅದೇ ರೀತಿ ನಟನೆ ಮಾಡಲು ಹೋಗಿ ಸಾವನ್ನಪ್ಪಿದ ಹಿನ್ನಲೆಯಲ್ಲಿ ನೊಂದ ಪೋಷಕರು ಟಿವಿಯನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಳೆದ 11 ನೇ ತಾರೀಖಿನಂದು ನಡೆದ ಘಟನೆಯಿಂದ ಅಘಾತ ಉಂಟಾಗಿರುವ ಮಗುವಿನ ಪೋಷಕರು ಟಿವಿಯ ಮೇಲೆ ತಮ್ಮ ಆಕ್ರೋಶ ತೋರಿಸಿದ್ದಾರೆ. ನಗು ನಗುತ್ತಾ ಮನೆಯ ತುಂಬಾ ಓಡಾಡುತ್ತಿದ್ದ ಮಗು ಈಗ ಕಾಣದ ಲೋಕಕ್ಕೆ ಹೋಗಿದೆ. ಇದೆಕ್ಕೆಲ್ಲ ಕಾರಣ ಈ ಟಿವಿ, ಇದರಿಂದಲೇ ನಮ್ಮ ಮಗು ಸಾವನ್ನಪ್ಪಿದೆ ಎಂದು ಪ್ರಾರ್ಥನಾ ತಂದೆ ಮಂಜುನಾಥ್ ಕಲ್ಲಿನಿಂದ ಒಡೆದು ಹಾಕಿದ್ದಾರೆ.

    ಅಲ್ಲದೇ ಧಾರಾವಾಹಿಯ ನಿರ್ದೇಶಕರ ಮೇಲೆ ಹಾಗೂ ಸಂಬಂಧಪಟ್ಟವರ ಮೇಲೆ ದೂರು ನೀಡಲು ಹಲವು ಮುಖಂಡರು ಹೇಳಿದ್ದರು. ಆದ್ರೆ ಮಗುವಿನ ಪೋಷಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಕೂಲಿ ಮಾಡಿ ಜೀವನ ಮಾಡುವ ನಮಗೆ ಕೋರ್ಟು ಕಚೇರಿ ಎಂದು ಓಡಾಡಲು ಆಗುವುದಿಲ್ಲ. ಇರೋ ಇಬ್ಬರು ಮಕ್ಕಳನ್ನು ಹುಷಾರಾಗಿ ಸಾಕುತ್ತೇವೆ ಎಂದು ಪೋಷಕರು ಹೇಳುತ್ತಿದ್ದಾರೆ.

    https://youtu.be/ukbXoVNhqR8

  • ಶಾಕಿಂಗ್.. ಸೀರಿಯಲ್ ಸೀನ್ ನೋಡಿ ಬೆಂಕಿ ಹಚ್ಚಿಕೊಂಡು ಬಾಲಕಿ ಸಾವು!

    ಶಾಕಿಂಗ್.. ಸೀರಿಯಲ್ ಸೀನ್ ನೋಡಿ ಬೆಂಕಿ ಹಚ್ಚಿಕೊಂಡು ಬಾಲಕಿ ಸಾವು!

    ದಾವಣಗೆರೆ: ಖಾಸಗಿ ವಾಹಿನಿಯಲ್ಲಿನ ಧಾರಾವಾಹಿ ನೋಡಿ ಬೆಂಕಿ ಹಚ್ಚಿಕೊಂಡು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಚೈತ್ರಾ ಮತ್ತು ಮಂಜುನಾಥ ದಂಪತಿಯ ಮಗಳು ಪ್ರಾರ್ಥನಾ (7) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಹರಿಹರ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ನವೆಂಬರ್ 11 ರಂದು ಈ ಘಟನೆ ನಡೆದಿದೆ.

    ಸೆಂಟ್ ಮೇರಿಸ್ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ಪ್ರಾರ್ಥನಾ ಪ್ರತಿದಿನ ಮಧ್ಯಾಹ್ನ ಮರುಪ್ರಸಾರ ಆಗುತ್ತಿದ್ದ ನಂದಿನಿ ಧಾರಾವಾಹಿಯನ್ನು ವೀಕ್ಷಿಸುತ್ತಿದ್ದಳು. ನವೆಂಬರ್ 11 ಶನಿವಾರ ಮನೆಗೆ ಬಂದವಳೇ ಧಾರಾವಾಹಿ ವೀಕ್ಷಿಸಿದ್ದಾಳೆ. ಈ ಧಾರಾವಾಹಿ ನಾಯಕಿ ಪೇಪರ್ ಹಚ್ಚಿಕೊಂಡು ಕುಣಿಯುವುದನ್ನು ನೋಡಿದ್ದಾಳೆ. ನಾಯಕಿ ಕುಣಿಯುವುದನ್ನು ನೋಡಿ ಪ್ರಾರ್ಥನಾ ಬೆಂಕಿ ಹಂಚಿಕೊಂಡಿದ್ದಾಳೆ.

    ಮನೆಯಲ್ಲಿ ದೊಡ್ಡವರು ಇರಲಿಲ್ಲ:
    ಪ್ರಾರ್ಥನಾ ಪೋಷಕರು ಕೆಲಸಕ್ಕೆ ಹೋಗುತ್ತಿದ್ದು, ಅಜ್ಜಿ ಪ್ರಾರ್ಥನಾಳನ್ನು ಪ್ರತಿದಿನ ಶಾಲೆಯಿಂದ ಮನೆಗೆ ಕರೆತರುತ್ತಿದ್ದರು. ಆಕೆಯನ್ನು ಮನೆಗೆ ತಂದು ಬಿಟ್ಟು ಟಿವಿ ಆನ್ ಮಾಡಿ ಹೊರಗಡೆ ಹೋಗಿದ್ದಾರೆ. ಈ ವೇಳೆ ಪ್ರಾರ್ಥನಾ ಬೆಂಕಿ ಹಚ್ಚಿಕೊಂಡಿದ್ದಾಳೆ.

    ಗೊತ್ತಾಗಿದ್ದು ಹೇಗೆ?
    ಬೆಂಕಿ ಹಚ್ಚಿಕೊಂಡು ವಿಲವಿಲನೇ ಒದ್ದಾಡುವುದನ್ನು ಮನೆಯಲ್ಲೇ ಇದ್ದ ಪ್ರಾರ್ಥನಾ ತಂಗಿ ಮತ್ತು ತಮ್ಮ ನೋಡಿದ್ದಾರೆ. ಕೂಡಲೇ ಅವರು ಅಲ್ಲೇ ಹತ್ತಿರದಲ್ಲಿದ್ದ ಮನೆಯವರಿಗೆ ವಿಚಾರ ತಿಳಿಸಿದ್ದಾರೆ. ಈ ವಿಚಾರ ತಿಳಿದು ಅಜ್ಜಿಯು ಮನೆಗೆ ಧಾವಿಸಿ ನಂತರ ಎಲ್ಲರೂ ಸೇರಿ ಆಕೆಯನ್ನು ತಾಲೂಕು ಆಸ್ಪತ್ರೆಗೆ ಸೇರಿಸಿದ್ದಾರೆ. ಈ ವೇಳೆ ಪರಿಸ್ಥಿತಿ ಗಂಭೀರವಾಗಿರುವುದನ್ನು ನೋಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ನಂತರ ಪ್ರಾರ್ಥನಾಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಪ್ರಾರ್ಥನಾ ನವೆಂಬರ್ 12ರಂದು ಮೃತಪಟ್ಟಿದ್ದಾಳೆ.

    ತಡವಾಗಿ ಬೆಳಕಿಗೆ ಬಂದಿದ್ದು ಹೇಗೆ?
    7 ವರ್ಷದ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಪೋಷಕರು ಹಲವು ದಿನಗಳಿಂದ ನೋವಿನಲ್ಲೇ ಇದ್ದರು. ಆದರೆ ಇನ್ನು ಮುಂದೆ ಯಾರಿಗೂ ಈ ರೀತಿ ಆಗದೇ ಇರಲಿ. ಅಷ್ಟೇ ಅಲ್ಲದೇ ಪೋಷಕರಿಗೂ ಈ ವಿಚಾರ ತಿಳಿಯಬೇಕು ಎನ್ನುವ ದೃಷ್ಟಿಯಿಂದ ಪ್ರಾರ್ಥನಾ ಪೋಷಕರೇ ಮಾಧ್ಯಮಗಳಿಗೆ ಈ ಸುದ್ದಿಯನ್ನು  ಬುಧವಾರ ತಿಳಿಸಿದ್ದಾರೆ.

     

    https://youtu.be/ukbXoVNhqR8

     

     

  • ಕಿರುತೆರೆಗೆ ಬರ್ತಿದೆ ಮಾನಸ ಸರೋವರ – 38 ವರ್ಷದ ಬಳಿಕ ಮತ್ತೆ ಒಂದಾದ ಶ್ರೀನಾಥ್, ಪದ್ಮವಾಸಂತಿ, ರಾಮಕೃಷ್ಣ

    ಕಿರುತೆರೆಗೆ ಬರ್ತಿದೆ ಮಾನಸ ಸರೋವರ – 38 ವರ್ಷದ ಬಳಿಕ ಮತ್ತೆ ಒಂದಾದ ಶ್ರೀನಾಥ್, ಪದ್ಮವಾಸಂತಿ, ರಾಮಕೃಷ್ಣ

    ಬೆಂಗಳೂರು: ಚಂದನವನದ 80ರ ದಶಕದ ಚೆಂದದ, ಮುದ್ದಾದ ಜೋಡಿ ಮತ್ತೆ ಒಂದಾಗಲಿದೆ. ಅಂದು ಬೆಳ್ಳಿತೆರೆಯಲ್ಲಿ ಮೋಡಿ ಮಾಡಿದ್ದ ಜೋಡಿ ಈಗ ಕಿರುತೆರೆಯಲ್ಲಿ ಕಮಾಲ್ ಮಾಡಲು ಬರುತ್ತಿದ್ದಾರೆ.

    35 ವರ್ಷದ ಹಿಂದೆ ಚಂದನವನದ ಬೆಳ್ಳಿತೆರೆಯ ಭಾವ ಶಿಲ್ಪಿ, ಎಸ್.ಆರ್.ಪುಟ್ಟಣ್ಣ ಕಣಗಾಲ್ ನಿರ್ದೇಶನದ ಸೂಪರ್ ಹಿಟ್ ಸಿನಿಮಾ ಮಾನಸ ಸರೋವರ ಮಗದೊಮ್ಮೆ ಬರಲಿದೆ. ಆದ್ರೆ ಸ್ಮಾಲ್ ಚೈಂಜ್ ಏನು ಅಂದ್ರೆ ಬಿಗ್ ಸ್ಕ್ರೀನ್ ನಿಂದ ಸ್ಮಾಲ್ ಸ್ಕ್ರೀನ್‍ಗೆ ಮಾನಸ ಸರೋವರ ಹರಿಯಲಿದೆ.

    ಸ್ಯಾಂಡಲ್‍ವುಡ್ ಮಾಸ್ ಲೀಡರ್, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದು, ಫಸ್ಟ್ ಟೈಮ್ ಕಿರುತೆರೆಯಲ್ಲಿ ಧಾರಾವಾಹಿ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತಮ್ಮದೆಯಾದ ಶ್ರೀ ಮುತ್ತು ಸಿನಿ ಸರ್ವಿಸ್ ಬ್ಯಾನರ್ ಅಡಿ ಧಾರಾವಾಹಿ ನಿರ್ಮಾಣಕ್ಕೆ ಸಜ್ಜಾಗಿದ್ದಾರೆ.

    ಈ ಧಾರಾವಾಹಿಯ ಹೆಸರು `ಮಾನಸ ಸರೋವರ’. ಇಂದು ಬೆಂಗಳೂರಿನ ಕಂಠಿರವ ಸ್ಟೂಡಿಯೋದಲ್ಲಿ ಈ ಧಾರಾಹಿಯ ಮುಹೂರ್ತ ನೆರವೇರಿತು. ದೊಡ್ಮನೆಯ ಮಕ್ಕಳಾದ ಶಿವರಾಜ್‍ಕಮಾರ್, ಪುನೀತ್ ರಾಜ್‍ಕುಮಾರ್ ಹಾಗೂ ವಿನಯ್ ರಾಜ್‍ಕುಮಾರ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಮುಹೂರ್ತಕ್ಕೆ ಸಾಕ್ಷಿಯಾದರು. ಸಿರಿಯಲ್ ಕಥೆ ಮಾನಸ ಸರೋವರದ ಮುಂದುವರೆದ ಭಾಗವಾಗಿದೆ. ಪ್ರಣಯ ರಾಜ ಶ್ರೀನಾಥ್, ಪದ್ಮವಸಂತಿ ಹಾಗೂ ರಾಮಕೃಷ್ಣ ನಟರು ಈ ಧಾರಾವಾಹಿಯಲ್ಲಿ ಮತ್ತೊಮ್ಮೆ ಜೊತೆಯಾಗಿ ಬಣ್ಣಹಚ್ಚುತ್ತಿದ್ದಾರೆ. ಶಿವಣ್ಣರ ದ್ವಿತಿಯ ಪುತ್ರಿ ನಿವೇದಿತಾ ಮಾನಸ ಸರೋವರಕ್ಕೆ ನಿರ್ಮಾಪಕಿಯಾಗಿದ್ದಾರೆ.