Tag: ಧಾರಾವಾಹಿ

  • Bigg Boss 9- ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ದಿಢೀರ್ ಅಂತ ರಾಜೇಶ್ ಸಾವು: ಬಿಗ್ ಬಾಸ್ ಮನೆಗೆ ಬರ್ತಾರಾ ನಟ ಸುನೀಲ್?

    Bigg Boss 9- ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ದಿಢೀರ್ ಅಂತ ರಾಜೇಶ್ ಸಾವು: ಬಿಗ್ ಬಾಸ್ ಮನೆಗೆ ಬರ್ತಾರಾ ನಟ ಸುನೀಲ್?

    ನ್ನಡದ ಫೇಮಸ್ ಧಾರಾವಾಹಿಯ (Serial) ಬಹುಮುಖ್ಯ ಪಾತ್ರವನ್ನು ದಿಢೀರ್ ಅಂತ ಸಾಯಿಸಲಾಗಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕೆಂಡಸಂಪಿಗೆ (Kendasampige) ಧಾರಾವಾಹಿ ನೋಡಿದವರಿಗೆ ರಾಜೇಶ್ ಪಾತ್ರವನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ. ಕಥಾ ನಾಯಕಿಯ ತಮ್ಮನಾಗಿ ರಾಜೇಶ್ (Rajesh) ಫೇಮಸ್. ಈ ಪಾತ್ರದ ಮೂಲಕ ಸಾಕಷ್ಟು ಕುತೂಹಲ ಮೂಡಿಸಿದ್ದ ಧಾರಾವಾಹಿ ದಿಢೀರ್ ಅಂತ ರಾಜೇಶ್ ನನ್ನು ಬೀಳ್ಕೊಟ್ಟಿದೆ.

    ಕೆಂಡಸಂಪಿಗೆ ಕಥಾ ನಾಯಕಿಯ ಜೊತೆ ಸದಾ ಇರುತ್ತಿದ್ದ ರಾಜೇಶ್ ಪಾತ್ರವನ್ನು ಅಚ್ಚರಿ ಎನ್ನುವಂತೆ ಸಾಯಿಸಲಾಗಿದ್ದು, ಇದಕ್ಕೆ ಕಾರಣ ಆ ಹುಡುಗನನ್ನು ಬಿಗ್ ಬಾಸ್ (Bigg Boss Season 9) ಮನೆಗೆ ಕಳುಹಿಸುವ ಪ್ಲ್ಯಾನ್ ಮಾಡಲಾಗಿದೆಯಂತೆ. ಹಾಗಾಗಿ ಬೇಗನೆ ಪಾತ್ರವನ್ನು ಸಾಯಿಸಿ, ತರಾತುರಿಯಲ್ಲಿ ಈ ಪಾತ್ರವನ್ನು ಮಾಡುತ್ತಿದ್ದ ಸುನೀಲ್ (Sunil) ನನ್ನು ಬಿಗ್ ಬಾಸ್ ಸೀಸನ್ 9 ಕ್ಕೆ ಕಳುಹಿಸಿ ಕೊಡಲಾಗಿದೆ ಎನ್ನುವ ಮಾಹಿತಿ ಇದೆ. ಅದು ನಾಳೆ ಅಧಿಕೃತಗೊಳ್ಳಲಿದೆ. ಇದನ್ನೂ ಓದಿ:‘ಬಿಗ್ ಬಾಸ್’ ಮನೆಗೆ ಬ್ರಹ್ಮಾಂಡ ಗುರೂಜಿ ಹೋದರೆ ಮಜವಾಗಿರತ್ತೆ ಅಂತಿದ್ದಾರೆ ನೆಟ್ಟಿಗರು

    ಶನಿ (Shani) ಧಾರಾವಾಹಿಯ ಮೂಲಕ ಫೇಮಸ್ ಆದವರು ಸುನೀಲ್. ಈ ಧಾರಾವಾಹಿಯ ಮೂಲಕ ಸಾಕಷ್ಟು ಅಭಿಮಾನಿ ಬಳಗ ಹೊಂದಿರುವ ಸುನೀಲ್, ಈ ಬಾರಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಚಾಲ್ತಿಯಲ್ಲಿತ್ತು. ಇದೀಗ ಅವರು ನಿರ್ವಹಿಸುತ್ತಿದ್ದ ರಾಜೇಶ್ ಪಾತ್ರವನ್ನು ಸಾಯಿಸಿದ್ದಕ್ಕಾಗಿ ಸುದ್ದಿ ಮಹತ್ವ ಪಡೆದುಕೊಂಡಿದೆ. ನಾಳೆಯಿಂದ ಬಿಗ್ ಬಾಸ್ ಸೀಸನ್ 9 ಶುರುವಾಗಲಿದ್ದು, ಆ ಮನೆಯಲ್ಲಿ ಸುನೀಲ್ ಇರುತ್ತಾರಾ ಕಾದು ನೋಡಬೇಕು.

    ಬಿಗ್ ಬಾಸ್ ಸೀಸನ್ 9 ನಾಳೆಯಿಂದ ಶುರುವಾಗುತ್ತಿದ್ದು, ಈಗಾಗಲೇ ಹಲವು ಅಚ್ಚರಿಯ ಹೆಸರುಗಳು ಕೇಳಿ ಬಂದಿವೆ. ನಟಿ ಪ್ರೇಮಾ (Prema), ನವೀನ್ ಕೃಷ್ಣ ಸೇರಿದಂತೆ ಹಲವಾರು ನಟ ನಟಿಯರ ಹೆಸರು ಈ ಪಟ್ಟಿಯಲ್ಲಿವೆ. ಅಲ್ಲದೇ, ಬಿಗ್ ಬಾಸ್ ಓಟಿಟಿಯ ನಾಲ್ಕು ಸ್ಪರ್ಧಿಗಳು ಕೂಡ ಹೊಸ ಬಿಗ್ ಬಾಸ್ ಮನೆಯನ್ನು ಸೇರಿಕೊಳ್ಳುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಜೊತೆ ಜೊತೆಯಲಿ’ ಸೀರಿಯಲ್ ಮತ್ತೊಂದು ಟ್ವಿಸ್ಟ್ : ಆರ್ಯವರ್ಧನ್ ಕೊಲ್ಲಿಸೋಕೆ ಅನುನೇ ಕೊಟ್ಳು ಸುಪಾರಿ

    ‘ಜೊತೆ ಜೊತೆಯಲಿ’ ಸೀರಿಯಲ್ ಮತ್ತೊಂದು ಟ್ವಿಸ್ಟ್ : ಆರ್ಯವರ್ಧನ್ ಕೊಲ್ಲಿಸೋಕೆ ಅನುನೇ ಕೊಟ್ಳು ಸುಪಾರಿ

    ಟ ಅನಿರುದ್ಧ(Aniruddha)  ಜೊತೆ ಜೊತೆಯಲಿ (Jothe Jotheyali) ಸೀರಿಯಲ್ ನಿಂದ ಆಚೆ ಬರುತ್ತಿದ್ದಂತೆಯೇ ಏನೆಲ್ಲ ಬೆಳವಣಿಗೆಗಳು ಕಥೆಯಲ್ಲಿ ಆಗುತ್ತಿವೆ. ವಾರಕ್ಕೊಂದು ತಿರುವು ಕೊಡುವುದರ ಮೂಲಕ ಪ್ರೇಕ್ಷಕರನ್ನು ಕಟ್ಟಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ನಿರ್ದೇಶಕರು. ಮೊನ್ನೆಯಷ್ಟೇ ಆರ್ಯವರ್ಧನ್ ಪಾತ್ರಕ್ಕೆ ಕಾರು ಅಪಘಾತ ಮಾಡಿಸಿದ್ದರು. ಈಗಷ್ಟೇ ಎಂಟ್ರಿ ಕೊಟ್ಟಿರುವ ಹರೀಶ್ ರಾಜ್ ಪಾತ್ರವನ್ನು ಸಾಯಿಸೇ ಬಿಟ್ಟರು. ಇದೀಗ ಕಥಾ ನಾಯಕಿ ಅನು ಮೇಲೆ ಗುರುತರ ಆರೋಪವೊಂದನ್ನು ಹೊರಿಸಿದ್ದಾರೆ.

    ಆರ್ಯವರ್ಧನ್ ಕಾರು ಆಕ್ಸಿಡೆಂಟ್ ಮಾಡಿಕೊಂಡು ಮುಖ ಗುರುತೇ ಸಿಗದಷ್ಟು ಗಾಯ ಮಾಡಿಕೊಂಡು ಆಸ್ಪತ್ರೆ ಸೇರಿದ್ದರು. ಅದೇ ಆಸ್ಪತ್ರೆಗೆ ಹರೀಶ್ ರಾಜ್ (Harish Raj) ನಿರ್ವಹಿಸುವ ಪಾತ್ರವು ಆತ್ಮಹತ್ಯೆ ಮಾಡಿಕೊಂಡ ಬಾಡಿ ಕೂಡ ಬಂದಿತ್ತು. ಈಗ ಆರ್ಯವರ್ಧನ್ ಫೇಸ್ ಗೆ ಹರೀಶ್ ರಾಜ್ ಫೇಸ್ ಸೇರಿಸಿ ಹೊಸ ಆರ್ಯವರ್ಧನ್ ಸೃಷ್ಟಿ ಆಗಿದ್ದಾನೆ. ಹರೀಶ್ ರಾಜ್ ಪಾತ್ರಕ್ಕೆ ಬೆಂಕಿ ಇಡಲಾಗಿದೆ. ಅದೇ ಸಮಯದಲ್ಲೇ ಮತ್ತೊಂದು ಮೆಗಾ ಟ್ವಿಸ್ಟ್ ಕೊಡಲಾಗಿದೆ. ಇದನ್ನೂ ಓದಿ:‘ಥ್ಯಾಂಕ್ ಗಾಡ್’ ಚಿತ್ರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ: ನಟ ಅಜಯ್ ದೇವಗನ್ ವಿರುದ್ಧ ದೂರು ದಾಖಲು

    ಗಂಡನನ್ನು ಅತಿಯಾಗಿ ಪ್ರೀತಿಸುತ್ತಿದ್ದ ಅನು (Anu) , ಹೆಂಡತಿ ಕಂಡರೇ ಅಷ್ಟೇ ಗೌರವ ಕೊಡುತ್ತಿದ್ದ ಆರ್ಯವರ್ಧನ್ ಪಾತ್ರದ ಮಧ್ಯ ಕಂದಕ ಸೃಷ್ಟಿ ಮಾಡಿದ್ದು, ಆರ್ಯವರ್ಧನ್ ಅಪಘಾತಕ್ಕೆ ಅನುನೆ ಕಾರಣವೆಂದು ಕಥೆ ಬರೆದುಕೊಳ್ಳಲಾಗಿದೆ. ಆರ್ಯವರ್ಧನ್ ಕೊಲೆ (Murder) ಮಾಡಲು ಅನು ಸಂಚು ರೂಪಿಸಿದ್ದರು ಎನ್ನುವ ಕಾರಣಕ್ಕಾಗಿ ಪೊಲೀಸರು (Police) ಅನುವನ್ನು ಬಂಧಿಸಿ ಸ್ಟೇಶನ್ ಗೆ ಕರೆದುಕೊಂಡು ಹೋಗಿದ್ದಾರೆ. ಸ್ಮಶಾನದಿಂದಲೇ ಅನುನನ್ನು ಕರೆದುಕೊಂಡು ಹೋಗಲಾಗಿದೆ.

    ಅನು ಮತ್ತು ಆರ್ಯವರ್ಧನ್ ಪಾತ್ರಗಳ ಸುತ್ತ ಮತ್ತೊಂದು ಸುತ್ತಿನ ಸಮರ ನಡೆಯಲಿದ್ದು, ಆರ್ಯವರ್ಧನ್ (Aryavardhan) ಕೊಲೆಯ ಸುತ್ತ ಹಲವು ಅನುಮಾನಗಳನ್ನು ಕ್ರಿಯೇಟ್ ಮಾಡಿ, ಪಾತ್ರಕ್ಕಿಂತಲೂ ಕಥೆಯೇ ಮುಖ್ಯ ಎಂದು ಸಾರುವಂತಹ ಪ್ರಯತ್ನಗಳನ್ನು ಜೊತೆ ಜೊತೆಯಲಿ ಸೀರಿಯಲ್ (Serial) ತಂಡ ಮಾಡುತ್ತಿದ್ದೆ. ಅದಕ್ಕಾಗಿಯೇ ಕಥೆಯಲ್ಲಿ ವೇಗ ಮತ್ತು ಅಚ್ಚರಿ ಮೂಡಿಸುವಂತಹ ತಿರುವುಗಳನ್ನು ನೀಡಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಮಗಳು ಜಾನಕಿ’ ಸೀರಿಯಲ್ ಖ್ಯಾತಿಯ ಕಿರುತೆರೆಯ ಖ್ಯಾತ ಕಲಾವಿದ ಮಂಡ್ಯ ರವಿ ನಿಧನ

    ‘ಮಗಳು ಜಾನಕಿ’ ಸೀರಿಯಲ್ ಖ್ಯಾತಿಯ ಕಿರುತೆರೆಯ ಖ್ಯಾತ ಕಲಾವಿದ ಮಂಡ್ಯ ರವಿ ನಿಧನ

    ನ್ನಡ ಕಿರುತೆರೆಯ (Television)  ಲೋಕದ ಖ್ಯಾತ ಕಲಾವಿದ (Actor) ಮಂಡ್ಯ ರವಿ (Mandya Ravi) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರವಿ ಅಸಂಖ್ಯಾತ ಅಭಿಮಾನಿಗಳನ್ನು ಅಗಲಿದ್ದಾರೆ. ರವಿ ನಿಧನಕ್ಕೆ ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ ಅಧ್ಯಕ್ಷರಾದ ಎಸ್.ವಿ. ಶಿವಕುಮಾರ್ ಸೇರಿದಂತೆ ಟೆಲಿವಿಷನ್ ಉದ್ಯಮದ ಅನೇಕ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.

    ರವಿ ಪೂರ್ಣ ಹೆಸರು ರವಿ ಪ್ರಸಾದ್ ಎಂ. ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ನಟಿಸುತ್ತಲೇ ಮಂಡ್ಯ ರವಿ ಆಗಿ ಫೇಮಸ್ ಆದವರು. ರವಿ ಬಾಲ್ಯದಿಂದಲೇ ನಾಟಕಗಳಲ್ಲಿ ಅಭಿನಯಿಸುತ್ತಾ, ನಂತರ ಬಣ್ಣದ ಲೋಕದತ್ತ ಒಲವು ಬೆಳೆಸಿಕೊಂಡವರು. ಓದಿದ್ದು ಎಂಎ ಇಂಗ್ಲಿಷ್ ಮತ್ತು ಎಲ್‍ಎಲ್‍ಬಿ ಆದರೂ, ಆಯ್ಕೆ ಮಾಡಿಕೊಂಡ ವೃತ್ತಿ ಮಾತ್ರ ನಟನೆ. 1996ರಲ್ಲಿ ಜನದನಿ ಹವ್ಯಾಸಿ ನಾಟಕ ತಂಡ ಸೇರಿ, ಅಲ್ಲಿಂದ ಟಿ.ಎಸ್. ನಾಗಾಭರಣ ನಿರ್ದೇಶನದ ‘ಮಹಾಮಾಯಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆ ಜಗತ್ತಿಗೆ ಕಾಲಿಟ್ಟರು. ಇದನ್ನೂ ಓದಿ:‘ಮದುವೆ’ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆದ ಮಹಾಲಕ್ಷ್ಮಿ ರವೀಂದರ್

    ಅನೇಕ ಧಾರಾವಾಹಿಗಳಲ್ಲಿ ರವಿ ನಟಿಸಿದ್ದರು, ಮೊದಲು ಬ್ರೇಕ್ ನೀಡಿದ ಧಾರಾವಾಹಿ ಮಿಂಚು, ನಂತರ ಮುಕ್ತಮುಕ್ತ, ಚಿತ್ರಲೇಖ, ಯಶೋಧೆ, ವರಲಕ್ಷ್ಮಿ ಸ್ಟೋರ್ಸ್  ಸೇರಿದಂತೆ ಸಾಕಷ್ಟು ಸೀರಿಯಲ್ ಗಳಲ್ಲಿ ನಟಿಸಿದ್ದಾರೆ. ಕೆಲ ವರ್ಷಗಳ ಹಿಂದೆ ಪ್ರಸಾರವಾದ ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ (Chandu Bhargi) ಪಾತ್ರದ ಮೂಲಕ ರವಿ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದರು.  ಅಲ್ಲದೇ, ಕಾಫಿತೋಟ ಸೇರಿದಂತೆ ಹಲವು ಸಿನಿಮಾಗಳಲ್ಲೂ ಇವರು ನಟಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆರ್ಯವರ್ಧನ್ ಪಾತ್ರಕ್ಕೆ ಹರೀಶ್ ರಾಜ್ ತರಲು ಏನೆಲ್ಲ ಕಸರತ್ತು ಮಾಡಿತು ‘ಜೊತೆ ಜೊತೆಯಲಿ’ ಟೀಮ್

    ಆರ್ಯವರ್ಧನ್ ಪಾತ್ರಕ್ಕೆ ಹರೀಶ್ ರಾಜ್ ತರಲು ಏನೆಲ್ಲ ಕಸರತ್ತು ಮಾಡಿತು ‘ಜೊತೆ ಜೊತೆಯಲಿ’ ಟೀಮ್

    ನಿರುದ್ಧ (Aniruddha) ನಿರ್ವಹಿಸುತ್ತಿದ್ದ ಆರ್ಯವರ್ಧನ್ (Aryavardhan) ಪಾತ್ರವನ್ನು ಸಾಯಿಸಲ್ಲ, ಬೇರೊಬ್ಬ ಕಲಾವಿದರನ್ನು ಆ ಪಾತ್ರಕ್ಕೆ ತರುವುದಿಲ್ಲ ಎಂದು ಜೊತೆ ಜೊತೆಯಲಿ (Jote Jotheyali) ಧಾರಾವಾಹಿಯ ನಿರ್ಮಾಪಕರು ಹೇಳಿದ್ದಾರೆ ಎನ್ನುವ ಮಾತು ಕಿರುತೆರೆ ಲೋಕದಲ್ಲಿ ಹರಿದಾಡುತ್ತಿತ್ತು. ಆದರೆ, ಎರಡೂ ಆಗಿವೆ, ಎರಡೂ ಆಗಿಲ್ಲ ಎನ್ನುವಂತೆ ಕಥೆಯಲ್ಲಿ ಬದಲಾವಣೆ ಮಾಡಿಕೊಂಡಿದೆ ಧಾರಾವಾಹಿ ತಂಡ. ಹಾಗಾಗಿ ಆರ್ಯವರ್ಧನ್ ಪಾತ್ರವನ್ನೂ ಸಾಯಿಸಿದೇ, ಆ ಪಾತ್ರಕ್ಕೆ ಅಂತ ಕಲಾವಿದನನ್ನೂ ಆಯ್ಕೆ ಮಾಡಿಕೊಳ್ಳದೇ ಜಾಣ ನಡೆ ಪ್ರದರ್ಶಿಸಿದೆ.

    ಆರ್ಯವರ್ಧನ್ ಪಾತ್ರಕ್ಕೆ ಕಾರು ಅಪಘಾತ ಮಾಡಿಸುವ ಮೂಲಕ ಪಾತ್ರದ ಮುಖವನ್ನು ಅಪ್ಪಚ್ಚಿ ಮಾಡಿ, ಆ ಮುಖವನ್ನು ಸರಿ ಮಾಡಲು ಪ್ಲ್ಯಾಸ್ಟಿಕ್ ಸರ್ಜರಿಗಿಂತಲೂ ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಫೇಸ್ ಜೋಡಿಸುವಂತಹ ಶಸ್ತ್ರ ಚಿಕಿತ್ಸೆಗೆ ಮುಂದಾಗಿ, ಆರ್ಯವರ್ಧನ್ ದೇಹಕ್ಕೆ ಹರೀಶ್ ರಾಜ್ (Harish Raj) ಮುಖ ಸೇರಿಸುವ ಮೂಲಕ ಹೊಸ ಆರ್ಯವರ್ಧನ್ ಇದೀಗ ಕಥೆಯೊಳಗೆ ಪ್ರವೇಶ ಮಾಡಿ, ಜನರೆದುರೂ ನಿಂತಿದ್ದಾನೆ. ಅಲ್ಲಿಗೆ ಕೊಟ್ಟ ಮಾತಿಗೆ ನಿರ್ಮಾಪಕರು ತಪ್ಪದಂತೆ ಆಗಿದೆ. ಇದನ್ನೂ ಓದಿ: ಸೋನು ಆಯ್ಕೆ ಮಾಡಿದ್ದಕ್ಕೆ ಗುರೂಜಿಗೆ ಕೋಪ – ನನ್ನ ವೋಟಿಗೆ ನ್ಯಾಯ ಬೇಕೆಂದು ಮನೆ ತುಂಬಾ ರಾದ್ಧಾಂತ!

    ಹರೀಶ್ ರಾಜ್ ಅವರೇ ಇನ್ಮುಂದೆ ಆರ್ಯವರ್ಧನ್ ಪಾತ್ರವನ್ನು ಮಾಡಲಿದ್ದಾರೆ. ಉಳಿದಂತೆ ಅಷ್ಟೂ ಪಾತ್ರಗಳು ಇವರನ್ನೇ ಆರ್ಯವರ್ಧನ್ ಎಂದು ತಿಳಿಯುತ್ತವೆ. ಅಲ್ಲಿಗೆ ಕಥೆ ಸರಾಗವಾಗಿ ಸಾಗುತ್ತದೆ. ಇವನೇ ಆರ್ಯವರ್ಧನ್ ಎಂದು ಪ್ರೇಕ್ಷಕರನ್ನು ನಂಬಿಸಲು ಕಸರತ್ತು ಮಾಡಬೇಕಾಗಿರುವುದರಿಂದ ಅದರಲ್ಲಿ ಧಾರಾವಾಹಿ (serial) ತಂಡ ಹೇಗೆ ಗೆಲುವು ಸಾಧಿಸಲಿದೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ. ಅನಿರುದ್ಧ ಜಾಗವನ್ನು ಹರೀಶ್ ರಾಜ್ ಅದೆಷ್ಟು ಬೇಗ ತುಂಬುತ್ತಾರೆ ಎನ್ನುವುದು ಅವರಿಗೆ ಸವಾಲಿನ ಕೆಲಸ ಕೂಡ.

    Live Tv
    [brid partner=56869869 player=32851 video=960834 autoplay=true]

  • ಕಾರು ಆಕ್ಸಿಡೆಂಟ್ ಮೂಲಕ ಅನಿರುದ್ಧಗೆ ಗುಡ್ ಬೈ ಹೇಳಿದ ಜೊತೆ ಜೊತೆಯಲಿ ಟೀಮ್

    ಕಾರು ಆಕ್ಸಿಡೆಂಟ್ ಮೂಲಕ ಅನಿರುದ್ಧಗೆ ಗುಡ್ ಬೈ ಹೇಳಿದ ಜೊತೆ ಜೊತೆಯಲಿ ಟೀಮ್

    ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ತಮಗೆ ಮತ್ತೆ ಅವಕಾಶ ಸಿಗಬಹುದು ಎಂದು ಕಾಯುತ್ತಿದ್ದ ನಟ ಅನಿರುದ್ದ ಅವರಿಗೆ ಕೊನೆಗೂ ನಿರಾಸೆ ಮೂಡಿಸಿದ್ದಾರೆ ನಿರ್ಮಾಪಕರು. ಅನಿರುದ್ದ ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರಕ್ಕೆ ಅಪಘಾತ ಮಾಡಿಸಿ, ಆಸ್ಪತ್ರೆಗೆ ಸೇರಿಸಿದ್ದಾರೆ. ಆಸ್ಪತ್ರೆಗೆ ಸೇರಿರುವ ಆರ್ಯವರ್ಧನ್ ಬದುಕಿ ಬರಬಹುದು, ಮತ್ತೆ ಅನಿರುದ್ದ ಅವರೇ ಈ ಪಾತ್ರವನ್ನು ಮಾಡಬಹುದು ಎಂದುಕೊಂಡಿದ್ದ ಅಭಿಮಾನಿಗಳಿಗೂ ಮೆಗಾ ಟ್ವಿಸ್ಟ್ ಕೊಟ್ಟಿದ್ದಾರೆ.

    ಈಗಾಗಲೇ ನಟ ಹರೀಶ್ ರಾಜ್ ಧಾರಾವಾಹಿಗೆ ಎಂಟ್ರಿಕೊಟ್ಟು ಆಗಿದೆ. ಇವರೇ ಆರ್ಯವರ್ಧನ್ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲಿಗೆ ಅನಿರುದ್ದ ಅವರಿಗೆ ಗೇಟ್ ಪಾಸ್ ನಿಕ್ಕಿ ಎಂದೇ ಭಾವಿಸಲಾಗಿತ್ತು. ಆದರೆ, ಆರ್ಯವರ್ಧನ್ ಅವರ ಸಹೋದರನ ಪಾತ್ರವನ್ನು ಹರೀಶ್ ರಾಜ್ ಮಾಡಿದ್ದರಿಂದ ಅನಿರುದ್ದ ಅವರಿಗೆ ಮತ್ತೆ ಅವಕಾಶ ಸಿಗುತ್ತದೆ ಅನ್ನುವ ನಿರೀಕ್ಷೆ ಅವರ ಅಭಿಮಾನಿಗಳಿಗೆ ಇತ್ತು. ಅದಕ್ಕೂ ತಣ್ಣೀರು ಎರೆಚಿದೆ ಧಾರಾವಾಹಿ ತಂಡ. ಇದನ್ನೂ ಓದಿ: ಏನ್ ಐಡ್ಯಾ ಗುರೂ: ಆರ್ಯವರ್ಧನ್ ಪಾತ್ರಕ್ಕೆ ಹರೀಶ್ ರಾಜ್ ಫಿಕ್ಸ್: ಫೇಸ್ ಟ್ರಾನ್ಸ್ ಪ್ಲಾಂಟ್ ಬಳಸಿ ಅನಿರುದ್ಧಗೆ ಗೇಟ್ ಪಾಸ್

    ಎರಡು ದಿನದಿಂದ ಪ್ರಸಾರವಾಗುತ್ತಿರುವ ಕಥೆಯಲ್ಲಿ ಅನಿರುದ್ದ ಮತ್ತು ಹರೀಶ್ ರಾಜ್ ನಿರ್ವಹಿಸುತ್ತಿರುವ ಪಾತ್ರಗಳು ಆಸ್ಪತ್ರೆ ಸೇರಿವೆ. ಅನಿರುದ್ದ ಪಾತ್ರಕ್ಕೆ ಆಕ್ಸಿಡೆಂಟ್ ಆಗಿದ್ದರೆ, ಹರೀಶ್ ರಾಜ್ ಮಾಡುತ್ತಿರುವ ಪಾತ್ರ ಆತ್ಮಹತ್ಯೆ ಮಾಡಿಕೊಂಡಿದೆ. ಅಲ್ಲದೇ ಹರೀಶ್ ರಾಜ್ ಮಾಡುತ್ತಿರುವ ಪಾತ್ರವನ್ನು ಜೀವಂತವಾಗಿ ಉಳಿಸಿಲ್ಲ. ಕಡೆ ಆರ್ಯವರ್ಧನ್ ಮುಖಕ್ಕೆ ತೀವ್ರ ಪೆಟ್ಟಾಗಿದ್ದರಿಂದ ಪ್ಲಾಸ್ಟಿಕ್ ಸರ್ಜರಿ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಈಗ ಪ್ಲಾಸ್ಟಿಕ್ ಸರ್ಜರಿ ಬದಲು ಫೇಸ್ ಟ್ರಾನ್ಸ್ ಪ್ಲೆಂಟ್ ಮಾಡುವ ಕಥೆ ಶುರುವಾಗಿದೆ. ಇದನ್ನೂ ಓದಿ: ‘ಲೈಫ್ ಇಸ್ ಬ್ಯುಟಿಫುಲ್’ ಹನಿಮೂನ್ ಮೂಡ್ ನಲ್ಲಿ ಮಹಾಲಕ್ಷ್ಮಿ ಮತ್ತು ರವೀಂದರ್

    ಅಂದರೆ ಹರೀಶ್ ರಾಜ್ ಪಾತ್ರದ ಮುಖವನ್ನು ಅನಿರುದ್ದ ನಿರ್ವಹಿಸುವ ಪಾತ್ರಕ್ಕೆ ವರ್ಗಾಯಿಸಲಾಗುತ್ತಿದೆ. ಅಲ್ಲಿಗೆ ಅನಿರುದ್ದ ಇನ್ಮುಂದೆ ಧಾರಾವಾಹಿಯಲ್ಲಿ ಅಧಿಕೃತವಾಗಿ ಇರುವುದಿಲ್ಲ. ಈ ವಿಷಯ ತಿಳಿಯುತ್ತಿದ್ದಂತೆಯೇ ಅನಿರುದ್ದ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ. ಆ ಧಾರಾವಾಹಿ ಬಿಟ್ಟಾಕಿ, ನೀವೇ ಹೊಸ ಸೀರಿಯಲ್ ಶುರು ಮಾಡಿ ಎಂದಿದ್ದಾರೆ. ಈ ಪ್ರೀತಿಗೆ ಸ್ವತಃ ಅನಿರುದ್ದ ಕೂಡ ಧನ್ಯವಾದಗಳನ್ನು ತಿಳಿಸಿದ್ದಾರೆ.

  • ‘ಜೊತೆ ಜೊತೆಯಲಿ’ ಸೀರಿಯಲ್ ಗೆ ನಟ ಹರೀಶ್ ರಾಜ್ ಅಧಿಕೃತ ಎಂಟ್ರಿ: ಪ್ರೊಮೋ ರಿಲೀಸ್

    ‘ಜೊತೆ ಜೊತೆಯಲಿ’ ಸೀರಿಯಲ್ ಗೆ ನಟ ಹರೀಶ್ ರಾಜ್ ಅಧಿಕೃತ ಎಂಟ್ರಿ: ಪ್ರೊಮೋ ರಿಲೀಸ್

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟ ಹರೀಶ್ ರಾಜ್ ನಟಿಸಲಿದ್ದಾರೆ ಎನ್ನುವ ಸುದ್ದಿಯನ್ನು ಈ ಹಿಂದೆಯೇ ಪಬ್ಲಿಕ್ ಟಿವಿ ಡಿಜಿಟಲ್ ಬಹಿರಂಗ ಪಡಿಸಿತ್ತು. ಈ ಸೀರಿಯಲ್ ನಲ್ಲಿ ಅವರು ಆರ್ಯವರ್ಧನ್ ಪಾತ್ರದ ಬದಲು ಬೇರೆ, ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ಎಕ್ಸ್ ಕ್ಲೂಸಿವ್ ಸುದ್ದಿ ಮಾಡಿತ್ತು. ಅದೀಗ ನಿಜವಾಗಿದೆ. ಹರೀಶ್ ರಾಜ್ ಜೊತೆ ಜೊತೆಯಲಿ ಟೀಮ್ ಸೇರಿಕೊಂಡಿದ್ದು, ಅವರು ನಟಿಸಿರುವ ಪ್ರೊಮೋ ಕೂಡ ವಾಹಿನಿ ರಿಲೀಸ್ ಮಾಡಿದೆ.

    ಹರೀಶ್ ರಾಜ್ ಹೊಸ ಬಗೆಯ ಪಾತ್ರ ಮಾಡಿದ್ದು, ನೂರಾರು ಕೋಟಿ ಒಡೆಯನಾಗಿ ಅವರು ಕಾಣಿಸಿಕೊಂಡಿದ್ದಾರೆ. ಅಲ್ಲದೇ, ಆರ್ಯವರ್ಧನ್ ಪಾತ್ರವೂ ಇನ್ನೂ ಧಾರಾವಾಹಿಯಲ್ಲಿದೆ. ಆ ಪಾತ್ರಕ್ಕೂ ಹರೀಶ್ ರಾಜ್ ಇರುವ ಪಾತ್ರಕ್ಕೂ ಕೊಂಡಿ ಬೆಳೆಸಿ ಕಥೆ ಮಾಡಿದ್ದಾರೆ ಧಾರಾವಾಹಿ ತಂಡ. ಹಾಗಾಗಿ ಆರ್ಯವರ್ಧನ್ ಪಾತ್ರ ಇಲ್ಲದೇ, ಈ ಪಾತ್ರದ ಮೂಲಕ ಹೊಸ ಕಥೆ ಹೇಳುವ ತಂತ್ರವನ್ನು ಸೀರಿಯಲ್ ತಂಡ ಮಾಡಿದಂತಿದೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್

    ಆರ್ಯವರ್ಧನ್ ಪಾತ್ರದಲ್ಲೇ ಅನಿರುದ್ಧ ಕಾಣಿಸಿಕೊಂಡಿರುವುದರಿಂದ ಹರೀಶ್ ರಾಜ್ ಅವರು ಆರ್ಯವರ್ಧನ್ ಪಾತ್ರದ ಬದಲು ಬೇರೊಂದು ಪಾತ್ರ ಮಾಡಿದ್ದಾರೆ ಎನ್ನುವುದು ಸ್ಪಷ್ಟ. ಆದರೆ, ಆರ್ಯವರ್ಧನ್ ಪಾತ್ರವನ್ನು ಕಥೆಯಲ್ಲಿ ಹೇಗೆ ತಗೆದುಕೊಂಡು ಹೋಗುತ್ತಾರೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ. ಸದ್ಯ ಜೀ ವಾಹಿನಿಯು ಹರೀಶ್ ರಾಜ್ ಅವರ ಪ್ರೊಮೋ ರಿಲೀಸ್ ಮಾಡಿದ್ದು, ಅನಿರುದ್ಧ ಅಭಿಮಾನಿಗಳು, ಮತ್ತೆ ತಮ್ಮ ನಟಿ ಈ ಸೀರಿಯಲ್ ನಲ್ಲಿ ನಟಿಸಲಿ ಎಂದು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆರ್ಯವರ್ಧನ್ ಪಾತ್ರವನ್ನು ಮತ್ತೆ ಅನಿರುದ್ಧ ಮಾಡ್ತಾರಾ? ಕುತೂಹಲ ಮೂಡಿಸಿದೆ ‘ಜೊತೆ ಜೊತೆಯಲಿ’ ಟೀಮ್ ನಡೆ

    ಆರ್ಯವರ್ಧನ್ ಪಾತ್ರವನ್ನು ಮತ್ತೆ ಅನಿರುದ್ಧ ಮಾಡ್ತಾರಾ? ಕುತೂಹಲ ಮೂಡಿಸಿದೆ ‘ಜೊತೆ ಜೊತೆಯಲಿ’ ಟೀಮ್ ನಡೆ

    ಜೊತೆ ಜೊತೆಯಲಿ ಟೀಮ್ ನಿಂದ ಹೊಸ ಹೊಸ ಸುದ್ದಿಗಳು ಬರುತ್ತಿವೆ. ಅನಿರುದ್ಧ ಅವರನ್ನು ಧಾರಾವಾಹಿಯಿಂದ ಕೈ ಬಿಟ್ಟಿದ್ದರಿಂದ, ಇವರು ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರಕ್ಕೆ ಬೇರೆ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಯಿತು. ನಿರ್ದೇಶಕ ಅನೂಪ್ ಭಂಡಾರಿ, ನಟರಾದ ಸುನೀಲ್ ಪುರಾಣಿಕ್ ಮತ್ತು ಹರೀಶ್ ರಾಜ್ ಅವರನ್ನು ಪಾತ್ರ ನಿರ್ವಹಿಸಲು ಕೇಳಲಾಯಿತು. ಕೊನೆಗೆ ಹರೀಶ್ ರಾಜ್ ಪಕ್ಕಾ ಆಯ್ಕೆ ಎನ್ನುವ ಸುದ್ದಿಯೂ ಬಂತು. ಆದರೆ, ಇವೆಲ್ಲವೂ ಮತ್ತೆ ಉಲ್ಟಾ ಹೊಡೆಯುತ್ತಿವೆ.

    ಧಾರಾವಾಹಿ ಲೋಕದಲ್ಲಿ ಹರಿದಾಡುತ್ತಿರುವ ಸುದ್ದಿಯ ಪ್ರಕಾರ, ಸದ್ಯಕ್ಕೆ ಆರ್ಯವರ್ಧನ್ ಪಾತ್ರಕ್ಕೆ ಯಾರನ್ನೂ ಆಯ್ಕೆ ಮಾಡಿಕೊಳ್ಳುವದಿಲ್ಲವಂತೆ. ಹರೀಶ್ ರಾಜ್ ಅವರು ಜೊತೆ ಜೊತೆಯಲಿ ಸೀರಿಯಲ್ ನಲ್ಲಿ ನಟಿಸುತ್ತಿದ್ದರೂ, ಅವರ ಪಾತ್ರ ಬೇರೆಯದ್ದೇ ಆಗಿರಲಿದೆಯಂತೆ. ಆರ್ಯವರ್ಧನ್ ಪಾತ್ರ ಮನೆಬಿಟ್ಟು ಹೋಗಲಿದೆ ಎಂದು ಹೇಳಲಾಗುತ್ತಿದೆ. ಆರ್ಯವರ್ಧನ್ ಪಾತ್ರಕ್ಕೆ ಯಾರನ್ನೂ ಆಯ್ಕೆ ಮಾಡಿಕೊಂಡಿಲ್ಲ ಅಂತಾರೆ, ಮನೆ ಬಿಟ್ಟು ಹೋದ ಆರ್ಯವರ್ಧನ್ ಮುಂದಿನ ದಿನಗಳಲ್ಲಿ ಮತ್ತೆ ವಾಪಸ್ಸು ಮನೆಗೆ ಬಂದರೆ, ಆ ಪಾತ್ರವನ್ನು ಅನಿರುದ್ಧ ಅವರೇ ಮಾಡಲಿದ್ದಾರೆ ಎನ್ನುವ ಅನುಮಾನ ಎಲ್ಲರದ್ದು.

    ಆದರೆ, ಇಷ್ಟೊಂದು ರಾದ್ಧಾಂತ ಮಾಡಿಕೊಂಡು, ಒಬ್ಬರಿಗೊಬ್ಬರ ಮೇಲೆ ಕೆಸರಾಟವಾಡಿ ಮತ್ತೆ  ಅನಿರುದ್ಧ ಮತ್ತು ನಿರ್ಮಾಪಕ ಆರೂರು ಜಗದೀಶ್ ಒಟ್ಟಿಗೆ ಕೆಲಸ ಮಾಡುತ್ತಾರಾ ಎನ್ನುವ ಪ್ರಶ್ನೆ ಎಲ್ಲರದ್ದು. ಮಾಧ್ಯಮಗಳ ಮುಂದೆ ಆರೋಪ ಪ್ರತ್ಯಾರೋಪ ಮಾಡಿದ ನಂತರ, ವಾಹಿನಿಯ ಪ್ರತಿನಿಧಿಯೇ ಅನಿರುದ್ಧ ಅವರು ಧಾರಾವಾಹಿಯಲ್ಲಿ ಇರುವುದಿಲ್ಲ ಎಂದು ಘೋಷಿದ ಮೇಲೆ ಮತ್ತೆ ಒಂದಾಗಿ ಕೆಲಸ ಮಾಡುವುದು ಅನುಮಾನ ಎನ್ನುವ ಮಾತೂ ಕೇಳಿ ಬರುತ್ತಿದೆ. ಇದನ್ನೂ ಓದಿ:ಅವಳು ನನ್ನನ್ನ ಯೂಸ್ ಮಾಡೋಕೆ ಟಿಶ್ಯೂ ಪೇಪರ್ ಅಲ್ಲ ಎನ್ನುವ ಮಾತಿಗೆ ಗಳಗಳನೆ ಅತ್ತ ಸಾನ್ಯ

    ಏನೇ  ಇರಲಿ, ಮತ್ತೆ ಅನಿರುದ್ಧ ಅವರು ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟಿಸಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆ. ಹಾಗಾಗಿ ವಾಹಿನಿಯ ಮುಖ್ಯಸ್ಥರನ್ನೂ ಸೇರಿಸಿ, ಧಾರಾವಾಹಿಯ ತಂಡಕ್ಕೆ ಒತ್ತಡ ಹಾಕುವಂತಹ ಕೆಲಸಗಳು ತೆರೆಮರೆಯಲ್ಲಿ ನಡೆಯುತ್ತಿದೆ. ಇಬ್ಬರೂ ರಾಜಿಯಾಗಿ ಮತ್ತೆ ಅನಿರುದ್ಧ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲಿ ಎನ್ನುವುದು ಹಲವು ಜನರ ಆಸೆ. ಮುಂದಿನ ದಿನಗಳಲ್ಲಿ ಏನಾಗತ್ತೋ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • Exclusive-‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಹರೀಶ್ ರಾಜ್ ನಟಿಸೋದು ಪಕ್ಕಾ- ಆದ್ರೆ ಆರ್ಯವರ್ಧನ್ ಪಾತ್ರದಲ್ಲಿ ಅಲ್ಲ?

    Exclusive-‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಹರೀಶ್ ರಾಜ್ ನಟಿಸೋದು ಪಕ್ಕಾ- ಆದ್ರೆ ಆರ್ಯವರ್ಧನ್ ಪಾತ್ರದಲ್ಲಿ ಅಲ್ಲ?

    ಸ್ಯಾಂಡಲ್ ವುಡ್ ನಟ ಹರೀಶ್ ರಾಜ್ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ನಟಿಸುವುದು ಪಕ್ಕಾ ಆಗಿದೆ. ಈ ಧಾರಾವಾಹಿ ಟೀಮ್ ಕಡೆಯಿಂದ ತಮಗೆ ಕರೆ ಬಂದಿರುವ ವಿಚಾರವನ್ನೂ ಅವರು ಹಂಚಿಕೊಂಡಿದ್ದರು. ತಾವು ಕೂಡ ಸೀರಿಯಲ್ ತಂಡಕ್ಕೆ ಕೆಲವು ಷರತ್ತುಗಳನ್ನು ವಿಧಿಸಿರುವುದಾಗಿ, ಅದಕ್ಕೆ ಅವರು ಒಪ್ಪಿಕೊಂಡರೆ ಧಾರಾವಾಹಿಯಲ್ಲಿ ನಟಿಸುವುದಾಗಿ ತಿಳಿಸಿದ್ದರು. ಹರೀಶ್ ರಾಜ್ ಷರತ್ತುಗಳನ್ನು ವಾಹಿನಿ ಮತ್ತು ಧಾರಾವಾಹಿ ತಂಡ ಒಪ್ಪಿಕೊಂಡಿದೆ ಎನ್ನಲಾಗುತ್ತಿದೆ.

    ಹರೀಶ್ ರಾಜ್ ಸಿನಿಮಾ ರಂಗದಲ್ಲೂ ಸಕ್ರೀರಾಗಿರುವ ಕಾರಣದಿಂದ ಹದಿನೈದು ದಿನ ಸೀರಿಯಲ್, ಹದಿನೈದು ದಿನ ಸಿನಿಮಾದಲ್ಲಿ ನಟಿಸುವುದಾಗಿ ಅವರು ವಾಹಿನಿಗೆ ತಿಳಿಸಿದ್ದರಂತೆ. ಈ ಮಾತಿಗೆ ವಾಹಿನಿ ಮತ್ತು ಧಾರಾವಾಹಿ ತಂಡ ಕೂಡ ಒಪ್ಪಿಗೆ ಸೂಚಿಸಿದೆ ಎನ್ನಲಾಗುತ್ತಿದ್ದು, ಅತೀ ಶೀಘ್ರದಲ್ಲೇ ಅವರು ಜೊತೆ ಜೊತೆಯಲಿ ಟೀಮ್ ಸೇರಿಕೊಳ್ಳಲಿದ್ದಾರೆ. ಇದನ್ನೂ ಓದಿ:ಆ ಒಂದು ಹೆಸರಿನ ಟ್ಯಾಟೋನಿಂದ ಎರಡನೇ ಮದುವೆ ವದಂತಿಗೆ ಫುಲ್ ಸ್ಟಾಪ್ ಹಾಕಿದ ಮೇಘನಾ ರಾಜ್

    ಈವರೆಗೂ ಅನಿರುದ್ಧ ಅವರು ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರಕ್ಕೆ ಹರೀಶ್ ರಾಜ್ ಅವರು ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿತ್ತು. ಆರ್ಯವರ್ಧನ್ ಪಾತ್ರವನ್ನು ಹರೀಶ್ ರಾಜ್ ಮುಂದುವರೆಸಿಕೊಂಡು ಹೋಗಲಿದ್ದಾರೆ ಎನ್ನುವ ಸುದ್ದಿಯಿತ್ತು. ಆದರೆ, ಹರೀಶ್ ರಾಜ್ ಬೇರೆ ಪಾತ್ರವನ್ನು ಮಾಡಲಿದ್ದಾರಂತೆ. ಆ ಪಾತ್ರ ಯಾವುದು? ಆರ್ಯವರ್ಧನ್ ಪಾತ್ರಕ್ಕೂ ಈ ಪಾತ್ರಕ್ಕೂ ಲಿಂಕ್ ಇದೆಯಾ? ಕಥೆಯಲ್ಲಿ ತಿರುವು ಎಂಥದ್ದು ಎನ್ನುವ ಕುತೂಹಲ ಇದೀಗ ಶುರುವಾಗಿದೆ.

    Live Tv
    [brid partner=56869869 player=32851 video=960834 autoplay=true]

  • Exclusive-‘ಜೊತೆ ಜೊತೆಯಲಿ’ ಸೀರಿಯಲ್ ನಲ್ಲಿ ಅನಿರುದ್ದ ಅಷ್ಟೇ ಅಲ್ಲ, ಆರ್ಯವರ್ಧನ್ ಪಾತ್ರವೇ ಇರಲ್ಲ?

    Exclusive-‘ಜೊತೆ ಜೊತೆಯಲಿ’ ಸೀರಿಯಲ್ ನಲ್ಲಿ ಅನಿರುದ್ದ ಅಷ್ಟೇ ಅಲ್ಲ, ಆರ್ಯವರ್ಧನ್ ಪಾತ್ರವೇ ಇರಲ್ಲ?

    ಧಾರಾವಾಹಿ ಅಂದರೆ ಹಾಗೆನೇ. ತಿರುವುಗಳೇ ಧಾರಾವಾಹಿಯನ್ನು ನೋಡಿಸಿಕೊಂಡು ಹೋಗುತ್ತವೆ. ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಅವರನ್ನು ಹೊರಗೆ ಕಳುಹಿಸಿದಾಗ, ಅನಿರುದ್ಧ ಇಲ್ಲದೇ ಆರ್ಯವರ್ಧನ್ ಪಾತ್ರ ಹೇಗೆ ಎಂಬ ಚರ್ಚೆ ಶುರುವಾಗಿತ್ತು. ಆರ್ಯವರ್ಧನ್ ಪಾತ್ರಕ್ಕೆ ಯಾರೆಲ್ಲ ನಟರು ಬರಬಹುದು ಎಂದು ಅಂದಾಜಿಸಲಾಗಿತ್ತು. ಈ ಅಂದಾಜೇ ಬುಡಮೇಲು ಆಗುವಂತಹ ಟ್ವಿಸ್ಟ್ ಅನ್ನು ಧಾರಾವಾಹಿ ತಂಡ ನೀಡಿದೆ.

    ಆರ್ಯವರ್ಧನ್ ಪಾತ್ರಕ್ಕಾಗಿ ನಿರ್ದೇಶಕ ಅನೂಪ್ ಭಂಡಾರಿ ಅವರನ್ನು ಕೇಳಲಾಯಿತು. ಸಿನಿಮಾ ಕಾರಣದಿಂದಾಗಿ ಅವರು ಒಪ್ಪಿಕೊಳ್ಳಲಿಲ್ಲ. ಆನಂತರ ಸುನೀಲ್ ಪುರಾಣಿಕ್, ಹರೀಶ್ ರಾಜ್ ರೀತಿಯ ಹೆಸರುಗಳು ಹರಿದಾಡಿದವು. ಹರೀಶ್ ರಾಜ್ ಆ ಪಾತ್ರಕ್ಕೆ ನಿಕ್ಕಿ ಆಗಿದ್ದಾರೆ ಎಂದು ಹೇಳಲಾಗಿತ್ತು. ಇದೆಲ್ಲ ಸುದ್ದಿಯೂ ಸುಳ್ಳಾಗಿದೆ. ಕಥೆಯಲ್ಲಿ ಸಖತ್ ಟ್ವಿಸ್ಟ್ ನೀಡುವ ಮೂಲಕ ಕಥೆಯನ್ನು ಮತ್ತೊಂದು ಹಂತಕ್ಕೆ ತಗೆದುಕೊಂಡು ಹೋಗಿದೆ ಧಾರಾವಾಹಿ ತಂಡ. ಈ ಟ್ವಿಸ್ಟ್ ನೋಡುಗರಿಗೆ ಮತ್ತಷ್ಟು ಥ್ರಿಲ್ ನೀಡಲಿದೆ. ಇದನ್ನೂ ಓದಿ:ಜಯಶ್ರೀಗೆ ಎರಡು ಮದುವೆ ಆಗ್ತವೆ ಎಂದು ಬಿಗ್ ಬಾಸ್ ಮನೆಯಲ್ಲಿ ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ

    ಈಗಾಗಲೇ ಕಥೆಯಲ್ಲಿ ಆರ್ಯವರ್ಧನ್ ಮನೆಬಿಟ್ಟು ಹೋಗಿದ್ದ. ಆನಂತರ ಅನು ಆತನನ್ನು ಹುಡುಕಾಡಿ ಕೊನೆಗೂ ಮನೆಗೆ ಕರೆದುಕೊಂಡು ಬಂದಿದ್ದಾಳೆ. ಮನೆಗೆ ಬಂದ ಆರ್ಯವರ್ಧನ್ ಏನು ಮಾಡುತ್ತಾನೆ ಎನ್ನುವ ಕುತೂಹಲ ಎಲ್ಲರದ್ದು. ಮನೆಗೆ ಬಂದವನು ಏನಾದರೂ ಮಾಡಲಿ. ಆದರೆ, ಆರ್ಯವರ್ಧನ್ ಪಾತ್ರವೇ ಕಥೆಯಲ್ಲಿ ಇರುವುದಿಲ್ಲ ಎನ್ನುವ ಮಾಹಿತಿ ಹರಿದಾಡುತ್ತಿದೆ. ಆ ಪಾತ್ರವನ್ನು ಕೈ ಬಿಟ್ಟು, ಹೊಸ ಪಾತ್ರಕ್ಕೆ ಎಂಟ್ರಿ ಕೊಡುವ ಮೂಲಕ ಕಥೆಗೆ ಮಹಾಟ್ವಿಸ್ಟ್ ನೀಡಲಾಗುತ್ತಿದೆ ಎನ್ನುತ್ತಿವೆ ಮೂಲಗಳು.

    ಈ ರೀತಿಯ ಕಥೆಯನ್ನು ಮಾಡಲು ಏಳುಗುಂಡಿಗೆ ಬೇಕು. ಯಾಕೆಂದರೆ, ಕಥಾನಾಯಕನನ್ನೇ ಸ್ಕ್ರೀನ್ ಮೇಲೆ ತೋರಿಸದೇ ಕಥೆ ಹೇಳುವ ಕಲೆ ಅಷ್ಟು ಸುಲಭದ್ದಲ್ಲ. ಅಂತಹ ರಿಸ್ಕ್ ತಗೆದುಕೊಂಡು ಜೊತೆ ಜೊತೆಯಲಿ ಧಾರಾವಾಹಿ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಸಂಚಿಕೆಗಳು ಹೇಗೆ ಇರುತ್ತವೆ ಎನ್ನುವುದನ್ನು ಕಾದು ನೋಡಬೇಕಿದೆ.

     

    Live Tv
    [brid partner=56869869 player=32851 video=960834 autoplay=true]

  • ಆರ್ಯವರ್ಧನ್ ಪಾತ್ರವನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದಾರೆ ನಟ ಅನಿರುದ್ಧ

    ಆರ್ಯವರ್ಧನ್ ಪಾತ್ರವನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದಾರೆ ನಟ ಅನಿರುದ್ಧ

    ಜೊತೆ ಜೊತೆಯಲಿ ಸೀರಿಯಲ್ ನಿಂದ ಅನಿರುದ್ಧ ಅವರನ್ನು ಕೈ ಬಿಟ್ಟ ನಂತರ, ಅವರು ಆರ್ಯವರ್ಧನ್ ಪಾತ್ರವನ್ನು ತುಂಬಾನೇ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿಯು ಅವರ ವೃತ್ತಿ ಬದುಕಿಗೆ ಬಹುದೊಡ್ಡ ತಿರುವು ನೀಡಿತ್ತು. ಮತ್ತು ಅಪಾರ ಪ್ರಮಾಣದಲ್ಲಿ ಅಭಿಮಾನಿಗಳನ್ನೂ ಸೃಷ್ಟಿ ಮಾಡಿತ್ತು. ಕನ್ನಡ ಕಿರುತೆರೆ ಲೋಕದಲ್ಲಿ ಅತ್ಯಂತ ಜನಪ್ರಿಯ ಧಾರಾವಾಹಿ ಇದಾಗಿದ್ದರಿಂದ, ಸಹಜವಾಗಿಯೇ ಅನಿರುದ್ಧ ಅವರು ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದರು. ಏಕಾಏಕಿ ಎಲ್ಲವೂ ಕೈ ಬಿಟ್ಟು ಹೋಗಿವೆ.

    ಸಾಕಷ್ಟು ಜನಪ್ರಿಯತೆ, ಕೈತುಂಬಾ ದುಡ್ಡು, ಯಶಸ್ಸು ಎಲ್ಲವೂ ಒಟ್ಟಿಗೆ ಹೊರಟು ಹೋದಾಗ ನೊಂದುಕೊಳ್ಳುವುದು ಸಹಜ. ಸದ್ಯ ಅನಿರುದ್ಧ ಅವರು ನೊಂದುಕೊಂಡಿದ್ದಾರೆ. ಹಾಗಾಗಿಯೇ ಧಾರಾವಾಹಿ ತಂಡದ ಜೊತೆ ಕೂತು ಮಾತನಾಡಿ ಸಮಸ್ಯೆ ಬಗೆ ಹರಿಸಿಕೊಳ್ಳಲು ಮುಂದಾದರು. ಆದರೆ, ಅದು ಯಶಸ್ಸು ಕಾಣಲಿಲ್ಲ. ಇದೀಗ ನೊಂದುಕೊಳ್ಳುವುದಷ್ಟೇ ಅವರ ಮುಂದೆ ಉಳಿದಿದೆ. ಹಾಗಾಗಿ ಧಾರಾವಾಹಿ ನೆನಪುಗಳನ್ನು ಅವರು ದಿನವೂ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:‘ಜೊತೆ ಜೊತೆಯಲಿ’ ಅನಿರುದ್ಧ ಗಲಾಟೆ ಧಾರವಾಡಕ್ಕೆ ಶಿಫ್ಟ್: ಪ್ರಕರಣ ತಿಳಿಗೊಳಿಸಲು ಸ್ನೇಹಿತರ ಮನವಿ

    ಆರ್ಯವರ್ಧನ್ ಪಾತ್ರದ ಫೋಟೋಗಳನ್ನು ಅವರು ತಮ್ಮೆಲ್ಲ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ದಿನಕ್ಕೊಂದು ಫೋಟೋವನ್ನು ಅವರು ಫೇಸ್ ಬುಕ್, ಟ್ವಿಟರ್, ವಾಟ್ಸಪ್, ಇನ್ಸಸ್ಟಾದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಆ ಪಾತ್ರವನ್ನು ತಾವೆಷ್ಟು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎನ್ನುವುದನ್ನು ತೋರಿಸುತ್ತಿದ್ದಾರೆ. ಏನೇ ಆಗಲಿ ಅನಿರುದ್ಧ ಅವರೇ ಈ ಪಾತ್ರದಲ್ಲಿ ಮುಂದುವರೆಯಬೇಕು ಅನ್ನುವುದು ಅಭಿಮಾನಿಗಳ ಆಸೆ ಆಗಿತ್ತು. ಕೊನೆಗೂ ಅದೇ ಈಡೇರಲಿಲ್ಲ.

    Live Tv
    [brid partner=56869869 player=32851 video=960834 autoplay=true]